ವಿಷಯದ ವಿವರಗಳಿಗೆ ದಾಟಿರಿ

Recent Articles

22
ಜನ

ರಾಜ್ಯಪಾಲರು…ಅತಿರೇಕ ಹಾಗೂ ಯಡಿಯೂರಪ್ಪ…..

  ‘ ನಂದನವನ’
                                        
ಭ್ರಷ್ಟಚಾರ, ಸ್ವಜನಪಕ್ಷಪಾತ, ಅಧಿಕಾರ ದುರಪಯೋಗ ಕಾರಣಗಳಿಂದಾಗಿ ಮುಖ್ಯಮಂತ್ರಿ ವಿರುದ್ಧವೇ ಕ್ರಿಮಿನಲ್ ಮೊಕದ್ದಮೆ ಹೂಡಲು ರಾಜ್ಯಪಾಲ ಹನ್ಸ್ರಾಜ್ ಭಾರದ್ವಾಜ್ ಅನುಮತಿ ನೀಡಿದ್ದಾರೆ. ಕಟ್ಟರ್ ಕಾರ್ಯಕರ್ತರ ಪಕ್ಷವಾದ ಬಿಜೆಪಿ, ಸಂಘಪರಿವಾರಿಗಳು ನಾಚುವ ಬದಲು ರಾಜ್ಯಪಾಲರ ವಿರುದ್ಧವೇ ತೊಡೆತಟ್ಟಿ ನಿಂತಿರುವುದು ನಾಚಿಕೇಡು. ಭ್ರಷ್ಟಚಾರದ ವಿರುದ್ಧ ಧ್ವನಿ ಎತ್ತುವ ಮೂಲಕ ಕಾನೂನಿನಲ್ಲಿ ಒಬ್ಬ ಸಾಮಾನ್ಯ ಮನುಷ್ಯನಿಂದ ಹಿಡಿದು ಮುಖ್ಯಮಂತ್ರಿಯವರಿಗೆ ಒಂದೇ ನ್ಯಾಯ ಎಂಬ ಘೋಷ ವ್ಯಾಕ್ಯವನ್ನು ವಕೀಲರಾದ ಸಿರಾಜ್ ಭಾಷಾ, ರಾಮಚಂದ್ರ ಸಿಎಂ ವಿರುದ್ದ ಮೊಕದ್ದಮೆಗೆ ಅವಕಾಶ ನೀಡುವಂತೆ ರಾಜ್ಯಪಾಲರ ಅನುಮತಿ ಕೋರುವ ಮೂಲಕ ಎತ್ತಿ ಹಿಡಿದಿದ್ದಾರೆ.
ಮೊದಲಿನಿಂದಲೂ ರಾಜ್ಯದಲ್ಲಿ ಒಂದು ರೀತಿ ವಿರೋಧ ಪಕ್ಷದಂತೆಯೇ ವತರ್ಿಸಿಕೊಂಡು ಬಂದ ರಾಜ್ಯಪಾಲರು ಸಿಎಂ  ವಿರುದ್ಧ ಮೊಕದ್ದಮೆ ಹೂಡಲು ಖಂಡಿತಾ ಅನುಮತಿ ಕೊಟ್ಟೆ ಕೊಡುತ್ತಾರೆ ಎಂಬುದರಲ್ಲಿ ಎರಡು ಮಾತು ಇರಲಿಲ್ಲ. ರಾಜ್ಯಪಾಲರು ಈ ಹಿಂದಿನ ಕೆಲವು ಪ್ರಕರಣಗಳಲ್ಲಿ ಸಿಎಂ ಹಾಗೂ ಬಿಜೆಪಿ ಸಕರ್ಾರದ ವಿರುದ್ಧದ ತೋರಿದ ಅಸಹಕಾರ ನಿಜಕ್ಕೂ ಅವರ ಹುದ್ದೆಗೆ  ಘನತೆ ತರುವಂಥದ್ದಲ್ಲ. ಆದರೂ ಭ್ರಷ್ಟಾಚಾರದ ವಿಷಯದಲ್ಲಿ ಅವರು ತೆಗೆದುಕೊಂಡಿರುವ ನಿಧರ್ಾರಕ್ಕೆ ಹ್ಯಾಸ್ಟ್ ಅಫ್ ಹೇಳಲೇಬೇಕು.
ರಾಜಕೀಯವಾಗಿ ರಾಜ್ಯಪಾಲರ ಕ್ರಮ ದುರುದ್ದೇಶಪೂರಿತ ವಿರಬಹುದು. ಆದರೆ ಸಾಂವಿಧಾನಿಕವಾಗಿ, ಈ ನೆಲದ ಕಾನೂನು, ಪ್ರಜಾಪ್ರಭುತ್ವವನ್ನು ಗೌರವಿಸುವ ಪ್ರತಿಯೊಬ್ಬ ವ್ಯಕ್ತಿಯು ರಾಜ್ಯಪಾಲರ ಈ ನಿರ್ಣಯವನ್ನು ಗೌರವಿಸುವಂಥದೇ ಆಗಿದೆ. ಮುಖ್ಯಮಂತ್ರಿ ವಿರುದ್ಧದದ ಭ್ರಷ್ಟಾಚಾರದ ಪ್ರಕರಣಗಳು ಪುಂಖಾನುಫುಂಖವಾಗಿ ಮಾಧ್ಯಮಗಳಲ್ಲಿ ಈ ಹಿಂದೆಯೇ ವರದಿಯಾಗಿದ್ದವು. ಒಮ್ಮೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗಕ್ಕೆ ಕಾಲಿಟ್ಟರೂ ಅಲ್ಲಿಯ ಸಾಮಾನ್ಯ ಜನರು ಕೂಡ ಸಿಎಂ ಅವರ ಪ್ರವರ ಹೇಳುತ್ತಾರೆ. ಅಷ್ಟೂ ಅಲ್ಲದೇ ರಾಜ್ಯಪಾಲರಿಗೆ ಆ ಇಬ್ಬರು ವಕೀಲರು ಕೇವಲ ಅನುಮತಿ ಕೋರಿ ಅಜರ್ಿ ಬರೆದಿಲ್ಲ, ಬದಲಿಗೆ 2000 ಸಾವಿರ ಪುಟಗಳಷ್ಟು ದಾಖಲೆ, ಇನ್ನೂರು ಪುಟಗಳ ವರದಿಯನ್ನು ನೀಡಿದ್ದಾರೆ.

