ವಿಷಯದ ವಿವರಗಳಿಗೆ ದಾಟಿರಿ

Recent Articles

15
ಮೇ

ಉದ್ಯೋಗಾವಕಾಶ : ೨ ರಿಂದ ೫ ವರ್ಷ ಅನುಭವವಿರುವವರಿಗೆ ಕನ್ನಡಿಗರಿಗೆ

ಗೆಳೆಯರೆ, ಸೀಮೆನ್ಸ್ ಟೆಕ್ನಾಲಾಜಿಕಲ್ ಸೆರ್ವೀಸೆಸ್ ನಲ್ಲಿ ಡಿ.ಬಿ.ಎ/ಎಸ್. ಕ್ಯೂ. ಎಲ್ ಅಥವಾ ಡಾಟಾ ವೇರ್ ಹೌಸಿಂಗ್ ನಲ್ಲಿ ಎರಡರಿಂದ ಐದು ವರ್ಷ ಅನುಭವ ಇರುವ ಇಂಜಿನಿಯರ್ ಗಳಿಗೆ ಅವಕಾಶವಿದೆ. ಕನ್ನಡಿಗರಿಗೆ ಮಾತ್ರ ಈ ಅವಕಾಶ ಸೀಮಿತವಾಗಲಿ. ನಿಮ್ಮ ಪರಿಚಯಪತ್ರವನ್ನು ದಿನಾಂಕ ೨೧-೦೫-೨೦೧೨ ರ ಒಳಗೆ pavanDotan86ATgmaildotcom ಗೆ ಕಳುಹಿಸಿ. ದಯವಿಟ್ಟು ಕನ್ನಡಿಗರಲ್ಲದವರ ಪರಿಚಯ ಪತ್ರ ಬೇಡ.

ಉದ್ಯೋಗದ ಸ್ಥಳ : ಬೆಂಗಳೂರು

15
ಮೇ

ಸಕಲ ಬೈಗುಳಕ್ಕೂ ಅರ್ಹರಿವರು, ಸರ್ವರಿಂದಲೂ ಧೂಷಿತರು

– ಭಾಸ್ಕರ್ ಎಸ್.ಎನ್

ನೀವು ಎಂದಾದರೂ, ಯಾರ ಮೇಲಾದರೂ ನಿಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದೀರಾ? ಅದೂ ಸಹಾ ವಾಚಾಮಗೋಚರ..!

Interesting question..!

ಒಬ್ಬ ವ್ಯಕ್ತಿಯನ್ನು ಮನಸೋ ಇಚ್ಚೆ ಬೈಯಲು ಬೇಕಾದ ಅರ್ಹತೆಗಳೇನು? ಬೈಯಲಿರುವ ವ್ಯಕ್ತಿ ಬೈಸಿಕೊಳ್ಳುವ ವ್ಯಕ್ತಿಗಿಂದ ಅಧಿಕಾರದಲ್ಲಾಗಲೀ, ಅರ್ಹತೆಯಲ್ಲಾಗಲೀ, ಹುದ್ದೆಯಲ್ಲಾಗಲಿ..ಮೇಲ್ಮಟ್ಟದಲ್ಲಿದ್ದಾನೆಂಬ ಏಕ ಮಾತ್ರ ಕಾರಣಕ್ಕೆ ಆತ ಈ ಅರ್ಹತೆ ಗಳಿಸಿರುತ್ತಾನೆ ಎಂಬುದು ಎಷ್ಟರ ಮಟ್ಟಿಗೆ ಒಪ್ಪಿಗೆಗೆ ಅರ್ಹ. ಉನ್ನತ ಮಟ್ಟದಲ್ಲಿದ್ದ ಮಾತ್ರಕ್ಕೇ ಯಾರನ್ನಾದರೂ ಹೇಗಾದರೂ ಧೂಷಿಸುವ ಅರ್ಹತೆಯನ್ನು  ಒಬ್ಬ ವ್ಯಕ್ತಿ ಗಳಿಸಿಕೊಳ್ಳುತ್ತಾನೆಯೇ? ಅಥವಾ ಹೀಗೆ ವರ್ತಿಸಿದರೆ ಮಾತ್ರ ಆ ಹುದ್ದೆಗೆ, ಅಧಿಕಾರಕ್ಕೆ ಆತ ಅರ್ಹನೇ?

ಖಂಡಿತ ಇಲ್ಲ. ಕಾನೂನಿನ ಚೌಕಟ್ಟಿಗೆ ಬಂದು ಹೇಳುವುದಾದರೆ, ಯಾವುದೇ ಹುದ್ದೆ, ಅಥವಾ ಯಾವುದೇ ಅಧಿಕಾರ ಹೊಂದಿರುವ ಒಬ್ಬ ವ್ಯಕ್ತಿ ತನ್ನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವುದಕ್ಕೆ ಮಾತ್ರ ಅರ್ಹ. ಆತ ಯಾವುದೇ ಹುದ್ದೆಯಲ್ಲಿರಲಿ ಅಥವಾ ಎಷ್ಟೇ ಅಧಿಕಾರವನ್ನು ಹೊಂದಿರಲಿ  ಮತ್ತೊಬ್ಬ ವ್ಯಕ್ತಿಯನ್ನು ಮಾತಿನ ಮೂಲಕ ಧೂಷಿಸಿವ, ನಿಂದಿಸುವ ಅಥವಾ ಅವಾಛ್ಯ ಶಬ್ದಗಳಿಂದ ತೆಗಳುವುದು ಅಪರಾಧ. ಇದು ಕಾನೂನಿನ ವಿಷಯವಾಯಿತು.  ಎಲ್ಲಾ ಕಾಲದಲ್ಲೂ ಎಲ್ಲಾ ಸಂಧರ್ಭಗಳಲ್ಲೂ ಕಾನೂನಿನ ಅನಿವಾರ್ಯತೆ ಅಥವಾ ಅವಶ್ಯಕತೆ ಬರುವುದಿಲ್ಲ ಅಲ್ಲವೇ?

ಮತ್ತಷ್ಟು ಓದು »

14
ಮೇ

ಹದಿವಯಸೆಂದು ತುಳಿದದ್ದೇ ಹಾದಿಯಾಗಬೇಕೆ?

