ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 13- ಯಂತ್ರಗಳು, ಯಾಂತ್ರಿಕರು…
–ರಾಮಚಂದ್ರ ಪಿ
ಆಧುನಿಕ ವಿಜ್ಞಾನವು ಇತ್ತ ಕೊಡುಗೆಗಳನ್ನು ನಾವು ಜೀವನದಲ್ಲಿ ಉಪಯೋಗಿಸಿಕೊಳ್ಳಲೇ ಬೇಕಷ್ಟೆ. ಕಲೆಗೂ ಕೆಲವು ಕೊಡುಗೆಗಳನ್ನು ವಿಜ್ಞಾನವು ಇತ್ತಿದೆ. ಇತರ ಕಲೆಗಳಂತೆ ಯಕ್ಷಗಾನದಲ್ಲೂ ಅವುಗಳ ಉಪಯೋಗವಾಗುತ್ತಿದೆ.
ಸರಿಯಾಗಿ ಉಪಯೋಗ ಮಾಡಿಕೊಳ್ಳುವ ಮೊದಲು, ವಿಜ್ಞಾನವಿತ್ತ ಹಲವು ಸಲಕರಣೆಗಳೂ, ‘ಅನುಕೂಲಗಳೂ’ ನನಗೆ ಉಪಟಳವಿತ್ತಿವೆ.
ನಾವು ಉತ್ತರ ಕನ್ನಡ ಪ್ರವಾಸ ಕೈಕೊಂಡ ಮಾರನೆಯ ವರ್ಷ ಡೇರೆಯ ಅಗತ್ಯ ನಮಗಾಯಿತು. ಅದಕ್ಕೆ ಮೊದಲೇ ಶ್ರೀ ಕೊರಗಪ್ಪ ಶೆಟ್ಟರು ತಮ್ಮ ಮೇಳಕ್ಕೆ ಒಂದು ಡೇರೆಯನ್ನು ಮಾಡಿಸಿಕೊಂಡಿದ್ದರು. ನಮ್ಮ ಮನೆಯಲ್ಲೇ ಬೇಕಾದ ವಸ್ತುಗಳನ್ನು ತರಿಸಿ ಹೊಸ ಡೇರೆಯೊಂದನ್ನು ತಂದೆಯವರು ಮಾಡಿಸಲು ತೊಡಗಿದರು. ಮೊದಲು ಹೊರಗಿನ ಆವರಣ ಮಾತ್ರ ಸಾಕು ಎಂದಿದ್ದುದು, ಅನಂತರ- ಆಟವಾಡುವ ಸ್ಥಳದ ಅರ್ಧ ಬಯಲನ್ನು ಮುಚ್ಚುವ ದೊಡ್ಡ ಡೇರೆಯಾಗಿಯೇ ಪರಿವರ್ತನೆಗೊಂಡಿತು. ಆಗ ಅದಕ್ಕೆ ತಕ್ಕಂತೆ ಕಟ್ಟಿ- ಬಿಚ್ಚಿ- ಜೋಡಿಸಿ ಸಾಗಿಸಬಲ್ಲ ಒಂದು ರಂಗಸ್ಥಳವೂ ಬೇಕು ಎನಿಸಿತು. ಅನಂತರ ಬಂದುದು ವಿದ್ಯುತ್ತಿನ ವ್ಯವಸ್ಥೆ; ಧ್ವನಿವರ್ಧಕದ ಏರ್ಪಾಡು.
ವಿಶ್ವ ಸಂಸ್ಥೆ ಹೆಸರಲ್ಲಿ ಮತ್ತಿತರ ಮಿಂಚೆ ಮೋಸಗಳು!!!
–ಪ್ರಶಸ್ತಿ ಪಿ
ಶೀರ್ಷಿಕೆ ನೋಡಿ ಆಶ್ಚರ್ಯ ಆಗ್ತಾ ಇದೆಯಾ? ಜೊತೆಗಿರುವ ಚಿತ್ರಗಳನ್ನು ನೋಡಿ.. ವಿಶ್ವಸಂಸ್ಥೆಯಿಂದ ಎಂಬ ಸಂದೇಶವನ್ನು ಒಳಪಟ್ಟಿಯಲ್ಲಿ ನೋಡಿ ಒಮ್ಮೆ ಆಶ್ಚರ್ಯವಾಯಿತು.. ಅದು spam ಗೆ ಹೋಗದೇ ಒಳಪೆಟ್ಟಿಗೆಗೇ ಬಂದಿದೆಯೆಂದು ಒಮ್ಮೆ ಆಶ್ಚರ್ಯವಾಯಿತು..
ತೆಗೆದು ನೋಡಿದರೆ “ನಿಮಗೆ ಬರಬೇಕಾದ ಸಂಬಳ ಬಂದಿದೆಯಾ?” ಎಂಬ ಸಂದೇಶ. ತಕ್ಷಣ ನಿಮ್ಮ ಹೆಸರು, ವಿಳಾಸ, ಪಾಸಪೋರ್ಟು ನಂಬರ್, ಮೊಬೈಲು, ಸ್ಥಿರ ದೂರವಾಣಿ ನಂಬರುಗಳೊಂದಿಗೆ ಪ್ರತಿಕ್ರಯಿಸಿ ಎಂಬ ಒಕ್ಕಣೆ ಬೇರೆ. ಅವರು ಕೊಟ್ಟಿದ್ದ ವೆಬ್ ಕೊಂಡಿ ಸರಿಯಾಗೇ ಇದೆ.. ಸಂಶಯ ಶುರು ಆಯ್ತು..
