ವಿಷಯದ ವಿವರಗಳಿಗೆ ದಾಟಿರಿ

Recent Articles

17
ಆಕ್ಟೋ

ಎತ್ತಿನಹೊಳೆ ಯೋಜನೆ: ಬೇಕಿತ್ತಾ ಇದು?

– ಅರಕಲಗೂಡು ಜಯಕುಮಾರ್ Ethinahole
ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಿದರು, ಸಹಜವಾಗಿ ತಮ್ಮ ಬೆಂಬಲಿಗರ ಜಿಲ್ಲೆಗಳಿಗೆ ಮತ್ತು ಸ್ವಕ್ಷೇತ್ರಕ್ಕೆ ಹೆಚ್ಚಿನ ಅನುದಾನದ ಯೋಜನೆಗಳನ್ನು ಘೋಷಿಸಿ ಕೊಂಡರು ಬಜೆಟ್ “ರಾಜಕಾರಣ”ಕ್ಕೆ ತಾವೇನೂ ಹೊರತಲ್ಲ ಎಂಬುದನ್ನು ಸಾಬೀತು ಪಡಿಸಿದರು. ಇರಲಿ ಹಾಸನ ಜಿಲ್ಲೆಗೆ ಬಜೆಟ್ ನಲ್ಲಿ ಸಿಕ್ಕಿದ್ದು 3 ಯೋಜನೆಗಳು ಮಾತ್ರ, ಒಂದು ಬೆಂಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಹಾಸನ ಕೇಂದ್ರದಲ್ಲಿ ಟ್ರಕ್ ಟರ್ಮಿನಲ್, ಎರಡನೆಯದ್ದು ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಅರಸೀಕೆರೆ-ತಿಪಟೂರು ಟೋಲ್ ರಸ್ತೆ, ಮೂರನೆಯದ್ದು ಎತ್ತಿನಹೊಳೆಯ ಯೋಜನೆಗೆ ಒಟ್ಟು ಯೋಜನಾ ವೆಚ್ಚದ ಶೇ.9ರ ಅನುದಾನ. ಈ ಹೊತ್ತಿನಲ್ಲಿ ಪ್ರಜ್ಞಾಪೂರ್ವಕವಾಗಿ fb update ಮೂಲಕ ಯೋಜನೆಯ ಕುರಿತು ಅಸಹನೆ ವ್ಯಕ್ತ ಪಡಿಸುವ ಮೂಲಕ ಗಮನ ಸೆಳೆದದ್ದು “ಜನ ನಾವೂ ಇದ್ದೇವೆ” ಸಂಘಟನೆಯ ಗೆಳೆಯ ಮಂಜುಬನವಾಸೆ. ಆದರೆ ಯೋಜನೆ ಕುರಿತು ಅಸಹನೆ ವ್ಯಕ್ತಪಡಿಸಬೇಕಿದ್ದ ಕೆಲವರು ಇದೇ ಸಂಧರ್ಭದಲ್ಲಿ ವ್ಯತಿರಿಕ್ತವಾಗಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದು ಜಿಲ್ಲೆಯ ಮಟ್ಟಿಗೆ ಮುಜುಗುರದ ಸಂಗತಿ. ಇದೇನಿದು ಎತ್ತಿನ ಹೊಳೆ ಯೋಜನೆ? ಯಾಕೆ ಇದನ್ನು ಬೆಂಬಲಿಸಬೇಕು ? ಯಾವ ಕಾರಣಕ್ಕೆ ವಿರೋಧಿಸ ಬೇಕು? ಮತ್ತು ಅಲ್ಲಿನ ವಾಸ್ತವಗಳೇನು ಎಂಬುದನ್ನು ? ಕೆದಕುವ ಪ್ರಯತ್ನ ಮಾಡಿದಾಗ  ಮಾಹಿತಿಗೆ ನೆರವಾಗಿದ್ದು ಜಾಗೃತ ಪ್ರಜ್ಞೆಯ ಕವಯಿತ್ರಿ ರೂಪಹಾಸನ.ಎತ್ತಿನ ಹೊಳೆ ಯೋಜನೆಯ ಕುರಿತು ನನ್ನ ಗ್ರಹಿಕೆಗೆ ದಕ್ಕಿದ ಸಂಗತಿಗಳನ್ನು ನಿಮ್ಮೆದುರು ಹರಹುತ್ತಿದ್ದೇನೆ. ಇದು ನಮ್ಮ ಜಿಲ್ಲೆಗೆ ಎಷ್ಟು ಪೂರಕ ಮತ್ತು ಮಾರಕ ಹಾಗೂ ಒಟ್ಟು ಯೋಜನೆಯ ಪರಿಣಾಮಗಳೇನು? ಎಂಬುದನ್ನಷ್ಟೇ ಇಲ್ಲಿ ಚರ್ಚೆಗೆ ತರುತ್ತಿದ್ದೇನೆ, ಮುಂದಿನ ನಿಲುವುಗಳು ನಿಮಗೆ ಸೇರಿದ್ದು.
        ಹಾಸನ ಜಿಲ್ಲೆಯ ಸಕಲೇಶಪುರದ ದೋಣಿಗಾಲ್ ಬಳಿಯ ಪಶ್ಚಿಮಘಟ್ಟದ ಸರಹದ್ದಿನಲ್ಲಿ ಹಾದು ಹೋಗಿರುವ ರೈಲ್ವೇ ಟ್ರಾಕ್ ಪಕ್ಕದಲ್ಲೇ  ಎತ್ತಿನಹೊಳೆ ಎಂಬ ನದಿಯ ನೀರು 80ಅಡಿ ಎತ್ತರದಿಂದ ಧುಮ್ಮಿಕ್ಕುವ ನಯನ ಮನೋಹರ ದೃಶ್ಯವನ್ನು ನೋಡಬಹುದು.ಹೀಗೆ ಪಶ್ಚಿಮಘಟ್ಟದಲ್ಲಿ ಹರಿಯುವ ನೀರು ಮಳೆಗಾಲದಲ್ಲಿ ಹರಿದು ಹೋಗಿ ಅರೇಬಿಯನ್ ಸಮುದ್ರವನ್ನು ಸೇರುತ್ತದೆ. ಸಮುದ್ರ ಸೇರಿ ಪೋಲಾಗುತ್ತಿದೆ ಎಂದು ಭಾವಿಸಲಾಗುತ್ತಿರುವ ಈ ನೀರನ್ನು ನದಿ ತಿರುವು ಯೋಜನೆಯ ಮೂಲಕ ಕುಡಿಯುವ ನೀರು ಯೋಜನೆಗೆ ಬಳಸಿಕೊಳ್ಳಲು ಕೇಂದ್ರ ಸರ್ಕಾರ ಯೋಜನೆಯನ್ನು ರೂಪಿಸಿದೆ. ಸುಮಾರು 9000ಕೋಟಿ ರೂಪಾಯಿಗಳ ಈ ಯೋಜನೆಯ ಮೂಲಕ ಬರದ ಜಿಲ್ಲೆಗಳಾದ ಕೋಲಾರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲು ನಿರ್ಧರಿಸಲಾಗಿದೆ. ಪಕ್ಷ ಭೇಧ ಮರೆತು ರಾಜಕೀಯ ಹಿತಾಸಕ್ತಿಗಳು ಈ ಯೋಜನೆಯ ಜಾರಿಗೆ ಪಣ ತೊಟ್ಟಿವೆ. ಇದು ಕುಡಿಯುವ ನೀರಿನ ಯೋಜನೆಯಾಗಿರುವುದರಿಂದ ಪರಿಸರ ಕಾಯ್ದೆ 2006ರ ಅನ್ವಯ ಸಾರ್ವಜನಿಕ ಅಹವಾಲು ಹಾಗೂ ಪರಿಸರ ಪರಿಣಾಮದ ಅಧ್ಯಯನವನ್ನು ರಾಜ್ಯ ಸರ್ಕಾರ ಮಾಡಬೇಕಿಲ್ಲ! ಆದ್ದರಿಂದ ಕೇಂದ್ರ ಸರ್ಕಾರದ ಪರಿಸರ ಮಂತ್ರಾಲಯ ಇದಕ್ಕೆ ಅನುಮತಿ ನೀಡಿದೆ.
16
ಆಕ್ಟೋ

ಅಂತರ್ಜಾತಿ ಮತ್ತು ಅಂತರ್ಧಮೀಯ ವಿವಾಹಗಳಿಂದ ಜಾತಿ ವಿನಾಶ ಸಾಧ್ಯವೆ?

