ವಿಷಯದ ವಿವರಗಳಿಗೆ ದಾಟಿರಿ

Recent Articles

20
ಫೆಬ್ರ

ಒಲುಮೆ

ಪದ್ಮಾವತಿ ಎನ್

ಅವಳ ಕಣ್ಣೋಟದಾ ಸೆಳೆತಕೆ

ವಯ್ಯಾರದಾ ಛಾಪಿಲ್ಲ . . . ಗೊಂದಲದ ಮುಸುಕಿಲ್ಲ

ರೆಪ್ಪೆಯಂಚಲಿ ಮೂಡಿದಾ ಕಳೆ

ಆವರಿಸಿತ್ತು ನನ್ನ ಮನ ಪಟಲವ  . . . . .

ಸಂಕೋಚದಲೆ ಬಾಚಿದೆ ಆ ಕಿರಣವ

ಪುಳಕಗೊಂಡಿತಾಗ ಮೈಮನಸು

ನನ್ನಿರವ ಮರೆತಿದ್ದೆ

ನೋಟವನೇ ಗೆದ್ದಿದ್ದೆ

ಕನಸಿನರಮನೆಯ ಅರಸುತ್ತಾ ಸಾಗಿದ್ದೆ. . . . .

ನನ್ನೊಡಲ ದಣಿಸಿದವನು ನನ್ನುಸಿರ ತಣಿಸಿದವನು

ನಂಬಿದ್ದೆ ನಾನಾಗ ಆ ಕಣ್ಣಂಚ ಕಿರಣವನು

ಆದರತೆಯು ಚಿಗುರಿ ನಿಂತಾಗ

ಕ್ಷಣ ಕಳೆದು ಕಾಲ ಮಗುಚಿದರೂ

ನಿಂತಿದೆ ನನ್ನುಸಿರು ಅವನಾಳದಲಿ

ತಂಪೆರೆದಿಹಾ ಪ್ರೀತಿಯಾಮೃತಕೆ  . . . . . . ಮತ್ತಷ್ಟು ಓದು »

19
ಫೆಬ್ರ

ನಮ್ಮ ರಾಜ್ಯವನ್ನು ಪ್ರತಿನಿಧಿಸಲು ಜನರಿಲ್ವಾ???

– ಚೇತನ್ ಜೀರಾಳ್

ಇದು ಖಂಡಿತಾ ಕರ್ನಾಟಕದ ದೌರ್ಭಾಗ್ಯದ ಪರಮಾವಧಿ. ಹೈಕಮಾಂಡ್ ದಾಸ್ಯಕ್ಕೆ ಸಿಲುಕಿರುವ ಬಿಜೆಪಿ ಪಕ್ಷ ಮತ್ತೊಂದು ಎಡವಟ್ಟು ತೀರ್ಮಾನ ಕೈಗೊಂಡಿದೆ. ಹಿರಿಯ ರಾಜಕಾರಣಿ ಶ್ರೀ ರಾಜಶೇಖರ ರ್ಮೂರ್ತಿಯವರ ನಿಧನದಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಹಿಂದಿ ಚಲನಚಿತ್ರ ನಟಿ ಶ್ರೀಮತಿ ಹೇಮಾ ಮಾಲಿನಿ ಅವರನ್ನ ರಾಜ್ಯದಿಂದ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ.

ರಾಜ್ಯಸಭಾ ಸದಸ್ಯತ್ವ ಅಂದರೇನು?
ಒಬ್ಬ ರಾಜ್ಯಸಭಾ ಸದಸ್ಯ ಮುಖ್ಯವಾಗಿ ಆಯಾ ರಾಜ್ಯದ ಪ್ರತಿನಿಧಿಯಾಗಿ ಸಂಸತ್ತಿನ ಮೇಲ್ಮನೆಯಲ್ಲಿ ಕೆಲಸಮಾಡುತ್ತಾರೆ. ರಾಜ್ಯಸಭೆ ಅನ್ನುವುದು ಒಕ್ಕೂಟ ವ್ಯವಸ್ಥೆಯ ಒಂದು ಮುಖ್ಯ ಭಾಗ. ಕೇಂದ್ರದಲ್ಲಿ ಲೋಕಸಭೆಗಿರುವಷ್ಟೇ ಪ್ರಾಮುಖ್ಯತೆ ರಾಜ್ಯಸಭೆಗೂ ಇದೆ. ರಾಜ್ಯಸಭಾ ಸದಸ್ಯರನ್ನು ಆಯಾ ರಾಜ್ಯದ ಶಾಸಕರು ಆಯ್ಕೆ ಮಾಡುತ್ತಾರೆ.

ನಮ್ಮ ರಾಜ್ಯವನ್ನೂ ಪ್ರತಿನಿಧಿಸಲು ಅರ್ಹ ಜನಪ್ರತಿನಿಧಿಗಳು ಇಲ್ಲವೇ?
ಇಷ್ಟಕ್ಕೂ ರಾಜ್ಯಸಭೆ ಸ್ಥಾನಕ್ಕೆ ಹೇಮಾ ಮಾಲಿನಿಯವರನ್ನು ಕಣಕ್ಕಿಳಿಸಲು ಇರುವ ಅರ್ಹತೆಯಾದರೂ ಏನು? ಮೊದಲನೆಯದಾಗಿ ಹೇಮಾ ಮಾಲಿನಿ ನಮ್ಮ ನಾಡಿನವರಲ್ಲ, ಹೋಗಲಿ ಆ ಕಾರಣವನ್ನು ಬದಿಗಿಟ್ಟು ನೋಡೋಣವೆಂದರೆ ಅವರಿಂದ ನಮ್ಮ ರಾಜ್ಯಕ್ಕೆ ಆಗಿರುವ ಉಪಯೋಗವಾದರೂ ಏನು? ನಮ್ಮ ನಾಡಿನ ಯಾವ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವ ಪ್ರಯತ್ನ ರಾಜ್ಯ ಮಟ್ಟದಲ್ಲಾಗಲಿ ಅಥವಾ ಕೇಂದ್ರ ಮಟ್ಟದಲ್ಲಾಗಲಿ ಪ್ರಯತ್ನಿಸಿದ್ದಾರೆ? ನಮ್ಮ ನೆಲ, ಜಲ, ಭಾಷೆ, ಉದ್ಯೋಗ, ಉದ್ದಿಮೆ ಹೀಗೆ ಯಾವ ಕಾರಣಕ್ಕಾಗಿ ನಮ್ಮ ನಾಡಿಗಾಗಿ ಕೆಲಸ ಮಾಡಿದ್ದಾರೆ? ಯಾವುದೇ ದೃಷ್ಠಿಯಿಂದ ನೋಡಿದರೂ ಸಹ ಹೇಮಾ ಮಾಲಿನಿ ನಮ್ಮ ರಾಜ್ಯದ ಪ್ರತಿನಿಧಿಯಾಗಿ ರಾಜ್ಯಸಭೆ ಪ್ರವೇಶಿಸಲು ಅರ್ಹರಲ್ಲ. ಇಂತಹುದೇ ತಪ್ಪನ್ನು ಹಿಂದೆ ಬಿಜೆಪಿ ಹೈಕಮಾಂಡ್ ವೆಂಕಯ್ಯ ನಾಯ್ಡು ಅವರನ್ನ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಿವಾಗ ಮಾಡಿತ್ತು. ಕಾಂಗ್ರೆಸ್ ಹಾಗೂ ಜನತಾದಳ ಪಕ್ಷಗಳು ಸಹಿತ ಇಂತಹುದೇ ತಪ್ಪನ್ನು ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ.
ಮತ್ತಷ್ಟು ಓದು »

19
ಫೆಬ್ರ

ಓಶೋ ವಿಚಾರಗಳು ಪ್ರಾಕ್ಟಿಕಲ್ಲಾಗಿವೆಯೇ?

