ಕಳೆದ ಒಂದು ವಾರದಿಂದ ನಾನು ಕೇಳಲ್ಪಟ್ಟ ಐದು ಸುಳ್ಳುಗಳು
– ರಾಜೇಶ್ ನರಿಂಗಾನ.
೧) ಗೌರಿ ಲಂಕೇಶ್ ವಿಚಾರವಾದಿ
ಗೌರಿ ಲಂಕೇಶ್ ಯಾವ ರೀತಿಯ ವಿಚಾರವಾದಿ ಎಂದೇ ತಿಳಿಯುತ್ತಿಲ್ಲ. ತನ್ನ ಸಂಪಾದಕತ್ವದ ‘ಗೌರಿ ಲಂಕೇಶ್ ಪತ್ರಿಕೆ’ಯಲ್ಲಿ ಭಿನ್ನ ವಿಚಾರಧಾರೆಯ ನಿಲುವನ್ನು ಹೊಂದಿರುವ ಆಕೆಗಿಂತ ವಯಸ್ಸಿನಲ್ಲಿ ಅದೆಷ್ಟೇ ಹಿರಿಯರಿದ್ದರೂ ಏಕವಚನದಲ್ಲಿ ಹೀನಮಾನವಾಗಿ ನಿಂದಿಸುತ್ತಿದ್ದರು. ರಂಜನೆ, ಪ್ರಲೋಭನೆಯ ಹೆಸರಿನಲ್ಲಿ ಭಿನ್ನ ವಿಚಾರಧಾರೆಯವರ ವೈಯಕ್ತಿಕ ಸ್ವಾತಂತ್ರ್ಯವನ್ನು ಹರಣಗೈಯುತ್ತಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಶಿಕ್ಷೆಯನ್ನೂ ವಿಧಿಸಿತ್ತು. ಆದ್ದರಿಂದ ಭಿನ್ನ ವಿಚಾರಧಾರೆಯಿರುವ ವ್ಯಕ್ತಿಗಳ ತೇಜೋವಧೆ ಮಾಡುವುದನ್ನೇ ‘ವಿಚಾರವಾದ’ ಎನ್ನುವುದಾದರೆ ಅಂಥ ವಿಚಾರವಾದಕ್ಕೆ ನನ್ನ ಧಿಕ್ಕಾರವಿದೆ. ಮತ್ತಷ್ಟು ಓದು 
ಶವದ ಮೇಲಿನ ರಣಹದ್ದುಗಳು
ದೇಶದಲ್ಲಿ ಎಲ್ಲೇ ಬುದ್ಧಿಜೀವಿಗಳ ಹತ್ಯೆ ನಡೆದರೂ ಮೊದಲು ಆರೋಪ ಹೊರಿಸುವುದು ಬಲಪಂಥೀಯ ವಿಚಾರಧಾರೆ ಹೊಂದಿರುವವರ ಮೇಲೆ, ಸಂಘಪರಿವಾರದವರ ಮೇಲೆ. ಎಲ್ಲಾ ಹತ್ಯೆಯ ಹಿಂದಿನ ಮರ್ಮ ಒಂದೇ, ದೇಶದಲ್ಲಿ ಕಮ್ಮಿ ನಿಷ್ಟರ ಹಾಗೂ ತಮ್ಮ ಎಡಪಂಥೀಯ ಚಿಂತನೆ ಗಳಿಗೆ ಸ್ಪಂದಿಸುವ ಮನೋಭಾವನೆ ಹೊಂದಿರುವಂತವರದ್ದೆ ಕೈ ಇರಬೇಕೆನ್ನುವ ಹಿಡನ್ ಅಜೆಂಡ ಇದ್ದಂತಿದೆ.