-ಮು.ಅ ಶ್ರೀರಂಗ, ಬೆಂಗಳೂರು

Intercaste Marriageನಮ್ಮ ಸಮಾಜದಲ್ಲಿ ಜನಸಾಮಾನ್ಯರಿಂದ ಹಿಡಿದು ಪ್ರಬುದ್ಧರವರೆಗೆ, ಸಾಹಿತಿಗಳು,ಚಿಂತನಶೀಲರನ್ನು ಕಾಡುತ್ತಿರುವುದು ಜಾತಿಯ ಸಮಸ್ಯೆ. ಇದೊಂದು ಸಮಸ್ಯೆ ಇಲ್ಲದಿದ್ದರೆ ಚೆನ್ನಾಗಿರುತಿತ್ತು ಎಂದು ನಮಗೆ ಒಂದಲ್ಲ ಒಂದು ಸಲ ಅನಿಸುವುದು ಸಹಜ ತಾನೇ?ಅಂತರ್ಜಾತಿ ಮತ್ತು ಅಂತರ್ಧಮೀಯ ವಿವಾಹಗಳಿಂದ ಈ ಸಮಸ್ಯೆಯನ್ನು ಆದಷ್ಟೂ  ನಿವಾರಿಸಬಹುದು ಎಂಬ ಮಾತುಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇಂತಹ ವಿವಾಹಗಳಿಗಿರುವ ಕೆಲವು ಸಮಸ್ಯೆಗಳನ್ನು ಮೂರು ಮುಖ್ಯವಾದ ಆಯಾಮಗಳಿಂದ ಚರ್ಚಿಸುವುದು ಈ ಲೇಖನದ ಉದ್ದೇಶ.

(೧) ಜಾತಿ ಮತ್ತು ಧರ್ಮ:-  ನಮ್ಮ ದೇಶದಲ್ಲಿರುವ ಜಾತಿಗಳು ಉಪಜಾತಿಗಳು ಅವುಗಳೊಳಗಿನ ಪಂಗಡಗಳು ಹಲವು. ಬಹು ಭಾಷಾ ಬಹು ಸಂಸ್ಕೃತಿಗಳ ನಮ್ಮ ದೇಶದಲ್ಲಿ ಇದು ಸಹಜ ಕೂಡ. ಪ್ರತಿಜಾತಿಗೂ ಹತ್ತಾರು ಉಪ ಜಾತಿಗಳು,ಪಂಗಡಗಳು. ಒಂದೇ ಜಾತಿಯವರಾದರೂ ಈ ಉಪ ಜಾತಿ ಪಂಗಡಗಳ ಕಾರಣದಿಂದ ಅವುಗಳ ನಡುವೆಯೇ ವಿವಾಹಕ್ಕೆ ಮೊದಲ ಪ್ರಾಶಸ್ತ್ಯ. ಬೇರೆ ಆಯ್ಕೆ ಇಲ್ಲವಾದರೆ ಮಾತ್ರ ಅದೇ ಜಾತಿಯ ಇತರ ಉಪಜಾತಿ, ಪಂಗಡಗಳ ನಡುವೆ ವಿವಾಹಕ್ಕೆ ಅರೆ ಮನಸ್ಸಿನಿಂದ ಒಪ್ಪಿಗೆ ನೀಡಬಹುದು. ಇಂತಹ ವಿದ್ಯಮಾನ ಇಂದು ಸರ್ಕಾರ ಮತ್ತು ಸಮಾಜ ಯಾವ ಜಾತಿಯವರನ್ನು ಮುಂದುವರಿದವರೆಂದು ಹೇಳುತ್ತಾ ಬಂದಿದೆಯೋ ಅವರಿಗಷ್ಟೇ ಸೀಮಿತವಾದುದಲ್ಲ. ಸಮಾಜದ ತೀರಾ ಕೆಳಸ್ತರದಲ್ಲಿರುವ ಜಾತಿಗಳ ತನಕ ಈ ತಾರತಮ್ಯ ಆಚರಣೆಯಲ್ಲಿದೆ. ಕೆಲವೊಂದು ಸಂದರ್ಭಗಳಲ್ಲಿ ಇವರುಗಳ ನಡುವೆ ಊಟ-ತಿಂಡಿಗಳ ಸೇವನೆ ಸಹ ನಿಷಿದ್ಧ ಎಂಬ ಪರಿಸ್ಥಿತಿ ಇದೆ. ಈ ರೀತಿ ಒಂದೇ ಜಾತಿಯೊಳಗೆ ವಿವಾಹಕ್ಕೆ ಇಷ್ಟೊಂದು ಸಮಸ್ಯೆಗಳಿರುವಾಗ ಒಂದೇ ಧರ್ಮದ ಬೇರೆ ಬೇರೆ ಜಾತಿಗಳ ನಡುವೆ ವಿವಾಹ ಆಗೊಮ್ಮೆ ಈಗೊಮ್ಮೆ ನಡೆಯುತ್ತಿರುತ್ತದೆ. ಇಲ್ಲ ಎನ್ನುವಂತಿಲ್ಲ. ಆದರೆ ಅದು ಒಂದು exಛಿeಠಿಣioಟಿ ಆಗಬಹುದಷ್ಟೆ. ಜತೆಗೆ ಇಂತಹ ವಿವಾಹಗಳ ಕಾರಣದಿಂದಲೇ ನಡೆಯುತ್ತಿರುವಂತಹ “ಮರ್ಯಾದ ಹತ್ಯೆಗಳು” ಈ ಸಮಸ್ಯೆಯನ್ನು ಇನ್ನಷ್ಟು ಜಟಿಲವಾಗಿಸಿದೆ.

ಮತ್ತಷ್ಟು ಓದು »

