ವಿಷಯದ ವಿವರಗಳಿಗೆ ದಾಟಿರಿ

Recent Articles

14
ಜೂನ್

‘ಪ್ರಜಾವಾಣಿ’ಯ ವಚನಗಳ ಕುರಿತ ಚರ್ಚೆಗೊಂದು ಚರಮಗೀತೆ

vachana-charcheಪ್ರೊ. ರಾಜಾರಾಮ ಹೆಗಡೆ

ಪ್ರಜಾವಾಣಿ ಪತ್ರಿಕೆಯಲ್ಲಿ ವಚನಗಳ ಕುರಿತು ಡಂಕಿನ್ ಹಾಗೂ ಬಾಲಗಂಗಾಧರರ ವಿಚಾರಗಳ ಕುರಿತ ಚರ್ಚೆಗೆ ತೆರೆ ಎಳೆಯಲಾಗಿದೆ. ಇವರ ವಿಚಾರಗಳನ್ನು ವಿರೋಧಿಸುವವರಿಗೆಲ್ಲ ಸಾಕಷ್ಟು ಅವಕಾಶ ಸಿಕ್ಕಿರುವುದರಿಂದ ಇನ್ನೂ ಹೇಳಲಿಕ್ಕೆ ಅವರ ಬಳಿ ಏನೂ ಇಲ್ಲ ಎಂಬುದು ಸ್ಪಷ್ಟ. ಇವರು ಏನು ಹೇಳಿದ್ದಾರೆ ಎಂಬುದನ್ನೇ ಆಧರಿಸಿ ಅದರಲ್ಲಿ ನಮಗೇನಾದರೂ ಉಪಯೋಗವಾಗುವಂಥದ್ದು ಇದೆಯೆ ಎಂಬ ಕುರಿತ ಸಮೀಕ್ಷೆಯೇ ಈ ಬರೆಹ.

ವಚನಗಳು ಜಾತಿ ವಿರೋಧೀ ಚಳವಳಿಯಲ್ಲ ಎಂಬ ಹೇಳಿಕೆಗೆ ಕನ್ನಡದ ಪ್ರಗತಿಪರರನೇಕರು ಉಗ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಅವರು ಕೆಲವೊಂದು ವಚನಗಳನ್ನು ಪದೇ ಪದೇ ಉದ್ಧರಿಸಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರ ಪ್ರಕಾರ ವಚನಗಳು ಆಧ್ಯಾತ್ಮಿಕ ಸಾಹಿತ್ಯವೆಂದರೆ ಪುರೋಹಿತಶಾಹಿಯ ಹುನ್ನಾರ. ಅದು ಹೇಗೆ? ಇವರು ವಚನಗಳು ಆಧ್ಯಾತ್ಮವೇ ಅಲ್ಲ ಎನ್ನುವ ದಾರಿಯನ್ನು ಏಕೆ ಹಿಡಿಯುತ್ತಿದ್ದಾರೆಂದರೆ ಇವರ ಪ್ರಕಾರ ಆಧ್ಯಾತ್ಮವು ಪುರೋಹಿತಶಾಹಿಯ ಹುನ್ನಾರ ಎಂಬ ನಿರ್ಣಯವೇ ಆಗಿದೆ. ಅವರು ಆಧ್ಯಾತ್ಮಿಕತೆಗೂ ಪುರೋಹಿತಶಾಹಿಗೂ ಒಂದು ಅವಿನಾಭಾವೀ ಸಂಬಂಧವನ್ನು ಕಲ್ಪಿಸುತ್ತಿದ್ದಾರೆ ಎಂಬುದರಲ್ಲಿ ಸಂಶಯವಿಲ್ಲ. ಅವರ ಪ್ರಕಾರ ವಚನಗಳು ಏಕೆ ಜಾತಿ ವ್ಯವಸ್ಥೆಯ ವಿರುದ್ಧದ ಚಳವಳಿಗಳೆಂದರೆ ಇಷ್ಟೊಂದು ಮಂದಿ ಕೆಳಜಾತಿಯ ವಚನಕಾರರು ಜಾತಿ ಬೇಧ, ಬ್ರಾಹ್ಮಣ ಆಚರಣೆಗಳ ಕುರಿತು ಟೀಕೆಗಳನ್ನು ಮಾಡಿದ್ದೇ ಆಗಿದೆ. ಆದರೆ ಅವರು ನಮ್ಮ ವಾದವನ್ನು ಸರಿಯಾದ ಅರ್ಥದಲ್ಲಿ ಗ್ರಹಿಸಬೇಕಾದರೆ ಆಧ್ಯಾತ್ಮದ ಕುರಿತ ಪೂರ್ವಾಗ್ರಹಗಳನ್ನು ತೊಡೆದುಕೊಳ್ಳಬೇಕಾಗುತ್ತದೆ. ಅವರು ಯಾವಯಾವ ವಚನಕಾರರನ್ನು ಹಾಗೂ ವಚನಗಳನ್ನು ತಮ್ಮ ವಾದದ ಪುಷ್ಟೀಕರಣಕ್ಕೆ ಬಳಸಿಕೊಳ್ಳುತ್ತಾರೊ ಆ ಉದಾಹರಣೆಗಳನ್ನೆಲ್ಲ ಸಾಧ್ಯ ಮಾಡಿದ್ದು ಭಾರತೀಯ ಆಧ್ಯಾತ್ಮ ಸಂಪ್ರದಾಯದ ವೈಶಿಷ್ಟ್ಯತೆಯೇ ಆಗಿದೆ. ಅಂದರೆ ಅಷ್ಟೊಂದು ಕೆಳಜಾತಿಯ ವಚನಕಾರರು, ಅಷ್ಟೊಂದು ನಿಷ್ಟುರವಾಗಿ ಬ್ರಾಹ್ಮಣರನ್ನು ಹಾಗೂ ರೂಢಮೂಲ ಆಚರಣೆಗಳನ್ನು ಖಂಡಿಸುವ ಸಾಧ್ಯತೆಯನ್ನು ಆ ಆಧ್ಯಾತ್ಮಿಕ ಮಾರ್ಗ ಸೃಷ್ಟಿಸುತ್ತದೆ ಅಂತಲೇ ಅರ್ಥ. ಆಧ್ಯಾತ್ಮಿಕತೆಗೆ ನಿಜವಾಗಿಯೂ ಅವರು ಆರೋಪಿಸುವ ಪುರೋಹಿತಶಾಹಿಯ ಏಕಸ್ವಾಮ್ಯದ ಸ್ವರೂಪವಿದ್ದಿದ್ದರೆ ಈ ಮೇಲಿನ ಸಂಗತಿ ಹೇಗೆ ಸಾಧ್ಯವಾಗುತ್ತದೆ? ಹಾಗಾಗಿ ವಚನಗಳು ಆಧ್ಯಾತ್ಮಿಕ ಸಾಹಿತ್ಯಗಳು ಎಂಬುದು ಕೆಳಜಾತಿಯವರ ಹಿತಾಸಕ್ತಿಗೆ ವಿರುದ್ಧವಾದ ಹೇಳಿಕೆ ಎನ್ನುವುದೇ ಒಂದು ಪೂರ್ವಾಗ್ರಹಪೀಡಿತ ನಿಲುವು. ಅದು ಪಾಶ್ಚಾತ್ಯ ಚಿಂತಕರಿಂದ ಬಂದ ಬಳುವಳಿ.

ಮತ್ತಷ್ಟು ಓದು »

13
ಜೂನ್

೨೦೦೪ ರಲ್ಲಿಯೇ ಅಡ್ವಾಣಿ ಯುಗಾ೦ತ್ಯ ಆಗಿ ಹೋಗಿತ್ತು!

