ವಿಷಯದ ವಿವರಗಳಿಗೆ ದಾಟಿರಿ

Recent Articles

27
ಆಗಸ್ಟ್

ಕಾನೂನಿನಂಗಳ ೭ : ಗಂಡ-ಹೆಂಡತಿ ಉತ್ತರ ದಕ್ಷಿಣ- ವಿಚ್ಛೇದನ

-ಉಷಾ ಐನಕೈ  ಶಿರಸಿ

ವಿವಾಹ  ಒಂದು ಪವಿತ್ರ ಧಾರ್ಮಿಕ ಸಂಸ್ಕಾರ. ಇದರ ಹಿಂದೆ ಮದುವೆಯಾದ ಗಂಡು -ಹೆಣ್ಣಿಗೆ ಅವರದೇ ಆದ ಸಾಮಾಜಿಕ ಹಾಗೂ ಭಾವನಾತ್ಮಕ ಬದ್ಧತೆ ಇರುತ್ತದೆ. ಕಷ್ಟವಿರಲಿ, ಸುಖವಿರಲಿ ಗಂಡ-ಹೆಂಡತಿ ಸಮನಾಗಿ ಹಂಚಿ ಕೊಂಡು ಸಹಬಾಳ್ವೆ ನಡೆಸಬೇಕೆಂಬುದೇ ವಿವಾಹ ಬಂಧನದ ಹಿಂದಿರುವ ತತ್ವ. ಅದಕ್ಕಾಗೇ ಪತ್ನಿಗೆ ‘ಅರ್ಧಾಂಗಿ’ ಎಂದು ಕರೆದಿರುವುದು. ಆದರೆ ಆಧುನಿಕ ಯುಗದಲ್ಲಿ ಇದು ಸಾಧ್ಯವೇ? ಬದಲಾದ ಕಾಲ, ಆಧುನಿಕ ಶಿಕ್ಷಣ, ವೈಚಾರಿಕ ಸ್ವಾತಂತ್ರ್ಯ, ಸಮಾನತೆಯ ಹೋರಾಟ ಮುಂತಾದ ಬೆಳವಣಿಗೆಯಲ್ಲಿ ಸಾಂಪ್ರದಾಯಿಕ ಮೌಲ್ಯಗಳು ಉಳಿದುಕೊಳ್ಳಲು ಸಾಧ್ಯವೇ? ಆಧುನಿಕ ಸಂಪರ್ಕ, ವೈವಿಧ್ಯಮಯ ಮಾಧ್ಯಮಗಳು ಹಾಗೂ ವ್ಯಕ್ತಿ ಸ್ವಾತಂತ್ರ್ಯದ ಹಂಬಲಗಳ ನಡುವೆ ಪರಸ್ಪರ ನಂಬಿಕೆ, ವಿಶ್ವಾಸ, ಸಹನೆ, ಸಹಬಾಳ್ವೆ ಸ್ವಾಭಾವಿಕವಾಗೇ ಶಿಥಿಲವಾಗತೊಡಗಿವೆ. ವೈಯಕ್ತಿಕ ಪ್ರತಿಷ್ಠೆ ದಿನದಿಂದ ದಿನಕ್ಕೆ ಗಂಡು-ಹೆಣ್ಣು ಇಬ್ಬರಲ್ಲೂ ಹೆಚ್ಚಾಗತೊಡಗಿವೆ. ಗಂಡ-ಹೆಂಡತಿಯ ನಡುವೆ ಹೆಚ್ಚು ವಯಸ್ಸಿನ ಅಂತರವಿದ್ದರೂ ಕಲಹ, ಅಂತರವೇ ಇಲ್ಲದಿದ್ದರೂ ಕಲಹ. ಹೀಗೆ ಹಲವಾರು ಕಾರಣಗಳಿಂದ ವಿವಾಹ ವಿಚ್ಛೇದನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

ದಾಂಪತ್ಯದ ನಡುವೆ ವಿರಸ ಹಿಂದೆಯೂ ಇತ್ತು. ಆದರೆ ಆಗ ನ್ಯಾಯಾಲಯದ ಮೆಟ್ಟಿ ಲೇರುವ ಅವಕಾಶ ಮತ್ತು ಧೈರ್ಯ ಎರಡೂ ಇಲ್ಲವಾಗಿತ್ತು. ಅದರಲ್ಲೂ ಹೆಣ್ಣು ದನಿ ಇಲ್ಲದೇ ಸಹಿಸಿಕೊಂಡೇ ಬಾಳಬೇಕಾಗಿತ್ತು. ಆದರೆ ಇಂದು ಪರಿಸ್ಥಿತಿ ಹಾಗಿಲ್ಲ. ಚಿಕ್ಕ ಚಿಕ್ಕ ಕಾರಣಗಳಿಗೂ ಕಾನೂನಿಗೆ ಮೊರೆಹೋಗುವುದು ಸ್ವಾಭಾವಿಕವಾಗಿದೆ. ಮಹಿಳಾ ಶೋಷಣೆಯನ್ನು ತಪ್ಪಿಸುವ ಸಲುವಾಗಿ ಹುಟ್ಟಿ ಕೊಂಡ ಕಾನೂನುಗಳು ಇದಕ್ಕೆ ಅವಕಾಶ ಮಾಡಿ ಕೊಡುತ್ತಿವೆ.

ಮತ್ತಷ್ಟು ಓದು »

26
ಆಗಸ್ಟ್

ಬರ-ಜೋಳಿಗೆ

– ಅಕುವ

ಬಾನು ನೋಡುತಿದ್ದ ಉಳುವಾತ
ಹನಿಯಾದರೂ ಉದುರಲೆಂದೆ
ಮತ್ತೆ ಬಿಡದ ಗರ
ನಾಡಿಗೆಲ್ಲಾ ಬರ !