– ಸುಪ್ರೀತ್.ಕೆ.ಎಸ್

ಈ ಲೇಖನದ ಉದ್ದೇಶ ಓಶೋ ಮೇಲಿನ ನನ್ನ ಪ್ರೀತಿ, ಮುನಿಸು, ಅಭಿಮಾನ, ಆತನ ಬಗೆಗಿರುವ ಬೆರಗು, ಕುತೂಹಲ, ಅನುಮಾನ, ಅಸಹ್ಯಗಳನ್ನು ಬರೆದಿರಿಸುವುದು, ಆ ಮೂಲಕ ನನ್ನೊಳಗೊಂದು ಸ್ಪಷ್ಟ ನಿಲುವನ್ನು ರೂಪಿಸಿಗೊಳ್ಳುತ್ತಾ ಹೋಗುವುದು ಎಂದಾಗಿತ್ತು. ಓಶೋನ ವಿಚಾರಗಳನ್ನು ನಾನೆಷ್ಟೇ ಮೆಚ್ಚಿದರೂ pg12_3 ಅವನ್ನು ಯಥಾವತ್ತಾಗಿ ಬ್ಲಾಗಿಗೆ ಹಾಕುವುದು ವ್ಯರ್ಥ ಶ್ರಮ ಎನ್ನಿಸಿ ಸುಮ್ಮನಾದೆ. ಹಾಗೆ ನೋಡಿದರೆ ಅಂತರ್ಜಾಲದಲ್ಲಿ ಓಶೋ ಸಾಹಿತ್ಯಕ್ಕೆ ಕೊರತೆಯೇನೂ ಇಲ್ಲ. ಆತನ ಪ್ರತಿಯೊಂದು ಭಾಷಣ, ಪುಸ್ತಕಗಳು ಅಂತರ್ಜಾಲದಲ್ಲಿ ಲಭ್ಯವಿವೆ. ಕನ್ನಡದಲ್ಲಿಯೂ ಓಶೋ ವಿಚಾರಗಳಿಗಾಗಿಯೇ ಮೀಸಲಾದ ಪತ್ರಿಕೆಯಿದೆ. ಇಂಗ್ಲೀಷಿನಲ್ಲಿ ತುಂಬಾ ಸರಳವಾಗಿರುವ ಪ್ರವಚನಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಹೊರಟರೆ ನಮ್ಮ ಶ್ರದ್ಧೆಯೆಂಬ ಕಲ್ಮಷವೇ ಸೇರಿಕೊಂಡು ಭಾಷಾಂತರ ಮೂಲಕ್ಕಿಂತ ಹೆಚ್ಚು ಕ್ಲಿಷ್ಟಕರವಾಗಿಬಿಡುತ್ತದೆ. ಮೇಲಾಗಿ ಓಶೋ ಇಂಥದ್ದೊಂದು ವಿಷಯದ ಬಗ್ಗೆ ಎಂದು ತಯಾರಾಗಿ ಮಾತಾಡಿದವನಲ್ಲ. ತನ್ನ ಸಂನ್ಯಾಸಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೋದ. ಒಂದೊಂದು ಪ್ರವಚನದಲ್ಲೂ ಬೇರೆ ಬೇರೆ ಆಯಾಮಗಳಲ್ಲಿ ವಿಷಯಗಳನ್ನು ವಿವರಿಸುತ್ತಾ ಹೋಗುವ ಆತನ ಶೈಲಿಯನ್ನು ಅನೇಕ ವೇಳೆ ನಾವು ವಿರೋಧಾಭಾಸ ಎಂದು ಭಾವಿಸುತ್ತೇವೆ.ಯೇಸುವಿನ ಬಗ್ಗೆ ಇದುವರೆಗೂ ನಾನು ಕೇಳಿರುವ ಪ್ರವಚನಗಳಲ್ಲಿ ಒಂದಕ್ಕಿಂತ ಒಂದು ಭಿನ್ನವಾದ, ಕೆಲವೊಂದು ವೇಳೆ ವೈರುಧ್ಯಗಳಂತೆ ಕಾಣುವ ಹಾಗೆ ಆತ ಮಾತನಾಡಿದ್ದಾನೆ. ಹೀಗಾಗಿ ಓಶೋ ಚಿಂತನೆ ಎಂಬುದು ನನ್ನೆದುರು ಸಮುದ್ರದ ಹಾಗೆ ನಿಂತಂತೆ ಭಾಸವಾಗುತ್ತದೆ. ಕಲ್ಲು ಸಕ್ಕರೆಯ ದೊಡ್ಡ ಬಂಡೆಯೆದುರು ನಿಂತಂತೆ ಅನ್ನಿಸುತ್ತದೆ. ಹೀಗಾಗಿ ಆತನ ಪ್ರವಚನಗಳನ್ನು ಯಥವಾತ್ತಾಗಿ ಭಾಷಾಂತರಿಸಿ ಬ್ಲಾಗಿಗೆ ಹಾಕುವುದಕ್ಕಿಂತ ಆತನ ಪ್ರೇರಣೆಯಿಂದ ನಾನು ಕಂಡುಕೊಂಡ ಸತ್ಯ ಯಾವುದು, ಆತ ನನ್ನಲ್ಲಿ ಹುಟ್ಟುಹಾಕಿದ ವಿಚಾರಗಳು ಯಾವುವು, ಅವು ನನ್ನೊಳಗೆ ಮಾಡಿದ ಪ್ರಭಾವಗಳೇನು ಎಂಬುದರ ಬಗ್ಗೆ ಬರೆಯುತ್ತೇನೆ. ಮತ್ತಷ್ಟು ಓದು »

18
ಫೆಬ್ರ

ದುರಂತ ನಾಯಕ

ರೂಪಾ

ಸ್ಮಶಾನಕ್ಕೆ ಕಾಲಿಟ್ಟಂತಹ ಅನುಭವ.ಒಬ್ಬಂಟಿಯಾಗಿ ನಡೆಯುತ್ತಿದ್ದೆ.

ಎಲ್ಲಿ ನೋಡಿದರೂ ಮುರಿದ ರಥಗಳು, ರಕ್ತದ ಮಡುವು, ಕರುಳು ಆಚೆ ಕಿತ್ತು ಬಂದಿರುವ ಸೈನಿಕರು. ನಿಟ್ಟುಸಿರು ತಂತಾನೆ ಹೊರಹೊಮ್ಮಿತು .

