ಮಂಕು ತಿಮ್ಮನ ಕಗ್ಗ – ರಸಧಾರೆ (೧)
(ಡಿ.ವಿ ಗುಂಡಪ್ಪನವರ ಕಗ್ಗದ ರಸಧಾರೆಯನ್ನ ಶ್ರೀ ರವಿ ತಿರುಮಲೈ ಅವರು ನಿರಂತರವಾಗಿ ಹರಿಸಲಿದ್ದಾರೆ ನಿಲುಮೆಯಲ್ಲಿ)
– ರವಿ ತಿರುಮಲೈ
ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ
ದೇವ ಸರ್ವೇಶ ಪರಬೊಮ್ಮನೆಂದು ಜನಂ //
ಆವುದನು ಕಾಣದೊಡಮಳ್ತಿಯಿಂ ನಂಬಿಹುದೋ
ಆ ವಿಚಿತ್ರಕೆ ನಮಿಸೊ – ಮಂಕು ತಿಮ್ಮ //
ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ ಆ ವಿಚಿತ್ರಕ್ಕೆ ನಮಿಸು ಎಂದು ಹೇಳುತ್ತಾರೆ ಶ್ರೀ ಗುಂಡಪ್ಪನವರು.
ನಾವಿರುವ ಭೂಮಿಯಂತಹ 9 .80 ಲಕ್ಷ ಭೂಮಿಗಳನ್ನು ನಮ್ಮ ಸೌರವ್ಯೂಹದ ಸೂರ್ಯನೊಳಕ್ಕೆ ಹಾಕಿಬಿಡಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ. ನಮ್ಮ ಸೌರಮಂಡಲವೂ ಸೇರಿದಂತೆ ಲಕ್ಷಾಂತರ ಸೌರಮಂಡಲಗಳಿರುವ ನಮ್ಮ ಕ್ಷೀರಪಥ, ನಮ್ಮ ಕ್ಷೀರಪಥವೂ ಸೇರಿದಂತೆ ಲಕ್ಷಾಂತರ ಕ್ಷೀರಪಥಗಳಿರುವ ಆಕಾಶಗಂಗೆ, ನಮ್ಮ ಆಕಾಶಗಂಗೆಯೂ ಸೇರಿದಂತೆ ಲಕ್ಷಾಂತರ ಆಕಾಶಗಂಗೆಗಳಿರುವ ಈ ವಿಶ್ವ. ಇಡೀ ವಿಶ್ವವನ್ನು ಒಂದು ಸೂತ್ರದಲ್ಲಿ ನಡೆಸುತ್ತಿರುವ ಒಂದು ಶಕ್ತಿ. ಅದನ್ನೇ ಬೇರೆ ಬೇರೆಯವರು ಬೇರೆ ಹೆಸರುಗಳಿಂದ ಕರೆಯುತ್ತಾರೆಂದು ಈ ಕಗ್ಗದ ಆಂತರ್ಯ ಮತ್ತು ವಿಶ್ವದ ಒಂದು ಅನುವಷ್ಟೂ ಅಲ್ಲದ ನಾವು ಕಾಣದಿದ್ದರೂ ಆ ಶಕ್ತಿಯ ಅಧೀನದಲ್ಲಿರುವುದರಿಂದ, ಅದಕ್ಕೆ ಭಕ್ತಿಯಿಂದ ಪ್ರೀತಿಯಿಂದ ನಮಿಸಬೇಕು ಎಂದು ಒಂದು ಆದೇಶ.
