ವಿಷಯದ ವಿವರಗಳಿಗೆ ದಾಟಿರಿ

Recent Articles

28
ಮೇ

ವೈಜ್ಞಾನಿಕ ಮನೋಧರ್ಮ ಉಳ್ಳ ಶ್ರೀಸಾಮಾನ್ಯ

-ಎ.ವಿ.ಜಿ ರಾವ್

ಶಾಲೆಗೇ ಹೊಗದಿರುವ ಶ್ರೀಸಾಮಾನ್ಯನೂ ವಿಜ್ಞಾನ ಪದವೀಧರನಿಗಿಂತ ಹೆಚ್ಚು ವೈಜ್ಞಾನಿಕ ಮನೋಧರ್ಮ ಉಳ್ಳವನಾಗಿರುವುದು ಸಾಧ್ಯ. ವೈಜ್ಞಾನಿಕ ಮನೋಧರ್ಮ ಅಂದರೇನು ಅನ್ನುವುದರ ಕುರಿತು ಪಾಂಡಿತ್ಯಪೂರ್ಣ ಪ್ರವಚನ ನೀಡಬಲ್ಲವರು, ವೈಜ್ಞಾನಿಕ ಸಂಶೋಧನೆ ಮಾಡುವುದನ್ನೇ ತಮ್ಮ ಕಾಯಕವನ್ನಾಗಿಸಿಕೊಂಡಿರುವ ‘ವೃತ್ತಿಪರ’ ವಿಜ್ಞಾನಿಗಳು ತಮ್ಮ ವೈಯಕ್ತಿಕ ಬದುಕಿನಲ್ಲಿ ವೈಜ್ಞಾನಿಕ ಮನೋಧರ್ಮ ಪ್ರದರ್ಶಿಸದಿರುವ ಅಸಂಖ್ಯ ನಿದರ್ಶನಗಳು ಲಭಿಸುತ್ತವೆ. ವೈಜ್ಞಾನಿಕ ಮನೋಧರ್ಮ ಅಂದರೇನು ಎಂಬುದನ್ನು ತಿಳಿಯದೆಯೂ (ನೋಡಿ:ವಿಜ್ಞಾನ ವಿಧಾನ, ವೈಜ್ಞಾನಿಕ ಮನೋಧರ್ಮ, ವೈಜ್ಞಾನಿಕ ಪ್ರವೃತ್ತಿ, ಮೂಢನಂಬಿಕೆಗಳು) ವಿಜ್ಞಾನದ ಗಂಧಗಾಳಿ ಇಲ್ಲದೆಯೂ ನಿತ್ಯಜೀವನದಲ್ಲಿ ವೈಜ್ಞಾನಿಕ ಮನೋಧರ್ಮ ಉಳ್ಳವರಾಗಿರುವುದು ಸಾಧ್ಯ.

ಈ ಮುಂದೆ ವಿವರಿಸಿರುವ ಲಕ್ಷಣಗಳು ನಿಮ್ಮಲ್ಲಿ ಇದ್ದರೆ ನೀವೂ ವೈಜ್ಞಾನಿಕ ಮನೋಧರ್ಮ ಉಳ್ಳವರು. ಇಲ್ಲದೇ ಇದ್ದರೆ ಅವನ್ನು ಪ್ರಜ್ಞಾಪೂರ್ವಕವಾಗಿ ನಿಮ್ಮದಾಗಿಸಿಕೊಳ್ಳಲು ಪ್ರಯತ್ನಿಸಿ, ಮುಂದೊಂದು ದಿನ ನಿಮಗರಿವಿಲ್ಲದೆಯೇ ವೈಜ್ಞಾನಿಕ ಮನೋಧರ್ಮ ಉಳ್ಳವರು ನೀವಾಗಿರುತ್ತೀರಿ.

ಈ ಮುಂದಿನ ಕಾಲ್ಪನಿಕ ವಿದ್ಯಮಾನದ ನಿದರ್ಶನದಲ್ಲಿ ವರ್ಣಿಸಿದ ವ್ಯಕ್ತಿ ನೀವಾಗಿರಬಹುದೇ—–

ಮತ್ತಷ್ಟು ಓದು »