ದೀರ್ಘವಾಗಿ ಉಸಿರೆಳೆದೆ. ನನ್ನ ಸ್ವಾರ್ಥಕ್ಕೆ, ಹಣದಾಹಕ್ಕೆ, ಭೂಮಿಯಾಸೆಗೆ, ಅಭಿಮಾನಕ್ಕೆ ಬಲಿಯಾದ ಮುಗ್ಧರು. ತಾವು ಏತಕ್ಕಾಗಿ ಯಾರಿಗಾಗಿ ಯುದ್ದ್ದ ಮಾಡುತ್ತಿದ್ದೆವೆಂಬ ಅರಿವೂ ಇಲ್ಲದವರು.

 

ಅದೂ ನನ್ನದೇ ಅಪ್ಪಣೆಯಾಗಿತ್ತಲ್ಲವೇ. ಪ್ರತಿಯೊಂದು ಗಂಡಸೂ ಯುದ್ದರಂಗದಲ್ಲಿ ಹೋರಾಡಬೇಕೆಂಬ ನಿಯಮ ತಂದು ಮನೆ ಮನೆಗೆ ನುಗ್ಗಿ ೧೪ ರಿಂದ ೭೦ ರವರೆಗಿನ ಪುರುಷರನ್ನು ಎಳೆತಂದು ಯುದ್ದ ತರಬೇತಿ ಕೊಟ್ಟು……….

ಆಗ ತಾನೆ ಮದುವೆಯಾಗಿತ್ತಲ್ಲವೇ ಲಕ್ಷ್ಮಣನಿಗೆ. ಹಾ ಕಂದ ಲಕ್ಷ್ಮಣನನ್ನು ನೆನೆದು ಕರುಳು ಹರಿದಂತಾಯಿತು. ತನ್ನ ಮುಂದೆಯೇ ಕೊಂದನಲ್ಲಾ ಆ ಎನ್ನ ಅರಿ ಅರ್ಜುನನ ಮಗ ಅಭಿಮನ್ಯು. ತಾನೇನೂ ಮಾಡಲಾಗಲಿಲ್ಲವಲ್ಲಾ . ಇಲ್ಲ ಇಲ್ಲ ಅವನನ್ನೂಕೊಂದು ಬಿಟ್ಟೆವಲ್ಲ್ಲಾ ಅವನೂ ಹೊಸದಾಗಿ ಮದುವೆಯಾದವನೇ ತಾನೆ. ದ್ವೇಷಕ್ಕೆ ದ್ವೇಷ . ಸೇಡಿಗೆ ಸೇಡು . ಅವನನ್ನು ಕೊಂದ ತಪ್ಪಿಗೆ ಸೈಂಧವನ ಬಲಿ. ಪ್ರೀತಿಯ ಸಹೋದರಿ ವಿಧವೆಯಾದಳು. ಮತ್ತಷ್ಟು ಓದು »

