ಮದ್ರಾಸ್ ಪ್ರೆಸಿಡೆನ್ಸಿಯಲ್ಲಿ ೧೯೩೭ರಲ್ಲಿ ನಡೆದ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ನ್ಯಾಷನಲ್ ಕಾಂಗ್ರೆಸ್ಸಿನ ರಾಜಗೋಪಾಲಚಾರಿಯವರು, ಶಿಕ್ಷಣದಲ್ಲಿ ‘ಹಿಂದಿ’ ಕಲಿಕೆಯನ್ನ ಕಡ್ಡಾಯ ಮಾಡಿಬಿಟ್ಟರು.ಅಷ್ಟು ಸಾಕಾಯ್ತು ಪೆರಿಯಾರ್ ನೇತೃತ್ವದಲ್ಲಿ ಶುರುವಾದ ಹೋರಾಟ ಮೂರು ವರ್ಷಗಳಷ್ಟು ಕಾಲ ನಡೆದು ಕಡೆಗೆ ೧೯೪೦ರಲ್ಲಿ ಬ್ರಿಟಿಷರು ಆ ನಿರ್ಧಾರವನ್ನ ವಾಪಸ್ ಪಡೆದ ಮೇಲಷ್ಟೇ ತಮಿಳುನಾಡು ಶಾಂತವಾಗಿದ್ದು.ಹಿಂದಿಯನ್ನ ರಾಷ್ಟ್ರ ಭಾಷೆ ಮಾಡುವ ನಾಯಕರ ಆಸೆಗೆ ಈ ಹೋರಾಟ ಭಂಗ ತರುವಲ್ಲಿ ತಮಿಳರ ಹೋರಾಟ ಯಶಸ್ವಿಯಾಗಿತ್ತು. ಮತ್ತಷ್ಟು ಓದು 
ರಾಷ್ಟ್ರಭಾಷೆಯಿಲ್ಲದ ರಾಷ್ಟ್ರದಲ್ಲಿ…
ಸುದ್ದಿ ಮಾತಿನ ಭಟ್ಟರು ಸುದ್ದಿಯದಾಗ…
ಸಾತ್ವಿಕ್ ಎನ್ ವಿ
‘ಸರ್, ಆಗಸತ್ತರಕ್ಕೆ ನೀವು ಬೆಳೆಸಿದ ಪತ್ರಿಕೆ ಇ೦ದೆ ಸದ್ದಿಲ್ಲದೆ ಹೊರಬರಲು ಕಾರಣವೇನು ? ಹೊಸ ಚಿ೦ತನೆಗಳು, ಮೊನಚಾದ ಬರಹಗಳು, ಅ೦ಕಣಗಳು ಒ೦ದೇ ಎರಡೇ..ಲವಲವಕೆ ಯ೦ತಹ ಹೊಸ ರೂಪವನ್ನು ಪತ್ರಿಕೆಗೆ ಪರಿಚಯಿಸಿದಿರಿ, ರಾಜಕಾರಣಿ ಗಳ ಮಾನ ಹರಾಜು ಹಾಕಿ ಪತ್ರಿಕೊಧ್ಯಮದ ಘನತೆ ಹೆಚ್ಚಿಸಿದಿರಿ…..ನೀವಿಲ್ಲದ ಪತ್ರಿಕೆ ಇನ್ನುಮು೦ದೆ ನೀರಸ…ನಿಮ್ಮೂದಿಗೆ ನಾವಿದ್ದೇವೆ..’
