ಧೃತರಾಷ್ಟ್ರ,ದುರ್ಯೋಧನರಿಲ್ಲದೆ ದುಶ್ಯಾಸನರು ಎಲ್ಲಿಂದ ಬಂದಾರು?
– ರಾಕೇಶ್ ಶೆಟ್ಟಿ
ಮಂಗಳೂರು ಹೋಂ-ಸ್ಟೇ ಮೇಲೆ ದಾಳಿ ಮಾಡಿದವರನ್ನು ‘ಆಧುನಿಕ ದುಶ್ಯಾಸನರು’ ಅಂದಾಗ, ಸಂಸ್ಕೃತಿ ರಕ್ಷಣೆ ಹೆಸರಲ್ಲಿ ಹೆಣ್ಣುಮಕ್ಕಳ ಮೈ ಮುಟ್ಟುವುದು,ಹೊಡೆಯುವುದು ಇಂತ ವಿಕೃತಿ ಮಾಡುವವರನ್ನು ದುಶ್ಯಾಸನರೆಂದರೆ ತಪ್ಪಿಲ್ಲ ಅನ್ನಿಸುತ್ತದೆ ಅನ್ನಿಸಲೇಬೇಕು.ಆದರೆ “ಧೃತರಾಷ್ಟ್ರ,ದುರ್ಯೋಧನರಿಲ್ಲದೆ ದುಶ್ಯಾಸನರು ಎಲ್ಲಿಂದ ಬಂದಾರು?”.ಹಾಗಂತ ದೃತರಾಷ್ಟ್ರ,ದುರ್ಯೋಧನರ ನೆಪವೊಡ್ಡಿ ದುಶ್ಯಾಸನರ ನಡವಳಿಕೆಯನ್ನು ಬೆಂಬಲಿಸಬೇಕಿಲ್ಲ,ಬೆಂಬಲಿಸುವುದು ಆರೋಗ್ಯವಂತ ಸಮಾಜದ ಲಕ್ಷಣವೂ ಅಲ್ಲ. ಅಂದು ಮಹಾಭಾರತದ ತುಂಬಿದ ಸಭೆಯಲ್ಲಿ ದುಶ್ಯಾಸನ ದ್ರೌಪದಿಯ ಸೀರೆ ಎಳೆಯುವಂತೆ ಅಪ್ಪಣೆ ಕೊಟ್ಟಿದ್ದು ದುರ್ಯೋಧನ ಮತ್ತು ಅದನ್ನ ಕೇಳಿಯೂ ತೆಪ್ಪಗೆ ಕೂತಿದ್ದು ಅಪ್ಪ ಅನ್ನಿಸಿಕೊಂಡ ಧೃತರಾಷ್ಟ್ರ ಅಲ್ಲವೇ? ಆಗಲೂ ಈಗಿನಂತೆ ಎಲ್ಲ ಗೊತ್ತಿದ್ದೂ ನಮ್ಮ ಸೆಕ್ಯುಲರ್ಗಳಂತೆ ಕಂಡು ಕಾಣದಂತಿದ್ದವರು ಉಳಿದೆಲ್ಲರು.ಒಬ್ಬ ಶ್ರೀ ಕೃಷ್ಣನನ್ನು ಬಿಟ್ಟು..! ಇಂದಿನ ಭಾರತದಲ್ಲಿ ದುಶ್ಯಾಸನರನ್ನೇನೋ ಮಾಧ್ಯಮಗಳು ತೋರಿಸಿವೆ.ಆದರೆ ಧೃತರಾಷ್ಟ್ರ,ದುರ್ಯೋಧನರೆಲ್ಲಿ? ದುಶ್ಯಾಸನ ಅನ್ನುವವನ ಹೆಸರು ಈ ಪರಿ (ಕು)ಖ್ಯಾತಿ ಪಡೆಯಲು ಕಾರಣ ವಸ್ತ್ರಾಪಹರಣ ಮಾಡಲು ಹೇಳಿದ ಅವನಣ್ಣ ದುರ್ಯೋಧನನಲ್ಲವೇ? ದುರ್ಯೋಧನ,ದುಶ್ಯಾಸನರಿಗೆ ಮೌನ ಸಮ್ಮತಿ ಕೊಟ್ಟ ದ್ರುತರಾಷ್ಟ್ರನು ಸೇರಿ ಇಡಿ ಕುರು ಸಭೆಯಲ್ಲವೇ? ಹಾಗಿದ್ದರೆ ಕರಾವಳಿಯ ಮಹಾಭಾರತದಲ್ಲಿ ದುಶ್ಯಾಸನರ ಸೃಷ್ಟಿಗೆ ಕಾರಣವಾದ ದುರ್ಯೋಧನ ಯಾರು?
ಆಳುವವರ ತಲೆ ಕೆಟ್ಟರೆ ಹಾಳು ನಿರ್ಧಾರಗಳನ್ನೇ ತೆಗೆದುಕೊಳ್ಳೋದು
ರಾಘವೇಂದ್ರ ನಾವಡ
ಮೊಹಮ್ಮದ್ ಬಿನ್ ತುಘಲಕ್ ಒಬ್ಬ ವಿದ್ವಾ೦ಸ ಆದರೆ ಹುಚ್ಚ!! ಅವನ ಆಡಳಿತದಲ್ಲಿ ತೆಗೆದುಕೊ೦ಡ ರಾಜಧಾನಿ ಬದಲಾವಣೆ ಮತ್ತಿತರ ನಿರ್ಧಾರಗಳಿ೦ದ ರಾಜ್ಯ ಜನತೆಗೆ ಹಾಗೂ ಬೊಕ್ಕಸಕ್ಕೆ ಆದ ಹಾನಿ ಅಪಾರ ಅ೦ತೆಯೇಅವನನ್ನು “ ವಿರೋಧಾಭಾಸಗಳ ಮಿಶ್ರಣ“ ವೇ೦ದೇ ಇತಿಹಾಸದಲ್ಲಿ ಗುರುತಿಸಲಾಗುತ್ತದೆ!
