ಸಾಹಿತ್ಯ ಕ್ಷೇತ್ರದ ಒಳಹೊರಗು
-ಡಾ.ಶ್ರೀಪಾದ ಭಟ್, ತುಮಕೂರು
ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ವರ್ಷಗಟ್ಟಲೆ ಸೂತ್ರಧಾರರಿರಲಿಲ್ಲ. ಇದೀಗ ಪ್ರೊ. ಮಾಲತಿ ಪಟ್ಟಣಶೆಟ್ಟಿಯವರನ್ನು ಸರ್ಕಾರ ಅಧ್ಯಕ್ಷರಾಗಿ ಆಯ್ಕೆ ಮಾಡಿದೆ. ಇವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಪತ್ರಕರ್ತನೊಬ್ಬ ಅವರನ್ನು ಸಂದರ್ಶನ ಮಾಡಿದ. ಚಾನೆಲ್ಲೊಂದರಲ್ಲಿ ಅದು ಪ್ರಸಾರವಾಯಿತು. ಆತ ಅವರ ಯೋಜನೆಗಳ ಬಗ್ಗೆ ಪ್ರಶ್ನೆ ಕೇಳಿದ. ಯುವ ಜನತೆಯನ್ನು, ಹೊಸಬರನ್ನು ಕನ್ನಡ ಭಾಷೆ, ಸಾಹಿತ್ಯದತ್ತ ಸೆಳೆಯುವ ತಮ್ಮ ಪ್ರಾಮಾಣಿಕ ಅನಿಸಿಕೆಯನ್ನು ಪ್ರೊ. ಮಾಲತಿಯವರು ಹೇಳಿದರು. ನೀವು ಸಾಹಿತ್ಯದಲ್ಲಿ ಎಡಪಂಥದ ಸಾಹಿತಿಗಳಿಗೆ ಮನ್ನಣೆ ನೀಡುವಿರೋ ಬಲಪಂಥದವರಿಗೋ ಎಂದು ಆತ ಕೇಳಿದ. ನನಗೆ ಕನ್ನಡಕ್ಕೆ ಯಾರು ಏನು ಕೊಡುಗೆ ನೀಡಿದ್ದಾರೆ ಎಂಬುದು ಮುಖ್ಯವೇ ವಿನಾ ಎಡ, ಬಲ ಪಂಥಗಳಲ್ಲ ಎಂದು ಒಬ್ಬ ನಿಜವಾದ ಸಾಹಿತ್ಯಪ್ರೇಮಿ ಹೇಳುವ ಮಾತನ್ನು ಮಾಲತಿಯವರು ಉತ್ತರವಾಗಿ ನೀಡಿದರು. ಇಂಥ ಸಮ ದೃಷ್ಟಿಕೋನ ಎಷ್ಟು ಜನರಿಗೆ ಇರಬಹುದು? ಹೇಳುವುದು ಕಷ್ಟ.
ಕನ್ನಡ ಸಾಹಿತ್ಯದ ಇಂದಿನ ಪರಿಸ್ಥಿತಿಯನ್ನು ಪತ್ರಕರ್ತನ ಪ್ರಶ್ನೆ ಪ್ರತಿನಿಧಿಸುತ್ತದೆ. ಇದು ನಿಜಕ್ಕೂ ಸಾಹಿತ್ಯಕ ದುರಂತ. ಸಾಹಿತ್ಯ ರಚಿಸುವವರು, ಸಾಹಿತ್ಯ ಓದುವವರು ಇಬ್ಬರೂ ತಾವು ಎಡಪಂಥದವರೋ, ಬಲಪಂಥದವರೋ ಎಂದು ಮೊದಲೇ ನಿರ್ಧರಿಸಿಕೊಳ್ಳಬೇಕು. ಇಲ್ಲವಾದಲ್ಲಿ ಈಗಾಗಲೇ ಆಯಾ ಪಂಥೀಯರು ಅಥವಾ ಮಾಧ್ಯಮದವರು ಅಥವಾ ಕೊನೆಗೆ ವಿಮರ್ಶಕರು ನಿಮಗೆ ಹಣೆಪಟ್ಟಿ ಹಚ್ಚಿಯೇಬಿಡುತ್ತಾರೆ! ಹೀಗೆ ಹಣೆಪಟ್ಟಿ ಅಂಟಿಸಿಕೊಳ್ಳದವ ಸಾಹಿತಿಯೂ ಆಗಲಾರ ಓದುಗನೂ ಆಗಲಾರ!
ಸುಮ್ಮನೆ ಓದುವ, ಬರೆಯುವ ಪ್ರೀತಿಗಾಗಿ ಸಾಹಿತ್ಯ ಲಭ್ಯವಿಲ್ಲವೇ? ಒಬ್ಬ ನಿಜವಾದ ಸಾಹಿತ್ಯಪ್ರೇಮಿಗೆ ಯಾವ ಪಂಥಗಳೂ ಮುಖ್ಯವಾಗದು. ಆತ ಆ ವಿಷಯ, ಈ ವಿಷಯ, ಆ ಸಿದ್ಧಾಂತ, ಈ ಸಿದ್ಧಾಂತ ಎಂದೆಲ್ಲ ನೋಡಲಾರ. ತನಗೆ ಯಾವುದು ಇಷ್ಟವೋ, ಆಸಕ್ತಿಯೋ ಅದನ್ನೆಲ್ಲ ಆತ ಓದಿ ಅರಗಿಸಿಕೊಳ್ಳುತ್ತಾನೆ, ತನ್ನದೇ ಒಂದು ನಿಲುವಿಗೆ ಆತ ಬರಬಹುದು, ಬರದೆಯೂ ಇರಬಹುದು. ಹೀಗೆ ಯಾವ ಪಂಥ, ಸಿದ್ಧಾಂತಕ್ಕೂ ತನ್ನನ್ನು ಅಡವಿಟ್ಟುಕೊಳ್ಳದ ಸಾಹಿತಿ ಅಥವಾ ಓದುಗನೇ ನಿಜವಾದ ಸಾಹಿತಿ ಅಥವಾ ಓದುಗನಾಗಬಲ್ಲ. ಜನಪ್ರೀತಿಯ ಕವಿ ಜಿಎಸ್ಎಸ್ ಅವರ ಕಾವ್ಯವನ್ನು ನವೋದಯ, ನವ್ಯ, ದಲಿತ-ಬಂಡಾಯ ಹೀಗೆ ಯಾವುದಕ್ಕಾದರೂ ತಗುಲಿಸಲೇಬೇಕು ಎಂಬ ವಿಮರ್ಶಕರ, ಮಾಧ್ಯಮದವರ ಹಠ ಕೊನೆಗೂ ಈಡೇರಲೇ ಇಲ್ಲ. ಯಾವುದೂ ದಾರಿ ಕಾಣದೇ ಅವರಿಗೆ ಕೊನೆಗೆ ಸಮನ್ವಯ ಕವಿ ಎಂಬ ಹಣೆಪಟ್ಟಿ ಕಟ್ಟಿದರು. ಜಿಎಸ್ಎಸ್ ಅವರಿಗೇ ಸ್ವತಃ ಇದು ಇರಿಸುಮುರಿಸು ತಂದರೂ ನಾವು ಅವರನ್ನು ಹಾಗೆ ಕರೆಯುವುದನ್ನು ಬಿಡಲಿಲ್ಲ! ಜನರನ್ನು ಪ್ರೀತಿಯಿಂದ ಆವರಿಸಿದ ಕೆಎಸ್ನ ಅವರನ್ನು, ಅವರದು ಪುಷ್ಪಕಾವ್ಯ, ಅವರು ಕವಿಯೇ ಅಲ್ಲ, ಅವರು ಪುಷ್ಪಕವಿ ಎಂದೆಲ್ಲ ಗೇಲಿ ಮಾಡಲಾಯಿತು. ಕನ್ನಡ ಪ್ರಾಧ್ಯಾಪಕರಾಗಿರದೇ, ಯಾವ ಸಿದ್ಧಾಂತಕ್ಕೂ ಕಟ್ಟುಬೀಳದೇ ಒಬ್ಬ ಸಾಹಿತ್ಯ ಪ್ರೀತಿಯ ಸರ್ಕಾರಿ ನೌಕಕರಾಗಿ ಅವರು ರಚಿಸಿದ ಕಾವ್ಯ ಪಡೆದ ಜನಮನ್ನಣೆ ಸಾಹಿತ್ಯದ ಅಧಿಕೃತ ಗುತ್ತಿಗೆ ಪಡೆದವರ ಹೊಟ್ಟೆಯುರಿಗೆ ಕಾರಣವಾಯಿತೋ ಅಥವಾ ಯಾವುದೇ ಪಂಥಗಳ ಲಕ್ಷಣ ಕಾಣಿಸದೇ ಎರಡೂ ಪಂಥದವರು ಅವರನ್ನು ವ್ಯವಸ್ಥಿತವಾಗಿ ನಿರಾಕರಿಸಲು ಹವಣಿಸಿದರೋ-ಎರಡೂ ಇರಬಹುದು. ಆದರೆ ಇಂದಿಗೂ ಜನ ಮಾತ್ರ ಅವರ ಪುಷ್ಪಕಾವ್ಯ ಪ್ರೀತಿಸುವಷ್ಟು ಸಿಡಿಲ ಕಾವ್ಯವನ್ನು ಪ್ರೀತಿಸುತ್ತಿಲ್ಲ. ಇವೆಲ್ಲ ಸಾಹಿತ್ಯದಲ್ಲಿ ರಾಜಕೀಯ, ಸಾಮಾಜಿಕ ಸಿದ್ಧಾಂತಗಳು ಸೇರಿ ಸಾಹಿತ್ಯವನ್ನು ಕೇವಲ ಸಾಹಿತ್ಯವಾಗಿ ಇರಲು ಬಿಡದಂತೆ ಮಾಡಿದುದರ ಲಕ್ಷಣಗಳು.
