ದಲಿತರನ್ನು ಇತರರಿಂದ ದೂರವಿಡಲು ನಡೆಸುತ್ತಿರುವ ಹುನ್ನಾರ ಇನ್ನೆಷ್ಟು ದಿನ ಮುಂದುವರೆಯುವುದು?
– ಶಿವಾನಂದ ಸೈದಾಪೂರ
ಪಿ.ಜಿ ಡಿಪ್ಲೊಮಾ ಇನ್ ಅಂಬೇಡ್ಕರ್ ಸ್ಟಡಿಸ್
ಆರ್. ಸಿ. ಯು ಬೆಳಗಾವಿ.
ಈಗಲೇ ಎರಡು ದಿನಗಳಲ್ಲಿ ನಡೆದ ಘಟನೆಗಳು; ನೂರಕ್ಕೆ ನೂರರಷ್ಟು ಮತದಾನದ ಜಾಗೃತಿಗಾಗಿ ಊರೂರುಗಳಿಗೆ ಸಂಪರ್ಕ ಮಾಡುತ್ತಿರುವ ಹೊತ್ತಲ್ಲಿ ಆದ ಸ್ವಂತ ಅನುಭವ. ದಲಿತರ ಓಣಿಗಳನ್ನು ಪ್ರವೇಶಿಸುವಾಗ ನಡೆದಂತದ್ದವುಗಳು.
ಘಟನೆ ೧ : ಓಣಿಯ ಪ್ರವೇಶಕ್ಕೂ ಮೊದಲು ಗಮನಿಸಿದಾಗ ಕಣ್ಣಿಗೆ ರಾಚುವಂಥದ್ದು; ಈ ಕೇರಿಯಲ್ಲಿ ಕಾಂಗ್ರೆಸ್ ಒಂದನ್ನು ಬಿಟ್ಟು ಬಿಜೆಪಿಯವರಿಗೆ ಪ್ರವೇಶವಿಲ್ಲ! ಈ ರೀತಿ ಫಲಕ ನೇತಾಡುತಿತ್ತು. ಇಂತಹ ವಾತಾವರಣ ಇನ್ನೂ ಯಾಕೆ ಹೀಗಿದೆ? ಚುನಾವಣೆ ಸಂದರ್ಭದಲ್ಲಿಯೇ ಯಾಕೆ ಹೀಗೆ? ಇದನ್ನು ಏನು ಅಂತ ತರ್ಕಿಸಬಹುದು? ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಯಾಕೆ ಈ ವಾತಾವರಣ? ಅಸ್ಪೃಶ್ಯತೆ ನಿವಾರಣೆಗಾಗಿ ಒಂದು ಕಡೆ ಹೋರಾಟಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಅವರನ್ನು ಸ್ವೃಶ್ಯ ಸಮಾಜ ವಾಸಿಯಾಗಲು ಬಿಡದೆ ನಡೆಸುತ್ತಿರುವ ರಾಜಕೀಯ ಷಡ್ಯಂತ್ರವೇ ಬಹಳಷ್ಟಿವೆ. ಮತ್ತಷ್ಟು ಓದು 
ಮುಧೋಳ ನಾಯಿಯ ಜೊತೆಯ ಹೋಲಿಕೆಗೆ ಇವರು ಅರ್ಹರೇ?
ಚುನಾವಣೆ ಸಮೀಪಿಸಿದಾಗಲೆಲ್ಲಾ ಕಾಂಗ್ರೆಸಿಗರು, “ನಮ್ಮ ಇತಿಹಾಸ ತೆರೆದ ಪುಸ್ತಕವಿದ್ದಂತೆ’,‘ದೇಶಕ್ಕೆ ಕಾಂಗ್ರೆಸಿನ ಕೊಡುಗೆಯೇನೆಂಬುದನ್ನು ಯಾರಿಗೂ ನಿರೂಪಿಸುವ ಆವಶ್ಯಕತೆಯಿಲ್ಲ’ಎಂದು ಆಲಾಪಿಸತೊಡಗುತ್ತಾರೆ. ಅವರ ತೆರೆದ ಪುಸ್ತಕದ ಕೆಲವೇ ಪುಟಗಳನ್ನು ನೋಡಿದರೆ ಅಲ್ಲಿ ವಿಚಿತ್ರಗಳೇ ಕಾಣಿಸುತ್ತವೆ. ಇದು ಅಂಥ ಒಂದು ಸ್ಯಾಂಪಲ್.ಲಾಲ್ ಬಹೂದ್ದೂರ್ ಶಾಸ್ತ್ರಿಗಳ ಬಾಯಿಂದ ಭಾರತ್ ಕೀ ಆಯೂಬ್ ಎಂದು ಬೆನ್ನು ತಟ್ಟಿಸಿಕೊಂಡ ಒರ್ವ ಯೋಧ ಕ್ಯಾ.ಆಯೂಬ್ ಖಾನ್. ವೀರ ಚಕ್ರ ಪುರಷ್ಕೃತ ಕ್ಯಾ.ಖಾನ್ಗೆ ಶಾಸ್ತ್ರಿ ಮೇಲೆ ಅದೆಷ್ಟು ಅಭಿಮಾನವಿತ್ತೆಂದರೆ ನಿವೃತ್ತಿಯ ನಂತರ ಅವರು ಕಾಂಗ್ರೆಸ್ಗೆ ಸೇರಿದರು. ಎರಡು ಬಾರಿ ರಾಜಾಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಿ ಸಂಸದರೂ ಆದರು. ಆದರೆ ಆಯೂಬ್ ಖಾನರಿಗೆ ಶಾಸ್ತ್ರಿಗಳ ನಿಧನಾನಂತರ ಯಾಕೋ ತನ್ನ ಆಯ್ಕೆ ತಪ್ಪಿದೆ ಎನಿಸತೊಡಗಿತು. ಇಂದಿರಾ ಸರ್ವಾಧಿಕಾರ ಮತ್ತು ರಾಜೀವ್ ಗಾಂಧಿ ಪಟಾಲಮ್ಮಿನ ಸೈನಿಕ ವಿರೋಧಿ ನೀತಿಗಳನ್ನು ಸಹಿಸುವಷ್ಟು ದಿನ ಸಹಿಸಿದರು. ಕೊನೆಗೆ ಶಾಸ್ತ್ರಿಗಳಿಗಾದ ಸ್ಥಿತಿ ನರಸಿಂಹರಾಯರಿಗೂ ಬಂದಾಗ ಹಿಂದೆ ಮುಂದೆ ನೋಡದೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ರಾಜಕೀಯ ಸಂನ್ಯಾಸ ಸ್ವೀಕರಿಸಿದರು. ಕೊನೆ ಕಾಲದಲ್ಲಿ ಆಯೂಬ್ ಖಾನರಿಗೆ ಕಾಂಗ್ರೆಸ್ ಸೇರಿದ್ದ ಬಗ್ಗೆ ಎಷ್ಟು ಪಾಪಪ್ರಜ್ಞೆ ಕಾಡುತ್ತಿತ್ತೆಂದರೆ ಆರೋಗ್ಯ ವಿಚಾರಿಸಲು ಬಂದ ವಾಜಪೇಯಿಯವರ ಪಾದಸ್ಪರ್ಶಕ್ಕೆ ಅನುಮತಿಯನ್ನೂ ಆ ಯೋಧ ಕೇಳಿದ್ದರು. ಏಕೆಂದರೆ ಒಬ್ಬ ದೇಶಭಕ್ತ ಯೋಧ ಮತ್ತು ಕಾಂಗ್ರೆಸಿಗ ಏಕಕಾಲಕ್ಕೆ ಆಗಲು ಸಾಧ್ಯವಿಲ್ಲ ಎಂಬ ಸತ್ಯ ಆಯೂಬ್ ಖಾನರಿಗೆ ತಮ್ಮ ಕೊನೆಕಾಲದಲ್ಲಿ ಅರ್ಥವಾಗಿತ್ತು.
