ಹೆಣ್ಣೆಂದರೆ ಹೀಗೇಕೆ…..?
-ಶ್ರೀದೇವಿ ಅಂಬೆಕಲ್ಲು॒॒
೩೭ ವರ್ಷಗಳ ಹಿಂದೆ ವಾರ್ಡ್ ಹುಡುಗನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಮಾನಸಿಕ ಯಾತನೆ ಅನುಭವಿಸುತ್ತಿರುವ ನರ್ಸ್ ಅರುಣಾ ಶಾನ್ಭಾಗ್ ಅವರ ನರಳುವಿಕೆ, ಮಾನಸಿಕ ನೋವು ಮತ್ತು ಆಕೆಯ ಗೆಳತಿ ಪಿಂಕಿ ವಿರಾನಿ ಅರುಣಾಗೆ ದಯಾಮರಣ ನೀಡಬೇಕೆಂದು ಅರ್ಜಿ ಸಲ್ಲಿಸಿರುವ ವರದಿ ಇತ್ತೀಚೆಗೆ ಮಾಧ್ಯಮಗಳಲ್ಲಿ ನೋಡಿದ್ದೇವೆ, ಕೇಳಿದ್ದೇವೆ. ಹೀಗೆ ಹೆಣ್ಣು ಮಗಳೊಬ್ಬಳು ದೌರ್ಜನ್ಯಕ್ಕೊಳಗಾಗಿ ಅನುಭವಿಸುತ್ತಿರುವ ಯಾತನಾಮಯ ಜೀವನ ಇನ್ಯಾವ ಹೆಣ್ಣು ಮಗಳಿಗೂ ಬಾರದಿರಲಿ ಅನ್ನೋದು ಎಲ್ಲ ತಾಯಿ ಹೃದಯದವರ ಆಶಯ.
ಹೆಣ್ಣು ಹೆಣ್ಣೆಂದು ಹೆಣ್ಣನ್ನೇಕೆ ಹೀಗಳೆಯುವಿರಿ…?ಹೆಣಲ್ಲವೇ ನಮ್ಮನ್ನ ಹೆತ್ತ ತಾಯಿ…?
ಮಾರ್ಚ್ ೮ ಅಂತರರಾಷ್ಟ್ರೀಯ ಮಹಿಳಾ ದಿನ. ದಿನಾಚರಣೆಯ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತದೆ. ಈ ವರ್ಷದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಘೋಷ ವಾಕ್ಯ ’ಶಿಕ್ಷಣ, ತರಬೇತಿ ಹಾಗೂ ವಿಜ್ಞಾನ, ತಂತ್ರಜ್ಞಾನಕ್ಕೆ ಸಮಾನ ಅವಕಾಶ-ಮಹಿಳೆಯರಿಗೆ ಒಳ್ಳೆಯ ಕೆಲಸಕ್ಕೆ ಹಾದಿ’.
ಒಬ್ಬ ಗಂಡಸಿನಷ್ಟೇ ಶ್ರಮ ವಹಿಸಿ ದುಡಿಯುವ ಹೆಣ್ಣು ಮಗಳಿಗೆ ನೀಡುವ ಸಂಬಳದಲ್ಲಿ ತಾರತಮ್ಯ ಮಾಡಲಾಗುತ್ತದೆ. ಗಂಡ ದಿನದ ೭ ಗಂಟೆ ದುಡಿದು ಬಂದು ತಾನೆ ಉತ್ಪಾದಕ ಎಂದು ಹೆಮ್ಮೆಯಿಂದ ಬೀಗಿಕೊಳ್ಳುತ್ತಾನೆ. ಇಡೀ ದಿನ ಮನೆಯಲ್ಲಿ ದುಡಿಯುವ ಹೆಂಡತಿಯ ಪರಿಶ್ರಮಕ್ಕೆ ಯಾವ ಬೆಲೆಯೂ ಇಲ್ಲ. ಒಂದು ಕಡೆ ವೇತನ ತಾರತಮ್ಯವಾದರೆ ಇನ್ನೊಂದೆಡೆ ಮಹಿಳಾ ದೌರ್ಜನ್ಯ ಪ್ರಕರಣಗಳು. ಮತ್ತೊಂದೆಡೆ ಕುಟುಂಬ ಜವಾಬ್ದಾರಿ ಹೊರಗಡೆಯೂ ದುಡಿಯಬೇಕು ಎಂಬ ಹೆಚ್ಚುವರಿ ಜವಾಬ್ದಾರಿ. ಬದುಕು ಎಂದರೆ ನೋವು ನಲಿವುಗಳ ಸಮ್ಮಿಲನ. ಆದರೆ ಹೆಣ್ಣಿನ ಬದುಕು ಅಂದರೆ ಅದು ಕೇವಲ ನೋವುಗಳ ಸಂಕಲನ. ಬುದ್ಧಿವಂತಿಕೆ, ಪರಿಶ್ರಮ, ಕ್ರೀಯಾಶಿಲತೆ, ನೋವು ನುಂಗುವ ಶಕ್ತಿ ಮತ್ತು ಸಂಘಟನೆಯಲ್ಲಿ ತಾನು ಮುಂದು ಎಂದು ಹೆಣ್ಣು ತೋರಿಸಿಕೊಟ್ಟಿದ್ದಾಳೆ.
