ವಿಷಯದ ವಿವರಗಳಿಗೆ ದಾಟಿರಿ

Recent Articles

25
ಆಕ್ಟೋ

ದೆಹಲಿಗೂ ಹರಿಯಲಿ ಕಾವೇರಿ; ಇಲ್ಲದೇ ಹೋದರೆ ಸೋಲುವಿರಿ

-ರಾಕೇಶ್ ಎನ್ ಎಸ್ 

ಗಂಗಾ, ಯಮುನಾ ನದಿಗಳ ಹೆಸರು ಕೇಳಿದರೆ ನಿಮಗೆ ಯಾವುದಾದರೂ ರಾಜ್ಯದ ನೆನಪು ಆಗುತ್ತದೆಯೇ ಎಂದು ಹಿರಿಯ ಪತ್ರಕರ್ತರೊಬ್ಬರು ಕೇಳಿದರು. ನಾನು ಅವಾಕ್ಕಾದೆ. ಗಂಗಾ ನದಿಯೂ ಉತ್ತರಾ ಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಗಳಲ್ಲಿ ಜೀವ ನದಿಯಾಗಿ ಹರಿಯುತ್ತದೆ. ಉತ್ತರಾ ಖಂಡ, ಉತ್ತರ ಪ್ರದೇಶ, ಹರಿಯಾಣ, ದೆಹಲಿಗಳಿಗೆ ಯಮುನೆಯ ಜೀವದಾಯಿ. ಮಾತು ಮುಂದುವರಿಸಿದ ಅವರು ನನಗೆ ಕಾವೇರಿ ಅಂದರೆ ತಮಿಳುನಾಡಿನ ನೆನಪಾಗುತ್ತದೆ ಎಂದರು. ಹೌದು, ಕಾವೇರಿ ನದಿ ಸಂಪೂರ್ಣವಾಗಿ ತಮಿಳುನಾಡಿಗೆ ಸೇರಿದಾಗಿದ್ದು, ಕರ್ನಾಟಕ ಸುಮ್ಮನೆ ಕಿರಿಕ್ ಮಾಡುತ್ತಿದೆ ಎಂಬ ಭಾವನೆ ಕರ್ನಾಟಕದ ಹೊರಗೆ ಮಡುಗಟ್ಟಿದೆ ಎಂಬುದನ್ನು ಅವರು ನನಗೆ ಸೂಚ್ಯವಾಗಿ ಮನದಟ್ಟು ಮಾಡಿಕೊಟ್ಟಿದ್ದರು.

ಈ ಹಿಂದೆ ಕಾವೇರಿ ವಿವಾದ ೨೦೦೨-೦೩ರಲ್ಲಿ ಉಚ್ಚ್ರಾಯ ಹಂತದಲ್ಲಿದ್ದಾಗ ದೆಹಲಿಯ ಪ್ರಗತಿ ಮೈದಾನದಲ್ಲಿ ತಮಿಳುನಾಡು ಸರ್ಕಾರ ಕಾವೇರಿ ನದಿ ಬಗ್ಗೆ ಒಂದು ಪ್ರದರ್ಶನ ಕಾರ್ಯಕ್ರಮ ಇಟ್ಟುಕೊಂಡಿತ್ತಂತೆ. ಅದರಲ್ಲಿ ಕಾವೇರಿ ನದಿ ತಮಿಳುನಾಡಿನ ಸಂಸ್ಕೃತಿ, ಪರಂಪರೆಯ ಮೇಲೆ ಬೀರಿದ ಪರಿಣಾಮಗಳ ಬಗ್ಗೆ, ತಮಿಳು ಜೀವನದಲ್ಲಿ ಕಾವೇರಿಯ ಪಾತ್ರದ ಬಗ್ಗೆ, ತಮಿಳಿನ ಕಾವ್ಯ, ಕೃತಿಗಳಲ್ಲಿ ಕಾವೇರಿಯ ಬಣ್ಣನೆ ಸೇರಿದಂತೆ, ಕಾವೇರಿ ಸೀಮೆಯ ಕೃಷಿ ಚಟುವಟಿಕೆಗಳ ಬಗ್ಗೆ ಛಾಯಾಚಿತ್ರ ಸಹಿತ ವಿವರಣೆಗಳಿದ್ದವು. ಕಾವೇರಿ ನದಿ ಪೂಂಪ್‌ಹಾರ್‌ನಲ್ಲಿ ಬಂಗಾಳ ಕೊಲ್ಲಿಯಲ್ಲಿ ಲೀನವಾಗುವ ಮೊದಲು ಅದು ಹೇಗೆ ಅಲ್ಲಿನ ಜನಜೀವನದ ಮೇಲೆ ಪರಿಣಾಮ ಉಂಟು ಮಾಡಿದೆ ಎಂಬುದನ್ನು ದೇಶದ ಜನರಿಗೆ ತಿಳಿಯಪಡಿಸಲು ಅಲ್ಲಿನ ಸರ್ಕಾರ ಕೈಗೊಂಡ ಕ್ರಮವಾದು.ಆದರೆ ನಾವು ಕಾವೇರಿ ನಮ್ಮ ತಾಯಿ ಎಂದು ಭಾವನಾತ್ಮಕವಾಗಿ ಬೊಬ್ಬಿರಿಯುತ್ತೇವೆ, ಆ ತಾಯಿಯನ್ನು ಬಳಸಿಕೊಂಡು ಅದೇಷ್ಟು ರಾಜಕೀಯ ಲಾಭ ಪಡೆಯಬಹುದೋ ಅಷ್ಟನ್ನೂ ಬಾಚಿಕೊಳ್ಳಲು ಬಯಸುತ್ತೇವೆ. ಕಾವೇರಿ ಹೆಸರಲ್ಲಿ ಅದೇಷ್ಟು ಸಾಧ್ಯವೋ ಅಷ್ಟು ಸಂಘಟನೆಗಳನ್ನು ಕಟ್ಟಿ ದೊಣ್ಣೆ ನಾಯಕರಾಗಲು ಹೊರಡುತ್ತೇವೆ. ಆದರೆ ಕಾವೇರಿ ನಮ್ಮ ರಾಜ್ಯಕ್ಕೆ ನೀಡಿದ ಸಾಂಸ್ಕೃತಿಕ, ಸಾಹಿತ್ಯಿಕ, ಚಾರಿತ್ರಿಕ, ಆರ್ಥಿಕ ಕೊಡುಗೆಗಳನ್ನು ರಾಷ್ಟ್ರ ಮಟ್ಟದಲ್ಲಿ ಬಿಂಬಿಸುವ ಪ್ರಯತ್ನವನ್ನು ಮಾಡುವುದೇ ಇಲ್ಲ. ಅದ್ದರಿಂದ ಕಾವೇರಿ ವಿವಾದ ಭುಗಿಲೆದ್ದ ಸಂದರ್ಭಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯಕ್ಕೆ ಸಿಗಬೇಕಾದ ನೈತಿಕ ಬೆಂಬಲ ಸಿಗದೇ ಅದು ತಮಿಳುನಾಡಿನ ಪಾಲಾಗುತ್ತಿದೆ. ಮತ್ತಷ್ಟು ಓದು »
20
ಆಕ್ಟೋ

