ಮತಾಂಧ ಭಯೋತ್ಪಾದಕರೊಡನೆ ವೇದಿಕೆ ಹಂಚಿಕೊಂಡರೂ ಇವರು “ಜಾತ್ಯಾತೀತ”ರೇ!!
– ನರೇಂದ್ರ ಕುಮಾರ್
ಮುಲ್ಲಾ ಅಬ್ದುಲ್ ಸಲಾಂ ಜ಼ಯೀಫ಼್ ಎನ್ನುವ ಹೆಸರು ಭಾರತದಲ್ಲಿ ಹೆಚ್ಚಿನ ಜನರಿಗೆ ತಿಳಿದಿರಲಾರದು. 1990ರ ದಶಕದಲ್ಲಿ ಆಫ಼್ಘಾನಿಸ್ತಾನದಲ್ಲಿ ತಾಲಿಬಾನ್ ಸ್ಥಾಪನೆಯಾಯಿತು. ಆಫ಼್ಘಾನಿಸ್ತಾನ ಮತ್ತು ಪಾಕಿಸ್ತಾನಗಳಲ್ಲಿ ತಾಲಿಬಾನ್ ನಡೆಸಿರುವ ಮತಾಂಧ ಕೆಲಸಗಳು ಜಗತ್ಪ್ರಸಿದ್ಧ. ಆಫ಼್ಘಾನಿಸ್ತಾನದ ಹಜ಼ರತ್ ಪ್ರದೇಶದಲ್ಲಿರುವ ಬಾಮ್ವಾಮ್ ಕಣಿವೆಯಲ್ಲಿದ್ದ ೬ನೇ ಶತಮಾನದ ಬೃಹತ್ ಬುದ್ಧ ಭಗವಾನನ ಪ್ರತಿಮೆಗಳನ್ನು 2001ರಲ್ಲಿ ಭಗ್ನಗೊಳಿಸಿದಾಗ, ತಾಲಿಬಾನ್ ಹೆಸರು ಜಗತ್ತಿನಲ್ಲೆಲ್ಲಾ ಪ್ರಸಿದ್ಧವಾಯಿತು. ಜಗತ್ತಿನೆಲ್ಲೆಡೆಯಿಂದ ಬುದ್ಧನ ಪ್ರತಿಮೆಗಳನ್ನು ಹಾಳುಗೆಡವಿದ ಕಾರ್ಯವನ್ನು ಖಂಡಿಸಲಾಯಿತು. ಆದರೆ, ತಾಲಿಬಾನ್ ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳಲಿಲ್ಲ. ಮೇಲೆ ಹೇಳಿದ “ಮುಲ್ಲಾ ಅಬ್ದುಲ್ ಸಲಾಂ ಜ಼ಯೀಫ಼್” ಎನ್ನುವವರು ಈ ತಾಲಿಬಾನ್ನ ಸಂಸ್ಥಾಪಕರಲ್ಲಿ ಒಬ್ಬರು. ತಾಲಿಬಾನ್ ಸಂಸ್ಥಾಪನೆ ಮಾಡಿದ ಮುಲ್ಲ ಮೊಹಮ್ಮದ್ ಓಮರ್ ಹೆಸರು ಸ್ವಲ್ಪಮಟ್ಟಿಗೆ ಎಲ್ಲರಿಗೂ ತಿಳಿದಿರುತ್ತದೆ. ಈ ಮುಲ್ಲಾ ಅಬ್ದುಲ್ ಸಲಾಮ್ ಜ಼ಯೀಫ಼್, ಮುಲ್ಲಾ ಓಮರ್^ನ ಬಲಗೈ ಭಂಟನಾಗಿದ್ದ. 2001ರಲ್ಲಿ ಅಮೆರಿಕಾದಲ್ಲಿ ಭಯೋತ್ಪಾದಕ ಕೃತ್ಯ ನಡೆಸಿದ ನಂತರದಲ್ಲಿ, ಒಸಾಮಾ ಬಿನ್ ಲಾಡೆನ್ನಿಗೆ ಆಫ್ಘಾನಿಸ್ತಾನದಲ್ಲಿ ಆಶ್ರಯ ಒದಗಿಸಿದವರು ಇವರೇ!
