ಅತ್ತ ಮೋದಿ ಭಾಷಣ ಮಾಡುತ್ತಿದ್ದಾಗ ಎಂಜಿನಿಯರಿಂಗ್ ನಲ್ಲಿ ಗೋಲ್ಡ್ ಮೆಡಲಿಸ್ಟ್ ಒಬ್ಬರು ಅರಮನೆ ಗ್ರೌಂಡಲ್ಲಿ ಟ್ರಾಫಿಕ್ ನಿಭಾಯಿಸುತ್ತಿದ್ದರು…!
-ಕೃಷ್ಣ ಕಡೂರು
ಎಲ್ಲೋ ಸಾಗರದಾಚೆಯಿಂದ ಹಾರಿ ಬಂದ ಹಕ್ಕಿಯೊಂದು ಮಲೆನಾಡ ಕಾಡಿನಲ್ಲಿ ಹಿಕ್ಕೆ ಹಾಕಿ ಸುಂದರ ಪುಷ್ಪವನ್ನು ಅರಳಿಸುವ ಗಿಡವಾಗುತ್ತದೆ. ಆ ಹೂವಿನ ಸೌಂದರ್ಯಕ್ಕೆ ಮನಸೋತ ಕವಿ ಮನಸ್ಸೊಂದು ರಸೋತ್ಪತ್ತಿಯ ಕಾವ್ಯವನ್ನು ಸ್ರಷ್ಟಿಸುತ್ತದೆ. ಆ ಕಾವ್ಯರಸ ಜನಮಾನಸದಲ್ಲಿ ಬೇರೂರಿ ಪರಂಪರೆಯನ್ನು ರೂಪಿಸುವಲ್ಲಿಗೂ ವ್ಯಾಪಿಸುತ್ತವೆ. ಆದರೆ ಎಲ್ಲಿನದ್ದೋ ಒಂದು ಹಕ್ಕಿಗೆ ಇವಾವುವೂ ತಿಳಿಯುವುದಿಲ್ಲ. ತಿಳಿಯುವ ಹಂಬಲ, ಮನಸ್ಸು ಮನಸ್ಸು ಮತ್ತು ತಿಳಿದು ಮಾಡುವಂಥಾದ್ದೇನೂ ಆ ಹಕ್ಕಿಗೂ ಇಲ್ಲ.
ಎಲ್ಲೋ ಕಾಡಿನಲ್ಲಿ ತುಂತುರು ಹನಿಯನ್ನು ತಾನು ಹೀರಿಕೊಳ್ಳದೆ ಭೂಮಿಗೆ ಜಾರಿಸುವ ಎಲೆಯೊಂದಕ್ಕೆ, ಈ ಪುಟ್ಟ ಹನಿ ನದಿಯಾಗಿ, ಭೋರ್ಗೆರೆಯುವ ಜಲಪಾತವಾಗಿ, ಅನ್ನದ ಮೂಲವಾಗಿ, ಬೆಳಕಿನ ಮೂಲವಾಗುವುದು ಎಂದು ಆ ಎಲೆಗೂ ಗೊತ್ತಿಲ್ಲ. ಅದು ಗೊತ್ತಿದ್ದು ಆ ಹನಿಯನ್ನು ಭೂಮಿಗಿಳಿಸಿಲ್ಲ.
ಕೆಸರು ನೆಲದಲ್ಲಿ ಒಣಗಿದ ದೇಹವೊಂದು ಉತ್ತು, ಬಿತ್ತಿ, ಕಟಾವು ಮಾಡಿ ಬೆವರನ್ನೇ ಬಸಿಯುತ್ತಿರುವಾಗ ಆತನಿಗೂ ತಾನು ಬೆಳೆದ ತೆನೆ ರಾಜಾಸ್ಥಾನದಲ್ಲಿ ಮೃಷ್ಟಾನ್ನವಾಗುವುದೆಂದು ಆತನೂ ಯೋಚಿಸುವುದಿಲ್ಲ.
ನೀರೇ ಕಾಣದ ಒರಟು ನೆಲದ ಹೆಬ್ಬಂಡೆಯೊಂದು ಗರ್ಭಗುಡಿಯ ಲಿಂಗವಾಗಿ ತಂಪು ತಾಣದಲ್ಲಿರುವೆ ಎಂದು ಸ್ವತಃ ಬಂಡೆಯೂ ಅದನ್ನು ಕಡೆದವರೂ ಯೋಚಿಸುವುದಿಲ್ಲ.
ನಿಷ್ಕಾಮ ಕರ್ಮಕ್ಕೆ ಯೋಚನೆ-ಚಿಂತನೆಗಳ ಹಂಗಿಲ್ಲ. ಅವುಗಳನ್ನು ಕಟ್ಟಿಕೊಂಡು ಅವು ಹುಟ್ಟುವುದೂ ಇಲ್ಲ. ಅಷ್ಟೇ ಏಕೆ ಯಾವ ಮಣ್ಣಿಗೂ ತಾನು ಮುಂದೊಂದು ದಿನ ಕಾಲಿಂದ ತುಳಿಸಿಕೊಳ್ಳುವೆ, ಮಡಕೆಯಾಗುವೆ ಎಂಬ ಕಲ್ಪನೆಯನ್ನೂ ಮಾಡಿರುವುದಿಲ್ಲ. ಆದರೂ ಇವೆಲ್ಲವೂ ಆಗಿರುತ್ತದೆ. ಕಾರಣದ ಹಿಂದೆ ಬಲವಾದ ಕಾರ್ಯವಿರುತ್ತದೆ. ಕಾರ್ಯದ ಹಿಂದೆ ಕಾರಣವೂ ಇರುತ್ತದೆ. ಅದನ್ನೇ ಭಾರತೀಯ ತತ್ತ್ವಶಾಸ್ತ್ರ “ಕಾರ್ಯಕಾರಣ ಸಂಬಂಧ” ಎಂದು ಕರೆಯಿತು. ಸನಾತನದ ಆಚಾರ್ಯರುಗಳೆಲ್ಲವೂ, ವೈದಿಕೇತರ ಮತಗಳೂ ಪ್ರತಿಪಾದಿಸಿದ್ದು ಅದನ್ನೇ. ಲೌಕಿಕಾರ್ಥದಲ್ಲಿ ಹೇಳಬೇಕೆಂದರೆ ಅದು “ಪರೋಕ್ಷ ಯಜ್ಞಫಲ”.
ಇಷ್ಟೆಲ್ಲಾ ಹೇಳಹೊರಟಿರುವುದಕ್ಕೆ ಕಾರಣ ಮೊನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಕಂಡ ಒಂದು ದೃಶ್ಯ.
