ವಿಷಯದ ವಿವರಗಳಿಗೆ ದಾಟಿರಿ

Recent Articles

8
ಫೆಬ್ರ

ಜೇನುಗೂಡಿಗೆ ಕಲ್ಲು ಹೊಡೆದ್ರೆ ಏನಾಗುತ್ತೆ ಅಂತ ಗೊತ್ತಾಯ್ತಾ!?

(ಇದೆ ಲೇಖನಗಳನ್ನ ನೋಡಿ ಬೋರ್ ಅನಿಸಬಹುದು,ಆದರೆ ಈ ಮನುಷ್ಯ ಮಾಡಿದ ಕೆಲಸ ಮೈ ಉರಿಯುವಂತದ್ದು,ನಾನು ಬರೆಯಬಾರದು ಅಂದುಕೊಂಡರು ಬರೆಯದಿರಲಾಗಲಿಲ್ಲ.ಇದನ್ನ ಬರೆಯುವ ಹೊತ್ತಿಗೆ ಚಿಮೂ ಅವರಿಗೆ ಗೌರವ ಸಲ್ಲಲ್ಲಿದೆ ಅನ್ನುವ ಸಮಾಧಾನಕರ ಸುದ್ದಿ ಬಂದರೂ,ಅಂತ ಹಿರಿಯ ಜೀವದ ಮನ ನೋಯಿಸಿದವರ ಬಗ್ಗೆ ಬರೆಯದಿರಲು ಹೇಗೆ ಸಾಧ್ಯ? )

ಮರವಂಜಿ ಅನ್ನೋದು ಈ ರಾಜ್ಯದ ಒಂದು ಪುಟ್ಟಹಳ್ಳಿ.ಆ ಹಳ್ಳಿಯ ಬಯಲಲ್ಲಿ ಆಟವಾಡುತಿದ್ದ ಮಕ್ಕಳ ಬಳಿ ಒಬ್ಬ ಪೇಲವ ಶರೀರದ,ಮೃದು ಮಾತಿನ ವ್ಯಕ್ತಿ ಬಂದು ಕೇಳಿದರು ’ಮಕ್ಕಳೇ,ಈ ಹಳ್ಳಿಯಲ್ಲಿ ದೊಡ್ಡ ಮನೆ ಯಾರದಪ್ಪ?’ಅಲ್ಲಿ ಆಟವಾಡುತಿದ್ದ ದೊಡ್ಡ ಮನೆಯ ಮಕ್ಕಳು ಆ ವ್ಯಕ್ತಿಯನ್ನ ಮನೆಗೆ ಕರೆದುಕೊಂಡು ಹೋದರು.ಮನೆಯ ಹಿರಿಯರೊಂದಿಗೆ ಆ ವ್ಯಕ್ತಿ ’ತಾನು, ಕರ್ನಾಟಕ-ಕನ್ನಡದ ಬಗ್ಗೆ ಸಂಶೋಧನೆ ಮಾಡುತ್ತಾ ಇರುವುದಾಗಿಯೂ,ಅದಕ್ಕಾಗಿ ಹೀಗೆ ಹಳ್ಳಿ ಹಳ್ಳಿಗಳಿಗೊ ಭೇಟಿ ನೀಡುತ್ತಿರುವುದಾಗಿಯು ಮತ್ತು ಹೋದೆಡೆ ಹೀಗೆ ಉಳ್ಳವರ ಮನೆಯಲ್ಲಿ ವಿಶ್ರಾಂತಿ ಪಡೆದು ಸಾಗುತ್ತಿರುವುದಾಗಿ’ ಹೇಳಿದ್ದರು.ಹಾಗೆ ಮುಂದುವರೆದು ’ಉಚಿತವಾಗಿ ಈ ರೀತಿ ಉಳಿದುಕೊಳ್ಳುವುದು ನನಗೆ ಕಷ್ಟವಾಗುತ್ತದೆ, ನಿಮ್ಮ ಮನೆಯ ಮಕ್ಕಳನ್ನೆಲ್ಲ ಕರೆಯಿರಿ ನಾನವರಿಗೆ ಕಥೆಯನ್ನಾದರು ಹೇಳುತ್ತೇನೆ’ ಅಂದರಂತೆ.ಆ ವ್ಯಕ್ತಿ ಹಾಗೆ ಮನೆಗೆ ಬಂದು ಹೋದ ೪-೫ ವರ್ಷದ ಮೇಲೆ ಯಾವುದೋ ಪತ್ರಿಕೆಯಲ್ಲಿ ಅವರ ಫೋಟೊ ನೋಡಿದಾಗಲೆ ಆ ಮನೆಯವರಿಗೆ ಗೊತ್ತಾಗಿದ್ದು ಅಂದು ನಮ್ಮ ಮನೆಗೆ ಬಂದು ಉಳಿದುಕೊಂಡಿದ್ದ ವ್ಯಕ್ತಿ, ಕನ್ನಡದ ಹಿರಿಮೆಯ ಸಂಶೋಧಕ,ವಿದ್ವಾಂಸರು ಅಂತ.