ಹಿರಿಯ ಜೀವದ ಮನ ಆ ಕ್ಷಣ ತಳಮಳಗೊಂಡಿದ್ಯಾಕೆ?
Reading between the lines ಎಂಬ ಮಾತನ್ನು ಕೇಳಿರಬಹುದು. ಅಂತ ಮಾತಿಗೆ ಒಳ್ಳೆಯ ಉದಾಹರಣೆ ಚಿದಾನಂದ ಮೂರ್ತಿಯವರ ಪತ್ರ. ಪಾಪ ವಯಸ್ಸಾಯಿತು. ಅದರಿಂದ ಹೀಗೆಲ್ಲ ಬಡಬಡಿಸುತ್ತಿದ್ದಾರೆ ಅಂಥ ಕೆಲವು ಪತ್ರಿಕೆಗಳು ಬರೆದು ಕಾಸಿಗೆ ರಾಜ ಮಾರ್ಗ ಮಾಡಿಕೊಂಡವು. ನಿಜ.ಚಿಮೂ ಅವರಿಗೆ ವಯಸ್ಸಾಯಿತು.ಆದರೆ ಅವರಳೊಗಿನ ಸಂಶೋಧಕನಿಗೆ ಇತಿಹಾಸದ ಕ್ರೂರ ಅಧ್ಯಾಯಗಳ ಅರಿವಿದೆ. ಮೈ ಮರೆತರೆ ಮತ್ತೊಮ್ಮೆ ಇತಿಹಾಸ ಮರುಕಳಿಸಬಹುದೆಂದ ಸಹಜ ಆತಂಕವೂ ಇದೆ. ಹಂಪಿಯ ಬಗ್ಗೆ ಹೋರಾಡಿದವರ ಅರಿವಿಗೆ ದಂಡೆತ್ತಿ ಬಂದು ಧೂಳಿಪಟ ಮಾಡಿದವರ,ರಕ್ಕಸ ತಂಗಡಿಯ ನೆನಪು ಬಾರದಿರಬಹುದೇ? ಭಾವುಕ ಜೀವಿ ಚಿಮೂ ಅವರಿಗೆ ಇಳಿ ವಯಸ್ಸಿನಲ್ಲಿ ಇವೆಲ್ಲ ಇನ್ನೂ ಹೆಚ್ಚಾಗಿ ಕಾಡುತ್ತಿರಬಹುದು,ಅದರಲ್ಲೂ ಮೈ-ಕೈಗೆ ಎಣ್ಣೆ ಸವರಿಕೊಂಡು ಸತ್ಯ ಹೇಳಲು ಬಂದವರ ಕಣ್ಣಿಗೆ ಮಣ್ಣೇರಚಿ ಹಾದಿ ತಪ್ಪಿಸುವ ಜನರ ಮಧ್ಯೆ ಮಾತಾಡುವ ಚಾಣಕ್ಷ ಮಂದಿಯ ನಡುವೆ ದಿಗಿಲಿಗೆ ಬಿದ್ದ ಆ ಹಿರಿಯ ಜೀವದ ತಲ್ಲಣ ನಮಗರಿವಾಗುತ್ತಿಲ್ಲವಾ?ಮತ್ತೊಮ್ಮೆ ಹಳ್ಳಿಗೆ ಪ್ಯಾಟೆ ಹುಡುಗೀರು ಹೊಂಟಿದ್ದಾರೆ…
ಜಿ.ವಿ ಜಯಶ್ರೀ
