ಬದುಕ ‘ಜಾತ್ರೆ’ ಯಲ್ಲಿ ಸಾಹಿತ್ಯದ ಪಾತ್ರ!
ಅರೆಹೊಳೆ ಸದಾಶಿವ ರಾವ್

ಒಂದು ರೀತಿಯ ನವೀಕರಣಗೊಂಡ ಮೂಡ್ನೊಂದಿಗೆ ಬರೆಯಕುಳಿತರೆ, ಅದೇಕೋ ‘ಜಾತ್ರೆ’ಬಹಳವಾಗಿ ಕಾಡುತ್ತಿದೆ. ಇದು ಎಲ್ಲೆಡೆಯಲ್ಲಿಯೂ ಜಾತ್ರೆನಡೆಯುವ ಸಂದರ್ಭ. ಅದರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಒಂದು ರೀತಿಯ ದೇವ-ದೈವದ ಕೇಂದ್ರವಾಗಿರುವ ಕಾರಣ, ಇದು ಒಂದು ರೀತಿಯ ಜಾತ್ರೆಯ ಸೀಸನ್. ಅದು ಕೋಲ, ಮಾರಿ, ನೇಮ, ರಥೋತ್ಸವ, ಗೆಂಡ ಸೇವೆ,…..ಇತ್ಯಾದಿ ಹೆಸರಿನಿಂದ ನಡೆಯುವ ವರ್ಷಂಪ್ರತಿ ಧಾರ್ಮಿಕ ಕಾರ್ಯಕ್ರಮಗಳಾದರೆ, ಅಷ್ಟಬಂಧ, ಬ್ರಹ್ಮಕಲಶೋತ್ಸವ, ಪುನ:ಪ್ರತಿಷ್ಠೆ, ನಾಗಮಂಡಲ…..ಇತ್ಯಾದಿಗಳಿಂದ ಕರೆಯಿಸಿಕೊಳ್ಳುವ ವಿಶೇಷ ಉತ್ಸವಗಳು. ಈಗ ನೀವು ಒಮ್ಮೆ ರಸ್ತೆ ಬದಿ ಹಾದಿರಿ ಎಂದಾದರೆ, ಇಂತಹ ಬ್ಯಾನರ್ಗಳು, ಕಟೌಟ್ಗಳು, ತೋರಣಗಳು ಎಲ್ಲೆಂದರಲ್ಲಿ ಕಾಣಸಿಕ್ಕಿದರೆ, ಎಲ್ಲಾ ಧಾರ್ಮಿಕ ಕೇಂದ್ರಗಳು ಹೊಸ ಬಣ್ಣ ಬಳಿದುಕೊಂಡು ಸಿಂಗಾರಗೊಂಡು ನಿಂತಿರುತ್ತವೆ. ಇಂತಹ ಉತ್ಸವಗಳು ಇಡಿಯ ಊರಿಗೆ ಊರೇ ಸಂಭ್ರಮಿಸಲು ಕಾರಣವಾಗುತ್ತವೆ. ಈ ಮೂಲಕ ನಾಟಕ, ಯಕ್ಷಗಾನ ಹಾಗೂ ಇನ್ನಿತರ ಕಲಾ ಪ್ರಕಾರಗಳ ಪ್ರದರ್ಶನ, ಊರಿನ ಸಂಭ್ರಮಕ್ಕೆ ಮೆರುಗು ನೀಡಿದರೆ, ಒಂದು ರೀತಿಯ ಜಡ ಹಿಡಿದ ಮನಸ್ಸುಗಳಿಗೆ ನವೀಕರಣವಾಗುವಲ್ಲಿ ಬಹು ಮುಖ್ಯ ಪಾತ್ರವಹಿಸುತ್ತದೆ.
ಇತ್ತೀಚೆಗೆ ನನ್ನೂರಿನ ಜಾತ್ರೆಯಲ್ಲಿ ಎರಡು ದಿನ ಕಳೆದು ಬಂದಾಗ ನನಗನಿಸಿದ್ದು, ಇದೂ ಜೀವನದ ಒಂದು ಅವಿಭಾಜ್ಯ ಅಂಗವೇ ಅಲ್ಲವೇ ಎಂಬುದು. ಅಲ್ಲಿ ಏನುಂಟು ಏನಿಲ್ಲ ಹೇಳಿ? ಬಾಲ್ಯದ ಗೆಳೆಯರ ಪುನರ್ಮಿಲನ, ಕುಡಿಮೀಸೆಯ ದಿನಗಳ ಕನಸಿನ ಮರು ನೆನಪು, ಚಾಪೆ ಹಿಡಿದೇ ಆಟಕ್ಕೆಂದು ಹೋಗಿ ೫ರೂಪಾಯಿಯ ಟಿಕೆಟ್ ಪಡೆದು ಗದ್ದೆಯಲ್ಲಿ ಮಲಗಿ ಬೆಳಗ್ಗೆದ್ದು ಮನೆಗೆ ಮರಳಿದ ದಿನದ ಮೆಲುಕು, ಆಟಿಕೆಯ ಅಂಗಡಿಯ ಮುಂದೆ ನಿಂತು ಇದು ಬೇಕೇ ಬೇಕೆಂದು ರೊಚ್ಚೆ ಹಿಡಿದು ಸಿಗದಾಗ ಮನೆಗೆ ಬಂದು ಅಳುಮೋರೆ ಹಾಕಿ ಹಬ್ಬ ಬಹಿಷ್ಕಾರ ಮಾಡಿದ ದಿನಗಳ ಗಮ್ಮತ್ತು……ಒಂದೇ ಎರಡೇ!. ಇದೆಲ್ಲಾ ಬಾಲ್ಯದ ದಿನಗಳು ಮರಳಿ ಬರಬೇಕೆಂದರೆ ಮತ್ತು ಬದುಕಿನ ಇಂದಿನ ಜಂಜಡಗಳಿಗೆ ತುಸು ನೆಮ್ಮದಿ ಸಿಗಬೇಕೆಂದಿದ್ದರೆ, ವರ್ಷಕ್ಕೊಮ್ಮೆ ನಡೆಯುವ ಹಬ್ಬಕ್ಕೆ ಹೋಗಿಯೇ ಸವಿಯಬೇಕು ಎಂಬುದನ್ನು ಈ ಸಲ ನನ್ನೂರ ಹಬ್ಬ ನನಗೆ ಖಚಿತವಾಗಿಸಿತು.
