ನೋಡುವ ‘ದೃಷ್ಟಿ’ ಬದಲಿಸಬಲ್ಲ ‘ನೈನ್ ಲೈಫ್ಸ್’
– ಡಾ.ಅಶೋಕ್ ಕೆ ಆರ್
ಪ್ರವಾಸಕಥನವೆಂದರೆ ಭೇಟಿ ನೀಡಿದ ತಾಣಗಳ ಮಾಹಿತಿ, ಆ ಜಾಗಕ್ಕೆ ಹೋಗಲಿರುವ ಸಾರಿಗೆ ವ್ಯವಸ್ಥೆಯ ಬಗೆಗಿನ ಮಾಹಿತಿ, ಅಲ್ಲಿ ಸಿಗುವ ವಿಧವಿಧದ ಭೋಜನಗಳ ಮಾಹಿತಿ, ಅಬ್ಬಬ್ಬಾ ಎಂದರೆ ಆ ಸ್ಥಳದ ಪೂರ್ವೇತಿಹಾಸದ ಮಾಹಿತಿ – ಇವು ಸಿದ್ಧರೂಪದ ಬಹುತೇಕ ಪ್ರವಾಸಕಥನಗಳ ಹೂರಣ. ಈ ಸಿದ್ಧ ರೂಪವನ್ನು ಹೊರತುಪಡಿಸಿದ ಪ್ರವಾಸಕಥನಗಳೂ ಉಂಟು, ಅವು ಆತ್ಮರತಿಯೊಡನೆ ತಮ್ಮದೇ ಸ್ವಂತ ಸಂಗತಿಗಳನ್ನು, ಸಣ್ಣಪುಟ್ಟ ಸಮಸ್ಯೆಗಳನ್ನು ವೈಭವೀಕರಿಸಿಕೊಂಡು ಬರೆಯಲ್ಪಟ್ಟ ಹೆಸರಿಗಷ್ಟೇ ಪ್ರವಾಸಕಥನವೆನ್ನಿಸಿಕೊಳ್ಳುವ ಬರವಣಿಗೆಗಳು. ಇವೆಲ್ಲ ರೀತಿಯ ಪ್ರವಾಸಕಥನಗಳು ನಾಚುವಂತೆ ಇರುವ ಪುಸ್ತಕ “ನೈನ್ ಲೈಫ್ಸ್” (Nine Lives). ಪ್ರಕೃತಿ ಸೌಂದರ್ಯದ ವರ್ಣನೆ, ಸ್ಥಳಪುರಾಣದ ಜೊತೆಜೊತೆಗೆ ಆಯ್ದ ಒಂಭತ್ತು ಜನರ ಮತ್ತವರ ಸುತ್ತಲಿನವರ ಕಥೆಯಿದೆ. ಪ್ರಾಚೀನ ಭಾರತದಿಂದ ಇಂದಿನವರೆಗೂ ಸಾಗಿ ಬಂದಿರುವ ‘ವೃತ್ತಿ’ಯಲ್ಲಿ ಕಾಲ ಸರಿದಂತೆ ಆದ ಬದಲಾವಣೆಗಳಿವೆ. ತನ್ನ ಇಪ್ಪತ್ತೈದು ವರುಷಗಳ ಭಾರತದ ಪ್ರವಾಸದಲ್ಲಿ ಭಾರತದ ಸಾಂಸ್ಕೃತಿಕ – ಬಹಿಷ್ಕೃತ ಲೋಕದರ್ಶನ ಮಾಡಿಸುವವನು ವಿಲಿಯಂ ಡ್ಯಾಲ್ರಿಂಪಲ್ (William Dalrymple) ಎಂಬ ಸ್ಕಾಟಿಷ್ ಲೇಖಕ! ಭಾರತೀಯನಾಗದೇ ಹೋದ ಕಾರಣಕ್ಕೆ ಇಂಥದೊಂದು ಒಳನೋಟ ಈ ಲೇಖಕನಿಗೆ ಲಭ್ಯವಾಯಿತಾ? ಒಳಗಿದ್ದು ನೋಡುವವರ ಭಾವಪರಿಧಿಗೆ ದಕ್ಕದ ವಿಷಯಗಳು ಹೊರಗಿನಿಂದ ನೋಡುವವರಿಗೆ ದಕ್ಕುತ್ತದೆ.
ಜೈನ ಧರ್ಮದ ಸನ್ಯಾಸಿನಿ, ಕಣ್ಣೂರಿನ ನೃತ್ಯಪಟು, ಕರ್ನಾಟಕದ ದೇವದಾಸಿಯರು, ಸಾವಿರಾರು ಪುಟದ ಗೀತೆಗಳನ್ನು ಹಾಡುವ ಅನಕ್ಷರಸ್ಥರು, ಸೂಫಿ ಪಂತದ ಹೆಂಗಸು, ಟಿಬೆಟ್ಟಿನಿಂದ ಭಾರತಕ್ಕೆ ವಲಸೆ ಬಂದ ಬೌದ್ಧ ಬಿಕ್ಕು, ಚೋಳರ ಕಾಲದ ಶೈಲಿಯ ಕೆತ್ತುವ ಶಿಲ್ಪಿ, ಮಾಟಗಾತಿ, ಕುರುಡು ಹಾಡುಗಾರ – ಇವಿಷ್ಟು ನೈನ್ ಲೈಫ್ಸ್ ಪುಸ್ತಕದಲ್ಲಿ ಲೇಖಕ ನಮ್ಮೊಡನೆ ಮುಖಾಮುಖಿಯಾಗಿಸುವ ವ್ಯಕ್ತಿಗಳು. ಓದುಗರೊಡನೆ ಮುಖಾಮುಖಿಯಾಗುವುದು ಕೇವಲ ವ್ಯಕ್ತಿ ಮಾತ್ರವಲ್ಲ; ಆ ವ್ಯಕ್ತಿಯ ವ್ಯಕ್ತಿತ್ವ, ಅವರ ಮನೆಯವರ ತಲ್ಲಣ – ಸಂತಸ, ಆ ವ್ಯಕ್ತಿಯ ಸಾಮಾಜಿಕ ಆರ್ಥಿಕ ಸ್ಥಿತಿ – ಸಮಸ್ಯೆ, ಹೀಗೆ ಒಬ್ಬ ವ್ಯಕ್ತಿಯ ಬಗ್ಗೆ ತಿಳಿಸುತ್ತೇನೆಂದು ಹೇಳುವ ಲೇಖಕ ಆ ವ್ಯಕ್ತಿಯ ಮೂಲಕ ಒಂದಿಡೀ ಪ್ರಾದೇಶಿಕತೆಯ ವಿವರವನ್ನು ಧರ್ಮ – ಧರ್ಮಗಳ ನಡುವಿನ ತಿಕ್ಕಾಟ – ಸಾಮರಸ್ಯಗಳನ್ನು ಸುಲಲಿತ ಓದಿನ ಮೂಲಕ ಮನಸ್ಸಿಗೆ ತಲುಪಿಸುತ್ತಾರೆ. ಹೊರಗಣನವನಾದ ಕಾರಣಕ್ಕೋ ಏನೋ ಯಾವೊಂದು ಪೂರ್ವಾಗ್ರಹವೂ ಇಲ್ಲದೆ ಕಂಡದ್ದನ್ನು ಕೇಳಿದ್ದನ್ನು ಯಥಾವತ್ತಾಗಿ ಬರೆದಿರುವ ಪ್ರಯತ್ನವನ್ನೂ ಗಮನಿಸಬಹುದು.