ರಾಹುಲ್ ಗಾ೦ಧಿ ,ಬೆ೦ಗಳೂರು ರಾಜ್ಯ ಮತ್ತು ಕನ್ನಡ
– ಗುರುರಾಜ ಕೊಡ್ಕಣಿ,ಯಲ್ಲಾಪುರ
’ಕರ್ನಾಟಕ ಮತ್ತು ಬೆ೦ಗಳೂರಿಗೆ ಜನ ಉದ್ಯೋಗ ಅರಸಿ ಹೋಗುತ್ತಾರೆ,ಏಕೆ೦ದರೆ ಇವೆರಡೂ ಕಾ೦ಗ್ರೆಸ್ ಆಡಳಿತವಿರುವ ರಾಜ್ಯಗಳು ’ ಎ೦ದು ಹೇಳಿಕೆ ನೀಡಿದ್ದರೆ೦ಬ ಕಾರಣಕ್ಕೇ ದೇಶದ ಅತೀ ದೊಡ್ಡ ರಾಜಕೀಯ ಪಕ್ಷದ ನಾಯಕ ರಾಹುಲ್ ಗಾ೦ಧಿ ಅಪಹಾಸ್ಯಕ್ಕೀಡಾಗಿದ್ದರು.ಆದರೆ ನಿಜಕ್ಕೂ ಅವರು ಹಾಗೆ ಹೇಳಿದ್ದರಾ ಎನ್ನುವುದರ ಬಗ್ಗೆ ಅನೇಕ ಅನುಮಾನಗಳಿವೆ. ಒ೦ದು ವೇಳೆ ಅವರು ಹಾಗೆ ಹೇಳಿದ್ದೇ ಹೌದಾದಲ್ಲಿ ರಾಜ್ಯದ ರಾಜಧಾನಿಯ ಬಗ್ಗೆಯೇ ಯುವನಾಯಕನಿಗೆ ತಿಳಿಯದಿರುವುದು ಅತ್ಯ೦ತ ಖೇದಕರ. ರಾಹುಲ್ ಗಾ೦ಧಿ ಹೇಳಿದ್ದಾರಾ ,ಇಲ್ಲವಾ ಎನ್ನುವುದನ್ನು ಪಕ್ಕಕ್ಕಿಟ್ಟು ಮೇಲಿನ ಮಾತನ್ನು ಒಮ್ಮೆ ಗ೦ಭೀರವಾಗಿ ಪರಾಮರ್ಶಿಸಬೇಕಾದ ಪರಿಸ್ಥಿತಿ ಇ೦ದು ಕನ್ನಡಿಗರಿಗಿದೆ ಎನ್ನುವುದೂ ಸತ್ಯವೇ. ಇ೦ದಿಗೂ ಅನೇಕ ಉತ್ತರ ಭಾರತೀಯರಿಗೆ ಬೆ೦ಗಳೂರು ಕರ್ನಾಟಕಕ್ಕೆ ಸೇರಿದುದು ಎ೦ಬುದು ತಿಳಿದ೦ತಿಲ್ಲ.ಕೆಲವರ೦ತೂ ಇದನ್ನೊ೦ದು ’ಕೇ೦ದ್ರಾಡಳಿತ ಪ್ರದೇಶ’ ಎ೦ದೂ ಭಾವಿಸಿರಲಿಕ್ಕೆ ಸಾಕು..!!
“ಮೂಢನಂಬಿಕೆ” ಅನ್ನುವ ಮೊದಲು “ನಂಬಿಕೆ” ಅನ್ನುವುದನ್ನು ಡಿಫೈನ್ ಮಾಡಲಾಗಿದೆಯೇ?
– ರಾಕೇಶ್ ಶೆಟ್ಟಿ
ಸೋ-ಕಾಲ್ಡ್ ಪ್ರಗತಿಪರರು,ಬುದ್ಧಿಜೀವಿಗಳು,ಚಿಂತಕರು ಮತ್ತು ಸರ್ಕಾರಿ ಸಾಹಿತಿಗಳು ಸೇರಿಕೊಂಡು ಹೊರತಂದಿರುವ “ಮೂಢನಂಬಿಕೆ ಆಚರಣೆಗಳ ಪ್ರತಿಬಂಧಕ ವಿಧೇಯಕ – ೨೦೧೩” ಅನ್ನು ಓದಿದ ಮೇಲೆ ಮತ್ತದಕ್ಕೆ ಸಿಎಂ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನದಲ್ಲಿ ಇದನ್ನು ವಿದಾಯಕವಾಗಿ ಮಂಡಿಸುತ್ತೇನೆ ಅಂತೇಳಿ ಮತ್ತೆ ಯು-ಟರ್ನ್ ತೆಗೆದುಕೊಂಡಾಗ,ನನಗೆ ನೆನಪಾಗಿದ್ದು “ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಿತ್ತಂತೆ…!” ಅನ್ನೋ ಗಾದೆ.
‘ಕಿಚನ್ ಕ್ಯಾಬಿನೇಟ್’ ಅಣತಿಯಂತೆ ಸರ್ಕಾರಗಳು ಕಾರ್ಯ ನಿರ್ವಹಿಸುತ್ತವೆ ಅನ್ನುವುದು ಕೆಲವು ಮುಖ್ಯಮಂತ್ರಿಗಳ ಕಾಲದಲ್ಲಿ ಕೇಳಿಬರುತಿದ್ದಂತ ಮಾತು.ಆದರೆ,ಸಿದ್ದರಾಮಯ್ಯನವರ ಸರ್ಕಾರ ‘ಸರ್ಕಾರಿ ಸಾಹಿತಿಗಳ ಕ್ಯಾಬಿನೇಟ್’ ನ ಅಣತಿಯೇ ನಡೆಯುತ್ತದೆಯೇ? ಹಾಗೆಯೇ ಅನ್ನಿಸುತ್ತಿದೆ.ಸಮಾಜ ವಿಜ್ನಾವನ್ನು ಅಕಾಡೆಮಿಕ್ ಆಗಿ ಕಲಿಸುತಿದ್ದ ಸಂಶೋಧನಾ ಕೇಂದ್ರದ ಮೇಲೆ ವಕ್ರ ದೃಷ್ಟಿ ಬೀರಿದ ಸರ್ಕಾರವೇ ಈಗ ಸಾಮಾಜಿಕ ಸಮಸ್ಯೆಗಳ ಬಗ್ಗೆ ಕರಡು ಸಿದ್ದ ಮಾಡಿ ಅಂತ ಕೇಳಿಕೊಂಡು ಅದನ್ನು ಜಾರಿಗೆ ತರಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ.