ಹಿಟ್ಲರನ ಗೊಬೆಲ್ಸ್ ಮತ್ತು ನೆಹರೂವಿನ ಗಂಜಿಗಿರಾಕಿಗಳು
– ರಾಕೇಶ್ ಶೆಟ್ಟಿ
‘ಸುಳ್ಳನ್ನೇ ಪದೇ ಪದೇ ಜನರ ಕಿವಿಗೆ ಬೀಳುವಂತೆ ಬೊಬ್ಬೆ ಹೊಡೆಯುತ್ತಾ ಹೋದರೆ ಅದೇ ಸತ್ಯವಾಗುತ್ತ ಹೋಗುತ್ತದೆ’ ಹೀಗೊಂದು ಮಾತನ್ನು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಸರ್ಕಾರದಲ್ಲಿ Public Enlightenment & Propaganda ಸಚಿವನಾಗಿದ್ದ ಗೊಬೆಲ್ಸ್ ಹೇಳಿದ್ದನೆಂಬ ಮಾತಿದೆ.ಈ ಮಾತನ್ನು ಗೊಬೆಲ್ಸ್ ಹೇಳಿದ್ದನೋ ಇಲ್ಲವೋ,ಆದರೆ ಈ ಮಾತು ಪ್ರಾಕ್ಟಿಕಲಿ ಸತ್ಯವಂತೂ ಹೌದು.ಬೇಕಿದ್ದರೆ ಗೊಬೆಲ್ಸ್ ಹೇಳಿಕೊಟ್ಟ ಈ ಸೂತ್ರವನ್ನು ಬಳಸುತ್ತಿರುವ ಭಾರತದ ಗಂಜಿಗಿರಾಕಿಗಳನ್ನು ಈ ಬಗ್ಗೆ ಕೇಳಿ ನೋಡಿ. ಉದಾಹರಣೆಗೆ, ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ಸಮಾವೇಶವೊಂದರಲ್ಲಿ ನರೇಂದ್ರ ಮೋದಿಯವರು ಮಾತನಾಡುತ್ತ ‘ ಲೂಟಿಕೋರ-ಕಳ್ಳರು ವಿದೇಶದ ಬ್ಯಾಂಕುಗಳಲ್ಲಿ ಎಷ್ಟು ಪ್ರಮಾಣದ ಕಪ್ಪು ಹಣವಿಟ್ಟಿದ್ದಾರೆಂದರೆ,ಅದನ್ನು ವಾಪಸ್ ತಂದರೆ ಭಾರತದ ಪ್ರತಿ ಬಡವನಿಗೆ ೧೫ ಲಕ್ಷದಷ್ಟು ಹಣವನ್ನು ಉಚಿತವಾಗಿ ಕೊಡುವಷ್ಟಿದೆ’ ಎಂದಿದ್ದರು(ಈ ವಿಡಿಯೋ ಈಗಲೂ ಅಂತರ್ಜಾಲದಲ್ಲಿ ಲಭ್ಯವಿದೆ).ಇದೇ ಮಾತನ್ನು ಈಗ ಗಂಜಿಗಿರಾಕಿಗಳೆಂಬ ಗೊಬೆಲ್ಸ್ ಗಳು ‘ಮೋದಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ಅಕೌಂಟಿಗೆ ೧೫ ಲಕ್ಷ ಹಣ ಹಾಕ್ತಿನಿ ಅಂದಿದ್ರು.ಹಾಕಿಯೇ ಇಲ್ಲ’ ಎಂದು ಊರಿಡಿ ಬೊಬ್ಬೆ ಹೊಡೆಯಲು ಶುರುವಿಟ್ಟುಕೊಂಡರು. ಈಗ ಈ ಸುಳ್ಳು ಯಾವ ಪರಿ ಹರಡಿದೆಯೆಂದರೆ,ಮೋದಿಯನ್ನು ವಿರೋಧಿಸಲು ಕಾರಣವೇ ಸಿಗದವರು ಎಲ್ರಿ ನಮ್ಮ ೧೫ ಲಕ್ಷ ಎಂದು ಕೇಳುವಷ್ಟು. ವಿಚಿತ್ರವೆಂದರೆ,ಇದು ಗಂಜಿಗಿರಾಕಿಗಳ ಅಪಪ್ರಚಾರದ ಕ್ಯಾಮ್ಪೇನು ಎಂದು ಹೇಳಬೇಕಾದವರೇ ತಡಬಡಾಯಿಸುವಂತಾಗಿದೆ.ಇದೇ ನೋಡಿ GGG Lying Formula (ಗಂಜಿ ಗಿರಾಕಿ ಗೊಬೆಲ್ಸ್ ಸುಳ್ಳಿನ ಸೂತ್ರ)ದ ತಾಕತ್ತು.
ಭಾರತದ ಗಂಜಿಗಿರಾಕಿಗಳ ಗೊಬೆಲ್ಸ್ ಕಾರ್ಯಾಚರಣೆಯ ಬಗ್ಗೆ ಮಾತನಾಡುವ ಮುನ್ನ, ಜರ್ಮನಿಯ ಗೊಬೆಲ್ಸ್ ಪರಿಚಯ ಮಾಡಿಕೊಳ್ಳಬೇಕು,ಆಗ ಅವರಿಬ್ಬರ ಸಾಮ್ಯತೆ ಅರ್ಥವಾದೀತು. ಜರ್ಮನಿಯಲ್ಲಿ National Socialist German Workers’ (Nazi) Party ಹಿಟ್ಲರನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಾಗ, ಪ್ರಪೋಗ್ಯಾಂಡ ಸಚಿವನಾಗಿ ಬಂದವನು ಗೊಬೆಲ್ಸ್. ಹೈಡಲ್ ಬರ್ಗ್ ವಿವಿಯಿಂದ ಸಾಹಿತ್ಯದಲ್ಲಿ ಪಿಹೆಚ್ಡಿ ಪದವಿ ಪಡೆದಿದ್ದ ಚಾಣಾಕ್ಷ ಈತ. ಈತನಿಗೆ ಯಾವುದೇ ಸುಳ್ಳನ್ನು ಸತ್ಯವೆಂದು ಓದುಗರನ್ನು ಮರುಳು ಮಾಡುವ ಬರವಣಿಗೆ ಒಲಿದಿತ್ತು. ಇದರ ಜೊತೆಗೆ ಸಾಹಿತ್ಯ,ಸಿನಿಮಾ,ಕಲೆ ಇವನ ಆಸಕ್ತಿಕರ ಕ್ಷೇತ್ರಗಳು. ಇಷ್ಟೆಲ್ಲಾ ಆಸಕ್ತಿ ಮತ್ತು ಸಾಮರ್ಥ್ಯವಿದ್ದ ವ್ಯಕ್ತಿ ದೇಶದ ಸಾಂಸ್ಕೃತಿಕ ರಾಜಕಾರಣವನ್ನು ತನ್ನ ಕಪಿಮುಷ್ಟಿಯಲ್ಲಿಟ್ಟುಕೊಳ್ಳಲು ಸಮರ್ಥ ವ್ಯಕ್ತಿಯಾಗಿ ಹಿಟ್ಲರನಿಗೆ ಅನ್ನಿಸಿದ್ದು ಸಹಜವೇ. ಅಧಿಕಾರಕ್ಕೆ ಬಂದ ಗೊಬೆಲ್ಸ್ ಕೂಡ ಹಿಟ್ಲರ್ ಸುತ್ತ ನಕಲಿ ಪ್ರಭಾವಳಿಯನ್ನು ಸೃಷ್ಟಿಸುವಲ್ಲಿ ಸಫಲನಾಗಿದ್ದ, ಇವನಿಲ್ಲದಿದ್ದರೆ ಜರ್ಮನಿ ಮತ್ತೊಮ್ಮೆ ಗೌರವಯುತವಾಗಿ ತಲೆ ಎತ್ತಲಾರದು ಎಂದ, ಜನರು ನಂಬಿದರು.
ದಲಿತರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಹುನ್ನಾರ ಇನ್ನೆಷ್ಟು ದಿನ ಮುಂದುವರೆಯುವುದು?
– ಶಿವಾನಂದ ಸೈದಾಪೂರ
ಪಿ.ಜಿ ಡಿಪ್ಲೊಮಾ ಇನ್ ಅಂಬೇಡ್ಕರ್ ಸ್ಟಡಿಸ್
ಬೆಳಗಾವಿ.
ಈಗಲೇ ಎರಡು ದಿನಗಳಲ್ಲಿ ನಡೆದ ಘಟನೆಗಳು; ನೂರಕ್ಕೆ ನೂರರಷ್ಟು ಮತದಾನದ ಜಾಗೃತಿಗಾಗಿ ಊರೂರುಗಳಿಗೆ ಸಂಪರ್ಕ ಮಾಡುತ್ತಿರುವ ಹೊತ್ತಲ್ಲಿ ಆದ ಸ್ವಂತ ಅನುಭವ. ದಲಿತರ ಓಣಿಗಳನ್ನು ಪ್ರವೇಸಿಸುವಾಗ ನಡೆದಂತದ್ದವುಗಳು. ಘಟನೆ ಓಣಿಯ ಪ್ರವೇಶಕ್ಕೂ ಮೊದಲು ಗಮನಿಸಿದಾಗ ಕಣ್ಣಿಗೆ ರಾಚುವಂಥದ್ದು; ಈ ಕೇರಿಯಲ್ಲಿ ಕಾಂಗ್ರೆಸ್ ಒಂದನ್ನು ಬಿಟ್ಟು ಬಿಜೆಪಿಯವರಿಗೆ ಪ್ರವೇಶವಿಲ್ಲ! ಈ ರೀತಿ ಫಲಕ ನೇತಾಡುತಿತ್ತು. ಇಂತಹ ವಾತಾವರಣ ಇನ್ನೂ ಯಾಕೆ ಹೀಗಿದೆ? ಚುನಾವಣೆ ಸಂದರ್ಭದಲ್ಲಿಯೇ ಯಾಕೆ ಹೀಗೆ? ಇದನ್ನು ಏನು ಅಂತ ತರ್ಕಿಸಬಹುದು? ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಯಾಕೆ ಈ ವಾತಾವರಣ? ಅಸ್ಪೃಶ್ಯತೆ ನಿವಾರಣೆಗಾಗಿ ಒಂದು ಕಡೆ ಹೋರಾಟಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಅವರನ್ನು ಸ್ವೃಶ್ಯ ಸಮಾಜ ವಾಸಿಯಾಗಲು ಬಿಡದೆ ನಡೆಸುತ್ತಿರುವ ರಾಜಕೀಯ ಷಡ್ಯಂತ್ರವೇ ಬಹಳಷ್ಟಿವೆ.
ಘಟನೆ ಎರಡು; ರಾಯಬಾಗ ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದೇ ಹೆಸರಾದ ಹಿಡಕಲ್ ನಲ್ಲಿ ನಡೆದದ್ದು. ಇದೇ ಒಂದು ವಾರದಲ್ಲಿ ನಡೀದಿದೆ. ದಲಿತರ ಓಣಿಯಲ್ಲಿ ಮಹಿಳೆಯೊಬ್ಬಳು ಬೈಗುಳಗಳುಳ್ಳ ವಿಡಿಯೋವೊಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿರುವುದೇನು ಸಾಮಾನ್ಯ ಸಂಗತಿಯೇನಲ್ಲ. ಹಾಲಿ ಶಾಸಕ ಮತ್ತು ಈ ಸಲದ ಕುಡಚಿ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ರಾಜು ಅವರನ್ನು ಅತ್ಯಂತ ಕೀಳು ಮಟ್ಟಕ್ಕಿಳಿದು ಬಾಯಿಗೆ ಬಂದಂತೆ ನಿಂದಿಸುತ್ತಿರುವುದು. ಸ್ವತಃ ತಾನು ಒಬ್ಬ ಹೆಣ್ಣು ಅನ್ನೋದನ್ನು ಮರೆತು ಪಿ.ರಾಜು ಅವರ ತಾಯಿಯನ್ನು ಬೈಯುತ್ತಿರುವುದು. ಹೇಳುವುದಕ್ಕೆ ಸಾಧ್ಯವೇ ಇಲ್ಲದ ಕನಿಷ್ಠ ಮಟ್ಟದ ಶಬ್ದಗಳನ್ನು ಬಳಸಿ ಬೈಯುತ್ತಿರುವುದನ್ನು ನೋಡಿದರೆ ಎಂಥವರಿಗಾದರೂ ಮೈ ಬೆವರುತ್ತದೆ. ಆ ಕೀಳುಮಟ್ಟದ ಶಬ್ದಗಳನ್ನು ಕೇಳಿದರೆ ಯಾವ ಸ್ತ್ರೀ ಪುರುಷರು ಅಸಹ್ಯ ಪಡುವದರಲ್ಲಿ ಎರಡು ಮಾತಿಲ್ಲ. ಇಷ್ಟಕ್ಕೂ ಆ ವಿಡಿಯೋದಲ್ಲಿ ಮಹಿಳೆ ಮಾಡುತ್ತಿರುವುದಾದರೇನು ಗೊತ್ತೇ? ಈ ಸಲದ ಕುಡಚಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಅಮಿತ್ ಘಾಟಗೆ ಪರ ಪ್ರಚಾರ ಮಾಡುತ್ತಿದ್ದಾಳೆ. ಸ್ವತಃ ಅವಳೇ ಹೇಳುತ್ತಾಳೆ ದಲಿತಕೇರಿಗಳಲ್ಲಿ ಅಮಿತ್ ಘಾಟಗೆ ಮತ್ತು ಸಿದ್ದರಾಮಯ್ಯನವರನ್ನು ಬಿಟ್ಟರೆ ಬೇರೆ ಯಾರೂ ಬರಬಾರದಂತೆ! ಉಳಿದವರ್ಯಾರು ದಲಿತ ಕೇರಿಯ ಸಮೀಪ ಕೂಡ ಸುಳಿಬಾರದಂತೆ! ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಲ್ಲಿ ಐವತ್ತಕ್ಕೂ ಅಧಿಕ ವರ್ಷಗಳ ಕಾಲ ಈ ದೇಶವನ್ನು ಆಳಿದ್ದು ಕಾಂಗ್ರೆಸ್ ಸರ್ಕಾರವೇ. ಆದರೆ ಅಭಿವೃದ್ಧಿಗಿಂತ ಜನಸಾಮಾನ್ಯರಲ್ಲಿ ಯಾವ ರೀತಿ ಜಾತಿಯತೆಯನ್ನು ಬಿತ್ತಿ ಬೆಳೆಸಿದೆ ಎಂಬುವುದು ಇದರಿಂದಲೇ ಸ್ಪಷ್ಟವಾಗುತ್ತದೆ.