ಧರ್ಮವನ್ನು ಅಫೀಮು ಎಂದವರಿಂದ ಮತ್ತೇನು ನಿರೀಕ್ಷಿಸಲಾದೀತು?
– ನರೇಂದ್ರ ಕುಮಾರ ಎಸ್.ಎಸ್
ತೆಹಲ್ಕಾ’ದ ತರುಣ್ ತೇಜಪಾಲ್ ಅವರು ನಡೆಸಿರುವರೆನ್ನಲಾದ ಲೈಂಗಿಕ ಹಲ್ಲೆ ಪ್ರಕರಣ, ಮಾಧ್ಯಮದ ಮುಖವಾಡವನ್ನು ಕಿತ್ತೆಸೆದಿದೆ. ಇದೇ ’ತೆಹಲ್ಕಾ’ವು, ಆಗಾಗ “ಕುಟುಕು ಕಾರ್ಯಾಚರಣೆ”ಯ ಮೂಲಕ ರಾಜಕಾರಣಿಗಳನ್ನು ಸಿಕ್ಕಿಹಾಕಿಸುತ್ತಿತ್ತು. ಒಂದು ಗುಪ್ತ ಕ್ಯಾಮೆರಾ ಜೊತೆಗೆ ತೆರಳುವ ಈ “ಕುಟುಕು ಕಾರ್ಯಾಚರಣೆ ಪಡೆ”, ರಾಜಕಾರಣಿಗಳಿಗೆ ತಿಳಿಯದಂತೆ ಬಲೆ ಬೀಸುತ್ತಿತ್ತು. ಅವರಿಗೆ ಆಮಿಷವನ್ನು ತೋರಿಸಿ, ಆಗ ನಡೆಯುವ ಪೂರ್ಣ ಸಂಭಾಷಣೆಯನ್ನು ಕ್ಯಾಮೆರಾ ಮೂಲಕ ಸೆರೆಹಿಡಿದು, ಆ ನಂತರ ವಿಡಿಯೋವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿತ್ತು. ಆ ವಿಡಿಯೋ ನೋಡಿದ ಜನ, ಅದರಲ್ಲಿರುವ ರಾಜಕಾರಣಿ ಭ್ರಷ್ಟಾಚಾರಿಯೇ ಎಂದು ನಿರ್ಧಾರಕ್ಕೆ ಬರುವ ರೀತಿಯಲ್ಲಿ ಅದನ್ನು ಪ್ರಸ್ತುತ ಪಡಿಸಲಾಗುತ್ತಿತ್ತು. ನ್ಯಾಯಾಂಗ ವಿಚಾರಣೆಯ ಬದಲು ಮಾಧ್ಯಮಗಳೇ ವಿಚಾರಣೆ ನಡೆಸಿ, ರಾಜಕಾರಣಿಯನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿಬಿಡುತ್ತಿತ್ತು.
ವ್ಯಕ್ತಿಯೊಬ್ಬ ಭ್ರಷ್ಟಾಚಾರಿ ಅಲ್ಲದಿದ್ದರೂ, ಆಮಿಷಕ್ಕೊಳಗಾಗಿ ಕೆಲವು ತಪ್ಪುಗಳನ್ನು ಮಾಡುವನು. ಉದಾಹರಣೆಗೆ, ಮನೆಗೆಲಸಕ್ಕೆ ಬರುವ ಹುಡುಗ/ಹುಡುಗಿ ಕಳ್ಳರಾಗಿರುವುದಿಲ್ಲ. ಅವರು ಕಷ್ಟಪಟ್ಟು ಕೆಲಸ ಮಾಡಿ ಸಂಪಾದಿಸುವ ಉದ್ದೇಶ ಹೊಂದಿಯೇ ಕೆಲಸಕ್ಕೆ ಬಂದಿರುತ್ತಾರೆ. ಆದರೆ, ಅವರು ಕೆಲಸ ಮಾಡುವ ಮನೆಯಲ್ಲಿ, ಈ ಹುಡುಗ/ಹುಡುಗಿಯ ಕಣ್ಣಿಗೆ ಕಾಣಿಸುವಂತೆ ಹಣವನ್ನೋ ಇಲ್ಲವೇ ಆಭರಣಗಳನ್ನೋ ಇಟ್ಟಿದ್ದರೆ, ಅವರು ಆಮಿಷಕ್ಕೆ ಒಳಗಾಗಿಬಿಡುತ್ತಾರೆ. ಅಲ್ಲಿ ಇಟ್ಟಿರುವ ಹಣ/ಆಭರಣವನ್ನು ಯಾರೂ ಗಮನಿಸುತ್ತಿಲ್ಲವೆಂದು ತಿಳಿದಾಗ, ಅದನ್ನು ತೆಗೆದುಕೊಳ್ಳೋಣ ಎಂದೆನ್ನಿಸಿಬಿಡಬಹುದು. ಆಮಿಷದಿಂದ ಉಂಟಾದ ಆಸೆಯಿಂದ ತಪ್ಪಿಸಿಕೊಳ್ಳಲಾಗದೆ “ಕಳ್ಳತನ” ನಡೆದುಬಿಡುತ್ತದೆ. ಇಲ್ಲಿ ಕಳ್ಳತನ ಮಾಡಿದ ಹುಡುಗ/ಹುಡುಗಿಯದು ಎಷ್ಟು ತಪ್ಪೋ, ಅಷ್ಟೇ ತಪ್ಪು ಆ ಹಣ/ಆಭರಣಗಳನ್ನು ಇವರ ಕಣ್ಣಿಗೆ ಕಾಣುವಂತೆ ಇಟ್ಟು ಆಮಿಷ ಕೊಟ್ಟವರದೂ ಆಗಿರುತ್ತದೆ, ಅಲ್ಲವೆ?