(ದೃಶ್ಯ ಮಾಧ್ಯಮಗಳ ಎಡವಟ್ಟುಗಳ ಬಗ್ಗೆ ಕುಟುಕವ ಜಯಶ್ರೀ ಅವರು ಸುವರ್ಣ ವಾಹಿನಿ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫಿನ ಎಡವಟ್ಟಿನ ಬಗ್ಗೆ ಬರೆದಿದ್ರು.ಸುವರ್ಣ ವಾಹಿನಿಗೆ ದೇವರು ಒಳ್ಳೆ ಬುದ್ದಿ ಕೊಡಲಿ 😉 ಅಂತ ಕೇಳುತ್ತ,ಅವರ ಪುಟ್ಟ ಬರಹ ನಿಮಗಾಗಿ –ನಿಲುಮೆ)
ಸುವರ್ಣ ವಾಹಿನಿಯಲ್ಲಿ ಮತ್ತೊಮ್ಮೆ ಹಳ್ಳಿಗೆ ಪ್ಯಾಟೆ ಹುಡುಗೀರು ಹೊಂಟಿದ್ದಾರೆ. ಕಾಡಿಗೆ ಹೋಗುವಾಗ ಅವರ ಉಡುಪು ಹೇಗೆ ಇರಲಿ ತೊಂದ್ರೆ ಇಲ್ಲ ಆದ್ರೆ ನಾಡಿನ ರಿಯಾಲಿಟಿ ಷೋ ನಲ್ಲಿ ಉಡುಪುಗಳ ಬಗ್ಗೆ ಸ್ವಲ್ಪ ಗಮನ ಹರಿಸ ಬೇಕಿತ್ತು ಎಂದು ಗೆಳೆಯ ರಾಕೇಶ್ ಶೆಟ್ಟಿ ನನ್ನ ಬಳಿ ಬೇಸರದಿಂದ ಹೇಳಿದ್ರು. ಪಾಪ ಗಂಡು ಹಾರ್ಟ್ ವಿಲ ವಿಲ ಒಳ್ಳೆಯ ಗೆಳೆಯ ಆತ, ಅವರ ನೋವಿನ ಮಾತಿಗೆ ನಾನು ಪ್ರತಿಕ್ರಿಯೆ ತೋರದೆ ಇರಲು ಸಾಧ್ಯವೇ 😉
ಕನ್ನಡವೆನೆ ಕುಣಿದಾಡುವುದೆನ್ನೆದೆ…
ಇತ್ತೀಚೆಗಿನ ಎರಡು ಸಂಗತಿಗಳು ನಮ್ಮ ಕನ್ನಡ ನುಡಿ ಈ ರಾಜ್ಯದ ಘನತೆ ಬಗ್ಗೆ ಹತ್ತು ಹಲವು ವಿಚಾರಗಳ ಚರ್ಚೆಗೆ ವೇದಿಕೆಯಾಗಿವೆ. ಅದು ಹೇಮಾಮಾಲಿನಿ ನಮ್ಮ ರಾಜ್ಯದಿಂದ ಆರಿಸಿ ಬಂದಿದ್ದಿರಬಹುದು ಅಥವಾ ಬೆಳಗಾವಿಯಲ್ಲಿ ನಾರಾಯಣ ಮೂರ್ತಿ ಅವರು ವಿಶ್ವ ಕನ್ನಡ ಸಮ್ಮೇಳನ ಉದ್ಘಾಟಿಸಲಿರುವುದು.