ಕನ್ನಡ ವಿಕಿಪೀಡಿಯ: ಅನುವಾದಗೊಂಡ ಲೇಖನಗಳ ಸಂವರ್ಧನಾ ಯೋಜನೆ
– ಓಂ ಶಿವಪ್ರಕಾಶ್
ಆತ್ಮೀಯ ಕನ್ನಡ ವಿಕಿಪೀಡಿಯ ಗೆಳೆಯರೆ,ಹಳೆ ತಿಕ್ಕಲನ್ನು ಹೇಳುವ ಹೊಸಪದಗಳು…
ಸಾತ್ವಿಕ್ ಎನ್.ವಿ
ನನಗಿನ್ನೂ ಸರಿಯಾಗಿ ನೆನಪಿದೆ. ಕಾಲೇಜು ಮುಗಿಸಿ ಮನೆಗೆ ಬರುವಾಗ ಬಸ್ಸಿನಿಂದ ಇಳಿದು ಬರುವಾಗ ಫುಲ್ ಟೈಟ್ ಆದವರ ತರಹ ಗಾಳಿಯಲ್ಲಿ ತೇಲುತ್ತಿದ್ದ ದೃಶ್ಯ. ಬೆಳಿಗ್ಗೆ ೭.೩೦ಕ್ಕೆ ಮನೆ ಬಿಟ್ಟರೆ ಬರೋಬ್ಬರಿ ೪೦ ಕಿಲೋ ಮೀಟರ್ ಪ್ರಯಾಣ. ಮತ್ತೆ ಬಸ್ ಸ್ಟ್ಯಾಂಡಿನ ಸುಮಾರು ಒಂದೂವರೆ ಕಿಲೋ ಮೀಟರ್ ನಡೆದು ಕ್ಲಾಸ್ ಸೇರುವಾಗ ದಣಿವಾರಿಸಿಕೊಳ್ಳಲು ಒಂದತ್ತು ನಿಮಿಷವೂ ಉಳಿಯುತ್ತಿರಲ್ಲಿಲ್ಲ . ಬೆಳಿಗ್ಗೆಯೇ ಬೇಗ ಗಬಗಬನೇ ತಿಂದು ಬಂದ ಎರಡು ಇಡ್ಲಿ ಯಾವಾಗಲೋ ಕರಗಿ, ಹೊಟ್ಟೆಯ ಯಾವುದೇ ಮೂಲೆಯಲ್ಲಿ ಆಸ್ಯಿಡ್ ಸುರುವಿದ ಅನುಭವ. ಒಂದು ಕಡೆ ಸೆಖೆಯಿಂದ ಬೆವರು ಇಳಿಯುತ್ತಿದ್ದರೆ ಇನ್ನೊಂದು ಗಣಿತಶಾಸ್ತ್ರ ಹೇಳಿಕೊಡುವ ಮೇಡಂ ಟ್ರಿಗ್ನೋಮೆಟ್ರಿ ಕ್ಲಾಸ್ ನಲ್ಲಿ ‘ಟ್ಯಾನ್+ಕಾಸ್ ತೀಟ ಏನಾಗುತ್ತೆ’ ಅಂತ ಕೇಳಿ ಬೆಪ್ಪರಾಗಿಸುತ್ತಿದ್ದರು. ಇಡೀ ರಾತ್ರಿ ಬಾಯಿ ಪಾಠ ಮಾಡಿದ್ದು ವೇಸ್ಟ್ ಆಗುತ್ತಿತ್ತು. ನಾನು ಮೊದಲ ಬಾರಿಗೆ ಬ್ಯ ಬ್ಯ ಬ್ಯ ಅಂದದ್ದು ಕಾಲೇಜಿನ ದಿನಗಳಲ್ಲಿಯೇ ಇರಬೇಕು. ಮತ್ತಷ್ಟು ಓದು 
ಗುಡ್ಡದ ಭೂತ: ಪ್ರಯೋಗಶೀಲತೆಯೋ? ಅನಿವಾರ್ಯತೆಯೋ?
-ಕಾಲಂ ೯
ಜನಶ್ರೀ ಸುದ್ದಿವಾಹಿನಿ 90ರ ದಶಕದ ದೂರದರ್ಶನದ ಜನಪ್ರಿಯ ಧಾರಾವಾಹಿಯ ಮರುಪ್ರಸಾರ ಆರಂಭಿಸಿದೆ. ತಾಂತ್ರಿಕತೆ, ಅಭಿನಯ, ನಿರೂಪಣೆಯ ದೃಷ್ತಿಯಿಂದ ಅಸಾಧಾರಣವೆನಿಸಿದ ಧಾರಾವಾಹಿಗೆ ಮತ್ತೆ ಮನ್ನಣೆ ಸಿಕ್ಕಿದ್ದು ಸ್ವಾಗತಾರ್ಹವೇ. ಈಗ ೪೦ರ ಗಡಿಯಲ್ಲಿರುವ ಧಾರಾವಾಹಿ ನಿರ್ದೇಶಕ ಸದಾನಂದ ಸುವರ್ಣರಿಗೆ ಮತ್ತವರ ತಂಡಕ್ಕೆ ಈ ಮನ್ನಣೆ ಖುಷಿ ತಂದಿರಬೇಕು.