ಮತ್ತಷ್ಟು ಓದು »

22
ಜನ

ಇವನು ಇನಿಯನಲ್ಲ… ತುಂಬ ಸನಿಹ ಬಂದಿಹನಲ್ಲ…

ಸುಪ್ರೀತ್.ಕೆ.ಎಸ್

ತನಗೆ ಹೆಂಡತಿಯಾಗುವವಳು ಹೇಗಿರಬೇಕು ಎನ್ನುವ ಕುರಿತು ಪ್ರಾಚೀನ ಗಂಡು ಹೀಗೆ ಹೇಳಿದ್ದಾನೆ:

ಕಾರ್ಯೇಶು ದಾಸಿ, ಕರುಣೇಶು ಮಂತ್ರಿ.
ರೂಪೇಶು ಲಕ್ಷ್ಮಿ, ಕ್ಷಮಯಾ ಧರಿತ್ರಿ.
ಬೋಜ್ಯೇಶು ಮಾತಾ, ಶಯನೇಶು ರಂಭ,
ಷಡ್ಗುಣ್ಯ ಭಾರ್ಯ, ಕುಲಮುದ್ಧರಿತ್ರಿ.

ಹೆಂಡತಿಯಾದವಳು ಕುಟುಂಬದ ಪರಿಸ್ಥಿತಿ, ಗಂಡನ ಆವಶ್ಯಕತೆಗೆ ಅನುಗುಣವಾಗಿ ದಾಸಿ,ಮಂತ್ರಿ, ತಾಯಿ, ವೇಶ್ಯೆ ಮೊದಲಾದ ಪಾತ್ರಗಳನ್ನು ವಹಿಸಬೇಕು. ಪ್ರಾಚೀನ ಕಾಲದ ಕುಟುಂಬ ವ್ಯವಸ್ಥೆ ಹಾಗೂ ದಾಂಪತ್ಯವನ್ನು ಗಮನದಲ್ಲಿಟ್ಟುಕೊಂಡು ಈ ಉಕ್ತಿಯನ್ನು ಓದಿಕೊಂಡರೆ ನಮಗೆ ಈ ಗಂಡಿನ ಬೇಡಿಕೆಗಳು ಕೊಂಚ ಆಸಕ್ತಿಕರವಾದವುಗಳೇ ಎಂದೆನ್ನಿಸುತ್ತದೆ.

ಹೆಣ್ಣನ್ನು ತೊತ್ತು, ತನ್ನ ಸಂಗ್ರಹದಲ್ಲಿರುವ ಬೆಲೆಬಾಳುವ, ಅಂತಸ್ಥನ್ನು ಪ್ರತಿಬಿಂಬಿಸುವ ವಸ್ತುಗಳಲ್ಲಿ ಒಂದು ಎಂದು ಕಾಣುವ ಅನಾಗರೀಕ ವರ್ತನೆಯಿಂದ ಈ ಗಂಡಸು ತುಂಬಾ ಮುಂದೆ ಬಂದಿದ್ದಾನೆ ಎನ್ನುವುದು ಕಾಣುತ್ತದೆ. ಈತನಿಗೆ ತಾನು ಮದುವೆಯಾದಾಕೆ ಕೇವಲ ಒಂದು ಪಶುವಿನ ಹಾಗೆ ತನ್ನ ನೆರಳನ್ನು ನೆಚ್ಚಿಕೊಂಡು ಬದುಕುವುದು ಬೇಕಿಲ್ಲ. ಹಾಗಂತ ಆಕೆಯನ್ನು ತನ್ನ ಸಮಾನಳೆಂದು ಪುರಸ್ಕರಿಸುವುದೂ ಇಲ್ಲ. ತನ್ನ ಕೆಲಸ ಕಾರ್ಯಗಳನ್ನು ದಾಸಿಯ ಹಾಗೆ ಮಾಡಬೇಕು ಎನ್ನುವುದು ಆತನ ಮೊದಲ ಬೇಡಿಕೆ. ಅನಂತರ ತನ್ನ ಬುದ್ಧಿವಂತಿಕೆಯಿಂದ ಆಕೆ ತನ್ನ ಜೀವನ ನಿರ್ವಹಣೆಗೆ ನೆರವಾಗಬೇಕು ಎಂದು ಬಯಸುತ್ತಾನೆ. ರೂಪವಿದ್ದರೆ ಯಾರಿಗೆ ತಾನೆ ಸಂತೋಷವಾಗುವುದಿಲ್ಲ? ತನ್ನ ತಪ್ಪುಗಳನ್ನೆಲ್ಲ ಕ್ಷಮಿಸಿ ಪೊರೆಯುವ ಭೂಮಿಯಾಗಿರಲಿ ಎಂದು ಅಪೇಕ್ಷಿಸುವುದರಲ್ಲಿ ಗಂಡು ಬದಲಾಗಿಯೇ ಇಲ್ಲ. ತಾಯಿಯಂತೆ ಪುಷ್ಕಳವಾಗಿ ಅಡುಗೆ ಮಾಡಿ ತನ್ನ ಹಸಿವನ್ನು ಇಂಗಿಸಬೇಕು. ದೈಹಿಕ ಕಾಮನೆಯನ್ನು ಸಹ ತೃಪ್ತಿ ಪಡಿಸಬೇಕು. ಇಷ್ಟೆಲ್ಲಾ ಗುಣಗಳು ಹೆಂಡತಿಯಲ್ಲಿದ್ದರೆ ತನ್ನ ಕುಲ ಉದ್ಧಾರವಾಗುವುದು ಎನ್ನುವುದು ಪ್ರಾಚೀನ ಗಂಡಿನ ನಂಬಿಕೆ.

ಮತ್ತಷ್ಟು ಓದು »

21
ಜನ

25ರ ಲಹರಿಯಲ್ಲಿ

ಪ್ರವೀಣಚಂದ್ರ, ಪುತ್ತೂರು

ಒಂದಲ್ಲ, ಎರಡಲ್ಲ, ಹತ್ತಾರು ಬಾರಿ ಲೆಕ್ಕ ಮಾಡಿ ನೋಡಿದೆ. 25ಕ್ಕಿಂತ ಕಡಿಮೆಯಾಗುವುದೇ ಇಲ್ಲ. ಮತ್ತೆ ಮತ್ತೆ ಲೆಕ್ಕ ಮಾಡಿ ಅದೇ ಉತ್ತರ ಬಂದಾಗ ಒಂದಿಷ್ಟು ಖುಷಿ ಮತ್ತು ದಿಗಿಲು ಜೊತೆಯಾಯಿತು.