ಲಡಾಖ್ ಹಾಗು ಭಾರತೀಯ ಸೇನೆ
– ಪಲ್ಲವಿ ಭಟ್
ಬೆಂಗಳೂರು
ಇದೀಗಷ್ಟೇ ಸ್ವಾತಂತ್ರ್ಯ ದಿನ ಕಳೆದು ಹೋಗಿದೆ. ಪ್ರತಿ ವರುಷದಂತೆ ಈ ಬಾರಿಯೂ ಅದೇ ಸಂಭ್ರಮ ಸಡಗರದಿಂದ ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂಭ್ರಮಗಳೆಲ್ಲಾ ಮುಗಿಯುತ್ತಿದ್ದಂತೆ ಅದೊಂದು ವಾರ್ತೆ ನಮ್ಮ ವಾರ್ತಾಪತ್ರಿಕೆಗಳ ಮುಖಪುಟ ಸೇರಿಕೊಂಡಿತ್ತು. ಇನ್ನೂ ಮಾಸದ ನನ್ನ ಕೆಲ ಹೊಸ ನೆನಪುಗಳನ್ನು ಅದು ಕೆದಕತೊಡಗಿತು. “ಲಡಾಖ್’ನಲ್ಲಿ ಭಾರತ, ಚೀನಾ ಯೋಧರ ಸಂಘರ್ಷ: ಭಾರತದೊಳಗೆ ನುಗ್ಗಲು ಚೀನಾ ಸೈನಿಕರ ಯತ್ನ” ಎಂಬುದಾಗಿತ್ತು ಶೀರ್ಷಿಕೆ. ಲಡಾಖ್ ಪ್ರವಾಸ ಮುಗಿಸಿ ಇನ್ನೂ ೧೦ ದಿನಗಳಾಗಿಲ್ಲ. ಅಷ್ಟರಲ್ಲೇ ಇಂತಹ ವಾರ್ತೆಯನ್ನು ಓದಬೇಕಾಗಿ ಬಂತು. ಮತ್ತಷ್ಟು ಓದು 
ಮನದ ಮಾತು
– ಗೀತಾ ಹೆಗ್ಡೆ
ಹಲವು ಮಜಲುಗಳನ್ನೊಳಗೊಂಡ ಕೆಲವರ ಬರಹ ಓದುವಾಗ ನಮಗರಿವಿಲ್ಲದಂತೆ ಇದ್ದಕ್ಕಿದ್ದಂತೆ ನಾನೂ ಏನಾದರೂ ಬರೆಯಬೇಕು ಅನ್ನುವ ತುಡಿತ ಗರಿಗೆದರುವುದು. ಇದು ನನಗೊಬ್ಬಳಿಗೇ ಹೀಗೆ ಅನಿಸುತ್ತಾ? ಅಥವಾ ಎಲ್ಲರ ಕಥೆ ಹೀಗೆಯೇ ಇರಬಹುದಾ? ಅನ್ನುವ ಜಿಜ್ಞಾಸೆ ನನ್ನಲ್ಲಿ. ಸದಾ ಕಾಡುವ ಪ್ರಶ್ನೆ. ಆಗೆಲ್ಲ ನನಗೆ ಈ ಬಗ್ಗೆ ಬೇರೆಯವರನ್ನೂ ಕೇಳಬೇಕೆನ್ನುವ ಹಂಬಲ ಹುಟ್ಟಿಕೊಂಡರೂ, ಛೆ! ನನ್ನ ಮಾತು ಕೇಳಿ ನಕ್ಕಾರು. ಇವಳಿಗೇನು ಸ್ವಂತ ಬುದ್ಧಿ ಇಲ್ವಾ? ಏನಾದರೂ ಬರಿಬೇಕೆಂದರೆ ಇನ್ನೊಬ್ಬರ ಬರಹ ಓದಿನೇ ಹುಮ್ಮಸ್ಸು ಹುಟ್ಟಬೇಕಾ? ಬರಹ ಅನ್ನೋದು ಯಾರಿಂದಲೂ ಹೇಳಿಸಿಕೊಂಡು ಬರುವುದಲ್ಲಾ. ಸ್ವತಃ ಅವರಲ್ಲಿ ಹುಟ್ಟಬೇಕು. ಜನ್ಮಜಾತವಾಗಿ ದೇವರು ಕೊಟ್ಟ ವರ ಎಂದು ನಂಬಿರುವ ನನಗೆ ಇದೊಂದು ಬಿಡಿಸಲಾಗದ ಒಗಟು. ಮತ್ತಷ್ಟು ಓದು 
ಹವ್ಯಾಸಿ ರಂಗಭೂಮಿ – ಇತ್ತೀಚಿನ ಬೆಳವಣಿಗೆಗಳು
-ಎಸ್.ಎನ್. ಸೇತುರಾಮ್
ಹವ್ಯಾಸಿ ರಂಗಭೂಮಿ…
ಈ ಪದವೇ ಚೆಂದ, ರಂಗಭೂಮಿಯನ್ನು ವೃತ್ತಿ ಅಂತ ಹೇಳಿಕೊಂಡ್ರೆ ಅಪ್ರಯೋಜಕ ಅನ್ನೊರು. ನಾಟಕ ಮಾಡಿಕೊಂಡು ಬದುಕ್ತಾನೆ ಅನ್ನೋರು. ಏನು ಮಾಡ್ತಿದ್ದಿ ಅನ್ನೋ ಪ್ರಶ್ನೇಗೆ ರಂಗಭೂಮೀಲಿ ಸಕ್ರೀಯವಾಗಿದ್ದೀನಿ ಅಂದ್ರೆ, ಅದು ಬಿಟ್ಟು ಹೊಟ್ಟೆಪಾಡಿಗೆ ಏನು ಮಾಡ್ಕೊಂಡಿದ್ದೀ ಅಂತ ಕೇಳೋರು. ನನ್ನ ಬದುಕಿನ ಕಾಲಘಟ್ಟದಲ್ಲಿ ಕಾರಣಗಳು ಏನೇ ಇರಲಿ, ರಂಗಭೂಮಿ ವೃತ್ತಿ ಅಂತಾದರೆ ಒಂದು ತರಹದ ಕೀಳರಿಮೆ. ಎಲ್ಲ ಕಾಲಘಟ್ಟಗಳಲ್ಲೂ ಎಲ್ಲ ಕಲಾಪ್ರಕಾರಗಳ ಹಾಗೇನೇ ರಂಗಭೂಮಿ ಕೂಡಾ. ಹೆಸರಾಗಿ ದೊಡ್ಡೋರಾದ ಮೇಲೆ ಹಾರ ತುರಾಯಿ, ಪೇಟ, ಬಿರುದುಬಾವಲಿ, ಬಿನ್ನವತ್ತಳೆ ಎಲ್ಲಾ. ಹೆಸರಾಗೋವರೆಗೂ ಇದೊಂದು ರಕ್ತಮಾಂಸವಷ್ಟೇ ಅಲ್ಲದ, ಮನಸ್ಸು ಹೃದಯ ಇರುವ ಜೀವ ಅನ್ನೋದೇ ಯಾರ ಗಮನಕ್ಕೂ ಬರುತ್ತಿರಲಿಲ್ಲ. ಗೆದ್ದಾಗ ಮಾನ, ಗೆಲ್ಲದಿದ್ದಾಗ ಬರಿ ಅವಮಾನವೇ. ನಾಟಕದವರು ಅಯೋಗ್ಯರು, ಅಪ್ರಯೋಜಕರು, ಅವರಿಗೆ ಹೆಣ್ಣು ಕೊಡೋ ಹಾಗಿಲ್ಲ. ಮನೆಗೆ ಕರೆಯೋ ಅವಶ್ಯಕತೆ ಇಲ್ಲ. ಗೌರವಕ್ಕೆ ಅವರೆಂದೂ ಪಾತ್ರರಲ್ಲ. ಇದು ಭಾವ. ಮತ್ತಷ್ಟು ಓದು 