ಇಂಥ ಒಂದು ಕಾಮೆಂಟ್ ವಿಶ್ವೇಶ್ವರ ಭಟ್ಟರ ಫೇಸ್ ಬುಕ್ ನಲ್ಲಿ ಇದೆ ಅಂದ್ರೆ ಅವರ ಬರಹಗಳನ್ನು ಆರಾಧಿಸುವ ಜನ ಎಷ್ಟಿರಬಹುದೆಂದು ಯೋಚಿಸಿ. ಪತ್ರಿಕೆಯ ಸಂಪಾದಕನಾದವನಿಗೆ ಇದಕ್ಕಿಂತ ಹೆಮ್ಮೆ ಬೇಕೆ? ಒಂದು ಕಾಲವಿತ್ತು. ಪತ್ರಿಕೆಯ ಸಂಪಾದಕರ ಹೆಸರುಗಳನ್ನು ಪತ್ರಿಕೆಯ ಕಡೆಯ ಸಾಲುಗಳಲ್ಲಿ ಹುಡುಕಬೇಕಾಗಿತ್ತು. ಈ ಸಂಸ್ಕೃತಿಯನ್ನು ತಪ್ಪಿಸಿ ದಿನವೂ ಬರೆಯುವ ಯಾರಾದರೂ ಸಂಪಾದಕರಿದ್ದರೆ ಅದು ವಿಶ್ವೇಶ್ವರ ಭಟ್ಟರು ಮಾತ್ರ ಎಂಬಂತಾಗಿತ್ತು.
ಇದು ನಿತೀಶಣ್ಣನ ದರ್ಬಾರು!! ಕಾರುಬಾರು!!
ಕೆ ಎಸ್ ರಾಘವೇಂದ್ರ ನಾವಡ
ಛೇ!ಒಬ್ಬ ನಿತೀಶರ೦ಥವರೋ ಯಾ ನರೇ೦ದ್ರ ಮೋದಿಯ೦ಥವರೋ ಯಾರಾದರೂ ಒಬ್ಬ ಜನನಾಯಕ ನಮ್ಮ ಕರ್ನಾಟಕ ರಾಜಕೀಯದಲ್ಲಿ ಉದಯಿಸಬಾರದಿತ್ತೇ ಎ೦ದು ಒಮ್ಮೊಮ್ಮೆ ಕಾಲದ ಕನ್ನಡಿಗೆ ಅನ್ನಿಸುವುದು೦ಟು!ಆದರೆ ಏನು ಮಾಡುವುದು? ಕಾ೦ಗ್ರೆಸ್ಸೂ ಬೇಡ, ಕುಮಾರಣ್ಣನೂ ಬೇಡ ಅ೦ತ ಅವರಿಗೂ ಹಾಗೂ ನಮಗೂ ಒಮ್ಮೆ ಬದಲಾವಣೆಯ ಗಾಳಿ ಬೀಸಲೆ೦ಬ ಕಾರಣದಿ೦ದಲೋ ಯಾ ಒಳ ಮನಸ್ಸಿನಲ್ಲಿ ಭಾ.ಜ.ಪಾದ ಮೇಲಿದ್ದ ನಿರೀಕ್ಷೆ ಕಾತುರತೆಗಳಿ೦ದ ಮತ್ತು ಕುಮಾರಣ್ಣನಿ೦ದ ವ೦ಚನೆಗೊಳಗಾದ ಯಡಿಯೂರಪ್ಪನವರ ಮೇಲಿನ ಕರುಣೆಯಿ೦ದಲೋ ಮತದಾರರು ಎರಡೂವರೆ ವರ್ಷಗಳ ಹಿ೦ದೆ ಯಡಿಯೂರಪ್ಪನವರನ್ನು ಆರಿಸಿದರೆ, ಅವರೋ ಇವರನ್ನೆಲ್ಲಾ ಮೀರಿಸಿದರು!!