ವಿಷಯದ ವಿವರಗಳಿಗೆ ದಾಟಿರಿ

Recent Articles

6
ಜುಲೈ

ಇದೇನಾ… ಹುಚ್ಚು ಪ್ರೀತಿ…?

– ಕೆ.ಎಂ.ವಿಶ್ವನಾಥ(ಮಂಕವಿ) ಮರತೂರ

Preetijಬೀದಿ ಹೋಟೇಲವೊಂದರಲ್ಲಿ  ಭಿಕ್ಷುಕನೊಬ್ಬ ಒಂದು ಪತ್ರಿಕೆ ಹಿಡಿದು ಹ್ಯಾಪಿ ಬರ್ತಡೇ ಟು ಯೂ ಹಾಡು ಹೇಳುತ್ತ ಘಾಡವಾಗಿ ಏನೊ ಓದುವಂತ ದೃಶ್ಯವಿತ್ತು . ಸಮೀಪ ಹೋಗಿ ನೋಡಿದರೆ ಆತ ಓದುತ್ತಿದ್ದದ್ದು  ಐದನೆ ಪುಣ್ಯಸ್ಮರಣೆಯ ಭಾವಚಿತ್ರ . ನಾನು ಸ್ವಲ್ಪ ಹತ್ತಿರ ಹೋಗಿ ಪತ್ರಿಕೆ  ಕಸಿದು ಕೊಳ್ಳಲು ಪ್ರಯತ್ನಿಸಿದರೆ , ಆತ ಕೋಪ ಬಂದವನಂತಾಗಿ ತನ್ನ ಒಡಲಾಳದ ವಿಷಯ ಯಾರ ಪರಿವೆಯಿಲ್ಲದೆ ಹೇಳಿಕೊಳ್ಳುತ್ತಾನೆ.  ಆ ಭಾವಚಿತ್ರಕ್ಕು ತನಗೂ ಇರುವ ಸಂಬಂದವನ್ನು ಬಿಚ್ಚಿ ಹೇಳುತ್ತಾನೆ.ಈತನ ಹೆಸರು ಗೋಪಾಲ ಸುಂದರ ಮೈಕಟ್ಟು ನಿಲುವು ಬಾಹು ಸತತ ವ್ಯಾಯಾಮ ಮಾಡಿ ಮನೆಯ ಖಾರಪುಡಿ ರೊಟ್ಟಿ ತಿಂದು ಗಟ್ಟಿಮುಟ್ಟಾಗಿ ಇದ್ದ ಆತನ ದೇಹ ಆಕರ್ಶಕವಾಗಿತ್ತು ಕಾಲೇಜು ಕನ್ನೆಯರಿಗೆಲ್ಲ ಕನಸಿನ ರಾಜಕುಮಾರ ನಂತಿದ್ದ .

ಲೇ.. ಆ ಫಿಗರು ಭಾರಿ ಇತ್ತಲೆ… ಆದರೆ ಅವಳು ಸ್ವಲ್ಪನು ತಿರುಗಿ ನೋಡಲೇಯಿಲ್ಲ. ಈ ಬಾರಿ ಸಿಗಲಿ ಅವಳನ್ನು ಬಿಟ್ಟರೆ ಕೇಳು ಅವಳ ಆ ಮೈಮಾಟ ನೋಡಿ ನನಗೆ ನಿದ್ದೆನೆ ಬರತಿಲ್ಲ ಕಣ್ರೊ. ಹೀಗೆ ಗೆಳೆಯೆರೆಲ್ಲ ಕಾಲೇಜು ಕ್ಯಾಂಪಸ್ ಲ್ಲಿ ಕಾಲಹರಣ ಮಾಡುತ್ತಾ ಆ ಕಾಲೇಜಿನ ಸುಂದರಿ ಪಾರ್ವತಿ ಊರ್ಫ ಪಾರು ಹುಡುಗಿಯ ಬಗ್ಗೆ ಮಾತಾಡುತ್ತಿದ್ದರು .

ನಮ್ಮ ಗೋಪಾಲ ನೋಡಿರೊ ಅಷ್ಟು ಹ್ಯಾಂಡ್ಸಂ ಆದರೂ ಯಾವ ಹುಡುಗಿ ತಂಟೆಗೂ ಹೋಗದೆ ಹೇಗೆ ಇರತಾನೆ ಅಂದ ರಹೀಮ , ಲೇ.. ಹುಚ್ಚಾ ಅವನಿಗ್ಯಾಕೊ ಅದರ ಚಿಂತಿ ಅವನ ಕಂಡರೆ ನಮ್ಮ ಹುಡುಗಿರೆ ಮುಗಿಬೀಳತಾರೆ ರವಿ ಅಂದ ಹಾಸ್ಯದಲ್ಲಿ.ಲೆ… ನೀವೆಲ್ಲ ಉದ್ಧಾರ ಆಗಲ್ಲ ಕಣ್ರೊ ಮಂದಿ ಹೆಣ್ಣು ಮಕ್ಕಳ ಬಗ್ಗೆ ಅಸಯ್ಯವಾಗಿ ಮಾತಾಡಬಾರದು ತಮ್ಮಿಂದಿರಾ ನಡೆಯಿರಿ ಕ್ಲಾಸ್ ಶುರುವಾಯಿತು ಎಂದು ಎಲ್ಲರಿಗೂ ಬುದ್ದಿವಾದ ಹೇಳಿದ ಕರ್ಣ . ಎಲ್ಲರು ತರಗತಿಯಲ್ಲಿ ಕುಳಿತರು ಈಗ ತರಗತಿಯಲ್ಲಿ ಇಂಗ್ಲೀಷ ಮೇಡಂ ಕ್ಲಾಸ್ ಇದೆ ಎಲ್ಲರು ಪಾಠಕ್ಕಿಂತ ಮೇಡಂ ಇಷ್ಠಾಂತ ಇಡಿ ತರಗತಿ ಹೌಸ್ ಫುಲ್ ಆಗಿತ್ತು .

ಮತ್ತಷ್ಟು ಓದು »

5
ಜುಲೈ

ದೇಹಾಂತರದ ಪಯಣ

– ರಾಜ್ ಕುಮಾರ್

Hanate    ನನ್ನ ಬಾಲ್ಯದ ಒಂದು ಘಟನೆ. ನಮ್ಮ ಊರಿನ ದೊಡ್ಡ ಮನೆಯಲ್ಲಿ ಬಾವಿಯೊಂದನ್ನು ತೊಡುವ ಬಗ್ಗೆ ಹಿರಿಯರು ನಿರ್ಧರಿಸಿಬಿಟ್ಟರು. ಇನ್ನೇನು ನೀರು ತೋರಿಸುವುದಕ್ಕೊಸ್ಕರ ಒಬ್ಬರು ಬಂದೇ ಬಿಟ್ಟು ಕೈಯಲ್ಲಿ ಬೆತ್ತವೊಂದನ್ನು ಹಿಡಿದುಕೊಂಡು ಕೈ ಅತ್ತಿತ್ತ ತಿರುಗಿಸುತ್ತಾ ಗುಡ್ಡೆ ಎಲ್ಲ ತಿರುಗಿ ತಿರುಗಿ ಪಾದೆ ಕಲ್ಲಿನ ಮೇಲೆ ನಿಂತು ಅಲ್ಲೇ ಗುರುತು ಮಾಡಿಬಿಡುವಂತೆ ಹೇಳಿದರು. ಕರ್ರಗಿನ ಪಾದೆ ಆ ಬೇಸಿಗೆ ಕಾಲದ ಬಿಸಿಲಿಗೆ ಕಾದು ಬರಿ ಕಾಲಲ್ಲಿ ನಿಲ್ಲುವ ಹಾಗಿರಲಿಲ್ಲ. ಸುಡುತ್ತಿತ್ತು. ನಮಗೆಲ್ಲ ಅಶ್ಚರ್ಯ. ಇಲ್ಲಿ ಈ ಕಲ್ಲಿನಲ್ಲಿ ನೀರು ಸಿಗುವುದೇ? ಮಣ್ಣಿನ ಅಂಶ ಲವಲೇಶವೂ ಇಲ್ಲದ ಈ ಬರಡು ಜಾಗದಲ್ಲಿ ನೀರು ಸಿಗಬಹುದೇ? ಆಶ್ಚರ್ಯ. ನಮಗೆಲ್ಲಿ ಅರಿವಿತ್ತು. ಪ್ರಕೃತಿ ಇಂತಹ ಹಲವು ವಿಸ್ಮಯ ನಿಗೂಢತೆಗಳನ್ನು ಬಸಿರಲ್ಲಿರಿಸಿದೆ ಎಂದು.

