ವಿಷಯದ ವಿವರಗಳಿಗೆ ದಾಟಿರಿ

Recent Articles

18
ಸೆಪ್ಟೆಂ

ಅನಂತ ಮುಖದ ಮೂರ್ತಿಯವರ ಕಾಲ್ಪನಿಕ ಸಂದರ್ಶನ

– ಮು ಅ ಶ್ರೀರಂಗ ಬೆಂಗಳೂರು

anantamurthyಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ನಮ್ಮ ಹೆಮ್ಮೆಯ ಯು ಆರ್ ಅನಂತಮೂರ್ತಿಯವರು ಮತ್ತೆ ಸುದ್ದಿಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರ ಬಗ್ಗೆ ಲೇಖನವೊಂದನ್ನು ಬರೆಯುವುದಕ್ಕಿಂತ ಒಂದು ಕಾಲ್ಪನಿಕ ಸಂದರ್ಶನದ ಮೂಲಕ ಅವರ ನಡೆ-ನುಡಿಗಳನ್ನು ತಿಳಿದುಕೊಳ್ಳಬಹುದು ಎಂದು ಅನಿಸಿತು. ಅನಂತಮೂರ್ತಿಯವರದ್ದು ಸಮ್ಮೋಹಕವಾದ  ರೂಪ;ಅವರ ಭಾಷಣದ ಶೈಲಿ ಅನನ್ಯ. ಆ ಮಾತಿನ ಶೈಲಿಯನ್ನು ಜ್ಞಾಪಿಸಿಕೊಂಡು ಈ ಕಾಲ್ಪನಿಕ ಸಂದರ್ಶನವನ್ನು ಓದಿದರೆ ನಿಮಗೆ ಆಪ್ತವೆನಿಸಬಹುದು. ಒಮ್ಮೆ ಪ್ರಯತ್ನಿಸಿ.

ಪ್ರಶ್ನೆ: ನಿಮ್ಮನ್ನು ಗುಲ್ಬರ್ಗ ಕೇಂದ್ರಿಯ ವಿ. ವಿ. ಕುಲಪತಿಗಳನ್ನಾಗಿ ಈಗಾಗಲೇ ಕೆಂದ್ರ ಸರ್ಕಾರ ನೇಮಿಸಿದೆ. ಇದಕ್ಕೂ ಮತ್ತು ಹಿಂದೆ ನಡೆದ ಅಸ್ಸಾಂ ಹಾಗು ಮುಂಬೈ ಗಲಭೆಗಳ ಬಗ್ಗೆ ತಾವು ಇದುವರೆಗೂ ಏನೂ ಹೇಳಿಕೆ ನೀಡದೆ ಇರುವುದಕ್ಕೂ ಏನಾದರು ಸಂಬಂಧ,ಹಿಡನ್ ಅಜೆಂಡಾ ಉಂಟೆ? ಜತೆಗೆ ಇತ್ತೀಚಿನ ಉತ್ತರ ಪ್ರದೇಶದ ಗಲಭೆಗಳ ಬಗ್ಗೆಯೂ ತಾವು ಪ್ರತಿಕ್ರಿಯಿಸಿಲ್ಲ ಏಕೆ?

ಅನಂತಮೂರ್ತಿ: ನೋಡಿ ಇದಕ್ಕೆ ಹಿಡನ್ ಅಜೆಂಡಾ ಎಂಬ ಪದದ ಪ್ರಯೋಗ ಸರಿಯಲ್ಲ. ಈ ಪ್ರಶ್ನೆಗೆ ನಾನು ಎರಡು ಆಯಾಮಗಳ ಮೂಲಕ ಉತ್ತರಿಸಲು ಪ್ರಯತ್ನಿಸುತ್ತೇನೆ. ಮೊದಲನೆಯದಾಗಿ ನಾನು ಮತ್ತು ನನ್ನ ವಿಚಾರವಾದಿ ಗೆಳೆಯರು ನಂಬಿರುವ ಸೆಕ್ಯುಲರಿಸಂ ಪ್ರಕಾರ ನಾವು ಅಂದರೆ ಬಹುಸಂಖ್ಯಾತರು ಯಾವಾಗಲು ಅಲ್ಪಸಂಖ್ಯಾತರ ಭಾವನೆಗಳಿಗೆ ಬೆಲೆ ಕೊಡಬೇಕು. ಗಾಂಧೀಜಿಯವರು ಹೇಳಿದ್ದೂ ಇದನ್ನೇ. ನಮ್ಮ ಪ್ರಜಾತಂತ್ರದ ತಳಪಾಯ ನಿಂತಿರುವುದು ನಮ್ಮ ಹಿರಿಯರ ಈ ಆಶಯಕ್ಕೆ ನಾವು ಧಕ್ಕೆ ಬಾರದಂತೆ ನಡೆದುಕೊಳ್ಳುವುದರಲ್ಲಿ ಮಾತ್ರ. ಈ ಕಾರಣದಿಂದ ನಾನು ಮತ್ತು ನನ್ನ ವಿಚಾರವಾದಿ ಗೆಳೆಯರು ತಾವು ಹೇಳಿದ ಆ ಎರಡೂ ಘಟನೆಗಳ ಬಗ್ಗೆ (ಅದು ಗಲಭೆಯಲ್ಲ) ಮೌನವಹಿಸಿದ್ದು. ಇನ್ನು ಎರಡನೇ ಆಯಾಮವೆಂದರೆ ನಾನು ಈ ನನ್ನ ೮೦ರ ವಯಸ್ಸಿನಲ್ಲಿ ಕುಲಪತಿಯಾಗಲು ಒಪ್ಪಿಕೊಂಡಿರುವುದಕ್ಕೆ ನನಗೆ “ಕುರ್ಚಿ”ಯ ವ್ಯಾಮೋಹ ಕಾರಣವೆಂದು ಅಲ್ಲಲ್ಲಿ ಕೆಲವರು ಅಂದು ಕೊಂಡಿರಬಹುದು. ಆದರೆ ಅವರು ಮರೆತಿರಬಹುದಾದ ಒಂದು ಸಂಗತಿಯೆಂದರೆ ನಾನು ಕುಲಪತಿಯಾಗಿರುವುದು ನಮ್ಮ ಸುವರ್ಣ ಕರ್ನಾಟಕದ ಒಂದು ಕೇಂದ್ರಿಯ ವಿ ವಿ ಗೆ. ಕುಲಪತಿಯಾಗಿ ಅಲ್ಲಿ ನನಗೆ ದೊರಕಬಹುದಾದಂತಹ ಅಧಿಕಾರ ಏನಿದೆ ಅದರಿಂದ ಆ ಪ್ರದೇಶದಲ್ಲಿ ಶೈಕ್ಷಣಿಕವಾಗಿ ಬದಲಾವಣೆಯ ಒಂದು ವಾತಾವರಣ ನಿರ್ಮಿಸಲು ಪ್ರಯತ್ನಿಸುವ ಆಸೆ ಇದೆ. ಅದರ ರೂಪ-ರೇಷೆಗಳ ಬಗ್ಗೆ ನಾನು ಗಾಢವಾಗಿ ಯೋಚಿಸುತ್ತಿದ್ದೆ. ನಾನು “ಮೌನಿ”ಯಾಗಿರಲು ಇದೂ ಒಂದು ಕಾರಣವಾಗಿರಬಹುದು. ಇನ್ನು ಉತ್ತರ ಪ್ರದೇಶದ ಘಟನೆಗಳ ಬಗ್ಗೆ “ಸದ್ಯದ”ಪರಿಸ್ಥಿತಿಯಲ್ಲಿ ಯಾವ ರೀತಿ ಪ್ರತಿಕ್ರಿಯಿಸಿದರೆ ಅದು ಸೆಕ್ಯುಲರ್ ಅನಿಸಿಕೊಳ್ಳಬಹುದುದೆಂದು ಯೋಚಿಸುತ್ತಿದ್ದೇನೆ.