ಇರುವುದೆಲ್ಲವ ಬಿಟ್ಟು …
– ಗುರುರಾಜ ಕೊಡ್ಕಣಿ, ಯಲ್ಲಾಪುರ
ಯಶವಂತಪುರದ ಬಸ್ನಿಲ್ದಾಣಕ್ಕೆ ವೇಗವಾಗಿ ನುಗ್ಗಿದ ಬಸ್ಸಿನೊಳಗೆ ಅವಸರವಸರವಾಗಿ ತೂರಿಕೊಂಡ ಪ್ರಸನ್ನ. ಹಾಗೆ ಕ್ಷಣಮಾತ್ರದಲ್ಲಿ ತೂರಿಕೊಳ್ಳದಿದ್ದರೇ ಕುಳಿತುಕೊಳ್ಳಲು ಸೀಟು ಸಿಗುವುದಿಲ್ಲವೆನ್ನುವುದು ಬೆಂಗಳೂರಿನಲ್ಲಿನ ಅವನ ಐದು ವರ್ಷಗಳ ಒಡನಾಟದಲ್ಲಿ ಕಂಡುಕೊಂಡ ಸತ್ಯ. ಬಸ್ಸಿನ ಮುಂದಿನ ಬಾಗಿಲಲ್ಲಿ ನಿಂತು ’ಮೆಜೆಸ್ಟಿಕ್, ಮೆಜೆಸ್ಟಿಕ್,ಮೆಜೆಸ್ಟಿಕ್’ ಎಂದು ನಿರ್ವಾಹಕ ಕೂಗುವಷ್ಟರಲ್ಲಿ ಬಸ್ಸು ಸಂಪೂರ್ಣವಾಗಿ ತುಂಬಿ ಹೋಗಿ ಸ್ವತ: ನಿರ್ವಾಹಕನಿಗೆ ಬಸ್ಸಿನೊಳಕ್ಕೆ ಓಡಾಡುವುದು ಕಷ್ಟವಾದಂತಾಯಿತು. ’ಮುಂದಕ್ಕೆ ಹೋಗ್ರಿ , ಇಲ್ಲೇ ಡೋರ್ನಲ್ಲಿ ನಿಲ್ಬೇಡಿ’ ಎಂದು ಜನರನ್ನು ಗದರುತ್ತ, ’ಪಾಸಿನೋರು, ಪಾಸು, ಟಿಕೆಟಿನವರು ಕಾಸು ಕೈಯಲ್ಲಿ ಹಿಡ್ಕೊಳ್ಳಿ’ ಎಂದು ಪ್ರಾಸಬದ್ಧವಾಗಿ ಧ್ವನಿಯೇರಿಸಿದ ಕಂಡಕ್ಟರ್ ತುಂಬಿಹೋಗಿದ್ದ ಬಸ್ಸಿನೊಳಕ್ಕೆ ಕಷ್ಟಪಟ್ಟು ನಡೆಯಲಾರಂಭಿಸಿದ. ಮಹಿಳೆಯರ ಸೀಟಿನಲ್ಲಿ ಕುಳಿತಿದ್ದ ಗಂಡಸರನ್ನು ಬಯ್ಯುತ್ತ ಎಬ್ಬಿಸುತ್ತಿದ್ದ ಮಹಿಳೆಯರು, ಸ್ಕೂಲ್ ಬ್ಯಾಗನ್ನು ಬೆನ್ನಿನಿಂದಿಳಿಸಿ ’ಅಂಕಲ್ ಸ್ವಲ್ಪ ಬ್ಯಾಗ್ ಹಿಡ್ಕೊಳ್ಳಿ’ ಎನ್ನುತ್ತ, ಕುಳಿತವರ ಉತ್ತರಕ್ಕೂ ಕಾಯದೇ ಅವರ ತೊಡೆಯ ಮೇಲೆ ತಮ್ಮ ಚೀಲಗಳನ್ನಿಡುತ್ತ ತಮ್ಮ ಹೋಂ ವರ್ಕಿನ ಬಗ್ಗೆ ಜೋರಾದ ಧ್ವನಿಯಲ್ಲಿ ಚರ್ಚಿಸುತ್ತಿದ್ದ ಮಕ್ಕಳು, ’ಇನ್ನೇನು ಹತ್ತು ನಿಮಿಷದಲ್ಲಿ ಮೆಜೆಸ್ಟಿಕ್ಕಿಗೆ ಬಂದುಬಿಡ್ತೇನೆ ಕಣೊ, ಇಲ್ಲಿ ಫುಲ್ ಟ್ರಾಫಿಕ್ ಜಾಮ್’ ಎಂದು ಎಲ್ಲರೆದುರೇ ರಾಜಾರೋಷವಾಗಿ ಫೋನಿನಲ್ಲಿ ಸುಳ್ಳು ಹೇಳುತ್ತಿದ್ದ ಕಾಲೇಜು ಯುವಕರ ಗಲಾಟೆಯ ನಡುವೆಯೇ ಬಸ್ಸು ನಿಧಾನವಾಗಿ ಚಲಿಸಲಾರಂಭಿಸಿತ್ತು. ಬಸ್ಸು ಶುರುವಾಗುತ್ತಲೇ ಸಣ್ಣಗೆ ಬೀಸಿದ್ದ ಗಾಳಿ, ಕಿಟಕಿಯ ಪಕ್ಕಕ್ಕೆ ಕುಳಿತಿದ್ದ ಪ್ರಸನ್ನನಿಗೆ ಕೊಂಚ ನೆಮ್ಮದಿಯನ್ನು ಕೊಟ್ಟಿತ್ತು. ಬೆಳಿಗ್ಗೆ ಆರುಗಂಟೆಗೆಲ್ಲ ಎದ್ದು, ಸ್ನಾನ ಮಾಡಿ, ತಿಂಡಿ ತಿಂದು ಬಸ್ಸು ಹತ್ತುವಷ್ಟರಲ್ಲಿ ಮೈಯೆಲ್ಲ ಬೆವತು ಹೋಗುವುದು ಪ್ರಸನ್ನನಿಗೆ ದಿನನಿತ್ಯದ ರೂಢಿ. ಬಹುಶಃ ಕೆಲಸಕ್ಕಾಗಿ ಸಿಟಿಬಸ್ಸುಗಳನ್ನು ಅವಲಂಬಿಸುವ ಪ್ರತಿಯೊಬ್ಬ ಬೆಂಗಳೂರಿಗನಿಗೂ ಅದು ಅಭ್ಯಾಸವಾಗಿ ಹೋಗಿರುತ್ತದೆ. ಹಾಗಾಗಿ ಬಸ್ಸಿನ ಕಿಟಕಿಯಿಂದ ಹಾದು ಬರುವ ಗಾಳಿ ತಂಪಾಗಿರದಿದ್ದರೂ ಮೈತುಂಬ ಆವರಿಸಿಕೊಂಡ ಬೆವರಿನ ಪರಿಣಾಮವಾಗಿ ಮೈಯೆಲ್ಲ ತಂಪಾದ ಅನುಭವ. ಕ್ಷಣಕಾಲ ಹಾಯೆನಿಸಿ ತಲೆಯನ್ನು ಸಿಟಿಗೊರಗಿಸಿ ಕಣ್ಣು ಮುಚ್ಚಿದ ಪ್ರಸನ್ನ. ಮುಚ್ಚಿದ ಕಣ್ಣುಗಳ ಹಿಂದೆ ಹತ್ತು ಹಲವು