ಕೋರೆಗಾಂವ್ ಸ್ವಾಭಿಮಾನದ ವಿಜಯವಾದರೆ ಕೊಡವರದ್ದೇನು?
“ಹೊಸ ಪೇಶ್ವೆಗಳ ವಿರುದ್ಧ ನಾವು ಹೋರಾಟ ಮಾಡಲು ನಮಗೆ ಯಾವ ಚುನಾವಣಾ ರಾಜಕೀಯದಿಂದಲೂ ಸಾಧ್ಯವಿಲ್ಲ. ಅದಕ್ಕೆ ಬೀದಿ ಕಾಳಗವನ್ನೇ ಮಾಡಬೇಕು. ದಲಿತರ ಮೇಲಿನ ದೌರ್ಜನ್ಯಕ್ಕೆ ಬೀದಿ ಕಾಳಗವೊಂದೇ ಪರಿಹಾರ ”ಹಿಂದೂ ಧರ್ಮಕ್ಕೆ ಹಿಂದು ಮುಂದಿಲ್ಲವೇ?
– ಪ್ರೊ. ಪ್ರೇಮಶೇಖರ
ಮೂಲ ಹೀಬ್ರೂ ಬೈಬಲ್ನಲ್ಲಿ ದೇವರ ಹೆಸರು “YHWH” ಎಂದಿದೆ. ಇದನ್ನು “ಯೆಹೋವ” ಎಂದು ಉಚ್ಚರಿಸುವುದು ಎಷ್ಟು ಸಮಂಜಸ ಎಂದು ನನಗೆ ತಿಳಿಯದು. ಅದರೂ ಆ ಉಚ್ಚಾರಣೆಯೇ ಸಾರ್ವತ್ರಿಕವಾಗಿರುವುದರಿಂದಾಗಿ ನಾನೂ ಅದನ್ನೇ ಬಳಸುತ್ತೇನೆ.
ಸಾಮಾನ್ಯವಾಗಿ ಎಲ್ಲ ಧರ್ಮಗಳೂ ಹೇಳುವುದು ದೇವರಿಗೆ ಮೂರು ಪ್ರಮುಖ ಲಕ್ಷಣಗಳು ಅಥವಾ ಸಾಮರ್ಥ್ಯಗಳಿವೆ ಎಂದು. ದೇವರು ಸರ್ವಶಕ್ತ, ಸರ್ವಾಂತರ್ಯಾಮಿ, ಸರ್ವಜ್ಞ. ಆದರೆ ಯೆಹೋವ ದೇವರು ಸರ್ವಶಕ್ತ ಹಾಗೂ ಸರ್ವಾಂತರ್ಯಾಮಿ ಆಗಿರಲಿಲ್ಲ. ಆತ ಸರ್ವಜ್ಞ ಆಗಿದ್ದನೇ ಅಲ್ಲವೇ ಎನ್ನುವುದಕ್ಕೆ ನಿಖರ ಪುರಾವೆಗಳು ದೊರೆಯುವುದಿಲ್ಲ. ಮತ್ತಷ್ಟು ಓದು 
ಹಿಂದೂ ಧರ್ಮಕ್ಕೆ ಹಿಂದು ಮುಂದಿಲ್ಲವೇ..?