ಮತ್ತಷ್ಟು ಓದು »

17
ಸೆಪ್ಟೆಂ

ಅನ೦ತಮೂರ್ತಿ ,ಮೋದಿ ಮತ್ತು ಅಭಿವ್ಯಕ್ತಿ ಸ್ವಾತ೦ತ್ರ್ಯ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Modi N URAಅನುಚಿತ ಕಾರಣಗಳಿಗೆ ಯು.ಆರ್. ಅನ೦ತಮೂರ್ತಿ ಸುದ್ದಿಯಾಗುವುದು ಹೊಸದೇನಲ್ಲ.ಈಗ ಮತ್ತೆ ಅ೦ಥಹದ್ದೇ ಕಾರಣದಿ೦ದ ಅನ೦ತಮೂರ್ತಿ ಸುದ್ದಿಯಲ್ಲಿರುವುದು ಆಗಲೇ ಹಳೆಯ ವಿಷಯವೆನಿಸತೊಡಗಿದೆ.’ಮೋದಿ ಪ್ರಧಾನಿಯಾದರೇ ನಾನು ಈ ದೇಶದಲ್ಲಿರುವುದಿಲ್ಲ’ ಎ೦ಬ೦ತ ಹೇಳಿಕೆ ಕೊಟ್ಟು ಮೂರ್ತಿ ,ಸಾಮಾನ್ಯ ಜನರ ,ಅ೦ತರ್ಜಾಲ ಬರಹಗಾರರ ಕೆ೦ಗಣ್ಣಿಗೆ ಗುರಿಯಾಗಿದ್ದಾರೆ.ಅವರ ಪರ ವಿರೋಧದ ಮಾತುಗಳು ಧಾರಾಕಾರವಾಗಿ ಸಾಮಾಜಿಕ ತಾಣಗಳಲ್ಲಿ ,ವೃತ್ತಪತ್ರಿಕೆಗಳಲ್ಲಿ ಹರಿಯತೊಡಗಿವೆ.ಅವರು ದೇಶವನ್ನ ಬಿಟ್ಟು ಪಾಕಿಸ್ತಾನಕ್ಕೋ,ಅಫಘಾನಿಸ್ತಾನಕ್ಕೋ ಹೋಗಲಿ ಎ೦ದು ಕೆಲವರೆ೦ದರೇ, ಹಾಗೆಲ್ಲ ಅವರ ಬಗ್ಗೆ ಮಾತನಾಡಬಾರದು ,ಅವರು ಹಿ೦ದೆಲ್ಲ ಕನ್ನಡ ಸಾಹಿತ್ಯಕ್ಕೆ ಕೊಟ್ಟ ಕೊಡುಗೆಯನ್ನು ಮರೆತು ಮಾತನಾಡುವುದು ತಪ್ಪು ಎ೦ದು ವಾದಿಸುತ್ತಾರೆ ಕೆಲವರು.ಬಿಡಿ ಅದು ಅವರವರ ಭಾವಕ್ಕೆ,ಅವರವರ ಭಕುತಿಗೆ.

ಆದರೆ ಇಲ್ಲೊ೦ದು ವಿಷಯವನ್ನು ಗಮನಿಸಲೇಬೇಕು. ಅನ೦ತಮೂರ್ತಿ ಜಾತ್ಯಾತೀತವಾದಿಗಳೆ೦ದು ಹಾಗಾಗಿ ಅವರು ಏನೇ ಹೇಳಿದರೂ ಹಿ೦ದೂಗಳು ಅವರನ್ನು ಹೀಗೆಳೆಯುತ್ತಾರೆ೦ದೂ ಕೆಲವರು ವಾದಿಸುತ್ತಾರೆ.ಅಲ್ಲದೇ ಎಸ್.ಎಲ್ ಭೈರಪ್ಪ ಹಿ೦ದುತ್ವವಾದಿಯಾಗಿರುವುದರಿ೦ದ ಅವರು ಏನೇ ಬರೆದರೂ ಅವರನ್ನು ಹೊಗಳಿ ಅಟ್ಟಕ್ಕೇರಿಸುತ್ತಾರೆ೦ಬುದೂ ಇವರ ವಾದ.ಇದು ಶುದ್ಧ ಮೂರ್ಖತನವೆನ್ನದೇ ಬೇರೆ ವಿಧಿಯಿಲ್ಲ.’ವ೦ಶವೃಕ್ಷ’ ದಲ್ಲಿನ ಸಾ೦ಪ್ರದಾಯಿಕ ಬ್ರಾಹ್ಮಣ ಮನೆಯಲ್ಲಿ ’ನಿಯೋಗ’( ಮಕ್ಕಳನ್ನು ಪಡೆಯುವುದಕ್ಕೋಸ್ಕರ ಗ೦ಡನನ್ನು ಹೊರತುಪಡಿಸಿ ಬೇರೊಬ್ಬನೊ೦ದಿಗೆ ಸ೦ಬ೦ಧ ಹೊ೦ದುವುದು) ಪದ್ದತಿಯಿ೦ದ ಜನಿಸುವ ಶ್ರೀನಿವಾಸ ಶ್ರೋತ್ರಿಯ ಪಾತ್ರವನ್ನು ಸೃಷ್ಟಿಸಿದವರು ಭೈರಪ್ಪನವರಲ್ಲವೇ…? ಸ೦ಗೀತದ ಕಥಾವಸ್ತುವಿದ್ದರೂ , ಒಬ್ಬ ಶಾಸ್ತ್ರೀಯ ಸ೦ಗೀತದ ಗುರುವೊಬ್ಬನೊ೦ದಿಗೆ ,ಅವನ ಶಿಷ್ಯೆಗಿರಬಹುದಾದ ಅನೈತಿಕ ಸ೦ಬ೦ಧ,ನಾಟ್ಯ ಪ್ರವೀಣೆಯೊಬ್ಬಳಿಗೆ ಅವಳ ಶಿಷ್ಯನೊ೦ದಿಗಿರಬಹುದಾದ ಸ೦ಬ೦ಧಗಳ ಬಗ್ಗೆ ಎಳೆ ಎಳೆಯಾಗಿ ಬಿಡಿಸಿಡುವ ’ಮ೦ದ್ರ’ ಯಾರ ಕಾದ೦ಬರಿ..?

