ASER ವರದಿ 2012 ಮತ್ತು ಕರ್ನಾಟಕದ ಕಲಿಕೆ ಒಳನೋಟ – 1
-ಪ್ರಶಾಂತ ಸೊರಟೂರ
ASER (Annual Status Education Report – ಕಲಿಕೆ ಗುಣಮಟ್ಟದ ವರುಶದ ವರದಿ)
ಇದು ಸರಕಾರೇತರ ಸಂಸ್ಥೆಯಾದ ’ಪ್ರಥಮ್’ನಿಂದ ಕಲಿಕೆಯ ಗುಣಮಟ್ಟ ತಿಳಿದುಕೊಳ್ಳಲು 2005ರಿಂದ ಪ್ರತಿ ವರುಶ, ಇಂಡಿಯಾದ ಸುಮಾರು 15,000 ಹಳ್ಳಿ ಪ್ರದೇಶದ ಶಾಲೆಗಳಲ್ಲಿ ಅರಸುವಿಕೆ (ಸಮೀಕ್ಷೆ) ನಡೆಸಿ ಹೊರತರಲಾಗುತ್ತಿರುವ ವರದಿ.
ASER ಕಲಿಕೆಮಟ್ಟವನ್ನು ಒರೆಗೆಹಚ್ಚುವ ಬಗೆ:
ಇಂಡಿಯಾದ ಪ್ರತಿ ಜಿಲ್ಲೆಯಲ್ಲಿ 30 ಹಳ್ಳಿಗಳನ್ನು ಆಯ್ಕೆ ಮಾಡಲಾಗುತ್ತದೆ. (ಹಿಂದಿನ ಎರಡು ವರುಶದ 20 ಮತ್ತು 10 ಹೊಸ ಹಳ್ಳಿಗಳು).
ಹಳ್ಳಿಗಳ ಗುಣಮಟ್ಟ (ರಸ್ತೆ, ಮನೆಗಳು ಇತ್ಯಾದಿ), ಕುಟುಂಬದ ಗುಣಮಟ್ಟ (ತಂದೆ-ತಾಯಿಯ ಕಲಿಕೆ, ಮನೆ ಇತ್ಯಾದಿ), ಶಾಲೆಯ ಗುಣಮಟ್ಟ (ಶಿಕ್ಶಕರು-ಮಕ್ಕಳ ಅನುಪಾತ, ಕಲಿಕೆಯ ಸಲಕರಣೆಗಳು, ಕುಡಿಯುವ ನೀರು, ಓದುಮನೆ) ಮುಂತಾದವುಗಳನ್ನು ಈ ಅರಸುವಿಕೆಯು (ಸಮೀಕ್ಶೆಯು) ಒಳಗೊಂಡಿರುತ್ತದೆ.
6 – 14 ವಯಸ್ಸಿನ (1 ರಿಂದ 7/8 ನೇ ತರಗತಿ) ಮಕ್ಕಳು ಈ ವರದಿಗೆ ಒಳಪಡುತ್ತಾರೆ.ಕಲಿಕೆಯ ಗುಣಮಟ್ಟವನ್ನು ASER ನ ಮೂರು ಸಲಕರಣೆಗಳಿಂದ ಅಳೆಯಲಾಗುತ್ತದೆ. 1) ತಾಯ್ನುಡಿಯಲ್ಲಿ ಓದುವಿಕೆಯ ಮಟ್ಟ 2) ಇಂಗ್ಲಿಶ ಓದುವಿಕೆಯ ಮಟ್ಟ 3) ಗಣಿತ ಕಲಿಕೆಯ ಮಟ್ಟ (ಕಳೆಯುವಿಕೆ ಮತ್ತು ಭಾಗಾಕಾರ)
ಜೊತೆಗೆ 2012ರ ವರದಿಯಲ್ಲಿ ಶಾಲೆಗೆ ಸೇರುವ ಮಕ್ಕಳ ಪ್ರಮಾಣ, ಸರಕಾರ ಮತ್ತು ಖಾಸಗಿ ಶಾಲೆಗಳ ಪ್ರಮಾಣ, ಹೊರಕಲಿಕೆಗೆ (ಟ್ಯೂಶನ್) ಹೋಗುವವರ ಪ್ರಮಾಣ ಮುಂತಾದವುಗಳ ಕುರಿತು ತಿಳಿಸಲಾಗಿದೆ.
2012 ರಲ್ಲಿ ಕರ್ನಾಟಕದ 778 ಹಳ್ಳಿಗಳ, ಸುಮಾರು 18,000 ಸಾವಿರ ಮಕ್ಕಳು ಈ ಆರಸುವಿಕೆಗೆ (ಸಮೀಕ್ಷೆಗೆ) ಒಳಪಟ್ಟಿದ್ದರು.