ಮತ್ತಷ್ಟು ಓದು »

7
ಫೆಬ್ರ

ಸಂಶೋಧನೆಯ ಸತ್ಯಕ್ಕೆ ಸಂದ ಜಯ: ಚಿಮೂ.ಗೆ ಗೌರವ ಡಾಕ್ಟರೇಟ್ ನೀಡಲು ಒಪ್ಪಿಗೆ

ಕೃಷ್ಣವೇಣಿ ಜಿ ಎಸ್ ಮಡಿಕೇರಿ

ಕನ್ನಡದ ಹಿರಿಯ ಸಂಶೋಧಕರಾದ ಡಾ.ಎಂ. ಚಿದಾನಂದ ಮೂರ್ತಿಯವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ನೀಡಲು ನಿರಾಕರಿಸಿದ್ದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕೊನೆಗೂ ಗೌರವ ಡಾಕ್ಟರೇಟ್ ನೀಡಲು ಸಮ್ಮತಿಸಿದ್ದಾರೆ. ಕನ್ನಡಿಗರ, ಸಾಹಿತಿಗಳ, ಸಂಘಟನೆಗಳ ಒತ್ತಾಯಕ್ಕೆ ಒಪ್ಪಿಗೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಚರ್ಚ್ ಮೇಲಿನ ದಾಳಿಯ ಕುರಿತು ನ್ಯಾಯಮೂರ್ತಿ ಸೋಮಶೇಖರ್ ಆಯೋಗವು ನೀಡಿದ ವರದಿಯನ್ನು ಚಿದಾನಂದಮೂರ್ತಿಯವರು ಸಮರ್ಥಿಸಿದ್ದಾರೆ. ಅಲ್ಲದೇ ಡಾಕ್ಟರೇಟ್ ನೀಡಲು ಸಾಹಿತ್ಯಿಕ ಸಾಧನೆಗಳ ಜೊತೆಗೆ ಸಾಮಾಜಿಕ ಕಾಳಜಿಯೂ ಮಾನದಂಡ ಎಂದು ಹೇಳುವ ಮೂಲಕ ಗೌರವ   ಡಾಕ್ಟರೇಟ್ ಗೆ ಹೊಸ ಮಾನದಂಡವೊಂದನ್ನು ಸೇರ್ಪಡೆಗೊಳಿಸಿದ್ದರು.

ರಾಜ್ಯಪಾಲರ ಈ ನಿರ್ಧಾರವನ್ನು  ಸಾಹಿತಿಗಳು, ಹಲವು ಕನ್ನಡಪರ ಸಂಘಟನೆಗಳು, ಕನ್ನಡ ಪ್ರೇಮಿಗಳು ವಿರೋಧಿಸಿದ್ದರು. ಚಿದಾನಂದಮೂರ್ತಿಯವರನ್ನು  ಕೋಮುವಾದಿಯೆಂದು ಸಹ ಹೇಳುವಲ್ಲಿ ರಾಜ್ಯಪಾಲರು ಹಿಂದೆ ಬಿದ್ದಿರಲಿಲ್ಲ. ಇದನ್ನು ತೀವ್ರವಾಗಿ ವಿರೋಧಿಸಿದ್ದ ಸಾಹಿತ್ಯ ಪ್ರೇಮಿಗಳು, ಸಂಶೋಧನಾ ಆಸಕ್ತರು ಇಂದು ರಾಜಭವನದ ಮುಂದೆ ಪ್ರತಿಭಟನೆ ನಡೆಸಿದ್ದರು.

ನಿನ್ನೆ ಮುಕ್ತಾಯಗೊಂಡ 77ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿಯೂ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ತಮ್ಮ ನಡುವಿನ ವೈಚಾರಿಕ ಭಿನ್ನತೆಗಳನ್ನು ಮರೆತು ಕನ್ನಡ ಸಂಶೋಧಕನಿಗೆ ಸಲ್ಲಬೇಕಿದ್ದ ಸ್ಥಾನಮಾನಗಳನ್ನು ಕೊಡಿಸುವಲ್ಲಿ ಎಲ್ಲ ಕನ್ನಡ ಸಾಹಿತಿಗಳು ಒಂದಾದದ್ದು ಮತ್ತು ಒಕ್ಕೊರಲಿನಲ್ಲಿ ಆಗ್ರಹಪಡಿಸಿದ್ದು ವಿಶೇಷವಾಗಿತ್ತು. ಮತ್ತಷ್ಟು ಓದು »

7
ಫೆಬ್ರ

ಗಝಲ್ ಗುಂಗಿನಲ್ಲಿ…

ಒಪ್ಪಿದೆ ನಿನ್ನ ಕಣ್ಣಲಿ ನನ್ನೆಡೆಗೆ ಪ್ರೀತಿಯಿಲ್ಲ,
ನಿನ್ನ ದೃಷ್ಟಿಯಲ್ಲಿ ನಾನಿರೋದು ಆ ರೀತಿಯಲ್ಲ/
ಆದರೂ ಹೇಗೆ ಮುಚ್ಚಿಡಲಿ ಈ ವ್ಯಸನ?….ಆಗಿರೋವಾಗ ನಿನ್ನೋಲವಲ್ಲಿ ತಲ್ಲೀನ,
ಚಿಂತೆಯಿಲ್ಲ…ಯಾರು ನನ್ನನಂದರೇನು ಮತಿಹೀನ!//

ಈ ಇರುಳು ಜಾರುವ ಮೊದಲು ಬಾ…ಕ್ಷಣ ಕಾಲ ನನ್ನನಪ್ಪು,
ಯಾರಿಗೆ ಗೊತ್ತು ಹೇಳು? ಇನ್ನೆಂದೋ ನಮ್ಮ ಭೇಟಿ/
ನೋವ ಮಡುವಿನ ಸುಳಿಗೆ ಸಿಲುಕಿ ಬಾಳುವ ಹಾಳು ಹಣೆಬರಹ,
ಅದೊಂದು ಬೆಚ್ಚನ್ನೇ ಆಲಿಂಗನದ ಆಸರೆ ಸಾಕು ಸಹಿಸೋಕೆ ಇನ್ನೆಲ್ಲ ವಿಷಾದದೀಟಿ//