26
ಮೇ

ಪೆಟ್ರೋಲ್ ದರ ಹೆಚ್ಚಳ ಮತ್ತು ನಾವು

– ಪ್ರಶಸ್ತಿ.ಪಿ,ಸಾಗರ

ಇದೇ ಏಪ್ರಿಲ್ ಒಂದರಲ್ಲಿ ೭೩.೫ ಇದ್ದ ಪೆಟ್ರೋಲು ಈಗ ೮೧.೭ ಮುಟ್ಟಿದೆ.ಒಂದೇ ತಿಂಗಳಲ್ಲಿ ಅಂದಾಜು ೭ ರೂ ಹೆಚ್ಚಳ! ಪ್ರತೀ ಬಾರಿ ಹೆಚ್ಚಾದಾಗ್ಲೂ ಕೇಂದ್ರ ಸರ್ಕಾರ ಏನ್ಮಾಡ್ತಾ ಇದೆ? ರಾಜ್ಯ ಸರ್ಕಾರ ಏಕೆ ಸುಮ್ನಿದೆ ಅಂತ ಬೊಬ್ಬೆ ಹಾಕೋದು, ಸೈಕಲ್ ಸವಾರಿ ಮಾಡ್ಬೇಕು ಇನ್ಮುಂದೆ, ನಟರಾಜ ಸರ್ವೀಸು ಮಾಡೋಣ ಅಂತ ಸುಮ್ನೆ ಉಡಾಫೆ ಮಾಡೋದೆ ಆಯ್ತು. ಯಾರೆಷ್ಟೇ ಪ್ರತಿಭಟನೆ ಮಾಡಿದ್ರೂ ಇವ್ರು ಬಗ್ಗೊಲ್ಲ ಅಂತ ಅವ್ರಿಗೆ ಹಿಡಿಶಾಪ ಹಾಕಿದ್ರೆ ಪರಿಸ್ಥಿತಿ ಸರಿ ಆಗತ್ಯೆ? ನಮ್ಮ ಭೂಮಿಯಲ್ಲಿರೋ ನವೀಕರಿಸಲಾಗದ (ಪೆಟ್ರೋಲು, ಡೀಸೆಲು ಮುಂತಾದ)ಇಂಧನ ಮೂಲಗಳನ್ನ ಹೀಗೆ ಉಪಯೋಗಿಸ್ತಾ ಹೋದ್ರೆ ಇನ್ನು ಅಂದಾಜು ಮೂವತ್ತು ವರ್ಷಗಳಲ್ಲಿ ಅವುಗಳೆಲ್ಲಾ ಖಾಲಿ ಆಗುತ್ತೆ ಅಂತ ಹೈಸ್ಕೂಲಿನಲ್ಲೇ ಓದಿದ ನೆನಪು . ಆದರೂ ನಾವು ಎಚ್ಚೆತ್ತುಕೊಳ್ಳುತ್ತಿಲ್ಲ ಏಕೆ? ಸುಧಾರಣೆ ಆಗಲಿ, ಆದರೆ ಅದು ನಮ್ಮಿಂದ ಅಲ್ಲ, ಶಂಕರಾಚಾರ್ಯರು ಹುಟ್ಟಲಿ, ಆದರೆ ಪಕ್ಕದ ಮನೆಯಲ್ಲಿ ಎಂಬಂತ ಧೋರಣೆ ಏಕೆ?

ಕೆಲವೇ ವರ್ಷಗಳ ಹಿಂದೆ ಜತ್ರೋಪಾದಂತಹ ಗಿಡಗಳಿಂದ ಜೈವಿಕ ಇಂಧನ ತಯಾರಿಸೋ ಬಗ್ಗೆ ಚರ್ಚೆ ನಡೆದಿತ್ತು. ಅವುಗಳನ್ನು ಮರುಭೂಮಿಯಂತಹ ನೀರಿಲ್ಲದ ಕಡೆಯೂ ಬೆಳೆಸಬಹುದು ಎಂಬ ವದಂತಿಯೂ/ಸುದ್ದಿಯೂ ಹಬ್ಬಿತ್ತು. ನಮ್ಮ ಕಡೆಯೂ ಅದನ್ನ ಬೇಲಿ ಬದಿಯಲ್ಲಿ ಅದನ್ನು ಹಾಕಿದ್ದೆವು. ಆಮೇಲೆ ಅದರ ಬೀಜವನ್ನು ಖರೀದಿಸುವ ಬಗ್ಗೆಯಾಗಲಿ, ಎಣ್ಣೆ ಮಾಡುವ ಸುದ್ದಿಯಾಗಲಿ ಬರಲೇ ಇಲ್ಲ. ಇಂಥಹ ಪ್ರಯತ್ನಗಳೆಲ್ಲಾ ನಿರಂತರವಾಗಿರಬಾರದೇ? ಪೆಟ್ರೋಲ್ ದರ ಜಾಸ್ತಿ ಆದಾಗ ಮಾತ್ರ ಎಲ್ಲಿ ಜತ್ರೋಪಾದವರು ಎಂದು ಗುಟುರು ಹಾಕಬೇಕೇ ? ಮತ್ತಷ್ಟು ಓದು »

25
ಮೇ

ಐಪಿಎಲ್ 5 – ಈ ದುರಂತಕ್ಕೆ ಏನ್ ಅಂತೀರಿ?

– ಗಣೇಶ್ ಕೆ. ದಾವಣಗೆರೆ

ಆತ ಎಂಜಿನಿಯರಿಂಗ್ ಕಾಲೇಜು ಹುಡುಗ. ಕಾಲೇಜು ಫೀಸ್ ಕಟ್ಟು ಅಂತಾ 50,000 ಕೊಟ್ಟರು. ಆದರೆ, ಆತ ಐಪಿಎಲ್ ಬೆಟ್ಟಿಂಗ್ ಆಡಿ ಐವತ್ತನ್ನ ಲಕ್ಷ ಮಾಡಿಕೊಂಡರೆ ಹೇಗೆ ಅಂತಾ ಯೋಚಿಸಿ, ಬೆಟ್ಟಿಂಗೆ ಕಟ್ಟಿದ. ಪರಿಣಾಮ? ಅವರಪ್ಪ ಕಷ್ಟಪಟ್ಟು ವರ್ಷವೆಲ್ಲ ದುಡಿದ 50,000 ಯಾವನದೋ ಪಾಲಾಯಿತು. ಅವರ ಅಪ್ಪ ಅಮ್ಮ ಈಗ ಗೋಳಾಡ್ತಾ ಇದಾರೆ. ಇದು ನಾನು ಕಣ್ಣಾರೆ ಕಂಡ ಸತ್ಯ ಘಟನೆ.

