ವಿಷಯದ ವಿವರಗಳಿಗೆ ದಾಟಿರಿ

Recent Articles

9
ಆಕ್ಟೋ

ಇತಿಹಾಸಕಾರರಿ೦ದ ಮರೆಯಾದ ಸಸ್ಯಶಾಸ್ತ್ರದ ಪಿತಾಮಹ, ನಮ್ಮೀ ಭೋಧಿಧರ್ಮ……

– ಶಂಕರ್ ನಾರಾಯಣ್

Bodhi Dharma N Oshoಸ್ವಾಮೀ ವಿವೇಕಾನ೦ದರು, ಚಿಕಾಗೋದಲ್ಲಿದ್ದ ಸಮಯ. ಅವರನ್ನು ಹಣಿಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿತ್ತು. ಮೇಲಿ೦ದ ಮೇಲೆ, ಪ್ರಶ್ನೆಗಳು ತೂರಿಬರುತ್ತಿದ್ದವು. ಅದೊ೦ದು ದಿನ ಒಬ್ಬ ಅಮೇರಿಕಾದ ಪ್ರಜೆಯೊಬ್ಬ, “ಬುದ್ಧನೇಕೆ ಧರ್ಮ ಪ್ರಸರಣೆಗಾಗಿ ಯುರೋಪು, ಅಮೇರಿಕಾಗಳಿಗೆ ಬರಲಿಲ್ಲ..!?” ಎ೦ದು ಕೇಳುತ್ತಾನೆ. ಅದಕ್ಕೆ, ವಿವೇಕಾನ೦ದರು, “ಬುದ್ಧನ ಕಾಲದಲ್ಲಿ ಯುರೋಪ್ ಎಲ್ಲಿತ್ತು..? ನಿನ್ನ ಅಮೇರಿಕಾ ಎಲ್ಲಿತ್ತು..? ಎನ್ನುತ್ತಾರೆ. ಹೌದು. ಚೀನಾವೂ ಸೇರಿ, ಪಾಶ್ಚಿಮಾತ್ಯ ದೇಶಗಳು ಕಣ್ಣುಬಿಡುವ ಮೊದಲೇ ಭಾರತ ಸುಸ೦ಸ್ಕೃತ ದೇಶವಾಗಿತ್ತು. ಭಾರತೀಯರಿಗೆ, ಚಿನ್ನ-ಬೆಳ್ಳಿಗಳ ಪರಿಚಯವಿತ್ತು. ಚಿನ್ನದ ಆಭರಣಗಳನ್ನು ಇಲ್ಲಿನ ಮಹಿಳೆಯರು ತೊಡುತ್ತಿದ್ದರು. ಇದಕ್ಕೆ ಉದಾಹರಣೆ ಎ೦ದರೆ, ಹರಪ್ಪ ಮತ್ತು ಮೊಹೆ೦ಜದಾರೋ ನಗರಗಳು. ನಾಗರೀಕತೆಗಳು. ಪಾಶ್ಚಿಮಾತ್ಯ ದೇಶೀಯರು, ಮರದಲ್ಲಿ ವಾಸಿಸುವ ಸ೦ಧರ್ಭದಲ್ಲಿ, ಒ೦ದು ವ್ಯವಸ್ಥಿತ ನಗರ ಭಾರತದಲ್ಲಿತ್ತು. ಖಗೋಳ ವಿಜ್ನಾನದಲ್ಲಿ ಆರ್ಯಭಟನೂ, ಆಯುರ್ವೇದದಲ್ಲಿ ಚರಕನೂ, ಶಸ್ತ್ರಚಿಕಿತ್ಸೆಯಲ್ಲಿ ಸುಶ್ರುತನೂ, ಅರ್ಥಶಾಸ್ತ್ರದಲ್ಲಿ ಚಾಣಕ್ಯನೂ ಹೀಗೆ ಒ೦ದೊ೦ದು ವಿಭಾಗದಲ್ಲಿ ಒಬ್ಬೊಬ್ಬರು ಪ್ರಖ೦ಡ ಜ್ನಾನಿಗಳಾಗಿದ್ದರು. ಭಾರತ ಬಿಟ್ಟರೆ, ಚೀನಾದಲ್ಲೂ ನಾಗರೀಕತೆಗಳು ಹುಟ್ಟಿಕೊ೦ಡಿದ್ದವು. ಆದರೆ, ಅವುಗಳನ್ನು ಹರಪ್ಪ, ಮೊಹೆ೦ಜದಾರೋಗಳೊ೦ದೆಗೆ ಹೋಲಿಸಲಾಗದು..

ಆದರೆ,

ಮತ್ತಷ್ಟು ಓದು »

8
ಆಕ್ಟೋ

ತುತ್ತನ್ನು ನಿರ್ಲಕ್ಷಿಸುವ ಮುನ್ನ

– ನವೀನ್ ನಾಯಕ್

Dont Waste Food      ಭಾರತ ಬದಲಾಗುತಿದೆ, ಇದನ್ನು ನಮ್ಮ ಮುಖ್ಯಮಂತ್ರಿಯಿಂದ ಹಿಡಿದು ಪ್ರಧಾನ ಮಂತ್ರಿಯವರೆಗೆ ಎಲ್ಲರೂ ದಿನಕೊಮ್ಮೆ ಮಂತ್ರದಂತೆ ಪಟಿಸುತಿದ್ದಾರೆ. ಇದರಿಂದ ನಮ್ಮ ಕಂಗಳು ಬದಲಾವಣೆಯ ಸಮಯ ಹತ್ತಿರ ಬರುತಿದೆ ಎಂದು ಹೊಸ ಕನಸು ಕಾಣತೊಡಗಿದೆ. ಇಂಥ ಸಮಯದಲ್ಲಿ ವಾಸ್ತವವನ್ನು ವಿಶ್ವಸಂಸ್ಥೆ ಬಯಲಿಗೆಳೆದು ನಮ್ಮ ಸರಕಾರ ನಡೆಸುತ್ತಿರುವವರ ಮುಖವಾಡವನ್ನು ಕಳಚಿದೆ. ವಿಶ್ವಸಂಸ್ಥೆ ನಡೆಸಿರುವ ಸಮೀಕ್ಷೆಯನ್ನು ಗಮನಿಸಿದರೆ ಭಾರತದ ಬದಲಾವಣೆಯು ಮುಂದುವರೆಯುವದು ಬಿಟ್ಟು ಹಿಮ್ಮುಖವಾಗಿ ನಡೆಯತೊಡಗಿದೆ.ಈ ಅನಿಸಿಕೆ ಏಕೆಂದರೆ ಅದರ ಸಮೀಕ್ಷೆಯ ವರದಿಯನ್ನು ನೋಡಿ.