ಮುಂಜಾನೆಯಿಂದನೇ ರಾಜ್ಯದ ಮೂಲೆ ಮೂಲೆಗಳಿಂದ ಅರಮನೆ ಮೈದಾನಕ್ಕೆ ಜನ ಧಾವಿಸುತ್ತಿದ್ದರು. ಹೊತ್ತೇರುತ್ತಿದ್ದಂತೆ ವಾಹನ ದಟ್ಟಣೆ, ಜನರ ಪ್ರವಾಹ ಅತಿಯಾಗುತ್ತಲೇ ಇತ್ತು. ಅರಮನೆ ಮೈದಾನಕ್ಕೆ ಸೇರುವ ರಸ್ತೆಗಳೆಲ್ಲವೂ ಕಿಷ್ಕಿಂಧೆಯಂತಾಗಿ ಧೂಳುಮಯವಾಗಿದ್ದರೂ ಜನರ ಕಣ್ಣು ಆಕಾಶಕ್ಕೆ ನೆಟ್ಟು ಹೆಲಿಕಾಪ್ಟರ್ ಸದ್ದಿಗೆ ನಿರೀಕ್ಷೆ ಮಾಡುತ್ತಿತ್ತು. ಕೆಲವರು ವೇದಿಕೆಯ ಸುತ್ತ ಠಾಳಾಯಿಸುತ್ತಿದ್ದರೆ ಇನ್ನು ಕೆಲವರು ಗರಿಗರಿ ಬಟ್ಟೆ ಧರಿಸಿ ನಾಯಕರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದರು.
ನಾನು ಮೋದಿ ಅಭಿಯಾನಿಯಾಗಿರಬಹುದು, ಆದರೆ ಬಿಜೆಪಿಯಲ್ಲ, ಯಾವ ಪಕ್ಷಕ್ಕೂ ಸಲ್ಲುವವನಲ್ಲ. ಬೆಳಿಗ್ಗೆ ಒಂಭತ್ತು ಗಂಟೆಗೆ ನಾನು ಮೈದಾನ ಪ್ರವೇಶಿಸುತ್ತಿದ್ದಾಗ ಒಬ್ಬ ಮನುಷ್ಯ ಕೆಲವು ಯುವಕರೊಟ್ಟಿಗೆ ರಸ್ತೆಯಲ್ಲಿ ನಿಂತು ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸುತ್ತಿದ್ದರು. ಮಧ್ಯೆದಲ್ಲೊಮ್ಮೆ ಎದ್ದು ಬಂದಾಗಲೂ ಆ ಮನುಷ್ಯ ಹಾಗೇ ಇದ್ದರು. ಮತ್ತೆ ಆ ಮನುಷ್ಯ ನೆನಪಾಗಲಿಲ್ಲ.
ಮೋದಿ ಭಾಷಣ ಮುಗಿದ ನಂತರ ಮೈದಾನದಿಂದ ಹೊರಹೊರಟಾಗಲೂ ಅವರು ಅದೇ ತತ್ಮಯತೆಯಿಂದ ರಸ್ತೆ ನಿಭಾಯಿಸುತ್ತಿದ್ದಾಗ ದಂಗಾಗಿಹೋದೆ. ಅವರ ಬಿಳಿ ಬಟ್ಟೆ ಧೂಳುಮಯವಾಗಿತ್ತು. ಬಿಳಿಯಾದ ತಲೆಯಲ್ಲೂ ಧೂಳು ಮೆತ್ತಿಕೊಂಡಿತ್ತು. ಎಲ್ಲೋ ನೋಡಿದ್ದೇನೆ ಎಂದು ಗೆಳೆಯನನ್ನು ಕೇಳಿದಾಗ ಆತ ಇವರೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಎಂದ.
ಬಿಜೆಪಿಯಲ್ಲಿ ರಾಷ್ಟ್ರ ಕಾರ್ಯದರ್ಶಿಗಳೂ ಟ್ರಾಫಿಕ್ ನಿಭಾಯಿಸಬೇಕಾ? ಎಂದು ಕೇಳಿದೆ. ಆತ ನಸುನಕ್ಕು ” ನಾವಲ್ಲಿ ಮೋದಿ ಮಾತಿಗೆ ಚಪ್ಪಾಳೆ ತಟ್ಟುತ್ತಾ, ಘೋಷಣೆ ಕೂಗುತ್ತಿದ್ದೆವಲ್ಲಾ, ಆಗಲೂ ಇವರು ಹೀಗೆಯೇ ಕೈ ಆಡಿಸುತ್ತಾ ಟ್ರಾಫಿಕ್ ಕಂಟ್ರೋಲ್ ಮಾಡುತ್ತಿದ್ದರು. ರ್ಯಾಲಿ ಯಶಸ್ವಿಯಾಗಿರುವುದು ಇಂಥವರಿಂದ” ಎಂದ.ನಾನು ” ಹಾಗಾದರೆ ಇವರಿಗೆ ವೇದಿಕೆ ಯಾಕೆ ಕೊಡಲಿಲ್ಲ?” ಎಂದೆ ” ಹತ್ತಬಹುದು, ಆದರೆ ಇವರು ಹತ್ತುವುದಿಲ್ಲ. ಅವರು ಆರೆಸ್ಸೆಸ್ ನಲ್ಲಿದ್ದವರು” ಎಂದ.
ಪೂರ್ತಿ ಅರ್ಥ ಆಗಲಿಲ್ಲ. ಮತ್ತಷ್ಟು ಗೊಂದಲವಾಯಿತು. ಏಕೆಂದರೆ ವೇದಿಕೆಯಲ್ಲಿ ನಾಯಕರು ಮಾತಾಡುತ್ತಿದ್ದಾಗ ಜನ ಅವರವರ ನಾಯಕರನ್ನು ವೇದಿಕೆಗೆ ಕರೆಯಿರಿ ಎಂದು ಬೊಬ್ಬೆ ಹಾಕುತ್ತಿದ್ದರು. ಇವರು ನೋಡಿದರೆ ಹೀಗೆ! ಅದಕ್ಕೆ ಗೆಳೆಯ – “ದೇಶದ ಎಲ್ಲೋ ಮೂಲೆಯಲ್ಲಿ ಹುಡುಗನೊಬ್ಬ ಆರೆಸ್ಸೆಸ್ ಶಾಖೆಗೆ ಹೋಗುತ್ತಾನೆ. ಕಳೆದ ೯೦ ವರ್ಷಗಳಿಂದಲೂ ಹುಡುಗರು ಕಬಡ್ಡಿ ಆಡುತ್ತಾ ಶಾಖೆಯಲ್ಲಿ ಕಳೆಯುತ್ತಿದ್ದಾರೆ. ಅವರು ಶಾಖೆಗೆ ಹೋದ ಕಾರಣಕ್ಕೆ ಇಂದು ಮೋದಿ ಎಂಬ ಪ್ರಧಾನಿ, ಯೋಗಿ ಎಂಬ ಮುಖ್ಯಮಂತ್ರಿ ದೇಶದಲ್ಲಿದ್ದಾರೆ. ಅದನ್ನು ಮರೆಯದ ಜನ ಹೀಗಿರುತ್ತಾರೆ. ಬಿಜೆಪಿಯಲ್ಲಿ ರಾಜಕಾರಣಕ್ಕಿಂತ ಸಂಘಟನೆಗೆ ಒತ್ತು” ಎಂದು ಹೇಳಿದ.