ನಾನು ವಿಶ್ವಸಂಸ್ಥೆಗೆ ಯಾವ ರೀತಿಯಲ್ಲೂ ಸಂಬಂಧ ಪಟ್ಟವನಲ್ಲ..ಅಂತಹದರಲ್ಲಿ ಅವರೇಕೆ ನನಗೆ, ಯಾತಕ್ಕಾಗಿ ಸಂಬಳ ಕೊಡಬೇಕು? ಮೊಬೈಲ್ ನಂಬರು, ಇತರೆ ಮಾಹಿತಿಗಳನ್ನ ದುರುಪಯೋಗಪಡಿಸಿಕೊಳ್ಳುವ ಯಾವುದೋ ವ್ಯವಸ್ಥಿತ ಜಾಲ ಅದಿರಬೇಕು ಅಂತ ಆ ಮಿಂಚೆಯನ್ನು ನಾಶ ಮಾಡಿದೆ. ಅದಕ್ಕೂ ಮೊದಲು ಯಾವ ಸಂಬಳ ಎಂಬ ಉತ್ತರ ಕಳಿಸಿದೆ. ಯಾವ ಪ್ರತಿಕ್ರಿಯೆಯೂ ಬರಲಿಲ್ಲ..
ನಿಮಗೂ ಇಂಥಹ ಸಂದೇಶ ಬರಬಹುದು.. ಅವರು ಕೇಳಿದ ಮಾಹಿತಿ ಕೊಟ್ಟು ಮೋಸ ಹೋಗದಿರಿ.. ಮತ್ತು ಆ ಮಿಂಚೆಯನ್ನು ಈ ವಿಳಾಸಕ್ಕೆ forward ಮಾಡಿರಿ.. FraudDesk@city-of-london.pnn.police.uk
ಇಲ್ಲೂ ದೂರು ನೀಡಬಹುದು http://www.indiacyberlab.in/cybercrimes/report.htm. ಅದರಲ್ಲಿ ನೀಡಿರೋ ಕೊಂಡಿ ಕೆಲವೊಮ್ಮೆ ತೆರೆಯುವುದಿಲ್ಲ.. ಆಗ ಮತ್ತೆ ಪ್ರಯತ್ನಿಸಿ
ಮಡೆಸ್ನಾನದ ಮರ್ಮವೇನು ?
-ಸಂತೋಷ ಕುಮಾರ್
ಕುಕ್ಕೆ ಸುಬ್ರಮಣ್ಯದಲ್ಲಿ ಜರುಗ ಬೇಕಾಗಿದ್ದ ಮಡೆಸ್ನಾದ ಆಚರಣೆಯನ್ನು ರದ್ದುಗೊಳಿಸಬೇಕೇಂದು ಅಲ್ಲಿನ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಆದರೆ ದಿಡೀರ್ ಬೆಳವಣಿಗೆ ಎಂಬಂತೆ ನಿಷೇಧದ ಆದೇಶದ ಮರುದಿನವೇ ನಿಷೇಧವನ್ನು ರದ್ದುಪಡಿಸುವ ಆದೇಶವನ್ನೂ ಸಹ ನೀಡಲಾಯಿತು. ಇದನ್ನು ರಾಜಕೀಯ ವ್ಯವಸ್ಥೆಯ ಲೋಪದೋಷ ಅಥವಾ ದೌರ್ಬಲ್ಯ ಹಾಗೂ ಆಚರಣೆಯ ಅಥವಾ ಅದನ್ನು ಆಚರಿಸುವವರ ಸಂಸ್ಕೃತಿಯ ವಿಶಿಷ್ಟತೆ ಎಂಬ ಎರಡೂ ವಿಭಿನ್ನ ಆಯಾಮಗಳಲ್ಲಿ ವಿಶ್ಲೇಷಿಸಬಹುದು. ಇಲ್ಲಿ ಎರಡನೇ ಆಯಾಮದಿಂದ ಈ ಘಟನೆಯನ್ನು ವಿಶ್ಲೇಷಿಸಲು ಪ್ರಯತ್ನಿಸಲಾಗುವುದು. ಕುಕ್ಕೆ ಸುಬ್ರಮಣ್ಯದ ಮಡೆಸ್ನಾನದ ಆಚರಣೆಯನ್ನು ನಿಷೇಧಿಸಬೇಕೆಂಬ ಆದೇಶ ಹೊರಡಿಸುತ್ತಿದ್ದಂತೆ ವಿಶೇಷವಾಗಿ ನಮಗೆ ಆ ಆಚರಣೆಯಲ್ಲಿ ಭಾಗವಹಿಸುವ ಭಕ್ತರು ಹೇಗೆ ಪ್ರತಿಸ್ಪಂದಿಸುತ್ತಾರೆ ಎಂಬ ಕುತೂಹಲವಿತ್ತು.
ಕಲಸೆ (ನಾಡಕಲಸಿ) ದೇವಸ್ಥಾನ
-ಪ್ರಹಸ್ತಿ ಪಿ
ಸಾಗರ ತಾಲೂಕಿನ ಇತಿಹಾಸ ಪ್ರಸಿದ್ದ ದೇವಸ್ಥಾನಗಳಲ್ಲಿ ಕಲಸೆ, ನಾಡಕಲಸಿಯೂ ಒಂದು. ಸಾಗರದವನಾಗಿಯೂ ಅದನ್ನು ನೋಡಲಾಗಿರದ ಬಗ್ಗೆ ಸ್ವಲ್ಪ ಬೇಸರವಿತ್ತು. ಬೆಳಗ್ಗೆ ೮ಕ್ಕೆ, ಮಧ್ಯಾಹ್ನ ಒಂದಕ್ಕೆ ಮಾತ್ರ ಅಲ್ಲಿಗೆ ಬಸ್ಸಿನ ಸೌಕರ್ಯವಿದೆ ಎಂಬ ಗೆಳೆಯರ ಮಾತೂ ನೋಡದಿರುವುದಕ್ಕೊಂದು ಪಿಳ್ಳೆ ನೆವವಾಗಿತ್ತು. ಆದರೆ ಅಲ್ಲಿಗೆ ಹೋದ ಮೇಲೆಯೇ ತಿಳಿದಿದ್ದು. ಅದೆಷ್ಟು ಸುಂದರ ಎಂದು.