-ರಾಘವೇಂದ್ರ ನಾವಡ

LK-NaMoಭಾ.ಜ.ಪಾ. ದ ಪ್ರಾಥಮಿಕ ಸದಸ್ಯತ್ವನ್ನೊ೦ದು ಬಿಟ್ಟು ಪಕ್ಷದಲ್ಲಿ ತನಗಿದ್ದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ ಅಡ್ವಾಣಿಯ ಹತಾಶ ನಡೆ ಆಶ್ಚರ್ಯವನ್ನೇನೂ ತರಲಿಲ್ಲ! ಬದಲಿಗೆ ಬೇಸರವನ್ನು೦ಟು ಮಾಡಿತು. ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಗೆ ಗೈರು ಹಾಜರಾದಾಗಲೇ ಏನೋ ಮಹತ್ತರವಾದುದು  ನಡೆಯುತ್ತದೆ ಎ೦ಬುದನ್ನು ಊಹೆಯಿತ್ತು! ಆದರೆ ಅಡ್ವಾಣಿಯ ಈ ನಡೆಯನ್ನಲ್ಲ!  ಮೋದಿಯ ಮೇಲಿನ ಅಡ್ವಾಣಿಯವರ ವಿರೋಧದ ಅ೦ತ್ಯ ಹೇಗಾಗಬಹುದೆ೦ದು ಯೋಚಿಸುತ್ತಿದ್ದೆ.. ಮೋದಿಯ ಪದೋನ್ನತಿಯನ್ನು ಊಹಿಸಿಯಾಗಿತ್ತು! ಅದಕ್ಕಿದ್ದ ಅಡ್ವಾಣಿಯವರ ವಿರೋಧವನ್ನೂ ಅರ್ಥೈಸಿಕೊ೦ಡಿತ್ತು! ಆದರೆ ಅಡ್ವಾಣಿಯವರ ಈ ನಡೆ ಪಕ್ಷವನ್ನಷ್ಟೇ ಅಲ್ಲ! ಸಮಸ್ತ ಭಾ.ಜ.ಪಾ ಕಾರ್ಯಕರ್ತರಲ್ಲದೆ ಅದರ ಲಕ್ಷಾ೦ತರ ಅಭಿಮಾನಿಗಳಿಗೂ ಕ್ಷಣ ನಿಟ್ಟುಸಿರು ಬಿಡ್ಶುವ೦ತೆ ಮಾಡಿದೆ! ಕೇವಲ “ ಕೃಷ್ಣ “ ನ ಕೈಯಲ್ಲಿ ಆಯುಧ ಹಿಡಿಸಲೆ೦ದೇ  ಕುರುಕ್ಷೇತ್ರದಲ್ಲಿ ಪಾ೦ಡವರೊ೦ದಿಗೆ ಹಿಗ್ಗಾಮುಗ್ಗ ಹೋರಾಡಿದ ಭೀಷ್ಮರು ತನ್ನ ಗುರಿ ಈಡೇರಿದ ನ೦ತರ ಶರಶಯ್ಯೆಯಲ್ಲಿ ಮಲಗಿದ೦ತೆ.. ಭಾಜಪಾದ “ ಲಾಲಕೃಷ್ಣ“ ಶಸ್ತ್ರ ತ್ಯಾಗ ಮಾಡಿರುವುದು ಬೇಸರವನ್ನು೦ಟು ಮಾಡಿದುದರ ಜೊತೆಗೆ… ಹೆ೦ಡತಿಯ ಒತ್ತಾಯಕ್ಕೋ… ವಯಸ್ಸಿನ ಪ್ರಭಾವವೋ… ಶಕ್ತಿಯ ಕೊರತೆಯೋ  ಎ೦ಬುದರ ಗೊ೦ದಲದಲ್ಲಿ  ತನ್ನ ಅಪ್ರಸ್ತುತತೆಯನ್ನು ಮನಗ೦ಡ ತ೦ದೆಯೊಬ್ಬ ಏಕದ೦ ಕುಟು೦ಬದ  ಜವಾಬ್ದಾರಿಯನ್ನು  ಮಕ್ಕಳಿಗೆ ತಲ್ಲಣದಿ೦ದಲೇ  ನೀಡಿ, ಹೊರಬರುವುದನ್ನು ಕಲ್ಪಿಸಿಕೊಳ್ಳುವ೦ತೆ ಮಾಡುತ್ತದೆ!

ಅದು ೧೯೮೦ ರ ಕಾಲ..  ಜನಸ೦ಘದಿ೦ದ ಬೇರ್ಪಟ್ಟು ಭಾ.ಜ.ಪಾದ ಹುಟ್ಟಿಗೆ ಕಾರಣಕರ್ತರಾದವರಿಬ್ಬರಲ್ಲಿ ವಾಜಪೇಯಿಯ ಜೊತೆಗೆ ಅಡ್ವಾಣಿಯೂ ಒಬ್ಬರು.   ೧೯೮೬ ರಲ್ಲಿ ಆ ಪಕ್ಷದ ರಾಷ್ತ್ರೀಯ ಅಧ್ಯಕ್ಷರಾಗುವವರೆಗೂ  ಚುನಾವಣೆಗಳಲ್ಲಿ ಭಾಜಪಾದ ಸಾಧನೆಯೇನೂ ಹೇಳಿಕೊಳ್ಳುವ೦ತಹದ್ದಾಗಿರಲಿಲ್ಲ!  ಆದರೆ   ನ೦ತರದ್ದು ಇತಿಹಾಸ.. ಚುನಾವಣೆಯಿ೦ದ ಚುನಾವಣೆಗೆ ಸುಧಾರಿಸುತ್ತಲೇ ಹೋದ ಭಾಜಪಾ.. ಅಡ್ವಾಣಿಯವರು ಆರ೦ಭಿಸಿದ “ಶ್ರೀರಾಮ ರಥಯಾತ್ರೆಯ“ ಲಾಭವನ್ನು ಭರಪೂರವಾಗಿ ಪಡೆದುಕೊ೦ಡಿತು! ಕಾ೦ಗ್ರೆಸ್ಸಿಗೆ ಸಮಾನವಾಗಿ ಸೆಡ್ದುಹೊಡೆದು ನಿಲ್ಲಲು ಭಾಜಪಾಕ್ಕೆ ಶಕ್ತಿ ತು೦ಬಿದವರೆ೦ದರೆ ಇಬ್ಬರೇ.. ವಾಜಪೇಯಿ ಹಾಗೂ ಅಡ್ವಾಣಿ! ಲಕ್ಷಾ೦ತರ ಕಾರ್ಯಕರ್ತರ ಅಮಿತೋತ್ಸಾಹವೂ ಇವರೊ೦ದಿಗಿತ್ತು! ಬೆನ್ನಿಗೆ ಉಗ್ರ ಹಿ೦ದುತ್ವದ ಅಜೆ೦ಡಾ… ಬೆನ್ನು ಬೆನ್ನಿಗೆ ರಥಯಾತ್ರೆಗಳು..  ಭಾರತ ರಾಜಕೀಯದಲ್ಲಿ “ ರಾಮ-ಲಕ್ಷ್ಮಣ“ರೆ೦ದೇ ಖ್ಯಾತವಾದ ಈ ಜೋಡಿ  ಕಾ೦ಗ್ರೆಸ್ ಗೆ ಪರ್ಯಾಯವಾಗಿ ಭಾ.ಜ.ಪಾವನ್ನು ಬೆಳೆಸಿದ್ದಲ್ಲದೆ, ದೇಶದ ರಾಜಕೀಯದಲ್ಲಿ ಕಾ೦ಗ್ರೆಸ್ಸಿಗೆ ಬಹುದೊಡ್ಡ ಪರ್ಯಾರವಾಗಿ ಬೆಳೆದು ನಿ೦ತಿತು. ೧೯೯೬ ರ ಚುನಾವಣೆಯಲ್ಲಿ ಏಕೈಕ ಬಲು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಾ.ಜ.ಪಾಕ್ಕೆ ವಾಜಪೇಯಿ ನೇತಾರರಾದರು. ಚುನಾವಣೆಗೂ ಮುನ್ನ ಅಡ್ವಾಣಿ ವಾಜಪೇಯಿಯವರನ್ನು ಬಾ.ಜ.ಪಾ ದ ಪ್ರಧಾನ ಮ೦ತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು ಫಲ ನೀಡಿತು! “ ಬದಲಾವಣೆಗಾಗಿ  ಭಾ.ಜ.ಪಾ.ವನ್ನು ತನ್ನಿ“ , “ ಈ ಬಾರಿ ಬಿ.ಜೆ.ಪಿ“ ಎ೦ಬ ಕಾರ್ಯಕರ್ತರ ಚುನಾವಣಾ ಘೋಷಣೆಗಳು ಫಲ ನೀಡಿದವು. ವಾಜಪೇಯಿಯವರ ಅಕಳ೦ಕಿತ ವ್ಯಕ್ತಿತ್ವ, ರಾಜಕೀಯ ಅನುಭವ ಹಾಗೂ ಅಡ್ವಾಣಿಯವರ ಪ್ರಖರ ಹಿ೦ದುತ್ವವಾದಕ್ಕೆ ಮತದಾರರು ಮಣೆ ಹಾಕಿದರು!