ಈ ವರ್ಷ ಕರ್ನಾಟಕದ ಸುಮಾರು ೧೦೦ ಕ್ಕೂ ಹೆಚ್ಚು ಹಳ್ಳಿಗಳು ಬರದಲ್ಲಿ ಮುಳುಗಿವೆ. ರೈತ ತಲೆಯ ಮೇಲೆ ಕೈ ಹೊತ್ತು ಕುಳಿತ್ತಿದ್ದಾನೆ. ಕೆಲವು ಕಡೆ ಸಿಕ್ಕಾಪಟ್ಟೆ ಮಳೆ.. ಇನ್ನು ಕೆಲವು ಕಡೆ ಮಳೆನೇ ಇಲ್ಲಾ. ಸುಮಾರು ಮೂರ್ನಾಲ್ಕು ದಿನಗಳಿ೦ದ ದಿನ ಪತ್ರಿಕೆಗಳು- ದೃಶ್ಯ ಮಾಧ್ಯಮಗಳೆಲ್ಲವೂ ಕೆಲವೊ೦ದು ಕಡೆ ಸಿಕ್ಕಾಪಟ್ತೆ ಮಳೆ ಆಗುತ್ತಿರುವ, ಭದ್ರಾ, ಕಬಿನಿ, ಹಾರ೦ಗಿ , ಆಲಮಟ್ತಿ ಜಲಾಶಯಗಳೆಲ್ಲಾ ಭರ್ತಿಯಾಉತ್ತಿರುವ ವಿಚಾರಗಳನ್ನು ಬಿತ್ತರಿಸುತ್ತಿವೆ. ಆದರೆ ಈ ವರ್ಷ ವಾಡಿಕೆಗಿ೦ತಲೂ ಅರ್ಧದಷ್ಟು ಮಳೆ ಕಡಿಮೆಯಾಗಿದೆ. ನಮ್ಮಲ್ಲಿಯೇ ಇಷ್ಟೊತ್ತಿಗೆ ಸುಮಾರು ೧೦೦ ಇ೦ಚು ಮಳೆಯಾಗಿ ಬಿಡಬೇಕಿತ್ತು.. ನಮ್ಮಲ್ಲಿನ್ನೂ ಅದು ೫-೬೦ ಇ೦ಚುಗಳಲ್ಲೇ ತೆವಳಾಡುತ್ತಿದೆ! ಇನ್ನೊ೦ದು ಮಾತೇನೆ೦ದರೆ ಈ ವರ್ಷ ಮಳೆಯಾಗುವ ಸಮಯದಲ್ಲಿ ಮಳೆಯಾಗಲಿಲ್ಲ. ಮಾನ್ ಸೂನ್ ಆಗಮನ ಬಹಳ ತಡವಾಯಿತು! ಬಹಳ ತಡವಾಗಿ ಮಳೆ ತನ್ನ ಲಯ ಕ೦ಡುಕೊ೦ಡಿದೆ!
ರಾಮಲೀಲಾ ಮೈದಾನದಿಂದ, ನೇರವಾಗಿ….
-ಚಕ್ರವರ್ತಿ ಸೂಲಿಬೆಲೆ
ನಾನೀಗ ರಾಮಲೀಲಾ ಮೈದಾನದಲ್ಲಿದ್ದೇನೆ. ೭ನೇ ತಾರೀಖಿನಿಂದಲೇ ಆಂದೋಲನಕ್ಕಾಗಿ ಜನಸಾಗರ ಹರಿದುಬರತೊಡಗಿತ್ತು. ಇಂದು ಇಲ್ಲಿ ಸೇರಿರುವ ಸಂಖ್ಯೆ ನಿರೀಕ್ಷೆಗೂ ಮೀರಿದ್ದು. ರಾಮದೇವ ಬಾಬಾ ನೇತೃತ್ವದ ಈ ಆಂದೋಲನದ ಕುರಿತಂತೆ ಕೆಲವು ಒಳನೋಟಗಳು ಇಲ್ಲಿವೆ…
ಎಲ್ಲರ ಚಿತ್ತ ರಾಮಲೀಲಾ ಮೈದಾನದತ್ತ! ಹಾಗಂತ ನೋಡಿದರೆ ಅನ್ನಿಸುತ್ತಿದೆ. ಒಂಭತ್ತನೆ ತಾರೀಖಿನ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಅದಾಗಲೇ ಜನಸಾಗರ ಬಂದು ಸೇರುತ್ತಿದೆ. ಏಳನೆ ತಾರೀಖಿನ ವೇಳೆಗಾಗಲೇ ಐದಾರು ಸಾವಿರ ಕಾರ್ಯಕರ್ತರು ವೇದಿಕೆಯ ಹಿಂದೆ ಮುಂದೆ ಗಿಜಿಗುಡುತ್ತ ನಿಂತಿದ್ದರು. ತಯಾರಿಗಳು ಬಿರುಸಾಗಿ ನಡೆದಿದ್ದವು. ಕಾರ್ಯಕರ್ತರ ಹೆಸರು ನೋಂದಾಯಿಸುವುದರಿಂದ ಹಿಡಿದು ವೇದಿಕೆಯ ರಕ್ಷಣೆಯವರೆಗೆ ಕೆಲಸಗಳನ್ನು ಹಂಚಲಾಗುತ್ತಿತ್ತು. ಅಚ್ಚರಿಯೆಂದರೆ ಪ್ರತಿ ವಿಭಾಗಕ್ಕೂ ನೂರು- ನೂರೈವತ್ತು ಜನರ ತಂಡ. ಒಟ್ಟಾರೆ ಲೆಕ್ಕ ಹಾಕಿದರೆ, ಅಣ್ಣಾ ತಂಡದ ಹೋರಾಟಕ್ಕೆ ಅದೆಷ್ಟು ಜನ ಬಂದಿದ್ದರೋ ಅಷ್ಟು ಕಾರ್ಯಕರ್ತರು ಪೂರ್ವ ತಯಾರಿಗೆಂದೇ ಇಲ್ಲಿಗೆ ಬಂದಿದ್ದಾರೆ. ಬಾಬಾ ರಾಮದೇವ್ಜೀ ಇದನ್ನೊಂದು ಐತಿಹಾಸಿಕ ನಿರ್ಣಾಯಕ ಹೋರಾಟ ಎಂದಿದ್ದು ತಪ್ಪಲ್ಲವೇನೋ ಎಂದು ಇಲ್ಲಿನ ಜನರನ್ನು ನೋಡಿದಾಗ ಭಾಸವಾಗಿಬಿಡುತ್ತದೆ.