ಹೊರಟು ನಿಂತಿಹರು ನಮ್ಮವರು
ವಿದೇಶ ಯಾತ್ರೆಗೆ
ಪ್ರಾಯಶ: ಸೊರಗಿದವರಿಗೆ ತರಲೆಂದು
ಹಸಿವಾಗದ ಮಾತ್ರೆ !
ಮತ್ತಷ್ಟು ಓದು »

24
ಆಗಸ್ಟ್

ಹೈದರಾಬಾದ್ ನಲ್ಲಿರುವ ಕನ್ನಡಿಗರೂ, ಬೆಂಗಳೂರಿನಲ್ಲಿರುವ ತೆಲುಗರೂ….

– ಬಿಂದುಮಾಧವಿ ಪಿ

ಈಗ ನಾನು ಯಾವ ವಿಷಯದ ಬಗ್ಗೆ ಬರೆಯಲಿ? ಮೊದಲಿಗೆ ಕನ್ನಡ ಚಲನಚಿತ್ರಗಳು ಇತರ ರಾಜ್ಯಗಳಲ್ಲಿ ಭಿತ್ತರವಾಗದಿರುವ ಬಗ್ಗೆ ಬರೆಯಲೋ ಅಥವಾ, ಕೊನೆಗೂ ತೆಲುಗು ಚಿತ್ರಕ್ಕೇ ಶರಣಾಗಬೇಕಾದ ನನ್ನ ಸ್ಥಿತಿಯ ಬಗ್ಗೆ ಬರೆಯಲೋ?

ನೋಡಿ ನಮಗಂತೂ ನಮ್ಮ ದೇಶ ಭಾಷೇ ಎರಡರ ಮೇಲೂ ಅಪಾರ ಪ್ರೀತಿ. ಆದರೆ ಏನು ಮಾಡುವುದು? ಬೆಂಗಳೂರಿನಲ್ಲಿ ಎಲ್ಲ ಭಾಷೆಗಳೂ ಯಾರ ಹಂಗಿಲ್ಲದೆ, ರಾರಾಜಿಸುತ್ತಿರುತ್ತವೆ, ಆದರೆ, ಇತರ ರಾಜ್ಯಗಳಲ್ಲಿ, ಅದೂ ನೆರೆ ರಾಜ್ಯಗಳಲ್ಲೂ ನಮಗೆ ಕನ್ನಡದ ಇರುವಿಕೆ ಭೂತಗನ್ನಡಿ ಹಿಡಿದು ಹುಡುಕಿದರೂ ಸಿಗುವುದಿಲ್ಲ. ಏಕೆ ಹೀಗೆ?

ನಾವೂ ಹೈದರಾಬಾದಿಗೆ ಬಂದು ನಾಲ್ಕು ವರ್ಷಗಳಾಗುತ್ತಾ ಬಂತು. ಚಿತ್ರರಂಗದಲ್ಲಿ ಕನ್ನಡ ಚಿತ್ರ ನೋಡುವ ಆಸೆ ಬಿಡಿ, ಟಿವಿಯಲ್ಲಿ ಕನ್ನಡ ಚಾನಲ್ ಹುಡುಕೋಣವೆಂದರೆ, ಒಂದಾರೂ ಸಿಗಬೇಡವೆ? ಇಲ್ಲವೇ ಇಲ್ಲ.  ಹಾಗಂತ ಇಲ್ಲಿ ಕನ್ನಡಿಗರು ಇಲ್ಲವೆಂದಿಲ್ಲ. ನನಗೆ ಎಲ್ಲಿ ಹೋದರೂ ಕನ್ನಡಿಗರು ಸಿಗುತ್ತಿರುತ್ತಾರೆ. ನಮ್ಮ ಮಗಳ ಶಾಲೆಯಲ್ಲಿ ಪ್ರಾಂಶುಪಾಲರು ಕನ್ನಡಿಗರು, ಅವಳ ತರಗತಿಯ ಉಪಾಧ್ಯಾಯಿನಿ ಕನ್ನಡಿಗರು, ಇಲ್ಲಿ ವಿಧ್ಯಾರ್ಥಿಗಳಲ್ಲಿ ಕನ್ನಡಿಗರು ಯಾರು ಎಂದು ಕೇಳಿ ಅವರ ಪರಿಚಯವನ್ನೂ ಮಾಡಿಕೊಂಡು ಆಯಿತು. ಆದರೆ ಕನ್ನಡ ನ್ಯೂಸ್ ಪೇಪರ್ ಆಗಲಿ, ಕನ್ನಡದ ಪುಸ್ತಕಗಳಾಗಲಿ, ಕನ್ನಡದ CD ಗಳಾಗಲಿ ಇಲ್ಲಿ ದೊರಕುವುದಿಲ್ಲ. ಅದೇ ಬೆಂಗಳೂರಿನಲ್ಲಿ, ಅಲ್ಲಿ ಕೂಡ ಅನೇಕ ಪ್ರದೇಶಗಳಲ್ಲಿ ಕನ್ನಡ ಪೇಪರ್, ಕನ್ನಡ ಚಿತ್ರದ CD ಗಳು ದೊರಕುವುದಿಲ್ಲ!! ಆದರೆ ಇತರ ಭಾಷೆಯ ಪತ್ರಿಕೆಗಳು, cd ಗಳು, ಜನರು ಎಲ್ಲಾ ಸಿಗುತ್ತಾರೆ.

ಮತ್ತಷ್ಟು ಓದು »