ಮತ್ತಷ್ಟು ಓದು 
ಹಾರೋಬೂದಿಯ ವಿರುದ್ಧ ಅಖಾಡಕ್ಕಿಳಿದ ಪೇಜಾವರ ಶ್ರೀ ಮತ್ತು ಸಂಘಟನೆಗಳು
“ಎಂಥ ದೊಡ್ಡ ದೊಡ್ಡರೆಲ್ಲ ಬಂದ್ರು, ವೀಡಿಯೋ ಮಾಡಿದ್ರು, ಪತ್ರಿಕೆಯವ್ರು ಬಂದ್ರು ಏನೆಲ್ಲ ಬರೆದ್ರೂ, ಬೂದಿ ಪರೀಕ್ಷೆ ಮಾಡ್ತೀವಿ ಅಂತ ಬಂದ್ರು, ಬೇಕಾದ್ದು ರಿಪೋರ್ಟ್ ಕೊಟ್ರು ಆದ್ರು ಯಾರಿಂದಲೂ ಏನೂ ಮಾಡೋಕೆ ಆಗ್ಲಿಲ್ಲ. ಇನ್ನು ನೀವ್ ವಿಡೀಯೋ ಮಾಡಿ ಏನ್ ಬರೆದ್ರೂ ನಮಗೇನಿಲ್ಲ. ಇದು ಸರ್ಕಾರದ್ದೇ ಪ್ರೋಜೆಕ್ಟ್, ಸರಕಾರದ್ದೇ ಕಂಪೆನಿ. ಏ ಇವರ ಇವರ ಕಾರಿಗೆ ಅಡ್ಡ ನಿಲ್ಲಿಸ್ರೋ. ಕ್ಯಾಮೆರಾ ಕಿತ್ತುಕೊಳ್ಳೋ….”
ಎಂದು ಇತ್ತಿಚೆಗೆ ಉಡುಪಿಯ ಪ್ರತಿಷ್ಠಿತ ಕಂಪೆನಿಯ ಗುತ್ತಿಗೆದಾರನೊಬ್ಬ ಹಾರೋಬೂದಿ ಇರುವ ಸ್ಥಳಕ್ಕೆ ಹೋದ್ರೆ ಈ ರೀತಿ ಧಮ್ಕಿ ಹಾಕುತ್ತಾನೆ. ಇಷ್ಟೆಲ್ಲ ಧೈರ್ಯದಿಂದ ಈ ಗುತ್ತಿಗೆದಾರ ಮಾತಾಡ್ತಾ ಇರಬೇಕಾದ್ರೆ ಅವನ ಹಿಂದೆ ಪ್ರಬಲವಾದ ಕಾಣದ ಕೈ ಇರಬಹುದು ನೀವೆ ಯೋಚಿಸಿ. ಇಂಥ ಎಷ್ಟೋ ಜನರ ಉಪಟಳವನ್ನು ನಮ್ಮ ಜನ ಎಷ್ಟು ದಿನ ಅಂತ ಸಹಿತಾರೇ? ಅದಕ್ಕೆ ನೋಡಿ ಈ ಪ್ರತಿಷ್ಠಿತ ಕಂಪೆನಿ ಮತ್ತು ಅಹಂಕಾರಿಗಳ ವಿರುದ್ಧ ನೊಂದ ಜನತೆ ಚಳುವಳಿಗೆ ಇಳಿದಿದ್ದಾರೆ.
ಯುಸಿಪಿಎಲ್ ವಿರುದ್ಧ ಜನಾಂದೋಲನ”
“ಪೇಜಾವರ ಶ್ರೀ ಹಾರೋಬೂದಿಯಿಂದ ತೊಂದರೆಗೊಳಗಾದವರ ನಿವಾಸಗಳಿಗೆ ಭೇಟಿ, ನಾಗಾರ್ಜುನ ಆಧುನಿಕ ಭಸ್ಮಾಸುರ ಈ ಯೋಜನೆಯ ವಿರುದ್ಧ ಯಾರೇ ಹೋರಾಟ ಮಾಡಿದರೂ ನನ್ನ ಸಂಪೂರ್ಣ ಬೆಂಬಲ ಇದೆ”
ಹಾರೂಬೂದಿ ಅತ್ಯಂತ ವಿಷಕಾರಕ ಅಂಶ ಹೊಂದಿದ್ದು ಪರಿಸರ ಜಾನುವಾರು ಹಾಗೂ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಲಿದೆ- ಪರಿಸರವಾದಿ ಡಾ.ಎನ್.ಎ. ಮಧ್ಯಸ್ಥ ಆತಂಕ”
“ ಕಂಪೆನಿಯನ್ನು ಸ್ಥಗಿತಗೊಳಿಸಲು ಮಾರ್ಚ್ ೫ ರಂದು ದಕ್ಷಿಣಕನ್ನಡ ಉಡುಪಿ ಬಂದ್ ನಡೆಸಲು ನಿರ್ಧಾra
ಇವೆಲ್ಲ ಇತ್ತೀಚೆಗೆ ಪ್ರಜಾವಾಣಿಯಲ್ಲಿ ಮೂಡಿಬಂದ ಸುದ್ದಿಗಳು
ನಿಲುಮೆಯ ಪ್ರಿಯ ಓದುಗರೇ, ಕಳೆದ ಕೆಲವು ದಿನಗಳ ಹಿಂದೆ ನಂದಿಕೂರಿನ ಪ್ರತಿಷ್ಠಿತ ಕಂಪೆನಿಯ ಕುರಿತಂತೆ ಹಾರೋಬೂದಿಯ ನೋಡಿದಿರಾ ಎಂಬ ಲೇಖನ ಪ್ರಕಟವಾಗಿತ್ತು. ಅದರಲ್ಲಿ ಬೂದಿಯಿಂದ್ ಆಗುತ್ತಿರುವ ತೊಂದರೆಯ ಬಗ್ಗೆ ಮತ್ತು ಜನರ ಬಗ್ಗೆ ಹೇಳಲಾಗಿತ್ತು. ಈ ಸಮಸ್ಯೆಯನ್ನು ಬಗೆಹರಿಸಲು ಸಂಘಟನೆ ಮತ್ತು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದರ ಮುಂದುವರಿಕೆಯೆಂಬಂತೆ ಈ ಸಮಸ್ಯೆಯ ವಿರುದ್ಧ ಜನಾಂದೋಲನ ಆರಂಭವಾಗಿದೆ.