ಹೋಗುವ ಮಾರ್ಗ:
ಸಾಗರದಿಂದ ಸುಮಾರು ಎಂಟು ಕಿ.ಮೀ ದೂರವಷ್ಟೇ ನಾಡಕಲಸಿ ಅಥವಾ ಕಲಸಿಯ ದೇವಸ್ಥಾನ. ಸಾಗರದಿಂದ ಹೋಗುವುದಾದರೆ ಸೊರಬ ಮಾರ್ಗದಲ್ಲಿ ಸುಮಾರು ೫ ಕಿ.ಮೀ ಹೋದ ಕೂಡಲೇ ಕಲಸಿ ರಾಮೇಶ್ವರ ದೇವಸ್ಥಾನಕ್ಕೆ ದಾರಿ ಅಂತ ಬೋರ್ಡೊಂದು ಸಿಗುತ್ತದೆ. ಅಲ್ಲಿಂದ ಸುಮಾರು ಮೂರು ಕಿ.ಮೀ ಬಲಕ್ಕೆ ಹೋದರೆ ಸಿಗುವುದು ಕಲಸಿ ಊರು. ಅಲ್ಲಿಂದ ಸ್ವಲ್ಪ ಒಳಗಡೆ ಇದೆ ದೇವಸ್ಥಾನ. ಸೊರಬಕ್ಕೆ ತುಂಬಾ ಬಸ್ಸುಗಳಿವೆ. ಹಾಗಾಗಿ ಸೊರಬ ಬಸ್ಸಿನಲ್ಲಿ ಕಲಸಿ ಬೋರ್ಡಿನಲ್ಲಿ ಇಳಿದುಕೊಂಡರೆ ಮೂರು ಕಿ.ಮೀ ನಡೆದು ಕಲಸಿ ದೇವಸ್ಥಾನಕ್ಕೆ ಯಾವಾಗಲಾದರೂ ಹೋಗಬಹುದು. ಸ್ವಂತ ವಾಹನವಿದ್ದರೆ ಇನ್ನೂ ಉತ್ತಮ.
ಇತಿಹಾಸ:
ಇಲ್ಲಿ ಶ್ರೀ ಮಲ್ಲಿಕಾರ್ಜುನ ಮತ್ತು ರಾಮೇಶ್ವರ ದೇವಸ್ಥಾನಗಳಿವೆ. ಈ ಜೋಡಿ ದೇಗುಲಗಳನ್ನು ಹೊಯ್ಸಳ ರಾಜ ಬಳೆಯಣ್ಣ ಹೆಗ್ಗಡೆ ಕ್ರಿ.ಶ ೧೨೧೮ ರಲ್ಲಿ ಕಟ್ಟಿಸಿದನೆಂದು ಸಂಶೋಧನಕಾರರು ಹೇಳುತ್ತಾರೆ.
ಮೊದಲಿಗೆ ಹೋಗುತ್ತಿದ್ದಂತೆಯೇ ನಿಮ್ಮನ್ನು ಸ್ವಾಗತಿಸುವುದು ದೇಗುಲದ ಎದುರಿಗೆ ಅಥವಾ ಹೋಗುವವರ ಬಲಗಡೆಗೆ ಇರುವ ನಾಗರ ಬನ.ಅದಕ್ಕೆ ನಮಸ್ಕರಿಸಿ ಮೊದಲು ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋದೆವು.
ನಿರ್ವಾತದಲ್ಲಿ ಬೆಳಕಿನ ಸೃಷ್ಟಿ!
-ವಿಷ್ಣುಪ್ರಿಯ
ಕಾಂತವಲಯದ ದಿಕ್ಕನ್ನು ಪ್ರತಿ ಸೆಕೆಂಡಿಗೆ ಹಲವು ಬಿಲಿಯನ್ ಬಾರಿ ಬದಲಾಯಿಸುವ ಮೂಲಕ ವಿಜ್ಞಾನಿಗಳು ಈ ವಿಶೇಷ ಫಲಕವನ್ನು ಸೃಷ್ಟಿಸಿದ್ದಾರೆ. ಆದರೂ ಸಹ ಈ ಫಲಕವು ಬೆಳಕಿನ ವೇಗದ ಶೆಕಡಾ 25ರಷ್ಟು ವೇಗದಲ್ಲಷ್ಟೇ ಚಲಿಸುವುದಕ್ಕೆ ಸಾಧ್ಯವಾಯಿತು. ಆದಾಗ್ಯೂ ಇಷ್ಟು ವೇಗದಲ್ಲಿ ಫಲಕ ಚಲಿಸುತ್ತಿದ್ದ ಕಾರಣದಿಂದಾಗಿ ನಿರ್ವಾತದಲ್ಲಿ ಸೃಷ್ಟಿಯಾಗುತ್ತಿದ್ದ ಬೆಳಕಿನ ಕಣಗಳನ್ನು ಅರ್ಥಾತ್ ಜೊತೆ ಜೊತೆಯಾಗಿ (ಅವಳಿಗಳು) ಸೃಷ್ಟಿಯಾಗುತ್ತಿದ್ದ ಫೋಟಾನ್ಗಳನ್ನು ಗುರುತಿಸಿ ಅವುಗಳ ಗುಣಲಕ್ಷಣಗಳನ್ನು ಅಳೆಯುವುದಕ್ಕೆ ವಿಜ್ಞಾನಿಗಳಿಗೆ ಸಾಧ್ಯವಾಗಿದೆ.