ಮತ್ತಷ್ಟು ಓದು »

11
ಜೂನ್

ಹೊಸ ಚಳುವಳಿಯ ಅರುಣೋದಯ

Desktopಪ್ರೊ. ವಿವೇಕ ಧಾರೇಶ್ವರ, ಬೆಂಗಳೂರು

ವಚನ ಚಳುವಳಿ ಹಾಗೂ ಜಾತಿ ವ್ಯವಸ್ಥೆಯ ಕುರಿತ ಡಂಕಿನ್ ಅವರ ಪ್ರಬಂಧದ ವಿರುದ್ಧವಾಗಿ ನಡೆದ ವಾಗ್ದಾಳಿಯನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ಅದರಲ್ಲೂ ಪ್ರೊ. ಶಿವಪ್ರಕಾಶರನ್ನು ಬಿಟ್ಟರೆ ಮತ್ಯಾರೂ ಆ ಪ್ರಬಂಧವನ್ನು ಓದಿದಂತೆ ಕಾಣುವುದಿಲ್ಲ. ಇಲ್ಲಿ ಗಮನಿಸಬೇಕಾದ ಎರಡು ಅಂಶಗಳಿವೆ: 1) ಇದು ಡಂಕಿನ್ ವಿಚಾರಕ್ಕೊಂದೇ ಹುಟ್ಟಿದ ವಿರೋಧವಲ್ಲ ಎಂಬುದು ಸ್ಪಷ್ಟ. ಬಾಲಗಂಗಾಧರರ ‘ಹೀದನ್..’ (ಸ್ಮೃತಿ-ವಿಸ್ಮೃತಿ) ಗ್ರಂಥವು ಹುಟ್ಟುಹಾಕಿದ ಸಂಶೋಧನಾ ಕಾರ್ಯಕ್ರಮದ ಕುರಿತ ಚರ್ಚೆಯಿಂದಾಗಿ ಹುಟ್ಟಿಕೊಂಡ ಚಿಂತನಾ ಪರಿಸರವನ್ನೇ ಇಲ್ಲಿ ಗುರಿಯಾಗಿಟ್ಟುಕೊಳ್ಳಲಾಗಿದೆ ಎಂಬುದು ಖಚಿತ. 2) ಇದನ್ನು ನಾನು ಗುಂಪು, ಸಮುದಾಯ ಎಂಬುದಾಗಿ ಗುರುತಿಸದೇ ಪರಿಸರ ಎಂದು ಏಕೆ ಕರೆಯುತ್ತೆನೆಂದರೆ, ಇಲ್ಲಿರುವವರು ಬೇರೆ ಬೇರೆ ದೇಶಗಳಿಗೆ ಸೇರಿದ್ದಾರೆ, ಬೇರೆ ಬೇರೆ ಭಾಷೆಗಳನ್ನು ಆಡುತ್ತಾರೆ, ವಿಭಿನ್ನ ಸಂಸ್ಥೆಗಳು ಹಾಗೂ ಸಾಮಾಜಿಕ ಹಿನ್ನೆಲೆಗಳಿಗೆ ಸೇರಿದ್ದಾರೆ. ಈ ಸಂಶೋಧಕರು ತಮಗಿರುವ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ನೆಲೆಯಲ್ಲಿ ಮಾತ್ರವೇ ಒಟ್ಟಿಗೆ ಬಂದಿದ್ದಾರೆ. ಸಂಶೋಧನಾಸಕ್ತಿಯೇ ಇವರನ್ನೆಲ್ಲ ಒಟ್ಟಿಗೆ ತಂದಿದೆಯೇ ವಿನಃ ಯಾವುದೇ ರಾಜಕೀಯ ಉದ್ದೇಶವಾಗಲೀ, ಸಾಮಾಜಿಕ ಹೋರಾಟವಾಗಲೀ ಅಲ್ಲ. ಅವರ ಮೇಲೆ ನಡೆಯುತ್ತಿರುವ ದಾಳಿಯ ರಭಸವನ್ನು ಹಾಗೂ ಕೆಸರೆರಚಾಟದ ಸ್ವರೂಪವನ್ನು ವಿಶ್ಲೇಷಿಸುವುದಕ್ಕೂ ಮೊದಲು ಈ ಮೇಲಿನ ಎರಡೂ ಅಂಶಗಳನ್ನು ಗುರುತಿಸಿಕೊಳ್ಳುವುದು ಮುಖ್ಯ.

ಈ ಸಂಶೋಧಕರ ಸಂಶೋಧನೆಯ ಕುರಿತು ಚರ್ಚೆಯೇ ನಡೆಯುತ್ತಿಲ್ಲ, ಬದಲಾಗಿ ಈ ಸಂಶೋಧನೆಯ ರಾಜಕೀಯ ಪರಿಣಾಮದ ಕುರಿತು ಕಟು ಟೀಕೆಗಳು ಬರುತ್ತಿವೆ. ಒಂದು ಸಂಶೋಧನಾ ಕಾರ್ಯಕ್ರಮದ ಪರಿಣಾಮದ ಕುರಿತು ಚರ್ಚಿಸಲೇ ಬಾರದು ಎಂದು ನಾನು ಹೇಳುತ್ತಿಲ್ಲ. ಆದರೆ ಅಂಥ ಚರ್ಚೆಗೂ ಮುನ್ನ ಆ ಸಂಶೋಧಕರ ವಾದ ಹಾಗೂ ಸಂಶೋಧನೆಗಳು ಏನು ಎಂಬುದನ್ನು ತಿಳಿದುಕೊಳ್ಳುವುದಾದರೂ ಬೇಡವೆ? ಈ ಸಂಶೋಧನೆಯು ಹೊಸದೇ ಆದ ವಿಚಾರವೊಂದನ್ನು ತಿಳಿಸುತ್ತಿದೆ, ಸಾಮಾನ್ಯ ಜ್ಞಾನಕ್ಕೆ ವಿರುದ್ಧವಾಗಿದೆ, ಹಾಗೂ ಬೌದ್ಧಿಕ ಸವಾಲನ್ನು ಎಸೆಯುತ್ತದೆ ಎಂಬ ಕಾರಣಕ್ಕಾದರೂ ಅದನ್ನು ಗಂಭೀರವಾಗಿ ಪರಿಶೀಲಿಸುವ ಒಂದು ಪ್ರಯತ್ನವಾದರೂ ಕಾಣಬೇಡವೆ? ಸ್ಮೃತಿ-ವಿಸ್ಮೃತಿಯಲ್ಲಿ ಬರುವ ಹೇಳಿಕೆಯೊಂದು ನಮ್ಮಲ್ಲಿ ಅನೇಕರನ್ನು ಕಾಡಿದೆ: ಅದೆಂದರೆ, “ಹಿಂದೂಯಿಸಂ” ಎಂಬುದು ಅಸ್ತಿತ್ವದಲ್ಲಿ ಇಲ್ಲವೊಂದೇ ಅಲ್ಲ ಯುರೋಪಿಯನ್ನರು ಅಂಥದ್ದೊಂದು ಸಂಗತಿ ಇದೆ ಎಂಬುದಾಗಿ ಅಂದುಕೊಂಡೇ ಭಾರತೀಯ ಸಂಸ್ಕೃತಿಯನ್ನು ಅನುಭವಿಸಿದರು. ಈ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲಿಕ್ಕಾಗಿ ಸ್ಮೃತಿ-ವಿಸ್ಮೃತಿಯಲ್ಲಿ ರಿಲಿಜನ್ನಿನ ಕುರಿತು ಒಂದು ಸಿದ್ಧಾಂತವನ್ನು ರಚಿಸಿ ರಿಲಿಜನ್ನೆಂದರೆ ಏನು? ಅದು ಭಾರತದಲ್ಲಿ ಇರಲಿಕ್ಕೆ ಹೇಗೆ ಸಾಧ್ಯವಿಲ್ಲ ಎಂಬುದನ್ನು ವಿವರಿಸಲಾಗಿದೆ. ಇವು ಗಹನವಾದ ಹೇಳಿಕೆಗಳಾಗಿದ್ದು ಈ ವಾದವನ್ನು ಅರ್ಥಮಾಡಿಕೊಂಡ ನಮ್ಮಲ್ಲಿ ಕೆಲವರಾದರೂ ರೋಮಾಂಚಿತರಾದೆವಷ್ಟೇ ಅಲ್ಲ ಸಮಾಜ ವಿಜ್ಞಾನಗಳಲ್ಲಿ ಸಿದ್ಧಾಂತವನ್ನು ಕಟ್ಟುವುದು ಸಾಧ್ಯ ಎಂಬ ಹೇಳಿಕೆಗೆ ದೃಷ್ಟಾಂತವನ್ನು ಕಣ್ಣಾರೆ ನೋಡಿ ಸ್ಫೂರ್ತಿಗೊಂಡೆವು. ಅಂದರೆ ನಮಗೆ ಸಾಮಾಜಿಕ ಜಗತ್ತಿನ ಜ್ಞಾನವನ್ನು ನಿಸರ್ಗ ವಿಜ್ಞಾನಗಳ ದಾರಿಯಲ್ಲೇ, ಅದಕ್ಕೂ ಭಿನ್ನವಾಗಿ ಕಟ್ಟಬಹುದು ಎಂಬುದನ್ನು ಅದು ತೋರಿಸಿತು. ಈ ಸಿದ್ಧಾಂತವನ್ನು ಕಟ್ಟುವ ಕೆಲಸವೇ ಇಂದು ನಾನು ಉಲ್ಲೇಖಿಸುತ್ತಿರುವ ಈ ಹೊಸ ಸಂಶೋಧನಾ ಪರಿಸರವನ್ನು ರೂಪಿಸಿದೆ.