ಪೇಜಾವರಶ್ರೀಗಳು ಸೇರಿದಂತೆ ಅನೇಕ ಪ್ರಮುಖರು ಈ ಅಂದೋಲನದಲ್ಲಿ ಪಾಲ್ಗೊಂಡಿದ್ದಾರೆ. ಈ ಆಂದೋಲನ ಪ್ರಾರಂಭವಾಗಿ ನಂದಿಕೂರಿನ ಸುತ್ತಮುತ್ತಲ ಪ್ರದೇಶಗಳಾದ ಎರ್ಮಾಳು, ಕಟ್ಪಾಡಿ, ಉದ್ಯಾವರ ಸೇರಿದಂತೆ ಸುಮಾರು ೫೦ ಕಡ್ಗಳಲ್ಲಿ ಪಾದಯಾತ್ರೆ ನಡೆಸಿ ಜನಜಾಗೃತಿ ಮೂಡಿಸಲಾಗಿದೆ. ಅಲ್ಲದೇ ಇದೇ ಮಾರ್ಚ್ ೫ ರಂದು ದಕ್ಷಿಣಕನ್ನಡ ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ. ಈ ಜನಾಂದೋಲನದಲ್ಲಿ ಪಾದಯಾತ್ರೆಯ ಮೂಲಕ ಕಂಪೆನಿಯ ಯೋಜನೆಯ ಅಪಾಯವೆನ್ನು ಬಿಂಬಿಸುವ ಟ್ಯಾಬ್ಲೋ ಹಾಗೂ ಧ್ವನಿಮುದ್ರಿತ ಯಕ್ಷಗಾನ ಪ್ರಸಂಗ, ಕಂಪೆನಿ ವಿರೋಧಿ ಘೋಷಣೆಗಳು, ಭಿತ್ತಿಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಗಿದೆ. ದಕ್ಷೀಣಕನ್ನಡ ಜಿಲ್ಲಾ ಬಂದ್ಗೆ ಜಿಲ್ಲೆಗಳ ಪ್ರಮುಖ ಸಂಘಟನೆಗಳಾದ ಮೀನುಗಾರರ ಸಂಘ, ಉಡುಪಿ ತಾಲೂಕು ಗ್ರಾಮ ಪಂಚಾಯಿತಿ ಒಕ್ಕೂಟ, ವಿಜಯಕುಮಾರ ಹೆಗ್ಡೆ ನೇತೃತ್ವದ ರೈತಸಂಘ, ಉದ್ಯಾವರ ಗ್ರಾಮ ಸಂರಕ್ಷಣಾ ಸಮಿತಿ ಮೊದಲಾದ ಸಂಘಟನೆಗಳು ಬೆಂಬಲ್ ಸೂಚಿಸಿವೆ.
ಇದೆಲ್ಲ ಬೆಳವಣಿಗೆಗಳನ್ನು ನೋಡಿದಾಗ ನೊಂದ ಜನರಿಗೆ ನ್ಯಾಯ ದೊರೆಯಬಹುದೆಂಬ ಆಶಾಕಿರಣ ಮೂಡುತ್ತಿದೆ. ಈಗ ಹೋರಾಟ ಮುಂದಾಗಿರುವ ಸಂಘಟನೆಗಳು ಯಾವುದೇ ಒತ್ತಡಕ್ಕೆ ಮಣಿಯದೇ ಜನಪರವಾದ ಹೋರಾಟ ಮಾಡಿ ಮುಂದೆ ಬರಬಹುದಾದ ದೊಡ್ಡ ಗಂಡಾಂತರವನ್ನು ತಪ್ಪಿಸಬೇಕಾಗಿದೆ. ಇದಲ್ಲದೇ ಈ ಹೋರಾಟಕ್ಕೆ ಸ್ಥಳೀಯ ಜನರ ಬೆಂಬಲವೂ ಅತ್ಯಗತ್ಯ.
ಚಿತ್ರ ಕೃಪೆ: deccanherald.com, thecanaratimes.com
“ದೇವರು” ಇದ್ದಾನಾ….? ಮೂರ್ತಿರಾಯರು ಏನಂತಾರೆ ಕೇಳಿ
ಶತಶತಮಾನಗಳ ಹಿಂದೆ, ಮಾನವನಲ್ಲಿ ಆತ್ಮಪ್ರಜ್ಣೆ ಅರಳಿ ಅವನು ತನ್ನ ಸುತ್ತಲ ಪ್ರಪಂಚವನ್ನು ಕೂತೂಹಲದಿಂದ ನೋಡಲಾರಂಭಿಸಿದಾಗ ಅವನಿಗೆ ಕಂಡದ್ದೇನು ?
ಅಗ್ನಿಪರ್ವತಗಳಿಂದ ಭುಗಿಲೆದ್ದು ಗಗನಕ್ಕೆ ಏರುತ್ತಿರುವ ಜ್ವಾಲೆ; ಕಾದು ಕರಗಿ ಉಕ್ಕಿ ತನ್ನ ದಾರಿಯಲ್ಲಿ ಸಿಕ್ಕಿದ್ದನ್ನೆಲ್ಲ ಸುಟ್ಟು ಹರಿಯುತ್ತಿರುವ ಲಾವಾರಸ; ಮೋಡದ ದಟ್ಟಣೆಯನ್ನು ಇರಿದಿರಿದು ಕಣ್ಣು ಕೋರ್ಯೆಸುವ ಮಿಂಚು; ಕಾಳ್ಗಿಚ್ಚಿನಿಂದ ಭಸ್ಮವಾಗುತ್ತಿರುವ ಕಾಡು; ಕ್ಷುಬ್ದವಾದ ಸಮುದ್ರ, ಅದರ ತೀರದ ಮೇಲೆ ಅಪ್ಪಳಿಸುವ ಅಲೆಗಳು; ಇವುಗಳ ಜೊತೆಗಿನ ಗುಡುಗಿನ ಆರ್ಭಟ, ಸಿಡಿಲಿನ ಹೊಡೆತ, ಈ ಭಯಂಕರ ಪ್ರಪಂಚದಲ್ಲಿ ನಾನು ಹೇಗೆ ತಾನೆ ಬದುಕಿಯೇನು ?’ ಎಂದು ಅವನು ತಲ್ಲಣಿಸಿರಬೇಕು.
ಹೀಗೆ ಪ್ರಕೃತಿಯ ರೋಷವನ್ನೂ ಅದರ ಮಾರಕ ಪರಿಣಾಮವನ್ನೂ ನೋಡಿದ ಮಾನವನೇ ಅದರ ಮತ್ತೊಂದು ಮುಖವನ್ನೂ ನೋಡಿದ; ಸೂರ್ಯೋದಯ ಸೂರ್ಯಾಸ್ತಗಳ ಬಣ್ಣದ ಸಿರಿ; ಕಾಮನಬಿಲ್ಲಿನ ಸೊಬಗು; ಮಳೆಯಿಂದ (ಆ ಮಳೆ ಗುಡುಗು ಸಿಡಿಲುಗಳ ಜೊತೆಗೆ ಬಂದದ್ದು!) ತೊಯ್ದು ಕಾಡಿನಲ್ಲೂ ಬಯಲಿನಲ್ಲೂ ಹಸುರಿನ ಹಬ್ಬ; ಗಾಳಿಯಲ್ಲಿ ನಲಿದಾಡುತ ಹೂವುಗಳ ಕೋಮಲತೆ, ಸುಗಂಧ; ರಾತ್ರಿಯ ಆಕಾಶದಲ್ಲಿ ಮಿನುಗುವ ನಕ್ಷತ್ರಗಳು, ಅವುಗಳ ನಡುವಿನ ರಹಸ್ಯಪೂರ್ಣ
ನೀಲಿಯಾಳ; ಜಗತ್ತಿಗೆಲ್ಲ ಸೌಮ್ಯ ಸೌಂದರ್ಯವನ್ನು ಕೊಟ್ಟು, ತಂಪೆರೆಯುವ ಬೆಳದಿಂಗಳು; ಸಮುದ್ರದ ಪಾರವಿಲ್ಲದ ಹರವು, ಗಾಂಭೀರ್ಯ……….