ಆಲೋಚನೆಗಳು. ಯಶವಂತಪುರದಿಂದ ಮೆಜೆಸ್ಟಿಕ್ಕಿನ ಬಸ್ ನಿಲ್ದಾಣಕ್ಕೆ ತೆರಳಲು ಕನಿಷ್ಟ ಅರ್ಧ ತಾಸು ಬೇಕು. ವಾಹನದಟ್ಟಣೆ ಜಾಸ್ತಿಯಿದ್ದರಂತೂ ಇನ್ನೂ ಹೆಚ್ಚೇ ಸಮಯ ಬೇಕಾಗಬಹುದು. ಅಲ್ಲಿಳಿದು ಮತ್ತೊಂದು ಬಸ್ಸು ಹಿಡಿದು ಬನ್ನೆರುಘಟ್ಟ ರಸ್ತೆಯಲ್ಲಿರುವ ತನ್ನ ಕಚೇರಿಗೆ ತೆರಳುವಷ್ಟರಲ್ಲಿ ಇನ್ನೊಂದು ಗಂಟೆಯ ಪ್ರಯಾಣ. ಬೆಳಿಗ್ಗೆ ಎರಡು ಗಂಟೆಗಳ ಪ್ರಯಾಣವಾದರೆ ಸಾಯಂಕಾಲದ ವಾಹನದಟ್ಟಣೆಯಿಂದಾಗಿ ಸಂಜೆ ಅದೇ ಮಾರ್ಗದಲ್ಲಿ ಮರಳಿ ಬರಲು ಕನಿಷ್ಟ ಮೂರು ಗಂಟೆಗಳ ಕಾಲಾವಕಾಶವಂತೂ ಬೇಕು. ಕಚೇರಿಯ ಒಂಭತ್ತು ಗಂಟೆಗಳ ಕಾರ್ಯಾವಧಿಯನ್ನು ಸೇರಿಸಿಕೊಂಡರೆ ಪ್ರತಿದಿನ ಹದಿನಾಲ್ಕು ಗಂಟೆಗಳಷ್ಟು ಕಾಲದ ತನ್ನ ಬದುಕು ಬೀದಿಯಲ್ಲಿಯೇ ಮುಗಿದುಹೋಗಿರುತ್ತದೆ ಎಂದುಕೊಂಡ ಪ್ರಸನ್ನ. ಈ ಗಡಿಬಿಡಿಯ ಬದುಕಿಗಾಗಿ ಬೆಂಗಳೂರಿಗೆ ಬರಬೇಕಿತ್ತೇ ತಾನು ಎಂದೆನ್ನಿಸಿತು ಅವನಿಗೆ. ಬೆಳಿಗ್ಗೆ ಏಳು ಗಂಟೆಗೆ ಮನೆ ಬಿಟ್ಟರೇ ಪುನಃ ಮನೆ ಸೇರಿಕೊಳ್ಳುವುದು ರಾತ್ರಿಯ ಒಂಭತ್ತು ಗಂಟೆಗೆ. ಆಫೀಸಿನ ಕೆಲಸದಿಂದ ಸುಸ್ತಾಗಿ ಹೋದ ದೇಹಕ್ಕೆ ರಾತ್ರಿ ಊಟ ಮುಗಿಯುವಷ್ಟರಲ್ಲಿ ನಿದ್ರೆಯ ಸೆಳೆತ. ಬೆಳಗೆದ್ದರೆ ಮತ್ತದೇ ಅಡಾವುಡಿಯ ಓಟ. ಕೊಂಚ ಸಮಾಧಾನ ಸಿಗುವುದು ವಾರಾಂತ್ಯದಲ್ಲಿ ಎನ್ನಿಸಿದರೂ, ಕೋಣೆಯ ಸ್ವಚ್ಛತೆ, ಬಟ್ಟೆ ಒಗೆತದಂತಹ ಕೆಲಸ ಮುಗಿಸುವಷ್ಟರಲ್ಲಿ ವಾರಾಂತ್ಯವೂ ಮುಗಿದುಹೋಗಿರುತ್ತದೆ. ಅದೆಷ್ಟೋ ಸಲ ವಾರಾಂತ್ಯಕ್ಕೂ ರಜೆಯಿಲ್ಲದೇ ಕೆಲಸ ಮಾಡಿದ್ದಿದೆ. ಇಂಥಹ ಅವಸರದ ಜೀವನಕ್ಕೆ ದುಡಿಮೆಯಾದರೂ ಜಾಸ್ತಿಯಿದೆಯಾ ಎಂದುಕೊಂಡರೆ ತನ್ನ ಕೈಗೆ ಸಿಗುವ ಸಂಬಳವೂ ಇಪ್ಪತ್ತೈದು ಸಾವಿರ ಮಾತ್ರ. ದುಬಾರಿ ಮನೆಯ ಬಾಡಿಗೆ, ಕರೆಂಟು, ನೀರಿನ ಬಿಲ್ಲುಗಳ ಪಾವತಿಯ ನಂತರ ಕೈಯಲ್ಲುಳಿಯುವ ದುಡ್ಡಾದರೂ ಎಷ್ಟು ಎಂಬ ಪ್ರಶ್ನೆ ಅವನ ಮನದಲ್ಲಿ ಮೂಡಿ ಅವನಿಗರಿವಿಲ್ಲದಂತೆ ಮುಖದಲ್ಲೊಂದು ಪೆಚ್ಚುನಗೆ ಅರಳಿತ್ತು. ಹಾಳಾದ್ದು ತನ್ನ ಕಚೇರಿಯಲ್ಲಿ ಕಂಪನಿ ಬಸ್ಸಿನ ಸವಲತ್ತು ಸಹ ಇಲ್ಲ. ಹಾಗಾಗಿ ತನ್ನ ಖರ್ಚಿಗೆ ಬಸ್ ಪಾಸಿನ ಎರಡು ಸಾವಿರಗಳ ಹೆಚ್ಚುವರಿ ಹೊರೆ ತಪ್ಪಿದ್ದಲ್ಲ ಎಂದುಕೊಳ್ಳುವಷ್ಟರಲ್ಲಿ ಬಸ್ಸು ಮೆಜೆಸ್ಟಿಕ್ ನಿಲ್ದಾಣವನ್ನು ತಲುಪಿತ್ತು. ನಿಲ್ದಾಣದಲ್ಲಿ ಇಳಿಯುವ ಜನರ ನಡುವೆಯೇ ಹತ್ತಿಕೊಳ್ಳುವ ಆತುರದಲ್ಲಿದ್ದ ಜನರನ್ನು ತಳ್ಳುತ್ತ ಕೆಳಗಿಳಿದ ಪ್ರಸನ್ನ ತನ್ನ ಕಚೇರಿಯತ್ತ ತೆರಳುವ ಬಸ್ಸುಗಳು ನಿಲ್ಲುವ ಪ್ಲಾಟಫಾರ್ಮಿನತ್ತ ನಡೆದ. ಮತ್ತಷ್ಟು ಓದು 
‘ಕೈ’ ಪಕ್ಷಕ್ಕೆ ಈ ಸಲ ಜನತೆ ‘ಕೈ’ ಕೊಡಬೇಕಿದೆ !
– ಅಭಿಷೇಕ್ ಬಿ ಎಸ್
‘ಕರ್ನಾಟಕ ನಂಬರ್ 1 ರಾಜ್ಯ’ – ಮೇಲಿಂದಲೋ ಕೆಳಗಿಂದಲೋ ?