15
ಆಕ್ಟೋ

ಕಾಡುವ ಹೆಮ್ಮಿ೦ಗ್ವೆಯೂ,ನೆನಪಾಗುವ ತೇಜಸ್ವಿಯೂ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Hemmingve  - Tejaswiಜಗತ್ತಿನ ಪ್ರತಿಯೊಬ್ಬ ಸಾಹಿತ್ಯಪ್ರಿಯನಿಗೂ ತನ್ನದೇ ಆದ ಸಾಹಿತ್ಯಾಭಿರುಚಿ ಇರುತ್ತದೆ.ನೆಚ್ಚಿನ ಬರಹಗಾರರಿರುತ್ತಾರೆ.ಅವರ ನೆಚ್ಚಿನ ಬರಹ ಅವರವರ ಆಸಕ್ತಿಯನ್ನವಲ೦ಬಿಸಿರುತ್ತದೆ ಎ೦ಬುದು ನಿಸ್ಸ೦ಶಯ.ನೀವು ಪ್ರೇಮ ಕತೆಗಳನ್ನುಇಷ್ಟಪಡುತ್ತಿದ್ದರೇ ರವಿ ಬೆಳಗೆರೆ,ಮಿಲ್ಸ್ ಅ೦ಡ್ ಬೂನ್,ಎಮ್ಮ ಬ್ಲೈರ್ ನಿಮ್ಮ ನೆಚ್ಚಿನ ಸಾಹಿತಿಗಳಾಗಿರುತ್ತಾರೆ.ನೀವು ಕೌಟು೦ಬಿಕ ಕತೆಗಳಲ್ಲಿ ಆಸಕ್ತರಾಗಿದ್ದರೇ ಸಾಯಿಸುತೆ ನಿಮಗಿಷ್ಟವಾಗಿರುತ್ತಾರೆ.ಸ್ತ್ರೀ ಪ್ರಧಾನ ಕತೆಗಳು ನಿಮ್ಮ ಫೇವರೇಟ್ ಆಗಿದ್ದರೇ ಎ೦.ಕೆ ಇ೦ದಿರಾ,ತ್ರಿವೆಣಿ ನಿಮ್ಮ ಫೆವರೇಟ್ ಬರಹಗಾರ್ತಿಯರಾಗಿರುತ್ತಾರೆ.ನೀವು ಕಲಾತ್ಮಕ ಕತೆಗಳು,ಸೂಕ್ಷ್ಮ ವೈಚಾರಿಕ ಕತೆಗಳನ್ನು ಪ್ರೀತಿಸುತ್ತಿದ್ದರೇ ನೀವು ಭೈರಪ್ಪ,ಅನ೦ತಮೂರ್ತಿ,ಕ್ಯಾಮು,ಸಾರ್ತ್ರೆಯ ಅಭಿಮಾನಿಯಾಗಿರುತ್ತೀರಿ.ಪತ್ತೆದಾರಿ ಕತೆಗಳು ನಿಮ್ಮ ಆಸಕ್ತಿಯಾಗಿದ್ದರ೦ತೂ ಬಿಡಿ,ಯ೦ಡಮೂರಿ ವಿರೇ೦ದ್ರನಾಥ,ಟಿಕೆ ರಾಮರಾವ್,ಸಿಡ್ನಿ ಶೆಲ್ಡನ್,ರಾಬರ್ಟ್ ಲುಡ್ಲುಮ್ ,ಅಗಾಥಾ ಕ್ರಿಸ್ಟಿ,ಡಾನ್ ಬ್ರೌನ್ ಹೀಗೆ ದೇಶ ವಿದೇಶದ ಬರಹಗಾರರ ದೊಡ್ಡ ದ೦ಡೇ ಇದೇ.ಹಾಸ್ಯ,ವಿಡ೦ಬನೆಗೆ ಬೀಚಿ,ಬರ್ನಾಡ್ ಷಾ.ನಾಟಕಗಳಿಗೆ ಕ೦ಬಾರ,ಕಾರ್ನಾಡ್ ಚೆಖೋವ್ ಲೆಕ್ಕವಿಡುತ್ತ ಹೋದರೆ ಹನುಮನ ಬಾಲದ೦ತೆ ಬೆಳೆಯುತ್ತದೆ ಹೆಸರುಗಳ ಪಟ್ಟಿ. ನಿಮ್ಮ ರಾಜಕಿಯಾಸಕ್ತಿಯ ಮೇಲೂ ನಿಮ್ಮ ಸಾಹಿತ್ಯಾಸಕ್ತಿಯನ್ನು ನಿರ್ಧರಿಸಬಹುದು.ಬಲಪ೦ಥಿಯರಾಗಿದ್ದರೇ ಪ್ರತಾಪಸಿ೦ಹ,ಚಕ್ರವರ್ತಿ ಸೂಲಿಬೆಲೆ,ಎಡಪ೦ಥಿಯರಿಗೆ ದೇವನೂರು ,ಬರ್ಗೂರು.ಇತ್ಯಾದಿ ಇತ್ಯಾದಿ.ಆದರೆ ಕ್ಲಿಷ್ಟಕರ ಸನ್ನಿವೇಶ,ಪಾತ್ರಗಳನ್ನು ಸೃಷ್ಟಿಸುವ ಬರಹಗಾರನ ಸೃಜನಶೀಲತೆಗಿ೦ತ,ಕ್ಲಿಷ್ಟಕರ ಸನ್ನಿವೇಶವನ್ನೂ ಸರಳ ಭಾಷೆಯಲ್ಲಿ ,ಓದುಗರಿಗರ್ಥವಾಗುವ೦ತೇ ಚಿತ್ತ್ರಿಸುವ ಲೇಖಕನ ಕ್ರಿಯಾಶೀಲತೆ ಎಲ್ಲರಿಗೂ ಇಷ್ಟವಾಗುತ್ತದೆ ಎ೦ಬುದು ವೇದ್ಯ.ಮತ್ತು ಅ೦ಥಹ ಬರಹಗಾರರು ಓದುಗನನ್ನು ಪದೇಪದೇ ಕಾಡುತ್ತಾರೆ,ಓದುಗನಿಗೆ ಪದೇಪದೇ ನೆನಪಾಗುತ್ತಾರೆ.ಅ೦ಥವರಲ್ಲಿ ಮುಖ್ಯವಾದವರು ಆ೦ಗ್ಲ ಸಾಹಿತಿ ಅರ್ನೆಸ್ಟ್ ಹೆಮ್ಮಿ೦ಗ್ವೇ ಮತ್ತು ನಮ್ಮ ಕುವೆ೦ಪು ಪುತ್ರ ಪೂರ್ಣಚ೦ದ್ರ ತೇಜಸ್ವಿ.

ಮತ್ತಷ್ಟು ಓದು »

14
ಆಕ್ಟೋ

ಸೌಜನ್ಯ ಹಂತಕರು ನೇಣಿಗೇರುವುದೆಂತು?

– ರಾಕೇಶ್ ಶೆಟ್ಟಿ

Justice for Kumari Soujanya“ಬಹುಷಃ ಆಗಿನ ಕಾಲವೇ ಚೆನ್ನಾಗಿತ್ತೆನೋ.ಆಗಲಾದರೂ ಕುರು ಸಭೆಯಲ್ಲಿ ದ್ರೌಪದಿಯ ವಸ್ತ್ರಾಪಹರಣವಾಗುವಾಗ ಅವಳ ಸಹಾಯಕ್ಕೆ ಕರೆದೊಡನೆಯೇ ಶ್ರೀ ಕೃಷ್ಣ ಪರಮಾತ್ಮ ಬಂದಿದ್ದ.ಪಾಪ! ಈ ಕಾಲದ ಹೆಣ್ಣು ಮಕ್ಕಳ ಕೂಗು ಆ ಕಾಣದ ದೇವರಿಗೂ,ಕಾನೂನು ಪಾಲಕರಾದ ಮನುಷ್ಯ(?)ರಿಗೂ ಕೇಳುತ್ತಿಲ್ಲ.ಕುರುಕ್ಷೇತ್ರದ ಯುದ್ಧದ ಮುಗಿದರೂ ಕೌರವರು ಇನ್ನೂ ಸತ್ತಿಲ್ಲ.ದ್ರೌಪದಿಯರ ಗೋಳು ಮುಗಿಯೋಲ್ಲ…” ಅಂತ ’ನಿರ್ಭಯ’ ಅತ್ಯಾಚಾರದ ಪ್ರಕರಣದ ಸಮಯದಲ್ಲಿ ಬರೆದಿದ್ದೆ. ಮತ್ತೆ ಅದೇ ಸಾಲುಗಳನ್ನು ನಮ್ಮ ಧರ್ಮಸ್ಥಳದ ’ಸೌಜನ್ಯ’ ಅನ್ನುವ ಹೆಣ್ಣುಮಗಳ ಬಗ್ಗೆ ಬರೆಯುವಾಗಲೂ ಬಳಸಬೇಕಾಗಿ ಬಂದಿದೆ.ಆಗ ಕೃಷ್ಣನೇನೋ ಕರೆದಾಗ ಬಂದಿದ್ದ.ಆದರೆ ಇಲ್ಲಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ಯಾಕೋ ವರುಷ ಕಳೆದರೂ ಇನ್ನು ಕರುಣೆ ತೋರಲಿಲ್ಲ …! ನನಗೆ ಈ ದೇವರುಗಳ ಮೇಲೆ ಒಮ್ಮೊಮ್ಮೆ ಕೋಪಬರುವುದು ಇದೇ ಕಾರಣಕ್ಕಾಗಿ, ಏನೆಲ್ಲಾ ಪಾಪಗಳನ್ನು ಮಾಡಿ ಒಂದು ನೇಮ,ಒಂದು ಹರಕೆ,ಒಂದು ಹೋಮ,ಒಂದು ಹವನ,ತಪ್ಪು ಕಾಣಿಕೆ ಸಲ್ಲಿಸಿ ಸುಮ್ಮನಾಗಿಬಿಡಬಹುದೇ? ಹಾಗಿದ್ದರೆ ’ಧರ್ಮ’ವೆಲ್ಲಿದೆ?