ಮುಂಜಾನೆ ಎದ್ದಾಗಲೇ 4 ಮೆಸೆಜ್‌ಗಳು ಬರ್ತ್‌ಡೇ ವಿಷ್‌ ಮಾಡಲು ಕಾಯುತ್ತಿದ್ದವು. ಸ್ವಲ್ಪ ಸಮಯವಾದಾಗ ಮತ್ತೆ ಒಬ್ಬರು ಮೆಸೆಜ್‌ ಮಾಡಿದರು. ಸ್ವಲ್ಪ ಹೊತ್ತಾದಾಗ ಗೆಳೆಯ ಸೂರ್ಯ ಕಾಲ್‌ ಮಾಡಿ ವಿಷ್‌ ಮಾಡಿದ. ಮೊಬೈಲ್‌ನ ಬ್ರೌಸರ್‌ ಆನ್‌ ಮಾಡಿ ನೋಡಿದಾಗ ಸುಮಾರು ಬರ್ತ್‌ಡೇ ವಿಷ್‌ಗಳು ಬಂದಿದ್ದವು. ಆಫೀಸ್‌ಗೆ ಹೋಗಿ ನೋಡಿದಾಗ ಫೇಸ್‌ಬುಕ್‌ನಲ್ಲಿ 19 ಜನ, ಆರ್ಕುಟ್‌ನಲ್ಲಿ 32 ಜನ ಬರ್ತ್‌ಡೇ ವಿಷ್‌ ಮಾಡಿ ನನಗೆ 25 ವರ್ಷ ಮುಗೀತು ಅಂತ ಕನ್‌ಫರ್ಮ್‌ ಮಾಡಿದ್ರು. ಅದರಲ್ಲಿ ನನ್ನ ಆತ್ಮೀಯ ಸ್ನೇಹಿತರು, ನನಗಿಂತ ಹಿರಿಯರು, ಕಿರಿಯರು, ಜೀವನದಲ್ಲಿ ಬಹಳಷ್ಟು ಸಾಧಿಸಿದವರೂ ಎಲ್ಲರೂ ಇದ್ದರು. ಯಾಕೋ ತುಂಬಾ ಖುಷಿಯಾಗಿಬಿಟ್ಟಿತು. ಅಮ್ಮನಿಗೆ ಫೋನ್‌ ಮಾಡಿ ವಿಷಯ ತಿಳಿಸಿದೆ. ಇಲ್ಲಿ ನೀನು ಇರುತ್ತಿದ್ದರೆ ಪಾಯಸ ಮಾಡಬಹುದಿತ್ತು ಅಂತ ಹೇಳಿ ಅವಳೂ ಕನ್‌ಫರ್ಮ್‌ ಮಾಡಿ ಬಿಟ್ಟಳು. ಅಣ್ಣನಿಗೆ ಕಾಲ್‌ ಮಾಡಲಿಲ್ಲ. ಯಾಕೆಂದರೆ ಕಳೆದ 5ರಂದು ಆತನ ಬರ್ತ್‌ಡೇ ಮುಗಿದಿತ್ತು. ಆತನಿಗೆ ವಿಷ್‌ ಮಾಡಲು ಮರೆತಿದ್ದೆ.

ಆಫೀಸ್‌ನಲ್ಲಿ ಕೀಬೋರ್ಡ್‌ನ ಮೇಲೆ ನನಗೊಂದು ವಿಶಿಷ್ಠ ಗಿಫ್ಟ್‌ ಕಾದಿತ್ತು. ಚಂದದ ದೊಡ್ಡ ಪ್ಲಾಸ್ಟಿಕ್‌ ಕವರ್‌, ಅದರೊಳಗೆ ಎ4 ಸೈಜ್‌ ಕಾಗದದಲ್ಲಿ ಹ್ಯಾಪಿಬರ್ತ್‌ ಡೇ ಅಂತ ಪ್ರಿಂಟ್‌, ಒಳಗಡೆ ಅಚ್ಚರಿಯ ಉಡುಗರೆಗಳು. ಅಂದ್ರೆ ಇಂಕ್‌ ಖಾಲಿಯಾಗಿರುವ ಪೆನ್ನು ಇತ್ಯಾದಿ. ಅವರು ಅಂತಹ ವಿಶಿಷ್ಠ ಗಿಫ್ಟ್‌ ನೀಡಲು ಕಾರಣ ಅವರ ಬರ್ತ್‌ಡೇಗೆ ನಾನೂ ಹಾಗೇ ಮಾಡಿದ್ದೆ. ಅಂದ್ರೆ ಪುಟ್ಟ ಕಾಗದದಲ್ಲಿ ಹ್ಯಾಪಿ ಬರ್ತ್‌ಡೇ ಅಂತ ಬರೆದು `ನಿನ್ನ ಜನ್ಮದಲ್ಲಿ ಇಂತಹ ಗಿಫ್ಟ್‌ ಯಾರಾದರೂ ಕೊಟ್ಟಿದ್ದಾರಾ? ಅಂತ ಕೊಚ್ಚಿಕೊಂಡಿದ್ದೆ. ಅವರು ಅಷ್ಟೇ ನನ್ನ ಜೀವನದಲ್ಲಿ ನನಗೆ ಯಾರೂ ನೀಡದಂತಹ ವಿಶಿಷ್ಠ ಗಿಫ್ಟ್‌ ನೀಡಿ ನನ್ನನ್ನು ಆಶ್ಚರ್ಯಗೊಳಿಸಿದ್ದರು. ಮತ್ತಷ್ಟು ಓದು »

20
ಜನ

ಬೇಕಾಗಿದ್ದಾರೆ!

