ವಿಷಯದ ವಿವರಗಳಿಗೆ ದಾಟಿರಿ

Recent Articles

8
ನವೆಂ

ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1

ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ                                              

ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ

ಈ ಚರ್ಚೆಯಲ್ಲಿ ನಾನು ದೆಹಲಿ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಮತ್ತು ರಾಜ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾಗಿರುವ ಶ್ರೀಮತಿ ಮೀನಾಕ್ಷಿ ಜೈನ್‌ರೊಂದಿಗೆ ಅವರ ಕೃತಿಗಳ ಬಗ್ಗೆ ವಿಚಾರಮಾಡಲಿದ್ದೇನೆ. ನಾನು ಶ್ರೀಮತಿ. ಮೀನಾಕ್ಷಿ ಜೈನ್‌ರನ್ನು ಸುಮಾರು ಎರಡು ದಶಕಗಳಿಂದ ಬಲ್ಲೆ. ಹಾಗೂ ಅವರನ್ನು ಇಂದಿನ ಭಾರತದಲ್ಲಿ ಒಬ್ಬ ಇತಿಹಾಸ ಮತ್ತು ರಾಜಕೀಯ ವಿಷಯಗಳ ಉತ್ತಮ ವಿದ್ವಾಂಸರೆಂದು ಗೌರವಿಸುತ್ತೇನೆ. ಅವರು ದೆಹಲಿಯಲ್ಲಿ ಶಲ್ಡನ್ ಪೊಲ್ಲಾಕ್‌ನ್ನು ಕುರಿತು ನಡೆದ ೨ನೇ ಸ್ವದೇಶೀ ಇಂಡಾಲಜಿ ಸಮ್ಮೇಳನದಲ್ಲಿ ಭಾಗವಹಿಸಿ, ಒಂದು ಅದ್ಭುತ ಲೇಖನವನ್ನು ಪ್ರಸ್ತುತಪಡಿಸಿದ್ದರು. ಅವರು ಮತ್ತು ನನ್ನಲ್ಲಿ ಇರುವ ಒಂದು ಸಾಮಾನ್ಯ ಅಂಶವೆಂದರೆ ಇಬ್ಬರೂ ನಮ್ಮೊಡನೆ ವಾದ ಮಾಡುವ, ನಮ್ಮನ್ನು ಉಪೇಕ್ಷೆ ಮಾಡುವ ಅಥವಾ ನಮ್ಮ ಹೆಸರೆತ್ತಿ ದೂಷಿಸುವ ಭಾರತೀಯ ಎಡಪಂಥದವರನ್ನು ಟೀಕಿಸಿದ್ದೇವೆ. ಕಳೆದ ಅನೇಕ ವರ್ಷಗಳ ಕಾಲ ಅವರ ಸಂಪರ್ಕವಿರಲಿಲ್ಲ, ಹಾಗಾಗಿ ಈ ಅವಕಾಶವು ನಮಗೆ ಬಹಳ ದಿನಗಳ ವಿಚಾರ ವಿನಿಮಯಕ್ಕೆ ಒದಗಿಬಂದಿದೆ ಎಂದು ತಿಳಿದಿದ್ದೇನೆ. ನಾವು ಭಾರತದ ಶೈಕ್ಷಣಿಕ ವಲಯದಲ್ಲಿ ಎಡಪಂಥೀಯರ ಪ್ರಾಬಲ್ಯ, ಅಯೋಧ್ಯೆ-ಬಾಬರಿ ಮಸೀದಿಯ ವಿವಾದ, ’ಸತಿ’ ಪದ್ಧತಿಯ ಬಗ್ಗೆ ಇರುವ ತಪ್ಪು ತಿಳುವಳಿಕೆಗಳು, ಮೂರ್ತಿಭಂಜನೆ ಮತ್ತು ಸ್ವದೇಶೀ ಇಂಡಾಲಜಿಯ ಸಂಶೋಧನಾ ವಲಯ ಇತ್ಯಾದಿ ಹಲವಾರು ವಿಚಾರಗಳನ್ನು ಚರ್ಚಿಸಿದೆವು.

ಭಾರತದ ಶೈಕ್ಷಣಿಕ ವಲಯದಲ್ಲಿ ಎಡಪಂಥೀಯರ ಪ್ರಾಬಲ್ಯ:

ಭಾರತೀಯ ಶಿಕ್ಷಣವಲಯದಲ್ಲಿ ಬುದ್ಧಿವಂತರಿಗೆ ನೀಡುವ ಪ್ರೋತ್ಸಾಹಧನದ ವಿಚಾರವಾಗಿ ಚರ್ಚಿಸುವಾಗ ಎಡಪಂಥದ ಪ್ರಬಲ ವಿದ್ವಾಂಸರಾದ ಇರ್ಫಾನ್ ಹಬೀಬ್ ಮತ್ತು ರೋಮಿಲಾ ಥಾಪರ್‌ರ ಅಡಿಯಲ್ಲಿ ಶಿಕ್ಷಣವಲಯದಲ್ಲಿ ಉಸಿರುಕಟ್ಟಿಸುವ ವಾತಾವರಣವು ಇತ್ತು ಎಂದು ಅವರು ಅಭಿಪ್ರಾಯಪಟ್ಟರು. ಅವರು ಶಿಕ್ಷಣವಲಯದಲ್ಲಿ ಸಹಾಯಧನವನ್ನು ನೀಡುವ ಎಲ್ಲ ಸಂಸ್ಥೆಗಳ ಮೇಲೆಯೂ ಮತ್ತು ಸಂಶೋಧನೆ ಮಾಡಲು ಬರುವ ಎಲ್ಲ ವಿದ್ಯಾರ್ಥಿಗಳೂ ಇವರ ಅಡಿಯಲ್ಲಿ, ಇವರ ದೃಷ್ಟಿಕೋನದ ಪ್ರಕಾರವೇ ಕೆಲಸ ಮಾಡುವಂತೆ ತಮ್ಮ ಸಂಪೂರ್ಣ ನಿಯಂತ್ರಣವನ್ನು ಚಲಾಯಿಸಿಕೊಂಡಿದ್ದರು. ಹೀಗಾಗಿ ಇವರ ವಿಚಾರಗಳನ್ನು ಬೆಂಬಲಿಸದವರಿಗೆ ಅಥವಾ ಬೇರೆ ಆಲೋಚನೆಯ ಧಾಟಿ ಹೊಂದಿದವರಿಗೆ ಯಾವ ಇತಿಹಾಸಕಾರನಾಗಿ ಅಥವಾ ವಿದ್ವತ್ತಿನಲ್ಲಿಯೂ ತಮ್ಮ ಗುರುತನ್ನು ಉಳಿಸಲು ದುಸ್ತರವಾಗುತ್ತಿತ್ತು. ಯಾರಾದರೂ ವಿಭಿನ್ನವಾದ ಅಥವಾ ವೈರುಧ್ಯದ ದೃಷ್ಟಿಕೋನವನ್ನು ಹೊಂದಿದ್ದರೆ ಅವರು ತಮ್ಮದೇ ಆದ ಮಾರ್ಗವನ್ನು ರೂಪಿಸಿಕೊಳ್ಳ ಬೇಕಾಗಿತ್ತು. ಆ ಮಾರ್ಗವು ಏಕಾಂಗಿಯಾಗಿದ್ದು ಅವರು ತಮ್ಮಷ್ಟಕ್ಕೆ ತಾವೇ ನಡೆಯಬೇಕಾಗಿತ್ತು.