ಬಿಜೆಪಿಯ ಅಪಸ್ವರಕ್ಕೆ ‘ಆರ್.ಎಸ್.ಎಸ್’ನದ್ದೇ ಟ್ಯೂನ್

– ರಾಕೇಶ್ ಶೆಟ್ಟಿ

ಅಂದು ಪಾಕಿಸ್ತಾನದ ನೆಲದಲ್ಲಿ ನಿಂತು “ಜಿನ್ನಾ ಜಾತ್ಯಾತೀತರಾಗಿದ್ದರು” ಅನ್ನುವ ಸತ್ಯ ಹೇಳಿದ್ದೆ ಆ ಹಿರಿಯ ಮಾಡಿದ ದೊಡ್ಡ ತಪ್ಪು(!).ಆ ಒಂದು ಮಾತು ಅವರು ಅಲ್ಲಿವರೆಗೂ ದೇಶದ ಮೂಲೆ ಮೂಲೆಗೆ ಹೋಗಿ ಅವರು ಪಕ್ಷಕಟ್ಟಲು ಪಟ್ಟ ಶ್ರಮ,೨ ಸೀಟಿನಿಂದ ಅಧಿಕಾರದ ಚುಕ್ಕಾಣಿ ಹಿಡಿಯುವವರೆಗೂ ಪಕ್ಷ ಸಾಗಿ ಬಂದ ಹಾದಿಯಲ್ಲಿ ಅವರು ವಹಿಸಿದ ಜವಬ್ದಾರಿ ಎಲ್ಲವನ್ನು ಮರೆಸಿಹಾಕಿತ್ತು.ಧುತ್ತನೆ ಅವರ ಮಾತೃ ಸಂಘಟನೆಗೆ ಈ ಹಿರಿಯ ನಾಯಕ ಮತ್ತು ಮುಂದಿನ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿಯಾಗಿದ್ದವರಿಗೆ ವಯಸ್ಸಾಯಿತು ಅನ್ನುವ ಜ್ನಾನೋದಯ ಅರ್ಧ ರಾತಿಯಲ್ಲಿ ಆಗಿಬಿಟ್ಟಿತ್ತಲ್ಲ,ಅಷ್ಟೇ ಸಾಕಿತ್ತು ಅವಮಾನಕಾರಿಯಾಗಿ ಅವರನ್ನು ಪಕ್ಕಕ್ಕೆ  ತಳ್ಳಿ,ಅಲ್ಲಿಯವರೆಗೂ ಮಹಾರಾಷ್ಟ್ರ ಬಿಟ್ಟು ಹೊರಗೆ ಹೆಸರೇ ಕೇಳಿರದ ‘ಯುವ ನಾಯಕ(?)’ ನನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು.

ಇವತ್ತಿಗೆ ‘ಆ ಹಿರಿಯ’ರನ್ನು ಮರೆತು ಮುಂದೆ ಹೋದ ಆ ಪಕ್ಷದ ಪಾಡು, ಅಹಂಕಾರದಿಂದ ಕೃಷ್ಣ ಪರಮಾತ್ಮನನ್ನು ಬಿಟ್ಟು ಬಿಲ್ವಿದ್ಯೆ ಮರೆತು ನಿಂತ ‘ಅರ್ಜುನ’ನಂತೆಯೇ ಆಗಿದೆ.ಕೂದಲು ಬೆಳೆಯೋ ಜಾಗವೆಲ್ಲ ತಲೆ ಅಂದುಕೊಂಡವರಂತೆ ಆ ಪಕ್ಷದಲ್ಲಿರುವ ಜನರೆಲ್ಲಾ ತಾವೇ ‘ಪ್ರಧಾನಿ ಅಭ್ಯರ್ಥಿ’ಗಳು ಅಂದುಕೊಂಡಿದ್ದಾರೆ.ಅಂದ ಹಾಗೆ,ಆ ಹಿರಿಯರ ಹೆಸರು ಲಾಲ್ ಕೃಷ್ಣ ಅಡ್ವಾಣಿ,ಪಕ್ಷ ಬಿಜೆಪಿ,ಮಾತೃ ಸಂಘಟನೆಯ ಹೆಸರು ‘ಆರ್.ಎಸ್.ಎಸ್’ ಮತ್ತೆ ಆ ಯುವನಾಯಕ(?) ಮೊನ್ನೆ ಮೊನ್ನೆ ತಾನೇ ಎಕರೆಗಟ್ಟಲೆ ರೈತರ ಜಮೀನು ಸ್ವಾಹ ಮಾಡಿದ್ದಾರೆ ಅನ್ನುವ ಆರೋಪ ಹೊತ್ತ ನಿತಿನ್ ಗಡ್ಕರಿ.

ಮತ್ತಷ್ಟು ಓದು »

19
ಆಕ್ಟೋ

ತುಳು ಭಾಷೆ ಎಡ್ಮನೇ ಪರಿಚ್ಚೇದೊಡಿಜ್ಜಿ…!

-ಲೋಕು ಕುಡ್ಲ 

ಭಾಷೆದ ಪೊರ್ಲುನು ಪುಗರ್ರೆ ಸಾಧ್ಯ ಇಜ್ಜಿ ಇಂಚಿತ್ತಿ ತುಳು ಭಾಷೆ ದಾಯೆ ಇನಿ ಅವನತಿದಂಚಿ? ಅಂದ್ ತುಳುವೆರೆ ಕಾಲೊದ ಕೋಲೊನು ತೂನಗ ನಮ್ಮ ತುಳು ಭಾಷೆ ಅವನತಿದಂಚಿ ಪಜ್ಜೆ ದೀವೊಂದು ಉಂಡು! ನಮ ತುಳುವೆರ್ ನನಲಾ ಲಕ್ಕ್ ದ್ ಉಂತುಜಿಂದಾಂಡ ನಮ್ಮ ಅಪ್ಪೆ ಭಾಷೆ ತುಳುನು ಒರಿಪ್ಪಾವರೆ ಸಾಧ್ಯ ಇಜ್ಜಿ, ಏತೊಂಜಿ ಕಾರ್ಯಕ್ರಮೊಲು ನಮ್ಮ ತುಳು ನಾಡ್ ಡ್ ಅತ್ತ್೦ಡ ಪರವೂರುಡು ನಡತೊಂದು ಇಜ್ಜಿ,ಕೆಲವೊಂಜಿ ಚಾವಡಿಲೆಡ್ ಪಾತೆರೊಗು ಪದ ದಾಂತಿನಂಚಿನ ಪೆರ್ಮೆದ ಕಾರ್ಯಕಮೊಲು ಸಂಘಟನೆದ ಮುಖಾಂತರವಾದ್ ನಡತೊಂದು ಉಂಡು, ಅಂಚೆನೆ ಪ್ರತಿಯೊಂಜಿ ಕಾರ್ಯಕ್ರಮೊಲೆಡ್ ನಮ್ಮ ತುಳುವೆರ್ ರಾಜಕಾರಣಿಲು,ಸಾಹಿತಿಲು,ಸಾಧಕೆರೆನಕ್ಲೆಗ್ ಮಾನ್ಯಾದಿಗೆನ್ ಸಂದಾವೊಂದು ಉಲ್ಲೆರ್, ಪ್ರತಿ ಒಂಜಿ ಲೇಸ್ ಡ್ ಲಾ ರಾಜಕಾರಣಿನಕ್ಲೆಗ್ ನಮ್ಮ ತುಳು ಸಂಘಟನೆದ ಮಾತೆರ್ಲಾ ತುಳು ಭಾಷೆದ ಒರಿಪ್ಪುಗು ಬೆರಿಸಾಯ ಕೊರ್ಲೆ ಪಂದ್ ನಟ್ಟೊಂದುಲ್ಲೆರ್.
ತುಳುವೆರೆ ಬೇತೆ ಮಾತಾ ವಿಚಾರೊಲೆನ್ ಬುಡ್ಕ ಒಂಜಿ ಕೆಲಸ “ತುಳು ಭಾಷೆ ಎಡ್ಮನೇ ಪರಿಚ್ಚೇದೊಗು ಸೇರೊಡುನ್ಪಿನ ಈ ವಿಚಾರ” ಸರಿ ಸುಮಾರ್ ಪದಿನೈನ್ ವರ್ಷೊಡಿಂಚಿ ನಮ್ಮ ತುಳುವೆರ್ ರಾಜಕಾರಣಿಲೆಗ್ ಪಂದ್ ಪಂದ್ ಬಾಯಿ ಬಚ್ಚಿದುಪ್ಪು, ಬರೆದ್ ಬರೆದ್ ಕೈ ಬಚ್ಚಿದುಪ್ಪು, ನಟ್ಟ್ ನಟ್ಟ್ ದ್ ಬೆರಿ ಬಚ್ಚಿದುಪ್ಪು, ಒವ್ವೇ ರಾಜಕಾರಣಿಲು ಕೊರಿ ಪಾತೆರ ನಡಪಾದ್ ಕೊರ್ಜೆರ್, ಆತೆ ದಾಯೆಗ್ ನಮ್ಮ ತುಳು ನಾಡ್ ದ ನಮ್ಮ ತುಳು ಅಪ್ಪೆನ ಬಂಜಿಡ್ ಬುಲೆದ್ ತೊಡೆಟ್ಟ್ ಜತ್ತಿ ತುಳುವೆರ್ ರಾಜಕಾರಣೊಡು ಇಜ್ಜೆರಾ? ಇತ್ತಿಜೆರಾ? ಉಪ್ಪುನಕುಲು ಇತ್ತಿನಕುಲು ನಮ್ಮ ತುಳುನಾಡ್ ಗಾದ್, ತುಳು ಭಾಷೆಗಾದ್ ಏತ್ ಬೆಂದೆರ್ ದಾದ ಮಂತೆರ್? ದಾದಾಂಡಲಾ ಮನ್ಪೊಡು ಪನ್ಪಿನ ಆಸೆ ಬೋಡು ತುಳುವೆರೆ, ತುಳುನಾಡ್ ದ ಪೊರ್ಲು ತೂಲೆ,ತುಳುವೆರೆನೆ ಮನಸ್ ತೆರಿಲೆ, ನಮ್ಮ ಸಂಸ್ಕ್ರತಿ ಆಚರಣೆದ ಕಲೊಕ್ಕು ಜಪ್ಪುಲೆ. ಮತ್ತಷ್ಟು ಓದು »
19
ಆಕ್ಟೋ