ಹೇಮ ಪವಾರ್

ಮದುವೆ ಆಗೋದು ಅಂತ ತೀರ್ಮಾನಿಸಿ ಬಿಟ್ಟಿದೀನಿ! ಬಂದ ’ಗಂಡು’ (ಗುಂಡು?) ಗಳನ್ನೆಲ್ಲ,
ಸ್ಟೀಲ್ ಬಿಂದಿಗೆ, ಹಿತ್ತಾಳೆ ಹಂಡೆ, ತೊಳೆದ ಕೆಂಡ, ನರಸಿಂಹರಾಜು ಮುಖ, ಅಂಬರೀಷ್
ಸೊಂಟ ಅಂತೆಲ್ಲ ಹೆಸರಿಟ್ಟು ರಿಜೆಕ್ಟ್ ಮಾಡ್ತಿದ್ದವಳು ಈಗ ಇದ್ದಕ್ಕಿದ್ದಂತೆ ಮದುವೆ
ಆಗೋದು ಅಂತ ತೀರ್ಮಾನಿಸಿ ಬಿಟ್ಟಿದ್ದೀನಿ. ಬುದ್ದನಿಗೆ ಬೋಧಿವೃಕ್ಷದ ಕೆಳಗಡೆ ಆದ ಹಾಗೆ
ನನಗೂ ನಮ್ಮ ಅಡುಗೆಮನೆಲಿ ಗ್ನಾನೋದಯ ಆಗಿ ಹೋಗಿದೆ. ನನ್ನಮ್ಮ ತನ್ನ ಪುಣ್ಯದ
ಅಕೌಂಟನ್ನು ಕ್ರೆಡಿಟ್ ಮಾಡಿಕೊಳ್ಳಲು ದೇವಸ್ಥಾನಗಳಿಗೆ ಹೊರಟು ಇಂದಿಗೆ ವಾರವಾಯಿತು.
ನಂಬುವ ಮಾತೇ ಅಲ್ಲ ಆದರೂ ನನ್ನಂತ ನಾನೇ ಈ ಒಂದು ವಾರವೂ ನನ್ನ ಬೆಳಗಿನ ತಿಂಡಿಯನ್ನು
ಬಲಿಕೊಟ್ಟಿದ್ದೇನೆ. ಈಗೊಂದು ವಾರದಿಂದ ಎದ್ದು ತಿಂಡಿ ಮಾಡಿಕೊಂಡು ತಿನ್ನುವುದಿರಲಿ,
ಯಾರಾದರೂ ಮಾಡಿಟ್ಟಿದ್ದರೂ ತಿನ್ನಲು ಸಮಯವಿಲ್ಲದಷ್ಟು ಲೇಟಾಗಿ ಹೋಗಿ, ಅರ್ಧಗಂಟೆ
ತಡವಾಗಿ ಆಫೀಸ್ ಸೇರಿ ಕಂಪ್ಯೂಟರ್ ನೊಳಗೆ ಕಳೆದು ಹೋದರೆ, ಮತ್ತೆ ತಿಂಡಿ
ತಿಂದಿಲ್ಲವೆಂದು ನೆನಪಾಗುವುದು ಊಟದ ಸಮಯಕ್ಕೆ. ಯಾವುದೇ ಡಯಟ್ಟಿನ ಸಹಾಯವಿಲ್ಲದೆ
ಅನಾಮತ್ತು ೨ ಕೆಜಿ ತೂಕ ಇಳಿಸಿಬಿಟ್ಟಿದ್ದೇನೆ.ಮುಂದೆ ಹೀಗಾಗಬಾರೆದೆಂಬ
ಮುನ್ನೆಚ್ಚರಿಕೆಗಾಗಿಯೇ ಚೆನ್ನಾಗಿ ಅಡುಗೆ ಬಲ್ಲ ಹುಡುಗನನ್ನು ಹುಡುಕಿ
ಮದುವೆಯಾಗಿಬಿಡಬೇಕೆಂದಿದ್ದೇನೆ. ಹೀಗೆಂದ ತಕ್ಷಣ ನನ್ನನ್ನು ಸಮಾನತೆ, ಸ್ತ್ರೀವಾದಿ
ಎಂದೆಲ್ಲ ಬ್ರಾಂಡ್ ಮಾಡಿಬಿಡಬೇಡಿ. ಚೆನ್ನಾಗಿ ಅಡುಗೆ ಬರುವ ಯಾವ ಹುಡುಗನೂ ನನ್ನ ಕೈಯ
ಅಡಿಗೆಯನ್ನು ತುಂಬಾ ದಿನ ಸಹಿಸಿಕೊಳ್ಳಲಾರನೆಂಬ ಕಾನ್ಫಿಡೆನ್ಸ್ ನಿಂದ ಈ
ಮಾತನ್ನು ಹೇಳುತ್ತಿದ್ದೇನೆ.

ಅಡುಗೆಮನೆ ಅನ್ನೋದು ಹುಡುಗಿಯರಿಗೆ ಅದೇಕೆ ಬ್ರಾಂಡ್ ಮಾಡಿದ್ದಾರೋ, ಏನೇ ಇದ್ದರೂ ನಾನು
ಮತ್ತು ಅಡುಗೆ ಎರೆಡೂ ವಿರುದ್ದ ಪದಗಳು. ಕಷ್ಟಪಟ್ಟು ವಾಂಗಿಭಾತ್ ಮಾಡುವುದನ್ನು
ಕಲಿತು, ಮನೆಗೆ ಬಂದ ಅತಿಥಿಗಳಿಗೆ ಒಮ್ಮೆ ಕೊಟ್ಟರೆ, ಪುಳಿಯೋಗರೆಗೆ ಸ್ವಲ್ಪ ಹುಳಿ
ಕಡಿಮೆ ಹಾಕಬೇಕಿತ್ತು ಎಂದಾಗ, ಅವರನ್ನೇ ಹುಣಸೇಹಣ್ಣಿನಂತೆ ಕಿವುಚಿಬಿಡುವ
ಮನಸ್ಸಾಗಿತ್ತು. ಅಪ್ಪನಿಗೆ ಅಮ್ಮ ಮನೆಯಲ್ಲಿ ಇಲ್ಲದಾಗ ಕಾಫಿ ಮಾಡಿಕೊಡಲೋ ಅಥವಾ ಟೀ
ಕುಡೀತೀರ ಎಂದು ಕೇಳಿದರೆ, ಯಾವುದನ್ನಾದರೂ ಮಾಡು ಮಗಳೇ ನೀ ಮಾಡಿದರೆ ಎರೆಡು ಒಂದೇ ತರ
ಇರುತ್ತೆ ಎಂದಂದು ನಗುತ್ತಾರೆ. ನಾನು ಮಾಡಿದ ಚಪಾತಿ ಯಾವಾಗಲೂ ಆಸ್ಟ್ರೇಲಿಯ ಮ್ಯಾಪ್
ತರಹ ಇರುತ್ತದೆಂದು ಅಕ್ಕನ ಪುಟ್ಟ ಮಗಳು ಹಿಯ್ಯಾಳಿಸುತ್ತಾಳೆ. ಅಲ್ಲರೀ ಆಸ್ಟ್ರೇಲಿಯ
ಮ್ಯಾಪ್ ಆದರೇನು ಇಂಡಿಯಾ ಮ್ಯಾಪ್ ಆದರೇನು ಮುರಿದೇ ತಾನೆ ತಿನ್ನುವುದು. ಹೊಟ್ಟೆ ಒಳಗೆ
ಏನು ಶೇಪ್ ಸಮೇತ ಹೋಗತ್ತ? ಬುದ್ದಿಇಲ್ಲ ಜನಕ್ಕೆ. ನನ್ನ ಹೊಸ ಪ್ರಯತ್ನವನ್ನು ಯಾರ
ಕೈಲದಾರೂ ಹೊಗಳಿಸಬೇಕೆಂದು ಮೊನ್ನೆ ಪಕ್ಕದ ಮನೆಯ ಹುಡುಗನಿಗೆ ನಾನು ಮಾಡಿದ್ದ
ತಿಂಡಿಯನ್ನು ಕಪ್ ನಲ್ಲಿ ಹಾಕಿಕೊಟ್ಟೆ, ’ಚೂರು ಸಪ್ಪೆ ಇತ್ತು ಅಕ್ಕ, ಪಾಯಸದಲ್ಲೆಲ್ಲೂ
ಬೇಳೆ ಕಾಣಲಿಲ್ಲ, ಆದರೂ ಚೆನ್ನಾಗಿದೆ’ ಎಂದುಬಿಟ್ಟ, ನನಗೆ ನಖಶಿಖ ಅಂತ ಉರಿದು
ಹೋಯಿತು, ನಾನು ಮಾಡಿದ್ದಿದ್ದು ಜಾಮೂನು, ಅದು ಗುಂಡಗೆ ಉಳಿಯದೇ ತನ್ನ ಶೇಪ್
ಕಳೆದುಕೊಂಡು ಪಾಕದಲ್ಲಿ ಕರಗಿ ಹೋಗಿತ್ತಷ್ಟೇ!! ಮತ್ತಷ್ಟು ಓದು »