ಮತ್ತಷ್ಟು ಓದು »

17
ಸೆಪ್ಟೆಂ

‘ನಕ್ಸಲ್ ವರಸೆ’ ಮತ್ತು ‘ಹೆಗ್ಗುರುತು’ ಕಥಾ ಸಂಕಲನಗಳನ್ನು ಕುರಿತಂತೆ … ಭಾಗ ೨

ಮು. ಅ. ಶ್ರೀರಂಗ,ಬೆಂಗಳೂರು

ನಕ್ಸಲ್ ವರಸೆ ಮತ್ತು ಹೆಗ್ಗುರುತು“ಹೆಗ್ಗುರುತು”ಗೆ ಪ್ರವೇಶ ರೂಪದಲ್ಲಿ ಮುನ್ನುಡಿ ಬರೆದಿರುವ ಮಲ್ಲಿಕಾರ್ಜುನ ಹೀರೆಮಠರು ಆ ಕತೆಗಳ ಸಾರಾಂಶ / ತಾತ್ಪರ್ಯ/ ಭಾಷ್ಯ ಹೀಗೆ ಬರೆದಿರುವುದರಿಂದ ಅದರಲ್ಲಿ ಚರ್ಚಿಸುವ ಅಂಶಗಳು ಅಷ್ಟಾಗಿ ಇಲ್ಲ. “ನಿಜಕವಲು”ಜತೆಗೆ ಸ್ತ್ರ್ರೀ ವಾದಿಗಳೂ ಸೇರಿದಂತೆ ಹಲವರ ಕೋಪಕ್ಕೆ ಕಾರಣವಾದ ಭೈರಪ್ಪನವರ “ಕವಲು”ಕಾದಂಬರಿಯನ್ನು ಹೋಲಿಸಿದ್ದಾರೆ. ಈ ತೌಲನಿಕ ಅಧ್ಯಯನ ಹೇಗೆ ಸಾಧ್ಯವೋ ತಿಳಿಯದಾಗಿದೆ. ಕವಲು ಮತ್ತು ನಿಜಕವಲುವಿನ ನೆಲೆಗಳೇ ಬೇರೆ ಬೇರೆ. ಕಾನೂನಿಗೂ ನ್ಯಾಯ-ನೀತಿಗೂ ನಡುವೆ ಇರುವ ಕಂದರ ಕವಲುವಿನ ಮುಖ್ಯ ಸಮಸ್ಯೆ. ಒಂದು ಒಳ್ಳೆಯ ಉದ್ದೇಶಕ್ಕಾಗಿ,ಜನ ಹಿತಕ್ಕಾಗಿ ಮಾಡಿದ ಕಾನೂನನ್ನೇ ಅದಕ್ಕೆ ವಿರುದ್ದವಾಗಿಯು ಉಪಯೋಗಿಸಿದಾಗ ಏನಾಗಬಹುದು ಎಂಬುದರಕದೆಗೆ ನಮ್ಮ ಗಮನವನ್ನು ಸೆಳೆಯುವುದು ಆ ಕಾದಂಬರಿಯ ಉದ್ದೇಶ. ದಾಂಪತ್ಯದಲ್ಲಿ ಹೊಂದಾಣಿಕೆ ಎಂಬುದು ಕೇವಲ ಗಂಡಸಿಗೆ ಮಾತ್ರ ಸೇರಿದ್ದಲ್ಲ;ಹೆಣ್ಣಿಗೂ ಆ ಕರ್ತವ್ಯದಲ್ಲಿ ಪಾಲಿದೆ. ತೀರ ಸಹಿಸಲು ಆಸಾಧ್ಯವಾದಾಗ ಬಿಡುಗಡೆ ಪಡೆಯುವುದರಲ್ಲಿ ತಪ್ಪೇನಿಲ್ಲ. ಇದನ್ನು ಭೈರಪ್ಪನವರು ವಿರೋಧಿಸುತ್ತಾರೆ ಎಂದು ಊಹಿಸುವುದು ತಪ್ಪಾಗುತ್ತದೆ.”ನಿಜ ಕವಲು”ವಿನಲ್ಲಿ ಬರುವ ಮಹಿಳಾ ಕಂಡಕ್ಟರ್ ರೀತಿಯಲ್ಲೇ ಇತರೆ ಉದ್ಯೋಗಸ್ಥ ಮಹಿಳೆಯರೂ ಸಹ ಒಂದಲ್ಲ ಒಂದು ವಿಧದಲ್ಲಿ ಸನ್ನಿವೇಶದಲ್ಲಿ :ವಾರೆ ನೋಟ”ಕ್ಕೆ ತುತ್ತಾಗ ಬಹುದಾದಂತಹವರೆ.”ಚಿಕ್ಕತಾಯಿ”ಕತೆ ಇದಕ್ಕೆ ಉದಾಹರಣೆ. ಕೊನೆಯಲ್ಲಿ ಅದು ಬೇರೆ ತಿರುವು ಪಡೆದರು ಸಹ ಪ್ರಾರಂಭದ ಹಂತಗಳನ್ನು ಮರೆಯಬಾರದಲ್ಲವೆ ಹೀಗಾಗಿ ದುಡಿಯುವ ಆಧುನಿಕ ಮಹಿಳೆಯ ಬಗ್ಗೆ ಭೈರಪ್ಪನವರದ್ದು “ವಾರೆ ನೋಟ”ಎಂಬ ಹಿರೇಮಠರ ಅಭಿಪ್ರಾಯ ಸರಿಯಿಲ್ಲ. ಜತೆಗೆ ಆಧುನಿಕ ಉದ್ಯೋಗಸ್ಥ ಮಹಿಳೆಯಿಂದಾಗಿ ನಮ್ಮ ಸನಾತನ ಸಂಸ್ಕೃತಿ ಕವಲು ದಾರಿ ಹಿಡಿದು ಹಾಳಾಗುತ್ತಿದೆ ಎಂಬ ಆತಂಕ ಭೈರಪ್ಪನವರನ್ನು ಕಾಡುತ್ತಿದೆ ಎಂಬ ಹಿರೇಮಠರ ಆರೋಪದಲ್ಲೂ ಹುರುಳಿಲ್ಲ. ಸನಾತನ ಸಂಸ್ಕೃತಿ ನಂಬಿಕೆಗಳಿಗೆ ಮುಜುಗುರ ತಂದಂತಹ “ಪರ್ವ”(ಮಹಾಭಾರತವನ್ನು”ಆಧರಿಸಿದ್ದು) ಕಾದಂಬರಿಯನ್ನು ಬರೆದ ಭೈರಪ್ಪನವರನ್ನು “ಸನಾತನ ಮಠದ ಸ್ವಾಮಿಗಳ ಪೀಠ”ದಲ್ಲಿ ಕೂರಿಸುವುದು ಕುಚೋದ್ಯವಾಗಬಹುದು. ಅಷ್ಟೆ.

ಮತ್ತಷ್ಟು ಓದು »

10
ಸೆಪ್ಟೆಂ

‘ನಕ್ಸಲ್ ವರಸೆ’ ಮತ್ತು ‘ಹೆಗ್ಗುರುತು’ ಕಥಾ ಸಂಕಲನಗಳನ್ನು ಕುರಿತಂತೆ … ಭಾಗ ೧

-ಮು. ಅ. ಶ್ರೀರಂಗ,ಬೆಂಗಳೂರು

ನಕ್ಸಲ್ ವರಸೆ ಮತ್ತು ಹೆಗ್ಗುರುತುಕಥಾಸಂಕಲನಗಳು, ಕಾದಂಬರಿಗಳು, ಕವನಸಂಕಲನಗಳು … ಹೀಗೆ ಸಾಹಿತ್ಯದ ಯಾವುದೇ ಪ್ರಕಾರವಿರಲಿ ಅವುಗಳಿಗೆ ಮುನ್ನುಡಿಗಳು ಸಾಮಾನ್ಯವಾಗಿ ಇರುತ್ತವೆ.ಈ ಮುನ್ನುಡಿಗಳು ಕೆಲವೊಮ್ಮೆ ಸ್ನೇಹದ ಕುರುಹಾಗಿರಬಹುದು, ಅಥವಾ ಉದಯೋನ್ಮುಖರನ್ನು ಪ್ರೋತ್ಸಾಹಿಸುವ, ಅವರಲ್ಲಿ ಧೈರ್ಯ ತುಂಬುವ ಆಶೀರ್ವಚನಗಳಾಗಿರಬಹುದು. ಇನ್ನು ಕೆಲವು ಪರಸ್ಪರ ಸಹಕಾರದ (ಅವರದ್ದಕ್ಕೆ ಇವರು ಇವರದ್ದಕ್ಕೆ ಅವರು) ಸ್ವರೂಪದ್ದೂ  ಆಗಿರುವುದುಂಟು.