ಒಂದೇ ಒಂದು ಬಾರಿ ಹುಡುಗರ ಪಿಜಿಗಳು, ಕಾಲೇಜು ಬಾಯ್ಸ್ ಹಾಸ್ಟೆಲ್ ಗಳು, ನಾಲ್ಕು ಜನ ಸೇರುವ ವೃತ್ತಗಳು ಎಲ್ಲವನ್ನ ಒಮ್ಮೆ ಅಡ್ಡಾಡಿ ಬನ್ನಿ. ನಿಮಿಷ ನಿಮಿಷಕ್ಕೂ ಬೆಟ್ಟಿಂಗ್. ಐನೂರಕ್ಕೆ D ಅನ್ನೋ ಕೋಡ್ ವರ್ಡ್. ಸಾವಿರಕ್ಕೆ S ಅನ್ನೋ ಕೋಡ್ ವರ್ಡ್. 1 D ಅಂದ್ರೆ 500. 2 D ಅಂದ್ರೆ 1000, 1 S ಅಂದ್ರೆ 1000. 2 S ಅಂದ್ರೆ 2000 ಹಿಂಗೇ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇದರಲ್ಲೂ ಫ್ಯಾನ್ಸಿ ಅನ್ನೋ ಆಟ ಬೇರೆ ಇದೆ. ಪ್ರತಿ ಬಾಲ್ ಮೇಲೆ ಬೆಟ್ಟಿಂಗ್. ಈ ಬಾಲ್ ಫೋರ್ ಹೋಗುತ್ತೆ. ಬೆಟ್ ಕಟ್ತೀಯಾ? ಹಳ್ಳಿಯಲ್ಲಿ ಕೂತಿರುವ ಬುಕ್ಕಿಯ ದನಿ. ಈತ ಇಲ್ಲಿಂದ 2 S ಅಂದ್ರೆ ಎರಡು ಸಾವಿರ ಬೆಟ್ಟಿಂಗ್. ಬಂತು ಅಂದ್ರೆ 4000. ಹೋಯ್ತು ಅಂದ್ರೆ 2000 ಖತಂ. ಸುಮ್ನೆ ಒಂದು ಆಟ ಆಡಿ ರೊಕ್ಕ ಮಾಡಿಕೊಂಡು ಹೋಗುವಂತಿಲ್ಲ. ಸೀಸನ್ ಮುಗಿಯುವವರೆಗೂ ಆಡಬೇಕು. ಹೊಸಬರಾದರೆ  50,000 ಠೇವಣಿ ಕೂಡಾ ಇಡಬೇಕು. ಅಮೇಲೆ ಆಟ.

ಇಷ್ಟೆಲ್ಲಾ ಮಾತುಕತೆಗಳು ನಾಲ್ಕೈದು ಸೆಕೆಂಡುಗಳಲ್ಲಿ ಆಗುವಂಥದ್ದು. ಬುಕ್ಕಿಗಳು ಜಾಸ್ತಿ ಹೊತ್ತು ಮಾತಾಡಲ್ಲ. ನಿರ್ಧರಿಸಲು ನಿಮಿಷಗಟ್ಲೇ ಟೈಮ್ ಕೂಡಾ ಕೊಡಲ್ಲ. ಬರೀ Guess work ಮೇಲೆ ಹೌದು ಇಲ್ಲಾ ಅನ್ಬೇಕು.

ಮತ್ತಷ್ಟು ಓದು »

23
ಮೇ

ಗಾಳ..

– ಅನಿತ ನರೇಶ್ ಮಂಚಿ

ಎಫ್ ಬಿ ತೆರೆಯುತ್ತಿದ್ದಂತೆ ಬದಿಯಲಿ ಬಂದ ಫ್ರೆಂಡ್  ರಿಕ್ವೆಷ್ಟ್ ಗಳನ್ನು ನೋಡಿದ. ಅಲ್ಲಿ ಕಾಣಿಸಿದ ಸುಂದರಿಯೊಬ್ಬಳ  ಭಾವಚಿತ್ರ ನೋಡಿ ದಂಗಾದ ಲಲಿತ್..
ಹೆಸರು ನಿವೇದಿತಾ.. ಕಾಲೇಜು ಕನ್ಯೆ.. ತುಂಟ ನಗುವಿನ ಆ ಮುಖ ತನ್ನ ಗಾಳಕ್ಕೆ ಬೀಳಬಹುದೇ… !! ಅರೆಕ್ಷಣ ಚಿಂತಿಸಿ ,ಕೂಡಲೆ ಕನ್ ಫರ್ಮ್ ಮಾಡಿದ.

ಜೊತೆಗೆ ‘ಬಿ ಮೈ ಫ್ರೆಂಡ್ ಫಾರ್  ಎವರ್’ ಎಂದು ಮೆಸೇಜ್ ಕಳುಹಿಸಿದ.

ಕೂಡಲೇ ಆ ಕಡೆಯಿಂದ  ‘ಇಟ್ ಈಸ್ ಮೈ ಪ್ಲೆಶರ್’ ಎಂಬ ಪ್ರತ್ಯುತ್ತರ.