– ಪ್ರೊ. ಪ್ರೇಮಶೇಖರ
ಹಿಂದೂ ಧರ್ಮದ ಅಪಹಾಸ್ಯ, ಅವಹೇಳನ ಇಂದು ನಿನ್ನೆಯದಲ್ಲ. ಅದು ಆರಂಭವಾಗಿ ಶತಮಾನಗಳೇ ಕಳೆದುಹೋಗಿವೆ. ತನ್ನ ಚಿಪ್ಪಿನೊಳಗೇ ಅಡಗಿಕೊಂಡು ಹೊರಪ್ರಪಂಚಕ್ಕೆ ಬಹುತೇಕ ಅಪರಿಚವಾಗಿಯೇ ಇದ್ದ ಹಿಂದೂ ಸಮಾಜ ತನ್ನ ಅಪರಿಚಿತತೆಯಿಂದಲೇ ಮೊದಲಿಗೆ ಅರಬ್ ಮುಸ್ಲಿಮ್ ಧಾಳಿಕಾರರಲ್ಲಿ, ನಂತರ ಕ್ರಿಶ್ಚಿಯನ್ ವರ್ತಕರು ಮತ್ತು ಸೈನಿಕರಲ್ಲಿ ಅಚ್ಚರಿಯನ್ನುಂಟುಮಾಡಿತು. ಅನೇಕ ದೇವದೇವಿಯರುಳ್ಳ, ಒಂದೇ ಒಂದು ನಿರ್ದಿಷ್ಟ ಧರ್ಮಗ್ರಂಥವಿಲ್ಲದ, ಶ್ರೇಣೀಕೃತ ಜಾತಿವ್ಯವಸ್ಥೆಯ ಅನಿಷ್ಟದಲ್ಲಿ ಒಡೆದು ಹಂಚಿಹೋಗಿದ್ದ ಹಿಂದೂ ಸಮಾಜ ಏಕದೈವವನ್ನು, ಏಕಧರ್ಮಗ್ರಂಥವನ್ನೂ ಹೊಂದಿದ್ದ, ಸಮಾನತೆಯ ತಳಹದಿಯ ಮೇಲೆ ರಚಿತವಾಗಿದ್ದ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಾಜಗಳಿಗೆ ಸಂಪೂರ್ಣ ವಿರುದ್ಧವಾಗಿದ್ದುದರಿಂದಾಗಿ ಆ ಧರ್ಮಗಳ ಅನುಯಾಯಿಗಳಲ್ಲಿ ಕುತೂಹಲ, ಅಪನಂಬಿಕೆಗಳನ್ನುಂಟುಮಾಡಿದ್ದು ಸಹಜವೇ ಆಗಿತ್ತು. ಆದರೆ ಈ ಭಾವನೆಗಳು ಕ್ಷಿಪ್ರಕಾಲದಲ್ಲೇ ಅವಹೇಳನದ ರೂಪ ಪಡೆದುಕೊಂಡದ್ದು ದುರ್ಭಾಗ್ಯದ ಬೆಳವಣಿಗೆ. ಅದಕ್ಕಿಂತಲೂ ದೌರ್ಭಾಗ್ಯದ ಸಂಗತಿಯೆಂದರೆ ಪರಧರ್ಮೀಯರು ಆರಂಭಿಸಿದ ಹಿಂದೂ ಅವಹೇಳನವನ್ನು ಈಗ ಸ್ವತಃ ಹಿಂದೂಗಳೇ ಮುಂದುವರೆಸಿಕೊಂಡುಹೋಗುತ್ತಿರುವುದು.ಅವರ ಈ ಕೃತ್ಯ ಆರೋಗ್ಯಕರವಾಗಿದ್ದು ಹಿಂದೂಧರ್ಮದ ಕೆಲವೊಂದು ಅನಾಚಾರಗಳನ್ನು ತೊಡೆದುಹಾಕುವಂತಿದ್ದರೆ ಅದು ಸ್ವಾಗತಾರ್ಹ ಹಾಗೂ ಶ್ಲಾಘನೀಯವಾಗಿರುತ್ತಿತ್ತು. ಆದರೆ ದುರದೃಷ್ಟವಶಾತ್ ವಾಸ್ತವ ಹಾಗಿಲ್ಲ. ಅವರ ಟೀಕೆಗಳಲ್ಲಿ ಎದ್ದುಕಾಣುತ್ತಿರುವುದು ಹೆಚ್ಚಿನಂಶ ಕಿಡಿಗೇಡಿತನ. ಅಂಥವರಿಗೆ ಚಿಂತಕರೆಂಬ ಹಣೆಪಟ್ಟಿ ದಕ್ಕುತ್ತಿರುವುದು ಸಮಕಾಲೀನ ಸಮಾಜದ ಒಂದು ವರ್ಗದ ಬೌದ್ಧಿಕ ದಾರಿದ್ರ್ಯದ ದ್ಯೋತಕ. ಇವರು ಈಗ ಎತ್ತುತ್ತಿರುವ ಪ್ರಶ್ನೆ ಹಿಂದೂಧರ್ಮದ ಅದಿಯ ಕುರಿತಾಗಿ, ಇತರ ಧರ್ಮಗಳಿಗಿರುವಂತೆ ಹಿಂದೂಧರ್ಮಕ್ಕೆ ಸ್ಥಾಪಕನೊಬ್ಬ ಇಲ್ಲ ಎನ್ನುವ ಕುರಿತಾಗಿ. ಮತ್ತಷ್ಟು ಓದು 
ಸಂವಿಧಾನ ತಿದ್ದಿದ್ದ ಇಂದಿರಾ ಅಂಬೇಡ್ಕರರಿಗಿಂತ ಶ್ರೇಷ್ಠರಾಗಿದ್ದರೇ?