ಬಾವಿ ತೋಡುವ ಕೆಲಸ ಆರಂಭವಾಯಿತು. ಅಲ್ಲಿ ನೆಲವನ್ನು ಸಾಕಷ್ಟು ಸಜ್ಜುಗೊಳಿಸಿ ವೃತ್ತಾಕಾರದಲ್ಲಿ ಆಕಾರವನ್ನು ಒಂದೆರಡು ಆಳುಗಳು ಅಗೆಯುವುದಕ್ಕೆ ಆರಂಭಿಸಿದರು.ನಾಲ್ಕು ಸಲ ಗುದ್ದಲಿ ಎತ್ತಿ ಅಗೆದಾಗ ಸಣ್ಣ ಚಿಪ್ಪು ಹಾರಿ ಬರುತ್ತಿತ್ತು. ಇಂತಹ ಕಠಿಣ ಸ್ಥಳದಲ್ಲಿ ನೀರು ಸಿಗಬಹುದೇ ನಮಗೆಲ್ಲ ಆಶ್ಚರ್ಯವಾಗುತ್ತಿತ್ತು. ಪ್ರಕೃತಿಯ ವಿಸ್ಮಯಕ್ಕೆ ಕುತೂಹಲವಾಗುತ್ತಿತ್ತು. ದಿನವಿಡೀ ಅಗೆದರೂ ಅರ್ಧ ಅಡಿಗಿಂತ ಹೆಚ್ಚು ಅಗೆಯಲು ಸಾಧ್ಯವಾಗದ ಸ್ಥಳದಲ್ಲಿ ನೀರಿದೆ ! ಎಂತಹ ವಿಸ್ಮಯ. ದಿನ ಕಳೆದಂತೆ ಕಲ್ಲಿನಂಶ ಕಡಿಮೆಯಾಗಿ ಕಲ್ಲು ಮೆತ್ತಗಾಗುವ ಭಾಸವಾಗುತ್ತಿತ್ತು.. ಕಲ್ಲು ಕರಗಿ ಮಣ್ಣಾದಂತೆ ನಿಧಾನವಾಗಿ ಭೂಗರ್ಭದೊಳಗೆ ನೀರಿನ ಗಮ್ಯದೆಡೆಗಿನ ಪಯಣ ಸಾಗುವಂತಿತ್ತು. ಆರಂಭದಲ್ಲಿ ಇರದಿದ್ದ ವಿಶ್ವಾಸ, ವಿಸ್ಮಯ ವಾಸ್ತವದಲ್ಲಿ ಸತ್ಯವಾಗುವ ಭಾವನೆಯನ್ನು ಮೂಡಿಸಿತು. ಕಲ್ಲು ಕರಗಿ ಮಣ್ಣಾಗಿ ಮುಂದೊಂದು ದಿನ ಅಂತರಂಗ ಗಂಗೆಯ ದರ್ಶನವಾದಾಗ ಸಂತಸಕ್ಕೆ ಪಾರವಿರಲಿಲ್ಲ

ಮತ್ತಷ್ಟು ಓದು »

4
ಜುಲೈ

ಹನಿ ಹನಿ ಪ್ರೇಂ ಕಹಾನಿ

– ಮಧು ಚಂದ್ರ,  ಭದ್ರಾವತಿ 

alexander-mಮನೆಗೆ ಅತಿಥಿಗಳು ಯಾರಾದರು  ಬಂದಲ್ಲಿ ಮೊದಲು ನೀವೇನು ಮಾಡುತ್ತಿರಿ,  ಗೊತ್ತೇ?

ಅತಿಥಿಗಳಿಗೆ  ಕುಡಿಯಲು ನೀರು  ಕೊಟ್ಟು  ಉಪಚರಿಸುತ್ತಿರಿ. ಇದು ಅನಾದಿ ಕಾಲದಿಂದಲೂ ನಡೆದು  ಬಂದ ಭಾರತೀಯ ಸಂಸ್ಕೃತಿ.  ಈ ಸಂಸ್ಕೃತಿಯನ್ನು  ತಪ್ಪದೆ  ಪಾಲಿಸುವವರನ್ನು ನಾವು ಭಾರತೀಯನೆನ್ನಬಹುದು.ನೀರನ್ನು ಕೊಟ್ಟು ಉಪಚರಿಸುವುದು ಭಾರತೀಯತೆ, ನೀರು ಇಲ್ಲದಿದ್ದರೆ ಮತ್ತೇನು ಮಾಡುವಿರಿ ಎಂದು ಎಂದಾದರೂ ಯೋಚಿಸಿದ್ದಿರ?  ಬಹುಶ ಇರಲಿಕ್ಕಿಲ್ಲ. ಕಾರಣ ಇಷ್ಟೇ ನಮ್ಮಲ್ಲಿ ನೀರಿನ ಮೂಲ ಮತ್ತು ಅಂತರ್ಜಲಕ್ಕೆ ಕೊರತೆ ಇಲ್ಲ ಎನ್ನುವ ಹುಚ್ಚು ಪ್ರಮೇಯ ಇರಬಹುದು. ಈ ಹುಚ್ಚು ಪ್ರಮೇಯವೇ ಇಂದಿನ “ಹನಿ ಹನಿ ಪ್ರೇಂ ಕಹಾನಿ”  ಲೇಖನ. ಹಿಂದೆ ನಾನೊಂದು ಓದಿದದ  ಕಥೆಯನ್ನು ನಿಮಗೆ  ಹೇಳಬಯಸುತ್ತೇನೆ. ಇದು  ನೈಜ ಘಟನೆಯೋ ಇಲ್ಲವೋ ನನಗೆ ಅರಿವಿಲ್ಲ ಅದರೂ ಲೇಖನಕ್ಕೆ ಸೂಕ್ತ ಎಂದೆನಿಸುತು. 

ವಿಶ್ವವನ್ನೇ  ಗೆದ್ದ ಅಲೆಗ್ಸಾಂಡರ್ ಯಾರಿಗೆ ಗೊತ್ತಿಲ್ಲ ಹೇಳಿ.

ಹಲವು ದೇಶಗಳನ್ನುಅಲೆಗ್ಸಾಂಡರ್ ಗೆದ್ದು ಮರುಭೂಮಿಯ ದಾರಿಯಲ್ಲಿ ಸಾಗುತ್ತಿರುವ ಸಮಯದಲ್ಲಿ ಅವನ ಉಗ್ರಾಣದಲ್ಲಿ ಇದ್ದ ಆಹಾರ ಸಾಮಗ್ರಿಗಳು ಖಾಲಿಯಾಗುತ್ತ ಬಂದವು. ಇನ್ನೇನು  ಮುಂದಿನ  ಊರಿನಲ್ಲಿ  ಸಂಗ್ರಹಿಸಬಹುದು  ಎಂದು ಮುಂದೆ ಮುಂದೆ ನಡೆದನು. ಆದರೆ  ಎತ್ತ  ನೋಡಿದರು,  ಬರಿ  ಮರುಭೂಮಿ  ಎಲ್ಲಿಯೋ  ಊರಿರುವ  ಲಕ್ಷಣಗಳು  ಕಾಣಲಿಲ್ಲ.  ಕಡೆಗೆ ಅವನ ಹತ್ತಿರವಿದ್ದ ಆಹಾರ ಸಾಮಗ್ರಿಗಳು ಖಾಲಿಯಾದವು. ವಿಶ್ವವನ್ನು ಗೆದ್ದ ವೀರನಿಗೆ ಹೊಟ್ಟೆ ಹಸಿವನ್ನು ಗೆಲ್ಲಲಾಗಲಿಲ್ಲ.

ತಾನು ನೀರು ಕುಡಿಯದೆ ಇದ್ದರೆ ಬದುಕುವುದಿಲ್ಲ ಅರಿತನು. ಅದೇ ಸಮಯದಲ್ಲಿ ದಾರಿಹೋಕನೋಬ್ಬನು  ಸಿಕ್ಕನು. ಅವನ ಹತ್ತಿರ ಇದ್ದ ನೀರನ್ನು ಕಂಡು ” ನನಗೆ ನಿನ್ನ ಹತ್ತಿರ ಇರುವ ನೀರು ಬೇಕು, ನನಗೆ ಕೊಡು.  ದಯವಿಟ್ಟು, ಏನು ಬೇಕು ಕೇಳು ನಾನು ಕೊಡುತ್ತೇನೆ ”  ಎಂದು  ಅಲೆಗ್ಸಾಂಡರ್ ಹೇಳಿದನು.