– ರೂಪಾ ಎಲ್ ರಾವ್
ತಿಳಿಯದೆ ನಮಗೆ ತಿಳಿಯದೇ ಬದುಕುವ ದಾರಿ ತಿಳಿಯದೆ?
ಹೀಗಂತ ಯುವಜನ ಎಲ್ಲರನ್ನ  ಹೆಚ್ಚಾಗಿ ಪೋಷಕರನ್ನ ಧಿಕ್ಕರಿಸಿ ಹೋಗುತ್ತಿದ್ದರೆ, ಪೋಷಕರು ಅಸಹಾಯಕರಾಗಿ ತಾವು ಅತಿಯಾಗಿ ಮುದ್ದು ಮಾಡಿ ಬೆಳೆಸಿದ ಫಲದ ಅಧೋಗತಿಯನ್ನ ನೋಡುತ್ತಿದ್ದಾರೆ…… ಮಾತಿಗೆ ಮುಂಚೆ ನಿಂಗೆ ಏನೂ ಗೊತ್ತಿಲ್ಲ, ಅನ್ನುವ ಮಾತು ಕೇವಲ ಒಂದು ವರೆ ದಶಕದ ಹಿಂದೆ ಸಕಲಕಲಾವಲ್ಲಭರಂತಿದ್ದ ಈ ಮಧ್ಯವಯಸ್ಕ ಜೀವಿಗಳನ್ನ ಈ ಇಂಟರ್ನೆಟ್ , ಮೊಬೈಲ್ ಬ್ಲೂ ಟೂತ್ , ಅನ್ನುವ ನಿರ್ಜೀವ ಪದಗಳು ನಿಸ್ಸಾಹಯಕರನ್ನಾಗಿ ಮಾಡುತ್ತಿದೆ.
ನನ್ನ ಮಗ ಈಗಲೇ ಮೊಬೈಲ್ ಕೇಳ್ತಿದಾನೆ, ನನ್ ಮಗಳಿಗೆ ಕಂಪ್ಯೂಟರ್ ಗೇಮ್ ಅಂದ್ರೆ ತುಂಬಾ ಇಷ್ಟ , ನನ್ ಮಗ ಇಂಟರ್ನೆಟ್ ನಲ್ಲಿ ಪ್ರಾಜೆಕ್ಟ್ ಮಾಡ್ತಿದಾನೆ. ಹೀಗೆಲ್ಲಾ ಕೊಚ್ಚಿಕೊಳ್ಳುತ್ತಾ ಮಹತ್ತರವಾದುದೇನೋ ಸಾಧಿಸುತ್ತಿದ್ದಾರೆ ಎಂದುಕೊಳ್ಳುತಿದ್ದ ಮಕ್ಕಳು ಇಂದು ಅಪ್ಪ ಅಮ್ಮನ್ನ ನಿನಗೆ ಏನು ಗೊತ್ತಿದೆ, ಸುಮ್ಮನೆ ಬಾಯಿ ಮುಚ್ಚಿಕೊಂಡಿರು ಅನ್ನುವ ಮಟ್ಟಕ್ಕೆ ಬೆಳೆದಿದ್ದಾರೆ
ಹದಿ ಹರೆಯದ ಮಕ್ಕಳನ್ನು ಸ್ನೇಹಿತರನ್ನಾಗಿ ನೋಡಿಕೊಳ್ಳಬೇಕು ನಿಜ ಆದರೆ ಹಾಗಂತ ಅವರನ್ನ ಇಷ್ಟ ಬಂದ ಹಾಗೆ ನಡೆಯಲು ಬಿಟ್ಟರೆ ಏನೇನಾಗಬಹುದು ಎನ್ನುವುದಕ್ಕೆ  ಎಷ್ಟೊ ಉದಾಹರಣೆಗಳು ಸುತ್ತಾ ಮುತ್ತಾ ಇವೆ ಅಂತಾಹುದರಲ್ಲಿ ವೀರೂ ಸಹ ಒಬ್ಬ (ಹೆಸರು ಬದಲಾಯಿಸಲಾಗಿದೆ) ಹತ್ತು ವರ್ಷದ ಹಿಂದೆ ನನ್ನ ಬಳಿ ಟ್ಯೂಷನ್ ಗೆ ಬರುತ್ತಿದ್ದ . ಅಪ್ಪ ಅಮ್ಮ ಸೋಪ್ ಪೌಡರ್ ಅದೂ ಇದೂ ಮಾಡಿ ಮಾರಿ ಮಗನನ್ನು ಓದಿಸುತ್ತಿದ್ದರು. ಎಷ್ಟೆ ಬಡತನವಿದ್ದರೂ ಮಗನಿಗೆ ಯಾವ ಕೊರತೆಯನ್ನೂ ಮಾಡಿರಲಿಲ್ಲ. ನಾನೂ  ಕಾಲದ ಚಕ್ರದ ಜೊತೆ ಪಯಣಿಸುತ್ತಾ  ಅವನನ್ನು ಮರೆತೇ ಬಿಟ್ಟಿದ್ದೆ . ಹೋದ ತಿಂಗಳು , ಅಮ್ಮ ಮಗ ಇಬ್ಬರೂ ಬಂದಿದ್ದರು .ಅಂದಿನ ಆ ಪುಟ್ಟ ವೀರು ಇಂದು ನನ್ನನ್ನು ಮೀರಿ ಬೆಳೆದಿದ್ದಾನೆ, ದೊಡ್ಡ ಹುಡುಗ…. ಒಮ್ಮೆ ಸಂತೋಷವಾಯ್ತು ಆದರೆ ಅವನ ಅಮ್ಮ ಅವನ ಬಗ್ಗೆ ಹೇಳಿದ್ದು ತುಂಬಾ ಬೇಸರ, ಜೊತೆಗೆ ಯಾವುದೋ ಜವಾಬ್ದಾರಿಯನ್ನು ನೆನಪಿಸಿತು(ನಾನೂ ಒಬ್ಬ ತಾಯಿ)
11
ಮೇ

ಸತ್ಯಮೇವ ಜಯತೇ

– ಚೇತನ್ ಹೊನ್ನವಿಲೆ

ಸತ್ತೇ ಹೋಗದ , ಎ೦ದೂ ಮುಗಿಯದ ಮೇ… ಘಾ  ಧಾರಾವಾಹಿಗಳು …, ಬ್ರಾಡ್-ಕಾಸ್ಟ್‍ ಮಾಡೋದಕ್ಕೆ ಯೋಗ್ಯತೆನೇ ಇಲ್ಲದೇ ಇರೋ..  ಕಿತ್ತೋಗಿರೋ ಕೆಲ ರಿಯಾಲಿಟಿ ಶೋಗಳು, ಅಪ್ಪನ ದುಡ್ಡು ಖರ್ಚು ಮಾಡಲೇಬೇಕ೦ತ ಹುಟ್ಟಿರುವ ಎಡಬಿಡಂಗಿ ಮಕ್ಕಳ ಅಧೋಗತಿ ಸಿನಿಮಾಗಳು. ಸಾಕಪ್ಪಾ ನಿಮ್ಮ ಸಹವಾಸ.

ಸತ್ಯ  ಮೇವ ಜಯತೆ ಕಾರ್ಯಕ್ರಮದ ಮೊದಲ ಕ೦ತಿನ ಕಾರ್ಯಕ್ರಮ ನೋಡ್ತಾ ಇದ್ದೆವು(ಕನ್ನಡದಲ್ಲಿ , ಇ೦ಟರ್ನೆಟ್ ನಲ್ಲಿ). ಹೆಣ್ಣು ಮಗುವನ್ನು ಭ್ರೂಣದಲ್ಲಿಯೇ ಕರಗಿಸುವ ಕಟುಕ ಸಮಾಜದ ಕರಾಳತೆಯನ್ನು ೩೬೦ ಡಿಗ್ರಿ ಯಲ್ಲಿ ಹಿಡಿದು ತೋರಿಸುತ್ತಿದ್ದರು. ಕಾರ್ಯಕ್ರಮ ನೋಡ್ತಾ ಇದ್ದವರು ಯಾರೂ ಒಬ್ಬರ ಮುಖ ಒಬ್ಬರು ನೋಡಿಕೊಳ್ಳುವ ಧೈರ್ಯ ಮಾಡಲಿಲ್ಲ. ಯಾಕ೦ದ್ರೆ ಎಲ್ಲರ ಕಣ್ಣಲ್ಲೂ ನೀರಿತ್ತು. ಇ೦ತಹ ಸಮಾಜಮುಖಿ ಕಾರ್ಯಕ್ರಮಗಳು ನಮ್ಮವರಿಗೆ ತಲುಪಬೇಕು. ಎಲ್ಲರೂ ಎಚ್ಚೆತ್ತುಕೊಳ್ಳದಿದ್ದರೂ ಪರವಾಗಿಲ್ಲ, ಬದಲಾವಣೆಯ ಗಾಳಿ ನಮ್ಮೂರಿನ ಕಡೆಗೆ ಬೀಸಲಿ.

ನನಗೆ ಅವೆಲ್ಲಾ ಗೊತ್ತಿಲ್ಲಪ್ಪ..?