ಅಂಕಣರಂಗ – 3 : ಡಿ.ವಿ ಪ್ರಹ್ಲಾದ್ ಅವರ ‘ಅನುದಿನವಿದ್ದು…’ ಪುಸ್ತಕದ ಪರಿಚಯ
– ಮು.ಅ ಶ್ರೀರಂಗ ಬೆಂಗಳೂರು
‘ಅನುದಿನವಿದ್ದು… ‘ ಕಿರು ಪುಸ್ತಕದಲ್ಲಿ ಒಂಭತ್ತು ಜನ ಲೇಖಕರ ಸಾವಿಗೆ ಮಿಡಿದ ಬರಹಗಳು ಮತ್ತು ಇಬ್ಬರು ಲೇಖಕರು ಬದುಕಿದ್ದಾಗಲೇ ಬರೆದ ಲೇಖನಗಳಿವೆ. ಇದರಲ್ಲಿ ರಾಘವೇಂದ್ರ ಖಾಸನೀಸ, ರಾಮಚಂದ್ರ ಶರ್ಮ,ಎಂ. ವ್ಯಾಸ, ಚಿ.ಶ್ರೀನಿವಾಸರಾಜು,ಸು.ರಂ.ಎಕ್ಕುಂಡಿ, ಕುಸುಮಾಕರ ದೇವರಗೆಣ್ಣೂರು,ಬೆಳಗೆರೆ ಕೃಷ್ಣಶಾಸ್ತ್ರಿ,ದೇಶಕುಲಕರ್ಣಿ,ಸ್ವಾಮಿನಾಥ,ಕಿ.ರಂ. ನಾಗರಾಜ ಮತ್ತು ನೀಲತ್ತಹಳ್ಳಿ ಕಸ್ತೂರಿ ಅವರುಗಳನ್ನು ಕುರಿತ ಅಪರೂಪದ ಬರಹಗಳಿವೆ. ಇಲ್ಲಿನ ಬರಹಗಳು ‘ಸಂಚಯ’ ಮತ್ತು ರಾಜ್ಯವ್ಯಾಪಿ ಪ್ರಸಾರದ ಕನ್ನಡ ದಿನಪತ್ರಿಕೆಗಳಲ್ಲಿಈ ಹಿಂದೆ ಪ್ರಕಟವಾಗಿದ್ದಂತಹವು. ಆಯಾ ಲೇಖಕರನ್ನು ಕುರಿತಂತೆ ಡಿ ವಿ ಪ್ರಹ್ಲಾದರ ಅಪರೂಪದ ಒಳನೋಟ ಮತ್ತು ಅವರುಗಳ ಬಗ್ಗೆ ಹಾಗೂ ಅವರ ಕೃತಿಗಳ ಬಗ್ಗೆ ವಿವರಗಳನ್ನು ಒಳಗೊಂಡ ‘ಅನುಬಂಧ’ ಈ ಪುಸ್ತಕದ ಪ್ಲಸ್ ಪಾಯಿಂಟ್. ಏಕೆಂದರೆ ಎಷ್ಟೋ ಸಲ ನಾವುಗಳು ಕೆಲವು ಲೇಖಕರ ಹೆಸರು ಕೇಳಿರುತ್ತೇವೆ ಆದರೆ ಅವರ ಪುಸ್ತಕಗಳ ಬಗ್ಗೆ ತಿಳಿದಿರುವುದಿಲ್ಲ. ಹಾಗೆಯೇ ನಾವು ಓದಬೇಕಾದಂತಹ ಲೇಖಕರು ಹಾಗೂ ಅವರ ಕೃತಿಗಳ ಬಗ್ಗೆ ಯಾವ ಮಾಹಿತಿಯೂ ನಮಗಿರುವುದಿಲ್ಲ. ಆ ಕೊರತೆಯನ್ನು ‘ಅನುದಿನವಿದ್ದು … ‘ ತುಂಬಿಕೊಟ್ಟಿದೆ. ಈ ಒಂದು ಪ್ರಸ್ತಾವನೆಯ ನಂತರ ಇಲ್ಲಿನ ಕೆಲವು ಲೇಖನಗಳ ಬಗ್ಗೆ ಪರಿಚಯ ಮಾಡಿಕೊಳ್ಳೋಣ.