ಮತ್ತಷ್ಟು ಓದು »

2
ಜುಲೈ

ಇರ್ಫಾನ್ ಹೇಳಿದ ಗುಜರಾತಿ ಮುಸ್ಲಿಮರ ಹೊಸ ಶಕೆ

-ಸಂತೋಷ್ ತಮ್ಮಯ್ಯ

Modi N Muslims೩೫ ವರ್ಷದ ಮೆಮನ್ ಮುಸಲ್ಮಾನ ಯುವಕ. ರಾಜ್‌ಕೋಟ್ ಜಿಲ್ಲೆಯವರು. ಪೋರ್ ಬಂದರ್ ನಿಂದ ೭೦ ಕಿ.ಮೀ ದೂರದ ಉಪ್ಲೇಟಾ ಎಂಬ ತಾಲೂಕು ಕೇಂದ್ರದವರು. ಉಪ್ಲೇಟಾದಲ್ಲೇ ಹುಟ್ಟಿ ಬೆಳೆದು ಕಳೆದ ೧೨ ವರ್ಷಗಳ ಹಿಂದೆ ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದವರು. ಓದಿದ್ದು ಇಂಗ್ಲೀಷ್ ಎಂ.ಎ. ಉದ್ಯೋಗ ಔಷಧ ಮಾರಾಟ ಕಂಪನಿಯೊಂದರಲ್ಲಿ ಸೇಲ್ಸ್ ಮತ್ತು ಮಾರ್ಕೇಟಿಂಗ್ ಅಧಿಕಾರಿ. ಟ್ವಿಟರ್ ನಲ್ಲಿ ಸಕ್ರೀಯರು. ಬ್ಲಾಗ್ ಬರಹಗಾರರು. ಈಗಾಗಲೇ FATAL ADMIRATION  ಎಂಬ ಇಂಗ್ಲಿಷ್ ಕಾದಂಬರಿಯೊಂದನ್ನು ಕೂಡಾ ಬರೆದವರು.
ಅಚಾನಕ್ಕಾಗಿ ಮಾತಿಗೆ ಸಿಕ್ಕ ಇರ್ಫಾನ್ ಇಕ್ಬಾಲ್ ಘೆಟ್ಹಾ ತಾನೊಬ್ಬ ಸಾಮಾನ್ಯ ಮುಸಲ್ಮಾನ ಎಂದು ಪರಿಚಯ ಮಾಡಿಕೊಂಡರು. ಆದರೆ ಅವರು ಗುಜರಾತನ್ನು ಹೇಳುತ್ತಾ ಹೋದಂತೆ ಪತ್ರಿಕೆಗಳು ಬರೆಯದೇ ಇರುವ, ಟಿವಿಗಳು ತೋರಿಸದೇ ಇರುವ ಗುಜರಾತ್ ಇನ್ನೂ ಎಷ್ಟಿವೆ ಎಂದೆನಿಸುತ್ತಿತ್ತು. ಅವರು ಮಾತಾಡುತ್ತಿದ್ದರೆ “ಮೋದಿ ಮುಸಲ್ಮಾನರನ್ನು ಪ್ರತಿನಿಸುವುದಿಲ್ಲ” ಎಂದವರ ಮಾತುಗಳು ಸಮುದ್ರಪಾಲಾಗುತ್ತಿದ್ದವು.
ಇರ್ಫಾನ್ ಹೇಳುತ್ತಾ ಹೋದರು.
“ನಮ್ಮ ಗುಜರಾತಿನಲ್ಲಿ ಹುಟ್ಟಿ ವಿಶ್ವವಿಖ್ಯಾತರಾದವರಲ್ಲಿ ಗಾಂಧೀಜಿಯ ಅನಂತರದ ಹೆಸರು ಮೋದಿಯವರದ್ದೇ. ಪಟೇಲರೂ ಕೂಡಾ ಮಹಾವ್ಯಕ್ತಿಯೇ ಆದರೂ ವಿಶ್ವಮಟ್ಟದಲ್ಲಿ ಹೆಸರು ಮಾಡಿದವರು ನಮ್ಮ ನರೇಂದ್ರ ಭಾಯಿಯೇ. ಅವರ ಪ್ರಭಾವವೆಷ್ಟಿದೆಯೆಂದರೆ ನನ್ನಂಥ ಒರ್ವ ಸಾಮಾನ್ಯ ಗುಜರಾತಿಯನ್ನೂ ಜನ ನನ್ನ ನಾಯಕನ ಹೆಸರಿನಿಂದಲೇ ಗುರುತ್ತಿಸುತ್ತಾರೆ. ನಮ್ಮನ್ನು ಪರಿಚಯವಾದ ತಕ್ಷಣ ಜನ ನಮ್ಮನ್ನು ಮೋದಿಯವರ ಬಗ್ಗೆ ಪ್ರಶ್ನಿಸುತ್ತಾರೆ. ತನ್ನೂರಿನ ಬಗ್ಗೆ ಹೆಮ್ಮೆ ಪಡದವನೂ ಕೂಡ ಇಂಥ ಅನುಭವಗಳಿಂದ ಹೆಮ್ಮೆ ಪಡುತ್ತಾನೆ. ಇಂಥ ಹೆಮ್ಮೆ-ಪುಳಕ ಎಷ್ಟು ರಾಜ್ಯದ ಪ್ರಜೆಗಳಿಗೆ ಸಿಕ್ಕಿದೆ? ಅದೃಷ್ಟವಶಾತ್ ಮೋದಿ ಭಾಯಿ ಗುಜರಾತಿಗಳಿಗೆ ಅದನ್ನು ಒದಗಿಸಿದ್ದಾರೆ. ನನ್ನನ್ನು ನಾನು ಗುಜರಾತಿ ಎಂದು ಪರಿಚಯ ಮಾಡಿಕೊಂಡಾಗ, ಪೋರ್ ಬಂದರಿನ ಸಮೀಪದವನು ಎಂದಾಗ ಜನ ಗಾಂಧೀಜಿ ಬಗ್ಗೆ ಪ್ರಶ್ನಿಸುವುದಿಲ್ಲ. ಮೋದಿ ಬಗ್ಗೆ ಪ್ರಶ್ನಿಸುತ್ತಾರೆ. ಇದು ಆಧುನಿಕ ಗುಜರಾತಿಗೆ ಸಲ್ಲುವ ಗೌರವ. ನನ್ನ ನಾಯಕ ನನಗೆ ನೀಡಿರುವ ಅಪೂರ್ವ ಅವಕಾಶ” ಎಂದು ಅವರು ಹೇಳುತ್ತಿದ್ದರೆ  “ಏನ್ ಸ್ವಾಮಿ, ನಿಮ್ಮ ಮುಖ್ಯಮಂತ್ರಿಗಳು ಯಾವುದೋ ರಾಜ್ಯದ ವೇದಿಕೆಯಲ್ಲಿ ಕುರಿ ಹಿಡ್ಕೊಂಡು ನಿಂತಿರುವ ಫೋಟೋ ಬಂದಿದೆ ” ಎಂದು ಕೇಳಬೇಕಾದ ಸಂಕಟದ ಮುಂದೆ ಗುಜರಾತಿಗಳ ಹಿತಾನುಭವ ಅರ್ಥವಾಗಿತ್ತು.

ಮತ್ತಷ್ಟು ಓದು »

27
ಜೂನ್

ಕೇದಾರನಾಥನಲ್ಲಿ ಕಳೆದ ಒಂದು ದಿನ…..