ನೀ ಜೊತೆಗಿದ್ದರೆ ಗುರಿಗಳಿಗೆಲ್ಲಿ ಬರ?,
ಹುಮ್ಮಸ್ಸಿನ ಗಣಿಗೆ ನಾನೊಡೆಯ ಬೀಳುತಿರೆ ಕಿವಿಮೇಲೆ ನಿನ್ನ ಸ್ವರ/
ನಿನ್ನುಸಿರು ನನ್ನೆದೆಯ ಸೋಕುತಿರೊ ತನಕ ನೋವೆ ನನಗಿಲ್ಲ,
ನಿನ್ನೊಂದು ಮೆಚ್ಚುಗೆ ನಗುವಿಗಾಗಿ ತಹತಹಿಸಲು ತಯಾರ್ ನಾನು ಬಾಳೆಲ್ಲ//

– ಅಂಗನ ಕಿರಣ

7
ಫೆಬ್ರ

ಮತ್ತೊಮ್ಮೆ ನಿಷ್ಠೆ ತೋರಿಸಿದ ರಾಜ್ಯಪಾಲರು

ಜಗನ್ನಾಥ್ ಶಿರ್ಲಾಲ್

ಈ ನಾಡಿನ ಹೆಸರಾಂತ, ಸಾಹಿತಿ, ಸಂಶೋಧಕ ಡಾ.ಚಿದಾನಂದ ಮೂರ್ತಿಯವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಲು ತನ್ನ ವಿಶ್ವವಿದ್ಯಾನಿಲಯದ ಸೆನೆಟ್ ಸಭೆಯಲ್ಲಿ ಚರ್ಚಿಸಿ ಶಿಪಾರಸ್ಸು ಮಾಡಲಾಗಿದ್ದ ಹೆಸರನ್ನು ರಾಜ್ಯಪಾಲರು ತೆಗೆದು ಹಾಕುವ ಮುಖಾಂತರ ದೊಡ್ಡ ಅಪಮಾನ ಮಾಡಿದ್ದಾರೆ.ಸದಾ ಸುದ್ದಿಯಲ್ಲಿರುವ ನಮ್ಮ ರಾಜ್ಯಪಾಲರಾದ ಹೆಚ್. ಆರ್. ಭಾರಧ್ವಾಜ್ ತನ್ನ ಹಳೆ ಚಾಳಿಯನ್ನು ಮತ್ತೊಮ್ಮೆ ತನ್ನ ಅಧಿಕಾರದ ಮೂಲಕ ತೋರಿಸಿ ಪಕ್ಷನಿಷ್ಠೆ ಎಂಬ ಮುಖವಾಡವನ್ನು ಇಡಿ ದೇಶಕ್ಕೆ ತೋರಿಸಿ ಕೊಟ್ಟಿದ್ದಾರೆ.ಆ ಮೂಲಕ ತನ್ನ ಪಕ್ಷಕಾಗದವರು, ತನ್ನ ಸಿದ್ಧಾಂತ ವಿರೋಧಿಗಳನ್ನು ಮಟ್ಟ ಹಾಕುವ ಪ್ರಯತ್ನ ಮುಂದುವರೆಸುತ್ತಾ ರಾಜ್ಯಪಾಲ ಎಂಬ ಉನ್ನತ ಸ್ಥಾನದ ಮರ‍್ಯಾದೆಯನ್ನು ಕಳಚಿ ಬಿಟ್ಟಿದ್ದಾರೆ.ರಾಜ್ಯಪಾಲ ಎಂಬ ಪದವಿ ನಾಮಕವಸ್ಥೆಯಾದರೂ ವಿಶ್ವವಿದ್ಯಾನಿಲಯಗಳ ವಿಷಯಕ್ಕೆ ಸಂಬಂಧಿಸಿದಂತೆ ಕೊಟ್ಟ ಅಧಿಕಾರವನ್ನು ಇಂತಹ ನೀತಿಗೆಟ್ಟ ರಾಜಕೀಕರಣಕ್ಕೆ ತಂದುದು ವಿಪರ‍್ಯಾಸವಾದುದು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ವಿಚಾರದಲ್ಲೂ ನಿರಂಕುಶ ಅಧಿಕಾರವನ್ನು ತೋರ್ಪಡಿಸಿ ಆ ಮೂಲಕ ಉಪಕುಲಪತಿ ಸ್ಥಾನಕ್ಕೆ ಅಗೌರವ ತೋರಿಸಿ ಬೀದಿ ಬದಿಯಲ್ಲಿ ನೀತಿ ಪಾಠ ಮಾಡಲು ಹೊರಟಿದ್ದ ರಾಜ್ಯಪಾಲರು ತನ್ನ ಪಕ್ಷವಾತ್ಸಲ್ಯಕ್ಕೆ ಚಿದಾನಂದ ಮೂರ್ತಿಯಂತವರೂ ಸಿಕ್ಕಿದ್ದು, ಹೆಚ್. ಆರ್. ಭಾರಧ್ವಾಜ್ ‘ರಾಜ್ಯಪಾಲ’ ಸ್ಥಾನಕ್ಕೆ ಅನರ್ಹವೆಂಬುದನ್ನು ಈ ರಾಜ್ಯದ ಜನರು ಸಾಹಿತಿ, ಸಂಶೋಧಕರು ಮತ್ತೊಮ್ಮೆ ಸಾರಿ ಹೇಳುವಂತಾಗಿದೆ.