ಕಥೆಯಾದರು ಚಿತ್ತಾಲ
– ರಾಘವೇಂದ್ರ ಅಡಿಗ ಎಚ್ಚೆನ್
ಕನ್ನಡ ಸಾಹಿತ್ಯ ದಿಗಂತದ ಇನ್ನೊಂದು ತಾರೆ ಅಸ್ತಂಗತವಾಗಿದೆ. ಕವಿ, ಕಥೆಗಾರ, ಶ್ರೀ ಯಶವಂತ ಚಿತ್ತಾಲರು (86) ನಮ್ಮನ್ನೆಲ್ಲಾ ಅಗಲಿದ್ದಾರೆ. ಬಹುಷಃ ತಾವೊಬ್ಬರೇ ಚಿರಶಾಂತಿಯ `ಶಿಕಾರಿ’ ಗಾಗಿ ಹೊರಟಿರುವರೇನೊ? “ನಾನು ಬರೆಯುತ್ತಿರುವುದು ನಾನು ನಾನೇ ಆಗಲು, ಉಳಿದವರನ್ನು ತಿದ್ದುವುದಕ್ಕಲ್ಲ, ಆ ಯೋಗ್ಯತೆಯಾಗಲೀ, ಅಧಿಕಾರವಾಗಲೀ ನನಗಿಲ್ಲ.” ಎಂದಿದ್ದ ಚಿತ್ತಾಲರಿಲ್ಲದ ಈ ಸಮಯದಲ್ಲಿ ಅವರ ಪುಸ್ತಕಗಳ ಅಪಾರ ಅಭಿಮಾನಿಗಳಲ್ಲಿ ನಾನೂ ಒಬ್ಬನಾಗಿ ಅವರ ಬದುಕಿನ ಕುರಿತು ನಿಮ್ಮೊಡನೆ ನಾಲ್ಕು ಮಾತುಗಳನ್ನು ಹಂಚಿಕೊಳ್ಳಬೇಕೆನಿಸುತ್ತಿದೆ
ಯಶವಂತ ಚಿತ್ತಾಲರು ಕನ್ನಡ ಸಾಹಿತ್ಯ ಲೋಕ ಕಂಡ ಅಪರೂಪದ ಬರಹಗಾರರಲ್ಲಿ ಒಬ್ಬರು. ಕನ್ನಡ ಸಾಹಿತ್ಯದಲ್ಲಿ ನವ್ಯ ಯುಗ ಪ್ರಾರಂಭಾವಾಗಿದ್ದ ಕಾಲಘಟ್ಟದಲ್ಲಿ ತಮ್ಮನ್ನು ಸಾಹಿತ್ಯ ಲೋಕಕ್ಕೆ ಪರಿಚಯಿಸಿಕೊಂಡ ಚಿತ್ತಾಲರು ನವ್ಯ ಮಾರ್ಗದಲ್ಲಿನ ಕಥೆಗಳು, ಕಾದಂಬರಿಗಳು ಅಂದು ಸಾಕಷ್ಟು ಪ್ರಸಿದ್ದವಾಗಿದ್ದವು. ‘ಪುರುಷೋತ್ತಮ’, ‘ಛೇದ’, ‘ಶಿಕಾರಿ’ ಗಳಂತಹ ಪ್ರಸಿದ್ದ ಹಾಗೂ ಮಹತ್ವದ ಕಾದಂಬರಿಗಳನ್ನು ರಚಿಸಿದ್ದ ಚಿತ್ತಾಲರ ‘ಕಥೆಯಾದಳು ಹುಡುಗಿ’ ಕನ್ನಡದ ಅತ್ಯಂತ ಜನಪ್ರಿಯ ಕಥಾ ಸಂಕಲನಗಳಲ್ಲಿ ಒಂದು.
ಮೂಲತಃ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಕುಮಟಾದ ಹನೇಹಳ್ಳಿಯವರಾದ ಚಿತ್ತಾಲರು ತಮ್ಮ ಜೀವನದ ಅರ್ಧಕ್ಕೂ ಹೆಚ್ಚಿನ ಸಮಯವನ್ನು ಮುಂಬೈನಲ್ಲಿ ಕಳೆದಿದ್ದರು. ಹನೇಹಳ್ಳಿಯ ವಿಠೋಬಾ, ರುಕ್ಮಿಣಿ ದಂಪತಿಗಳ ಏಳು ಮಕ್ಕಳುಗಳ ಪೈಕಿ ಐದನೆಯವರಾಗಿದ್ದ ಯಶವಂತ ಚಿತ್ತಾಲರು 1928 ರಲ್ಲಿ ಜನಿಸಿದರು. ಪ್ರಾಥಮಿಕ ಶಾಲಾ ಶಿಕ್ಷಣವನ್ನು ತಮ್ಮ ಹುಟ್ಟೂರಿನಲ್ಲೇ ಪೂರೈಸಿದ ಚಿತ್ತಾಲರು ಕುಮಟಾ, ಧಾರವಾಡ್, ಮುಂಬೈ ಹಾಗೂ ನ್ಯೂ ಜರ್ಸಿಗಳಲ್ಲಿ ಉನ್ನತ ವ್ಯಾಸಂಗವನ್ನು ಮಾಡಿದ್ದರು. ಇವರು ವಿಜ್ಞಾನ ಪದವೀಧರರಾಗಿದ್ದು ರಸಾಯನ ಶಾಸ್ತ್ರದಲ್ಲಿ ಉನ್ನತ ಮಟ್ಟದ ಪ್ರೌಢಿಮೆಯನ್ನು ಹೊಂದಿದ್ದರು. ಅದರಲ್ಲಿಯೂ ಪಾಲಿಮರ್ ತಂತ್ರಜ್ಞಾನದಲ್ಲಿ ವಿಶೇಷ ಅನುಭವ ಹೊಂದಿದ್ದ ಚಿತ್ತಾಲರು . ಮುಂಬೈ ವಿವಿಯ ಪ್ಲಾಸ್ಟಿಕ್ ತಂತ್ರವಿಜ್ಞಾನದ ಬಿಎಸ್ಸಿಯಲ್ಲಿ ಪ್ರಥಮ ಸ್ಥಾನ ಸುವರ್ಣ ಪದಕ ಪಡೆದಿರು. ನಲ್ವತ್ತ ನಾಲ್ಕನೇ ವಯಸ್ಸಿನಲ್ಲಿ ಅಮೆರಿಕದ ಸ್ಟೂವನ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಎಂಎ ಪದವಿ ಪಡೆದಿದ್ದ. ಚಿತ್ತಾಲರು ಬೆಕಾಲೈಟ್ ಹೈಲಮ್ ಲಿ. ಕಂಪನಿಯಲ್ಲಿ 30 ವರ್ಷಕ್ಕೂ ಹೆಚ್ಚು ಕಾಲ ದುಡಿದಿದ್ದಾರೆ. ಇಲ್ಲಿ ಹಲವು ವರ್ಷಗಳ ಕಾಲ ಮಾರ್ಕೆಟಿಂಗ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿ ಮುಂಬೈನಲ್ಲಿ ಅದೇ ಕಂಪನಿಯಲ್ಲಿ ಎಕ್ಸಿಕ್ಯುಟಿವ್ ಡೈರಕ್ಟರ್ ಆಗಿ 1985ರಲ್ಲಿ ನಿವೃತ್ತಿ ಹೊಂದಿದ್ದರು.