ಕರ್ನಾಟಕ ಮತ್ತೊಮ್ಮೆ ಚುನಾವಣೆಯ ಕಡೆ ಮುಖ ಮಾಡಿ ನಿಂತಿದೆ. ಒಂದು ಸರ್ಕಾರದ ಅಧಿಕಾರಾವಧಿ ಮುಗಿತಾ ಬರ್ತಾ ಇದೆ. ಹೊಸ ಸರ್ಕಾರವನ್ನ ನಿರ್ಧಾರ ಮಾಡುವ ಅಧಿಕಾರ ನೇರವಾಗಿ ಜನರ ಬಳಿಗೆ shift ಆಗತ್ತೆ. ಕಳೆದ ಮೂರು ಚುನಾವಣೆಗಳಲ್ಲಿ ಕರ್ನಾಟಕ ಮೂರೂ ಪಕ್ಷಗಳ ಅಧಿಕಾರವನ್ನ ನೋಡಾಗಿದೆ. ಹಾಗಿದ್ರೆ, ಈ ಸಲವೂ ಅದೇ ಮೂರು ಪಕ್ಷಗಳು, ಮತ್ತು ಅದೇ ಮೂರು ಪಕ್ಷಗಳ ನಾಯಕರು ಇದ್ದಾರಲ್ಲ, ಯಾರಿಗೆ ವೋಟ್ ಮಾಡಬೇಕು ಅನ್ನೋದನ್ನ ಕರ್ನಾಟಕದ ಸಾಮಾನ್ಯ ಮತದಾರ ಲೆಕ್ಕ ಹಾಕ್ತಾ ಇರ್ತಾನೆ.
ಯಶಸ್ವಿ ಐದು ವರ್ಷಗಳನ್ನ ಮುಗಿಸಿದ ಶ್ರೀಯುತ ಸಿದ್ದರಾಮಯ್ಯನವರ ಸರ್ಕಾರ ಜನರ ಆಶೋತ್ತರಗಳಿಗೆ ತಕ್ಕನಾಗಿ ಕೆಲಸ ಮಾಡಿದ್ಯಾ ? ನಾಡಿನ ಜನತೆ ಬಯಸಿದ್ದ ಆಡಳಿತದ ಗುರಿಯನ್ನ ತಲುಪಲಿಕ್ಕೆ ಸಾಧ್ಯ ಆಗಿದ್ಯಾ ? ಇದು ವಿಮರ್ಶೆಯ ಸಮಯ. ಮತ್ತಷ್ಟು ಓದು 
ಜಮ್ಮುವಿನ ಹಿಂದೂಗಳ ಮೇಲೆ ಕಣ್ಣಿಟ್ಟಿರುವ ಮಾಫಿಯಾಗಳು ಯಾವುವು?
– ರಾಕೇಶ್ ಶೆಟ್ಟಿ
೬ ವರ್ಷಗಳ ಹಿಂದೆ ದೆಹಲಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣವೊಂದು ಇಡೀ ದೇಶದ ಅಂತಃಕರಣವನ್ನೇ ಕಲುಕಿಹಾಕಿತ್ತು.ಸಾರ್ವಜನಿಕರು, ಭಿನ್ನ ಭಿನ್ನ ನಿಲುವುಳ್ಳ ಸಂಘಟನೆಗಳೆಲ್ಲ ಅಪರೂಪದ ಒಗ್ಗಟ್ಟು ಪ್ರದರ್ಶಿಸಿದ್ದ ಕೇಸು ಅದು.ದೆಹಲಿಯ ವಿದ್ಯಾರ್ಥಿಗಳು,ಸಾರ್ವಜನಿಕರು ನೋಡು ನೋಡುತ್ತಿದಂತೆಯೇ ರಾಷ್ಟ್ರಪತಿಭವನದ ರಸ್ತೆಗೆ ಮುತ್ತಿಗೆ ಹಾಕಿಬಿಟ್ಟಿದ್ದರು. ಹಾಗೆ ರಾಷ್ಟ್ರಪತಿ ಭವನದ ಮುಂದೆ ನಿಂತು ನ್ಯಾಯ ಕೇಳಿದ ಯುವಕ-ಯುವತಿಯರ ಮೇಲೆಯೇ ಲಾಠಿ ಚಾರ್ಜ್,ಜಲಫಿರಂಗಿ,ಅಶ್ರು ವಾಯು ಪ್ರಯೋಗವನ್ನು ಆಗಿನ ಯುಪಿಎ ಸರ್ಕಾರ ನಡೆಸಿ ಉರಿಯುವ ಬೆಂಕಿಗೆ ತುಪ್ಪ ಸುರಿದಿತ್ತು.ದೆಹಲಿಯಲ್ಲಿ ಹೊತ್ತಿಕೊಂಡ ಕಿಡಿ ದೇಶದ ಮೂಲೆಯಲ್ಲೂ ಪ್ರತಿಧ್ವನಿಸಿತ್ತು.ಮೊದಲು ಮೊದಲು ಮೊಂಡತನ ತೋರಿದ್ದ ದೆಹಲಿಯ ಶೀಲಾ ದೀಕ್ಷಿತ್ ಸರ್ಕಾರ ಆ ನಂತರ ತಲೆಬಾಗಿ,ಅತ್ಯಾಚಾರ ಪ್ರಕರಣಗಳ ಕುರಿತ ಕಾನೂನುಗಳ ಸುಧಾರಣೆಗೆ ನ್ಯಾ.ವರ್ಮಾ ಅವರ ನೇತೃತ್ವದ ಸಮಿತಿಯನ್ನು ನೇಮಿಸಿತ್ತು,ಅಂತಿಮವಾಗಿ Criminal Amendment Bill, 2013 ಹೊರಬಂದಿತ್ತು.
ಆ ಭೀಕರ ಅತ್ಯಾಚಾರ ಪ್ರಕರಣದ ಮುಖ್ಯ ಆರೋಪಿಗಳೆಲ್ಲ ಆತ್ಮಹತ್ಯೆ ಮಾಡಿಕೊಂಡು ತೊಲಗಿದ್ದಾರಾದರೂ,ಅತ್ಯಾಚಾರಿಗಳ ಅತಿಕ್ರೂರಿ ಎನಿಸಿಕೊಂಡಿದ್ದವ ಮಾತ್ರ ‘ಅಪ್ರಾಪ್ತ’ ಎಂಬ ಸ್ಲೇಟು ಹಿಡಿದು ಇಂದಿಗೂ ಎಲ್ಲೋ ಬದುಕಿಕೊಂಡಿದ್ದಾನೆ. ಜೈಲಿನಿಂದ ಬಿಡುಗಡೆಯಾಗಿ ಬಂದವನಿಗೆ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಸರ್ಕಾರವೇ ಜೀವನಕ್ಕೆ ವ್ಯವಸ್ಥೆ ಮಾಡಿಕೊಟ್ಟಿತ್ತು. ಇಡೀ ದೇಶದಲ್ಲಿ ಕಿಚ್ಚು ಹಚ್ಚಿಹೋದ ಆ ಹೆಣ್ಣುಮಗಳ ನಿಜವಾದ ಹೆಸರು ಬಿಬಿಸಿ ಸುದ್ದಿ ಸಂಸ್ಥೆ ಹೇಳುವ ತನಕ ಜನಸಾಮಾನ್ಯರಿಗೆ ಗೊತ್ತಿರಲಿಲ್ಲ. ದೇಶ ಆ ಹೆಣ್ಣುಮಗಳಿಗೆ ‘ನಿರ್ಭಯ’ ಎಂಬ ಹೆಸರಿಟ್ಟಿತ್ತು. ಈ ದೇಶದ ಎಷ್ಟೋ ತಾಯಂದಿರು ಆಕೆಗಾದ ಅನ್ಯಾಯ ತಮ್ಮದೇ ಕುಟುಂಬದವರ ಮೇಲಾದ ಅನ್ಯಾಯವೆಂಬಂತೆ ಮರುಗಿದರು,ಬೀದಿಗಿಳಿದರು.ಹಾಗೆ ಬೀದಿಗಿಳಿದವರಿಗೆ ನಿರ್ಭಯಳ ಜಾತಿ ಯಾವುದು,ರಿಲಿಜನ್ ಯಾವುದು? ಆಕೆಯ ಹಿಂದುವೋ?ಮುಸ್ಲಿಮೋ?ಕ್ರಿಶ್ಚಿಯನ್ನೋ?ಇದ್ಯಾವುದರೋ ಪರಿವೆಯೂ ಇರಲಿಲ್ಲ. ಮುಖ್ಯವಾಗಿ ಅದರ ಅವಶ್ಯಕತೆಯೂ ಇರಲಿಲ್ಲ. ಇಡೀ ದೇಶ ಆ ಹೆಣ್ಣುಮಗಳ ನೋವಿಗೆ ಜೊತೆಯಾಗಿ ನಿಂತಿದ್ದು ಆಕೆಯ ಮೇಲಾದ ದೌರ್ಜ್ಯನ್ಯಕ್ಕಾಗಿ,ಆಕೆಯ ಪ್ರಾಣ ತೆಗೆದ ರಾಕ್ಷಸರಿಗೆ ಶಿಕ್ಷೆಯಾಗಲೇ ಬೇಕೆಂಬ ಏಕೈಕ ಕಾರಣಕ್ಕಾಗಿ!