ವಿಶ್ವಸಂಸ್ಥೆ;- ವಿಶ್ವದಲ್ಲಿ 120 ಕೋಟಿ ಜನ ಇನ್ನೂ ಕಿತ್ತು ತಿನ್ನುವ ಬಡತನದ ಬೇಗೆಯಲ್ಲಿ ದಿನವನ್ನು ಕಳೆಯುತಿದ್ದಾರೆ. ಅದರಲ್ಲಿ ಮೂರನೆಯ ಒಂದರಷ್ಟು ಅಂದರೆ 33% (39 ಕೋಟಿ 60 ಲಕ್ಷ ಜನ) ಭಾರತೀಯರಾಗಿದ್ದಾರೆ. ಇವರು ದಿನವೊಂದಕ್ಕೆ ಸುಮಾರು 65 ರುಪಾಯಿಗಳಿಗಿಂತಲೂ ಕಡಿಮೆ ಹಣದಲ್ಲಿ ಜೀವನ ದೂಡುತಿದ್ದಾರೆ. ಅವರದೇ ವರದಿ ಪ್ರಕಾರ 1981 ರಿಂದ 2010ರ ನಡುವೆ ವಿಶ್ವದ ಬಡತನದ ಪ್ರಮಾಣ ಸುಮಾರು ಅರ್ಧದಷ್ಟು ಇಳಿಕೆಯಾಗಿದೆ ಮತ್ತು ಇದಕ್ಕೆ ವಿರುದ್ಧವಾಗಿ ಅಭಿವೃದ್ಧಿಶೀಲ ಹಾಗು ಬಡರಾಷ್ಟ್ರಗಳಲ್ಲಿ

ಮತ್ತಷ್ಟು ಓದು »

6
ಆಕ್ಟೋ

ಅಧಿಕಾರ ದಾಹಕ್ಕೆ ಮೇಧಾವಿಯ ಆತ್ಮಾಭಿಮಾನವನ್ನೂ ಕೊಲ್ಲುವ ಶಕ್ತಿಯಿದೆಯೇ…..?

– ಗುರುರಾಜ ಕೊಡ್ಕಣಿ,ಯಲ್ಲಾಪುರ

Man Mohn Singhಅವರು ಸಾಮಾನ್ಯ ವ್ಯಕ್ತಿಯೇನಲ್ಲ. ಚಿನ್ನದ ಪದಕದೊ೦ದಿಗೆ ಪದವಿ ಮುಗಿಸಿದವರು. ವಿಶ್ವದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒ೦ದಾದ ಆಕ್ಸಫರ್ಡ್ ಕಾಲೇಜಿನಿ೦ದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದವರು.ಭಾರತೀಯ ರಿಸರ್ವ ಬ್ಯಾ೦ಕಿನ ಗವರ್ನರ್ ನ೦ತಹ ಅತ್ಯುನ್ನತ ಹುದ್ದೆಯನ್ನು ಅಲ೦ಕರಿಸಿದ್ದವರು.ತೊ೦ಬತ್ತರ ದಶಕದಲ್ಲಿ ಭಾರತೀಯ ಅರ್ಥ ವ್ಯವಸ್ಥೆ ತೊ೦ದರೆಯಲ್ಲಿದ್ದಾಗ,ದೇಶದ ಹಣಕಾಸು ಸಚಿವರಾಗಿ, ಅ೦ದಿನ ಪ್ರಧಾನಿ ಪಿ.ವಿ ನರಸಿ೦ಹರಾವ್ ರವರ ಸಾರಥ್ಯದಲ್ಲಿ ಜಾಗತೀಕರಣದ೦ತಹ ವ್ಯವಸ್ಥೆಯಿ೦ದ ದೇಶದ ಆರ್ಥಿಕ ಪರಿಸ್ಥಿತಿಯನ್ನು ಮೇಲೆತ್ತಲು ಸಹಕಾರಿಯಾದವರು. ಪ್ರಪ೦ಚದ ಬುದ್ದಿವ೦ತ ಆರ್ಥಶಾಸ್ತ್ರಜ್ನರಲ್ಲಿ ಒಬ್ಬರು ಎ೦ದು ಹೆಸರು ಗಳಿಸಿದವರು.ಅರ್ಥಶಾಸ್ತ್ರದಲ್ಲಿನ ಅನೇಕ ಸಾಧನೆಗಳಿಗಾಗಿ ವಿಶ್ವದ ಹಲವು ಪ್ರತಿಷ್ಠಿತ ಸ೦ಸ್ಥೆಗಳ ಪ್ರಶಸ್ತಿಗಳನ್ನು ಪಡೆದವರು.ಇಷ್ಟಕ್ಕೂ ನಾನು ಹೇಳುತ್ತಿರುವುದು ಜವಹರಲಾಲ ನೆಹರೂ ಆದಮೇಲೆ ಸತತ ಐದು ವರ್ಷಗಳ ಅಧಿಕಾರಾವಧಿಯ ನ೦ತರ ಎರಡನೇ ಬಾರಿಗೆ ಪುನರಾಯ್ಕೆಯಾದ ಏಕೈಕ ವ್ಯಕ್ತಿ ನಮ್ಮ ದೇಶದ ಪ್ರಧಾನಿ ಡಾ.ಮನಮೊಹನ್ ಸಿ೦ಗ್ ರವರ ಬಗ್ಗೆ.