ಯಾವುದೇ ಹೋರಾಟ ಒಂದು ದಿನ ಅಥವಾ ಕೆಲವು ವಾರಗಳದ್ದಲ್ಲ. ಅದೊಂದು ಸುದೀರ್ಘ ಯಾತ್ರೆ. ಅದರಲ್ಲೂ ಈ ಬಗೆಯ ಕಾದಾಟಗಳಂತೂ ದಶಕಗಳಷ್ಟು ಆಳದ ಬೇರುಗಳನ್ನು ಇಳಿ ಬಿಟ್ಟುಕೊಳ್ಳಲಿಲ್ಲವೆಂದರೆ ಫಲ ನೀಡುವುದು ಕಷ್ಟ. ಸಾಮರ್ಥ್ಯ ನರ ನಾಡಿಗಳಲ್ಲಿ ಬೆರೆತುಕೊಂಡು ಹರಿಯಲಿಲ್ಲವೆಂದರೆ, ಹೋರಾಟ ದೀರ್ಘ ಕಾಲದವರೆಗೆ ಮುಂದುವರೆಯುವುದೂ ಅಷ್ಟೇ ಕಷ್ಟ. ಅದಕ್ಕೇ ಗಾಂಧೀಜಿ ವಿಶೇಷ ಅನ್ನಿಸೋದು. ಹತ್ತಿಪ್ಪತ್ತು ವರ್ಷಗಳ ಕಾಲ ಜನರ ನಾಡಿ ಹಿಡಿಹಿಡಿದು ಅಧ್ಯಯನ ಮಾಡಿ ವಿಶ್ವಾಸ ಬಲಿತಾಗ ಹೋರಾಟಕ್ಕಿಳಿಯುತ್ತಿದ್ದವರು ಅವರು. ಹಾಗೆ ಹೋರಾಟಕ್ಕಿಳಿವಾಗ ಅತ್ಯಂತ ಸಹಜ ಹಾಗೂ ಜನರಿಗೆ ಹತ್ತಿರವಾದ ವಿಚಾರಗಳನ್ನಿಟ್ಟುಕೊಂಡೇ ಕದನ ಭೂಮಿಗೆ ಬರುತ್ತಿದ್ದರು. ಹೋರಾಟ ಕಾವು ಪಡಕೊಳ್ಳುತ್ತಿತ್ತು. ಉಪ್ಪಿನ ಸತ್ಯಾಗ್ರಹ ಅಂಥದ್ದೇ ಹೋರಾಟ ತಾನೆ? ಸ್ವತಃ ಗಾಂಧೀಜಿಯ ಕಮ್ಯಾಂಡರ್ ಇನ್ ಚೀಫ್ ಪಟೇಲರು ಲೇವಡಿ ಮಾಡಿದ್ದ ಹೋರಾಟ ಅದು. ಆದರೆ ಜನರು ತೆರಿಗೆಯ ವಿರುದ್ಧ ತಿರುಗಿಬಿದ್ದರು. ಕ್ರಮೇಣ ದೊಡ್ಡ ಆಂದೋಲನವೆ ಶುರುವಾಯ್ತು. ದೇಶ ಗೆಲುವಿನತ್ತ ಹೊರಳಿತು.
ಮತ್ತಷ್ಟು ಓದು 
ಸಮಾಜ ಮತ್ತು ದೇಶಕ್ಕಾಗಿ ಸತ್ಯದೆಡೆಗಿನ ನಡೆ ಅನಿವಾರ್ಯ…
-ಮಹೇಂದ್ರ ಕುಮಾರ್
ನಾನು ಅದೆಷ್ಟು ವರ್ಷ ಸಂಘ ಸಂಘ(ಆರ್ ಎಸ್ ಎಸ್) ಎಂದು ಕೆಲಸ ಮಾಡಿದ್ದೇನೆ. ನನ್ನ ತುಂಬು ಯೌವನವನ್ನು ಸಂಘ ಹೇಳುವ ಕಾರ್ಯಗಳಿಗೆ ವಿನಿಯೋಗಿಸಿದ್ದೇನೆ. ಇಂದಿಗೂ ಅದೆಷ್ಟೋ ಯುವಕರು ಸಂಘ ಸಂಘ ಎಂದು ತಮ್ಮ ಸರ್ವಸ್ವವನ್ನೂ ಸಂಘಕ್ಕಾಗಿ ತ್ಯಾಗ ಮಾಡುತಿದ್ದಾರೆ. ಸಂಘದ ಮಾರ್ಗದರ್ಶನದಂತೆ ಬೀದಿಯಲ್ಲಿ ನಿಂತು ಹಿಂದುತ್ವ ಹಿಂದುತ್ವ ಎಂದು ಬಡಿದಾಡಿ ಜೈಲುಸೇರಿ ಸಮಾಜದಲ್ಲಿ ರೌಡಿ ಪಟ್ಟ ಕಟ್ಟಿಕೊಂಡ ಅದೆಷ್ಟೋ ಯುವಕರು ತಮ್ಮ ಜೀವನದ ಹುಡುಕಾಟದಲ್ಲಿ ತೊಳಲುತಿದ್ದಾರೆ. ಇನ್ನು ಸಂಘ ಹೇಳುವ ದೇಶಭಕ್ತಿ ಹಿಂದುತ್ವದಿಂದ ಪ್ರೇರಣೆಗೊಂಡು ಪ್ರತಿವರ್ಷ ತಮ್ಮ ದುಡಿಮೆಯ ದೊಡ್ಡ ಭಾಗವನ್ನೇ ಧಾರೆ ಎರೆಯುವ ಅದೆಷ್ಟು ದಾನಿಗಳಿದ್ದಾರೆ. ದೊಡ್ಡ ದೊಡ್ಡ ಪದವಿಯನ್ನು ಪಡೆದುಕೊಂಡು ಮದುವೆಯೂ ಆಗದೆ ಸಂಘವೇ ಜೀವನ, ಸಂಘವೇ ಸರ್ವಸ್ವ ಎಂದು ನಂಬಿಕೊಂಡು ಮುಪ್ಪಿನಕಾಲದಲ್ಲಿ ಯಾರೂ ಇಲ್ಲದ ಅನಾಥರಂತೆ ಜೀವಿಸುವ ಅದೆಷ್ಟು ಮಹಾನ್ ಚೇತನಗಳಿವೆ.
ಇನ್ನು ತಮ್ಮ ಸ್ವಂತದ ಜೀವನ ನಡೆಸುತ್ತಲೇ ಸಂಘ ಎಂದರೆ ದೇಶ, ಸಂಘ ಎಂದರೆ ಹಿಂದುತ್ವ ಎಂದು ಸಂಘವನ್ನು ಸಾಮೂಹಿಕವಾಗಿ ಬೆಂಬಲಿಸುವ ಅಷ್ಟು ಲಕ್ಷ ಮುಗ್ದ ದೇಶವಾಸಿಗಳು… ಬೇಷ್, ಸುಮಾರು ಎಂಬತ್ತೇಳು ವರ್ಷಗಳ ಅಂತರದಲ್ಲಿ ಸಂಘದ ಸಾಧನೆ ಮೆಚ್ಚುವಂತದ್ದೇ.