ಅಂದ ಹಾಗೆ, ಇತರ ವಿಶ್ವವಿದ್ಯಾನಿಲಯಗಳಲ್ಲಿ ಡಾಕ್ಟರೇಟ್ ಪದವಿ ಪ್ರಧಾನ ಮಾಡಿದ ರಾಜ್ಯಪಾಲರಿಗೆ ಇಂತಹ ಸೈದಾಂತಿಕತೆ ಯಾಕೆ ಕಂಡಿಲ್ಲ. ಅಷ್ಟಕ್ಕೂ ಚಿದಾನಂದ ಮೂರ್ತಿಯವರು ಗೌರವ ಡಾಕ್ಟರೇಟ್‌ಗೆ ಯಾಕೆ ಅನರ್ಹರು ? ಯಡಿಯೂರಪ್ಪರವರ ವಿರುದ್ಧ ಮಾತಾಡಿಲ್ಲವೆಂದ ! ಅಥವಾ ಕಾಂಗ್ರೇಸ್ ಪಕ್ಷದ ಸದಸ್ಯ ಅಲ್ಲವೆಂದ ? ಇತಿಹಾಸದ ಸತ್ಯ ವಿಚಾರಗಳನ್ನು ಹೇಳ ಹೊರಟರೆ ಆತ ಬಲಪಂಥೀಯನಾಗಿ ಬಿಡುತ್ತಾನೆ. ಅಲ್ಪಸಂಖ್ಯಾತರ ಪರ ಮಾತಾಡಿದರೆ ಆತ ಜಾತ್ಯಾತೀತ ? ಈ ರೀತಿಯ ಮಾನಸಿಕತೆ ಎಲ್ಲಿಯವರೆಗೆ ಈ ವರ್ಗದ ಜನರಲ್ಲಿ, ರಾಜಕಾರಣಿ, ಸಾಹಿತಿಗಳಲ್ಲಿ ಇರುತ್ತದೊ ಅಲ್ಲಿಯವರೆಗೆ ಅವರು ಉದ್ಧಾರವಾಗೋದಿಲ್ಲ. ಮತ್ತಷ್ಟು ಓದು »

7
ಫೆಬ್ರ

ಮಾಜಿ ಸೈನಿಕರ ಅಳಲು : ಸ್ವಲ್ಪ ಕನ್ಸರ್ನ್ ತೋರಿಸಿಯಪ್ಪಾ..

– ಹರ್ಷ ಕುಗ್ವೆ

ನಾವು ಭಯೋತ್ಪಾದಕ ದಾಳಿಯಾದಾಗ ಸೈನ್ಯವನ್ನು, ಸೈನಿಕರನ್ನು ಹಾಡಿ ಹೊಗಳುತ್ತೇವೆ, ಕಾರ್ಗಿಲ್ ನಂತ  ಯುದ್ಧವಾದಾಗ ಸಿಯಾಚಿನ್ ಹಿಮದಲ್ಲಿ ಕುಳಿತ ಸೈನಿಕರು ನಮಗೆ ನೆನಪಾಗುತ್ತಾರೆ. ಆದರೆ ಉಳಿದ ಸಮಯದಲ್ಲಿ?. ಒಬ್ಬ ಸೈನಿಕನ ಸೇವೆಯನ್ನು ಸ್ಮರಿಸಲು ನಮಗೆ ಆತನ ಶವವೇ ಸಿಗಬೇಕೇ ಎಂಬ ಪ್ರಶ್ನೆಯನ್ನು ಹಾಕಿಕೊಳ್ಳೋಣ. ಒಂದಷ್ಟು ವರ್ಷ ಯಾವುದೂ ಯುದ್ಧವೇ ನಡೆಯದಿದ್ದಲ್ಲಿ ಅವರನ್ನು ನೆನೆಸಿಕೊಳ್ಳುವ ಮಾತು ದೂರವೇ ಸರಿ. ನಮ್ಮನ್ನು ಇಲ್ಲಿ ನಮ್ಮ ನಮ್ಮ ಬಂಗಲೆ, ಮನೆಗಳಲ್ಲಿ ಬೆಚ್ಚಗಿಡಲು ಸೈನಿಕರು ಗಡಿಗಳಲ್ಲಿ, ಪರ್ವತಗಳ ಹಿಮದಲ್ಲ್ಲಿ, ಸಮುದ್ರಗಳ ಅಲೆಗಳಲ್ಲಿ ದಿನನಿತ್ಯ ಪಡುತ್ತಿರುವ ಶ್ರಮ ನಮಗೆಂದೂ ಅರಿವಾಗುದೇ ಇಲ್ಲ.
‘ಸಮಾನ ಶ್ರೇಣಿಗೆ ಸಮಾನ ಪೆನ್ಶನ್’ ನೀತಿಯನ್ನು ನಿವೃತ್ತ ಸೈನಿಕರಿಗೆ ಅಳವಡಿಸಿ ಎಂಬ ಬೇಡಿಕೆಯನ್ನಿಟ್ಟು ಸಾವಿರಾರು ಸೈನಿಕರು ಬೀದಿಗಿಳಿಯುವವರೆಗೂ ನಮ್ಮ ಸರ್ಕಾರಗಳು  ಒಪ್ಪಿಕೊಂಡಿರಲೇ ಇಲ್ಲ. ಬದಲಿಗೆ ಹಾಗೆ ಮಾಡಲು ಸಕರ್ಾರಕ್ಕೆ ಹಣದ ಕೊರತೆಯಾಗುತ್ತದೆ ಎಂಬ ಸಬೂಬು ಹೇಳುತ್ತಾ ಬಂದಿದ್ದರು. ಆದರೆ ಸಂಸತ್ತಿನ, ಅಥವಾ ವಿಧಾನಸೌಧದ ಅಧಿವೇಶನಗಳಲ್ಲಿ ಒಂದು ಸಣ್ಣ ಚರ್ಚೆಯೂ ಇಲ್ಲದೇ ತಮ್ಮ ವೇತನಗಳನ್ನು ಬರೋಬ್ಬರಿ ಏರಿಸಿಕೊಂಡು  ಬಿಟ್ಟಿದ್ದರು. ಅದು ಸರ್ಕಾರಕ್ಕೆ ಯಾವ ಹೊರೆಯನ್ನೂ ಉಂಟು ಮಾಡಲಿಲ್ಲ.