ದಿಲ್ಲಿಯಲ್ಲಿ ಕಳೆದ ಡಿಸೆಂಬರಿನಲ್ಲಿ ನಡೆದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ’ನಿರ್ಭಯ’ ಅತ್ಯಾಚಾರ ಪ್ರಕರಣದಲ್ಲಿ ಹೋರಾಟದ ಕಿಡಿಯನ್ನು ದೆಹಲಿಯ ವಿದ್ಯಾರ್ಥಿ ಮಿತ್ರರು ಹಚ್ಚಿದ್ದರು.ಅದು ದೇಶವ್ಯಾಪಿಯೂ ಹಬ್ಬಿತ್ತು. ಖುದ್ದು ಕೇಂದ್ರ ಸರ್ಕಾರವನ್ನೇ ಮಂಡಿಯೂರುವಂತೆ ಮಾಡಿದ್ದು ಯುವಶಕ್ತಿಗೆ ಸಂದ ಜಯವಾಗಿತ್ತು.ಈಗ ನಿರ್ಭಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಿದೆ.ಆದರೆ ನಮ್ಮ ಸೌಜನ್ಯ ಪ್ರಕರಣದ ಆರೋಪಿಗಳೇ ಇನ್ನೂ ಸಿಕ್ಕಿಲ್ಲ…! ಅತ್ಯಾಚಾರದ ಆರೋಪಿಗಳನ್ನು ವರ್ಷವಾದರೂ ಬಂಧಿಸಲಾಗದಷ್ಟು ನಿಷ್ಕ್ರಿಯರಾಗಿದ್ದಾರೆಯೇ ನಮ್ಮ ಕರ್ನಾಟಕ ಪೋಲಿಸರು? ಅಥವಾ ಪೋಲಿಸರನ್ನು ನಿಷ್ಕ್ರಿಯಗೊಳಿಸುವಲ್ಲಿ ಕಾಣದ ’ಕೈ’ ಗಳು ಕೆಲಸ ಮಾಡುತ್ತಿವೆಯೇ? ಪ್ರಕರಣ ನಡೆದಾಗ ಇದ್ದಿದ್ದು ಬಿಜೆಪಿ ಸರ್ಕಾರ.ಈಗ ಇರುವುದು ಕಾಂಗ್ರೆಸ್ಸ್ ಸರ್ಕಾರ.ಹಾಗಿದ್ದರೆ ಆ ಕಾಣದ ಕೈಗಳು ಸರ್ಕಾರದ ಕೈಗಳನ್ನೇ ಕಟ್ಟಿಹಾಕಬಲ್ಲಷ್ಟು ಬಲಿಷ್ಟವಾಗಿವೆಯೇ?

ಮತ್ತಷ್ಟು ಓದು »

14
ಆಕ್ಟೋ

ಮೋದಿ ಫ್ಯಾಕ್ಟರ್ : ಒಮರ್ ಅಬ್ದುಲ್ಲಾರ ಮಾತುಗಳು ಯುಪಿಎ ದಿಗಿಲಿನ ಕನ್ನಡಿಯೇ?

ಮೂಲ : ಸಂಜಯ್ ಸಿಂಗ್
ಅನುವಾದ : ಪ್ರಶಾಂತ್ .ಕೆ

Modi Omar“ನನಗನ್ನಿಸುತ್ತೆ, ನಾವೇನಾದರೂ( ಯು.ಪಿ.ಎ. ಅಂಗಪಕ್ಷಗಳು) ‘ಮೋದಿ ಫ಼್ಯಾಕ್ಟರ್’ ನ್ನು ನಿರ್ಲಕ್ಷಿಸಿದರೆ ಅದು ಮೂರ್ಖತನವಾಗುತ್ತೆ; ಅಲ್ಲದೆ ಅದೊಂದು ಅಪಾಯಕಾರಿ ತಪ್ಪು ಕೂಡ..”
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ‘ಒಮರ್ ಅಬ್ದುಲ್ಲಾ’, ‘ಹಿಂದುಸ್ತಾನ್ ಟೈಮ್ಸ್’ ಗೆ ನೀಡಿದ ಸಂದರ್ಶನದಲ್ಲಿ ಆಡಿದ ಮಾತುಗಳಿವು. ದೇಶದ ಅತ್ಯಂತ ಸಮಸ್ಯಾತ್ಮಕ ರಾಜ್ಯದ, ಅದರಲ್ಲೂ ಆ ರಾಜ್ಯದ ಆಗು- ಹೋಗುಗಳು ಇಡೀ ದೇಶವನ್ನ ತಲ್ಲಣಗೊಳಿಸುತ್ತಿರುವ ಸಂದರ್ಭದಲ್ಲಿ, ಆ ರಾಜ್ಯದ ಮುಖ್ಯಮಂತ್ರಿಯ ಮಾತುಗಳನ್ನು ಹಗುರವಾಗಿ ಕಾಣುವ ಹಾಗಿಲ್ಲ. ‘ಒಮರ್’ ‘ರಾಹುಲ್ ಗಾಂಧಿ’ಯವರ ಆಪ್ತ ಮಿತ್ರ, ಅಲ್ಲದೆ ಅವರ ತಂದೆ ‘ಫ಼ರೂಕ್ ಅಬ್ದುಲ್ಲ’ ಯು.ಪಿ.ಎ. ಸರಕಾರದಲ್ಲಿ ಮಂತ್ರಿ ಕೂಡ ಹೌದು; ಈ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಇನ್ನೂ ಮಹತ್ವ ಪಡೆದುಕೊಳ್ಳುತ್ತವೆ, ‘ರಾಹುಲ್ ಗಾಂಧಿ’ ಉತ್ತರ ಪ್ರದೇಶ, ರಾಮ್ ಪುರದಲ್ಲಿ ಹೇಳಿದ ” ೨೦೧೪ ರಲ್ಲಿ ಕೇಂದ್ರದಲ್ಲಿ ಯುವಶಕ್ತಿಯ ಸರಕಾರ ಅಧಿಕಾರಕ್ಕೆ ಬರುತ್ತದೆ, ಅದು ದೇಶವನ್ನೇ ಬದಲಾಯಿಸಬಲ್ಲುದು” ಎಂಬ ಮಾತುಗಳನ್ನು ಒಮರ್ ಪೂರ್ತಿ ಒಪ್ಪಿದಂತೆ ಕಾಣುವುದಿಲ್ಲ; ನಿಮಗೆ ಗೊತ್ತಿರಲಿ, ರಾಹುಲ್ ಮತ್ತು ಒಮರ್ ಇಬ್ಬರೂ ಒಂದೇ ವರ್ಷದಲ್ಲಿ ಜನಿಸಿದವರು ಮತ್ತು ಇಬ್ಬರಿಗೂ ಏಗ ೪೩ ವರ್ಷ ವಯಸ್ಸು. ಅನೇಕ ಕಾಂಗ್ರೆಸ್ ನಾಯಕರಂತೆ, ರಾಹುಲ್ ಗಾಂಧಿಯ ಈ ಭಾಷಣದ ಬಳಿಕ ಮುಂದಿನ ಸರಕಾರ ನಡೆಸಲು ಆತನೇ ಸೂಕ್ತ ವ್ಯಕ್ತಿ ಎಂದು ಅಭಿಪ್ರಾಯ ವ್ಯಕ್ತಪಡಿಸದ ಕಾರಣ , ನ್ಯಾಷನಲ್ ಕಾನ್ಫ಼ರೆನ್ಸ್ ನ ನಾಯಕನ ಮಾತುಗಳನ್ನು ವಿಶೇಷವಾಗಿ ಪರಿಗಣಿಸಬೇಕು.

ಮತ್ತಷ್ಟು ಓದು »

13
ಆಕ್ಟೋ

ಬಸವ ಚಳುವಳಿಯನ್ನು ಕಾಡುತ್ತಿರುವ ಸಾಹಿತ್ಯ ಲೋಕದ ಬು(ಲ)ದ್ಧಿ ಜೀವಿಗಳು !

