ಕಥೆ – ಕವನ ಸ್ಪರ್ಧೆ ( ಪತ್ರಿಕಾ ಪ್ರಕಟಣೆ )
ಸಹಾಯಕ ನಿಲಯ ನಿರ್ದೇಶಕರು ಮತ್ತು ಕಾರ್ಯಕ್ರಮ ಮುಖ್ಯಸ್ಥರು,
ಆಕಾಶವಾಣಿ, ಮಂಗಳೂರು – 575 004.
ದೂರವಾಣಿ: (0824) 2211382
ಮಂಗಳೂರು ಆಕಾಶವಾಣಿ ನಿಲಯವು ಅನಂತಪ್ರಕಾಶ, ಕಿನ್ನಿಗೋಳಿ ಮತ್ತು ಅರೆಹೊಳೆ ಪ್ರತಿಷ್ಠಾನ, ಮಂಗಳೂರು ಇವರ ಸಹಯೋಗದಲ್ಲಿ ಕನ್ನಡ ಕತೆ ಮತ್ತು ಕವನ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.
ವಿಜೇತರಿಗೆ ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಮತ್ತು ಪುಸ್ತಕ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಗುವುದು. ಪ್ರತಿ ವಿಭಾಗದಲ್ಲಿ ಮೂರು, ಅಂದರೆ ಒಟ್ಟು ಆರು ಬಹುಮಾನಗಳು. ಮತ್ತಷ್ಟು ಓದು 
ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಯಾರು ಗೊತ್ತೇ CM ಸಿದ್ದರಾಮಯ್ಯನವರೇ?
– ರಾಕೇಶ್ ಶೆಟ್ಟಿ
ಒಂದು ಸುಳ್ಳನ್ನು ಸತ್ಯವಾಗಿಸಲು ಏನು ಮಾಡಬೇಕು? ಮತ್ತೊಂದು,ಮಗದೊಂದು ಸುಳ್ಳಿನ ಸೌಧವನ್ನು ಕಟ್ಟುತ್ತಾ ಹೋಗಬೇಕು. ರಾಜ್ಯದ ತುಘಲಕ್ ದರ್ಬಾರಿನಲ್ಲಿ ನಡೆಯುತ್ತಿರೋದು ಅದೇ. ಶಾಂತವಾಗಿದ್ದ ಕರ್ನಾಟಕದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ಮೊದಲು ಕೈಹಾಕಿದ್ದು ಟಿಪ್ಪು ಯುನಿವರ್ಸಿಟಿ ನಿರ್ಮಾಣದ ಯೋಜನೆಯ ಮೂಲಕ. ತೀವ್ರ ಪ್ರತಿರೋಧ ಬಂದ ನಂತರ ಅದು ಮೂಲೆ ಸೇರಿತ್ತು. ಸುಲ್ತಾನ್ ಸಿದ್ಧರಾಮಯ್ಯನವರು ಅಧಿಕಾರಕ್ಕೆ ಬಂದ ನಂತರ, ಮತ್ತೆ ಟಿಪ್ಪುವಿನ ಘೋರಿ ತೆಗೆಯಲು ನಿರ್ಧರಿಸಿದರು.