ಪ್ರಶ್ನೆ ರಾಹುಲ್ ಪಟ್ಟಾಭಿಷೇಕದ್ದಲ್ಲ; ಕಾಂಗ್ರೆಸ್ಸಿನ ನಿಗೂಢ ನಡೆಗಳದ್ದು
– ರಾಕೇಶ್ ಶೆಟ್ಟಿ
ಸೋನಿಯಾ ಗಾಂಧಿಯವರನ್ನು ಅಧ್ಯಕ್ಷೆಯನ್ನಾಗಿಸುವಾಗ,ವಯೋವೃದ್ಧ ಕೇಸರಿಯವರನ್ನು ಹೇಗೆ ನಡೆಸಿಕೊಳ್ಳಲಾಗಿತ್ತು ಎನ್ನುವುದು ಈಗ ಇತಿಹಾಸ. ಆದರೆ ಕೇಸರಿಯವರ ರಾಜಕೀಯ ಅಧ್ಯಾಯ ತೀರಾ,ಇಂದಿರಾ ಗಾಂಧಿಯವರ ಕಾಲದಲ್ಲಿ ದಲಿತ ನಾಯಕ ಜಗಜೀವನ್ ರಾಮ್ ಅವರ ರಾಜಕೀಯ ಜೀವನವನ್ನು ಮುಗಿಸಿದಷ್ಟು ಕ್ರೂರವಾಗಿರಲಿಲ್ಲವೆಂಬುದೇ ಸಮಾಧಾನ!
ದೇವೇಗೌಡರ ನೇತೃತ್ವದ ಸರ್ಕಾರವನ್ನು ವಿನಾಕಾರಣ ಬೀಳಿಸಿದ್ದ ಕಾಂಗ್ರೆಸ್ಸಿಗೆ ಮುಂದಿನ ಚುನಾವಣೆ ಗೆಲ್ಲಲು ನಾಯಕರೇ ಇರಲಿಲ್ಲವೆಂಬ ನೆಪವೊಡ್ಡಿ ಸೋನಿಯಾ ಅವರನ್ನು ಮುನ್ನೆಲೆಗೆ ತರಲಾಯಿತು. ರಾಜೀವ್ ಗಾಂಧಿಯವರ ಕೊಲೆಯ ನಂತರ ದೇಶವನ್ನು,ಪಕ್ಷವನ್ನು ಸಮರ್ಥವಾಗಿ ಮುಂದುವರೆಸಿದ್ದ ಪಿವಿ ನರಸಿಂಹರಾವ್ ಕಾಂಗ್ರೆಸ್ಸಿನಲ್ಲಿ ಯಾರಿಗೂ ಆಗ ಬೇಡವಾಗಿದ್ದರು. ಕಾರಣ ಸ್ಪಷ್ಟ, ನೆಹರೂ ಕುಟುಂಬದ ಸುತ್ತ ಸುತ್ತುವ ಕ್ಷುದ್ರ ಗ್ರಹಗಳಿಗೆ, ನಕಲಿ ಗಾಂಧಿ ಕುಟುಂಬದ ಮುಖ ಸ್ತುತಿ ಮಾಡುವ ಗುಲಾಮರು ಇಷ್ಟವಾಗುತ್ತಾರೆಯೇ ಹೊರತು ಸ್ವಂತ ಬುದ್ಧಿಶಕ್ತಿ,ಚಿಂತನೆಯುಳ್ಳ ನಾಯಕರಲ್ಲ. ಇಂದಿರಾ ಕಾಲದಲ್ಲಿ ಜಗಜೀವನ್ ರಾಮ್,ಮೊರಾರ್ಜಿ ದೇಸಾಯಿಯಂತವರನ್ನು ಹಣಿಯಲಾಗಿತ್ತು. ಸೋನಿಯಾ ಕಾಲಕ್ಕೆ ನರಸಿಂಹರಾವ್,ಕೇಸರಿಯವರು ನೆಹರೂ ಕುಟುಂಬದ ರಾಜಕೀಯ ಬೇಟೆಗೆ ಬಲಿಯಾದರು.ಕೇಸರಿಯವರನ್ನು ಕಾಂಗ್ರೆಸ್ ಪಕ್ಷದ ಸಂವಿಧಾನಕ್ಕೆ ವ್ಯತಿರಿಕ್ತವಾಗಿ ಅಧ್ಯಕ್ಷ ಹುದ್ದೆಯಿಂದ ಇಳಿಸಿ, ಸೋನಿಯಾ ಅವರಿಗೆ ಪಟ್ಟ ಕಟ್ಟಲು,ಸೋನಿಯಾರ ಟೀಮು ಸೇರಿಕೊಂಡಿದ್ದ ಪ್ರಣಬ್ ಮುಖರ್ಜಿ,ಶರದ್ ಪವಾರ್ ಅವರಂತವರಿಗೂ ಮುಂದೊಂದು ದಿನ ಕೇಸರಿಯವರಿಗೆ ಸಿಕ್ಕ ಅದೇ ರುಚಿಯ ಸ್ವಾದವೂ ಸಿಕ್ಕಿತು. ಶರದ್ ಪವಾರ್, ಸಂಗ್ಮಾ, ತಾರೀಖ್ ಅನ್ವರ್ ಅವರನ್ನು ಪಕ್ಷದಿಂದ ಹೊರಹಾಕಿದರು. ಮುಂದೊಂದು ದಿನ ಅಡ್ಡಿಯಾಗಬಹುದಾಗಿದ್ದ ರಾಜೇಶ್ ಪೈಲಟ್,ಮಾಧರಾವ್ ಸಿಂಧಿಯಾ ರಸ್ತೆ ಮತ್ತು ವಿಮಾನಾಪಘಾತಗಳಲ್ಲಿ ಸತ್ತರು.ಈ ರೀತಿ ವಿಮಾನಾಪಘಾತ/ರಸ್ತೆ ಅಪಘಾತಗಳಲ್ಲಿ ಸಾಯುವವರ ಪಟ್ಟಿ ಭಾರತದ ರಾಜಕೀಯ ಇತಿಹಾಸದಲ್ಲಿ ಅಲ್ಲಲ್ಲಿ ಸಿಗುತ್ತದೆ.ಆದರೆ ಹಾಗೆ ಸಿಗುವ ಪಟ್ಟಿ ಇದೇ ನೆಹರು ಕುಟುಂಬದ ಆಸುಪಾಸಿನಲ್ಲಿ ಸುತ್ತುತ್ತದೆ. ನಿಗೂಢತೆ ಮತ್ತು ನೆಹರೂ ಕುಟುಂಬಕ್ಕೂ ಅದೇನೋ ಒಂದು ನಂಟು.
ಲೈಂಗಿಕ ದೌರ್ಜನ್ಯ,ಬುದ್ಧಿಜೀವಿಗಳು ಮತ್ತು ಐಡಿಯಾಲಜಿ
– ಅಶ್ವಿನಿ ಬಿ ದೇಸಾಯಿ ಮತ್ತು ಚೈತ್ರ ಎಂ.ಎಸ್
ಆರೋಹಿ ಸಂಶೋಧನಾ ಸಂಸ್ಥೆ, ಜಯನಗರ, ಬೆಂಗಳೂರು
ಹಾಲಿವುಡ್ನ ನಿರ್ದೇಶಕ ಹಾರ್ವೆ ವೇನ್ಸ್ಟೀನ್ರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮತ್ತು ಈ ಕಾರಣಕ್ಕಾಗಿ ‘MeToo’ Hasgtag ಅಡಿಯಲ್ಲಿ ಹೊರಬರುತ್ತಿರುವ ದೌರ್ಜನ್ಯಗಳ ಕಥೆಗಳು ಈಗ ಜಾಗತಿಕ ಸುದ್ದಿಯಾಗಿದೆ. ಈ ಪ್ರತಿಕ್ರಿಯೆಗಳು ಒಳ್ಳೆಯ ಬೆಳವಣಿಗೆಯೆಂದು ಭಾರತದ ಸ್ತ್ರೀವಾದಿ ಮತ್ತು ಪ್ರಗತಿಪರರ ಅಭಿಪ್ರಾಯವಾಗಿದೆ. ಈ ನಡುವೆ, ‘MeToo’ ಚಳವಳಿಯ ಭಾಗವಾಗಿ ರಾಯಾ ಸರ್ಕಾರ್ ಎಂಬ ವಿದ್ಯಾರ್ಥಿನಿಯೊಬ್ಬಳು ಕೆಲವು ಭಾರತೀಯ ಪ್ರಾಧ್ಯಾಪಕರನ್ನು ಲೈಂಗಿಕ ಕಿರುಕುಳದಂಥ ಕೃತ್ಯಗಳಲ್ಲಿ ಆರೋಪಿಗಳೆಂದು ಗುರುತಿಸಿದ್ದಾಳೆ. ಈ ಪಟ್ಟಿಯಲ್ಲಿ ಜೆಎನ್ಯು, ಜಾಧವಪುರ ವಿಶ್ವವಿದ್ಯಾನಿಲಯಗಳಂಥ ಸಂಸ್ಥೆಗಳಿಂದ ಹಿಡಿದು, ಚಿಂತಕರಾದ ಕೌಶಿಕ್ ಬಸು, ಸದಾನಂದ ಮೆನನ್, ದೀಪೇಶ್ ಚಕ್ರವರ್ತಿಯವರಿಂದ ಪಾರ್ಥ ಚಟರ್ಜಿಯವರೆಗೆ ಅನೇಕರ ಹೆಸರುಗಳಿವೆ.