ಇಷ್ಟು ಅದ್ಭುತವಾಗಿರುವ ಕಾರ್ಯಕ್ರಮವನ್ನು ನಾನು ನಮ್ಮ ಅಪ್ಪ , ಅಮ್ಮ,  ಅಜ್ಜಿ,  ದೊಡ್ಡಪ್ಪ ಅವರಿಗೆಲ್ಲಾ ತೋರಿಸಬೇಕು. ಡಬ್ಬಿ೦ಗ್ ನ ಸಾಧಕ-ಬಾಧಕ ಗಳು ಏನೇ ಇರಲಿ…  ಪ್ಲೀಸ್ ಸತ್ಯ ಮೇವ ಜಯತೆಯ ಕನ್ನಡ ಅವತರಣಿಕೆಯನ್ನು ಟಿವಿ ಯಲ್ಲಿ ಪ್ರಸಾರ ಮಾಡೋದಕ್ಕೆ …. ಅವಕಾಶ ಕೊಟ್ಟು ಬಿಡ್ರಿ. ಪ್ಲೀಸ್

ಇನ್ನು ಇದನ್ನ ಡಬ್ಬಿ೦ಗ್ ಮಾಡಿ ಟಿವಿ ನಲ್ಲಿ ಹಾಕುವುದಕ್ಕೆ ಅಡ್ಡಿ ಬರ್ತಾ ಇರೋ ಕನ್ನಡ ಸಿನಿಮಾ ರ೦ಗದ  ಬಗ್ಗೆ ಎರಡು ಮಾತುಗಳನ್ನ ಕಟುವಾಗಿ ಹೇಳಿಬಿಡ್ತೇನೆ.
ಇವರು ತೆಗೆಯುವ ಸಿನಿಮಾಗಳಲ್ಲಿ ಕನ್ನಡತನ, ಸ೦ಸ್ಕೃತಿ ಎಲ್ಲಿರುತ್ತೆ ಪಿ೦ಡ. ಅಷ್ಟಕ್ಕೂ ಕನ್ನಡಿಗರ ಬೇಕು-ಬೇಡಗಳನ್ನು ನಿರ್ಧರಿಸಲು ಇವರು ಯಾರು?ಇವರೆಲ್ಲಾ  ಭಾಷೆಯನ್ನ  ಗುತ್ತಿಗೆಗೆ ತಗೊ೦ಡಿದಾರಾ ..?  ಎಲ್ಲರ೦ತೆ ಇವರೂ ಕೂಡ ತಮ್ಮ ಜೋಳಿಗೆ ತು೦ಬಿಸಿಕೊಳ್ಳುವುದಕ್ಕೇ ಸಿನಿಮಾ ಮಾಡೋದು. ನೇಮು-ಫೇಮು ಕಾಸಿಗ೦ತ ಇವರು ಸಿನಿಮಾ ಮಾಡ್ತಾರೆ. ಮನರ೦ಜನೆಗೆ ಅ೦ತ ನಾವು ದುಡ್ಡು ಕೊಟ್ಟು ಸಿನಿಮಾ ನೋಡ್ತೀವಿ. ಇಲ್ಲಿ ಒಬ್ಬರಿಗೊಬ್ಬರು ಸವೆದುಕೊಳ್ಳುತ್ತಿರುವುದೇನು.. ಸ೦ಸ್ಕೃತಿ, ಭಾಷೆಯನ್ನ ಯಾಕಿವರು ಮಧ್ಯ ಹಿಡ್ಕ್೦ಡ್ ಬರ್ತಾರೆ ಗೊತ್ತಾಗ್ತಿಲ್ಲ. ಮತ್ತಷ್ಟು ಓದು »

10
ಮೇ

ಕಾನೂನಿನಂಗಳ ೩ : ವ್ಯವಹಾರಧರ್ಮ ಮತ್ತು ರಾಜಧರ್ಮ

 – ಉಷಾ ಐನಕೈ  ಶಿರಸಿ

ಭಾರತೀಯ ಸಂಸ್ಕೃತಿಯಲ್ಲಿ ಬೇರೆ ಬೇರೆ ಸ್ವರೂಪದಲ್ಲಿ ಕಾನೂನುಗಳು ಅಸ್ತಿತ್ವದಲ್ಲಿತ್ತು ಎಂಬ ಬಗ್ಗೆ ಹಲವಾರು ಆಧಾರಗಳು ಸಿಗುತ್ತವೆ. ಶ್ರುತಿ, ಸ್ಮೃತಿ, ಧರ್ಮ, ಸಂಪ್ರದಾಯ ಪದ್ಧತಿ ಎಲ್ಲವೂ ಕಾನೂನಿನಂತೆ ಕೆಲಸ ಮಾಡಿ ಸಮಾಜವು ಸುಸ್ಥಿತಿ ಯಲ್ಲಿ ನಡೆಯಲು ಸಹಾಯಕವಾಗಿದ್ದವು. ಇವು ಗಳಲ್ಲಿ ಕೆಲವು ಲಿಖಿತವಾಗಿ ಇನ್ನೂ ಕೆಲವು ಅಲಿಖಿತ ವಾಗಿ ನಮಗೆ ಗೋಚರವಾಗುತ್ತವೆ. ಸಂಕ್ಷಿಪ್ತವಾಗಿ ಹೇಳುವುದಾದರೆ ಆಧುನಿಕ ಕಾನೂನುಗಳ ಎಲ್ಲ ಅಂಶಗಳೂ ಪರೋಕ್ಷವಾಗಿ ಭಾರತೀಯದ್ದಾಗಿ ನಮ್ಮ ಸಂಸ್ಕೃತಿಯಲ್ಲಿ ನೆಲೆಗೊಂಡಿತ್ತು.

ಮುಖ್ಯವಾಗಿ ‘ಧರ್ಮ’ ಭಾರತೀಯ ಮನುಷ್ಯರನ್ನು ನಿಯಂತ್ರಿಸುತ್ತಿತ್ತು. ಧರ್ಮ ಅಂದರೆ ಗುಣ, ನಿಜವಾದ ಯಾವುದರಲ್ಲಿ ಯಾವುದು ಇರಬೇಕೋ ಅದೇ ಧರ್ಮ. ಇದು ಸಾಮರಸ್ಯಗೊಳ್ಳುವುದು ಹೇಗೆ? ಅದೇ ಧರ್ಮದ ಶಕ್ತಿ. ಕಾಮ, ಕ್ರೋಧ, ಮೋಹ, ಮದ ಲೋಭ, ಮಾತ್ಸರ್ಯ ಈ ಅರಿಷಡ್ವರ್ಗಗಳನ್ನು ಗೆಲ್ಲದೇ ಮೋಕ್ಷ ಸಾಧ್ಯವಿಲ್ಲ ಎಂಬುದು ನಮ್ಮ ಪ್ರಾಚೀನ ಪರಂಪರೆಯ ನಂಬಿಕೆಯಾಗಿತ್ತು. ಮೋಕ್ಷ ಎಂದರೆ ಒಂದು ಆದರ್ಶ. ಒಂದು ಅಪವಾದವಿಲ್ಲದ ಸ್ಥಿತಿ. ಆ ಕಾರಣಕ್ಕಾಗೇ ಧರ್ಮ ಮನುಷ್ಯನನ್ನು ಮೋಕ್ಷದೆಡೆಗೆ ಮುಖ ಮಾಡಿ ಸುತ್ತಿತ್ತು. ಈ ಮೋಕ್ಷವನ್ನು ಸಾಧಿಸುವ ಮಾರ್ಗದಲ್ಲೇ ಮನುಷ್ಯ ತನಗೆ ತಾನೇ ಹಲವಾರು ಕಟ್ಟು ಪಾಡುಗಳಿಗೆ ಬದ್ಧನಾಗುತ್ತಿದ್ದ. ಸನ್ನಡ ತೆಗೆ ಪ್ರಾಮುಖ್ಯತೆ ಕೊಡುತ್ತಿದ್ದ. ಹೀಗೇ ತಮಗೆ ತಾವೇ ಸ್ವಯಂ ಆರೋಪಿಸಿಕೊಳ್ಳುವ ಕಾನೂನು ಎಂದರೆ ಧರ್ಮ.

ಮತ್ತಷ್ಟು ಓದು »

9
ಮೇ

ಡಬ್ಬಿಂಗ್ ಬೇಕೋ ಬೇಡವೋ – ಆನ್ ಲೈನ್ ಸಮೀಕ್ಷೆ

“ಸತ್ಯ ಮೇವ ಜಯತೇ” ಹಿಂದಿ ರಿಯಾಲಿಟಿ ಶೋ `ಕನ್ನಡದಲ್ಲಿ ಡಬ್ಬಿಂಗ್ ಆಗಿ ಬರಬೇಕೋ ಬೇಡವೋ..?