ಅರ್ಥವಾದರೂ ಅರಗಿಸಿಕೊಳ್ಳಲಾಗಲಿಲ್ಲ. ಏಕೆಂದ್ರೆ ಎಂದೋ ಆರೆಸ್ಸೆಸ್ ಗೆ ಹೋಗುತ್ತಿದ್ದ ಗೆಳೆಯ ಈ ಬಿ.ಎಲ್ ಸಂತೋಷ್ ಇನ್ಸ್ಟ್ರುಮೆಂಟಲ್ ಎಂಜಿನಿಯರಿಂಗ್ ನಲ್ಲಿ ಗೋಲ್ಡ್ ಮೆಡಲಿಸ್ಟ್ ಎಂದಾಗ ಮತ್ತಷ್ಟು ತಲೆಕೆಟ್ಟುಹೋಯಿತು.
ಕನ್ನಡ ಪರ ಹೋರಾಟವೆಂದರೆ ಕಾಂಗ್ರೆಸ್ ಪರ ಹೋರಾಟವೇ?
– ರಾಕೇಶ್ ಶೆಟ್ಟಿ
ಭಾವನಾತ್ಮಕವಾಗಿ ಜನರನ್ನು ಎತ್ತಿಕಟ್ಟುವುದು ರಾಜಕೀಯ ಪಕ್ಷಗಳಿಗೆ ಯಾವತ್ತಿಗೂ ಲಾಭದ ಬಾಬತ್ತು. ಈಗ ಮಹದಾಯಿ ವಿಷಯದಲ್ಲೂ ಆಗುತ್ತಿರುವುದೂ ಅದೇ. ಪ್ರಧಾನಿ ಮೋದಿಯವರ ಬಳಿ, ಗೋವಾ-ಮಹಾರಾಷ್ಟ್ರದ ಜೊತೆಗೆ ಸಂಧಾನದ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯದ ಸರ್ವಪಕ್ಷ ನಿಯೋಗ ಹೋಗಿ ಕೇಳಿಕೊಂಡಾಗ, ಈ ವಿವಾದದ ಇತಿಹಾಸದ ಅರಿವಿದ್ದ ಅವರು, ಮಧ್ಯಸ್ಥಿಕೆ ನಿರಾಕರಿಸಿ ಮೊದಲು ಆಯಾ ರಾಜ್ಯಗಳಲ್ಲಿರುವ ಪಕ್ಷಗಳನ್ನು ಒಪ್ಪಿಸಿ ಎಂದಿದ್ದರು. ನಂತರ ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ, ಗೋವಾದ ಬಿಜೆಪಿ ಸರ್ಕಾರವನ್ನು ಕರ್ನಾಟಕದ ಬಿಜೆಪಿಯವರು ಹಾಗೂ ಗೋವಾದ ವಿರೋಧ ಪಕ್ಷ ಕಾಂಗ್ರೆಸ್ಸನ್ನು ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ಸಿನವರು ಒಪ್ಪಿಸುವ ನಿರ್ಧಾರವಾಗಿತ್ತು. ಮತ್ತಷ್ಟು ಓದು 
ಕನ್ನಡ ಪರ ಹೋರಾಟವೆಂದರೆ ಕಾಂಗ್ರೆಸ್ ಪರ ಹೋರಾಟವೇ?
– ರಾಕೇಶ್ ಶೆಟ್ಟಿ
ಭಾವನಾತ್ಮಕವಾಗಿ ಜನರನ್ನು ಎತ್ತಿಕಟ್ಟುವುದು ರಾಜಕೀಯ ಪಕ್ಷಗಳಿಗೆ ಯಾವತ್ತಿಗೂ ಲಾಭದ ಬಾಬತ್ತು. ಈಗ ಮಹದಾಯಿ ವಿಷಯದಲ್ಲೂ ಆಗುತ್ತಿರುವುದೂ ಅದೇ. ರಧಾನಿ ಮೋದಿಯವರ ಬಳಿ,ಗೋವಾ-ಮಹಾರಾಷ್ಟ್ರದ ಜೊತೆಗೆ ಸಂಧಾನದ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯದ ಸರ್ವಪಕ್ಷ ನಿಯೋಗ ಹೋಗಿ ಕೇಳಿಕೊಂಡಾಗ,ಈ ವಿವಾದದ ಇತಿಹಾಸದ ಅರಿವಿದ್ದ ಅವರು,ಮಧ್ಯಸ್ಥಿಕೆ ನಿರಾಕರಿಸಿ ಮೊದಲು ಆಯಾ ರಾಜ್ಯಗಳಲ್ಲಿರುವ ಪಕ್ಷಗಳ ಒಪ್ಪಿಸಿ ಎಂದಿದ್ದರು. ನಂತರ ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ,ಗೋವಾದ ಬಿಜೆಪಿ ಸರ್ಕಾರವನ್ನು ಕರ್ನಾಟಕದ ಬಿಜೆಪಿಯವರು ಹಾಗೂ ಗೋವಾದ ವಿರೋಧ ಪಕ್ಷ ಕಾಂಗ್ರೆಸ್ಸನ್ನು ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ಸಿನವರು ಒಪ್ಪಿಸುವ ನಿರ್ಧಾರವಾಗಿತ್ತು.
ನಂತರ ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೋವಾ-ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪಾತ್ರ ಬರೆದಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಯು ಬಂದಿತ್ತು. ಅವರ ಮಧ್ಯಸ್ಥಿಕೆಯಲ್ಲಿಯೇ ಮಾತುಕತೆ ನಡೆಯಲಿದೆ ಎನ್ನುವ ಸುದ್ದಿಗಳು ಇದ್ದವು.ಈ ನಡುವೆ ಕರ್ನಾಟಕದ ಬಿಜೆಪಿಯ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಹದಾಯಿ ವಿಷಯಕ್ಕೆ ಭೇಟಿ ಮಾಡಿದ್ದರು.ಆ ಭೇಟಿಯನ್ನೂ ವಿವಾದವಾಗಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ‘ಸಮಸ್ಯೆಯಿರುವುದು ಗೋವಾ ರಾಜ್ಯದ ಜೊತೆ. ರಾಜ್ಯ ಬಿಜೆಪಿಯವರು ಗೋವಾ ಸಿಎಂ ಜೊತೆ ಮಾತನಾಡಲಿ’ ಎಂದು ಖ್ಯಾತೆ ತೆಗೆದಿದ್ದರು. ಆ ನಂತ್ರ ಗೋವಾದಲ್ಲಿ ಚುನಾವಣೆಯ ಕಾವೇರಿತು,ಇತ್ತ ರಾಜ್ಯ ಬಿಜೆಪಿಗೆ ಅದರದ್ದೇ ಆದ ತಲೆ ನೋವು ತಾಪತ್ರಯಗಳಿದ್ದವು. ಇತ್ತೀಚಿಗೆ ಧೂಳು ಕೊಡವಿಕೊಂಡು ಯಡ್ಯೂರಪ್ಪನವರ ನೇತೃತ್ವದಲ್ಲಿ ಶುರುವಾಗಿದ್ದ ಪರಿವರ್ತನಾ ಯಾತ್ರೆಯ ಹುಬ್ಬಳ್ಳಿ ಸಮಾವೇಶದ ಸಮಯದಲ್ಲಿ,Over Enthusiastic ಆದ ಯಡ್ಯೂರಪ್ಪನವರು ಮಹದಾಯಿ ವಿವಾದಕ್ಕೆ ಪರಿಹಾರ ದೊರಕಲಿದೆ,ಗೋವಾದಿಂದ ಸಿಹಿ ಸುದ್ದಿ ತರುತ್ತೇನೆ ಎಂದು ಘೋಷಿಸಿಬಿಟ್ಟರು.ಅತ್ತ ಅಮಿತ್ ಷಾ ಅವರ ಮಧ್ಯಸ್ಥಿಕೆಯಲ್ಲಿ ಗೋವಾ ಸಿಎಂ ಪರಿಕ್ಕರ್,ರಾಜ್ಯದ ಬಿಜೆಪಿ ನಾಯಕರು ನಡೆಸಿದ ಸಂಧಾನ ಸಭೆಯ ಫೋಟೋಗಳು ಬ್ರೇಕಿಂಗ್ ನ್ಯೂಸ್ ಚಾನೆಲ್ಲುಗಳಿಂದ ಹಿಡಿದು ದಿನಪತ್ರಿಕೆಗಳಲ್ಲೂ ಬಂದವು. ಏನೋ ಪವಾಡವಾಗಲಿದೆ ಎಂದು ಬರೆದವು.ಮುಗ್ಧ ರೈತರು,ಹೋರಾಟಗಾರರು ಕಾದು ಕುಳಿತರು, ಕಡೆಗೆ ಪರಿಕ್ಕರ್ ಅವರಿಂದ ಯಡ್ಯೂರಪ್ಪನವರಿಗೆ ಪತ್ರವೊಂದು ಬಂತು. ಕುಡಿಯುವ ನೀರಿನ ವಿಚಾರದಲ್ಲಿ ಮಾತ್ರ ತಾವು ಮಾತುಕತೆಗೆ ಸಿದ್ಧರಾಗಿರುವುದಾಗಿ ಬರೆದಿದ್ದರು. ಸಮ್ಮಿಶ್ರ ಸರ್ಕಾರದ ಏಕೈಕ ಬಿಜೆಪಿಯ ನಾಯಕರಾಗಿ ನಿಜಕ್ಕೂ ಪರಿಕ್ಕರ್ ಹಾಗೂ ಗೋವಾ ಬಿಜೆಪಿ ರಿಸ್ಕ್ ತೆಗೆದುಕೊಂಡೇ ಈ ಪತ್ರ ಬರೆದಿತ್ತು. ಗೋವಾ ಸಿಎಂ ಕರ್ನಾಟಕ ಸಿಎಂಗೆ ಪತ್ರ ಬರೆಯಬೇಕಿತ್ತು ಎಂದು ಖ್ಯಾತೆ ತೆಗೆದ ಕಾಂಗ್ರೆಸ್ಸು ಇತ್ತ ಹೋರಾಟಗಾರರನ್ನು ತಂದು ಬಿಜೆಪಿಯ ಕಚೇರಿ ಎದುರು ಕೂರಿಸಿ,ಅತ್ತ ಗೋವಾ ಕಾಂಗ್ರೆಸ್ಸಿಗೆ ತಿವಿಯಿತು.
ಕೇಂದ್ರ ಬಜೆಟ್ 2018: ಮೋದಿ ಸರಕಾರದ ಮುಂದಿರುವ ಮಹೋನ್ನತ ಅಗ್ನಿಪರೀಕ್ಷೆ.
– ಶ್ರೇಯಾಂಕ ಎಸ್ ರಾನಡೆ
“1.25 ಬಿಲಿಯನ್ ಜನರ ಮೇಲೆ ನೇರ ಪರಿಣಾಮ ಬೀರಲಿರುವ ಹಾಗೂ ಒಂಭತ್ತು ಚುನಾವಣೆಗಳನ್ನು ಎದುರಿಸಲಿರುವ ಈ ಸಾಲಿನ ಮುಂಗಡ ಪತ್ರ, ಕಳೆದ ನಾಲ್ಕು ಬಜೆಟ್ಗಳಿಗೆ ಹೋಲಿಸಿದರೆ ಅತ್ಯಂತ ಕಠಿಣ, ಸವಾಲಿನ ಹಾಗೂ ನಿರೀಕ್ಷೆಯ ಬಜೆಟ್. ಹಲವು ಅನಘ್ರ್ಯ ಸಮಸ್ಯೆಗಳ ಹೊರತಾಗಿಯೂ ಇದು ‘ಮತದಾರ’ ಕೇಂದ್ರಿತ ಬಜೆಟ್ ಆಗಬಹುದೆಂಬುದನ್ನು ಸರಳವಾಗಿ ಊಹಿಸಬಹುದಾದರೂ, ಅದು ಆರ್ಥಿಕ ಪುನಚ್ಛೇತನಕ್ಕೆ ಕಾರಣವಾಗಬಲ್ಲದೆ? ಎಂಬುದು ದೇಶದ ಮುಂದಿರುವ ಸವಾಲು.”
ಮರೆತರೆ ಕ್ಷಮಿಸಿದಂತೆ ಆದೀತು,ಎಚ್ಚರ!
– ಭರತ್ ಶಾಸ್ತ್ರೀ
ಈ ವರ್ಷದ ಗಣರಾಜ್ಯೋತ್ಸವಕ್ಕೆ ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಪೋಲಿಸರ ಸರ್ಪಕಾವಲಿನಲ್ಲಿ ಧ್ವಜಾರೋಹಣ ನಡೆಸಲಾಯಿತು, ಜತೆಗೆ ಶ್ರೀನಗರದ ಲಾಲ್ ಚೌಕ್ ದಲ್ಲಿ ಧ್ವಜ ಹಾರಿಸಲಿಲ್ಲ ಎಂಬ ಕಳವಳಕಾರಿ ಸುದ್ದಿಯೂ ಬಂತು. ಈ ಹಿನ್ನೆಲೆಯಲ್ಲಿ ಜನವರಿ 24, 2010 ರ “ದಿ ಪಯೊನೀರ್” ಪತ್ರಿಕೆಯಲ್ಲಿ ಖ್ಯಾತ ಅಂಕಣಕಾರ ಕಾಂಚನ್ ಗುಪ್ತಾ ಅವರ To forget would be to forgive ಎಂಬ ಮನಕಲಕುವ ಲೇಖನದ ಸಾರಾಂಶವನ್ನು ಓದುಗರಿಗೆ ಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇನೆ. 60 ವರ್ಷ ತುಂಬಿದ ನಮ್ಮ ಗಣರಾಜ್ಯದಲ್ಲಿ ಇಂತಹ ದೌರ್ಜನ್ಯ ನಮ್ಮ ಮಾಧ್ಯಮಗಳ ಕಣ್ಣಿಗೆ ಏಕೆ ಕಾಣುವುದಿಲ್ಲ ಎಂಬ ನನ್ನ ಹತಾಶೆಯನ್ನು ಓದುಗರೊಂದಿಗೆ ಹಂಚಿಕೊಳ್ಳಲು ಇಚ್ಚಿಸುತ್ತೇನೆ. ಮತ್ತಷ್ಟು ಓದು 
ಸೈಮನ್ ಅಯೋಗಕ್ಕೆ ತೊಡೆ ತಟ್ಟಿದ ಪಂಜಾಬಿನ ಕೇಸರಿ.
– ಶಿವಾನಂದ ಶಿವಲಿಂಗ ಸೈದಾಪೂರ
ಪಂಜಾಬ್ದ ಕೇಸರಿ ಎಂದೇ ಪ್ರಸಿದ್ದರಾದ ಲಾಲಾ ಲಜಪತ್ ರಾಯರು 1865 ರ ಜನೇವರಿ 28 ರಂದು ಪಂಜಾಬ್ ನ ಮುನ್ಷಿ ರಾದಾಕೃಷ್ಣ ಆಜಾದ್ ಮತ್ತು ಗುಲಾಬ್ ದೇವಿಯರ ಮಗನಾಗಿ ಜನಿಸಿದರು. ಸ್ವತಂತ್ರ ಹೋರಾಟದ ದಿಕ್ಕನ್ನೇ ಬದಲಿಸಿದ ಒಂದೇ ಹೆಸರಿನಿಂದ ಮೂವರು ಜನ ಗುರುತಿಸಿಕೊಂಡ “ಲಾಲಬಾಲಪಾಲ್” ರಲ್ಲಿ ಇವರು ಒಬ್ಬರು.
1905 ರ ವರೆಗೂ ಕಾಂಗ್ರೇಸ್ನ ನೀತಿಯಿಂದಾಗಿ ಮಂದಗತಿಯಲ್ಲಿಯೇ ಸಾಗುತ್ತಿದ್ದ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಕ್ರಾಂತಿಯ ಕಿಚ್ಚನ್ನು ಉದ್ದೀಪನಗೊಳಿಸಿದವರಲ್ಲಿ ಇವರು ಒಬ್ಬರು. ಪ್ರಖರ ವಾಗ್ಮಿಯಾದ ಇವರು ತಮ್ಮ ಭಾಷಣಗಳಲ್ಲಿ “ಜಗತ್ತಿನ ಇತಿಹಾಸ ರೂಪಗೊಂಡಿದ್ದೇ ರಕ್ತದಿಂದ. ನಮ್ಮ ಮಾತೃಭೂಮಿ ನಮ್ಮ ರಕ್ತವನ್ನು ಅಪೇಕ್ಷಿಸುತ್ತಾಳೆ. ರಾಷ್ಟ್ರಕ್ಕಾಗಿ ಅದನ್ನು ನೀಡಿಯೇ ಅಮರರಾಗೋಣ”. ಎಂದು ಸದಾಕಾಲ ಭಾರತೀಯ ಕ್ಷಾತ್ರ ಪರಂಪರೆಯನ್ನು ಎಚ್ಚರಗೊಳಿಸುತಿದ್ದರು. ಮಂದಗತಿಯಲ್ಲಿ ಸಾಗುತಿದ್ದ ಹೋರಾಟಕ್ಕೆ “ನಾವು ಒಂದು ಸಾಮ್ರಾಜ್ಯದ ಪ್ರಜೆಗಳು, ಭಿಕ್ಷುಕರಲ್ಲ. ಹೋರಾಟದ ಈ ಪ್ರಜ್ಞೆ ನಮ್ಮಲ್ಲಿರಬೆಕಾದದ್ದು ಅಗತ್ಯ. ನಮ್ಮ ಹಕ್ಕುಗಳನ್ನು ಪ್ರತಿಪಾದಿಸುವ ಪ್ರಜೆಗಳು ನಾವಾಗಿರಬೇಕು. ಒಂದು ದೃಢ ನಿಲುವನ್ನು ತಳೆದು ಅದಕ್ಕೆ ಅಂಟಿಕೋಳ್ಳಬೇಕು” ಎಂದು ಹೇಳುತಿದ್ದರು. “ಈ ಭೂಮಿಯ ಮೇಲೆ ಸೊಂಕಿರುವುದು ನಮ್ಮ ಪೂರ್ವಜರ ರಕ್ತ. ನಾವು ಅದರ ಮೇಲೆ ಬದುಕುತಿದ್ದೇವೆ. ಈ ಭೂಮಿ ನಮ್ಮದು ಇಲ್ಲವೇ ದೇವರದ್ದು” ಎಂದು ನಿರಂತರವಾಗಿ ಒತ್ತಿ ಒತ್ತಿ ಹೇಳಿದರು. ಮತ್ತಷ್ಟು ಓದು 
ಸುಪ್ರೀಂ ಕೋರ್ಟಿನ ನ್ಯಾಯಾಧೀಶರನ್ನೇ ಪ್ರಶ್ನಿಸಬಹುದಾದರೆ ಡಾರ್ವಿನ್ ನ ವಿಕಾಸವಾದವನ್ನೇಕಲ್ಲ?