ನಮ್ಮೂರ ಹಬ್ಬ : ನಮ್ಮೂರ ಜಾತ್ರೆ
– ಆದರ್ಶ
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಲೇಖನ
ಜಾತ್ರೆಯೆಂದರೆ ಸಾಕು.. ಥಟ್ಟನೆ ಮನಸ್ಸು ಬಾಲ್ಯಕ್ಕೋಡುತ್ತದೆ!
ಅಪ್ಪನ ಬೆನ್ನುಹತ್ತಿ ಹೆಗಲ ಮೇಲೆ ಕೂತು ಪುಟ್ಟ ಕಣ್ಣುಗಳನ್ನ ಇಷ್ಟಗಲ ಅರಳಿಸಿ ನೋಡಿದ್ದ ಇಡೀ ಜಾತ್ರೆಯ ಪನೋರಮಿಕ್ ನೋಟ ಮತ್ತೆ ಅಷ್ಟೇ ರಂಗು ರಂಗಾಗಿ ತೆರೆದುಕೊಳ್ಳುತ್ತದೆ..
ಶಿವಮೊಗ್ಗದಿಂದ ಸಾಗರ, ಹೊಸನಗರ, ಶಿಕಾರಿಪುರಗಳಿಗೆ ಹೋಗುವ ಮಾರ್ಗದಲ್ಲಿ ಮಲೆನಾಡಿನ ಪ್ರವೇಶ ದ್ವಾರದಂತಿರುವ ನಮ್ಮೂರು “ಆನಂದಪುರ”ದ ಕಡ್ಲೆಹಕ್ಲು ಮಾರಿಕಾಂಬಾ ಜಾತ್ರೆಯೆಂದರೆ ನಮ್ಮ ಮಟ್ಟಿಗೆ ಅದು ಬಹುದೊಡ್ಡ ಹಬ್ಬ! ಶಿರಸಿ ಮಾರಿಕಾಂಬಾ, ಸಾಗರದ ಮಾರಿಕಾಂಬಾ, ಆನಂದಪುರದ ಕಡ್ಲೆಹಕ್ಲು ಮಾರಿಕಾಂಬಾ ಈ ಮೂವರೂ ಅಕ್ಕ ತಂಗಿಯರೆಂಬ ಪ್ರತೀತಿಯಿದೆ. ಹಾಗಾಗಿ 3 ವರ್ಷಕ್ಕೊಮ್ಮೆ ಮೊದಲಿಗೆ ಶಿರಸಿಯ ಹಿರಿಯಕ್ಕನ ಜಾತ್ರೆ, ನಂತರ ಸಾಗರದ ಜಾತ್ರೆ, ಕೊನೆಯಲ್ಲಿ ನಮ್ಮೂರ ಜಾತ್ರೆ ನಡೆಯುತ್ತದೆ. ನಮ್ಮ ಸಂಸ್ಕೃತಿಯಲ್ಲಿ ದೈವವನ್ನೂ ಮರ್ತ್ಯ ಸಂಬಂಧಗಳಲ್ಲಿ(ಅಕ್ಕ-ತಂಗಿ) ಬೆಸೆದು ವಾತ್ಸಲ್ಯದಿಂದ ಕಾಣುವುದು ಸೋಜಿಗವಲ್ಲದೇ ಮತ್ತೇನು?! ಮತ್ತಷ್ಟು ಓದು 
ಹಿಂದೂ ಮುಸ್ಲಿಂ ಸಮ್ಮಿಲನಕ್ಕೆ ಸೆಕ್ಯಲರಿಸಮ್ಮೇ ಬೇಕೆ? ಅಲಾದಿ ಹಬ್ಬ ಸಾಕೆ?