23
ಆಗಸ್ಟ್

ನನ್ನ ಪ್ರೀತಿಯ ಸ್ಯಾಮ್ ಅಲೆ… ಅವಳು ಬೀಸಿದಳು ಬಲೆ…

-ಸುಗುಣ ಮಹೇಶ್

ನೀನು ತೀರಾ ಗಾಂಧಿವಾದಿ ಏನು ಆಗೋಕ್ಕೆ ಹೋಗಬೇಡ್ವೇ, ಸರ್ಕಾರ ಉದ್ದಾರ ಮಾಡೋಕ್ಕೆ ಹೋಗೋದು ಸಾಕು ಸುಮ್ನೇ ಮನೆನಲ್ಲಿ ಕಾರಿದೆ ಯಾರಾದ್ರು ಡ್ರೈವರ್ ಸಿಕ್ತಾರ ನೋಡು ದಿನದ ಬಾಟಾ ಕೊಟ್ಟು ಹೋಗಿ ಬರೋದು ಕಲ್ತಕೋ..!!!
ಹೂ ನಾವುಗಳು ವಿದ್ಯಾವಂತರು, ಬುದ್ಧಿವಂತರೇ ಹಿಂಗೆ ಮಾಡಿದ್ರೆ ಹೇಗೆ… ಆದಷ್ಟು ಸರ್ಕಾರಿ ವಾಹನಗಳನ್ನ ಉಪಯೋಗಿಸಿಕೊಂಡು ಓಡಾಡಬೇಕು… ಜನ ಎಲ್ಲರೂ ಕಾರ್, ಬೈಕ್ ಅಂತಲೇ ಓಡಾಡ್ತಾ ಇದ್ದು, ಸ್ವಲ್ಪನು ಮಯ್ಯಿ ನೋಯಿಸೋಕ್ಕೆ ಇಷ್ಟಪಡದೇ ಹೋದ್ರೇ ಹೆಂಗೆ.. ಹೀಗ್ ಮಾಡೇ ಪೆಟ್ರೋಲ್, ಡೀಸಲ್ ಬೆಲೆ ಗಗನಕ್ಕೆ ಹೋಗಿರೋದು… ಜೊತೆಗೆ ವಾಯು ಮಾಲಿನ್ಯವೂ ಹೆಚ್ಚಾಗಿರೋದು.
ಅಕ್ಕನ ಮಾತಿಗೆ ಬಾರಿ ಗಾಂಧಿವಾದದ ಮಾತು ಆಡಿ ಮಧ್ಯಾಹ್ನ ಮೆಜೆಸ್ಟಿಕ್ ಬಸ್ ಹತ್ತಿದ್ದೆ… ಅದು ಆಗಲೆ ೨ಗಂಟೆ ಊಟ ಬೇರೆ ಬಿಸಿಬಿಸಿ ತಿಂದಿದ್ದೇ… ಮೆಜೆಸ್ಟಿಕ್ ಬೇಡ ಯಲಹಂಕಗೇ ಸೀದ ಹೋಗುವ ಬಸ್ಗೆ ಹೋಗಿ ಅಲ್ಲಿಂದ ದೇವನಹಳ್ಳಿಗೆ ಹೋಗು ಅಂತ ಅಂದ್ರು ಮನೆನಲ್ಲಿ… ಮಗ ಮೆಜೆಸ್ಟಿಕ್ ನೋಡಿಲ್ಲ ಅವನಿಗೂ ತೋರಿಸಿದ ಹಾಗೆ ಆಗುತ್ತೆ ಎಂದು ಒಣಜಂಭವೋ, ಪ್ರತಿಷ್ಠೆಯೋ ಮಾಡಿ ಬಸ್ ಹತ್ತಿದೆ. ಮೆಜೆಸ್ಟಿಕ್ ಗೆ ೨೪೪ಸಿ ಬಸ್ ಹತ್ತಿ ಇಳಿಯುವ ಮುನ್ನ ತಾಮುಂದು ನಾಮುಂದು ಎಂಬಂತೆ ಒಬ್ಬರ ಮೇಲೆ ಒಬ್ಬರು ಮೈಮೇಲೆ ಬಿದ್ದು ಇಳಿದಿದ್ದಾಯ್ತು…
21
ಆಗಸ್ಟ್

ಟಾಯ್ಲೆಟ್ ವಾಸು ಅಂದ್ರೆ ಯಾರು ಗೊತ್ತಾ?

-ಚಕ್ರವರ್ತಿ ಸೂಲಿಬೆಲೆ

”ಪ್ರಚಾರದ ಹೆಸರಲ್ಲಿ ಹೊಸಹೊಸ ಮಾರ್ಗಗಳನ್ನು ಹುಡಕಲಾಯ್ತು. ನಾಟಕಗಳು, ಕಥೆಗಳು, ಎಲ್ಲವೂ ಶೌಚಾಲಯದ ಕುರಿತಂತೆಯೇ. ಕುಂತರೂ ನಿಂತರೂ ಶೌಚಾಲಯಗಳೇ. ಕೊನೆಗೆ ಕನಸಿನಲ್ಲೂ ವಾಸು ದೇಶ್‌ಪಾಂಡೆ ಶೌಚಾಲಯವನ್ನೆ ಕಂಡಿದ್ದರೆ ಅಚ್ಚರಿಯಿಲ್ಲ! ಈ ಕಾರಣದಿಂದಲೇ ಸ್ಥಳೀಯ ಆರು ಜಿಲ್ಲೆಗಳಲ್ಲಿ ವಾಸು ದೇಶ್‌ಪಾಂಡೆ `ಟಾಯ್ಲೆಟ್ ವಾಸು’ವಾಗಿಯೇ ಜನಪ್ರಿಯರಾದರು”

ವಾಸು ದೇಶ್‌ಪಾಂಡೆ ಅಲಿಯಾಸ್ ಟಾಯ್ಲೆಟ್ ವಾಸು! ಗುಲ್ಬರ್ಗಾದ ಸೇಡಮ್ಮಿನ ಹುಡುಗ. ಬಡತನದಲ್ಲಿ ಬೆಳೆದ, ಕಷ್ಟಪಟ್ಟು ಓದಿದ. ಕೊನೆಗೆ ಇಂಜಿನಿಯರ್ರೂ ಆದ. ಇನ್ಫೋಸಿಸ್‌ನಲ್ಲಿ ಕೆಲಸಕ್ಕೆ ಸೇರಿಕೊಂಡು ಚೆನ್ನಾಗಿ ದುಡಿದ. ಇಷ್ಟೇ ಆಗಿದ್ದರೆ ಇದೊಂದು ಕನ್ನಡ ಫಿಲಮ್ಮಿನ ಕಥೆಯಂತಾಗಿ ಮುಗಿದುಹೋಗುತ್ತಿತ್ತು. ಹಾಗಾಗಲಿಲ್ಲ. ಊರಿನ ಕೆಲಸ ವಾಸುವನ್ನು ಬಿಡಲಿಲ್ಲ. ಬೆಂಗಳೂರು ಎಲ್ಲರನ್ನು ಕಾಡಿದಂತೆ ಮೋಹವಾಗಿ ಕಾಡಲಿಲ್ಲ.