ಕೆ.ಸತ್ಯನಾರಾಯಣರ ಇತ್ತೀಚಿನ ಸಣ್ಣ ಕಥೆಗಳ ಸಂಕಲನ ‘ನಕ್ಸಲ್ ವರಸೆ’ (ಪ್ರಕಾಶಕರು : ಅಕ್ಷರಪ್ರಕಾಶನ ಹೆಗ್ಗೋಡು , ೨೦೧೦)ಗೆ  ಮುನ್ನುಡಿ ಬರೆದಿರುವ ಕೆ.ಫಣಿರಾಜ್  ಮತ್ತು ‘ಹೆಗ್ಗುರುತು’ (ಮನೋಹರ ಗ್ರಂಥಮಾಲ , ಧಾರವಾಡ ,೨೦೧೨)ಗೆ ಪ್ರವೇಶ ರೂಪದಲ್ಲಿ ಮುನ್ನುಡಿ ಬರೆದಿರುವ ಮಲ್ಲಿಕಾರ್ಜುನ ಹಿರೆಮಠರದ್ದು ಮೇಲೆ ಹೇಳಿದ್ದ ಪ್ರಭೇಧಗಳಿಗೆ ಸೇರುವಂಥಹದಲ್ಲ.

ಫಣಿರಾಜರು ತಮ್ಮ ಮುನ್ನುಡಿಯಲ್ಲಿ ಸತ್ಯನಾರಾಯಣರ ಕಥೆಗಳ ಹಿನ್ನಲೆಯಲ್ಲಿ ಸಧ್ಯದ ಕೆಲವೊಂದು ವಾದ-ವಿವಾದಗಳ್ಳನ್ನು ಚರ್ಚಿಸಿರುವುದರಿಂದ ಆಸಕ್ತಿದಾಯಕವಾಗಿದೆ.ಹಿರೇಮಠರದ್ದು ಕಥೆಗಳ ಸಾರಾಂಶ ಅವುಗಳ ಬಗ್ಗೆ ಅವರ ಒಂದೆರೆಡು ಅಭಿಪ್ರಾಯಗಳು/ಅನಿಸಿಕೆಗಳಿಗೆ ಸೀಮಿತವಾಗಿದೆ.ಕಥೆಗಳ ಬಗ್ಗೆ ನೇರವಾಗಿ ಬರೆಯದೆ ಮುನ್ನುಡಿಗಳನ್ನು ಕುರಿತಂತೆ ಚರ್ಚಿಸುವುದಕ್ಕೆ ಒಂದು ಕಾರಣವಿದೆ.ಮುನ್ನುಡಿಗಳೂ ಒಂದು ರೀತಿಯ ವಿಮರ್ಶೆ ಆಗಿರುವುದರಿಂದ ಅದರ ನಿಲುವುಗಳ,ತೀರ್ಮಾನಗಳ ಬಗ್ಗೆ ಮಾತನಾಡುವುದೂ ಸಹ ಪರೋಕ್ಷವಾಗಿ ಆ ಕಥೆಗಳನ್ನು ಕುರಿತಂತೆ ಓದುಗನಾಗಿ ನನ್ನ ಅಭಿಪ್ರಾಯಗಳೂ ಆಗಿರುವ ಸಾಧ್ಯತೆಗಳಿವೆ

ಮತ್ತಷ್ಟು ಓದು »

9
ಸೆಪ್ಟೆಂ

ಧಿಡೀರ್ ಖ್ಯಾತಿ(?)

– ಡಾ. ಜ್ಞಾನದೇವ್ ಮೊಳಕಾಲ್ಮುರು

ಡುಂಢಿನೀನೊಬ್ಬ ಅನಾಮಧೇಯ ಈ ನಾಡಿನಲ್ಲಿ. ನಿನ್ನ ಹಿ೦ದಿನ ಚರಿತ್ರೆ ನಮಗೆ ಬೇಕಿಲ್ಲ.
ನಿನಗೆ ಧಿಡೀರ್ ಖ್ಯಾತಿ, ಹೆಸರು ಬೇಕಾ? ಬುದ್ದಿಜೀವಿ, ಸೆಕ್ಯುಲಾರ್ ಎ೦ಬ ಮಾಡರ್ನ್ ವಿಶೇಷಣ ಬೇಕಾ?
ಸೋ ಕಾಲ್ಡ್ ಈ ನಾಡಿನ ಬುದ್ಧಿಜೀವಿಗಳ ಜ್ಞಾನಪೀಠಿಗಳ ಸೆಕ್ಯುಲರ್ವಾದಿಗಳ, ಪ್ರಗತಿಪರರ ಸಖ್ಯ, ಸಪೋರ್ಟ್, ಐಡೆ೦ಟಿಟಿ, ಭೇಷ್ ಬೇಕಾ?
ಈ ನಾಡಿನ ಪ್ರಬಲ ಮಾಧ್ಯಮ ಟಿವಿ, ಪತ್ರಿಕೆಯಲ್ಲಿ ಹೆಡ್ ಲೈನ್ಸ್ ಕುದುರಿಸಿಕೊಳ್ಳುವ ಬಯಕೆ ಇದೆಯಾ?
ಟಿವಿ ಪತ್ರಿಕೆಯಲ್ಲಿ ಸ೦ದರ್ಶನ, ಸ೦ವಾದ ಗೋಷ್ಠಿಯಲ್ಲಿ ರಾರಾಜಿಸಬಹುದು ಎ೦ಬ ಅದಮ್ಯ ಕನಸು ಇದೆಯಾ?
ಗುಡ್..
ಇದಕ್ಕೆಲ್ಲಾ ಹೆಚ್ಚು ಶ್ರಮ ಪಡಬೇಕಿಲ್ಲ, ಹೆಚ್ಚು ಹಣದ ಅಗತ್ಯವೂ ಇಲ್ಲ.
ಜಸ್ಟ್ ಇಷ್ಟನ್ನು ಮಾಡು..
ಹಿ೦ದೂ ಧರ್ಮದ, ಹಿ೦ದೂ ಸ೦ಸ್ಕೃತಿಯ, ಹಿ೦ದೂ ಮಹಾಕಾವ್ಯಗಳ, ಪುರಾಣಗಳ, ಹಿ೦ದೂ ದೇವತೆಗಳನ್ನು ಸ್ವಲ್ಪ ಲೇವಡಿ ಮಾಡಿದರೆ ಸಾಕು, ಜಾಸ್ತಿಯಾದರೆ ಇನ್ನೂ ಜಾಸ್ತಿ ಖ್ಯಾತಿ!
ಅದು ಸ೦ಶೋಧನೆ(?)ಯ ಹೆಸರಿನಲ್ಲಿರಬಹುದು ಅಥವಾ ಅಭಿವ್ಯಕ್ತಿ ಸ್ವಾತ೦ತ್ರ್ಯದ ಹೆಸರಲ್ಲಿರಬಹುದು, ಅಥವಾ ಪ್ರಗತಿಪರ ಧೋರಣೆಯ ಸಾಹಿತ್ಯದ ಹೆಸರಲ್ಲಿರಬಹುದು ಅಥವಾ ನೀನು ಸೃಷ್ಟಿಸುವ ಸುಳ್ಳು ಸುಳ್ಳು ಜೊಳ್ಳು ಜೊಳ್ಳಿನ ಸೃಜನಶೀಲತೆಯ ಹೆಸರಲ್ಲಿರಬಹುದು..
Dont Worry..
ಮತ್ತಷ್ಟು ಓದು »

4
ಸೆಪ್ಟೆಂ

“ಡುಂಢಿ” ಅನ್ನುವ ಕೃತಿ ಮತ್ತು “ಸೆಕ್ಯುಲರಿಸಂ” ಅನ್ನುವ ಅವಕಾಶವಾದ …!