17
ಫೆಬ್ರ

ವಾಘಾ ಮತ್ತು ದೇಶಭಕ್ತಿಯ ಮಧ್ಯೆ ಅರ್ಧ ಘಂಟೆ

ಸಂತೋಷ್ ಎನ್. ಆಚಾರ್ಯ

ತಲೆದಿಂಬಿನ ಒಳಗೆ ಮುಖ ಹುದುಗಿಸಿ ಮಲಗಿದ್ದ ರವಿಂದರ್ ನನ್ನು ನೋಡಿ ನನ್ನ ನಿದ್ದೆಯ ಎರಡನೆ ಶಿಫ್ಟಿಗೆ ಏನೂ ಸಂಚಕಾರ ಇಲ್ಲ ಎಂದು ಪುನಃ ಹಾಸಿಗೆಯ ಮೇಲೆ ಬಿದ್ದುಕೊಂಡೆ. ಅವತ್ತು ಅಮೃತ್ ಸರ್  ತಿರುಗುವ ಪ್ಲಾನ್ ಇತ್ತಾದರೂ ಯಾರೂ ಎದ್ದಿರಲಿಲ್ಲ. ಪರಾಟಗಳು, ಚಪಾತಿಗಳು, ಘೀ ರೈಸ್, ಡ್ರೈ ಫ್ರುಟ್ಸ್ ಮತ್ತು ಪ್ರತಿ ಪಲ್ಯದಲ್ಲೂ ಮೆರೆದ ದೇಸಿ ಘೀ ಪ್ರಭಾವದಿಂದ ಆಹಾರದ ಟ್ಯಾಂಕ್ ಆಗಿದ್ದ ಹೊಟ್ಟೆ ಮೆಲ್ಲಗೆ ನರಳುತ್ತಿತ್ತು. ಅಚೆ ಈಚೆ ತಡಕಾಡಿದಾಗ ಸಿಕ್ಕ ಮೊಬೈಲು ಘಂಟೆ ಒಂಭತ್ತು ತೋರಿಸುತ್ತಿತ್ತು. ಮನಸ್ಸಿನಲ್ಲೇ ಲೆಕ್ಕ ಹಾಕುತ್ತಿರುವಾಗ ಒಳಗಿನಿನಿಂದ ರವಿಂದರನ ಅಮ್ಮನ ಕರೆ ಬಂತು. ಅಪ್ಪ ಅಮ್ಮನ ಆಜ್ಞೆಗಳ ಕಟ್ಟಾ ಪಾಲಕನಾದ ರವಿಂದರ್ ಪಟ್ಟನೆ ಎದ್ದ. ನನಗೂ ಮಲಗಿದ್ದು ಸಾಕು ಎಂದು ಅನಿಸಿದ್ದರಿಂದ ಎದ್ದು ಬ್ರಶ್ ಮಾಡತೊಡಗಿದೆ.
ಅಮೃತ್ ಸರ್ ನಮ್ಮ ಉತ್ತರ ಭಾರತದ ಪಯಣದ ಪ್ರಮುಖ ಗುರಿಯಾಗಿತ್ತು. ಪಂಜಾಬಿನ ಸಾಂಸ್ಕೃತಿಕ ರಾಜಧಾನಿಯನ್ನು ಅದಕ್ಕೂ ನನಗೆ ಟಿವಿಯಲ್ಲಿ ನೋಡಿದ್ದ ಚಿನ್ನದ ಗುರುದ್ವಾರವನ್ನು ನೋಡಲೇ ಬೇಕೆಂಬುದು ಮಹಾದಾಸೆಯಾಗಿತ್ತು. ಕಳೆದ ೩ ದಿನಗಳಂತೆ ಪರಾಟದ ನಿರೀಕ್ಷೆಯಿದ್ದವರಿಗೆ ಬಂದದ್ದು ಪೂರಿ. ‘ದಿನ ಈ ರೀತಿ ಆರಂಭವಾಗಬೇಕೆ?’ ಎಂದು ಅತುಲ್ ಬಳಿ ಅತ್ತು ಕಷ್ಟ ಪಟ್ಟು ತಿಂದೆ. ಪರಾಟ, ತಿಂದ ನಂತರ ಹೊಟ್ಟೆ ಭಾರ ಮಾಡಿಸಿದರೆ ಪೂರಿ, ಮನಸ್ಸು ನೋಡಿದ ಕೂಡಲೇ ಬೇಡ ಅನ್ನುವುದು ಆಫೀಸಿನ ಕ್ಯಾಂಟಿನ್ ನಲ್ಲಿ ಒಮ್ಮೆ ತಿಂದ ಕಚಡಾ ಪೂರಿ ಕಾರಣವೋ ಅಥವಾ ನಾವು ಒಮ್ಮೆ ಮನೆಯಲ್ಲಿ ಮಾಡಿದ ಪ್ರಯೋಗ ಕಾರಣವೋ ಗೊತ್ತಿಲ್ಲ. ಆದರೆ ಅದರ ನಂತರ ಮಾತ್ರ ಪೂರಿ ಮತ್ತು ನಾನು ತುಂಬಾ ದೂರ!! ಬೇಗ ಬೇಗ ಸ್ನಾನ ಮಾಡಿ ನಾನು ಮತ್ತು ಅತುಲ್ ತಯಾರಾದರೆ ರವಿಂದರ್ ಇನ್ನೂ ತಯಾರಾಗಿರಲಿಲ್ಲ. ಎಲ್ಲಾ ಗಡಿಬಿಡಿಯಲ್ಲಿ ಹೊರಟಾಗ ಅವನ ತಂಗಿ ಕೂಡ ಬಂದಿದ್ದು ಮನಸ್ಸಿಗೆ ಸರಿಯೆನಿಸಲಿಲ್ಲ. ಹುಡುಗಿಯೊಂದಿಗೆ ಸುತ್ತಾಡಲು ನನಗೇನು ಅಭ್ಯಂತರವಿಲ್ಲ ಆದರೆ ನಾವು ಹುಡುಗರು ಗುಂಪಿನಲ್ಲಿರುವಾಗ ಯಾರಾದರೂ ಹುಡುಗಿಯರು ನಮ್ಮೊಂದಿಗಿರುವುದು ಸ್ವಲ್ಪ ನನಗೂ ಮತ್ತು ನನ್ನ ಗೆಳೆಯರಿಗೂ ಕಸಿವಿಸಿ. ಎಲ್ಲಾ ಮುಗಿಸಿ ಅಮೃತ್ ಸರ್ ಬಸ್ ಹಿಡಿದೆವು. ಬಸ್ಸಿನಲ್ಲಿ ಇನ್ನೊಂದು ರೌಂಡು ನಿದ್ದೆ ಮುಗಿಸಿ ಅಮೃತ್ ಸರ್ ನಲ್ಲಿ ಇಳಿಯುವಾಗ ತಲೆಯ ಮೇಲೆ ಬೆಂಕಿ ಇಟ್ಟಂತಾಯಿತು. ಲಗುಬಗನೆ ಜೇಬಿನಿಂದ ಕರವಸ್ತ್ರ ತೆಗೆದುಕೊಂಡು ತಲೆಗೆ ಕಟ್ಟಿಕೊಂಡೆವು. ಮಧ್ಯಾಹ್ನದ ಉರಿ ಬಿಸಿಲಿನಲ್ಲಿ ಜಲಿಯನ್ ವಾಲ ಬಾಗ್ ಮತ್ತು ಗೋಲ್ದನ್ ಟೆಂಪಲ್ ನ ದರ್ಶನ ಮಾಡಿ ಲಂಗರಿನಲ್ಲಿ ಗಡದ್ದಾಗಿ ಊಟ ಮಾಡುವಾಗ ಘಂಟೆ ೪. ಎಲ್ಲಾ ಬೇಗ ಮುಗಿದಿದ್ದು ಅತುಲ್ ಮತ್ತು ರವಿಂದರ್ ನ ವಾಘಾ ಬಾರ್ಡರ್ ನೋಡುವ ಅಸೆಯನ್ನು ಇನ್ನೂ ಜೀವಂತವಾಗಿ ಉಳಿಸಿತ್ತು. ನಿಜವಾಗಿ ಹೇಳುವುದಾದರೆ ನನಗೆ ಅಷ್ಟೇನೂ ಆಸಕ್ತಿ ಇರಲಿಲ್ಲ. ಬಾಡಿಗೆಗೆ ಸಿಕ್ಕ ಓಮ್ನಿಯಲ್ಲಿ ಕೂತು ಹೊರಟೆವು.

ಮತ್ತಷ್ಟು ಓದು »