ಇದಕ್ಕೆ ಪ್ರತಿಕ್ರಿಯಿಸಿದ ಕೆಲವರು, ಆರೋಪಿಗಳು ಬ್ರಾಹ್ಮಣರು ಹಾಗೂ ಮೇಲ್ಜಾತಿಯವರು, ಆದ್ದರಿಂದ ಲೈಂಗಿಕ ದೌರ್ಜನ್ಯದ ಸಮಸ್ಯೆಯೇ ಜಾತಿವ್ಯವಸ್ಥೆಯ ಇನ್ನೊಂದು ರೂಪವೆಂದು ವಾದಿಸಿದ್ದಾರೆ. ಮರುಕ್ಷಣ ಮಾಲತಿ ಕುಮಾರಿ ಎಂಬ ಮತ್ತೋರ್ವ ವಿದ್ಯಾರ್ಥಿನಿ ಲೈಂಗಿಕ ದೌರ್ಜನ್ಯದಲ್ಲಿ ತೊಡಗಿರುವ ದಲಿತ-ಬಹುಜನ ಅಧ್ಯಾಪಕರ ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದಾಳೆ. ಈ ಪಟ್ಟಿಯಲ್ಲಿ ಕಾಂಚ ಇಳಯ್ಯರಿಂದ ಹಿಡಿದು ಅನೇಕ ದಲಿತ ಚಿಂತಕರ ಹೆಸರು ಸೇರಿಕೊಂಡಿದೆ. ಚಿಂತಕರನೇಕರು ಈ ಪಟ್ಟಿಯನ್ನು ಇದು ಮೇಲ್ಜಾತಿಯ ಹುನ್ನಾರವೆಂದು ಚರ್ಚಿಸಿದ್ದೂ ಆಗಿದೆ.
ಬುದ್ಧಿಜೀವಿಗಳು ಹಾಗೂ ಪೌರಾಣಿಕ ವ್ಯಕ್ತಿಗಳು
– ವಿನಾಯಕ ವಿಶ್ವನಾಥ ಹಂಪಿಹೊಳಿ
ಈ ಲೇಖನವು ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾಗತವಾಗಿ ಹರಿದು ಬಂದಿರುವ ಪೌರಾಣಿಕ ಕಥೆಗಳಲ್ಲಿ ಕಂಡು ಬರುವ ವ್ಯಕ್ತಿಗಳ ಕುರಿತು ನಮ್ಮ ದೇಶದ ಬುದ್ಧಿಜೀವಿಗಳು ಯಾವ ಅಭಿಪ್ರಾಯವನ್ನು ಹೊಂದಿದ್ದಾರೆ ಎನ್ನುವದನ್ನು ಸಮಂಜಸವಾಗಿ ವಿವರಿಸುವ ಒಂದು ಚಿಕ್ಕ ಪ್ರಯತ್ನವಾಗಿದೆ. ಬೇರೆ ಬೇರೆ ಪೌರಾಣಿಕ ವ್ಯಕ್ತಿಗಳ ಕುರಿತು ಬುದ್ಧಿಜೀವಿಗಳು ಏಕೆ ಬೇರೆ ಬೇರೆ ನಿಲುವುಗಳನ್ನು ತಾಳುತ್ತಾರೆ ಹಾಗೂ ಒಂದೇ ಪೌರಾಣಿಕ ವ್ಯಕ್ತಿಯ ಕುರಿತು ಮೇಲ್ನೋಟಕ್ಕೆ ಪರಸ್ಪರ ವಿರೋಧಾಭಾಸದಂತೆ ಕಾಣುವ ಹೇಳಿಕೆಗಳನ್ನು ಏಕೆ ಕೊಡುತ್ತಾರೆ ಎನ್ನುವದನ್ನು ಇಲ್ಲಿ ವಿವರಿಸಲು ಯತ್ನಿಸಲಾಗಿದೆ. ಮತ್ತಷ್ಟು ಓದು 
ಗಳಿಸಬೇಕು ಒಂದು ದಿನ, ಗಳಿಸಿದ್ದನ್ನು ಕೊಡಲೂಬೇಕು ಎಮ್ಮ ಮನ!