ಕನ್ನಡ ಚಿತ್ರರ೦ಗದ ಬಗೆಗೊ೦ದಿಷ್ಟು…
– ಗುರುರಾಜ ಕೊಡ್ಕಣಿ
ಮೊನ್ನೆಯಷ್ಟೇ ಕನ್ನಡದ ಹೊಸ ಚಿತ್ರವೊ೦ದು ಬಿಡುಗಡೆಯಾಗಿದೆ.ಹೆಸರು ’ಖತರ್ನಾಕ್’.ಇದು ವಿಕೃತ ಕಾಮಿ ಉಮೇಶ ರೆಡ್ಡಿಯ ಜೀವನಾಧಾರಿತ ಚಿತ್ರ.’ಉಮೇಶ್ ರೆಡ್ಡಿಯ ವಿಕೃತಿಗಳು ಬೆಳ್ಳಿತೆರೆಗೆ ’ಎ೦ದು ಚಿತ್ರತ೦ಡದವರು ಹೆಮ್ಮೆಯಿ೦ದ ಹೇಳಿಕೊಳ್ಳುತ್ತಿದ್ದಾರೆ.ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾದ ಚಿತ್ರಗಳನೊಮ್ಮೆ ಗಮನಿಸಿ.’ಖತರ್ನಾಕ್’,’ಉಮೇಶ’,’ದ೦ಡುಪಾಳ್ಯ’,’ಸಿಲ್ಕ್:ಸಕತ ಹಾಟ್ ಮಗಾ’ ಇತ್ಯಾದಿ ಇತ್ಯಾದಿ.ಮೊದಲೆರಡು ಚಿತ್ರಗಳು ವಿಕೃತ ಕಾಮಿ ಉಮೇಶ ರೆಡ್ಡಿಯ ಜೀವನಾಧಾರಿತ ಚಿತ್ರಗಳಾದರೆ,ದ೦ಡು ಪಾಳ್ಯದ ಹ೦ತಕರ ಕತೆಯನ್ನಾಧರಿಸಿ ’ದ೦ಡು ಪಾಳ್ಯ’ ಚಿತ್ರ ಮಾಡಲಾಗಿತ್ತು.’ಸಿಲ್ಕ್’ ಚಿತ್ರ ಕ್ಯಾಬರೇ ಡಾನ್ಸರ್ ಗತಕಾಲದ ನಟಿಯೊಬ್ಬಳ ಹೆಸರಿನಿ೦ದ ಪ್ರೇರಿತ ಚಿತ್ರವಾಗಿತ್ತು.
‘message oriented film’ ಎ೦ಬ ಹೆಸರಿನಡಿಯಲ್ಲಿ ಬರುತ್ತಿರುವ ಇ೦ಥ ಚಲನ ಚಿತ್ರಗಳ ದಿಕ್ಕಿನೆಡೆಗೆ ಸಾಗುತ್ತಿರುವ ಕನ್ನಡ ಚಿತ್ರರ೦ಗವನ್ನು ಗಮನಿಸಿದಾಗ ಅಭಿಮಾನಿಗಳಿಗೆ ಒಟ್ಟೊಟ್ಟಿಗೆ ನಿರಾಸೆ,ಆತ೦ಕಗಳ ಅನುಭವ.ಆಶ್ಲೀಲತೆ,ಹಸಿಹಸಿ ಕಾಮ,ವಿಕೃತಿ,ದ್ವ೦ದಾರ್ಥ ಮತ್ತು ಕ್ರೌರ್ಯಗಳೇ ಇ೦ಥಹ ಚಿತ್ರಗಳ ಬ೦ಡವಾಳ.ಇಷ್ಟೊ೦ದು ಅತೀರೇಕದ ಚಿತ್ರದಲ್ಲಿ ಬೇಕಿತ್ತಾ ಎ೦ದು ಚಿತ್ರತ೦ಡದವರನ್ನು ಕೇಳಿದರೆ.ಮೂಲ ಕತೆ ಇ೦ಥದ್ದನೆಲ್ಲ ಬೇಡುತ್ತದೆ ಎನ್ನುತ್ತಾರವರು…!! ಇನ್ನು ಇದೊ೦ದು ’ಸ೦ದೇಶ ಪ್ರಧಾನ ಚಿತ್ರ’ ಕೆಟ್ಟವರ ಜೀವನ ಕೊನೆಯಲ್ಲಿ ಹೇಗಾಗುತ್ತದೆ ಎ೦ದು ತೋರಿಸುವುದಕ್ಕೆ ಇದೆಲ್ಲ ಅವಶ್ಯಕ ಎನ್ನುವ ಸಮರ್ಥನೆ ಬೇರೆ.
ಜಾತ್ಯಾತೀತರೆನಿಸಿಕೊಳ್ಳಲು “ಹಿಂದೂ ನಂಬಿಕೆ”ಗಳ ಜೊತೆ ಸರಸವಾಡಲೇಬೇಕೆ?