ಮತ್ತಷ್ಟು ಓದು »

10
ಜೂನ್

CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ

CSLC– ರಾಕೇಶ್ ಶೆಟ್ಟಿ

ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.

ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.

ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್‌ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.

ಮತ್ತಷ್ಟು ಓದು »

7
ಜೂನ್

ಇದು ವಿಮರ್ಶೆಯಲ್ಲ ನನ್ನನಿಸಿಕೆ…

-ಕೆ.ಗುರುಪ್ರಸಾದ್

yADSಇತ್ತೀಚೆಗೆ ಒಂದು ವಿಷಯದ ಬಗ್ಗೆ ನಾ ಮೆಚ್ಚುವ ಇಬ್ಬರು ಲೇಖಕರ ಆರ್ಟಿಕಲ್ ಓದಿದೆ. ಒಂದು ಪ್ರತಾಪ್ ಸಿಂಹ ಅವರ ” ಮೇನಕೆ ಬಂದು ಕುಣಿಯುವವರೆಗೆ ವಿಶ್ವಾಮಿತ್ರ ಮಹಾತಪಸ್ವಿಯಾಗಿದ್ದ, ಬಿಜೆಪಿ ಕಥೆಯೂ ಹಾಗೇಯೇ ಆಯಿತು ” ಇನ್ನೊಂದು ಚಕ್ರವರ್ತಿ ಸೂಲಿಬೆಲೆಯವರ ” ಎರಡು ರಾಷ್ಟ್ರೀಯ ಪಕ್ಷ ಎಷ್ಟೊಂದು ಅಂತರ “. ಮೊದಲೇ ಹೇಳಿದಂತೆ ಎರಡೂ ಕರ್ನಾಟಕದಲ್ಲಿನ ಬಿಜೆಪಿಯ ಸೋಲಿನ ಕುರಿತಾಗೇ ಇರೋದು. ಪ್ರತಾಪ್ ಸಿಂಹ ಅವರು ಯಾವ ರೀತಿ ಸೋಲನುಭವಿಸಿತು ಅನ್ನೋದನ್ನ ವಿಶ್ಲೇಷಣೆ ಮಾಡಿದ್ದರೆ, ಸೂಲಿಬೆಲೆಯವರು ಎರಡು ಪಕ್ಷಗಳ ನಡುವಿನ ವ್ಯತ್ಯಾಸವನ್ನ ಜನರ ಮುಂದಿಡುವ ಪ್ರಯತ್ನ ಮಾಡಿದ್ದಾರೆ. ಈ ಎರಡು ಲೇಖನಗಳನ್ನ ಓದಿದ ನಂತರ ನನಗೆ ನನ್ನ ಅನಿಸಿಕೆಯನ್ನು ಹೇಳೋ ಮನಸಾಯಿತು ಹಾಗಾಗಿ ಈ ಸಣ್ಣ ಲೇಖನ…ಮೊದಲೇ ಶೀರ್ಷಿಕೆಯ ರೂಪದಲ್ಲಿ ಹೇಳಿದ್ದೇನೆ, ಇದು ವಿಮರ್ಶೆಯಲ್ಲ ಯಾಕೆಂದರೆ ಇಬ್ಬರೂ ತಮ್ಮ ಬರಹಗಳಿಂದ ಜನರ ಮಂತ್ರಮುಗ್ಧರನ್ನಾಗಿಸಿದವರು. ಅವರ ಕುರಿತಾಗಿ ವಿಮರ್ಶೆ ಮಾಡುವ ಯೋಗ್ಯತೆ ಎಳ್ಳಷ್ಟೂ ನನ್ನಲ್ಲಿಲ್ಲ ಅನ್ನೋದು ನನ್ನ ಧೃಡವಾದ ನಂಬಿಕೆ. ಹಾಗಾಗಿ ಇಲ್ಲಿರೋದು ಅದೇ ವಿಷಯದ ಕುರಿತಾದ ನನ್ನ ಅನಿಸಿಕೆ ಅಷ್ಟೇ..

ಮೊದಲಿಗೆ ಪ್ರತಾಪ್ ಸಿಂಹರ ಲೇಖನವನ್ನ ನೋಡೋದಾದ್ರೆ… ಬಿಜೆಪಿಯ ಸೋಲಿನ ಕುರಿತಾದ ಪ್ರತಾಪ್ ಅವರ ಅನಾಲಿಸಿಸ್ ಸೂಪರ್… ಎರಡು ಮಾತಿಲ್ಲದೆ ಒಪ್ಪಿಕೊಳ್ಳಬಹುದಾದ ರೀತಿಯಲ್ಲಿ ಪ್ರಸ್ತುತ ಪಡಿಸಿದ್ದಾರೆ. ಅಧಿಕಾರದ ಮೆಟ್ಟಲೇರುವ ಹೊತ್ತಲ್ಲಿ ಆದ ಸಣ್ಣ ಸಣ್ಣ ತಪ್ಪುಗಳು ಮುಂದೆ ಯಾವ ರೀತಿ ಯುಡಿಯೂರಪ್ಪ ಅವರನ್ನ ಕಾಡತೊಡಗಿತು, ಯಾವ ರೀತಿ ಹೈಕಮಾಂಡ್ ನ ನಡೆಗಳು ಯಡಿಯೂರಪ್ಪ ಅವರನ್ನ ತಪ್ಪು ದಾರಿ ಹಿಡಿಯುವಂತೆ ಪ್ರೇರೇಪಿಸಿತು ಅನ್ನೋದರ ಸ್ಪಷ್ಟ ಚಿತ್ರಣ ಕೊಡುತ್ತಾ ಹೋಗುತ್ತಾರೆ. ಆಪರೇಶನ್ ಕಮಲ, ರೆಡ್ಡಿಗಳ ದರ್ಪ, ಸುಷ್ಮಾರವರ ಮಾತುಗಳು, ಅನಂತ್ ಕುಮಾರರ ಒಳಸಂಚು ಹೀಗೆ…ಏಕಾಂಗಿತನವನ್ನ ಅನುಭವಿಸಿದ ಯಡಿಯೂರಪ್ಪನವರು ಎಡವಿದರು ಅಂದರು. ಇದೆಲ್ಲವನ್ನೂ ಒಪ್ಪೋಣ ಆದರೆ ಸ್ವಲ್ಪ ಹಿಂದಿನದನ್ನು ಮೆಲುಕು ಹಾಕಿದರೆ ಇದೇ ಪ್ರತಾಪ್ ಸಿಂಹ ಅವರು ಯಡಿಯೂರಪ್ಪ ಅವರನ್ನ ತಮ್ಮ ಎರಡು ಮೂರು ಲೇಖನದಲ್ಲಿ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದರು…( ೨೦೦೮ ರ ಲೇಖನಗಳು.. ಅವರ ಬ್ಲಾಗ್ ನಲ್ಲಿ ಈಗಲೂ ಲಭ್ಯವಿದೆ) ವರ್ಗಾವಣೆಯ ಕುರಿತಾಗಿ, ನಿವೃತ್ತಿ ವಯಸ್ಸನ್ನು ಏರಿಸಿದ್ದುದರ ಕುರಿತಾಗಿ ಹೀಗೆ ಹಲವು ವಿಷಯಗಳಲ್ಲಿ ನೇರವಾಗಿ ದೋಷಾರೋಪಣೆ ಮಾಡಿದ್ದ ಪ್ರತಾಪರಿಗೆ ಈಗ ಯುಡಿಯೂರಪ್ಪನವರ ತಪ್ಪುಗಳು ಕೂಡ ಬಿಜೆಪಿಯ ಸೋಲಿಗೆ ಒಂದು ಕಾರಣ ಅಂತನ್ನಿಸದೇ ಇರೋದು ನನಗೇಕೋ ಸರಿ ಅನ್ನಿಸಲಿಲ್ಲ. ಯಡಿಯೂರಪ್ಪನವರ ಪುತ್ರ ಪ್ರೇಮದ ಬಗ್ಗೆ ಟೀಕಿಸಿದ್ದ ಪ್ರತಾಪರು ಯಾಕೋ ಇಲ್ಲಿ ಅದನ್ನ ಉಲ್ಲೇಖಿಸಲಿಲ್ಲ. ಬಿಜೆಪಿಯಿಂದ ಹೊರ ಬಂದ ಮೇಲೆ ಯಡಿಯೂರಪ್ಪನವರ ನಡೆಯ ಬಗೆಗೆ ಯಾವುದೇ ರೀತಿಯ ಮಾತುಗಳನ್ನಾಡದೇ “ಬಿಜೆಪಿ” ಯಡಿಯೂರಪ್ಪನವರ ಬಳಿ ಹೋಗಿ ಅವರನ್ನ ಕರೆತರುವ ಪ್ರಯತ್ನ ಮಾಡಬೇಕು ಅಂದರು.