ಆದರೆ ಸುದ್ದಿ ವಾಹಿನಿಯೊಂದು ಧಾರಾವಾಹಿಯ ಪ್ರಸಾರಾಕ್ಕೆ ಅದೂ ಮರು ಪ್ರಸಾರಕ್ಕೆ ಹೊರಟಿರುವುದು ಪ್ರಯೋಗಶೀಲತೆಯೇ ಅಥವಾ ಅದರಾಚೆಯ ಅನಿವಾರ್ಯತೆಗಳೂ ಕೆಲಸ ಮಾಡುತ್ತಿದೆಯೇ?
‘ಸುದ್ದಿ’ಯ ಸೋಂಕಿಲ್ಲದ ಜ್ಯೋತಿಷ್ಯ, ಸೆಕ್ಸು, ಕ್ರೈಮು, ಸಿನೆಮಾ, ಕ್ರಿಕೆಟ್ಟು, ಹಾಸ್ಯಗಳ ‘ಶೋ’ಗೆ ಹತ್ತಿರ ಹತ್ತಿರ ಶೇ 50ರಷ್ಟು ಸಮಯ ವಿನಿಯೋಗಿಸುವ ಸುದ್ದಿ ವಾಹಿನಿಗಳೇ ನಮಗಿಂದು ಕಾಣುತ್ತಿವೆ. ಟಿವಿ9 ಹಾಕಿಕೊಟ್ಟ ಮಾದರಿಯಿಂದ ಹೊರ ಬರಲಾಗದ ಎಲ್ಲ ವಾಹಿನಿಗಳು ಅದೇ ಚರ್ವಿತಗಳಲ್ಲೇ ಸುತ್ತುತ್ತಿವೆ.
ಕರ್ನಾಟಕದಂತಹ ಸೀಮಿತ ಪರಿಧಿಯಲ್ಲಿ ದಿನವಿಡೀ ವಿದ್ಯಮಾನಗಳು ಘಟಿಸುತ್ತಲೇ ಇರಬೇಕೆಂಬುದು ಅಸಾಧ್ಯದ ಮಾತು. ಈ ಕೊರತೆ ದೇಶ ವ್ಯಾಪ್ತಿಯ ರಾಷ್ಟ್ರೀಯ ಚಾನೆಲ್ಗಳನ್ನೂ ಕಾಡುತ್ತಿರುತ್ತದೆ. ಹೀಗಿರುವಾಗ ನಮ್ಮ ಸುದ್ದಿವಾಹಿನಿಗಳಿಗೆ ದಿನವಿಡೀ ಉಣಬಡಿಸಲು ಸುದ್ದಿ ಖಾದ್ಯಗಳಾದರೂ ಏನು ಉಳಿದಿರುತ್ತದೆ? ಈ ಅನಿವಾರ್ಯತೆಯ ಹೊಸ ಫಸಲೆಂಬಂತೆ ಗುಡ್ಡದ ಭೂತ ಮತ್ತೆ ಅವತರಿಸಿದೆ.
ಧಾರಾವಾಹಿ ರಂಗದ ಸಾಮ್ರಾಟರೆಂದೇ ಖ್ಯಾತರಾಗಿರುವ ಟಿಎನ್ ಸೀತಾರಾಂ ಬಿಜೆಪಿ ಸರ್ಕಾರದ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸುತ್ತಾ, ‘ಈ ಬಿಜೆಪಿ ಸರ್ಕಾರ ಬಂದ ಮೇಲೆ ನಮ್ಮ ಸೀರಿಯಲ್ ನೋಡೋರೇ ಇಲ್ಲದಂತಾಗಿದೆ. ಜನ ನ್ಯೂಸನ್ನೇ ಸೀರಿಯಲ್ ಅಂತ ಅಂದುಕೊಂಡಿದ್ದಾರೆ.’ ಅಂತ ಹೇಳಿಕೊಂಡಿದ್ದರು. ಮತ್ತಷ್ಟು ಓದು 
ಒಂದು ಸುಂದರ ನಗುವಿಗೆ…ಇಷ್ಟು ಸಾಕಲ್ಲವೇ.. ???
ನಮ್ಮ ಮೇಟ್ರೋದಲ್ಲಿ ಇನ್ನೂ ಸಿಗದ ಕನ್ನಡ
-ರವಿ ಸಾವ್ಕರ್
ವಿಶ್ವ ಗ್ರಾಹಕದ ದಿನದ ವಿಶೇಷ ಲೇಖನ [15ನೇ ಮಾರ್ಚ್]
ಕೆಲ ತಿಂಗಳ ಹಿಂದೆ “ನಮ್ಮ ಮೆಟ್ರೋ” ವಿನ ಅಧಿಕಾರಿಗಳು ದೈನಂದಿನ ಎಲ್ಲ ವ್ಯವಹಾರಗಳಲ್ಲಿ ಕನ್ನಡವನ್ನು ಬಳಕೆ ಮಾಡುವುದಾಗಿ ಹೇಳಿದ್ದರು. ಹಾಗೆಯೇ ಹೊರಗುತ್ತಿಗೆ ಕೊಟ್ಟಿರುವ ಸೆಕ್ಯೂರಿಟಿ ಗಾರ್ಡ್ ಎಜೆನ್ಸಿ ನವರಿಗೆ ಕನ್ನಡ ಓದಲು ಬರೆಯಲು ಬರುವವರನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ನಿಯಮ ಹಾಕಿದೀವಿ ಅಂತ ಸಹ ಹೇಳಿದ್ದರು. ಮೆಟ್ರೋ ಅಧಿಕಾರಿಗಳ ಹೇಳಿಕೆಗಳ ತುಣುಕು ಹೀಗಿದೆ. ಇವರು ಎಷ್ಟರ ಮಟ್ಟಿಗೆ ತಮ್ಮ ನಿಯಮಗಳನ್ನು ತಾವೇ ಪಾಲಿಸುತ್ತಾ ಇದಾರೆ ಅಂತ ನೋಡೋಣ.
ಕನ್ನಡ ಕಟ್ಟುವಿಕೆಯ ಹತ್ತು ಹಲವು ವಿಷಯಗಳು
-ಡಾ. ಪಂಡಿತಾರಾಧ್ಯ
(ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಅಖಿಲ ಭಾರತ ೭೮ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಕನ್ನಡದ ಹಲವು ವಿಚಾರಗಳನ್ನು ತಿಳಿಸಲು ಮೈಸೂರು ವಿವಿಯ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾಗಿರುವ ಡಾ.ಪಂಡಿತಾರಾಧ್ಯ ಅವರು ಕರಪತ್ರವೊಂದನ್ನು ಸಿದ್ಧಪಡಿಸಿದ್ದರು. ಆ ಕರಪತ್ರದ ಪೂರ್ಣಪಾಠವಿಲ್ಲಿದೆ.)
೩ನೇ ಶತಮಾನದ ಅಶೋಕನ ಶಾಸನಗಳಲ್ಲಿ ಬ್ರಾಹ್ಮೀ ಲಿಪಿಯಲ್ಲಿರುವ ಪ್ರಾಕೃತ ಭಾಷೆಯ ಅಂಕಿಗಳು ಮೊದಲಬಾರಿಗೆ ಕಾಣಿಸುತ್ತವೆ. ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿಯ ಅಶೋಕನ ಶಾಸನದಲ್ಲಿ ೨೫೬ ಎನ್ನುವುದನ್ನು ೨೦೦, ೫೦, ೬ ಎಂಬ ಮೂರು ಪ್ರತ್ಯೇಕ ಅಂಕಿಗಳಲ್ಲಿ ಬರೆಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗುಡ್ನಾಪುರದಲ್ಲಿ ದೊರೆತಿರುವ ಕ್ರಿಶ.೬ನೇ ಶತಮಾದ ಕದಂಬ ರವಿವರ್ಮನ ಸಂಸ್ಕೃತ ಶಾಸನದಲ್ಲಿ ಎಲ್ಲ ಒಂಬತ್ತು ಅಂಕಿಗಳಿವೆ.