ಸಂಘ ವ್ಯಾಪಿಸದ ಜಾಗವಿಲ್ಲ, ಈ ದೇಶದ ಪ್ರಭಲ ಸಂಘಟನೆಯಾಗಿ ಹೊರಹೊಮ್ಮಿರುವ ಸಂಘ ಇಷ್ಟು ದೊಡ್ಡಮಟ್ಟಕ್ಕೆ ಬೆಳೆದು ನಿಲ್ಲಲು ಬಳಸಿಕೊಡಿದ್ದು ಎರಡೇ ಎರಡು ವಿಚಾರಗಳನ್ನು, ದೇಶಭಕ್ತಿ ಮತ್ತು ಹಿಂದುತ್ವ. ಅದ್ಭುತ… ಇಂದು ಈ ದೇಶದಲ್ಲಿ ಯಾವುದೇ ಕಂಪೆನಿಗಳೂ, ರಾಜಕೀಯ ಪಕ್ಷಗಳೂ ಸೇರಿದಂತೆ ಯಾರೆಂದರೆ ಯಾರೂ ಸಾಧಿಸಲಾಗದ್ದನ್ನು ಸಂಘ ಸಾಧಿಸಿದೆ. ಟಾಟಾ, ರಿಲಯನ್ಸ್ ನಂತಹಾ ಕಂಪನಿಗಳನ್ನೆಲ್ಲಾ ಒಟ್ಟುಗೂಡಿಸಿ ಅವರ ಒಟ್ಟು ಆಸ್ಥಿಯ ಮೌಲ್ಯಮಾಪನ ಮಾಡಿದರೂ ಈ ದೇಶದಲ್ಲಿ ಸಂಘ ಹೊದಿರುವ ಆಸ್ಥಿಗಿಂತ ಕಡಿಮೆಯೇ…
ಮತ್ತಷ್ಟು ಓದು 
ಹಿಂದುತ್ವ ಬೋನ್ಸಾಯ್ ಮರವಲ್ಲ, ವಿಶಾಲ ಆಲದ ಮರ
-ಚಕ್ರವರ್ತಿ ಸೂಲಿಬೆಲೆ
ದಾಳಿಗೆ ಮುನ್ನ ಎದುರಾಳಿಗಳ ಶಕ್ತಿಯನ್ನು ಅರಿತುಕೊಳ್ಳಬೇಕು. ದಾಳಿಯ ವೇಳೆ ತಲೆ ಹೋದರೂ ಸರಿ ಎಂದು ಕಾದಾಡಬೇಕು. ಕದನದ ನಂತರ ಆಗುವ ಲಾಭ ನಷ್ಟಗಳ ಅರಿವಿರಬೇಕು ಪ್ರತಿಯೊಬ್ಬ ಸೇನಾಪತಿಗೆ ಗೊತ್ತಿರಲೇಬೇಕಾದ ಅಂಶಗಳಿವು. ಇವುಗಳ ಆಧಾರದ ಮೇಲೆ ರೂಪುಗೊಂಡದ್ದೇ ಯೋಜನೆ. ಮೊದಲೇ ರೂಪಿಸಿದ ಯೋಜನೆ ಒಮ್ಮೊಮ್ಮೆ ಕೈಕೊಟ್ಟರೂ ಕೊಡಬಹುದು. ಪೂರ್ವ ತಯಾರಿಯೇ ಇಲ್ಲದೆ ಗೆದ್ದರೂ ಗೆಲ್ಲಬಹುದು. ಎಲ್ಲ ಅಪರೂಪ. ಆದರೆ, ಹಳೆಯ ನೆನಪುಗಳನ್ನು ಹಸಿರಾಗಿಸಿಕೊಂಡು, ಭವಿಷ್ಯದ ಕಷ್ಟ ನಷ್ಟಗಳನ್ನು ಆಲೋಚಿಸಿ, ವರ್ತಮಾನದಲ್ಲಿ ಕ್ರಿಯಾಶೀಲರಾಗುವವರು ಜಯಶಾಲಿಗಳಾಗುತ್ತಾರೆ. ಇಲ್ಲವಾದರೆ ತಮಗೂ ಸಮಾಜಕ್ಕೂ ತೊಂದರೆ ತಂದಿಡುತ್ತಾರೆ.
೧೮೫೭ರ ಸಂಗ್ರಾಮಕ್ಕೆ ಸುದೀರ್ಘ ತಯಾರಿ ನಡೆದಿತ್ತು. ನಾನಾ, ತಾತ್ಯಾ, ಲಕ್ಷ್ಮೀ ಬಾಯಿ, ಕುವರ ಸಿಂಗರೆಲ್ಲ ತಯಾರಾಗಿದ್ದರು. ಯಾರು, ಎಲ್ಲಿ, ಹೇಗೆ ದಾಳಿ ಮಾಡಬೇಕೆಂಬುದನ್ನೂ ರೂಪಿಸಿಯಾಗಿತ್ತು. ಎಲ್ಲ ಮುಗಿದ ಮೇಲೆ ದೇಶ ಒಪ್ಪುವ ನಾಯಕನ ಕೈಗೆ ಆಡಳಿತ ನೀಡಬೇಕೆಂದು ಬಹಾದ್ದೂರ್ ಷಾಹನೇ ಹೇಳಿದ್ದ. ಎಡವಟ್ಟು, ಬ್ಯಾರಕ್ಪುರದಲ್ಲಿ ಆಯಿತು. ಅಂದುಕೊಂಡಿದ್ದಕ್ಕಿಂತ ಒಂದು ತಿಂಗಳು ಮುಂಚೆ ಸಿಡಿದ ಕ್ರಾಂತಿಯ ಸಿಡಿಮದ್ದು ಪೂರ್ಣ ಜಯ ಕೊಡಿಸುವಲ್ಲಿ ವಿಫಲವಾಯಿತು. ಅಷ್ಟೇ ಅಲ್ಲ, ಮುಂದಿನ ಅನೇಕ ವರ್ಷಗಳ ಕಾಲ ಬ್ರಿಟಿಷರ ವಿರುದ್ಧ ಕಾದಾಡಿ ಗೆಲ್ಲುವುದು ಅಸಾಧ್ಯವೆಂದು ಜನಮಾನಸದಲ್ಲಿ ಹುದುಗಿಹೋಗಿತ್ತು. ಮೌನವಾಗಿ ಸಹಿಸುವ, ಇದ್ದುದರಲ್ಲೆ ಸಂಧಾನ ಮಾಡಿಕೊಂಡು ಬದುಕುವ ಯುವ ಸಮೂಹ ರೂಪುಗೊಳ್ಳಲು ಆರಂಭಿಸಿದ್ದೂ ಆಗಲೇ. ಸರಿಯಾಗಿ ಹೇಳಬೇಕೆಂದರೆ, ಗುಲಾಮೀ ಮಾನಸಿಕತೆಯ ನಿರ್ಮಾಣದ ಹಂತ ಅದು. ಇವಿಷ್ಟಕ್ಕೂ ಕಾರಣ- ಕೈಕೊಟ್ಟ ಒಂದು ಯೋಜನೆ!
ನಾಯಕನಾದವ ಯಾವಾಗಲೂ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಇಟ್ಟ ಹೆಜ್ಜೆಯನ್ನು ಪ್ರಾಣ ಬಿಟ್ಟರೂ ಹಿಂದೆ ತೆಗೆದುಕೊಳ್ಳದವನಾಗಿರಬೇಕು. ಜೋ ಸಿರ್ದಾರ್, ವಹೀ ಸರ್ದಾರೆಂದು ಹೇಳೋದು ಅದಕ್ಕೇ. ಗೆದ್ದಾಗ ಹೊಗಳಿಕೆ ಸಿಕ್ಕಷ್ಟೇ ಸೋತಾಗ ತೆಗಳಿಕೆಯೂ ಸಿಗುತ್ತದೆ. ಎಲ್ಲಕ್ಕೂ ತಯಾರಾದವ ಮಾತ್ರ ಮುಂದೆ ಬಂದು ನಿಂತಿರಬೇಕು.