ಉತ್ತರ ಕರ್ನಾಟಕಕ್ಕೆ ನೆರೆ ಹಾವಳಿ ಅಪ್ಪಳಿಸಿದಾಗ ಇನ್ಫೋಸಿಸ್ ಗುಲ್ಬರ್ಗಾದ ನೆರೆ ಪೀಡಿತ ಪ್ರದೇಶಗಳಲ್ಲಿ ಯೋಜನೆಗಳನ್ನು ಕೈಗೆತ್ತಿಕೊಂಡಿತು. ಮನೆ ಕಟ್ಟಿಕೊಡುವ ಸಾಮಾಜಿಕ ಜವಾಬ್ದಾರಿ ನಿರ್ವಹಿಸಲು ಮುಂದೆ ಬಂತು. ಸ್ಥಳೀಯವಾಗಿ ಸಾಥ್ ಕೊಡಲು ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯಂತಹ ಪ್ರಾಮಾಣಿಕ ಸಂಸ್ಥೆಯೇನೋ ಸಿಕ್ಕಿತು. ಆದರೆ ಈ ಕೆಲಸವನ್ನು ತನ್ನದೆಂದುಕೊಂಡು ಸಮರ್ಥವಾಗಿ ಮಾಡುವವರು ಯಾರಾದರೊಬ್ಬರು ಬೇಕಲ್ಲ? ಆಗ ಇನ್ಫೋಸಿಸ್‌ಗೆ ಕಂಡ ಬೆರಗುಗಣ್ಣಿನ ಇಂಜಿನಿಯರ್ ವಾಸು ದೇಶ್‌ಪಾಂಡೆ. ಅಮೆರಿಕಾದಲ್ಲೆಲ್ಲ ಇದ್ದು ಬಂದ ಹುಡುಗ; ಮತ್ತೆ ಮರಳಿ ಹೊರಡಲು ಸಜ್ಜಾಗಿದ್ದ. ಆದರೆ ಈಗ ಹೊಸತೊಂದು ಆಸಕ್ತಿಕರ ಯೋಜನೆ ಕೈಬೀಸಿ ಕರೆಯಿತು. ಹುಟ್ಟೂರಿನ, ಜಿಲ್ಲೆಯ, ಕೊನೆಗೆ ಹಿಂದುಳಿದ ಎಂಬ ಹಣೆಪಟ್ಟಿ ಹೊತ್ತ ತನ್ನ ಭಾಗದ ಸೇವೆ ಮಾಡುವ ಅವಕಾಶ ಬಯಸಿಬಂದಾಗ ಆಗುವುದಿಲ್ಲ ಎನ್ನುವುದು ಹೇಗೆ?

ಮತ್ತಷ್ಟು ಓದು »

17
ಆಗಸ್ಟ್

ಬಹುಮಾನ ನೋ! ಅಪಮಾನ ನೋ !!

ಮಧುಚಂದ್ರ ಭದ್ರಾವತಿ

ಚಂದ್ರಶೇಖರ ಕಂಬಾರರಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಾಗ ಕೆಲವು ಹಿರಿಯ ಕವಿಗಳನ್ನು ಮತ್ತು ಖ್ಯಾತ ವಿಮರ್ಶಕರನ್ನು ಪತ್ರಕರ್ತರು ಸಂದರ್ಶಿಸಿ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಲು ಕೇಳಿ ಕೊಂಡರು. ಕೆಲವರು ಕನ್ನಡಕ್ಕೆ ಸಂದ ಬಹು ದೊಡ್ಡ ಗೌರವ ಎಂದು ಹೇಳಿ ಅಭಿನಂದಿಸಿದರು. ಮತ್ತೆ ಕೆಲವರು ತಮಗೆ ಪುರಸ್ಕಾರ ಸಂದಿಲ್ಲ ಎಂದು ಅವರನ್ನು ಹಿಯಾಳಿಸಿ ” ಜ್ಞಾನಪೀಠ ಪುರಸ್ಕಾರಕ್ಕೆ ಬೆಲೆಯೇ ಇಲ್ಲ , ಯಾರು ಬೇಕಾದರೂ ಪಡೆಯ ಬಹುದು ” ತುಂಬಾ ಕೆಳ ಮಟ್ಟದಲ್ಲಿ ಮಾತನಾಡಿದರು . ಅ ಹಿರಿಯ ಕವಿಗಳ ಹೆಸರು ಬೇಡ. ಯಾಕೆಂದರೆ ಅವರ ಸಾಧನೆಯು ಕಡಿಮೆ ಏನಿಲ್ಲ.

ಇದು ಕೇವಲ ಕಂಬಾರರಿಗೆ ತಟ್ಟಿದ ಬಿಸಿಯಲ್ಲ , ಅಂದು ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆದ ಕುವೆಂಪು ಅವರು ಅದರ ಬಿಸಿಗೆ ಹೊರತಲ್ಲ. ಮತ್ತೊಬ್ಬ ಖ್ಯಾತ ಕವಿ “ನೀವು ಕುವೆಂಪುರವರನ್ನು ಕವಿ ಎಂದು ಕರೆದರೆ , ನಾನು ಸಹ ಕವಿಯಲ್ಲ ” ಎಂದು ಘಂಟಘೋಷವಾಗಿ ಸಾರಿ ಹೇಳಿದರು. ಹಾಗೆ ಕೆಲವು ನವೋದಯ ಕಾಲದ ಒಂದು ವರ್ಗದ ಕವಿಗಳು ಇದನ್ನು ಬೆಂಬಲಿಸಿ , ಕುವೆಂಪು ಅವರ ಮೇಲೆ ಹರಿಹಾಯ್ದರು,(ಅ ವರ್ಗದ ಕವಿಯೋಬ್ಬರಿಗೆ ಕೊನೆಗೂ ಜ್ಞಾನಪೀಠ ಪ್ರಶಸ್ತಿ ಸಂದಿತು ಎನ್ನುವುದು ಇಲ್ಲಿ ಉಲ್ಲೇಖಾರ್ಹ ). ಕೊನೆಗೆ ಕುವೆಂಪು ಅವರಿಗಿದ್ದ ಅಭಿಮಾನಿಗಳ ಬೆಂಬಲ ನೋಡಿ,ಅವರೆಲ್ಲರೂ ಸುಮ್ಮನಾದರು. ಇದೆ ರೀತಿಯ ಅನುಭವ ಖ್ಯಾತ ನಾಟಕಕಾರ ಗಿರೀಶ್ ಕಾರ್ನಾಡ್ ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಕೂಡ ಬಾಯಿ ಹದಗೆಡಿಸಿಕೊಂಡ ಕವಿ ವರ್ಗವು ಇತ್ತು.