ಮತ್ತಷ್ಟು ಓದು »

7
ನವೆಂ

ಅರಮನೆ ಕಡತಗಳಲ್ಲೇ ಇದೆ ಟಿಪ್ಪು ದೌರ್ಜನ್ಯಕ್ಕೆ ಸಾಕ್ಷಿ

– ಸಂತೋಷ್ ತಮ್ಮಯ್ಯ

ಸರಕಾರ ಹೊರಡಿಸುವ ಕೆಲವು ಗಜೆಟಿಯರುಗಳ ಪುಟ ತೆರೆದರೆ ಇವೆಷ್ಟು ಕೆಜಿ ತೂಗಬಹುದು ಎಂಬ ಭಾವನೆ ಬೇಡಬೇಡವೆಂದರೂ ಬಂದುಬಿಡುತ್ತದೆ. ಏಕೆಂದರೆ ಪ್ರಯೋಜನಕ್ಕಿಲ್ಲದ ಅವೇ ಹಳಹಳಿಕೆಗಳು, ಅಧಿಕೃತತೆಯಿಲ್ಲದ ಮಾಹಿತಿಗಳು, ವಿಕೃತಿಗೊಂಡ ಇತಿಹಾಸಗಳು ಆರಂಭವಾಗುವುದೇ ಈ ಗಜೆಟಿಯರುಗಳಿಂದ. ಸ್ವಾತಂತ್ರ್ಯಾ ನಂತರ ಪ್ರಕಟಗೊಂಡ ಯಾವುದೇ ಜಿಲ್ಲೆಯ ಗಜೆಟಿಯರುಗಳನ್ನು ಗಮನಿಸಿದರೂ ಸೆಕ್ಯುಲರ್ ವಾಸನೆ ಅವುಗಳ ಪುಟಗಳ ಒಳಗಳೊಳಗಿಂದ ರಪ್ಪನೆ ಬಡಿಯುತ್ತದೆ. ಕೊಡಗು ಗಜೆಟಿಯರುಗಳಲ್ಲಿ ಹಾಲೇರಿ ರಾಜರ ಉಲ್ಲೇಖಗಳಿರುತ್ತವೆ. ಆದರೆ ಟಿಪ್ಪುದಾಳಿಯ ಉಲ್ಲೇಖಗಳಿರುವುದಿಲ್ಲ. ಮೈಸೂರು ಗಜೆಟಿಯರುಗಳಲ್ಲಿ ಟಿಪ್ಪು ಗುಣಗಾನವಿರುತ್ತವೆಯೇ ಹೊರತು ಲಕ್ಷ್ಮಮ್ಮಣ್ಣಿಯ ಪ್ರಸ್ಥಾಪವಿರುವುದಿಲ್ಲ. ಮಂಡ್ಯ ಜಿಲ್ಲಾ ಗಜೆಟಿಯರುಗಳು ಇನ್ನೂ ಭಯಾನಕ. ಇತಿಹಾಸದ ಘಟನೆಗಳನ್ನು ವಿವರಿಸುತ್ತಾ ಅಲ್ಲಿ ಇಸವಿಗಳೇ ಮಾಯವಾಗುವ ಚಮತ್ಕಾರಗಳಿವೆ. ಅಂದರೆ ೧೭೫೦ರಿಂದ ೧೮೦೦ರವರೆಗಿನ ಯಾವ ಘಟನೆಗಳೂ ಮಂಡ್ಯ ಜಿಲ್ಲಾ ಗಜೆಟಿಯರುಗಳಲ್ಲಿಲ್ಲ. ಅಂದರೆ ೪ನೇ ಮೈಸೂರು ಯುದ್ಧದ ಪ್ರಮುಖ ಘಟನಾವಳಿಯಾಗಿ ದಾಖಲಾಗುವ ಮಳವಳ್ಳಿ ಯುದ್ಧದ ಬಗ್ಗೆ ಒಂದೇ ಒಂದು ಸಾಲೂ ಇಲ್ಲ. ಒಕ್ಕಲಿಗ ಪರಾಕ್ರಮದ ದಾಖಲೆಯನ್ನು ಅಳಿಸಿಹಾಕಲು ಗಜೆಟ್ ಪಂಡಿತರು ಒಂದು ಕಾಲಘಟ್ಟವನ್ನೇ ಎಗರಿಸಿಬಿಟ್ಟಿದ್ದಾರೆ! ಹಾಗಾಗಿ ಮಳವಳ್ಳಿ ಯುದ್ಧದ ಕುರುಹುಗಳಿದ್ದರೂ, ಇತಿಹಾಸ ಮೈಚೆಲ್ಲಿ ಬಿದ್ದಿದ್ದರೂ ಉರಿಗೌಡ ಮತ್ತು ದೊಡ್ಡನಂಜೇಗೌಡರ ಹೋರಾಟಗಳ ಉಲ್ಲೇಖಗಳು ಸಿಗುತ್ತಿಲ್ಲ. ಮಳವಳ್ಳಿ ಯುದ್ಧವನ್ನೇ ಹೇಳದ ಇಂಥ ಗಜೆಟಿಯರುಗಳನ್ನಿಟ್ಟುಕೊಂಡು ಮಂಡ್ಯ ಜಿಲ್ಲೆಗೇನು ಪ್ರಯೋಜನ? ಹಾಗಾಗಿ ಹಿಂದೆ ಮುಂದೆ ನೋಡದೆ ಸ್ವಾತಂತ್ರ್ಯಾ ನಂತರದ ಮಂಡ್ಯ ಜಿಲ್ಲಾ ಗಜೆಟಿಯರುಗಳನ್ನು ತೂಕಕ್ಕೆ ಹಾಕಬಹುದು. ಅಷ್ಟೇ ಅಲ್ಲ ಟಿಪ್ಪುಸುಲ್ತಾನ್ ಸಮರ್ಥಕರಿಗೆ ದೊಡ್ಡ ಬಲವನ್ನು ಈ ಗಜೆಟಿಯರುಗಳು ಒದಗಿಸುತ್ತಿವೆ. ಟಿಪ್ಪು ಕ್ರೂರತೆಯನ್ನು ಹುಡುಕುವವರಿಗೆ ಇವು ತೊಡಕಾಗುತ್ತಿವೆ. ಮತ್ತಷ್ಟು ಓದು »

4
ನವೆಂ

ಶೃಂಗೇರಿ ಮಠದ ಮೇಲೆ ಮರಾಠರು ದಾಳಿ ಮಾಡಿದ್ದರೇ?