ಇವೇ ಆ ಎರಡು ವಿದ್ಯಮಾನಗಳು. ಪತ್ರಿಕೆಯಲ್ಲಿ ಮಾತ್ರವಲ್ಲದೇ ನೆಟ್ ಲೋಕದಲ್ಲು ಚರ್ಚೆಗೆ ಗ್ರಾಸವಾಗಿತ್ತು. ಇದು ಒಳ್ಳೆಯ ಬೆಳವಣಿಗೆ. ಚರ್ಚೆ ಯಾವಾಗಲೂ ಭಿನ್ನ ದನಿ ಗಳನ್ನು ಕೇಳಿಸುತ್ತದೆ. ಮತ್ತು ಭಿನ್ನ ಸ್ವರ ಕೇಳಿಸುತ್ತದೆ..ಆದರೆ ಪೂರ್ವಾಗ್ರಹ ಪೀಡಿತ ಕಿವಿಗಳಿಗೆ ಭಿನ್ನ ರಾಗ ಬೇಕಾಗಿಲ್ಲ.ಫೇಸ್ ಬುಕ್ ನಲ್ಲಿ ನಾ ಹಾಕಿದ ಕಾಮೆಂಟಿಗೆ ಉತ್ತರವಾಗಿ ನನ್ನ ಮಾತೃಭಾಷೆ ಯಾವುದೆಂದು ಪ್ರಶ್ನಿಸಲಾಯಿತು. ನಾ ಅದಕ್ಕೆ ಸರಿಯಾದ ಉತ್ತರ ಕೊಟ್ಟೆ. ಸ್ನೇಹಿತ ರೋರ್ವರು ಬರೆಯುತ್ತ ವಿಶ್ವಕನ್ನಡ ಸಮ್ಮೇಳನ ಮಲ್ಯ ಅವರು ಉದ್ಘಾಟಿಸಲಿ ಎಂದು ಕುಹಕವಾಡಿದರು. ಈಗ ಮೂರ್ತಿ ಅವರಿಗೂ ಇರಿಸುಮುರಿಸಾಗಿ ನಮ್ಮ ಮುಖ್ಯಮಂತ್ರಿ ಜೊತೆ ನಕಾರ ಸೂಚಿಸಿದ್ದರೂ ತಮ್ಮ ಮೂಗು ಎಲ್ಲಿ ಮಣ್ಣಾಗುತ್ತದೆ ಎಂಬ ಹೆದರಿಕೆ ಸರಕಾರಕ್ಕೂ ಬಂದು ಶತಾಯ ಗತಾಯ ಮೂರ್ತಿ ಅವರೇ ಅದನ್ನು ಉದ್ಘಾಟಿಸಲಿದ್ದಾರೆ ಅಂತ ಹೇಳಿಕೆ ಬಂದಿದೆ. ಮತ್ತಷ್ಟು ಓದು 
ಡಾಲರ್ ಲೆಕ್ಕಕ್ಕೆ : ಕನ್ನಡ ಪಕ್ಕಕ್ಕೆ
– ರಾಕೇಶ್ ಶೆಟ್ಟಿ
ಬೆಳಗಾವಿಯಲ್ಲಿ ನಡೆಯೋ ವಿಶ್ವ ಸಮ್ಮೇಳನದ ಉದ್ಘಾಟನೆಗಾಗಿ ಇನ್ಫೋಸಿಸ್ ನಾರಾಯಣ ಮೂರ್ತಿಯವರನ್ನ ಸರ್ಕಾರ ಆಹ್ವಾನಿಸಿದ್ದು, ಮತ್ತದಕ್ಕೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಆಕ್ಷೇಪಿಸಿ ಪತ್ರ ಬರೆದಿದ್ದು ಈದೀಗ ಚರ್ಚೆಗೆ ಗ್ರಾಸವಾಗಿದೆ.ಯಾರೇ ಕೂಗಾಡಲಿ ಊರೇ ಹೊರಾಡಲಿ ’ಇನ್ಫಿ ನಾಣಿ’ಯವ್ರೆ ಉದ್ಘಾಟನೆ ಮಾಡ್ತಾರೆ ಅಂತ ಯಡ್ಯೂರಪ್ಪನವ್ರು ಹೇಳಿಯಾಗಿದೆ.ಅದು ಬದಿಗಿರಲಿ.ಬರಗೂರರ ಪತ್ರಕ್ಕೆ ಪ್ರತಿವಾದವಾಗಿ ಕನ್ನಡ ಪ್ರಭದಲ್ಲಿ ಪ್ರತಾಪ್ ಸಿಂಹ “ನಾರಾಯಣ ಮೂರ್ತಿ ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಬದುಕು ಕಟ್ಟಿಕೊಟ್ಟದ್ದು ಕನ್ನಡದ ಕೆಲಸವಲ್ಲವೇ?ಕೇವಲ ಸಾಹಿತ್ಯ ಕೃಷಿಯೊಂದೇ ಕನ್ನಡದ ಕೈಂಕರ್ಯವೇ? ” ಅಂತ ಕೇಳಿದ್ದಾರೆ.ಮುಕ್ತ ಚರ್ಚೆಗೆ ಆಹ್ವಾನವನ್ನು ನೀಡಿದ್ದಾರೆ.ಅದನ್ನೆಲ್ಲ ಓದುವಾಗ ಬಹಳಷ್ಟು ಜನ ಬರಗೂರರಿಗೆನು ಹಕ್ಕಿದೆ?ಸಾಹಿತಿಗಳೇ ಏಕೆ ಬೇಕು ಅಂದಿದ್ದಾರೆ?