ಬದುಕಿದ್ದಾಗಲೇ ಲಕ್ಷಾಂತರ ಜನರ ಮಾರಣಹೋಮ,ಮತಾಂತರ ಮಾಡಿದವನ ಆತ್ಮ ಶತಮಾನಗಳ ನಂತರ ಹೊರ ಬಂದರೆ ಸುಮ್ಮನಿದ್ದೀತೆ? ಮಡಿಕೇರಿಯಲ್ಲಿ ಟಿಪ್ಪು ಆಧುನಿಕ ಸೈನಿಕರಿಗೆ ಕುಟ್ಟಪ್ಪ ಬಲಿಯಾದರು. ಕಳೆದ ಮೂರು ವರ್ಷಗಳಿಂದ ನವೆಂಬರ್ ತಿಂಗಳು ಹತ್ತಿರ ಬಂದರೆ, ಕರ್ನಾಟಕದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗುತ್ತಿದೆ. ಟಿಪ್ಪು ಸುಲ್ತಾನನಿಂದ ಹಿಡಿದು ಸಿದ್ಧರಾಮಯ್ಯನವರವರೆಗೂ ಈ ಭೀತಿಯ ವಾತಾವರಣ ಸೃಷ್ಟಿ ನಿಂತಿಲ್ಲ.ಸಜ್ಜನರ ಜಯಂತಿ ಮಾಡುತ್ತೇವೆಂದರೆ ಈ ನೆಲದ ಜನ ಆತನ ಜಾತಿ,ಧರ್ಮದ ಲೆಕ್ಕವಿಡದೆ ಸಂಭ್ರಮಿಸುತ್ತಾರೆ. ಸಂತ ಶಿಶುನಾಳ ಶರೀಫಜ್ಜ ನಮ್ಮ ಪಾಲಿಗೆ “ಸಂತ’ನಾಗಿಯೇ ಮುಖ್ಯವಾಗುತ್ತಾನೆಯೇ ಹೊರತು, ಷರೀಫ್ ಅನ್ನುವ ಕಾರಣಕ್ಕಲ್ಲ. ಇಂತಹ ಸೌಹಾರ್ದಕ್ಕೆ ಕೊಳ್ಳಿಯಿಟ್ಟವರು ಸಿದ್ಧರಾಮಯ್ಯನವರು. ಟಿಪ್ಪುವೆಂಬ ಮತಾಂಧನನ್ನು, ಸತ್ಯಸಂಧ,ಜನಾನುರಾಗಿ ಅಂತೆಲ್ಲ ಬಿಂಬಿಸಲು ಹೊರಟು ನಿಂತರು. ಉಂಡ ಮನೆಗೆ ದ್ರೋಹ ಬಗೆಯುವ ಬುದ್ಧಿಜೀವಿಗಳ ಸುಳ್ಳು ಇತಿಹಾಸದ ನಡುವೆ ಅವಿತುಕೊಂಡು, ಟಿಪ್ಪು ಸುಲ್ತಾನ ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಎಂದು ಖುದ್ಧು ಕರ್ನಾಟಕ ಸರ್ಕಾರವೇ ನಾಚಿಕೆ ಬಿಟ್ಟು ಸುಳ್ಳು ಜಾಹಿರಾತು ನೀಡಿತು. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅದನ್ನೇ ಟ್ವೀಟು ಮಾಡಿದರು.
ಹೌದೇ? ನಿಜವಾಗಿಯೂ ಟಿಪ್ಪು ಸುಲ್ತಾನ ಮೊದಲ ಸ್ವಾತಂತ್ರ್ಯ ಹೋರಾಟಗಾರನೇ? ಆತನೊಬ್ಬ ರಾಜನಲ್ಲವೇ? ರಾಜನೊಬ್ಬ ಪರಕೀಯರೊಂದಿಗೆ ಹೋರಾಡಿದ್ದನ್ನೇ ಸ್ವಾತಂತ್ರ್ಯ ಸಂಗ್ರಾಮವೆನ್ನುವುದಾದರೇ, ಈ ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿಯಂತ ಇದ್ದರೆ ಅದು ಉಳ್ಳಾಲದ ರಾಣಿ ಅಬ್ಬಕ್ಕ ಮಾತ್ರವೇ.