ಕುಳಿತಲ್ಲೇ ನಸುನಗೆ ಬೀರಿದ. ಲಲಿತ್ ಅಗರ್ವಾಲ್ ಹೆಸರು ಯುವ ಪೀಳಿಗೆಗೆ ಪರಿಚಿತವೇ. ಆಗೊಮ್ಮೆ ಈಗೊಮ್ಮೆ ಪತ್ರಿಕೆಗಳಲ್ಲೂ ರಾರಾಜಿಸುತ್ತಿದ್ದ ತನ್ನ ಮುಖ. ಅಪ್ಪನ ಉದ್ಯಮದ ಕೋಟಿಗಟ್ಟಲೆ ಹಣದ ಏಕೈಕ ವಾರಸುದಾರ, ಯುವತಿಯರ ನಿದ್ದೆ ಕದಿಯುವಂತಿರುವ ಸುಂದರ ಮೊಗ.. ಇಷ್ಟು ಸಾಲದೇ ನನ್ನನ್ನು ಗುರುತಿಸಲು.. ಹೆಮ್ಮೆಯಿಂದ  ಬೀಗಿತ್ತು ಮನ.

ಮತ್ತಷ್ಟು ಓದು »

22
ಮೇ

ದಿಕ್ಕು ತಪ್ಪಿ, ದಿಕ್ಕು ತಪ್ಪಿಸುತ್ತಿರುವ ಟಿ.ವಿ ಸುದ್ದಿ ವಾಹಿನಿಗಳು …

– ಎಸ್.ಎನ್ ಭಾಸ್ಕರ್

ಸರಿಸುಮಾರು ೧೦೦ ಕೆ.ಜಿಗೆ ತೂಗುವ ಆತನ ಮೈಯೆಲ್ಲಾ ವಿಭೂತಿಮಯ. ಕೊರಳಿನಿಂದ ಹೊಟ್ಟೆಯ ಹೊಕ್ಕುಳನ್ನು ತಾಕುವಷ್ಟು ಉದ್ದದ ಹಲವು ರುದ್ರಾಕ್ಷಿ ಮಾಲೆಗಳು. ಎತ್ತರದ ಆಕರ್ಷಕ ಆಸನದ ಮೇಲೆ ಪ್ರತಿಷ್ಟಾಪಿಸಲ್ಪಟ್ಟಿರುವ ವ್ಯಕ್ತಿಯ ಬಾಯಲ್ಲಿ ಅನಿಯಮಿತವಾಗಿ ಬರುತ್ತಿರುವ ಹಿತೋಪದೇಷಗಳು.

ಅಲ್ಲೆಲ್ಲೋ ಒಂದು ಗುಹೆ, ಅದರಲ್ಲಿದೆ ಅಚ್ಚರಿಯ ಕಲ್ಲು, ಮುಟ್ಟಿದರೆ ನಿಮ್ಮ ಪಾಪವೆಲ್ಲಾ ಮಾಯ….ಮತ್ತಿನ್ನಲ್ಲೋ ಇದೆ ಒಂದು ಕೆರೆ ಅದರ ನೀರಿನಲ್ಲಿ ಮಿಂದೆದ್ದರೆ ನಿಮ್ಮ ಕಷ್ಟ ಕಾರ್ಪಣ್ಯ ಅಷ್ಟ ದರಿದ್ರಗಳಿಗೂ ವಿರಾಮ.. ಹೀಗೂ ಉಂಟೇ..????

ಮುಂದೆ ಕಾದಿದೆ…..ಬರಲಿದೆ ಭೀಕರ ಪ್ರಳಯ, ಇದರಿಂದ ಜಗತ್ತು ಸರ್ವನಾಷ. ಅಲ್ಲೋಲ-ಕಲ್ಲೋಲ ಎಬ್ಬಿಸಲಿದೆ ಸುನಾಮಿ..ಇಡೀ ವಿಶ್ವವೇ ಮುಳಗಲಿದೆ ಸಮುದ್ರದಲ್ಲಿ..

ಕ್ಷಮಿಸಿ… ಇವೆಲ್ಲಾ ನಮ್ಮ ದೃಶ್ಯ ಮಾಧ್ಯಮಗಳಲ್ಲಿ ಬಿತ್ತರವಾಗುವಂತ ಕಾರ್ಯಕ್ರಮಗಳ ಒಂದು ಪಕ್ಷಿನೋಟ. ಇಂದು ಹುಟ್ಟಿಕೊಂಡಿರುವ ಟಿ.ವಿ ದೃಶ್ಯ ಮಾಧ್ಯಮಗಳ ಲೆಕ್ಕ ಬೆಳೆಯುತ್ತಲೇ ಇದೆ. ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ಈ ಮಾದ್ಯಮಗಳಿಗೆ ಯಾವುದೇ ಬೇಲಿಯೇ ಇದ್ದಂತಿಲ್ಲ. ಟಿ.ವಿ೯, ಟಿವಿ೫, ನ್ಯೂಸ್೯, ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ, ಆ ಟಿವಿ, ಈ ಟಿವಿ. ಇತ್ಯಾದಿ..ಇತ್ಯಾದಿ..೨೪ ಘಂಟೆಗಳ ನಿರಂತರ ಸುದ್ದಿಪ್ರಸಾರಕ್ಕಾಗಿ ಈ ಚಾನೆಲ್‌ಗಳು ಮೀಸಲು. ಅದೆಂತಹ ಸುದ್ದಿಯೇ ಆಗಿರಬಹುದು ಅಥವಾ ಅಸಲು ಸುದ್ದಿಯೇ ಅಲ್ಲದಿರಬಹುದು, ಒಟ್ಟಿನಲ್ಲಿ ಹೇಳಲಿಕ್ಕೊಂದು ವಿಷಯ, ಬಿತ್ತರಿಸಲೊಂದು ಮಾಧ್ಯಮ, ನೋಡಲಿಕ್ಕೆಂದು ಪ್ರೇಕ್ಷಕರು…