– ವಿಶ್ವಾರಾಧ್ಯ ಸತ್ಯಂಪೇಟೆ, ಶಹಾಪುರ

vachana-charche       ಇಷ್ಟು ದಿನಗಳವರೆಗೆ ಧಾರ್ಮಿಕ ಲೋಕದ ಗುಂಗಾಡುಗಳು ಬಸವಣ್ಣನರನ್ನು ಕಾಡುತ್ತಿದ್ದವು. ಅವರು ರಚಿಸಿದ ವಚನಗಳಿಗೆ ತದ್ವಿರುದ್ಧವಾಗಿ ತಾವು ಬದುಕಿದ್ದಲ್ಲದೆ ತಮ್ಮ ಭಕ್ತರ ಹಿಂಡನ್ನು ತಮ್ಮ ಹಿಂದೆ ಕಟ್ಟಿಕೊಂಡು ಬಸವಾದಿ ಶರಣರಿಗೆ ಸಾಕಷ್ಟು ಅಪಚಾರ ಮಾಡಿದ್ದರು. ಇದೀಗ ಸಾಹಿತ್ಯ ಲೋಕದ ಗುಂಗಾಡುಗಳೂ ತಾವೇನು ಕಡಿಮೆ ಇಲ್ಲ ಎಂದು ಬಸವಣ್ಣನವರನ್ನು ಹಾಗೂ ಅವರು ಬರೆದ ವಚನ ಸಾಹಿತ್ಯವನ್ನು ಪರಾಮರ್ಶಿಸುವ ಎಗ್ಗತನ ತೋರುತ್ತ, ಇಲ್ಲ ಸಲ್ಲದ ಕುಯುಕ್ತಿಗಳನ್ನು ನಡೆಸಿದ್ದಾರೆ.  ಹಲವಾರು ವರ್ಷಗಳಿಂದ ಬಸವಣ್ಣನವರ ಕುರಿತು ಪರಾಮರ್ಶಿಸುವ ಬುದ್ದಿವಂತಿಕೆಯನ್ನು ತೋರುತ್ತಿರುವ ಬುದ್ಧಿಜೀವಿ ವೇಷದಾರಿ ಬರಹಗಾರರು ಸಮಯ ಸಿಕ್ಕಾಗಲೆಲ್ಲ ಬಸವಣ್ಣನವರ ಮೇಲೆ ಕೆಸರನ್ನು ಎರಚುತ್ತ ತಾವು ದೊಡ್ಡವರಾಗಬೇಕೆಂಬ ಹುನ್ನಾರ ನಡೆಸಿದ್ದು ಎಲ್ಲರಿಗೂ ಗೊತ್ತಿರುವಸಂಗತಿಯೆ ಆಗಿದೆ.

ಹಿಂದೊಮ್ಮೆ ಗುಲ್ಬರ್ಗಾದ ಕಪಟರಾಳ ಕೃಷ್ಣರಾವ್ ಎಂಬ ಸಂಶೋಧಕನೋರ್ವ ಅನುಭವ ಮಂಟಪವೇ ಇಲ್ಲ ಎಂದು ಸಂಶೋಧಿಸಿ ಹೇಳಿದ್ದ. ಆಗ ಲಿಂಗಾಯತ ಧರ್ಮದವರೆಂದು ಸೋಗುಹಾಕಿರುವ ಸೋಗಲಾಡಿ ಗುರು- ಜಗದ್ಗುರುಗಳೆಲ್ಲ ತಮ್ಮ ತುಟಿಗಳನ್ನು ಹೊಲಿದುಕೊಂಡು ತೆಪ್ಪಗಿದ್ದರು. ಅರೆಬರೆ ಜ್ಞಾನದ ಲಿಂಗವಂತ ಸಮಾಜದ ಜನಗಳು ‘ನಮಗೂ ಬಸವಣ್ಣನವರಿಗೂ ಯಾವ ಬಾದರಾಯಣ ಸಂಬಂಧ ?’ ಎಂದುಕೊಂಡು ಕಪಟರಾಳರ ಕಪಟತನವನ್ನು ಪ್ರಶ್ನಿಸಲು ಹೋಗಲಿಲ್ಲ. ಈಗೀಗ ಬುದ್ದಿಜೀವಿಗಳೆಂದು ತಮ್ಮಷ್ಟಕ್ಕೆ ತಾವೇ ಕರೆದುಕೊಂಡಿರುವ ಕೆಲವು  ಸೋಕಾಲ್ಡ ಜನಗಳು ಬಸವಣ್ಣನವರ ಘನ ವ್ಯಕ್ತಿತ್ವವನ್ನು ಸಂಶೋಧಿಸುತ್ತಿದ್ದೇವೆ ಎಂಬ ನೆವದಲ್ಲಿ ಸಾಕಷ್ಟು ಘಾಸಿಯನ್ನುಂಟುಮಾಡಿದ್ದಾರೆ. ‘ಮಹಾಚೈತ್ರ’ ಕೃತಿಯ ಮೂಲಕ ಎಚ್.ಎಸ್. ಶಿವಪ್ರಕಾಶ, ‘ಆನುದೇವ ಹೊರಗಣದವನು’ ಪುಸ್ತಕದ ಮೂಲಕ ಬಂಜಗೇರಿ ಜಯಪ್ರಕಾಶ, ‘ಧರ್ಮಕಾರಣ’ದ ಮೂಲಕ ಪಿ.ವಿ.ನಾರಾಯಣ ಮುಂತಾದವರು ತಮ್ಮ ಮೂಗಿನ ನೇರಕ್ಕೆ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಈಗಾಗಲೇ ಮೂತಿಗೆ ಇಕ್ಕಿಸಿಕೊಂಡಿದ್ದಾರೆ.

ಆದರೂ ಇತ್ತೀಚೆಗೆ ಬಾಲಗಂಗಾಧರ ಮತ್ತು ಡಂಕಿನ್ ಝಳಕಿ ಎಂಬ ಮಹಾಶಯರುಗಳು ವಚನಕಾರರು ಜಾತಿ ವಿರೋಧಿಗಳಾಗಿದ್ದರು ಎಂಬ ಅಭಿಪ್ರಾಯವು ಆಧುನಿಕ ಸಂದರ್ಭದಲ್ಲಿ ವೀರಶೈವರು ವಸಾಹತುಶಾಹಿ ಪಾಶ್ಚಾತ್ಯ ಚಿಂತಕರ ಪ್ರಭಾವದಿಂದ ಕಟ್ಟಿಕೊಂಡ ಪ್ರಮೇಯವಾಗಿದೆ ಎಂದು ವಾದಿಸುತ್ತಾರೆ. ಜೊತೆಗೆ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುವುದು ವಚನಕಾರರ ಮೂಲಭೂತ ಗುರಿಯಾಗಿತ್ತು ಎನ್ನುವುದು ಅಸಂಬದ್ಧ ತರ್ಕವಾಗಿದೆ ಎಂದೂ ಜೊತೆಗೆ ಅದು ಬ್ರಾಹ್ಮಣ ವಿರೋಧಿ ಚಳುವಳಿಯ ಅಭಿವ್ಯಕ್ತಿಗಳೆಂದು ಹೇಳಲು ವಚನಗಳಲ್ಲಿಯೇ ಆಧಾರವಿಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.   ಇದನ್ನು ಕೆಲವು ಜನ ಸೋಕಾಲ್ಡ  ಬು(ಲ)ದ್ದಿ ಜೀವಿಗಳು ವಚನಗಳ ಬಗ್ಗೆ ಹೊಸ ಚಿಂತನೆ ಮತ್ತು ಚರ್ಚೆಗಳಿಗೆ ಅನುವುಮಾಡಿಕೊಟ್ಟದ್ದಕ್ಕೆ ಧನ್ಯವಾದಗಳನ್ನೂ ಅರ್ಪಿಸಿದ್ದು ಅವರ ಎಬಡತನಕ್ಕೆ ಸಾಕ್ಷಿಯಾಗಿದೆಯೆಂದರೂ ತಪ್ಪಾಗುವುದಿಲ್ಲ.

ಮತ್ತಷ್ಟು ಓದು »

12
ಆಕ್ಟೋ

ಸುದ್ಧಿ ಮಾಡುವವರಲ್ಲಿ ಶುದ್ಧಿ ಇಲ್ಲವಾದರೆ. . .