ಈ ಎಲ್ಲ ಘಟನೆಗಳನ್ನು ಕಣ್ಣ ಮುಂದಿಟ್ಟುಕೊಂಡು ಒಮ್ಮೆ ಮಂಗಳೂರಿನ ಗಲಾಟೆಗಳನ್ನು ಅವಲೋಕಿಸಿ ನೋಡಿ. ಹಿಂದೂ ಸಮಾಜ ಅಂತ ಹೇಳಿ ಇಂಥದೊಂದು ರಾದ್ಧಾಂತ ಎಬ್ಬಿಸುವ ಅಗತ್ಯವಿತ್ತೆ? ಮಾಧ್ಯಮದವರನ್ನು ಕರೆದುಕೊಂಡು ಹೋಗಿ ಇಂದಿನ ಸಿನಿಮಾ ಟ್ರೈಲರ್ಗಳಂತೆ ಬಿತ್ತರಿಸುವ ಜರೂರತ್ತು ಇತ್ತೆ? ಒಮ್ಮೆ ಯೋಚಿಸಿ.
ಹಾಜಾರೊ ನೆನಪುಲು….
ಇಬ್ರಾಹೀ೦ ಹಾಜಿ ನ೦ಙಳೆ ಬುಟ್ಟುತ್ತ್ 5 ವರ್ಷ.
ಇಡೀ, ಉಳ್ಳಾಲತ್ತ್ ಲ್ ,ಆರ್ ಎತ್ರೆ ಡಬಲ್ , ತ್ರಿಬಲ್, ಹಜ್ ಆಕಿಯೆ೦ಗುಮ್ ಹಾಜರ್ ಚೊನ್ನೆ೦ಗ್ ಆಲ್ಮಾರೊ ತಲೆಗ್ ಬ೦ಡೆದ್ ಅ೦ಡತ್ತೊ ಉಳ್ಳಾಲ ದರ್ಗಾ ಅಧ್ಯಕ್ಷ ಯು.ಕೆ ಇಭ್ರಾಹೀಮ್ ಹಾಜಾರ್ .
ಸುದೀರ್ಘ 40 ವರ್ಷ ಇಡೀ ಉಳ್ಳಾಲತ್ತೊ ಆಡಳಿತ ನಡಪಾಟಿತ್ತ್, ಆಲ್ಮಾರೆ ಮನಸ್ಸ್ ರೊ ಗೆ೦ದ್ದಿಯೋ ಮಹಾನ್ ನೇದಾವು, ಉಳ್ಳಾಲ ದರ್ಗಾ ಅಧ್ಯಕ್ಷ ಆಯಿತ್ತ್, ಆದ್ಯಮಾಯಿತ್ತ್, ಉಳ್ಳಾಲತ್ತ್ ಲ್ ‘ಸಯ್ಯಿದ್ ಮದನಿ ಆಸ್ಪತ್ರೆ’ ಓಪನ್ ಆಯಿತ್ತ್, ಸಾಮಾನ್ಯ ಆಲ್ಮಾರ್
ಗ್ ಸೀಕ್ ಗ್ ಚಮ್ಮೆ ಕೊರೋಡಿ ಲ್ ಚಿಕಿತ್ಸೆಗ್ ಸೌಲಭ್ಯ ಆಕಿತ್ತ್, ತೀರಾ ಪಾವ೦ತಕ್ ಧರ್ಮತ್ತ್ ಗ್ ಮರ೦ದ್ ರೊ ವ್ಯವಸ್ಥೆ ಆಕಿತ್ತ್, ಪಿನ್ನೆ ಪಡಿಕ್ಕೊಗ್ ಇಡೀ ಉಳ್ಳಾಲತ್ತ್ ಲೇ ಮೊತ್ತ ಮೊದಲಾಯಿತ್ತ್ ಅಳೇಕಲತ್ತ್ ಲ್ ಮದನಿ ಶಾಲೆ ಓಪನ್ ಆಯಿತ್ತ್, ಪಿನ್ನೆ ಒ೦ಬತ್ತುಕೆರೆ ಲ್ ಐ.ಟಿ.ಐ, ಡಿಗ್ರಿ ಕಾಲೇಜ್, ಇ೦ಙಲೆ ಶಿಕ್ಷಣ ರ೦ಗತ್ತ್ ಲ್ ಒರು ಕ್ರಾ೦ತಿಯೇ ಆಕಿತ್ತ್,
ಉಳ್ಳಲತ್ತ್ ಲ್ ಉಳ್ಳೆದಾಯೊ ಎಲ್ಲಾ , ಹಿ೦ದು, ಮುಸ್ಲಿ೦ಮ್, ಕ್ರಿಶ್ಚೆನ್ ಸಮುದಾಯತ್ತ್ ಗು೦ ಹಾಜರ್ ರೆ ಮೇಲೆ ನಲ್ಲೆ ಪಿರ್ಸಪ್ಪಾಡ್, ಎಲ್ಲಾ ರಾಜಕೀಯ, ದಾರ್ಮಿಕ, ಸಾಮಾಜಿಕ, ಶೈಕ್ಷಣಿಕ ವಲಯತ್ತ್ ಲುಮ್, ರಾಜಕೀಯ ನೇತಾರಮಾರ್, ಉಳ್ಳಾಲ ಪೋಲಿಸ್ ಠಾಣೆ ಗ್ ಪುದಿಯದಾಯಿತ್ತ್ ಬ೦ಡೊ ಆಪೀಸರ್ಸ್ ಮಾರ್ ಎಲ್ಲಾ ದರ್ಗತ್ತ್ ಗ್ ಬ೦ತ್ ಹಾಜಾರ್ ರೆ ಆಶಿರ್ವಾದ ಎಡ್ತ್ ಪೋ೦ಯೋ೦ಟಿನ್ನಾ.
ಹಾಜರ್ ರೆ ಬಾಯಿಲ್ ಬ೦ಡೊದಾಯ ಪಲ್ಕ “ಮುತ್ತು” ಆಯಿತಿ೦ತ್, ಏದೊರು ಪರಿಸ್ಥಿತಿಲು೦ ಅದ್ ಗ್ ತಕ್ಕದಾಯೊ ಉತ್ತರ, ಸೌಹರ್ದತೆ , ಎ೦ಙನ್ತೊ ಕೇಸ್ ಹಾಜರ್ ಮುಟ್ಟ ಬನ್ನೆ೦ಗು೦ ಅದ್ಗ್ ಸೌಹಾರ್ದ ಪರಮಾಯಿತ್ತ್ ಉತ್ತರ ಕಾಟ್ರ್, ವಿಶೇಶಮಾಯಿಟ್ಟ್ ಪಡ್ಚಿಲ್ಲೆ೦ಗು೦, ಹಾಜರ್ ರೆ ಜಡ್ಜ್ ಮೆ೦ಟ್ ಏದೊರು ಸುಪ್ರೀಮ್ ಕೋರ್ಟ್ ಜಡ್ಜ್ ಗುಮ್ ಬರಲೆ, ಚಮ್ಮೆ ಸೂಕ್ಶ್ಮ ಆಯಿತಿ೦ತ್.