ಮತ್ತಷ್ಟು ಓದು »

21
ಮೇ

ವಿಜ್ಞಾನ ವಿಧಾನ, ವೈಜ್ಞಾನಿಕ ಮನೋಧರ್ಮ, ವೈಜ್ಞಾನಿಕ ಪ್ರವೃತ್ತಿ, ಮೂಢನಂಬಿಕೆಗಳು

– ಎ.ವಿ.ಜಿ ರಾವ್

ವಿಜ್ಞಾನ ವಿಧಾನದಲ್ಲಿ (ಸೈಂಟಿಫಿಕ್ ಮೆತಡ್) ತರಬೇತಿ ನೀಡುವುದು, ವೈಜ್ಞಾನಿಕ ಮನೋಧರ್ಮ (ಸೈಂಟಿಫಿಕ್ ಆಟಿಟ್ಯೂಡ್) ಬೆಳೆಸುವುದು, ವೈಜ್ಞಾನಿಕ ಪ್ರವೃತ್ತಿ (ಸೈಂಟಿಫಿಸಿಟಿ) ಬೆಳೆಸುವುದು, ಮೂಢನಂಬಿಕೆಗಳನ್ನು ತೊಡೆದು ಹಾಕುವುದು – ಇವೆಲ್ಲ ಪದಪುಂಜಗಳ ಬಳಕೆ ಇಂದು ಫ್ಯಾಷನ್ ಆಗಿದ್ದರೂ ಅವುಗಳ ಅರ್ಥ ಅನೇಕರಿಗೆ ಮನೋಗತವಾಗಿಲ್ಲ ಎಂಬುದು ನನ್ನ ಅನಿಸಿಕೆ. ವೈಜ್ಞಾನಿಕ ಮನೋಧರ್ಮವನ್ನು ಜನಸಾಮಾನ್ಯರಲ್ಲಿ ಬೆಳೆಸುವ ಕಾಯಕದಲ್ಲಿ ಪ್ರಾಮಾಣಿ ‘ವೈಜ್ನಾನಿಕ’, ‘ಅವೈಜ್ಞಾನಿಕ’ – ಈ ಪದಗಳನ್ನು ಅನುಕ್ರಮವಾಗಿ ಹೊಗಳಿಕೆಯ ಮತ್ತು ತೆಗಳಿಕೆಯ ಪದಗಳಾಗಿ ಬಳಸುತ್ತಿರುವವರಿಗಂತೂ ಖಂಡಿತ ಆಗಿಲ್ಲ.   ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಧರ್ಮ ಬೆಳೆಸಲು ಶ್ರಮಿಸುತ್ತಿರುವ ಸ್ವಯಂಸೇವಾ ಸಂಘಟನೆಗಳಿಗೂ ಶಿಕ್ಷಕರಿಗೂ ಇವುಗಳ ಸ್ಪಷ್ಟ ಪರಿಕಲ್ಪನೆ ಇದ್ದರೆ ವಸ್ತುಸ್ಥಿತಿಯಲ್ಲಿ ಕೊಂಚ ಸುಧಾರಣೆ ಆದೀತು.

ಅತಿ ಸಂಕ್ಷಿಪ್ತವಾಗಿ ಇವನ್ನು ಇಂತು ವ್ಯಾಖ್ಯಾನಿಸ ಬಹುದು – ವಸ್ತುಪ್ರಪಂಚದ ಆಗುಹೋಗುಗಳ ನಿರ್ಧಾರಕ ನಿಯಮಗಳನ್ನು ಆವಿಷ್ಕರಿಸುವುದು ಪ್ರಧಾನ ಗುರಿಯಾಗಿರುವ ನಿಸರ್ಗವಿಜ್ಞಾನಗಳಲ್ಲಿ ಜ್ಞಾನ್ವೇಷಣೆಗೆ ಅನುಸರಿಸುವ ವಿಶಿಷ್ಟ ವಿಧಾನವೇ ವಿಜ್ಞಾನ ವಿಧಾನ (ಇದನ್ನು ವಿಜ್ಞಾನ ಮಾರ್ಗ, ವೈಜ್ಞಾನಿಕ ವಿಧಾನ ಎಂದು ಉಲ್ಲೇಖಿಸುವುದೂ ಉಂಟು). ಈ ವಿಧಾನವನ್ನು ಸಮರ್ಪಕವಾಗಿ ಅನುಸರಿಸಲು ತಳೆದಿರಲೇಬೇಕಾದ ಮನೋಭಾವವೇ ವೈಜ್ಞಾನಿಕ ಮನೋಧರ್ಮ. ವಿಜ್ಞಾನ ವಿಧಾನವೇ ಸಮಸ್ಯೆಗಳನ್ನು ಪರಿಹರಿಸಲು ಇರುವ ಅತ್ಯುತ್ತಮ ವಿಧಾನ ಎಂಬ ಅಚಲ ವಿಶ್ವಾಸದಿಂದ ಎಂಥ ಅಡ್ಡಿಆತಂಕಗಳು ಎದುರಾದರೂ ವೈಜ್ಞಾನಿಕ ಮನೋಧರ್ಮವನ್ನು ಕೈಬಿಡದೆಯೇ ಮುಂದುವರಿಯುವ ಪ್ರವೃತ್ತಿಯೇ ವೈಜ್ಞಾನಿಕ ಪ್ರವೃತ್ತಿ.