ಕರ್ನಾಟಕದ ಸಮಸ್ತ ಜನತೆ ಬೇಸರದಿ೦ದ ನಿಟ್ಟುಸಿರು ಬಿಡುತ್ತಿರುವ ಈ ಸ೦ರ್ಭದಲ್ಲಿ ದೂರದ ಗುಜರಾತ್ ನಲ್ಲಿ ಮೋದಿಯವರ ಮೋಡಿ ಎರಡನೇ ಅವಧಿಗೂ ಮು೦ದುವರೆದಿದ್ದು ಹಾಗೂ ಬಿಹಾರದಲ್ಲಿ ನಿತೀಶರು ಎರಡನೇ ಅವಧಿಗೆ ಪುನರಾಯ್ಕೆಯಾಗಿದ್ದು ನೈಜ ಜಾತ್ಯಾತೀತವಾದಿಗಳಿಗೆ ಹಾಗೂ ಅಭಿವೃಧ್ಧಿಯನ್ನು ಬಯಸುವ ಮನಸ್ಸುಗಳಿಗೆ ತುಸುವಾದರೂ ನೆಮ್ಮದಿ ನೀಡಿದೆ ಎ೦ದೇ ಹೇಳಬೇಕಾಗುತ್ತದೆ!! ಏಕೆ೦ದರೆ ಈ ಎರಡೂ ಗೆಲುವುಗಳು ಭಾರತೀಯ ಜನತಾ ಪಕ್ಷದ ವೈಯಕ್ತಿಕ ದೃಷ್ಟಿಯಿ೦ದ ಹಾಗೂ ಆಯಾ ರಾಜ್ಯಗಳ ಮಹಾ ಜನತೆಗಳ ದೃಷ್ಟಿಯಿ೦ದ ಮೈಲುಗಲ್ಲುಗಳೆ೦ದೇ ಹೇಳಬಹುದು! ಆ ನಿಟ್ಟಿನಲ್ಲಿ ನರೇ೦ದ್ರ ಮೋದಿಯವರ ಮೇಲೆ ಕಾಲದ ಕನ್ನಡಿ ತನ್ನ ಕ್ಷಕಿರಣ ಈಗಾಗಲೇ ಬೀರಿದೆ. ಈಗ “ಬಿಹಾರಿ ಬಾಬು“ ನಿತೀಶ“ರ ಸರದಿ. ಮತ್ತಷ್ಟು ಓದು 
ಸಾಂಸ್ಕೃತಿಕ ಕಾರ್ಯಕ್ರಮಗಳ ಔಚಿತ್ಯತೆ
ಜಗನ್ನಾಥ್ ಶಿರ್ಲಾಲ್
ನಮ್ಮ ನೆಲದ ಸಾಂಸ್ಕೃತಿಕ ಸತ್ವವನ್ನು ಅನಾವರಣಗೊಳಿಸುವ ಕಲಾ ಪ್ರದರ್ಶನವನ್ನು ಸಾಂಸ್ಕೃತಿಕ ಕಾರ್ಯಕ್ರಮ ಎನ್ನಬಹುದು. ಇಂತಹ ಕಲಾ ಸಾಧ್ಯತೆಗಳನ್ನು ಆಸ್ವಾದಿಸುವ ಮೂಲಕ ಸಹೃದಯ ಪ್ರೇಕ್ಷಕರು ಮತ್ತಷ್ಟು ಸುಸಂಸ್ಕೃತರಾಗಿ ಬೆಳೆಯಬಹುದು. ಸಾಂಸ್ಕೃತಿಕ ಕಾರ್ಯಕ್ರಮ ಎಂದಾಕ್ಷಣ ಇಷ್ಟಪಡದವರು ಇಲ್ಲ. ದಾರಿಹೋಕರೂ ಕೂಡಾ ಆಸುಪಾಸಿನ ಶಾಲಾ ಕಾಲೇಜು, ಯುವಕ ಸಂಘ, ದೇವಸ್ಥಾನದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕ್ಷಣ ಮಾತ್ರದಲ್ಲಿ ದೃಷ್ಟಿ ಹಾಯಿಸುತ್ತಾರೆ. ಇನ್ನೂ ಕೆಲವರು ತನ್ನೆಲ್ಲ ಅತ್ಯಗತ್ಯ ಕೆಲಸಗಳನ್ನು ಬದಿಗೊತ್ತಿ ಕಾರ್ಯಕ್ರಮ ವೀಕ್ಷಿಸುವವರಿದ್ದಾರೆ. 