ರಾಗಿಮುದ್ದೆ
ಶಿವು.ಕೆ
” ಇದು ಕಷ್ಟ ಕಣ್ರೀ, ನನ್ನ ಕೈಯಲ್ಲಿ ಆಗೋಲ್ಲ”
“ಅರೆರೆ ಅದ್ಯಾಕೆ ಭಯ ಪಡುತ್ತೀರಿ, ಇದು ನೀರು ಕುಡಿದಷ್ಟೇ ಸುಲಭ”
“ನೀರು ಬೇಕಾದ್ರೆ ಹಾಗೆ ಕುಡಿಯಬಹುದು, ಬೇಕಾದ್ರೆ ನುಂಗಿಬಿಡಬಹುದು, ಆದ್ರೆ ಇದು ಮಾತ್ರ ನನ್ನ ಕೈಯಲ್ಲಿ ನುಂಗಲು ಸಾಧ್ಯವೇ ಇಲ್ಲ” ಖಡಾಖಂಡಿತವಾಗಿ ಹೇಳಿಬಿಟ್ಟರು.
ಆದ್ರೆ ಇಷ್ಟಕ್ಕೆ ನಾನು ಬಿಡುತ್ತೇನೆಯೇ? ನನ್ನ ಪ್ರಯತ್ನವನ್ನು ಮುಂದುವರಿಸಿದೆ.
“ನೋಡ್ರಿ ಉದಯ್ ನಾವು ಇದನ್ನು ಜಾಮೂನ್ ಗಾತ್ರ ಮಾಡಿಕೊಂಡು ಸುಲಭವಾಗಿ ನುಂಗುತ್ತೇವೆ. ನೀವು ಕೊನೇ ಪಕ್ಷ ಗೋಲಿ ಗಾತ್ರ ಮಾಡಿಕೊಂಡು ಆದ್ರೂ ನುಂಗಲೇಬೇಕು”
“ನೋಡಿ ಇದೊಂದು ಬಿಟ್ಟು ಬೇರೆ ಏನು ಬೇಕಾದ್ರು ಹೇಳಿ ಮಾಡುತ್ತೇನೆ. ಬೇಕಾದ್ರೆ ನಿಮಗೆ ಎಂಥ ಸಾಪ್ಟ್ ವೇರ್ ಬೇಕು ಹೇಳಿ ಸಿದ್ಧಮಾಡಿಕೊಟ್ಟುಬಿಡುತ್ತೇನೆ. ಇದನ್ನು ನುಂಗಲು ಮಾತ್ರ ಒತ್ತಾಯಮಾಡಬೇಡಿ” ಹೀಗೆ ಹೇಳುತ್ತಾ ಬಂದ ಉದಯ ಹೆಗ್ಡೆ ಕೊನೆಗೂ ನನ್ನ ಮಾತನ್ನು ಒಪ್ಪಲೇ ಇಲ್ಲ.
ರಾಮಾಯಣ-ಮಹಾಭಾರತವನ್ನ ಕನ್ನಡಿಗ್ರು ನೋಡ್ಬಾರ್ದಾ?
– ರಾಕೇಶ್ ಶೆಟ್ಟಿ
ಭಾನುವಾರ ಬೆಳಿಗ್ಗೆಯಾಗುವುದನ್ನೆ ಕಾಯುತಿದ್ದ ದಿನಗಳವು,ಆ ೪೫ ನಿಮಿಷಗಳು ರಸ್ತೆ ಬಿಕೋ ಅನ್ನುತಿತ್ತು.ಆಗ ನಮ್ಮ್ ಇಡಿ ಊರಿಗೆ ಇದ್ದಿದ್ದು ಮೇಷ್ಟ್ರ ಮನೆಯ ಟೀವಿ ಮಾತ್ರ ಅಲ್ಲಿ ಹೋಗಿ ಕೂತು …ಪರದೆಯಲ್ಲಿ ’ಕರ್ಮಣ್ಯೆ ವಾದಿಕಾ…’ ದನಿ ಕೇಳುತಿದ್ದಂತೆ ಕಣ್ಣು ಬಿಟ್ಟಂತೆ ನೋಡುತ್ತ ಕೂರುತಿದ್ದೆ.ಹೌದು ನಾನು ಮಾತಾಡುತ್ತಿರುವುದು ’ಮಹಾಭಾರತ’ ಧಾರವಾಹಿಯ ಬಗ್ಗೆ.ಅದರಲ್ಲಿ ಮಧ್ಯೆ ಬರುವ ಹಾಡುಗಳು, ಆ ಯುದ್ಧದ ದೃಶ್ಯಗಳನ್ನ ನೋಡುವುದೇ ಹಬ್ಬ,ಭಾಷೆ ಅರ್ಥವಾಗದಿದ್ದರೂ ನೋಡುತಿದ್ದೆ,ನೋಡಲೆಬೇಕಿತ್ತು!