ಮತ್ತಷ್ಟು ಓದು 
ಭಾರತದ ಮಾಣಿಕ್ಯ – ಮಾಣಿಕ್ ಸರ್ಕಾರ್
-ಡಾ. ಅಶೋಕ್ ಕೆ ಆರ್
ಭಾರತ ಬಡದೇಶವೇ? ನಮ್ಮ ರಾಜಕಾರಣಿಗಳು ಅಧಿಕೃತವಾಗಿಯೇ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ನೋಡಿದರೆ ಭಾರತದಲ್ಲಿ ಬಡವರ ಅಸ್ತಿತ್ವವೇ ಇಲ್ಲವೇನೋ ಎಂಬ ಭಾವನೆ ಮೂಡಿದರೆ ತಪ್ಪಲ್ಲ. ಎಲ್ಲೋ ಕೆಲವರನ್ನು ಹೊರತುಪಡಿಸಿ ನಮ್ಮ ಸಂಸದರು ಸಚಿವರು ಶಾಸಕರು ಮುಖ್ಯಮಂತ್ರಿಗಳೆಲ್ಲ ಕೋಟಿಗೂ ಅಧಿಕ ಬೆಲೆಬಾಳುವವರೇ! ಶಾಸನಸಭೆಯಲ್ಲಿ ಯಾರದೂ ವಿರೋಧವಿಲ್ಲದೆ ಅಂಗೀಕೃತವಾಗುವ ಮಸೂದೆ “ಶಾಸಕ – ಸಚಿವರ” ವೇತನ ಹೆಚ್ಚಳ ಮಾತ್ರ! ರಾಜಕಾರಣಿಗಳ ಬಗ್ಗೆ ರಾಜಕೀಯದ ಬಗ್ಗೆ ಅಪಾಯಕಾರಿ ಮಟ್ಟದಲ್ಲಿ ಬೆಳೆಯುತ್ತಿರುವ ಸಿನಿಕತೆಯ ನಡುವೆ ರಾಜಕಾರಣವೆಂದರೆ ಕೇವಲ ಹಣ ಮಾಡುವ, ಅನೈತಿಕ ರೀತಿಯಲ್ಲಿ ಜನರ ಮಧ್ಯೆಯೇ ವಿರೋಧ ಬೆಳೆಸುವ ದಂಧೆಯಲ್ಲ ಎಂಬುದನ್ನು ನಿರೂಪಿಸುವ ರಾಜಕಾರಣಿಗಳೂ ಇದ್ದಾರೆ ಎಂದರೆ ನಂಬುವುದು ಕೊಂಚ ಕಷ್ಟದ ಕೆಲಸವೇ ಸರಿ! ಅದರಲ್ಲೂ ಕರ್ನಾಟಕದ ರಾಜಕಾರಣ ಹಿಂದೆಂದೂ ಕಾಣದ ರೀತಿಯಲ್ಲಿ ಅಧಃಪತನಕ್ಕೊಳಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರನ್ನು ಅಪಹಾಸ್ಯದ ಸರಕನ್ನಾಗಿಸಿರುವುದು ಸುಳ್ಳಲ್ಲ. ಈ ವಿಷಮ ಪರಿಸ್ಥಿತಿಯಲ್ಲಿ ರಾಜಕಾರಣವೆಂದರೆ ಪ್ರಚಾರಕ್ಕಾಗಿ ಹಪಹಪಿಸುವುದಲ್ಲ, ವೋಟಿಗಾಗಿ ನೈತಿಕತೆ ತೊರೆಯುವುದಲ್ಲ, ಇವೆಲ್ಲಕ್ಕಿಂತ ಹೆಚ್ಚಾಗಿ ತನ್ನತನ ಕಳೆದುಕೊಳ್ಳುವುದಲ್ಲ ಎಂಬುದನ್ನು ನಿರೂಪಿಸುತ್ತ ತನ್ನ ಸಾಮರ್ಥ್ಯದ ಮಟ್ಟಿಗೆ ಜನರಿಗೆ ಅನುಕೂಲವನ್ನು ಮಾಡಿಕೊಡುತ್ತಿರುವ ಮಾಣಿಕ್ ಸರ್ಕಾರ್ ಬಗ್ಗೆ ತಿಳಿದುಕೊಳ್ಳುವುದು ರಾಜಕಾರಣಿಗಳಿಗೆ ಮತ್ತವರಿಗೆ ಮತ ನೀಡುವ ಜನರಿಗೂ ಅವಶ್ಯಕ.
“ಸೆವೆನ್ ಸಿಸ್ಟರ್ಸ್” ಎಂದೇ ಹೆಸರಾಗಿರುವ ಭಾರತದ ಈಶಾನ್ಯ ರಾಜ್ಯಗಳ ಪೈಕಿ ಅತ್ಯಂತ ಪುಟ್ಟ ಮತ್ತು ಕೊನೆಯ ರಾಜ್ಯ ತ್ರಿಪುರ. ತ್ರಿಪುರದಲ್ಲಿ 1998ರಿಂದಲೂ ಮುಖ್ಯಮಂತ್ರಿಯಾಗಿರುವವರು ಮಾಣಿಕ್ ಸರ್ಕಾರ್! ಜನವರಿ 22 1949ರಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಮಾಣಿಕ್ ಸರ್ಕಾರ್ ವಿಧ್ಯಾರ್ಥಿ ದೆಸೆಯಲ್ಲಿದ್ದಾಗ ನಕ್ಸಲ್ ವಿಚಾರಧಾರೆಗಳಿಗೆ ಆಕರ್ಷಿತರಾಗಿ ಕಮ್ಯುನಿಷ್ಟ್ ಪಕ್ಷ ಸೇರಿದರು. ಎಸ್ ಎಫ್ ಐನ ಪ್ರತಿನಿಧಿಯಾಗಿ, ಎಸ್ ಎಫ್ ಐನ ರಾಜ್ಯ ಕಾರ್ಯದರ್ಶಿಯಾಗಿ, ಅದೇ ಎಸ್ ಎಫ್ ಐನ ಅಖಿಲ ಭಾರತ ಸಮಿತಿಗೆ ಉಪಾಧ್ಯಕ್ಷನಾಗಿ ತಮ್ಮ ಹೋರಾಟದ ಹಾದಿಯನ್ನು ಮುಂದುವರೆಸಿದ ಮಾಣಿಕ್ 1972ರಲ್ಲಿ ಸಿ ಪಿ ಐ (ಎಂ)ನ ರಾಜ್ಯ ಕಮಿಟಿಯ ಸದಸ್ಯನಾಗಿ ಆಯ್ಕೆಯಾಗುತ್ತಾರೆ. 1978ರಲ್ಲಿ ಸಿ ಪಿ ಐ (ಎಂ)ನ ರಾಜ್ಯ ಕಾರ್ಯದರ್ಶಿಯಾಗುತ್ತಾರೆ. ಅದೇ ವರ್ಷ ಎಡರಂಗ ಮೊದಲ ಬಾರಿಗೆ ಅಧಿಕಾರಕ್ಕೆ ಬರುತ್ತದೆ. 1985ರಲ್ಲಿ ಮಾಣಿಕ್ ಸರ್ಕಾರ್ ಪಕ್ಷದ ಸೆಂಟ್ರಲ್ ಕಮಿಟಿಯ ಸದಸ್ಯರಾಗುತ್ತಾರೆ.
‘ಮಾನವ ಹಕ್ಕು ಉಲ್ಲಂಘನೆ’ ಅನ್ನುವುದು ಮೋದಿಗೆ ಮಾತ್ರ ಅನ್ವಯವೇ?