ನಿಜ.ಕೇವಲ ಸಾಹಿತ್ಯ ಕೃಷಿಯೊಂದೇ ಕನ್ನಡದ ಕೈಂಕರ್ಯವಲ್ಲ ಅನ್ನುವ ಪ್ರತಾಪ್ ಮಾತು ಒಪ್ಪಲೆಬೇಕಾದದ್ದು.ಆದರೆ ಬೆಂಗಳೂರಿನ ಭಾಗ್ಯೋದಯಕ್ಕೂ ಇನ್ಫೋಸಿಸ್ ನಾರಾಯಣ ಮೂರ್ತಿಯವರೆ ಕಾರಣ ಅನ್ನುವ ರೀತಿಯ ಮಾತುಗಳು ಸಹ್ಯವೇ?ಸುಮ್ಮನೆ ಕನ್ನಡಿಗರಿಗೆ ಕೆಲಸ ಕೊಟ್ರೂ,ಜೀವನ ಕೊಟ್ರೂ ಅಂತ ಅಬ್ಬರಿಸಿದರಾಯಿತೆ.ಕನ್ನಡಿಗರಿಗೆ ಕೆಲಸ ಕೊಟ್ರೂ ಕೊಟ್ರೂ ಅನ್ನೋವ್ರು ಒಮ್ಮೆ ಹೋಗಿ ಮೂರ್ತಿಯವರ ಕಂಪೆನಿಯಲ್ಲಿ ಎಷ್ಟು ಪ್ರತಿಶತ ಜನ ಕನ್ನಡಿಗರಿದ್ದಾರೆ?ಅಲ್ಲಿರುವ ಕನ್ನಡಿಗರಾದರು ಯಾವ ಡೆಸಿಗ್ನೇಷನ್ ಹೊಂದಿದ್ದಾರೆ? ಅಸಲಿಗೆ ಅಲ್ಲಿನ ಕನ್ನಡಿಗ ಉದ್ಯೋಗಿಗಳ ಪಾಡೇನಿದೆ ಅನ್ನುವುದಾದ್ರು ಕೇಳಿ ನೋಡಿ.ಅಲ್ಲಿ ಯಾರ ಕಾರು-ಬಾರು ನಡೆಯುತ್ತಿದೆ ಅನ್ನುವುದು ತಿಳಿಯಬಹುದು. ಇವೆಲ್ಲದರ ಸತ್ಯ ದರ್ಶನವಾದರೆ ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಬದುಕು ಕಟ್ಟಿಕೊಟ್ಟರು ಅನ್ನುವಂತೆ ಮಾತಾಡಿರುವುದು ಸುಳ್ಳೇ ಸುಳ್ಳು ಅನ್ನುವುದು ಗೊತ್ತಾಗುತ್ತದೆ.
ನಾರಾಯಣ ಮೂರ್ತಿ ಅವರಿಂದ ಏನ್ ಕಲಿಬೇಕು, ಏನ್ ಬೇಡ ?
ಮೂರ್ತಿಯವರಿಂದ ಕಲಿಯಬೇಕಾದದ್ದು ಸಾಕಷ್ಟಿದೆ !

ವಿಜಯ್ ಮಲ್ಯ ವಿಶ್ವಕನ್ನಡ ಸಮ್ಮೇಳನವನ್ನು ಉದ್ಘಾಟನೆ ಮಾಡಬೇಕು!

ಪ್ರೀತಿ ನಿನ್ನೊಂದಿಗೆ ನನ್ನ ಬಾಳಿರಲಿ !!!!
