ವಿಷಯದ ವಿವರಗಳಿಗೆ ದಾಟಿರಿ

Recent Articles

16
ಡಿಸೆ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ 15: ಸಣ್ಣವರು,ದೊಡ್ಡವರು…

ನಾನು ಸಣ್ಣವನಿದ್ದಾಗ, ಹಲವು ಮಂದಿ ದೊಡ್ಡವರು ನನ್ನ ಕೈ ಹಿಡಿದು ನಡೆಸಿದ್ದರು. ದೈನಂದಿನ ಜೀವನಕ್ಕೆ ಅನ್ವಯಿಸುವಷ್ಟೇ ಪರಿಣಾಮಕಾರಿಯಾಗಿ ಆ ಮಾತು ಕಲಾ ಜೀವನಕ್ಕೂ ಅನ್ವಯಿಸುವಂತಹುದು. ಆಮೇಲೆ, ನಾನೂ ಒಬ್ಬ ಕಲಾವಿದ ಎಂದು ಹೇಳಿಕೊಳ್ಳುವ ಶಕ್ತಿ ಬಂದಾಗ (ಶಕ್ತಿಗಿಂತಲೂ ಹೆಚ್ಚಿನ ಕುರುಡು ಧೈರ್ಯವೂ ಇದ್ದಾಗ) ಹಲವು ಮಂದಿ ದೊಡ್ಡವರೆನಿಸಿಕೊಂಡವರ ಸ್ನೇಹ-ಪರಿಚಯಗಳನ್ನು ಮಾಡಿಕೊಂಡಿದ್ದೇನೆ. ಎಷ್ಟೋ ಮಂದಿ ಸಣ್ಣವರನ್ನು ಕಲಾರಂಗಕ್ಕೆ ಪರಿಚಯ ಮಾಡಿಸಿಕೊಟ್ಟಿದ್ದೇನೆ.
ದೊಡ್ಡವರೆನಿಸಿದವರು ಹಲವರಲ್ಲಿ ಕೆಲವರು ಈಗ ಕಣ್ಮರೆಯಾಗಿದ್ದಾರೆ. ಇನ್ನು ಕೆಲವರು ನಿವೃತ್ತರಾಗಿದ್ದಾರೆ. ಸಣ್ಣವರಾಗಿದ್ದವರು ಮೆಲ್ಲಮೆಲ್ಲನೆ ದೊಡ್ಡವರಾಗುತ್ತಲಿದ್ದಾರೆ. ನಾನು ಎಳೆಯ ಕಲಾವಿದರನ್ನು ತರಬೇತಿಗಾಗಿ ನಮ್ಮಲ್ಲಿಗೆ ಎಳೆದು ತಂದಾಗ, ನನ್ನ ಆಯ್ಕೆಯ ಕ್ಷೇತ್ರವನ್ನು ವಿಸ್ತಾರಗೊಳಿಸುವ ಧೈರ್ಯ ನನಗಿರಲಿಲ್ಲ. ಮನೆಯವರಿಂದ ಬೇರ್ಪಡಿಸಿ ಹುಡುಗರನ್ನು ನನ್ನ ಬಳಿಗೆ ಕರೆತರಿಸಿಕೊಳ್ಳುವುದು ಅಷ್ಟು ಸುಲಭದ ಕೆಲಸವೂ ಆಗಿರಲಿಲ್ಲ. ನಮ್ಮ ಮನೆಯ ಸಮೀಪದವರನ್ನಾದರೂ ಕರೆತಂದು ಸೇರಿಸಿಕೊಳ್ಳುವ ಮೊದಲು “ನಿಮ್ಮ ಹುಡುಗನಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳುತ್ತೇನೆ.” ಎಂಬ ಭರವಸೆ ಕೊಟ್ಟೇ ಕರೆತರಬೇಕಾಗುತ್ತಿತ್ತು. ಹಾಗೆ ತಂದು ತರಬೇತಿ ಮಾಡಿಸಿದವರಲ್ಲಿ ಹೆಚ್ಚಿನವರು ತಮ್ಮ ರಂಗಪ್ರವೇಶದ ಹಾರೈಕೆಗಳನ್ನು ಸಾರ್ಥಕಗೊಳಿಸಿದ್ದಾರೆ. ಇನ್ನು ಕೆಲವರು ತಾವು ಪರಿಣತರಾದೆವೆಂದು ತಿಳಿದುಕೊಂಡಿದ್ದಾರೆ. ಇನ್ನೂ ಕೆಲವರು, ಜೀವನದ ಇತರ ಜಂಜಾಟಗಳಿಗೆ ಸಿಕ್ಕಿ ತಮ್ಮ ಪ್ರತಿಭೆಯನ್ನು ಕಳೆದುಕೊಳ್ಳುವ ಮಟ್ಟಕ್ಕೂ ಮುಟ್ಟಿದ್ದಾರೆ.

ಎಲ್ಲರೂ ಒಂದೇ ರೀತಿಯಾಗಿರಬೇಕೆಂದು ನಿರೀಕ್ಷಿಸುವುದಾದರೂ ಹೇಗೆ? ಏಕರೂಪದ ಸಾಕಾರವೇ ಸಾಕ್ಷಾತ್ಕಾರವಾಗುವುದಾದರೆ, ಭಗವದ್ ಸೃಷ್ಟಿಯಲ್ಲಿ ವೈವಿಧ್ಯವೇ ಇರಲಾರದಲ್ಲ? ನನ್ನೊಂದಿಗೆ ಸಣ್ಣವರಾಗಿದ್ದು ದೊಡ್ಡವರಾಗುತ್ತಿರುವಾಗಲೇ ವಿಧಿಯ ಕಡೆ ಸೇರಿದವರು ಇಬ್ಬರು-ನಮ್ಮ ದೊಡ್ಡಪ್ಪನ ಮಕ್ಕಳು. ಒಬ್ಬನ ಹೆಸರು ರಾಮ, ಇನ್ನೊಬ್ಬನ ಹೆಸರು ಕೃಷ್ಣ. ರಾಮನ ಹೆಸರು ಅವನು ನಿರ್ವಹಿಸುತ್ತಿದ್ದ ರಾಕ್ಷಸ ಪಾತ್ರಗಳಿಂದಾಗಿ ಮೆರೆದಿತ್ತು. ಕೃಷ್ಣ ಸ್ತ್ರೀ ಪಾತ್ರಗಳಿಗೆ ಹೆಸರಾಗಿದ್ದ. ಅವರಿಬ್ಬರೂ ಪಡೆದು ಬಂದಿದ್ದ ಪ್ರತಿಭೆಯನ್ನು ಮೆರೆಸಲು ಸರಿಯಾದ ಅವಕಾಶ ದೊರೆಯುವ ಮೊದಲೇ ಇಬ್ಬರೂ ಅನಾರೋಗ್ಯಕ್ಕೆ ತುತ್ತಾದರು. ನನ್ನ ಜೊತೆಗೇ- ಅಥವಾ ಒಂದೆರಡು ವರ್ಷಗಳ ಹಿಂದು ಮುಂದಿನ ವ್ಯತ್ಯಾಸದಲ್ಲಿ- ರಂಗಪ್ರವೇಶ ಮಾಡಿ ಇಂದಿಗೂ ತಮ್ಮ ಕಲಾಸೇವೆಯನ್ನು ಸಮರ್ಪಕವಾಗಿ ನಿರ್ವಹಿಸಿಕೊಂಡು ಹೋಗುತ್ತಲಿರುವವರು ಕೆಲವರಿದ್ದಾರೆ. ಅವರೆಲ್ಲರನ್ನೂ ನಾನು ಪ್ರತ್ಯೇಕವಾಗಿ ಹೆಸರಿಸಬೇಕಾಗಿಲ್ಲ.

15
ಡಿಸೆ

ಮೂಢನಂಬಿಕೆಗಳು ಅಂಧಾನುಕರಣೆಯೇ ?