ಮೂಲ ಲೇಖಕ : ಉದಯ್ ಕುಲಕರ್ಣಿ

ಅನುವಾದ : ರಾಕೇಶ್ ಶೆಟ್ಟಿ

ಹೈದರಾಲಿ,ಟಿಪ್ಪು ಸುಲ್ತಾನನಿಂದ ದೇವಾಲಯಗಳ ನಾಶದ ಬಗ್ಗೆ ಮಾತನಾಡಿದ ತಕ್ಷಣ ಶೃಂಗೇರಿ ಮಠದ ಮೇಲೆ ಮರಾಠರು ದಾಳಿ ಮಾಡಿದ್ದರು, ಟಿಪ್ಪು ಸ್ವಾಮೀಜಿಯವರ ಸಹಾಯಕ್ಕೆ ಬಂದಿದ್ದ ಎಂದು ಕಮ್ಯುನಿಸ್ಟರು ಮುಂದೆ ನಿಲ್ಲುತ್ತಾರೆ.ಹಾಗಿದ್ದರೆ ಈ ದುರ್ಘಟನೆಯ ಸತ್ಯವೇನು? ಈ ಘಟನೆಯ ಇನ್ನೊಂದು ಮಗ್ಗುಲನ್ನು ತಿಳಿಸುವ ಇತಿಹಾಸ ತಜ್ಞ ಉದಯ್ ಕುಲಕರ್ಣಿಯವರು ಸ್ವರಾಜ್ಯ ಮ್ಯಾಗಜಿನ್ನಿನಲ್ಲಿ ಬರೆದ ಲೇಖನ ನಿಲುಮಿಗರಿಗಾಗಿ – ನಿಲುಮೆ

ಟಿಪ್ಪುವಿನ ಮತಾಂಧತೆಯನ್ನು ತಮ್ಮ ರೆಡ್ ಕಾರ್ಪೆಟಿನ ಅಡಿಯಲ್ಲಿ ತೂರಿಸುವ ಅಭ್ಯಾಸವುಳ್ಳ ಕಮ್ಯುನಿಸ್ಟ್ ಇತಿಹಾಸಕಾರರು ಆತ ಸೆಕ್ಯುಲರ್ ಆಗಿದ್ದ ಎಂದು ತೋರಿಸಲು ಪದೇ ಪದೇ ಬಳಸುವದು ಮರಾಠರ ಸೈನ್ಯ ಶೃಂಗೇರಿ ಮಠದ ಮೇಲೆ ದಾಳಿ ಮಾಡಿ ಕೊಳ್ಳೆ ಹೊಡೆದ ನಂತರ ಟಿಪ್ಪು ಅದರ ಜೀರ್ಣೋದ್ಧಾರಕ್ಕೆ ಸಹಾಯ ಮಾಡಿದ ಎನ್ನುವುದಾಗಿದೆ. ಆದರೆ ಆ ದಿನ ನಿಜವಾಗಿಯೂ ನಡೆದಿದ್ದೇನು ಎನ್ನುವುದನ್ನು ‘Solstice at Panipat’ ಪುಸ್ತಕ ಲೇಖಕರು ಮತ್ತು ಇತಿಹಾಸಕಾರರಾದ ಉದಯ್ ಕುಲಕರ್ಣಿಯವರು ಲಭ್ಯವಿರುವ ಪುರಾವೆಗಳ ಸಹಿತ ವಿವರಿಸುತ್ತಾರೆ. 

“ಟಿಪ್ಪುವಿನ ನಡೆಗಳು ಸರಿಯಿಲ್ಲ. ಅಹಂಕಾರವೇ ತುಂಬಿರುವ ಆತ ಇತ್ತೀಚಿಗೆ ನೂರ್ ಮುಹಮ್ಮದನಿಗೆ ಬರೆದ ಪಾತ್ರದಲ್ಲಿ ತಾನು 50,000 ಹಿಂದುಗಳನ್ನು, ಮಹಿಳೆಯರು ಮಕ್ಕಳನ್ನು ಒಳಗೊಂಡಂತೆ ಇಸ್ಲಾಮ್ ಗೆ ಮತಾಂತರಿಸಿದ್ದೇನೆ. ಹಿಂದಿನ ಯಾವುದೇ ಪಡಿಶಾಹ್ ಅಥವಾ ವಜೀರ್ ಮಾಡಲಾಗದ್ದನ್ನು ನಾನು ಅಲ್ಲಾಹ್ ಕೃಪೆಯಿಂದ ಮಾಡಿದ್ದೇನೆ . ಹಳ್ಳಿಗೆ ಹಳ್ಳಿಯನ್ನೇ ಮತಾಂತರಿಸಿದ್ದೇನೆ ಎನ್ನುತ್ತಾನೆ” – ನಾನಾ ಫಡ್ನವಿಸ್ ಅವರು ಮಹಾಡ್ಜಿ ಸಿಂಧಿಯಾಗೇ ಬರೆದ ಪತ್ರ 5 September 1784.

ಥಾಮಸ್ ಡೇನಿಯಲ್ ಮತ್ತು  ಜೇಮ್ಸ್ ವೇಲ್ಸ್ ಅವರು ಬಿಡಿಸಿರುವ ಚಿತ್ರವೊಂದು ಪುಣೆಯ ಶನಿವಾರ್ ವಾಡದಲ್ಲಿ ಗಮನ ಸೆಳೆಯುತ್ತದೆ.ಬ್ರಿಟಿಷರ ಚಾರ್ಲ್ಸ್ ಎಂ ಮಾಲೆಟ್  ಮತ್ತು ಮರಾಠರ ನಡುವಿನ ಒಪ್ಪಂದದ ಚಿತ್ರವದು.  ಮಾಲೆಟ್ ವಿಶೇಷ ಆಸಕ್ತಿಯಿಂದ ಮಾಡಿಸಿದ ಈ ಚಿತ್ರವು, ಮರಾಠರು,ನಿಜಾಮರನ್ನು ಬ್ರಿಟಿಷ್ ಪಡೆಯೊಂದಿಗೆ ಸೇರಿಕೊಳ್ಳುವಂತೆ ಆತ ನಡೆಸಿದ ರಾಜತಾಂತ್ರಿಕತೆಯ ಪ್ರಾಮುಖ್ಯತೆಯನ್ನು ಹತ್ತು ವರ್ಷಗಳ ಹಿಂದೆ ಬ್ರಿಟಿಷರು ಹೊಂದಿದ್ದ ಮಿತ್ರ ಪಡೆಯನ್ನು ನೋಡುವ ಮೂಲಕ ಗಮನಿಸಬೇಕು. ಆ ಸಮಯದಲ್ಲಿ ಹೈದರಾಲಿಯ ಮರಾಠರ ಮಿತ್ರನಾಗಿದ್ದ. 1790 ರ ಸಮಯಕ್ಕಾಗಲೇ ಟಿಪ್ಪು ತನ್ನ ತಂದೆಯ ಹಳೆಯ ಮಿತ್ರಪಡೆಗಳಲ್ಲಿ ಅದೆಷ್ಟು ಆಕ್ರೋಶ ಮೂಡಿಸಿದ್ದನೆಂದರೆ ಅವರು ಬ್ರಿಟಿಷರೊಂದಿಗೆ ಕೈ ಜೋಡಿಸಿಬಿಟ್ಟಿದ್ದರು.