ನಿರ್ವಾತ ಎಂದರೆ ಸಂಪೂರ್ಣ ಖಾಲಿ ಎಂದರ್ಥವಲ್ಲ. ಅಲ್ಲಿ ಮಿಂಚಿ ಮರೆಯಾಗುಂಥ ಫೋಟಾನ್ಗಳಿರುತ್ತವೆ. ಅಂದರೆ ವರ್ಚುವಲ್ ಅಥವಾ ಭ್ರಾಮಕ ಫೋಟಾನ್ಗಳಿರುತ್ತವೆ. ಈ ರೀತಿ ನಿರ್ವಾತದಲ್ಲಿ ಸೃಷ್ಟಿಯಾಗುವಂಥ ವರ್ಚುವಲ್ ಫೋಟಾನ್ಗಳು ಅಥವಾ ಭ್ರಾಮಕ ಫೋಟಾನ್ಗಳನ್ನು ಬಹುತೇಕ ಬೆಳಕಿನ ವೇಗದಲ್ಲಿ ಚಲಿಸುತ್ತಿರುವಂಥ ಫಲಕದಿಂದ ಪ್ರತಿಫಲಿಸುವಂತೆ ಮಾಡಿದರೆ ನೈಜ ಫೋಟಾನ್ಗಳ ಅರ್ಥಾತ್ ಬೆಳಕಿನ ಸೃಷ್ಟಿಯಾಗುತ್ತದೆ.
ಮತ್ತಷ್ಟು ಓದು 
ಎಚ್ಚರ ಬ್ಲಾಗಿಗರೆ, ಕಳ್ಳರಿಹರು
-ಪ್ರಶಸ್ತಿ ಪಿ.
ಒಳ್ಳೆ ಸಾಹಿತ್ಯವನು ಸೃಷ್ಟಿಸಿಯೂ ಮುಂದೆ
ಕಳ್ಳನೆಂದೊಂದು ದಿನ ಬಿರುದು ಬೇಕೆ?
ನೀ ಮೊದಲು ಬರೆದದ್ದು ಎಂಬುದಕೆ ಏನುಂಟು
ಮಿಥ್ಯಾರೋಪಗಳ ಒಪ್ಪಬೇಕೆ?
ಪುಗಸಟ್ಟೆ ಮಾತುಗಳ ನುಂಗಬೇಕೆ?
ನೀವು ಕವಿಯೇ?ಸಾಹಿತಿಯೇ? ಬರೆದದ್ದ ನಿಮ್ಮ ಬ್ಲಾಗಲ್ಲಿ ಹಾಕುತ್ತಿದ್ದೀರಾ? ಜನ ಮೆಚ್ಚಲಿ , ಇಲ್ಲದಿರಲಿ ನಿಮಗೊಂದು ನಮನ ಮತ್ತು ಅಭಿನಂದನೆ. ನೀವು ಬರೆದಿದ್ದದು ಎಂಬುದಕ್ಕೆ ಅಲ್ಲಿರುವ ದಿನಾಂಕವೇ ಸಾಕ್ಷಿ. ಬೇರೆ ಯಾರಾದರೂ ಅದನ್ನು ಕದ್ದು ತನ್ನ ಹೆಸರಲ್ಲಿ ಪ್ರಕಟಿಸಿದರೆ ನೀವು ನಿಮ್ಮ ಬ್ಲಾಗಿನ ಪ್ರಕಟಗೊಂಡ ದಿನಾಂಕವನ್ನು ತೊರಿಸಿ ಅದನ್ನು ನೀವೇ ಬರೆದದ್ದೆಂದು ನಿರೂಪಿಸಬಹುದು.ಹಾಗಾಗಿ ಬ್ಲಾಗೆಂಬುದು ನಿಮ್ಮ ಕವನಕ್ಕೆ ಶ್ರೀ ರಕ್ಷೆ..ಹಾಂ.. ತಡೀರಿ, ಇಷ್ಟಿದ್ದೂ ನಿಮ್ಮ ಕವನವನ್ನು, ಲೇಖನವನ್ನು ಯಾರಾದರೂ ಕದೀಬಹುದು. ಅದನ್ನು ನಿಮಗಿಂತ ಮುಂಚಿನ ದಿನಾಂಕದಲ್ಲಿ ತನ್ನ ಬ್ಲಾಗಲ್ಲಿ ಹಾಕಿಕೊಳ್ಳಬಹುದು. ಅವಾಗೇನ್ಮಾಡ್ತೀರ? ಹೆಚ್ಚು ಕೇಳ ಹೋದರೆ ನೀವೇ ಕಳ್ಳರೆನ್ನುತ್ತಾರೆ.. ಅರೇ, ಇದು ಹೇಗೆ ಸಾಧ್ಯ? ಇದಕ್ಕೆ ಪರಿಹಾರವೇ ಇಲ್ಲವೇ ಅನಿಸುತ್ತಿದೆಯಾ? ಅದನ್ನು ತಿಳಿಸುವ ಒಂದು ಪುಟ್ಟ ಪ್ರಯತ್ನವೇ ಈ ಕಿರು ಲೇಖನ.