-ರಾವ್ ಎವಿಜಿ

ಮೂಢನಂಬಿಕೆ ಎಂದರೇನು? ಈ ಪ್ರಶ್ನೆ ನನ್ನಲ್ಲಿ ಉದ್ಭವಿಸಲು ಕಾರಣವಾದದ್ದು ಹಾಲಿ ಅಸ್ತಿತ್ವದಲ್ಲಿ ಇರುವ ಕೆಲವು ಮತೀಯ ಆಚರಣೆಗಳ ಪರ-ವಿರೋಧ ವಾದಗಳು. ಇದಕ್ಕೆ ಸಂಬಂಧಿಸಿದಂತೆ ನನ್ನ ಗಮನ ಸೆಳೆದ ಪತ್ರಿಕೆಗಳಲ್ಲಿ ವರದಿ ಆದ ಮತೀಯ ಆಚರಣೆಗಳು ಇವು:

(೧) ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಲು ಹಿಂದಿನಿಂದ ಆಚರಣೆಯಲ್ಲಿ ಇರುವ ‘ಬ್ರಾಹ್ಮಣರು ಉಂಡೆದ್ದ ಎಂಜಲೆಲೆಗಳ ಮೇಲೆ ಉರುಳು ಸೇವೆ ಮಾಡುವ ಮಡೆಸ್ನಾನ ಪದ್ಧತಿ’

(೨) ಗುಲ್ಬರ್ಗ ಜಿಲ್ಲೆಯಲ್ಲಿ ಆಚರಣೆಯಲ್ಲಿ ಇರುವ ‘ಸೂರ್ಯಗ್ರಹಣ ಕಾಲದಲ್ಲಿ ಸುಮಾರು ೬ ತಾಸು ಕಾಲ ಮಕ್ಕಳನ್ನು ಆಂಗವೈಕಲ್ಯದ ನಿವಾರಣೆಗಾಗಿ ಕುತ್ತಿಗೆಯ ತನಕ ಭೂಮಿಯಲ್ಲಿ ಹುಗಿದಿರಇಸುವ ಪದ್ಧತಿ’

(೩) ಮಹಾರಾಷ್ಟ್ರದ ಶೋಲಾಪುರದಲ್ಲಿ ಆಚರಣೆಯಲ್ಲಿ ಇರುವ  ‘ಸುಮಾರು  ೫೦ ಅಡಿ ಎತ್ತರದಿಂದ ಹಸುಗೂಸುಗಳನ್ನು ಕೆಳಗೆ ಬಿಗಯಾಗಿ ಎಳದು ಹಿಡಿದುಕೊಂಡಿರುವ ಬೆಡ್ ಶೀಟಿಗೆ ಎತ್ತಿ ಹಾಕುವ ಪದ್ಧತಿ’

(೪) ತಮಿಳುನಾಡಿನಲ್ಲಿ ಆಚರಣೆಯಲ್ಲಿ ಇರುವ ‘ಗಲ್ಲದ ಮೂಲಕ ಚೂಪಾದ ದಬ್ಬಳದಂಥ ಸಾಧನಗಳನ್ನು, ಬೆನ್ನಿನ ಚರ್ಮಕ್ಕೆ ಕಬ್ಬಿಣದ ಕೊಕ್ಕೆಗಳನ್ನು ಸಿಕ್ಕಿಸಿಕೊಂಡು ಆವೇಶದಿಂದ ಕುಣಿಯುವ ಕಾವಡಿ ಆಟಮ್ ಪದ್ಧತಿ’

(೫) ಭಾರತದ ಗಡಿಗೆ ತಾಗಿಕೊಂಡಿರುವ ನೇಪಾಳದ ಹಳ್ಳಿಯೊಂದರಲ್ಲಿ  ೫ ವರ್ಷಕ್ಕೊಮ್ಮೆ ಜರಗುವ ಹಿಂದೂ ಹಬ್ಬದಲ್ಲಿ ಸುಮಾರು ೨೫೦೦೦೦ ಕ್ಕೂ ಅಧಿಕ ಪ್ರಾಣಿಗಳನ್ನು (ವಿಶೇಷತಃ ಎಮ್ಮೆಗಳನ್ನು) ಬಲಿ ಕೊಡುವ ಪದ್ಧತಿ

(೬) ಒರಿಸ್ಸಾದ ಕೆಲವೆಡೆ ಆಚರಣೆಯಲ್ಲಿ ಇರುವ ‘ಪುಟ್ಟ ಬಾಲಕರನ್ನು ನಾಯಿಯೊಂದಿಗೆ ಮದುವೆ ಮಾಡುವ ಪದ್ಧತಿ’

(೭) ಚಾಮರಾಜನಗರ ಜಿಲ್ಲೆಯಲ್ಲಿ ಸುಬ್ರಹ್ಮಣ್ಯ ಷಷ್ಠಿಯಂದು ಆಚರಿಸುವ ‘ಹುತ್ತಕ್ಕೆ ಪೂಜೆ ಸಲ್ಲಿಸಿ ಅದರ ಮೇಲೆ ಒಂದು ಕೋಳಿಮೊಟ್ಟೆ ಇಟ್ಟು (ಸಾಮಾನ್ಯವಾಗಿ ಹೆಂಗಸರು) ಕೋಳಿಯ ಕತ್ತು ಕೊಯ್ದು ಬಿಸಿರಕ್ತ ಸುರಿಯುವ ಪದ್ಧತಿ’

ಇಲ್ಲಿ ನಮೂದಿಸಿರುವ ಪ್ರತೀ ಆಚರಣೆಯನ್ನು ಸಮರ್ಥಿಸಿಕೊಳ್ಳಲು ‘ಅನಾದಿಕಾಲದಿಂದಲೂ ಆಚರಣೆಯಲ್ಲಿದೆ’, ‘ಆಚರಣೆಯಿಂದ ಅನೇಕರಿಗೆ ಒಳ್ಳೆಯದಾಗಿದೆ’, ‘ಅನೇಕರಿಗೆ ರೋಗ ವಾಸಿ ಆಗಿದೆ’ ‘ನಮಗೆ ಮನಶ್ಶಾಂತಿ ದೊರೆತಿದೆ’, ‘ಇತರರಿಗೆ ತೊಂದರೆ ಕೊಡುವುದಿಲ್ಲ’ ಮುಂತಾದ ವಾದಗಳನ್ನು ಮುಂದಿಡುತ್ತಾರೆ. ಇವುಗಳನ್ನು ‘ಆಧ್ಯಾತ್ಮಿಕ ಪ್ರತೀಕಗಳಾಗಿ’ ಏಕೆ ಪರಿಗಣಿಸ ಬೇಕು ಅನ್ನುವುದನ್ನು ವಿವರಿಸುವುದೂ ಉಂಟು. ಇವು ‘ಅಮಾನವೀಯ’, ‘ಅನಾಗರೀಕ’. ‘ವೈದಿಕ ಸಂಪ್ರದಾಯವಾದಿಗಳು ಅರ್ಥಾತ್ ಬ್ರಾಹ್ಮಣ ವರ್ಗದವರು ಹಿಂದುಳಿದವರನ್ನೂ ದಲಿತರನ್ನೂ ಶೋಷಿಸಲೋಸುಗವೇ ಹುಟ್ಟುಹಾಕಿ ಪೋಷಿಸಿಕೊಂಡು ಬಂದಿರುವ ಮೂಢನಂಬಿಕೆಗಳು’ ಎಂದೆಲ್ಲ ವಿರೋಧಿಸುವವರೂ ಇದ್ದಾರೆ. ಇರುವ   ಅಸಂಖ್ಯ ಸ್ವಘೋಷಿತ ಮತ್ತು ಪರಂಪರಾಗತ ಮಠಾಧಿಪತಿಗಳ ಪೈಕಿ ಬಹುತೇಕರು ಈ ಕುರಿತು ‘ದಿವ್ಯಮೌನ’ ತಳೆದಿದ್ದಾರೆ, ಕೆಲವರು ‘ಇವೆಲ್ಲ ನಂಬಿಕೆಯ ಪ್ರಶ್ನೆಗಳು, ಬಲು ಹಿಂದಿನಿಂದ ಪರಂಪರಾಗತ ನಂಬಿಕೆಯನ್ನು ಪ್ರಶ್ನಿಸಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಸರಿಯಲ್ಲ’, ಆತ್ಮಸಂತೋಷಕ್ಕಾಗಿ ಅವರಿಗೆ ಸರಿ ಅನ್ನಿಸಿದ್ದನ್ನು ಮಾಡುವ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುವುದು ಸರಿಯೇ?’ ಅನ್ನುವುದರ ಮೂಲಕ ಈ ಆಚರಣೆಗಳನ್ನು ಪರೋಕ್ಷವಾಗಿ ಪೋಷಿಸುತ್ತಿದ್ದಾರೆ. ಮತ್ತಷ್ಟು ಓದು »