ರಾಣಿ ಅಬ್ಬಕ್ಕ ಪೋರ್ಚುಗೀಸರೊಂದಿಗೆ ಯುದ್ಧಕ್ಕಿಳಿದಾಗ, ಟಿಪ್ಪು ಸುಲ್ತಾನ ಬಿಡಿ ಅವರಪ್ಪ ಹೈದರನೇ ಹುಟ್ಟಿರಲಿಲ್ಲ.ಟಿಪ್ಪುವನ್ನು ಹಾಡಿ ಹೊಗಳಿದರೆ ಮುಸ್ಲಿಮರ ವೋಟು ಬುಟ್ಟಿಯಲ್ಲಿ ಬಂದು ಬೀಳುತ್ತದೆ. ರಾಣಿ ಅಬ್ಬಕ್ಕ ಮತ್ತವರ ವೀರ ಮೊಗವೀರ ಪಡೆಯ ಕತೆ ಹೇಳಿದರೆ ಸಿದ್ಧರಾಮಯ್ಯನವರಿಗೇನು ಲಾಭ ಹೇಳಿ? ಹಾಗಾಗಿಯೇ ಖುದ್ದು ಮುಖ್ಯಮಂತ್ರಿ ಮತ್ತವರ ರಾಜ್ಯ ಸರ್ಕಾರ ಇತಿಹಾಸಕ್ಕೆ ಅಪಚಾರವೆಸಗಿರುವುದು.ಟಿಪ್ಪು ಸುಲ್ತಾನ, ಸುಲ್ತಾನ್ ಸಿದ್ಧರಾಮಯ್ಯನವರ ಬಗ್ಗೆ ಬರೆದು ಸಮಯ ವ್ಯರ್ಥ ಮಾಡುವ ಬದಲು, ಉಳ್ಳಾಲದ ವೀರರಾಣಿ ಅಬ್ಬಕ್ಕನ ಬಗ್ಗೆ ಹೇಳುತ್ತೇನೆ. ಆ ನಂತರ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಪಟ್ಟ ಯಾರಿಗೆ ದಕ್ಕಬೇಕೆನ್ನುವುದನ್ನು ಓದುಗರೇ ನಿರ್ಧರಿಸಲಿ…
ಸ್ವಾತಂತ್ರ್ಯದ ದೀಪ ಹಚ್ಚಿದ ಮೊದಲ ಭಾರತದ ನಾರಿಯ ನೆನೆಯುತ್ತ… ಮತ್ತಷ್ಟು ಓದು 
ಕಾರಂತ ಸಾಹಿತ್ಯ: ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೩)
– ದೇವು ಹನೆಹಳ್ಳಿ
ಬಂಡಿಮಠ, ಹನೆಹಳ್ಳಿ ಗ್ರಾಮ,
ಬಾರಕೂರು, ಉಡುಪಿ ತಾಲೂಕು-ಜಿಲ್ಲೆ.
ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೧)
ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೨)
ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಇಬ್ಬರು, ಅಪ್ಪಳಸ್ವಾಮಿ ಮತ್ತು ಆರೋಕ್ಯಸ್ವಾಮಿ ಎಂಬ ಅಧಿಕಾರಿಗಳ ಹುನ್ನಾರದಲ್ಲಿ ಸಹ್ಯಾದ್ರಿಯ ಮಲೆ, ಇಳಿಜಾರು ಮತ್ತು ತಪ್ಪಲಿನ ಅರಣ್ಯವೆಲ್ಲ ಕೇರಳೀಯರ ವಶವಾದ ಪ್ರಸ್ತಾಪದೊಂದಿಗೆ ನಿರೂಪಣೆ ಮುಖ್ಯ ಮಜಲನ್ನು ತಲುಪುತ್ತದೆ. ಇದಕ್ಕೆ ಎರಡು ಮುಖ. ಒಂದು, ಅರಣ್ಯ ನಾಶ ಇನ್ನೊಂದು, ಸ್ಥಳೀಯರಿಗಾಗುವ ವಂಚನೆ. ಈ ಹಿಂದೆ ಹೇಳಿದ ಸೌಂದರ್ಯ, ಪರಿಪೂರ್ಣತೆ, ಪಂಥಾಹ್ವಾನ ಈ ಯಾವ ಸೆಲೆ, ಸೆಳೆತವೂ ಇಲ್ಲದ, ಲಾಭಕೋರತನವೊಂದೇ ಮಾರ್ಗದರ್ಶಿಯಾಗಿರುವ ರೂಕ್ಷ ಪ್ರಪಂಚದ ಒಂದು ಬೀಭತ್ಸ ಚಿತ್ರಣವನ್ನು ಈ ಕಾದಂಬರಿಯಲ್ಲಿ ಕಾಣುತ್ತೇವೆ. ಕಾರಂತರು ಬಳಸುವ ಅವರ ಇಷ್ಟದ ಪದ `ಚೆಲುವು’ ಒಮ್ಮೆಯೂ ಈ ಕಾದಂಬರಿಯಲ್ಲಿ ಬಂದಿಲ್ಲ. ಪರಿಸರ ನಾಶದ ಜತೆಗೆ ಹೊರಗಿನ ಜನರ ಅವ್ಯಾಹತ ನುಸುಳುವಿಕೆಯಿಂದ ಜನಸಂಖ್ಯಾನುಪಾತ demography, ಏರುಪೇರಾಗಿ ಸಾಂಸ್ಕೃತಿಕ ಅವನತಿಯನ್ನೂ ಕಾಣುತ್ತೇವೆ. ನಿಸರ್ಗವೆಂದರೆ ವಿಶ್ವಾತ್ಮಕ ವ್ಯಕ್ತಿತ್ವವೆಂಬ ಭಾವ ಅಳಿದು ಅದು ಕೇವಲ ಒಂದು ಕಚ್ಚಾವಸ್ತುಗಳ ಮಂಡಿ ಎಂದಾಯಿತು. ಮತ್ತಷ್ಟು ಓದು 
ಇಸ್ರೇಲಿನಲ್ಲಿ ಮೈಸೂರಿನ ಅಶ್ವಾರೂಢರ ಅಟ್ಟಹಾಸ
– ವಿಂಗ್ ಕಮಾಂಡರ್ ಸುದರ್ಶನ
sudarshanbadangod@gmail.com
1914 ರಲ್ಲಿ ಮೈಸೂರಿನ ಮಹರಾಜರಾದ ನಾಲ್ಮಡಿ ಕೃಷ್ಣರಾಜ ಒಡೆಯರ ಸೈನ್ಯದಲ್ಲಿ ಒಂದು ವಿಶೇಷ ಅಶ್ವಾರೂಢರ ದಳವಿತ್ತು. 29 ಸೈನ್ಯಾಧಿಕಾರಿಗಳ, 444 ಅಶ್ವಯೋಧರೊಂದಿಗೆ 526 ಶ್ರೇಷ್ಠ ಅರಬ್ಬೀ ಕುದುರೆಗಳ ಈ ಪಡೆಗೆ ವಿಶೇಷ ಗೌರವವಿತ್ತು. ಆಗಾಗಲೇ ಫಿರಂಗಿಗಳ, ಮಷೀನುಗನ್ನುಗಳ ಆಗಮನವಾಗಿ, ಕುದುರೆಗಳ ನಾಗಾಲೋಟದ, ಖರಪುಟದ ಶಬ್ದದ ಕಾಲ ಮುಗಿದೇ ಬಿಡ್ತೇನೋ ಎನ್ನುವ ಸಮಯವದು. ಹೈದ್ರಾಬಾದಿನ ನಿಜಾಮರ ಮತ್ತು ರಾಜಾಸ್ಥಾನದ ರಾಜರ ಸೈನ್ಯಗಳನ್ನು ಹೊರತು ಪಡಿಸಿದರೆ ಬೇರೆಲ್ಲೆಡೂ ಆಶ್ವಾರೂಢದ ದಳವೇ ಇರಲಿಲ್ಲ. ಮತ್ತಷ್ಟು ಓದು 
ಎಚ್ಚರ..! ನಿಮ್ಮ ಸುತ್ತಲೂ ಇರುವರಿವರು…
– ಸುಜಿತ್ ಕುಮಾರ್