ಮತ್ತಷ್ಟು ಓದು »

20
ಮೇ

ದೀಪ ಭಾಗ -೩

-ವಿಜಯ ಹೂಗಾರ್

ಸೂರ್ಯ ನೆತ್ತಿಯಿಂದ ಇನ್ನೊಂದೆಡೆಗೆ ವಾಲುತ್ತಿದ್ದ.ಮನೆಯೊಳಗಿನ ಪೂಜೆ ಮುಗಿಸಿ ಎಂದಿನಂತೆ ಬೆಟ್ಟದ ಮೇಲಿರುವ ಲಕ್ಷ್ಮಿ ದೇವರ ಕಡೆಗೆ ಹೋಗಲು ನೈವಿದ್ಯದ ತಟ್ಟೆ ಸಿದ್ಧಪದಿಸುತ್ತಿದ್ದಳು.ಇಷ್ಟೊತ್ತಿಗೆ ಮೈದುನ ಸೂರಪ್ಪನ ಹೆಂಡತಿ ಗಿರಿಜಕ್ಕ ಪೂಜೆ ಮಾಡಿ ದೀಪ ಹಚ್ಚಿ ಬಂದಿರುತ್ತಾಳೆ ಅಂತ ಬೆಟ್ಟದ ಮೇಲಿರುವ ದೇವಸ್ಥಾನದ ಕಡೆ ಉರಿಬಿಸಿಲಲ್ಲಿ ಹೆಜ್ಜೆ ಹಾಕತೊಡಗಿದಳು.ನೂರಾಹನ್ನೊಂದು ಮೆಟ್ಟಿಲು ಏರಿದ ಮೇಲೆ ತುಂಡಿನಂತೆ ಬರುವ ಮಟ್ಟಸ ನೆಲದ ಮೇಲೆ ದೇವಸ್ಥಾನ ಕಟ್ಟಲಾಗಿತ್ತು.ಶಾಂತವಾಗಿ ತಂಗಾಳಿ ಸುಸುತ್ತಿರುವ ದೇವಸ್ಥಾನದಲ್ಲಿ ಊರ ಗೌಡರು ಮತ್ತು ಗಿರಿಜಕ್ಕ ಗುಸು ಗುಸು ಮಾತಾಡುವದು ಕೇಳಿ ಕಮಲಜ್ಜಿ ಬೆಚ್ಚಿದಳು.ಇವಳು ಒಳ ನಡೆದಳು.ಅವರು ಸುಮ್ಮನಾದರು.ಗರ್ಭ ಗುಡಿಯೊಳಗೆ ಸೇರಿದಳು .ಗಾಳಿಯ ಆಟಕ್ಕೆ ಆಡುವಂತೆ ನೀಲಾಂಜನ  ಕುಣಿಯುತಿತ್ತು,ನಿನ್ನ ಕೈಗೆ ಸಿಗೋದಿಲ್ಲ ಅಂತ ಅಣುಕಿಸಿದಂತೆ.”ಸರದಿಯ ಪ್ರಕಾರ ನಿನಗೆ ದೀಪ ಹಚ್ಚುವ ಅವಕಾಶ ನಮಗೆ ಮಾಡಿ ಕೊಡು” ಅಂತ ದೇವರಿಗೆ ಅಧಿಕೃತವಾಗಿ ಬೇಡಿಕೊಂಡು ಹೊರಗೆ ಬಂದಳು.ಇನ್ನೇನು ಹೋಗಬೇಕು ಅನ್ನೋಷ್ಟರಲ್ಲಿ ಭೂಮಂಡಲದಂತಿರುವ ಹೊಟ್ಟೆಯ ಮೇಲೆ ಕೈ ಆಡಿಸುತ್ತ ಊರ ಗೌಡ  ‘ಕಮಲಜ್ಜಿ ನಿಮ್ ಮಗ ರಾಮಪ್ಪನಿಗೆ ಊರಿಂದ ಕರೆಸು,ಅವನ ಜೊತೆ ಮಾತಾಡೋದಿದೆ’ ಅಂತ ಗೌಡರ ಉಗ್ಗಂಡ ಧ್ವನಿಯಲ್ಲೇ ಹೇಳಿದ.ಪರಕಿವಿಯಿಂದ ಆಲಿಸುವಂತೆ ಕೇಳಿ ಮನೆಕಡೆಗೆ ಧಾವಿಸಿದಳು.ಗಿರಿಜಕ್ಕ ಮಾಡುತ್ತಿರುವ ಹುನ್ನಾರ ಕಮಲಜ್ಜಿಗೆ ತುಸು ಅರ್ಥವಾಗತೊಡಗಿತು.ಸರದಿಯ ಪ್ರಕಾರ ನಾವು ಮಾಡಬೇಕಿದ್ದ ಪೂಜೆ ಹೇಗೋ ಗೌಡರನ್ನ ತನ್ನ ಬಲೆಗೆ ಸಿಲುಕಿಸಿ ಲಪಟಾಯಿಸಬೇಕೆನ್ನುವದು ಸ್ಪಷ್ಟವಾಗತೊಡಗಿತು.