ಬ್ರಾಹ್ಮೀ ಲಿಪಿಯ ದಕ್ಷಿಣದ ಕವಲಿನಿಂದ ಬೆಳೆದುಬಂದಿರುವ ಕನ್ನಡ ಲಿಪಿಯಲ್ಲಿ ಕನ್ನಡ ಅಂಕಿಗಳೂ ಇವೆ. ಕ್ರಿ.ಶ. ೮ನೆಯ ಶತಮಾನದಿಂದ ಶಾಸನಗಳಲ್ಲಿ ಕನ್ನಡ ಅಂಕಿಗಳು ಕಾಣಿಸುತ್ತವೆ. ದಕ್ಷಿಣ ಭಾರತದಲ್ಲಿ ಕನ್ನಡ ಮಾತ್ರ ತನ್ನ ಅಂಕಿಗಳನ್ನು ಉಳಿಸಿಕೊಂಡಿರುವುದು ಕನ್ನಡಿಗರ ಹೆಮ್ಮೆ. ಬ್ರಿಟಿಷರು, ಹೈದರಾಬಾದಿನ ನಿಜಾಮರು ತಮ್ಮ ನೋಟುಗಳಲ್ಲಿ ಕನ್ನಡ ಅಂಕಿಗಳನ್ನು ಬಳಸಿದ್ದರು. ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರ(೧೮೪೨)ವನ್ನು ಆರಂಭಿಸಿದ ಜರ್ಮನ್ ಪಾದ್ರಿಗಳು ಕನ್ನಡ ಅಂಕಿಗಳನ್ನೇ ಬಳಸಿದ್ದಾರೆ.
ಜಗತ್ತಿನಾದ್ಯಂತ ಸಂಚಲನ ಸೃಷ್ಟಿಸಿದ ಅನಾನಿಮಸ್ ಹ್ಯಾಕರ್ ಗಳು ಭಾರತದಲ್ಲಿ ವಿಫಲರಾಗಿದ್ದೇಕೆ?
– ಆದೇಶ್ ಕುಮಾರ್
ಹೌದು ನನಗೆ ಇನ್ನೂ ನೆನೆಪಿದೆ. ಅದು ಅಣ್ಣಾ ಹಜಾರೆಯವರ ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುತಿದ್ದ ಕಾಲ. ಆಗ ತಾನೆ ಕೆಲವೊಂದು ದೇಶಗಳಲ್ಲಿ ಹ್ಯಾಕರ್ ಗಳು ಅನಾನಿಮಸ್ (ಅಜ್ಞಾತ) ಎಂಬ ಗುಂಪೊಂದನ್ನು ಕಟ್ಟಿಕೊಂಡು ಹಲವು ದೇಶಗಳ ಸರ್ಕಾರಿ ವೆಬ್ಸೈಟ್ ಗಳಿಗೆ ಲಗ್ಗೆ ಹಾಕಿ ಭ್ರಷ್ಟಾಚಾರವನ್ನು ಕೊನೆಗಾಣಿಸಿ ಎಂಬ ಪೋಸ್ಟ್ ಗಳನ್ನು ಹಾಕುತ್ತಿದ್ದರು.
ಇತ್ತ ನಮ್ಮ ದೇಶದಲ್ಲೂ ಕೂಡ ಭ್ರಷ್ಟಾಚಾರದ ಹೋರಾಟ ತಾರಕಕ್ಕೇರುತ್ತಿದುದ್ದನ್ನು ಕಂಡು ಅದಕ್ಕೆ ಜೊತೆ ನೀಡಲು ಆ ಗುಂಪು ಭಾರತದಲ್ಲೂ ಉದಯಿಸಿತು. ಮೊದಲಿಗೆ ಅದು ತನ್ನ ಕಾರ್ಯಚರಣೆಯನ್ನು ನಮ್ಮ ದೇಶದ ಒಂದು ಸರ್ಕಾರಿ ವೆಬ್ಸೈಟ್ ಅನ್ನು ಹ್ಯಾಕ್ ಮಾಡುವುದರೊಂದಿಗೆ ಪ್ರಾರಂಬಿಸಿತು. ಅದು ಸಾಮಾನ್ಯ ಸರ್ಕಾರಿ ವೆಬ್ಸೈಟ್ ಗಳನ್ನು ಮಾತ್ರ ಹ್ಯಾಕ್ ಮಾಡಿದ್ದರೆ ಅದು ಇನ್ನೂ ಇಲ್ಲೇ ಇರುತಿತ್ತೇನೊ. ಆದರೆ ಅದು ಭಾರತದ ಯಾವೊಬ್ಬ ಪ್ರಜೆಯು ಇಷ್ಟಪಡದ ಕೆಲಸಕ್ಕೆ ಕೈಹಾಕಿತು. ಅಂದರೆ ನಮ್ಮೆಲ್ಲರ ಹೆಮ್ಮೆಯ ಭಾರತ ಸೇನೆಯ ವೆಬ್ಸೈಟ್ ಅನ್ನು ಹ್ಯಾಕ್ ಮಾಡಿತು.(ಅದು ಹ್ಯಾಕ್ ಮಾಡಿತೊ ಅಥವಾ ವೆಬ್ಸೈಟ್ ಅನ್ನು ಡೌನ್ ಮಾಡಿತೊ ಇದುವರೆಗೂ ತಿಳಿದಿಲ್ಲ).