15
ಡಿಸೆ

ಯಥಾ ಗುರು ಹಾಗೆ ಶಿಷ್ಯ

ಪವನ್ ಪಾರುಪತ್ತೇದಾರ

ರಾಘವೇಂದ್ರ ಭವನದ ಸರ್ಕಲ್ ನ ಬಳಿಯ ಬೇಕರಿಯಲ್ಲಿ ನಾನು ಮತ್ತೆ ಗೆಳೆಯ ಯಾದವ್ ಕೆಟ್ಟದ್ದನ್ನ ಸುಡುತ್ತ ನಿಂತಿದ್ದೆವು. ಹಾಗೆ ಮಾತನಾಡುತ್ತಿರುವಾಗ ನಮ್ಮ ಮಾತುಗಳು ಕನಸಿನ ಬಗ್ಗೆ ಹೊರಟಿತು. ನಾನು ಹೇಳಿದೆ, ಮಗ ಕನಸು ಕಾಣಬೇಕು ಮಗ ಯಾವಾಗಲು, ಆಗಲೇ ಎತ್ತರಕ್ಕೆ ಬೆಳೆಯಕ್ಕೆ ಸಾಧ್ಯವಾಗೋದು ಅಂತ. ಯಾದವ್ ಒಂದು ರೀತಿಯ ಮಾರ್ಮಿಕವಾದ ನಗು ತೋರಿ ಶಾಸ್ತ್ರೀ ನಿದ್ದೆ ಮಾಡಿದ್ರೆ ತಾನೆ ಮಗ ಕನಸು ಕಾಣಕ್ ಆಗೋದು?? ನಿದ್ದೇನೆ ಇಲ್ಲ ಅಂದ್ರೆ ಕನಸು ಎಲ್ಲಿಂದ ಕಾಣನ ಹೇಳು ಅಂದ.ನಿದ್ದೇನೆ ಮಾಡದೇ ಕನಸು ಕಂಡ್ರೆ ಹಗಲುಗನಸು ಕಾಣಬೇಡ ಅಂತ ಬೈತಾರೆ. ಕನಸು ಕಾಣಕ್ಕದ್ರು  ನಿದ್ದೆ ಮಾಡೋಣ ಅಂದ್ರೆ ಎಲ್ಲಿ ಸ್ವಾಮಿ ಬರುತ್ತೆ ನಿದ್ರೆ?? ಪಕ್ಕದ ಮನೆ ಪದುಮಕ್ಕ ನಮಮ್ಮ ನೀರಿಗೆ ಹೋದಾಗ ಏನ್ರಿ ಗಿರಿಜಮ್ಮ ನಿಮ್ಮ ಮಗ ಅದೇನೋ ಇಂಜಿನಿಯರಿಂಗ್ ಓದಿದ್ದನಲ್ಲ ಕೆಲಸ ಸಿಕ್ತ ಅವನಿಗೆ ಅಂತ ಕೇಳಿದಾಗ ನಮಮ್ಮ ಇಲ್ಲ ಕಣ್ರೀ ಯಾವ್ದೋ recession  ಅಂತ ತೊಂದರೆ ಬಂದಿದೆ ಅಂತೆ ಅದದ್ಮೇಲೆ ಸಿಗತ್ತೆ ಅಂತ ಹೇಳ್ದ ಅಂತ ಹೇಳೋ ಮಾತು ಕೇಳಿದಾಗ, ನಮಪ್ಪ ಅವರ ಹೊಲದಲ್ಲಿ ಕೆಲಸ ಮಾಡುವ ಕೂಲಿಯವರು ಏನ್ ಸಾಮಿ ನಮ್ ಚಿಕ್ ಐನೋರು ಎಲ್ಲನ ಕೆಲಸಕ್ಕೆ ಹೋಗ್ತವ್ರ, ಇಲ್ಲ ಮನೇಲೆ ಮುದ್ದೆ ಮುರಕೊಂಡು ಅವ್ರ ಇನ್ನ ಅಂತ ಕೇಳಿದಾಗ ನನ್ನಪ್ಪ ನನ್ನ ಕಡೆ ನೋಡಿ ಹುಡುಕ್ತ ಇದ್ದನಪ್ಪ ಇನ್ನು ಯಾವಾಗ್ ಸಿಗತ್ತೋ ಗೊತ್ತಿಲ್ಲ ಅಂತ ಹೇಳೋವಾಗ ನೋಡಿ ಇನ್ನು ನನಗೆ ನಿದ್ದೆ ಅದ್ರು ಎಲ್ಲಿ ಬರಲು ಸಾಧ್ಯ?? ನನಗೆ ಮಾತ್ರ ಅಲ್ಲ ಸ್ವಾಭಿಮಾನ ಇರುವ ಯಾವುದೊ ವ್ಯಕ್ತಿಗೂ ನಿದ್ದೆ ಬರಲ್ಲ ಇನ್ನು ಕನಸು ಕಾಣುವುದು ಬಹಳ ದೂರದ ಮಾತು ಅಂತ ಒಂದೇ ಮಾತಿನಲ್ಲಿ ಹೇಳಿಬಿಟ್ಟ.