ಈ ನಾಸ್ತಿಕ ಮಹಾಶಯರುಗಳ ಪ್ರಕಾರ, “ಫಲಜ್ಯೋತಿಷ್ಯ,ಕಾಲ ಜ್ನಾನ,ಸಂಖ್ಯಾ ಶಾಸ್ತ್ರ,ವಾಸ್ತು ಶಾಸ್ತ್ರ,ಮಠಾಧೀಶರ,ಸ್ವಾಮೀಜಿಗಳ ಪಾದ ಪೂಜೆ,ಸರ್ಕಾರಿ ಕಚೇರಿಗಳಲ್ಲಿ ಪೂಜೆ,ಹೋಮ-ಹವನ,ದೇವಸ್ಥಾನಗಳಲ್ಲಿ ಪ್ರಾಣಿಬಲಿ ಕೊಡುವುದು,ಜಪಮಾಲೆಗಳು,ರುದ್ರಾಕ್ಷಿ,ಆಧ್ಯಾತ್ಮ ಬಗ್ಗೆ ಮಾತನಾಡುವುದು” ಇವೆಲ್ಲ ನಿಷೇಧವಾಗಬೇಕಂತೆ…!
ಮತ್ತಷ್ಟು ಓದು 
ತುಳು ಭಾಷೆಯನ್ನು ‘ಕನ್ನಡ’ ಅಳಿಸುತ್ತಿದೆಯೋ..? ಉಳಿಸಿದೆಯೋ..?
-ತುಳುನಾಡು(ಅಫೀಶಿಯಲ್) ಫೇಸ್ಬುಕ್ ಪೇಜ್
ಕೆಲವು ತುಳುವಾದಿಗಳು ಕರ್ನಾಟಕ ರಾಜ್ಯದಿಂದ ಹೊರ ಬರುವ ಅಥವಾ ಪ್ರತ್ಯೇಕ ತುಳು ರಾಜ್ಯದ ಕಲ್ಪನೆಯನ್ನು ಇಟ್ಟುಕೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರ..! ಇದಕ್ಕೆ ಅವರು ನೀಡುವ ಅತೀ ದೊಡ್ಡ ಕಾರಣ ಕನ್ನಡ ಭಾಷೆಯಿಂದ ತುಳು ಭಾಷೆಗೆ ಕಂಟಕ ಇದೆ ಅನ್ನೋದು..!! ಅದಕ್ಕೆ ಹಲವಾರು ಕಾರಣಗಳೂ ಇವೆ. ಇದು ಸತ್ಯ ಕೂಡ..! ತುಳು ಭಾಷೆಗೆ ಸಿಗಬೇಕಾಗಿದ್ದ ಪ್ರಾಶಸ್ತ್ಯಗಳು, ಸ್ಥಾನಮಾನಗಳು ಇನ್ನೂ ದೊರಕದೆ ಇರುವುದು ದುರ್ದೈವವೇ ಸರಿ. ಹಾಗಂತ ಇದೆಲ್ಲಾ ಕನ್ನಡಿಗರ ‘ಕುತಂತ್ರ’ ಅನ್ನುವವರು ಶತಃ ಮೂರ್ಖರೇ ಸರಿ…!
ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣ ಯಾರು ಅಂತ ಹುಡುಕುತ್ತಾ ಹೊರಟರೆ, ಇದಕ್ಕೆ ಕಾರಣ ತುಳುವರೇ ಹೊರತು ಬೇರಾರೂ ಅಲ್ಲ ಅನ್ನೋದು ಸ್ಪಷ್ಟವಾಗಿ ಗೋಚರಿಸುತ್ತದೆ.
ತುಳುನಾಡನ್ನು ಕನ್ನಡೀಕರಣಗೊಳಿಸಿ ಅಂತ ಯಾರೂ ನಮ್ಮ ಮೇಲೆ ದಬ್ಬಾಳಿಕೆ ಮಾಡಿಲ್ಲ. ಎಲ್ಲಾ ತುಳುವರು ಮನಸ್ಸು ಮಾಡಿದರೆ, ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸುವುದು ಹಾಗೂ ಕರ್ನಾಟಕದಲ್ಲಿ ತುಳು ಭಾಷೆ ನಾಳೆಯೇ ಆಡಳಿತ ಭಾಷೆ ಆಗೋದರಲ್ಲಿ ಅನುಮಾನವೇ ಇಲ್ಲ.
ಗಡಿಬಿಡಿ ಲೈಫ಼್,ಬಾಲ್ಯ ಮತ್ತು ಸಹನೆ
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಬಾಲಕನೊಬ್ಬ ಮನೆಯಲ್ಲಿರುವ ತನ್ನ ತ೦ದೆತಾಯ೦ದಿರನ್ನು ನೋಡಿ ’ಓದಬೇಕಿಲ್ಲ,ಬರೆಯಬೇಕಿಲ್ಲ ,ಪರಿಕ್ಷೆಯ ಭಯವ೦ತೂ ಇಲ್ಲವೇ ಇಲ್ಲ.ನಮಗೋ ಹಾಳಾದ ಟೀಚರ್ ಕಾಟ ,ನಾವೂ ಯಾವಾಗ ದೊಡ್ಡವರಾಗೋದೋ’ ಎ೦ದು ಯೋಚಿಸುತ್ತಾ ಬೇಗ ದೊಡ್ಡವನಾಗುವ ಬಗ್ಗೆ ಚಿ೦ತಿಸುತ್ತಾನೆ.ಅವನ ಬಾಲ್ಯವನ್ನು ಗಮನಿಸುತ್ತ ಅದೇ ಹುಡುಗನ ಪೋಷಕರು,’ಬಾಲ್ಯ ಎಷ್ಟು ಸು೦ದರ,ಯಾವ ಜವಾಬ್ದಾರಿಗಳೂ ಇಲ್ಲ,ಶಾಲೆಗೆ ಹೋದ್ರಾಯ್ತು,ಆಟ ಆಡಿದ್ರಾಯ್ತು…ನಾವೂ ಚಿಕ್ಕವರಾಗೇ ಇರಬೇಕಿತ್ತು ಎ೦ದು ಯೋಚಿಸುತ್ತಾರೆ.ಎಷ್ಟು ವಿಚಿತ್ರವಲ್ಲವೇ ಈ ಮನುಷ್ಯನ ಮನಸೆ೦ಬ ಮರ್ಕಟದ ಯೋಚನೆಗಳು.ಬಾಲಕನ ಯೋಚನೆ ಮುಗ್ಧತೆಯಿ೦ದ ಕೂಡಿದ್ದು,ಹಿರಿಯರು ಮುಗ್ಧತೆಯನ್ನು ದಾಟಿ ಮು೦ದೆ ನಡೆದವರು.ಅವರು ಮತ್ತದೇ ಬಾಲ್ಯವನ್ನು ಮರಳಿ ಪಡೆಯಬೇಕೆನ್ನುತ್ತಾರೆ೦ದರೇ ಬಾಲ್ಯದ ಆಕರ್ಷಣೇ ಇನ್ನೆ೦ಥದ್ದಿರಬೇಕು.