ಮತ್ತಷ್ಟು ಓದು »

7
ಜೂನ್

ಶಿವ ನಾನು, ಶಿವ ನಾನು!

Shankaraacharya1ಈ ಬರಹವು ’ಎಲ್ಲರ ಕನ್ನಡ ‘ ದಲ್ಲಿದೆ.ಎಲ್ಲರ ದನಿಗೂ ವೇದಿಕೆಯಾಗುವ ನಿಲುಮೆಯ ಎಂದಿನ ನಿಲುವಿನಂತೆ ಈ ಲೇಖನವನ್ನು “ನಿಲುಮೆ” ಪ್ರಕಟಿಸುತ್ತಿದೆ.ಆದರೆ ವಿಷಯಗಳು ಸಾಮಾನ್ಯ ಕನ್ನಡಿಗರಿಗೆ ತಲುಪಬೇಕೆಂದರೆ ವಿಷಯ ಸಾಮಾನ್ಯ ಕನ್ನಡದಲ್ಲಿದ್ದರೆ ಒಳಿತಾದ್ದರಿಂದ ಪ್ರಚಲಿತ ಬಳಕೆಯಲ್ಲಿರುವ ಕನ್ನಡದ ಲೇಖನಗಳನ್ನು ಅಪೇಕ್ಷಿಸುತ್ತದೆ.

– ಕಿರಣ್ ಬಾಟ್ನಿ

{ಇತ್ತೀಚೆಗೆ ಜಾತಿಗಳ ಬಗೆಗಿನ ಚರ‍್ಚೆ ಹಾದಿ ತಪ್ಪುತ್ತಿದೆ ಎಂದು ನನ್ನ ಅನಿಸಿಕೆ. ಒಂದು ಕಡೆ ’ಬಲಗಡೆ’ಯವರಲ್ಲಿ ಮುಂಚೂಣಿಯಲ್ಲಿದ್ದಾರೆ ಎನಿಸಿಕೊಂಡವರು ಬಾರತದಲ್ಲಿ ಜಾತಿಯೇರ‍್ಪಾಡೆಂಬುದೇ ಇಲ್ಲ ಎಂದು ವಾದಿಸಿ ಆ ಮೂಲಕ ಕೂಡಣಮಾರ‍್ಪಿಗೆ ಅರ‍್ತವೇ ಇಲ್ಲವೆಂಬ ಅನಿಸಿಕೆಯನ್ನು ಬಿತ್ತುತ್ತಿದ್ದಾರೆ. ಇನ್ನೊಂದು ಕಡೆ ’ಎಡಗಡೆ’ಯವರಲ್ಲಿ ಜಾತಿಯೇರ‍್ಪಾಡಿನ ಕೆಡುಕುಗಳ ಬಗ್ಗೆ ಹಾಡಿ ಗೋಳಾಡುವುದೇ ಒಂದು ಕಸುಬಾಗಿ ಬಿಟ್ಟಿರುವುದರಿಂದ ಅವರಿಂದ ಕೂಡಣಮಾರ‍್ಪಿನ ನಿಟ್ಟನ್ನು ಬಯಸುವುದೇ ತಪ್ಪೆಂಬಂತಿದೆ. ಇನ್ನು ಇವೆರಡು ಗುಂಪುಗಳು ಅರಿವನ್ನು ಹಂಚಿಕೊಳ್ಳುವುದಂತೂ ದೂರದ ಮಾತು.

ಇವೆರಡರ ನಡುವಿನ ಹಾದಿಯೊಂದನ್ನು ನಾವು ಕಂಡುಕೊಳ್ಳದೆ ಹೋದರೆ ಒಟ್ಟಾರೆಯಾಗಿ ಕನ್ನಡಿಗರಿಗೆ ಏಳಿಗೆಯಿಲ್ಲ ಎಂಬ ನಂಬಿಕೆ ನನ್ನಲ್ಲಿ ಬಹಳ ಗಟ್ಟಿಯಾಗಿದೆ. ’ಎಲ್ಲರಕನ್ನಡ’ವನ್ನು ನಾನು ಒಪ್ಪಿ ಅದನ್ನೇ ಬಳಸುವ ಹಟ ಹಿಡಿದಿರುವುದಕ್ಕೆ ಈ ನಂಬಿಕೆ ಒಂದು ಮುಕ್ಯವಾದ ಕಾರಣ. ಹುಟ್ಟಿನಿಂದ ಮಾದ್ವ ಬ್ರಾಮಣ ಜಾತಿಗೆ ಸೇರಿದ ನಾನು ಈ ನಡುಹಾದಿಯಲ್ಲಿ ನಡೆಯುವಾಗ ಸಂಸ್ಕ್ರುತದಲ್ಲಿ ಈಗಾಗಲೇ ಇರುವ ಮತ್ತು ಕನ್ನಡದ ಕೂಡಣವನ್ನು ಒಡೆಯದೆ ಅದನ್ನು ಇಡಿಯಾಗಿ ಆದ್ಯಾತ್ಮಿಕ ಎತ್ತರಕ್ಕೊಯ್ಯುವಂತಹ ಅರಿವನ್ನು ನನ್ನ ಕಯ್ಲಾದಶ್ಟು ಎಲ್ಲರಕನ್ನಡಕ್ಕೆ ತರಬೇಕಾದುದು ನನ್ನ ಕರ‍್ತವ್ಯವೆಂದೇ ತಿಳಿದುಕೊಂಡಿದ್ದೇನೆ.