19
ಜನ

ಹಿಂದಿ ಜ್ವರಕ್ಕೆ ತುತ್ತಾದ ವಿಜಯ ಕರ್ನಾಟಕ

ಪ್ರಿಯಾಂಕ್ ಬೆಂಗಳೂರು

೧೭ನೇ ಜನವರಿ ೨೦೧೧  ವಿಜಯ ಕರ್ನಾಟಕದಲ್ಲಿ “ವಿದೇಶೀಯರ ಹಿಂದಿ ಮೋಹ” ಎಂಬ ಹೆಸರಿನಡಿ ಒಂದು ಅಂಕಣ ಮೂಡಿ ಬಂದಿದೆ. ವಿದೇಶೀಯರು ಹಿಂದಿ ಕಲಿಯಲು ಆಸಕ್ತಿ ತೋರುತ್ತಿರುವುದು, ಕೇಂದ್ರ ಸರಕಾರವು ಜನವರಿ ಹತ್ತರಂದು ಹಿಂದಿ ದಿವಸ್ ಆಚರಿಸುವುದು, ಇತ್ಯಾದಿ ವಿಷಯಗಳನ್ನು ಮುಂದಿಟ್ಟು, ಕನ್ನಡಿಗರಲ್ಲಿ ಹಿಂದಿ ಕಲಿಕೆ ಬಗ್ಗೆ ಒಲವು ಮೂಡಿಸುವ ಒಂದು ಪ್ರಯತ್ನದಂತೆ ಈ ಅಂಕಣ ಕಾಣುತ್ತದೆ. ಹಿಂದಿಗೆ ಎಲ್ಲಿಲ್ಲದ ಬೇಡಿಕೆಯಿದೆ ಎಂದು ಹೇಳುವ ಅವಸರದಲ್ಲಿ, ವ್ಯವಸ್ಥಿತ ಹಿಂದಿ ಹೇರಿಕೆಯಿಂದ ಕನ್ನಡಕ್ಕಾಗುತ್ತಿರೋ ತೊಂದರೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಕೆಲಸವನ್ನು ವಿಜಯ ಕರ್ನಾಟಕ ಮರೆತಂತಿದೆ. ಈ ಅಂಕಣ ಓದಿದ ಕನ್ನಡಿಗರಲ್ಲಿ “ವಿಜಯ ಕರ್ನಾಟಕ ಹಿಂದಿ ಹೇರಿಕೆಯ ಪರ ಇದೆಯೇ?” ಎಂಬ ಪ್ರಶ್ನೆ ಹುಟ್ಟಿರುವುದಂತೂ ಹೌದು.

ಅಂಕಣದಲ್ಲಿ ಹೇಳಲಾಗಿರುವ ಕೆಲವು ವಿಷಯಗಳಲ್ಲಿ ಎರಡನ್ನು ಇಲ್ಲಿ ಹೆಸರಿಸಿ, ಆ ವಿಷಯಗಳು ಕನ್ನಡಕ್ಕೆ ಹೇಗೆ ಕುತ್ತು ಎಂಬುದನ್ನು ವಿವರಿಸಲಾಗಿದೆ. ಮತ್ತಷ್ಟು ಓದು »

18
ಜನ

ಹುಡುಗರೇ ಹುಶಾರ್…!!!

ಸಾತ್ವಿಕ್ ಎನ್ ವಿ

ಹುಡುಗಿಯರ ಹಿಂದೆ ಲವ್ ಲವ್ ಅಂತ ಗಂಟು ಬೀಳೋ ಮಜ್ನುಗಳಿಂದ ತಪ್ಪಿಸಿ ಕೊಳ್ಳಲು ಹುಡುಗಿಯರ ಹತ್ರ ಹಲವಾರು ಅಸ್ತ್ರಗಳಿರುತ್ತವೆ. ಒಂದೋ ರಾಖಿ ಕಟ್ಟಿ ಬಿಡುವುದು ಇಲ್ಲವೇ ಮೊದಲ ಪರಿಚಯದಲ್ಲೇ ಅಣ್ಣ ಅಂದು ಬಿಡುವುದು!… ರಾಖಿ ಕಟ್ಟುವ ಪ್ರಯೋಗ ಎಲ್ಲ ಟೈಮಲ್ಲೂ ಯೂಸ್ ಅಗುತ್ತೆ ಅಂತ ಏನೂ ಇಲ್ಲ. ಯಾಕೆಂದರೆ ರಾಖಿ ಕಟ್ಟಲು ಹೋದ ಮೂಮೆಂಟನ್ನೇ ಪ್ರಪೋಸ್ ಮಾಡೋ ಅವಕಾಶವಾಗಿ ಪರಿವರ್ತಿಸಿಕೊಂಡ ಹೈಕಳ ಪಟ್ಟಿ ದೊಡ್ಡದಿದೆ. ಹೀಗಾಗಿ ರಾಖಿ ಕಟ್ಟೊ ವಿಷಯ ಬಿಟ್ಟು ಹುಡುಗಿಯರು ಅಯ್ದುಕೊಂಡ ಮತ್ತೊಂದು ಹಾದಿಯೇ ಮೊದಲ ಪರಿಚಯದಿಂದ ಕಂಡ ಕಂಡಲ್ಲಿ ಆತನನ್ನು ಅಣ್ಣನೆಂದು ಕರೆದು ಪ್ರತಿಷ್ಠಾಪಿಸಿ ಬಿಡುವುದು. ಹೀಗೆ ಹೇಳಿದ ಮೇಲೆ ಹುಡುಗ ಬಾಯಿ ಬಿಡೊ ಹಾಗಿಲ್ಲ. ಅಂತಹ ಅಣ್ಣ ಬ್ಲಾಕ್ ‘ಮೇಲ್’ ತಂತ್ರವಿದು. ಅದನ್ನು ಮೀರಿ ಹೊರಟನೋ ಪೋಲಿ ಅನ್ನೋ ಇಮೇಜ್ ಜತೆಗೆ ಹುಡುಗಿಯ ಸಂಪರ್ಕವೂ ತಪ್ಪಿ ಹೋಗುತ್ತೆ. ಇಂಥ ಸಂದರ್ಭದಲ್ಲಿ ಹುಡುಗನಿಗೆ ಉಳಿಯೋ ಆಯ್ಕೆ ಅಂದ್ರೆ ಈ ಮೊದಲು ಇದೇ ತಂತ್ರಕ್ಕೆ ಬಲಿಯಾದಾಗ(?!) ದೊರಕಿರುವ ಹತ್ತಾರು ತಂಗಿಯರ ಜತೆಗೆ ಹನ್ನೊಂದನೆಯದ್ದು ಸೇರಿಸಿ ತಮ್ಮ ಮುಂದಿನ ಬೇಟೆಗೆ ಹೊರಡುವುದು.