9
ಮೇ

ಗಣಿತ, ವಿಜ್ಞಾನ ಮತ್ತು ಸ್ವತಂತ್ರ ಅಸ್ತಿತ್ವ

-ಬಾಲಚಂದ್ರ ಭಟ್

ಗಣಿತ ಎಂದರೆ ಏನು?ಅಂಕೆ, ಸಂಖ್ಯೆಗಳು ಎಲ್ಲಿಂದ ಬಂತು?ಇವು ನಿಜವೇ? ಗಣಿತದ ಉಗಮ ಮನುಷ್ಯನ ಬುದ್ಧಿ ಸಾಮರ್ಥ್ಯದ ಮುಖಾಂತರ ರೂಪುಗೊಂಡದ್ದೋ ಅಥವಾ ಮನುಷ್ಯನಿಂದ ಹೊರತಾದ ಸ್ವತಂತ್ರ ಅಸ್ತಿತ್ವವನ್ನು ಹೊಂದಿದೆಯೋ?

ಬಹುಷಃ ಈ ಪ್ರಶ್ನೆಗಳನ್ನು ಉತ್ತರಿಸುವದು ಸ್ವತಃ ಗಣಿತದಲ್ಲಿ ಅಗಾಧ ಪ್ರತಿಭೆಯನ್ನು ಹೊಂದಿದವರಿಗೂ ಕಷ್ಟ. ಆದರೂ ಹಿಂದಿನ ಕಾಲದ ಅಂದರೆ  ಗ್ರೀಕರ ಕಾಲದ ಪೈಥಾಗೊರಸ್ ನಿಂದ ಹಿಡಿದು ೧೯ ನೆಯ ಶತಮಾನದ ಲಿಯೋಪೋಲ್ಡ್ ಕ್ರೋನೆಕರ್ (Leopold Kronecker) ವರೆಗಿನ ಬಹುತೇಕ ಗಣಿತದ ತಜ್ಞರು ಗಣಿತವು ಸ್ವತಂತ್ರ ಅಸ್ತಿತ್ವವನ್ನು ಹೊಂದಿದೆಯೆಂದೂ, ಅಂಕೆ, ಸಂಖ್ಯೆಗಳು ಮಾನವ ನಿರ್ಮಿತವಾಗಿರದೆ ಅವುಗಳು ಸರ್ವಸ್ವತಂತ್ರ ಸತ್ಯ, ನಿತ್ಯಸ್ಥಾಯಿ, ಹಾಗೂ ಮೌಲ್ಯವನ್ನು ಸೂಚಿಸುವ ಆದರ್ಶ ಮಾನ ಎಂದೂ ನಂಬಿದ್ದರು. ಆದರೆ ಅದಕ್ಕಿಂತಲೂ ಮುಖ್ಯವಾಗಿ ಇಂತಹ ಪ್ರಶ್ನೆಗಳು ಗಣಿತಶಾಸ್ತ್ರದ ಪ್ರಕಾರ ಬಹುಷಃ ಅಸಂಬದ್ಧ. ಆದ್ದರಿಂದಲೇ ಇದನ್ನು ಚರ್ಚಿಸುವ ಗೋಜಿಗೆ ಯಾರೂ ಹೋಗಲಿಲ್ಲ. ಆದರೆ ಮನೋವಿಜ್ಞಾನಿಗಳಿಗೆ, ಗಣಿತ ಹಾಗೂ ಅದರ ನಿಯಮಗಳಿಗಿಂತಲೂ ಈ ಮೇಲಿನ ಪ್ರಶ್ನೆಗಳು ಬಹಳ ಮುಖ್ಯ.

ಆದರೆ, ನಿಜಕ್ಕೂಗಣಿತವು ಮಾನವನ ಬುದ್ಧಿಶಕ್ತಿ ಹಾಗೂ ಗ್ರಾಹ್ಯಶಕ್ತಿ(perception) ಯಿಂದ ಹೊರತಾದ ‘ಸ್ವತಂತ್ರ’ ಅಸ್ತಿತ್ವವನ್ನು ಹೊಂದಿಲ್ಲ.  ಅಂಕೆಗಳು, ಸಂಖ್ಯೆಗಳು ಹಾಗೂ ಗಣಿತದ ನಿಯಮಗಳು ಬರೇ ಮಾನವನ ಗ್ರಾಹ್ಯ ಶಕ್ತಿಯಿಂದ ನಿರ್ಮಿತವಾದವು ಮತ್ತು ಮಾನವನ ಗ್ರಾಹ್ಯಶಕ್ತಿಗೆ ಹಾಗೂ ಬುದ್ಧಿ ಶಕ್ತಿಗೆ ತಕ್ಕಂತೆ ಅವು ‘ಸತ್ಯ’ ಅಷ್ಟೆ. ಅಲ್ಬರ್ಟ್ ಐನ್ ಸ್ಟೀನ್ ತಮ್ಮ ಸೊಗಸಾದ ವೈಜ್ಞಾನಿಕ ಭಾಷೆಯಲ್ಲಿ ಹೀಗೆ ಹೇಳುತ್ತಾರೆ ”the series of integers is obviously an invention of the human mind, a self-created tool which simplifies the ordering of certain sensory experiences (ನಿಜವಾಗಿಯೂ ಕ್ರಮಾನುಗತ ಸಂಖ್ಯೆಗಳೆಲ್ಲವೂ ಮಾನವನ ಬುದ್ಧಿಯಿಂದ ರಚಿತವಾದವುಗಳು ಮತ್ತು ಅವುಗಳು ಮನುಷ್ಯನ ಇಂದ್ರಿಯಾನುಭವಗಳ ಅನುಕ್ರಮವನ್ನು ಸುಲಭಗೊಳಿಸಲು ಮಾನವನಿಂದ ಸ್ವ-ನಿರ್ಮಿತವಾದವು)”. ಮನಶ್ಯಾಸ್ತ್ರಜ್ಞರೇ ಹೇಳಿದಂತೆ ಎಷ್ಟು ಸ್ಪುಟವಾಗಿದೆ!

ಮತ್ತಷ್ಟು ಓದು »

8
ಮೇ

ಡಬ್ಬಿಂಗ್ ಅವಶ್ಯಕವೇ?

 ಡಾ ಅಶೋಕ್. ಕೆ. ಆರ್.