– ಡ್ಯಾನಿ ಪಿರೇರಾ,ಹಳ್ಳಿಮೈಸೂರು

Paid Media       ಇಂದು ವಾರ್ತಾ ವಾಹಿನಿಗಳು ಯಥಾತ್‍ಶಿರ್ಘ ಸುದ್ಧಿಗಳನ್ನು ಜಗತ್ತಿನ ಮೂಲೆ ಮೂಲೆಗೂ ಅತಿ ವೇಗದಲ್ಲಿ ಮುಟ್ಟಿಸುವ ಕೆಲಸ ಮಾಡುತ್ತಿವೆ. ಇದರಿಂದ ಉಪಯೋಗವಿದೆ ಎನ್ನುವುದು ನಿಜವೇ  ಆದರೂ ಸುದ್ಧಿ ಹೇಳುವ ಮನಸ್ಸುಗಳ ಹಿಂದೆ ಶುದ್ಧಿ ಇಲ್ಲದಿರುವುದು ಗೋಚರವಾಗುತ್ತಿದೆ. ಹಾಗಾಗಿ ಅವುಗಳ ಹಿಂದಿರುವ ಉದ್ದೇಶ ಪ್ರಶ್ನಾರ್ಹವಾಗುತ್ತಿದೆ.  ಒಂದು ಕಾಲವಿತ್ತು ಒಬ್ಬ ವ್ಯಕ್ತಿಗೆ  ಅಪಮಾನವೆನಿಸುವ  ಸುದ್ಧಿಯೊಂದು ಪತ್ರಿಕೆ ಅಥವಾ ದೃಶ್ಯ ಮಾಧ್ಯಮಗಳಲ್ಲಿ ಬಂದರೆ ಅದರಿಂದ ವ್ಯಕ್ತಿಗೆ ಅದು ನಿಜವಿರಲಿ, ಸುಳ್ಳಿರಲಿ  ಒಂದೋ ಅವನಿಗದು ಆಘಾತ ತರುವಂತಿತ್ತು ಅಥವಾ ಆತ ತನ್ನನ್ನು ತಾನು ಆತ್ಮ ವಿಮರ್ಶೆಗೆ ಒಳಪಡಿಸುವ ಸಾಧನವಾಗಿರುತ್ತಿತ್ತು. ಅದು ವ್ಯಕ್ತಿಯೊಬ್ಬ ಸಾರ್ವಜನಿಕ ಜೀವನದಲ್ಲಿರುವವನಾಗಿದ್ದರೆ ಕೂಡಲೇ ರಾಜೀನಾಮೆ ನೀಡಿ ಅದರಿಂದ ಬಿಡುಗಡೆ ಹೊಂದುವ ಸಾಕ್ಷಿಪ್ರಜ್ಞೆ ಆತನನ್ನು ಎಚ್ಚರಿಸುತ್ತಿತ್ತು. ಆದರೆ ಕಾಲ ಬದಲಾಗಿದೆ. ಅಕ್ಷರ ಮಾಧ್ಯಮಗಳಿಗಿಂತ ದೃಶ್ಯ ಮಾಧ್ಯಮಗಳು ಅದರಲ್ಲೂ ಸುದ್ಧಿ ವಾಹಿನಿಗಳು ಇನ್ನಿಲ್ಲದ ವೇಗದಲ್ಲಿ ಕಾರ್ಯಪ್ರವೃತ್ತವಾಗಿವೆ.  ಕ್ಷಣಾರ್ಧದಲ್ಲಿ ಅದು ಅಸಲಿಯೋ ನಕಲಿಯೋ ಅಂತೂ ಸುದ್ಧಿಗಳು ಬಿತ್ತರವಾಗುತ್ತವೆ. ಆದರೆ ಅಪರಾಧಿ ಸ್ಥಾನದಲ್ಲಿರುವ ವ್ಯಕ್ತಿಯ ಮೇಲೆ ಮಾತ್ರ ಅದು ಯಾವುದೇ ಪರಿಣಾಮ ಬೀರುವಂತೆ ಕಾಣುತ್ತಿಲ್ಲ.  ಏಕೆಂದರೆ ಸುದ್ಧಿ ಮಾಡುವವನ ಮತ್ತು ಸುದ್ಧಿಯಾಗುವವನಲ್ಲಿ  ಚಿತ್ತಶುದ್ಧಿಯಿಲ್ಲದಿರುವುದು! ಸುದ್ಧಿ ಮಾಡುವ ದಾವಂತದಲ್ಲಿ ಅದರಿಂದಾಗುವ ಪರಿಣಾಮವನ್ನು ಸುದ್ಧಿ ಮಾಡುವವ ಯೋಚಿಸುತ್ತಿಲ್ಲವೋ ಅಥವಾ ಅದು ತನಗೆ ಸಂಬಂದಿಸಿದ್ದಲ್ಲ ಎನ್ನುವ ತಾತ್ಸಾರ ಮನೋಭಾವವೋ ಗೊತ್ತಿಲ್ಲ ಅಂತೂ ಅನಾಹುತ ಮಾಡುವುದರಲ್ಲೇ ಆನಂದ ಕಾಣುತ್ತಿವೆ ನಮ್ಮ ಅನೇಕ ದೃಶ್ಯ ಮಾಧ್ಯಮಗಳು.

ಕೆಲ ವರ್ಷಗಳ ಹಿಂದೆ ಕನ್ನಡದ ಸುದ್ಧಿ ಮಾಧ್ಯಮವೊಂದು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಂಡ ಮಕ್ಕಳು ತೀವ್ರ ಅಸ್ವಸ್ಥವೆಂದು ‘ಬ್ರೇಕಿಂಕ್ ನ್ಯೂಸ್’ ಹಾಕಿತು. ಲಸಿಕೆ ಹಾಕಿಸಿಕೊಂಡ ಮಕ್ಕಳ ಪೋಷಕರು ಆತಂಕದಿಂದ ಆಸ್ಪತ್ರೆ ಸುತ್ತ ಜಮಾವಣೆಗೊಂಡರು. ಜನರಿಗೆ ಅಲ್ಲಿನ ಆಸ್ಪತ್ರೆ ಮತ್ತು ಅದರ ಸಿಬ್ಬಂದಿ ದಾಳಿಯ ವಸ್ತುವಾದರು. ಆದರೆ ಅದರ ನೈಜ ವಿಚಾರವೆಂದರೆ ಅಸ್ವಸ್ಥಗೊಂಡ ಒಂದೆರಡು ಮಕ್ಕಳು ಸೇವಿಸಿದ ಆಹಾರ Food Poison ಅಗಿದ್ದು .  ಆ ಸುದ್ಧಿ ಮಾಧ್ಯಮ ಮಾಡಿದ ಅವಾಂತರದ ಬಗ್ಗೆ ಅಂದಿನ  ಗೃಹ ಸಚಿವರಾದ ವಿ.ಎಸ್. ಆಚಾರ್ಯರು ಗಮನ ಸೆಳೆದರೂ ಅದು ತನ್ನ ದುಡುಕುತನದ ಬಗ್ಗೆ ವಿಷಾದ ವ್ಯಕ್ತಪಡಿಸಲಿಲ್ಲ. ಹೀಗೆ ಸುದ್ಧಿ ಮಾಧ್ಯಮಗಳು ಸುದ್ಧಿ ಮಾಡುವ ಭರದಲ್ಲಿ ಅವುಗಳು ಮಾಡುವ ಅವಾಂತರಗಳೇ ದೊಡ್ಡ ಸುದ್ಧಿಯಾದರೂ ಅವುಗಳಿಗೇನು ಪಶ್ಚತ್ತಾಪವಾಗುವುದಿಲ್ಲ. ಜನರಿಗೆ ಉಚಿತ ಬುದ್ಧಿ ಹೇಳುವುದಷ್ಟೇ ಅವುಗಳ ಕೆಲಸ

ಮತ್ತಷ್ಟು ಓದು »

11
ಆಕ್ಟೋ

ದಲಿತ ನಾಯಕರಿಗೆ ದಲಿತರ ಮೇಲೇಕಿಲ್ಲ ಕಾಳಜಿ?

 – ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

shindheರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿಯ ಮುನ್ನಾ ಎರಡು ದಿನಗಳಲ್ಲಿ ದೇಶದ ಗೃಹ ಮಂತ್ರಿಗಳು, ಕರ್ನಾಟಕದ ಮುಖ್ಯಮಂತ್ರಿಗಳು ಸೇರಿ ನಾಲ್ವರು ರಾಜಕಾರಣಿಗಳು ಇದ್ದಕ್ಕಿದ್ದಂತೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ, ಕಾಳಜಿ ರಕ್ಷಣೆಯ ಮಾತುಗಳನ್ನಾಡಿದ್ದಾರೆ. ಪ್ರಮುಖವಾಗಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಮಾಯಕ ಮುಸ್ಲಿಂ ಯುವಕರನ್ನು ಬಂಧಿಸಬೇಡಿ ಎಂದಿದ್ದಾರೆ.

ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಪೊಲೀಸ್ನ ಹಾಲಿ ನಿರ್ದೇಶಕರಿಗೆ ಪತ್ರ ಬರೆದು ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿ 2 ರಿಂದ 3 ಮಂದಿ ಮುಸ್ಲಿಂ ಸಿಬ್ಬಂದಿಗಳನ್ನು ನೇಮಿಸುವಂತೆ ಆದೇಶಿಸಿದ್ದಾರೆ. ಅದೇ ರೀತಿ ಅಲ್ಪಸಂಖ್ಯಾತ ಸಮುದಾಯದ ಖಾತೆ ಪಡೆದಿರುವ ಕೆ. ರೆಹಮಾನ್ ಖಾನ್ ಕೂಡ ಮುಸ್ಲಿಂ ಯುವಕರನ್ನು ಬಂಧಿಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಇನ್ನು ಅಹಿಂದ ಹೋರಾಟದ ಹಿನ್ನೆಲೆಯಲ್ಲಿ ಬಂದಿರುವ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಮೇಲೆ ‘ಎಲ್ಲೋ’ ದೌರ್ಜನ್ಯ ನಡೆಸಿದರೆ ಪರಿಣಾಮ ನೆಟ್ಟಗೆ ಇರುವುದಿಲ್ಲವೆಂಬ ಕಠೋರ ಸಂದೇಶ ಕೊಟ್ಟಿದ್ದಾರೆ. ಹೀಗೆ ಒಂದು ಸಮುದಾಯದ ಬಗೆಗಿನ ಕಾಳಜಿ ವ್ಯಕ್ತಪಡಿಸುವ ಮೂಲಕ ಭಾರತದಲ್ಲಿ ದಲಿತರು ಕೂಡ ನಿತ್ಯವೂ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂಬುದನ್ನು ಮರೆತಿರುವ ಈ ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವುದು ಅನಿವಾರ್ಯವೆನಿಸುತ್ತಿದೆ.

ಮತ್ತಷ್ಟು ಓದು »

10
ಆಕ್ಟೋ

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧

– ಮು.ಅ ಶ್ರೀರಂಗ, ಬೆಂಗಳೂರು

S L Byrappaಎಸ್. ಎಲ್. ಭೈರಪ್ಪನವರ” ಧರ್ಮಶ್ರೀ”ಯಿಂದ  “ಅನ್ವೇಷಣ”ದವರೆಗಿನ ಹನ್ನೆರೆಡು ಕಾದಂಬರಿಗಳನ್ನು ಕುರಿತಂತೆ ಒಟ್ಟು ಅರವತ್ತಾರು ವಿಮರ್ಶೆಗಳಿರುವ “ಸಹಸ್ಪಂದನ” ಎಂಬ ವಿಮರ್ಶಾ ಗ್ರಂಥ ೧೯೭೮ರಲ್ಲಿ ಪ್ರಕಟವಾಯ್ತು. (ಪ್ರಕಾಶಕರು :ಸಾಹಿತ್ಯ ಭಂಡಾರ ಬೆಂಗಳೂರು —೫೩) ಅದರ ಪ್ರಕಾಶಕರು ಹೇಳಿರುವ ಮಾತುಗಳಿಂದ ಈ ನನ್ನ ಮುನ್ನುಡಿಯನ್ನು ಪ್ರಾರಂಭಿಸುವುದು ಉತ್ತಮ.”ಇದು (ಸಹಸ್ಪಂದನ) ಭೈರಪ್ಪನವರ ಮೇಲಿನ ಕೇವಲ ಅಭಿಮಾನದಿಂದ ತಂದಿರುವ ಗ್ರಂಥವಲ್ಲ. ಮೆಚ್ಚಿಗೆ,ಹೊಗಳಿಕೆಗಳ ಬರವಣಿಗೆಯಿಂದ ಯಾವ ಲೇಖಕನ ಕೃತಿಗಳೂ ಬದುಕಲಾರವು. ಇಲ್ಲಿ ಬಂದಿರುವ ಲೇಖನಗಳು ಒಂದೇ ಬಗೆಯ ದೃಷ್ಟಿಕೋನದವೂ ಅಲ್ಲ. ಮೆಚ್ಚುಗೆ, ವಿರೋಧ,ಟೀಕೆ,ಘಾಟು, ಹೀಗೆ ……….. ”

ಈ ಮುಖಾಮುಖಿಯನ್ನು ಆ ಒಂದು ಎಚ್ಚರ,ಜವಾಬ್ದಾರಿಗಳ ಹಿನ್ನೆಲೆಯಲ್ಲಿ ನಡೆಸುವುದು ನನ್ನ ಕರ್ತವ್ಯವೆಂದು ಭಾವಿಸಿದ್ದೇನೆ.

ನಮ್ಮ ಅಕಾಡೆಮಿಕ್ ವಲಯದ ವಿಮರ್ಶಕರುಗಳು ಜತೆಗೆ ನಾನ್ ಅಕಾಡೆಮಿಕ್ ವಿಮರ್ಶಕರುಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಹೊಸ ಕನ್ನಡ ಸಾಹಿತ್ಯದಲ್ಲಿ ವಿಮರ್ಶೆಗೊಂದು ಮಹತ್ವವಿದೆ. ಕಾಲಾನುಕಾಲಕ್ಕೆ ಅದು ಓದುಗರ ವಿವೇಕವನ್ನು ಎಚ್ಚರಿಸುತ್ತಾ, ಸಾಹಿತಿಗಳನ್ನು ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಪ್ರಭಾವಿಸುತ್ತಲಿದೆ. ಇಷ್ಟಲ್ಲದೆ ಸಾಹಿತಿಗಳು ಹೊಸಹೊಸ ತಂತ್ರಗಳತ್ತ, ವಿಷಯಗಳತ್ತ ಯೋಚಿಸುವಂತೆ ಹೊರಳುವಂತೆ ಮಾಡಿವೆ. ಭಾಷೆಯನ್ನು ಪರಿಣಾಮಕಾರಿಯಾಗಿ ಯಾವ ರೀತಿ ಉಪಯೋಗಿಸಬೇಕೆನ್ನುವ ಮಾರ್ಗದರ್ಶನ ಕೂಡ ವಿಮರ್ಶೆಯಿಂದ ನಡೆಯುತ್ತಿರುತ್ತದೆ.
ಮತ್ತಷ್ಟು ಓದು »