ಸಮಾಜ ಎಷ್ಟು ಬದಲಾಗಿಬಿಟ್ಟಿದೆ ಅಲ್ವಾ?? ಇಲ್ಲ ನಾವೇ ಬದಲಾಗಿದ್ದಿವ?? ಮೊದಲಿಗೆ ೧೦ನೇ ಕ್ಲಾಸ್ ಓದಿದರೆ ಸಾಕು ಕೆಲಸ ಸಿಕ್ತಿತ್ತಂತೆ ನಮ್ ತಾತ ಓದಿದ್ದು ಬರಿ ೭ನೇ ಕ್ಲಾಸು ಲೋವೆರ್ ಸೆಕೆಂಡರಿ ಅಂತೆ, ಅವರು ನಮ್ಮೂರಲ್ಲಿ ಫೇಮಸ್ ಎಲೆಕ್ಟ್ರಿಕ್ contractor. ಇನ್ನು ನಮ್ಮ ತಂದೆ PUC ಓದಿದಕ್ಕೆ ಎಷ್ಟೋ ಸರ್ಕಾರೀ ಕೆಲಸಗಳು ಬಂದಿದ್ದವಂತೆ.ನಮ್ಮ ಅಣ್ಣಂದಿರು ಡಿಗ್ರಿ ಓದಿ ಒಳ್ಳೆಯ ಕಡೆ ಕೆಲಸಗಳಲ್ಲೂ ಇದ್ದಾರೆ. ಆದ್ರೆ ಈಗ ಇಂಜಿನಿಯರಿಂಗ್ ಮಡಿ MBA  ಮಾಡಿ. MA ಗಳು MCA ಗಳು ಎಲ್ಲ ಮಾಡಿಯೂ ಕೆಲಸ ಇಲ್ಲದೆ ಬೀದಿ ಬೀದಿ ಅಲೆಯುತ್ತಿರುತ್ತಾರೆ. ಮೊನ್ನೆ ಮೊನ್ನೆ syntel ಎಂಬ ಕಂಪನಿ ಗೆ ವಾಕ್-ಇನ್ ಇಂಟರ್ವ್ಯೂ ಗೆ ಎಂದು ಹೋಗಿದ್ದೆ. ಇದ್ದ ಉದ್ಯೋಗಾವಕಾಶ ಸುಮಾರು ೬೦ ಅಂತೆ ಅಲ್ಲಿ ೬೦೦೦ ಕ್ಕೂ ಹೆಚ್ಚು ಜನ ಗೇಟ್ ನ ಹೊರಗೆ ಕಾಯುತಿದ್ದೆವು. ಅದರಲ್ಲಿ ೩೦೦೦ ಉತ್ತರ ಭಾರತೀಯರು ಒಂದು ೨೦೦೦ ತಮಿಳುನಾಡು ಮತ್ತು ಆಂಧ್ರ ಮತ್ತು ಕೇರಳಿಗರು ನಮ್ಮ ಜನ ಸುಮಾರು ೧೦೦೦. ಗೇಟ್ ತೆಗೆದಿದ್ದೆ ತಡ ಒಳ್ಳೆ ತಿರುಪತಿ ವೆಂಕಟರಮಣನ ದರ್ಶನಕ್ಕೆ ಭಕ್ತರು ನುಗ್ಗುವಂತೆ ನುಗ್ಗಲು ಆರಂಭಿಸಿದರು. ನಾನು ನನ್ನ ಗೆಳೆಯ ನುಗ್ಗಲು ಸಾಧ್ಯವಾಗದೆ ಬೇಡ syntel ಸಹವಾಸ ಎಂದು ವಾಪಾಸ್ ಬಂದೆವು. ಇಂತಹ  ಅದೆಷ್ಟೋ  ನಿದರ್ಶನಗಳು  ನಮ್ಮ  ಮುಂದೆ ಇದ್ದೇ ಇವೆ. ಮತ್ತಷ್ಟು ಓದು »

14
ಡಿಸೆ

ಮೆಸೇಜೆಂಬ ಅಂಚೆ

-ಪ್ರಶಸ್ತಿ.ಪಿ

ನಮ್ಮ ಗುಂಡಣ್ಣ ಏನೋ ಬರೀತ ಕುತ್ಕಂಡಿದ್ದಾಗ ಅವ್ನ ಗೆಳೆಯರೆಲ್ಲ ಒಬ್ಬೊಬ್ರಾಗಿ ಅಲ್ಲಿ ಬಂದು ಸೇರ್ಕಂಡ್ರು. ಅವ್ನ ಬರೆಯೋ ಪ್ಯಾಡೂ ಕಸ್ಕಂಡು ಅದ್ರ ತಲೆಬರಹ ಓದಿದ ಟಾಂಗ್ ತಿಪ್ಪ ಅಲಿಯಾಸ ತಿಪ್ಪೇಶಿ.. “ಮೆಸೇಜೆಂಬ ಅಂಚೆ” .. ಎಂತ ಮಾರಾಯ ಪಂಚೆ ಅಂದ್ಯ? ಅದು ನನ್ನ ಮೆಚ್ಚಿನ ಉಡುಪು ಗುತ್ತುಂಟಾ ಅಂತ ಬಂದ ಮಂಗಳೂರು ಮಂಜ ಅಲಿಯಾಸ್ ಮಂಜುನಾಥ. ಪಂಚೆ ಅಲ್ಲ ಮುಂಜು ಅವ್ರೆ ಅಂಚೆ.. ಪೋಸ್ಟು ಅಲ್ವಾ ಮಿಸ್ಟರ್ ರೌಂಡ್ ಅಂತ ಬಂದ್ಳು ಇಳಾ ಅಲಿಯಾಸ್ ಇಳಾದೇವಿ. ಸಂದೇಶ ಹಾಕದು ಜಂಗಮದಾಗೆ, ಅಂಚೆ ಹಾಕದು ಡಬ್ದಾಗೆ. ಅದುಕ್ಕೂ ಇದುಕ್ಕೂ ಎಂತ ಸಂಬಂಧ ಗುಂಡು ಅಂದ್ಲು ಸರಿತಾ. ಹೌದು ಕಣ್ಲಾ, ಏನೂ ತಿಳ್ಯಾಕಿಲ್ಲ, ನೀನೇ ಬುಡ್ಸಿ ಹೇಳಪಾ ಸಾಯಿತಿ ಅಂತ ಕಾಲೆಳೆದ ತಿಪ್ಪೇಶಿ.

ಏ ಥೋ, ಸಾಯಿತಿ ಅಲ್ಲೋ , ಸಾಹಿತಿ.. “ಕೋಣಂಗೆ ಕಿನ್ನರಿ ನಾದನೇ ತಿಳ್ಯಕ್ಕಿಲ್ಲ” ಅಂತ ಹಾಡಕ್ಕೆ ಶುರು ಹಚ್ಕಂಡ ಗುಂಡ..ಎಲ್ಲಾ ನಗಕಿಡಿದ್ರು.  ಕದ್ದಿರೋ ಟ್ಯೂನಿಗೆ ಗೊತ್ತಿರೋ ಗಾದೆ ಸೇರ್ಸಿ ಹೊಸ್ಯೋ ಬದ್ಲು ನೀನು ಬರ್ದಿದ್ದಲಿ ಹೊಸದೇನಿದೆ ಹೇಳು ಅಂದ ತಿಪ್ಪ ಸ್ವಲ್ಪ ಬೇಜಾರಾಗಿ. ಮುಂಚೆ ಎಲ್ಲ ಅಂಚೆ ಕಳಿಸ್ತಿದ್ವಿ, ಈಗ ಮೆಸೇಜು ಅಷ್ಟೆಯ ಬೇರೆಲ್ಲಾ ಅಲ್ಲಿದ್ದಿದ್ದೇ ಇಲ್ಲಿ, ಇಲ್ಲಿದ್ದದ್ದೇ ಅಲ್ಲಿ ಅಂದ ಗುಂಡ. ಮಾರ್ರೆ ವೇದಾಂತ ತರ ಹೇಳೋದು ಬಿಟ್ಟು ಸ್ವಲ್ಪ ಬಿಡ್ಸಿ ಹೇಳೂಕಾತ್ತ ? ಅಂದ ಮಂಜ. ಸರಿತಾ, ಇಳಾನೂ ಅದೇ ಸರಿ ಅನ್ನೋ ತರ ಹೂಂ ಅಂದ್ರು..

ವಿಳಾಸ ಸರಿ ಇದ್ರೂ ಅಂಚೆ ಕಳ್ಸಿದ್ದು ಕಳ್ದೇ ಹೋಗ್ತಿತ್ತು ಕೆಲೋ ಸಲ.ಅದೇ ತರ ಸಂದೇಶಗಳ “ಕಳಿಸುವಿಕೆ ವಿಫಲ” ಎಂಬ Delivery Report ಉ ಅಂದ ಗುಂಡ. ಎಲ್ಲರಿಗೂ ಒಂದ್ಸಲ ಕತ್ಲಲ್ಲಿ ಬಲ್ಬು ಹತ್ಕಂಡಗಾಯ್ತು. ಗುಂಡನ ಮುಖದಲ್ಲಿ ಈಗ ನಗು ಮೂಡಿತು.. ಮುಂದುವರ್ಸಿದ ಹಾಗೆ.

ಮತ್ತಷ್ಟು ಓದು »

13
ಡಿಸೆ

ಈ ‘ದಿನಾಚರಣೆ’ಗಳು ಲೇಖನ, ರಾಲಿಗಳಿಗೆ ಮಾತ್ರ ಸೀಮಿತ ಯಾಕೆ?