ಇದನ್ನು ಯಾವೊಬ್ಬ ಭಾರತೀಯನು ಸಹಿಸಿಕೊಳ್ಳುವ ಸ್ಥಿತಿಯಲ್ಲಿರಲಿಲ್ಲ. ಅನಾನಿಮಸ್ ಗುಂಪು ನಡೆಸುತಿದ್ದ ಫೇಸ್ ಬುಕ್ ಮತ್ತು ಟ್ವಿಟ್ಟರ್ ಗಳಲ್ಲಿ ಅದರ ವಿರುದ್ಡ ಟೀಕೆಗಳ ಸುರಿಮಳೆಯಾಯಿತು. ಕೆಲವೊಂದು ಕಾಮೆಂಟುಗಳು ಮತ್ತು ಟ್ವೇಟುಗಳು ಹೀಗಿದ್ದವು:
ಮತ್ತಷ್ಟು ಓದು 
ಏಕೆ ಹೀಗೆ ನಮ್ಮ ನಡುವೆ ಹಮ್ಮು ಬೆಳೆದಿದೆ ?
ಸ್ವಲ್ಪ ಯೋಚಿಸಬೇಕಾಸದ ಸಾಮಾನ್ಯ ಹಾಗೂ ಉತ್ತಮ ಪ್ರಶ್ನೆ! ನಾವು ಬಡಮರ್ಜಿಯಲ್ಲಿದ್ದಾಗ, ನಮ್ಮ ಕುದುರೆ ಸೋತಾಗ, ನಾವು ಪರೀಕ್ಷೆಗಳಲ್ಲಿ ಉತ್ತೀರ್ಣರಾಗದಾಗ, ನಾವು ಚುನಾವಣೆಗಳಲ್ಲಿ ಸೋತಾಗ, ನಮಗೆ ಉದ್ಯೋಗ ಸಿಗದಾಗ, ಸಿಕ್ಕ ಉದ್ಯೋಗ ಕಳೆದುಕೊಂಡಾಗ, ಯಾವುದೋ ರೀತಿಯಲ್ಲಿ ಶಾರೀರಿಕ ಅಸೌಖ್ಯವುಂಟಾದಾಗ, ಅಸಹಾಯ ಸ್ಥಿತಿ ಬಂದೊದಗಿದಾಗ, ಹೊರಲಾರದ ಸಂಸಾರದ ಭಾರ ಜಾಸ್ತಿಯಾದಾಗ, ಶಾರೀರಿಕ/ಮಾನಸಿಕ ವಿಕಲ ಮಕ್ಕಳು ಅಕಸ್ಮಾತ್ ಜನಿಸಿಬಿಟ್ಟಾಗ….ಹೀಗೇ ಹಲವಾರು ಸಮಯಗಳಲ್ಲಿ ನಾವು ಎಲ್ಲರೊಳಗೊಂದು ಎಂಬ ರೀತಿ ಇದ್ದುಬಿಡುತ್ತೇವೆ.