ಆ ವಯಸ್ಸೇ ಹಾಗೆ. ಅರೆ ಬರೆ ಬೆಂದ ಬಿಸಿನೆಸ್ ಪ್ಲಾನ್ ಗಳನ್ನೇ ಕನಸಿನ ಕೋಟೆಯನ್ನಾಗಿಸಿಕೊಂಡು ಅನುಷ್ಠಾನಗೊಳಿಸಲು ಸದ್ಯಕ್ಕಂತೂ ಸಾಧ್ಯವಿಲ್ಲದಿದ್ದರೂ ಮಾಡೇ ತೀರುತ್ತೇನೆಂಬ ಹೆಬ್ಬಯಕೆ. ತಿಂಗಳಿಗೆ ಒಂದಿಷ್ಟು ಪಾಕೆಟ್ ಮನಿ, ತಲೆಯ ತುಂಬೆಲ್ಲಾ ಬ್ರಾಂಡೆಡ್, ಹೈಗ್ರೇಡ್ ವಸ್ತುಗಳ ಕಾರುಬಾರು, ಊರು ಸುತ್ತಲು ಗೆಳೆಯನ ಸೆಕೆಂಡ್ ಹ್ಯಾಂಡ್ ಬೈಕು ಹಾಗು ಕ್ಲಾಸಿಗೆ ಬಂಕು ಹೀರೋಗಿರಿಗೆ ಸೊಂಪು! ಅಚ್ಚುಕಟ್ಟಾಗಿ ಓದಿ ಸ್ವಂತ ಕಾಲಮೇಲೆ ನಿಲ್ಲುವ ಕನಸ್ಸನ್ನು ಕಟ್ಟಿ ಹೆಗಲೇರಿಸಿ ಕಳುಹಿಸುವ ಪೋಷಕರ ವಾರಕ್ಕೋ ತಿಂಗಳಿಗೋ ತಳ್ಳುವ ಒಂದಿಷ್ಟು ಹಣವನ್ನು ‘ಇಂದು ಇಂದಿಗೆ.. ನಾಳೆ ನಾಳೆಗೆ’ ಎಂಬಂತೆ ಭಕ್ಷಿಸಿ, ತಿಂಗಳಾಂತ್ಯದ ವೇಳೆಗೆ ಅತಂತ್ರದ ಸ್ಥಿತಿಯ ಮುಸಿಯನಂತೆ ಪಿಳಿ ಪಿಳಿ ಕಣ್ಣುಗಳನ್ನು ಬಿಡುತ್ತಾ ಪಕ್ಕದ ಗೂಡಂಗಡಿಯ ಟೀ ಬನ್ನುಗಳನ್ನೇ ಎರಡೊತ್ತಿನ ಆಹಾರವನ್ನಾಗಿ ಮಾಡಿಕೊಂಡು ‘ಏನಾದ್ರು ಬಿಸಿನೆಸ್ ಮಾಡ್ಬೇಕು ಮಗಾ’ ಎನ್ನುತ ಕ್ಷಣಮಾತ್ರದಲ್ಲಿ ಅಂಬಾನಿಗಳಾಗಲು ಹವಣಿಸುತ್ತಾ ದಿನಕಳೆಯುವ ಯುವಕರೇ ಈ ಮಹಾ ಷಡ್ಯಂತ್ರದ ಸುಲಭದ ಬಲಿಪಶುಗಳು! ಮತ್ತಷ್ಟು ಓದು 
ರಾಜೀವ್ ಮಲ್ಹೋತ್ರ ಸಂವಾದ : ಭಾಗ ೨
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ
ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ
ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1
ಉದಾರವಾದಿಗಳು ಮತ್ತು ಕ್ರಿಶ್ಚಿಯನ್ ಮತಕ್ಕೆ ಸೇರಿಸಿಕೊಳ್ಳುವ/ ಪ್ರಚಾರಕರ (ಇವಾನ್ಜಲಿಸ್ಟ್ಗಳ) ನಡುವೆ ಹೊಂದಾಣಿಕೆ:
ಬ್ರಿಟಿಷ್ ಸಂಸತ್ತಿನಲ್ಲಿ ಎಡ್ವಿನ್ ಬೆರ್ಕ್ ಸ್ಪಷ್ಟವಾಗಿ ಹೇಳಿದ್ದಿದೆ- ’ಓಕ್ ಮರಗಳನ್ನು ಥೇಮ್ಸ್ ನದಿಯ ದಂಡೆಯಿಂದ ತೆಗೆದುಕೊಂಡು ಹೋಗಿ ಗಂಗಾನದಿಯ ದಂಡೆಯುದ್ದಕ್ಕೂ ನೆಡಲಾಗದು’ ಎಂದು. ಭಾರತೀಯ ಸಂಸ್ಥಾನಗಳು ಭಾರತೀಯರ ಅಗತ್ಯಗಳನ್ನು ಪೂರೈಸುತ್ತಿದ್ದವು. ಆ ಸಂಸ್ಥೆಗಳಲ್ಲಿ ಪುನರುಜ್ಜೀವನದ ಅಗತ್ಯವಿತ್ತೇ ವಿನಃ ಅವುಗಳನ್ನು ಬದಲಿಸುವ ಅಗತ್ಯವಿರಲಿಲ್ಲ. ಆಂಗ್ಲರಲ್ಲಿ, ಸಂಸತ್ತಿನಲ್ಲಿ ಹಾಗೂ ಭಾರತದ ಆಂಗ್ಲ ಅಧಿಕಾರಿಗಳಲ್ಲಿ ಒಂದು ಬಲವಾದ ಗುಂಪಿದ್ದು ಅವರು ಭಾರತೀಯ ಸಂಸ್ಥಾನಗಳನ್ನು ಮರುನಿರ್ಮಾಣ ಮಾಡಲಿಚ್ಛಿಸಿದ್ದರು. ನಮ್ಮ ಕುತೂಹಲಕ್ಕೆ ’ಸಂಪ್ರದಾಯವಾದಿಗಳು’ (ಕನ್ಸರ್ವೇಟಿವ್ಗಳು) ಗಂಭೀರತೆಯಿಂದ ಭಾರತೀಯ ಸಂಸ್ಥಾನಗಳನ್ನು ಹೇಗಿದ್ದವೋ ಹಾಗೆಯೇ ಬಿಡಬೇಕೆನ್ನುತ್ತಿದ್ದರು. ’ಆಂಗ್ಲ ಉದಾರವಾದಿಗಳು’ ಭಾರತದ ಸಂಸ್ಥಾನಗಳನ್ನು ಗೊಂದಲಮಯವಾಗಿಸಲು/ ಅವ್ಯವಸ್ಥಿತಗೊಳಿಸಲು ಇಚ್ಛಿಸಿದ್ದರು. ಮತ್ತಷ್ಟು ಓದು 
ರಕ್ತ ಸಿಕ್ತ ಕಮ್ಯುನಿಷ್ಟ ಕುಡುಗೋಲಿಗೆ ಇನ್ನೆಷ್ಟು ಬಲಿ? ಅದನ್ನು ತಡೆಯಲು ಕೇರಳ ಚಲೋ!
ಶಿವಾನಂದ ಶಿವಲಿಂಗ ಸೈದಾಪೂರ
ವಿಭಾಗ ಸಂಚಾಲಕ,
ಎಬಿವಿಪಿ ಬೆಳಗಾವಿ.
ಬರ್ಬರವಾಗಿ ಹತ್ಯೆ ಮಾಡುವ ಜನರಿಂದ ಶಾಂತಿ ಸೌಹಾರ್ದತೆಯನ್ನು ಬಯಸುವುದು ಬಿಡಿ, ಅದರ ಬಗ್ಗೆ ಕನಸಿನಲ್ಲಿಯೂ ಸಹ ನೆನಪಾದರೆ ಬೆಚ್ಚಿ ಬೀಳುವುದು ಸಹಜ. ಜೀವಂತವಾಗಿರುವ ಮನುಷ್ಯನನ್ನು ಎರ್ರಾಬೀರಿ ಇರಿದು ಕೊಲೆ ಮಾಡಿ ಸೌಮ್ಯವಾದದ ಕತೆ ಹೇಳಲು ಬಂದರೆ ಕೇಳಲು ನಿಲ್ಲುವವರಾದರೂ ಯಾರು? ಈ ದೇಶದಲ್ಲಿ ಎಲ್ಲಲ್ಲಿ ಕಮ್ಯುನಿಷ್ಠ ಪಕ್ಷ ಆಡಳಿತದಲ್ಲಿದೆಯೋ ಅಲ್ಲಲ್ಲಿ ಶಾಂತಿ, ಸೌಹಾರ್ದತೆ ರಾತ್ರಿ ಕನಸಿನಲ್ಲಯೂ ಕಾಣುವಂತಿಲ್ಲ. ಸರ್ವರೂ ಸಮಾನರು ಎನ್ನುವ ಕಮ್ಯುನಿಸಂನ ನೀತಿ ಅಧಿಕಾರ ವಹಿಸಿಕೊಂಡು ಕುರ್ಚಿಯಲ್ಲಿ ಕುಳಿತುಕೊಳ್ಳುವವರಿಗೆ ಮಾತ್ರವೇ ಎಂಬುದನ್ನು ಕೇರಳ ನೋಡಿದರೆ ಗೊತ್ತಾಗುತ್ತದೆ. ಒಟ್ಟಾರೆ ಹೇಳಬೇಕೆಂದರೆ ಕಮ್ಯುನಿಷ್ಠ ಆಡಳಿತದಿಂದ ದೇವರ ನಾಡು ನರಹಂತಕರ ನಾಡಾಗಿದೆ. ಮತ್ತಷ್ಟು ಓದು 