ಕವಿ ಗಂಗಾಧರ ಚಿತ್ತಾಲರ ಸಹೋದರರಾಗಿದ್ದ ಯಶವಂತ ಚಿತ್ತಾಲರಿಗೆ ಬಾಲ್ಯದಿಂದಲೂ ಸಾಹಿತ್ಯದ ಕಡೆಗೆ ಒಲವಿದ್ದಿತು. ಪಾಶ್ಚಾತ್ಯ ದೇಶಗಳನ್ನೆಲ್ಲಾ ಸುತ್ತಿ ಅಲ್ಲಿನ ಸಾಹಿತ್ಯದ ಮೌಲ್ಯಗಳ ತೌಲನಿಕ ಚಿಂತನೆಯನ್ನು ನಡೆಸಿ ಕನ್ನಡದಲ್ಲಿ ಕೃತಿಗಳನ್ನು ರಚಿಸಿದ ಯಶವಂತ ಚಿತ್ತಾಲರಿಗೆ ಮನಃಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರಗಳಲ್ಲಿ ಬಹಳ ಆಸಕ್ತಿ ಇದ್ದಿತು. ಇವರು ತಮ್ಮ ವಿಶಿಷ್ಟ ಬಗೆಯ ಸಾಹಿತ್ಯದಿಂದ ಜನರನ್ನು ಸಮ್ಮೋಹಗೊಳಿಸಿದ್ದಲ್ಲದೆ ತಮ್ಮ ಸಜ್ಜನಿಕೆಯ ಜೀವನ ಶೈಲಿ, ಜೀವನ ಪ್ರೀತಿಯಿಂದಲೂ ಅಪಾರ ಜನ ಮೆಚ್ಚುಗೆಗೆ ಭಾಜನರಾಗಿದ್ದವರು.
ಪಾಕೆಟ್ ಮನಿಯೆ೦ಬುದು ಪ್ರೀತಿಯ ಅಭಿವ್ಯಕ್ತಿ ಎ೦ದುಕೊ೦ಡೀರೀ.. ಜೋಕೆ..!!
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
‘ಅಪ್ಪಾ ನಮಗೆ ಸ್ವಲ್ಪ ದುಡ್ಡು ಬೇಕು’ ಎ೦ದು ಆ ಹುಡುಗರು ಬೆಳಗಿನ ಉಪಹಾರದ ಹೊತ್ತಿನಲ್ಲಿ ಕೇಳಿದಾಗ ಸಿಟ್ಟಾಗುವ ಸರದಿ ಅವರ ಅಪ್ಪನದು.’ ಸಾಧ್ಯವೇ ಇಲ್ಲ.ಅಲ್ಲಾ ಕಣ್ರೋ, ನಿಮಗೆ ಪಾಕೆಟ್ ಮನಿ ಅ೦ತಾ ತಿ೦ಗಳಿಗೆ ತಲಾ ಸಾವಿರ ರೂಪಾಯಿ ಕೊಡ್ತಿನಿ,ನಿಮ್ಮ ವಯಸ್ಸಿನಲ್ಲಿ ನನ್ನ ಬಳಿ ಹತ್ತು ರೂಪಾಯಿಯೂ ಇರ್ತಿಲಿಲ್ಲ ಗೊತ್ತಾ..’? ಎ೦ದು ಅಪ್ಪ ಗದರಿದಾಗ ಹುಡುಗರಿಬ್ಬರೂ ಜೋಲು ಮೋರೆ ಹಾಕಿಕೊ೦ಡು ತಿ೦ಡಿ ತಿನ್ನತೊಡಗಿದರು.ದೊಡ್ಡವನಾದ ಜೇಮ್ಸ್ ಮತ್ತೇ ನಿಧಾನವಾಗಿ ’ಅಪ್ಪಾ ,ಪ್ಲೀಸ್’ ಎ೦ದು ರಾಗವೆಳೆದಾಗ, ಸಹನೆ ಕಳೆದುಕೊ೦ಡ ಅಪ್ಪ ,’ ಇನಫ್,ಜೇಮ್ಸ್..ನಾನು ಒಮ್ಮೆ ಹೇಳಿದ ಮೇಲೆ ಮುಗಿಯಿತು,ಮತ್ತೆ ದುಡ್ಡು ಸಿಗಲ್ಲ ಅ೦ದ್ರೆ ಸಿಗಲ್ಲ.ಏನು ಮಾಡ್ತೀರಿ ನೀವಿಬ್ಬರೂ ಅ೦ತಾನೇ ಅರ್ಥ ಆಗಲ್ಲ,ತಿ೦ಗಳಿಗೆ ಸಾವಿರ ರೂಪಾಯಿ ಸಾಕಾಗಲ್ಲ ಅ೦ದ್ರೆ ಏನರ್ಥ..? ಈ ವಿಷಯದ ಮೇಲೆ ಮತ್ತೆ ಚರ್ಚೆ ಬೇಡ, ಬೇಗ ಬೇಗ ತಿ೦ಡಿ ತಿ೦ದು ಶಾಲೆಗೆ ಹೊರಡಿ’ ಎ೦ದು ಅಪ್ಪ ಗ೦ಭೀರನಾಗಿ ನುಡಿದಾಗ ಜಾನ್ ಮತ್ತು ಜೇಮ್ಸ್ ಹ್ಯಾಪು ಮೋರೆ ಹಾಕಿಕೊ೦ಡು ತಿ೦ಡಿ ಮುಗಿಸಿ ಶಾಲೆಗೆ ತೆರಳಿದರು.
ಜಾನ್ ಮತ್ತು ಜೇಮ್ಸ್ ಇಬ್ಬರೂ ಪೀಟರ್ ಮಸ್ಕರಿನೆಸ್ ರವರ ಮಕ್ಕಳು.ಜಾನ್ ಹನ್ನೆರಡು ವರ್ಷದವನಾದರೇ,ಜೇಮ್ಸ್ ಹದಿನಾರು ವರ್ಷದವನು. ಗೋವಾದ ರಾಜಧಾನಿ ಪಣಜಿ ನಗರದಲ್ಲಿ ಸಣ್ಣ ಪ್ರಮಾಣದ ಉದ್ಯಮಿಯಾದ ಪೀಟರ್,ಕೋಟ್ಯಾಧಿಪತಿಗಳಲ್ಲದಿದ್ದರೂ ತಕ್ಕ ಮಟ್ಟಿಗೆ ಸಿರಿವ೦ತರು. ಅವರ ಚಿಕ್ಕ ಮಗ ಜಾನ್ ಹುಟ್ಟುತ್ತಲೇ ಮಡದಿ ತೀರಿಕೊ೦ಡಿದ್ದರಿ೦ದ ಪೀಟರ್ ಗೆ ಮಕ್ಕಳೆಡೆಗೆ ಅಪಾರ ಪ್ರೀತಿ.ಮೊದಲಿನಿ೦ದಲೂ ಬಹಳ ಮುದ್ದಿನಿ೦ದ ಮಕ್ಕಳನ್ನು ಬೆಳೆಸಿದ್ದ ಪೀಟರ್ ಮಕ್ಕಳಿಗೆ ಯಾವುದೇ ಕೊರತೆಯಾಗದ೦ತೆ ನೋಡಿಕೊಳ್ಳುತ್ತಿದ್ದರು.ಪೀಟರ್ ರವರ ತ೦ದೆ ತಾಯಿಗ೦ತೂ ಮೊಮ್ಮಕ್ಕಳೆ೦ದರೇ ಪ೦ಚ ಪ್ರಾಣ. ತಾಯಿ ಇಲ್ಲದ ಮಕ್ಕಳೆ೦ಬ ಮಮತೆಯಿ೦ದ ,ತ೦ದೆ ತಾಯಿಯ ವಿರೋಧವಿದ್ದರೂ ತಮ್ಮ ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ತಿ೦ಗಳಿಗೆ ಸಾವಿರ ರೂಪಾಯಿಯಷ್ಟು ಪಾಕೆಟ್ ಮನಿ ಕೊಡುತ್ತಿದ್ದರು ಪೀಟರ್ ಮಸ್ಕರಿನೆಸ್.ಚಿಕ್ಕವಯಸ್ಸಿಗೆ ಕೈತು೦ಬ ಹಣ ಸಿಕ್ಕರೇ ಏನಾಗುತ್ತದೆ..?? ಜಾನ್ ಮತ್ತು ಜೇಮ್ಸ್ ಎ೦ಬ ಬಾಲಕರ ವಿಷಯದಲ್ಲೂ ಹಾಗೆಯೇ ಆಯಿತು.ಶಾಲೆಗೆ ಚಕ್ಕರ್ ಹೊಡೆದು ಸಿನಿಮಾಗಳಿಗೆ ಹೋಗುವುದು, ದುಬಾರಿ ಹೊಟೆಲುಗಳಲ್ಲಿ ತಿ೦ಡಿ ತಿನ್ನಲು ಹೋಗುವುದು ಸರ್ವೇ ಸಾಮಾನ್ಯವೆ೦ಬ೦ತಿತ್ತು ಈ ಅಪ್ರಾಪ್ತ ವಯಸ್ಸಿನ ಹುಡುಗರಿಗೆ.ದಿನ ಕಳೆದ೦ತೆ ಈ ಬಾಲಕರಿಗೆ ಸಾವಿರ ರೂಪಾಯಿಗಳಷ್ಟು ಹಣವೂ ಸಹ ಖರ್ಚಿಗೆ ಸಾಲದಾಯಿತು.ಹಾಗಾಗಿಯೇ ಅವರು ತ೦ದೆಯೆದುರು ಪಾಕೆಟ್ ಮನಿ ಹೆಚ್ಚಿಸುವ೦ತೇ ಬೇಡಿಕೆ ಇಟ್ಟಿದ್ದರು ಮತ್ತು ಅಪ್ಪನಿ೦ದ ಬಯ್ಯಿಸಿಕೊ೦ಡಿದ್ದರು.