– ಶೋಭಾ.ಹೆಚ್.ಜಿ,

ಸಂಪಾದಕರು, ಸ್ತ್ರೀ ಜಾಗೃತಿ ಮಾಸಪತ್ರಿಕೆ

Shiva - Kedaranath Floodಶಿವಾ.. ಶಿವಾ .. ಏನಿದು ನಿನ್ನ ತಾಂಡವ ನೃತ್ಯ, ಯಾಕಾಗಿ.? ಈ ವಿನಾಶ ಯಾವುದರ ಮುನ್ಸೂಚನೆ ..? ಮಾನವನ ಯಾವ ಪಾಪಕ್ಕಾಗಿ ಈ ಶಿಕ್ಷೆ..? ರಾತ್ರಿ ಝೀ ಟಿವಿಯಲ್ಲಿ ಈ ಪ್ರಚಂಡ ಪ್ರಳಯದ ನಂತರ ನೋಡಿದ ಮೊದಲ ದೃಶ್ಯ ನೋಡಿದ ಕ್ಷಣ ಅನಿಸಿದ್ದು. ದೇವಸ್ಥಾನದ ಮುಂದೆ ಬಿದ್ದಿರುವ ರಾಶಿ ರಾಶಿ ಶವಗಳು, ಮಂದಿರದ ಒಳಗೆ ಹಾಗೆಯೇ ಶವಗಳು ಬಿದ್ದಿದೆ ಎನ್ನುವುದು ಕೇಳಿದ ಮೇಲೆ ಕರುಳು ಕಿತ್ತು ಬಂದ ಅನುಭವ, ಹೃದಯ ಹಿಂಡಿ ತೆಗೆದಂತೆ, ಅಲ್ಲಿ ನಾನು ಕಳೆದ ಒಂದು ದಿನದ ಸವಿ ನೆನಪು ನಿಮ್ಮೊಂದಿಗೆ…

ಅಪ್ಪಾಜಿ ಸಾವಿನಿಂದ ಕುಸಿದು ಹೋದವಳಿಗೆ ನೆನಪಾದದ್ದು ಹಿಮಾಲಯದ ಕೇದಾರನಾಥ. ಮನಸ್ಸಿಗೆ ಸಮಾಧಾನ ಹುಡುಕಿ ಎಲ್ಲ ಕೆಲಸಗಳನ್ನು ಬದಿಗೊತ್ತಿ ಹೊರಟವಳಿಗೆ, ಜೊತೆಯಲ್ಲಿ ಹೊರಟ ಗೆಳತಿಗೆ ಅನಾರೋಗ್ಯವಾಗಿ ಬರಲಾಗದಿದ್ದುದು, ಅದೇ ಟಿಕೇಟಿಗೆ ಹೊರಟ ಮತ್ತಿಬ್ಬರು ಬರಲಾಗದಿದ್ದುದು, ಕೊನೆಗೆ ಒಬ್ಬಳೇ ಹೊರಟವಳಿಗೆ ಮನೆಯವರೆಲ್ಲರ ವಿರೋದ, ಜೂನ್ ನ ಕೊನೆಯಲ್ಲಿ ಎಲ್ಲರೂ ಹೋಗೋಣ ಈಗ ಬೇಡವೆಂದರೂ, ಹಿಮಾಲಯದ ಸೆಳೆತ ನನ್ನನ್ನು ಕೇದಾರತನಕ ಎಳೆದುಕೊಂಡು ಹೋಯಿತು. ಅದು ಕೇದಾರನಾಥನ ಇಚ್ಚೆ ಯಾರನ್ನು ಯಾವಾಗ ತನ್ನ ಹತ್ತಿರ ಕರೆಸಿಕೊಳ್ಳಬೇಕು ಎಂದು ತೀರ್ಮಾನಿಸುವವನು ಅವನೇ ಎಂದು ಈಗ ಅನಿಸುತ್ತಿದೆ. ನಮ್ಮಿಚ್ಛೆಯಂತೆ ಏನೂ ನಡೆಯುವುದಿಲ್ಲ.

ಮೇ ೧೦ ಬೆಂಗಳೂರು ಬಿಟ್ಟವಳು, ಹೃಷಿಕೇಶದಲ್ಲಿ ಎರಡು ರಾತ್ರಿ ಉಳಿದು, ರುದ್ರಪ್ರಯಾಗದ ಮುಖಾಂತರ ರಸ್ತೆಮಾರ್ಗವಾಗಿ ಗುಪ್ತಕಾಶಿ ತಲುಪಿ ಅಲ್ಲಿ ಒಂದು ದಿನ ಉಳಿದೆ. ಅಂದು ವಿಪರೀತ ಮಳೆ – ಚಳಿ, ಅಲ್ಲಿಯೇ ಒಂದು ಮನೆಯಲ್ಲಿ ಉಳಿದೆ, ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ ಸಿಗುತ್ತಿಲ್ಲ. ಅವರ ಮನೆಯಿದ್ದುದು, ರಸ್ತೆ ಬದಿಯಲ್ಲಿ ಇಳಿದು ಕೆಳಗೆ ಕಟ್ಟಿರುವುದು, ಅದೀಗ ಇದೆಯೇ? ಎನ್ನುವ ಅತಂಕ. ಅ ದಂಪತಿಗಳ ಮುದ್ದಾದ ಮೂರು ಮಕ್ಕಳ ಜೊತೆ ಕಳೆದ ಕ್ಷಣಗಳು, ಆ ಮನೆಯ ಗೃಹಿಣಿ ಮಾಡಿಕೊಟ್ಟ ಬಿಸಿ ಬಿಸಿ ಪುಲ್ಕ-ದಾಲ್, ಚಹಾ, ಅ ಮನೆಯ ಯಜಮಾನ ರಾಣಾ ಸಿಂಗ್ ಅಲ್ಲಿಯ ಜೀವನದ ಕಷ್ಟಗಳನ್ನು ಗಂಟೆಗಟ್ಟಲೆ ಹೇಳಿದ್ದು, ಕೃಷಿಗಿಂತ ಪ್ರವಾಸೋದ್ಯಮವೇ ತಮ್ಮ ಜೀವನಕ್ಕೆ ಆಧಾರವಾಗಿರುವುದು, ಅದರೆ, ಹೊರ ರಾಜ್ಯದವರ ಉದ್ಯಮಿಗಳ ದಾಳಿಯಿಂದ ಸ್ಥಳಿಯರು ಪಡುತ್ತಿರುವ ಪಾಡಿನ ಬಗ್ಗೆ ತೋಡಿಕೊಂಡದ್ದು, ಬೆಳಿಗ್ಗೆ ಶಾಲೆಗೆ ಹೋಗುವಾಗ ಅವರ ಮಕ್ಕಳಿಗೆ ನಾನು ಬಾಯ್ ಹೇಳಿ ಕಳಿಸಿದ್ದು, ಮತ್ತೇ ಬನ್ನಿ ಎಂದು ಅವರು ಹೇಳಿದ್ದು ಎಲ್ಲ ನೆನಪಾಗುತ್ತೆ. ಅವರ ಇರುವಿಕೆಯ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ.
ಮತ್ತಷ್ಟು ಓದು »

22
ಜೂನ್

‘ಅಪಶೂದ್ರಾಧಿಕರಣ’ ಏನನ್ನು ಹೇಳುತ್ತದೆ?

Shankaraacharya1ಡಾ.ರಾಜಾರಾಮ ಹೆಗಡೆ

ಶಂಕರಾಚಾರ್ಯರ ಬ್ರಹ್ಮಸೂತ್ರಭಾಷ್ಯದ ಅಪಶೂದ್ರಾಧಿಕರಣದಲ್ಲಿ ಮಂಡಿತವಾದ ವಿಚಾರಗಳ ಕುರಿತು ಬರುತ್ತಿರುವ ಟೀಕೆಗಳಿಗೆ ಸಂಬಂಧಿಸಿದಂತೆ ಈ ಪ್ರತಿಕ್ರಿಯೆ.