-ರಶ್ಮಿ. ಕಾಸರಗೋಡು

2011 ಕ್ಯಾಲೆಂಡರ್ ವರ್ಷ ಮುಗಿಯುತ್ತಾ ಬಂದಿದೆ. ಹಳೆಯ ಕ್ಯಾಲೆಂಡರ್್ನ್ನು ಬದಲಿಸಿ ಹೊಸ ಕ್ಯಾಲೆಂಡರ್್ಗೆ ಜಾಗ ಕಲ್ಪಿಸುವ ಹೊಸ ವರ್ಷಕ್ಕೆ ದಿನ ಎಣಿಕೆ ಆರಂಭವಾಗಿದೆ. ಹೌದು, ಮನೆಯಲ್ಲಿ ಹೊಸ ಕ್ಯಾಲೆಂಡರ್ ನೇತು ಹಾಕುವಾಗ “ವರ್ಷ ಎಷ್ಟು ಬೇಗ ಕಳೆದು ಹೋಯಿತಲ್ವಾ..ಗೊತ್ತೇ ಆಗಿಲ್ಲ” ಎಂಬ ಉದ್ಗಾರ ಸರ್ವೇ ಸಾಮಾನ್ಯ. ನಾವು ಚಿಕ್ಕವರಿರುವಾಗ ಅಂದ್ರೆ ಶಾಲೆಗೆ ಹೋಗುವ ಸಮಯದಲ್ಲಿ ಮನೆಗೆ ಹೊಸ ಕ್ಯಾಲೆಂಡರ್ ತಂದ ಕೂಡಲೇ ಅದರಲ್ಲಿನ ಕೆಂಪು ಬಣ್ಣದ ದಿನಾಂಕ ಎಷ್ಟು ಇದೆ ಅಂತಾ ಲೆಕ್ಕ ಹಾಕುತ್ತಿದ್ದೆವು. ಶಾಲೆಗೆ ಎಷ್ಟು ದಿನ ರಜೆ ಸಿಗುತ್ತೆ? ಎಂಹ ಕುತೂಹಲ ನಮ್ಮಲ್ಲಿ. ಕೆಲವೊಮ್ಮೆ ಸಾರ್ವಜನಿಕ ರಜಾದಿನಗಳು ಶನಿವಾರ, ಭಾನುವಾರ ಬಂದರೆ ಒಂದು ರಜೆ ನಷ್ಟವಾಯಿತಲ್ಲಾ ಅಂತಾ ಬೇಸರವೂ ಆಗುತ್ತಿತ್ತು. ಹಾಗಂತ ಕ್ಯಾಲೆಂಡರ್್ನಲ್ಲಿ ರಜೆ ಇರುವ ದಿನಗಳು ಸೇರಿ ಇನ್ನೂ ಹೆಚ್ಚಿನ ರಜೆಗಳು (ಕೇರಳದಲ್ಲಿ ಬಂದ್ ಸರ್ವೇ ಸಾಮಾನ್ಯ ಇಂತಿರುವಾಗ ಅಲ್ಲೂ ಒಂದೆರಡು ರಜೆ, ಅದರೆಡೆಯಲ್ಲಿ ಭಾರೀ ಮಳೆ, ಯಾವುದಾದರೂ ಮಹಾನ್ ವ್ಯಕ್ತಿಗಳು ಸಾವನ್ನಪ್ಪಿದರೆ ಸಿಗುವ ಶೋಕ ರಜೆ, ಓಣಂ, ಕ್ರಿಸ್್ಮಸ್ ಮೊದಲಾದ ಹಬ್ಬಗಳಿಗೆ ಸಿಗುವ 10 ದಿನಗಳ ರಜೆ) ಸಿಕ್ಕಿದರೂ ಶಾಲಾ ದಿನಗಳಲ್ಲಿ ಅದೂ ಕಮ್ಮಿಯೇ.

ಮತ್ತಷ್ಟು ಓದು »

13
ಡಿಸೆ

ದೇವರು, ಧರ್ಮ ಮತ್ತು ಮತ

–  ಗೋವಿಂದ ರಾವ್ ವಿ ಅಡಮನೆ

ನಿಮಗೆ ದೇವರ ಅಸ್ತಿತ್ವದಲ್ಲಿ ನಂಬಿಕೆ ಇದೆಯೇ? ಎಂಬ ಬ್ಲಾಗಿನಲ್ಲಿ ನನ್ನ ದೃಷ್ಟಿಯಲ್ಲಿ ದೇವರು ಎಂದರೇನು ಎಂಬುದನ್ನು ವಿವರಿಸುತ್ತಾ – ನಾನು ನಂಬಿರುವ ‘ವಿಚಿತ್ರತೆ’ ದೇವರು ಬೇಕಾಬಿಟ್ಟಿಯಾಗಿ ಕಾರ್ಯಮಾಡುವಂತಿಲ್ಲ. ಅರ್ಥಾತ್, ಅದು ‘ಸರ್ವಶಕ್ತ’ವಲ್ಲ. ಎಂದೇ, ಅದನ್ನು ಓಲೈಸಲೂ ಸಾಧ್ಯವಿಲ್ಲ. ಅದು ಕರುಣಾಮಯಿಯೂ ಅಲ್ಲ, ನಿರ್ದಯಿಯೂ ಅಲ್ಲ. ಅರ್ಥಾತ್, ಜೀವಿಸಹಜವಾದ ಸಂವೇದನೆಗಳೇ ಆಗಲಿ, ಭಾವೋದ್ವೇಗಳೇ ಆಗಲಿ, ಜನನ-ಮರಣಗಳೇ ಆಗಲಿ ಇಲ್ಲದಿರುವ ಸ್ಥಿತಿ ಈ ‘ವಿಚಿತ್ರತೆ’. ಎಂದೇ, ಅದು ನಿರ್ವಿಕಾರ. ವಿಶ್ವದಲ್ಲಿ ಜರಗುವ ಪ್ರತಿಯೊಂದು ವಿದ್ಯಮಾನವೂ ‘ವಿಚಿತ್ರತೆ’ಯಲ್ಲಿ ಅಂತಸ್ಥವಾಗಿದ್ದ ಮೂಲ ನಿಯಮದ ಮತ್ತು ಅದರ ಅನುನಿಯಮಗಳಿಗೆ ಅನುಗುಣವಾಗಿಯೇ ಜರಗುತ್ತದೆ ಎಂಬುದು ನನ್ನ ನಂಬಿಕೆ ಎಂದು ಈಗಾಗಲೇ ಘೋಷಿಸಿದ್ದೇನೆ. ‘ವಿಚಿತ್ರತೆ’ಯಲ್ಲಿ ಅಂತಸ್ಥವಾಗಿರುವ ಮೂಲ ಮತ್ತು ಅನುನಿಯಮಗಳನ್ನು ತಿಳಿದು ಅವಕ್ಕೆ ಅನುಗುಣವಾಗಿ ವರ್ತಿಸುವುದೇ ‘ಧರ್ಮ’ ಎಂಬುದು ನನ್ನ ನಿಲುವು – ಎಂದು ಹೇಳಿದ್ದೆ. ಈ ಬ್ಲಾಗಿನಲ್ಲಿ ಅದೇ ವಿಚಾರಧಾರೆಯನ್ನು ಮುಂದುವರಿಸುತ್ತಾ ನನ್ನ ದೃಷ್ಟಿಯಲ್ಲಿ ಧರ್ಮ ಎಂದರೇನು ಎಂಬುದನ್ನು ತಿಳಿಸಲು ಪ್ರಯತ್ನಿಸುತ್ತೇನೆ. ಮೇಲ್ನೋಟಕ್ಕೆ ಸರಳವಾಗಿ ಗೋಚರಿಸುವ – ‘ವಿಚಿತ್ರತೆ’ಯಲ್ಲಿ ಅಂತಸ್ಥವಾಗಿರುವ ಮೂಲ ಮತ್ತು ಅನುನಿಯಮಗಳನ್ನು ತಿಳಿದು ಅವಕ್ಕೆ ಅನುಗುಣವಾಗಿ ವರ್ತಿಸುವುದೇ ‘ಧರ್ಮ’- ಎಂಬ ವ್ಯಾಖ್ಯಾನ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಮೂಲ ಮತ್ತು ಅನುನಿಯಮಗಳೇನು ಎಂಬುದನ್ನು ತಿಳಿಸುವುದಿಲ್ಲ. ಬಹುಶಃ ಎಲ್ಲರೂ ಒಪ್ಪುವ ರೀತಿಯಲ್ಲಿ ಇವನ್ನು ತಿಳಿಸುವ ಸಾಮರ್ಥ್ಯ ಯಾರಿಗೂ ಇಲ್ಲವೋ ಏನೋ. ಎಂದೇ, ಈ ದಿಶೆಯಲ್ಲಿ ಪ್ರಯತ್ನಿಸಿದವರ ಪೈಕಿ ಯಾರಿಗೂ ಸರ್ವಮಾನ್ಯತೆ ದೊರೆತಿಲ್ಲ. ದೊರೆತಿದ್ದಿದ್ದರೆ ಇಂದು ನಮಗೆ ಗೋಚರಿಸುತ್ತಿರುವ ‘ಧರ್ಮಯುದ್ಧ’ಗಳು ನಡೆಯುತ್ತಲೇ ಇರಲಿಲ್ಲ, ‘ಮತಾಂತರ’ದ ಪ್ರಶ್ನೆ ಉದ್ಭವಿಸುತ್ತಲೇ ಇರಲಿಲ್ಲ.