ಕವಿಗಳನ್ನು ವಿಶಾಲ ಹೃದಯಿಗಳು ಎನ್ನುತ್ತಾರೆ ಯಾವ ಸಂಧರ್ಭದಲ್ಲಿ ಎನ್ನುವುದು ಇಲ್ಲಿ ಅಪವಾದವಾಗಿ ಬಿಟ್ಟಿದೆ.

ಇದಕ್ಕೆ ಟಾಂಗ್ ಕೊಡುವ ಸಂಧರ್ಭವೊಂದು ತುಂಬಾ ಹಿಂದೆ ಜರುಗಿತ್ತು. ಇಲ್ಲಿ ಉಲ್ಲೇಖಿಸುವುದು ಉಚಿತವೆನಿಸುತ್ತದೆ.

ಬೇಡರ ಕಣ್ಣಪ್ಪ ಚಿತ್ರದ ಹಾಡು ” ಶಿವಪ್ಪ ಕಾಯೋ ತಂದೆ , ಮೂರು ಲೋಕ ಸ್ವಾಮಿ ದೇವ ” ಎಲ್ಲರಿಗು ಚಿರಪರಿಚಿತವಾದುದು. ರಾಜಣ್ಣ ಅವರು ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಟ್ಟ ಚಿತ್ರ. ಅ ಚಿತ್ರದ ” ಶಿವಪ್ಪ ಕಾಯೋ ತಂದೆ , ಮೂರು ಲೋಕ ಸ್ವಾಮಿ ದೇವ ” ಹಾಡನ್ನು ಚಿತ್ರದ ನಿರ್ದೇಶಕ ಎಚ್ ಎಲ್ ನ್ ಸಿಂಹ ಅವರು ಆನೇಕಲ್ ಗ್ರಾಮದ ಕಡೆಗೆ ಹೋದಾಗ ಅಲ್ಲಿ ದನ ಕಾಯುತ್ತಿದ್ದ ನಂಜುಡಪ್ಪ ಎನ್ನುವವನು ಹಾಡುತಿದ್ದರು, ಹಾಡಿನ ಸಾಹಿತ್ಯ ತುಂಬಾ ಚೆನ್ನಾಗಿ ಇದ್ದುದರಿಂದ ನಿರ್ದೇಶಕರು ಪೂರ್ತಿ ಹಾಡನ್ನು ಬರೆಸಿಕೊಂಡು ಬೇಡರ ಕಣ್ಣಪ್ಪ ಚಿತ್ರದಲ್ಲಿ ಅಳವಡಿಸಿಕೊಂಡರು. ಮುಂದೆ ಚಿತ್ರ ಬಿಡುಗಡೆಯಾಯಿತು, ಎಲ್ಲಡೆ ಅದ್ಧುತ ಪ್ರದರ್ಶನ ಕಂಡಿತು. ಉತ್ತಮ ನಟ , ನಿರ್ದೇಶಕ, ಸಂಗೀತಕ್ಕೆ ಪ್ರಶಸ್ತಿಗಳು ಸಂದವು. ಅಂದು ಸೂಪರ್ ಹಿಟ್ ಅದ ” ಶಿವಪ್ಪ ಕಾಯೋ ತಂದೆ , ಮೂರು ಲೋಕ ಸ್ವಾಮಿ ದೇವ ” ಸಾಹಿತ್ಯ ಬರೆದ ಕವಿ ನಂಜುಡಪ್ಪನವರಿಗೆ ಅದರ ಶ್ರೇಯ ಸಲ್ಲಲಿಲ್ಲ. ಇದನ್ನು ಅರಿತ ಪತ್ರಕರ್ತರು ನಂಜುಡಪ್ಪನವರನ್ನು ಸಂದರ್ಶಿಸಿ ಕೇಳಿಯೇ ಬಿಟ್ಟರು ” ಎಲ್ಲರಿಗೂ ಪ್ರಶಸ್ತಿ ಸಿಕ್ಕಿದೆ , ನಿಮ್ಮ ಹಾಡು ಜಗತ್ ಪ್ರಸಿದ್ದವಾಗಿದೆ , ನಿಮಗೆ ಪ್ರಶಸ್ತಿ ದಕ್ಕಿಲ್ಲವೆಂದು ಬೇಜಾರು ಆಯಿತೇ “. ಅದಕ್ಕೆ ಕವಿ ನಂಜುಂಡಪ್ಪನವರು ಕೊಟ್ಟ ಉತ್ತರಕ್ಕೆ ಪತ್ರಕರ್ತರು ತೆಲೆದೊಗಿದರು.

ಮತ್ತಷ್ಟು ಓದು »

15
ಆಗಸ್ಟ್

ಈ ಸ್ವಾತಂತ್ರ್ಯಕ್ಕೆ ಅಸ್ಸಾಮಿನ ಉರಿಯ ಅರಿವುಂಟೇ?