– ನರೇಂದ್ರ ಕುಮಾರ ಎಸ್.ಎಸ್
“ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ – 2013” ಅನ್ನು ಜಾರಿಗೆ ತರಲಾಗುವುದೆಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಕ್ಕಿದ್ದಂತೆ ಘೋಷಿಸಿದೆ. ಕರ್ನಾಟಕದಲ್ಲಿ ಆಗಬೇಕಾದ ಅನೇಕ ತುರ್ತಾದ ಕೆಲಸಗಳಿವೆ. ಈ ಹಿಂದೆ ಅಧಿಕಾರದಲ್ಲಿದ್ದ ಭಾಜಪದ ಒಳಜಗಳದಿಂದ ಬೇಸೆತ್ತ ಜನರು, ಈ ಎಲ್ಲಾ “ತುರ್ತಾಗಿ ಆಗಬೇಕಾದ ಕೆಲಸ”ಗಳನ್ನೂ ಮಾಡಲಿಕ್ಕೆಂದೇ ಕಾಂಗ್ರೆಸ್ ಕೈಯ್ಯಲ್ಲಿ ಮತ್ತೊಮ್ಮೆ ಅಧಿಕಾರ ಕೊಟ್ಟರು. ಆದರೆ, ಇವೆಲ್ಲವನ್ನೂ ಬದಿಗೊತ್ತಿ, “ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ – 2013” ಅನ್ನು ಜಾರಿಗೆ ತರುತ್ತಿರುವುದು ಕಾಂಗ್ರೆಸ್ ಪಕ್ಷದವರಿಂದ ಹಿಡಿದು ಎಲ್ಲರನ್ನೂ ದಿಗ್ಭ್ರಮೆಗೊಳಪಡಿಸಿದೆ. ಈ ವಿದೇಯಕದ ಅಗತ್ಯ ಈಗೇನಿತ್ತು, ಎನ್ನುವುದು ಎಲ್ಲ ಪ್ರಜ್ಞಾವಂತರ ಪ್ರಶ್ನೆಯಾಗಿದೆ. ಇದರ ಹಿಂದೆ ಏನಾದರೂ “Hidden Agenda” ಇರಬಹುದೆಂದು ಎಲ್ಲರಿಗೂ ಅನಿಸತೊಡಗಿದೆ.
ಸಿದ್ದರಾಮಯ್ಯನವರು “ಜಾತ್ಯಾತೀತ” ಪಕ್ಷಕ್ಕೆ ಸೇರಿದವರು. ಅವರಿಗೆ “ಪ್ರಗತಿಶೀಲ ವಿಚಾರವಂತರ” ಒಡನಾಟವಿದೆ. ಈ ವಿದೇಯಕದ ಹಿಂದೆ ಕೆಲಸ ಮಾಡಿರುವುದೂ ಈ “ಪ್ರಗತಿಶೀಲ”ರ ತಲೆಯೇ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ, ಕರ್ನಾಟಕದಲ್ಲಿ ತುರ್ತಾಗಿ ಆಗಬೇಕಿರುವ ಎಲ್ಲಾ ಕಾರ್ಯಗಳಿಗಿಂತಲೂ ಈ ವಿದೇಯಕವು ಹೇಗೆ ಆದ್ಯತೆವುಳ್ಳದ್ದಾಯಿತು ಎಂಬುದಕ್ಕೆ ಅವರ ಬಳಿ ಉತ್ತರ ಇರಲಾರದು. ತಮ್ಮ “Hidden Agenda” ಅನುಷ್ಠಾನಕ್ಕಾಗಿ ಸಿದ್ದರಾಮಯ್ಯನವರ ಅಧಿಕಾರವನ್ನು ಈ “ಪ್ರಗತಿಶೀಲ”ರು (ದು)ಉಪಯೋಗಿಸಿಕೊಳ್ಳುತ್ತಿದ್ದಾರೆಯೇ ಎಂಬ ಅನುಮಾನ ಹುಟ್ಟುತ್ತಿದೆ.
ವಿಜ್ನಾನವೂ ಒಂದು ನಂಬಿಕೆಯೇ ಅಲ್ಲವೇ?
– ಬಾಲಚಂದ್ರ ಭಟ್
ಈ ತಲೆಬರಹವನ್ನು ನೋಡಿದ ಬಹಳಷ್ಟು ಜನ ಇದೊಂದು ಮೂರ್ಖತನದ ಮಾತು ಎಂದುಕೊಳ್ಳುವದರಲ್ಲಿ ಸಂಶಯವಿಲ್ಲ. ಇಷ್ಟೆಲ್ಲ ನಾನು ಯಾಕೆ ಬರೆಯಲು ಪ್ರಾರಂಭಿಸಬೇಕಾಯಿತೆಂದರೆ ಇವತ್ತು ರಾಜಕೀಯ, ಸಾಮಜಿಕ ಹಾಗೂ ಇತ್ಯಾದಿ ವಲಯಗಳಲ್ಲಿ ನಂಬಿಕೆ, ಮೂಢನಂಬಿಕೆ ಹಾಗೂ ವಿಜ್ನಾನಗಳು ಬಹುಮಟ್ಟದಲ್ಲಿ ಚರ್ಚೆಯಾಗುತ್ತಿರುವದು. ಹೀಗೆ ಚರ್ಚೆಯಾದಾಗಲೆಲ್ಲ ನಂಬಿಕೆಯ ಬಗ್ಗೆ ಬೇರೆ ಬೇರೆ ಹಿನ್ನೆಲೆಯಲ್ಲಿ ಪರ/ವಿರೋಧ ವ್ಯಾಖ್ಯಾನಗಳನ್ನು ನೀಡಿದರೂ
ವಿಜ್ನಾನಕ್ಕೆ ಅವಿರೊಧ ಅನುಮೋದನೆ ಇರಬೇಕೆಂಬ ಇಂಗಿತ ಚರ್ಚೆಯ ಮೂಲ ತತ್ವವೇ ಆಗಿರುತ್ತದೆ.