ಮತ್ತಷ್ಟು ಓದು »

12
ಡಿಸೆ

ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ,ಜಾತಿಗಾಗಿಯಲ್ಲ

– ರಾಕೇಶ್ ಶೆಟ್ಟಿ

ಇದನ್ನ ಈ ದೇಶದ ಕರ್ಮ ಅಂತಲೇ ಅನ್ನಬೇಕೇನೋ,  ಅಂದುಕೊಂಡಂತೆ ‘ಮಡೆ ಸ್ನಾನ’ದ ‘ಮಡೆ'(ಮಡೆ=ಎಂಜಲು) ಉರುಳದವರ ಮೇಲೆಯೂ ಬೀಳುತ್ತಿದೆ.ಇಷ್ಟು ದಿನ ಉರುಳಾಡಿದ್ದು ಮನುಷ್ಯರಾದರೆ ಈಗ ಸಮಸ್ತ ಜಾತಿಗಳು ಬಿದ್ದು ಉರುಳಾಡುತ್ತಿವೆ.ಮಡೆ ಸ್ನಾನವನ್ನು ವಿರೋಧಿಸಿ ನಾನು ಈ ಹಿಂದೆ ಬರೆದ ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಲ್ಲಿ ‘ಅದು ಬ್ರಾಹ್ಮಣರ ಎಂಜಲೆಲೆ’ ಅನ್ನುವ ಕಾರಣಕ್ಕೆ ವಿರೋಧಿಸುತಿದ್ದಿರ ಅನ್ನುವಂತಹ ಪ್ರತಿಕ್ರಿಯೆಗಳು ಬ್ಲಾಗಿನಲ್ಲಿ/ಮಿಂಚೆಗಳ ಮೂಲಕ ಬಂದಿವೆ. ನನ್ನ ಲೇಖನದಲ್ಲೂ ಒಂದು ಮಾತನ್ನು ಸ್ಪಷ್ಟವಾಗಿ ಹೇಳಿದ್ದೆ, ಅದ್ಯಾವ ಜಾತಿಯವರು ತಿಂದು ಮತ್ತಿನ್ಯಾವಾ  ಜಾತಿಯವ ಅದರ ಮೇಲೆ ಉರುಳಾಡುವುದು ಅಷ್ಟೇ ಅಸಹ್ಯಕರ’  ಅಂತ.

ಅಂದರೆ,ಅದು ಕುಕ್ಕೆಯ ಮಡೆ ಸ್ನಾನವಿರಲಿ ಅಥವಾ ತುರುವೇಕೆರೆಯ ಮಡೆಸ್ನಾನವಿರಲಿ ಎರಡೂ ಅಸಹ್ಯಕರವೇ, ಎರಡೂ ಖಂಡನೀಯವೇ.ಮಡೆ ಸ್ನಾನದ ಪರ-ವಿರೋಧ ಮಾತನಾಡುವವರು ನೆನಪಿಡಬೇಕಾದದ್ದು ‘ಈ ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ ಹೊರತು ಜಾತಿಗಾಗಿಯಲ್ಲ’ ಅನ್ನುವುದು.

ಮತ್ತಷ್ಟು ಓದು »

12
ಡಿಸೆ

ನಾವು ನಿಜಕ್ಕೂ ತಾಂತ್ರಿಕತೆಯನ್ನು ಬಳಸ್ತಾ ಇದೇವ?

-ಮುರಳಿಧರ ದೇವ್
ಬೆಂಗಳೂರನ್ನು ವಿಶ್ವದಾದ್ಯಂತ ತಾಂತ್ರಿಕತೆಯಲ್ಲಿ ಮುಂದಿರುವ ನಗರವೆಂದು ಗುರುತಿಸಲಾಗುತ್ತೆ, ಅಲ್ಲದೆ ಜಗತ್ತಿನ ಬಹುತೇಕ ಕಂಪನಿಗಳು ನಮ್ಮ ಬೆಂಗಳೂರಿನಲ್ಲಿ ಅವರ ಒಂದು ವಿಭಾಗ ಅಥವಾ ಬ್ರ್ಯಾಂಚ್ ಇರಬೇಕೆಂದು ಬಯಸುತ್ತವೆ. ಬಹುತೇಕ ಸಾಫ್ಟವೇರ್ ಅನ್ನು ಅಭಿವೃದ್ದಿ ಪಡಿಸೋದರಲ್ಲೂ ಬೆಂಗಳೂರಿಗರು ಮುಂದಿದ್ದಾರೆ. ಆದರೆ ನಮ್ಮದೇ ರಾಜ್ಯದಲ್ಲಿ ಈ ತಾಂತ್ರಿಕತೆಯನ್ನು ಉಪಯೋಗ ಪಡೆಯೋದರಲ್ಲಿ ತುಂಬಾ ಹಿಂದೆ ಉಳಿದಿದಿವಿ ಅಂತ ಅನ್ಸುತ್ತೆ. ಬೆಂಗಳೂರಿನ ಬಹುತೇಕ ಬಿ.ಎಂ.ಟಿ.ಸಿ. ಬಸ್ಸುಗಳಲ್ಲಿ ಕೆಲ ದಿನಗಳಿಂದ ಬಸ್ ನಂಬರ್, ಮಾರ್ಗ ಇತ್ಯಾದಿಗಳನ್ನು ತೋರಿಸಲು ಎಲ್.ಇ.ಡಿ. ಗಳನ್ನೂ ಬಳಸ್ತಾ ಇದಾರೆ. ಇದರಿಂದ ಕೇವಲ ಕೆಲ ನಿಮಿಷದಲ್ಲೇ ರೂಟನ್ನು ಚಾಲಕರು ಬದಲಾಯಿಸಬಹುದು. ಆದರೆ ಮಾರ್ಗ ಇತ್ಯಾದಿ ತೋರಿಸುವಾಗ ಹೆಚ್ಚಾಗಿ ಇಂಗ್ಲಿಷ್ ಕಾಣ್ತಾ ಇದೆ, ಹಾಗಂತ ಕನ್ನಡ ಇಲ್ಲ ಅಂತೇನು ಅಲ್ಲ, ಮಾಹಿತಿ ಇಂಗ್ಲಿಷ್ನಲ್ಲಿ ೫ ಸೆಕೆಂಡ್ಸ್ ಬಂದ್ರೆ ಕನ್ನಡದಲ್ಲಿ ಕೇವಲ ೨ಡೇ ಸೆಕಂಡ್ ಬರುತ್ತೆ. ಇದನ್ನು ಪ್ರಶ್ನಿಸೋಕೆ ಹೋದರೆ ತಾಂತ್ರಿಕತೆ ಇರೋದೇ ಹೀಗೆ ಅಂತ ಸಿದ್ದ ಉತ್ತರ ಸಿಗುತ್ತೆ. ಅಲ್ಲದೆ ಟಿಕೆಟನ್ನು ಮುದ್ರಿಸೋ ಯಂತ್ರದಿಂದ ಟಿಕೆಟ್ ಪಡೆದರೆ ಅದರಲ್ಲಿ ಬಿ.ಎಂ.ಟಿ.ಸಿ. ಅಂತ ಬಿಟ್ರೆ ಬೇರೆಲ್ಲೂ ಕನ್ನಡ ಅನ್ನೋ ಪದಾನೆ ಇಲ್ಲ. ಎಲ್ಲಿಂದ, ಎಲ್ಲಿಗೆ, ಮಾರ್ಗ ಯಾವುದು ಎಲ್ಲ ಇಂಗ್ಲಿಷ್ನಲ್ಲೇ ಇರುತ್ತದೆ. ಇದಕ್ಕೂ ಅದೇ ಸಿದ್ದ ತಾಂತ್ರಿಕತೆಯ ಕಾರಣ ಕೊಡ್ತಾರೆ ಅಧಿಕಾರಿಗಳು. ಅಥವಾ ಕನ್ನಡದಲ್ಲಿ ಟಿಕೆಟ್ ಮುದ್ರಿಸೋಕೆ ಟಿಕೆಟ್ನಲ್ಲಿ ಸ್ಥಳದ ಅಭಾವ ಅಂತ ಹೇಳ್ತಾರೆ. ನಿಜಕ್ಕೂ ತಾಂತ್ರಿಕತೆಯಲ್ಲಿ ಇದು ಸಾಧ್ಯವಿಲ್ಲ ಅಂತ ನಂಬೋಣ ಅಂದ್ರೆ ಬೇರೆ ರಾಜ್ಯಗಳಲ್ಲಿ ಈ ಪರಿಸ್ಥೀತಿಯಿಲ್ಲ. ಮತ್ತಷ್ಟು ಓದು »
9
ಡಿಸೆ