ಆಡುವ ಮಾತು….!!
– ಗೀತಾ ಜಿ.ಹೆಗಡೆ
ಕಲ್ಮನೆ
ಕೆಲವೊಮ್ಮೆ ಮನುಷ್ಯರ ಮಾತು, ನಡವಳಿಕೆ ಎಷ್ಟೊಂದು ಇರುಸು ಮುರುಸು ತರಿಸುತ್ತದೆ. ಕೆಲವರು ಆಡುವ ಮಾತುಗಳು ಅದೆಷ್ಟು ಕಿರಿ ಕಿರಿ ಬೇಸರ ತರಿಸುವುದೆಂದರೆ ಕೇಳೋದಕ್ಕೇ ಆಗೋದಿಲ್ಲ. ಏನಾದರೂ ತಿರುಗಿ ಹೇಳೋದಕ್ಕೂ ಸ್ವಲ್ಪ ಕಷ್ಟ. ಅದರಲ್ಲೂ ಕೆಲವು ಹತ್ತಿರದ ಸಂಬಂಧಿಕರಾದರಂತೂ ಮುಗಿದೇ ಹೋಯಿತು. ಅವರ ವಾಕ್ ಚಾತುರ್ಯ ಸದಾ ಕಿವಿಗೆ ಬೀಳುತ್ತಲೇ ಇರುತ್ತದೆ. ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಈ ರೀತಿಯ ಮಾತುಗಳು ಅವರಿಗೆ ಅದೇನೋ ಅಚ್ಚು ಮೆಚ್ಚು. ತಾನೇನೊ ಗಹನವಾಗಿ ಮಾತನಾಡುವವರೆಂಬ ಹುಸಿ ಭ್ರಮೆ ಮನೆ ಮಾಡಿರಬಹುದೇನೊ? ಏಕೆಂದರೆ ಕೇಳಿಸಿಕೊಳ್ಳುವ ಎದುರಾಳಿಯ ಕಡೆ ಕಿಂಚಿತ್ತೂ ಗಮನವಿಲ್ಲದೆ ತಮ್ಮದೇ ಮಾತಿನ ದಾಟಿ ಮುಂದುವರಿಸಿಕೊಂಡು ಹೋಗುತ್ತಿರುತ್ತಾರೆ. ಇದು ಅವರ ಹುಟ್ಟು ಗುಣವಾದರೂ ಇದು ಎಷ್ಟು ಸರಿ? ವಯಸ್ಸಾಗುತ್ತ ಮನುಷ್ಯನಿಗೆ ತಿಳಿವಳಿಕೆ ಬಂದಂತೆ ನಮ್ಮ ಮಾತು ನಡೆಯಲ್ಲಿ ತಿದ್ದುಪಡಿ ಮಾಡಿಕೊಳ್ಳಬೇಕೆಂಬ ಪರಿಜ್ಞಾನವೂ ಇದ್ದಂತೆ ಕಾಣುವುದಿಲ್ಲ. ಆನೆ ನಡೆದಿದ್ದೇ ದಾರಿ ಅನ್ನುವಂತೆ ಅವರ ಮಾತು ಮುಂದುವರಿದಿರುತ್ತದೆ. ಮತ್ತಷ್ಟು ಓದು 
ಬುದ್ಧಿಜೀವಿಗಳ ಐಡಿಯಾಲಜಿ ಹಾಗೂ ಭಾರತೀಯ ಸಾಧಕರ ಸಹಜತರ್ಕ
– ವಿನಾಯಕ ಹಂಪಿಹೊಳಿ
“ಕಡಲೆಯು ಬಡವರ ಗೋಡಂಬಿ” ಎಂಬ ಮಾತನ್ನು ನಾವೆಲ್ಲರೂ ಕೇಳಿರುತ್ತೇವೆ. ಇದರ ಅರ್ಥವೇನು ಎಂಬುದು ಏನೂ ಕಲಿಯದ ಮನುಷ್ಯನಿಗೂ ಬೇಗನೇ ಅರ್ಥವಾಗುತ್ತದೆ. ಈ ಮಾತನ್ನು ನಮ್ಮ ಅಜ್ಜನಿಗೋ, ಅಜ್ಜಿಗೋ ಹೇಳಿ, ಇದರ ಅರ್ಥವೇನು ಎಂದು ಕೇಳಿದರೆ ಅವರು ಏನು ಹೇಳಬಹುದು? “ಗೋಡಂಬಿಯಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನವಿದೆಯೋ, ಆ ಪ್ರಯೋಜನವನ್ನು ಕಡಲೆಯಿಂದಲೂ ಪಡೆಯಬಹುದು; ಅದೂ ಕೂಡ ಕಡಿಮೆ ಖರ್ಚಿನಲ್ಲಿ.” ಎಂಬ ವಿವರಣೆ ಅವರಿಂದ ಬರಬಹುದು.