ಆದರೆ ಇ೦ದು ಆಗುತ್ತಿರುವುದಾದರೂ ಏನು..? ಇ೦ಥಹ ಪ್ರತಿಭಾನ್ವಿತ ವ್ಯಕ್ತಿಯನ್ನು ನಾವು ’ಗೇಲಿಯ ವಸ್ತು’ವೆ೦ಬ೦ತೇ ನೊಡುತ್ತೇವೆ. ಮೊಬೈಲಿನ ರಿ೦ಗಣವನ್ನು ಮೌನವಾಗಿಸುವಾಗ ’ಸೈಲೆ೦ಟ್ ಮೋಡ್’ ಎನ್ನುವ ಬದಲು ’ಮನಮೋಹನ್ ಸಿ೦ಗ್ ಮೋಡ್’ ಎ೦ತಲೋ,’ಪ್ರಧಾನ ಮ೦ತ್ರಿ ಮೋಡ್’ ಎ೦ತಲೋ ಕರೆಯುತ್ತೇವೆ.ಅವರ ಬಗ್ಗೆ ತರಹೇವಾರಿ ಜೋಕುಗಳು ಇ೦ಟರ್ ನೆಟ್ ನಲ್ಲಿ ಹರಿದಾಡುತ್ತವೆ.ದಿನಕ್ಕೊ೦ದು ಎಸೆಮ್ಮಸ್ ಗಳು ಹುಟ್ಟಿಕೊಳ್ಳುತ್ತವೆ. ’ಅವರು ಡೆ೦ಟಿಸ್ಟ್ ಬಳಿ ಹೋದಾಗಲಾದರೂ ಬಾಯಿ ತೆರೆಯುತ್ತಾರಾ..’ ಎನ್ನುವ೦ತೇ ಲೇವಡಿ ಮಾಡುತ್ತೇವೆ.ಈ ದೇಶ ಅತ್ಯುನ್ನತ ಹುದ್ದೆಯಾಗಿರುವ ’ಪ್ರಧಾನ ಮ೦ತ್ರಿ’ ಹುದ್ದೆಯಲ್ಲಿರುವವರು ಅವರು ಎ೦ಬುದನ್ನೂ ಮರೆತೂ ತಮಾಷೆ ಮಾಡುತ್ತೇವೆ.

ಮತ್ತಷ್ಟು ಓದು »

5
ಆಕ್ಟೋ

ಮಿ.ರಾಹುಲ್,ಹಿರೋಯಿಸಂ ಅನ್ನುವುದು ಸಿನೆಮಾಗಳಲ್ಲೇ ಚೆನ್ನ

– ರಾಕೇಶ್ ಶೆಟ್ಟಿ

Rahul Gandhiಕಾಂಗ್ರೆಸ್ಸಿನ ನಾಯಕರಾಗಿದ್ದಂತಹ ಅರ್ಜುನ್ ಸಿಂಗ್ ಅವರ ಆತ್ಮಕತೆ ‘A Grain of Sand in the Hourglass of Time’ ಯಲ್ಲಿ ಒಂದು ಪ್ರಸಂಗವನ್ನು ದಾಖಲಿಸಿದ್ದಾರೆ ಅನ್ನುವ ವರದಿಯೊಂದು ಕಳೆದ ವರ್ಷ ಪತ್ರಿಕೆಗಳಲ್ಲಿ ಬಂದಿತ್ತು.ಅಲ್ಲಿ ಅವರು ಆಗಿನ್ನೂ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರದಿದ್ದ ಸೋನಿಯಾ ಅವರನ್ನು ಪಕ್ಷಕ್ಕೆ ಕರೆ ತಂದು ಅಧ್ಯಕ್ಷೆಯ ಪಟ್ಟಕಟ್ಟುವ ಬಗ್ಗೆ ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರ ಬಳಿ ಮಾತನಾಡಲು ಸೀತರಾಂ ಕೇಸರಿ ಮತ್ತಿತ್ತರರೊಂದಿಗೆ ಹೋಗಿರುತ್ತಾರೆ. ಸೋನಿಯಾರನ್ನು ಅಧ್ಯಕ್ಷೆಯನ್ನಾಗಿ ಮಾಡುವ ಇವರ ಮಾತನ್ನು ಕೇಳಿ ಕ್ಷಣಕಾಲ ಸುಮ್ಮನಿದ್ದ ಪಿವಿಎನ್ ಒಮ್ಮೆಲೇ ” ರೈಲಿನ ಕಂಪಾರ್ಟ್-ಮೆಂಟ್ ಗಳನ್ನು ಇಂಜಿನ್ನಿಗೆ ಜೋಡಿಸಿದಂತೆ,ಕಾಂಗ್ರೆಸ್ಸ್ ಅನ್ನು ನೆಹರೂ ಕುಟುಂಬಕ್ಕೆ ಜೋತು ಬೀಳಿಸುವುದೇಕೆ? ಬೇರೆ ದಾರಿಗಳಿಲ್ಲವೇ ನಮ್ಮ ಮುಂದೆ?” ಅಂತ ಸಿಡುಕುತ್ತಾರೆ. ಕಾಂಗ್ರೆಸ್ಸಿನಂತ ಲಕೋಟೆ ಪಕ್ಷದಲ್ಲಿ ಪಿವಿಎನ್ ಮತ್ತು ಸೀತರಾಂ ಕೇಸರಿಯವರನ್ನು ಆಮೇಲೆ ಹೇಗೆ ನಡೆಸಿಕೊಳ್ಳಲಾಯಿತು ಅನ್ನುವುದೆಲ್ಲ ಮತ್ತೆ ಬಿಡಿಸಿ ಹೇಳಬೇಕಿಲ್ಲ.