– ರಾಕೇಶ್ ಶೆಟ್ಟಿ
ಕಳ್ಳಬೆಕ್ಕು ತೀರ್ಥಯಾತ್ರೆಗೆ ಹೊರಟು ನಿಂತ ಕತೆ ಗೊತ್ತಿದೆಯಲ್ವಾ! ಅಮೇರಿಕಾದ ವಾರ್ಟನ್-ಇಂಡಿಯಾ ಎಕಾನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ಭಾಷಣ ಮಾಡಲು ಆಹಾನ ಕೊಟ್ಟು ಕಡೆಗೆ ಎಡಪಂಥೀಯರ ಒತ್ತಾಯಕ್ಕೆ ಮಣಿದು ಅದನ್ನು ರದ್ದುಗೊಳಿಸಿ ಭಾರತದ ಸಂವಿಧಾನದಡಿ ಜನರಿಂದ ಚುನಾಯಿಸಿ ಬಂದ ಮುಖ್ಯಮಂತ್ರಿಯೊಬ್ಬರಿಗೆ ಅವಮಾನ ಮಾಡುವುದಿದೆಯಲ್ಲ ಅದು ಮೋದಿಗಾದ ಅವಮಾನವಲ್ಲ.ಬದಲಿಗೆ ಆ ರಾಜ್ಯಕ್ಕಾದ ಅವಮಾನ ಕೂಡ ಹೌದು.ಗುಜರಾತ್ ಗಲಭೆಯ ನಂತರ ಮೋದಿಯೆಡೆಗೆ ಬೆನ್ನು ತಿರುಗಿಸಿ ನಿಂತಿದ್ದ ಐರೋಪ್ಯ ಒಕ್ಕೂಟ ಇವತ್ತು ಸ್ನೇಹ ಹಸ್ತಚಾಚಿ ನಿಂತಿದೆ.ಆದರೆ ತೀರ್ಥಯಾತ್ರೆಗೆ ಹೊರಟು ನಿಂತ ಕಳ್ಳಬೆಕ್ಕು ಅಮೇರಿಕಾ ಮಾತ್ರ ಇನ್ನು ಹುಸಿ ಧ್ಯಾನದಲ್ಲಿದ್ದಂತಿದೆ.ಮೋದಿಯ ವಿಷಯದಲ್ಲಿ ಅದೂ ಈಗಲೂ ಹಟಮಾರಿ ಧೋರಣೆಯನ್ನು ಮುಂದುವರೆಸಿಕೊಂಡು ಬಂದಿದೆ.
“ನೀವು ಬಯಸುವ ಬದಲಾವಣೆ ನೀವೆ ಆಗಿ ತೋರಿಸಿ” ಅಂದಿದ್ದರು ಗಾಂಧೀಜಿ.ಆದರೆ ಅಮೇರಿಕಾದ ವರಸೆ ಸಲ್ಪ ಉಲ್ಟಾ ಈ ವಿಷಯದಲ್ಲಿ “ತಾನು ಬಯಸುವ ಬದಲಾವಣೆ ಬೇರೆಡೆಯಲ್ಲಿ,ಬೇರಯವರಿಂದ ಆಗಬೇಕು.ತಾನು ಮಾತ್ರ ತನ್ನ ಚಾಳಿ ಬಿಡಲಾರೆ” ಅನ್ನುವಂತೆ.ಮೋದಿಯ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆಯ ಭಾಷಣ ಬಿಗಿಯುವ ಈ ಅಮೇರಿಕಾ ಇತಿಹಾಸದುದ್ದಕ್ಕೂ ಮಾಡಿಕೊಂಡು ಬಂದಿರುವುದೇನು?
ಕನ್ನಡ ಶಿಕ್ಷಕರು ಬೇಕಾಗಿದ್ದಾರೆ – ಕನ್ನಡಿಗರಿಗೆ ಆದ್ಯತೆ
ನಮಸ್ಕಾರ ಗೆಳೆಯರೇ,
ಬೆಂಗಳೂರಿನಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸುವ ನಿಟ್ಟಿನಲ್ಲಿ ” ಕನ್ನಡ ಲರ್ನಿಂಗ್ ಸ್ಕೂಲ್ ” ಸಂಸ್ಥೆ ಕೆಲಸ ಮಾಡುತ್ತಿರುವುದು ತಮ್ಮೆಲ್ಲರಿಗೂ ಗೊತ್ತಿರುವ ವಿಷಯವಾಗಿದೆ.
ಸಂತೋಷದ ವಿಷಯವೆಂದರೆ ಬಹಳಷ್ಟು ಜನ ಕನ್ನಡೇತರರು ಕನ್ನಡ ಕಲಿಯಲು ಆಸಕ್ತರಾಗಿದ್ದಾರೆ. ಇವರಿಗೆ ಕನ್ನಡ ಕಲಿಸುವ ನಿಟ್ಟಿನಲ್ಲಿ ನಮ್ಮ ಸಂಸ್ಥೆಗೆ ” ಕನ್ನಡ ಶಿಕ್ಷಕರು” ಬೇಕಾಗಿದ್ದಾರೆ.
ಕನ್ನಡ ಕಲಿಸುವ ಆಸಕ್ತಿ ಇದ್ದರೆ ಮತ್ತು ಈ ಕೆಳಗಿನ ನಿಯಮಗಳು ಒಪ್ಪಿಗೆಯಾದರೆ ನೀವು ನಮ್ಮನ್ನು ಸಂಪರ್ಕಿಸಬಹುದು:
************************************************************************************************************************
೧. ಕನ್ನಡ ಕಲಿಸುವ ತರಗತಿಗಳು ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಮಾತ್ರ ನಡೆಯುವುದರಿಂದ, ಪ್ರತಿ ವಾರಾಂತ್ಯ ೪ ಗಂಟೆ ನಿಮ್ಮ ಸಮಯವನ್ನು ಮೀಸಲಿಡುವಂತಿದ್ದರೆ ಮಾತ್ರ ನಿಮ್ಮ ಒಪ್ಪಿಗೆ ಸೂಚಿಸಿ.
೨. ಮೊದಲು ೨ ತಿಂಗಳು ” ಕನ್ನಡ ಕಲಿಸುವುದು ಹೇಗೆ” ಎನ್ನುವುದನ್ನು ತರಬೇತಿ ನೀಡಲಾಗುತ್ತದೆ. ಆ ನಂತರವಷ್ಟೇ ಶಿಕ್ಷಕರು ತರಗತಿಗಳನ್ನು ತಾವಾಗಿಯೇ ತೆಗೆದುಕೊಳ್ಳಬಹುದು.
೩. ಕನ್ನಡೇತರರಿಗೆ ಕನ್ನಡ ಕಲಿಸುವ ಆಸಕ್ತಿ ಇರುವ ಅಭ್ಯರ್ಥಿಗಳಿಗೆ, “ಇಂಗ್ಲಿಷ್ ಭಾಷೆಯ ಮೇಲೆ ಹಿಡಿತವಿರಬೇಕು ಹಾಗು ಸ್ವಲ್ಪ ಮಟ್ಟಿಗಿನ ಹಿಂದಿ ಭಾಷೆಯನ್ನೂ ತಿಳಿದಿರಬೇಕು”.
೪. ಬಿ. ಎ; ಬಿ.ಎಡ್ ಅಥವಾ ಎಮ್. ಎ ; ಎಂ.ಎಡ್ ಮಾಡಿದ ಅಥವಾ ಮಾಡುತ್ತಿರುವ ಅಭ್ಯರ್ಥಿಗಳಿಗೂ ಅವಕಾಶವಿದೆ.
೫. ಕನ್ನಡ ಪಾಠ ಹೇಳಿ ಕೊಡುವ ಶಿಕ್ಷಕರಿಗೆ ಇಂತಿಷ್ಟು ಸಂಭಾವನೆ ಕೊಡಲಾಗುವುದು.