ಇಂತಹ ಘಟನೆ ಇನ್ಯಾವ ನಾಡಿನಲ್ಲಿ ನಡೆದೀತು.

– ಸಂತೋಷ್ ಪೂಜಾರಿ

ಸಾರ್ವಜನಿಕ ಕಾರ್ಯಕ್ರಮಲ್ಲಿ ಭಾಗವಹಿಸುವ ಆಸಕ್ತಿ ಅಷ್ಟಕಷ್ಟೆ.ತನಗೆ ಯಾರಾದರೂ ಸನ್ಮಾನ ಮಾಡಿದರೇ ಆ ಬಗ್ಗೆ ಅಸಮಧಾನ ವ್ಯಕ್ತಪಡಿಸುತ್ತಿದ್ದ ಭಾರತದ ಪ್ರಪ್ರಥಮ ಮಹಾ ದಂಡನಾಯಕನಾದ ಫೀಲ್ಡ್ ಮಾರ್ಶಲ್ ಕಾರ್ಯಪ್ಪನವರ ಪ್ರತಿಮೆಗೆ ದಿನಾಂಕ ೧೪/೧೧/೨೦೧೧ ರಂದು ಒದಗಿದ ಸ್ಥಿತಿಯಿಂದಾಗಿ ಭಾರತದ ಸೇನಾ ಜಿಲ್ಲೆಯ ವೀರ ಪರಂಪರೆಯ ಜನರು ನಾಚಿಕೆಯಿಂದ ತಲೆತಗ್ಗಿಸುವಂತಾಗಿದೆ.

 

ಕೊಡಂದೇರ ಮಾದಪ್ಪ  ಕಾರ್ಯಪ್ಪ ೨೮ ಜನರು ೧೮೯೯ ರಂದು ಕೊಡಗಿನ  ಶನಿವಾರ ಸಂತೆಯಲ್ಲಿ ಜನ್ಮತಾಳಿದ ಇವರು ತಮ್ಮ ಪ್ರಾಥಮಿಕ ಹಾಗೂ ಪ್ರೌಡ ವಿಧ್ಯಾಭ್ಯಾಸವು ಮಡಿಕೇರಿಯಲ್ಲಿ ಮುಗಿಸಿ ಕಾಲೇಜು ವಿಧ್ಯಾಭ್ಯಾಸವನ್ನು ಚೆನೈನಲ್ಲಿ ಮುಗಿಸಿತ್ತಾರೆ. ತಮ್ಮ ಕಾಲೇಜು ದಿನಗಳಲ್ಲಿ ಉತ್ತಮ ಕ್ರಿಢಾಪಟುವಾಗಿದ್ದ ಇವರು ಉತ್ತಮ ಹಾಕಿ ಮತ್ತು ಟೆನ್ನಿಸ್ ಆಟಗಾರರಾಗಿದ್ದರು. ನಂತರದಲ್ಲಿ  ಸೈನಿಕ ಸೇರಿದ ಈ ವೀರ ಸೇನಾನಿ ನಂತರ ತಮ್ಮ ಪ್ರಾಮಾಣಿಕತೆ ಶಿಸ್ತು ಹಾಗೂ ತನ್ನ ಕೆಲಸದಿಂದ ಭಾರತ ಮೊದಲ ಮಹಾ ದಂಡನಾಯಕರಾಗಿ ಕಾರ್ಯ ನಿರ್ವಯಿಸಿದ್ದಾರೆ.