ಬುದ್ದಿಜೀವಿ ಮತ್ತು ದೇವರು ಎದುರುಬದುರು
– ಶ್ಯಾಮ್ ಭೀಮಗುಳಿ
ಹಿಂದೊಮ್ಮೆ ಬೆಂಗಳೂರು ಎಂಬ ಮಾಯಾ ನಗರಿಯಲ್ಲಿ ಒಬ್ಬ ‘ಬುದ್ದಿಜೀವಿ’ ಎಂದು ಕರೆಸಿಕೊಳ್ಳುವವ ಇದ್ದನಂತೆ. ಈತ ಬುದ್ದಿಜೀವಿಯಾದ ಕಾರಣ ಚಿಂತಕ, ಪ್ರಗತಿವಾದಿ ಇತ್ಯಾದಿ ವಿಶೇಷಣಗಳು ಜೊತೆಗೆ ಅಂಟಿಕೊಂಡುಬಿಟ್ಟಿತ್ತು. ಈತ ಸಹಜವಾಗಿ ಯಾವುದೇ ವಿಷಯದ ಬಗ್ಗೆ ನಿರರ್ಗಳವಾಗಿ ಮಾತಾಡುತ್ತಿದ್ದ. ಬರೆಯುತ್ತಿದ್ದ. ಈ ತಳಸ್ಪರ್ಶಿ ಸಾಹಿತ್ಯದಲ್ಲಿ ಎಷ್ಟು ಸತ್ವ ಇದೆ ಎಂದು ಅವನ ಜೊತೆಯವರು ನೋಡುತ್ತಿರಲಿಲ್ಲ, ಹಾಗೇ ಯಾವ ಸತ್ವ ಇದೆ ಎಂದೂ ವಿರೋಧಿಗಳು ಹುಡುಕುತ್ತ ಇದ್ದರು. ಆದರೂ ಪ್ರಸಿದ್ಧ ಆದ. ಎಲ್ಲರೂ ಅವನನ್ನು ಸಭೆ ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಕರೆಸುತ್ತಿದ್ದರು. ಸಿಕ್ಕಿದ್ದೇ ಅವಕಾಶ ಎಂದುಕೊಂಡು ದೇವರು, ಧರ್ಮ ,ಆಚಾರ ವಿಚಾರ, ಪರಿಸರ, ಸಾಹಿತ್ಯ , ರಾಜಕೀಯ ಇತ್ಯಾದಿಗಳ ಬಗ್ಗೆ ಅದ್ಭುತವಾಗಿ ಮಾತಾಡುತ್ತಿದ್ದ. ಅದಕ್ಕೆ ತಲೆ ತೂಗುವವರು ಹಲವರು. ಒಟ್ಟಾರೆ ನ್ಯೂಟನ್ ನಿಂದ ನಕ್ಸಲ್ ವರೆಗೆ ಆತನ ಪಾಂಡಿತ್ಯ ಹರಡಿತ್ತು. ಕೆಲವೊಂದು ಸುದ್ದಿವಾಹಿನಿಗಳಿಗೆ ಆತ ನಿಲಯದ ಕಲಾವಿದ ಎನ್ನುವಂತೆ ಆಪ್ತನಾಗಿದ್ದ. ಮತ್ತಷ್ಟು ಓದು 
ಕಾರಂತ ಸಾಹಿತ್ಯ: ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೨)
ದೇವು ಹನೆಹಳ್ಳಿ
ಬಂಡಿಮಠ, ಹನೆಹಳ್ಳಿ ಗ್ರಾಮ,
ಬಾರಕೂರು, ಉಡುಪಿ ತಾಲೂಕು-ಜಿಲ್ಲೆ.
ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೧)
ಬೆಟ್ಟದ ಜೀವ ಕಾದಂಬರಿಯಲ್ಲಿ ಪರಿಸರ ಮನುಷ್ಯನಿಗೆ ಪಂಥಾಹ್ವಾನವನ್ನು ನೀಡುವಂತದ್ದು. ಪರಿಸರಕ್ಕೆ ಶರಣಾಗಿಯೇ ಪರಿಸರದ ಹಲವು ಘಟಕಗಳನ್ನು ಎದುರಿಸಿ ಬದುಕನ್ನು ಕಟ್ಟಿಕೊಳ್ಳುವ ಅನಿವಾರ್ಯ. ಪ್ರಜ್ಞಾಪೂರ್ವಕವಾಗಿ, ಮುಕ್ತ ಮನಸ್ಸಿನಿಂದ ಇದು ಸಾಧ್ಯವಾದರೆ ಬದುಕಿನ ಹಲವು ವಿಸಂಗತಿ-ವಿಕೃತಿಗಳನ್ನು ಸಂಯಮದಿಂದ ಸಹಿಸುವ ಶಕ್ತಿಯನ್ನು, ನಿರ್ವಿಕಾರಚಿತ್ತದಿಂದ ಬದುಕುವ ಸ್ಥೈರ್ಯವನ್ನು ಪಡೆಯುವುದನ್ನು ಕಾಣುತ್ತೇವೆ. ಬೆಟ್ಟದ ಜೀವ ಕಾದಂಬರಿಯಲ್ಲಿ ಪರಿಸರವನ್ನು ಗ್ರಹಿಸುವುದಕ್ಕಿಂತ ವ್ಯತಿರಿಕ್ತವಾಗಿ ಕಾಣುವುದು ಶನೀಶ್ವರನ ನೆರಳಿನಲ್ಲಿ ಕಾದಂಬರಿಯಲ್ಲಿ. ಇಲ್ಲಿನ ಕೆಲವು ಪಾತ್ರಗಳು, ಮುಖ್ಯವಾಗಿ ಕೃಷ್ಣ ಜೋಯಿಸರು, ಪ್ರಕೃತಿ ತಮ್ಮ ಬಯಕೆಯ ನೇರಕ್ಕೆ ಇರಬೇಕೆಂದು ಬಯಸುವವರು. ಭೂಸವೆತ, ಕಳೆ ಮುಂತಾದವುಗಳ ಬಗ್ಗೆ ಅವರ ಜತೆ ಮಾತನಾಡಿದ ನಿರೂಪಕ “ನಮ್ಮ ಯೋಚನೆಯಂತೆ ಲೋಕ ನಡೆಯಬೇಕಾದರೆ ಲೋಕವೆಲ್ಲ ನಮ್ಮ ಅಂಕೆಯಲ್ಲಿ ಇರಬೇಕು ಎಂದ ಹಾಗಾಯ್ತಲ್ಲವೇ?” ಎಂದು ಕೇಳುತ್ತಾನೆ. ಮತ್ತಷ್ಟು ಓದು 
ಅನಾಣ್ಯೀಕರಣ, ಎಡಪಂಥೀಯ ಬುದ್ಧಿಜೀವಿಗಳು ಮತ್ತು ಮಾಧ್ಯಮಗಳು
ಜಿ. ಪದ್ಮನಾಭನ್
ಸಹಾಯಕ ಪ್ರಾಧ್ಯಾಪಕ
ತಮಿಳು ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗ
ದ್ರಾವಿಡ ವಿಶ್ವವಿದ್ಯಾಲಯ,
ಕುಪ್ಪಂಆಂಧ್ರ ಪ್ರದೇಶ.
[ತಮಿಳಿನ ಖ್ಯಾತ ಸಾಹಿತಿ, ಚಿಂತಕ ಬಿ.ಜಯಮೋಹನ್ರವರು, ಈ ಹಿಂದೆ ತಮ್ಮ ವೆಬ್ಸೈಟ್ನಲ್ಲಿ ಅನಾಣ್ಯೀಕರಣ ಮತ್ತು ಬುದ್ಧಿಜೀವಿಗಳ ದ್ವಿಮುಖ ನೀತಿಯ ಬಗೆಗಿನ ಲೇಖನವೊಂದನ್ನು ಪ್ರಕಟಿಸಿದ್ದರು. ಅದನ್ನು ದ್ರಾವಿಡ ವಿಶ್ವವಿದ್ಯಾಲಯದ, ತಮಿಳು ಬಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ, ಸಹಾಯಕ ಪ್ರಾಧ್ಯಾಪಕ ಶ್ರೀ ಜಿ.ಪದ್ಮನಾಭನ್ ಅವರು ಕನ್ನಡಕ್ಕೆ ತಂದಿದ್ದಾರೆ. ಅನಾಣ್ಯೀಕರಣಕ್ಕೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಈ ಲೇಖನ ಮತ್ತೆ ಚರ್ಚೆಯಾಗುತ್ತಿದೆ.] ಮತ್ತಷ್ಟು ಓದು 