– ಸಂತೋಶ್ ತಮ್ಮಯ್ಯ

ನೇಪಾಳದ ಹಿಂದೂ ರಾಜನನ್ನು ಪದಚ್ಯುತಗೊಳಿಸಿದಾಗ ಭಾರತದಲ್ಲಿ ಯಾವ ಕಮ್ಯುನಿಷ್ಟ್ ಕಾಮ್ರೆಡನಿಗೂ ಪೆಟ್ಟು ಬಿದ್ದಿರಲಿಲ್ಲ. ಪಾಕಿಸ್ಥಾನದ ರಿಂಕಲ್ ಕುಮಾರಿಯನ್ನು ಮತಾಂಧರು ಮತಾಂತರಿಸಿದಾಗ ಇಲ್ಲಿನ ಯಾವ ಹಿಂದುವೂ ಬೀದಿಗೆ ಇಳಿದಿರಲಿಲ್ಲ. ಅಲ್ಲೆಲ್ಲೋ ಪಾಶ್ಚಾತ್ಯ ದೇಶದಲ್ಲಿ ಗಣಪತಿ, ಲಕ್ಷ್ಮಿ, ಬ್ರಹ್ಮದೇವರನ್ನು ಹೆಂಗಸರ ಚಡ್ಡಿಗಳಲ್ಲಿ ಚಿತ್ರಿಸಿ ರಾಂಪ್‌ವಾಕ್ ಮಾಡಿದಾಗಲೂ ಹಿಂದುಗಳಾರೂ ಬಸ್ಸುಗಳಿಗೆ ಕಲ್ಲು ಬಿಸಾಡಿರಲಿಲ್ಲ. ಅದಾವುದೋ ಕೆರೆಬಿಯನ್ ದೇಶದಲ್ಲಿ ಹಿಂದುವಾದವನು ಅಧ್ಯಕ್ಷನಾಗಬಾರದು ಎಂದಾಗ ಜಗತ್ತಿನಾದ್ಯಂತ ಹಿಂದುಗಳಾರೂ ಖಂಡಿಸಲಿಲ್ಲ. ಅವೆಲ್ಲಾ ಬಿಡಿ. ಕಾಶಿ ವಿಶ್ವನಾಥನ ದರ್ಶನಕ್ಕೆ ಹೋದರೂ ಹಿಂದುಗಳಿಗೆ ಪಕ್ಕದ ಪರಮ ಅಸಹ್ಯವಾದ ಕಟ್ಟಡವೊಂದು ಸಾಮರಸ್ಯದ ಪ್ರತೀಕದಂತೆಯೇ ಕಾಣುತ್ತದೆ. ಅಯೋಧ್ಯೆಯ ರಾಮ ಇನ್ನೂ ಟೆಂಟ್ ವಾಸಿಯಾದರೂ ಬಹುತೇಕರಿಗೆ ಅದೇನೂ ಅಂಥ ಕೊರಗಿನಂತೆ ಕಾಣುವುದಿಲ್ಲ. ಯಾವ ಹಿಂದೂ ಸಂನ್ಯಾಸಿಯೂ ಮೌಲ್ವಿಗಳಂತೆ ಅಬ್ಬರಿಸುವುದಿಲ್ಲ. ಒಂದು ವೇಳೆ ಸಂನ್ಯಾಸಿ ಅಬ್ಬರಿಸಿದರೂ ಯಾರಿಗೂ ಹೆದರಿಕೆಯಾಗುವಂತೆ ಕಾಣುವುದೂ ಇಲ್ಲ.

ಅದು ಹಿಂದುವಿನ ಅತಿಯಾದ ಸಾತ್ತ್ವಿಕತೆಯೋ ಅಥವಾ ಭಂಡತನ ಮಿಶ್ರಿತ ಅತಿಯಾದ ಭಯವೋ ಎಂದು ವಿಶ್ಲೇಷಿಸುವುದು ಕಷ್ಟ. ಆದರೆ ಆತನಿಗೆ ಹಿಂದು ಎಂಬ ಕಾರಣಕ್ಕೆ ಸಿಟ್ಟು ಬರದಿರುವುದಂತೂ ಸತ್ಯ. ಮೇಲಿನ ಎಲ್ಲಾ ಸಂದರ್ಭಗಳಲ್ಲಿ ಅದು ಸಾಭೀತಾಗಿದೆ. ಬೀದಿಗಿಳಿಯಲು, ಪ್ರತಿಭಟಿಸಲು ಹಿಂದುವಿಗೆ ದಿನಕ್ಕೊಂದು ಕಾರಣವಾದರೂ ಸಿಗುತ್ತವೆ. ಆದರೆ ಅದು ನಡೆಯುವುದಿಲ್ಲ. ಏಕೆಂದರೆ ಹಿಂದುವಿಗೆ ಸಮಾಜಕ್ಕಾಗಿ ಎಂದಿಗೂ ಸಿಟ್ಟು ಬರುವುದಿಲ್ಲ.

ಮತ್ತಷ್ಟು ಓದು »

15
ಆಗಸ್ಟ್

ಸ್ವಾತಂತ್ರ್ಯ …

– ಅನಿತ ನರೇಶ್ ಮಂಚಿ

ಶತ ಶತಮಾನಗಳ ಸಂಕೋಲೆಯ ಕಿತ್ತೊಗೆಯಲು
ರಾಷ್ಟ್ರದೊಳಗೆ ಉದಿಸಿತು ಧೀಮಂತ ಕಲಿಗಣ
ಒಳಗೊಳಗೇ ತಳ ಊರಿದ ಪರದಾಸ್ಯದ
ಹಿಮ ಬಂಡೆಯ ಕರಗಿಸಲು ಮೂಡಿತದೋ ಹೊಂಗಿರಣ

ಬೆಂಕಿ ಉಗುಳುವ ಬಂದೂಕುಗಳ ಲೆಕ್ಕಿಸದೆ ಎದೆಯೊಡ್ಡಿ
ನಿಂತವು ತಾಯಿ ಭಾರತಿಯ ಧೀರ ಮಕ್ಕಳು
ಜಾತಿ ಮತಗಳ ಬದಿಗೊತ್ತಿ ಒಮ್ಮತದಿ ನಿಂದು
ಕೆಂಪ ಅಳಿಸಿ ಹಸಿರ ಹರಡುವ ಛಲ ಹೊತ್ತ ಒಕ್ಕಲು