ಯಾಕಂದ್ರೆ ಗೊತ್ತಲ್ಲ ನಮ್ಮ್ ಕನ್ನಡ ಚಿತ್ರರಂಗದವರ ’ಡಬ್ಬಿಂಗ್ ನಿಷೇಧ’ ನೀತಿ.ಈ ಹಿಂದೊಮ್ಮೆ ಇದರ ಬಗ್ಗೆ ಬರೆದಿದ್ದೆ, ಮತ್ತೆ ಬರೆಯುವಂತೆ ಮಾಡಿದ್ದು ಈ ಬಾರಿಯ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕೈಗೊಂಡ ಡಬ್ಬಿಂಗ್ ವಿರೋಧಿ ನಿರ್ಣಯ.ಒಂದು ವೇದಿಕೆಯಲ್ಲಿ ವಿರುದ್ಧ ನಿಲುವು ತಳೆದರೆ ಮತ್ತೊಂದು ವೇದಿಕೆಯಲ್ಲಿ ಹಿರಿಯ ನಟಿ,ಚತುರ್ಭಾಷಾ ತಾರೆ ಬಿ.ಸರೋಜಾದೇವಿಯವ್ರು “ಚಲನಚಿತ್ರ ಹಾಗೂ ಕಿರುತೆರೆ” ಗೋಷ್ಠಿಯ ಅಧ್ಯಕ್ಷ ಭಾಷಣದಲ್ಲಿ ಅದೂ “ಡಬ್ಬಿಂಗ್ ವಿರೋಧ ಮತ್ತು ರಾಜಕೀಯ ಶಕ್ತಿಯಾಗಿ ಕನ್ನಡ-ಕನ್ನಡಿಗ” ಎಂಬ ಕೃತಿಯನ್ನು ಬಿಡುಗಡೆ ಮಾಡಿ ಡಬ್ಬಿಂಗ್ ಪರವಾಗಿ ಮಾತಾಡಿ,ಇತ್ತೀಚೆಗೆ ಡಬ್ಬಿಂಗ್ ನಮ್ಮ ಹಕ್ಕು ಅಂತ ಹೇಳಿಕೊಂಡು ಪತ್ರಿಕೆಗಳಿಗೆ ಬರೆಯುತ್ತ ಬಂದ ಗೆಳೆಯರ ಮಾತನ್ನ ಅನುಮೋದಿಸಿದ್ದಾರೆ.
ವರ್ಷಾ..
-ಅನಿಲ್ ಬೆಡಗೆ
ಆಹಾ ..
ಇನ್ನೇನು ಬೇಸಿಗೆ ಶುರು ಆಗಬೇಕು, ಅಷ್ಟರಲ್ಲಿ ಒಂದು ಮಳೆ.!
ಸಂಜೆ ಆದಂತೆ ಜೋರು ಜೋರು ಗಾಳಿ, ತುಂತುರು ಮಳೆ..
ಆಮೇಲೆ, ಬೇಸಿಗೆಯ ಬೆವರ ಮಳೆ …
ಆದರೆ ಗೆಳತಿ, ಮನಸೆಲ್ಲ ಮುಂಗಾರು ಮಳೆ..!!
ಎಲ್ಲ ಹನಿಗಳ ಲೀಲೆ..
ನೆನಪಿದಿಯ..?
ನಮ್ಮಿಬ್ಬರ ಮೊದಲ ಭೇಟಿ.
ಆ ಮಳೆಗಾಲದ ದಿನ, ಶಾಲೆ ಬಿಟ್ಟ ವೇಳೆ ಮುಖ ಮುಚ್ಚುವಂತೆ ಕೊಡೆ ಹಿಡಿದು ಓಡಿ ಬರುವಾಗ ಒಬ್ಬರಿಗೊಬ್ಬರು ಡ್ಯಾಶ್ ಹೊಡೆದದ್ದು…!!
ಗುನು ಗುನು ಅಂತ ನನ್ನ ಬೈಕೊಂಡು ಹೋಗಿ ಮರದಡಿಗೆ ನಿಂತಿದ್ದು..
ಬಾಲ್ಯದ ಆ ಮಳೆಗಾಲ ಎಷ್ಟೊಂದು ಚೆನ್ನ..
“ವೋ ಕಾಗಜ್ ಕಿ ಕಷ್ತಿ, ವೋ ಬಾರೀಶ್ ಕ ಪಾನಿ..”
ಕೊಡೆ ಇದ್ದರು, ಮಡಚಿಟ್ಟು, ರೈನ್ ಕೋಟ್ ಬಿಚ್ಚಿ..
ಓ ಓ ಓ … ವೋ… ಅಂತ ಕೂಗಿಕೊಂಡು ಕುಣಿದಾಡ್ತಾ ಆ ಮಳೆಯಲ್ಲಿ ನೆನೆಯೋದು ಮಜಾ ರೆ ಮಜಾ.
ತಲೆಯಲ್ಲ ವದ್ದೆ ಆಗಿ, ಸ್ಕೂಲ್ ಉನಿಫಾರ್ಮ್ ಕೆಸರಿಕರಣವಾಗಿ,
ಅಮ್ಮ ಬೈಕೊಂಡು ಬೈಕೊಂಡು ತಲೆ ವರಸಿದ್ದು.
ಕೊಡೆ ಕಳೆದಾಗ, ತಲೆ ಮೇಲೆ ಎರಡು ಕೊಟ್ಟಿದ್ದು….
ಆ ಹಾ.. ಸವಿ ಸವಿ ನೆನಪು..
ಮನದಲ್ಲಿ ಹಸಿ ಹಸಿ.. ಮತ್ತಷ್ಟು ಓದು 
ನಾವು ಸ್ವತಂತ್ರರೇ..?
ಮಮತ ಕಂಡ್ಲೂರು
ಅಂದು ಸಿಕ್ಕಿತ್ತು ಮುಕ್ತಿ
ಕಳಚಿತ್ತು ಆ ಪರರ ಕಪಿಮುಷ್ಟಿ
ಅಂತೂ ಇಂತೂ ಸ್ವಾತಂತ್ರ್ಯ ಬಂತೆಂದರು ಹಿರಿಯರು
ತನ್ನ ಕರುಳಕುಡಿಗಳಿವರೆಲ್ಲ ಒಂದೆಂಬ ಭಾವದಿ
ಇಹರೆಂದು ‘ಭರತಮಾತೆ’ಯ ಎದೆಯು ಮಿಡಿದಿತ್ತು.
ಆಹಾ, ಎಂಥಾ ಪರಮಾನಂದವಾಗುತ್ತಿದೆ.
ನಮ್ಮದೇ ನೆಲ,ಜಲ,ಗಾಳಿ ಕೊನೆಗೆ ನಮ್ಮದೇ ‘ಸರಕಾರ’.
ನೆಮ್ಮದಿಯ ಉಸಿರು ಬಿಡುತ್ತಿದ್ದಂತೆ,
ಆರಂಭವಾಯ್ತು ಪ್ರಗತಿಯ ಅರಸುವಿಕೆ!
ಜನ್ಮತಾಳಿದುವು ಕಟ್ಟಡಗಳು ಗೆದ್ದಲಗೂಡಿನ ತೆರದಿ.
ಬಲಿಯಾಗಿ ಪಕ್ಷಪಕ್ಷಗಳ ಸ್ವಾರ್ಥರಾಜಕೀಯಕ್ಕೆ
ಅನಾಥಭಾವದಿ ನರಳುವಂತಾಯ್ತು ಬಡಜನತೆ.