-ವೀಣಾ. ಈ
(ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ.)
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಎರಡನೆಯ ಸ್ಥಾನ ಪಡೆದ ಲೇಖನ..
ಪ್ರಸ್ತುತ ಐಡಿಯಾಲಜಿಗಳ ಯುಗದಲ್ಲಿ ಹಿಂದೂ ಮುಸಲ್ಮಾನ ಎನ್ನುವುದು ಎರಡು ವೈರಿ ಗುಂಪುಗಳೆಂದು ಪರಿಗಣಿಸಲ್ಪಡುತ್ತಿವೆ. ಕೆಲವು ಚಿಂತಕರು ಮತ್ತು ಹಾಗೆನ್ನಿಸಿಕೊಳ್ಳಲು ಹಾತೊರೆಯುವವರು ಎಲ್ಲಾ ಘಟನೆಗಳಲ್ಲೂ ಈ ವೈರತ್ವವನ್ನೇ ಕಾಣುತ್ತಿರುತ್ತಾರೆ. ಹೀಗಿರುವಾಗ ಹಬ್ಬಗಳು, ಆಚರಣೆಗಳು ಅವರಿಗೆ ಒದಗಿದ ಸದಾವಕಾಶಗಳಂತೆ ಭಾವಿಸುತ್ತಾರೆ. ಗಣೇಶ ಹಬ್ಬ ಎಂದರೆ ಗಣೇಶನ ಆಗಮನದಿಂದ ವಿಸರ್ಜನೆಯವರೆಗೆ ಆರಕ್ಷಕರ ಕಾವಲಿನೊಂದಿಗೇ ನಡೆಯುವ ಸ್ಥಿತಿ ಬಂದೊದಗಿದೆ. ಉದ್ದೇಶಪೂರ್ವಕವಾಗಿಯೇ ಮುಸ್ಲಿಂ ಕೇರಿಗಳಲ್ಲಿ ಗಣೇಶನ ಮೆರವಣಿಗೆ ಮಾಡುವುದು, ಮಸೀದಿಗಳ ಮುಂದೆ ಪಟಾಕಿ ಸಿಡಿಸುವುದು ಮಾಡಿದರೆ, ಮುಸ್ಲೀಮರು ಇದಕ್ಕೆ ಹೊರತಾಗಿಲ್ಲದಂತೆ ಇದ್ಮೀಲಾದ್ನಂತಹ ಹಬ್ಬದ ಮೆರವಣಿಗೆಯಲ್ಲಿ ಇವೇ ಪ್ರವೃತ್ತಿಗಳು ಪುನಾರವರ್ತನೆಯಾಗುತ್ತವೆ. ಇದರಿಂದ ಹಬ್ಬಗಳೆಂದರೆ ಭಯದ ವಾತಾವರಣ ಸೃಷ್ಟಿಯಾಗುವ ಕಾಲ ಅಲ್ಲಲ್ಲಿ ಕಂಡುಬರುತ್ತಿದೆ. ಇದು ಹೀಗೆ ಮುಂದುವರೆದರೆ ಹಬ್ಬಗಳೆಂದರೆ ಗಲಾಟೆಯುಂಟು ಮಾಡುವ ಸಂಗತಿಗಳೆಂದು ಕಾನೂನು ಮೂಲಕವೇ ಅವುಗಳನ್ನು ನಿಷೇಧ ಮಾಡುವ ಸಂದರ್ಭ ಬಂದರೂ ಬರಬಹುದು. ಆದರೆ ಹಬ್ಬಗಳು ಈ ಕೆಲಸವನ್ನು ಮಾಡುತ್ತವೆಯೇ? ಅವುಗಳ ಸ್ವರೂಪವೇನು? ಮತ್ತಷ್ಟು ಓದು 
ನಮ್ಮೂರ ಹಬ್ಬ : ಶ್ರೀ ಸಿದ್ದಿ ವಿನಾಯಕನ ಜಾತ್ರೆ
– ಮನುಶ್ರೀ ಕೆ.ಎಸ್