– ಸುಜಿತ್ ಕುಮಾರ್
ವರ್ಷ ಕ್ರಿಸ್ತ ಶಕ 1917. ಸಾಪೇಕ್ಷತಾ ಸಿದ್ಧಾಂತವೆಂಬ (Theory of Relativity) ಮಹಾನ್ ವೈಜ್ಞಾನಿಕ ಸಿದ್ಧಾಂತವನ್ನು ಮಂಡಿಸಿದ್ದ ಐನ್ಸ್ಟೀನ್ ಎಂದರೆ ಇಡೀ ವಿಶ್ವವೇ ತಲೆಬಾಗುತಿದ್ದ ಕಾಲ. ಆನೆ ನಡೆದಿದ್ದೆ ದಾರಿ ಎಂಬಂತೆ ಅಂದು ಐನ್ಸ್ಟೀನ್ ಮಂಡಿಸುತಿದ್ದ ಸಿದ್ಧಾಂತಗಳೆಲ್ಲವೂ ಸಂಶೋಧನಾ ವಲಯದಲ್ಲಿ ಅಲ್ಲಿಯವರೆಗೂ ನಂಬಿಕೊಂಡು ಬಂದಿದ್ದ ವೈಜ್ಞಾನಿಕ ಸೂತ್ರಗಳನೆಲ್ಲವನ್ನೂ ತಲೆಕೆಳಗಾಗಿಸುತ್ತಿದ್ದವು. ವಿಜ್ಞಾನವೆಂದರೆ ಹಾಗೆಯೆ ಅಲ್ಲವೇ ಮತ್ತೆ? ಹೀಗೆ ಅಣು, ಪರಮಾಣು, ಭೂಮಿ, ಸೌರಮಂಡಲ, ಜಗತ್ತು ಎಂಬ ಸೂಕ್ಷ್ಮದಿಂದಿಡಿದು ಸಮಗ್ರದವರೆಗೂ ಆತನ ಸಂಶೋಧನೆಗಳು ಜರುಗುತ್ತಿದ್ದವು. ಅಂತಹದೇ ಸಂಶೋಧನೆಗಳಲ್ಲಿ ವಿಶ್ವದ ರಚನೆಯ ಸಂಶೋದನೆಯೂ ಕೂಡ ಒಂದು. ಐನ್ಸ್ಟೀನ್ನ ಪ್ರಕಾರ ಸಕಲ ವಿಶ್ವದ (ಬ್ರಹ್ಮಾಂಡ) ಆಕಾರವು ಜಡ ವಸ್ತುವಿನಂತೆ ಸ್ಥಿರವಾಗಿದ್ದೂ ಗೋಳಾಕಾರದ ರಚನೆಯನ್ನು ಹೊಂದಿದೆ ಎಂಬುದಾಗಿತ್ತು (Static Universe). ಆದರೆ ಅಷ್ಟೊತ್ತಿಗಾಗಲೇ ಕೆಲ ವಿಜ್ಞಾನಿಗಳು ವಿಶ್ವವು ಸ್ಥಿರವಾಗಿರದೆ ದಿನದಿಂದ ದಿನಕ್ಕೆ ಹಿಗ್ಗುತ್ತಿದೆ ಎಂಬ ವಾದವನ್ನು ಮಂಡಿಸಿರುತ್ತಾರೆ. ಅದನ್ನು ಸಾಧಿಸಿ ತೋರಿಸುವ ಸನಿಹದಲ್ಲೂ ಇರುತ್ತಾರೆ. ಆದರೆ ಐನ್ ಸ್ಟೀನಿನ್ನ ಸ್ಥಿರವಾದದ ನಂತರ ಅವರೆಲ್ಲರ ವಾದಗಳು ಕೊಂಚ ಮಂಕಾಗತೊಡಗುತ್ತವೆ. ಅಂದಿನ ವಿಜ್ಞಾನ ವಲಯ ಕ್ರಮೇಣವಾಗಿ ಐನ್ಸ್ಟೀನ್ ನ್ನಿನ Static Universe ವಾದವನ್ನು ಒಪ್ಪಿಕೊಳ್ಳತೊಡಗಿತು. ಅದು ವರ್ಷ 1929. ಅಮೇರಿಕಾದ ಖಗೋಳಶಾಸ್ತ್ರಜ್ಞ ಎಡ್ವಿನ್ ಹಬಲ್ ವಿಶ್ವದ ರಚನೆಯ ಬಗ್ಗೆ ಐನ್ಸ್ಟೀನ್ ನ್ನಿನ ವಾದಕ್ಕೆ ವಿರುದ್ಧವಾಗಿರುವ ಸಿದ್ಧಾಂತವೊಂದನ್ನು ಮಂಡಿಸುತ್ತಾನೆ ಅಲ್ಲದೆ ಅದನ್ನೂ ಸಾಧಿಸಿಯೂ ತೋರುತ್ತಾನೆ. ಆತನ ಪ್ರಕಾರ ಗ್ಯಾಲಕ್ಸಿಗಳ (ತಾರಾಗಣ) ದೂರ ಅವುಗಳ ಸ್ಥಾನಪಲ್ಲಟದೊಟ್ಟಿಗೆ ನೇರ ಸಂಬಂಧವನ್ನು ಹೊಂದಿರುತ್ತವೆ ಎಂಬುದಾಗಿರುತ್ತದೆ. ಅರ್ಥಾತ್ ಪ್ರಸ್ತುತ ಕಾಣಸಿಗುವ ಗ್ಯಾಲಕ್ಸಿಗಳು ದೂರಸರಿಯುತ್ತಿರುವುದು ವಿಶ್ವವು ಹಿಗ್ಗುತ್ತಿದೆ ಎಂಬುದಾಗಿರುತ್ತದೆ. ಹಬಲ್ನ ಸಿದ್ದಾಂತ ನಿಜವಾದ ಸುದ್ದಿಯನ್ನು ಕೇಳಿದ ಕೂಡಲೇ ಐನ್ಸ್ಟೀನ್ ತನ್ನ Static Universe ಸಿದ್ದಾಂತವನ್ನು ಕೈಬಿಡುತ್ತಾನೆ ಅಲ್ಲದೇ ಮುಂದೊಂದು ದಿನ ಆತ ತನ್ನ ಜೀವನದಲ್ಲಿ ಜರುಗಿದ ಅತಿ ದೊಡ್ಡ ಪ್ರಮಾದಗಳಲ್ಲಿ Static Universe ಸಿದ್ಧಾಂತವೂ ಒಂದು ಎಂಬುದನ್ನು ಒಪ್ಪಿಕೊಳ್ಳುತ್ತಾನೆ. ಮತ್ತೊಮ್ಮೆ ವಿಜ್ಞಾನವೆಂಬುದು ನಿಂತ ನೀರಲ್ಲ ಎಂಬುದು ಸಾಬೀತಾಗುತ್ತದೆ. ಮತ್ತಷ್ಟು ಓದು 
ಅನಂತಕುಮಾರ್ ಹೇಳಿದ್ದರಲ್ಲೇನು ತಪ್ಪಿದೆ?