ಪದೇ ಪದೇ ನಿಮ್ಮನ್ನು ಕಾಡುವ ಬಾಲ್ಯವನ್ನೊಮ್ಮೆ ನೆನಪಿಸಿಕೊಳ್ಳಿ. ಹೇಗಿದ್ದವು ಆ ದಿನಗಳು..?ನಮ್ಮ ಸುತ್ತಲಿನ ಸಮಾಜ ಚಾಟಿಯೇಟು ತಿ೦ದು ಓಡುವ ರೇಸಿನ ಕುದುರೆಯ೦ತೇ ಓಡದೇ ಆನೆಯ೦ತೇ ನಿಧಾನವಾಗಿ ರಾಜಗಾ೦ಭಿರ್ಯದಿ೦ದ ಸಾಗುತ್ತಿದ್ದ ಕಾಲವದು.ರಜಾ ದಿನಗಳಲ್ಲಿ ಆಡಲು ವಿಡಿಯೋ ಗೇಮ್ ಬಿಡಿ,ಕನಿಷ್ಟ ಬಾಲ್ ,ಬ್ಯಾಟುಗಳಿಗೂ ಗತಿಯಿರಲಿಲ್ಲ ನಮ್ಮ ಕಾಲದ ಹುಡುಗರಿಗೆ.ಗಲ್ಲಿಯ ಹುಡುಗರೆಲ್ಲ ಸೇರಿ ಒ೦ದಷ್ಟು ಹಣ ಸೇರಿಸಿ ಬಾಲೊ೦ದನ್ನು ಕೊ೦ಡುತರುತ್ತಿದ್ದೆವು.ಯಾವುದೋ ಮರದ ಹಲಗೆಯೊ೦ದು ಬ್ಯಾಟ್ ಆಗುತ್ತಿತ್ತು. ಕಾ೦ಪೊ೦ಡಿನ ಗೋಡೆಯ ಮೇಲೆ ಮೂರು ಗೀಟುಗಳನ್ನೆಳೆದರೇ ಅದೇ ನಮ್ಮ ಸ್ಟ೦ಪುಗಳು..!! ಹುಡುಗರ ಗು೦ಪು ಸೇರಿಸಿ ಬೆಳಿಗ್ಗೆಯಿ೦ದ ಸ೦ಜೆಯವರೆಗೂ ಆಡಲು ನಿ೦ತರೇ ಹೊತ್ತು ಕಳೆದದ್ದೇ ಗೊತ್ತಾಗುತ್ತಿರಲಿಲ್ಲ.’ದಿನವಿಡಿ ಆಟದಲ್ಲೇ ಕಾಲ ಕಳೆದರೇ ಓದೋದು ಯಾವಾಗ್ಲೋ ಮುಟ್ಠಾಳ ’ ಎ೦ದು ಸ೦ಜೆ ಅಪ್ಪ ಬಯ್ದು ಎರಡೇಟು ಕೊಟ್ಟರೇ ’ಹೋ..’ ಎ೦ದು ಅಳುತ್ತ ನಿಲ್ಲುತ್ತಿದ್ದೆವು.ಮಾರನೆಯ ದಿನ ಅಪ್ಪ ಆಫೀಸಿಗೆ ಹೊದೊಡನೇ ಮತ್ತೆ ನಮ್ಮ ಸವಾರಿ ಹತ್ತಿರದ ಮೈದಾನಕ್ಕೇ ಅಲ್ಲವೇ..? ಯಾರದ್ದೋ ತೋಟದಲ್ಲಿ ಮಾವಿನಕಾಯಿ,ಪೇರಲೇ ಹಣ್ಣು,ನೆಲ್ಲಿಕಾಯಿಗಳನ್ನು ಕದಿಯುತ್ತ,ಯಾರದ್ದೋ ಗದ್ದೆಯಲ್ಲಿ ಕಬ್ಬಿನ ಜಲ್ಲೆಯನ್ನು ಮುರಿಯುತ್ತ.ಸಿಕ್ಕ ಸಿಕ್ಕ ಮರವೇರುತ್ತ,ಬೀದಿ ಬೀದಿ ಸುತ್ತುತ್ತ,ಮನೆಯವ೦ದ ಎಷ್ಟೇ ಬಯ್ಯಿಸಿಕೊ೦ಡರೂ,ಒದೆಗಳನ್ನು ತಿ೦ದರೂ ನಮ್ಮ ಬಾಲ್ಯದಲ್ಲಿ ಸ೦ತೋಷಕ್ಕೆ ಬರವೆ೦ಬುದಿತ್ತೇ..?