ಜಾಬ್ಸ್ ಜಾತ್ರೆಯಲ್ಲಿ ಮರೆತೋದ ‘ರಿಚ್ಚಿ’
-ಪ್ರಶಸ್ತಿ ಪಿ
ಆಪಲ್ ಸ್ಥಾಪಕ ಸ್ಟೀವ್ ಜಾಬ್ಸನ ವಿಚಾರಗಳೆಲ್ಲಾ ಕದ್ದಿದ್ದು. ಅವನ ಸ್ವಂತದ್ದು ಏನೂ ಇಲ್ಲ. ಅವನ ಸಾವಿಗೆ ಅಷ್ಟು ಮನ್ನಣೆ. C, Unix ಗಳನ್ನು ಕಂಡು ಹಿಡಿದ ಡೆನ್ನಿಸ್ ರಿಚ್ಚಿಯ ಸಾವು ಯಾರೂ ಕಂಡೂ ಕೇಳದಂತೆ ಮರೆಯಾಗಿ ಹೋಯಿತಲ್ಲಾ ಎಂಬ ವೇದನೆಯ ಹಲರೂಪಾಂತರಗಳು ಅಂತರ್ಜಾಲದಲ್ಲೆಲ್ಲಾ ಸುತ್ತಾಡುತ್ತಿದ್ದವು ಕೆಲವಾರದ ಹಿಂದೆ. ಇನ್ನೂ ಅಲ್ಲೊಂದು , ಇಲ್ಲೊಂದು ಅಂತಹ ಫೋಟೋಗಳು, ಪೋಸ್ಟುಗಳು ಸುತ್ತಾಡುತ್ತಲೇ ಇವೆ. ಇಬ್ಬರಲ್ಲಿ ಯಾರು ಹೆಚ್ಚೆಂಬ ವಿಮರ್ಶೆಯನ್ನು ಮಾಡೋದು ಆ ದೈತ್ಯ ಪ್ರತಿಭೆಗಳೆದುರು ಪಾಮರನಾದ ನನ್ನಿಂದಂತೂ ಅಸಾಧ್ಯ. ಆದರೆ ಇಂದು ಮತ್ತೊಂದು ಅಂತಹದೇ ಪೋಸ್ಟನ್ನೋದಿದಾಗ ನನಗನಿಸಿದ ಭಾವಗಳನ್ನು ಹಂಚಿಕೊಳ್ಳುತ್ತಿದ್ದೇನೆ.
ಪಿಯುಸಿಯಲ್ಲಿ ಕಂಪ್ಯೂಟರ್ ಓದಿದವರಿಂದ ಹಿಡಿದು, BCA, BE, B.Com (Computers) , Diploma ಹೀಗೆ ಹಲವು ವಿಷಯಗಳನ್ನೋದಿದ ಜನರೆಲ್ಲಾ C ಎಂಬ Programming ಭಾಷೆಯನ್ನು ಓದೇ ಇರುತ್ತಾರೆ. ಬಲ್ಬು ಕಂಡುಹಿಡಿದವರು ಯಾರು ಎಂದರೆ ಎಂಥಾ ಟ್ಯೂಬ್ಲೈಟಾದರೂ ಥಾಮಸ್ ಅಲ್ವಾ ಎಡಿಸನ್ ಅಂತ ಹೇಳ್ತಾರಲ್ವಾ ಹಾಗೇನೆ ಇವರಿಗೆಲ್ಲಾ C ಯನ್ನು ಕಂಡುಹಿಡಿದವರು ಯಾರು ಅಂದರೆ ತಟ್ಟನೆ ಬರುವ ಉತ್ತರ ಡೆನ್ನಿಸ್ ರಿಚ್ಚಿ, ಕೆರಿಂಗ್ ಹ್ಯಾಮ್. ನಾನೂ ಓದಿ ಇಷ್ಟಪಟ್ಟ Programming ನ ಮೊದಲ ಪುಸ್ತಕ The C Programming Language . ಆಗ ರಿಚ್ಚಿಯ ಬಗ್ಗೆ ಅಷ್ಟು ತಿಳಿದಿರಲಿಲ್ಲ. ನಂತರ ಮೂರನೆಯ ಸೆಮಿಸ್ಟರಿನಲ್ಲಿ Unix ಅನ್ನೋ ವಿಷಯ ಇತ್ತು. ಅದರ ಬಗ್ಗೆ ಗೊತ್ತಿಲ್ದೇ ಇರೋರಿಗೆ ಹೇಳೋದಾದರೆ ನೀವು ಬಳಸ್ತಾ ಇರೋ Windows XP, Windows 7, Vista ಗಳಂತೆ ದುಡ್ಡು ಕೊಟ್ಟು Genuine ಅವತರಣಿಕೆ ಪಡೆಯಬೇಕೆಂಬ ರೇಜಿಗೆಯಿಲ್ಲದ್ದದು, ಯಾರು ಬೇಕಾದರೂ ಉಚಿತವಾಗಿ ಬಳಸಬಹುದಾದ ದತ್ತಾಂಶ Open Source ಗಳ ಪರಿಕಲ್ಪನೆಯನ್ನು ಹುಟ್ಟಿಹಾಕಿದ್ದೇ Unix ನ ಮತ್ತೊಂದು ರೂಪ Linux. ಇರಲಿ, ಆ Linux ಅನ್ನು ರೂಪಿಸುವಲ್ಲಿಯೂ ಕೆನ್ ಥಾಮ್ಸನ್ ಅನುವವರೊಂದಿಗೆ ಕೈ ಜೋಡಿಸಿದ್ದು ಇದೇ ರಿಚ್ಚಿ.
ಸರಿ, ಪ್ರೋರ್ಗಾಮಿಂಗ್ ಭಾಷೆಯನ್ನು , ಇನ್ನೊಂದು ಕಂಪ್ಯೂಟರ್ ಭಾಷೆಯನ್ನು ಕಂಡುಹಿಡಿದಾಕ್ಷಣ ಅದು ಮಹಾನ್ ಸಾಧನೆಯೇ ಎಂಬ ಸಂದೇಹ ಈಗಾಗಲೇ ಬಂದಿದ್ದರೆ ಅದನ್ನು ಪರಿಹರಿಸಲೋಸುಗ ಈ ಕೆಲವು ಸಾಲುಗಳು..ರಿಚ್ಚಿ ಸತ್ತ ದಿನ ಅವರ ದೀರ್ಘ ಕಾಲೀನ ಸಹೋದ್ಯೋಗಿ ರೋಬ್ ಪೈಕ್ ಸೂಚಿಸಿದ ಸಂತಾಪ ನುಡಿಗಳಿಂದ.
ನಮ್ಮೂರ ಕನ್ನಡ ರಾಜ್ಯೋತ್ಸವ – ‘ಕೆಳದಿ’
–ಪ್ರಹಸ್ತಿ ಪಿ.