1790-1792ರ ನಡುವೆ ಟಿಪ್ಪುವಿನ ಮೇಲೆ ನಡೆದ ಯುದ್ಧದ ಸಮಯದಲ್ಲಿ, ಮರಾಠರ ಸೇನಾ ಮುಖ್ಯಸ್ಥ ರಘುನಾಥ ರಾವ್ ‘ದಾದಾ’ ಕುರುಂದ್ವಾಡ್ಕರ್ ಅವರ ಮೇಲ್ವಿಚಾರಣೆಯಲ್ಲಿದ್ದ ಸೇನೆಯ ತುಕಡಿಯೊಂದು ಶೃಂಗೇರಿಯ ಶಂಕರಾಚಾರ್ಯ ಮಠದ ಮೇಲೆ ದಾಳಿ ಮಾಡಿ, ಲೂಟಿಗೈದು ಹಾಳುಗೆಡವಿತ್ತು. ಇಂದಿಗೂ ಮಾಗದ ಗಾಯದಂತಿರುವ ಈ ದಾಳಿಯ ಹೊಣೆಯನ್ನು ಮರಾಠರು ಮತ್ತು ಪರಶುರಾಮ್ ಭಾವ್ ಪಟವರ್ಧನ್ ಅವರ ಮೇಲೆಯೇ ಹೊರಿಸಲಾಗಿದೆ.1791ರ ಸಮಯದಲ್ಲಿ ಮರಾಠರ ನಡುವೆ ಈ  ಅನಾಹುತದ ಸುತ್ತ  ನಡೆದಿರುವ ಪತ್ರ ವಿನಿಮಯಗಳ ಮೇಲೆ ಭಾಷಾ ಸಮಸ್ಯೆಯಿಂದಲೋ ಅಥವಾ ಉದ್ದೇಶಪೂರ್ವಕವಾಗಿಯೋ ಬೆಳಕು ಚೆಲ್ಲಲಾಗಿಲ್ಲ.

ಮತ್ತಷ್ಟು ಓದು »

3
ನವೆಂ

ಕಾರಂತ ಸಾಹಿತ್ಯ: ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೧)

ದೇವು ಹನೆಹಳ್ಳಿ
ಬಂಡಿಮಠ, ಹನೆಹಳ್ಳಿ ಗ್ರಾಮ,
ಬಾರಕೂರು, ಉಡುಪಿ ತಾಲೂಕು-ಜಿಲ್ಲೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಯು.ಜಿ.ಸಿ ಅನುದಾನದಲ್ಲಿ ಸುಬ್ರಹ್ಮಣ್ಯದಲ್ಲಿ ಏರ್ಪಡಿಸಿದ ಎರಡು ದಿನಗಳ ವಿಚಾರಸಂಕಿರಣದಲ್ಲಿ ದಿನಾಂಕ 4-3-2017ರಂದು ಮಂಡಿಸಿದ ಲೇಖನ.

ಸತ್ಯಮೇವ ಜಯತೆ ನ ಅನೃತಂ ಎಂಬ ಪರಮ ಪವಿತ್ರ ಸುಳ್ಳಿನ ಕೃಪಾಛತ್ರದಡಿಯಲ್ಲಿ ಮಾತನಾಡುವುದು, ಬದುಕುವುದು ಅದೆಷ್ಟು ಸುಖದಾಯಕ ಎಂಬುದು ಕೇಂದ್ರ ಸಚಿವ ಕಿರಣ್ ರಿಜುಜು ಅವರಿಗೆ ಅರ್ಥವಾಗಿರಬಹುದು; ನ್ಯಾಯಮೂರ್ತಿ ಕರ್ಣನ್ ಅವರಿಗೆ ಬಲು ಚೆನ್ನಾಗಿಯೇ ಅರ್ಥವಾಗಿರಬೇಕು.*1 ಹಾಗೆಯೇ, Whatsapp, Facebookಗಳ ಕೆಮರಾ ಮುಂದೆ ಕರಕಲಾದ, ಹಳಸಲು ವಾಸನೆ ಬೀರುತ್ತಿರುವ ರೊಟ್ಟಿಯನ್ನು ಹಿಡಿದು `ದಂಗೆಯೆದ್ದ’ ಸೈನಿಕರಿಗೆ ಮೈಕೈ ನೋಯುವಂತೆ ಅರ್ಥವಾಗಿರಬಹುದು. ಇವತ್ತು ಅಂತಹ ಒಂದು ಹಳಸಲು ರೊಟ್ಟಿಯನ್ನು ನಿಮಗೆಲ್ಲ ಬಡಿಸಲು ನಿಂತಿದ್ದೇನೆ. ಅದು ಕನ್ನಡ ಸಾಹಿತ್ಯದಲ್ಲಿ ಶಿವರಾಮ ಕಾರಂತರು ಹಿಡಿದ ರೊಟ್ಟಿ. ಬಲು ಸ್ವಾದಿಷ್ಟ ರೊಟ್ಟಿಯೆಂದು ಬಾಯಲ್ಲಿ ಹೇಳುತ್ತಾ ಹಲವಾರು ಮಂದಿ ಕನ್ನಡದ ಸಾಹಿತಿಗಳು, ರಾಜಕಾರಣಿಗಳು, ಬುದ್ಧಿಜೀವಿಗಳು ಮತ್ತು ವಿಮರ್ಶಕರು ಮೂಗುಮುಚ್ಚಿಕೊಂಡೇ ಸವಿಸವಿದು ತಿಂದ ಕೊಳೆತ ರೊಟ್ಟಿ. King is naked ಎಂದು ಘೋಷಿಸಿಬಿಡುವುದು ಜಾಣತನವೂ ಅಲ್ಲ, ಲಾಭದಾಯಕವೂ ಅಲ್ಲ, politically correct, politically lucrative ಕೂಡಾ ಅಲ್ಲ. ಆದರೂ ಹೇಳುವ ಮನಸ್ಸು ಮಾಡಿದ್ದೇನೆ. ಕಳೆದುಕೊಳ್ಳುವುದಕ್ಕೆ ಏನೂ ಉಳಿದಿಲ್ಲ. ಮತ್ತಷ್ಟು ಓದು »