ಇನ್ನು ನಮ್ಮ ಹುಡುಗರೋ ಕಂಡ ಎಲ್ಲ ಹುಡುಗಿಯರನ್ನು ಲವ್ ಮಾಡುವಷ್ಟು ವಿಶಾಲ ಹೃದಯಿಗಳು. ಅದಕ್ಕಾಗಿಯೇ ‘ ಏನಮ್ಮಾ/ ಏನ್ ಮಗ (?) ನಿನ್ನ ತಂಗಿಯರೆಲ್ಲ ಹೇಂಗಿದ್ದಾರೆ’ (ಇದು ಅವನ ಕ್ಲಾಸ್ನಲ್ಲಿರುವ ಹುಡುಗಿಯರ ಬಗ್ಗೆ ಕೇಳೊ ಸ್ಟೈಲು. ನಿಜ ತಂಗಿಯ ಬಗ್ಗೆ ಕೇಳಿದರೆ ತನ್ನ ಬೆನ್ನಿಗೆ ಮೂಲ ಅನ್ನೊವ ವಿಷಯ ಆತನಿಗೆ ತಿಳಿಯದೆ?) ಆಂತ ಮಾತು ಪ್ರಾರಂಭಿಸುವ ಮೂಲಕ ಸ್ನೇಹಿತನಲ್ಲಿ ಸೋದರ ಭಾವನೆ ಬಿತ್ತುವ ಮತ್ತು ತನ್ನ ಆಯ್ಕೆಯನ್ನು ಸ್ವತಂತ್ರವಾಗಿಡುವ ತಂತ್ರವಿದು. ಬಹುಶ: ಬೆಂದಕಾಳೂರಿನ ಹುಡುಗರ ಬಾಯಲ್ಲಿ ಯಾವಾಗಲೂ ಕೇಳಿ ಬರುವ ‘ಮಚ್ಚ’ (ಬಾವ) ಎಂಬ ಶಬ್ದ ಇದೇ ಹಿನ್ನೆಲೆಯಿಂದ ಬಂದಿರಬಹುದೇ ಎಂಬುದನ್ನು ನಮ್ಮ ಸಂಶೋಧಕರು ದೃಢಪಡಿಸಿಲ್ಲ. ಮತ್ತಷ್ಟು ಓದು »

16
ಜನ

ನಮ್ಮ ರಾಷ್ಟ್ರಧ್ವಜ ಅಲ್ಲಿ ಹಾರಬಾರದಾ?

ರಾಕೇಶ್ ಶೆಟ್ಟಿ

ವಿಶ್ವಸಂಸ್ಥೆಯಲ್ಲಿ ಭಾರತೀಯ ರಾಯಭಾರಿ ಭಾಷಣ ಶುರು ಮಾಡುತ್ತಾ,

“ನಾನು ಕಾಶ್ಮೀರ ಸಮಸ್ಯೆಯ ಬಗ್ಗೆ ಮಾತನಾಡುವುದಕ್ಕಿಂತ ಮೊದಲು ‘ಋಷಿ ಕಶ್ಯಪ’ರ ಬಗ್ಗೆ ಹೇಳಲಿಚ್ಛಿಸುತ್ತೇನೆ. ಅವರಿಂದಾಗಿಯೇ ಕಣಿವೆಗೆ ‘ಕಾಶ್ಮೀರ’ ಎಂಬ ಹೆಸರು ಬಂತು. ಒಮ್ಮೆ ಅವರು ಹೀಗೆ ಕಾಶ್ಮೀರ ಕಣಿವೆಯಲ್ಲಿ ಸಾಗುವಾಗ ‘ಕಲ್ಲು ಬಂಡೆ’ಗಳ ನಡುವೆ ಹರಿಯುತಿದ್ದ ಜಲಧಾರೆಯನ್ನು ನೋಡಿ, ಸ್ನಾನ ಮಾಡುವ ಮನಸ್ಸಾಯಿತು. ಬಟ್ಟೆಯನ್ನು ಕಳಚಿ ಬಂಡೆಗಳ ಮೇಲಿಟ್ಟು ‘ಕಶ್ಯಪ’ರು ಸ್ನಾನ ಮುಗಿಸಿ ನೋಡಿದರೆ, ಅವರು ಬಂಡೆಯ ಮೇಲಿಟ್ಟಿದ್ದ ‘ಬಟ್ಟೆ’ಯನ್ನು ‘ಪಾಕಿಸ್ತಾನಿ’ಯೊಬ್ಬ ಕದ್ದೊಯ್ದಿದ್ದ!”

ಅವರು ಇಷ್ಟು ಹೇಳಿ ಮುಗಿಸುವಷ್ಟರಲ್ಲಿ ‘ಪಾಕಿಸ್ತಾನಿ ರಾಯಭಾರಿ’ ಕುಳಿತಲ್ಲಿಂದ ಚಂಗನೆ ಜಿಗಿದೆದ್ದು,
“ನೀವ್ ಏನ್ ಮಾತಾಡ್ತಾ ಇದ್ದೀರಾ? ಆ ಕಾಲದಲ್ಲಿ ‘ಪಾಕಿಸ್ತಾನಿ’ಗಳು ‘ಕಾಶ್ಮೀರ’ದಲ್ಲಿ ಇರಲೇ ಇಲ್ಲ!! ”

ನಸು ನಕ್ಕ ಭಾರತೀಯ ರಾಯಭಾರಿ, “ಕಾಶ್ಮೀರ ಯಾರಿಗೆ ಸೇರಿದ್ದು ಅನ್ನೋ ವಿಷಯವನ್ನ ಸ್ಪಷ್ಟಪಡಿಸಿರುವುದರಿಂದ ನಾನು ನನ್ನ ಮಾತನ್ನು ಮುಂದುವರೆಸುತ್ತೇನೆ” 🙂
(‘ಕಾಶ್ಮೀರ’ಕ್ಕೆ ಸಂಬಂಧಿಸಿದಂತೆ ‘ವಿಶ್ವ ಸಂಸ್ಥೆ’ಯಲ್ಲಿ ನಡೆದ ಘಟನೆಯಿದು ಅನ್ನೋ ಮಿಂಚೆಯಲ್ಲಿ ಬಂದ ಜೋಕ್ ಇದು)

Jokes Apart…

ಮತ್ತಷ್ಟು ಓದು »