ಶಿವಮೊಗ್ಗ ಜಿಲ್ಲೆಯ ಸುತ್ತಮುತ್ತಲಿರೋರಿಗೆ ಕೆಳದಿಯ ಬಗ್ಗೆ ಗೊತ್ತೇ ಇರುತ್ತದೆ. ಹೊಸಬರಿಗೆ ಹೇಳಬೇಕೆಂದರೆ, ನೀವು ಜಗತ್ಪ್ರಸಿದ್ಧ ಜೋಗ ಜಲಪಾತದ ಹೆಸರನ್ನು ಕೇಳಿಯೇ ಕೇಳಿರುತ್ತೀರಿ. ಅದಕ್ಕೆ ಹೋಗಬೇಕಾದರೆ ಸಾಮಾನ್ಯವಾಗಿ ಸಾಗರಕ್ಕೆ ಬಂದೇ ಹೋಗುತ್ತಾರೆ. ಸಾಗರದಿಂದ ಎಂಟು ಕಿ.ಲೋ ಮೀಟರು ದೂರವಿರುವ ಊರು ಕೆಳದಿ. ಇಲ್ಲಿಯ ಪಾಳೇಗಾರ ಶಿವಪ್ಪನಾಯಕ, ರಾಣಿ ಚೆನ್ನಮ್ಮ… ಈ ಹೆಸರುಗಳನ್ನು ಎಲ್ಲೋ ಕೇಳಿದ/ಓದಿದ ನೆನಪಾಗುತ್ತಿದೆಯೇ? ಹಾ ಅದೇ ಕೆಳದಿ. ಅದರ ಹತ್ತಿರವೇ ನಮ್ಮೂರು.
ಪ್ರತೀವರ್ಷವೂ ಕನ್ನಡ ರಾಜ್ಯೋತ್ಸವ ಬಂತೆಂದರೆ ನಮಗೆಲ್ಲಾ ಹಬ್ಬದ ವಾತಾವರಣ.ಹಂಪಿಯಿಂದ ಕೆಳದಿಗೆ ಬರುತ್ತಿದ್ದ ವಿದ್ಯಾರಣ್ಯ ಜ್ಯೋತಿಯದು ಕೆಳದಿಯಿಂದ ಸಾಗರದವರೆಗೆ ಮೆರವಣಿಗೆ..ಆ ಸಂದರ್ಭವೆಂದರೆ ನಮಗೆಲ್ಲಾ ಸಂಭ್ರಮವೋ ಸಂಭ್ರಮ.ಪ್ರತೀ ಮನೆಯೆದುರ ರಸ್ತೆಯನ್ನೂ ತೊಳೆದು ಎಳೆದ ದೊಡ್ಡದೊಡ್ಡ ರಂಗೋಲಿಗಳು,”ವಿದ್ಯಾರಣ್ಯ ಜ್ಯೋತಿಗೆ ಸ್ವಾಗತ”, “ರಾಜ್ಯೋತ್ಸವದ ಶುಭಾಶಯಗಳು” ಇತ್ಯಾದಿ ಬರಹಗಳೇನು, ಪ್ರತೀ ಹಳ್ಳಿಯ ಬಾಗಿಲುಗಳಲ್ಲಿ, ಹೆಚ್ಚೆಚ್ಚು ಮನೆಗಳಿದ್ದ ಕಡೆ ಹೀಗೆ ಸಾಲು ತೋರಣಗಳೇನು, ಪೇಟೆ ಹತ್ತಿರ ಸಾಗುತ್ತಿದ್ದಂತೆ ಸಾಲು ಸಾಲು ವಿದ್ಯುತ್ ದೀಪಗಳೇನು..ಅಬ್ಬಾ!! ಜ್ಯೋತಿಯೊಂದಿಗೆ ಎಂಟು ಕಿಲೋಮೀಟರಿಗಿಂತಲೂ ದೂರ ಸಾಗುವುದೆಂದರೆ ಒಂದು ಅವಿಸ್ಮರಣೀಯ ಅನುಭವ.. ವಿದ್ಯಾರಣ್ಯರು ಹಕ್ಕ-ಬುಕ್ಕರ ಗುರುಗಳಲ್ಲವೇ, ಆ ವಿಜಯನಗರ ಸಾಮ್ರಾಜ್ಯಕ್ಕೂ ಕೆಳದಿಗೂ, ಅವರ ಹೆಸರಿನ ಜ್ಯೋತಿಗೂ , ನಾನು ಹೇಳಹೊರಟಿರುವ ಮೆರವಣಿಗೆಗೂ ಎಲ್ಲಿಂದೆಲ್ಲಿಯ ಸಂಬಂಧವಯ್ಯಾ ಅಂತ ಸಂದೇಹ ಶುರು ಆಯ್ತಾ? ತಡೀರಿ ಒಂದೊಂದಾಗಿ ಹೇಳುತ್ತಾ ಹೋಗ್ತೇನೆ. ಮುಂದೆ ಓದಿ.