17
ಫೆಬ್ರ

ಜೀವನವೆಂದರೆ ಅಲ್ಪವಿರಾಮಗಳ ಸಂತೆ,ಕೊನೆಗೊಂದು ಪೂರ್ಣವಿರಾಮ – ೧

– ಚೇತನ್ ಕೋಡುವಳ್ಳಿ

ಇಂಜಿನಿಯರಿಂಗ್ ಮುಗಿಸಿಕೊಂಡು ರಾಜ್ಯ ರಸ್ತೆ ಸಾರಿಗೆಯ ಕೆಂಪು ಬಸ್ಸಿನಲ್ಲಿ ಬೆಂಗಳೂರಿಗೆ ಬಂದು ಇಳಿದ ಹುಡುಗ, ಕಣ್ಣುಗಳಲ್ಲಿ ಕನುಸುಗಳ ರಾಶಿ, ಕಷ್ಟಪಟ್ಟು ಓದಿಸಿದ ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ, ತಂಗಿಯ ಮದುವೆಯ ಜವಾಬ್ದಾರಿ, ಅದಕ್ಕಿಂತ ಮೊದಲು ತನಗೊಂದು ಸೂರು ಹುಡುಕಿಕೊಳ್ಳುವ, ಆಮೇಲೆ ಬದುಕಿಗೊಂದು ಕೆಲಸ ಪಡೆಯುವ ಸಾಹಸ, ಗೆಳೆಯರ ಜೊತೆಗೂಡಿ ಒಂದು ಬಾಡಿಗೆ ಮನೆ, ನಂತರ ಕೆಲಸ ಹುಡುಕುವ ನಿರಂತರ ಕಾಯಕ, ಬಿ, ಎಂ, ಟಿ, ಸಿಯ ಡೈಲಿ ಪಾಸ್ ತೆಗೆದುಕೊಂಡು ಕಂಡ ಕಂಡ ಕಂಪನಿಗಳಲ್ಲಿ ರೆಸ್ಯುಮ್ಗಳನ್ನು ಸುರಿದು ಸಂಜೆಯ ಹೊತ್ತಿಗೆ ಬಸವಳಿದು ಮನೆಗೆ ಬಂದು ಸೇರಿ, ಅಡಿಗೆ ಮಾಡಿ ತಿಂದು, ಹಾಸಿಗೆಯ ಮೇಲೆ ಬಿದ್ದಾಕ್ಷಣ ನಾಳೆಯೋ ನಾಡಿದ್ದೋ ರೆಸ್ಯುಮ್ಗಳನ್ನು ಕೊಟ್ಟು ಬಂದ ಕಂಪನಿಗಳಿಂದ ಕಾಲ್ ಬರುವುದೋ ಎನ್ನುವ ಕನಸುಗಳು, ಬುಧವಾರದ ಅಸೆಂಟ್ ನೋಡಿ ಶನಿವಾರದ ವಾಕ್ ಇನ್ಗೆ ಸಿದ್ಧತೆ, ಶನಿವಾರ ಅಲ್ಲಿ ಹೋಗಿ ನೋಡಿದರೆ ಜನಸಾಗರ, ಇಷ್ಟು ಜನದಲ್ಲಿ ಕೆಲಸ ಸಿಗುವುದೋ ಇಲ್ಲವೋ ಎನ್ನುವ ಹತಾಶೆಯ ನಡುವೆ ಕಷ್ಟಪಟ್ಟು ನಿಂತು ರಿಟನ್ ಟೆಸ್ಟ್ ಬರೆದು, ಕೊನೆಗೆ ಫಲಿತಾಂಶ ಬಂದ ಮೇಲೆ ಮೊದಲನೇ ಸುತ್ತಿನಲ್ಲೇ ಹೊರಬಿದ್ದು, ತನ್ನ ಗೆಳೆಯರ ಪರಿಸ್ಥಿತಿಯೂ ಹಾಗೆಯೇ ಆಗಿ, ಅಲ್ಲಿಂದ ಮಜೆಸ್ಟಿಕ್ಗೆ ಬಂದು ಕಪಾಲಿಯಲ್ಲೋ ಸಂತೋಷ್ ಥಿಯೇಟರ್ನಲ್ಲೋ ಒಂದು ಸಿನೆಮಾ ನೋಡಿ ಮತ್ತೆ ಮನೆ ಕಡೆಗೆ ಪ್ರಯಾಣ, ಹೀಗೆ ಅಲ್ಲಿ ಇಲ್ಲಿ ಹುಡುಕಿ ಕೊನೆಗೊಂದು ದಿನ ಯಾವುದೋ ಕಂಪನಿಯಲ್ಲಿ ಕೆಲಸ, ತನ್ನ ಗೆಳೆಯರಿಗೂ ಹಾಗೆ ಒಂದೊಂದು ಕಡೆ, ಕೆಲಸ ಸಿಕ್ಕಾಗಲೆಲ್ಲ ಒಬ್ಬೊಬ್ಬರಿಂದ ಪಾರ್ಟಿ, ಈ ನಡುವೆ ಊರಿನಲ್ಲಿ ಕಷ್ಟವಿದ್ದರೂ ತನಗೆ ಬರುತ್ತಿರುವ ಸಂಬಳ ಕಡಿಮೆ ಎಂದುಕೊಂಡು ಸ್ವಲ್ಪವನ್ನೂ ಕಳಿಸದೆ, ವೀಕೆಂಡ್ ಸಿನೆಮಾ, ವಿಂಡೋ ಶಾಪಿಂಗ್, ಬಟ್ಟೆ ಖರೀದಿ, ಬಣ್ಣದ ಲೋಕ, ಅಲ್ಲಲ್ಲಿ ಸುತ್ತಾಟ, ತನಗಾಗಿ ಹೊಸ ಮೊಬೈಲ್, ಲ್ಯಾಪ್ ಟಾಪ್, ತನ್ನ ಆಫೀಸಿನಲ್ಲೇ ತನ್ನೊಂದಿಗೆ ಕೆಲಸ ಮಾಡುತ್ತಿರುವ ಹುಡುಗಿಯೊಂದಿಗೆ ಒಡನಾಟ, ಅವಳ ಜೊತೆ ಸುತ್ತಾಡಲು ಸಾಲದಿಂದ ತೆಗೆದುಕೊಂಡ ಬೈಕ್, ಬಂದ ಸಂಬಳವೆಲ್ಲ ತಮ್ಮಿಬ್ಬರ ಸುತ್ತಾಟಕ್ಕೆ, ತನ್ನ ಮಗ ನೋಡಲು ಬರಲೇ ಇಲ್ಲ ಎಂದು ಅಮ್ಮನ ಚಡಪಡಿಕೆ, ತನ್ನ ಮಗನನ್ನು ಹೋಗಿ ನೋಡಿಕೊಂಡು ಬರಲು ಹೊರಟ ಅಪ್ಪ, ತನ್ನ ಮಗ ಸಾವಿರ ಸಾವಿರ ದುಡಿಯುತ್ತಿದ್ದರೂ ಅದೇ ಕೆಂಪು ಬಸ್ಸಿನಲ್ಲಿ ಬೆಂಗಳೂರಿಗೆ ಪಯಣ, ಸಂಜೆ ತಲುಪಿ ಕಾಯಿನ್ ಬೂತಿಂದ ಕರೆ ಮಾಡಿದರೆ ಮಗನಿಂದ ಬಂದ ಉತ್ತರ ಸ್ವಲ್ಪ ಹೊತ್ತು ಕಾಯಿ ಎಂದು, ಅಲ್ಲಿ ಇವನು ತನ್ನ ಹುಡುಗಿಯೊಂದಿಗೆ ಊರೆಲ್ಲ ಸುತ್ತಾಡಿ ಐಶಾರಾಮಿ ಹೋಟೆಲ್ಲಿನಲ್ಲಿ ಊಟ ಮಾಡಿ ವಾಪಸ್ ಮನೆಗೆ ಬರುವಾಗ ರಾತ್ರಿ!

ಮತ್ತಷ್ಟು ಓದು »

16
ಫೆಬ್ರ

ಕರ್ನಾಟಕ ಸರ್ಕಾರ ಯಾಕೆ ‘ಥಿಂಕ್’ ಮಾಡಲ್ಲ ?

ರಶ್ಮಿ ಕಾಸರಗೋಡು

ರ್ನಾಟಕದಲ್ಲಿ ‘ಪವರ್’ ಸಮಸ್ಯೆ ಇದ್ದದ್ದೇ. (ರಾಜಕಾರಣಿಗಳ ಪವರ್ ಅಲ್ಲ !).ಒಂದು ದಿನ ನೀರು ಇದ್ದರೆ ಇನ್ನೊಂದಿನ ಪವರ್ ಇಲ್ಲ. ರಾಜ್ಯಕ್ಕೆ ವಿದ್ಯುತ್ ಸಾಕಾಗ್ತಾ ಇಲ್ಲ ಎಂಬುದು ಮಂತ್ರಿವರ್ಯರ ವರಸೆ. ಬುರುಡೆ ಬಲ್ಬ್ ಬೇಡ ಎಂದು ಸರ್ಕಾರ ಹೇಳಿದ್ದೂ ಆಯ್ತು. ಅದೂ ಬುರುಡೆ ಬಿಟ್ಟದ್ದೋ ಅಂತಾ ಗೊತ್ತಿಲ್ಲ 🙂