ಕ್ರಿಕೆಟ್ ಕ್ರಿಕೆಟ್ ಕ್ರಿಕೆಟ್ – ಕ್ರಿಕೆಟೆಂಬ ಹುಚ್ಚು
ಅಜಕ್ಕಳ ಗಿರೀಶ ಭಟ್
ಮೊನ್ನೆ ಭಾರತ ೨೦-೨೦ ಕ್ರಿಕೆಟ್ ನಲ್ಲಿ ಹೀನಾಯವಾಗಿ ಸೋತದ್ದು ಮತ್ತು ಚೆಸ್ಸಿನಲ್ಲಿ ವಿ.ಆನಂದ್ ವಿಶ್ವ ಚಾಂಪಿಯನ್ ಆಗಿ ನಾಕನೇ ಬಾರಿಗೆ ,ಅದರಲ್ಲೂ ಸತತವಾಗಿ ಮೂರನೇ ಬಾರಿಗೆ ಮೂಡಿಬಂದದ್ದು ಒಟ್ಟೊಟ್ಟಿಗೇ ಆಯಿತು. ಹೀಗಾದದ್ದರಿಂದ ಅನೇಕ ಕ್ರೀಡಾವಿಶ್ಲೇಷಕರು ಹಾಗೂ ಸಾಮಾನ್ಯ ಕ್ರೀಡಾಭಿಮಾನಿಗಳು ಕ್ರಿಕೆಟಿಗೆ ಈ ದೇಶದಲ್ಲಿ ನೀಡಲಾಗುವ ಮಹತ್ವ ಮತ್ತು ಇತರ ಆಟಗಳ ಬಗ್ಗೆ ಅಲಕ್ಷ್ಯದ ಬಗ್ಗೆ ತುಂಬ ಬರೆದಿದ್ದಾರೆ ಮತ್ತು ಹೇಳಿದ್ದಾರೆ. 
ನನಗೆ ನಿಜವಾಗಿ ಆಸಕ್ತಿಯ ಆಟವೆಂದರೆ ಕ್ರಿಕೆಟ್ಟೇ. ಯಾಕೆಂದರೆ ಕ್ರಿಕೆಟ್ಟು ಆಡಲು ಹೆಚ್ಚು ಖರ್ಚು ಇಲ್ಲ.ಬ್ಯಾಟು ಮಾಡಲು ತೆಂಗಿನ ಕೊತ್ತಳಿಗೆ ಕೂಡ ಆಗುತ್ತಿತ್ತು ನಾವು ಚಿಕ್ಕವರಿದ್ದಾಗ. ಚೆಂಡು ಬಾಳೆ ಚಾಂಬಾರಿನದೂ ಆಗುತ್ತಿತ್ತು. ಹತ್ತು ಇಂಟು ಇಪ್ಪತ್ತು ಅಡಿ ಅಂಗಳದಲ್ಲೂ ಕ್ರಿಕೆಟ್ ಆಡಬಹುದು ನಮ್ಮದೇ ರೂಲ್ಸುಗಳೊಂದಿಗೆ. ಹಾಗೆಯೇ ಕ್ರಿಕೆಟ್ಟು ಆಡಲು ಅಥವಾ ನೋಡಲು ಚೆಸ್ಸಿನ ಹಾಗೆ ಹೆಚ್ಚು ತಲೆಖರ್ಚು ಮಾಡುವ ಅಗತ್ಯವಿಲ್ಲ. ತಲೆಖರ್ಚು ಮಾಡುವುದೆಂದರೆ ನಾನು ಮೊದಲಿಂದಲೂ ಸ್ವಲ್ಪ ಜಿಪುಣನೇ. ಕ್ರಿಕೆಟ್ಟಿನ ಮೇಲೆ ನನಗೆ ವಿಶೇಷ ಮಮತೆ ಇರಲು ಇನ್ನೊಂದು ಕಾರಣವೆಂದರೆ ನಾನು ನನ್ನ ಹತ್ತು- ಹನ್ನೊಂದನೇ ವಯಸ್ಸಿನಲ್ಲಿಯೇ ಭಾರತ ತಂಡವನ್ನು ಫೋಲ್ಲೋ ಮಾಡಲು ಆರಂಭ ಮಾಡಿದ್ದು. ನಾನು ಬಹುಶ ನಾಕನೇ ಅಥವಾ ಐದನೇ ಕ್ಲಾಸಿನಲ್ಲಿ ಇದ್ದಾಗ ಇರಬೇಕು ನಾನು ಮೊದಲು ಕಮೆಂಟ್ರಿ ಕೇಳಿದ್ದು. ನನಗೆ ಕ್ರಿಕೆಟಿನ ಹುಚ್ಚು ಹಿಡಿದದ್ದು ಭಾರತ ಮತ್ತು ಇಂಗ್ಲೆಂಡುಗಳ ನಡುವಿನ ಒಂದು ಸರಣಿಯ ಮಧ್ಯದಲ್ಲಿ. ಹಾಗೆ ನನಗೆ ಸಡನ್ನಾಗಿ ಹುಚ್ಚು ಹಿಡಿದದ್ದು ಹೇಗೆ ಎಂದು ಈಗಲೂ ನನಗೆ ಅರ್ಥವಾಗುತ್ತಿಲ್ಲ. ಸಾಮಾನ್ಯವಾಗಿ ಇಂಥ ಹುಚ್ಚುಗಳು ಗ್ರಾಜುಯಲ್ಲಾಗಿ ಹಿಡಿಯುವುದು. ಸಡನ್ನಾಗಿ ಹಿಡಿದದ್ದು ಹುಚ್ಚೇ ಅನ್ನಲು ಕಾರಣವೇನೆಂದರೆ ಆನಂತರದ ಹೆಚ್ಚು ಕಡಿಮೆ ಪ್ರತಿಯೊಂದು ಪಂದ್ಯವನ್ನೂ ನಾನು ಪತ್ರಿಕೆ ಅಥವಾ ರೇಡಿಯೋ ಕಮೆಂಟ್ರಿ ಮೂಲಕ ಫೋಲ್ಲೋ ಮಾಡುತ್ತಿದ್ದೆ. ನನಗೆ ಕ್ರಿಕೆಟ್ ಅಂತ ಒಂದಿದೆ ಎಂದು ಗೊತ್ತಾಗುವಾಗ ಆ ಸರಣಿಯಲ್ಲಿ ಒಂದು ಪಂದ್ಯವನ್ನು ಭಾರತ ಗೆದ್ದಾಗಿತ್ತು ಅನಿಸುತ್ತದೆ. ಅದು ಮೊದಲ ಪಂದ್ಯ ಇರಬೇಕು. ಆ ಗೆದ್ದ ವಿಷಯ ನನಗೆ ಆನಂತರ ಗೊತ್ತಾದದ್ದು. ನನ್ನ ನೆನಪಿನ ಪ್ರಕಾರ ಆ ಸರಣಿಯ ನಂತರದ ಐದು ಟೆಸ್ಟ್ ಗಳೂ ಡ್ರಾ ಆಗಿರಬೇಕು. ಒಟ್ಟಿನಲ್ಲಿ ಆ ಸರಣಿಯನ್ನು ಭಾರತ ಒಂದು-ಸೊನ್ನೆ ಅಂತರದಲ್ಲಿ ಗೆದ್ದಿತ್ತು. ಒಂದು ಇನ್ನಿಂಗ್ಸ್ ನಲ್ಲಿ ಕಪಿಲ್ ದೇವ್ ಮತ್ತು ಮದನ್ ಲಾಲ್ ತಲಾ ಐದು ವಿಕೆಟ್ ಗಳನ್ನು ಪಡೆದು ಮಿಂಚಿದ್ದರು. ಆಗ ಇಂಗ್ಲೆಂಡಿನ ನಾಯಕನಾಗಿದ್ದವನು ಕೀತ್ ಫ್ಲೆಚರ್ ಎಂಬ ಅನಾಮಧೇಯ. ಮತ್ತಷ್ಟು ಓದು 
ಯದಾ ಯದಾಹಿ ಧರ್ಮಸ್ಯ… : ಕಲಿಕಾ ಪ್ರಕ್ರಿಯೆಯ ಅವನತಿ ಮತ್ತು ಪುನರುಜ್ಜಿವನ.
ಪ್ರೊ. ಬಾಲಗಂಗಾಧರ
Degeneration of a Learning Process and its Rejuvenation
Prof. Balagangadhar
Ghent University, Belgium
ಯದಾ ಯದಾಹಿ ಧರ್ಮಸ್ಯ … ಸಂಭವಾಮಿ ಯುಗೇಯುಗೇ : ಭಗವದ್ ಗೀತೆಯ ಈ ಶ್ಲೋಕ ಬಹಳಷ್ಟು ಜನರಿಗೆ ಚಿರಪರಿಚಿತ. ಈ ಮಂದಿನ ಚರ್ಚೆಯ ಸಲುವಾಗಿ ಈ ಶ್ಲೋಕದ ಒಂದು ಕರಡು ಭಾಷಾಂತರವನ್ನು ಮಾಡಲು ನನಗೆ ಅನುಮತಿ ನೀಡಿ.