ಅಭಿಮಾನ, ಆರಾಧನೆ ಮತ್ತು ಅನಿವಾರ್ಯತೆ
– ಮು.ಅ ಶ್ರೀರಂಗ, ಬೆಂಗಳೂರು
ಈ ನನ್ನ ಬರಹ ತನ್ನ ಸ್ವರೂಪದಲ್ಲಿ ಸ್ವಲ್ಪ ಅಮೂರ್ತವಾಗಿರಬೇಕಾಗಿರುವುದು ಅನಿವಾರ್ಯವಾಗಿದೆ! ಹೀಗಾಗಿ ಇದನ್ನು ನೀವು ಸರಸರನೆ ಓದಲು ಸಾಧ್ಯವಾಗದೆ ಇರಬಹುದು. ಕೆಲವೊಂದು ವಿಷಯಗಳನ್ನು “ಮೂರ್ತ”ರೂಪದಲ್ಲಿ ಹೇಳಲು ಹೊರಟಾಗ ಅವು ತೀರಾ ತೆಳುವಾಗುತ್ತವೆ. ಅಭಿಮಾನ ಮತ್ತು ಆರಾಧನೆಯ ನಡುವಿನ ಗೆರೆಯೂ ಹೀಗೆ ತೆಳುವಾದದ್ದೇ. ಆ ಗೆರೆ ಅಳಿಸಿಹೋದಾಗ ಅಭಿಮಾನ + ಆರಾಧನೆ =ಅನಿವಾರ್ಯತೆ ಎಂಬ ಸರಳ ಸಮೀಕರಣ ರೂಪುಗೊಂಡು ಬಿಡುತ್ತದೆ.
ಕನ್ನಡಕ್ಕೆ ಕನ್ನಡಿ ಹಿಡಿದವನ ನೆನೆಯುತ್ತ
– ನವೀನ್ ನಾಯಕ್
ಕನ್ನಡದ ಬೆಳವಣಿಗೆಗೆ ಎಷ್ಟೋ ಮಹನೀಯರು ತಮ್ಮ ಜೀವನದ ಬಹಳ ಸಮಯವನ್ನು ಈ ಮಹತ್ಕಾರ್ಯಕ್ಕೆ ಉಪಯೋಗಿಸಿದ್ದಾರೆ. ಅವರೆಲ್ಲರ ಪರಿಶ್ರಮದಿಂದ ನಮ್ಮ ಕನ್ನಡ ಇಂದಿಗೆ ಹೆಮ್ಮೆಯ ಸ್ಥಾನ ಪಡೆದಿದೆ.
ದ.ರಾ ಬೇಂದ್ರೆಯವರಿಂದಲೇ, “ಕನ್ನಡಕ್ಕೆ ಕನ್ನಡಿ ಹಿಡಿದು ದುಡಿದವ ನೀನು” ಅನ್ನಿಸಿಕೊಂಡ ಆ ವ್ಯಕ್ತಿ ಯಾರು? ಅವರ ಸಾಧನೆ ಏನು? ಎಂಬ ಕುತೂಹಲವೇ. ಆ ವ್ಯಕ್ತಿ ಜರ್ಮನಿಯಲ್ಲಿ ಜನಿಸಿ ಧಾರವಾಡಕ್ಕೆ ಬಂದು ಕನ್ನಡದ ಇತಿಹಾಸದಲ್ಲಿ ಹಲವಾರು ಸಾಹಸ ಮೆರೆದವರು. ಅವರೇ ರೆವರೆಂಡ್ ಎಫ್ ಕಿಟೆಲ್.
ರೆವರೆಂಡ್ ಎಫ್ ಕಿಟೆಲ್ರವರು ಜರ್ಮನಿಯ ಹ್ಯಾನೋವರ್ ಪ್ರಾಂತ್ಯದಲ್ಲಿರುವ ಫ್ರೀಸ್ಲ್ಯಾಂಡ್ ನಲ್ಲಿ 1832 ರಲ್ಲಿ ಗಾಜ್ ಫ್ರೀಟ್ ಮತ್ತು ಟ್ಯುಡೋವ್ ಹೆಲೇನ್ ಹ್ಯೂಬರ್ಟ ದಂಪತಿಗೆ ಜನಿಸಿದರು. ಇವರು ಭಾರತಕ್ಕೆ ಬರುವಾಗಲೇ ಹೀಬ್ರೂ, ಗ್ರೀಕ್, ಲ್ಯಾಟೀನ್,ಫ್ರೆಂಚ್, ಮತ್ತು ಇಂಗ್ಲಿಷ್ ಭಾಷೆಯ ಜ್ಞಾನ ಹೊಂದಿದ್ದರು. ಭಾರತಕ್ಕೆ ಬರುವಾಗಲೇ ಕನ್ನಡವನ್ನು ಕಲಿಯಬೇಕೆಂದು ಮಹದಾಸೆಯನ್ನು ಹೊಂದಿದ್ದರು. ಕಿಟೆಲ್ ರವರು 1850ರಲ್ಲಿ ಬಾಸೆಲ್ ಮಿಶನ್ ಸಂಸ್ಥೆಗೆ ಸೇರಿದರು. ಈ ಮಿಶನ್ ಸಂಸ್ಥೆ 1852 ರಲ್ಲಿ ಕಾಪ್ ಮನ್ ಮತ್ತು ಕಿಟೆಲ್ ರವರನ್ನು ದಕ್ಷಿಣ ಭಾರತದ ದಾವಣಗೆರೆಗೆ ಮತಪ್ರಚಾರಕ್ಕೆ ಕಳುಹಿಸಿಕೊಟ್ಟರು. ಧಾರವಾಡಕ್ಕೆ ಬಂದ ಕಿಟೆಲರಿಗೆ ಸಾಹಿತ್ಯಾಭ್ಯಾಸ ಮಾಡಿ ಹೆಸರುವಾಸಿಯಾಗಿದ್ದ ರೇ.ವೀಗಲ್ ರವರ ಭೇಟಿ ಮಾಡಬೇಕೆಂದುಕೊಂಡಿದ್ದರು. ಅದು ಸಾದ್ಯಾವಾಗದೇ ಇದ್ದಾಗ, ಅದೇ ಊರಿನ ಇನ್ನೊಬ್ಬ ಅಧಿಕಾರಿ ಕೆ ಮೋರಿಕ್ ರವರ ಪರಿಚಯ ಮಾಡಿಕೊಂಡರು. ಕನ್ನಡ ಕಲಿಯಲು ಅದೆಷ್ಟು ಅವರಿಗೆ ಉತ್ಸಾಹವಿತ್ತೆಂದರೆ ಬರೀ ಕಾಲ್ನಡಿಗೆಯಲ್ಲೇ ಗುಡ್ಡಗಾಡುಗಳಲ್ಲಿ, ಕಾಡುಗಳಲ್ಲಿ ಅಲೆದು ಊರೂರು ಅಲೆದು ಆ ಪ್ರದೇಶಗಳ ಆಡು ಭಾಷೆಯನ್ನು ಕಲಿತರು.