ಡಬ್ಬಿಂಗ್ ವಿವಾದ ಮತ್ತೆ ಗರಿಗೆದರಿದೆ. ಕಳೆದ ಹಲವಾರು ತಿಂಗಳುಗಳಿಂದ ‘ಏನ್ ಗುರು’ವಿನಂಥ ಬ್ಲಾಗುಗಳಲ್ಲಿ, ಫೇಸ್ ಬುಕ್ ನಂಥ ಸಾಮಾಜಿಕ ತಾಣಗಳಿಗೆ ಸೀಮಿತವಾಗಿದ್ದ ಈ ಚರ್ಚೆ ಅಮೀರ್ ಖಾನನ ‘ಸತ್ಯಮೇವ ಜಯತೆ’ಯ ಕನ್ನಡದವತರಣಿಕೆಯ ತಯಾರಿಕೆಯ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗಳಲ್ಲೂ ಚರ್ಚೆಗೊಳಪಡುತ್ತಿದೆ. ‘ಸತ್ಯಮೇವ ಜಯತೆ’ಯನ್ನು ಕನ್ನಡದಲ್ಲಿ ಪ್ರಸರಿಸಲು ಮುಂದಾಗಿದ್ದ ಸುವರ್ಣ ವಾಹಿನಿಯು ಚಿತ್ರೋದ್ಯಮದ ‘ಬೆದರಿಕೆ’ ಭರಿತ ವಿರೋಧದ ಹಿನ್ನೆಲೆಯಲ್ಲಿ ಪ್ರಸಾರದಿಂದ ಹಿಂದೆ ಸರಿದಿದೆ. ‘ಪ್ರಾಣ ಹೋದರೂ ಸರಿಯೇ ಡಬ್ಬಿಂಗಿಗೆ ಅವಕಾಶ ಕೊಡುವುದಿಲ್ಲ. ಅಪ್ಪಾಜಿಯ ಮೇಲಾಣೆ’ ಎಂದು ಶಿವರಾಜ್ ಕುಮಾರ್ ಆರ್ಭಟಿಸಿದ್ದಾರೆ. ಪ್ರಜಾವಾಣಿ ಶನಿವಾರದ ಪುಟವೊಂದನ್ನು ಡಬ್ಬಿಂಗಿನ ಚರ್ಚೆಗೆ ಮೀಸಲಿರಿಸಿದರೆ ಸುವರ್ಣ ವಾರ್ತಾ ವಾಹಿನಿಯು ನಾಗತಿಹಳ್ಳಿ ಚಂದ್ರಶೇಖರ್, ಶ್ರೀನಿವಾಸಮೂರ್ತಿ, ಮದನ್ ಪಟೇಲ್ ಮತ್ತು ಬನವಾಸಿ ಬಳಗದ ಆನಂದ್ ರನ್ನು ಕರೆಸಿ ಜುಗಲ್ ಬಂದಿ ನಡೆಸಿದ್ದಾರೆ.
ಡಬ್ಬಿಂಗ್ ಪರವಾಗಿರುವವರು ವಾದಿಸುವುದೆಂದರೆ ‘ ನಾವು ಗ್ರಾಹಕರು. ಏನು ಪಡೆಯಬೇಕು ಎಂಬುದನ್ನು ನಾವು ನಿರ್ಧರಿಸಬೇಕೆ ಹೊರತು ಚಿತ್ರರಂಗದ ಕೆಲವರಲ್ಲ. ಇತರೆ ರಾಜ್ಯದವರು ತಮ್ಮ ತಮ್ಮ ಮಾತೃಭಾಷೆಯಲ್ಲೇ ಕಾರ್ಟೂನ್, ಡಿಸ್ಕವರಿ, ಪೋಗೋದಂಥಹ ವಾಹಿನಿಗಳನ್ನು, ಆಂಗ್ಲ ಸಿನಿಮಾಗಳನ್ನು ನೋಡುತ್ತಿರುವಾಗ ನಾವ್ಯಾಕೆ ಪರಭಾಷೆಯಲ್ಲೇ ಅವುಗಳನ್ನು ವೀಕ್ಷಿಸಬೇಕು? ಕನ್ನಡಿಗನಾಗಿ ಹುಟ್ಟಿದ್ದಕ್ಕೆ ಕನ್ನಡದಲ್ಲಿ ಚಿತ್ರ – ವಾಹಿನಿಗಳನ್ನು ವೀಕ್ಷಿಸುವ ಸೌಲಭ್ಯದಿಂದ ವಂಚಿತನಾಗಬೇಕೇಕೆ? ಅರ್ಥವಾಗದ ಭಾಷೆಯ ಸಿನಿಮಾಗಳನ್ನು ನೋಡಿ ಅರ್ದಂಬರ್ಧ ತಿಳಿದುಕೊಳ್ಳುವ ಬದಲು ಡಬ್ಬಿಂಗ್ ಮಾಡಿದರೆ ನನ್ನ ಭಾಷೆಯಲ್ಲೇ ನೋಡಿ ಆನಂದಿಸಿ ಸಂಪೂರ್ಣ ಅರಿತುಕೊಳ್ಳುವುದು ಒಳ್ಳೆಯದಲ್ಲವೇ? ತಮಿಳಿನಲ್ಲೇ ಪೋಗೋ ವೀಕ್ಷಿಸುವ ಹುಡುಗನಿಗೆ ತನ್ನ ಭಾಷೆಯ ಬಗ್ಗೆ ಪ್ರೀತಿ ಬೆಳೆಯುತ್ತದೆಯೇ ಹೊರತು ಅದೇ ಕಾರ್ಯಕ್ರಮಗಳನ್ನು ಇಂಗ್ಲೀಷಿನಲ್ಲಿ ನೋಡುವ ನಮ್ಮ ಮಕ್ಕಳಿಗೆ ಕನ್ನಡದ ಬಗ್ಗೆ ಪ್ರೀತಿ ಬೆಳೆಯಲು ಹೇಗೆ ಸಾಧ್ಯ? ನಮ್ಮ ಹಕ್ಕನ್ನು ಕಸಿದುಕೊಂಡಿರುವ ಚಿತ್ರೋದ್ಯಮದ ಈ ನೀತಿ ಸಂವಿಧಾನಬಾಹಿರ’
ಇನ್ನು ಡಬ್ಬಿಂಗ್ ವಿರೋಧಿಸುವವರು ಮುಂದಿಡುವ ವಾದವೆಂದರೆ ‘ಡಬ್ಬಿಂಗ್ ವಿರೋಧಿ ಚಳುವಳಿಗೆ ದಶಕಗಳ ಇತಿಹಾಸವಿದೆ. ಅನಕೃರಂಥ ಹಿರಿಯ ಲೇಖಕರು ಆರಂಭಿಸಿದ ಈ ಚಳುವಳಿ ರಾಜ್ ಕುಮಾರ್ ರಂಥ ಮೇರು ನಟರ ನೇತೃತ್ವದಲ್ಲಿ ಮುಂದುವರಿದು ಕನ್ನಡ ಚಿತ್ರೋದ್ಯಮದ ಉಳಿವಿನ ದೃಷ್ಟಿಯಿಂದ ಡಬ್ಬಿಂಗ್ ನಿಷೇಧಿಸಲಾಗಿದೆ. ಈ ನಿಷೇಧ ತೆರವುಗೊಳಿಸಿದರೆ ಹೆಚ್ಚು ಬಂಡವಾಳದ ಪರಭಾಷಾ ಚಿತ್ರಗಳು ಕನ್ನಡಕ್ಕೆ ಡಬ್ ಆಗಿ ಕನ್ನಡ ಚಿತ್ರಗಳ ಮಾರುಕಟ್ಟೆಯನ್ನು ಕಿತ್ತುಕೊಳ್ಳುತ್ತದೆ. ಚಿತ್ರೋದ್ಯಮವನ್ನೇ ಅವಲಂಬಿಸಿದ ಜನರ ಹೊಟ್ಟೆಪಾಡಿಗೆ ಚ್ಯುತಿಯುಂಟಾಗುತ್ತದೆ. ಮೇಲಾಗಿ ಪರಸಂಸ್ಕೃತಿ ಬಿಂಬಿಸುವ ಚಿತ್ರಗಳು ಎಂದಿಗೂ ನಮ್ಮವಲಾಗಲಾರವು ಮತ್ತು ನಮ್ಮ ಕನ್ನಡ ಸಂಸ್ಕೃತಿಯನ್ನು ಅವನತಿಗೆ ದೂಡುತ್ತದೆ’ ಮತ್ತಷ್ಟು ಓದು »
8
ಮೇ