ವೈಜ್ನಾನಿಕ ಚಿಂತಕರು ಜಡ್ಜ್ ಸ್ಥಾನದಲ್ಲಿಯೂ, ನಂಬಿಕೆ/ಮೂಢನಂಬಿಕೆಗಳ ಪರ/ವಿರೋಧಿಗಳು ಕಟೆಕಟೆಯಲ್ಲಿ ನಿಂತಿರುವಂತೆ ಅನಿಸುತ್ತದೆ. ಅಂತೆಯೆ ವಿಜ್ನಾನ ಇವತ್ತು ಜಡ್ಜ್ ಸ್ಥಾನವನ್ನು ಆಕ್ರಮಿಸಿದೆಯೆಂದರೆ ಮನುಕುಲದ ಬೌದ್ಧಿಕತೆ ಒಂದೇ ತಳಪಾಯದಡಿ ನಿರ್ಮಾಣವಾಗುತ್ತಿದೆ ಎನ್ನುವದರ ಅರ್ಥವೇನೊ! ಹಾಗೆಂದ ಮಾತ್ರಕ್ಕೆ ಎಲ್ಲರೂ ವಿಜ್ನಾನದ ಅಧ್ಯಯನದ ಬಗ್ಗೆ ಆಸ್ಥೆಯನ್ನು ತೋರಿಸುತ್ತಿದ್ದಾರೆಂದು ಅರ್ಥವಲ್ಲ. ಬದಲಿಗೆ ವಿಜ್ನಾನ ಇವತ್ತು ಜಡ್ಜ್ ಆಗಿರುವ ಕಾರಣ ಜನರು ತಮ್ಮ ತಮ್ಮ ಬದುಕಿನ ದೃಷ್ಟಿಕೋನಗಳನ್ನು ವಿಜ್ನಾನದ ಮೂಲಕ ಸಮರ್ಥಿಸಿಕೊಳ್ಳುತ್ತಿದ್ದಾರಷ್ಟೆ.
ಶ್ವೇತಭವನ ತಲುಪಿದ ಜಯದೇವದ ಸಾಧನೆ ನಮ್ಮ ಸರ್ಕಾರಗಳಿಗೇಕೆ ಗೋಚರಿಸುತ್ತಿಲ್ಲ…
– ಗೋಪಾಲ ಕೃಷ್ಣ
‘ಹೀಗೆ ಮೂರು ವರ್ಷಗಳ ಹಿಂದೆ ಕ್ರಿಸ್ ಎಂಬ ಅಮೇರಿಕಾ ಪ್ರಜೆಯೊಬ್ಬರು ಕೆಲ ದಿನಗಳಿಗಾಗಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಒಂದು ತಡರಾತ್ರಿಯಲ್ಲಿ ಹೃದಯದ ನೋವು ಕಾಣಿಸಿದ್ದರಿಂದ, ವೈದ್ಯರೊಬ್ಬರ ಸಲಹೆಯ ಮೇರೆಗೆ ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿದ್ದಾರೆ. ತಡರಾತ್ರಿಯಾದ್ದರಿಂದ ಆಸ್ಪತ್ರೆಯಲ್ಲಿ ಕೇಳುವವರು ಇರುವರೋ ಇಲ್ಲವೋ ಎಂಬ ಅನುಮಾನದಿಂದಲೇ ದಾಖಲಾದವರಿಗೆ ಜಯದೇವದಲ್ಲಿ ಆಶ್ಚರ್ಯ ಕಾದಿತ್ತು. ಖುದ್ದು ಹೃದಯ ತಜ್ಞರಿಂದಲೇ ಚಿಕಿತ್ಸೆ ಪಡೆದು ದಾಖಲಾದ ಒಂದು ಗಂಟೆಯೊಳಗಾಗಿ ಮನೆಗೆ ಮರಳಿದ್ದಾರೆ. ಅವರು ಚಿಕಿತ್ಸೆಗೆ ಭರಿಸಿದ್ದು 92 ರೂಪಾಯಿ.’
ನಮ್ಮ ಮನೆಯ ಅಥವಾ ನೆರೆಹೊರೆಯವರ ಅನುಭವಗಳನ್ನು ಕೇಳಿ ನೋಡಿ. ತಡರಾತ್ರಿಯಲ್ಲಿ ಸಾರ್ವಜನಿಕ ಅಥವಾ ಖಾಸಗಿ ಆಸ್ಪತ್ರೆಗೆ ಹೋದರೆ ಒಂದು ಗಂಟೆಯೊಳಗಾಗಿ ಚಿಕಿತ್ಸೆ ಪಡೆಯಲು ಸಾಧ್ಯವೇ? ಇಸಿಜಿ, ರಕ್ತ ಪರಿಕ್ಷೆ, ತಜ್ಞ ವೈದ್ಯರಿಂದ ತಪಾಸಣೆಗೊಳಪಟ್ಟರೆ ಮೂರರಿಂದ ಐದು ಸಾವಿರಕ್ಕಿಂತ ಕಡಿಮೆಯಂತೂ ಬಿಲ್ ಮಾಡುವುದಿಲ್ಲ. ಇಷ್ಟೆಲ್ಲವನ್ನೂ 92 ರೂಪಾಯಿಗೆ ನೀಡಲು ಹೇಗೆ ಸಾಧ್ಯವಾಯಿತು? ಶತಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿಯೂ ಇಂತಹ ಆಸ್ಪತ್ರೆಗಳನ್ನು ಮುನ್ನಡೆಸಬಹುದು ಎಂದ ಮೇಲೆ, ಆರೋಗ್ಯದ ಸಮಸ್ಯೆಗಳು ಉಲ್ಭಣಿಸಲು ಜನಪ್ರತಿನಿಧಿಗಳು/ಅಧಿಕಾರಿಗಳಲ್ಲಿ ಇಚ್ಛಾಶಕ್ತಿಯಿಲ್ಲದಿರುವುದೇ ಕಾರಣವಲ್ಲವೇ?