“ಓಲೈಕೆ ಮತ್ತು ತುಷ್ಟೀಕರಣ” ಜಾತ್ಯಾತೀತತೆಯ ಸಂಕೇತಗಳೇ?
– ಮು ಅ ಶ್ರೀರಂಗ ಬೆಂಗಳೂರು
ಒಂದು ರಾಜಕೀಯ ಧೋರಣೆಗೆ ಕಂಕಣಬದ್ಧವಾದ “ಹೊಸತು”ಎಂಬ ಮಾಸಪತ್ರಿಕೆಯ ಜುಲೈ ೨೦೧೩ರ ಸಂಚಿಕೆಯಲ್ಲಿ “ಆಧುನಿಕೋತ್ತರವಾದವೂ ಸಿ. ಎಸ್. ಎಲ್. ಸಿ. ಚಿಂತನಾಕ್ರಮವೂ”ಎಂಬ ಲೇಖನವನ್ನು ಬೆಂಗಳೂರಿನ ಕೆ. ಪ್ರಕಾಶ್ ಎಂಬುವವರು ಬರೆದಿದ್ದಾರೆ. ೫ ಪುಟಗಳಷ್ಟು ವಿಸ್ತಾರವಾದ ಆ ಲೇಖನದ ೧೬ ಪ್ಯಾರಾಗಳಲ್ಲಿ ಸುಮಾರು ೧೫ ಜನ ಬುದ್ಧಿಜೀವಿಗಳ,ಚಿಂತಕರ,ಉದ್ದುದ್ದದ ವಾಕ್ಯಗಳನ್ನು(ಉದ್ಧರಣೆಗಳು)ಪ್ರಕಾಶ್ ಅವರು ತಮ್ಮ ಲೇಖನಕ್ಕೆ “ಬಲ”ಬರಲಿ ಎಂದು ಉಪಯೋಗಿಸಿಕೊಂಡಿದ್ದಾರೆ. ಆ ದೊಡ್ಡ ದೊಡ್ಡ ವಾಕ್ಯಗಳ ನಡುವೆ “ಫಿಲ್ಲರ್”ತರಹ ತಮ್ಮ ನಾಲ್ಕೈದು ಸಾಲುಗಳನ್ನು ಸೇರಿಸಿದ್ದಾರೆ. ಆ “ಫಿಲ್ಲರ್”ಗಳ ಮುಖ್ಯ ಉದ್ದೇಶ ಕುವೆಂಪು ವಿ. ವಿ.ಯಲ್ಲಿನ ಸಿ ಎಸ್ ಎಲ್ ಸಿ ಯನ್ನು ಖಂಡಿಸುವುದಷ್ಟೇ ಆಗಿದೆ.
“ಮಡೆ ಸ್ನಾನ”ದಿಂದ ಪ್ರಾರಂಭವಾಗುವ ಈ ಲೇಖನ ಕೊನೆಗೆ ಬಂದು ನಿಲ್ಲುವುದು “ವಚನಗಳು vs ಜಾತಿ ವ್ಯವಸ್ಥೆ”ಬಗ್ಗೆ “ಪ್ರಜಾವಾಣಿ”ಪತ್ರಿಕೆಯಲ್ಲಿ ಸುಮಾರು ಮೂರು ತಿಂಗಳಿನಷ್ಟು ಕಾಲ ನಡೆದ ವಾದ-ಪ್ರತಿವಾದದ “ಅನುಭವ ಮಂಟಪದಲ್ಲಿ”. ಪ್ರಕಾಶ್ ಅವರು ತುಂಬಾ ಆರಾಧಿಸುವ ಪ್ರೊ। ಐಜಾಜ್ ಅಹ್ಮದ್ ಅವರೇ “ಆಧುನಿಕೋತ್ತರವಾದವು ಹಲವು ವಿಭಿನ್ನ ಎಳೆಗಳಿಂದ ರಚಿತವಾಗಿದ್ದು ಅದನ್ನು ಒಂದು ಸುಸಂಬದ್ಧ ಚಿಂತನೆಯಾಗಿ ಮಂಡಿಸುವುದು ಕಷ್ಟ ಎಂದು ಎಚ್ಚರಿಸುತ್ತಲೇ ಅದರ ಪ್ರಮುಖ ಲಕ್ಷಣಗಳನ್ನು ಗುರುತಿಸುತ್ತಾರಂತೆ”(ಹೊಸತು ಜುಲೈ ೨೦೧೩ ಪುಟ ೩೦). ಸಿ ಎಸ್ ಎಲ್ ಸಿ ಯದೂ ಆ ಹಲವು ಹಾದಿಗಳಲ್ಲಿ ಒಂದು ಎಳೆ ಎಂದು ಪ್ರಕಾಶ್ ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲ.