ಮತ್ತಷ್ಟು ಓದು »

18
ಮೇ

ಆಡಿಟ್ ಆಸಿಸ್ಟೆಂಟ್ ಹುದ್ದೆಗೆ ಬೇಕಾಗಿದ್ದಾರೆ – ಕನ್ನಡಿಗರಿಗೆ ಆದ್ಯತೆ

-ಅರವಿಂದ್

ಆಡಿಟ್ ಆಸಿಸ್ಟೆಂಟ್ ಹುದ್ದೆಗೆ ಬೇಕಾಗಿದ್ದಾರೆ – ಕನ್ನಡಿಗರಿಗೆ ಆದ್ಯತೆ

ಆಡಿಟಿಂಗ್ ಸಂಸ್ಥೆಯೊಂದಕ್ಕೆ ಸಿ ಎ ಆರ್ಟಿಕಲ್ಸ್ ಅಭ್ಯಾಸ ಮಾಡುತ್ತಿರುವವರು ಅಥವಾ ಬಿ.ಕಾಂ ಪದವೀಧರರಾಗಿದ್ದು ಅನುಭವವಿರುವ ಅಥವಾ ಇಲ್ಲದಿರುವವರು ಬೇಕಾಗಿದ್ದಾರೆ.

ಪರಿಚಯ ಪತ್ರವನ್ನು ಈ ಕೆಳಗಿನ ಮಿಂಚೆಗೆ ಕಳುಹಿಸಿ.

ಹುದ್ದೆಗಳ ಸಂಖ್ಯೆ : ೨

aravindhDOTraoATgmailDOTcom

* * * * * *

18
ಮೇ

ಹುಚ್ಚು ಬುದ್ದಿಯ ಹತ್ತು ಪ್ರತಿಜ್ಞೆಗಳು

-ಪ್ರಶಸ್ತಿ. ಪಿ ಶಿವಮೊಗ್ಗ


೧) FB ಬಿಡಬೇಕು
ನಿನ್ನೆ Times Of India ದಲ್ಲಿ ಓದ್ತಾ ಇದ್ದೆ. ಒಬ್ಬ ಭಾರತೀಯ ದಿನದಲ್ಲಿ ಅಂದಾಜು ೮ ಘಂಟೆ ಕಾಲ ಇಂಟನ್ರೆಟ್ಟಲ್ಲೇ ಕಳೀತಾನೆ ಅಂತ.ಅಂದ್ರೆ ನಾವು ಎಚ್ಚರ ಇರೋದ್ರಲ್ಲಿ ಅರ್ಧ ಭಾಗ ಇಲ್ಲೇ ಆಯ್ತು!! ಅದರಲ್ಲಿ ಕೆಲ ಭಾಗ ಕೆಲಸಕ್ಕಾದ್ರೆ ಕೆಲ ಭಾಗ ಇಲ್ಲೇ.. ಇದರಿಂದ ಏನಾದ್ರೂ ಲಾಭ ಇದ್ಯಾ ? ಸಾಮಾಜಿಕ ತಾಣಗಳು ಇರೋದೇ Time Pass ಗೆ,  ಜೀವನದಲ್ಲಿ ಎಲ್ಲದನ್ನೂ ಲಾಭ , ನಷ್ಟ ಅನ್ನೋ ವ್ಯಾಪಾರಿ ಬುದ್ದಿಯಿಂದ ತೂಗಕ್ಕಾಗಲ್ಲಾ ಅಂದ್ರಾ? ಹೂಂ ಅಂದೆ ಕಣ್ರಿ… ಆದ್ರೂ..

೨)ಸಂದೇಶ ಕಳ್ಸೋದನ್ನ(ಮೆಸೇಜ್ ಮಾಡೋದನ್ನ) ಬಿಡ್ಬೇಕು
ಈಗೊಂದು ಆರು ದಿನದ ಹಿಂದೆ ಸಂದೇಶ ಕೌಂಟರನ್ನ ಮರುಸ್ಥಾಪಿಸಿಟ್ಟಿದ್ದೆ. ಖಾಲಿ ಕೂತಾಗ ಅತ್ವಾ ಬೇಜಾರಾದ ದಿನಗಳಲ್ಲಿ ಅಂದಾಜು ಎಷ್ಟು ಸಂದೇಶ ಕಳಿಸ್ತೀನಿ ನೋಡ್ಬೇಕು ಅಂತ.. ಆರು ದಿನ ಬಿಟ್ಟು ನೋಡಿದ್ರೆ ಐನೂರು ಚಿಲ್ರೆ ಆಗಿತ್ತು. ಅದೇನು ಮಹಾ ಅಂದ್ರಾ? ಒಂದು ಮೆಸೇಜಿಗೆ ಒಂದು ೩೦ ಸೆಕೆಂಡು ಅಂತಿಟ್ಕೊಳ್ರಿ.( ದೊಡ್ಡ ಮೆಸೇಜು ಬರ್ಯೋದು ಅಂದ್ರೆ ಒಂದೋ , ಎರ್ಡೋ ನಿಮಿಷನೂ ಆಗ್ಬೋದು. ಅದ್ನ ಸದ್ಯಕ್ಕೆ ಬಿಡೋಣ). ಅದನ್ನ ಕಳಿಸಿದ ಮೇಲೆ ಮತ್ತೊಂದು ೩೦ ಸೆಕೆಂಡಾದ್ರೂ ಅದೇ ಮೂಡಲ್ಲಿರ್ತೀವಾ ?..ಅಲ್ಲಿಗೆ ೧ ನಿಮಿಷ ಆಯ್ತು. ದಿನಕ್ಕೆ ನೂರು ಮೆಸೇಜು ಅಂದ್ರೆ ನೂರು ನಿಮಿಷ ಅಂದ್ರೆ ಸುಮಾರು ಒಂದೂವರೆ ,೨ ಘಂಟೆ !!.. “ಹರ್ ಏಕ್ ಪ್ರೆಂಡ್ ಜರೂರಿ ಹೋತಾ ಹೈ..”  ಯಾರ್ನೂ ಬಿಡಕ್ಕೆ ಬರಲ್ಲ.. ಆದ್ರೂ..
ಮತ್ತಷ್ಟು ಓದು »

16
ಮೇ

ನಮ್ಮ ಇತಿಹಾಸ ನಾವೇ ಬರೆದು ಓದೋದು ಬೇಡವೆ?