14
ಜನ

ಬೆಂಕಿಯಲ್ಲಿ ಅರಳುವ ಹೂವುಗಳು…

ಇರ್ಷಾದ್ ವೇಣೂರು

ಫಿಟ್ಟಿಂಗ್ ನಲ್ಲಿದೆ ಬದುಕು…

ಎಲ್ಲಿಗೋ ಹೊರಟಿದ್ದಾಗ ವಾಹನ ಇದ್ದಕ್ಕಿದ್ದಂತೆ ಕೈಕೊಡುತ್ತದೆ. ಅದುವರೆಗೂ ಲೀಟರಿಗೆ ಸರಿಯಾಗಿ 55-60 ಮೈಲೇಜ್ ಕೊಡುತ್ತಿದ್ದ ಬೈಕ್ ಅಂದು ಮಾತ್ರ 35 ಮೈಲೇಜ್ ಕೊಟ್ಟು ಅರ್ಧ ದಾರಿಯಲ್ಲಿ ಇಂಗು ತಿಂದ ಮಂಗನ ಸ್ಥಿತಿ ತರಿಸುತ್ತದೆ. ನಿನ್ನೆಯಷ್ಟೇ ಗಾಳಿ ಎಷ್ಟಿದೆ ಎಂದು ಚೆಕ್ ಮಾಡಿ ಮನೆಗೆ ಬಂದು ಶೆಡ್ ನಲ್ಲಿ ನಿಲ್ಲಿಸಿದ್ದ ಕಾರು ಬೆಳಿಗ್ಗೆ ಆಫೀಸಿಗೆ ಹೋಗಬೇಕು ಎಂದು ನೋಡಿದರೆ ಟಯರ್ ಠುಸ್ಸಾಗಿರುತ್ತದೆ. ಯಾವತ್ತೂ ಒಂದೇ ನಿಮಿಷದಲ್ಲಿ ಸ್ಟಾರ್ಟ್ ಆಗುತ್ತಿದ್ದ ಸ್ಕೂಟರ್ ಇಂದು ಜಪ್ಪಯ್ಯಾ ಎಂದರೂ ಸ್ಟಾರ್ಟ್ ಆಗುತ್ತಿಲ್ಲ. ಇಂತಹ ಸಮಸ್ಯೆಗಳು ಎದುರಾದಾಗ ನೆನಪಾಗುವುದೇ ನಮ್ಮೂರಿನ ಫಿಟ್ಟರ್.
ಅದುವರೆಗೂ ಇದ್ದದ್ದೆಲ್ಲಾ ಮಾಡಿ, ದಾರಿ ಹೋಕರಿಗೆ ದಮ್ಮಯ್ಯಾ ಹಾಕಿ ದೂಡಲು ಸಹಾಯ ಮಾಡುವಂತೆ ವಿನಂತಿಸಿ ಏನೆಲ್ಲಾ ಸರ್ಕಸ್ ಮಾಡಿದ್ದರೂ ಸ್ಟಾರ್ಟ್ ಆಗದ ಕಾರು ಫಿಟ್ಟರ್ ಕೈ ಸೋಂಕಿದ ಕೂಡಲೇ ಗುಯ್ ಗುಯ್ ಎನ್ನುತ್ತದೆ. ಒಂದರ್ಥದಲ್ಲಿ ಇವರೆಲ್ಲಾ ಪಲ್ಸ್ ಹಿಡಿದು ಪರೀಕ್ಷಿಸುವ ಡಾಕ್ಟರ್ ತರಹದವರು. ಮುಟ್ಟಿದ ಕೂಡಲೇ ನಾಚಿಕೆ ಮುಳ್ಳು ಮುನಿಯುವಂತೆ ಇವರ ಕೈ ತಾಗಿದ ಕೂಡಲೆ ಸಮಸ್ಯೆ ಸರಿಯಾಗುತ್ತದೆ. ಅಷ್ಟು ಚೆನ್ನಾಗಿ ಯಂತ್ರದ ಭಾಷೆಯನ್ನು ಅರ್ಥೈಸಿಕೊಂಡಿರುವ ಫಿಟ್ಟರ್ ಗಳಿದ್ದಾರೆ. ಮತ್ತಷ್ಟು ಓದು »
13
ಜನ

ಎಷ್ಟೊತ್ತು ನಿನ್ನ ಅಲಂಕಾರ ?

ಅರವಿಂದ್

ಮೊನ್ನೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನಕ್ಕೆ ನಾನು ನನ್ನ ಹೆಂಡತಿ ಹೋಗುವ ತಯಾರಿ ನಡೆಯುತ್ತಿತ್ತು. ಸಂಜೆ ನಾಲ್ಕಕ್ಕೆ ಹೊರಡುವ ನನ್ನ ತರಾತುರಿಗೂ ಅವಳ ಅಲಂಕಾರ ಪರಾಕಾಷ್ಟೆಗೂ ಸಮಯ ಐದುವರೆಯಾಗಿತ್ತು. ಅಂತು ಹೊರಡುವ ಭಾಗ್ಯ ಜೊತೆಗೆ ದೊಡ್ಡ ಗಣಪನಿಗೆ ನಮ್ಮ ದರ್ಶನದ ಭಾಗ್ಯ ನೆನೆದು ಕಿರುನಗೆ ಬೀರುತ್ತಾ, ಬೆಂಗಳೂರಿಗೆ ಹೊಸಬಳಾದ ನನ್ನಾಕೆ ರಸ್ತೆಯಲ್ಲಿ ಸಿಗುವ ಅಷ್ಟು ಕಟ್ಟಡಗಳು, ಪಾರ್ಕುಗಳು, ಸಿನಿಮಾ ಥಿಯೇಟರ್ಗಳು, ಅಂಗಡಿ, ಶಾಪಿಂಗ್ ಮಾಲ್ ಎಲ್ಲವನ್ನು ಕುತೂಹಲದಿಂದ ನೋಡುತ್ತಾ, ಪ್ರತಿಯೊಂದಕ್ಕೂ ವಿವರಣೆ ಕೇಳುತ್ತಾ, ಮತ್ತದನ್ನು ತನ್ನ ಊರುಗಳಿಗೆ ಹೊಲಿಸುತಾ ಸಾಗಿತು, ಸಂಜೆ ಆರಕ್ಕೆ ತಲುಪಿದ್ದಾಯಿತು.