ನಾನು ನೋಡುತ್ತಲೇ ಬಂದಿದ್ದೇನೆ. ಊರಲ್ಲಿ ಕನ್ನಡ ಶಾಲೆಯ ಒಬ್ಬ ಬಡ ಮಾಸ್ತರರಿದ್ದರು. ಒಬ್ಬರ ದುಡಿಮೆ, ಅಂದಿನಕಾಲಕ್ಕೆ ಸಂಬಳವೂ ಅಷ್ಟೆಲ್ಲಾ ಇರಲಿಲ್ಲ. ನಾಲ್ಕು ಮಕ್ಕಳು ಇರುವ ಆರುಮಂದಿಯ ಕುಟುಂಬ. ಮಾಸ್ತರರ ಅಮ್ಮನ ಮುದುಕಿಯೊಬ್ಬಳೂ ಸೇರಿದಂತೇ ಲೆಕ್ಕಹಾಕಿದರೆ ಏಳುಮಂದಿ. ಎಲ್ಲಾ ನಡೆಯಬೇಕಲ್ಲ? ಅಗೆಲ್ಲಾ ಊರ ಜನರೊಟ್ಟಿಗೆ ಸಾದಾ ಸೀದಾ ಇದ್ದ ಮಾಸ್ತರರು ಎಲ್ಲರೊಂದಿಗೂ ಬೆರೆತು ಜನಪ್ರಿಯರಾಗಿದ್ದರು. ಮಾಸ್ತರಿಗೆ ವರ್ಗವಾಯ್ತು, ಬೇರೇ ಊರಿಗೆ ತೆರಳಿದರು, ಮಕ್ಕಳು ಬೆಳೆದವು. ಈಗ ಮಾಸ್ತರರ ಮಕ್ಕಳು ಎಮ್.ಎನ್.ಸಿ ಕಂಪನಿಯಲ್ಲಿ ಕೆಲಸಮಾಡುತ್ತಾರೆ, ಮಾಸ್ತರರಿಗೆ ನಿವೃತ್ತಿಯಾದರೂ ಆಗ ಸಿಕ್ಕ ಹಣದಲ್ಲಿ ಮನೆ ಕಟ್ಟಿದ್ದಾರೆ, ಮಕ್ಕಳು ಅಪ್ಪನಿಗೆ ಕಾರು ಕೊಡಿಸಿದ್ದಾರೆ! ಅಂತೂ ಮಾಸ್ತರರು ಈಗ ಬಡತನ ಎಂಬ ಮಟ್ಟದಲ್ಲಿಲ್ಲ. ಅದಕ್ಕೆ ತಕ್ಕಹಾಗೇ ಮಾಸ್ತರರು ಯಾರೊಡನೆಯೂ ಬೆರೆಯುವುದೂ ಇಲ್ಲ; ತಮ್ಮ ಸರ್ಕಲ್ಲೇ ಬೇರೆ ಎನ್ನುವ ತಂತ್ರಾಂಶ ತಂತ್ರಂಜ್ಞರಂತೇ ಮಾಸ್ತರರಿಗೆ! ’ಅಲ್ಪನಿಗೆ ಐಶ್ವರ್ಯ ಬಂದರೆ ತಿಂಗಳಬೆಳಕಲ್ಲೂ ಕೊಡೆ ಹಿಡಿದನಂತೆ’ ಎಂಬ ಗಾದೆ ಇದೆಯಲ್ಲಾ ಅದೇ ರೀತಿ ಮಾಸ್ತರು ೨ ಫರ್ಲಾಂಗು ದೂರ ಹೋಗುವುದಾದರೂ ಕಾರು ಬೇಕೇ ಬೇಕು. ಬೆಳೆದುನಿಂತ ಮಗಳನ್ನು ಸಾಮಾನ್ಯದ ಯಾರಿಗೂ ಮದುವೆಮಾಡಲು ಸಿದ್ಧರಿಲ್ಲ. ಅಮೇರಿಕಾದಲ್ಲಿರುವ ವ್ಯಕ್ತಿಗಾಗಿ ಹುಡುಕುತ್ತಿದ್ದಾರೆ.
ಯಹ್ ದಿಲ್ಲಿ ಹೇ ದಿಲ್ವಾಲೊಂಕಿ” ಎಂಬುದನ್ನು ಆತ ನನಗೆ ತೋರಿಸಿಕೊಟ್ಟಿದ್ದ