ಸಾಯುವ ಕೊನೆ ಕ್ಷಣದಲ್ಲೂ ಆ ಮೂವರ ಬಾಯಲ್ಲಿ ಮೊಳಗಿದ ಮಂತ್ರ…. ಭಾರತ್ ಮಾತಾ ಕೀ ಜೈ!
– ನಿತ್ಯಾನಂದ ವಿವೇಕವಂಶಿ
ಈ ದೇಶಕ್ಕೆ ಸ್ವಾತಂತ್ರ್ಯವೆಂಬುದು ಸುಮ್ಮನೆ ಬರಲಿಲ್ಲ. ಸುಮಾರು ಆರೂವರೆ ಲಕ್ಷ ವೀರ ವೀರಾಂಗನೆಯರ ಪ್ರಾಣತ್ಯಾಗದ ಫಲವಾಗಿ ಈ ಸ್ವಾತಂತ್ರ್ಯ ದೊರಕಿದೆ. ಅವರು ತಮ್ಮ ನೆತ್ತರು ಹರಿಸಿ ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಈ ಸ್ವಾತಂತ್ರ್ಯ ಹೋರಾಟವೆಂಬ ಮಹಾ ಯಜ್ಞದಲ್ಲಿ ತಮ್ಮ ಪ್ರಾಣವನ್ನೇ ಆಹುತಿಯನ್ನಾಗಿ ನೀಡಿದ ವೀರರ ತ್ಯಾಗ ಬಲಿದಾನಗಳು ಅನನ್ಯವಾದವು. ಹೋರಾಟದ ಈ ಇತಿಹಾಸದಲ್ಲಿ ಹಲವಾರು ರೋಚಕ ಘಟನೆಗಳು, ರೋಮಾಂಚನಕಾರಿ ಕಥೆಗಳು, ಅದ್ವಿತೀಯ ತ್ಯಾಗ ಬಲಿದಾನದ ಘಟನೆಗಳಿವೆ. ಅವುಗಳಲ್ಲಿ ಕೆಲವು ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಟ್ಟಿದ್ದರೆ, ಇನ್ನು ಕೆಲವು ಅಜ್ಞಾತವಾಗಿ, ಹೊರ ಪ್ರಪಂಚಕ್ಕೆ ಪ್ರಕಟಗೊಳ್ಳದೇ, ಕಾಲಗರ್ಭದಲ್ಲಿ ಹೂತುಹೋಗಿ ಕಣ್ಮರೆಯಾಗಿವೆ. ಹೀಗೆ ಇತಿಹಾಸದ ಪುಟಗಳಲ್ಲಿ ದಾಖಲಾಗಿ ಉಳಿದಿರುವ ರೋಚಕ ಘಟನೆಗಳಲ್ಲಿ ಭಗತ್ಸಿಂಗ್, ರಾಜಗುರು, ಸುಖದೇವ್ರ ತ್ಯಾಗ ಬಲಿದಾನಗಳು ಚಿರಸ್ಮರಣೀಯವಾದುದಾಗಿದೆ. ತಮ್ಮ ಮಾತೃಭೂಮಿಯನ್ನು ಪರಕೀಯರ ಆಳ್ವಿಕೆಯಿಂದ ಮುಕ್ತಗೊಳಿಸಲು, ದಾಸ್ಯದ ಸಂಕೋಲೆಯನ್ನು ಕಿತ್ತೊಗೆಯಲು ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಮರವನ್ನೇ ಸಾರಿದ ಈ ಮೂವರು ಕ್ರಾಂತಿಕಾರಿಗಳಿಗೆ ಬ್ರಿಟೀಷ್ ನ್ಯಾಯಾಲಯವು ಗಲ್ಲು ಶಿಕ್ಷೆಯನ್ನು ವಿಧಿಸಿತು. 23 ಮಾರ್ಚ್ 1931 ರಂದು ತಮ್ಮ 23-24 ನೇ ವಯಸ್ಸಿನಲ್ಲಿಯೇ ಈ ಮೂವರು ಕ್ರಾಂತಿಸೋದರರು ನಗುನಗುತ್ತಾ ಬಲಿಗಂಬವನ್ನೇರಿದರು. ದುರದೃಷ್ಟಕರ ಸಂಗತಿಯೆಂದರೆ ನಮಗ್ಯಾರಿಗೂ ಆ ದಿನದ ನೆನಪೇ ಇಲ್ಲ. ಪ್ರತೀ ವರ್ಷ ಮಾರ್ಚ್ 23 ರಂದು ವಾರ್ತಾ ಇಲಾಖೆಯಿಂದ ದಿನಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಜಾಹಿರಾತು ಬಿಟ್ಟರೆ, ‘ಶಹೀದ್ ಡೇ’ಯನ್ನು ಆಚರಿಸುವ ಕೆಲವು ಸಂಘಟನೆಗಳನ್ನು ಬಿಟ್ಟರೆ ಇಡೀ ದೇಶದಲ್ಲಿ ಎಲ್ಲಿಯೂ ಈ ಅಪೂರ್ವ ಬಲಿದಾನವನ್ನು ಸ್ಮರಿಸಿಕೊಳ್ಳುತ್ತಿಲ್ಲ. ಕಾರಣವೇನೆಂದರೆ ನಮಗೆ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರ ಹೆಸರೂ ಕೂಡಾ ನೆನಪಿಲ್ಲ.
ಮತ್ತಷ್ಟು ಓದು 
೨೦೧೪ರ ಚುನಾವಣ ಕಣದ ಸುತ್ತ
– ಡಾ.ಕಿರಣ್ ಎಂ ಗಾಜನೂರು
ಭಾರತದಲ್ಲಿ ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಂಡಿದೆ.ಹಾಗೆ ನೋಡುವುದಾದರೆ ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳಿಗಿಂತ ೨೦೧೪ರ ಈ ಲೋಕಸಭಾ ಚುನಾವಣೆ ಹೆಚ್ಚು ಚರ್ಚೆಯಲ್ಲಿದೆ ಮತ್ತು ಜನ ಸಮಾನ್ಯರಲ್ಲಿಯು ಒಂದು ಸಹಜ ಕುತೂಹಲವನ್ನು ಈ ಚುನಾವಣೆ ಹುಟ್ಟುಹಾಕಿದೆ.ಭಾರತದಲ್ಲಿನ ಪ್ರಮುಖ ರಾಜಕೀಯ ಚಿಂತಕರು,ಮಾಧ್ಯಮಗಳು ಈ ವಿದ್ಯಮಾನಕ್ಕೆ ಹಲವಾರು ಕಾರಣಗಳನ್ನು ಗುರುತಿಸಿದ್ದಾರೆ ಅದರಲ್ಲಿ ಬಹಳ ಮುಖ್ಯವಾದದ್ದು
೧) ಆಡಳಿತಾತ್ಮಕ ಮತ್ತು ಭ್ರಷ್ಟಾಚಾರದ ಕಾರಣಕ್ಕಾಗಿ (ಮುಖ್ಯವಾಗಿ ಬೆಲೆ ಎರಿಕೆ) ರೂಪಿತಗೊಂಡ ಕಾಂಗ್ರೆಸ್ಸ್ ವಿರೋಧಿ ನಿಲುವು
೨) ಬಿ.ಜೆ.ಪಿ ತನ್ನ ಪ್ರಧಾನಿ ಆಭ್ಯರ್ಥಿ ನರೆಂದ್ರ ಮೋದಿಯವರ ಹಿನ್ನಲೆಯಲ್ಲಿ ರೂಪಿಸಿಕೊಂಡ ಜನಪ್ರಿಯತೆ.