ವಂದೇ ಮಾತರಂ ಆಯಿತು ತಾರಕ ಮಂತ್ರ
ಆಳುವವನ ಎದೆಯಲ್ಲಿ ಕುಟ್ಟುತ್ತಿತ್ತು ಭಯದ ಒನಕೆ
ಸಿಕ್ಕವರ ಸೆರೆಗೆ ತಳ್ಳಿ ಮಾಡಿದರು ಹಿಂಸಾ ನರ್ತನ
ಅದೆಷ್ಟೋ ಕೊರಳಿಗೆ ಬಿದ್ದಿತ್ತು ಹಸಿ ಸಾವಿನ ಕುಣಿಕೆ

 

ಮತ್ತಷ್ಟು ಓದು »

15
ಆಗಸ್ಟ್

ಅಖಂಡ ಭಾರತ ಸಂಕಲ್ಪ ದಿನದ ಔಚಿತ್ಯವೇನು…?

– ಅಶ್ವಿನ್ ಅಮೀನ್

ಆಗಸ್ಟ್ 14,ಸಂಘಪರಿವಾರಾದಿಯಾಗಿ ಕೆಲ ಸಂಘಟನೆಗಳು ‘ಅಖಂಡ ಭಾರತ ಸಂಕಲ್ಪ ದಿನ’ವೆಂದು ಆಚರಿಸುತ್ತಾರೆ. ಪ್ರಾಚೀನ ಭಾರತದ ಭಾಗಗಳಾಗಿದ್ದ ಈಗ ಸ್ವತಂತ್ರ ದೇಶಗಳಾಗಿರುವ ಇಂದಿನ ಪಾಕಿಸ್ತಾನ, ಬಾಂಗ್ಲಾ (ಹಾಗು ಇತರ) ಗಳನ್ನು ಮತ್ತೆ ಭಾರತದೊಂದಿಗೆ ಸೇರಿಸಲು ಇಂದು ಪ್ರತಿಜ್ಞೆಗೈಯಲಾಗುತ್ತದೆ. ಈ ಆಚರಣೆ ಮೇಲ್ನೋಟಕ್ಕೆ ದೇಶಭಕ್ತಿಯ ಪ್ರತೀಕವೆಂಬಂತೆ ಕಂಡರೂ ಪ್ರಸ್ತುತ ಪರಿಸ್ಥಿತಿಯಲ್ಲಿ ಅದು ಸಾಧ್ಯವಾಗುವ ವಿಷಯವೇ ಎಂಬ ಪ್ರಶ್ನೆ ಬರುವುದು ಸುಳ್ಳಲ್ಲ. ಧರ್ಮ ದ್ವೇಷದ ಆಧಾರದ ಮೇಲೆ ವಿಭಜನೆಯಾಗಿರುವ ಈ ದೇಶಗಳು ಮತ್ತೆ ಭಾರತದೊಂದಿಗೆ ಸೇರುವುದು ಖಂಡಿತ ಅಸಂಭವ… ಒಂದು ವೇಳೆ ಹಾಗೂ ಹೀಗೂ ಅಖಂಡ ಭಾರತ ನಿರ್ಮಾಣವಾದರೆ ಭಾರತದ ಆಂತರಿಕ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಊಹಿಸಲೇ ಕಷ್ಟವಾಗುತ್ತದೆ.

ಭಾರತ-ಪಾಕ್ ಹಾಗು ಭಾರತ-ಬಾಂಗ್ಲಾ ವಿಭಜನೆಯಾದಂದಿನಿಂದ ಇಂದಿನವರೆಗೂ ಇವೆರಡೂ ದೇಶಗಳಲ್ಲಿ ಹಿಂದೂಗಳ ಮೇಲಿನ ಹಲ್ಲೆ, ಕೊಲೆ, ಅತ್ಯಾಚಾರ, ಬಲವಂತದ ಮತಾಂತರಗಳು ನಿಂತಿಲ್ಲ.. ಅಲ್ಲಿರುವ ಬೆರಳೆಣಿಕೆಯ ಹಿಂದುಗಳಿಗೆ ರಕ್ಷಣೆಯಿಲ್ಲದಾಗಿದೆ.  ಅಲ್ಲಿ ಹಿಂದೂಗಳ ಮೇಲೆ ನಡೆಯುವ ಎಲ್ಲಾ ಅತ್ಯಾಚಾರ, ಹತ್ಯಾಕಾಂಡಗಳು ಹೊರಗಿನ ಪ್ರಪಂಚಕ್ಕೆ ತಿಳಿಯುವುದಿಲ್ಲ.. ಕೆಲವೇ ಕೆಲವು ಘಟನೆಗಳು ಮಾತ್ರ ಮಾಧ್ಯಮದ ಮೂಲಕ ತಿಳಿಯುತ್ತದೆ. ಅಪ್ರಾಪ್ತ ಹಿಂದೂ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರಗೈದು ಮುಸ್ಲಿಂ ಆಗಿ ಮತಾಂತರಿಸಲಾಗುತ್ತಿದೆ. ಹಿಂದೂ ಜನರನ್ನು ಅಟ್ಟಾಡಿಸಿಕೊಂಡು ಹತ್ಯೆಗೈಯಲಾಗುತ್ತಿದೆ. ಬಲವಂತದ ಸುನ್ನತ್-ಮತಾಂತರಗಳು ಎಗ್ಗಿಲ್ಲದೆ ನಡೆಯುತ್ತಿದೆ… ಅಲ್ಲಿನ ಹಿಂದೂ ದೇಗುಲಗಳು ಧರೆಗುರುಳುತ್ತಿವೆ, ಕೆಲ ಕಡೆ ಹಿಂದುಗಳನ್ನು ಅವರ ಮನೆಯಿಂದಲೇ ಹೊರಗಟ್ಟಲಾಗುತ್ತಿದೆ. ಈ ಎಲ್ಲಾ ಆಕ್ರಮಣಗಳಿಗೆ ಹೆದರಿ ಈಗಾಗಲೇ ಪಾಕಿಸ್ತಾನದಿಂದ ಭಾರತದತ್ತ ವಲಸೆ ಬರುತ್ತಿರುವ ಹಿಂದೂ ಕುಟುಂಬಗಳ ಬಗ್ಗೆ ಕೇಳಿರುತ್ತೀರಿ. ಪಾಪ ಅವರ ಸ್ಥಿತಿ ಅತ್ತ ಪಾಕಿಸ್ತಾನವೂ ಇಲ್ಲ ಇತ್ತ ಭಾರತವೂ ಇಲ್ಲವೆಂಬಂತಾಗಿದೆ.
ಮತ್ತಷ್ಟು ಓದು »