31
ಆಕ್ಟೋ

ದೇವರ ನಾಡಿನಲ್ಲಿ ನಾ ಕಂಡ ಮನುಷ್ಯರು

– ಅನಿಲ್ ಚಳಗೇರಿ

ದೇವರ ನಾಡಿನಲ್ಲಿ ನಾ ಕಂಡ ಮನುಷ್ಯರು – 1

ಕೈಯಲ್ಲಿ ಉದ್ದನೇಯ ಕೋಲು, ಹೆಗಲಿಗೊಂದು ಚೀಲ, ಕಾಲಲ್ಲಿ ಸ್ಪೋರ್ಟ್ಸ್ ಶೂಸ್ ಹಾಕಿಕೊಂಡ ಹಿರಿಯರೊಬ್ಬರು ಆಗಲೇ ನಮ್ಮ ಜೊತೆ 23 ಕಿಲೋ ಮೀಟರಿನಿಂದ ನಡೆದುಕೊಂಡು ಬಂದಿದ್ದರು (ಹತ್ತಾರು ಸಾವಿರ ಕಾರ್ಯಕರ್ತರ ಮಧ್ಯೆ ಅದೆಲ್ಲೋ ಹತ್ತಿಪತ್ತನೇ ಸಾಲಿನಲ್ಲಿ ಯಾರಿಗೂ ಕಾಣದೆ), ನಾವು ಅವರನ್ನು ಕುತೂಹಲದಿಂದ ನೋಡುತ್ತಿರುವದನ್ನು ಗಮನಿಸಿದ ಅವರು, ತಮ್ಮನ್ನು ತಾವು ಪರಿಚಯಿಸಿಕೊಂಡರು. ” I am captain Pillai, retired army officer, I am 71 years young and I have been walking from the day one and covered 150 kms today” ಅಂತ ಹೇಳಿದರು. ನಿಮಗೆ ಪ್ರೇರಣೆಯೇನು ? ನಿಮ್ಮ ಅಥವಾ ಮೇಲೆ ಏನಾದ್ರೂ ಅಟ್ಯಾಕ್ ಆಗಿತ್ತಾ?, ಅಂತ ಕೇಳಿದರೆ, “ನಾನು ದೇಶಕ್ಕೋಸ್ಕರ ದುಡಿದವನು, ನನಗೆ ಕಳ್ಳ ಕಮ್ಯುನಿಸ್ಟರ ನರಿ ಬುದ್ಧಿಯ ಬಗ್ಗೆ ತುಂಬಾ ಚೆನ್ನಾಗಿ ಗೊತ್ತು, ” ನನ್ನ ಕೊನೆಯ ಉಸಿರಿರುವವರೆಗೆ ಅವರನ್ನು ವಿರೋಧಿಸುವೆ” ಅಂದಾಗಲೇ ನೆನಪಾಗಿದ್ದು ಅಕ್ಷಯ್ ಕುಮಾರ್ ನಟಿಸಿದ ” ಹಾಲಿಡೇ” ಚಿತ್ರ. “a soldier never takes rest” ಶೀರ್ಷಿಕೆ…. ಮುಂದೆರಡು ದಿನ ಎಪ್ಪತ್ತರ ಹರೆಯದ ಆ ಮಾಜಿ ಸೈನಿಕನ ದಿಟ್ಟ ಹೆಜ್ಜೆಗಳೇ ನಮ್ಮೆಲ್ಲರ ನಡಿಗೆಗೆ ಪ್ರೇರಣೆಯಾಯಿತು … ಮತ್ತಷ್ಟು ಓದು »

29
ಆಕ್ಟೋ

ಬಾಳಿನ ಹಾರರ್ ಕತೆಯನ್ನು ಸೋಲಿಸಿದ ಹಾರರ್ ಕಾದಂಬರಿಕಾರನ ಕತೆಯಿದು. 

– ಗುರುರಾಜ ಕೊಡ್ಕಣಿ, ಯಲ್ಲಾಪುರ

ಇತ್ತೀಚೆಗೆ ಬಿಡುಗಡೆಯಾದ ‘ಇಟ್’ ಎನ್ನುವ ಆಂಗ್ಲ ಸಿನಿಮಾದ ಬಗ್ಗೆ ನೀವು ಕೇಳಿರಬಹುದು. 2017ರ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾದ ಈ ಹಾರರ್ ಸಿನಿಮಾ ವಿಶ್ವದಾದ್ಯಂತ ಭಯಂಕರ ಸದ್ದು ಮಾಡಿತ್ತು. ಬಿಡುಗಡೆಯಾದ ಮೊದಲ ವಾರದಲ್ಲೇ ಸುಮಾರು ಒಂದು ಸಾವಿರ ಕೋಟಿ ರೂಪಾಯಿಗಳಷ್ಟು ದುಡ್ಡು ಬಾಚಿ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ವರ್ಷದ ಮೊದಲ ಇಂಗ್ಲಿಷ್ ಹಾರರ್ ಚಿತ್ರವಿದು. ವರ್ಷದ ಅತಿಹೆಚ್ಚು ಗಳಿಕೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಈ ಸಿನಿಮಾ ಗಳಿಕೆಯ ವಿಷಯದಲ್ಲಿ ಸಾರ್ವಕಾಲಿಕವಾಗಿ ಹಾರರ್ ಸಿನಿಮಾಗಳ  ಪಟ್ಟಿಯ ಐದನೇಯ ಸ್ಥಾನಕ್ಕೆ ನಿಂತಿದೆ. ಸಾಮಾನ್ಯವಾಗಿ ಹಾಸ್ಯಕ್ಕೋ, ಅಪಹಾಸ್ಯಕ್ಕೋ ಬಳಕೆಯಾಗುವ ಸರ್ಕಸ್ಸಿನ ಜೋಕರ್‌‍ನನ್ನು ‍ಅತಿಮಾನುಷ ಶಕ್ತಿಯುಳ್ಳ ವಿಲಕ್ಷಣ ವ್ಯಕ್ತಿತ್ವದಂತೆ ಬಳಸಿಕೊಂಡು ಭಯಹುಟ್ಟಿಸುವ, ಕ್ಷಣಕ್ಷಣಕ್ಕೂ ಕುತೂಹಲ ಮೂಡಿಸುತ್ತ ಒಂದು ಅಸಹನೀಯ ಶಾಂತತೆಯ ನಡುವೆಯೇ ಏಕಾಏಕಿ ನೋಡುಗರನ್ನು ಬೆಚ್ಚಿಬೀಳಿಸಿ ಬೆನ್ನ ಹುರಿಯಾಳದಲ್ಲೊಂದು ನಡುಕ ಹುಟ್ಟಿಸುವ ಸಿನಿಮಾದ ವಿಭಿನ್ನ ಶೈಲಿಯ ಕಥಾವಸ್ತುವೇ ಈ ಸಿನಿಮಾದ ಅದ್ಭುತ ಯಶಸ್ಸಿಗೆ ಕಾರಣ ಎಂದರೆ ತಪ್ಪಾಗಲಿಕ್ಕಿಲ್ಲ. 1986ರಲ್ಲಿ ರಚಿತವಾದ ಇದೇ ಹೆಸರಿನ ಕಾದಂಬರಿಯನ್ನು ಸಿನಿಮಾವನ್ನಾಗಿಸಿ ಗೆಲುವು ಕಾಣುವಲ್ಲಿ ನಿರ್ದೇಶಕ ಆಂಡಿ ಮಶ್ಚಿಯಾಟಿ ಯಶಸ್ವಿಯಾಗಿದ್ದಾರೆ. ತೀರ ಹೀಗೆ ಜೋಕರ್‍‌ನಂತಹ ಹಾಸ್ಯರಸ ಪ್ರಧಾನ ಪಾತ್ರದಲ್ಲಿಯೂ  ಭಯಾನಕತೆಯನ್ನು ಮೂಡಿಸಬಹುದೆನ್ನುವ ವಿಕ್ಷಿಪ್ತ ಸೃಜನಶೀಲ ಪರಿಕಲ್ಪನೆಯನ್ನು ಕಟ್ಟಿಕೊಟ್ಟವರಾದರೂ ಯಾರೆಂದು ಹುಡುಕುತ್ತ ಹೊರಟಾಗ ಸಿಕ್ಕ ಅಂಗ್ಲ ಸಾಹಿತಿಯ ಹೆಸರು ಸ್ಟೀಫನ್ ಕಿಂಗ್. ಈಗಾಗಲೇ ಇಂಗ್ಲೀಷ್ ಸಾಹಿತ್ಯಲೋಕದಲ್ಲಿ ವಿಶ್ವದಾದ್ಯಂತ ಹೆಸರುವಾಸಿಯಾಗಿರುವ ಸ್ಟೀಫನ್ ಕಿಂಗ್‌ನ ಬದುಕಿನ ಕತೆಯೂ ಯಾವುದೇ ರೋಚಕ ಸಿನಿಮಾದ ಕತೆಗಿಂತಲೂ ಕಡಿಮೆಯೇನಲ್ಲವೆಂದರೆ ಅತಿಶಯೋಕ್ತಿಯಾಗಲಾರದು. ಮತ್ತಷ್ಟು ಓದು »