– ಸುಜಿತ್ ಕುಮಾರ್
ಆತ ಪ್ರಪಂಚದ ಅತಿರಥ ಶ್ರೀಮಂತ. ಆಸ್ತಿಯ ಮೊತ್ತ ಸುಮಾರು ಐದುಕಾಲು ಲಕ್ಷ ಕೋಟಿ ರೂಪಾಯಿಗಳಿಗಿಂತಲೂ ಹೆಚ್ಚು! ಕಾಲೇಜಿನಿಂದ ಹೊರಬಿದ್ದು ಮುಂದೆ ಇನ್ನೇನೂ ಸಾಧ್ಯವಲ್ಲ ಎಂಬಂತಿದ್ದ ಹುಡುಗನೊಬ್ಬನಿಂದ ಈ ಮಟ್ಟಿನ ಬೆಳವಣಿಗೆ ಸಾಧ್ಯವೆ ಎಂಬುದು ಇಂದಿಗೂ ಹಲವರಲ್ಲಿ ಕಾಡುತ್ತಿರುವ ಜಟಿಲ ಪ್ರಶ್ನೆ. ಇವನೊಟ್ಟಿಗೆ ಮತ್ತೊಬ್ಬನಿದ್ದಾನೆ. ಇಂದಿಗೂ ಕೀಲಿಮಣೆಯ ದಶಕದಷ್ಟು ಹಳೆಯ ಮೊಬೈಲ್ ಫೋನನ್ನೇ ಉಪಯೋಗಿಸುವ ಈತ ಸುಮಾರು ನಾಲ್ಕುವರೆ ಲಕ್ಷ ಕೋಟಿ ರೂಪಾಯಿಗಳ ಒಡೆಯ! ಕೋಕಾ ಕೋಲಾ, ವೀಕ್ಲಿ ಮ್ಯಾಗಜಿನ್, ಚೆವಿಂಗ್-ಗಮ್ ಗಳನ್ನು ಮಾರುತ್ತಿದ್ದ ಈ ಪೋರ ‘ಲಕ್ಷ ಗಳಿಕೆಗಿರುವ ಸಾವಿರ ಮಾರ್ಗಗಳು’ ಎಂಬಂತಹ ಒಂದು ಪುಸ್ತಕದಿಂದ ಪ್ರೇರಣೆ ಪಡೆದು ಈ ಮಟ್ಟಿಗೆ ಬೆಳೆದ ಎಂದರೆ ನೀವು ನಂಬಲೇಬೇಕು! ಮತ್ತಷ್ಟು ಓದು 
ಕೋಟಿ ಜನರ ಕಷ್ಟದಲ್ಲಿ ಕೋಟಿ-ಕೋಟಿಯನ್ನೆಣಿಸುವ ಮುನ್ನ..!!