ಲೈಂಗಿಕ ವಸ್ತುಗಳ ನಿಷೇಧ ಸರಿಯೇ?
– ಶ್ರೀಪತಿ ಗೋಗಡಿಗೆ
ಮೊದಲಿಗೆ ಈ ಲೈಂಗಿಕ ವಸ್ತುಗಳು ಎಂದರೆ ಏನು ಅಂತ ಸ್ವಲ್ಪ ಹೇಳಿ ಬಿಡ್ತೀನಿ. ಏಕೆಂದರೆ ನಮ್ಮ ದೇಶದಲ್ಲಿ ಲೈಂಗಿಕತೆಯ ಬಗ್ಗೆ ಮಾತಾಡಲಿಕ್ಕೇ ಹಿಂಜರಿಯುವ ಮಾನಸಿಕತೆಯಿರುವಾಗ ಎಷ್ಟೋ ಜನರಿಗೆ ಇದೆಂತಾ ವಸ್ತುಗಳು? ಎಂಬ ಅನುಮಾನವೂ ಮೂಡಬಹುದು.
ಲೈಂಗಿಕ ವಸ್ತುಗಳು ಅಥವಾ ಸಾಮಗ್ರಿಗಳು
ಇವುಗಳನ್ನು ಇಂಗ್ಲೀಷಿನಲ್ಲಿ ಸೆಕ್ಸ್ ಟಾಯ್ಸ್ ಎಂದು ಕರೆಯುತ್ತಾರೆ. ಲೈಂಗಿಕತೆಗೆ ಸಂಬಂಧ ಪಟ್ಟಂತೆ ಉಪಯೋಗಿಸುವ ವಸ್ತುಗಳೆಲ್ಲಾ ಈ ಸಾಲಿಗೆ ಬರುತ್ತವೆ. ಬಹಳಷ್ಟು ಜನರು ಲೈಂಗಿಕ ವಿಷಯವೆಂದರೆ ಒಂದು ಕೋಣೆ, ಹಾಸಿಗೆ ಮತ್ತು ಸಂಗಾತಿ ಅಷ್ಟೇ ಎಂದುಕೊಂಡಿರಬಹುದು. ಆದರೆ ಅದನ್ನೂ ಮೀರಿದ ವಿಷಯಗಳು ನೂರಾರಿವೆ. ಅವುಗಳನ್ನು ಚರ್ಚಿಸುವುದೇ ಈ ಲೇಖನದ ಉದ್ದೇಶ.
ಲೈಂಗಿಕ ಪರಿಕರಗಳ ಬಗ್ಗೆ ಸರಳವಾಗಿ ಹೇಳಬೇಕೆಂದರೆ ಬಹಳಷ್ಟು ಬಳಕೆಯಲ್ಲಿರುವ ಕಾಂಡೋಮ್ ಸಹ ಒಂದು ಲೈಂಗಿಕ ಪರಿಕರವೇ ಆಗಿದೆ. ಕಾಂಡೋಮ್ ಮೊದಲಿಗೆ ಗರ್ಭನಿರೋಧಕವಾಗಿ ಉಪಯೋಗಕ್ಕೆ ಬಂದಿತು. ನಂತರದ ದಿನಗಳಲ್ಲಿ ರೋಗ ನಿರೋಧಕವಾಗಿ ಹೆಚ್ಚು ಪ್ರಚಾರ ಹಾಗೂ ಉಪಯೋಗಕ್ಕೆ ಬಂತು. ಅದರ ತಯಾರಕರು ಕೂಡಾ ಸುಮ್ಮನಿರದೇ ಅದರ ಮೇಲೆ ಗೆರೆ, ಗುಳ್ಳೆ ಮುಂತಾದವುಗಳನ್ನು ಸೇರಿಸಿ ಲೈಂಗಿಕ ಸಂತೃಪ್ತಿಯನ್ನೂ ನೀಡುವ ವಸ್ತುವನ್ನಾಗಿ ರೂಪಿಸತೊಡಗಿದರು.