ಡಬ್ಬಿಂಗ್ ಆದರೇನು ಶಿವ, ನಮಗೆ ಬೇಕಾಗಿರುವುದು ಎಂಟರ್ಟೇನ್ಮೆಂಟ್… ಎಂಟರ್ಟೇನ್ಮೆಂಟ್…

-ಶ್ರೀಧರ್ ಜಿ ಬನವಾಸಿ

ಕನ್ನಡಿಗರಿಗೆ ಇದಕ್ಕಿಂತ ದೊಡ್ಡ ದೌಭಾರ್ಗ ಇನ್ನೊಂದಿಲ್ಲ. ಬಿಬಿಸಿ, ಡಿಸ್ಕವರಿ, ನ್ಯಾಷನಲ್ ಜಿಯೋಗ್ರಾಫಿಕ್ನಂತಹ ಜಗತ್ತೇ ಮೆಚ್ಚಿದ ಚಾನೆಲ್ಗಳನ್ನು  ಕರ್ನಾಟಕದಲ್ಲಿದ್ದುಕೊಂಡು ತಮಿಳು,  ತೆಲಗು, ಹಿಂದಿ ಭಾಷೆಯಲ್ಲಿ ನೋಡಬೇಕಾದ ಪರಿಸ್ಥಿತಿ ಮಾತ್ರ ಆಗಿರುವುದು ಕನ್ನಡದದವರ ದುರಂತ. ಈ ದುರಂತದ ಅಧ್ಯಾಯಕ್ಕೆ ಕಾರಣವಾಗಿರುವವರು ಕೂಡ ನಮ್ಮ ಕನ್ನಡಿಗರೇ. ಡಬ್ಬಿಂಗ್ ಸಂಸ್ಕೃತಿ ನಮ್ಮ ಕನ್ನಡಕ್ಕಲ್ಲ ಅಂತ ಹೇಳುವ ಕನ್ನಡ ಚಿತ್ರರಂಗದ ಒಂದು ಪ್ರಭಾವಿ ವರ್ಗ ಒಂದು ರೀತಿಯಲ್ಲಿ ತಮ್ಮ ತಮ್ಮ ವೈಯಕ್ತಿಕ ಸ್ವಾರ್ಥಕ್ಕನುಸಾರಕ್ಕಾಗಿ ಡಬ್ಬಿಂಗ್ ಬೇಡ ಅನ್ನುವ ಅಸ್ತ್ರವನ್ನು ಇಂದಿಗೂ ತಮ್ಮಲ್ಲಿ ಇಟ್ಟುಕೊಂಡು ಕನ್ನಡ ಚಿತ್ರೋದ್ಯಮದ ಹಾಗೂ ಮನರಂಜನಾ ಟೀವಿ ಉದ್ಯಮದ ಬೆಳವಣಿಗೆ ಕುಂಠಿತವಾಗಲು ಕಾರಣವಾಗಿದ್ದಾರೆ. ಅಷ್ಟಕ್ಕೂ ಡಬ್ಬಿಂಗ್ ಕನ್ನಡ ಸಂಸ್ಕೃತಿಯಲ್ಲ ಅಂತ ಹೇಳುವವರಿಗೆ, ಮೊದಲು ನಮ್ಮ ಕನ್ನಡ ಸಂಸ್ಕೃತಿ ಏನು ಎಂಬುವನ್ನು ದಯವಿಟ್ಟು ಬಿಡಿಸಿಹೇಳಬೇಕಾಗಿದೆ. ಕನ್ನಡ ಮಣ್ಣಿನ ಸೊಗಡು ಅಂತ ಹೇಳಿಕೊಂಡು ರಿಮೇಕ್ ಚಿತ್ರಗಳು ಹಾಗೂ  ರಿಮೇಕ್ ಧಾರಾವಾಹಿಗಳ ಮೇಲೆ ನೂರಾರು ಕೋಟಿ ರೂಪಾಯಿ ಹರಿದು ಹಾಳಾಗಿ ಕನ್ನಡ ಉದ್ಯಮಶೀಲದ ಬುಡಕ್ಕೆ ದೊಡ್ಡ ಪೆಟ್ಟು ಬೀಳುತ್ತಿರುವುದು, ಇದರ ಜೊತೆಗೆ ಆಗುತ್ತಿರುವ ಅನ್ಯ ಭಾಷೆಯ ಸಂಸ್ಕೃತಿಯ ಹೇರಿಕೆ ಮಾತ್ರ ಡಬ್ಬಿಂಗ್ ವಿರೋಧಿಸುತ್ತಿರವವರಿಗೆ ಕಾಣುತ್ತಿಲ್ಲ.