೬. ವಯಸ್ಸಿನ ಮಿತಿ ೨೫ ರಿಂದ ೪೦ ರ ವರೆಗೆ.
೭. ಕೊನೆಯದಾಗಿ ತಮಗೆ ಆಸಕ್ತಿ ಇದ್ದರಷ್ಟೇ ನಮಗೆ ಉತ್ತರವನ್ನು ಬರೆಯಿರಿ.
೮. ಆಸಕ್ತರು ತಮ್ಮ ಜಾತಕವನ್ನು ನಮಗೆ ಕಳಿಸಬಹುದು: school.kannada@gmail.com
೯. ಖಾಲಿ ಇರುವ ಹುದ್ದೆಗಳ ಸಂಖ್ಯೆ : ೦೨.
************************************************************************************************************************
ಧನ್ಯವಾದಗಳೊಂದಿಗೆ,
ಕನ್ನಡ ಲರ್ನಿಂಗ್ ಸ್ಕೂಲ್ ತಂಡ.
“ಕನ್ನಡ ಕಲಿಸಲು ಕೈ ಜೋಡಿಸಿ”.
೯೯೦೦೫೭೭೨೨೫
ಪಾಕಿಸ್ತಾನದಲ್ಲಿ ಹಿಂದೂ ವಿವಾಹಕ್ಕೆ ಮಾನ್ಯತೆಯಿಲ್ಲ
-ಕ.ವೆಂ.ನಾಗರಾಜ್
ನಿಮಗೆ ತಿಳಿದಿದೆಯೇ? ಪಾಕಿಸ್ತಾನದಲ್ಲಿ ಹಿಂದೂ ಮದುವೆಗಳಿಗೆ ಮಾನ್ಯತೆಯಿಲ್ಲ. ಪಾಕಿಸ್ತಾನ ಹುಟ್ಟಿದ 1947ರಿಂದಲೂ ಹಿಂದೂ ದಂಪತಿಗಳನ್ನು ಗಂಡ-ಹೆಂಡಿರೆಂದು ಕಾನೂನು ಪ್ರಕಾರ ಪರಿಗಣಿಸಲಾಗಿಲ್ಲ. ಇದರಿಂದಾಗಿ ಅನೇಕ ಕೌಟುಂಬಿಕ, ಸಾಮಾಜಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಅವರುಗಳು, ವಿಶೇಷವಾಗಿ ಸ್ತ್ರೀಯರು, ಸಿಲುಕಿದ್ದಾರೆ. ರಾಷ್ಟ್ರೀಯತೆಯ ಸಮಸ್ಯೆ, ಪಾಸ್ ಪೋರ್ಟ್ ಪಡೆಯಲು ಸಮಸ್ಯೆ, ಆಸ್ತಿ-ಪಾಸ್ತಿಗಳ ಹಕ್ಕು ವರ್ಗಾವಣೆ ಸಮಸ್ಯೆ, ದೇಶದೊಳಗೆಯೇ ಪ್ರಯಾಣ ಮಾಡಲೂ ಸಮಸ್ಯೆ, ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ. ಘೋರ ಸಮಸ್ಯೆ ಎಂದರೆ ಹಿಂದೂ ಹೆಣ್ಣು ಮಕ್ಕಳನ್ನು ಬಲವಂತವಾಗಿ ಅಪಹರಿಸಿ, ಮತಾಂತರಿಸಿ, ಬಲವಂತ ವಿವಾಹಗಳನ್ನೂ ಮಾಡಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಿಂದೂ ಸ್ತ್ರೀಯರ ರಕ್ಷಣೆಗೆ ಅಲ್ಲಿ ಸೂಕ್ತ ಕಾನೂನುಗಳೇ ಇರದಿರುವುದು.
ಭಾರತದಲ್ಲಿ ಎಲ್ಲರಿಗೂ ಜಾತಿ-ಮತ ಭೇದವಿಲ್ಲದೆ ಸಮಾನ ಸಿವಿಲ್ ಮತ್ತು ಕ್ರಿಮಿನಲ್ ಕಾಯದೆಗಳಿರಬೇಕೆಂಬ ಒತ್ತಾಯಕ್ಕೆ ವಿರೋಧವಿರುವುದು ಮುಸಲ್ಮಾನರಿಂದಲೇ ಮತ್ತು ಅವರನ್ನು ಬೆಂಬಲಿಸುವ ಬುದ್ಧೂಜೀವಿಗಳು ಮತ್ತು ಮತಗಳ ಮೇಲೆ ಕಣ್ಣಿಟ್ಟಿರುವ ರಾಜಕೀಯ ಪಕ್ಷಗಳಿಂದಲೇ. ಭಾರತದಲ್ಲಿ ಮುಸ್ಲಿಮರ ರಕ್ಷಣೆಗೆ ವಿಶೇಷ ಮುತುವರ್ಜಿ ವಹಿಸಲಾಗಿದೆ. ಅವರಿಗೇ ಪ್ರತ್ಯೇಕ ಕಾನೂನು-ಕಾಯದೆಗಳನ್ನು ಅವರ ಶರೀಯತ್ ಪ್ರಕಾರವೇ ರಚಿಸಲಾಗಿದೆ. ನೂರಾರು ಜನರ ಬಲಿ ತೆಗೆದುಕೊಂಡ/ತೆಗೆದುಕೊಳ್ಳುವ ಉಗ್ರರಿಗೂ ಇಲ್ಲಿ ರಕ್ಷಣೆಯಿದೆ. ಆದರೆ ಅಮಾಯಕ ಅತ್ಯಂತ ಅಲ್ಪಸಂಖ್ಯಾತರೆನಿಸಿರುವ ಹಿಂದೂಗಳಿಗೆ ಕನಿಷ್ಠ ಮೂಲಭೂತ ಸ್ವಾತಂತ್ರ್ಯವನ್ನೂ ಪಾಕಿಸ್ತಾನದಲ್ಲಿ ನಿರಾಕರಿಸಲಾಗಿದೆ. ಹಿಂದೂ ವಿವಾಹಗಳನ್ನು ಮಾನ್ಯ ಮಾಡಲು ಸೂಕ್ತ ಕಾನೂನು ರಚಿಸಬೇಕೆಂಬ ಒಟ್ಟು ಜನಸಂಖ್ಯೆಯ ಕೇವಲ ಶೇ. 3ರಷ್ಟು ಮಾತ್ರ ಉಳಿದಿರುವ ಹಿಂದೂಗಳ ಕೂಗು ಅಲ್ಲಿನ ಸರ್ಕಾರದ ಕಿವುಡು ಕಿವಿಗಳಿಗೆ ಇದುವರೆವಿಗೂ ಮುಟ್ಟಿಲ್ಲ. ಮಾನವ ಹಕ್ಕುಗಳ ಆಯೋಗದವರು, ಬುದ್ಧಿಜೀವಿಗಳೆನಿಸಿಕೊಂಡವರು, ಮುಂತಾದವರಿಗೆ ಇದು ಯೋಚಿಸಬೇಕಾದ ಸಂಗತಿಯೇ ಆಗಿಲ್ಲ.