೧೨೮ ವರ್ಷಗಳ ಇತಿಹಾಸ ಹೊಂದಿರೋ ಈ ರಾಷ್ಟ್ರೀಯ ಪಕ್ಷಕ್ಕೆ “ನೆಹರೂ ಕುಟುಂಬ”ದ ಬೋಗಿಯನ್ನು ಮೊದಲಿಗೆ ಜೋಡಿಸಿದ್ದು ಮಹಾತ್ಮ ಗಾಂಧೀಜಿ.ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಸರ್ದಾರ್ ವಲ್ಲಭಾಯ್ ಪಟೇಲ್ ಅಂತ ದಿಗ್ಗಜರನ್ನೆಲ್ಲ ಬದಿಗೆ ಸರಿಸಿ ಜವಹರಲಾಲ್ ನೆಹರೂ ಅವರನ್ನು ಗಾಂಧೀಜಿ ಮುನ್ನೆಲೆಗೆ ತಂದ ಹಿನ್ನೆಲೆಯೇನು ಅನ್ನುವುದರ ಬಗ್ಗೆ ಇವತ್ತಿಗೂ ಬೇರೆ ಬೇರೆ ಕತೆಗಳಿವೆ.ನೆಹರೂ ನಂತರ ಬಂದ ಇಂದಿರಾ ಅವರು ನೆಹರೂಗಿಂತ ಉತ್ತಮವಾಗಿ ದೇಶವನ್ನು ಮುನ್ನಡೆಸಿದರೂ, ಸುಲಭವಾಗಿ ದಕ್ಕಿದ್ದಂತಹ ಪ್ರಧಾನಿ ಹುದ್ದೆ ಅವರೊಳಗಿನ ಸರ್ವಾಧಿಕಾರಿಯನ್ನು ಜಾಗೃತಗೊಳಿಸಿ ಈ ದೇಶದ ಪ್ರಜಾಪ್ರಭುತ್ವದ ಇತಿಹಾಸದ ಕಪ್ಪುಚುಕ್ಕೆ “ಎಮರ್ಜೆನ್ಸಿ”ಯ ದಿನಗಳಿಗೆ ಕಾರಣವಾಯಿತು. (ಆದರೆ ಕರ್ನಾಟಕದ ಕೆಲವು ಬುದ್ಧಿಜೀವಿಗಳಿಗೆ ಈಗಲೂ ಕಾಂಗ್ರೆಸ್ಸ್ ಪ್ರಜಾಪ್ರಭುತ್ವದ ರಕ್ಷಕನಂತೆ,”ಬತ್ತಲಾರದ ಗಂಗೆ” ಕಾಣುತ್ತದೆ…! ) ಇಂದಿರಾ ಹಂತಕರ ಗುಂಡಿಗೆ ಬಲಿಯಾದ ನಂತರ ಕಾಂಗ್ರೆಸ್ಸ್ ರೈಲಿನ ಬೋಗಿಗೆ ’ರಾಜೀವ್’ ಜೋಡಣೆಯಾದರು.
ಮತ್ತಷ್ಟು ಓದು »

4
ಆಕ್ಟೋ

ಮೂರ್ತಿಗಳ ದ್ವಂದ್ವಗಳು ಮತ್ತು ದೇವನೂರರ ಬಾಂಬುಗಳು

– ಮು.ಅ ಶ್ರೀರಂಗ, ಬೆಂಗಳೂರು

anantamurthy mattu devanuruಸುಮಾರು ಹತ್ತು ದಿನಗಳಿಂದ ಈಚೆಗೆ ನಮ್ಮೀ ಸುವರ್ಣ ಕರ್ನಾಟಕವು ಅನಂತಮೂರ್ತಿಯವರ ಹೇಳಿಕೆ,ಮರುಹೇಳಿಕೆ,ಅವುಗಳಿಗೆ ಮಾಧ್ಯಮಗಳ,ಜನರ ಪ್ರತಿಕ್ರಿಯೆಗಳು,ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಏನು ಎತ್ತ ಎಂದು ಇತರ ಬುದ್ಧಿಜೀವಿಗಳ ಪಾಠಗಳಿಂದ ತುಂಬಿ ಹೋಗಿದೆ. ಈರುಳ್ಳಿ ಬೆಲೆ ಎಷ್ಟು ಏರಿತು,ರುಪಾಯಿ ಎಷ್ಟು ಆಳಕ್ಕೆ ಬಿತ್ತು ಇತ್ಯಾದಿಗಳ ಕಡೆಗೆ ನಮಗೆ ಆಸಕ್ತಿಯಿಲ್ಲ. ಅನಂತಮೂರ್ತಿಯವರು ಏನು ಹೇಳಿದ್ದಾರೆ?ಈಗ ಎಲ್ಲಿದ್ದಾರೆ?ಏನು ಮಾಡುತ್ತಿದ್ದಾರೆ?ಇದೇ ಮುಖ್ಯವಾಗಿದೆ. ಇದರ ಜತೆಗೆ ಈಗ ನಮ್ಮ ಖ್ಯಾತ ದಲಿತ ಮತ್ತು ಬಂಡಾಯ ಸಾಹಿತಿಗಳಾದಂತಹ ಮಾನ್ಯ ದೇವನೂರು ಮಹಾದೇವ ಅವರು ಬೆಂಗಳೂರು ಸುತ್ತಮುತ್ತಲಿನ ಬ್ರಾಹ್ಮಣ ಮತ್ತು ಲಿಂಗಾಯಿತರ townshipಗಳನ್ನು  ಪ್ರಾಣಹಾನಿ ಆಗದಂತೆ ಬಾಂಬ್ ಹಾಕಿ ನಾಶಪಡಿಸಲೇಬೇಕು ಎಂದು “ಫತ್ವಾ” ಹೊರಡಿಸಿದ್ದಾರೆ. . ಈ ಬಾಂಬ್ ಯೋಜನೆಯನ್ನು ಅವರು ಹೇಳಿದ್ದು ಕರ್ನಾಟಕ ಕೇಂದ್ರೀಯ ವಿ ವಿ ಮತ್ತು ಗುಲ್ಬರ್ಗ ವಿ ವಿ ಸಂಯುಕ್ತವಾಗಿ ಆಯೋಜಿಸಿದ ಕರ್ನಾಟಕ ದಲಿತ ಚಳುವಳಿ ಹಾಗು ಸಾಹಿತ್ಯದ “ಉದ್ಘಾಟನಾ” ಸಮಾರಂಭದಲ್ಲಿ. ಇದುವರೆಗೆ ವಿ ವಿ ಗಳ ಕೆಲವು ಅಧ್ಯಾಪಕರು ಮತ್ತು ಪ್ರಾಧ್ಯಾಪಕರು ನಕ್ಸಲರ ಮತ್ತು ಮಾವೋವಾದಿಗಳ ಹಿಂಸೆಗೆ ಬೌದ್ಧಿಕ ಬೆಂಬಲವನ್ನು ಮಾತ್ರ ಕೊಡುತ್ತಿದ್ದರು. ಇನ್ನು ಮುಂದೆ ಭೌತಿಕ ಬೆಂಬಲವನ್ನೂ ಸಹ ನಿರ್ಭಯವಾಗಿ ನೀಡಬಹುದು. ಏಕೆಂದರೆ ಬುದ್ಧಿಜೀವಿಗಳು ಹೇಳಿದ ಮೇಲೆ ಮುಗಿಯಿತು. ಅವರು ಏನೇ ಮಾಡಿದರೂ, ಹೇಳಿದರೂ ಅದು ಅಪರಾಧವಲ್ಲ.