ಶ್ರೀದೇವಿ ಅಂಬೆಕಲ್ಲು
ಪ್ರೀತಿ ನಿನ್ನೊಂದಿಗೆ ನನ್ನ ಬಾಳಿರಲಿ….ಈ ಪ್ರೀತಿ ಒಂಥರಾ ಕಚಗುಳಿ.. ಅದೊಂದು ಮಧುರ ಅನುಭೂತಿ. ಕೆಲವರಿಗೆ ಕಲ್ಪನೆಗೆ ನಿಲುಕದ್ದು, ಅಕ್ಷರಗಳಲ್ಲಿ ಬಣ್ಣಿಸಲಾಗದ್ದು…
ಆದ್ರೆ ಪ್ರೀತಿ ಎಂದರೆ ಕೇವಲ ’ಮಾತಲ್ಲ’, ಪ್ರೀತಿ ಎಂದರೆ ’ಜವಾಬ್ದಾರಿ’, ’ಪ್ರೀತಿ ಎಂದರೆ ’ದುಡಿಮೆ’, ಪ್ರೀತಿ ಎಂದರೆ ’ಬದುಕು’. ಪ್ರೀತಿ ಅನ್ನೋ ಸಂಬಂಧದೊಳಗೆ ನಂಬಿಕೆ, ಕಳಕಳಿ, ಮನವಿ, ಕಾಳಜಿ, ಸ್ನೇಹ, ಸೆಳೆತ, ಹೊಂದಾಣಿಕೆ ಒಂದಷ್ಟು ಮುನಿಸು ಜತೆಗೆ ಒಪ್ಪಂದ ಈ ಎಲ್ಲ ಭಾವಗಳೂ ಸಮ್ಮಿಳಿತಗೊಂಡಿರಬೇಕು.
ಗಂಡು- ಹೆಣ್ಣಿನ ನಡುವಿನ ಪ್ರೀತಿಯ ಸಂಬಂಧ ಅದೊಂದು ವಿಸ್ಮಯ ಲೋಕ. ಅದರೊಳಗಿನ ಪಯಣ ಒಂದು ಅದ್ಭುತ ಯಾನ. ಅಲ್ಲಿ ಒಮ್ಮೊಮ್ಮೆ ಮಳೆಯೂ ಇರುತ್ತದೆ. ಕಾಮನಬಿಲ್ಲೂ ಮೂಡುತ್ತದೆ. ಗೊತ್ತಲ್ವಾ… ಕಾಮನಬಿಲ್ಲು ಕಾಣಬೇಕು ಅಂದ್ರೆ ಮಳೆ ಬರಬೇಕು, ಬಿಸಿಲು ಇರಬೇಕು. ಹಾಗೆನೇ ಪ್ರೀತಿ ಉಳಿಬೇಕು ಅಂದ್ರೆ ಸಂಬಂಧದೊಳಗೆ ನಂಬಿಕೆನೂ ಇರಬೇಕು, ತ್ಯಾಗನೂ ಇರಬೇಕು. ಹಾಗಾಗಿ ನಂಬಿಕೆಯಲ್ಲಿ ರೂಪುಗೊಂಡ ಪ್ರೀತಿ ಕಳೆದುಕೊಳ್ಳುವುದಕ್ಕೆ ಸಾಧ್ಯ ಇಲ್ಲ, ಕಳೆದುಕೊಂಡ ಪ್ರೀತಿನ ಮರೆಯೋದಕ್ಕೂ ಸಾಧ್ಯ ಇಲ್ಲ. ಬದುಕಿರುವವರೆಗೆ ಪ್ರೀತಿ ’ಪ್ರೀತಿ’ಯಾಗಿ ಉಳಿಯದೇ ಹೋದರೂ ನೆನಪಾಗಿ ಕಾಡುವುದು ಖಂಡಿತ. ಮತ್ತಷ್ಟು ಓದು 
ಈ ಸುದ್ದಿ ಸಂಪಾದಕೀಯದ ಕಣ್ತಪ್ಪಿದ್ದು ಹೇಗೆ?