ಇಂಗ್ಲೀಷ್ ಭಾಷೆಯ ದಾಳಿಯಿಂದ ಸೊರಗುತ್ತಿರುವ ಇನ್ನಿತರ ಭಾಷೆಗಳು – ಇಂಗ್ಲೀಷ್ ವಿಂಗ್ಲೀಷ್

– ರೂಪಲಕ್ಷ್ಮಿ

ಶಶಿ – ಅತ್ಯಂತ ಸಾಮಾನ್ಯ ಹೆಣ್ಣು ಮಗಳು. ಅತ್ತೆ, ಗಂಡ, ಮಕ್ಕಳಿಗೆ ರುಚಿಯಾದ ಅಡುಗೆ ಮಾಡಿ, ಅವರಿಗೆ ಉಣಬಡಿಸುವುದರಲ್ಲಿಯೇ ಸಾರ್ಥಕ್ಯ ಕಂಡವಳು.  ಜೊತೆಗೊಂದಿಷ್ಟು ಪುಡಿಕಾಸು ಸಂಪಾದಿಸಲು, ತನಗೆ ಗೊತ್ತಿರುವಂಥ ವಿದ್ಯೆಯಾದ ಅಡುಗೆಯಿಂದಲೇ, ಮದುವೆ ಮುಂತಾದ ಸಮಾರಂಭಗಳಿಗೆ ಲಡ್ಡು ತಾನೇ ಕೈಯಾರೆ ತಯಾರಿಸಿ, ಅಲ್ಲಿಗೆ ಹೋಗಿ ಕೊಟ್ಟು ಬರುವಂಥವಳು.  ಆ ಹಣವನ್ನು ಆಪದ್ಧನವೆಂದು ಕಾದಿರಿಸುವವಳೇ ಹೊರತು, ತನ್ನ ಬಟ್ಟೆಬರೆ, ಅಲಂಕಾರಗಳಿಗೆ ಖರ್ಚು ಮಾಡುವಂಥವಳಲ್ಲ!  ಒಟ್ಟಿಗೆ ಬಾಳುವುದಕ್ಕೆ ಸಂಗಾತಿ ಪರಿಪೂರ್ಣನಾಗಿರಬೇಕಿಲ್ಲ, ಒಬ್ಬರಿಗೊಬ್ಬರು ಪೂರಕವಾಗಿದ್ದರೆ ಸಾಕು ಎಂಬುದು ಇವಳ ತತ್ವ. ಮಕ್ಕಳನ್ನು ಬೆಳೆಸುವಲ್ಲಿಯೂ ಆಕೆ ನಿರಾಳ. ಟೀನೇಜ್ ಮಗಳು ತುಂಡುಬಟ್ಟೆ ಹಾಕಿಕೊಂಡು, ಕಾಫೀ ಡೇ ಹೋಗುವುದನ್ನು ಅತೀ ಸಾಮಾನ್ಯ ವಿಷಯದಂತೆ ಸ್ವೀಕರಿಸುವಷ್ಟು, ತನ್ನ ಮುಂದೆಯೇ ತನ್ನ ಗಂಡ, ಪರ ನಾರಿಯನ್ನು ಹಗ್ ಮಾಡುವುದನ್ನು ಒಪ್ಪಿಕೊಳ್ಳುವಷ್ಟು, ಆಧುನಿಕ ಮನೋಧರ್ಮ ಇವಳಲ್ಲಿದೆ.  ಗೇ, ಲೆಸ್ಬಿಯನ್ ಸಂಬಂಧಗಳನ್ನು ಒಪ್ಪಿಕೊಳ್ಳಲು ಹಿಂದೆ ಮುಂದೆ ನೋಡುವಂಥ ಸುಶಿಕ್ಷಿತ ಮನೋವರ್ಗದ ನಡುವೆ, ಅವರದು ಹೃದಯವಲ್ಲವೇ? ಅವರು ಕೂಡ ಪ್ರೀತಿಸಲು, ಬದುಕಲು ಅರ್ಹರು ಎನ್ನುವಂಥ, ಗಂಡ, ಮಕ್ಕಳ ಆಧುನಿಕ ಮನಸ್ಸನ್ನು ಯಾವುದೇ ತಂಟೆ, ತಕರಾರಿಲ್ಲದೆ ಒಪ್ಪಿಕೊಳ್ಳುವಂಥ ವಿಶಾಲ ಮನಸ್ಸು ಈಕೆಯದು. ಈ ಆಧುನಿಕ ಜಗತ್ತಿನಲ್ಲಿ ಇದ್ದು ಕೂಡ ಇರದಂಥವಳು. ಸಂಬಂಧಗಳನ್ನು ಅರ್ಥ ಮಾಡಿಕೊಳ್ಳಲು, ಭಾವನೆಗಳನ್ನು ವ್ಯಕ್ತ ಪಡಿಸಲು ಭಾಷೆಯ ಹಂಗೇಕೆ? ತಾವೇ ಅವರ ಜಾಗದಲ್ಲಿ ನಿಂತು ನೋಡಿದರೆ ಅವರು ಅರ್ಥವಾಗುತ್ತಾರೆ ಎನ್ನುವ ಮನೋಭಾವದವಳು.  ಆದರೆ ಈಕೆಯನ್ನು, ಈಕೆಯ ಮನಸ್ಸನ್ನು ಅರ್ಥ ಮಾಡಿಕೊಳ್ಳದ ಗಂಡ ಮತ್ತು ಮಗಳು, ಈಕೆಯದು ಗೊಡ್ಡು ಸ್ವಭಾವವೆಂದು, ಈ ಜಗತ್ತಿನಲ್ಲಿ ಬದುಕಲು ಕೂಡ ಅನರ್ಹವೆಂದೂ, ಇಂಗ್ಲೀಷ್ ಭಾಷೆ ಬರದ ಈಕೆ ಅಡುಗೆಮನೆಯಲಿರಷ್ಟೇ ಲಾಯಕ್ಕೆಂದೂ, ಸಮಯ ಸಿಕ್ಕಾಗಲೆಲ್ಲಾ ಪರಿಹಾಸ್ಯ ಮಾಡುವ ಗಂಡ, ಅದನ್ನು ತನ್ನ ಉಪಯೋಗಕ್ಕೆ ಬಳಸಿಕೊಳ್ಳುವ ಮಗಳು, ಇವರೀರ್ವರ ಅಪಹಾಸ್ಯದಿಂದ ನೋವಾದರೂ, ಸಂಕಟವಾದರೂ, ತೋರಿಸಿಕೊಳ್ಳದ ಸಂಯಮಿ.
18
ಆಕ್ಟೋ

ಏಕ್ ಥಾ ಟೈಗರ್…! ಅವನೊಬ್ಬನಿದ್ದ ನಮ್ಮ ಸಳ…!

– ಚರಿತ್ರ ಕುಮಾರ್

ಮಲೆನಾಡಿನ ಒಂದು ಹಳ್ಳಿ. ಗುರುವೊಬ್ಬ ಶಿಷ್ಯರನ್ನು ಕೂರಿಸಿಕೊಂಡು ಬಯಲಲ್ಲಿ ಪಾಠ ಹೇಳಿಕೊಡುತ್ತಿದ್ದ. ತನ್ಮಯನಾಗಿದ್ದ ಗುರು. ಆಲಿಸುತ್ತಾ ಮನನಮಾಡಿಕೊಳ್ಳುತ್ತಿದ್ದ ಶಿಷ್ಯರು. ವಿದ್ಯೆಯನ್ನು ಪರಿಕಿಸಲೋ ಅಥವಾ ಶಿಷ್ಯರನ್ನು ಅಳೆಯಲೋ ಅಥವಾ ಗುರುವಿನ ಮಟ್ಟವನ್ನು ತಿಳಿಯಲೋ ಎಂಬಂತೆ ವ್ಯಾಘ್ರವೊಂದು ಘರ್ಜಿಸುತ್ತಾ ಬಂತು. ಎಂಥಾ ಗುರು-ಶಿಷ್ಯರೂ ಒಮ್ಮೆ ಅವಕ್ಕಾಗುವ ಸಮಯ. ಗುರುವಿನ ಬಾಯಿಂದ ಬಂದಿದ್ದು ಒಂದೇ ಒಂದು ಮಾತು “ಹೊಯ್-ಸಳ” . ಸಳ ಎಂಬವನು ಶಿಷ್ಯ. ಆತ ನೆಚ್ಚಿನ ಶಿಷ್ಯನೇ ಇರಬೇಕು. ಆತ ಕತ್ತಿ ಹಿರಿಯಲಿಲ್ಲ. ಬಾಣ ಹೂಡಲಿಲ್ಲ. ಬಯಲಲ್ಲಿ ಗುರುಸಮ್ಮುಖದಲ್ಲಿ ಪಾರಾಯಣ ಮಾಡುತ್ತಿದ್ದವನಿಗೆ ಗುರುವಾಕ್ಯವೇ ಆಯುಧಕ್ಕಿಂತ ವೊನಚಾಯಿತು. ಸಳ ಬರಿಗೈಯಲ್ಲೇ ಕಾದ. ಗುರುವಾಕ್ಯ ಪೂರೈಸಿತು. ಹುಲಿ ಅಸುನೀಗಿತು. ಹೊಯ್ ಸಳ ಎಂದಿದ್ದ ಗುರುವೇ ಈಗ “ಭಲೇ ಸಳ” ಎಂದ. ಮುಂದೆ ಗುರುವಾಕ್ಯಬಲದಿಂದಲೇ ಯುವಕ/ಬಾಲಕ ಸಳ ರಾಜ್ಯ ಕಟ್ಟಿದ, ಆಳಿದ. ವಿದ್ಯೆಯ ಬಲ, ಗುರುವಿನ ಬಲ ಮತ್ತು ಶಿಷ್ಯನ ಅಂತಶಕ್ತಿಗೆ ಇವೆಲ್ಲಾ ಘಟನೆಗಳು ಸಾಕ್ಷಿಗಳಾಗಿ ನಿಲ್ಲುತ್ತವೆ. ಇದು ಕನ್ನಡದ ಇತಿಹಾಸದಲ್ಲಿ ದಾಖಲಾಗುವ ಮಹತ್ತರ ಪ್ರಸಂಗ. ಸ್ವಶಕ್ತಿಯಿಂದ , ಸ್ವಚಿಂತನೆಯಿಂದ ಸಾಮ್ರಾಜ್ಯವೊಂದು ಮೈದಾಳಿದ ಕಥೆ. ಹೀಗೆ ಕರ್ನಾಟಕ ಮರೆಯಲಾಗದ, ಸುವರ್ಣಯುಗವನ್ನು ಕಂಡ ಹೊಯ್ಸಳ ಸಾಮ್ರಾಜ್ಯಮುಂದೆ ಹಲವು ವೈಭವಗಳನ್ನು ಕಂಡಿತು. ಕನ್ನಡದ ಹಲವು ಕುರುಹುಗಳನ್ನು ಬಿಟ್ಟುಹೋಯಿತು. ಕರ್ನಾಟಕ ಶಿಲ್ಪ ಕಲೆಗಳ ಬೀಡಾಯಿತು. ಭೂಲೋಕದ ಸ್ವರ್ಗ ಎಂದು ಕವಿಗಳು ವರ್ಣಿಸುವಂತಾಯಿತು. ಕರ್ನಾಟಕ ನಾಟ್ಯ ಕಲೆಗಳ ನಾಡಾಯಿತು. ಸರ್ವಧರ್ಮ ಸಮನ್ವಯದ ನೆಲೆಯಾಯಿತು. ದ್ವಾರಸಮುದ್ರದ ಹೊಯ್ಸಳರು ಗಡಿಯಾಚೆಗಿನ ರಾಜರೊಂದಿಗೂ ಕಾದಾಡಿ ಕನ್ನಡದ ಹಿರಿಮೆಯನ್ನು ಸಾರಿದರು. ಆಧುನಿಕ ಪರಿಭಾಷೆಯಲ್ಲಿ ಹೇಳಬೇಕೆಂದರೆ ಕನ್ನಡದ ಮನಸ್ಸನ್ನು ಪ್ರಬಲವಾಗಿ ರೂಪಿಸಿದವರೇ ಹೊಯ್ಸಳರು. ಕರ್ನಾಟಕದಲ್ಲಿ ಶಿವ ದೇವಾಲಯಗಳು ಪ್ರಸಿದ್ಧವಾಗಿದ್ದೇ ವೈಷ್ಣವರಾಗಿದ್ದ ಹೊಯ್ಸಳರ ಕಾಲದಲ್ಲಿ ಎಂಬುದು ಇಂದಿನ ಕಾಲಮಾನದಲ್ಲೂ ಸೋಜಿಗ ಹುಟ್ಟಿಸುವ ಸಂಗತಿ.

ಇಂಥ ಎಷ್ಟೋ ಸಂಗತಿಗಳನ್ನು ಇತಿಹಾಸದ ಪುಟಗಳು ವಿವರಿಸುತ್ತಾ ಹೋಗುತ್ತವೆ. ಆ ಸಂಗತಿಗಳೆಲ್ಲವೂ ಹುಲಿಕೊಂದ ಸಳನ ವಂಶದ ವೈಭವಗಳು-ಕೊಡುಗೆಗಳು. ಇಷ್ಟೊಂದು ವೈಭವಶಾಲಿ, ಪರಾಕ್ರಮಶಾಲಿ,ಪರಿಶ್ರಮಶಾಲಿ ಸಾಮ್ರಾಜ್ಯಕ್ಕೆ ಬೀಜ ಹಾಕಿದ ಸಳ ನಿಜವಾದ ಕರ್ನಾಟಕದ ಹುಲಿ. ಪರಾಕ್ರಮದಲ್ಲಿ, ಗುರುವಾಕ್ಯ ಪರಿಪಾಲನೆಯಲ್ಲಿ , ಹಿಡಿದ ಸಂಗತಿಯನ್ನು ಪಾಲಿಸುವುದರಲ್ಲಿ , ಧರ್ಮ ಕಾರ್ಯದಲ್ಲಿ ,ಪರೋಪಕಾರದಲ್ಲೂ ಆತ ಹುಲಿ. ಅವನೊಬ್ಬನಿದ್ದ ಹುಲಿ. ಏಕ್ ಥಾ ಟೈಗರ್. ಹುಲಿ ಎಂದು ಕರೆದರೆ ಇವನನ್ನೇ ಕರೆಯಬೇಕು ಎಂಬ ಗುಣಲಕ್ಷಣ, ವ್ಯಕ್ತಿತ್ವವನ್ನು ಹೊಂದಿದ್ದ ಸಳ ರಾಜ್ಯ ಕಟ್ಟದೆ ಇನ್ನಾರು ಕಟ್ಟಿಯಾರು? ಆತನನ್ನಲ್ಲದೆ ಇನ್ನಾರನ್ನು ತಾನೇ ಹುಲಿ ಎಂದು ಕರೆಯಲಾದೀತು?