ಮತ್ತಷ್ಟು ಓದು »

5
ಫೆಬ್ರ

ಚಿಮೂ ಗೌರವ ಡಾಕ್ಟರೇಟ್ : ನಿಲುಮೆಯ ನಿಲುವು ಮತ್ತು ಕನ್ನಡ ಸಾಹಿತ್ಯ ಲೋಕದ ನಿಲುವು

ನಿಲುಮೆ

ಕನ್ನಡದ ಹಿರಿಯ ಸಂಶೋಧಕ,ವಿದ್ವಾಂಸ,ಇತಿಹಾಸಜ್ಞ ಹಾಗೂ ಲೇಖಕ ಚಿಮೂ ಅವರಿಗೆ ರಾಜ್ಯಪಾಲ ಹಂಸ ಭಾರಧ್ವಾಜ್ ರಾಜಕೀಯ ಉದ್ದೇಶದಿಂದ ಗೌರವ ಡಾಕ್ಟರೇಟ್ ನಿರಾಕರಿಸಿದನ್ನ ಪ್ರಶ್ನಿಸಿ ನಿನ್ನೆ ನಿಲುಮೆ ತನ್ನ ನಿಲುವನ್ನ ಪ್ರಕಟಿಸಿತ್ತು.ಇಂದಿನ ಪ್ರಜಾವಾಣಿ ಪತ್ರಿಕೆಯಲ್ಲಿ ಕನ್ನಡ ಸಾಹಿತ್ಯವಲಯದಿಂದ ರಾಜ್ಯಪಾಲರ ನಿಲುವಿಗೆ ತಪರಾಕಿಗಳು ಬಿದ್ದಿವೆ.

ಇವರ ತಪರಾಕಿಗಳನ್ನ ನೋಡಿ ನಮಗಂತೂ ಬಹಳ ಸಮಧಾನವಾಗಿದೆ.ಇದೋ ನಿಮಗಾಗಿ

ಹಂಪಿ ಕನ್ನಡ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ :
‘ರಾಜ್ಯಪಾಲರು ಮಾಡಿದ್ದು ಬಹಳ ತಪ್ಪು. ಅವರು ಈ ರೀತಿ ನಡೆದುಕೊಂಡಿರುವುದು ವಿಪರ್ಯಾಸ. ಚಿದಾನಂದಮೂರ್ತಿ ಅವರು ವಯಸ್ಸಿನಲ್ಲೂ, ವಿದ್ವತ್ತಿನಲ್ಲೂ ನಮಗಿಂತ ಹಿರಿಯರು. ಈ ಬೆಳವಣಿಗೆಯನ್ನು ನೋಡಿದರೆ ಸ್ವಾಭಿಮಾನ ಇರುವ ಯಾವ ಸಾಹಿತಿಯೂ ಗೌರವ ಡಾಕ್ಟರೇಟ್ ಸ್ವೀಕರಿಸಬಾರದು ಎಂದೆನಿಸುತ್ತದೆ. ಅವರಿಗೆ ಡಾಕ್ಟರೇಟ್ ಕೊಡುವ, ಕೊಡದಿರುವ ಬಗ್ಗೆ ಗುಪ್ತವಾಗಿ ಚರ್ಚೆ ನಡೆಯಬೇಕಿತ್ತು. ಆದರೆ ಈ ವಿಷಯ ರಾಜ್ಯಪಾಲರ ತನಕ ಹೋಗಿ, ದಿನಪತ್ರಿಕೆಗಳಲ್ಲಿ ಅವರಿಗೆ ‘ಡಾಕ್ಟರೇಟ್ ತಿರಸ್ಕರಿಸಲಾಗಿದೆ’ ಎಂದು ಪ್ರಕಟವಾಗುವ ಹಂತ ತಲುಪಿದ್ದು ನೋವಿನ ಸಂಗತಿ. ಯಾವ ಸಾಹಿತಿಗಳೂ ಈ ರೀತಿ ನೀಡಲಾಗುವ ಡಾಕ್ಟರೇಟ್ ಸ್ವೀಕರಿಸಬಾರದು’
ಮತ್ತಷ್ಟು ಓದು »

4
ಫೆಬ್ರ

ಇದು ಕನ್ನಡಕ್ಕಾದ ಅವಮಾನವಲ್ಲವೇ?