ಹಾಗಾದರೆ, ೨೦೧೪ ರ ಚುನಾವಣೆ ಈ ಎರಡು ನಿಲುಗಳ ಆಧಾರದಲ್ಲಿಯೆ ನಡೆಯುತ್ತದಾ? ದೇಶದ ಎಲ್ಲಾ ಭಾಗದ ಮತದಾರ ಈ ನಿಲುವುಗಳ ಆಧಾರದಲ್ಲಿಯೆ ಮತ ಚಲಾಯಿಸುತ್ತಾನಾ? ಎಂಬ ಪ್ರಶ್ನೆಯನ್ನು ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳ ಹಿನ್ನಲೆಯಲ್ಲಿ ವಿಶ್ಲೇಷಿಸಿ ಕೇಳಿಕೊಂಡರೆ, ’ಖಂಡಿತಾ ಇಲ್ಲಾ’ ಎಂಬ ಉತ್ತರವನ್ನೂ ಯಾರಾದರೂ ನೀರಿಕ್ಷಿಸಬಹುದಾಗಿದೆ…! ಏಕೆಂದರೆ ಕಳೆದ ಹತ್ತು ವರ್ಷಗಳ ಕಾಲ ಈ ದೇಶವನ್ನು ಆಳಿದ ಯುಪಿಎ ಸರ್ಕಾರ ಹಲವಾರು ಹಗರಣಗಳನ್ನು ತನ್ನ ಮೇಲೆ ಎಳೆದುಕೊಂಡಿದ್ದರೂ ಆದರ ಜೊತೆ ಜೊತೆಗೆ ’ಆರ್.ಟಿ.ಐ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನ”ಯಂತಹ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವುದರ ಮೂಲಕ ಸಮಾಜದ ಹಲವು ವರ್ಗಗಳ ಜನರ ಬೆಂಬಲವನ್ನು ಗಳಿಸಿಕೊಂಡಿದೆ .ಅದೂ ಅಲ್ಲದೆ, ಈ ದೇಶವನ್ನು ಹೆಚ್ಚು ಕಾಲ ಆಳಿದ ಕಾಂಗ್ರೆಸ್ಸ್ ಪಕ್ಷ ಅದರದ್ದೆ ಆದಂತಹ ಒಂದು ಮತದಾರರ ವರ್ಗ ಮತ್ತು ಬುದ್ದಿಜೀವಿಗಳ ಗುಂಪನ್ನು ಸೃಷ್ಟಿಸಿಕೊಂಡಿದೆ ಅವರು ಎಂದಿಗೂ ಕಾಂಗ್ರೆಸ್ಸ್ ಅನ್ನು ಬೆಂಬಲಿಸುತ್ತಾರೆ ಮತ್ತು ಚುನಾವಣೆಯಲ್ಲಿ ಈ ಅಂಶ ಖಂಡಿತವಾಗಿ ಪ್ರಭಾವ ಬೀರಲಿದೆ.ಇದರ ಜೊತೆಗೆ ದೇಶದ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ಸ್ ವಲಯದಲ್ಲಿ ಗುರುತಿಸಿಕೊಂಡಿರುವ ರಾಹುಲ್ ಗಾಂಧಿಯವರು ಇತ್ತಿಚೆಗೆ “ಭಾರತಕ್ಕೆ ಬೇಕಿರುವುದು ಇಲ್ಲಿನ ವಿವಿಧತೆಯನ್ನು ಅವುಗಳ ನೆಲೆಯಲ್ಲಿಯೆ ಗುರುತಿಸಿ ಬೆಳೆಸಬೇಕಾದ ರಾಜಕೀಯ ಪಕ್ಷವೆ ಹೊರತು ವ್ಯಕ್ತಿ ಕೇಂದ್ರಿತ ಪಕ್ಷವಲ್ಲ” ಎಂಬ ಮಾದರಿಯ ಪ್ರಜಾಸತ್ತಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಕಾಂಗ್ರೆಸ್ಸಿನಲ್ಲಿ ತಮ್ಮ ಈ ನಿಲುವನ್ನು ಜಾರಿಗೆ ತರುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಇದಕ್ಕೆ ಉದಾಹರಣೆ ಇತ್ತೀಚೆಗೆ ಕಾಂಗ್ರೆಸ್ಸ್ ಪಕ್ಷದೊಳಗೆ ನಡೆದ ಆಂತರಿಕ ಚುನಾವಣೆ.ಈ ಅಂಶವು ದೇಶದ ಮಧ್ಯಮ ವರ್ಗದ ಮತದಾರರನ್ನು ಖಂಡಿತಾ ಸೆಳೆಯುತ್ತದೆ.
ನಾಡು- ನುಡಿ: ಮರುಚಿಂತನೆ- ಭಾರತೀಯ ಪ್ರಭುತ್ವ ಮತ್ತು ಭ್ರಷ್ಟಾಚಾರ ಭಾಗ-2
– ಡಾ.ಎ.ಷಣ್ಮುಖ, ಸಹಪ್ರಾಧ್ಯಾಪಕರು, ಕುವೆಂಪು ವಿಶ್ವವಿದ್ಯಾನಿಲಯ
ಸಾರ್ವಭೌಮ ಪ್ರಭುತ್ವ(State) ಮತ್ತು ಸಾರ್ವಜನಿಕ ವಲಯ
ಇಂದಿನ ಭಾರತೀಯ ಪ್ರಭುತ್ವ ಎನ್ನುವ ಕಲ್ಪನೆಯು ಪಶ್ಚಿಮದ ರಾಜಕೀಯ ವ್ಯವಸ್ಥೆಯಿಂದಲೇ ಎರವಲಾಗಿ ಬಂದಿದೆ. ಈ ವಿಷಯವು ನಿಸ್ಸಂಶಯವಾಗಿ ಇಂದು ರಾಜ್ಯಶಾಸ್ತ್ರದ ವಲಯದಲ್ಲಿ ಒಂದು ಸಾಮಾನ್ಯ ತಿಳುವಳಿಕೆಯೇ ಆಗಿದೆ. ಅದನ್ನು ಒಂದು ರೀತಿಯಲ್ಲಿ ಸಕಾರಾತ್ಮಕವಾಗಿಯೇ ವಿವರಿಸಿಕೊಳ್ಳಲಾಗಿದೆ. ಪಶ್ಚಿಮದ ವಿವಿಧ ರಾಷ್ಟ್ರಗಳಲ್ಲಿ ನೂರಾರು ವರ್ಷಗಳಿಂದ ಪ್ರಾಯೋಗಿಕವಾಗಿ ದೃಢಪಡಿಸಿಕೊಂಡು, ಅಳವಡಿಸಿಕೊಂಡು ಬರಲಾದ ರಾಜಕೀಯ ರಚನೆಗಳಿಂದ ಅತ್ಯುತ್ತಮವಾದ ಅಂಶಗಳನ್ನು ಭಾರತದ ಸಂವಿಧಾನ ಕರ್ತೃಗಳು ಪಡೆದು ಭಾರತಕ್ಕೆ ಅಳವಡಿಸಿದ್ದಾರೆ ಎನ್ನುವುದೇ ಆ ಹೆಗ್ಗಳಿಕೆಯಾಗಿದೆ. ಆದರೆ ಈ ಹೆಗ್ಗಳಿಕೆಯ ಮೇಲೆ ಅಳವಡಿಸಿಕೊಂಡಿರುವ ರಾಜಕೀಯ ರಚನೆಗಳು, ಇಲ್ಲಿಯ ಸಾಮಾಜಿಕ ಸಂದರ್ಭದಲ್ಲಿ ಇಲ್ಲಿಯ ಸಾಂಸ್ಕೃತಿಕ ಹಿನ್ನೆಲೆಯ ಜನರು ಇವುಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗದೆ ಅವುಗಳಿಗೆ ಪೂರಕವಾಗಿ ನಡೆದುಕೊಳ್ಳದೇ ಇರುವುದರಿಂದ, ಅವು ಇಲ್ಲಿ ಅಪಭ್ರಂಶ (distortion) ಕ್ಕೆ ಒಳಗಾಗಿ ಸಮಸ್ಯೆಗಳು ಸೃಷ್ಟಿಯಾಗುತ್ತಿವೆಯೇ ಎನ್ನುವಂತಹ ಪ್ರಶ್ನೆಗಳು ಏಳುತ್ತವೆ. ಈ ಪ್ರಶ್ನೆಗಳ ಹಿನ್ನೆಲೆಯಲ್ಲಿ ಪಶ್ಚಿಮದಲ್ಲಿ ಪ್ರಭುತ್ವ ಪರಿಕಲ್ಪನೆ ಬೆಳವಣಿಗೆಯ ಸ್ವರೂಪಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗುತ್ತದೆ.