ವಿಜಯನಗರದ ಕೃಷ್ಣದೇವರಾಯನ ಕಾಲದಲ್ಲಿ ಕೆಳದಿಯ ಸಾಮಾನ್ಯ ರೈತನೊಬ್ಬನಾದ ಭದ್ರಗೌಡನೆಂಬುವನಿಗೆ ನಿಕ್ಷೇಪ ದೊರೆತು ಅದರಿಂದ ಅವನು ಪಾಳೆಯವನ್ನು ಕಟ್ಟಿಕೊಂಡನಂತೆ. ಅವನ ಪರಾಕ್ರಮಕ್ಕೆ ಮೆಚ್ಚಿ ಕೃಷ್ಣದೇವರಾಯ ಅವನಿಗೆ ಎಂಟು ಮಾಗಣಿಗಳ ನಾಯಕತ್ವವನ್ನು ಕೊಟ್ಟನೆಂದು ಇತಿಹಾಸವಿದೆ .ಕಾಲ ಕಳೆದಂತೆ ಸಂಸ್ಥಾನ ಬೆಳೆಯಿತು. ಕೆಳದಿ, ಇಕ್ಕೇರಿ, ಗೌರಿ ಬಿದನೂರು ಹೀಗೆ ಕೋಟೆ ಕೊತ್ತಲಗಳನ್ನು, ದೇವಾಲಯಗಳನ್ನು ಕಟ್ಟಿದರು. ಶಿವಪ್ಪನಾಯಕ, ಚೆನ್ನಮ್ಮ ರಾಣಿಯಂತಹವರು ಬಂದು ಹೋದರು. ಕೆಳದಿಯ ವೀರಭದ್ರ ದೇವಸ್ಥಾನದ ಪ್ರಧಾನ ಬಾಗಿಲ ಬಳಿ ಶ್ರೀಕೃಷ್ಣನ ಸಣ್ಣ ವಿಗ್ರಹವಿದೆ. ಇದು ಅಂದಿನಾ ಘಟನೆಯ ಸವಿನೆನಪಿಗಾಗಿ ಎಂದು ಅನೇಕರು ಹೇಳುತ್ತಾರೆ.
೧೯೫೬ ರಲ್ಲಿ ಕರ್ನಾಟಕ ಏಕೀಕರಣವಾಯಿತು. ರಾಜ್ಯೋತ್ಸವ ಆಚರಣೆಗಳು ಪ್ರಾರಂಭವಾದವು. ೭೦ರ ದಶಕದ ಕೊನೆಭಾಗದಲ್ಲಿ ರಾಜ್ಯೋತ್ಸವ ಆಚರಣೆಯ ಭಾಗವಾಗಿ ಇತಿಹಾಸ ಪ್ರಸಿದ್ದ ಸ್ಥಳಗಳಿಂದ ಜ್ಯೋತಿಯೊಂದನ್ನು ತಂದು ಮೆರವಣಿಗೆ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತಂತೆ. ಅದಾಗಿ ಕೆಲಸಮಯದಲ್ಲಿ ಅಂದರೆ ಈಗ್ಗೆ ಸುಮಾರು ಇಪ್ಪತ್ತು ವರ್ಶಗಳ ಹಿಂದಿಂದ ಕೆಳದಿಯಿಂದ ಜ್ಯೋತಿಯ ಮೆರವಣಿಗೆ ನಡೆಸುವ ಸಂಪ್ರದಾಯ ಶುರುವಾಗಿದೆ ಅಂತ ಅಲ್ಲಿನ ಹಿರಿಯರು ಹೇಳುತ್ತಾರೆ. ಮೊದಲಿಗೆ ನವೆಂಬರ್ ಒಂದರ ಹಿಂದಿನ ರಾತ್ರಿ ಹಂಪಿಯಿಂದಲೇ ವಿದ್ಯಾರಣ್ಯ ಜ್ಯೋತಿ ಕೆಳದಿಗೆ ಬರುತ್ತಿತ್ತಂತೆ. ಜೀಪಲ್ಲಿ ಹಿಂದಿನ ದಿನ ಮಧ್ಯರಾತ್ರಿಯ ಹೊತ್ತಿಗೆ ಕೆಳದಿಗೆ ಬರುತ್ತಿತ್ತು ಆ ಜ್ಯೋತಿ. ಮಧ್ಯರಾತ್ರಿ ಎಷ್ಟೊತ್ತಾದರೂ ಕೆಳದಿಗೆ ಬಂದೇ ತಲುಪುತ್ತಿದ್ದ ಜ್ಯೋತಿ ಹೊತ್ತು ತಂದವರು ಕೆಳದಿ ದೇಗುಲದ ಪ್ರಾಂಗಣದಲ್ಲೇ ಮಲಗಿರುತ್ತಿದ್ದರಂತೆ. ನಂತರ ಬೆಳಗ್ಗೆ ಆರೂ ಮುಕ್ಕಾಲರ ಹೊತ್ತಿಗಾಗಲೇ ಅದಕ್ಕೆ ಪೂಜೆಯಾಗಿ ಕೆಳದಿ ರಾಮೇಶ್ವರ ದೇವಸ್ಥಾನದಿಂದ ಸಾಗರದ ಕಡೆಗೆ ಹೊರಡುತ್ತಿತ್ತು.
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 12 -ಯಕ್ಷಗಾನ ತಾಯಿಯ ಮಡಿಲಲ್ಲಿ ಬೆಳೆದ ಮಕ್ಕಳು
-ರಾಮಚಂದ್ರ ಪಿ
ಶಿರ್ವದಲ್ಲಿ ಆಟ ಮುಗಿದ ತರುವಾಯ, ಮುಂದಿನ ಪ್ರದರ್ಶನಕ್ಕೆ ನನಗೆ ಅವಕಾಶ ಕೊಡಿ ಎಂದು ಬೇಡುವ ಸಂದರ್ಭ ಬರಲೇ ಇಲ್ಲ. ನಾನು ಬಣ್ಣ ತೆಗೆಯುತ್ತಿದ್ದಲ್ಲಿಗೆ ಬಂದ ಕಟ್ಪಾಡಿಯ ಶ್ರೀ ಮುದ್ದು ಸುವರ್ಣರು ನಮ್ಮೂರಿಗೆ ಬನ್ನಿ ಎಂದು ವೀಳ್ಯ ಕೊಟ್ಟರು. ಅವರ ಹಿಂದೆಯೇ ಇನ್ನಿಬ್ಬರು ಬಂದರು. ಅವರಿಗಿಂತಲೂ ಮೊದಲೇ 3 ಆಟಗಳಿಗೆ ವೀಳ್ಯ ಪಡೆದಿದ್ದ ಫಲಿಮಾರಿಗೆ, ಮಾತು ಕೊಟ್ಟಂತೆ ಹೋಗಿ ಆಟಗಳನ್ನು ಆಡಿದೆವು.