ಅಲ್ಲಾ ಮಾರಾಯ್ರೆ … ಏನೇ ಹೇಳಿ ಬುರುಡೆ ಅಥವಾ ಇನ್ಯಾವುದೇ ಬಲ್ಬ್ ಉರಿಯಲು ವಿದ್ಯುತ್ ಬೇಕಲ್ವಾ? ವಿದ್ಯುತ್ ಇಲ್ಲದಿದ್ದರೆ ಬಲ್ಬ್ ವಿಷ್ಯ ಯಾಕೆ ಬೇಕು?
ಕರ್ನಾಟಕದಲ್ಲಿ ವಿದ್ಯುತ್್ನ ಕೊರತೆ ಇದೆ ಎಂಬುದನ್ನು ಒಪ್ಪಿಕೊಳ್ತೀನಿ. ಆದರೆ ಆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಯಾಕೆ ವಿಫಲವಾಗುತ್ತಿದೆ? (ರಾಜ್ಯದ ರಾಜಕೀಯ ಡೊಂಬರಾಟ ವಿದ್ಯುತ್ತಿಗೇ ‘ಶಾಕ್ ನೀಡಿದೆಯೇ ಎಂಬುದು ನನ್ನ ಅನುಮಾನ)
ಸದ್ಯ ಈ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ಸೌರಶಕ್ತಿಯ ಮೊರೆ ಯಾಕೆ ಹೋಗಬಾರದು? ಇಲ್ಲಿ ಲಭ್ಯವಾಗುವಂತಹ ಸೌರಶಕ್ತಿಯನ್ನು ಸದುಪಯೋಗಿಸಿಕೊಂಡರೆ ರಾಜ್ಯಕ್ಕೆ ಬೇಕಾದಷ್ಟು ವಿದ್ಯುತ್ತನ್ನು ಪಡೆಯಬಹುದು ಎಂಬ ಯೋಚನೆ ಸರ್ಕಾರಕ್ಕೆ ಹೊಳೆದಿಲ್ಲವೇ? ಇಲ್ಲಿರುವ ಕಟ್ಟಡಗಳ ಮೇಲೆ ಸೋಲಾರ್ ಪೇನಲ್ ಹಾಕಿಸಿದ್ರೆ ಕನಿಷ್ಠ ನಿತ್ಯೋಪಯೋಗಿ ವಿದ್ಯುತ್ ಪಡೆಯಬಹುದು ಎಂಬುದರ ಬಗ್ಗೆ ಜನರು ಯಾಕೆ ಯೋಚನೆ ಮಾಡಲ್ಲ? ಇವತ್ತೇನೊ ಶೋಭ ಕರಂದ್ಲಾಂಜೆಯವ್ರು ಇನ್ಮೇಲೆ ಮನೆ ಕಟ್ಟೊವ್ರಿಗೆ ಸೋಲಾರ್ ಕಡ್ಡಾಯ ಮಾರಯ ಅಂದಿದ್ದಾರೆ.ಏನ್ ಆಗುತ್ತೋ ನೋಡೋಣ
ಮತ್ತಷ್ಟು ಓದು »

16
ಫೆಬ್ರ

ಪ್ರೀತಿಸಿದರೆ………!

ವಾಣಿ ಶೆಟ್ಟಿ, ಬೆಂಗಳೂರು
ಮೊನ್ನೆ ಆಫೀಸಿಗೆ ಹೋದಾಗ ನಂಗೆ  ಆಘಾತ ಕಾದಿತ್ತು..ನನ್ನ ಜೊತೇನೆ ಜಾಯಿನ್ ಆಗಿದ್ದ ಸ್ನೇಹಿತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು ..ಕಾರಣ  ಪ್ರೀತಿಸಿದ ಹುಡುಗನೊಂದಿಗೆ ಮದುವೆ ಮಾಡಿಕೊಡಲು ಮನೆಯವರು  ಒಪ್ಪಲಿಲ್ವಂತೆ ..ತಂದೆ ತಾಯಿಯ ಮೇಲಿನ ಸಿಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು ..!ಎತ್ತ ಸಾಗುತ್ತಿದೆ ಇಂತಹ ಕುರುಡು ಪ್ರೀತಿ.. ಇವಳಿಗೆ ನಾವು ಏನು ಕಮ್ಮಿ ಮಾಡಿದ್ದೇವೋ ಅನ್ನೋ ಅವಳ ಅಪ್ಪನ ಅಳು ಇನ್ನೂ ಕಿವಿಯಲ್ಲಿದೆ.. ಬಹುಶಃ ಅವರಿಗೆ ಗೊತ್ತಿರಲ್ಲಿಕ್ಕಿಲ್ಲ,  ಏನೂ ಕಮ್ಮಿ ಮಾಡಿಲ್ಲ ಆದ್ದರಿಂದಲೇ ಹೀಗಾಗಿದ್ದು ಅಂತ  ..ಮುದ್ದು ಸ್ವಲ್ಪ ಕಮ್ಮಿ ಮಾಡಿದ್ದಿದ್ದರೆ ಹೊರಗಿನ ಪ್ರೀತಿಯನ್ನು ಹೀಗೆ ಸತ್ತು ಹೋಗುವಷ್ಟು ಹಚ್ಚಿಕೊಂಡಿರುತ್ತಿರಲಿಲ್ಲವೇನೋ  .. ಸಾಮನ್ಯವಾಗಿ ಯಾವ ಪ್ರೀತಿ ಸಿಗೊದಿಲ್ಲವೋ ಅದನ್ನೇ ಹುಡುಕಿಕೊಂಡು ಹೋಗುತ್ತದೆ ಮನಸ್ಸು..ಹೆತ್ತವರ ಪ್ರೀತಿ ಸ್ವಲ್ಪ ಕಡಿಮೆಯಾಗಿದ್ದರೆ ಮನಸ್ಸು ಅದಕ್ಕೆ ಹಾತೊರೆಯುತಿತ್ತೇನೋ..!