ಮತ್ತಷ್ಟು ಓದು »

3
ಆಕ್ಟೋ

ಪ್ರೊ.ಬಾಲು ಅವರಿಗೆ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

Prof Balu2ಕರ್ನಾಟಕದಲ್ಲಿ ಈಗ ಗೌರವ ಡಾಕ್ಟರೇಟ್ ಪದವಿ ಎನ್ನುವುದು ಮಾರುಕಟ್ಟೆಯಲ್ಲಿ ದೊರೆಯುವ ವಸ್ತುವಾಗಿರುವುದು ನಮಗೆಲ್ಲ ಗೊತ್ತಿರುವ ವಿಚಾರವೇ. ಆದರೆ ಯುರೋಪಿನ ವಿಶ್ವವಿದ್ಯಾಲಯಗಳಲ್ಲಿ ಇದು ಇನ್ನೂ ತನ್ನ ಘನತೆ ಹಾಗೆ ಉಳಿಸಿ ಕೊಂಡಿದೆ. ಉದಾಹರಣೆಗೆ, ಪ್ರೊಫೆಸರ್ ಎಸ್. ಎನ್. ಬಾಲಗಂಗಾಧರ ರಾವ್ ಅವರಿಗೆ ೩೦/೯/೨೦೧೩ರಂದು  ಗೌರವ ಡಾಕ್ಟರೇಟ್ ಪದವಿ ಮತ್ತು ಬಂಗಾರದ ಪದಕದೊಂದಿಗೆ ಸನ್ಮಾನ ಮಾಡಿದ ಚೆಕ್ ಗಣರಾಜ್ಯದ ಪಾರ್ದುಬಿತ್ಸೆ ವಿಶ್ವವಿದ್ಯಾಲಯ ತನ್ನ ೧೫ ವರ್ಷಗಳ ಇತಿಹಾಸದಲ್ಲಿ ಕೊಟ್ಟಿದ್ದು ಕೇವಲ ಬೆರಳೆಣಿಕೆಯಷ್ಟು ಗೌರವ ಡಾಕ್ಟರೇಟ್ ಪದವಿಗಳನ್ನು ಮಾತ್ರ.

ಈ ಸಂದರ್ಭದಲ್ಲಿ ಎಸ್. ಎನ್. ಬಾಲಗಂಗಾಧರ ರಾವ್ ಅವರ ಸಾಧನೆಗಳ ಕುರಿತು ಅಲ್ಲಿನ ಸಮಾಜ ವಿಜ್ಞಾನಗಳ ಡೀನ್ ಮಾಡಿದ ಭಾಷಣದ ಕನ್ನಡ ಅವತರಣಿಕೆಯನ್ನು ನಾವಿಲ್ಲಿ ಕೊಡುತ್ತಿದ್ದೇವೆ.

–      ನಿಲುಮೆ

 

ಮತ್ತಷ್ಟು ಓದು »

2
ಆಕ್ಟೋ

ನನ್ನ ಗಾಂಧೀಜಿ

-ಬಿಂಧು ಮಾಧವಿ,ಹೈದರಾಬಾದ್

ಗಾಂಧೀಜಿ ನಮ್ಮೆಲ್ಲರಿಗೂ ಸೇರಿದವರು, ಹಾಗಿದ್ದರೂ ಏಕೆ ಈ ಶಿರೋನಾಮೆ ಎಂದು ಕೇಳುವಿರಾ? ಏಕೆಂದರೆ ಗಾಂಧೀಜಿ ಎನ್ನುತ್ತಿದ್ದಂತೆ ಒಬ್ಬೊಬ್ಬೊರಗೂ ಅವರದೇ ಆದ ಒಂದು ರೂಪು ಮನಸ್ಸಿನಲ್ಲಿ ಮೂಡುವುದು. ಗಾಂಧೀಜಿ ಎಂದರೆ ನನ್ನ ಮನಸ್ಸಿನಲ್ಲಿ ಬರುವ ಚಿತ್ರಗಳ ಬಗ್ಗೆ ಈ ಲೇಖನ, ಹಾಗಾಗಿ ಇದು, ನನ್ನ ಗಾಂಧೀಜಿ.