ಬೆಳೆದವು ಸರಕಾರದ ಯೋಜನೆಗಳು ಹನುಮಂತನ ಬಾಲದಂತೆ…… ಮತ್ತಷ್ಟು ಓದು 
ಆಧುನಿಕ ವಿಕ್ರಮನೂ ಬೇತಾಳನೂ
ಸಾತ್ವಿಕ್ ಎನ್. ವಿ
ಹೆಗಲಲ್ಲಿದ್ದ ಬೇತಾಳವು ಹಾರಿ ಮರ ಸೇರಿದಾಗ ವಿಕ್ರಮನು ಪರೀಕ್ಷೆ ಸಮಯಕ್ಕೆ ನೋಟ್ಸ್ ನ ಝೆರಾಕ್ಸ್ ಗಾಗಿ ಪರದಾಡುವ ವಿದ್ಯಾರ್ಥಿಗಳಂತೆ ಮತ್ತೆ ಬೇತಾಳವನ್ನು ಹಿಡಿದು ತರಲು ಹೊರಟನು. ನಿಲುಮೆವನ್ನು ಒಮ್ಮೆ ಓದಿದ ವ್ಯಕ್ತಿಯು ಮತ್ತೆ ಮತ್ತೆ ನಿಲುಮೆವನ್ನು ಓದಲು ಹವಣಿಸುವಂತೆ ವಿಕ್ರಮನ ಈ ಕಾರ್ಯವು ಬೇತಾಳನಿಗೆ ಸೋಜಿಗವನ್ನುಂಟು ಮಾಡಿತು. ಹಿಡಿದ ಕೆಲಸ ಮಾಡೇ ತೀರುವ ವ್ಯಕ್ತಿಯನ್ನು ನೋಡಿ ಬೇತಾಳವು ರಾಜನಿಗೆ ‘ಅಯ್ಯ ವಿಕ್ರಮ ರಾಜ ನೀನು ಸಾಹಸಿಯೆಂದು ನಾನು ಬಲ್ಲೆ. ಆದರೆ ನಾನು ಮಾತಾಡದಿದ್ದರೆ ಆಗಾಗ ಗುಟ್ಕಾ ಅಗಿಯುವವರಂತೆ ನನ್ನ ಬಾಯಿಯು ನವನವ ಎನ್ನುತ್ತದೆ. ಆದುದರಿಂದ ನನ್ನಷ್ಟಕ್ಕೆ ನಾನು ಕಥೆ ಹೇಳುತ್ತಾ ಹೋಗುತ್ತೇನೆ. ಬೇಕಿದ್ದರೆ ಕೇಳು, ಇಲ್ಲದಿದ್ದರೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಿರುವ ಕನ್ನಡ ಪಠ್ಯದಂತೆ ಬಿಟ್ಟುಬಿಡು. ನಾನು ಆ ಕನ್ನಡ ಉಪನ್ಯಾಸಕನಂತೆ ನನ್ನ ಕೆಲಸ ಮಾಡುತ್ತೇನೆ’ ಎಂದು ಹೇಳಿ ಅವನ ಒಪ್ಪಿಗೆಯನ್ನು ಕೇಳದೇ ತನ್ನ ಪಾಡಿಗೆ ತಾನು ಕಥೆ ಹೇಳಲು ಪ್ರಾರಂಭಿಸಿತು.
ಕಂಡೆಯಾ ಎಂಬ ದೇಶದಲ್ಲಿ ಅಲ್ಲಿನ ರಾಣಿಯು ತನ್ನ ಮಂತ್ರಿಯೊಡಗೂಡಿ ರಾಜ್ಯವಾಳುತ್ತಿದ್ದಳು. ಅಲ್ಲಿನ ರಾಜನ ಬಗೆಗಿನ ಅನುಕಂಪೆ ಮತ್ತು ತನ್ನ ದೇಶಕ್ಕೆ ಸೊಸೆಯಾಗಿ ಬಂದ ವ್ಯಕ್ತಿಯ ಕುರಿತು ಪ್ರೀತಿ ವಿಶ್ವಾಸಗಳಿದ್ದವು. ಆದರೆ ಕೆಲವು ಪ್ರಜೆಗಳಿಗೆ ಆಕೆಯು ತಮ್ಮ ರಾಜ್ಯವಾಳುವುದು ಇಷ್ಟವಿರಲಿಲ್ಲ. ಇಂಥ ರಾಣಿಗೆ ರೇಣುಕಾಂಬೆ ಎಂಬ ಸ್ನೇಹಿತೆಯಿದ್ದಳು. ರಾಣಿಯ ಅತ್ಮೀಯಳಾದ ಕಾರಣ ಅರಮನೆಯ ರಾಜಕೀಯದಲ್ಲಿ ರೇಣುಕಾಂಬೆಯ ಮಾತಿಗೆ ಬೆಲೆಯಿತ್ತು.
ಹೀಗೆ ಕಾಲ ಕಳೆಯುತ್ತಿರುವಾಗ ರೇಣುಕಾಂಬೆಗೆ ಅನ್ಯದೇಶದಲ್ಲಿರುವ ಪ್ರಗತಿಯುಳ್ಳ ಸ್ತ್ರೀಯರನ್ನು ನೋಡಿ ತನ್ನ ದೇಶದಲ್ಲಿಯು ಇಂಥ ವ್ಯವಸ್ಥೆ ಜಾರಿಗೆ ತಂದರೆ ಹೇಗೆ ಎಂಬ ಯೋಚನೆ ಬಂದದ್ದೇ ತಡ ಈ ಕಾರ್ಯಕ್ರಮದ ಮೊದಲ ಭಾಗವಾಗಿ ಯಾವ ಯೋಜನೆಯನ್ನು ತರವುದು ಎಂದು ಬಾಲ ಸುಟ್ಟ ಬೆಕ್ಕಿನ ಹಾಗೇ ಅತ್ತಂದಿತ್ತ ತಿರುಗಹತ್ತಿದಳು. ಹಿಂದೆ ತನ್ನ ಪಕ್ಕದ ಮನೆಯ ಹೆಂಗಸು ಬಟ್ಟಿ ಸೇಂದಿ ಕುಡಿದು ತನ್ನ ನಿರ್ಲಜ್ಜ ಮತ್ತು ಅವಿವೇಕಿ ಗಂಡನಿಗೆ ತದುಕುತ್ತಿದ್ದುದು ನೆನಪು ಬಂತು. ಹೆಣ್ಣಿಗೆ ಧೈರ್ಯ ಕೊಡುವ ಮದ್ದು ಇದುವೇ ಎಂದು ಬಗೆದಳು. ‘ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು’ ಎಂಬುದು ಆ ಯೋಜನೆಯ ಧ್ಯೇಯ ವಾಕ್ಯವಾಗಿತ್ತು. ಯೋಜನೆ ಬಂದದ್ದೇ ವೇಗದಲ್ಲಿ ಅದಕ್ಕೆ ವಿರೋಧವು ಕಂಡು ಬಂತು. ಕಂಡಿಯಾ ದೇಶದಲ್ಲಿ ಏನೇ ಬಂದರೂ ಅದಕ್ಕೆ ವಿರೋಧ ಮಾಮೂಲಾದರೂ ಈ ಪ್ರತಿಭಟನೆಯು ಮಾಮೂಲಾಗಿರಲ್ಲಿಲ್ಲ. ಈ ಪ್ರತಿಭಟನೆಯು ನಾಯಕತ್ವವನ್ನು ಆಮೋದ ಮುತ್ತಪ್ಪನೆಂಬ ಅವಿವಾಹಿತನು ವಹಿಸಿದ್ದನು. ತದುಕುವುದೇ ತನ್ನ ಸಂಸಾರ ಮತ್ತು ದೇಶಕ್ಕೆ ಮಾಡುವ ಉಪಕಾರವೆಂದು ಭಾವಿಸಿದ್ದನು. ಮತ್ತಷ್ಟು ಓದು 
ಜೋತಿಷ್ಯ ಎಂಬ ಹಗಲು ದರೋಡೆ!