2007 ರಮಳಾನ್ 17 ಗ್ ಅಲ್ಲಾಹ್ ರೆ ಬಿಲಿ ಗ್ ನ೦ಙಲೆಲ್ಲಾ ಬುಟ್ಟು ಹಾಜರ್ ಪೋಯಿತ್ತ್,
ಅಲ್ಲಾಹ್ ಹಾಜರ್ ರೆ ಕಬರ್ ಸ್ವರ್ಗತ್ತ್ ಗ್ ಎತ್ತ್ ಪಾಟಟ್ಟ್-ಆಮೀನ್
-ಶಿಹಾ ಉಳ್ಳಾಲ್
ಒಂದು ತಪ್ಪನ್ನು ಮತ್ತೊಂದು ತಪ್ಪಿನಿಂದ ಸಮರ್ಥಿಸಿಕೊಳ್ಳುತ್ತ….
-ಡಾ. ಅಶೋಕ್ ಕೆ.ಆರ್
ಮಂಗಳೂರಿನ ಪಡೀಲಿನಲ್ಲಿ ನಡೆದ ಘಟನೆಯ ಬಗ್ಗೆ ನೀವೀಗಾಗಲೇ ಬಹಳಷ್ಟು ಓದಿ ನೋಡಿರುತ್ತೀರಿ. ಹಿಂದೂ ಜಾಗರಣ ವೇದಿಕೆ ಸಂಸ್ಕೃತಿಯ ಹೆಸರಿನಲ್ಲಿ ನಡೆಸಿದ್ದು ಕ್ಷಮಿಸಲಾಗದ ತಪ್ಪು. ಇದ್ದ ಹುಡುಗರಲ್ಲಿ ಅತಿ ಹೆಚ್ಚು ಹೊಡೆಸಿಕೊಂಡವನು ಮುಸ್ಲಿಮನಂತೆ ಕಾಣುತ್ತಿದ್ದನೆನ್ನುವುದೇ ಇವರ ಪುಂಡಾಟಕ್ಕೆ ಕಾರಣವಾಯಿತಾ? ಆ ಹುಡುಗ ಕೂಡ ದಕ್ಷಿಣ ಕನ್ನಡದಲ್ಲಿ ಬಿಜೆಪಿಯನ್ನು ಹಿಂದಿನಿಂದಲೂ ಬಹಳವಾಗಿ ಬೆಂಬಲಿಸುತ್ತಿರುವ ಹಿಂದು ಧರ್ಮದ ಒಂದು ಜಾತಿಗೆ ಸೇರಿದವನು! ಯಾವುದೇ ಧರ್ಮದ ಮತೀಯವಾದ ಅಪಾಯಕಾರಿ. ದುರದೃಷ್ಟವಶಾತ್ ದಕ್ಷಿಣ ಕನ್ನಡದಲ್ಲಿ ಹಿಂದು ಮುಸ್ಲಿಂ ಸಂಘಟನೆಗಳು ಮತೀಯವಾದದಲ್ಲಿ ತೊಡಗುತ್ತ ದಕ್ಷಿಣ ಕನ್ನಡದ ನೈಜ ಸಮಸ್ಯೆಗಳನ್ನೇ ಮರೆಸುತ್ತಿವೆ. ಈಗ ನಡೆದಿರುವ ಪುಂಡಾಟಿಕೆಗಳಿಗಿಂತಲೂ ಹೆಚ್ಚಿನ ಅಪಾಯಕಾರಿ ಪ್ರವೃತ್ತಿ ಈ ಮತೀಯವಾದಿಗಳನ್ನು ಸಮರ್ಥಿಸಿಕೊಳ್ಳುತ್ತಿರುವ ವಿದ್ಯಾವಂತರೆನ್ನಿಸಿಕೊಂಡವರಲ್ಲಿ ಕಾಣಿಸುತ್ತಿರುವುದು ಬರಲಿರುವ ಕೆಟ್ಟ ದಿನಗಳ ಮುನ್ಸೂಚನೆಯಾ?
ಅಂತರ್ಜಾಲದ ಪರಿಣಾಮವಾಗಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದು ಸುಲಭವಾಗಿದೆ. ಫೇಸ್ ಬುಕ್ಕಿನಲ್ಲಿ, ವಿವಿಧ ಬ್ಲಾಗುಗಳಲ್ಲಿ, ಹೊಸ ದಿಗಂತದಂತಹ ಪತ್ರಿಕೆಗಳಲ್ಲಿ ಪಡೀಲಿನ ಘಟನೆಯ ಬಗ್ಗೆ ಬಹುತೇಕ ವಿದ್ಯಾವಂತರೇ ಬರೆಯುತ್ತಿರುವ ಲೇಖನ, ಕಮೆಂಟುಗಳನ್ನು ಗಮನಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿಯೇ ದೋಷವಿದೆಯೇನೋ ಎಂಬ ಅನುಮಾನ ಕಾಡುತ್ತದೆ. “ಮಂಡ್ಯದಲ್ಲಿ ‘ಹಿಂದೂ’ ಹೆಣ್ಣುಮಗಳನ್ನು ನಾಲ್ವರು ‘ಮುಸ್ಲಿಮರು’ ಚಲಿಸುವ ರೈಲಿನಿಂದ ಹೊರತಳ್ಳಿದುದನ್ನು ಯಾಕೆ ದೊಡ್ಡ ಸುದ್ದಿ ಮಾಡಲಿಲ್ಲ? ಅಸ್ಸಾಮಿನಲ್ಲಿ ಬೋಡೋ ಹಿಂದೂಗಳನ್ನು ಬಾಂಗ್ಲಾ ಮುಸ್ಲಿಮರು ಶೋಷಿಸುತ್ತಿರುವುದ್ಯಾಕೆ?” ಎಂಬಂಥಹ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ!
ಸಹಿಸಿಕೊಳ್ಳುವುದಕ್ಕಿಂತ ತಿರುಗೇಟು ನೀಡುವುದೇ ಒಳ್ಳೇದು ಎಂದು ಅನಿಸಲ್ವಾ?