14
ಆಗಸ್ಟ್

ಸಾಮಾನ್ಯರ ಭ್ರಷ್ಟತೆ ನಿರ್ಲ್ಯಕ್ಷಿಸಿ ಜನರ ಬಳಿಗೆ ಹೊರಟವರ ಕಥೆ…

-ಅಶೋಕ್ ಕೆ ಆರ್

ನನ್ನ ಮತ್ತು ನನ್ನಂಥವರ ನಿರೀಕ್ಷೆಯಂತೆ ಅಣ್ಣಾ ತಂಡದ ‘ಭ್ರಷ್ಟಾಚಾರ ವಿರೋಧಿ ಆಂದೋಲನ’ ಮಗ್ಗಲು ಬದಲಿಸಿ ಸುಮ್ಮನಾಗಿದೆ. ನಮ್ಮ ನಿರೀಕ್ಷೆ ಹುಸಿಗೊಳ್ಳದೆ ಅಣ್ಣಾ ತಂಡ ವಿಫಲಗೊಂಡಿದ್ದಕ್ಕೆ ಸಂತಸ ಪಡಬೇಕಾ? ಖಂಡಿತ ಇಲ್ಲ. ಅಣ್ಣಾ ತಂಡದ ಸರ್ವಾಧಿಕಾರಿ ಧೋರಣೆಯನ್ನು ಪ್ರಶ್ನಿಸಿದವರಿಗೆ ‘ಸಿನಿಕರು’ ‘ದೇಶದ್ರೋಹಿಗಳು’ ‘ಭ್ರಷ್ಟರು’ ಎಂದು ನಾನಾ ಬಿರುದಾವಳಿಗಳನ್ನು ಕೊಟ್ಟವರು ಮಳೆಗಾಳಿಗೆ ಬೆಚ್ಚನೆ ಹೊದ್ದಿ ಮಲಗಿಬಿಟ್ಟಿದ್ದಾರೇನೋ?!

ಟೀಂ ವರ್ಕಿನ ತಂಡವೇ ಸರಿಯಿರಲಿಲ್ಲ! –

ರಿಲೇ ಓಟದಲ್ಲಿ ಓಡುವ ನಾಲ್ವರ ಪಾತ್ರವೂ ಹಿರಿದು. ಒಬ್ಬನ ಓಟ ಕೊಂಚ ನಿಧಾನವಿರಬಹುದು, ಮತ್ತೊಬ್ಬ ಉಳಿದೆಲ್ಲರಿಗಿಂತ ವೇಗಿಯಿರಬಹುದು; ಕೊನೆಗೆ ಎಲ್ಲರೂ ಓಡಿದರೆ ಮಾತ್ರ ತಂಡ ಗೆಲುವು ಸಾಧಿಸಲು ಸಾಧ್ಯ. ಈ ಮೂಲಭೂತ ಅಂಶವೇ ಅಣ್ಣಾ ಹಜಾರೆ ಆರಂಭಿಸಿದ ಚಳುವಳಿಯಲ್ಲಿ ಇಲ್ಲವಾಗಿತ್ತು. ಅಣ್ಣಾ ಹಜಾರೆ, ಅರವಿಂದ್ ಕೇಜ್ರಿವಾಲಾ, ಕಿರಣ್ ಬೇಡಿಯವರ ಉದ್ದೇಶ ಸರಿಯಾಗಿತ್ತೇನೋ ಆದರೆ ನಡೆದ ಹಾದಿಯಲ್ಲಿ ಜೊತೆ ಮಾಡಿಕೊಂಡ ತಂಡ? ಎಡವಿ ಬಿದ್ದವರನ್ನು ಮೇಲೆತ್ತುವ ಗೋಜಿಗೆ ಹೋಗದೆ ನಗುತ್ತಾ ಮುಂದೆ ಸಾಗುವವರ ತಂಡ ಕಟ್ಟಿಕೊಂಡು ಚಳುವಳಿಯನ್ನು ಬೆಳೆಸಿ ಗೆಲ್ಲಲಾದೀತೇ? ಮೇಧಾವಿಗಳೆನ್ನಿಸಿಕೊಂಡವರು, ಹಲವು ಹೋರಾಟಗಳಲ್ಲಿ ಪಾಲ್ಗೊಂಡ ಜನರೇ ಇದ್ದ ಅಣ್ಣಾ ತಂಡದಲ್ಲಿ ಭ್ರಷ್ಟಾಚಾರವನ್ನು ಅರ್ಥೈಸುವ ದೃಷ್ಟಿಕೋನವೇ ಸರಿಯಿರಲಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರವರ್ಗವಷ್ಟೇ ಭ್ರಷ್ಟರ ಕೂಟ ಎಂಬ ತೀರ್ಮಾನಕ್ಕೆ ಬಂದ ಚಳುವಳಿಯಿಂದ ಮತ್ತೇನನ್ನು ನಿರೀಕ್ಷಿಸಲು ಸಾಧ್ಯ? ಸಾಮಾನ್ಯ ಜನರೂ ಭ್ರಷ್ಟಾಚಾರದ ಬಹುಮುಖ್ಯ ಭಾಗ. ಅವರು ಬದಲಾಗದೆ – ಅವರನ್ನು ಬದಲಿಸಲಾಗದೆ – ಚಳುವಳಿ ಗೆಲ್ಲಲಾಗದು ಎಂದಿವರಿಗೆ ತಿಳಿಯಲಿಲ್ಲ.

ಮತ್ತಷ್ಟು ಓದು »