ಮೊದಲೆಲ್ಲ ಪ್ರೀತಿ ಪ್ರೇಮಕ್ಕೆ ಅದರದೇ ಆದ ಅರ್ಥ, ವ್ಯಾಖ್ಯಾನ ಇದ್ದಿತ್ತು …ಪವಿತ್ರ ಪ್ರೇಮದ ಹಿನ್ನಲೆಯಲ್ಲಿ ಅದೆಷ್ಟೋ ದಂತ ಕಥೆಗಳಿವೆ ,ಗ್ರಂಥಗಳಿವೆ .ಮರೆಯಲಾಗದ ಹಾಡುಗಳಿವೆ ,ಶ್ರೇಷ್ಠ ಚಿತ್ರ ಗಳಿವೆ, ಅದ್ಭುತ ಸ್ಮಾರಕಗಳಿವೆ  … ಪ್ರೀತಿಸಿ ಅವರನ್ನು ಪಡೆಯುವ ಅಥವಾ ಅದರ ಅಡೆ ತಡೆಗಳನ್ನು ಎದುರಿಸುವ ಅಥವಾ ಅಳಿದು ಅಮರರಾದ ಹಿನ್ನಲೆಗಳವು..ಈಗಿನ ಪ್ರೀತಿಯೋ ಅದರ ಸ್ಥಿತಿಯೋ ಅವರಿಗೆ ಪ್ರೀತಿಯಾಗಬೇಕು.. ಪ್ರೀತಿ  ಅಂದರೆ ದಿನಕ್ಕೊಂದು ಕಡೆ ಪಾರ್ಕು ,ಸಿನೆಮಾ, ಔಟಿಂಗ್, ಡೇಟಿಂಗ್ ಅಂತ ಬಾಯ್ ಫ್ರೆಂಡ್ಸ್ /ಗರ್ಲ್ ಫ್ರೆಂಡ್ಸ್ ಗಳೊಂದಿಗೆ ಸುತ್ತಾಡಿ ,ರಾತ್ರಿ ಇಡೀ ಚಾಟ್ ಮಾಡಿ ಇನ್ ಬಾಕ್ಸ್ ಗೆ  ಮಿಸ್ ಯು ಗಳನ್ನು ಕಳಿಸೋದಾ?,ಕಾಲೇಜಲ್ಲೋ ಅಥವಾ ಆಫಿಸಲ್ಲೋ ಹಿಂದಿನ ಸಲದ ಮಾತು ,ನೋಟ,ಸ್ಪರ್ಶ, ಚಿಕ್ಕ ಜಗಳ ಗಳ ನೆನಪಿಸಿಕೊಳ್ಳುತ್ತಾ  ಮೊಬೈಲಿನ  ಸ್ಕ್ರೀನ್ ಸೇವೆರ್ ನಲ್ಲಿನ ಅವರ ಫೋಟೋವನ್ನೇ ನೋಡೋದಾ? ಅಥವಾ ಊಟ ನಿದ್ದೆಯ ಪರಿವೆ ಇರದೇ ಅವರನ್ನೇ ಧ್ಯಾನಿಸುತ್ತ ಕೂರೋದಾ ? ಮತ್ತಷ್ಟು ಓದು »

15
ಫೆಬ್ರ

‘ಭಾರತದ ಬಳಿಯಿದೆ ನಿಂಬೆಯ ಶಕ್ತಿ’ !

ಪಾಕಿಸ್ತಾನದ ಬಳಿ ಭಾರತಕ್ಕಿಂತ ೧೦೦ಕ್ಕೊ ಹೆಚ್ಚು  ಅಣ್ವಸ್ತ್ರಗಳಿವೆ ಅನ್ನೋ ಸುದ್ದಿ ಮೊನ್ನೆ ಪತ್ರಿಕೆಗಳಲ್ಲಿ ಬಂದಿದೆ.ಆದರೆ ಭಾರತೀಯರು ಈ ಸುದ್ದಿಗೆ ಗಲಿಬಿಲಿಯಾಗಬೇಕಿಲ್ರಿ! ಯಾಕೆ ಅಂತಿರಾ? ಯಾಕಂದ್ರೆ ‘ಭಾರತದ ಬಳಿಯಿದೆ ನಿಂಬೆಯ ಶಕ್ತಿ’ !

ಇದೇನಿದು ಯಾವ್ದೋ ಬಟ್ಟೆ ತೊಳ್ಯೋ ಸೋಪ್ ಜಾಹಿರಾತಿನ ಡೈಲಾಗ್ ತರ ಇದ್ಯಲ್ಲಪ್ಪ ಅಂತಿರಾ?ರೀ,ಇದು ಆ ತರ ನಿಂಬೆ ಅಲ್ಲ.ನಾನ್ ಹೇಳೋಕ್ ಹೊರಟಿದ್ದು,ಕಳೆದ ಬಾರಿ ಒಂದಿಷ್ಟು ಜನ ಎಂ.ಎಲ್.ಎಗಳು ಹೋಗಿ ಗೋವಾದಲ್ಲಿ ಕೂತು,ಅಲ್ಲಿಗೆ ಕುಮ್ಮಿನು ಹೋದ್ಮೇಲೆ,ಈ ಕಡೆ ಯಡ್ಡಿ ಕುರ್ಚಿ ಗಡ-ಗಡ ನಡುಗಲು ಶುರು ಮಾಡಿದಾಗ.ವಿಧಾನ ಸೌಧದ ಎದುರು ಕಾಣಿಸಿತ್ತಿಲ್ಲ ಹರಿಶಿನ ಕುಂಕುಮ ಹಚ್ಚಿದ ನಿಂಬೆಹಣ್ಣು ಅದರ ಬಗ್ಗೆ. ಮತ್ತೀಗ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಕಾಣಿಸಿಕೊಂಡ ಪವರ್ಫುಲ್ ನಿಂಬೆಯ ಬಗ್ಗೆ! (ಆ ಪರಿ ಕಾಡ್ತಾ ಇರೋ ರಾಜಭವನದ ಬಳಿ ಯಾಕೆ ಇನ್ನ ನಿಂಬೆ ಬಿದ್ದಿಲ್ಲ ಅಂತ ನಾನ್ ಕೇಳೋಲಪ್ಪ 😉 ).ಇದೇ,ಈ ಮಂತ್ರಿಸಿದ ನಿಂಬೆಹಣ್ಣು ಕಣ್ರೀ ಭಾರತದ ಶಕ್ತಿಯಾಗಬೇಕು.ಅದ್ಹೆಂಗೆ ಸಿವಾ ಅಂತಿರ? ಹೇಳ್ತೀನಿ ಕೇಳಿ…

ಈಗಾಗ್ಲೇ ಚೀನಾ ಅನ್ನೋ ನಂಬಿಕೆಗೆ ಅರ್ಹವಲ್ಲದ ದೇಶ ಭಾರತವನ್ನ ಇರೋ ಬರೋ ದಿಕ್ಕುಗಳಿಂದ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಕಡೆಯಿಂದ ಸುತ್ತಿ ಕುಳಿತಿದೆ.ಹೀಗೆ ಪಾಕಿಸ್ತಾನ,ಶ್ರೀಲಂಕ,ಬಾಂಗ್ಲ,ನೇಪಾಳ,ಬರ್ಮಾ ಕಡೆ ಹರಡಿಕೊಂಡಿರೋ ಚೀನಿಗಳು ವಾಪಸ್ ಚೈನಗೆ ಹೋಗೋ ಹಾಗೆ ಮಾಡ್ಬೇಕು.ಹೇಗ್ ಮಾಡೋದು?