ಸುಪ್ರೀಂ ಕೋರ್ಟ್ನ ಮುಂದೆ ಇಂದು ನಮ್ಮ ರಾಜ್ಯಕ್ಕೆ ಸಂಬಂಧಪಟ್ಟ ಯಾವುದೇ ಪ್ರಕರಣಗಳು ಇಲ್ಲ ಮತ್ತು ಎಂದು ಖಾತ್ರಿ ಮಾಡಿಕೊಂಡ ಬಳಿಕ ಕಚೇರಿಗೆ ಆರಾಮವಾಗಿಯೇ ಹೊರಟಿದ್ದೆ. ಅಪಾರ್ಟ್ಮೆಂಟ್ನಿಂದ ಹೊರ ಬರುತ್ತಲೆ ರಿಕ್ಷಾವೊಂದು ಬಂತು. ಅದನ್ನು ಏರಿ ಆತ್ಮೀಯರಿಗೆ ಮೆಸೇಜ್ ಕಳಿಸುವ ನನ್ನ ನಿತ್ಯ ಪೂಜೆಯನ್ನು ಶುರು ಮಾಡಿಕೊಂಡೆ. ನಮ್ಮಲ್ಲಿಂದ ಕೌಶಂಬಿ ಮೆಟ್ರೋ ಸ್ಟೇಶನ್ಗೆ ೧೫ ನಿಮಿಷಗಳ ಪ್ರಯಾಣ (ಟ್ರಾಫಿಕ್ ಇಲ್ಲದೇ ಹೋದರೆ). ಮೆಟ್ರೋ ಸ್ಟೇಶನ್ನ ಬಳಿ ರಿಕ್ಷಾ ಇಳಿದು ಹಣ ಕೊಡೋಣ ಎಂದು ಕಿಸೆಗೆ ಕೈ ಹಾಕಿದರೆ ಪರ್ಸ್ ಇಲ್ಲ. ತಕ್ಷಣವೇ ಶಾಕ್ ಹೊಡೆದಂತೆ ಆಯಿತು. ಇದೀಗ ಕೆಲಸ ಕೆಟ್ಟಿತ್ತು ಅಂತ ಅಂದು ಕೊಂಡರು ವಿಚಲಿತನಾಗಲಿಲ್ಲ. ಪರ್ಸ್ ಮನೆಯಲ್ಲೆ ಬಿಟ್ಟಿದ್ದೇನಾ ಅಥವಾ ಪಿಕ್ ಪಾಕೆಟ್ ಅಯಿತಾ ಅಥವಾ ಎಲ್ಲದರೂ ಬಿತ್ತಾ ಎಂಬ ಗೊಂದಲ ತಲೆಯಲ್ಲಿ ಫ್ಯಾನ್ನಂತೆ ತಿರುಗುತ್ತಿತ್ತು. ಹಾಗಂತ ಮೊದಲ ಕಾರಣವನ್ನು ಈ ರಿಕ್ಷಾ ಡ್ರೈವರ್ ಜೊತೆ ಹೇಳುವ ಹಾಗಿಲ್ಲ. ಹೇಳಿದ್ದೆ ಆದರೆ ಅವನು ಯಾವ ಭಾಷೆ ಪ್ರಯೋಗ ಮಾಡುತ್ತಾನೆ ಅನ್ನುವುದು ತಕ್ಷಣವೆ ಫ್ಲಾಶ್ ಆಗಿ ಹೋಗಿತ್ತು. ಇನ್ನು ಯಾರಾದರೂ ಪಿಕ್ ಪಾಕೆಟ್ ಮಾಡಿದ್ದಾರೆ ಎಂದು ಸುಮ್ಮನೆ ಹೇಳುವುದು ಸರಿಯಲ್ಲ. ಏನು ಮಾಡುವುದು ಅಂದು ಕೊಂಡು ತಕ್ಷಣವೇ ಪರ್ಸ್ ಹುಡುಕುವ ರೀತಿ ಮಾಡಿದೆ. ಪರ್ಸ್ ಸಿಗಲೇ ಇಲ್ಲ. ನಾನು ಸಾಮಾನ್ಯವಾಗಿ ನನ್ನ ಪ್ಯಾಂಟ್ನ ಮುಂದಿನ ಕಿಸೆಯಲ್ಲಿ ನೂರಿನ್ನೂರು ರೂಪಾಯಿ ಇಟ್ಟುಕೊಂಡಿರುತ್ತೇನೆ. ಆದರೆ ಇಂದು ಆ ರೀತಿಯೂ ಮಾಡಿಲ್ಲ ಎಂಬುದನ್ನು ಕಿಸೆಗೆ ಕೈ ಹಾಕಿ ಖಾತ್ರಿ ಪಡಿಸಿಕೊಂಡೆ. ಸರಿ, ರಿಕ್ಷಾದವನಿಗೆ ನನ್ನ ಸ್ಥಿತಿ ಅರ್ಥವಾಯಿತು. ಅವನು ಏನೂ ಹೇಳಲಿಲ್ಲ. ನನ್ನ ಪುಣ್ಯ. ನನ್ನನ್ನು ಅಲ್ಲೇ ಬಿಟ್ಟು ಮುಂದೆ ಹೋದ. ನನ್ನ ಪ್ರಕಾರ ಅವನು ಮಾಡಿದ ದೊಡ್ಡ ಪುಣ್ಯದ ಕೆಲಸ ಅದೇ. ಮತ್ತಷ್ಟು ಓದು 