– ರಾಕೇಶ್ ಶೆಟ್ಟಿ

Dundi mattu CSLC“ಡುಂಢಿ”ಯ ಬಗ್ಗೆ ಗೆಳೆಯರೊಬ್ಬರ ಜೊತೆ ಮಾತನಾಡುತಿದ್ದೆ. ಅವರು “Immortals of Meluha” ಪುಸ್ತಕವನ್ನು ಉಲ್ಲೇಖಿಸಿ, “ಆ ಪುಸ್ತಕದಲ್ಲಿ ಶಿವ, ಗಾಂಜಾ ಸೇದುತ್ತಾನೆ,ಟಿಬೆಟಿಯನ್ ಮೂಲದವನು ಅಂತ ಬರೆದಿತ್ತು ಅದು ಭರ್ಜರಿ ಸೇಲ್ ಆಗಿತ್ತು.ಈ ಡುಂಢಿ ಪ್ರಿಂಟ್ ಹಾಕಿಸಿದ್ದೇ ೧೫೦-೨೦೦ ಪ್ರತಿಯಂತಲ್ಲ” ಅಂದರು. ನಾನಂದೆ “ನಿಮಗೆ, ’ದೇವರ ಪಾಲಿಟಿಕ್ಸ್’ ಅರ್ಥವಾಗಿಲ್ಲ. ಆ ಪುಸ್ತಕದಲ್ಲಿ ಶಿವನನ್ನು, ’ಟಿಬೆಟಿಯನ್’ ಅನ್ನುವ ಬದಲೋ ’ಬ್ರಾಹ್ಮಣ/ಆರ್ಯ’ ಅಂತೇನಾದರೂ ಚಿತ್ರಿಸಿದ್ದರೇ ಈಗ ಡುಂಢಿಯ ಪರ ಮಾತನಾಡುತ್ತಿರುವ ಕರ್ನಾಟಕದ ಸೋ-ಕಾಲ್ಡ್ ಸೆಕ್ಯುಲರ್ ಗಳೆಲ್ಲ ಆ ಪುಸ್ತಕದ ವಿರುದ್ಧ ಮಾತನಾಡುತಿದ್ದರು”.

“ಒಬ್ಬ ನಕಲಿಯೋ ಅಥವಾ ಹಲವಾರು ಅಸಲಿಗಳ ಒಂದು ಸಂಕೇತವೊ ಆಗಿರುವ ಗಣಪತಿಯನ್ನು ಕುರಿತು ಹಲವು ಪುರಾಣಗಳು ಹಲವಾರು ರೀತಿಯ ಕಥೆಗಳನ್ನು ಹೇಳಿವೆ. ಈ ಢುಂಢೀಯೂ ಹಾಗೇ ಒಂದು ಮನೋರಂಜನೆ ಅಥವಾ ವಿಚಾರಕ್ಕೆ ಹಚ್ಚಬಹುದಾದ, ನಿಜವೆಂದು ನಂಬಲು ಇಷ್ಟ ಪಡುವ ಹೂರಣದ ಒಂದು ಕಲ್ಪನೆಯ ಪುರಾಣವೇ.” ಅನ್ನುವ ಮಾತುಗಳನ್ನಿಟ್ಟುಕೊಂಡ “ಡುಂಢಿ” ಅನ್ನುವ ಕೃತಿಯನ್ನು ಓದದೇ ಅದು ಕೃತಿಯೋ,ವಿಕೃತಿಯೋ ಅಂತ ನಿರ್ಧಾರ ಮಾಡುವುದು ಹೇಗೆ? ಅನ್ನುವ ಪ್ರಶ್ನೆಯನ್ನು ಮುಂದಿಡುತ್ತ ಮತ್ತು ಒಬ್ಬ ಲೇಖಕನನ್ನು ಬಂಧಿಸುವಂತ ಮಟ್ಟದವರೆಗೂ ಹೋಗಿದ್ದನ್ನು ವಿರೋಧಿಸುತ್ತಲೇ,ಈ ಮಾತು ಕೇಳುತಿದ್ದೇನೆ.ನಾನು ನನ್ನ ಗೆಳೆಯರಿಗೆ ಹೇಳಿದ ಮಾತಿನಲ್ಲಿ ಸತ್ಯವಿರಬಹುದು ಅಂತ ನಿಮಗೂ ಅನ್ನಿಸುವುದಿಲ್ಲವೇ? (“ಶಿವ”ನಮ್ಮವನು ಅವನನ್ನು ಹೈಜಾಕ್ ಮಾಡಿದ್ದಾರೆ ಅಂತ ಬರೆದವರನ್ನೂ ನೋಡಿದ್ದೇನೆ. ದೇವರನ್ನೂ ಈ ಮಂದಿ ತಮ್ಮ ಗುಂಪಿನೊಳಗೆ ಸೇರಿಸಿಕೊಳ್ಳುತ್ತಾರೆ ಶಿವಾ ಶಿವಾ…!)

ಮತ್ತಷ್ಟು ಓದು »