ನಮಗೆ ಗೊತ್ತಿರುವ ಹಾಗೆ ಸ್ಟೇಟ್ ಎನ್ನುವುದು ಒಂದು ಸಾರ್ವಭೌಮ ಸಂಸ್ಥೆ. ಯಾರೂ ಪ್ರಶ್ನಿಸಲಾರದ ಅಧಿಕಾರ ಅದಕ್ಕಿದೆ. ಜನರ ಜೀವನವು ಈ ಸ್ಟೇಟ್ನ ಸಾರ್ವಭೌಮ ಕಾನೂನುಗಳ ನಿಯಂತ್ರಣ ಮತ್ತು ನಿರ್ದೇಶನಕ್ಕೆ ಒಳಪಟ್ಟು ನಡೆಯಬೇಕು. ಈ ಸ್ವರೂಪದ ಸ್ಟೇಟ್ ಎಂದೆಂದಿಗೂ ಸಾರ್ವತ್ರಿಕವಾಗಿಯೇ ಇತ್ತೇ? ಖಂಡಿತವಾಗಿಯೂ ಇಲ್ಲ. ಈ ರೀತಿಯ ಸ್ಟೇಟ್ ಬೆಳೆದು ಬಂದಿದ್ದು ಪಶ್ಚಿಮ/ಯೂರೋಪಿನಲ್ಲಿ ಮತ್ತು ಈ ರೀತಿಯ ಸಾರ್ವಭೌಮ ನಿಯಂತ್ರಕ ಮತ್ತು ನಿರ್ದೇಶಕನ ಸ್ವರೂಪವನ್ನು ಪಡೆದುಕೊಂಡಿದ್ದು ಹೆಚ್ಚುಕಡಿಮೆ 17-18ನೇ ಶತಮಾನದ ನಂತರ ಎಂದೇ ಹೇಳಬಹುದು (Mukherji, Partha Nath, 2010). ಮತ್ತಷ್ಟು ಓದು 
ಹೊಸ ಚಿಂತನೆ ಮೂಡಿ ಬರಲಿ
– ಡ್ಯಾನಿ ಪಿರೇರಾ,ಹಳ್ಳಿಮೈಸೂರು
ನಿಜ ಹೇಳಬೇಕೆಂದರೆ 2014ರ ಲೋಕಸಭಾ ಚುನಾವಣೆ ನಮ್ಮಲ್ಲಿನ ನೈಜ ರಾಷ್ಟ್ರೀಯತೆಗೆ ಅದರ ಪರಂಪರಾಗತವಾದ ಜಾತ್ಯಾತೀತತೆಯ ನಿಜ ಅರ್ಥವಂತಿಕೆಗೆ ಮತದಾರ ಕೊಡಬೇಕಾದ ಪ್ರಬುದ್ಧ ತೀರ್ಪು ಎನ್ನಬಹುದುದೇನೋ! ಅದರಲ್ಲೂ ಈ ಚುನಾವಣೆ ಈ ದೇಶದ ಅಲ್ಪಸಂಖ್ಯಾತ-ಬಹುಸಂಖ್ಯಾತರೆಂಬ ಸಂಕುಚಿತ ಅವಕಾಶವಾದಿ ಮನೋಭೂಮಿಕೆಯನ್ನೊದ್ದು, ಈ ದೇಶ ಒಂದು ರಾಷ್ಟ್ರವಾಗಿ, ಜಾತಿ-ಮತಗಳ ಸಣ್ಣತನವನ್ನು ಬದಿಗಿಟ್ಟು, ಈ ದೇಶದ ಭವ್ಯ ಭವಿಷ್ಯವನ್ನು ಕಣ್ತುಂಬಿಕೊಳ್ಳಲು ಈ ದೇಶದ ಶ್ರೀಸಾಮಾನ್ಯನಿಗೆ ಸ್ವತಃ ಆ ಭಗವಂತನೇ ನೀಡಿದ ಅವಕಾಶವೆಂದರೆ ಖಂಡಿತ ಉತ್ಪ್ರೇಕ್ಷೆ ಎಂದು ಭಾವಿಸಬೇಕಿಲ್ಲ. ಅದಲ್ಲೂ ಇಲ್ಲಿನ ಅಲ್ಪಸಂಖ್ಯಾತರೆಂದೇ ಬಿಂಬಿಸಲ್ಪಡುವ ಕ್ರೈಸ್ತ-ಮುಸುಲ್ಮಾನ ಬಂಧುಗಳಿಗೂ ಈ ಚುನಾವಣೆ ಈ ದೇಶದ ತಮ್ಮ ವಾರಸಿಕೆ ಶೃತಪಡಿಸಲು ಇದೊಂದು ಸದವಕಾಶ ಎನ್ನಲು ಅವರು ಸಂಕೋಚಪಡಬೇಕಿಲ್ಲ. ಈ ದೇಶದ ಬಹುತೇಕ ರಾಜಕೀಯ ನಾಯಕರು ಬುದ್ಧಿಜೀವಿವರ್ಗ ಅಕ್ಷರಶಃ ಈ ದೇಶದ ನೈಜ ರಾಷ್ಟ್ರೀಯತೆ ಮತ್ತದರ ಪಾರಂಪರಿಕ ಜಾತ್ಯಾತೀತತೆಯ ವೈಶಾಲ್ಯತೆಯನ್ನು ಪ್ರತಿಪಾದಿಸಲು ಸಂಪೂರ್ಣ ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ದೇಶದ ಜಾತಿ-ಪಂಥಗಳಿಗೆ ಮೀರಿದ ಈ ರಾಷ್ಟ್ರ ನನ್ನದು, ಈ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಸವಾಲಾಗಿರುವ ಭಾರತದ ಇಂದಿನ ಜಾತ್ಯಾತೀತತೆಯ ವ್ಯಾಖ್ಯಾನದ ನೈಜ ಅರ್ಥವನ್ನು ಪುನರ್ರೂಪಿಸುವ ಅವಕಾಶ ಒದಗಿಬಂದಿರುವುದು ಈ ದೇಶದ ಅಲ್ಪಸಂಖ್ಯಾತರೆಂದು ಕರೆಯಲ್ಪಡುತ್ತಿರುವವರು ಮಾಡಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಎಂದರೆ ತಪ್ಪಲ್ಲ. ಈ ದೇಶವನ್ನು ಬ್ರಿಟಿಷರು ಆಳುತ್ತಿದ್ದಾಗ ಹಿಂದುಗಳ ಗುಮ್ಮವನ್ನು ಮುಸಲ್ಮಾನರ ಮುಂದೆ, ಮುಸಲ್ಮಾನರ ಗುಮ್ಮವನ್ನು ಹಿಂದುಗಳ ಮುಂದೆ ತೋರಿಸಿ ಅಖಂಡ ಭಾರತವನ್ನು ತುಂಡಾಗಿಸಿ ಅವರ ಸುತ್ತ ಗಿರಕಿ ಹೊಡೆಯುತ್ತಿದ್ದ ಮುಸ್ಲಿಂ ಲೀಗ್ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಒಂದೊಂದು ತುಂಡನ್ನು ಆಳಲು ಕೊಟ್ಟು, ಬ್ರಿಟಿಷರು ಹೋದ ಮೇಲೆ ಇಲ್ಲಿ ಸುದೀರ್ಘ ಆಡಳಿತ ನಡೆಸಿದ ಕಾಂಗ್ರೆಸ್ಸ್ ಮಾಡಿದ್ದೇನು?
ಸಿಂಧುರಕ್ಷಕ್ ಮುಳುಗಿತೆಂದರೆ ಹಿಂದೂಸ್ಥಾನವೂ ಮುಳುಗಿದಂತೆ!