ಮತ್ತಷ್ಟು ಓದು »

17
ಆಕ್ಟೋ

ವೈದ್ಯೋ ನಾರಾಯಣೋ ಹರಿ

ಮಧುಚಂದ್ರ ಭದ್ರಾವತಿ 

ಪ್ರತಿ ಸೇವೆಗೆ ಸೇವಾ ಶುಲ್ಕವೆಂದು ಪ್ರತಿಯೊಂದು ಕಾರ್ಮಿಕ ವರ್ಗವು  ಪಡೆಯುತ್ತದೆ . ಇಂದು  ಸೇವಾ ಶುಲ್ಕದಲ್ಲಿ ಸೇವೆ ಎನ್ನುವ ಪದ ತಾನಾಗೆ ಬೇರ್ಪಟ್ಟಿದೆ. ಈಗ ಶುಲ್ಕದ ಮೇಲೆ ಮತ್ತೊಂದು ರೀತಿಯ ಶುಲ್ಕವನ್ನು ಹಾಕಿ ಹಲ್ಕಿರಿಯುತ್ತ  ಗ್ರಾಹಕರನ್ನು ಶೋಷಣೆ ಮಾಡುವ ವ್ಯಾಮೋಹಕ್ಕೆ  ತಮ್ಮ ಸಂಸ್ಕಾರವನ್ನು ಮರೆತು ಬಿಟ್ಟು ಹಗಲು  ದರೋಡೆಯಲ್ಲಿ ಹಲವು  ಕಾರ್ಮಿಕ ವರ್ಗಗಳು  ನಿರತವಾಗಿವೆ. ಕೆಳ ಮಟ್ಟದ  ಕಾರ್ಮಿಕ ವರ್ಗದಿಂದ  ಹಿಡಿದು ಅತ್ಯುತ್ತಮ ಮಟ್ಟದ ಕಾರ್ಮಿಕ ವರ್ಗದವರೆಗೂ ಈ  ಸಂಸ್ಕಾರ ಅಂಟಿಕೊಂಡಿದೆ(ಎಲ್ಲರು ಈ ವರ್ಗಕ್ಕೆ  ಸೇರುವುದಿಲ್ಲ ,ಕೆಲವರು ಇದಕ್ಕೆ  ಅಪವಾದ ).

ಅದಕ್ಕೆ  ” ವೈದ್ಯ ” ಎಂಬ ಕಾರ್ಮಿಕ ವರ್ಗವು ಸಹ ತಡವಾಗಿ ಸೇರಿದರು ಎಲ್ಲ ವರ್ಗವನ್ನು ಮಿರಿ ಅತ್ಯಂತ ವೇಗವಾಗಿ ಮುನ್ನುಗುತ್ತಿದೆ. ಬಹುಶ ನಮ್ಮ ಸುತ್ತಮುತ್ತಲಿರುವ ವೈದ್ಯರನ್ನು ಮತ್ತು ಆಸ್ಪತ್ರೆಗಳನ್ನು ನೀವಾಗಿ ನಿಮ್ಮ ಮನದಲ್ಲಿ ಪ್ರಸ್ತಾಪಿಸಿದರೆ ಅದಕ್ಕೆ ತಕ್ಕ ಮಟ್ಟಿಗೆ ಉತ್ತರ ನಿಮಗೆ ದೊರೆಯುತ್ತದೆ . ಸೇವಾ ಮನೋಭಾವ ಎಂಬುದನ್ನು ಮರೆತು, ಕೇವಲ  ಹಣಕ್ಕಾಗಿ ತಮ್ಮನ್ನು ಮಾರಿಕೊಂಡು ತಮ್ಮ ಮೂಲ ವೃತ್ತಿಗೆ ದ್ರೋಹ ಬಗೆಯುತ್ತ  ಜೀವನವೆಂಬ ರಥವನ್ನು ಎಳೆಯುತ್ತಾ ರೋಗಿಗಳ ರಕ್ತವನ್ನು ಕುಡಿಯುತ್ತಿರುತ್ತಾರೆ. ವಾಸ್ತವ ಹೇಗಿದೆ ಎಂದರೆ ಇಂದು ವೈದ್ಯನೆಂದರೆ ಹಣ ಕೀಳುವ ಜಿಗಣೆ  ಎಂಬಂತಾಗಿದೆ.

ಮತ್ತಷ್ಟು ಓದು »

16
ಆಕ್ಟೋ

ಹದಿನಾಲ್ಕರ ಬಾಲೆಗೆ ಹೆದರಿದ ತಾಲಿಬಾನಿ ಹೇಡಿಗಳು!