3
ಸೆಪ್ಟೆಂ

ರೂಪಾಯಿ,ಪೆಟ್ರೋಲ್ ಮತ್ತು ಸ್ವದೇಶಿ

– ಪ್ರಶಸ್ತಿ.ಪಿ ಶಿವಮೊಗ್ಗ

usd_to_inr_since99ರೂಪಾಯಿ ಮೌಲ್ಯ ಅಪಮೌಲ್ಯ ಆಗ್ತಾ ಆಗ್ತಾ ಅದ್ರ ಬೆಲೆ ಅರವತ್ತೆಂಟು ದಾಟಾಯ್ತು.. ಇನ್ನಾದ್ರೂ ನಾವು ಎಚ್ಚೆತ್ತಿಲ್ಲ. ಮನೆಗೊಂದು ಕಾರು, ತೆಲೆಗೊಂದು ಬೈಕು ಅಂತ ಜುಂ ಜಾಮಾಗಿರೋ ನಾವು ನಮ್ಮೀ ವೈಭವದಿಂದಲೇ ಪೆಟ್ರೋಲ್ ದರ ಗಗನಕ್ಕೇರಿರೋದು ಅಂತಲೂ ತಿಳೀತಿಲ್ಲ. ಪೆಟ್ರೋಲ್ ಬೆಲೆ ಏನಾದ್ರಾಗ್ಲಿ, ಅದ್ರಿಂದ ಡಾಲರ್ ದರ ಅರವತ್ತಲ್ಲ ನೂರು ಮುಟ್ಟಿದ್ರೂ ನಮಗೇನು ಅಂದ್ರಾ ? ಡಾಲರ್ ದರ ಹೆಚ್ಚಾದಷ್ಟೂ ಟೆಕ್ಕಿಗಳಿಗೆ, ರಫ್ತು ಮಾಡೋರಿಗೆ ಲಾಭವೇ ಅಲ್ವಾ ? ದೇಶಕ್ಕೇನಾದ್ರೆ ನಮಗೇನು ಅಂದ್ರಾ ? !! ರಫ್ತೆಂದರೆ ಚೀನಾದಂತೆ ಬೇಕಾಬಿಟ್ಟಿ ವ್ಯವಹಾರವಲ್ಲ, ಅಗ್ಗದ ದರದಲ್ಲಿ ಚೀನಾದವ್ರೂ ಎಲ್ಲಾ ಕಡೆ ಕಸದಂತೆ ತಂದು ಎಲ್ಲಾ ದೇಶಗಳಲ್ಲಿ, ಭಾರತಕ್ಕೂ ತಂದು ಸುರಿತಿರುವಾಗ, ಕೂಲಿಯಿಂದ ಹಿಡಿದು ಕಚ್ಚಾವಸ್ತುಗಳವರೆಗೆ ಎಲ್ಲದರ ಬೆಲೆ ಏರಿದ್ರೂ ಗುಣಮಟ್ಟ ಕಾದುಕೊಳ್ಳೋ ಅನಿವಾರ್ಯತೆಯಿರೋ ಭಾರತೀಯ ರಫ್ತು ಉದ್ಯಮಕ್ಕೂ ಹೊಡೆತ ಬೀಳುತ್ತಿದೆ ಅದ್ರ ಮದ್ಯ ಕೊಕ್ಕೆ ತೆಗೆಯೋ ಹೊರದೇಶಗಳ ನೂರಾರು ಕಾನೂನುಗಳು ಬೇರೆ…ಅದೆಲ್ಲಾ ದೊಡ್ಡ ತಲೆ ನೋವು ಅಂದ್ರಾ ? ಸರಿ,ಹೋಗ್ಲಿ ಬಿಡಿ.ಅದಿರ್ಲಿ,   ಪೆಟ್ರೋಲ್ ಬೆಲೆ ಏರ್ತಾ ಇದ್ರೂ ರೂಪಾಯಿ ಬೆಲೆ ಇಳಿತಾ ಇದ್ರೂ ಘನ ಸರ್ಕಾರ ಏನು ಮಾಡ್ತಾ ಇದೆ ಅಂತ ಬೊಬ್ಬೆ ಹಾಕೋ ಬದ್ಲು ಆ ಸಮಯದಲ್ಲಿ ನಮ್ಮಿಂದ ಏನಾದ್ರೂ ಮಾಡ್ಬಹುದಾ ಅಂತ್ಯಾಕೆ ಯೋಚ್ನೆ ಮಾಡ್ಬಾರ್ದು ?

ಮತ್ತಷ್ಟು ಓದು »

2
ಸೆಪ್ಟೆಂ

ಬಯಲು ಆಲಯದೊಳಗೊ?ಆಲಯವು ಬಯಲೊಳಗೊ?

-ಮು. ಅ. ಶ್ರೀರಂಗ, ಬೆಂಗಳೂರು

Pragatiparate“ಚಿಂತನ ಬಯಲು”ಸಾಹಿತ್ಯಿಕ ತ್ರೈಮಾಸಿಕದ ಎಪ್ರಿಲ್-ಜೂನ್ ೨೦೧೩ರ ಸಂಚಿಕೆಯಲ್ಲಿ ಡ ರಾಜಾರಾಮ ಹೆಗಡೆಯವರ “ಸಾಮಾಜಿಕ ಸಂಶೋಧನೆಗೆ ಮುಳುವಾಗುತ್ತಿರುವ ಜನಪ್ರಿಯ ಧೋರಣೆಗಳು”ಎಂಬ ಲೇಖನ ಓದಿ   ಮನಸ್ಸಿಗೆ ತುಂಬಾ ಖೇದವಾಯಿತು. ಪ್ರಗತಿಪರರೆಂದು ಹೇಳಿಕೊಳ್ಳುವ ನಮ್ಮ ಬುದ್ಧಿಜೀವಿಗಳು ಚಿಂತಕರು ಯಾವಾಗ ಯಾವ ರೀತಿ ನಡೆದುಕೊಳ್ಳುತ್ತಾರೆಂದು ಯಾವ ಜ್ಯೋತಿಷಿಯೂ ಹೇಳಲಾರ! ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಇವರಲ್ಲಿ ಕೆಲವರು,ಒಂದಾನೊಂದು ಕಾಲದಲ್ಲಿ ನಮ್ಮ ದೇಶದಲ್ಲಿ ಇದಕ್ಕೆ ಕಂಟಕ ಬಂದಾಗ ಅದನ್ನು ವಿರೋಧಿಸಿ ಜೈಲಿಗೂ ಹೋಗಿಬಂದು ಹೀರೋಗಳಾಗಿದ್ದವರು. ಆದರೆ ಈಗ ತಾನೇ ಮುಗಿದ ಲೋಕಸಭೆಯ ಉಪ ಚುನಾವಣೆಯಲ್ಲಿ ಈ ಹಿಂದೆ ಯಾವ ಪಕ್ಷದ ಸರಕಾರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿತ್ತೊ ಆ ಪಕ್ಷದ ಪರವಾಗಿ ಪ್ರಚಾರ ಮಾಡಿ ಅದರ ಅಭ್ಯರ್ಥಿಗಳ “ಕೈ”ಯನ್ನು ಬಲಪಡಿಸಿ ಗೆಲ್ಲಿಸಿದರು. ಸಮಾಜದ ಎಲ್ಲಾ ರಂಗಗಳಲ್ಲಿ ಈ ಗುಂಪುಗಳು ಹೇಳಿದ್ದೆ ಕೊನೆಯ ಮಾತು. ಅವರು ವ್ಯಾಖ್ಯಾನಿಸಿದ ಪ್ರಕಾರ ನಡೆದರೆ ಮಾತ್ರ ಅದು ಅಭಿವ್ಯಕ್ತಿ ಸ್ವಾತಂತ್ರ್ಯ,ಪ್ರಗತಿಪರ ಚಿಂತನೆ. ಇತರರದ್ದೆಲ್ಲಾ ಪ್ರಗತಿ ವಿರೋಧಿ,ಜಾತೀಯತೆ,ಸನಾತನವಾದಿ,ಪುರೋಹಿತಶಾಹಿಯ ಪುನರುತ್ಹಾನದ ಹಿಡನ್ ಅಜೆಂಡಾ ಹೊಂದಿರುವಂತಹುದು………. ಹೀಗೆ ಈ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ಇದುವರೆಗೆ ಸಾಹಿತ್ಯ  ಮತ್ತು ರಾಜಕೀಯ ಕ್ಷೇತ್ರಗಳತ್ತ ಮಾತ್ರ ಗಮನವಿರಿಸಿದ್ದ ಈ ಗುಂಪುಗಳು ಈಗ ಸಾಮಾಜಿಕ ಸಂಶೋಧನಾ ವಲಯದ ಕಡೆಗೂ ಗಮನ ಹರಿಸಿ ಅದನ್ನೂ ತಮ್ಮ ಅಂಕೆಯಲ್ಲಿ ಇಟ್ಟುಕೊಳ್ಳಲು ಹವಣಿಸುತ್ತಿದ್ದಾರೆ. ಈ ಗುಂಪಿನಲ್ಲಿ ಹಲವರು “ನಾನಾ ಕಾರಣಗಳಿಂದ”ರಾಜ್ಯದ ಶಕ್ತಿ ಕೇಂದ್ರಕ್ಕೆ ಹತ್ತಿರವಾಗಿರುತ್ತಾರೆ,ಬೇಕಾಗಿದವರಾಗಿರುತ್ತಾರೆ.

ಮತ್ತಷ್ಟು ಓದು »

30
ಆಗಸ್ಟ್

ಅನುಭವಕ್ಕೆ ಮುಖಾಮುಖಿಯಾಗಿಸುವ ವಿಶೇಷ ಪುಸ್ತಕ

– ಡಂಕಿನ್ ಝಳಕಿ, ಸಂಶೋಧಕರು.