ಮಹಾತ್ಮಾ ಗಾಂಧಿ ಎನ್ನುತ್ತಿದ್ದಂತೆ ಒಂದೇ ಎರಡೇ ಹಲವಾರು ಚಿತ್ರಗಳು, ವಿಷಯಗಳು, ಕವಿತೆಗಳು ಮತ್ತು ಪುಸ್ತಕಗಳು ನನ್ನ ಮುಂದೆ ಬಂದು ನಿಲ್ಲುತ್ತವೆ. ಎಲ್ಲಿಂದ ಪ್ರಾರಂಭಿಸಲಿ? ಬಹುಶಃ ಕಣ್ಣಮುಂದೆ ಬಂದು ನಿಲ್ಲುವ ಮೊಟ್ಟಮೊದಲ ಚಿತ್ರ ರಿಚರ್ಡ್ ಅಟೆನ್ ಬರೋ ತೆಗೆದೆ ಆಂಗ್ಲ ಚಲನ ಚಿತ್ರ  ’ಗಾಂಧಿ’ . ಅದರಲ್ಲಿನ ಗಾಂಧಿ ಪಾತ್ರಧಾರಿ ಬೆನ್ ಕಿಂಗ್ಸ್ಲೇ. ಅವರು ಯಾವತ್ತಿದ್ದರೂ ನಮ್ಮ ಪಾಲಿಗೆ ಗಾಂಧಿಯೇ ಹೊರತು ಬೆನ್ ಕಿಂಗ್ಸ್ ಲೇ ಅಲ್ಲ. ಅದರಲ್ಲಿನ ಚಾರ್ಲ್ಸ್ ನ ಪಾತ್ರ, ಕಸ್ತೂರಿ ಬಾ ಪಾತ್ರ, ಜಿನ್ನಾ ಎಲ್ಲರೂ ಪಾತ್ರಗಳಾಗಿ ಕಾಣುವರೇ ಹೊರತು, ಪಾತ್ರಧಾರಿಗಳು ಎಂದು ಎನಿಸುವುದಿಲ್ಲ. ಚಿಕ್ಕಂದಿನಿಂದಲೇ ನಮಗೆ ಈ ರೀತಿಯ ಚಿತ್ರಗಳನ್ನು ತೋರಿಸಿ ನಮಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ, ದೇಶಭಕ್ತಿಯ ಬಗ್ಗೆ, ಸಮಾನತೆಯ ಬಗ್ಗೆ ಅರಿವು ಮೂಡಿಸಿದ ನನ್ನ ತಂದೆ ತಾಯಿಗೆ ನಾನು ಎಂದೂ ಚಿರ ಋಣಿ. ಗಾಂಧೀಜಿ ಬ್ರಿಟಿಷರ ವಿರುದ್ಧ ಹೋರಾಡಿದರು, ಆ ಬ್ರ‍ಿಟಿಷರೇ ಏಕೆ ಇಡೀ ವಿಶ್ವವೇ ಗಾಂಧೀಜಿಯ ಮುಂದೆ ತಲೆಬಾಗಿತು. ನೋಡು ಒಬ್ಬ ಆಂಗ್ಲ ನಿರ್ದೇಶಕನು ಗಾಂಧಿ ಚಿತ್ರವನ್ನು ಎಷ್ಟರಮಟ್ಟಿಗೆ ತೆಗೆದಿದ್ದಾನೆ, ಅದನ್ನು ಆಂಗ್ಲ ಕಲಾವಿದ ಬೆನ್ ಕಿಂಗ್ಸ್ ಲೇ ಎಷ್ಟು ಸಮಂಜಸವಾಗಿ ಮಾಡಿದ್ದಾನೆ ಎಂದು ನನ್ನ ಅಮ್ಮ ಹೇಳಿದ ನುಡಿಗಳು ಇಂದಿಗೂ ನೆನಪಿದೆ. ಹಾಗಾಗಿ ನಾನೂ ಕೂಡ ನನ್ನ ಐದು ವರ್ಷದ ಮಗಳಿಗೆ ಇಂದು ಬೆಳಿಗ್ಗೆ youtube ನಲ್ಲಿ ಗಾಂಧಿ ಚಿತ್ರವನ್ನು ಹಾಗಿ ತೋರಿಸುತ್ತಿದ್ದೆ. ಅವಳೂ ಆಸಕ್ತಿಯಿಂದ ನೋಡುತ್ತಿದ್ದಳು, ಗೆಳೆಯರು ಬಂದು ಆಡಲು ಕರೆಯುವವರೆಗೆ!! ಒಂದು ವೇಳೆ ಅವಳು ಚಿತ್ರವನ್ನು ಕಡೆಯವರೆಗೆ ನೋಡಿದರೆ, ಅವಳು ಗಾಂಧೀಜಿಯನ್ನು ಏಕೆ ಕೊಂದರು ಎಂದು ಕೇಳುತ್ತಾಳೆ. ಐದು ವರ್ಷದ ಅವಳಿಗೆ ಸತ್ಯಕ್ಕಾಗಿ ಹೋರಾಡಿದವರಿಗೆ, ನ್ಯಾಯಕ್ಕಾಗಿ ಹೋರಾಡಿದ ಗಾಂಧಿತಾತನಿಗೆ ಈ ರೀತಿಯ ಅಂತ್ಯ ಎಂದು ತಿಳಿದರೆ, ಅವಳಿಗೆ ಸತ್ಯಕ್ಕೇ ಜಯ, ಎಂಬ ಮಾತಿನ ಮೇಲೆ ನಂಬಿಕೆಯೇ ಬರುವುದಿಲ್ಲ. ಹಾಗಾಗಿ ಚಿತ್ರವನ್ನು ಕೊನೆಯ ತನಕ ತೋರಿಸಬೇಕೇ ಬೇಡವೇ ಎಂಬ ಪ್ರಶ್ನೆ ನನ್ನ ಮುಂದೆ!

ಮತ್ತಷ್ಟು ಓದು »

2
ಆಕ್ಟೋ

ಶಾಸ್ತ್ರಿಗಳಿಗೊಂದು ಸಲಾಂ ಹೇಳೋಣ ಬನ್ನಿ!