ಕಾಂಡೋಮ್ ಎಲ್ಲರಿಗೂ ಪರಿಚಯವಿರುವ ಒಂದು ಲೈಂಗಿಕ ಪರಿಕರ. ಅದಲ್ಲದೇ ಇನ್ನೂ ನೂರಾರು ಲೈಂಗಿಕ ಪರಿಕರಗಳು ಚಾಲ್ತಿಯಲ್ಲಿ ಇವೆ. ಇವುಗಳಲ್ಲಿ ಬಹಳಷ್ಟು ವಸ್ತುಗಳನ್ನು ಅಭಿವೃದ್ದಿ ಪಡಿಸಿರುವುದೇ ಏಕಾಂಗಿಗಳ ಕಾಮವನ್ನು ತಣಿಸಲಿಕ್ಕಾಗಿ. ಅಂದರೆ ಕಾಮೋತ್ತೇಜನಗೊಂಡಾಗ ಸಂಗಾತಿ ಸಿಗದೇ ಹೋದರೆ ಈ ಪರಿಕರಗಳ ಮೂಲಕ ಕಾಮವನ್ನು ತಣಿಸಿಕೊಳ್ಳುವ ಅವಕಾಶವಿದೆ. [ ಅವುಗಳನ್ನು ವಿವರವಾಗಿ ಇಲ್ಲಿ ಚರ್ಚಿಸಲು ಸಾಧ್ಯವಿಲ್ಲವಾದರೂ ಉದಾ : ಸ್ತ್ರೀಯರಿಗಾಗಿ ಕೃತಕ ಶಿಶ್ನ, ಪುರುಷರಿಗಾಗಿ ಸುಂದರವಾದ ಹುಡುಗಿಯ ಗೊಂಬೆ ಮುಂತಾದವು ] ಇವುಗಳನ್ನು ಸೆಕ್ಸ್ ಟಾಯ್ಸ್ ಮತ್ತು ಸೆಕ್ಸ್ ಡಾಲ್ಸ್ ಎಂದು ಕರೆಯುತ್ತಾರೆ.
ಸ೦ಜಯ್ ದತ್ ಎ೦ಬ ನಟ ಮತ್ತು ಜೈಲು ಶಿಕ್ಷೆಯ ಪ್ರಹಸನ
– ಗುರುರಾಜ್ ಕೊಡ್ಕಣಿ
ಹಿ೦ದಿ ಖ್ಯಾತ ಚಿತ್ರ ನಟ ಸ೦ಜಯ ದತ್ ಮತ್ತೆ ಸುದ್ದಿಯಲ್ಲಿದ್ದಾರೆ.ಟಾಡಾ ಕಾಯ್ದೆಯಡಿ ಶಿಕ್ಷೆಗೊಳಗಾಗಿದ್ದ ಸ೦ಜಯ್ ದತ್ ಶಿಕ್ಷೆಯ ಪ್ರಮಾಣವನ್ನು ಇಳಿಸುವುದರ ಬಗ್ಗೆ ಕೇ೦ದ್ರ ಸರಕಾರ ಚಿ೦ತನೆ ನಡೆಸಿದೆ.ಈ ಬಗ್ಗೆ ಮಹಾರಾಷ್ಟ್ರದ ಸರಕಾರದ ಅಭಿಪ್ರಾಯವನ್ನೂ ಕೇ೦ದ್ರದ ಗೃಹ ಸಚಿವಾಲಯ ಕೇಳಿದೆ.’ಮಾನವೀಯತೆಯ ದೃಷ್ಟಿಯಿ೦ದ’ಆತನನ್ನು ಬಿಡುಗಡೆಗೊಳಿಸುವುದರ ಬಗ್ಗೆ ಸರಕಾರ ಯೋಚಿಸುತ್ತಿದೆ.
ಸಲ್ಮಾನ್ ಖಾನ್ ಬಿಟ್ಟರೇ ಹಿ೦ದಿ ಚಿತ್ರರ೦ಗದ ಅತ್ಯ೦ತ ಹೆಚ್ಚು ಚರ್ಚೆಗೊಳಗಾದ ಮತ್ತು ವಿವಾದಿತ ನಟ ಎ೦ದರೇ ಸ೦ಜಯ್ ದತ್. ಆತನ ಜೈಲು ಶಿಕ್ಷೆಯ ಸುದ್ದಿ ಅತ್ಯ೦ತ ಹೆಚ್ಚು ಚರ್ಚೆಗೊಳಗಾದ ಸುದ್ದಿಯಾಗಿದ್ದು ಈಗ ಹಳೆಯ ವಿಷಯವೇ..1993ರ ಮು೦ಬೈಯ ಸರಣಿ ಬಾ೦ಬ್ ಸ್ಪೋಟದ ಹಿನ್ನಲೆಯಲ್ಲಿ ಟಾಡಾ ಕಾಯ್ದೆಯಡಿ ಬ೦ಧಿತನಾದ ಸ೦ಜಯ್ ದತ್ ಗೆ ದೇಶದ ಸರ್ವೋಚ್ಚ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ಟಾಡಾ ಕಾಯ್ದೆಯಡಿ ವಿಧಿಸಿದ್ದ ಆರು ವರ್ಷಗಳ ಶಿಕ್ಷೆಯನ್ನು ರದ್ದು ಮಾಡಿದ ಸುಪ್ರೀ೦ ಕೋರ್ಟು ,ಶಸ್ತ್ರಾಸ್ತ್ರ ಕಾಯ್ದೆಯಡಿ ಶಿಕ್ಷೆಯನ್ನು ಐದು ವರ್ಷಗಳಿಗೆ ಇಳಿಸಿದ್ದೊ೦ದೇ ಹಿ೦ದಿ ಚಿತ್ರರ೦ಗದ ’ಮುನ್ನಾ ಭಾಯಿ’ಗೆ ಸಮಾಧಾನ ತರುವ೦ತಹ ವಿಷಯವಾಗಿತ್ತು.ಈ ಮೊದಲು ಹದಿನೆ೦ಟು ತಿ೦ಗಳು ಜೈಲು ಶಿಕ್ಷೆ ಅನುಭವಿಸಿದ ಸ೦ಜಯ್ ಇನ್ನುಳಿದ ಮೂರುವರೇ ವರ್ಷಗಳನ್ನು ಜೈಲಿನಲ್ಲಿ ಕಳೆಯಲೇಬೇಕು.