ಯಾರು ಎಷ್ಟೇ ದೊಡ್ಡ ವ್ಯಕ್ತಿಯಾಗಿರಬಹುದು, ಗ್ರಂಥವಾಗಿರಬಹುದು ಅದನ್ನು ಟೀಕೆ ಮಾಡುವುದರಲ್ಲಿ ಅಥವಾ ಅದರ ವಿಚಾರಗಳನ್ನು ಖಂಡಿಸುವುದರಲ್ಲಿ ಯಾವ ದೋಷವೂ ಇಲ್ಲ. ಆದರೆ ಈ ಕೆಲಸವನ್ನು ತರ್ಕಬದ್ಧವಾಗಿ ಪ್ರಮಾಣಪೂರ್ವಕವಾಗಿ ಮಾಡಬೇಕೆಂಬುದು ಒಂದು ಬೌದ್ಧಿಕ ಚರ್ಚೆಯ ನಿಬಂಧನೆ. ಪ್ರಸ್ತುತ ಟೀಕೆಗಳನ್ನೇ ಗಮನಿಸಿ. ಈ ಟೀಕೆಯನ್ನು ನಡೆಸುವವರು ಎರಡು ಹೆಜ್ಜೆಗಳನ್ನು ಇಡುತ್ತಿದ್ದಾರೆ. 1) ಶಂಕರಾಚಾರ್ಯರು ಏನನ್ನು ಹೇಳುತ್ತಿದ್ದಾರೆ ಎಂಬುದು ಮೊದಲನೆಯದು ಹಾಗೂ 2) ಅದು ಸ್ವೀಕಾರಾರ್ಹವಲ್ಲ ಎಂಬುದು ಎರಡನೆಯದು. ಮೊದಲನೆಯದು ಸಿದ್ಧವಾಗದೇ ಎರಡನೆಯದು ಸಾಧ್ಯವಿಲ್ಲ. ಒಂದೊಮ್ಮೆ ಶಂಕರರು ಏನನ್ನು ಹೇಳುತ್ತಿದ್ದಾರೆ ಎಂಬುದನ್ನೇ ತಪ್ಪಾಗಿ ತಿಳಿಯಲಾಗಿದೆ ಅಂತಾದರೆ ಎರಡನೆಯ ಹೆಜ್ಜೆಯೂ ದಿಕ್ಕು ತಪ್ಪಿಹೋಗಿರುತ್ತದೆ. ಈ ಟೀಕೆಗಳಿಗೂ ಇದೇ ಗತಿಯಾಗಿದೆ ಎಂಬುದು ನನ್ನ ಅಭಿಪ್ರಾಯ.

ಮೊದಲನೆಯದು, ಅಂದರೆ ಶಂಕರಾಚಾರ್ಯರು ಏನನ್ನು ಹೇಳುತ್ತಿದ್ದಾರೆ ಎಂಬುದನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂಬುದು ಬ್ರಹ್ಮಸೂತ್ರ್ರಭಾಷ್ಯದ ಅಪಶೂದ್ರಾಧಿಕರಣವನ್ನು ಓದಿದಾಗ ಸ್ಪಷ್ಟವಾಗುತ್ತದೆ. ಶಂಕರರು ಈ ಭಾಗದಲ್ಲಿ ಬ್ರಹ್ಮಸೂತ್ರದ ಕೆಲವು ಸೂತ್ರಗಳ ಅರ್ಥವನ್ನು ಶ್ರುತಿ, ಸ್ಮೃತಿಗಳ ಅಭಿಪ್ರಾಯಗಳನ್ನು ಆಧರಿಸಿ ನಿರ್ಣಯಿಸುತ್ತಾರೆ. ಈ ಭಾಗವು 1) ಶೂದ್ರರಿಗೆ ಬ್ರಹ್ಮಜ್ಞಾನ ಸಾಧ್ಯವಿಲ್ಲ ಎಂದು ನಿರ್ಣಯಿಸುತ್ತಿಲ್ಲ. 2) ಶೂದ್ರರಿಗೆ ಉಪನಯನಕ್ಕೆ ಹಾಗೂ ವೇದವಿದ್ಯೆಗೆ ಅಧಿಕಾರವಿಲ್ಲ ಎಂಬುದಾಗಿಯೂ ಹೇಳುತ್ತಿಲ್ಲ. 3)ವೇದಾಧ್ಯಯನದಿಂದ ಮಾತ್ರವೇ ಬ್ರಹ್ಮಜ್ಞಾನ ಸಾಧ್ಯ ಎಂಬುದಾಗಿ ಹೇಳುತ್ತಿಲ್ಲ. ಈ ಅಧಿಕರಣದಲ್ಲ್ಲಿ ಹೇಳುತ್ತಿರುವುದೇನೆಂದರೆ ಶೂದ್ರರಿಗೆ ವೇದಾಧ್ಯಯನದ ಮೂಲಕ ಜ್ಞಾನಾಧಿಕಾರವಿಲ್ಲ ಎಂಬುದಷ್ಟೇ. ಉಪನಯನ ಸಂಸ್ಕಾರವಿಲ್ಲದವರಿಗೆ ವೇದಾಧ್ಯಯನಕ್ಕೆ ಅರ್ಹತೆ ಬರುವುದಿಲ್ಲ ಎಂಬುದೇ ಶ್ರುತಿಗಳ ಅಭಿಪ್ರಾಯ ಎಂಬುದನ್ನು ನಿರ್ಣಯಿಸುತ್ತಿದ್ದಾರೆ. ಹುಟ್ಟಾ ಎಲ್ಲರೂ ಶೂದ್ರರು, ಉಪನಯನ ಸಂಸ್ಕಾರವನ್ನು ಹೊಂದಿದವನನ್ನು ದ್ವಿಜ (ಉಪನಯನ ಎರಡನೆಯ ಹುಟ್ಟು) ಎಂಬುದಾಗಿ ಕರೆಯಲಾಗಿದೆ. ಹಾಗಾಗಿ ಎರಡು ಪ್ರಕಾರದ ಶೂದ್ರರನ್ನು ಕುರಿತು ಅವರು ಚರ್ಚಿಸುತ್ತಾರೆ: 1) ಉಪನಯನ ಸಂಸ್ಕಾರವಾಗುವುದಕ್ಕೂ ಪೂರ್ವದ ಅವಸ್ಥೆ (ಇವರಲ್ಲಿ ಬ್ರಾಹ್ಮಣಾದಿ ನಾಲ್ಕು ವರ್ಣಗಳೂ ಬರುತ್ತವೆ) 2) ಜಾತಿ ಶೂದ್ರರು: ಪಾರಂಪರಿಕವಾಗಿ ಉಪನಯನ ಸಂಸ್ಕಾರದ ಆಚರಣೆಯನ್ನೇ ಹೊಂದಿಲ್ಲದ ಜಾತಿಗಳು. ಭಾಷ್ಯವು ವೇದಾಧಿಕಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರಲ್ಲೂ ಯಾವುದೇ ವ್ಯತ್ಯಾಸವನ್ನು ಮಾಡುತ್ತಿಲ್ಲ.

ಮತ್ತಷ್ಟು ಓದು »

20
ಜೂನ್

ಜಾನ್ ಮೆಕೇನ್ ಸ್ಪರ್ಧಿಯಾಗುವ ಮುನ್ನವೇ ಗೆದ್ದಿದ್ದರು ಒಬಾಮಾ, ಹಾಗೆಯೇ ಮೋದಿಯೂ!

– ಗೋಪಾಲ ಕೃಷ್ಣ

MoObಅದು 2008ರ ನವೆಂಬರ್ 04ನೇ ತಾರೀಖು.  ಹಲವು ಕಾರಣಗಳಿಗೆ ಅಮೇರಿಕಾ ಅಧ್ಯಕ್ಷೀಯ ಚುನಾವಣೆ ವಿಶೇಷತೆ ಪಡೆದುಕೊಂಡಿತ್ತು.  ಅದಕ್ಕೆ ಮುಖ್ಯವಾಗಿ ಕಾರಣವಾಗಿದ್ದು ಬರಾಕ್ ಒಬಾಮಾ.  ಎಲ್ಲಾ ಅಡೆತಡೆಗಳನ್ನು ದಾಟಿ ಚುನಾವಣೆಯ ಹೊಸ್ತಿಲಲ್ಲಿ ನಿಂತ ಒಬಾಮಾಗೆ ರಿಪಬ್ಲಿಕನ್ ಪಕ್ಷದ ಜಾನ್ ಮೆಕೇನ್ ಪ್ರತಿಸ್ಪರ್ಧಿಯಾಗಿದ್ದರು.  ಒಬಾಮಾ ಅವರೇ ಗೆಲ್ಲುತ್ತಾರೆ ಎನ್ನುವುದು ಚುನಾವಣೆಗೂ ಮುನ್ನವೆ ಅಮೇರಿಕಾದಲ್ಲಿ ಮಾತ್ರವಲ್ಲ ಇಡಿ ವಿಶ್ವದಲ್ಲೇ ನಿರೀಕ್ಷೆಗಳನ್ನು ಹುಟ್ಟಿಸಿತ್ತು.  ಆ ಪರಿಯ ಸಂಚಲನ ಮೂಡಿಸಿದ್ದರು ಒಬಾಮಾ.  ಅವರ ಪ್ರಚಾರ ವೈಖರಿ, ಬದಲಾವಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ್ದು, ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡದ್ದು ಎಲ್ಲವೂ ಒಬಾಮಾ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ್ದವು.  ಅಂತೆಯೇ ಗೆದ್ದು, ಅಧ್ಯಕ್ಷರಾದರು.