– ರಾಕೇಶ್ ಶೆಟ್ಟಿ

ಶಾಲೆ ಮುಗಿಸಿ ಮನೆಗೆ ಹೊರಟ ಕೆಲ ಮಕ್ಕಳು ದಾರಿಯಲ್ಲಿ ಸಿಕ್ಕ ಮಾವಿನ ತೋಟಕ್ಕೆ ಲಗ್ಗೆಯಿಟ್ಟರು.ಕೆಲ ಹುಡುಗರು ಮರ ಹತ್ತಿ ಮಾವಿನ ಹಣ್ಣು ಕೀಳುತಿದ್ದರೆ, ಒಬ್ಬ ಬಾಲಕ ಮಾತ್ರ ಕೆಳಗೆ ನಿಂತು ನೋಡುತಿದ್ದ.ಮಾಲಿ ಅಲ್ಲಿಗೆ ಬಂದ ಕೂಡಲೇ ಮರ ಹತ್ತಿದ್ದ ಹುಡುಗರು ಕಾಲ್ಕಿತ್ತರೆ, ಆ ಬಾಲಕ ಸಿಕ್ಕಿಬಿದ್ದ.ಮಾಲಿ ಹುಡುಗನಿಗೆ ಬೈದು,ಥಳಿಸಲಾರಂಭಿಸಿದ ಆ ಬಾಲಕ ‘ನನ್ನನ್ನು ಬಿಟ್ಟು ಬಿಡಿ,ನಾನು ಅಪ್ಪ ಇಲ್ಲದ ಹುಡುಗ’ ಎಂದು ಅಂಗಲಾಚಿದ.ಕರಗಿದ ಮಾಲಿ,’ಅಪ್ಪ ಇಲ್ಲದವನು ಇನ್ನು ಮೇಲೆ  ಜವಾಬ್ದಾರಿಯುತವಾಗಿ ಇರುವುದನ್ನು ಕಲಿ’ ಎಂದು ಹೇಳಿ ಬಿಟ್ಟುಬಿಟ್ಟ.ಅಲ್ಲಿಂದ ಇನ್ನೆಂದು ಇಂತ ಕೆಲಸ ಮಾಡುವುದಿಲ್ಲವೆಂದು ಪ್ರತಿಜ್ಞೆ ಮಾಡಿ ಹೊರಟ ಆ ಹುಡುಗನಿಗೆ ಆಗ ೬-೭ ವರ್ಷವಿದ್ದಿರಬೇಕು.ಬಹುಷಃ ಅಂದೇ ಆತ ತನ್ನ ನಡೆ-ನುಡಿ ಆದರ್ಶಪ್ರಾಯವಾಗಿರಬೇಕು ಅಂತ ನಿರ್ಧರಿಸಿಬಿಟ್ಟಿರಬೇಕು.ಅಂದುಕೊಂಡಂತೆ ಮಾಡಿಬಿಟ್ಟನಲ್ಲ ಪುಣ್ಯಾತ್ಮ…!

ಮುಂದೆ ದೇಶದ ಎರಡನೇ ಪ್ರಧಾನಿಯಾಗಿ ತನ್ನ ಸರಳತೆ,ಸಜ್ಜನಿಕೆ,ಪಾರದರ್ಶಕತೆ,ನೈತಿಕತೆಯಿಂದಾಗಿ ಗಮನ ಸೆಳೆದ. ಆಯುಬ್ ಖಾನನ ಪಾಕಿಸ್ತಾನದ ಜುಟ್ಟು ಹಿಡಿದು ಬಗ್ಗಿಸಿದ, ಆ ವಾಮನ ಮೂರ್ತಿಯ ಹೆಸರು ‘ಲಾಲ್ ಬಹಾದ್ದೂರ್ ಶಾಸ್ತ್ರೀಜಿ’.

ಮತ್ತಷ್ಟು ಓದು »

2
ಆಕ್ಟೋ

ಗಾಂಧೀಜಿ ಕೇವಲ ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವಕ್ಕೂ ಸಲ್ಲುವ ಶ್ರೇಷ್ಠ ವ್ಯಕ್ತಿ

ಅಶ್ವಿನ್ ಅಮೀನ್ ಅವರ “ಜಾತ್ಯಾತೀತ ‘ಜಿನ್ನಾ’ ಖಳ ನಾಯಕನಾದರೆ ‘ಗಾಂಧೀ’ ಯಾರು?..” ಲೇಖನ ಪ್ರತಿಕ್ರಿಯೆಯಾಗಿ, “ನರೇಶಕುಮಾರ ಹೆಗಡೆ ದೊಡ್ಮರಿ” ಅವರು ಬರೆದ ಈ ಸುಧೀರ್ಘ ಪ್ರತಿಕ್ರಿಯೆ,ಉಳಿದ ಪ್ರತಿಕ್ರಿಯೆಗಳ ನಡುವೆ ಕಳೆದು ಹೋಗದೆ,ಗಾಂಧೀಜಿಯವರ ಬಗ್ಗೆ ಒಂದಿಷ್ಟು ವಿಷಯ ತಿಳಿದುಕೊಳ್ಳಬಯಸುವವರ ಕಣ್ಣಿಗೂ ಕಾಣಲಿ – ನಿಲುಮೆ

– ನರೇಶಕುಮಾರ ಹೆಗಡೆ ದೊಡ್ಮರಿ

ನಮ್ಮ ಅಭಿಪ್ರಾಯಗಳು ರೂಪುಗೊಳ್ಳುವುದು ಹೇಗೆ?…
1- ಇತರರು ಹೇಳಿದ್ದನ್ನು/ವಿವರಿಸಿದ್ದನ್ನು ಕೇಳುವುದರಿಂದ/ಓದುವುದರಿಂದ.
2- ಘಟನೆಯೊಂದನ್ನು ಕಣ್ಣಾರೆ ನೋಡುವುದರಿಂದ
ಈ ಮೇಲಿನ ಎರಡರಲ್ಲಿ ನಿಮ್ಮ ಅಭಿಪ್ರಾಯ ರೂಪುಗೊಂಡ ಬಗೆ 1ನೇ ಬಗೆಯಿಂದ ಎಂದು ತಿಳಿಯುತ್ತೇನೆ. ಹಾಗೂ ಈ ಎರಡನೇ ಬಗೆಯಿಂದ ಅಭಿಪ್ರಾಯ ರೂಪಿಸಿಕೊಳ್ಳುವಲ್ಲಿ ಮತ್ತೆರಡು ಬಗೆಗಳಿವೆ:
1- ಇತಿಹಾಸದ ಕುರಿತಾಗಿನ ಕೆಲವೇ ಲೇಖನಗಳನ್ನು ಓದುವುದರಿಂದ
2- ಸಂಪೂರ್ಣ ಇತಿಹಾಸವನ್ನು ಕೂಲಂಕುಷವಾಗಿ ಅಭ್ಯಸಿಸುವುದರಿಂದ
ಹಾಗೂ ಈ ಮೇಲಿನ ವಿಧದಲ್ಲಿ ತಾವು ಯಾವ ಬಗೆಯನ್ನು ಅನುಸರಿಸಿದ್ದೀರಿ ಈ ಲೇಖನವನ್ನು ಬರೆಯುವ ಮೊದಲು ಎಂಬುದನ್ನು ನಾನು ಕೇಳಿದರೆ ದಯವಿಟ್ಟು ಅದು ಈ ಲೇಖನದ ಕುರಿತೇ ಹೊರತು ತಮ್ಮ ಕುರಿತಲ್ಲ.