– ಚಕ್ರವರ್ತಿ ಸೂಲಿಬೆಲೆ

ಬ್ರಿಟಿಷ್ ಅಧಿಕಾರಿ ಮ್ಯಾಲೆಸನ್ ಈ ದೇಶದ ಜನರನ್ನು ಹುಚ್ಚರು ಅಂತ ಕರೀತಾನೆ. ಏಕೆ ಗೊತ್ತೇನು? ನೇಣು ಶಿಕ್ಷೆಗೆ ಕಳಿಸಿದರೆ ಈ ದೇಶದ ಜನ ಹೆದರೋದಿರಲಿ, ತಾವೇ ನೇಣುಗಂಬದ ಬಳಿ ಧಾವಿಸಿ ನೇಣು ಕುಣಿಕೆಯನ್ನು ಕೊರಳಿಗೆ ಹಾಕಿಕೊಂಡುಬಿಡ್ತಾ ಇದ್ದರಂತೆ. ಆದಷ್ಟು ಬೇಗ ನನ್ನ ನೇಣಿಗೇರಿಸಿ ಅಂತ ಗೋಗರಿಯುತ್ತಾ ಇದ್ದರಂತೆ. ಹೀಗೇಕೆಂದು ಪ್ರಶ್ನಿಸಿದಾಗ, ಪುನರ್ಜನ್ಮ ನಂಬೋರು ನಾವು, ಬೇಗ ಹೊರಟರೆ, ಬೇಗ ಮರಳಿ ಬರುತ್ತೇವಲ್ಲ! ಅನ್ನುವ ವಾದ ಮಂಡಿಸುತ್ತಿದ್ದರಂತೆ. ಹೆದರಿಸಬೇಕೆಂದು ನೇಣಿಗೇರಿಸಿದರೆ, ಅದೇ ಪ್ರೇರಣೆಯಾಗುವ ರೀತಿ ಅತೀ ವಿಶಿಷ್ಟವಲ್ಲವೆ? ಅದಕ್ಕೇ ಬ್ರಿಟಿಷರಿಗೆ ಅಷ್ಟೊಂದು ಕೋಪ.

ಮೇ ೧೦ಕ್ಕೆ ೧೮೫೭ರಲ್ಲಿ ಸಂಗ್ರಾಮವೊಂದಕ್ಕೆ ಮುನ್ನುಡಿ ಬರೆಯಲಾಗಿತ್ತು. ಬ್ಯಾರಕ್‌ಪುರದ ಮಂಗಲ್‌ಪಾಂಡೆ ಆಂಗ್ಲ ಪೊಲೀಸ್ ಅಧಿಕಾರಿಯತ್ತ ಗುಂಡು ಸಿಡಿಸಿ, ತಿಂಗಳ ಕೊನೆಯಲ್ಲಿ ಆರಂಭವಾಗಬೇಕಾಗಿದ್ದ ಕ್ರಾಂತಿಗೆ ಆಗಲೇ ಕಿಡಿ ಹಚ್ಚಿಬಿಟ್ಟಿದ್ದ. ಅಲ್ಲಿಂದಾಚೆಗೆ ಮೀರತ್, ದೆಹಲಿಗಳು ಕ್ರಾಂತಿಯ ಕಿಡಿಗೆ ಉರಿದು ಬಿದ್ದವು. ಕಾನ್‌ಪುರ, ಝಾನ್ಸಿಗಳು ಜಯಘೋಷ ಮೊಳಗಿಸಿದವು. ಬಿಹಾರ ಕುದಿಯಿತು. ದಕ್ಷಿಣದಲ್ಲೂ ಬ್ರಿಟಿಷರ ಬುಡಕ್ಕೆ ಬಲವಾದ ಪೆಟ್ಟು ಬಿತ್ತು. ಅಂದುಕೊಂಡಂತೆಯೇ ಎಲ್ಲವೂ ಆಗಿದ್ದರೆ, ಇತಿಹಾಸದ ಹಾದಿ ಬೇರೆಯೇ ಇರುತ್ತಿತ್ತು. ಆ ವೇಳೆಗೆ ಆಂಗ್ಲರೊಟ್ಟಿಗೆ ಕಾದಾಡಿ ಹೈರಾಣಾಗಿದ್ದ ಸಿಕ್ಖರು ಭಾರತೀಯ ಸೈನಿಕರ ಬೆಂಬಲಕ್ಕೆ ಬರಲಿಲ್ಲ. ಅಯ್ಯೋ ಪಾಪ! ಅನ್ನುವ ಕೆಲವಷ್ಟು ಜನ ಆಂಗ್ಲ ಅಧಿಕಾರಿಗಳಿಗೆ ಉಳಿದುಕೊಳ್ಳುವ ಮಾರ್ಗ ತೋರಿದರು. ಅಂತೂ ಮಹಾಯುದ್ಧವೊಂದರಲ್ಲಿ ನಾವು ಸೋತಿದ್ದೆವು.

ಮತ್ತಷ್ಟು ಓದು »