ಮತ್ತಷ್ಟು ಓದು 
ಅವರಿಗೆ ಸಾಚಾರ್ ವರದಿ: ನಮಗೇಕಿಲ್ಲ ಪಚೌರಿ ವರದಿ?
-ಸಂತೋಷ್ ತಮ್ಮಯ್ಯ
ಭಾರತದಲ್ಲಿ ಹಿಂದುಗಳು ಎಂದರೆ ಎರಡನೇ ದರ್ಜೆಯ ಜನರು ಮತ್ತು ಹಿಂದುಗಳನ್ನು ಎಲ್ಲಿಡಬೇಕೋ ಅಲ್ಲೇ ಇಡಲಾಗುತ್ತಿದೆ ಎಂಬುದಕ್ಕೆ ರಾಮಸೇತು ಪ್ರಕರಣವೇ ಸಾಕ್ಷಿ. ಕೇಂದ್ರ ಸರಕಾರ ರಾಜೇಂದ್ರ ಪಚೌರಿ ವರದಿಯನ್ನು ತಿರಸ್ಕರಿಸುವುದರ ಮೂಲಕ ಅದನ್ನು ಸಾಭೀತುಪಡಿಸಿದೆ. ಸುಪ್ರಿಂಕೋರ್ಟಿಗೆ ತಾನು ಸೇತುಸಮುದ್ರಂ ಯೋಜನೆಯನ್ನು ಮಾಡಲು ಬಯಸಿರುವುದಾಗಿಯೂ, ಇಷ್ಟಿಷ್ಟು ಖರ್ಚುವೆಚ್ಚಗಳನ್ನು ಅದಕ್ಕಾಗಿ ಇಟ್ಟಿರುವುದಾಗಿಯೂ ಇದು ರಾಷ್ಟ್ರದ ಮಹತ್ತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂಬುದರ ಬಗ್ಗೆ ಅಫಿಡವಿಟ್ ಅನ್ನು ಸಲ್ಲಿಸಿದೆ.
ಸಲ್ಲಿಸದೇ ಇನ್ನೇನು ತಾನೇ ಮಾಡಿಯಾರು? ರಾಮಸೇತು ಹಿಂದೂ ಭಾವನೆಗಳಿಗೆ ಸಂಬಂಧಪಟ್ಟ ಸಂಗತಿ, ರಾಮಸೇತು ರಾಮಾಯಣಕ್ಕೆ ಸಂಬಂಧಪಟ್ಟ ಸಂಗತಿ, ರಾಮಸೇತು ಹಿಂದೂ ತತ್ತ್ವಶಾಸ್ತ್ರ, ಅಧ್ಯಾತ್ಮದ ಪರಾಕಾಷ್ಠೆಗೆ ಸಂಬಂಧಪಟ್ಟ ಸಂಗತಿ, ರಾಮಸೇತು ವಿಶ್ವದ ಓರ್ವ ಮಹಾನ್ ಆದರ್ಶಪುರುಷನೊಬ್ಬನ , ಧರ್ಮಸಂಸ್ಥಾಪಕನೊಬ್ಬನಿಗೆ ಸಂಬಂಧಪಟ್ಟ ಸಂಗತಿ. ಆ ಆದರ್ಶಪುರುಷ ಹಿಂದೂ ದೇವರು ಎಂಬ ಉದಾಸೀನತನ ಸರಕಾರಕ್ಕೆ ಇರುವಾಗ ಈ ಸರಕಾರ ಅಫಿಡವಿಟ್ ಅನ್ನೂ ಸಲ್ಲಿಸುತ್ತದೆ ಮತ್ತು ಅಯೋಧ್ಯೆಯನ್ನೂ ತುಂಡುಮಾಡಿ ಹಂಚಿಬಿಡುತ್ತದೆ. ಅಂದು ಬಾಬರ್ ಮಾಡಿದಂತೆ ರಾಮಕುರುಹನ್ನೇ ಒಡೆಯುತ್ತದೆ. ಹಾಗಾಗಿ ರಾಜೇಂದ್ರ ಪಚೌರಿ ಎಂಬ ವಿಶ್ವವಿಖ್ಯಾತ ಪರಿಸರ ಶಾಸ್ತ್ರಜ್ನ, ಚಿಂತಕ ಹೇಳುವ ಮಾತನ್ನು ಸರಕಾರ ಕೇಳುವ ಸ್ಥತಿಯಲ್ಲಿರುವುದಿಲ್ಲ. ಅದನ್ನು ತಿರಸ್ಕರಿಸದೇ ಇರುವುದಿಲ್ಲ.