ಸೇವಾ ಮನೋಭಾವನೆ ಮತ್ತು ಯುವಕ ಮಂಡಲ
– ಶ್ರೀ ಸಿದ್ಧಕೃಷ್ಣ, ಶ್ರೀ ಸಂತೋಷ್ ಹೆಚ್, ಶ್ರೀ ವಿಶ್ವನಾಥ ಆಚಾರ್ಯ
ಭಾರತ ಗ್ರಾಮಗಳ ದೇಶ, ಸರಿ ಸುಮಾರು ಆರು ಸಾವಿರಕ್ಕಿಂತಲೂ ಹೆಚ್ಚು ಹಳ್ಳಿಗಳಿವೆ, ಭಾರತದ ಹೃದಯ ಗ್ರಾಮಗಳಲ್ಲಿದೆ. ಇಂತಹ ಗ್ರಾಮಗಳಲ್ಲೊಂದು ವೈಶಿಷ್ಟ್ಯ ಗ್ರಾಮವೇ ಎಲ್ಲೂರು. ‘ದಕ್ಷಿಣದ ಕಾಶಿ’ ಎಂದೇ ಪ್ರಸಿದ್ದಿ ಪಡೆದಿರುವ ಮಹತೋಭಾರ ಶ್ರೀ ವಿಶ್ವನಾಥ ದೇವಾಲಯವಿರುವ ಗ್ರಾಮ ಇದಾಗಿದೆ. ನಿಸರ್ಗ ಸೌಂದರ್ಯದ ಮಡಿಲಿನಲ್ಲಿ ಸಾಂಸ್ಕೃತಿಕ ಮೆರುಗಿನೊಂದಿಗೆ ತನ್ನದೇ ಛಾಪನ್ನು ಉಡುಪಿ ಜಿಲ್ಲೆಯಲ್ಲಿ ಮೂಡಿಸಿದೆ. ಕರ್ನಾಟಕದಲ್ಲಿ ಕರಾವಳಿಯು ಮಾನವ ಸಂಪನ್ಮೂಲದಲ್ಲಿ ತನ್ನದೇ ಶ್ರೇಷ್ಠತೆ ಹೊಂದಿರುವಂತೆಯೇ ಎಲ್ಲೂರು ಗ್ರಾಮವೂ ಈ ಕಾರ್ಯದಲ್ಲಿ ಹಿಂದೆ ಬಿದ್ದಿಲ್ಲ ಎನ್ನುವುದಕ್ಕೆ ಐವತ್ತು ವರ್ಷ ಪೂರ್ಣಗೊಳಿಸಿರುವ ಇಲ್ಲಿನ ಯುವಕ ಮಂಡಲವೇ ಸಾಕ್ಷಿ. ಎಲ್ಲೂರು ಯುವಕ ಮಂಡಲವು ಸಾಮಾಜಿಕ; ದಾರ್ಮಿಕ ಕಾರ್ಯಗಳ ಸೇವೆಯೊಂದಿಗೆ ವಿಶಿಷ್ಟ ಸಂಘಟನೆಯಾಗಿ ತನ್ನದೇ ಆದ ಒಂದು ಹೊಸ ಮಾದರಿಯನ್ನೇ ಹುಟ್ಟು ಹಾಕಿದೆ ಎಂದರೇ ಅತಿಶಯೋಕ್ತಿಯಲ್ಲ.
ಗಾ೦ಧಿ ಹ೦ತಕ ಗೋಡ್ಸೆ ಮತ್ತು ಆರ್.ಎಸ್.ಎಸ್ ಎನ್ನುವ ಭಯೋತ್ಪಾಧಕ ಸ೦ಘಟನೆ ..!!!
– ಗುರುರಾಜ್ ಕೊಡ್ಕಣಿ
ಆತ ಹೇಳುತ್ತಲೇ ಹೋದ .’ನೀವು ಏನೇ ಹೇಳಿ ಸರ್,ಆರ್.ಎಸ್.ಎಸ್ ಕೂಡಾ ಒ೦ದು ರೀತಿಯ ಭಯೋತ್ಪಾದನಾ ಸ೦ಘಟನೆಯೇ,ಅ೦ಥ ಮಹಾನ ವ್ಯಕ್ತಿ ಗಾ೦ಧಿಯನ್ನು ಕೊ೦ದನಲ್ಲ ಆ ಬೋಳಿ ಮಗ ಗೋಡ್ಸೆ,ಅವನು ಆರ್.ಎಸ್.ಎಸ್ ನವನೇ.ಅ೦ದಮೇಲೆ ಅದು ಭಯೋತ್ಪಾದನಾ ಸ೦ಘಟನೆಯಲ್ಲದೇ ಮತ್ತೇನು’ ಎ೦ದ.ಆತ ನನಗೆ ಪರಿಚಿತ.ಇದುವರೆಗೂ ಆತ ಇತಿಹಾಸವನ್ನು ವಿಷಯವಾಗಿಯೋ ಅಥವಾ ಅಸಕ್ತಿಗಾಗಿಯೋ ಓದಿಕೊ೦ಡವನಲ್ಲ. ಕನಿಷ್ಟ ಪಕ್ಷ ಆತ ಒ೦ದೇ ಒ೦ದು ಕಾದ೦ಬರಿಯನ್ನು ಕೂಡಾ ಓದಿದ್ದನ್ನು ನಾನು ನೋಡಿಲ್ಲ. ಆತನಿಗೆ ’ಆರ್.ಎಸ್.ಎಸ್’ನ ವಿಸ್ತೃತ ರೂಪವಾದರೂ ತಿಳಿದಿದಿಯೋ ನನಗೆ ಅನುಮಾನ.ಕಾ೦ಗ್ರೆಸ್ಸಿನಲ್ಲಿ ಪುಢಾರಿಯಾಗಿರುವ ಆತನ ದೂರದ ಸ೦ಬ೦ಧಿಯೊಬ್ಬನ ಮಾತುಗಳನ್ನು ಕೇಳಿ ಬ೦ದಿದ್ದ.ಅದನ್ನೇ ನನ್ನ ಮು೦ದೇ ಒದರುತ್ತಿದ್ದ.ಇನ್ನು ಈತನಿಗೆ ಆರ್.ಎಸ್.ಎಸ್.ನ ಧೋರಣೆಗಳು,ಗಾ೦ಧಿ ಹತ್ಯೆಯ ಹಿನ್ನಲೆ ಇವುಗಳನ್ನು ವಿವರಿಸುವುದು ನನ್ನಿ೦ದಾಗದ ಕೆಲಸವೆ೦ದೆನಿಸಿ ’ಬರ್ತಿನಿ’ ಎ೦ದಷ್ಟೇ ಹೇಳಿ ಅಲ್ಲಿ೦ದ ಹೊರಟೆ.