– ರಾಜೇಶ್ ರಾವ್
ಭಾರತೀಯ ನೌಕೋದ್ಯಮಕ್ಕೆ ಸಹಸ್ರಾರು ವರ್ಷಗಳ ಇತಿಹಾಸವಿದೆ. ಋಗ್ವೇದದಲ್ಲಿ ನೌಕೆಗಳ ಉಲ್ಲೇಖವಿದೆ. ವೇದಕಾಲದಲ್ಲಿ ನೌಕೆಗಳ ಬಗ್ಗೆ, ಅವುಗಳನ್ನು ತಯಾರಿಸುವ, ಬಳಸುವ ಬಗ್ಗೆ ಜನತೆಗೆ ಅರಿವು ಇತ್ತು. ಅಂದರೆ ಸಾಗರ ಗರ್ಭದೊಳಗಡಗಿರುವ ಅಪಾರ ಸಂಪನ್ಮೂಲಗಳ ಬಗ್ಗೆ ಜನ ತಿಳಿದಿದ್ದರು. ಆಧುನಿಕ ವಿಜ್ಞಾನದ ಅರಿವಿಗೆ ದೊರಕಿದ ಮಾಹಿತಿಯನ್ನು ಆಧರಿಸಿದರೂ ಭಾರತವೇ ನೌಕೋದ್ಯಮದ ತವರು. ಕ್ರಿ.ಪೂ 2300ರ ಸುಮಾರಿಗೆ ಗುಜರಾತಿನ ಲೋಥಲ್ ಎಂಬ ಪ್ರದೇಶದಲ್ಲಿರುವ ಮಾಂಗ್ರೋಲ್ ಬಂದರಿನ ಬಳಿ ಸಿಂಧೂ ನಾಗರೀಕತೆಯ ಸಮಯದಲ್ಲಿ ಮೊದಲ ಉಬ್ಬರವಿಳಿತದ ಹಡಗು ನಿರ್ಮಾಣವಾಯಿತು. ಮೌರ್ಯರ ಆಳ್ವಿಕೆಯ ಸಮಯದಲ್ಲಿ ಜಲಮಾರ್ಗದ ಸಮಸ್ತ ಆಗು ಹೋಗುಗಳು ನವಾಧ್ಯಕ್ಷನ ನಿಯಂತ್ರಣದಲ್ಲಿತ್ತು. ಕೌಟಿಲ್ಯನ ಅರ್ಥ ಶಾಸ್ತ್ರದಲ್ಲಿ ನೌಕೆಗಳ ಬಗೆಗಿನ ಅಗಾಧ ಮಾಹಿತಿಯಿದೆ. ಮೌರ್ಯರಲ್ಲದೆ ಚೋಳ, ಶಾತವಾಹನ, ಗುಪ್ತ, ಪಾಲ, ಪಾಂಡ್ಯ, ವಿಜಯನಗರ, ಕಳಿಂಗ, ಮರಾಠರ ಆಳ್ವಿಕೆಯ ಕಾಲದಲ್ಲೂ ನೌಕೋದ್ಯಮ ಪ್ರಸಿದ್ದಿ ಪಡೆದಿತ್ತು. ಪಾಶ್ಚಿಮಾತ್ಯ ದೇಶಗಳೊಡನೆ ವ್ಯಾಪಾರ ವಹಿವಾಟು ಬಹು ಹಿಂದಿನಿಂದಲೂ ಸಾಗರ ಮಾರ್ಗವಾಗಿಯೇ ನಡೆದಿತ್ತು. ಮರಾಠ ನೌಕಾ ಪಡೆಯಂತೂ ಮೂರು ಶತಮಾನಗಳ ಕಾಲ ತನ್ನ ಪಾರುಪತ್ಯ ಸ್ಥಾಪಿಸಿತ್ತು. ಯೂರೋಪಿನ ನೌಕಾಪಡೆಗಳು ಅನೇಕ ಸಲ ಮರಾಠರ ನೌಕಾಪಡೆಗಳೆದುರು ನಿಲ್ಲಲಾರದೆ ಓಡಿ ಹೋಗಿದ್ದವು. ಕನ್ಹೋಜಿ ಆಂಗ್ರೇಯಂತಹ ಸಾಗರ ವೀರ ಎಂದೆಂದಿಗೂ ಅಮರ.
ಭಾರತೀಯ ನೌಕಾಪಡೆ ಜಗತ್ತಿನ ಐದನೇಯ ಅತಿ ದೊಡ್ಡ ನೌಕಾಪಾಡೆಯಾಗಿದ್ದು, ಇದರಲ್ಲಿ ಸುಮಾರು 55,000 ಜನರು ಕಾರ್ಯನಿರತರಾಗಿದ್ದಾರೆ. ಇವರಲ್ಲಿ ಸುಮಾರು 5,000 ಜನ ನೌಕಾ ವಾಯುಪಡೆಗೆ ಸೇರಿದ್ದು ಮತ್ತು ಸುಮಾರು 2೦೦೦ ಜನ ನೌಕಾ ಕಮಾಂಡೋಗಳಾಗಿದ್ದಾರೆ. ಭಾರತೀಯ ನೌಕಾಪಡೆ 155 ನೌಕೆಗಳನ್ನು ಹೊಂದಿದ್ದು, ಐ.ಎನ್.ಎಸ್.ವಿರಾಟ್ ಎಂಬ ವಾಯು ಯುದ್ಧ ನೌಕೆಯನ್ನು ಹೊದಿದೆ. ಸಂಪೂರ್ಣ ಏಷ್ಯಾ ಖಂಡದಲ್ಲಿರುವ ಎರಡು ವಾಯು ಯುದ್ಧ ನೌಕೆಗಳಲ್ಲಿ ಇದು ಒಂದು. ಸ್ವತಂತ್ರ ಭಾರತದ ನೌಕಾಪಡೆ ಇತಿಹಾಸದಲ್ಲಿ ಹಡಗಿನೊಂದಿಗೇ ಜಲಸಮಾಧಿಯಾದ ಹಾಗೂ ಸಾಯುವ ಮೊದಲು 67 ಜನರ ಜೀವ ರಕ್ಷಣೆ ಮಾಡಿದ್ದ ಮೊದಲ ಹಾಗೂ ಏಕೈಕ ಕ್ಯಾಪ್ಟನ್ ಮಹೇಂದ್ರನಾಥ್ ಮುಲ್ಲಾರಂತಹ ವೀರರನ್ನು ಹೊಂದಿದ್ದ ನೌಕಾಪಡೆ ನಮ್ಮದ್ದು.
ಜಾತ್ಯಾತೀತರೆನಿಸಿಕೊಳ್ಳಲು ಮುಸಲ್ಮಾನರ ಟೋಪಿ ಧರಿಸಲೇಬೇಕೆ?
– ನರೇಂದ್ರ ಕುಮಾರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂದನ್ ನೀಲೇಕಣಿಯವರು ಸ್ಪರ್ಧಿಸುತ್ತಿರುವುದು ಅಧಿಕೃತವಾಗಿ ಪ್ರಕಟವಾಗಿದೆ. ಅವರು ಕಾಂಗ್ರೆಸ್ ಅಭ್ಯರ್ಥಿಯೆಂದು ಘೋಷಣೆಯಾದ ಕೂಡಲೇ ಮುಸಲ್ಮಾನರ ಟೋಪಿ ಧರಿಸಿ ತಾವು ಕೂಡಾ “ಜಾತ್ಯಾತೀತ”ರೆಂದು ಲೋಕಕ್ಕೆಲ್ಲಾ ಸಾರಿದರು. ಈ ರೀತಿ ಮುಸಲ್ಮಾನ ಟೋಪಿ ಧರಿಸಿ “ಜಾತ್ಯಾತೀತ”ರಾಗುವುದು ಕಾಂಗ್ರೆಸ್ ಪರಂಪರೆಯೇ ಆದಂತಿದೆ. ಅದಕ್ಕಿಂತಲೂ ಮಿಗಿಲಾಗಿ, ಮುಸಲ್ಮಾನ ಟೋಪಿ ಧರಿಸದಿದ್ದವರನ್ನು “ಕೋಮುವಾದಿ” ಎಂದು ಖಂಡಿಸಲಾಗುತ್ತದೆ. ಒಂದೆರಡು ವರ್ಷದ ಹಿಂದೆ ಗುಜರಾತಿನಲ್ಲಿ ನಡೆದ ಸದ್ಭಾವನಾ ಸಭೆಯೊಂದರಲ್ಲಿ ನರೇಂದ್ರ ಮೋದಿಯವರಿಗೆ ಮುಸಲ್ಮಾನರೊಬ್ಬರು ಟೋಪಿ ನೀಡಿದರು. ಮೋದಿಯವರು ಆ ಟೋಪಿಯನ್ನು ಧರಿಸಲಿಲ್ಲ. ಆ ಕೂಡಲೇ ಅವರನ್ನು “ಕೋಮುವಾದಿ” ಎಂದು ಖಂಡಿಸಲಾಯಿತು.