ಡಬ್ಬಿಂಗ್ ಬಗ್ಗೆ ಈ ಹಿಂದೆ ಅಂದರೆ ಸುಮಾರು ನಾಲ್ಕು ದಶಕಗಳ ಹಿಂದೆ ದೊಡ್ಡ ಹೋರಾಟವಾಗಿದ್ದು ನಿಜಕ್ಕೂ ಒಪ್ಪುವಂತದ್ದು. ಆಗಿನ ಸಮಯದಲ್ಲಿ ಡಬ್ಬಿಂಗ್ ವಿರುದ್ಧ ಹೋರಾಟ ಆಗಿಲ್ಲದಿದ್ದರೆ ಈಗಿನ ನಮ್ಮ ಕನ್ನಡ ಚಿತ್ರರಂಗವನ್ನು ನಾವು ಕಲ್ಪಿಸಿಕೊಳ್ಳುವುದು ಕೂಡ ಕಷ್ಟ ಸಾಧ್ಯ.  ವರನಟ ಡಾ.ರಾಜ್ಕುಮಾರ್ ಸಾರಥ್ಯದಲ್ಲಿ ಕನ್ನಡ ಚಿತ್ರರಂಗ ಹಾಗೂ ಅನಕೃ ಅವರ ನೇತೃತ್ವದಲ್ಲಿ ಸಾಹಿತ್ಯವಲಯ ಒಟ್ಟಾಗಿ ಅಂದು ದೊಡ್ಡ ಹೋರಾಟ ಮಾಡಿದ್ದವು. ಆಗಿನ ಡಬ್ಬಿಂಗ್ ಹೋರಾಟಕ್ಕೆ ನೂರಕ್ಕೆ ನೂರರಷ್ಟು ಅರ್ಥ ಇತ್ತು. ಆಗಿನ ಪರಿಸ್ಥಿತಿ ಕೂಡ ಹೋರಾಟಕ್ಕೆ ಪೂರಕವಾಗಿತ್ತು. ಇದಕ್ಕೆ ನೀಡುವ ಕಾರಣಗಳನ್ನು ಕೂಡ ಪಟ್ಟಿಮಾಡುವುದಾದರೆ,  ಅಂದು ಸಿನಿಮಾ ಹಾಗೂ ಕನ್ನಡ ಸಾಹಿತ್ಯ ಒಂದೇ ನಾಣ್ಯದ ಮುಖಗಳಾಗಿದ್ದವು. ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳು ಸಿನಿಮಾ ಉದ್ಯಮದಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡಿದ್ದರು. ಹಾಗಾಗಿಯೇ ಅಂದಿನ ಕನ್ನಡ ಸಿನಿಮಾಗಳಲ್ಲಿ ದ.ರಾ.ಬೇಂದ್ರೆ, ಶಿವರಾಮಕಾರಂತ, ಕುವೆಂಪು, ತ್ರಿವೇಣಿ, ಅನಕೃ, ತರಾಸು, ಎಸ್.ಎಲ್.ಭೈರಪ್ಪ, ಯು.ಆರ್.ಅನಂತಮೂರ್ತಿ, ಎಂ.ಕೆ.ಇಂದಿರಾ, ಆಲನಳ್ಳಿ ಕೃಷ್ಣ, ಪಿ.ಲಂಕೇಶ್, ರಾಮರಾಯರು, ಗಿರಡ್ಡಿ ಗೋವಿಂದರಾಜು ಇನ್ನು ಹಲವಾರು ಸಾಹಿತಿಗಳ ಕೃತಿಗಳು ಕನ್ನಡ ಸಿನಿಮಾ ಉದ್ಯಮಕ್ಕೆ ಉಸಿರಾಗಿದ್ದವು. ಅಕಸ್ಮಾತ್ ಬೇರೆ ಭಾಷೆಯ ಸಿನಿಮಾಗಳನ್ನು ಡಬ್ಬಿಂಗ್ ಮಾಡಿ ಬಿಡುವುದರಿಂದ ಮೂಲ ಕನ್ನಡ ಕೃತಿಗಳನ್ನು ಬಳಸಿಕೊಳ್ಳಲು ಆಗುವ ತೊಡಕನ್ನು ಮನಗಂಡು ಡಬ್ಬಿಂಗ್ಗೆ ಸಾಹಿತ್ಯವಲಯದ ಕಡೆಯಿಂದ ಬೆಂಬಲ ಸಿಕ್ಕಿತ್ತು. ಕನ್ನಡ ಚಿತ್ರರಂಗ ಆಗಿನ್ನೂ ಮದ್ರಾಸ್ ಪ್ರಾಂತ್ಯದಲ್ಲಿ ನೆಲೆಯೂರಿದ್ದರಿಂದ ಕನ್ನಡ ಸಿನಿಮಾಗಳ ನಿರ್ಮಾಣವೇ ದೊಡ್ಡ ಸವಾಲಾಗಿತ್ತು. ವರ್ಷಕ್ಕೆ 40-50 ಕನ್ನಡ ಸಿನಿಮಾಗಳು  ನಿರ್ಮಾಣವಾದರೆ ಹೆಚ್ಚಾಗಿತ್ತು,  ನಿರ್ಮಾಣವಾದ ಈ ಅಷ್ಟೂ ಸಿನಿಮಾಗಳಲ್ಲಿ ಹೆಚ್ಚಿನವರು ಪರಭಾಷಾ ತಂತ್ರಜ್ಞರು,  ನಿರ್ಮಾಪಕ, ನಿರ್ದೇಶಕರಿಗೇನೆ ಹೆಚ್ಚೆಚ್ಚು ಕೆಲಸ ಸಿಗುತ್ತಿತ್ತು. ತಂತ್ರಜ್ಞರಿಗೆ ಅಗಾಧ ಬೆಲೆ ಇದ್ದ ಸಂದರ್ಭದಲ್ಲಿ ವಿಶೇಷವಾಗಿ ಕರ್ನಾಟಕದಲ್ಲಿ ಸಿನಿಮಾ ತಂತ್ರಗಾರಿಕೆ ಹಾಗೂ ನೈಪುಣ್ಯತೆಯ ವಿಷಯ ಬಂದಾಗ ಕನ್ನಡಿಗರು ಅವಕಾಶ ವಂಚಿತರಾಗಿದ್ದರು. ಅಂದು ಕರ್ನಾಟಕದಲ್ಲಿ ಸಿನಿಮಾಭಾಷೆಯನ್ನು ಕಲಿಸುವಂತಹ ತರಬೇತಿ ಸಂಸ್ಥೆಗಳು, ಸ್ಟುಡಿಯೋಗಳು ಯಾವುವು ಇಲ್ಲಿರಲಿಲ್ಲ.
ಇಂತಹ ಸಂದರ್ಭದಲ್ಲಿ ಕನ್ನಡ ಸಿನಿಮಾ ಉದ್ಯಮವೇ ಪರಭಾಷಾದವರ ಹಿಡಿತಕ್ಕೆ ಬಂದು, ಬೇರೆ ಭಾಷೆಯ ಸೂಪರ್ಹಿಟ್ ಸಿನಿಮಾಗಳನ್ನು ಕನ್ನಡಕ್ಕೆ ಬಿಡುವಂತಹ ಪರಿಸ್ಥಿತಿ ಬಂದ ಸಂದರ್ಭದಲ್ಲಿ ಕನ್ನಡ ಕಲಾವಿದರು ಈ ಬಂಧನ ಹಾಗೂ ತಮ್ಮ ಅಸ್ತ್ತಿತ್ವವನ್ನು ಉಳಿಸಿಕೊಳ್ಳಲೇಬೇಕಾದ ಪರಿಸ್ಥಿತಿ ಅಂದಿತ್ತು. ಇದೆಲ್ಲಾ ಡಬ್ಬಿಂಗ್ ಹೋರಾಟಕ್ಕೆ ಅಂದು ದೊಡ್ಡ ಕಾರಣವಾಗಿತ್ತು. ಆದರೆ ಇಂದು ನಮ್ಮ ಕನ್ನಡ ಚಿತ್ರರಂಗ ಆ ತರಹದ ಪರಿಸ್ಥಿತಿಯನ್ನು ಎದುರಿಸುತ್ತಿದೆಯೇ? ಕನ್ನಡ ಚಿತ್ರರಂಗದಲ್ಲಿ ಇಂದು ವರ್ಷಕ್ಕೆ ನೂರಕ್ಕೂ ಹೆಚ್ಚು ಸಿನಿಮಾಗಳು  ನಿರ್ಮಾಣವಾಗುತ್ತಿವೆ. ಇಂದು ತಾಂತ್ರ್ರಿಕವಾಗಿ ಬೇರೆ ಭಾಷೆಯವರಷ್ಟೇ ನಾವು ಮುಂದುವರೆದಿದ್ದೇವೆ. ಸ್ವಂತ ಸ್ಟುಡಿಯೋಗಳಿವೆ, ವರ್ಷಕ್ಕೆ 400 ರಿಂದ 500 ಕೋಟಿ ರೂಪಾಯಿಗಳು ಕನ್ನಡ ಚಿತ್ರರಂಗದಲ್ಲಿ ಒಳ ಹಾಗೂ ಹೊರಹರಿವು ಆಗುತ್ತಿದೆ. ಇದೆಲ್ಲಾ ಕನ್ನಡ ಚಿತ್ರರಂಗದ ಬೆಳವಣಿಗೆಯನ್ನು ಎತ್ತಿಹಿಡಿಯುತ್ತದೆ. ಬೇರೆ ಭಾಷೆಯಲ್ಲೂ  ಇದೇ ಪರಿಸ್ಥಿತಿ ಇದೆ. ಅವರೆಲ್ಲ ಡಬ್ಬಿಂಗ್  ಉದ್ಯಮವನ್ನು ಒಪ್ಪಿಕೊಂಡು ಬದುಕುತ್ತಿಲ್ಲವೇ?

ಮತ್ತಷ್ಟು ಓದು »

7
ಮೇ

ಅವಿವೇಕಿ ಮಿತ್ರನಿಗಿಂತ ವಿವೇಕಿ ಶತ್ರು ಮೇಲು

ಪವನ್ ಪಾರುಪತ್ತೇದಾರ

ಪ್ರವೀಣ ಓದೋ ವಿಷಯದಲ್ಲಿ ಯಾವಾಗ್ಲೂ ಸೋಂಬೇರಿ,ಅಪ್ಪ ಅಮ್ಮ ಎಷ್ಟು ಬೈದರೂ ತನ್ನ ಲೋಕದಲ್ಲೇ ಮಗ್ನ, ಸ್ನೇಹಿತರ ಜೊತೆ ಯಾವಾಗ್ಲೂ ತಿರುಗಾಡೋದು, ಅಪ್ಪ ಅಮ್ಮನ ಹತ್ರ ಹಣ ತೆಗೆದುಕೊಂಡು ಸಿನಿಮಾ ನೋಡೋದು, ಭಾನುವಾರ ಬಂದ್ರೆ ಸಾಕು ಬೆಳಿಗ್ಗೆ ಇಂದ ಸಂಜೆಯವರೆಗೂ ಬೆಟ್ಟಿಂಗ್ನಲ್ಲಿ ಕ್ರಿಕೆಟ್ ಆಡೋದು ಇದೇ ಕೆಲಸ, ಅಪ್ಪ ಅಮ್ಮನಿಗೂ ಬುದ್ಧಿ ಹೇಳಿ ಹೇಳಿ ಸುಸ್ತಾಗಿತ್ತು. ಹುಡುಗ್ರ ಸಹವಾಸ ಬರೀ ಆಡುವುದಕ್ಕೆ ಸೀಮಿತವಾಗದೆ ದುಶ್ಚಟಗಳ ಕಡೆಯೂ ಸಹ ವಾಲಿತ್ತು. ಮನೆಗೆ ಬಂದಾಗ ಒಮ್ಮೆ ಧೂಮಪಾನದ ಘಮಲು ಅಮ್ಮನ ಮೂಗು ಬಡಿದಿತ್ತು. ಆಗಾಗ ಅಪ್ಪನ ಜೇಬಿನಿಂದ ನೋಟುಗಳು ಸಹ ಕಾಣೆಯಾಗುತಿದ್ದವು. ಅಪ್ಪ ಅಮ್ಮ ಇಬ್ಬರು ಚರ್ಚಿಸಿ ಏನು ಮಾಡುವುದು ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದರು.