9
ಆಕ್ಟೋ

ಫ್ಯೂಡಲ್, ಲಿಬರಲ್, ಸ್ಲೇವರಿ: ಪರಿಕಲ್ಪನೆಗಳ ಭೌದ್ದಿಕ ದಾರಿದ್ರ್ಯ

empty_mind_440ಡಾ. ಸಂತೋಷ್ ಕುಮಾರ‍್ ಪಿ.ಕೆ 

ಹೀಗೋಮ್ಮೆ ಮಾಸ್ತಿ ಹಾಗು ಕುರ್ತಕೋಟಿಯವರ ಲೇಖನಗಳನ್ನು ಓದುವಾಗ ಅವರು ಹೇಳುತ್ತಿದ್ದ ವಿಚಾರಗಳು ಎಷ್ಟು ಆಪ್ತವಾಗಿದ್ದವು ಎಂದರೆ ಅವು ಇಂದಿಗೂ ಪ್ರಸ್ತುತ ಎನಿಸುತ್ತದೆ. ಕೆ.ವಿ.ನಾರಾಯಣ ಸ್ವಾಮಿಯವರು ಮಾಸ್ತಿಯವರನ್ನು ಒಮ್ಮೆ ಸಂದರ್ಶನ ಮಾಡುವ ಸಂದರ್ಭದಲ್ಲಿ ಕೆ.ವಿ.ಎನ್ ರವರು ಪ್ರಶ್ನೆ ಕೇಳುವ ರಭಸದಲ್ಲಿ ಲಿಬರಲ್/ಉದಾರವಾದಿ ಶಬ್ದವನ್ನು ಪ್ರಯೋಗಿಸದರಂತೆ, ಅದಕ್ಕೆ ಮಾಸ್ತಿಯವರು ಹಾಗೆಂದರೇನು? ಎಂದು ಮರುಪ್ರಶ್ನೆ ಮಾಡಿದರಂತೆ, ಕೊನೆಗೂ ಲಿಬರಲ್ ಅಥವಾ ಉದಾರವಾದಿ ಎಂದರೇನು ಎಂಬುದನ್ನು ವಿವರಿಸುವಲ್ಲಿ ಕೆ.ವಿ.ಎನ್ ವಿಫಲರಾಗಿ ತಬ್ಬಿಬ್ಬಾಗಿದ್ದನ್ನು ಅವರೇ ಒಪ್ಪಿಕೊಳ್ಳುತ್ತಾರೆ. ಒಟ್ಟಿನಲ್ಲಿ ನಮ್ಮದಲ್ಲದ ಜೊತೆಗೆ ನಮಗೆ ಅರ್ಥವಾಗದ ಪದಗಳನ್ನು ಬಳಸುವುದರಿಂದ ನಿರುಪಯುಕ್ತವಾದ ಸಂಭಾಷಣೆಯಾಗುತ್ತದೆ ಎಂಬುದು ಅದರ ತಾತ್ಪರ್ಯವಾಗಿತ್ತು. ಅದೇ ರೀತಿ ‘ನಿರೂಪಣಾ ಶಕ್ತಿ’ ಎಂಬ ಕುರ್ತಕೋಟಿಯವ ಲೇಖನವಿದೆ. ಆ ಲೇಖನದಲ್ಲಿ ಕುಂ.ವೀರಭದ್ರಪ್ಪನವರು ‘ಫ್ಯೂಡಲ್’ ಪದವನ್ನು ಬಳಸುವ ಮೂಲಕ ಅವರ ತಂದೆಯವರ ಚಿತ್ರಣವನ್ನು ಎಷ್ಟು ಹದಗೆಡಿಸಿದರೆಂದರೆ, ಕುಂ.ವಿ.ಯವರು ಅವರ ತಂದೆಯ ಚಿತ್ರಣವನ್ನೂ ಪ್ರೇಕ್ಷಕರಿಗೆ ಸರಿಯಾಗಿ ಕಟ್ಟಿಕೊಡಲಾಗಲಿಲ್ಲ, ಜೊತೆಗೆ ಫ್ಯೂಡಲ್ ಎಂಬುದನ್ನೂ ಸರಿಯಾಗಿ ಅರ್ಥಮಾಡಿಸಲು ಆಗಲಿಲ್ಲ.

ಇಂತಹ ಅನುಭವ ಭೌದ್ದಿಕವಲಯದ ಪರಿಚಯವಿದ್ದವರಿಗೆ ಸರ್ವೇಸಾಮಾನ್ಯವಾದುದು. ಅದರಲ್ಲಿಯೂ ಪ್ರಗತಿಪರರ ಭಾಷಣಗಳನ್ನು ಕೇಳಿದರೆ ಅವುಗಳಲ್ಲಿ ಅರ್ಥವಾದ್ದಕ್ಕಿಂತ ಅರ್ಥವಾಗದೆ ಇರುವ ಪದಗಳೇ ಹೆಚ್ಚಾಗಿರುತ್ತವೆ. ಇದು ಕೇವಲ ಪ್ರಗತಿಪರರಗೆ ಮಾತ್ರ ಸೀಮಿತವಾಗಿರದಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ಅಲ್ಲಿ ಕಾಣಸಿಗುತ್ತದೆ. ಲಿಬರಲ್, ಫ್ಯೂಡಲ್, ನಂತಹ ಶಬ್ದಗಳು ನಮ್ಮ ಸಂಸ್ಕೃತಿಯ ಮೂಲದವುಗಳಲ್ಲ. ಬದಲಿಗೆ ಪಾಶ್ಚಾತ್ಯರ ಸಂಸ್ಕೃತಿಯನ್ನು ವಿವರಿಸಲು ಬೆಳೆದುಬಂದಿರುವ ಪದಗಳಾಗಿವೆ. ಭಾರತದಲ್ಲಿ ಜಮೀನುದಾರರನ್ನು ಹಾಗೂ ಅವರ ದರ್ಪವನ್ನು ವಿವರಿಸಲು ಫ್ಯೂಡಲ್ ಪದವನ್ನು ಸಾಮಾನ್ಯವಾಗಿ ಬುದ್ದಿಜೀವಿಗಳು ಬಳಸುತ್ತಾರೆ. ಆದರೆ ಅದು ನಿಜವಾಗಿಯೂ ಫ್ಯೂಡಲಿಸಂನ್ನು ಪ್ರತಿನಿಧಿಸುತ್ತದೆಯೆ? ಎಂದು ಕೇಳಿಕೊಂಡರೆ, ಖಂಡಿತವಾಗಿಯೂ ಇಲ್ಲ ಎಂದೇ ಹೇಳಬಹುದು. ಏಕೆಂದರೆ ಫ್ಯೂಡಲ್ ನ ಅರ್ಥವನ್ನು ನೋಡುತ್ತಾ ಹೋದರೆ, ಸಾಮಾನ್ಯವಾಗಿ ಕೆಲವೊಂದು ಕಾನೂನು ಹಾಗೂ ಮಿಲಿಟರಿ ಶಕ್ತಿ ಅಥವಾ ಅದಕ್ಕೆ ಪರ್ಯಾಯವಾದ ಶಕ್ತಿಯನ್ನು ಒಗ್ಗೂಡಿಸಿಕೊಂಡು ಸಮಾಜವನ್ನು ಅದಕ್ಕೆ ತಕ್ಕಂತೆ ರೂಪಿಸುವುದು, ಹಾಗೂ ಅದನ್ನು ಸಂಪೂರ್ಣವಾಗಿ ನಿಯಂತ್ರಿಸುವುದು ಎಂದರ್ಥವಾಗುತ್ತದೆ.  ಅದರ ಒಟ್ಟಿಗೆ ಸರ್ಫ್ ಡಮ್ ಎಂಬುದಾಗಿಯೂ ಅದನ್ನು ಕರೆಯುತ್ತಾರೆ, ಅಂದರೆ ಲ್ಯಾಂಡ್ ಲಾರ್ಟ್ ಮತ್ತು ಸರ್ಫ್ ಗಳ ಸಂಬಂಧವು ಪ್ರಧಾನ ಭೂಮಿಕೆಯಲ್ಲಿರುತ್ತದೆ. ಹಾಗೂ ಸ್ಲೇವರಿ ಎಂದು ಬಳಸುವ ಪರಿಕಲ್ಪನೆಯ ಹಿಂದೆ ಮಾಸ್ಟರ್ ಮತ್ತು ಸ್ಲೇವ್ ಎಂಬ ಸಾಮಾಜಿಕ ಮತ್ತು ಅಂತಸ್ತಿನ ವಿಭಾಗವಿರುತ್ತದೆ. ಇಲ್ಲಿ ಸ್ಲೇವ್ ಆದವನಿಗೆ ಯಾವುದೇ ರೀತಿಯ ಸ್ವಂತಿಕೆ (ಸೆಲ್ಫ್) ಇರುವುದಿಲ್ಲ. ಆತ ಕೇವಲ ವ್ಯಾಪಾರ ಒಂದು ವಸ್ತುವಾಗಿ  ಅಸ್ತಿತ್ವದಲ್ಲಿ ಇರುತ್ತಾನೆ. ಆದರೆ ಭಾರತದಲ್ಲಿ ಇಂತಹ ರಚನೆಯನ್ನು ಎಲ್ಲಿ ಕಾಣಬಹುದು? ಅಬ್ಬಬ್ಬಾ ಎಂದರೆ ಜಮೀನುದಾರರನ್ನು ಕಾಣಬಹುದು, ಅಥವಾ ಅವರ ಒಕ್ಕಲುಗಳನ್ನು ಕಾಣಬಹುದು, ಜಮೀನುದಾರರಲ್ಲೇ ಒಳ್ಳೆಯವರನ್ನೂ  ಹಾಗೂ ಕೆಟ್ಟವರನ್ನೂ ಕಾಣಬಹುದು, ಆದರೆ ಫ್ಯೂಡಲ್ ಲಾರ್ಡಗಳನ್ನು ಕಾಣುವುದು ಎಲ್ಲಿ? ಯಾವ ಸಮುದಾಯಗಳು ಮಿಲಿಟರಿ ಶಕ್ತಿಯನ್ನು ಹೊಂದಿ ಕಾನೂನು ಗಳ ಮೂಲಕ ಇಡೀ ಸಮಾಜವನ್ನು ಅವರಿಗೆ ಬೇಕಾದ ರೀತಿಯಲ್ಲಿ ಮಾರ್ಪಡಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ?

ಮತ್ತಷ್ಟು ಓದು »