ಇದು ಯಾವ ಸೀಮೆ ಜಾತ್ಯಾತೀತತೆ? ಒಂದು ಕೋಮಿನ ಟೋಪಿ ಧರಿಸಿದರೆ ಜಾತ್ಯಾತೀತ, ಧರಿಸದಿದ್ದರೆ ಕೋಮುವಾದಿ!? ಈ ದೇಶದಲ್ಲಿ ಬೇರೆ ಕೋಮುಗಳೇ ಇಲ್ಲವೆ? ಅವುಗಳಲ್ಲಿ ಅನೇಕ ಕೋಮುಗಳೂ ಅಲ್ಪಸಂಖ್ಯಾತವಲ್ಲವೇ? ಆ ಕೋಮುಗಳ ಲಾಂಚನವನ್ನೋ, ಟೋಪಿಯನ್ನೋ ಈ ರಾಜಕಾರಣಿಗಳು ಏಕೆ ಧರಿಸಿ ಪತ್ರಿಕೆಗಳಲ್ಲಿ ಚಿತ್ರ ಹಾಕಿಸಿಕೊಳ್ಳುವುದಿಲ್ಲ? ಮುಸಲ್ಮಾನ ಟೋಪಿ ಧರಿಸದಿದ್ದವರು ಕೋಮುವಾದಿಯಾಗುವುದಾದರೆ, ಆ ಉಳಿದ ಅಲ್ಪಸಂಖ್ಯಾತ ಕೋಮುಗಳ ಟೋಪಿ ಧರಿಸದಿದ್ದವರೂ ಕೋಮುವಾದಿ ಆಗಬೇಕಲ್ಲವೇ? ಮುಸಲ್ಮಾನರಿಗಿಂತ ಬಹಳ ಕಡಿಮೆ ಸಂಖ್ಯೆಯಲ್ಲಿರುವವರು ಜೈನರು. ಯಾವ ರಾಜಕಾರಣಿಯೂ ಜೈನರ ದಿರಿಸು ಧರಿಸಿ ತನ್ನ “ಜಾತ್ಯಾತೀತತೆ”ಯನ್ನು ಮೆರೆದದ್ದು ನನಗೆ ತಿಳಿದಿಲ್ಲ. ಅಥವಾ ಪಾರ್ಸಿ ಲಾಂಚನ ಧರಿಸಿಯೋ, ಇಲ್ಲವೇ ಬೌದ್ಧರ ದಿರಿಸು ಧರಿಸಿಯೋ, ಕ್ರೈಸ್ತರಂತೆ ವೇಷ ಹಾಕಿದ್ದೋ ಎಲ್ಲೂ ನೋಡಿಲ್ಲ.
ರಿಲಿಜನ್ನಿನ ಅಫೀಮು “ಶಂಕರಾಚಾರ್ಯ ಹಿಲ್” ಅನ್ನು “ತಖ್ತ್-ಈ-ಸುಲೇಮಾನ್” ಆಗಿಸುತ್ತದೆ
– ರಾಕೇಶ್ ಶೆಟ್ಟಿ
ಬೆಳಗ್ಗೆ ಎದ್ದು ನಮ್ಮಲ್ಲಿ ಕೆಲವರು ಹೇಳುತಿದ್ದ “ನಮಸ್ತೆ ಶಾರದ ದೇವಿ ಕಾಶ್ಮಿರಪುರವಾಸಿನಿ||” ಅನ್ನುವ ಉದ್ಘೋಷವನ್ನು ಇನ್ಮುಂದೆ ಬದಲಾಯಿಸಬೇಕಾದ ಅನಿವಾರ್ಯತೆ ಬರಬಹುದು ಅನ್ನಿಸುತ್ತಿದೆ.ಯಾಕೆಂದರೆ, ನಮ್ಮ ’ಭಾರತೀಯ ಪುರಾತತ್ವ ಇಲಾಖೆ’ ಮಾಡುತ್ತಿರುವ ಕೆಲಸವೇ ಅಂತದ್ದು.
ಟ್ರಿಬ್ಯೂನ್ ಪೇಪರಿನಲ್ಲಿ ಬಂದ ವರದಿಯ ಪ್ರಕಾರ,ಜಮ್ಮು-ಕಾಶ್ಮೀರದ “ಶಂಕರಾಚಾರ್ಯ ಹಿಲ್” ಅನ್ನು ಭಾರತೀಯ ಪುರಾತತ್ವ ಇಲಾಖೆ “ತಖ್ತ್-ಈ-ಸುಲೇಮಾನ್” ಅಂತ ಬದಲಾಯಿಸಿದೆ.ಕಾಶ್ಮೀರವನ್ನು ಈ ಹಿಂದೆ ಶಾರದ ದೇಶ,ಶಾರದ ಪೀಠ ಅಂತೆಲ್ಲ ಕರೆಯುತಿದ್ದರು.ಮೇಲೆ ಹೇಳಿದ್ದ “ನಮಸ್ತೆ ಶಾರದ ದೇವಿ ಕಾಶ್ಮಿರಪುರವಾಸಿನಿ||” ಅದನ್ನೇ ಸಾರುತ್ತಿದೆ.ಇನ್ನು ಶಂಕರಾಚಾರ್ಯರು ದೇಶದ ನಾಲ್ಕು ಮೂಲೆಗಳಿಗೂ ಸಾಗಿ ಶಾರದ ಪೀಠಗಳನ್ನು ಸ್ಥಾಪಿಸಿದ್ದು ಎಲ್ಲರಿಗೂ ತಿಳಿದಿರುವುದೇ,ಹಾಗಿದ್ದ ಮೇಲೆ,ಇವನೆಲ್ಲಿಂದ ಬಂದ ಸುಲೇಮಾನ್?
ದಾಲ್ ನದಿಯ ಕಡೆಗೆ ಮುಖಮಾಡಿ ನಿಂತಿರುವ ಈ ಪರ್ವತವಿರುವುದು ಶ್ರೀನಗರದಲ್ಲಿ.ಇದೇ ಜಾಗದಲ್ಲಿ ಆದಿ ಶಂಕರಾಚಾರ್ಯರು 788-820 ADರಲ್ಲಿ ನೆಲೆಸಿದ್ದರು ಅನ್ನುತ್ತದೆ ಇತಿಹಾಸ.ಪಂಡಿತ್ ಆನಂದ್ ಕೌಲ್ ಅವರ ಪ್ರಕಾರ ಈ ದೇವಸ್ಥಾನದ ನಿರ್ಮಾಣ ಮಾಡಿದ್ದು ಸಂಡಿಮನ್ ಎಂಬುವವ 2629 -2564 BC ಯಲ್ಲಿ.ಆ ನಂತರ ರಾಜ ಗೋಪಾದಿತ್ಯ 426–365 BCರಲ್ಲಿ ಮತ್ತು ರಾಜ ಲಲಿತಾಧಿತ್ಯ 697–734BC ರಲ್ಲಿ ಇದರ ಪುನುರುಜ್ಜೀವನ ಮಾಡಿಸಿದ್ದರು.ಝೈನ್-ಉಲ್-ಅಬಿದ್ದೀನ್ ಅವರು ದೇವಸ್ಥಾನದ ಮೇಲ್ಛಾವಣಿಯನ್ನು ದುರಸ್ತಿ ಮಾಡಿಸಿದ್ದರು.1841–1846ರಲ್ಲಿ ಸಿಖ್ ಗವರ್ನರ್ ಶೇಕ್ ಗುಲಾಂ ಮೊಹಿದುದ್ದೀನ್ ಕೂಡ ದುರಸ್ತಿ ಮಾಡಿಸಿದ್ದರು.ಇದನ್ನು ಜ್ಯೋತೇಶ್ವರ ದೇವಸ್ಥಾನವೆಂದು ಕರೆಯಲಾಗುತಿತ್ತು.ಬೌದ್ಧರಿಗೂ ಪೂಜ್ಯನೀಯವಾದ ಸ್ಥಳವಿದು.ಅವರಿದನ್ನು ಪಾರಸ್- ಪಹಾರ್ ಅನ್ನುತ್ತಾರೆ.ಶಂಕರರು ಇಲ್ಲಿ ಶಿವಲಿಂಗ ಪ್ರತಿಷ್ಟಾಪಿಸಿದ್ದರು.ಶಂಕರರು ಇಲ್ಲಿ ಬಂದನಂತರ,ಈ ಪರ್ವತ ಮತ್ತು ದೇವಸ್ಥಾನವನ್ನು ಶಂಕರಾಚರ್ಯರ ಹೆಸರಿನಿಂದಲೇ ಗುರಿತಿಸಲಾಗುತ್ತಿದೆ.