ಕೆಲವರ್ಷಗಳ ಹಿಂದೆ ರಾಜೇಂದ್ರ ಪಚೌರಿ ವರದಿ ಸರಕಾರದ ಸೇತುಸಮುದ್ರಂ ಯೋಜನೆಯ ಅವೈಜ್ನಾನಿಕತೆ ಮತ್ತು ತಿಕ್ಕಲುತನಗಳನ್ನು ಎಳೆಎಳೆಯಾಗಿ ಬಿಡಿಸಿ ವರದಿಯನ್ನು ಸಿದ್ಧ ಮಾಡಿತ್ತು. ಭೂಗೋಳದ ದಕ್ಷಿಣದ ಸಮುದ್ರಗಳ ಜಲಚರಗಳ ತವರು ಮನೆ ಈ ಪ್ರದೇಶ ಎಂದು ಬಣ್ಣಿಸಿತ್ತು. ಈ ಪ್ರದೇಶದಲ್ಲಿ ನಡೆಯುವ ಯಾವುದೇ ಮಾನವ ಹಸ್ತಕ್ಷೇಪಗಳು ಈ ಜಲಚರಗಳ ಸಂತತಿಯನ್ನು ಕೊಲ್ಲುತ್ತದೆ ಎಂದು ಹೇಳಿತ್ತು. ಮತ್ತು ಭಾರತ ಮತ್ತು ಶ್ರೀಲಂಕಾ ನಡುವಿನ ಕಡಲ್ಗಾಲುವೆಗೆ ಪರ್ಯಾಯ ಮಾರ್ಗವನ್ನು ಸೂಚಿಸಿತ್ತು. ಆದರೆ ಸರಕಾರ, ಯಾವ ರಾಜೇಂದ್ರ ಪಚೌರಿಯವರ ಮಾತಿಗಾಗಿ ವಿಶ್ವಸಂಸ್ಥೆ ಕಾಯುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಒಂದು ಸಲಹೆಗಾಗಿ ಯುನೆಸ್ಕೋ ಬೇಡಿಕೊಳ್ಳುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಡೇಟ್ಗಾಗಿ ವಿದೇಶದ ವಿಶ್ವವಿದ್ಯಾಲಯಗಳು ಕಾಯುತ್ತವೆಯೋ, ಯಾವ ನೊಬೆಲ್ ಪ್ರಶಸ್ತಿ ಸಮಿತಿ ಯಾವ ರಾಜೇಂದ್ರ ಪಚೌರಿಯವರನ್ನು ಆಹ್ವಾನಿಸುತ್ತದೆಯೋ ಅಂಥ ಪಚೌರಿಯವರನ್ನು, ಅವರ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತದೆ. ಕಾರಣ ರಾಮ ಹಿಂದು. ರಾಮಸೇತು ಹಿಂದೂ ಭಾವನೆ.ಅದು ದೇಶದಲ್ಲಿ ಅಂಥಾ ದೊಡ್ಡ ಸಂಗತಿಯೇನಲ್ಲ ಎಂಬ ತನ್ನ ಎಂದಿನ ಕಾಂಗ್ರೆಸ್ ನೀತಿ. ಹಾಗಾಗಿ ಕಾಂಗ್ರೆಸ್ಗೆ ಯಾವಾಗಲೂ ಮುಸಲ್ಮಾನರಿಗೆ ಹೆಚ್ಚು ತಿನ್ನಿಸಿ, ಅವರಿಗೆ ಹೆಚ್ಚು ಕುಡಿಸಿ, ಹೆಚ್ಚು ಸಂಬಳ ಕೊಡಿಸಿ, ಹೆಚ್ಚುಹೆಚ್ಚಾಗಿ ಮಿಲಿಟರಿಗೆ ಸೇರಿಸಿಕೊಳ್ಳಿ, ಮೇಷ್ಟ್ರನ್ನಾಗಿ ನೇಮಿಸಿಕೊಳ್ಳಿ,ಗುಮಾಸ್ತರನ್ನಾಗಿಸಿಕೊಳ್ಳಿ. ಅವರನ್ನು ಜತನದಿಂದ ನೋಡಿಕೊಂಡಿರಿ. ಪಾಪ ಅವರು ಬಡವರು ನೋಡಿ, ಮೀಸಲಾತಿ ಸಿಗದೇ ಇದ್ದರೆ ಅವರು ಸತ್ತೇಹೋದಾರು ಎಂದೆಲ್ಲಾ ಆಲಾಪಿಸುವ ರಾಜೇಂದ್ರ ಸಾಚಾರ್ ವರದಿ ಮಾತ್ರ ಇಷ್ಟವಾಗುತ್ತದೆ. ರಾಜೇಂದ್ರ ಪಚೌರಿ ವರದಿ ಮೂಲೆಗುಂಪಾಗುತ್ತದೆ.
“ಸ್ವಾತಂತ್ರ್ಯವೀರ”ನ ವ್ಯಕ್ತಿತ್ವ ಅನಾವರಣ..!!
– ಭೀಮಸೇನ್ ಪುರೋಹಿತ್
“ಭಗತ್ ಸಿಂಗ್, ರಾಜಗುರು,ಆಜಾದ್ ಮುಂತಾದ ಕ್ರಾಂತಿಕಾರಗಳ ಹೆಸರುಗಳನ್ನು ಕೇಳಿದಾಗಲೆಲ್ಲ ನಾವು ಆದರದಿಂದ ತಲೆಬಾಗುತ್ತೇವೆ.ಆದರೆ, ಇಂತಹ ನೂರಾರು ಕ್ರಾಂತಿಕಾರಗಳನ್ನ ನಿರ್ಮಿಸಿದ ‘ಸಾವರ್ಕರ’ರನ್ನು ಸ್ಮರಿಸುವಾಗ ಸಂಕೋಚಕ್ಕೆ ಒಳಗಾಗುವುದು ಬಹಳ ದೌರ್ಭಾಗ್ಯದ ಸಂಗತಿ. ವೀರ ಸಾವರ್ಕರರ ಬಗ್ಗೆ ಅನೇಕ ಭ್ರಮೆಗಳನ್ನು ಹಬ್ಬಿಸಿರುವುದೇ ಇದಕ್ಕೆ ಕಾರಣ..”
ಮಾಜಿ ಕೇಂದ್ರಮಂತ್ರಿ ಹಾಗು ಕಾಂಗ್ರೆಸ್ ನಾಯಕ ‘ವಸಂತ ಸಾಠೆ’ ಯವರ ಈ ಮಾತು ಯಾವಾಗಲೂ ನನ್ನನ್ನು ಕಾಡಿವೆ.. ಇಲ್ಲಸಲ್ಲದ, ಮಿಥ್ಯಾ ಆರೋಪಗಳನ್ನೇ ನಿಜವೆಂದು ನಂಬಿ, ಒಬ್ಬ ರಾಷ್ಟ್ರೀಯ ಪುರುಷನನ್ನು ಹಿಂಬದಿಗೆ ಸರಿಸಿ, ಅವರ ತೇಜೋವಧೆಯನ್ನೇ ನಿರಂತರವಾಗಿ ಮುಂದುವರೆಸಿಕೊಂಡು ಬಂದಿರುವುದು ನಿಜಕ್ಕೂ ಬೇಸರದ ಸಂಗತಿಯೇ..
ಕೇವಲ ಸಾವರ್ಕರರ ಮೇಲಿನ ವೃಥಾ ಅಭಿಮಾನದಿಂದ ಈ ಲೇಖನ ಹೊರಟಿಲ್ಲ.. ಬದಲಾಗಿ ಸಾವರ್ಕರರ ನಿಜಜೀವನದ ಮೇಲೆ ಬೆಳಕು ಚೆಲ್ಲುವ ಪ್ರಯತ್ನವಷ್ಟೇ..