ಒಬಾಮಾ ಗೆಲುವಿನ ಹಾದಿಗೆ ಸಾಮ್ಯತೆ ಎನಿಸುವಂತಹ ಬೆಳವಣಿಗೆಗಳು ಭಾರತದಲ್ಲಿಯೂ ಗೋಚರಿಸುತ್ತಿವೆ, ಅದು ಮುಂದಿನ ಲೋಕಸಭಾ ಚುನಾವಣೆಗೆ.  ಇದಕ್ಕೆ ಕಾರಣವಾಗಿರುವುದು ನರೇಂದ್ರ ಮೋದಿಯವರ ನಡೆಗಳು ಮತ್ತು ಅವರ ವಿರೋಧಿಗಳ ಅಡ್ಡಗಾಲುಗಳು.

ಒಬಾಮಾ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗುವುದು ಸುಲಭವಾಗಿರಲಿಲ್ಲ.  ಜಾನ್ ಎಡ್ವಡ್ರ್ಸ್ ಮತ್ತು ಹಿಲರಿ ಕ್ಲಿಂಟನ್ ಅವರಿಂದ ಭಾರೀ ಸ್ಪರ್ಧೆಯನ್ನೇ ಎದುರಿಸಬೇಕಾಯಿತು.  ಅದರಲ್ಲೂ ಹಿಲರಿ ಕ್ಲಿಂಟನ್ ಕೊನೆಯ ಕ್ಷಣದವರೆಗೂ ಒಬಾಮಾ ಹಾದಿಗೆ ಮುಳ್ಳಾಗುತ್ತಲೇ ಇದ್ದರು.  ಅಧ್ಯಕ್ಷೀಯ ಚುನಾವಣೆಗಿಂತಲೂ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಆಯ್ಕೆಯೇ ಅಮೇರಿಕಾದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.  ಇದು ಒಬಾಮಾ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನೂ ವಹಿಸಿತ್ತು.  ‘We ಓeeಜ ಅhಚಿಟಿge’ ‘ಅಊಂಓಉಇ, ತಿe ಛಿಚಿಟಿ’  ಎಂಬ ಘೋಷವಾಕ್ಯಗಳೊಂದಿಗೆ ಒಬಾಮಾ ಜನರ ಬಳಿಗೆ ಹೋದರು.  ಹಿಲರಿ ಕ್ಲಿಂಟನ್ ‘ಇxಠಿeಡಿieಟಿಛಿe’ ಬಗ್ಗೆ ಮಾತನಾಡುತ್ತ ಜನರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸಿದರು.  ಮೊದಮೊದಲು ಜನರ ಭಾವನೆಗಳು ಅನುಭವಿ ಎಂಬ ಕಾರಣಕ್ಕೆ ಹಿಲರಿಯತ್ತ ವಾಲುತ್ತಿದ್ದವು.  ಒಬಾಮಾರಾದರೂ ಹೊಸಬರು, ಇನ್ನು ಕಲಿಯಬೇಕಾದ್ದು ಬಹಳಷ್ಟಿದೆ ಎಂಬ ಅಭಿಪ್ರಾಯವೂ ಮೂಡಿತ್ತು.  ಆದರೆ ವಾಸ್ತವವನ್ನರಿತು ಬದಲಾವಣೆ ತರಲು ತನ್ನಲ್ಲಿರುವ ಸಾಮಥ್ರ್ಯವನ್ನು ಜನರಿಗೆ ಬಿಡಿಬಿಡಿಯಾಗಿ ಬಿಚ್ಚಿಟ್ಟರು ಒಬಾಮಾ.  ಹಿಲರಿ ತಮ್ಮ ಅನುಭವದ ಬಗ್ಗೆ ಹೇಳಿದರೆ ಹೊರತು, ಬದಲಾವಣೆಯ ಬಗ್ಗೆ ಜನರನ್ನು ಸೆಳೆಯಲಿಲ್ಲ.  ಅಭ್ಯರ್ಥಿ ಆಯ್ಕೆಯಲ್ಲಿ ಒಬಾಮಾಗೆ ಶೇ.52ರಷ್ಟು ಮತ ಬಂದಿದ್ದರೆ, ಹಿಲರಿ ಶೇ.42 ಮತಗಳಿಗೆ ತೃಪ್ತಿಪಡಬೇಕಾಯಿತು.  ಹಿರಿತನಕ್ಕಿಂತಲೂ ಇಚ್ಛಾಶಕ್ತಿಯೇ ಮುಖ್ಯ ಎಂಬುದನ್ನು ಸಾಬೀತುಪಡಿಸಿದರು.  ಇದು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಅವಕಾಶವನ್ನು ಒಬಾಮಾಗೆ ತಂದಿತ್ತಿತು.

ಮತ್ತಷ್ಟು ಓದು »

19
ಜೂನ್

ಕೃಷ್ಣ ಗಾರುಡಿ ವರ್ಸಸ್ ನರೀಂದ್ರ ಮೋಡಿ!

– ತುರುವೇಕೆರೆ ಪ್ರಸಾದ್

Modi cartoonಮೋದಿ: ಗುರುಗಳೇ, ಕಮಲ ಸೈನ್ಯದ ಮುಂದಿನ ಮಹಾಸಮರ ದಳಪತಿಯಾಗಿ  ನೇಮಿಸಲ್ಪಟ್ಟಿರುವೆ. ಕೃಪೆ ಮಾಡಿ ಆಶೀರ್ವದಿಸಿ

ಅಡ್ವಾನಿ: ಛೀ! ಗುರುದ್ರೋಹಿ, ತೊಲಗಿಲ್ಲಿಂದ! ನಿನ್ನ ಮುಖ ತೋರಿಸಬೇಡ ನನಗೆ..!

ಮೋದಿ: ಈ ದುರಾಗ್ರಹವೇಕೆ ಗುರುವೇ! ಇದು ನೀವೇ ಕಲಸಿಕೊಟ್ಟ ಪಟ್ಟು.. ಏಕೀ ವಿರೋಧ? ಗುರು ಮಿಂಚಿನ ಶಿಷ್ಯಡು ಎಂದು ಎದೆ ತಟ್ಟಿ ಹೇಳುವುದು ಬಿಟ್ಟು! ನಿಮ್ಮ ಮುಖವಾಣಿಯಾಗಿದ್ದ ನನಗೇ ನೀವು ಅಡ್ಡವಾಣಿಯಾಗುವುದೇ?

ಅಡ್ವಾನಿ: ರಥ ಹತ್ತಿ ಅತಳ ಸುತಳ ಪಾತಾಳ ಸುತ್ತಿದ  ಈ ಅತಿರಥ ಮಹಾರಥನ ಮುಂದೆ ನೀನ್ಯಾವ ಲೆಕ್ಕ?

ಮೋದಿ: ಯಾರು ತಿಳಿಯರು ನಿಮ್ಮ ರಥಬಲದ ಪರಾಕ್ರಮ

ಸಂದಿಗೊಂದಿಗಳೊಳ್  ಸಂಚರಿಸಿದ ನಿಮ್ಮ ರಥಯಾತ್ರೆಗಳ ಕರ್ಮ

ಎಲ್ಲದಕೂ ಕಾರಣವು ಶ್ರೀ ರಾಮ ನಾಮ

ಕಲ್ಯಾಣಸಿಂಗ್ ಇಲ್ಲದಿದ್ದರೆ ಮೂರು ನಾಮ

ಕಡಾಣಿ ಮುರಿದ ರಥದೊಡೆಯ ನೀವು ತೃಣಕ್ಕೆ ಸಮಾನ..!

ಅಡ್ವಾನಿ: ಜನಸಂಘ ಶೂರ ನಾ ಶ್ರೀರಾಮ ಬಲನೋ, ಸಂಘದೊಡನೆ ಹೋರಾಡಿ ಅಧ್ಯಕ್ಷ ಗಾದಿಯಂ ಪಡೆದವನೋ,ಗಡ್ಕರಿಯ ಉತ್ಸವಕೆ ಸಂಚಕಾರ ತಂದವನೋ? ಪ್ರಧಾನಿ ಪಟ್ಟಕ್ಕೆ ಎದುರಾಗೋ ಕುರಿಗಳಂ ನೀವಾಳಿಸೋ ವ್ಯಾಘ್ರನಿವನೋ..ಉಗ್ರ ಪ್ರತಾಪಿ..