ಇಲ್ಲಿ ಬಹಳ ಚಿಕ್ಕದಾದ ಅಂತಹ ಒಂದು ಮೊಗಸನ್ನು ಮಾಡಿದ್ದೇನೆ. ಎಲ್ಲರಕನ್ನಡದಲ್ಲಿ ಹೀಗೆ ಗೇದರೆ ಬ್ರಾಮಣರು ಜಾತಿಯೇರ‍್ಪಾಡನ್ನು ಕೆಡವಲು ನೆರವಾಗಬಹುದು ಮತ್ತು ಬ್ರಾಮಣಿಕೆಯನ್ನು ಒಂದು ಜಾತಿಯಂತೆ ಕಾಣುವುದನ್ನು ನಿಲ್ಲಿಸಿ ಹಿಂದಿನ ಬ್ರಾಮಣರು ಮಾಡಿದ ಕೆಲಸದಲ್ಲಿ ನಿಜವಾಗಲೂ ಉಳಿಸಿಕೊಳ್ಳತಕ್ಕುದನ್ನು ಉಳಿಸಿಕೊಂಡು ಆ ಮೂಲಕ ಕೂಡಣಕ್ಕೆ ನೆರವಾಗಬಹುದು. ಇದನ್ನು ಎಶ್ಟು ಸಾರಿ ಕೂಗಿ ಹೇಳಿದರೂ ಸಾಲದು. – ಕಿ. ಬಾ.}

ಮತ್ತಷ್ಟು ಓದು »

5
ಜೂನ್

ಚೀನಿಗಳೊಂದಿಗಿನ ಯುದ್ಧ ಸೈನಿಕ ಕಾರ್ಯಾಚರಣೆಯೇ ಆಗಬೇಕಿಲ್ಲ

– ರಾಕೇಶ್ ಶೆಟ್ಟಿ

chini yuddhaಮೂರುವರೆ ವರ್ಷಗಳ ಹಿಂದಿನ ಮಾತು.ಬಹುಷಃ ೨೦೦೯ರ ನವೆಂಬರ್ ತಿಂಗಳಿರಬಹುದು.ಪ್ರಧಾನಿ ಮ(ಮೌ?)ನಮೋಹನ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಅದನ್ನು ಚೀನಾ ಖಡಕ್ ಆಗಿ ವಿರೋಧಿಸಿ, ’ನೀವು ಭಾರತೀಯರು ೧೯೬೨ ರ ಅನುಭವವನ್ನ ಮರೆತಿದ್ದಿರ!’ ಅಂತ ಬಹಿರಂಗವಾಗೇ ಹೇಳುವ ದಾರ್ಷ್ಟ್ಯ ತೋರಿತ್ತು.ಅಂದು ಅದು ಕ್ಯಾತೆ ತೆಗೆದಿದ್ದು ’ತವಾಂಗ್’ ನ ಕುರಿತಾಗಿ.

ಚೀನಿಗಳ ಬೆದರಿಕೆ ಬಗ್ಗೆ ಮಾತಡುವುದಕ್ಕಿಂತ ಮೊದಲು, ಏನಿದು ‘ತವಾಂಗ್’ ಅದಕ್ಕಾಗಿ ಯಾಕಿಷ್ಟು ಕಿತ್ತಾಟ? ಇದು ಯಾರಿಗೆ ಸೇರಿದ್ದು? ಭಾರತೀಯರಿಗೋ? ಚೀನಿಗಳಿಗೋ? ಈ ಮೊದಲು ಇದು ಯಾರಿಗೆ ಸೇರಿತ್ತು? ಅಂತ ನೋಡ ಹೊರಟರೆ, ಐತಿಹಾಸಿಕಾವಾಗಿ ಅಂದರೆ ೧೯೧೪ರಲ್ಲಿ ಬ್ರಿಟಿಷರು ಮೆಕ್-ಮಹೂನ್  ರೇಖೆಯನ್ನ ಗುರುತಿಸುವವರೆಗೂ ಅದು ಆಗಿನ ‘ಟಿಬೆಟ್’ ಗೆ ಸೇರಿತ್ತು. ೧೯೧೪ರಲ್ಲಿ ತವಾಂಗ್ ಅನ್ನು ೧೩ನೆ ಲಾಮ ಭಾರತಕ್ಕೆ ಬಿಟ್ಟು ಕೊಟ್ಟರು.ಆ ನಂತರ ಬಂದ ೧೪ನೆ ಅಂದರೆ ಈಗಿನ ‘ದಲೈ ಲಾಮ’ ಕೂಡ ತವಾಂಗ್ ಅನ್ನು ಭಾರತದ ಅಂಗವೆಂದೇ ಮಾನ್ಯ ಮಾಡಿದರು.

ಆದರೆ ೧೯೫೦ ರ ದಶಕದಲ್ಲಿ ಚೀನಿಗಳು ‘ಟಿಬೆಟ್’ ಅನ್ನು ಆಕ್ರಮಿಸಿಕೊಂಡರಲ್ಲ. ಈಗ ಅವರು ಹೇಳುವುದು , ‘ಒಂದು ಕಾಲದಲ್ಲಿ ತವಾಂಗ್ ಟಿಬೆಟ್ಗೆ ಸೇರಿತ್ತು, ಈಗ ಟಿಬೆಟ್ ನಮಗೆ ಸೇರಿದೆ, ಹಾಗಾಗಿ ಈ ತವಾಂಗ್ ನಮಗೆ ಸೇರಬೇಕು’ ಅಂತ (ಅದರ ಜೊತೆಗೆ ಇರಲಿ ಅಂತ ಇಡಿ ಅರುಣಾಚಲ ಪ್ರದೇಶವನ್ನು ಕೊಡಿ ಅನ್ನುತಿದ್ದಾರೆ).

ಮತ್ತಷ್ಟು ಓದು »

4
ಜೂನ್

ಸಂಶೋಧನೆಯ ದಾರಿಯನ್ನು ಯಾರು ನಿರ್ಧರಿಸಬೇಕು?

  ಪ್ರೊ.ರಾಜಾರಾಮ ಹೆಗಡೆ

{20-5-2013 ಕನ್ನಡ ಪ್ರಭದಲ್ಲಿ ವರದಿಯಾದಂತೆ ಡಾ. ಎಂ.ಎಂimages. ಕಲ್ಬುರ್ಗಿಯವರು ಬಸವಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಕುವೆಂಪು ವಿಶ್ವವಿದ್ಯಾನಿಲಯದ ಸಂಶೋಧಕರ ಕುರಿತು ಆಡಿದ ಮಾತಿಗೆ ಈ ಪ್ರತಿಕ್ರಿಯೆ.}

“ವಚನ ಚಳುವಳಿಯ ಚರ್ಚೆಯಲ್ಲಿ ಪ್ರಜಾವಾಣಿ ಪತ್ರಿಕೆಯು ಒಂದು ಪಕ್ಷದವರ ನಿಲುವುಗಳನ್ನು ಹೆಚ್ಚಾಗಿ ಬೆಂಬಲಿಸಿ ಈಗ ಚರ್ಚೆಯನ್ನು ಸಂಪೂರ್ಣವಾಗಿ ಆ ಪತ್ರಿಕೆಯು ನಿಲ್ಲಿಸಿಯಾಗಿದೆ. ಆದರೆ ಆ ಚರ್ಚೆಯ ಪರಿಣಾಮಗಳು ಗಾಢವಾಗಿವೆ ಎಂಬುದು ಸ್ಪಷ್ಟ. ಹಲವಾರು ಪ್ರಗತಿಪರ ಸಂಘಟನೆಗಳು ನಮ್ಮ ಸಂಶೋಧನಾ ಕೇಂದ್ರವನ್ನು ಮತ್ತು ಸಂಶೋಧನೆಯನ್ನು ನಿಲ್ಲಿಸುವಂತೆ ಸರ್ಕಾರದ ಮಟ್ಟದಲ್ಲಿ, ವಿಶ್ವವಿದ್ಯಾನಿಲಯಗಳ ಮಟ್ಟದಲ್ಲಿ ತಮ್ಮ ಪ್ರಭಾವವನ್ನು ಬೀರುತ್ತಾ ಒತ್ತಡ ತರುತ್ತಿವೆ. ಇಂತಹ ಸಮಯದಲ್ಲಿ ಬಸವಶ್ರೀ ಪ್ರಶಸ್ತಿ ಪಡೆದ ಎಂ.ಎಂ.ಕಲಬುರ್ಗಿಯವರು ವಿಕೃತ ಸಂಶೋಧನೆಯನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳ ಮುಂದೆ ಅಲವತ್ತುಕೊಂಡಿರುವುದು ಹಲವಾರು ಪತ್ರಿಕೆಗಳಲ್ಲಿ ಪಕ್ರಟವಾಗಿದೆ. ಅವರ ಕೋರಿಕೆಗೆ ಕೆಲವಾದರೂ ಪರಿಣಾಮಗಳು ಇದ್ದೇ ಇರುತ್ತವೆ. ಕನ್ನಡಪ್ರಭದಲ್ಲಿ ಪ್ರಕಟವಾದ ಅವರ ಅಂಬೋಣಕ್ಕೆ ಪ್ರತಿಕ್ರಿಯೆಯಾಗಿ ಈ ಲೇಖನವನ್ನು ಬರೆದು ಕನ್ನಡಪ್ರಭ ಪತ್ರಿಕೆಗೆ ಕಳುಹಿಸಲಾಗಿತ್ತು. ಆದರೆ ಪ್ರಕಟವಾಗಿಲ್ಲ.”