– ಚಕ್ರವರ್ತಿ ಸೂಲಿಬೆಲೆ

‘ನನ್ನ ಪಾಕಿಸ್ತಾನದ ಕನಸು ಇಂತಹದುಲ್ಲ. ಅಲ್ಲಿ ಶಾಂತಿ ಇರಬೇಕು. ನೆರೆಯವರೊಂದಿಗೆ ಸೌಹಾರ್ದ ಗೆಳೆತನವಿರಬೇಕು. ನನ್ನ ಪಾಕಿಸ್ತಾನದಲ್ಲಿ ಹಗರಣಗಳಿರಬಾರದು. ಶತ್ರುಗಳಿಲ್ಲದ ರಾಷ್ಟ್ರವಾಗಿರಬೇಕು ಅದು.’ ಹಾಗಂತ ಪಟಪಟನೆ ಮಾತನಾಡುತ್ತ ಇಂತಹದೊಂದು ರಾಷ್ಟ್ರದ ನಿರ್ಮಾಣಕ್ಕೆ ಅಗತ್ಯಬಿದ್ದಲ್ಲಿ ಓದು ಮುಗಿಸಿ ರಾಜಕಾರಣಕ್ಕೂ ಧುಮುಕುವೆನೆಂದು ಪತ್ರಕರ್ತರ ಮುಂದೆ ಹೇಳಿದ್ದು ಬೆನಜಿರ್ ಭುಟ್ಟೋ ಅಲ್ಲ. ಹದಿಮೂರರ ಬಾಲೆ ಮಲಾನಾ ಯೂಸುಫ್ ಜಾಯ್…!ಹೌದು. ಮೊನ್ನೆ ದುಷ್ಟ ತಾಲಿಬಾನಿಗಳು ಗುಂಡು ಹಾರಿಸಿ ಕೊಲ್ಲುವ ಯತ್ನ ನಡೆಸಿದ್ದು ಈ ಹುಡುಗಿಯ ಮೇಲೆಯೇ. ಈಗ ಅವಳಿಗೆ ಹದಿನಾಲ್ಕು ವರ್ಷ ಮಾತ್ರ. ತಾಲಿಬಾನ್ ಎನ್ನುವ ಪದ ಕ್ರೌರ್ಯಕ್ಕೆ ಪರ್ಯಾಯವಾಗಿ ನಿಂತಿರುವುದು ಇಂದೇನಲ್ಲ. ಆಪ್ಘಾನಿಸ್ತಾನದ ಪುಷ್ತೂನ್ ಬುಡಕಟ್ಟಿನ ಜನರ ಮಹತ್ವಾಕಾಂಕ್ಷೆಯ ಭಾಗವಾಗಿ ಹುಟ್ಟಿದ ದಿನದಿಂದ ಅದು ಹಾಗೆಯೇ. ಅಫ್ಘಾನಿಸ್ತಾನ ಗಾಂಧಾರ ದೇಶವಾಗಿದ್ದ ಕಾಲದಿಂದಲೂ ಭಿನ್ನಭಿನ್ನ ಬುಡಕಟ್ಟುಗಳ ಭೂಪ್ರದೇಶ. ಅದರಲ್ಲಿ ಸೂರ್ಯಚಂದ್ರರನ್ನು ಆರಾಧಿಸುವ ಪ್ರಕೃತಿ ಪೂಜಕರಿಂದ ಹಿಡಿದು ಸಗುಣ ಸಾಕಾರ ಮೂರ್ತಿಪೂಜಕರೂ ಇದ್ದರು. ನಡುವಲ್ಲಿ ಒಂದಷ್ಟು ಕಾಲ ಬುದ್ಧನ ಅನುಯಾಯಿಗಳ ಶಾಂತಿಯ ಪ್ರಭೆಯಿಂದಲೂ ಬೆಳಗಿತು ಆಫ್ಘಾನಿಸ್ತಾನ. ಆನಂತರದ ದಿನಗಳಲ್ಲಿ ದಾಳಿಗೆ ಒಳಗಾಗಿ ಕ್ರಮೇಣ ಇಸ್ಲಾಮ್ ವ್ಯಾಪ್ತಗೊಂಡಿತು. ಹಾಗಂತ ಇಸ್ಲಾಮ್ ಕೂಡ ಏಕಪ್ರಕಾರವಾಗಿರಲಿಲ್ಲ. ಆಯಾ ಬುಡಕಟ್ಟುಗಳು ತಮ್ಮದೇ ಆದ ಆಚರಣೆಗಳೊಂದಿಗೆ ಬದುಕಿದ್ದವು. ಸೂಫಿಸಂತರುಗಳು ಹೊಸ ಪರಂಪರೆಯನ್ನು ಹುಟ್ಟುಹಾಕಿದ್ದರು. ತಮ್ಮ ರೀತಿಯೇ ಸರಿ ಎನ್ನುವ ಕಾದಾಟಗಳು ಆಗೀಗ ನಡೆಯುತ್ತಲೇ ಇದ್ದವು. ಮೇಲುಗೈ ಸಾಧಿಸಿ ಇಡಿಯ ಪ್ರಾಂತವನ್ನು ಆಳಬೇಕೆಂಬ ತಹತಹವೂ ಸಹಜವಾಗೇ ಇತ್ತು. ಈ ಹಂತದಲ್ಲಿ ಪುಷ್ತೂನ್ ಬುಡಕಟ್ಟಿನ ಜನ ವಹಾಬಿಗಳ, ದಿಯೋಬಂದಿಗಳ ಸಿದ್ಧಾಂತದ ಆಧಾರದ ಮೇಲೆ ಕಟ್ಟಿದ ಕಟ್ಟರ್ ಇಸ್ಲಾಮೀಪಂಥ ’ತಾಲಿಬಾನ್’. ಮುಲ್ಲಾ ಮುಹಮ್ಮದ್ ಓಮರ್‌ನ ನೇತೃತ್ವ ಅದಕ್ಕೆ ದೊರೆಯಿತು. ಸೌದಿಯ ಹಣ, ಪಾಕಿಸ್ತಾನದ ಜನ ಎರಡೂ ವಿಪುಲವಾಗಿ ಹರಿಯಿತು. ೧೯೯೬ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನ್ ಚುಕ್ಕಾಣಿಯನ್ನೆ ಹಿಡಿದುಬಿಟ್ಟಿತು.

ಮತ್ತಷ್ಟು ಓದು »

15
ಆಕ್ಟೋ

ಕಿವುಡರೂ ಮಾತನಾಡಬಲ್ಲರು,ನೀವು ಮಾತನಾಡಿಸುವ ಮನಸ್ಸು ಮಾಡಬೇಕಷ್ಟೆ

ಮಗುವೊಂದು ಭೂಮಿಗೆ ಬಂದಾಗ ತಂದೆ-ತಾಯಿಯರ ಪಾಲಿಗದು ಸ್ವರ್ಗವೇ ಧರೆಗಿಳಿವಂತ ದಿನ.ಆದರೆ,ವಿಶಿಷ್ಠ ಚೇತನ ಮಕ್ಕಳು ಹುಟ್ಟಿದಾಗ ತಂದೆತಾಯಿಗಳು,ಕುಟುಂಬ ವರ್ಗ ಮಾನಸಿಕವಾಗಿ ಕುಸಿದು ಹೋಗುತ್ತಾರೆ. ಬಡವರು,ಶ್ರೀಮಂತರು,ಅಕ್ಷರಸ್ಥರು,ಅನಕ್ಷರಸ್ಥರು ಬಹುಷಃ ಆ ಸಮಯಕ್ಕೆ ಎಲ್ಲರ ಪ್ರತಿಕ್ರಿಯೆಯೂ ‘ದೇವರು ನಮಗೆ ಹೀಗೇಕೆ ಮಾಡಿದ?” ಎಂಬುದೇ ಆಗಿರುತ್ತದೆ.ವಿಶಿಷ್ಠ ಚೇತನ ಮಕ್ಕಳು ಬೆಳೆಯುತ್ತ ಬೆಳೆಯುತ್ತ ತಂದೆ-ತಾಯಿಯರಿಗೂ ತಮ್ಮದೇ ರೀತಿಯಲ್ಲಿ ಜೀವನ ದರ್ಶನ ಮಾಡಿಸುವ ಗುರುಗಳಾಗಿಬಿಡುತ್ತಾರೆ.

ಇನ್ನು ಸಮಾಜ ಇಂತ ಮಕ್ಕಳನ್ನು ನೋಡುವ ರೀತಿಯೂ ಬೇರೆಯೇ ಆಗಿರುತ್ತದೆ.ಇಂತ ವಿಶಿಷ್ಠ ಚೇತನರನ್ನ ಗೇಲಿ ಮಾಡುತ್ತಾರಲ್ಲ ಅವರೇ ನಿಜವಾಗಿ ವಿಕೃತರು. ಮನೆಗಳಲ್ಲೇ ಇದು ಶುರುವಾಗುತ್ತದೆ,ಮುಂದುವರಿದು ಶಾಲೆಯಲ್ಲೂ ‘ಗುರು’ಗಳು ಅನ್ನಿಸಿಕೊಂಡವರಿಂದ,ಕಡೆಗೆ ಸಮಾಜದಿಂದ .ಇಷ್ಟೆಲ್ಲಾ ಕುಹುಕ – ಕೀಳರಿಮೆಯಿಂದ ಬೆಳೆದವರು ತೋರಿಸುವ ಈ ಪರಿ ಉತ್ಸಾಹವಿದೆಯಲ್ಲ ಇದನ್ನ ಎಲ್ಲ ಸರಿಯಿರುವ ಜನರಿಂದ ನಿರೀಕ್ಷಿಸಲು ಸಾಧ್ಯವಿಲ್ಲ ಬಿಡಿ.ಇಂತ ವಿಶಿಷ್ಠ ಚೇತನ ಮಕ್ಕಳು ಇಂದು ಸಮಾಜದ ವಿವಿಧ ಸ್ಥರಗಳಲ್ಲಿ  ತಮ್ಮ ಸಾಧನೆಯ ಹಾದಿಯನ್ನು ಸ್ಥಾಪಿಸುತ್ತ ಹೊರಟಿದ್ದಾರೆ.