ಹೆಗಂದ್ರೆ,ಹೇಗಿದ್ರು ಅಲ್ಲಿ ಪ್ರಜಾಪ್ರಭುತ್ವಕ್ಕಾಗಿ ಚಿಕ್ಕದಾಗಿ ಕೂಗೆದ್ದಿದೆ.ಅಲ್ಲಿನ ಜನರಿಗೆ ದೈತ್ಯ ಶಕ್ತಿ ಆವಹನೆಯಾಗುವಂತೆ ಭಾರತ ನಿಂಬೆ ಶಕ್ತಿಯನ್ನ ಪ್ರಯೋಗಿಸ್ಬೇಕು ರೀ,ಆಗ ಅಲ್ಲಿ ರೊಚ್ಚಿಗೆಳೋ ಚೀನೀ ಜನರನ್ನ ಕಂಟ್ರೋಲ್ ಮಾಡೋಕೆ ಅಂತ ಚೀನಿಗಳೆಲ್ಲ ವಾಪಸ್ ಅವ್ರ ದೇಶಕ್ಕೆ ಹೋಗ್ತಾರೆ.ಅವರೆಲ್ಲ ಕಾಲ್ಕಿತ್ತ ಮೇಲೆ ಭಾರತ ಸೋಯ್ಯಿ-ಟಪಕ್ ಅಂತ ಮತ್ತಿನ್ನೊಂದು ಕೆಲ್ಸ ಮಾಡ್ಬೇಕಪ್ಪ.ಗಡಿಯುದ್ದಕ್ಕೂ ನಿಂಬೆ ಬೆಳೆಯೋದು ಕಡ್ಡಾಯ ಮಾಡಿ, ಗಡಿ ಬೇಲಿ ತರ ಮಂತ್ರಿಸಿದ ನಿಂಬೆ ಬೇಲಿ ಮಾಡಿಬಿಡ್ಬೇಕು.ಅಲ್ಲಿಗೆ ದೇಶ ಫುಲ್ ಸೆಕ್ಯೂರ್ ಆಗಿಬಿಡುತ್ತೆ! (ಹಿಂಗ್ ಮಾಡೋಕೆ ನಮ್ ದೇಸದ ಸಿಕ್ಯುಲರ್ಗಳು ಬಿಡೋಲ್ಲ ಅಂತಿರ, ಅವ್ರು ಯಾವ್ ಒಳ್ಳೆ ಕೆಲ್ಸ ತಾನೇ ಮಾಡೋಕ್ ಬಿಡ್ತಾರೆ ನೀವೇ ಹೇಳಿಪ್ಪ ;))

ಇಷ್ಟು ಮಾಡಿದ್ರೆ ಪಾಕಿಸ್ತಾನದ ಸದ್ದು ಸಹ ಅಡಗಿಬಿಡುತ್ತೆ,ಇಲ್ಲ ಅಂದ್ರೆ ಭಾರತದಲ್ಲಿಡಿ ಕಡ್ಡಾಯ ನಿಂಬೆ ಬೆಳೆಯುವಂತೆ ಮಾಡಿ ಅದೇ ನಿಂಬೆ ಹಣ್ಣು ಪಾಕಿಸ್ತಾನಕ್ಕೆ ಎಸೆಯುವಂತೆ ಮಾಡಿದ್ರೂ ಆ ದೇಶ ನಿಂಬೆಯಲ್ಲಿ ಮುಚ್ಚಿ ಹೋಗುತ್ತೆ! ಹೇಗಿದೆ ‘ನಿಂಬೆಯ ಶಕ್ತಿ’, ಸಕ್ಕತ್ತ್ ಅಲ್ವಾ?  ಮತ್ತಷ್ಟು ಓದು »

15
ಫೆಬ್ರ

ಹಾರೋ ಬೂದಿಯ ನೋಡಿದಿರಾ?

ಪವನ್ ಎಂ ಟಿ

ಒಂದು ದಿನ ಮನೆಯಲ್ಲಿ ಬಿದ್ದಿರುವ ಧೂಳನ್ನು ಗುಡಿಸದೇ ಇದ್ದರೇನೆ ಕಿರಿಕಿರಿ ಆಗ್ತಾ ಇರುತ್ತೆ. ಹಾಗಿರುವಾಗ ಹೇಗೆ ಇದ್ರೂ ಧೂಳಿನ ಒಳಗೆ ಇರಬೇಕಂದ್ರೆ ಹೇಗಾಗಬಹುದು?

ದಿನನಿತ್ಯದ ಸಣ್ಣ ಸಂಗತಿಯೇ ಹೀಗಾದರೆ  ಉಡುಪಿ ಜಿಲ್ಲೆಯ ಪಡುಬಿದ್ರೆಯ ನಂದಿಕೂರು ಗ್ರಾಮದ ಸುತ್ತಮುತ್ತಲಿನ ಜನರ ಸ್ಥಿತಿ ನೆನಪಿಸಿಕೊಂಡರೇ ಮೈ ಜುಮ್ ಎನ್ನುತ್ತದೆ. ಕಾರಣವಿಷ್ಟೆ. ಪಡುಬಿದ್ರಿ ಸಮೀಪದಲ್ಲಿ ಇತ್ತೀಚೆಗೆ ಬೃಹತ್ ಕಂಪೆನಿಯೊಂದು ತನ್ನ ಕಾರ್ಯಾರಂಭ ಮಾಡಿದೆ. ಅದರ ಆರಂಭದ ಸಂದರ್ಭದಲ್ಲೇ ತೀವ್ರ ಪ್ರತಿರೋಧ ಇತ್ತಾದರೂ ಹಣವಂತರ ಮುಂದೆ ಈ ಚಳುವಳಿ ಸೋತು ಸುಣ್ಣವಾಯಿತು. ಸಮಾಜ ಸೇವೆ ಮಾಡುತ್ತೇವೆಂದು ಹೇಳಿ ಮತ ಪಡೆದ ಜನಪ್ರತಿನಿಧಿಗಳು ಈ ಕಂಪೆನಿಯ ರಕ್ಷಣೆಗೆ ನಿಂತರು. ಇದೀಗ ಕಂಪೆನಿಯು ತನ್ನ ಹತ್ತು ಶೇಕಡಾ ಕೆಲಸ ಆರಂಭ ಮಾಡಿದೆ ಅಷ್ಟೇ. ಆದರೆ ಅದು ಕೊಟ್ಟ ಹೊಡತಕ್ಕೆ ಇಲ್ಲಿನ ಸ್ಥಳೀಯ ಜನತೆ ತತ್ತರಿಸುತ್ತಿದೆ. ಇಲ್ಲಿನ ಕಾರ್ಖಾನೆಯು ಉಗುಳುತ್ತಿರುವ  ತ್ಯಾಜ್ಯದ ಧೂಳಿನಿಂದ ಅನೇಕ ರೀತಿಯ ಶಾರೀರಿಕ ತೊಂದರೆಗಳನ್ನು ಇಲ್ಲಿನ ಪ್ರಜೆಗಳು ಅನುಭವಿಸುತ್ತಿದ್ದಾರೆ. ತನ್ನದಲ್ಲದ ತಪ್ಪಿಗೆ ಮಕ್ಕಳು ಮಹಿಳೆಯರು ಸೇರಿದಂತೆ ಚರ್ಮ, ಶ್ವಾಸಕೋಶ ಸಂಬಂಧಿ ರೋಗಗಳಿಂದ ಬಳಲುತ್ತಿದ್ದಾರೆ. ಮತ್ತಷ್ಟು ಓದು »