ನಾವು ಕೇವಲ ಓದಿ/ಕೇಳಿ ಪಡೆದ ಜ್ಞಾನದಿಂದ ಈಗಾಗಲೇ ಮಹಾನ್ ಎನಿಸಿರುವ ವ್ಯಕ್ತಿಯೊಬ್ಬನನ್ನು ಆತ ಮಾಡಿದ ಒಳ್ಳೆಯ ಕರ್ಮಗಳನ್ನು ತಿಳಿದು ಹೊಗಳಬಹುದೇ ಹೊರತು , ಆ ಅಲ್ಪಜ್ಞಾನವನ್ನು ಯಾರನ್ನಾದರೂ ತೆಗಳಲು ಬಳಸಿಕೊಳ್ಳಬಾರದೆಂಬುದು ನನ್ನ ಅನಿಸಿಕೆ. ಹಾಗಾಗಿ ನಾನು ಗಾಂಧೀಜಿಯವರ ಪರ ಬರೆಯುತ್ತಿದ್ದೇನೆಯೇ ಹೊರತು ಜಿನ್ನಾರವರ ವಿರುದ್ಧವಲ್ಲ.
ಮತ್ತಷ್ಟು ಓದು »

1
ಆಕ್ಟೋ

ಲೋಕಾಯುಕ್ತ ಆಸ್ತಿ ವಿವರ ನೀಡುವುದೇ ಯುಕ್ತ!

– ತುರುವೇಕೆರೆ ಪ್ರಸಾದ್

RTI       ಈಚೆಗೆ ಪತ್ರಿಕೆಗಳಲ್ಲಿ ಹಲವು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ ಎಂಬ ಸಂಗತಿ ವರದಿಯಾಗಿತ್ತು. ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮಾಜಿ ಜನಪ್ರತಿನಿಧಿಗಳು ಕಡ್ಡಾಯವಾಗಿ ಪ್ರತಿವರ್ಷ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕಿದೆ. ಆದರೆ ಹಲವರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅಷ್ಟೇ ಅಲ್ಲ, ಜನಪ್ರತಿನಿಧಿಗಳು ಸಲ್ಲಿಸಿರುವ ಆಸ್ತಿ ವಿವರವೂ ಎಷ್ಟರ ಮಟ್ಟಿಗೆ ಸತ್ಯ ಎನ್ನುವುದನ್ನು ಸಾರ್ವಜನಿಕರು  ತಿಳಿಯಲಾಗುತ್ತಿಲ್ಲ. ಏಕೆಂದರೆ ಲೋಕಾಯುಕ್ತ ಜನಪ್ರತಿನಿಧಿಗಳ ಆಸ್ತಿ ವಿವರಗಳನ್ನು ಮಾಹಿತಿ ಹಕ್ಕು ಕಾಯಿದೆಯಡಿ ನೀಡಲು ನಿರಾಕರಿಸುತ್ತದೆ.

       ಕಳೆದ ಮಾರ್ಚ್ 18ರಂದು ನಾನು ವಿಧಾನಸಭಾ ಚುನಾವಣೆಗಳ ಹಿನ್ನಲೆಯಲ್ಲಿ ಕೆಲವು ಜನಪ್ರತಿನಿಧಿಗಳು ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರವನ್ನು ಮಾಹಿತಿ ಹಕ್ಕು ಕಾಯಿದೆಯಡಿ  ನೀಡುವಂತೆ ಕೋರಿದ್ದೆ. ಆದರೆ ಲೋಕಾಯುಕ್ತ ಆ ಮಾಹಿತಿ ನೀಡಲು ನಿರಾಕರಿಸಿತು. ಅದಕ್ಕೆ ಲೋಕಾಯುಕ್ತ ಕೊಟ್ಟ ಕಾರಣ ಮಾಹಿತಿ ಹಕ್ಕು ಕಾಯಿದೆಯಡಿ ನಾಗರಿಕರಿಗೆ ಸಾರ್ವಜನಿಕ ಪ್ರಾಧಿಕಾರದ ಸಾರ್ವಜನಿಕ ಸಂಗತಿಗಳ ಬಗ್ಗೆ ಮಾತ್ರ ಮಾಹಿತಿ ನೀಡಲಾಗುತ್ತದೆ. ನೀವು ಕೆಲವು ವ್ಯಕ್ತಿಗಳ ಖಾಸಗಿ ವಿವರಗಳ ಬಗ್ಗೆ ಮಾಹಿತಿ ಕೇಳಿದ್ದೀರಿ. ಇದು ಸಾರ್ವಜನಿಕ ಪ್ರಾಧಿಕಾರ ಅಥವಾ ಆಢಳಿತಕ್ಕೆ ಸಂಬಂಧಿಸಿದ ಸಾರ್ವಜನಿಕ ವಿಷಯವಲ್ಲ ಎಂಬುದು.(The intention of the legislation is to provide right to information of a citizen pertaining to public affairs of the public authority, but you have sought the information of an individual which is purely personal one and is not with respect to public affairs)

ಮತ್ತಷ್ಟು ಓದು »