ನಮ್ಮ ಲೇಖಕಿ ‘ಶ್ರೀ ವಿದ್ಯಾ‘ ಅವರಿಗೂ ಕೂಡ ಶ್ರವಣ ದೋಷವಿದೆ.ಆದರೆ, ದೋಷವನ್ನು ಹಿಂದಕಿಕ್ಕಿ ನೊಂದವರ ಕಣ್ಣೀರು ಒರೆಸುವಂತ ಕೆಲಸಕ್ಕೆ ಕೈ ಹಾಕುವುದು ನನ್ನ ಜೀವನದ ಗುರಿ ಅಂತ ಹೊರಟಿದ್ದಾರೆ,ಅವರ ಎಲ್ಲ ಪ್ರಯತ್ನಗಳು ಸಫಲವಾಗಲಿ ಅನ್ನುವುದು ನಿಲುಮೆ ಬಳಗದ ಪ್ರೀತಿಯ ಹಾರೈಕೆ – ನಿಲುಮೆ
– ಶ್ರೀ ವಿದ್ಯಾ

ಈ ದೇಶದಲ್ಲಿ ಎಷ್ಟೋ ಜನರು ಅಂಗವಿಕಲರು.ಕೆಲವರಿಗೆ ಕಿವಿ ಕೇಳಿಸಲ್ಲ, ಮಾತು ಬರಲ್ಲ, ಕಣ್ಣು ಕಾಣಿಸಲ್ಲ, ಕೈ ಕಾಲು ಇಲ್ಲ, ಬುದ್ಧಿ ಕಡಿಮೆ, ಈ ತರಹ ತುಂಬಾ ತೊಂದರೆ ಇರುವವರಿದ್ದಾರೆ. ಆದರೆ ನಾನು ಹೇಳುತ್ತಿರುವುದು ಕಿವುಡರ ಬಗ್ಗೆ. ಇತರ ಅಂಗವಿಕಲರಿಗಿಂತ ಕಿವುಡರಿಗೆ ಸಮಸ್ಯೆ ಹೆಚ್ಚು. ಅವರಿಗೆ ಕಿವಿ ಕೇಳಿಸದಿರುವುದರಿಂದ ಪ್ರಪಂಚ ಏನು? ಹೇಗೆ? ಎಂಬುದೇ ಗೊತ್ತಿರುವುದಿಲ್ಲ. ಕಿವುಡರ ಮನೆಯಲ್ಲಿ ಅವರ ಅಪ್ಪ ಅಮ್ಮಂದಿರು ಸರಿಯಾಗಿ ಬೆಂಬಲ ನೀಡದೆ ನಿರ್ಲಕ್ಷ್ಯ ಮಾಡುತ್ತಿರಬಹುದು. ಏನೆಂದರೆ, ಕೆಲವರು ಯಾಕಪ್ಪಾ ನಮಗೆ ಈ ಮಕ್ಕಳು ಹುಟ್ಟಿದರು ಎಂದು ಬೇಸತ್ತು ಚಿಕ್ಕವಯಸ್ಸಿನಿಂದ ಅವರಿಗೆ ಮಾತು ಕಲಿಸಿಲ್ಲ ಹಾಗೂ ತರಬೇತಿ ಕೊಡಿಸಿಲ್ಲ. ಹಾಗೂ ಅವರನ್ನು ಸನ್ನೆಭಾಷೆ ಶಾಲೆಯಲ್ಲಿ ಹಾಕಿ ಸರಿಯಾಗಿ ಶಿಕ್ಷಣ ನೀಡುತ್ತಿಲ್ಲ. ಮತ್ತಷ್ಟು ಓದು »

13
ಆಕ್ಟೋ

ಮಲಾಳ ಯೂಸುಫ್ ಝಾಯಿಯ ಡೈರಿಯಿಂದ

–  ಡಾ ಅಶೋಕ್ ಕೆ ಆರ್

ಪಾಕಿಸ್ತಾನಿ ತಾಲಿಬಾನಿಗಳಿಂದ ಗುಂಡೇಟು ತಿಂದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಈ ಹೋರಾಟಗಾರ್ತಿ ಮಾಡಿದ ತಪ್ಪಾದರೂ ಏನು? ಹೆಣ್ಣುಮಕ್ಕಳು ಶಾಲೆಗೆ ಹೋಗಬಾರದು ಎಂಬ ತಾಲಿಬಾನ್ ಆದೇಶವನ್ನು ವಿರೋಧಿಸಿದ್ದೇ ಇವಳ ಅಪರಾಧ! ಎರಡು ವರುಷದ ಮುಂಚೆ ಬರೆದ ದಿನಚರಿಗಳನ್ನು ಗುಲ್ ಮಕಾಯಿ ಎಂಬ ಕಾವ್ಯನಾಮದಡಿಯಲ್ಲಿ ಬಿಬಿಸಿ ಉರ್ದುವಿನಲ್ಲಿ ಪ್ರಕಟಣೆಗೆ ನೀಡಿದ್ದು ಇವಳ ಬಹುದೊಡ್ಡ ತಪ್ಪು. ಅಂದಹಾಗೆ ಮಲಾಳ ಯೂಸುಫ್ ಝಾಯಿ ಎಂಬ ಹೆಸರಿನ ಈ ಹೋರಾಟಗಾರ್ತಿಯ ವಯಸ್ಸು ಹದಿನಾಲ್ಕು!

ಶನಿವಾರ ಜನವರಿ 3 : ಭಯವಾಗ್ತಿದೆ
ನಿನ್ನೆ ಕನಸಿನಲ್ಲಿ ಮಿಲಿಟರಿ ಹೆಲಿಕಾಪ್ಟರ್ ಗಳು ಮತ್ತು ತಾಲಿಬಾನಿಗಳು ಬಂದಿದ್ದರು. ನಮ್ಮ ಸ್ವಾಟ್ ಜಿಲ್ಲೆಯಲ್ಲಿ ಸೈನಿಕ ಕಾರ್ಯಾಚರಣೆ ಶುರುವಾದಾಗಿನಿಂದ ಈ ರೀತಿಯ ದುಸ್ವಪ್ನಗಳು ಮಾಮೂಲಾಗಿದೆ. ಅಮ್ಮ ಮಾಡಿಕೊಟ್ಟ ತಿಂಡಿ ತಿಂದು ಶಾಲೆಗೆ ಹೊರಟೆ. ಹೆಣ್ಣುಮಕ್ಕಳು ಶಾಲೆಗೆ ಹೋಗುವುದನ್ನು ತಾಲಿಬಾನಿಗಳು ನಿಷೇಧಿಸಿರುವುದರಿಂದ ನನಗೆ ಭಯವಾಗುತ್ತಿದೆ.
27 ಜನರಲ್ಲಿ 11 ಮಂದಿ ಮಾತ್ರ ಶಾಲೆಗೆ ಬಂದಿದ್ದೆವು. ತಾಲಿಬಾನ್ ಆದೇಶದಿಂದ ಹಾಜರಾತಿ ಕಡಿಮೆಯಾಗಿತ್ತು. ನನ್ನ ಮೂವರು ಗೆಳತಿಯರು ಈ ಆದೇಶದ ನಂತರ ತಮ್ಮ ಕುಟುಂಬದೊಡನೆ ಲಾಹೋರ್, ಪೇಷಾವರ, ರಾವಲ್ಪಿಂಡಿಗೆ ಹೊರಟುಹೋಗಿದ್ದಾರೆ.
11
ಆಕ್ಟೋ