ಕರ್ನಾಟಕದಲ್ಲಿ ಕನ್ನಡದ ಪರ ಕೆಲಸ ಮಾಡಿದವರಿಗೆ ಗೌರವ ಕೊಡೋದು ತಪ್ಪಾ? ತಪ್ಪು ಅನ್ನೋದಾದ್ರೆ ರಾಜ್ಯಪಾಲರು, ಡಾ|| ಎಂ. ಚಿದಾನಂದಮೂರ್ತಿ  ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನಿರಾಕರಿಸಿರುವುದು ಸರಿಯಾಗುತ್ತದೆ,ಅಲ್ವಾ? ಚಿಮೂ ಯಾರು? ಕನ್ನಡಕ್ಕೆ ಅವರ ಕೊಡುಗೆಯೇನು? ಎಲ್ಲ ಅರ್ಹತೆಯಿದ್ದರು ಅವರಿಗೆ ಗೌರವ ಡಾಕ್ಟರೇಟ್  ನಿರಾಕರಿಸಲು ನೀಡಿರುವ ಕಾರಣವಾದರು ಏನು ಅಂತ ನೋಡಿದರೆ ‘ಸಂಘ ಪರಿವಾರದ’ ಜೊತೆ ಅವರು ಗುರ್ತಿಸಿಕೊಂಡಿರುವ ಮಹಾಪರಾಧವನ್ನ ಮಾಡಿರುವುದಂತೆ!

ಅದ್ಯಾವ ಸೀಮೆಯ ಅಪರಾಧ ಅಂತ ನನಗೂ ಇನ್ನು ಕೆಲವರಿಗೂ ಅನ್ನಿಸಬಹುದು ಆದರೆ ಸಿಕ್ಯುಲರ್ ಮನಸ್ಸುಗಳಿಗೆ ಅದು ದೇಶ ದ್ರೋಹಕ್ಕೆ ಸಮ ಅನ್ನಿಸಲೂಬಹುದು.ಆದರೆ ಚಿಮೂ ಅವರನ್ನ ಕೇಸರಿ-ಹಸಿರಿನ ಪರದೆ ಸರಿಸಿ, ಕೆಂಪು-ಹಳದಿಯ ಕನ್ನಡದ ಪರದೆಯ ಮೂಲಕ ನೋಡಿದಾಗಲೂ ಅವರ ವಿರೋಧಿಗಳು ಅವರಿಗೆ ಗೌರವ ಡಾಕ್ಟರೇಟ್ ನೀಡುವುದನ್ನು ವಿರೋಧಿಸಬಲ್ಲರೆ?

ಯಾವುದೇ ರಾಜಕೀಯ ಪಕ್ಷ,ಸಂಘಟನೆ, ಪಂಥಕ್ಕೆ ಸೇರದ ಒಬ್ಬ ಸಾಮನ್ಯ ಕನ್ನಡಿಗನ ಕಣ್ಣಿಗೆ ಚಿಮೂ ಅವರು,ಕನ್ನಡದ ಪ್ರಖ್ಯಾತ ಸಂಶೋಧಕ,ವಿದ್ವಾಂಸ,ಇತಿಹಾಸಜ್ಞ ಹಾಗೂ ಲೇಖಕರಾಗಿ ಮಾತ್ರ ಕಾಣಬಲ್ಲರು.

ಇಂತ ಚಿಮೂ ಅವರಿಗೆ ಗೌರವ ಡಾಕ್ಟರೇಟ್ ನಿರಾಕರಿಸುವುದು ಕನ್ನಡ ಭಾಷೆಯ ಪ್ರಾಚೀನತೆ ಹಾಗೂ ಪ್ರಾಚೀನ ಕರ್ನಾಟಕದ ಬಗ್ಗೆ ಅವರ ಒಲವನ್ನ,ನಿಷ್ಠೆಯನ್ನ,ತುಡಿತವನ್ನ ಮತ್ತು ಕನ್ನಡಕ್ಕಾಗಿ ಅವರು ಮಾಡಿರುವ ಕೆಲಸವನ್ನ ಕಡೆಗಣಿಸಿದಂತೆ ಅವಮಾನಿಸಿದಂತಲ್ಲವೇ? ಕನ್ನಡಕ್ಕಾಗಿ ಕೆಲಸ ಮಾಡಿದವರನ್ನ ಕಡೆಗಣಿಸುವುದು ಕನ್ನಡಿಗರನ್ನ,ಕರ್ನಾಟಕವನ್ನ ಕಡೆಗಣಿಸಿದಂತೆ-ಅವಮಾನಿಸಿದಂತೆಯೇ ಸರಿ. ಮತ್ತಷ್ಟು ಓದು »

4
ಫೆಬ್ರ

ಮಕ್ಕಳೇ, ಕಿಂದರಿಜೋಗಿ ಇಂಟರ್ ನೆಟ್ ನಲ್ಲಿದ್ದಾನೆ

* ಚುಕ್ಕಿಚಂದಿರ

ಇವನು ತುತ್ತೂರಿ ಊದುವ ಕಿಂದರಿಜೋಗಿಯಲ್ಲ. ನಿಮಗೆ ತುತ್ತೂರಿ ಊದಲು, ಚಿತ್ರ ಬಿಡಿಸಲು, ಕತೆಕವನ ಬರೆಯಲು, ಮಕ್ಕಳ ಸೃಜನಾತ್ಮಕತೆ ಬೆಳೆಸಲು ಹೇಳಿಕೊಡುತ್ತಾನೆ. ಒಂದು ಲೆಕ್ಕದಲ್ಲಿ ಇವನು ಮಕ್ಕಳಿಗೆ ಇಂಟರ್ ನೆಟ್ ಮಾಮ. ಮಕ್ಕಳಿಗೆ ಬೇಕಾದ್ದು ಇಂದು ಇಂಟರ್ ನೆಟ್ ನಲ್ಲಿ ಕಡಿಮೆಯಿದೆ. ಅವರ ಸೃಜನಶೀಲತೆ ಬೆಳೆಸಲು ಪೂರಕವಾದ ವೆಬ್ ಸೈಟ್, ಬ್ಲಾಗ್ ಗಳು ಕನ್ನಡದಲ್ಲಿ ಬೆರಳೆಣಿಕೆಯಷ್ಟಿವೆ ಅಷ್ಟೇ. ಚಂದಮಾಮ, ಬಾಲವನ.. ಮತ್ತೊಂದಿಷ್ಟು ಬ್ಲಾಗ್ ಗಳಿವೆ ಅಷ್ಟೇ.