– ಸುಪ್ರೀತ್ ಕೆ.ಎಸ್
ಒಂದಕ್ಕೆ ಎರಡು ಪಟ್ಟು ಹಣ ಕೊಡುತ್ತೇವೆ ಎಂದು ನಂಬಿಸಿ ಹಣ ಪಡೆದು ಮೋಸ ಮಾಡಿ ಓಡಿ ಹೋಗುವ ವಂಚಕರನೇಕರ ಬಗೆಗೆ ಜನರು ಮಾಧ್ಯಮಗಳಲ್ಲಿ ದಿನವೂ ನೋಡುತ್ತಾರೆ. ಕಣ್ಣೆದುರೇ ಹಣ ಕಳೆದುಕೊಂಡು ಬೆಪ್ಪರಾಗಿ, ಅಸಹಾಯಕರಾಗಿ ನಿಂತ ಗ್ರಾಹಕರನ್ನೂ ಕಂಡಿರುತ್ತಾರೆ. ಹಣ ದ್ವಿಗುಣ, ಲಾಟರಿಯಂತಹ ಪ್ರಲೋಭನೆಗಳಿಗೆ ಒಳಗಾಗದೆ, ವಂಚನೆಯಿಂದ ದೂರ ಉಳಿದವರು ಕೆಲವು ರೀತಿಯ ಪ್ರಶ್ನೆಗಳನ್ನು ತಮ್ಮಲ್ಲೇ ಕೇಳಿಕೊಂಡಿರುತ್ತಾರೆ. ಅವೆಂದರೆ: ನ್ಯಾಯಯುತವಾಗಿ ಈ ಮನುಷ್ಯ ಅತೀ ಕಡಿಮೆ ಸಮಯದಲ್ಲಿ ಹಣವನ್ನು ದ್ವಿಗುಣಗೊಳಿಸುವುದಕ್ಕೆ ಹೇಗೆ ಸಾಧ್ಯ? ಹಾಗೆ ಹಣ ದ್ವಿಗುಣಗೊಳಿಸುವ ಯಾವ ವ್ಯಾಪಾರ, ತಂತ್ರಗಾರಿಕೆ ಈತನಿಗೆ ಗೊತ್ತು? ನಮಗೆ ಎರಡು ಪಟ್ಟು ಹಣ ಹಿಂದಿರುಗಿಸುವುದಕ್ಕೆ ಈತನಿಗೆ ಅಥವಾ ಈತನ ಸಂಸ್ಥೆಗೆ ಎಲ್ಲಿಂದ ಸಂಪತ್ತಿನ ಮೂಲವಿದೆ? ನಾನು ಬೆವರು ಸುರಿಸಿ ದುಡಿಯದೆ, ನನ್ನ ಪರಿಶ್ರಮ ಇಲ್ಲದೆ, ನನ್ನ ಪ್ರತಿಭೆಯ ವಿನಿಯೋಗವಿಲ್ಲದೆ ಸುಲಭವಾಗಿ ಹಣವನ್ನು ಪಡೆಯುವುದು ನೈತಿಕವಾಗಿ ನನಗೆ ಸಮ್ಮತವೇ? ಪ್ರತಿಯೊಬ್ಬರೂ ಹೀಗೇ ಹಣ ಮಾಡುವ ವಿಧಾನ ಕಂಡುಕೊಂಡರೆ ನಿಜವಾದ ಪರಿಶ್ರಮ, ಪ್ರತಿಭೆ, ಬದ್ಧತೆ, ತಾಂತ್ರಿಕ ಕೌಶಲ್ಯ ಬೇಡುವ ಕೆಲಸಗಳನ್ನು ಮಾಡುವವರು ಯಾರು?
ಇಂತಹ ಪ್ರಶ್ನೆಗಳನ್ನು ಕೇಳಿಕೊಳ್ಳುವ ಮನುಷ್ಯನಿಗೆ ಸಹಜವಾಗಿ ತನ್ನ ಮೇಲೆ ಆತ್ಮವಿಶ್ವಾಸವಿರುತ್ತದೆ. ತನ್ನ ದುಡಿಮೆಯ ಮೇಲೆ ನಂಬಿಕೆಯಿರುತ್ತದೆ. ನೈತಿಕವಾಗಿ ಈತ ಸದೃಢನಾಗಿರುತ್ತಾನೆ. ಯಾವನಾದರೂ ವಂಚಕ, “ಈ ನಮ್ಮ ಯೋಜನೆಯಲ್ಲಿ ಹಣ ತೊಡಗಿಸಿ ನಿಮಗೆ ಒಂದೇ ತಿಂಗಳಲ್ಲಿ ಹಣ ದ್ವಿಗುಣಗೊಳಿಸಿ ಕೊಡುತ್ತೇವೆ.”, “ನಿಮ್ಮ ಹಣವನ್ನು ನಾವು ಟೀಕ್ ಮರ ಮೊದಲಾದ ಬೆಲೆಬಾಳುವ ಸಂಪತ್ತಿನಲ್ಲಿ ಹೂಡುತ್ತೇವೆ, ಐದು ವರ್ಷದಲ್ಲಿ ಕೋಟ್ಯಾಧಿಪತಿಯಾಗುವಿರಿ” ಎಂಬ ಪ್ರಲೋಭನೆಗಳನ್ನು ಒಡ್ಡಿದರೆ, ಆತನಿಗೆ ಎಂಥದ್ದೇ ಆರ್ಥಿಕ ಮುಗ್ಗಟ್ಟಿದ್ದರೂ, ಸ್ಪಷ್ಟವಾದ ಪ್ರಶ್ನೆಗಳು ಹಾಗೂ ಸಂಶಯಿಸಿ ಪರೀಕ್ಷಿಸುವ ಬುದ್ಧಿಯಿರುವ ಆತ ಮೋಸ ಹೋಗುವುದಿಲ್ಲ. ಇಂತಹ ವಂಚಕರಿಂದ ಪ್ರಾರಂಭದ ಮಟ್ಟಿಗೆ ಒಂದಷ್ಟು ಮಂದಿ ನಿಜವಾಗಿ ಹಣ ದ್ವಿಗುಣಗೊಳಿಸಿಕೊಂಡರೂ, ಹಡಗು ಸುಭದ್ರವಾಗಿ ತೇಲುತ್ತಿರುವಂತೆ ಕಂಡರೂ ಆತ ಸಂಯಮದಿಂದ ತನ್ನನ್ನು ತಾನು ನಿಯಂತ್ರಿಸಿಕೊಳ್ಳುತ್ತಾನೆ. ಇವೆಲ್ಲ ಹುಲಿಯನ್ನು ಬೇಟೆಯಾಡಲಿಕ್ಕೆ ಬೇಟೆಗಾರ ಒಡ್ಡುವ ಕುರಿ, ಮೇಕೆ, ಆಕಳು ಮೊದಲಾದ ಪ್ರಲೋಭನೆಗಳಿದ್ದ ಹಾಗೆ ಎಂಬುದು ಆತನಿಗೆ ಸ್ಪಷ್ಟವಾಗುತ್ತದೆ. ತನ್ನಲ್ಲಿರುವ ಹಣದಲ್ಲಿ ಇಂತಹ ವಂಚಕ ಏಜೆನ್ಸಿಗಳಲ್ಲಿ ಇನ್ವೆಸ್ಟ್ ಮಾಡುವುದಕ್ಕೆ ಹೊರೆ ಆಗಲಾರದು ಅನ್ನಿಸಿದರೂ, ಹೋದರೆ ಹೋದರೆ ಅಡಿಕೆ, ಬಂದರೆ ಆನೆ ಎಂಬಂತೆ ಕಣ್ಣು ಮುಚ್ಚಿ ಆತ ಮೋಸ ಹೋಗುವುದಕ್ಕೆ ಸಿದ್ಧನಾಗುವುದಿಲ್ಲ. ಮತ್ತಷ್ಟು ಓದು 