  ಶಿವಕುಮಾರ, ಸಂಶೋಧನಾ ವಿದ್ಯಾರ್ಥಿ.

ನಮಗೆ ನಾವೇ ಪರಕೀಯರು‘ಗ್ರಾಮೀಣ ಭಾರತದ ಸಾಮಾನ್ಯ ಜಗತ್ತಿನಲ್ಲಿ ಅನುಭವದೊಂದಿಗೆ ರೂಪತಾಳಿದ ಅಪರೂಪದ ಕೃತಿ’ : ನಮಗೆ ನಾವೇ ಪರಕೀಯರು

ಇತ್ತೀಚೆಗೆ ಕರ್ನಾಟಕದಲ್ಲಿ ಎಸ್.ಎನ್. ಬಾಲಗಂಗಾಧರರ (ಬಾಲುರವರ) ವಿಚಾರಧಾರೆಯು ಒಂದು ಸಂಶೋಧನಾ ಸಂಪ್ರದಾಯವಾಗಿ, ಒಂದು ಚಳುವಳಿಯಾಗಿ ಬೆಳೆಯುತ್ತಿರುವುದು ನಮಗೆ ತಿಳಿಯದ ಹೊಸ ವಿಚಾರವೇನಲ್ಲ. 2002ರಲ್ಲಿ ವಚನಗಳ ಕುರಿತ ಒಂದು ಕಾರ್ಯಾಗಾರವಾಗಿ ಕರ್ನಾಟಕಕ್ಕೆ ಕಾಲಿಟ್ಟ ಈ ವಿಚಾರಧಾರೆ ಕೇವಲ ಹತ್ತು ವರ್ಷಗಳಲ್ಲಿ ಎರಡು ಸಂಶೋಧನಾ ಸಂಸ್ಥೆಗಳಾಗಿ, ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಶೋಧನಾ ಯೋಜನೆಗಳಾಗಿ ಬೆಳೆದು ನಿಂತಿದೆ. ಈ ವಿಚಾರಧಾರೆಯನ್ನು ಕನ್ನಡಕ್ಕೆ ಪರಿಚಯಿಸುವ ಹಲವು ಕೃತಿಗಳೂ ಈಗಾಗಲೇ ಪ್ರಕಟವಾಗಿವೆ. ರಾಷ್ಟ್ರೋತ್ಥಾನ ಸಾಹಿತ್ಯದವರು ಪ್ರಕಟಿಸಿರುವ ರಮಾನಂದ ಐನಕೈಯವರÀ ನಮಗೆ ನಾವೇ ಪರಕೀಯರು (2012) ಈ ಸಾಲಿಗೆ ಸೇರುವ ಒಂದು ವಿಶೇಷ ಕೃತಿ.

ಈ ಕೃತಿಯನ್ನು ಎರಡು ಪ್ರಮುಖ ಕಾರಣಗಳಿಗಾಗಿ ವಿಶೇಷ ಕೃತಿಯೆನ್ನಬಹುದು. ಇದುವರೆಗೂ ಬಾಲುರವರ ವಿಚಾರಧಾರೆಯ ಕುರಿತು ಪುಸ್ತಕರೂಪದಲ್ಲಿ ಬಂದ ಕೃತಿಗಳೆಲ್ಲಾ ಬಾಲಗಂಗಾಧರರ ಆಂಗ್ಲ ಕೃತಿಗಳ ಕನ್ನಡ ಅವತರಣಿಕೆಗಳೇ. ಈ ಕೃತಿ ಅವರ ವಿಚಾರಗಳನ್ನಿಟ್ಟುಕೊಂಡು ಕನ್ನಡದಲ್ಲಿ ಬಂದ ಮೊದಲ ಸ್ವತಂತ್ರ ಕೃತಿ. ಇದು ಈ ಕೃತಿಯ ಮೊದಲನೆಯ ವಿಶೇಷತೆ. ಇದರ ಎರಡನೆಯ ವಿಶೇಷತೆಯನ್ನು ಅರ್ಥಮಾಡಿಕೊಳ್ಳಬೇಕಾದರೆ ಸಂಪ್ರದಾಯ ಮತ್ತು ಚಳುವಳಿಗಳ ಕುರಿತು ಒಂದು ವಿಚಾರವನ್ನು ನಾವು ಮನಗಾಣಬೇಕು. ಸಂಪ್ರದಾಯ ಮತ್ತು ಚಳುವಳಿಗಳ ಯಶಸ್ಸು ಅದು ಹುಟ್ಟುಹಾಕುವ ಅನುಯಾಯಿಗಳ ಸಂಖ್ಯೆ ಮತ್ತು ಪ್ರಕಟಿಸುವ ಕೃತಿಗಳ ಸಂಖ್ಯೆಯ ಮೇಲೆ ನಿರ್ಧಾರವಾಗುವುದಿಲ್ಲ. ಉದಾಹರಣೆಗೆ ವಚನ ಸಂಪ್ರದಾಯದ ಮತ್ತು ಚಳುವಳಿಯ ಯಶಸ್ಸು ಅದು ಹುಟ್ಟುಹಾಕಿದ (ಇಂದು ನಮಗೆ ತಿಳಿದಿರುವ ಅಂಕಿಸಂಖೆಗಳ ಆಧಾರದ ಮೇಲೆ ಹೇಳುವುದಾದರೆ) ಸುಮಾರು 200 ವಚನಕಾರರ ಮತ್ತು 21500 ವಚನಗಳ ಆಧಾರದ ಮೇಲೆ ನಾವು ಅಳೆಯುವುದಿಲ್ಲ್ಲ. ಒಂದು ಸಂಪ್ರದಾಯ, ಅನುಭವಗಳ ಕುರಿತು ಚಿಂತಿಸುವ ಒಂದು ಚಿಂತನಾ ವಿಧಾನವನ್ನು ಹುಟ್ಟುಹಾಕಬೇಕು. ಆದರೆ ಎರಡು ವಸಾಹತುಶಾಹಿಗಳ ಬಳಿಕ, 21ನೇ ಶತಮಾನದಲ್ಲಿ ಒಂದು ಚಿಂತನಾ ವಿಧಾನವನ್ನು ಹುಟ್ಟುಹಾಕುವ ಮೊದಲು, ಒಂದು ಸಂಸ್ಕøತಿಯಾಗಿ ನಾವು (ಭಾರತೀಯರು) ಮರೆತಿರುವ ನಮ್ಮ ಅನುಭವಗಳನ್ನು ಕುರಿತು ಚಿಂತಿಸುವ ಪ್ರಕ್ರಿಯೆಯನ್ನೇ ಮತ್ತೊಮ್ಮೆ ಪುನರುಜ್ಜೀವನಗೊಳಿಸಬೇಕಾಗುತ್ತದೆ. ಇದು ಬಾಲುರವರ ಸಂಶೋಧನೆಯ ಪ್ರಮುಖ ಉದ್ದೇಶ. ಈ ಪ್ರಕ್ರಿಯೆಯನ್ನು ಅವರು ಪ್ರತ್ಯಭಿಜ್ಞಾನ ಎಂದು ಕರೆಯುತ್ತಾರೆ. ಒಂದು ಸಂಸ್ಕøತಿಯಾಗಿ ನಾವು ಕಲಿತು ಮರೆತಿರುವ ‘ಅನುಭವಗಳನ್ನು ಕುರಿತು ಚಿಂತಿಸುವ’ ಪ್ರಕ್ರಿಯೆಯನ್ನು ಪುನರುಜ್ಜೀವನಗೊಳಿಸುವ ಈ ಪ್ರಕ್ರಿಯೆ ಒಂದು ಅಕಾಡೆಮಿಕ್ ಯೋಜನೆಯಷ್ಟೇ ಅಲ್ಲ, ಇದೊಂದು ಸಾಂಸ್ಕøತಿಕ ಚಳುವಳಿ ಕೂಡ. ಅಂದರೆ ಇದು ಎಲ್ಲಿ ಮತ್ತು ಹೇಗೆ ಆರಂಭವಾದರೂ ಸರಿ, ಅಂತಿಮವಾಗಿ ತನ್ನ ನಿತ್ಯದ ಸಾಮಾಜಿಕ ಜೀವನವನ್ನು ಇನ್ನಷ್ಟು ಅರ್ಥವತ್ತಾಗಿ ಬಾಳಲು ಇದರಿಂದ ಪ್ರತಿಯೋರ್ವನಿಗೂ ಸಹಾಯವಾಗಬೇಕು. ಪ್ರಸ್ತುತ ಕೃತಿ ಅಂತಹ ಪ್ರಕ್ರಿಯೆಗೆ ಒಂದು ಅತ್ಯುತ್ತಮ ಉದಾಹರಣೆ. ಅಷ್ಟೇ ಅಲ್ಲ ಅಂತಹ ಪ್ರಕ್ರಿಯೆಗೆ ಪ್ರೇರಣೆಯನ್ನೂ ನೀಡುತ್ತದೆ ಎನ್ನುವುದು ಈ ಕೃತಿಯ ಎರಡನೇ ಮತ್ತು ಅತ್ಯಂತ ಪ್ರಮುಖವಾದ ವಿಶೇಷತೆ.