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದ ಲೇಖನ
‘ಊರು’ ಅಂದರೆ ನಮಗೆಲ್ಲರಿಗೂ ಮನೆಯ ನಂತರ ಮನಸಿಗೆ ಹತ್ತಿರವಾಗುವ ಮತ್ತೊಂದು ಅಚ್ಚು ಮೆಚ್ಚಿನ ಜಾಗ. ಇಲ್ಲಿಯೂ ಕೂಡ ನಮ್ಮ ಮನೆಯ ಹಾಗೆಯೇ ಒಂದು ದೊಡ್ಡ ಸಂಸಾರವಿದೆ. ಅದರಲ್ಲಿ ಸುಖ ದುಃಖಗಳ ಕಥೆಯಿದೆ, ನೆಮ್ಮದಿಯ ಆಚರಣೆಯಿದೆ, ನಂಬುವ ಸಂಪ್ರದಾಯವಿದೆ, ದುಡಿಯುವ ಕಸುಬಿದೆ, ಕಣ್ಣೀರಿಡಿಸುವ ಪ್ರೀತಿಯಿದೆ, ಕಂಡರಾಗದ ದ್ವೇಷವಿದೆ, ದೆವ್ವದ ಭಯವಿದೆ, ದೈವದ ಭಕ್ತಿಯಿದೆ ಎಲ್ಲಾ ಕೂಡಿ ಕೊಂಡಿರುವ ಒಂದು ಹಳೇ ಆಲದ ಮರದ ಹಾಗೆ. ಮತ್ತಷ್ಟು ಓದು 
ನಮ್ಮೂರ ಹಬ್ಬ : ತಿಂಗಳು ಮಾಮನ ಹಬ್ಬ
– ಶಾಂತಮ್ಮ ಕೋಡಯ್ಯ
ನಮ್ಮೂರ ಹಬ್ಬ ಪ್ರಬಂಧ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದ ಲೇಖನ
ಪೀಠಿಕೆ: ಹಬ್ಬಗಳು ಗ್ರಾಮದ ಅವಿಭಾಜ್ಯ ಅಂಗಗಳು ಹಳ್ಳಿಗರಿಗೆ ಹಬ್ಬಗಳೇ ಜೀವಾಳ. ಹಬ್ಬಗಳೇ ಮಾದ್ಯಮಗಳು, ಮನೋರಂಜನೆಗಳು.. ನಮ್ಮ ಪೂರ್ವಜರಿಂದ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ಪರಿಚಯಿಸುವ ನಮ್ಮ ಜೀವನದಲ್ಲಿ ಸುಂದರ ಅನುಭವಗಳು ಮತ್ತು ಬಾಲ್ಯ, ಯೌವನ, ಮುಪ್ಪು, ಪ್ರೇಮ ಮುಂತಾದವುಗಳ ಸಂಗಮ. ಹಬ್ಬಗಳು ಹಳ್ಳಿಗರ ಪ್ರತಿಷ್ಠೆ ಕೂಡ ಹೌದು. ಎಲ್ಲ ಜಾತಿಯವರು ಬೆರೆತು, ಭೇದ ಮರೆತು ಒಂದಾಗುವ ಪರಿ ಅದ್ಭುತ. ನಮ್ಮ ಹಿರಿಯರ ಹಾಡು, ಹಸೆ, ಬೈಗುಳ, ಬೆಡಗು, ಬಿನ್ನಾಣ, ಕಾರ್ಯ ವೈಖರಿ ಎಲ್ಲ ಸಂಸ್ಕೃತಿಯನ್ನ ಹೊಂದಿ ಬೆಳೆಯಲು ಸಹಾಕಾರಿ ಈ ತಿಂಗಳಮಾಮನ ಹಬ್ಬ. ಮತ್ತಷ್ಟು ಓದು 