ಮರುದಿನ ಭಾನುವಾರ ಪ್ರವೀಣ ಎಂದಿನಂತೆ ಹೇಳದೆ ಕೇಳದೆ ಕ್ರಿಕೆಟ್ ಆಡಲು ಹೊರಟು ಬಿಟ್ಟ, ಅಪ್ಪ ಅಮ್ಮ ಸೀದ ಅವರಪ್ಪನ ಮನೆಗೆ ಹೋಗಿ ಪ್ರವೀಣನ ತಾತನನ್ನು ಕರೆ ತಂದರು. ತಾತನಿಗೆ ವಯಸ್ಸು ಸುಮಾರು ೭೦ ಆಗಿದ್ದರು ಬಹಳ ಚುರುಕು, ಕಾಲ ಕಾಲಕ್ಕೆ ತಾನು ಸಹ ಬದಲಾಗಿದ್ದಂತಹ ಘಾಟಿ ಮುದುಕ. ಕಂಪ್ಯೂಟರ್, ಕ್ರಿಕೆಟ್, ಸಿನಿಮಾ ಎಲ್ಲಾದ್ರಲ್ಲು ಎತ್ತಿದ ಕೈ. ಕ್ರಿಕೆಟ್ ಆಡಲು ಹೋಗಿದ್ದ ಪ್ರವೀಣ ಎಂದಿನಂತೆ ಮನೆಗೆ ಬಂದ, ಬಂದೊಡನೆ ತಾತನನ್ನು ನೋಡಿ ಆಶ್ಚರ್ಯ ಚಕಿತನಾದ, ತಾತನ ಕಾಲಿಗೆ ನಮಸ್ಕಾರ ಮಾಡೋ ಅಂತ ಅಪ್ಪ ಹೇಳೋ ತನಕ ಇವ್ನಿಗೆ ತೋಚಲಿಲ್ಲ, ಮಾಡ್ತೀನಿ ಕೈ ಕಾಲು ತೊಳ್ಕೊಂದು ಬಂದೆ ಅಂತ ಸ್ನಾನದ ಮನೆಗೆ ಹೋಗಿ ಟೂತ್ ಪೇಸ್ಟ್ ನ ಒಂದಷ್ಟು ಬಾಯಿಗೆ ಹಾಕಿಕೊಂಡು ಮುಕ್ಕಳಿಸಿ ಬಂದ, ಬಂದೊಡನೆ ನಮಸ್ಕಾರ ಮಾಡಿದಾಗ ತಾತನಿಗೆ ಧೂಮಪಾನದ ಘಮಲು ತಿಳಿದು ಬಿಡ್ತು. ಅದೂ ಅಲ್ದೆ ಮೊದಲೇ ಪ್ರವೀಣನ ಅಪ್ಪ ಅಮ್ಮ ತಮ್ಮ ಮಗ ದಾರಿ ತಪ್ತಾ ಇದ್ದಾನೆ ಅನ್ನೋ ವಿಷಯ ಬೇರೆ ಮೊದಲೇ ಹೇಳಿದ್ರು. ವಿಷಯ ಗೊತ್ತಾದ್ರು ತಾತ ಮುಗುಮ್ಮನೆ ಇದ್ದರು.

ಮಾರನೆ ದಿನ ಪ್ರವೀಣ ಕಾಲೇಜಿಗೆ ಅಂತ ಹೊರಟಾಗ, ತಾತ ಸಹ ತಯಾರಾಗಿ ಮೊಮ್ಮಗನೊಂದಿಗೆ ಹೊರಡಲು ಸಿದ್ದರಾಗಿದ್ದರು, ಪ್ರವೀಣ ತಾತ ಹಾಗೆಲ್ಲ ನಿಮ್ಮನ್ನ ಕಾಲೇಜಿಗೆ ಬಿಡಲ್ಲ, ಬಹಳಾ ಶಿಸ್ತು ಅಲ್ಲಿ ಅಂತೆಲ್ಲ ಹೇಳ್ದ, ಅದಕ್ಕೆ ತಾತ ನಾ ನೋಡದೇ ಇರೋ ಕಾಲೇಜೇನೋ ಅದು, ನೀನ್ ಓದ್ತಾ ಇರೋ ಕಾಲೇಜು ನನ್ನ ಫೇಸ್ಬುಕ್ ಗೆಳೆಯ ಪ್ರಕಾಶ್ ರಾಜು ದು, ಅವರು ನಾನು ಇಲ್ಲಿಗೆ ಬಂದಿರೋ ಸ್ಟೇಟಸ್ ನೋಡಿದ್ರಂತೆ, ಫೋನ್ ಮಾಡಿದ್ರು ಅದಕ್ಕೆ ಬರ್ತಾ ಇದ್ದೀನಿ ಅಂತ ಪ್ರವೀಣಂಗೆ ಒಳ್ಳೆ ಟಾಂಗ್ ಕೊಟ್ಟ್ರು. ಪ್ರವೀಣನ ಮೊಬೈಲ್ ಗೆ ಅವನ ಗೆಳೆಯನ ಫೋನ್ ಬಂತು, ಏನ್ ಮಗಾ ಸಿನಿಮಾಗೆ ಟಿಕೆಟ್ ತೊಗೊಂಡು ಕಾಯ್ತಾ ಇದ್ದೀವಿ ಎಲ್ಲಿದ್ಯ ಇನ್ನ?? ಪ್ರವೀಣ,ತಾತನ ಜೊತೆ ಇದ್ದೀನಿ ಮಗಾ ಆಮೇಲೆ ಫೋನ್ ಮಾಡ್ತೀನಿ ಅಂದ. ಫೋನ್ ಕಟ್ ಆದ ಮೇಲೆ ತಾತ ಕೇಳಿದ್ರು ಏನು ಸಿನಿಮಾಗೆ ಹೋಗ್ಬೇಕ ಅಂತ, ಅದಕ್ಕೆ ಪ್ರವೀಣ ಹೌದು ನಿಮಗೆ ಹೇಗೆ ಗೊತ್ತಾಯ್ತು ತಾತ ಅಂದ, ಅದಕ್ಕೆ ರಾತ್ರಿ ನೀನು ನಿನ್ನ ಗೆಳೆಯನ ಜೊತೆ ಫೋನಲ್ಲಿ ಮಾತಾಡ್ತಾ ಇದ್ದಲ್ಲ ಆಗ ಕೇಳಿಸ್ತು ನಂಗೆ ಅಂದ್ರು. ಆದ್ರೆ ಕಾಲೇಜಿಗೆ ಚಕ್ಕರ್ ಹೊಡೆದು ಸಿನಿಮಾ ನೋಡೋದು ತಪ್ಪಲ್ವ ಅಂದ್ರು. ಪ್ರವೀಣನಿಗೆ ಉತ್ತರ ಕೊಡಲು ಆಗ್ಲಿಲ್ಲ, ಕಡೆಗೆ ತಾತ, ನಿನ್ ಸ್ನೇಹಿತನಿಗೆ ಫೋನ್ ಮಾಡಿ ಹೇಳು ನನಗೂ ಒಂದು ಟಿಕೆಟ್ ತೊಗೊ ಅಂತ ನಾನು ಬರ್ತೀನಿ ಅಂದ್ರು. ಪ್ರವೀಣನಿಗೆ ಒಂದು ಕಡೇ ಖುಷಿ ಆಯ್ತು ಮತ್ತೆ ಭಯ ಸಹ ಆಯ್ತು ಮನೇಲಿ ಹೇಳಿಬಿಟ್ರೆ ಅಂತ ಅಷ್ಟ್ರಲ್ಲಿ ತಾತ, ನೀನೇನು ಯೋಚಿಸ ಬೇಡ ಮನೇಲಿ ನಾ ಏನು ಈ ವಿಷಯ ತಿಳಿಸಲ್ಲ ಅಂದಾಗ ಸ್ವಲ್ಪ ಸಮಾಧಾನ ಆಯ್ತು.

ಮತ್ತಷ್ಟು ಓದು »