ರಾಮಸೇತು: ಭಕ್ತಿ ಭಾವನೆಯ ಜೊತೆಗೆ ಜೀವನೋಪಾಯದ ಪ್ರಶ್ನೆಯೂ ಹೌದು
– ಅಜಿತ್ ಶೆಟ್ಟಿ,ಉಡುಪಿ
ರಾಮಾಯಣ ಮತ್ತು ಮಹಾಭಾರತ ಗ್ರಂಥಗಳು ಹಿಂದೂಗಳಿಗೆ ಧಾರ್ಮಿಕ ಪವಿತ್ರ ಗ್ರಂಥಗಳಾಗಿದ್ದು, ಈ ಎರಡೂ ಕೃತಿಗಳು ಇತಿಹಾಸದ ಕಥೆಗಳಾಗಿವೆ .ಅನಾದಿಕಾಲದಿಂದ ಮಹಾಪಂಡಿತರು, ತಿಳಿದವರು ಇವನ್ನು ಪಂಚಮವೇದವೆಂದು ಕೈ ಮುಗಿಯುತ್ತಾರೆ. ಸಾವಿರಾರು ವರ್ಷಗಳಿಂದ ಭಾರತೀಯರ ಜನಜೀವನದಲ್ಲಿ ಮಿಳಿತವಾಗಿರುವ ಈ ಪವಿತ್ರ ಗ್ರಂಥಗಳ ಯಥಾರ್ಥವೇನು ಎಂದು ಕೇಳಿದರೆ ಏನೂಂತ ಹೇಳಬೇಕು? ಆರ್ಯ-ದ್ರಾವಿಡರು ವೈರಿಗಳೆಂದು ಕಥೆ ಕಲ್ಪಿಸಿ, ರಾಮ ಯಾವ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದನೆಂದು ಸರ್ಟಿಫಿಕೇಟ್ ಕೊಡಿ,ಸಾಕ್ಷಧಾರ ಕೊಡಿ ಎನ್ನುವ ಮೂರ್ಖ ಕರುಣಾನಿಧಿಯಂಥವರಿಗೆ ಏನೆಂದು ಉತ್ತರಿಸಬೇಕು ?
ಮೊದಲು ಹಿಂದೂ ರಾಷ್ಟ್ರ ಅಖಂಡ ಭಾರತದ ಮೇಲೆ ಮಹಮದೀಯರ ಆಕ್ರಮಣವಾಯಿತು . ನಂತರ ವ್ಯವಹಾರಕ್ಕೆ ಬಂದ ಕ್ರೈಸ್ತ ಯುರೋಪಿಯನ್ನರ ಆಕ್ರಮಣ . ಮಹಮದೀಯರು ಹೆದರಿಸಿ ಬೆದರಿಸಿ,ಕೊಲೆ ಸುಲಿಗೆ ಮಾಡುತ್ತ ನಮ್ಮ ಸಂಪತ್ತು ಲೂಟಿ ಹೊಡೆದರು.ಮೋಸದಿಂದ, ವಿಶ್ವಾಸಘಾತುಕ ಕೆಲಸದಿಂದ,ಕುಟಿಲ ತಂತ್ರದಿಂದ ಹಿಂದೂ ದೊರೆಗಳನ್ನು ಸೋಲಿಸಿ,ಪ್ರಜೆಗಳನ್ನು ಹೆದರಿಸಿ,ಒಪ್ಪದವರ ಕೊಲೆ ಮಾಡಿ ಅವರ ಮತ ಪ್ರಚಾರ ಮಾಡಿ ಮತಾಂತರಿಸಿದರು.ಅಲ್ಲಾವುದ್ದೀನ್ ಖಿಲ್ಜಿ, ಔರಂಗಜೇಬ್,ತುಘಲಕ್ ಅವರಿಂದ ಟಿಪ್ಪುವಿನವರೆಗೆ ಎಲ್ಲರೂ ಭಾರತೀಯ ಸಂಸ್ಕೃತಿಯ ಮೇಲೆ ಆಕ್ರಮಣದ ಆಡಳಿತ ನಡೆಸಿದವರೇ. ಅದಕ್ಕೆ ಇರಬೇಕು ವಿಲ್ ದುರಂಟ್ STORY OF CIVILIZATION ಕೃತಿಯಲ್ಲಿ ಭಾರತದ ಮೇಲೆ ನಡೆದ ಇಸ್ಲಾಮಿನ ಆಕ್ರಮಣ ವಿಶ್ವದ ಇತಿಹಾಸದ ಅತ್ಯಂತ ರಕ್ತಸಿಕ್ತ ಅದ್ಯಾಯವೆಂದಿದ್ದು.ಯುರೋಪಿಯನ್ನರು ಭಾರತೀಯರ ಶಕ್ತಿ ಅಡಗಿರುವುದು ಭಾರತೀಯ ಸಂಸ್ಕೃತಿಯಲ್ಲಿ ಎಂದು ಮನಗಂಡು ಹಿಂಸಾ ಮಾರ್ಗವನ್ನು ಬದಿಗಿಟ್ಟು, ಹಿಂದೂ ನಂಬಿಕೆ , ಅಚಾರ ವಿಚಾರ ದೇವರನ್ನು ಪ್ರಶ್ನಿಸುತ್ತಾ,ಲೇವಡಿ ಮಾಡುತ್ತ,ಹಣದ ಆಮಿಷವೊಡ್ಡಿ ಮಿಷನರಿಗಳ ಮೂಲಕ ಉಪಾಯದಿಂದ ಮತಾಂತರದ ಕ್ರೈಸ್ತಿಕರಣಕ್ಕೆ ಮುಂದಾದರು.ಹಿಂದೂ ಧರ್ಮ ಪ್ರಸಾರಕ್ಕೆ ಇಲ್ಲಿತನಕ ಎಲ್ಲಿಯೂ ಹಿಂದೂಗಳು ಯುದ್ದ ಮಾಡಿಲ್ಲ,ಇನ್ನೊಂದು ಧರ್ಮವನ್ನು ನಿಂದಿಸಿಲ್ಲ ತೀರ ವಿಪರೀತವಾಗುತ್ತಿದೆ,ಸ್ವಾಭಿಮಾನಕ್ಕೆ ದಕ್ಕೆಯಾಗುತ್ತಿದೆ ಎಂದೆನಿಸಿದಾಗ ಅದಕ್ಕೆ ಉತ್ತರಿಸಿದ್ದಾರೆ.