-ರಶ್ಮಿ ಕಾಸರಗೋಡು
ದಿನಪತ್ರಿಕೆ ತೆರೆದು ನೋಡಿದರೆ ಪ್ರತಿದಿನವೂ ಮಹಿಳೆಯ ಮೇಲೆ ದೌರ್ಜನ್ಯ ಎಂಬ ಒಂದು ಸುದ್ದಿ ಇದ್ದೇ ಇರುತ್ತದೆ. ಅತ್ತೆಯ ದೌರ್ಜನ್ಯ, ಪತಿಯ ದೌರ್ಜನ್ಯ, ಕಚೇರಿಯಲ್ಲಿ ದೌರ್ಜನ್ಯ ಅಬ್ಬಾ ಎಷ್ಟೊಂದು ವಿಧದ ದೌರ್ಜನ್ಯಗಳು!. ನಾವು ಮುಂದುವರಿದಿದ್ದೇವೆ, ಅಬಲೆಯಲ್ಲ ಸಬಲೆ ಎಂದು ನಾನೂ ಸೇರಿದಂತೆ ಮಹಿಳೆಯರೆಲ್ಲಾ ಗಟ್ಟಿಯಾಗಿ ಕೂಗಿ ಹೇಳುತ್ತಿದ್ದೇವೆ. ಹೆಣ್ಣು ಅಬಲೆಯಿಂದ ಸಬಲೆಯಾಗಿ ಬಡ್ತಿ ಪಡೆದಿದ್ದರೂ ದೌರ್ಜನ್ಯ , ಕಿರುಕುಳಗಳು ಮಾತ್ರ ಅವಳ ನೆರಳಂತೆ ಹಿಂಬಾಲಿಸುತ್ತಿವೆ. ಹಳ್ಳಿಯಲ್ಲಿದ್ದರೂ, ನಗರದಲ್ಲಿದ್ದರೂ ಮಹಿಳೆ ದೌರ್ಜನ್ಯಕ್ಕೊಳಗಾಗುವುದು ತಪ್ಪಿಲ್ಲ. ಅಲ್ಲಿ ಹಾಗಾಯ್ತು, ಇಲ್ಲಿ ಹೀಗಾಯ್ತು ಎಂದು ಎಂಬ ವರದಿಗಳನ್ನೋದಿದಾಗ ಅಯ್ಯೋ ಪಾಪ ಎಂದು ಎನಿಸುತ್ತದೆ. ಆದರೆ ಇದಕ್ಕೆ ಪರಿಹಾರ ಏನು? ಎಂಬುದರ ಬಗ್ಗೆ ಚಿಂತಿಸತೊಡಗಿದಾಗಲೇ ಸಮಸ್ಯೆಯ ಗಂಭೀರತೆ ಅರಿವಿಗೆ ಬರುವುದು. ಇತ್ತೀಚೆಗೆ ನಮ್ಮ ದೇಶದಲ್ಲಿ ಇಂಥಾ ದೌರ್ಜನ್ಯಗಳ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಅದರಲ್ಲೂ ಬೆಂಗಳೂರು ಸುರಕ್ಷಿತವಲ್ಲ ಎಂದು ಹೇಳಲಾಗುತ್ತದೆ. ಎನ್ ಸಿಆರ್ ಬಿ (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವರದಿ ಪ್ರಕಾರ 2011ರಲ್ಲಿ ಬೆಂಗಳೂರಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯಗಳ ಬಗ್ಗೆ ದಾಖಲಾದ ಪ್ರಕರಣಗಳ ಸಂಖ್ಯೆ 1,890, ಇನ್ನು ದಾಖಲಾಗದೇ ಇರುವ ದೌರ್ಜನ್ಯಗಳ ಸಂಖ್ಯೆ ಎಷ್ಟಿರಬಹುದೇನೋ. ನವದೆಹಲಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 4,489. ಅಂದರೆ ದೆಹಲಿಯ ನಂತರ ಬೆಂಗಳೂರು ನಗರವೇ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬುದಕ್ಕೆ ಈ ಪ್ರಕರಣಗಳ ಸಂಖ್ಯೆಯೇ ಸಾಕ್ಷಿ.
ಎನ್ ಸಿಆರ್ ಬಿ ನೀಡಿರುವ ಅಂಕಿ ಅಂಶಗಳ ಪ್ರಕಾರ 2011ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ಲೆಕ್ಕಾಚಾರ ಹೀಗಿದೆ.
ಇವರ ಪಾಲಿಗೆ ‘ಹೆಣ್ಣು’ ಟಿ ಆರ್ ಪಿ ಹೆಚ್ಚಿಸುವ ಕ್ಯಟಲಿಸ್ಟ್ ಮಾತ್ರ…
– ಚೇತನಾ ತೀರ್ಥಹಳ್ಳಿ
ಸತ್ತು ಬಿದ್ದಿತ್ತು ಭಾರತ’ – ಇದು ಡಿಸೆಂಬರ್ 2, 2007ರಂದು ಬರೆದು ನನ್ನ ಬ್ಲಾಗ್ ನಲ್ಲಿ ಹಾಕಿಕೊಂಡಿದ್ದ ಲೇಖನ.
ಆ ದಿನ ಅಸ್ಸಾಮಿನ ಬುಡಕಟ್ಟು ಜನಾಂಗವೊಂದು ತನ್ನ ಹಕ್ಕುಗಳಿಗಾಗಿ ಒತ್ತಾಯಿಸಿ ಧರಣಿ ಹೂಡಿತ್ತು. ಅದರಲ್ಲಿ ಹೆಂಗಸರೂ ಇದ್ದರು. ದಿಬ್ರುಗಡ್ ನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿತ್ತು. ಅದೇ ಸಮಯಕ್ಕೆ ಗುವಹಾಟಿಯ ಬೀದಿಯೊಂದರಲ್ಲಿ ಒಬ್ಬ ಟ್ರೈಬಲ್ ಹೆಣ್ಣುಮಗಳು ಪ್ರತಿಭಟನೆಯ ಬೋರ್ಡ್ ಹಿಡಿದು ತನ್ನ ಪಾಡಿಗೆ ನಿಂತಿದ್ದಳು. ತನ್ನ ಜನಾಂಗದ ಹಕ್ಕಿಗಾಗಿ ಶಾಂತಿಯುತ ಪ್ರತಿರೋಧ ತೋರುತ್ತಿದ್ದ ಆ ಹೆಣ್ಣನ್ನು ಗುವಹಾಟಿಯ ಕೆಲವು ಗಂಡಸರು ಅಟ್ಟಾಡಿಬಿಟ್ಟಿದ್ದರು. ಜನಾಂಗೀಯ ದ್ವೇಷ, ಮತ್ತೆಲ್ಲೋ ನಡೆದ ಹಿಂಸೆಗೆ ಪ್ರತಿಯಾಗಿ ಇಲ್ಲಿ ಅಸಹಾಯಕ ಹೆಣ್ಣಿನ ಮೇಲೆ ಮುಗಿಬಿದ್ದಿದ್ದರು. ಆಗಲೂ ಒಬ್ಬ ಮೀಡಿಯಾ ಹುಡುಗ ಫೋಟೋಗಳನ್ನ ತೆಗೆದು “ಭೇಷ್” ಆಗಿದ್ದ!
~
2012ರ ಜುಲೈ 13. ಪಬ್ ನಿಂದ ಹೊರಬಂದು ಸ್ನೇಹಿತರ ಜತೆ ಜಗಳಾಡುತ್ತಿದ್ದ ಹುಡುಗಿಯ ಮೇಲೆ 20 ಜನ ಗಂಡಸರು ಕೈಮಾಡಿದರು. ಕೈಹೋದಲ್ಲೆಲ್ಲ ಮುಟ್ಟಿ ತೆವಲು ತೀರಿಸಿಕೊಂಡರು. ಅವಳ ಬಟ್ಟೆ ಚಿಂದಿಯಾಯ್ತು. ಇದು ಕೂಡ ನಡೆದಿದ್ದು ಗುವಹಾಟಿಯಲ್ಲೇ. ಆಗಲೂ ಒಬ್ಬ ಲೋಕಲ್ ಮೀಡಿಯಾದ ಫೋಟೋಗ್ರಾಫರ್ ಇದ್ದ. ಘಟನೆಯನ್ನ ವಿಡಿಯೋ ಮಾಡಿದ. ನನ್ನಿಂದ ಸಹಾಯ ಅಂತೂ ಮಾಡಲಾಗಲಿಲ್ಲ, ಅದಕ್ಕೆ ಚಿತ್ರೀಕರಣ ಮಾಡಿದೆ ಅಂದ. ಶೂಟ್ ಮಾಡುವಾಗ ವಿಡಿಯೋಗೆ ಬೆಳಕು ಸಾಕಾಗ್ತಿಲ್ಲ, ಅವಳನ್ನ ಈಚೆ ಎಳಕೊಂಡು ಬನ್ನಿ ಅಂತ ಅವನಂದಿದ್ದು ರಟ್ಟಾಯ್ತು.