– ಸುಜಿತ್ ಕುಮಾರ್
ಕೆಳಗಿನ ಕೆಲ ಪ್ರಶ್ನೆಗಳಿಗೆ ಸಾದ್ಯವಾದರೆ ನಿಮ್ಮ ಎದೆಯ ಮೇಲೆ ಕೈಯಿರಿಸಿ ಉತ್ತರಿಸಿ. ಕಳೆದ ತಿಂಗಳು ರಾಜ್ಯದಾದ್ಯಂತ ನಡೆದ ವೈದ್ಯರ ಮುಷ್ಕರವನ್ನು ನಿಜವಾಗಿಯೂ ನೀವು ಬೆಂಬಲಿಸುತ್ತೀರಾ? ಇಂದು ಕೆಲಸ ಮಾಡಿದರಷ್ಟೇ ನಾಳಿನ ಕೂಳನ್ನು ಕಾಣುವ ಕೋಟ್ಯಂತರ ಹೊಟ್ಟೆಗಳ ಮೇಲೆ ಲಕ್ಷ ಲಕ್ಷ ಹೊರೆಯನ್ನೊರಿಸುವ ಖಾಸಗಿ ಆಸ್ಪತ್ರೆಗಳ ದಬ್ಬಾಳಿಕೆಗೆ ಕಾನೂನಿನ ಚೌಕಟ್ಟಿನಲ್ಲಿ ಕಡಿವಾಣ ಹಾಕುವ ಒಂತಿನಿತು ಕಾನೂನು ನಿಮಗೆ ಬೇಡವೆನಿಸುವುದೇ? ವೈದ್ಯ ಹೇಳಿದ್ದೆ ರೋಗ, ನೀಡಿದ್ದೆ ಮದ್ದು ಎಂಬಂತಾಗಿರುವ ಸಂದರ್ಭದಲ್ಲಿ, ರೋಗಿಗಳ/ಜನತೆಯ ಹಿತದೃಷ್ಟಿಯಿಂದ ತರಲೆತ್ನಿಸುತ್ತಿರುವ ಕಾಯಿದೆಯ ನಿಜವಾದ ಉದ್ದೇಶ ನಿಮಗೆ ತಿಳಿದಿದೆಯೇ? ನಿಮ್ಮ ಹತ್ತಿರದವರೇ ಒಬ್ಬರು ತಕ್ಷಣಕ್ಕೆ ಯಾವುದಾದರೊಂದು ಪ್ರೈವೇಟ್ ಆಸ್ಪ್ರತ್ರೆಗೆ ಸೇರಿ ನಂತರ ಹಣ ಸಾಲುತ್ತಿಲ್ಲವೆನ್ನುತ್ತ ಜಿಲ್ಲೆಯ ಅಥವಾ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಬಂದು ಪಡುವ ವಿಪರ್ಯಾಸವನ್ನು ಕಣ್ಣು ಮುಚ್ಚಿಕೊಂಡು ನೀವು ಸಹಿಸುತ್ತೀರಾ? ಅದೇ ಪ್ರೈವೇಟ್ ಆಸ್ಪತ್ರೆಯಲ್ಲಿ ಸತ್ತ ಒಂದು ಬಡ ಹೆಣವನ್ನು ಹಿಂದಿರುಗಿಸಲೂ ಹಣದ ಬಿಲ್ಲನ್ನೇ ಮುಂದಿಟ್ಟು ಸತಾಯಿಸುವ ಕಟು ಹೃದಯಿಗಳನ್ನು ನೀವು ಹೊತ್ತು ಮೆರವಣಿಗೆ ಮಾಡುತ್ತೀರಾ? ಯಾರೋ ಪುಡಾರಿ ರಾಜಕಾರಣಿ ತನ್ನ ಬೇಳೆಯನ್ನು ಬೇಯಿಸಿಕೊಳ್ಳಲು ಅಂತಹ ಸಂಸ್ಥೆಗಳನ್ನು ವಿರೋಧಿಸಲಾರ ಎಂಬುದಾದರೆ ನೀವುಗಳು ಸಹ ‘ಕುರಿಗಳು ಸಾರ್ ಕುರಿಗಳು’ ಎಂಬಂತೆ ಆತನನ್ನೇ ಹಿಂಬಾಲಿಸುತ್ತೀರಾ? ಹೇಳಿ. ಇಂದು ಒಂದು ಸಾಧಾರಣ ಜ್ವರಕ್ಕೆ ಪ್ಯಾರಾ-ಅಸಿಟಮೋಲ್ ಮಾತ್ರೆಯನ್ನು ಕೊಡಲೇ ಸಾವಿರ ಸಾವಿರ ರೂಪಾಯಿಗಳನ್ನು ಪೀಕುವ ಆಸ್ಪತ್ರೆಗಳು ದಿನಕ್ಕೆ ಇನ್ನೂರು ರೂಪಾಯಿ ಹಣವನ್ನು ಸಂಪಾದಿಸುವ ವ್ಯಕ್ತಿಯನ್ನು ಅಂತಹ ಆಸ್ಪತ್ರೆಗಳ ಹತ್ತಿರವೂ ಸುಳಿಯದಂತೆ ಮಾಡುತ್ತಿರುವುದು ಎಷ್ಟು ಮಟ್ಟಿನ ನ್ಯಾಯ? ಇವರಿಗೆ ಜಾಗ, ಓದು, ಕಟ್ಟಡ ಎಲ್ಲವೂ ಬಡ ಜನರ ದುಡ್ಡಿನಲ್ಲಿ ನಡೆಯುವ ರಾಜ್ಯಸರ್ಕಾರದ್ದೇ ಬೇಕು ವಿನಃ ಅಂತಹ ಬಡ ಜನರ ಶೂಶ್ರುಷೆಯಲ್ಲ. ದಿನಪೂರ್ತಿ ಇಂಗ್ಲಿಷಿನ ಪೋಷಾಕುಗಳನ್ನೇ ತೋರುತ್ತ 1 ನಿಮಿಷ ತೋರ್ಪಡಿಕೆಗೆ ಏನೋ ಎಂಬಂತೆ ಕನ್ನಡ ಕನ್ನಡ ಎಂದು ಬೊಬ್ಬೆಯೊಡೆಯುವ ಹಲವರು ಇದೇ ಕನ್ನಡ ನಾಡಿನಲ್ಲಿ ಅವೇ ಇಂಗ್ಲಿಷ್ ಔಷಧಗಳು ತಮ್ಮ ರಣಬೆಲೆಯ ಬಲದಲ್ಲಿ ನಮ್ಮವರನ್ನು ಕಬ್ಬಿನ ಜಲ್ಲೆಯಂತೆ ಅರೆಯುತ್ತಿರುವುದು ನಿಮಗೆ ತಪ್ಪು ಎನಿಸುವುದಿಲ್ಲವೇ? ಮತ್ತಷ್ಟು ಓದು 
ಮಾರ್ಕ್ಸ್ ವಾದ ಮತ್ತು ನೆಹರೂವಾದ ಗಾಂಧಿವಾದವನ್ನು ಕೊಂದಿತೇ?
ಡಾ|| ಬಿ.ವಿ ವಸಂತ ಕುಮಾರ್
ಕನ್ನಡ ಪ್ರಾಧ್ಯಾಪಕರು
ಮಹಾರಾಣಿ ಮಹಿಳಾ ಕಾಲೇಜು
ಮೈಸೂರು
ಇಂದು ಕೇರಳ ಹಾಗೂ ಕರ್ನಾಟಕದಲ್ಲಿ ಕ್ರಮವಾಗಿ ಮಾರ್ಕ್ಸ್ ವಾದಿ ಹಾಗೂ ನೆಹರೂವಾದೀ ಪ್ರಭುತ್ವಗಳು ಆಳುತ್ತಿವೆ. ಈ ಎರಡೂ ರಾಜ್ಯಗಳಲ್ಲಿ ಸೈದ್ಧಾಂತಿಕವಾದ ಕಾರಣಗಳಿಗಾಗಿ ಹಿಂದೂ ಕಾರ್ಯಕರ್ತರ ಕೊಲೆಗಳು ಆಗುತ್ತಿವೆ ಎಂಬ ಚರ್ಚೆಗಳು ನಡೆಯುತ್ತಿವೆ. ಇದರೊಟ್ಟಿಗೆ ಕೇರಳ ಹಾಗೂ ಕರ್ನಾಟಕದ ಪಿ.ಎಫ್.ಐ ಸಂಘಟನೆಯು ಮುಸ್ಲಿಂ ಮೂಲಭೂತವಾದಿ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಸಂಗವಿರುವ ಸಂಘಟನೆಗಳ ಜೊತೆಗೆ ಹೆಸರು ತುಳುಕು ಹಾಕಿಕೊಂಡಿದೆ. ಈ ನಡುವೆ ದಕ್ಷಿಣ ಭಾರತದ ಹೆಸರಾಂತ ನಟ ಕಮಲಹಾಸನ್ ಹಿಂದೂ ಭಯೋತ್ಫಾದನೆಯ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಅದನ್ನು ಮತ್ತೊಬ್ಬ ಕನ್ನಡದ ನಟ ಪ್ರಕಾಶ ರೈ ಸಮರ್ಥಿಸಿದ್ದಾರೆ. ಈ ಎಲ್ಲಾ ವಿದ್ಯಮಾನಗಳನ್ನು ಬಿಜೆಪಿಯ ರಾಜ್ಯ ನಾಯಕರು ಹಾಗೂ ರಾಷ್ಟ್ರ ನಾಯಕರು ಖಂಡಿಸಿ ಹೋರಾಟಕ್ಕಿಳಿದಿದ್ದಾರೆ. ಮತ್ತಷ್ಟು ಓದು 