– ಜೆಬಿಆರ್ ರಂಗಸ್ವಾಮಿ
ಅನಂತ ಕುಮಾರ್ ಹೆಗಡೆಯವರ ಮಾತುಗಳನ್ನು ಕೇಳಿದೆ. ಯಾವ context ನಲ್ಲಿ ಯಾಕಾಗಿ ಆ ಮಾತುಗಳನ್ನಾಡಿದ್ದಾರೆ ? ಅದನ್ನೂ ಆಲಿಸಿದೆ. ಅವರು ಉದ್ದೇಶಿಸಿ ಹೇಳಿದ ಮಾತುಗಳಲ್ಲಿ ಅಪರಾಧವೇನಿದೆ ? ಅನ್ನಿಸಿತು. ಮತ್ತೊಮ್ಮೆ ಎಲ್ಲ ಛಾನಲ್ಗಳಲ್ಲಿ ಅವರು ಆಡಿದ ಮಾತುಗಳನ್ನು ಗ್ರಹಿಸಲು ಯತ್ನಿಸಿದೆ. ಕಾವ್ಯಾನಂದರ ( ಕುವೆಂಪು ಅಲ್ಲ ) ಮೊದಲು ನೀನು ಮಾನವನಾಗು ಎಂಬುದನ್ನು ಉಲ್ಲೇಖಿಸಿ ಪ್ರಾಸಂಗಿಕವಾಗಿ ಮಾತನಾಡಿದ್ದಾರೆಯೇ ಹೊರತು, ಆ ಮಾತುಗಳನ್ನು ಅವಹೇಳನ ಮಾಡಿದ್ದಾರೆ ಅನ್ನಿಸಲಿಲ್ಲ. ಕಾವ್ಯಾನಂದರನ್ನು ಟೀಕಿಸಲಿಲ್ಲ. ಬುದ್ದಿಜೀವಿಗಳು ಎಂದೊಡನೆ ‘ಪುಸ್ತಕ ಬರೆವ ಎಲ್ಲರೂ’ ಅಂದುಕೊಳ್ಳಬೇಕಿಲ್ಲ. ಆ ಹೆಸರಿನಲ್ಲಿ ವ್ಯಾಪಾರ ಮಾಡುವ ಗೋಸುಂಬೆಗಳು, ದುರ್ಲಾಭ ಪಡೆದುಕೊಳ್ಳುವ ವಂಚಕರು; ಫೋನು, ಫ್ಯಾನು, ಗೂಟದ ಕಾರಿನ ಸವಲತ್ತಿಗಾಗಿ ಹಾತೊರೆವ ಅಪ್ರಾಮಾಣಿಕರ ಗುಂಪನ್ನು ಉದ್ದೇಶಿಸಿ ಹೇಳಿದ ಮಾತುಗಳು ಎಂದು ಯಾರಿಗಾದರೂ ಗೊತ್ತಾಗುತ್ತದೆ. ಬುದ್ದಿಜೀವಿಗಳ ಸೋಗಿನಲ್ಲಿ ಪರಾನ್ನಪುಷ್ಟರಾಗಿರುವ ಗಂಜಿಗಿರಾಕಿಗಳನ್ನು ಎಲ್ಲ ಕಡೆಯೂ ನಾವು ದಿನವೂ ನೋಡುತ್ತಿಲ್ಲವೇ ? ಮತ್ತಷ್ಟು ಓದು 
ಕೊಳಕು ಪ್ಯಾಂಟಿನಲ್ಲಿದ್ದ ಹರಿದ ನೋಟು …
– ಸುಜಿತ್ ಕುಮಾರ್
ಅದೊಂದು ದೊಡ್ಡ ವೇದಿಕೆ. ವ್ಯಕ್ತಿಯೊಬ್ಬ ಕಿಕ್ಕಿರಿದು ನೆರೆದಿದ್ದ ಜನಸ್ತೋಮದ ಮುಂದೆ ಕಿವಿತಮಟೆಯೇ ಉದುರುವಂತೆ ಅರಚುತಿದ್ದ. ಏಳಿಗೆ ಎಂದರೆ ತಮ್ಮೆಲ್ಲ ಕೆಲಸಕಾರ್ಯಗಳನ್ನು ಬಿಟ್ಟು ಇಂತಹ ಬಿಟ್ಟಿ ಭಾಷಣವನ್ನು ಕೇಳುವುದು ಮಾತ್ರವೆಂದೇ ಅಂದುಕೊಂಡಿದ್ದ ಸಾವಿರಾರು ಜನ ಆತನ ಒಂದೊಂದು ಮಾತಿಗೂ ‘ಓ…’ ಎನ್ನುತ್ತಾ, ಶಿಳ್ಳೆಯೊಡೆಯುತ್ತ, ಬೊಬ್ಬೆಯಾಕುತ್ತಾ ಕುಣಿದಾಡುತಿದ್ದರು. ನೆರೆದಿದ್ದ ಜನಸ್ತೋಮದಲ್ಲಿ ಅಪ್ಪನೂ ಒಬ್ಬನಾಗಿರುವಾಗ ಮನೆಯಲ್ಲಿನ ಮಕ್ಕಳು ಪೋಲಿ ಬೀಳುವ ಮೊದಲ ದಿನಕ್ಕೆ ನಾಂದಿಯನ್ನು ಹಾಡಿದ್ದರು. ತನ್ನ ಗೂಡು ಪೆಟ್ಟಿಗೆಯ ಡಬ್ಬದಿಂದ ಬೀಡಿಯ ಕಟ್ಟು, ಬೆಂಕಿಯಪೊಟ್ಟಣವನ್ನು ಯಾವುದೇ ಭಾವಗಳಿಲ್ಲದೆ ಮಕ್ಕಳಿಗೆ ಕೊಟ್ಟ ಗೂಡಂಗಡಿಯ ತಾತ ಚಡ್ಡಿ ಹಾಕಿರುವ ಅವುಗಳಿಂದ ಪಡೆದ ಹರಿದ ಐವತ್ತು ರೂಪಾಯಿಗಳಿಗೆ ಚಿಲ್ಲರೆಯನ್ನು ಹಿಂದುರಿಗಿಸುವ ಮುನ್ನತಪ್ಪು ಲೆಕ್ಕವನ್ನೇನಾದರೂ ಹೇಳಿ ಒಂದೆರೆಡು ರೂಪಾಯಿ ಲಪಟಾಯಿಸುವುದರ ಬಗ್ಗೆ ಆಲೋಚಿಸುತ್ತಿದ್ದನೇ ವಿನಹ ಎಳೆಯ ವಯಸ್ಸಿಗೆ ಬೀಡಿಯ ಮೋಹಕ್ಕೆ ಬಿದ್ದಿರುವ ಆ ಕುಡಿಗಳಿಗೆ ಗದರಿಸುವ ಗುರುತರ ಕಾರ್ಯವನ್ನು ನಿಭಾಯಿಸಲಿಲ್ಲ. ಬೀಡಿಯ ನಂತರ ಕೊನೆಗೊಂದು ಸಿಗರೇಟಿಗೂ ಬೇಕಿದ್ದ ಹಣವಷ್ಟನ್ನೇ ಅಪ್ಪನ ಪ್ಯಾಂಟಿನ ಜೇಬಿನಿಂದ ಎಗರಿಸಿಕೊಂಡು ಬಂದಿದ್ದ ಮಕ್ಕಳು ಅರ್ವತ್ತು ವಯಸ್ಸಿನ ತಾತಪ್ಪನ ಕುತಂತ್ರವನ್ನು ಸಫಲವಾಗಲು ಬಿಡುತ್ತಾರೆಯೇ?! ಮತ್ತಷ್ಟು ಓದು 
ಸಂಘಟನೆಯನ್ನು ನಿಷೇಧಿಸಬಹುದು.ಆದರೆ ಮನಸ್ಥಿತಿಯನ್ನು ಏನು ಮಾಡುವುದು?