ಉತ್ಸಾಹದ ಚಿಲುಮೆಗಳ ನಡುವೆ ಕ್ಯಾಂಪಸ್ ಕಪ್ಗಾಗಿ ಕಾದಾಟ
ವಿಶ್ವದೆಲ್ಲೆಡೆ ವಿಶ್ವಕಪ್ ಜ್ವರದಲ್ಲಿದ್ದರೆ, ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲೂ ಕ್ರೀಡಾ ಜ್ವರ ಏರತೊಡಗಿದೆ. ಕಳೆದ ಆರು ದಿನಗಳಿಂದ ಮಂಗಳೂರು ವಿವಿಯ ಮಂಗಳಗಂಗೋತ್ರಿ ಕ್ಯಾಂಪಸ್ನಲ್ಲಿ ಅಂತರ್ವಿಭಾಗ ಮಟ್ಟದ ಈ ಕ್ರೀಡಾ ಕೂಟದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರದ ಉತ್ಸಾಹ. ಇಲ್ಲಿ ಒಂದಲ್ಲ ಎರಡಲ್ಲ ಹತ್ತು ಹನ್ನೆರಡಕ್ಕಿಂತ ಹೆಚ್ಚು ಆಟಗಳನ್ನು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗಿದೆ. ಕೆಲವು ಸಲ ಆಟಗಾರರ ಸಂಖ್ಯೆ ಕಡಿಮೆ ಇದ್ದಲ್ಲಿ ಹುಡುಗರು, ಹುಡುಗಿಯರು ಒಟ್ಟಿಗೆ ಒಂದು ತಂಡವಾಗಿ ಆಡುವುದುಂಟು. ವಿಶೇಷವೆಂದರೆ ನಮ್ಮ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರೇ ಜಾಸ್ತಿ. ಸುಮಾರು ಒಂದು ತಿಂಗಳ ಕಾಲ ನಡೆಯುವ ಈ ಕ್ರೀಡಾಕೂಟ ಈಗಾಗಲೇ ಒಂದು ಸುತ್ತಿನ ಪಂದ್ಯಾಟಗಳು ಮುಗಿದಿವೆ. ಸೋತ ತಂಡಗಳು ತಮ್ಮ ದಿನನಿತ್ಯದ ಓದಿನ ಬಗ್ಗೆ ಗಮನವನ್ನರಿಸಿದರೆ, ಗೆದ್ದ ತಂಡಗಳು ಎರಡನೇ ಸುತ್ತಿನ ಸ್ಪರ್ಧೆಗೆ ಸಿದ್ಧತೆಯನ್ನು ನಡೆಸಿದೆ.
ಈ ಕ್ರೀಡಾಕೂಟದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಲ್ಲದೆ ಸಂಶೋಧನಾ ವಿದ್ಯಾರ್ಥಿಗಳೂ ಒಂದಾಗಿ ತಮ್ಮದೇ ಆದ ತಂಡವನ್ನು ಕಟ್ಟಿಕೊಂಡು ಈ ಕ್ರೀಡಾಕೂಟದಲ್ಲಿ ಭಾಗಿಯಾಗಿರೋದು ಒಂದು ವಿಶೇಷ. ಇಲ್ಲಿಯ ಕೆಲವು ವಿಭಾಗದ ವಿದ್ಯಾರ್ಥಿಗಳಿಗೆ ಈ ಗೇಮ್ಸ್ನ ಬಗ್ಗೆ ಇರೋ ಪ್ರೀತಿ ನೋಡಿದ್ರೇ ತುಂಬಾ ಸಂತೋಷವಾಗುತ್ತೆ. ಯಾಕಂದ್ರೇ ಇವರು ತಮ್ಮ ತಮ್ಮ ಕೈಯಿಂದಲೇ ಹಣವನ್ನು ಹಾಕೊಂಡು ಬಣ್ಣ ಬಣ್ಣದ ಕಲರ್ಸ್ನ್ನು ತರಿಸಿಕೊಂಡು, ಆಯಾ ದಿನದ ಗೇಮ್ಸಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು ಸಮಯಕ್ಕೆ ಮುಂಚೆಯೇ ಮೈದಾನದಲ್ಲಿ ಹಾಜರ್. ಈ ವಾತಾವರಣವನ್ನು, ಆಟವನ್ನು ನೋಡೋದಕ್ಕೆ ನೀವು ಈ ತಿಂಗಳಿನಲ್ಲಿ ಒಮ್ಮೆ ಮಂಗಳಗಂಗೋತ್ರಿಯ ಆಟದ ಮೈದಾನಕ್ಕೆ ಬನ್ನಿ. ಮತ್ತಷ್ಟು ಓದು 