ಆದರೆ ಅವನ ಮಾತಿನಲ್ಲಿನ ಎರಡು ಅ೦ಶಗಳು ನನ್ನನ್ನು ಯೋಚಿಸುವ೦ತೇ ಮಾಡಿದವು. ಅವನ೦ತೇ ಅಲೋಚಿಸುವ ಅನೇಕ ವಿದ್ಯಾವ೦ತರನ್ನು,ಜಾತ್ಯಾತೀತವಾದಿಗಳನ್ನು ನಾನು ನೊಡಿದ್ದೇನೆ.ಗೋಡ್ಸೆ ಗಾ೦ಧಿಯನ್ನು ಹತ್ಯೆಗೈದ ಎನ್ನುವುದೇನೋ ಸರಿ, ಆದರೆ ಆರ್.ಎಸ್.ಎಸ್ ಭಯೋತ್ಪಾಧನಾ ಸ೦ಘಟನೆಯಾಗಿದ್ದು ಯಾವಾಗ..? ಗೊಡ್ಸೆ ಕೆಲಕಾಲ ಆರ್.ಎಸ್.ಎಸ್ ನ ಸದಸ್ಯನಾಗಿದ್ದ ಎ೦ಬುದನ್ನೂ ಒಪ್ಪಿಕೊಳ್ಳೋಣ.ಅ೦ದ ಮಾತ್ರಕ್ಕೆ ಅರ್.ಎಸ್.ಎಸ್ ಭಯೋತ್ಪಾದನಾ ಸ೦ಘಟನೆಯಾಗಿಬಿಡಬೇಕೇ..? ಇದನ್ನು ಮೂರ್ಖರ ಆಲೋಚನಾ ಧಾಟಿಯೆನ್ನದೇ ಬೇರೆ ವಿಧಿಯಿಲ್ಲ.ಗೋಡ್ಸೆಯ ಗಾ೦ಧಿ ಹತ್ಯೆಯನ್ನೇ ಮಾನದ೦ಡವಾಗಿಟ್ಟುಕೊ೦ಡು ಆರ್.ಎಸ್.ಎಸ್ ಅನ್ನು ಭಯೋತ್ಪಾದಕ ಸ೦ಘಟನೆ ಎ೦ದು ಹೆಸರಿಸಬಹುದಾದರೇ,ಇ೦ದಿರಾ ಗಾ೦ಧಿಯವರ ಹತ್ಯೆಗೈದವನು ಸಿಖ್ಖ ಎ೦ಬ ಕಾರಣಕ್ಕೆ ಸಿಖ್ಖರೆಲ್ಲರೂ ಕೊಲೆಗಾರರು ಎನ್ನವುದು ಮೂರ್ಖತನವೆನಿಸುವುದಿಲ್ಲವೇ..? ಅಥವಾ ಇ೦ದಿರಮ್ಮನ ಹತ್ಯೆಯ ನ೦ತರ ಸಾವಿರಾರು ಸಿಖ್ಖರ ನರಮೇಧಕ್ಕೆ ಕಾರಣವಾಯಿತಲ್ಲ ಕಾ೦ಗ್ರೆಸ್ ಅದನ್ನು ’ಸಿಖ್ಖ ವಿರೋಧಿ ಪಕ್ಷ’ ಎ೦ದು ಕರೆಯಬಹುದೇ..?
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
– ಮು.ಅ ಶ್ರೀರಂಗ,ಬೆಂಗಳೂರು
(“ನಿಲುಮೆ”ಯಲ್ಲಿ ೧೦-೧೦-೨೦೧೩ರಂದು ಪ್ರಕಟವಾದ ‘ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧‘ ಲೇಖನದ ಎರಡನೇ ಭಾಗ)
ವಂಶವೃಕ್ಷ ಮತ್ತು ಸಂಸ್ಕಾರ
—————————-
ಭೈರಪ್ಪನವರ ಮುಖ್ಯ ಕಾದಂಬರಿಗಳಲ್ಲಿ ಒಂದಾದ “ವಂಶವೃಕ್ಷ”ದ ವಸ್ತು,ಪಾತ್ರಗಳು,ಕಾದಂಬರಿಯ ವಿನ್ಯಾಸ ಇತ್ಯಾದಿಗಳ ಬಗ್ಗೆ ನಮ್ಮ ವಿಮರ್ಶಕರು ಈಗಾಗಲೇ ಸಾಕಷ್ಟು ವಿವರವಾಗಿ ಚರ್ಚಿಸಿದ್ದಾರೆ; ವಿವೇಚನೆ ನಡೆಸಿದ್ದಾರೆ. ಹೀಗಾಗಿ ಮತ್ತೊಮ್ಮೆ ಆ ಕಾದಂಬರಿಯ ಪೂರ್ಣ ವಿಮರ್ಶೆ ನನ್ನ ಉದ್ದೇಶವಲ್ಲ.
“ವಂಶವೃಕ್ಷ”ದ ವಿಮರ್ಶೆಗಳಲ್ಲಿ ಸಹಜವಾಗಿ ಶ್ರೀನಿವಾಸ ಶ್ರೋತ್ರಿ ಮತ್ತು ಅವರ ಸೊಸೆ ಕಾತ್ಯಾಯನಿಯ ಜೀವನದಲ್ಲಿ ಅವರುಗಳು ಎದುರಿಸಬೇಕಾಗಿ ಬಂದಂತಹ ಸನ್ನಿವೇಶಗಳು ಮತ್ತು ಸಂಘರ್ಷಗಳು ವಿಶೇಷವಾಗಿ ಚರ್ಚೆಗೆ ಒಳಪಟ್ಟಿರುವ ಅಂಶಗಳು. ಶ್ರೋತ್ರಿಯವರು ತಮ್ಮ ಜೀವನಕ್ಕೆ ಸನಾತನ ಧರ್ಮವನ್ನು ಅಧಾರವನ್ನಾಗಿಟ್ಟುಕೊಂಡವರು. ಅದರಲ್ಲಿ ನಂಬಿಕೆಯಿಟ್ಟವರು. ಆದರೆ ಕರ್ಮಠರಲ್ಲ. ಧರ್ಮದ ಪದಶಃ,ವಾಕ್ಯಶಃ ಅರ್ಥಗಳಿಗೆಗಷ್ಟೇ ಅಂಟಿಕೊಂಡವರಲ್ಲ.ಧರ್ಮದ ಬಗ್ಗೆ ತಮಗಿರುವ ನಂಬಿಕೆ,ವಿಶ್ವಾಸಗಳನ್ನು ಇನ್ನೊಬ್ಬರ ಮೇಲೆ ಹೇರಿದವರಲ್ಲ. ಅವರ ಮಗ ಅಕಾಲ ಮರಣಕ್ಕೆ ತುತ್ತಾದಾಗ ವಿಧವೆಯಾದ ಸೊಸೆ ಕಾತ್ಯಾಯನಿ ಆ ಕಾಲದ(೧೯೨೪ರ ಆಸುಪಾಸಿನದು)ಪದ್ಧತಿಯಂತೆ ಮಡಿ ಹೆಂಗಸು” (ತಲೆಗೂದಲು ತೆಗೆಸುವುದು, ಕೆಂಪು ಸೀರೆ ಉಡುವುದು ಇತ್ಯಾದಿ)ಆಗಲಿಲ್ಲ.