ಮಾನವಿಯತೆಯ ಮತ್ತೊಂದು ಮುಖ

– ಮಧು ಚಂದ್ರ ಭದ್ರಾವತಿ

ಸುಮಾರು ಎರಡು ತಿಂಗಳ ಹಿಂದೆ ನಡೆದ ನೈಜ ಘಟನೆ  ಇದು. ಮಳೆಗಾಲವಾದರೂ ಅಂದು ಮಧ್ಯಾನ್ಹ ಆಗಸದಲ್ಲಿ ರವಿ ತನ್ನ ಉಗ್ರ ಪ್ರತಾಪವನ್ನು ತೋರಿಸುತ್ತಿದ್ದ.  ವಿಜಯ ನಗರದಿಂದ ನಾನು ಕಾರ್ಯ ನಿಮಿತ್ತ ಮೇಲೆ ಜಯನಗರಕ್ಕೆ ಹೋಗುತ್ತಿದ್ದೆ. ದಾರಿಯಲ್ಲಿ ಹೋಗುತ್ತಿರುವಾಗ  ಅಲ್ಲೊಂದು ಶವದ ಮೆರವಣಿಗೆ ಇದಿರಾಯಿತು. ಶವದ ಮುಂದೆ ಪಟಾಕಿ ಸಿಡಿಸುತ್ತ ಅವರ ಸಂಬಂಧಿಕರು, ಹಿಂದೆ ಶವವನ್ನು ತಮ್ಮ ಭುಜದ ಮೇಲೆ ಹೊತ್ತು ಕೊಂಡು ಶವದ ಸಂಬಂಧಿಕರು ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದರು. ಏನಾಯಿತು ಗೊತ್ತಿಲ್ಲ ಇದ್ದಕಿದ್ದ ಹಾಗೆ ಅವರೆಲ್ಲ ಶವವನ್ನು ರಸ್ತೆಯಲ್ಲಿ ಬಿಟ್ಟು ಜಗಳವಾಡ ತೊಡಗಿದರು. ಅವರ ಜಗಳದಲ್ಲಿ ಪಾಪ ಶವ ಅನಾಥವಾಯಿತು ಅ ದಾರುಣ ದೃಶ್ಯವನ್ನು ನೋಡಿದರೆ ಎಂತವರಿಗೂ ಅಯ್ಯೋ ಪಾಪ ಎಂದು ಕನಿಕರ ಉಕ್ಕಿ ಬರುತಿತ್ತು

ಎದ್ದೇಳು ಮಂಜುನಾಥ ಚಿತ್ರದ ಒಂದು ದೃಶ್ಯದಲ್ಲಿ ನಾಯಕ ನಟನ ಅಪ್ಪನ ಅಂತ್ಯಕ್ರಿಯೆ ಕಾರ್ಯಕ್ರಮ. ವರುಣ ಅನಿರೀಕ್ಷಿತವಾಗಿ ತನ್ನ ಪ್ರಭಾವನ್ನು ತೋರಿಸಲು ಆರಂಭಿಸಿದ. ಅಲ್ಲಿ ನೆರೆದಿದ್ದ ಮನೆಯವರು ಮತ್ತು ನೆಂಟರು ಶವವನ್ನು ಅಲ್ಲೇ ಬಿಟ್ಟು ಮಳೆಯಲ್ಲಿ ತಾವು ನೆನೆಯ ಬಾರದು ಎಂದು ಮರದ ಕೆಳಗೆ ಆಶ್ರಯ ಪಡೆದು ಕೊಳ್ಳುವರು. ಆಗ ನಾಯಕ ನಟ, ಶವವಾಗಿದ್ದ ತನ್ನ ತಂದೆಗೆ ಹೇಳುತ್ತಾನೆ ” ನೋಡಪ್ಪ ನೀನು ಬದುಕಿದ್ದಾಗ ಎಲ್ಲ ನಿನ್ನ ಹಿಂದೇನೆ ಇದ್ದರು, ಈಗ ನೋಡು ನಿನ್ನ ಮಳೆಯಲಿ ನೆನೆಯೋಕೆ ಬಿಟ್ಟು ಹೇಗೆ ಎಲ್ಲಾ ಮರದ ಕೆಳಗೆ ನಿಂತಿದ್ದಾರೆ ”

ಮೇಲಿನ ಎರಡು ಸನ್ನಿವೇಶಗಳನ್ನು ನೋಡಿದರೆ ಎಂತವರಿಗು ಒಮ್ಮೆ ಕರಳು ಚುರುಕ್ ಎನ್ನದೆ ಇರುವುದಿಲ್ಲ. ಈಗೊಂದು ಸನ್ನಿವೇಶವನ್ನು ಹೇಳುತ್ತೇನೆ ಮೇಲಿನ ಎರಡಕ್ಕೂ ಇದು ತದ್ವಿರುದ್ದ.

ಅಂದು ಸಹ  ಸೂರ್ಯ ಉಗ್ರವಾಗಿ ಪ್ರಕಾಶಿಸುತ್ತಿದ್ದ. ಲಾರಿಯ ಮೇಲೆ ಶವದ ಮೆರವಣಿಗೆ ಸಾಗಿತ್ತು . ಎಲ್ಲೋ ದೂರದಿಂದ ತೆಳ್ಳನೆಯ ಬಿಳಿ ಪಂಚೆ, ಕತ್ತಲ್ಲಿ ಮಫ್ಲರ್ , ತೆಲೆಯ ಮೇಲೆ ಒಂದು ಟೋ

ಬಹುಶ ಮೇಲಿನ ಎರಡು ಸನ್ನಿವೇಶಗಳಿಗೆ ಕೆಳಗಿನದನ್ನು ಹೋಲಿಕೆ ಮಾಡಿದರೆ ಮಾನವರ ಕರಾಳ ಮುಖದ ಪರಿಚಯ ನಮಗಾಗುತ್ತದೆ. ಜೀವ ಇದ್ದಾಗ ಮಾತ್ರ ಬೆಲೆ, ಇಲ್ಲದಿದ್ದಾಗ ಏನು ಇಲ್ಲ.ಪಿ ಮತ್ತು ಹಣೆಯ ಮೇಲೆ ನಾಮ ಇಟ್ಟುಕೊಂಡ ವಯಸ್ಸಾದ ಹಣ್ಣು ಹಣ್ಣು ಹಿರಿಯ ಜೀವವೊಂದು ಓಡೋಡಿ ಬಂದು ಲಾರಿಯ ಮೇಲೇರಿ. ಶವದ ಪಕ್ಕಕ್ಕೆ ನಿಂತು ತಾವು ತಂದಿದ್ದ ಛತ್ರಿಯನ್ನು ಹಿಡಿದು ” ಅಯ್ಯೋ, ನನ್ನಪ್ಪ ಬಿಸಿಲಿನ ತಾಪಕ್ಕೆ ಬೆಂದು ಹೋಗ್ತಿದಿಯಲ್ಲಪ್ಪಾ” ಎನ್ನುತ್ತಾ ಶವದ ಮುಖಕ್ಕೆ ನೆರಳು ಮಾಡಿದರು. ಈ ಮಾತು ಹೃದಯದ ಅಳದಿಂದ ಬಂದಂತಹ ಮಾತು. ಅಂದು ನಡೆಯುತ್ತಿದದು ಮತ್ತಾರದು ಅಲ್ಲ ಅ ನ ಕೃಷ್ಣರಾಯರ ಅಂತಿಮ ಯಾತ್ರೆ ಮತ್ತು ಅ ಹಿರಿ ಜೀವ ಮತ್ತಾರು ಅಲ್ಲ ಕನ್ನಡದ ಅಸ್ತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್.

ಹುಟ್ಟು ಆಕಸ್ಮಿಕ ಸಾವು ಅನಿವಾರ್ಯ. ಇಂತಹ ಪರಿಸ್ಥಿತಿಯಲ್ಲಿ ಬದುಕಿದ್ದಾಗ ಹೇಗೆ ನಾವು ಬೇರೆಯವರನ್ನು ಇಷ್ಟ ಪಡುತ್ತೆವೋ ಹಾಗೆ ಅವರು ಇಲ್ಲವಾದಗಲು ಅಷ್ಟೇ ಪ್ರೀತಿಯಿಂದ ನೆನೆಯಬೇಕು.

ಚಿತ್ರಕೃಪೆ : ಗೂಗಲ್
*******************************