ಹೆಚ್ಚು ಮಕ್ಕಳಿಗೆ ಇಷ್ಟವಾಗುವ ಹೊಸ ಮಕ್ಕಳ ವೆಬ್ ಸೈಟ್ ಇನ್ನೊಂದಿದೆ. ಅದು ಕಿಂದರಿಜೋಗಿ ಅಂತ. “ಕಿಂದರಜೋಗಿ, ಮಕ್ಕಳಿಗಾಗಿ ತೆರೆದಿರುವ ಮುಕ್ತ ತಾಣ. ದಿನನಿತ್ಯದ ಕಲಿಕೆಯಿಂದ ಹಿಡಿದು, ತಾವೇ ತಾವಾಗಿ ಹೊಸತನ್ನೇನಾದರೂ ಮಾಡಬಲ್ಲೆವು ಎಂಬ ಶಕ್ತಿಯನ್ನು ಮಕ್ಕಳಲ್ಲಿ ತುಂಬುವ ಒಂದು ಸಣ್ಣ ಪ್ರಯತ್ನ. ಯಾವುದೇ ತಂಡ ರಚನೆಯಿಲ್ಲದೆ, ಮಕ್ಕಳೊಡನೆ ತನ್ನಲ್ಲಿರುವ ಕಲೆ, ಕಲಿಕೆ, ಜ್ಞಾನ ಇತ್ಯಾದಿಗಳನ್ನು ಹಂಚಿಕೊಳ್ಳುವ ಎಲ್ಲರಿಗೂ ಇದು ವೇದಿಕೆ. ನೀವೂ ನಮ್ಮೊಂದಿಗೆ ಕೈಜೋಡಿಸ್ತೀರಲ್ಲವೇ” ಎಂದು ಕಿಂದರಿಜೋಗಿ ಹೇಳುತ್ತಾನೆ.

ಕಿಂದರಿಜೋಗಿ ಮಕ್ಕಳ ಎಲ್ಲ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತಾನೆ ಅಂತ ವೆಬ್ ಸೈಟ್ ನೋಡಿದಾಗಲೇ ಅರಿವಾಗುತ್ತದೆ. ಅಲ್ಲಿ ಓದಿ ಕಲಿ, ಕಥೆ, ಕವನ, ಗಣಿತ, ಚಿತ್ರಕಥೆ, ನಾಟಕ, ನೋಡಿ ನಲಿ, ಪ್ರಯೋಗ, ಭೂಮಿ ಮೇಲೆ, ಮಕ್ಕಳ ಸುದ್ದಿ, ಮಾಡಿ ತಿಳಿ, ವಿಜ್ಞಾನ, ವ್ಯಂಗ್ಯಚಿತ್ರಗಳು, ಸಂಗೀತ ಎಲ್ಲವೂ ಇದೆ.

ಒಂದಿಷ್ಟು ಸ್ಯಾಂಪಲ್ ನೋಡಿ
ಇಲ್ಲಿ……………………
ಮತ್ತಷ್ಟು ಓದು »