ಚಾಚಾ… Oh My God… !!!
– ಅಶ್ವಿನ್ ಅಮೀನ್
ನವೆಂಬರ್ 14. ನೆಹರೂ ಜನ್ಮ ದಿನ. ನಾವು ಶಾಲಾ ದಿನಗಳಲ್ಲಿರುವಾಗ ನಮಗೆಲ್ಲ ಖುಷಿಯ ದಿನ.. ಕಾರಣ ಅಂದು ನಮ್ಮ ದಿನ.. ಮಕ್ಕಳ ದಿನ.. ಮನೋರಂಜನಾ ಕಾರ್ಯಕ್ರಮಗಳು, ಆಟೋಟ, ಸಿಹಿ ತಿಂಡಿ, ಅರ್ಧ ದಿವಸ ರಜಾ ಬೇರೆ.. !! ಆಹಾ ಮಕ್ಕಳಿಗೆ ಅದೇ ಚಂದ.. ಅಂದು ನಾವೆಲ್ಲಾ ‘ಚಾಚಾ…’ ಎನ್ನುತ್ತಾ ಶಿಕ್ಷಕರು ಕೊಟ್ಟ ಸಿಹಿ ತಿನ್ನುತ್ತಾ ಖುಷಿಪಡುತ್ತಿದ್ದೆವು.
ಆದರೆ…
ಆ ಸಿಹಿ ತಿನ್ನುತ್ತಿದ್ದ ಬಾಯಿ ಯಾಕೋ ಇಂದು ಕಹಿಯೆನಿಸುತ್ತಿದೆ.ಮತ್ತೆ ‘ಚಾಚಾ…’ ಎಂದು ಕೂಗಲು ಮನಸ್ಸೇ ಬರುತ್ತಿಲ್ಲ. ನೆಹರೂ ಹೆಸರು ಕೇಳಿದರೇನೇ ಏನೋ ಒಂದು ಆಕ್ರೋಶ, ಅಸಹ್ಯತನ…!ಅಂತಹ ಒಬ್ಬ ದುರ್ಬಲ ಪ್ರಧಾನಿಯನ್ನು ಭಾರತ ಹೊಂದಿತ್ತಾ ಎಂಬ ಬಗ್ಗೆ ಅನುಮಾನ.ಖಂಡಿತಾ ನಾನು ಬದಲಾಗಿಲ್ಲ.ನಾನು ಈಗಲೂ ಅದೇ ದೇಶ ಪ್ರೇಮಿ.ಆದರೆ ನನ್ನ ಜ್ಞಾನ ಬದಲಾಯಿತು.ನನ್ನ ಮುಂದಿದ್ದ ಸುಳ್ಳಿನ ಇತಿಹಾಸ ಕರಗುತ್ತಾ ಹೋದಂತೆ ನೆಹರೂ ಬಗೆಗಿನ ತೆರೆಮರೆಯ ರಹಸ್ಯಗಳು ಒಂದೊಂದಾಗಿ ಗೋಚರಿಸತೊಡಗಿದವು.ಆ ತೆರೆಯ ಹಿಂದೆ ಕಂಡದ್ದೆಲ್ಲ ಸ್ವಾರ್ಥದ,ನಾಚಿಕೆಗೇಡಿನ,ಅಸಹ್ಯಕರ,ಹೇಡಿ ಹಾಗೂ ಮೂರ್ಖತನದ ಪರಮಾವಧಿ…!
ಕಾಂಗ್ರೆಸ್ಸಿನ ಆಗಿನ ಅಧ್ಯಕ್ಷ ಮೋತಿಲಾಲರು ತನ್ನ ಮಗ ನೆಹರೂರವರನ್ನು ತನ್ನ ನಂತರ ಕಾಂಗ್ರೆಸ್ಸ್ ಅಧ್ಯಕ್ಷ ಪಟ್ಟಕ್ಕೇರಿಸಲು ಗಾಂಧೀಯ ಬೆನ್ನು ಬಿದ್ದಿದ್ದ ಕಾಲವದು.ಹಲವು ವರ್ಷಗಳ ಒತ್ತಡದ ನಂತರ ಗಾಂಧೀ ಮೊತಿಲಾಲರ ಹಠಕ್ಕೆ ಬಗ್ಗಲೇಬೇಕಾಯಿತು. ಉಕ್ಕಿನ ಮನುಷ್ಯ ವಲ್ಲಭ ಭಾಯಿ ಪಟೇಲರಿಗೆ ಬಹುಮತ ಇದ್ದ ಹೊರತಾಗಿಯೂ ಪಟೇಲ್ ಅವರನ್ನು ತಣ್ಣಗಾಗಿಸಿ ನೆಹರೂರವರನ್ನು ಕಾಂಗ್ರೆಸ್ಸ್ ಅಧ್ಯಕ್ಷ ಗಾದಿಯಲ್ಲಿ ಕೂರಿಸಿಯೇ ಬಿಟ್ಟರು.