‘ಸತ್ಯ ಹರಿಶ್ಚಂದ್ರ’ ನ ನೋಡಿದ ಮೋಹನ ದಾಸನೂ…‘ಕ್ರೈಂ ಡೈರಿ’ ನೋಡುವ ನಮ್ಮ ಮಕ್ಕಳೂ…
-ನಿತ್ಯಾನಂದ.ಎಸ್.ಬಿ
“………. ಅದೊಂದು ದಿನ ಸಂಚಾರಿ ಬೊಂಬೆ ಪ್ರದರ್ಶಕರು ನಮ್ಮ ಊರಿಗೆ ಬಂದರು. ಅವರು ನನಗೆ ತೋರಿಸಿದ ಒಂದು ಚಿತ್ರ, ಶ್ರವಣ ಕುಮಾರ. ಆ ಚಿತ್ರದಲ್ಲಿ ಶ್ರವಣ ತನ್ನ ಕುರುಡು ತಂದೆ ತಾಯಿಯರನ್ನು ಅಡ್ಡೆಯಲ್ಲಿ ಕೂರಿಸಿಕೊಂಡು, ಅದನ್ನು ಹೆಗಲಿನ ಮೇಲೆ ಹೊತ್ತುಕೊಂಡು ಯಾತ್ರೆಗಾಗಿ ಹೋಗುತ್ತಿದ್ದ. ಅಂದು ಆ ದೃಶ್ಯ ನನ್ನ ಅಂತರಂಗದಲ್ಲಿ ಶಾಶ್ವತವಾಗಿ ಅಂಕಿತವಾಯಿತು. ಇಗೋ ಇಲ್ಲಿ ನಿನಗೊಂದು ಆದರ್ಶವಿದೆ. ಅದನ್ನು ಅನುಕರಿಸು ಎಂದು ನನಗೆ ನಾನೇ ಹೇಳಿಕೊಂಡೆ. ಶ್ರವಣ ಮರಣ ಹೊಂದಲು ಅವನ ಮಾತಾಪಿತೃಗಳು ಮಾಡಿದ ಆರ್ತವಿಲಾಪ ನನ್ನ ಕಿವಿಗೆ ಈಗಲೂ ಕೇಳುವಂತಿದೆ. ಆ ದೃಶ್ಯ ನನ್ನ ಹೃದಯವನ್ನು ಕರಗಿಸಿತು. ಅದೇ ಸಮಯದಲ್ಲಿ ನಾನು ನೋಡಿದ ಇನ್ನೊಂದು ನಾಟಕವೆಂದರೆ ಸತ್ಯ ಹರಿಶ್ಚಂದ್ರ. ಅದು ನನ್ನ ಮನಸ್ಸನ್ನು ಸೂರೆಗೊಂಡಿತ್ತು. ಅದನ್ನು ಎಷ್ಟು ಸಲ ನೋಡಿದರೂ ನನಗೆ ತೃಪ್ತಿಯೇ ಆಗಲಿಲ್ಲ. ಆದರೆ ನಮ್ಮ ತಂದೆ ಎಷ್ಟು ಸಲ ನೋಡಲು ಅನುಮತಿ ಕೊಟ್ಟಾರು? ಅದರ ಹುಚ್ಚು ನನ್ನನ್ನು ಹಗಲೂ ರಾತ್ರಿ ಬಿಡಲೇ ಇಲ್ಲ. ಲೆಕ್ಕವಿಲ್ಲದಷ್ಟು ಸಲ ನಾನೇ ಹರಿಶ್ಚಂದ್ರನಾಗಿ ಆ ನಾಟಕವನ್ನು ಅಭಿನಯಿಸಿಕೊಂಡೆ. ಎಲ್ಲರೂ ಏಕೆ ಸತ್ಯಹರಿಶ್ಚಂದ್ರನಂತೆ ಸತ್ಯಸಂಧರಾಗಿರಬಾರದು? ಇದೇ ಹಗಲೂ ರಾತ್ರಿ ನನ್ನನ್ನು ನಾನೇ ಕೇಳಿಕೊಳ್ಳುತ್ತಿದ್ದ ಪ್ರಶ್ನೆ. ಸತ್ಯವನ್ನು ಅನುಸರಿಸಬೇಕೆಂದು ಹರಿಶ್ಚಂದ್ರ ಪಟ್ಟ ಕ್ಲೇಶಗಳನ್ನೆಲ್ಲಾ, ಆಪತ್ತುಗಳನ್ನೆಲ್ಲಾ ನಾನೂ ಪಡಬೇಕು. ಇದೊಂದೇ ನನ್ನ ಮನಸ್ಸಿನಲ್ಲಿ ಸ್ಪೂರ್ತಿ ತುಂಬಿದ ಆದರ್ಶ. ಹರಿಶ್ಚಂದ್ರನ ಕಥೆಯನ್ನು ನಾನು ಅಕ್ಷರಶಃ ನಂಬಿದೆನು. ನೆನಪು ಮಾಡಿಕೊಂಡು ಪದೇ ಪದೇ ಅಳುತ್ತಿದ್ದೆನು. ಹರಿಶ್ಚಂದ್ರ ಐತಿಹಾಸಿಕ ವ್ಯಕ್ತಿ ಆಗಿರಲಾರ ಎಂಬುದು ಇಂದು ನನ್ನ ಬುದ್ಧಿಗೆ ಗೋಚರಿಸುತ್ತಿದೆ. ಆದರೆ ನನ್ನ ಮಟ್ಟಿಗೆ ಹರಿಶ್ಚಂದ್ರ, ಶ್ರವಣ ಇಬ್ಬರೂ ಜೀವಂತ ವ್ಯಕ್ತಿಗಳು. ಆ ನಾಟಕಗಳನ್ನು ಓದಿದರೆ ಮತ್ತೆ ಮೊದಲಿನಂತೆ ನಾನು ಕಣ್ಣೀರು ಹಾಕದೇ ಇರಲಾರೆನೆಂಬುದು ನನ್ನ ನಂಬಿಕೆ……..”
ವೃದ್ಧಾಶ್ರಮ
– ಅಶೋಕ್ ಕುಮಾರ್ ವಳದೂರು (ಅಕುವ)
ಎಪ್ಪತ್ತರ ಹರೆಯದ ಮುದಿಕಂಗಳಲ್ಲಿ
ಇನ್ನೂ ಉಳಿದಿದೆ ದೃಷ್ಟಿಯೆಂಬ ಬೆಳಕು
ಆಶ್ರಮದ ಗೇಟು ಬಳಿ ನಿಂದು ದಾರಿ ಕಾಣಲು
ದೂರದೂರಿಂದ ಬರುವ ಮನೆಯ ಅತಿಥಿಗೆ !
ಮೆಲ್ಲಗೆ ಸುರಿದ ಕಣ್ಣೆವೆಯ ಹನಿಗಳು
ಮನದಾಳದ ಮಂಥನದ ಕಲಹವ
ಜತನದಿಂದ ಕಥೆಯಾಗಿ ಬಿತ್ತರಿಸಿದೆ !
ಪರಿವೆಯಿಲ್ಲದೆ ಕಳೆದ ಸಂತಸದ ಕ್ಷಣಗಳು
ಒಲವಿನಲ್ಲಿ ಹಾಡಿದ ನಂಟಿನ ಪದಗಳು
ಚಿಗುರೊಡೆದ ಲಲನೆಯ ಕೂಸುಗಳು
ತ್ಯಾಗ ಸಮರ್ಪಣೆಯ ಉದಯರಾಗಗಳು
ಸಾಲದುದಕ್ಕೆ ಸಾಲದ ಭಾರೀ ಹೊರೆಗಳು !