ಅವಳ ಮನಸ್ಸಿನಲ್ಲಿ ಬೆಂಗಳೂರು ಏನು ಅಲ್ಲ, ನ್ಯೆಸರ್ಗಿಕ ಸೌಂದರ್ಯವಿಲ್ಲ, ಅಲ್ಲೆಲ್ಲೂ ಬೆಟ್ಟ ಗುಡ್ಡವಿಲ್ಲ, ನದಿ ತೊರೆಗಳಿಲ್ಲ, ನೇಗಿಲಿಲ್ಲ, ಉಳುವ ಯೋಗಿಯಿಲ್ಲ, ಹಸಿರು ಉಹೂ ಅದ ವಾಸನೆಯೇ ಇಲ್ಲ, ಪ್ರಾಣಿ ಪಕ್ಷಿಗಳಿಲ್ಲ, ಇದ್ದದ್ದು ಒಂದಷ್ಟು ಕಾಗೆಗಳಷ್ಟೇ, ಅದು ಎಲ್ಲೋ ದೂರಕ್ಕೆ ಅಕಸ್ಮಾತಾಗಿ ಬೆಳಯಲು ಬಿಟ್ಟಿದ್ದ ಮರಗಳಲ್ಲಿ, ಆಕಾಶದಲ್ಲಿ, ಮತ್ತೆಲ್ಲೋ ಹೊಟ್ಟೆಹೊರೆಯುವ ಕಾಯಕದಲ್ಲಿ, ಮಲ್ಲೇಶ್ವರಂ ದಾಟಿ ಆನಂದ್ ರಾವ್ ಸರ್ಕಲ್ಲಿಗೆ ಬರುವಾಗ ಇವಳನ್ನು  ಫ್ಲ್ಯೆಓವರ್ ಮೇಲೆ ಕರೆದುಕೊಂಡು ಹೋಗುವ ಮನಸ್ಸಾಗಿ ಕೃಷ್ಣ ಪ್ಲೋರ್ ಮಿಲ್ ಕಡೆಗೆ ಗಾಡಿ ತಿರುಗಿಸಿದ್ದಾಯಿತು, ನೋಡೇ ಈಗ ಪ್ಹ್ಲ್ಯೇಓವರ್ ಬರುತ್ತೆ ಅದು ಮುಗಿಯುವ ವೇಳೆಗೆ ಪಕ್ಕದಲ್ಲೇ ರೇಸ್ ಕೋರ್ಸ್ ಸಿಗುತ್ತೆ ಅಂದೇ, ಯಾಕೋ ಏನು ಮಾತಾಡಲಿಲ್ಲ, ನನ್ನ ಹೆಮ್ಮೆಯ ಬೆಂಗಳೂರು ನೋಡ್ತಿದ್ದಾಳೆ ಅನಿಸಿ, ಸುಮ್ಮನೆ ಗಾಡಿ ಚಲಾಯಿಸುತ್ತಿದ್ದೆ, ಪ್ಹ್ಲ್ಯೇ ಓವರ್ ಇಳಿಯುವಾಗ ಕಾಣುವ ರೇಸ್ ಕೋರ್ಸ್ ತೋರಿಸಲು ಗಾಡಿ ಬಾಡಿಗೆ ಹಾಕಿ ನಿಲ್ಲಿಸಿದೆ, ಇದೆ ಕಣೆ ರೇಸ್ ಕೋರ್ಸ್ ಅಂದೇ, ಥೂ!!! ಇದೆನಾ ನಿಮ್ಮ ಬೆಂಗಳೂರು ಒಂದು ಗಿಡ ಮರ ಇಲ್ವೆಲ್ಲಲ್ರಿ, ಬರ ಬಂದ ಬಯಲುಸೀಮೆಯಾಗಿದೆ ನಿಮ್ಮೂರು, 🙂 ನಾನು ಅವಳಿಗೆ ರೇಸ್ ಕೋರ್ಸ್ ಬಗ್ಗೆ ಹೇಳೋಕೆ ಹೊರಟೆ, ಸುಮ್ನಿರಿ ಸಾಕು ಕೆಲಸಕ್ಕೆ ಬರದ ಕುದುರೆ ಜೂಜಿಗೆ ಇಷ್ಟು ಜಾಗವಿದೆ, ಒಂದಷ್ಟು ಕೆರೆ ಹೊಲ ಇರೋಕೆ ಜಾಗ ಇಲ್ಲ ಅಂದದ್ದಾಯಿತು. ಮತ್ತಷ್ಟು ಓದು »

13
ಜನ

ಆಂಗ್ ಸಾನ್ ಸೂಕಿ ಎಂಬ ಹೆಣ್ಣುಮಗಳಿಂದ ನಾವು ಕಲಿಯಬೇಕಾದದ್ದು !

ವಸಂತ್ ಶೆಟ್ಟಿ

ಬರ್ಮಾದ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ಆಂಗ್ ಸಾನ್ ಸೂ ಕಿಯ ಬಗ್ಗೆ ಚಿಕ್ಕಂದಿನಿಂದಲೂ ಬೇರೆ ಬೇರೆ ಪತ್ರಿಕೆಗಳಲ್ಲಿ ಓದುತ್ತಲೇ ಇದ್ದೆ. ತನ್ನ ನಾಡಿನ ಜನರ ಸ್ವಾತಂತ್ರ್ಯಕ್ಕಾಗಿ, ಅವರ ಹಕ್ಕುಗಳಿಗಾಗಿ ಹೋರಾಡುತ್ತ ಹೆಚ್ಚು ಕಡಿಮೆ ಬದುಕಿನ ಮುಕ್ಕಾಲು ಭಾಗ ಗೃಹ ಬಂಧನದಲ್ಲೇ ಕಳೆದ ಛಲಗಾರ್ತಿ ಈಕೆ. ಇತ್ತೀಚೆಗಷ್ಟೇ ಬಿಡುಗಡೆಗೊಂಡು ಆಚೆ ಬಂದ ಆಕೆಯ ಈ ಕೆಳಗಿನ ಮಾತುಗಳು ಏಳಿಗೆಗೆ ಕನ್ನಡವೊಂದನ್ನೇ ನೆಚ್ಚಿಕೊಂಡಿರುವ ಕೋಟ್ಯಾಂತರ ಅವಕಾಶವಂಚಿತ ಕನ್ನಡಿಗರ ನಡುವೆ “ಇಂಗ್ಲಿಷ್ ಮಾಧ್ಯಮದ ಶಿಕ್ಷಣ ಮತ್ತು ಅದು ಕೊಡ ಮಾಡುವ ಉದ್ಯೋಗ, ಜೀವನವಕಾಶದ ಪ್ರಯೋಜನ” ಪಡೆದುಕೊಂಡಿರುವ ಕೆಲವೇ ಕೆಲವು ಕನ್ನಡಿಗರ ಮನಸಿನಲ್ಲಿ ರಿಂಗಣಿಸಬೇಕಿದೆ. ಅಷ್ಟೇ ಅಲ್ಲ, ಸಂವಿಧಾನದ ಪ್ರಕಾರವೇ ಇಡೀ ಭಾರತದೆಲ್ಲೆಡೆ ಹಿಂದಿಯೇತರ ಜನರಿಗಿಂತ ಹೆಚ್ಚಿನ ಸವಲತ್ತು, ಸೌಕರ್ಯ ಪಡೆಯುತ್ತಿರುವ ಹಿಂದಿ ಭಾಷಿಕ ಭಾರತೀಯರ ಮನಸಲ್ಲೂ ಅವರ ಈ ಮಾತುಗಳು ಪ್ರತಿಧ್ವನಿಸಬೇಕಿದೆ:

The value systems of those with access to power and of those far removed from such access cannot be the same. The viewpoint of the privileged is unlike that of the underprivileged.

ಅಧಿಕಾರ, ಸವಲತ್ತು ಅನುಭವಿಸುತ್ತಿರುವ ಜನರು ನಂಬುವ ಮೌಲ್ಯ ವ್ಯವಸ್ಥೆ ಮತ್ತು ಅಧಿಕಾರ, ಸವಲತ್ತಿದಿಂದ ವಂಚಿತರಾಗಿರುವ ಜನರ ಮೌಲ್ಯ ವ್ಯವಸ್ಥೆ ಒಂದೇ ಆಗಿರುವುದಿಲ್ಲ. ಸವಲತ್ತು, ಹಕ್ಕು ಅನುಭವಿಸುತ್ತಿರುವ ಜನರ ನಿಲುವು ವಂಚಿತರಾದವರ ನಿಲುವಿಗಿಂತ ಯಾವತ್ತಿಗೂ ಬೇರೆಯೇ ಆಗಿರುತ್ತದೆ.

ಮತ್ತಷ್ಟು ಓದು »