3
ಫೆಬ್ರ

ಇಲ್ಲಿ ಮತ್ತೊಂದು ಸಾಹಿತ್ಯ ಸಮ್ಮೇಳನವಿದೆ…

3
ಫೆಬ್ರ

ಆತ್ಮಕತೆಗಳೊಂದಿಗೆ Simply Fly

ವಿಕಾಸ್ ಹೆಗ್ಡೆ

ನಿನ್ನೆಗೆ ಕ್ಯಾಪ್ಟನ್ ಗೋಪೀನಾಥರ Simply Fly ಪುಸ್ತಕವನ್ನು ಓದಿ ಮುಗಿಸಿದೆ.  ರೆಟ್ಟೆಗಾತ್ರದ ಈ ಪುಸ್ತಕವನ್ನು ಒಂದೂವರೆ ತಿಂಗಳಿನ ಹಿಂದೆಯೇ ಓದಲು ಶುರುಮಾಡಿದ್ದರೂ ಮಧ್ಯೆ ಮಧ್ಯೆ ನಾನಾ ಕಾರಣಗಳಿಂದ ಅದನ್ನು ಮುಗಿಸಲಾಗದೇ ಇಷ್ಟು ತಡವಾಯಿತು. ಆ ಪುಸ್ತಕ ಕನ್ನಡದಲ್ಲಿ ’ಬಾನಯಾನ’ವಾಗಿ ಹೊರಬಂದಿದ್ದರೂ ಕೂಡ ಇಂಗ್ಲೀಷಲ್ಲಿ ಮೂಲ ಪುಸ್ತಕವನ್ನೇ ಓದೋಣ ಎಂದು ಹೊರಟಿದ್ದೂ ತಡವಾಗಿ ಮುಗಿದುದ್ದಕ್ಕೆ ಒಂದು ಕಾರಣ ಎನ್ನಬಹುದು. ಇರಲಿ. ಸಾಮಾನ್ಯವಾಗಿ ನನಗೆ ಮೊದಲು ಆತ್ಮಕತೆಗಳನ್ನು ಓದಲು ಇಷ್ಟವಾಗುತ್ತಿರಲಿಲ್ಲ. ಅದ್ಯಾವ ಗಳಿಗೆಯಲ್ಲೋ ಲಂಕೇಶರ ಆತ್ಮಕತೆ ’ಹುಳಿಮಾವಿನಮರ’ವನ್ನು ಓದಿದ ಮೇಲೆ ಆತ್ಮಕತೆಗಳ ಬಗ್ಗೆ ಆಸಕ್ತಿ ಹೊರಟುಹೋಗಿತ್ತು. ಆಗಿನ್ನೂ ಸಣ್ಣವಯಸ್ಸಿದ್ದುದರಿಂದ ಹಾಗೆನ್ನಿಸಿತ್ತೋ ಅಥವಾ ಆ ಪುಸ್ತಕವೇ ಹಾಗಿತ್ತೋ ನೆನಪಿಲ್ಲ. ಆತ್ಮಕತೆಗಳು ಎಂದರೆ ಕೇವಲ ನಿರುಪಯೋಗಿ ವೈಯಕ್ತಿಕ ವಿವರಗಳು, ಅದು ಯಾರದ್ದಾದರೂ ಸರಿ, ಓದಿ ಮಾಡುವುದಾದರೂ ಏನು ಎನ್ನಿಸಿಬಿಟ್ಟಿತ್ತು. ಆದರೆ ನನ್ನ ಈ ಭಾವನೆಯನ್ನು ಬದಲಿಸಿದ್ದು ಶಿವರಾಮಕಾರಂತರ ’ಹುಚ್ಚುಮನಸ್ಸಿನಹತ್ತುಮುಖಗಳು’. ಒಮ್ಮೆ ಗೆಳೆಯನೊಬ್ಬನ ಮನೆಗೆ ಹೋದಾಗ ಕಂಡಪುಸ್ತಕವನ್ನು ಸುಮ್ಮನೇ ಕೈಗೆತ್ತಿಕೊಂಡು ಓದಿದ್ದು ಆತ್ಮಕತೆಗಳ ಬಗ್ಗೆ ನನ್ನ ಭಾವನೆಯನ್ನು ಬದಲಿಸಿತು. ಎಲ್ಲಾ ಆತ್ಮಕತೆಗಳು ಆಸಕ್ತಿದಾಯಕವಾಗಿರಬೇಕಂತಿಲ್ಲ, ಆದರೆ ಅದರಿಂದ ತಿಳಿದುಕೊಳ್ಳುವುದು ಬಹಳಾ ಇರುತ್ತದೆ ಎಂಬುದು ಅರ್ಥವಾಗಿತ್ತು. ಹಿರಿಯರ ಅನುಭವವು ತಿಳಿಸಿಕೊಡುವಷ್ಟು ಮತ್ತೆಲ್ಲೂ ಸಿಗುವುದಿಲ್ಲ ಎಂದು ಖಾತ್ರಿಯಾಗಿತ್ತು. ಒಬ್ಬರ ಬಗ್ಗೆ ಮತ್ತೊಬ್ಬರು ಬರೆದ ಜೀವನ ಚರಿತ್ರೆಗಳು ಒಬ್ಬ ವ್ಯಕ್ತಿಯ ಸರಿಯಾದ ಚಿತ್ರಣವನ್ನು ಕೊಡಲು ಸಾಧ್ಯವಾಗುವುದಿಲ್ಲ. ಒಬ್ಬ ವ್ಯಕ್ತಿ ತನ್ನ ಬಗ್ಗೆ ತಾನು ತಿಳಿದುಕೊಂಡಷ್ಟು ಮತ್ಯಾರಿಗೂ ತಿಳಿಯಲು ಸಾಧ್ಯವಿಲ್ಲವಲ್ಲ ಅಂತೆಯೇ ಶಿವರಾಮ ಕಾರಂತರ ಆತ್ಮಕತೆ ಓದಿ ಅವರ ಬಗ್ಗೆ ಅಚ್ಚರಿಪಟ್ಟೆ. ಎಲ್ಲಾ ಕ್ಷೇತ್ರಗಳಲ್ಲೂ ಅವರ ಒಂದೊಂದು ಕೆಲಸದ ಬಗ್ಗೆಯೂ ಅವರಿಟ್ಟುಕೊಂಡ ನೋಟಗಳು, ಅದನ್ನು ಕಾರ್ಯಗತಗೊಳಿಸಿದ, ಅನುಭವಗಳ ವಿವರಗಳು ಮನಸ್ಸಿನಲ್ಲಿ ಕೂತವು. ಅದರಿಂದ ನನ್ನಲ್ಲಿ ಏನೋ ಅದ್ಭುತ ಬದಲಾವಣೆಯಾಗಿ ಹೋಯಿತು ಅಂತೇನೂ ಇಲ್ಲ , ಆದರೆ ಅದರಿಂದಾಗಿ ಜೀವನದ ಕೆಲ ವಿಷಯಗಳ ಬಗ್ಗೆ ನನ್ನ ಧೋರಣೆ ಬದಲಾಯಿಸಿಕೊಂಡೆ. ಹೊಸನೋಟ ಬೆಳೆಸಿಕೊಂಡೆ. ಅದು ಬಹಳ ಸಹಾಯಕಾರಿಯೂ ಆಯಿತು. ಮತ್ತಷ್ಟು ಓದು »