ಎರಡನೆ ಪ್ರಪಂಚ ಯುದ್ದದಲ್ಲಿ ಪಾಲ್ಗೊಂಡಿದ್ದ ಎವರು ನಂತರ ೧೯೪೭ ರ ಭಾರತ ಮತ್ತು ಪಾಕಿಸ್ತಾನದ ಯುದ್ಧದಲ್ಲಿ ಭಾರತೀಯ ಸೈನ್ಯವನ್ನು ಮುಂದುವರೆಸಿದರು ಭಾರತದ ಸ್ವತಂತ್ರ ಬಂದ ನಂತರ ಅದರ ಬೆನ್ನ ಹಿಂದೆ ಇಡಿ ಭಾರತಕ್ಕೆ ಆಪತ್ತು ತಂದುಕೊಡುವ ನಮ್ಮ ಬೆನ್ನಿಗೆ ಚೂರಿ ಹಾಕಿದ ಪಾಕಿಸ್ತಾನದ ವಿರುದ್ದ ಯುದ್ದ ಮಾಡಬೇಕಾಯಿತು.ಸ್ವತಂತ್ರ ಭಾರತದ ಮಹಾ ಸೇನಾನಿಯಾದ ಕಾರ್ಯಪ್ಪನವರಿಗೆ ಸ್ವತಂತ್ರ ಬಂದ ತಕ್ಷಣ ಅದರ ಬೆನ್ನಲ್ಲೇ ಮತ್ತೊಂದು ಯುದ್ದವನ್ನು ಎದುರಿಸುವುದು ಮಹಾನ್ ಕಠಿಣ ಸವಾಲಾಗಿತ್ತು ಭಾರತದ ಸ್ವತಂತ್ರ ಆಗ ತಾನೆ ಸಿಕ್ಕ ಕಾರಣ ಸೈನಿಕರಲ್ಲಿ ಶಿಸ್ತು, ಯುದ್ದ ಸಲಕರಣೆಗಳ ಅಲಭ್ಯತೆ ಸೈನಿಕರ ದಕ್ಷತೆ ಇವೆಲ್ಲದರ ಬಗ್ಗೆ ಹೆಚ್ಚಿನ ಗಮನ ಕೊಡಬೇಕಾಯಿತು. ಆದರೆ ಈಗಾಗಲೆ ಎರಡನೇ ಪ್ರಪಂಚ ಯುದ್ದದಲ್ಲಿ ಪಾಲ್ಗೊಂಡ ಅನುಭವವಿದ್ದ ಕಾರ್ಯಪ್ಪನವರಿಗೆ ಸೈನ್ಯವನ್ನು ಮುನ್ನೆಡೆಸುವುದು ಕಠಿಣವಾಗಲಿಲ್ಲ ಅವರು ಅದನ್ನು ಯಶಸ್ವಿಯಾಗಿ ನಿರ್ವಯಿಸಿದರು ಕೊಡ ಯಾವ ದೇಶ ನಮ್ಮ ಜೊತೆಗೆ ಯುದ್ದವನ್ನು ಮಾಡಿ ನಮ್ಮ ಸರ್ವನಾಶ ಮಾಡುವುದರ ಪಣ ತೊಟ್ಟಿತೊ, ಅದೇ ದೇಶ ಮತ್ತೆ ತನ್ನ ಪ್ರಾಣ ಭಿಕ್ಷೆಯನ್ನು ಬೇಡುವ ತರ ಕಾರ್ಯಪ್ಪನವರು ನಮ್ಮ ಹೋರಾಟಾವನ್ನು ಸಂಘಟಿಸಿದರು ಅದು ಅತ್ಯಂತ ಸಣ್ಣದಿನದ ಅಂತರದಲ್ಲಿ ಸುಲಭ ಜಯ ಸಾಧಿಸಿದರು ಭಾರತೀಯರಿಗೆ ಆ ವಿಜಯ ತಂದು ಕೊಟ್ಟಾ ಆತ್ಮ ವಿಶ್ವಾಸ ಇದೆಯಲ್ಲ ಅದು ವರ್ಣಿಸಲು ಸಾದ್ಯವಿಲ್ಲ ಆಲ್ಲಿಂದ ಮುಂದೆ ಭಾರತೀಯರು ಯಾವುದೇ ಯುದ್ದಕ್ಕೆ ಎದರಲಿಲ್ಲ. ಅದೇ ಭಾರಿ ಬೇರೆ ಬೇರೆ ದೇಶಗಳು  ನಮ್ಮ ಮೇಲೆ ಯುದಕ್ಕೆ ಬಂದರೂ ಮೊದಲ ಜಯದ ನೆನಪಿನೊಂದಿಗೆ ಇಂದು ನಮ್ಮ ಸೈನಿಕರು ಯುದ್ದಕ್ಕೆ ತೆರಳುತ್ತಾರೆ.ಅದಕ್ಕೆ ಕಾರಣಿಭೊತರಾಗಿದ್ದ ನಮ್ಮ ಕೊಡಗಿನ ಹೆಮ್ಮೆಯ ಕುಲಪುತ್ರ ಫೀಲ್ಡ್ ಮಾರ್ಶಲ್ ಕಾರ್ಯಪ್ಪ ಅವರು ಭಾರತೀಯ ಸೇನೆಗೆ ಮಾಡಿದ ಸೇವೆಯನ್ನು ಮನ್ಗಂಡು ೧೯೯೬ ರಲ್ಲಿ ಮಡಿಕೇರಿಯಲ್ಲಿ ಸುದರ್ಶನ ವೃತ್ತದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಯಿತು.

ಮತ್ತಷ್ಟು ಓದು »

9
ಡಿಸೆ

ಈ ದೌರ್ಜನ್ಯಗಳಿಗೆ ಕೊನೆ ಎಂದು?

-ವಿಜಯೇಂದ್ರ

ದನಗಳನ್ನು ಕ್ಯಾಂಟರ್‌ನಲ್ಲಿ ಸಾಗಿಸುತ್ತಿದ್ದಲೆನ್ನಲಾದ ಕೃಷ್ಣಪ್ಪ ಎಂಬ ದಲಿತನನ್ನು ಪ್ರಾಣಿ ದಯಾ ಸಂಘಕ್ಕೆ  ಸೇರಿದವರು ಎನ್ನಲಾದ ಹಲವರು ತಡೆದು ಹೊಡೆದು ಸಾವಿಗೀಡು ಮಾಡಿದರು ಎಂದು ಸುದ್ದಿ ಇತ್ತೀಚೆಗಷ್ಟೇ ಗ್ರಾಮೀಣ ಬೆಂಗಳೂರು ವಿಭಾಗದಿಂದ ವರದಿಯಾಗಿದೆ. ಈ ಪ್ರಕರಣವನ್ನು ಮುಚ್ಚಿ ಹಾಕಲು ಸ್ಥಳೀಯ ಪೊಲೀಸರು ಪ್ರಯತ್ನಿಸಿದ್ದು ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಸ್ವ್ವಾತಂತ್ರ್ಯ ಬಂದ ಆರು ದಶಕಗಳ ಅನಂತರವೂ ಭಾರತದಲ್ಲಿ ಒಂದು ವರ್ಗದ ಜನತೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಕ್ಷುಲ್ಲಕ ಕಾರಣಗಳಿಗಾಗಿ ಅವರ ಮೇಲೆ ಅತ್ಯಾಚಾರ, ಹಲ್ಲೆ, ಮಾನಭಂಗಗಳಂತಹ ಗಂಭೀರ ಅಫರಾದಗಳನ್ನು ಎಸಗಲಾಗುತ್ತಿದೆ.

೫೦೦೦ ವರ್ಷಗಳ ಕಾಲ ವರ್ಣಾಶ್ರಮ ಪದ್ದತಿಯನ್ನು ಭಾರತ ಅನುಸರಿಸಿಕೊಂಡು ಬಂದ ಫಲವಾಗಿ ಹುಟ್ಟಿಕೊಂಡ ಅಸ್ಪೃಶ್ಯ ಜಾತಿ ಮತ್ತು ವರ್ಗಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಗಿನ್ನೀಸ್ ಧಾಖಲೆಯನ್ನು ಮೀರಿಸುತ್ತದೆ ಎಂದರೆ ತಪ್ಪ್ಪಾಗಲಾರದು.

ಯಾವುದೇ ಧರ್ಮ ಜಾತಿ ಆಧರಿತ ತಾರತಮ್ಯ ಕಾನೂನು ಬಾಹಿರ ಎಂದು ಸಂವಿಧಾನದ ಕಲಂಗಳಲ್ಲಿ ಸಾರಿ ಹೇಳಿದರೂ ಸಮಾಜದ ಒಂದು ಪ್ರಮುಖ ಭಾಗದ ಜನರನ್ನು ನಾವು ನಿರ್ಲಕ್ಷಿಸಿದ್ದೇವೆ. ಅನುಚ್ಚೇದ ೧೭ ರಲ್ಲಿ ಅಸ್ಪೃಶ್ಯ ಆಚರಣೆ ನಿಷೇದವೆಂದು ಸ್ಪಷ್ಟಪಡಿಸಿದ್ದರೂ, ರಾಷ್ಟ್ರದ ಎಲ್ಲಾ ಕಡೆ ದಲಿತರ ಮೇಲೆ ಕೊಲೆ, ಅತ್ಯಾಚಾರ. ದೌರ್ಜನ್ಯ, ಬಹಿಷ್ಕಾರಗಳಂತಹ ಅನಿಷ್ಟ ಕ್ರೂರ ಪದ್ದತಿಗಳು ಮುಂದುವರಿದೇ ಇದೆ. ಮತ್ತಷ್ಟು ಓದು »