ವಿಶ್ವವಿದ್ಯಾನಿಲಯದ ಸಿಂಡಿಕೇಟು ಸದಸದ್ಯರು ಈ ಅಧ್ಯಾಪಕರಿಗೆ ಎಚ್ಚರಿಕೆ ನೀಡಬೇಕೆಂದು ಅವರು ಕರೆಕೊಟ್ಟಿದ್ದಾರೆ. ಅದೇ ಭಾಷಣದಲ್ಲಿ ಅವರು ವಚನಗಳ ಕುರಿತು ಕುವೆಂಪು ವಿಶ್ವವಿದ್ಯಾಲಯದ ಸಂಶೋಧಕರು ನಡೆಸುತ್ತಿರುವುದು ವಿಕೃತ ಸಂಶೋಧನೆ, ಅದನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿಗಳಿಗೂ ಕೇಳಿಕೊಂಡಿದ್ದಾರೆ ಎಂಬುದನ್ನು ಇತರ ಪತ್ರಿಕೆಗಳೂ ಪ್ರಕಟಿಸಿವೆ.

ಕನ್ನಡ ಸಾರಸ್ವತ ಲೋಕದಲ್ಲಿ ಕಲಬುರ್ಗಿಯವರನ್ನು ಸಂಶೋಧಕರು ಎಂದೇ ಗುರುತಿಸಲಾಗುತ್ತದೆ. ಅವರು ಹಂಪಿ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಕೂಡ ಜವಾಬ್ದಾರಿ ನಿರ್ವಹಿಸಿದ್ದಾರೆ. ಅದಕ್ಕಿಂತ ಸ್ವತಃ ಅವರೇ ತಮ್ಮ ಮಾರ್ಗ 2 ಸಂಪುಟದಲ್ಲಿನ ಲೇಖನವೊಂದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯನ್ನು ಎದುರಿಸಬೇಕಾದ ಪರಿಸ್ಥಿತಿ ಕೂಡ ಒಮ್ಮೆ ಬಂದಿತ್ತು. ಆಗ ಅಭಿಪ್ರಾಯ ಸ್ವಾತಂತ್ರ್ಯದ ಮೌಲ್ಯ ಅವರಿಗೆ ರಕ್ಷಣೆಯಾಗಿ ಬಂದಿತ್ತು. ಆದರೆ ಈಗ ಒಂದು ವಿಪರ್ಯಾಸವನ್ನು ನೋಡುತ್ತಿದ್ದೇವೆ. ನಮ್ಮ ಶಿಕ್ಷಣ ವ್ಯವಸ್ಥೆಯು ಸಂಶೋಧಕನೊಬ್ಬನಿಗೆ ನೀಡುವ ಯಾವ ಭರವಸೆಯು ಕಲಬುರ್ಗಿಯವರ ಸಂಶೋಧನೆಯನ್ನು ಸಾಧ್ಯ ಮಾಡಿತೊ ಹಾಗೂ ಅದರ ಹೆಸರಿನಲ್ಲಿ ಎದ್ದ ವಿವಾದಗಳಿಗೆ ಎದುರಾಗಿ ಅವರನ್ನು ರಕ್ಷಿಸಿತೊ ಅದು ಮುಂದಿನ ತಲೆಮಾರಿನ ಸಂಶೋಧಕರಿಗೆ ಬೇಡ ಎಂಬ ಅಭಿಪ್ರಾಯಕ್ಕೆ ಅವರು ಬಂದಂತಿದೆ. ಅಥವಾ ಅವರು ಈಗ ಸಂಶೋಧನೆಗೆ ಬೇರೆಯದೇ ಆದ ಅರ್ಥ ಹಚ್ಚುತ್ತಿರಲೂಬಹುದು

ಮತ್ತಷ್ಟು ಓದು »

3
ಜೂನ್

ಗಾಂಧಿ ಕ್ಲಾಸು: ಸೃಜನಶೀಲ ಬದುಕಿನ ವಿಭಿನ್ನ ಮುಖಗಳು

– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ

Gaandhi Clasu‘ಬದುಕು ನನ್ನನ್ನು ರೂಪಿಸಿತೋ, ನಾನೇ ನನ್ನ ಬದುಕನ್ನು ಹೀಗೆ ರೂಪಿಸಿಕೊಂಡೆನೋ ಆದರೆ ಒಂದಂತೂ ಸತ್ಯ ನನ್ನೀ ಬದುಕು ನನ್ನ ಪ್ರಾರಬ್ಧ ಮತ್ತು ಸವಾಲಿನದು. ನಾನು ಬಾಲ್ಯವನ್ನಾಗಲೀ ಹದಿಹರೆಯದ ದಿನಗಳನ್ನಾಗಲೀ ಉತ್ಕಟವಾಗಿ ಎಲ್ಲರಂತೆ ಅನುಭವಿಸುವುದು ಆಗಲೇ ಇಲ್ಲ. ದುರ್ಬರ ಬದುಕು ಅದಕ್ಕೆ ಆಸ್ಪದ ಮಾಡಿಕೊಡಲೇ ಇಲ್ಲ. ಬಾಲ್ಯದ, ಹದಿಹರೆಯದ ಅನುಭವಗಳಿಗೆ ಅಕ್ಷರ ರೂಪ ಕೊಡುವಾಗ ನನ್ನ ಕಣ್ಣುಗಳು ಒದ್ದೆಯಾಗಿರುವುದೂ ಉಂಟು. ಹಿಂಬಾಲಿಸುತ್ತಲೇ ಇದ್ದ ಆತಂಕ, ಅನಿಶ್ಚಿತತೆಗಳನ್ನು ನಿರಾಸೆಗೊಳಿಸಿ ಬದುಕು ಅರವತ್ತರ ಹೊಸ್ತಿಲ ಬಳಿ ತಂದು ನಿಲ್ಲಿಸಿರುವುದು ಪವಾಡವೇ ಸರಿ.’ ಈ ಸಾಲುಗಳು ಇತ್ತೀಚಿಗೆ ನಾನು ಓದಿದ ‘ಗಾಂಧಿ ಕ್ಲಾಸು’ ಪುಸ್ತಕದಿಂದ ಹೆಕ್ಕಿ ತೆಗೆದವುಗಳು.