ಮತ್ತಷ್ಟು ಓದು »

17
ಜೂನ್

ಸಂಶೋಧನೆಗಳ ಮೇಲೆ ಸರ್ಕಾರದ ವಕ್ರದೃಷ್ಟಿ

Recently Updated1ರಮಾನಂದ ಐನಕೈ, ನ್ಯಾಯವಾದಿಗಳು, ಶಿರಸಿ

ಸಂಶೋಧನೆ ಅಂದರೇನು? ಸಂಶೋಧನೆಗಳಿಂದ ಸಮಾಜಕ್ಕೆ ಏನು ಪ್ರಯೋಜನ? ವರ್ತಮಾನದ ಎದುರು ಇಂತಹ ಹಲವಾರು ಪ್ರಶ್ನೆಗಳಿವೆ. ಉತ್ತರಿಸುವವರಾರು? ಸಂಶೋಧನೆಗಳ ಕುರಿತಾಗೆ ಸಂಶೋಧನೆ ನಡೆಸಬೇಕಾದ ಅಗತ್ಯ ನಮ್ಮೆದುರಿಗಿದೆ.

ಒಂದುದಿನ ಬೆಳಿಗ್ಗೆ ಶಾಲೆಗೆ ಹೋಗುವ ನನ್ನ ಮಗ ರಂಪಾಟ ಮಾಡುತ್ತಿದ್ದಾನೆ. ಅವನ ಸಮವಸ್ತ್ರದ ಅಂಗಿಚಡ್ಡಿ ಸಿಕ್ಕಿಲ್ಲ. ತಾಯಿಯ ಜೊತೆ ಕೂಗಾಡುತ್ತಿದ್ದಾನೆ. ಆಕೆಗೂ ಸಿಟ್ಟು ಬಂತು. ‘ ಅಪ್ಪಅಮ್ಮ ಇರೋದು ಅಂಗಿಚಡ್ಡಿ ಹುಡುಕಿಕೊಡೋದಕ್ಕಲ್ಲ. ಬೇಕಾದರೆ ನೀನೆ ಹುಡುಕಿಕೊ’ ಎಂದು ತನ್ನ ಕೆಲಸಕ್ಕೆ ಹೋದಳು. ಈತ ಬೆಡ್ ರೂಮಿನಲ್ಲಿ ದಡಬಡ ಸದ್ದುಮಾಡುತ್ತ ಹುಡುಕತೊಡಗಿದ. ಸ್ವಲ್ಪ ಸಮಯದ ನಂತರ ಓಡಿಬಂದು ‘ಸಿಕ್ಕಿತು, ಅಂಗಿಚಡ್ಡಿ ನಾನೇ ಸಂಶೋಧನೆ ಮಾಡಿದೆ’ ಎಂದು ಹೆಮ್ಮೆಯಿಂದ ಹೇಳಿದೆ. ಸಂಶೋಧನೆಯ ಕತೆ ಇಲ್ಲಿಗೆ ಬಂತಲ್ಲ ಎಂದು ನನಗೆ ನಗು ಬಂತು. ಇದಕ್ಕೆ ಪೂರಕವಾಗಿ ನನ್ನ ಮಿತ್ರರೊಬ್ಬರು ‘ಕೆಲವರು ಗೂಗಲ್ನಲ್ಲಿ ಸರ್ಚ ಮಾಡುವುದನ್ನೇ ರಿಸರ್ಚ ಅಂದುಕೊಂಡಿದ್ದಾರೆ’ ಎಂದು ಹೇಳುತ್ತಿದ್ದರು. ಹೀಗೆ ಇಂದು ಸಂಶೋಧನೆಯೆಂದರೆ ನಗೆಪಾಟಲಿನ ವಿಷಯವಾಗಿದೆ. ಮುಖ್ಯವಾಗಿ ಅಕಡೆಮಿಕ್ ರಿಸರ್ಚಗಳು ಇಂಥ ಟೀಕೆಗೆ ಗುರಿಯಾಗಿವೆ. ವಿಶ್ವವಿದ್ಯಾಲಯದ ಸಂಶೋಧನೆಗಳ ಗುಣಮಟ್ಟವಂತೂ ಕಲ್ಪನೆಗೆ ಎಟಕುತ್ತಿಲ್ಲ.

ಹಾಗಂತ ಎಲ್ಲರೂ ಈ ರೀತಿ ಇರುತ್ತಾರೆ ಎಂದರೆ ತಪ್ಪಾಗುತ್ತದೆ. ಕೆಲವರು ಪ್ರಾಮಾಣಿಕವಾಗಿ ತೊಡಗಿಕೊಳ್ಳುವವರೂ ಇದ್ದಾರೆ. ಆದರೆ ಅವರಿಗೂ ಒಂದು ಮಿತಿ ಇದೆ. ಈಗಾಗಲೆ ಚಾಲ್ತಿಯಲ್ಲಿದ್ದ ವಿಚಾರಗಳ ಪುನರುತ್ಪಾದನೆಯನ್ನೆ ಮಾಡುತ್ತಿರುತ್ತಾರೆ. ಏಕೆಂದರೆ ನಮ್ಮಲ್ಲಿನ ಸಂಶೋಧನಾ ವಿಧಾನಗಳೇ ಸರಿಯಾಗಿಲ್ಲ. ಸಂಶೋಧನೆಯ ವಿಷಯ ಏನಿರಬೇಕು? ಸಂಶೋಧನೆಗೆ ಯಾವ ವಿಷಯವನ್ನು ಹೇಗೆ ಆಯ್ದುಕೊಳ್ಳಬೇಕೆಂಬುದರ ಕುರಿತೂ ಸರಿಯಾದ ಮಾರ್ಗದರ್ಶನವಿಲ್ಲ. ಅದರಲ್ಲೂ ಸಮಾಜ ವಿಜ್ಞಾನಕ್ಕೆ ಸಂಬಂಧಪಟ್ಟ ವಿಷಯಗಳ ಸಂಶೋಧನೆಯಂತೂ ಶುದ್ಧ ಬಾಲೀಶತನದಿಂದ ಕೂಡಿರುತ್ತದೆ. ಗತ ಇತಿಹಾಸವನ್ನು ಆಧಾರವಾಗಿಟ್ಟುಕೊಂಡು ಸಮಾಜದ ಸಂಶೋಧನೆ ಮಾಡುತ್ತಾರೆ. ಆದ್ದರಿಂದ ಸಮಾಜ ವಿಜ್ಞಾನದ ಸಂಶೋಧನೆಗೆ ಹೊರಡುವ ಆದರ್ಶದ ಯುವಕರಿಗೆ ಪ್ರಾರಂಭದಲ್ಲೇ ಸಮಸ್ಯೆ ಎದುರಾಗುತ್ತದೆ. ಜನರಿಗೆ ಬೇಕಾದ ಜನಪ್ರೀಯ ವಾದಗಳನ್ನು ಸಂಶೋಧನೆಗೆ ಆಯ್ದುಕೊಳ್ಳಬೇಕೋ ಅಥವಾ ಕಷ್ಟವಾದರೂ ಸತ್ಯಶೋಧಿಸಲು ಹೊರಡಬೇಕೋ ಎಂಬ ಆಯ್ಕೆಯ ಸಂದಿಗ್ಧ ಶುರುವಾಗುತ್ತದೆ.

ಮತ್ತಷ್ಟು ಓದು »

17
ಜೂನ್

ಬೌದ್ದರನ್ನು ಓಡಿಸಲು ಶಂಕರರೇನು ಅರಸರಾಗಿದ್ದರೇ?