ವಿಶೇಷ ಅಂದ್ರೆ ಈ ಬ್ಲಾಗು ನಡೆಸೋರು ಯಾರು ಅಂತ ತಿಳಿಯೋಕೆ ಜನ್ರು ಮಾಡಿದ ತಿಣುಕಾಟ, ಹಾಕಿದ ಗೆಸ್ಸು ಕಡಿಮೆಯೇನಲ್ಲ. ಆದರೆ ಸಂಪಾದಕೀಯದ್ದು ಇದಕ್ಕೆಲ್ಲ ದಿವ್ಯಮೌನವೇ ಉತ್ತರ. ಇಂಥ ಮೌನವೇ ಜನರಿಗೆ ಈ ಬ್ಲಾಗಿನ ವಿಷಯಗಳಲ್ಲಿ ಓದುಗರಿಗೆ ಇನ್ನಷ್ಟು ಕುತೂಹಲ ಬೆಳೆಯುವಂತೆ ಮಾಡಿದೆ.ಸಂಪಾದಕೀಯ ಅಷ್ಟೇ ಮಾಡಿ ಸುಮ್ಮನಾಗಿದ್ರೆ ಅದರಲ್ಲಿ ಏನೂ ವಿಶೇಷ ಇರುತ್ತಿರಲ್ಲಿಲ್ಲ.ಟೀವಿ ಪೇಪರ್ ಹೀಗೆ ಎಲ್ಲ ಮಾಧ್ಯಮಗಳ ಆರೋಗ್ಯದ ಬಗ್ಗೆ ಆಗಾಗ ಮಾತಾಡ್ತಾ ಮೀಡಿಯಾಗಳ ಹಿಡನ್ ಅಜೆಂಡಾಗಳನ್ನು, ಹಿತಾಸಕ್ತಿಗಳನ್ನು ಜನರ ಎದುರಿಗೆ ಬೆತ್ತಲೆಗೊಳಿಸಿದ್ದು ಸುಳ್ಳೇನಲ್ಲ.ಇದೊಂಥರ ಜರ್ನಲಿಸಂ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಕ್ಲಾಸ್ ಅನ್ನಿಸಿದ್ರೆ ವಿಶೇಷವೇನಿಲ್ಲ ಬಿಡಿ. ಮತ್ತಷ್ಟು ಓದು 
ಈ ಮಾಯಿ ಬರೆದಷ್ಟೂ ಮುಗಿಯದ ಕಥೆ
ಚಿತ್ರಾ ಸಂತೋಷ್
ಇಂದು ಮಿರ್ವಾಲಾ ಎಂಬ ಪುಟ್ಟ ಹಳ್ಳಿಯಲ್ಲಿ ಶಾಲೆ ಇದೆ. ನೂರಾರು ಮಕ್ಕಳು ಅಲ್ಲಿ ಓದುತ್ತಿದ್ದಾರೆ. ಮೇಲ್ವರ್ಗ-ಕೆಳ ವರ್ಗದ ತಾರತಮ್ಯ ನಿಧಾನವಾಗಿ ಇತಿಹಾಸವಾಗುತ್ತಿದೆ. ಚೌಕಟ್ಟಿನೊಳಗೆ ಬಂಧನವಾಗುತ್ತಿದ್ದ ಹೆಣ್ಣು ಮಕ್ಕಳು ಹೊರಜಗತ್ತನ್ನು ಕಾಣುವ ಪ್ರಯತ್ನ ಮಾಡುತ್ತಿದ್ದಾರೆ. ನೊಂದ ಹೆಣ್ಣು ಮಕ್ಕಳು ಮಾಯಿಯ ಮಡಿಲಲ್ಲಿ ಭರವಸೆ ಕಾಣುತ್ತಿದ್ದಾರೆ. ಮೀರ್ವಾಲದಲ್ಲಿ ಇಂಥದ್ದೊಂದು ಕ್ರಾಂತಿ ಆಗುತ್ತಿದ್ದರೆ ಅದಕ್ಕೆ ಕಾರಣ ಮುಕ್ತಾರ್ ಮಾಯಿ, ಅವಳ ಆಶಾವಾದ ಅಷ್ಟೇ.
ಇವಳ ಬಗ್ಗೆ ಬರೆಯೋಕೇನಿದೆ?