ಈಗ ನಾವು ನಮ್ಮ ಹಿರಿಯರ ಬಳಿ, “ಈ ಮಾತಿನಲ್ಲಿ ಬಹಳ ಗಹನ ಅರ್ಥವಿದೆ, ಇದು ಗೋಡಂಬಿಯ ಶ್ರೇಷ್ಠತೆಯನ್ನು ಧಿಕ್ಕರಿಸಿ, ಆಹಾರಗಳೆಲ್ಲವೂ ಸಮಾನ ಎಂಬುದನ್ನು ಸಾರುವ ಅರ್ಥವು ಇದರಲ್ಲಿ ಅಡಗಿದೆ” ಎಂದರೆ ಅವರಿಗೇನು ಅರ್ಥವಾಗಲು ಸಾಧ್ಯ? “ಏನೋಪ್ಪಾ! ಅಷ್ಟೆಲ್ಲ ಗೊತ್ತಿಲ್ಲ” ಎಂದು ನುಣುಚಿಕೊಳ್ಳುತ್ತಾರೆ. ಆಗ ನಮಗೆ “ನಮ್ಮ ಪೂರ್ವಜರಲ್ಲಿ ತಾರ್ಕಿಕ ಸಾಮರ್ಥ್ಯವೇ ಇರಲಿಲ್ಲ. ತರ್ಕಮಾಡಿ ವಿಚಾರಿಸುವ ಬುದ್ಧಿಯೇ ಇಲ್ಲದೇ ಮೌಢ್ಯದಲ್ಲಿ ಇದ್ದರು. ತರ್ಕಬದ್ಧವಾಗಿ ಯೋಚಿಸುವದನ್ನು ನಾವು ರೂಢಿಸಿಕೊಂಡು ಮೌಢ್ಯದಿಂದ ಹೊರಬರಬೇಕು.” ಎಂದೆಲ್ಲ ಭಾವಿಸುತ್ತೇವೆ. ಮತ್ತಷ್ಟು ಓದು 
ಹಿಂದೂಧರ್ಮದಿಂದ ಹೊರಹೋಗುವುದು ಎಂದರೇನು?
– ರಾಕೇಶ್ ಶೆಟ್ಟಿ
ಅರ್ಧ ಸೌಟು ಲಾರ್ಡ್ ಕರ್ಜನ್,ಒಂದು ಹಿಡಿಯಷ್ಟು ನೆಹರೂ-ಜಿನ್ನಾ ಮಿಶ್ರಣಕ್ಕೆ ಅರ್ಧ ಗ್ಲಾಸು ತುಘಲಕ್-ಟಿಪ್ಪು ಎಂಬ ದ್ರಾವಣ ಬೆರೆಸಿದರೇ ಸಿದ್ದರಾಮಯ್ಯ ತಯಾರಾಗಿಬಿಡುತ್ತಾರೆ. ಲಾರ್ಡ್ ಕರ್ಜನ್ ಸಾಧನೆ ಬಂಗಾಳ ವಿಭಜನೆಯದ್ದು. ಭಾರತ ವಿಭಜನೆಯ ಸಾಧನೆ ಜಿನ್ನದ್ದಾದರೂ,ಕಾಂಗ್ರೆಸ್-ನೆಹರೂ ಯೋಗದಾನವನ್ನು ಮರೆಯುವಂತಿಲ್ಲವಲ್ಲ.ಅದೇ ಸಾಲಿಗೆ ಸೇರುವುದು ಹಿಂದೂ ವಿಭಜನೆ ಮಾಡಿದ ಸನ್ಮಾನ್ಯ ಸಿದ್ದರಾಮಯ್ಯ. ಕರ್ಜನ್ ಬಂಗಾಳ ವಿಭಜನೆಗೆ ಕೈ ಹಾಕಿದ್ದು ಮತೀಯ ಆಧಾರದ ಮೇಲೆ,ಕರ್ಜನ್ ಹಾದಿಯನ್ನೇ ದಾರಿದೀಪವಾಗಿಸಿಕೊಂಡವ ಜಿನ್ನಾ,ದೇಶವನ್ನೇ ಮತೀಯವಾಗಿ ವಿಭಜಿಸಿದರು.ಇಬ್ಬರೂ ನೆಮ್ಮದಿಯಿಂದಿದ್ದ ಸಮಾಜವನ್ನು ವಿಭಜಿಸಿದ್ದು ಅಧಿಕಾರಕ್ಕಾಗಿ. ಈಗ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಮತ್ತವರ ಸಚಿವರು ವೀರಶೈವ-ಲಿಂಗಾಯಿತ ವಿಭಜನೆ ಮಾಡಿದ್ದು ಚುನಾವಣೆ ಗೆಲ್ಲಬೇಕೆಂಬ ಏಕೈಕ ಕಾರಣಕ್ಕಾಗಿ.ರಾಜಕೀಯ ಕಾರಣದಾಚೆಗೆ ಈ ವಿಭಜನೆಯಲ್ಲಿರುವುದು ವ್ಯಾವಹಾರಿಕ ಕಾರಣಗಳು, ಅಲ್ಪಸಂಖ್ಯಾತ ಬ್ಯಾಡ್ಜಿನಡಿ ಸಿಗುವ ಸೌಲಭ್ಯಗಳ ಆಧಾರವಷ್ಟೇ.ರಾಜಕೀಯ,ವ್ಯಾವಹಾರಿಕ ಕಾರಣಗಳಿಗಿಂತ , ಈ ವಿಷಯದ ವೈಚಾರಿಕ ಆಯಾಮದ ಬಗ್ಗೆ ಗಮನಹರಿಸುವುದು ಈ ಲೇಖನದ ಉದ್ದೇಶ.
ಲಿಂಗಾಯಿತರು “ಹಿಂದೂ ಧರ್ಮ” ಭಾಗವಲ್ಲ,ಅವರದ್ದು ಪ್ರತ್ಯೇಕ “ಧರ್ಮ” ಎಂದು ನಡೆಯುತ್ತಿರುವ ಈ ಚರ್ಚೆಯಲ್ಲಿ ಮುಖ್ಯವಾಗುವುದು ಹಿಂದೂ+ಧರ್ಮ ಪದಗಳು. ಒಂದು ಉದಾಹರಣೆಯ ಮೂಲಕ ಈ ಚರ್ಚೆಯೊಳಗೆ ಹೋಗೋಣ :ಶಾಲಾ ಪಠ್ಯವೊಂದರಲ್ಲಿ “ಭಾರತ ವೈವಿಧ್ಯಮಯ ದೇಶ.ಇಲ್ಲಿ ಹಿಂದೂ,ಜೈನ,ಬೌದ್ಧ,ಸಿಖ್,ಇಸ್ಲಾಂ,ಕ್ರಿಶ್ಚಿಯಾನಿಟಿ, ಪಾರ್ಸಿ (ಮುಂದೆ ಲಿಂಗಾಯತ ?) ಹೀಗೆ ಬಹಳಷ್ಟು ಧರ್ಮಗಳಿವೆ” ಎಂಬ ಪಾಠವನ್ನು ಕೇಳಿದ ವಿದ್ಯಾರ್ಥಿಯೊಬ್ಬ ಶಾಲೆ ಮುಗಿಸಿಕೊಂಡು ಹೊರಗೆ ಬಂದಾಗ,ಅವನಿಗೆ ಎದುರಾದ ಭಿಕ್ಷುಕನೊಬ್ಬ “ಧರ್ಮ ಮಾಡಪ್ಪ” ಅಂತಾನೇ.ಆಗ ಆ ಪಾಪದ ಹುಡುಗನಿಗೆ “ತರಗತಿಯಲ್ಲಿ ಮೇಷ್ಟ್ರು ಹೇಳಿದ ಅಷ್ಟೊಂದು ವೈವಿಧ್ಯಮಯ “ಧರ್ಮ”ಗಳಲ್ಲಿ ಯಾವ ಧರ್ಮವನ್ನು ಈ ಭಿಕ್ಷುಕನಿಗೆ ಮಾಡಬೇಕು? ಅಷ್ಟಕ್ಕೂ ಧರ್ಮ ಮಾಡುವುದೆಂದರೇನು?” ಎಂಬಿತ್ಯಾದಿ ಪ್ರಶ್ನೆಗಳು ಕಾಡಿದರೆ,ನಮ್ಮ ಬುದ್ಧಿಜೀವಿಗಳ ಬಳಿ ಆ ಹುಡುಗನ ಪ್ರಶ್ನೆಗೆ ಉತ್ತರವಿದೆಯೇ?