27
ಆಕ್ಟೋ

ಕ್ರೂರಿಯೇ ನಮ್ಮ ನಾಡಿನ ಆದರ್ಶ ವ್ಯಕ್ತಿಯಾಗಬೇಕೆ ?

– ಡ್ಯಾನಿ ಪಿರೇರಾ

ಭಾರತದ ಇತಿಹಾಸದುದ್ದಕ್ಕೂ ವಿವಾದಾತ್ಮಕ ವ್ಯಕ್ತಿಗಳನ್ನು ಈ ರಾಷ್ಟ್ರದ ಜನಮಾನಸದಲ್ಲಿ ಸರ್ವಮಾನ್ಯ ಮಾಡಬೇಕೆಂಬ ಪ್ರಯತ್ನ ನಿರಂತರವಾಗಿ ನಡೆದಿದೆ. ಬದಲಾದ ವ್ಯವಸ್ಥೆಯಲ್ಲಿ ಆಳುವವರ ಮರ್ಜಿಗೆ ಸಿಲುಕಿದ ಇತಿಹಾಸಕಾರರು ಮಿಥ್ಯೆಯನ್ನು ಸತ್ಯವೆಂದು ತುರುಕುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಅವರ ಸಿದ್ಧಾಂತಗಳ ಮೂಸೆಯಲ್ಲಿ ದೇಶಭಕ್ತರು ಖಳನಾಯಕರಾದರೆ, ಖಳನಾಯಕರು ಬೆಳಗಾಗುವದರೊಳಗೆ ದೇಶಭಕ್ತರಾಗಿ ರೂಪಾಂತರಗೊಂಡಿದ್ದಾರೆ! ಈ ಹಿನ್ನೆಲೆಯಲ್ಲಿ ಎಂದಿನಂತೆ ಟಿಪ್ಪು ಜಯಂತಿ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಹಾಗಾಗಿ ಕೆಲವರಿಗೆ ಟಿಪ್ಪು ಜಾತ್ಯತೀತ ಮತ್ತೆ ಕೆಲವರಿಗೆ ಮತಾಂಧನಾಗಿ ಗೋಚರಿಸುತ್ತಿದ್ದಾನೆ. ಈ ದೇಶದ ವಿಚಿತ್ರವೇನೆಂದರೆ ಈ ದೇಶದಲ್ಲಿ ಮುಸಲ್ಮಾನರಲ್ಲೇ ಈ ದೇಶಕ್ಕೆ ಬಹುದೊಡ್ಡ ಕೊಡುಗೆಯನ್ನು ಕೊಟ್ಟ ಮಹನೀಯರಿದ್ದಾರೆ. ಅವರ್ಯಾರನ್ನೂ ಈ ಸಮಾಜ ಧರ್ಮದ ಹೆಸರಲ್ಲಿ ಗುರುತಿಸುವುದಿಲ್ಲ. ಅವರು ಇಸ್ಲಾಂ ಚಿಂತನೆಗಳೊಂದಿಗೆ ಬೆಳೆದರೂ ಬೆಳೆ ಬೆಳೆದಂತೆ ಅವರ ವಾಸ್ತವ ಬದುಕಿನ ತಮ್ಮ ಪ್ರಪಂಚವನ್ನು ವಿಶಾಲಗೊಳಿಸಿದ್ದರಿಂದ ಮುಸ್ಲೀಮೇತರರಲ್ಲೂ ಅವರು ಆದರಣೀಯರಾಗಿದ್ದಾರೆ. ದುರ್ದೈವವೆಂದರೆ ಅವರು ಹುಟ್ಟಿದ ಸಮಾಜದಲ್ಲೇ ಕಡೆಗಣಿಸಲ್ಪಟ್ಟಿರುವುದರಿಂದ ಈ ದೇಶದ ಸೆಕ್ಯುಲರ್ ಪಟ್ಟಿಯಲ್ಲಿ ಅವರಿಗೆ ಮಹತ್ವದ ಸ್ಥಾನವಿಲ್ಲ. ಮತ್ತಷ್ಟು ಓದು »