ಪತ್ರಿಕೆಗಳಲ್ಲಿ, ಬ್ಲಾಗ್ಗಳಲ್ಲಿ ಪೇಜುಗಟ್ಟಲೆ ಅವಳ ಬಗ್ಗೆ ಬರೆದವರಿದ್ದಾರೆ. ಇನ್ನೇನಿದೆ ನಾನು ಬರೆಯೋದು ಹೊಸತು? ನನಗೂ ತುಂಬಾ ಸಲ ಹಾಗೆನಿಸಿದೆ. ಆದರೂ, ಇನ್ನೊಂದೆಡೆ ಆ ಹೆಣ್ಣು ಮಗಳು ಬತ್ತದ ತೊರೆ, ಅವಳೆಂದೂ ಮುಗಿಯದ ಕತೆ ಎಂದನಿಸುತ್ತದೆ. ಏಕೆಂದರೆ, ಶೋಷಣೆಗೆ ಎದೆಗೊಟ್ಟು ‘ಸ್ವಾತಂತ್ರ್ಯ’ ವನ್ನು ಕಂಡುಕೊಂಡ ಹೆಣ್ಣುಮಗಳು ಆಕೆ, ತನ್ನ ಬದುಕಿನ ಸೌಧವನ್ನು ತಾನೇ ನಿರ್ಮಿಸಿಕೊಂಡು ಜಗತ್ತಿನ ಕೋಟ್ಯಂತರ ಹೆಣ್ಣು ಮಕ್ಕಳಿಗೆ ಧೈರ್ಯದ ಪಾಠ ಕಲಿಸಿದವಳು ಅವಳು. ಕಣ್ಣೀರ ಕೋಡಿಯಲ್ಲೇ ಭರವಸೆಯ ಹೂವಂತೆ ಅರಳಿದವಳು ಅವಳು.
ಅವಳೇ ಮುಕ್ತಾರ್ ಮಾಯಿ.
ಈ ಹೆಸರು ಕೇಳದವರು ವಿರಳ. ಹುಟ್ಟೂರು ಪಾಕಿಸ್ತಾನದ ಮೀರ್ವಾಲ. ಪಾಕಿಸ್ತಾನ ಅಂದ್ರೆ ಅಲ್ಲಿ ಹೆಣ್ಣು ಮಕ್ಕಳ ಬದುಕೇನು? ಎನ್ನುವುದು ಜಗತ್ತಿಗೇ ಗೊತ್ತಿದೆ. ಇಲ್ಲಿ ಹೆಣ್ಣು ಮಕ್ಕಳಿಗೆ ಸಂಪ್ರದಾಯ, ಚೌಕಟ್ಟುಗಳೇ ಬಂಧನ. ಹೆಣ್ಣು ಮಕ್ಕಳು ನಾಲ್ಕು ಗೋಡೆಯಾಚೆಯಿಂದ ಹೊರಬಂದು, ಸಮಾಜದ ಮುಖ್ಯವಾಹಿನಿಯಲ್ಲಿ ಕಾಣಿಸಿಕೊಳ್ಳೋದೇ ಅಪರೂಪ. ಒಂದು ವೇಳೆ ಮನೆಯಿಂದ ಹೊರಬಂದರೆ ಮಗಳ ಭವಿಷ್ಯ ಉಳಿಯುತ್ತೆ ಅನ್ನೋ ಗ್ಯಾರಂಟಿ ಹೆತ್ತವರಿಗೂ ಇಲ್ಲ. ನಿತ್ಯ ಅರಾಜಕತೆಯ ಬೀಡಾಗಿದ್ದ ಪಾಕಿಸ್ತಾನದಂಥ ರಾಷ್ಟ್ರದಲ್ಲಿ ಒಬ್ಬಳು ಹೆಣ್ಣು ಮಗಳು ತನಗಾದ ಅನ್ಯಾಯದ ವಿರುದ್ಧ ಬದುಕನ್ನೇ ಪಣವಾಗಿಟ್ಟು ಹೋರಾಟ ಮಾಡಿ, ಗೆಲುವು ಪಡೆದಳೆಂದರೆ ಅದು ಮುಕ್ತಾರ್ ಮಾಯಿ ಮಾತ್ರ! ಈಗ ಪಾಕಿಸ್ತಾನದ ಹೆಣ್ಣು ಮಕ್ಕಳಿಗೆ ಮುಕ್ತಾರ್ ಮಾಯಿ ಕೇವಲ ಸಾಮಾನ್ಯ ಹೆಣ್ಣು ಮಗಳಲ್ಲ, ಅವಳೊಬ್ಬಳು ತಾಯಿ, ಹೋರಾಟಗಾರ್ತಿ, ಇಲ್ಲಿನ ಹೆಣ್ಣು ಮಕ್ಕಳ ದನಿ. ಮತ್ತಷ್ಟು ಓದು 