‘ಗಾಂಧಿ ಕ್ಲಾಸು’ ಕನ್ನಡದ ಖ್ಯಾತ ಬರಹಗಾರ ಕುಂವೀ ಎಂದೇ ಹೆಸರಾದ ಕುಂಬಾರ ವೀರಭದ್ರಪ್ಪನವರ ಆತ್ಮಕಥನ. ಕುಂವೀ ನಾನು ಮೆಚ್ಚುವ ಹಾಗೂ ಅತಿಯಾಗಿ ಹಚ್ಚಿಕೊಂಡಿರುವ ಲೇಖಕರಲ್ಲೊಬ್ಬರು. ಅವರ ಆತ್ಮಕಥನ ಪ್ರಕಟವಾಗಿದೆ ಎಂದು ಗೊತ್ತಾದದ್ದೆ ತಡ ಓದಲೇ ಬೇಕೆನ್ನುವ ಉತ್ಕಟ ಆಸೆ ಪುಸ್ತಕವನ್ನು ಹುಡುಕಿಕೊಂಡು ಹೋಗಿ ಖರೀದಿಸಿ0iÉುೀ ಬಿಟ್ಟಿತು. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ಕುಂ.ವೀರಭದ್ರಪ್ಪನವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕೆಲಸ ಮಾಡಿ 2009ರಲ್ಲಿ ನಿವೃತ್ತರಾಗಿರುವರು. ನೂರಾರು ಕಥೆಗಳನ್ನು ಬರೆದಿರುವ ಇವರು ಕಾದಂಬರಿಗಳು ಮತ್ತು ಜೀವನ ಚರಿತ್ರೆಗಳನ್ನು ಬರೆದು ಕನ್ನಡ ಸಾಹಿತ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿರುವರು. ಅವರ ಅನೇಕ ಕಥೆಗಳು ಹಾಗೂ ಕಾದಂಬರಿಗಳು ಸಿನಿಮಾಗಳಾಗಿ ಬೆಳ್ಳಿತೆರೆಯ ಮೇಲೆ ಕಾಣಿಸಿಕೊಳ್ಳುವುದರ ಜೊತೆಗೆ ಶ್ರೀಯುತರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳೂ ಸಂಧಿವೆ. ಅದು ಕಥೆ ಇರಲಿ, ಕಾದಂಬರಿಯಾಗಲಿ, ಜೀವನ ಚರಿತ್ರೆ ಇರಲಿ ಪ್ರತಿಯೊಂದರಲ್ಲಿ ಕುಂವೀ ಶೈಲಿ ತನ್ನ ಛಾಪು ಮೂಡಿಸಿ ಓದುಗರನ್ನು ಮಂತ್ರ ಮುಗ್ಧರನ್ನಾಗಿಸುತ್ತದೆ. ತಮ್ಮ ಕೃತಿಗಳ ಓದಿಗಾಗಿ ಓದುಗರ ಒಂದು ವಲಯವನ್ನೇ ಸೃಷ್ಟಿಸಿಕೊಂಡಿರುವ ವಿಶಿಷ್ಟ ಬರಹಗಾರ ಕುಂವೀ. ಹಲವು ದಶಕಗಳಿಂದ ಕನ್ನಡದ ಸಾಹಿತ್ಯಾಸಕ್ತರನ್ನು ಕಾಡುತ್ತಲೇ ಬಂದಿರುವ ಈ ಲೇಖಕನ ವೈಯಕ್ತಿಕ ಬದುಕು ಹೇಗಿರಬಹುದೆಂಬ ಕುತೂಹಲ ನನ್ನದಾಗಿತ್ತು. ‘ಗಾಂಧಿ ಕ್ಲಾಸು’ ಆ ಕೃತಿ ಕೈಯಲ್ಲಿ ಹಿಡಿದ ಘಳಿಗೆ ಅದು ಹೇಗೆ ಸಮಯ ಸರಿದು ಹೋಯಿತು ಎಂದು ಅರಿವಿಗೆ ಬರದಂತೆ ಆರು ದಶಕಗಳ ಕುಂವೀ ಬದುಕು ಕಣ್ಣೆದುರು ಅನಾವರಣಗೊಂಡಿತು.

ಮತ್ತಷ್ಟು ಓದು »

30
ಮೇ

ಸಾವರ್ಕರ್ ಮತ್ತು ನೆಹರೂ : ಹೋಲಿಸಬಾರದ ವ್ಯಕ್ತಿಗಳು

– ಚಕ್ರವರ್ತಿ ಸೂಲಿಬೆಲೆ

NS(ಮೇ ೨೮) ಸಾವರ್ಕರ್ ಜನ್ಮ ದಿನ. ಈ ಸಂಧರ್ಭದಲ್ಲಿ ಭಾರತದ ದಿಕ್ಕು ಬದಲಿಸಿದ ಇಬ್ಬರು ವ್ಯಕ್ತಿಗಳ ತುಲನಾತ್ಮಕ ಬರಹ ಇಲ್ಲಿದೆ. ಯಾರು ಯಾವ ಬಗೆಯಲ್ಲಿ ದಿಕ್ಕು ಬದಲಿಸಿದರು ಅಥವಾ ತಪ್ಪಿಸಿದರು ಎನ್ನುವುದು ಓದುಗರ ವಿವೇಚನೆಗೆ ಬಿಟ್ಟಿದ್ದು…

ಇತಿಹಾಸದ ಪುಟಗಳು ಅದೆಷ್ಟು ಬೇಗ ಹಿಂದೆ ಹಿಂದೆ ಹೋಗಿಬಿಡುತ್ತವಲ್ಲ! ಒಂದು ಪುಟವನ್ನು ತಿರುವಿಹಾಕಿದಂತೆ ಆ ಪುಟದಲ್ಲಿರುವ ಸಂಗತಿಗಳನ್ನೆಲ್ಲಾ ಮರೆತುಬಿಟ್ಟರೆ ಮುಗಿದೇಹೋಯಿತು. ನೆನಪಿಟ್ಟುಕೊಂಡು ಮುಂದಡಿ ಇಡುವವ ಮಾತ್ರ ವಿಜಯಿಯಾದಾನು. ನಮ್ಮ ಇತಿಹಾಸ ಒಂಥರಾ ಸೆಮಿಸ್ಟರ್ ಪದ್ಧತಿಯ ಶಿಕ್ಷಣದಂತಾಗಿಬಿಟ್ಟಿದೆ. ಈ ಸೆಮಿಸ್ಟರ್ ನಲ್ಲಿ ಕಲಿತದ್ದು ಮುಂದಿನ ಬಾರಿಗೆ ಬೇಕಾಗಲಾರದು. ಸದ್ಯಕ್ಕೆ ಸಾವರ್ಕರ್ ಭಾರತೀಯರ ಪಾಲಿಗೆ ಹಾಗೆಯೇ ಆಗಿಬಿಟ್ಟಿದ್ದಾರೆ. ಅವರು ಹುಟ್ಟಿ125 ವರ್ಷ ಕಳೆಯುವುದರೊಳಗಾಗಿ ಅವರು ಸಮಾಜದ ಕಣ್ಣಿಂದ ದೂರವೇ ಆಗಿಬಿಟ್ಟಿದ್ದಾರೆ. ಯಾವ ರಾಷ್ಟ್ರದ ಏಕತೆ- ಅಖಂಡತೆಗಾಗಿ; ಯಾವ ಪರಿಪೂರ್ಣ ಸಮಾಜದ ಪರಿಪೂರ್ಣ ಉನ್ನತಿಗಾಗಿ ತಮ್ಮ ಜೀವನವನ್ನೇ ತೇಯ್ದುಬಿಟ್ಟರೋ ಆ ವ್ಯಕ್ತಿ ಅದೇ ದೇಶದ ಸ್ಮೃತಿಯಿಂದ ದೂರವಾಗೋದು ದುರಂತವೇ ಸರಿ.

ಹಾಗೆ ನೋಡಿದರೆ ಕಳೆದ ಶತಕದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬೌದ್ಧಿಕವಾಗಿ ಹಾಗೆಯೇ ಪ್ರತ್ಯಕ್ಷವಾಗಿ ಪಾಲ್ಗೊಂಡ ಅಪರೂಪದ ಸಾಹಸಿ ಸಾವರ್ಕರರೇ ಎಂಬುದರಲ್ಲಿ ಅನುಮಾನವಿಲ್ಲ. ಸಿಕ್ಕಸಿಕ್ಕಲ್ಲಿ ಗುಂಡು ಹೊಡೆದು ಅದನ್ನೇ ಕ್ರಾಂತಿ ಎನ್ನುತ್ತಿರಲಿಲ್ಲ ಸಾವರ್ಕರ್. ಅವರ ಪ್ರತಿಯೊಂದು ಕೆಲಸದ ಹಿಂದೆ ಬೆಟ್ಟದಷ್ಟು ಚಿಂತನೆ, ಫಲಿತಾಂಶದ ನಂತರದ ಪರಿಸ್ಥಿತಿಯ ಕುರಿತು ಮುಂದಾಲೋಚನೆ- ಎಲ್ಲವೂ ಇರುತ್ತಿತ್ತು. ಅವರು ಲೇಖನಿ ಹಿಡಿದರೆ ಆ ಕಾಲಘಟ್ಟದ ಮಹಾಮಹಿಮ ಲೆಖಕರನ್ನೂ ಮೀರಿಸುವಷ್ಟು ಪ್ರತಿಭಾವಂತ. ಪಿಸ್ತೂಲು ಹಿಡಿದರೆ, ಎದುರಾಳಿಗಳ ರಕ್ತವೇ ತಣ್ಣಗಾಗುವಷ್ಟು ಕೆಚ್ಚೆದೆ. ಮಾತಿಗೆ ನಿಂತರೆ ಮೈಯೆಲ್ಲ ಕಿವಿಯಾಗಿ ಕೇಳಬೇಕೆನ್ನಿಸುವ ಮಧುರ ದನಿ, ಅಸ್ಖಲಿತ ವಿಚಾರಗಳ ಧಾರಾಪ್ರವಾಹ. ಬಿಡಿ. ಅಂತಹ ವ್ಯಕ್ತಿ ಯುಗಕ್ಕೊಬ್ಬರೇ!

ಮತ್ತಷ್ಟು ಓದು »