~
2009ರ ಜನವರಿ 24. ಮಂಗಳೂರಿನ ಪಬ್ ಒಂದರ ಮೇಲೆ ಶ್ರೀರಾಮ ಸೇನೆಯ ವಾನರರು ದಾಳಿ ಮಾಡಿದರು. ಹೆಣ್ಣುಮಕ್ಕಳನ್ನ ಹಿಗ್ಗಾಮುಗ್ಗ ಬಡಿದರು. ಚಾನೆಲ್ ಒಂದು ಅಚ್ಚುಕಟ್ಟಾಗಿ ಚಿತ್ರೀಕರಿಸಿ ಟಿ ಆರ್ ಪಿ ಹೆಚ್ಚಿಸಿಕೊಂಡಿತು. ತಪ್ಪಿಸುವ ಗೋಜಿಗೆ ಹೋಗುವುದು ಹಾಗಿರಲಿ, ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿಯಿತು.
ಮತ್ತಷ್ಟು ಓದು 
ಮುಸ್ಲಿಮರ ವಿರುದ್ಧ ಕೆಂಡಕಾರುವುದಕ್ಕಷ್ಟೇ ಹಿಂದೂ ಜಾಗೃತಿ ಸೀಮಿತವಾಗಬೇಕಾ?
– ಡಾ. ಅಶೋಕ್ ಕೆ.ಆರ್
ಅನಾಗರೀಕ, ಹಿಂದುಳಿದ ರಾಜ್ಯಗಳೆಂಬ ಹಣೆಪಟ್ಟಿ ಹೊತ್ತ ದೂರದ ಬಿಹಾರ, ಉತ್ತರಪ್ರದೇಶದಲ್ಲಿ ನಡೆಯುತ್ತದೆಂದು ಕೇಳುತ್ತಿದ್ದ ಅಮಾನವೀಯ ಘಟನೆಯೊಂದು ನಮ್ಮ ಕರ್ನಾಟಕದ ಮಂಡ್ಯಜಿಲ್ಲೆಯಲ್ಲಿ ನಡೆದುಹೋಗಿದೆ. ನಾಲ್ವರು ಯುವಕರು ಯಶವಂತಪುರ – ಮೈಸೂರು ರೈಲಿನಲ್ಲಿ ಮಹಿಳೆಯೊಬ್ಬಳನ್ನು ಚುಡಾಯಿಸಿದ್ದಾರೆ. ಬೇಸತ್ತ ಯುವತಿ ಬಾಗಿಲಿನ ಬಳಿ ಬಂದು ನಿಂತಿದ್ದಾಳೆ. ಅಲ್ಲಿಗೂ ಬಂದು ರೇಗಿಸಲಾರಂಭಿಸಿದವರಿಗೆ ಪೋಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾಳೆ. ಕೋಪಗೊಂಡ ಆ ನಾಲ್ಕು ಮನುಷ್ಯರೂಪಿ ರಾಕ್ಷಸರು ಚಲಿಸುವ ರೈಲಿನಿಂದ ಆಕೆಯನ್ನು ಹೊರತಳ್ಳಿಬಿಟ್ಟಿದ್ದಾರೆ. ರೈಲಾಗ ಮದ್ದೂರಿನ ಶಿಂಷಾ ನದಿಯ ಸೇತುವೆಯ ಮೇಲೆ ಚಲಿಸುತ್ತಿತ್ತು. ಅದೃಷ್ಟವಶಾತ್ ಬದುಕುಳಿದಿದ್ದಾಳೆ. ಬೆನ್ನುಹುರಿಗೆ ಬಿದ್ದ ಏಟು, ಮೂಳೆಮುರಿತದಿಂದ ಎಷ್ಟರ ಮಟ್ಟಿಗೆ ಆ ಯುವತಿ ಚೇತರಿಸಿಕೊಳ್ಳುತ್ತಾಳೆ ಎಂಬುದನ್ನು ಕಾದುನೋಡಬೇಕಷ್ಟೇ.
ಆ ನಾಲ್ಕೂ ಯುವಕರನ್ನು ಪೋಲೀಸರು ಬಂಧಿಸಿದ್ದಾರೆ. ಮಾರನೇ ದಿನ ನ್ಯಾಯಾಲಯಕ್ಕೆ ಅವರನ್ನು ಕರೆದೊಯ್ಯುವಾಗ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮುತ್ತಿಗೆ ಹಾಕಿ ಅಪರಾಧಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಊರಿನ ಹೆಣ್ಣುಮಗಳ ಜೀವಕ್ಕೆ ಅಪಾಯತಂದ ಯುವಕರ ಮೇಲಿನ ಕೋಪ ಸಹಜವಾದುದು. ಆದರೆ? ಹಿಂದೂ ಜಾಗರಣ ವೇದಿಕೆ ಜಾಗೃತಗೊಂಡು ಆ ನಾಲ್ವರನ್ನು ಥಳಿಸಿದ್ದು ಯುವತಿಯ ಮೇಲೆ ಹಲ್ಲೆಯಾದ ಕಾರಣಕ್ಕೆ ಮಾತ್ರವಲ್ಲ! ಹಲ್ಲೆ ಮಾಡಿದ ನಾಲ್ವರು ಮುಸ್ಲಿಮರೆಂಬುದೇ ಇವರು ಜಾಗೃತಿಯಾಗಲು ಕಾರಣ! ಹಲ್ಲೆ ಮಾಡಿದವರು ಮುಸ್ಲಿಮರಾಗದೇ ಹಿಂದೂಗಳಾಗಿದ್ದಲ್ಲಿ ಅದರಲ್ಲೂ ಯಾವುದೋ ‘ಮೇಲುಜಾತಿಗೆ’[?] ಸೇರಿದವರಾಗಿದ್ದಲ್ಲಿ ಖಂಡಿತವಾಗ್ಯೂ ಹಿಂದೂ ಜಾಗರಣ ವೇದಿಕೆ ಜಾಗೃತವಾಗುತ್ತಿರಲಿಲ್ಲ ಎಂಬುದೇ ಇಂಥ ಸಂಘಟನೆಗಳ – ಹಿಂದೂ ಧರ್ಮದ ವೈಫಲ್ಯ.