ಮತ್ತಷ್ಟು ಓದು »

28
ಆಗಸ್ಟ್

ಸ್ವಾತಂತ್ರ್ಯ ಇನ್ನೆಷ್ಟು ದಿನ !!!

– ಮಧುಚಂದ್ರ , ಭದ್ರಾವತಿ                      

೨೯ ಮೇ ೧೪೫೩, ಅಟ್ಟೋಮನ್ ತುರ್ಕರು ಕಾಂಸ್ಟನ್ಟಿನೋಪಾಲ್ ನಗರವನ್ನು ಆಕ್ರಮಿಸಿ (ಇಂದಿನ ಇಸ್ತಾಂಬುಲ್) ತಮ್ಮ ವಶಕ್ಕೆ ತಗೆದುಕೊಂಡ ದಿನ. ಈ ದಿನಕ್ಕೂ ಮುಂಚೆ ಪೂರ್ವ ಮತ್ತು ಪಶ್ಚಿಮಗಳ ವ್ಯಾಪಾರ ಮತ್ತು ಭಾಂದವ್ಯ ಸಮುದ್ರ ಮಾರ್ಗವಾಗಿ ಈ ನಗರದ ಮೂಲಕವೇ ನಡೆಯುತ್ತಿತ್ತು. ತುರ್ಕರ ಆಕ್ರಮಣದೊಂದಿಗೆ ಪಶ್ಚಿಮದವರ ವ್ಯಾಪಾರದ ಬಾಗಿಲು ಸಂಪೂರ್ಣವಾಗಿ ಮುಚ್ಚಲ್ಪಟ್ಟಿತು. ಹೊಸ ಮಾರ್ಗದ ಅನ್ವೇಷಣೆ ಪಶ್ಸಿಮದವರಿಗೆ ಅನಿವಾರ್ಯವಾಯಿತು.

ಮೊದಲಿಗೆ ಸ್ಪೇನ್ ದೇಶದ ನಾವಿಕ ಕೊಲಂಬಸ್ ಮುಂದಾದ, ಭಾರತವನ್ನು ಕಂಡುಹಿಡಿಯುವ ಬದಲಿಗೆ ಅಮೇರಿಕ ಖಂಡವನ್ನು ಅನ್ವೇಷಿಸಿದ. ನಂತರ ಪೋರ್ಚುಗಲ್ನ ನಾವಿಕ ಬರ್ತ ಲೋಮಿಯ ಡಯಾಜ್ , ಪೋರ್ಚುಗಲ್ ದೇಶದ ದಕ್ಷಿಣದಿಂದ ಆರಂಭಿಸಿ ಆಫ್ರಿಕಾ ಖಂಡದ ತುದಿಯನ್ನು ಮುಟ್ಟಿದ ಆದರೆ ಸಮುದ್ರದಲ್ಲಿ ಉಂಟಾದ ಭಾರಿ ಅನಾಹುತಗಳಿಂದ ಅವನ ಸಹ ನಾವಿಕರು ಮುಂದೆ ಸಾಗಲು ನಿರಾಕರಿಸಿದರು. ಆಫ್ರಿಕದ ತುಟ್ಟ ತುದಿ ಕೇಪ್ ಆಫ್ ಗುಡ್ ಹೋಪ್ ಕಂಡು ಹಿಡಿದು ಪೋರ್ಚುಗಲ್ಗೆ ಹಿಂದಿರುಗಿದ. ಮತ್ತೆ ಅದೇ ಯತ್ನವನ್ನು ಪೋರ್ಚುಗಲ್ಲಿನ ವಾಸ್ಕೋ ಡ ಗಾಮ ಬರ್ತ ಲೋಮಿಯ ಡಯಾಜ್ ಬಳಸಿದ ಮಾರ್ಗದಲ್ಲೇ ಹೋಗಿ ಆಫ್ರಿಕಾ ಖಂಡವನ್ನು ಒಂದು ಸುತ್ತು ಹಾಕಿ ಕಡೆಗೆ ಕೇರಳದ ಕಲ್ಲಿ ಕೋಟೆಯಲ್ಲಿ ೨೦ ಮೇ ೧೪೯೮ ಕಾಲಿಟ್ಟ. ಕಲ್ಲಿಕೋಟೆಯ ದೊರೆ ಜಮೂರಿನ ವಾಸ್ಕೋ ಡ ಗಾಮನನ್ನು ಆತ್ಮೀಯವಾಗಿ ಸ್ವಾಗತಿಸಿ ಪೂರ್ವ ಪಶ್ಚಿಮಗಳ ವ್ಯಾಪಾರಕ್ಕೆ ಮುನ್ನುಡಿ ಬರೆದ.

ಸತತ ನೂರು ವರ್ಷಗಳ ಕಾಲ ಯಾವುದೇ ಅಡೆತಡೆ ಇಲ್ಲದೆ ಭಾರತದ ಪಶ್ಚಿಮ ಸಮುದ್ರ ತೀರದ ಎಲ್ಲಾ ಪ್ರಮುಖ ನಗರದಲ್ಲಿ ಒಂದು ಒಂದು ಶಾಖೆಗಳನ್ನು ಸ್ಥಾಪಿಸಿ ಪೋರ್ಚುಗೀಸರು ತಮ್ಮ ವ್ಯಾಪಾರ ಮುಂದುವರೆಸಿದರು. ೧೬೦೦ ಬ್ರಿಟೀಷರು, ೧೬೦೨ ರಲ್ಲಿ ಡಚ್ಚರು, ೧೬೬೪ ರಲ್ಲಿ ಫ್ರೆಂಚರು ಈಸ್ಟ್ ಇಂಡಿಯಾ ಕಂಪನಿ ಹೆಸರಿನಲ್ಲಿ ಭಾರತ ಖಂಡದಲ್ಲಿ ನಿಧಾನವಾಗಿ ತಮ್ಮ ಖಾತೆ ತೆರೆದರು.

ಮತ್ತಷ್ಟು ಓದು »