– ರಾಕೇಶ್ ಶೆಟ್ಟಿ
ಸಂಘಟನೆಯನ್ನು ನಿಷೇಧಿಸಬಹುದು.ಆದರೆ,ಮನಸ್ಥಿತಿಯನ್ನು ಏನು ಮಾಡುವುದು? ಇಂತಹದ್ದೊಂದು ಪ್ರಶ್ನೆಯನ್ನು ಫೇಸ್ಬುಕ್ಕಿನಲ್ಲಿ ಗೆಳೆಯ ಸಂದೀಪ್ ಕೇಳಿದ್ದರು.ಅವರ ಪ್ರಶ್ನೆಯಿದ್ದಿದ್ದು Ban PFI ಎಂಬ ಹೋರಾಟದ ಕುರಿತು. ವಾಜಪೇಯಿಯವರ ಕಾಲದಲ್ಲಿ ಸಿಮಿ ಸಂಘಟನೆಯನ್ನು ನಿಷೇಧಿಸಲಾಯಿತು. ಆಮೇಲೇನಾಯ್ತು? ರಕ್ತಬೀಜಾಸುರರಂತೆ ನಾನಾ ಹೆಸರು,ಸಂಘಟನೆಗಳನ್ನು ಮಾಡಿಕೊಂಡು ಇಸ್ಲಾಮೀಕರಣದ ತಮ್ಮ ಅಜೇಂಡಾವನ್ನು ಇವರು ಒಂದಲ್ಲ ಒಂದು ರೀತಿಯಲ್ಲಿ ಮುಂದುವರೆಸಿಕೊಂಡು ಬಂದರು.ಮುಂಬೈ ಸರಣಿ ಬಾಂಬ್ ಬ್ಲಾಸ್ಟ್ ನಿಂದ ಹಿಡಿದು ಇತ್ತೀಚಿನ ದಿನಗಳವರೆಗೂ ದೇಶದಲ್ಲಿ ನಡೆದ ಬಾಂಬ್ ಸ್ಪೋಟದ ಆರೋಪಿಗಳು ಒಂದೋ ನಿಷೇಧಿತ ಸಿಮಿಯ ಕಾರ್ಯಕರ್ತರಾಗಿದ್ದವರು ಅಥವಾ ಹೊಸತೊಂದು ಸಂಘಟನೆಯ ಬ್ಯಾನರಿನಡಿಯಲ್ಲಿ ಸಿಮಿಯ ಕಾರ್ಯವನ್ನೇ ಮುಂದುವರೆಸಿದ್ದವರು.ಅಂದರೆ ಒಂದು ವಿಷಯ ಸ್ಪಷ್ಟವಾಗಿದೆ. ಸಂಘಟನೆ ನಿಷೇಧವಾದರೂ, ಹೆಸರು ಬದಲಾದರೂ ಅವರ “ಉದ್ದೇಶ” ಬದಲಾಗಲಿಲ್. ಏಕೆ? ಈ ಪ್ರಶ್ನೆಗೆ ಉತ್ತರ ಡಾ.ಬಿ.ಆರ್ ಅಂಬೇಡ್ಕರ್ ಅವರ “Pakistan or Partition of India” ಪುಸ್ತಕದಲ್ಲಿ ಸಿಗುತ್ತದೆ. ಆ ಪುಸ್ತಕದಲ್ಲಿ ಅಂಬೇಡ್ಕರ್ ಅವರು ಭಾರತದ ವಿಭಜನೆ ಮತ್ತು ಪಾಕಿಸ್ತಾನದ ಬಗ್ಗೆ ಮಾತ್ರ ಮಾತನಾಡಿಲ್ಲ,ಅವೆರಡರ ಜೊತೆಗೆ ಮುಖ್ಯವಾಗಿ,ಇಸ್ಲಾಮ್ ಹಾಗೂ ಭಾರತೀಯ ಮುಸ್ಲಿಂರ ಮನಸ್ಥಿತಿಯ ಬಗ್ಗೆಯೂ ವಿವರವಾಗಿ ಬರೆದಿದ್ದಾರೆ.
ಇಂತಹ ಸಂಘಟನೆಗಳ ಬಹುಮುಖ್ಯ ಉದ್ದೇಶ,ಒಂದು ದೇಶವನ್ನು ದಾರ್-ಉಲ್-ಅರ್ಬ್ ನಿಂದ ದಾರ್-ಉಲ್-ಇಸ್ಲಾಮ್ ಮಾಡುವುದೇ ಆಗಿರುತ್ತದೆ. ಏನಿದು ದಾರ್-ಉಲ್-ಅರ್ಬ್/ದಾರ್-ಉಲ್-ಇಸ್ಲಾಮ್? ಅಂಬೇಡ್ಕರ್ ಅವರ ಮಾತನ್ನೇ ಕೋಟ್ ಮಾಡುತ್ತೇನೆ. “… According to Muslim Canon Law the world is divided into two camps, Dar-ul-lslam (abode of Islam), and Dar-ul-Harb (abode of war). A country is Dar-ul-lslam when it is ruled by Muslims. A country is Dar-ul-Harb when Muslims only reside in it but are not rulers of it. That being the Canon Law of the Muslims, India cannot be the common motherland of the Hindus and the Musalmans. It can be the land of the Musalmans—but it cannot be the land of the ‘Hindus and the Musalmans living as equals…” ಅಂದರೆ, ಯಾವ ದೇಶವು ಸಂಪೂರ್ಣವಾಗಿ ಇಸ್ಲಾಮ್ ಅನ್ನು ಒಪ್ಪಿಕೊಂಡು ಮುಸ್ಲಿಮರಿಂದ ಆಳಲ್ಪಡುತ್ತಿದೆಯೋ ಅದು ದಾರ್-ಉಲ್-ಇಸ್ಲಾಮ್ ಎಂದು ಕರೆಸಿಕೊಳ್ಳುತ್ತದೆ. ಯಾವ ದೇಶವು ಮುಸ್ಲಿಮೇತರರಿಂದ ಆಳಲ್ಪಡುತ್ತಿದೆಯೋ ಅದು ದಾರ್-ಉಲ್-ಅರ್ಬ್ ಆಗಿರುತ್ತದೆ.