27
ಆಕ್ಟೋ

ಜನರಕ್ಷಾಯಾತ್ರೆ : ಕಮ್ಯುನಿಸ್ಟ್ ರಕ್ತಚರಿತ್ರೆಯ ಅಂತ್ಯದ ಆರಂಭ

– ರಾಕೇಶ್ ಶೆಟ್ಟಿ

True Strength is in the Soul and Spirit. Not in Muscles ಅಂತೊಂದು ಮಾತಿದೆ. ಕೇರಳದ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಮತ್ತು ಸಂಘಟನೆಗೆ ಅನ್ವಯವಾಗುವ ಮಾತಿದು. ಕಮ್ಯುನಿಸ್ಟರ 48 ವರ್ಷಗಳ ನಿರಂತರ ರಕ್ತಪಾತ,300ಕ್ಕೂ ಹೆಚ್ಚು ಸ್ವಯಂ ಸೇವಕರ ಹತ್ಯೆಗಳು,ಮಾರಣಾಂತಿಕ ಹಲ್ಲೆಗಳ ನಂತರವೂ, ಪ್ರಸ್ತುತ ನಡೆಯುತ್ತಿರುವ ಜನರಕ್ಷಾಯಾತ್ರೆಯಲ್ಲಿ ಸಾವಿರಾರು ಜನರು ಸ್ವಯಂ ಸ್ಫೂರ್ತಿ, ಮತ್ತು ಧೈರ್ಯದಿಂದ ಪಾಲ್ಗೊಳ್ಳುವುದನ್ನು ನೋಡಿದರೆ, ಕೇರಳದ ಜನತೆ, ಅನ್ಯಾಯ,ಹಿಂಸಾಚಾರವನ್ನು ಪ್ರತಿಪಾದಿಸುವ ಸರ್ವಾಧಿಕಾರಿ ಕಮ್ಯುನಿಸ್ಟ್ ಪಕ್ಷದ ಆಡಳಿತ ಕೊನೆಯಾಗಲೇಬೇಕೆಂದು ಆಶಿಸುತ್ತಿರುವ ಸ್ಪಷ್ಟ ಸಂದೇಶದಂತಿದೆ.

ಅಕ್ಟೊಬರ್ 3ಕ್ಕೆ ಪಯ್ಯನೂರಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರಿಂದ ಆರಂಭವಾಗಿ, 15 ದಿನಗಳ ಕಾಲ ಕೇರಳಾದಾದ್ಯಂತ ಸಂಚರಿಸಿ, ಅಕ್ಟೊಬರ್ 17ಕ್ಕೆ ಅಮಿತ್ ಷಾ ಅವರಿಂದಲೇ ತಿರುವನಂತಪುರಂನಲ್ಲಿ ಯಾತ್ರೆ ಕೊನೆಗೊಂಡಿದೆ.ಯಾತ್ರೆ ಆರಂಭವಾದ ದಿನ ಕಮ್ಯುನಿಸ್ಟರ ರಾಜಕೀಯ ಹಿಂಸಾಚಾರದ ಮೂಲಸ್ಥಾನ (ಕೇರಳದ ಇಂದಿನ ಮುಖ್ಯಮಂತ್ರಿಯ ತವರು) ಕಣ್ಣೂರಿನ 84 ಬಲಿದಾನಿಗಳ ಕುಟುಂಬದವರು ಪಾಲ್ಗೊಳ್ಳುವ ಮೂಲಕ ಶುರುವಾದ ಯಾತ್ರೆ, ಕಣ್ಣೂರು ಅದರಲ್ಲೂ ಮುಖ್ಯವಾಗಿ ಪಿಣರಾಯಿಯಂತಹ ಕಮ್ಯುನಿಸ್ಟ್ ನಟೋರಿಯಸ್ ಪಾರ್ಟಿ ವಿಲೇಜುಗಳನ್ನು ಹಾದು ಹೋಗಿದೆ. ಮುಖ್ಯಮಂತ್ರಿಯ ಪಿಣರಾಯಿಯನ್ನೇಕೆ ನಟೋರಿಯಸ್ ಎನ್ನುತ್ತಿದ್ದೇನೆ ಎಂದು ತಿಳಿದುಕೊಳ್ಳಬೇಕೆಂದರೆ ಕಮ್ಯುನಿಸ್ಟ್ ಪಾರ್ಟಿ ವಿಲೇಜುಗಳ ಬಗ್ಗೆ ತಿಳಿದುಕೊಳ್ಳಬೇಕು.

ಮತ್ತಷ್ಟು ಓದು »

26
ಆಕ್ಟೋ

ಉತ್ತರ ಸಿಗದ ನನ್ನ ಪ್ರಶ್ನೆಗಳು

– ವಿದ್ಯಾ ಕುಲಕರ್ಣಿ

ಜಿಜ್ಞಾಸು, ಪ್ರಬುದ್ಧರ ಚಿಂತನೆ, ಕುಲುಮೆ, ನಿಲುಮೆ ಈ ಗುಂಪುಗಳಲ್ಲಿ ನಾನು ಕೆಲವು ಪ್ರಶ್ನೆಗಳನ್ನು ಕೇಳುತ್ತಲೇ ಬಂದಿದ್ದೇನೆ. ಅವುಗಳಿಗೆ ಯಾರೂ ಸಮರ್ಪಕ ಉತ್ತರ ಕೊಡದೇ ಪುನಃ ಬೇರೆ ಬೇರೆ ಪ್ರಶ್ನೆ ಕೇಳುತ್ತಲೇ ಹೋಗುತ್ತಾರೆ.

ನನ್ನ ಪ್ರಶ್ನೆಗಳಿಗೆ ಉತ್ತರಿಸಿ ಎಂದರೆ “ಉತ್ತರಿಸಿದ್ದೇನೆ. ನಿಮಗೆ ತಿಳಿಯದಿದ್ದರೆ ಏನು ಮಾಡಲಿ??” “ನಿಮಗೆ ಗ್ರಹಿಸುವ ಶಕ್ತಿ ಇಲ್ಲ ಏನು ಮಾಡಲಿ?” ಇತ್ಯಾದಿ ಹಾರಿಕೆಯ ಉತ್ತರ ಕೊಡುತ್ತಾರೆ. ಹಾಗಿದ್ದರೆ ನನ್ನ ಪ್ರಶ್ನೆಗಳಾದರೂ ಏನು??

ಪುನಃ ಅದೇ ಪ್ರಶ್ನೆಗಳನ್ನು ಕ್ರೋಢೀಕರಿಸಿ ನಂಬರ್ ಕೊಟ್ಟು ಕೇಳುತ್ತಿದ್ದೇನೆ. ಈಗಲಾದರೂ ಉತ್ತರಿಸುವ (ನಂಬರ್ ಪ್ರಕಾರ ಉತ್ತರಿಸುವ) ಸೌಜನ್ಯ ಯಾರಾದರೂ  ತೋರಿಸುತ್ತೀರಾ?? ಮತ್ತಷ್ಟು ಓದು »

22
ಆಕ್ಟೋ

ಲಿಂಗಾಯತವೆಂಬುದು ಹೊಸ ಧರ್ಮವೇ? … ಭಾಗ 2

– ದೇವು ಹನೆಹಳ್ಳಿ,
ಬಾರಕೂರು, ಉಡುಪಿ

ಮತ,ಪಂಥ,ಧರ್ಮ,Religion ಇತ್ಯಾದಿ… ಭಾಗ 1

Religion ಅನ್ನು `ಧರ್ಮ’ ವೆಂದು ಅನುವಾದಿಸಿದ್ದು ಶತಮಾನದ ದೊಡ್ಡ ಅಕ್ರಮ-ಸಕ್ರಮ ಯೋಜನೆ.    