ಅಲ್ಲಿಯೂ “ಬ್ರಹ್ಮ ಕಪಾಲ”. ಅದನ್ನು ನೋಡಲು ಉಡುಪಿ, ಮಲ್ಪೆ, ಕಲ್ಯಾಣಪುರಗಳಿಂದ ಜನರು ಬಂದಿದ್ದರು. ಅವರೆಲ್ಲ ಹಿಂತಿರುಗಿದಾಗ ಮಾಡಿದ್ದ ಪ್ರಚಾರವೇ ನಾವು ಕಟ್ಪಾಡಿ-ಕಾಪುಗಳ ಆಟ ಮುಗಿಸಿ, ಮಲ್ಪೆಯ ಸಮೀಪದ ಕ್ರೋಢಪುರಕ್ಕೆ (ಅದಕ್ಕೆ ಶಂಕರ ನಾರಾಯಣವೆಂಬ ಹೆಸರೂ ವಾಡಿಕೆಯಲ್ಲಿದೆ) ಬಂದಾಗ, ನಮಗೆ ಬಡಗು ನಾಡಿನಿಂದ ಅನಿರೀಕ್ಷಿತ ಸ್ವಾಗತವನ್ನು ಕೊಡಿಸಿತು.
“ವಿಶ್ವಾಮಿತ್ರ-ಮೇನಕೆ” ಮತ್ತು “ಕಂಸವಧೆ” ಎಂಬ ಎರಡು ಕಥಾಭಾಗಗಳನ್ನು ಇರಿಸಿಕೊಂಡು ಕ್ರೋಢಪುರದಲ್ಲಿ ನಾವು ಆಟವಾಡಿದೆವು. ಮೊದಲು ವಿಶ್ವಾಮಿತ್ರನಾಗಿಯೂ,ಅನಂತರ ಕೃಷ್ಣನಾಗಿಯೂ ಪಾತ್ರ ವಹಿಸಿದ ನಾನು, ಪ್ರೇಕ್ಷಕರ ಹರ್ಷಭರಿತ ಕರತಾಡನಗಳ ಆನಂದವನ್ನು ಅನುಭವಿಸುತ್ತಿದ್ದೆ. ಜನಸಮೂಹದಲ್ಲಿದ್ದ, ಅಲ್ಲಿನ ಪಂಡಿತರೊಬ್ಬರು ನಮಗೆಲ್ಲ ಹಾರ ಸಮರ್ಪಣೆ ಮಾಡಿದರು.
ನಡುವೆ, ಅಂತಹ ಕಾರಣದಿಂದ ಕೆಲವು ನಿಮಿಷಗಳ ಕಾಲ ಬಿಡುವು ದೊರೆತರೆ, ಮುಂದಿನ ಆಟ ನಡೆಯಲಿರುವ ಸ್ಥಳವನ್ನು ರಂಗಸ್ಥಳದಿಂದ ಕರೆದು ಹೇಳುವ ಪದ್ಧತಿ. ಮುಂದಿನ ಒಂದು ದಿನದ ವಿವರವನ್ನು ಸಾರಲೆಂದು ಹಾಸ್ಯಗಾರರು ರಂಗಸ್ಥಳವನ್ನು ಸೇರುವಾಗಲೇ ಅವರ ಕೈಗೆ ಆರು ಕಡೆಗಳ ಆಟ ನಿರ್ಣಯವಾದ ಚೀಟಿ ಸೇರಿತು. ಅವುಗಳನ್ನೂ ಹೇಳತೊಡಗಿದಾಗ ಇನ್ನೂ ಕೆಲವು ಸ್ಥಳಗಳೂ ತಾರೀಕುಗಳೂ ಸೂಚಿಸಲ್ಪಟ್ಟವು. ಬೇಡಿಕೆ ಹೆಚ್ಚುವ ಸೂಚನೆ ಕಂಡು ಬಂದಾಗ, ಮುಂದಿನ ಎಲ್ಲ (ನಿಶ್ಚಯವಾದ) ಆಟಗಳ ಕುರಿತು ಸ್ಥಳ ಮತ್ತು ತಾರೀಕುಗಳ ಒಂದು ಯಾದಿಯನ್ನು ತಯಾರಿಸಿ ಅವರ ಕೈಗೆ ಕೊಟ್ಟಾಗ, ಒಟ್ಟು 33 ಆಟಗಳು ನಿಶ್ಚಯವಾದುದು ಗೊತ್ತಾಯಿತು.
ಮತ್ತಷ್ಟು ಓದು 
ಸಿಟಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳು ಹ್ಯಾಕ್ ಆದದ್ದಾದರೂ ಹೇಗೆ?
-ಓಂ ಶಿವಪ್ರಕಾಶ್
ಇತ್ತೀಚೆಗೆ ನ್ಯೂಯಾರ್ಕ್ ಟೈಮ್ಸ್ ನಲ್ಲೊಂದು ದೊಡ್ಡ ಸುದ್ದಿ. ೨ಮಿಲಿಯನ್ ಸಿಟಿಬ್ಯಾಂಕ್ ಗ್ರಾಹಕರ ಅಕೌಂಟುಗಳು, ಹೆಸರು, ಕ್ರೆಡಿಟ್ ಕಾರ್ಡುಗಳ ಸಂಖ್ಯೆ, ವಿಳಾಸ ಜೊತೆಗೆ ಇ-ಮೈಲ್ ಎಲ್ಲವೂ ಹ್ಯಾಕರ್ಗಳ ಕೈಗೆ ಸಿಕ್ಕಿವೆ ಎಂದು. ಇದು ಸಾಧ್ಯವಾದದ್ದಾದರೂ ಹೇಗೆ? ಇಲ್ಲಿದೆ ಒಂದು ಸಣ್ಣ ಇಣುಕು ನೋಟ.