– ಸಂತೋಶ್ ತಮ್ಮಯ್ಯ

Shankaraacharya1ಕೆಲವರ ಮನಸ್ಸೇ ವಿಚಿತ್ರವಾದುದು. ಅವರದ್ದು ವಿನಾಕಾರಣ ನಿರಾಕರಣವಾದ. ಇದ್ದುದನ್ನು ಇಲ್ಲವೆನ್ನುವುದು, ಇಲ್ಲದ್ದನ್ನು  ಇದೆ ಎನ್ನುವುದು , ವಿನಾಕಾರಣ ಖಂಡಿಸುವುದು, ವಿಪರೀತವನ್ನು ಮಂಡಿಸುವುದು, ವಿಚಿತ್ರ ಸ್ವಭಾವಗಳು. ಉದಾಹರಣೆಗೆ ಎಲ್ಲರಿಗೂ ಇಷ್ಟವಾಗುವ ಸಿನೆಮಾವನ್ನು ಕೆಲವರು ವಿನಾಕಾರಣ ಬಯ್ಯುತ್ತಾರಲ್ಲಾ ಅಂಥವರು.  ಆ ಮನಸ್ಸನ್ನು  ಸಿನಿಕವೆನ್ನಿ, ಪೂರ್ವಗ್ರಹವೆನ್ನಿ, ಅಬದ್ಧವೆನ್ನಿ, ಅಸ್ವಸ್ಥವೆನ್ನಿ ಎಲ್ಲವೂ ಸರಿಯೇ. ನಮ್ಮ ಸಾಹಿತ್ಯಲೋಕದಲ್ಲಿ ಅಂಥವರನೇಕರು ಸಿಗುತ್ತಾರೆ. ಅವರೆಲ್ಲರೂ   ಸಂದರ್ಭ ಸಿಕ್ಕಾಗಲೆಲ್ಲಾ ಹೀಗೆ ಹೇಳಿಕೆಗಳನ್ನು ಕೊಡುತ್ತಿರುತ್ತಾರೆ. ಭೈರಪ್ಪನವರು ಬರೆದಾಗ, ನ್ಯಾಯನೀತಿಯನ್ನು ಇನ್ಯಾರೋ ಎತ್ತಿ ಹಿಡಿದಾಗ, ಚಿದಾನಂದ ಮೂರ್ತಿಗಳು ಏನನ್ನೋ ಶೋಧಿಸಿದಾಗಲೆಲ್ಲಾ   ಅದಕ್ಕೆ ಸಂಪೂರ್ಣ ನೇತ್ಯಾತ್ಮಕವಾದುದನ್ನು ಹಿಡಿದು ಹೇಳಿಕೆಗಳನ್ನು ನೀಡಲಾರಂಭಿಸುತ್ತಾರೆ. ಅದಕ್ಕೆ ಕೆಲವು ಪತ್ರಕರ್ತರು ಕನ್ನಡದ ಮನಸ್ಸು ಎಂಬ ಹೆಸರು ಕೊಟ್ಟುಬಿಡುತ್ತಾರೆ. ಇಂಥ ಸತ್ಯದ ಆವರಣವನ್ನೇ ಕನ್ನಡದ ಮನಸ್ಸು ಎನ್ನುವುದಾದರೆ ಅದು ಕನ್ನಡಕ್ಕೆ ಮುಸುಕಿರುವ ಆವರಣ ಎನ್ನದೆ  ವಿಧಿ ಇಲ್ಲ. ಇಂಥವರ ಗುಂಪಿಗೆ ಈಗ ಮತ್ತೊಬ್ಬರು ಸೇರಿದ್ದಾರೆ.

ಯಾರೋ ಕೇಶವ ಮೂರ್ತಿಯಂತೆ. ಇದುವರೆಗೆ ಅವರ ಮುಖ ನೋಡಿದವರಿಲ್ಲ. ಸಾಹಿತ್ಯ ಓದಿದವರಿಲಿಲ್ಲ. ಈ ಮಧ್ಯೆ ಕಾಂಗ್ರೆಸ್ ಆಡಳಿತಕ್ಕೆ ಬಂತು. ಗುರುತಿಸಿಕೊಳ್ಳುವುದು ಲಾಭದ ದೃಷ್ಟಿಯಿಂದ ಉತ್ತಮ ಎನಿಸಿತ್ತೋ ಏನೋ ಹೇಳಿಕೆಯೊಂದನ್ನು ಕೊಟ್ಟರು.”ನರೇಂದ್ರ  ಮೋದಿಗಿಂತ ಶಂಕರಾಚಾರ್ಯರು ಹೆಚ್ಚು ಕ್ರೂರಿ” ಎಂದರು. ನರೇಂದ್ರಮೋದಿಯವರನ್ನು ನವನವೀನವಾಗಿ ಟೀಕಿಸುವ ಜನರಿಗೆ ಒಮ್ಮೆ ಈ ಮಾದರಿಯ ಟೀಕೆ ಸ್ವಜನಶೀಲವಾಗಿ ಕಂಡಿರಬೇಕು. ಏಕೆಂದರೆ ಅಲ್ಲಿ ಮೋದಿಯೂ ಇದ್ದರೂ, ಶಂಕರಾಚಾರ್ಯರೂ ಇದ್ದರು. ಇತಿಹಾಸವನ್ನೂ ಬಯ್ದಂತಾಯಿತು. ವರ್ತಮಾನವನ್ನೂ ತೆಗಳಿದಂತಾಯಿತು. ವೋಟ್ ಬ್ಯಾಂಕ್‌ ರಾಜಕಾರಣಕ್ಕಂತೂ ಇಂಥ ಹೇಳಿಕೆಗಳ ಆವಶ್ಯಕತೆ ತುಂಬಾ ಇತ್ತು. ಖಂಡಿಸುವ ಈ ಹೇಳಿಕೆಗಳಿಗಾಗಿ ಅವರು ಸಾಕಷ್ಟು  ಶ್ರಮವನ್ನೇ ಪಟ್ಟಿರಬೇಕು.
ಬಹುಶಃ ಕೇಶವಮೂರ್ತಿಯವರಿಗೆ ಈ ಸಂಗತಿಗಳು ತಿಳಿದಿರಲಿಕ್ಕಿಲ್ಲ.

೧೯೮೪ರ ಸಿಕ್ಖ್ ನರಮೇಧದಲ್ಲಿ ಸತ್ತವರು ೨೭೩೩ ಎಂಬುದು ಸರಕಾರದ ದಾಖಲೆ. ಆದರೆ ದಂಗೆಯಲ್ಲಿ  ೨೫,೦೦೦ಕ್ಕೂ ಹೆಚ್ಚು ಜನರು ಸತ್ತರು ಮತ್ತು ಗಾಯಗೊಂಡಿದ್ದರು. ನೂರಾರು ಸಿಕ್ಖ್ ಮಹಿಳೆಯರ ಮೇಲೆ ಅತ್ಯಾಚಾರ ನಡೆಯಿತು. ಸುಮಾರು ೩ ಲಕ್ಷ ಸಿಕ್ಖರು ಮನೆಮಾರುಗಳನ್ನು ಬಿಟ್ಟು ಓಡಿ ಹೋದರು ಮತ್ತು ತಲೆ ಮರೆಸಿಕೊಂಡರು. ನೂರಾರು ಗುರುದ್ವಾರಗಳನ್ನು ಕೆಡವಲಾಯಿತು ಮತ್ತು ಧರ್ಮಗ್ರಂಥವನ್ನು ಸುಡಲಾಯಿತು.  ದೇಶ ಕಾಯುತ್ತಿದ್ದ ೩೦೦ ಜನ ಸಿಕ್ಖ್ ಯೋಧರನ್ನ್ನು  ಕೊಲ್ಲಲಾಯಿತು. ಬೊಕಾರೋ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ೧೨೦ ಜನ  ಸಿಕ್ಖರನ್ನು  ಸಾಮೂಹಿಕವಾಗಿ  ದಹಿಸಲಾಯಿತು. ಖಾನ್‌ಪುರದಲ್ಲಿ ೧೩ ವರ್ಷದ ಸಿಕ್ಖ್ ಬಾಲಕನನ್ನು  ಗ್ಯಾಸ್ ಸ್ಟವ್‌ನಲ್ಲೇ ಕೋಳಿ ಸುಡುವಂತೆ ಸುಡಲಾಯಿತು. ಅಗರ್ತಲಾದಲ್ಲಿ ವಾಸಿಸುತ್ತಿದ್ದ ೩೦ ಸಿಕ್ಖ್ ಕುಟುಂಬಗಳು ಜೀವರಕ್ಷಣೆಗಾಗಿ ಪೊಲೀಸ್ ಠಾಣೆಯ  ಮೆಟ್ಟಲೇರಿದರು. ಪೊಲೀಸರೇ ಅವರೆಲ್ಲರನ್ನು ಸಜೀವವಾಗಿ ಸುಟ್ಟರು. ಮಧ್ಯಪ್ರದೇಶದ ಜಬಲ್‌ಪುರದಲ್ಲಿ ೧೨ ಜನ ಸಿಕ್ಖರನ್ನು ರೈಲು ನಿಲ್ದಾಣದ  ಪ್ಲಾಟ್‌ಫಾರ್ಮ್‌ನಲ್ಲೇ ನೇಣು ಹಾಕಿ ಕೊಲ್ಲಲಾಯಿತು.

ಮತ್ತಷ್ಟು ಓದು »