ನಾವು ಭಾರತೀಯರು Religion ಎಂಬ ಏಕಸೂತ್ರದಲ್ಲಿ ಇಲ್ಲ ಎಂಬುದು ನಮ್ಮ ಸುಪ್ತಪ್ರಜ್ಞೆಗೆ ಗೊತ್ತು. ಏಕಸೂತ್ರಕ್ಕೆ ಏನೆನ್ನಬೇಕು? ಅದೊಂದು Religion ಅಲ್ಲ, ಜೀವನವಿಧಾನ ಎಂದು ಯಾರೋ ಅಂದರು. (ಎಂ.ಬಿ. ಪಾಟೀಲರೂ ಅದನ್ನೇ ಹೇಳುತ್ತಾರೆ! `ಹಿಂದೂ ಎಂಬುದಿಲ್ಲ; ಇಲ್ಲಿದ್ದುದು ಬರೇ ಜಾತಿಗಳು’ಎಂದು ಕಾಗೋಡು ತಿಮ್ಮಪ್ಪನವರು ಸರಿಯಾಗಿಯೇ ಹೇಳಿದ್ದಾರೆ.) ಜೀವನಧರ್ಮ ಎಂದರು. ಸನಾತನ ಪದ್ಧತಿ ಎಂದರು. ಸನಾತನ ಧರ್ಮ ಎಂದುಬಿಟ್ಟರು. `ಧರ್ಮ’ ಎಂದುಬಿಟ್ಟ ಅಚಾತುರ್ಯವಿದೆಯಲ್ಲಾ, ಅದು ಈ ಶತಮಾನದ ಒಂದು ದೊಡ್ಡ ಅಕ್ರಮ-ಸಕ್ರಮ ಯೋಜನೆ.

ಈ ಅಸ್ಪಷ್ಟವಾದ ‘ಧರ್ಮ’ ಎಂಬ ಪದ ಬಳಕೆಯಾದ ಕಾಲಘಟ್ಟದಲ್ಲಿ ನಡೆದುಹೋದ ಒಂದು ಚಾರಿತ್ರಿಕ ಘಟನೆಯೆಂದರೆ ಚಿಕಾಗೋದಲ್ಲಿ ನಡೆದ Parliament of World’s Religions. ಇದನ್ನು ಭಾರತೀಯ ಭಾಷೆಗಳಿಗೆ, ಕನ್ನಡಕ್ಕೆ ವಿಶ್ವ ಸರ್ವಧರ್ಮ ಸಮ್ಮೇಳನ ಎಂದು ಭಾಷಾಂತರಿಸಲಾಯಿತು. (ಅದಾಗಲೇ ಉತ್ತರಭಾರತದಲ್ಲಿ ಹಲವಾರು ಭಾಷೆಗಳ ಪದಗಳನ್ನು ಎರವಲು ಪಡೆದು ‘ಹಿಂದಿ’ ಎಂಬ ಹೊಸ ಭಾಷೆಯನ್ನು ತಯಾರಿಸುತ್ತಿದ್ದ  ಕಾಲದಲ್ಲಿ ಮತಕ್ಕೆ (Religion) ಬದಲಾಗಿ, ಧರಮ್ ಎನ್ನುವ ಪರಿಪಾಠ ಬಂದಿತ್ತು.) ಅದುವರೆಗೆ Religionಗೆ ಸಂವಾದಿಯಾಗಿ, ಸಮಾನಾರ್ಥಕವಾಗಿ ಬಳಕೆಯಾಗುತ್ತಿದ್ದ ‘ಮತ’ ಎಂಬ ಶಬ್ದವನ್ನು ಕದಲಿಸಿ ಅಲ್ಲಿ ‘ಧರ್ಮ’ ಎಂಬ ಪದವನ್ನು ಕೂರಿಸಲಾಯಿತು.  ಧರ್ಮ ಎಂಬುದು ಯಾವತ್ತೂ ಋತ, ನ್ಯಾಯ, ನೀತಿ, ಸತ್ಯ, ಋಜುತ್ವ, ದಯೆ, ಕರುಣೆ, ಕರ್ತವ್ಯ, ನ್ಯಾಯಸಮ್ಮತ ನಡವಳಿಕೆ ಮುಂತಾದ ಮಾನವೀಯ ಮೌಲ್ಯಗಳ ಮೊತ್ತವಾಗಿ ಗ್ರಹಿಸಿದ್ದೇ ವಿನಃ ಸಂಕುಚಿತ ಮತೀಯ ತೀರ್ಮಾನ, ಗ್ರಹಿಕೆಗಳಾಗಿ ಅಲ್ಲ.

ಭಾರತೀಯ ಸಂದರ್ಭದಲ್ಲಿ  Religionಗೆ ಸಂವಾದಿಯಾಗಿ ‘ಮತ’ ಎನ್ನುವುದಕ್ಕಿಂತ ‘ಧರ್ಮ’ಎಂದರೆ ಹೆಚ್ಚು ಸ್ವೀಕಾರಾರ್ಹತೆ, Legitimacy, ಬರುವ ವಾಸನೆ ಬಡಿಯುತ್ತಲೇ ರಕ್ತದಲ್ಲಿ ಮಿಂದೆದ್ದ Religion(ಮತ)ಗಳೆಲ್ಲ ತಮ್ಮನ್ನು ಧರ್ಮ ಎಂದು ಕರೆದುಕೊಳ್ಳಲಾರಂಭಿಸಿದವು. ಮತಪಂಥಗಳ ಕುರಿತಾದ ವಾಗ್ವಾದವನ್ನೇ ಹಾಳುಗೆಡವಿದ ಈ ವಿದ್ಯಮಾನ ಎಲ್ಲ ಭಾರತೀಯ ಭಾಷೆಗಳ ಪದಕೋಶಗಳನ್ನು ಕಲುಷಿತಗೊಳಿಸಿಬಿಟ್ಟಿತು. ಯುರೋಪಿಯನ್ ಭಾಷೆಗಳಲ್ಲಿ Religion ಮತ್ತು Munificence+Benevolence +Values+ Rectitude ಒಂದೇ ಅಲ್ಲ; ಆದರೆ ಭಾರತದಲ್ಲಿ ಮತ ಮತ್ತು ಧರ್ಮ ಎಂದರೆ ಒಂದೇ!

‘ನೂರು ಮತಗಳ ಹೊಟ್ಟ ತೂರಿ…’ ಎಂದು ಹಾಡುವ ಕಾಲದಲ್ಲಿ ಕುವೆಂಪು ಅವರ ಶಬ್ದಕೋಶ ಸರಿಯಿತ್ತು. ಆದರೆ ಅವರೇ `ಇಸ್ಲಾಂ ಧರ್ಮ’ ಎಂಬ ಹೊತ್ತಗೆ ಬರೆದರು! ಆದರೆ ಪಂಪನಿಗೆ ಈ ಗೊಂದಲವಿರಲಿಲ್ಲ. ಧರ್ಮ ಎಂದರೇನು, ಅಧರ್ಮ ಎಂದರೇನು? ಪಂಪ ಸ್ಪಷ್ಟವಾಗಿ ಹೇಳುತ್ತಾನೆ:

ಮತ್ತಷ್ಟು ಓದು »