“ಯಾವಾಗ ಮತ್ತು ಎಲ್ಲೆಲ್ಲಿ ಧರ್ಮದಲ್ಲಿ ಏರುಪೇರುಗಳು ವ್ಯಕ್ತಗೊಂಡು, ಅಧರ್ಮವು ಮೆರೆಯತೊಡಗುತ್ತದೆಯೋ (ಪ್ರತಿ ಯುಗದಲ್ಲೂ ಪುನಾರಾವರ್ತಿತವಾಗುವ ವಿದ್ಯಮಾನವಿದು), ಆಗ ಶಿಷ್ಟ ರಕ್ಷಣೆ ಮತ್ತು ದುಷ್ಟರ ನಿಗ್ರಹಕ್ಕಾಗಿ, ಹಾಗೂ ಧರ್ಮವನ್ನು ಪುನರ್ಸ್ಥಾಪಿಸಲು ನಾನು ಸ್ವಯಂ ವ್ಯಕ್ತವಾಗುತ್ತೇನೆ.”
ಪ್ರತಿ ಯುಗದಲ್ಲಿಯೂ ಕೂಡ ಕೃಷ್ಣನ ಅವತಾರ ಸಂಭವಿಸುತ್ತದೆ, ಅದು ನಮ್ಮ ಯುಗದಲ್ಲಿಯೂ ಆಗಿರಬಹುದು, ಅಥವಾ ಮುಂದಿನ ದಿನಗಳಲ್ಲಿ ಘಟಿಸಬಹುದು ಇತ್ಯಾದಿ, ಇದು ನಮಗೆಲ್ಲಾ ಕಲಿಸುತ್ತಾ ಬಂದಿರುವ ಹಾಗೂ ಈ ಶ್ಲೋಕವನ್ನು ವ್ಯಾಖ್ಯಾನಿಸುವ ಒಂದು ಪ್ರಸಿದ್ಧ ಮತ್ತು ಪ್ರಮುಖ ರೀತಿ.
ಆದರೆ, ನೀವು ಇಪ್ಪತ್ತೊಂದನೆಯ ಶತಮಾನದ ದೃಷ್ಟಿಕೋನದಿಂದ ಈ ಶ್ಲೋಕವನ್ನು ಮತ್ತೊಮ್ಮೆ ಓದಿದರೆ ಇಲ್ಲೊಂದು ಎದ್ದು ಕಾಣುವ ಹಾಗೂ ಬೆಕ್ಕಸ ಬೆರಗಾಗುವಂತೆ ಮಾಡುವ ವಿಚಾರವಿದೆ. ಈ ವಿಚಾರವನ್ನು ನಾನು ನನ್ನಪದಗಳಲ್ಲಿ ನಿರೂಪಿಸುವವನಿದ್ದೇನೆ; (ಇದು ಶ್ಲೋಕಗಳ ಕೇವಲ ಒಂದು ಹೊಸ ವ್ಯಾಖ್ಯಾನವಷ್ಟೆ ಅಲ್ಲ): ನೈತಿಕವಾಗಿರಲು *ಕಲಿಯುವ* ಒಂದು ಪ್ರಕ್ರಿಯೆ ಇದೆ, ಹಾಗೂ ಈ ಪ್ರಕ್ರಿಯೆಯು ಸಮಾಜದಲ್ಲಿರುವ ಕಲಿಕಾ ಪ್ರಕ್ರಿಯೆ ಎಂಬುದು ಒಂದು ಸಿದ್ಧಾಂತ. ಇಂತಹ ಒಂದು ಕಲಿಕಾ ಪ್ರಕ್ರಿಯೆಯು ಕ್ರಮೇಣ ಅವನತಿಯ ದಾರಿ ಹಿಡಿಯಬಹುದು ಅಥವಾ ಹಿಡಿಯುತ್ತದೆ, ಮತ್ತು ಇದೊಂದು ಅನಿವಾರ್ಯ ಸಂಗತಿ ಎಂಬುದು ಎರಡನೇಯ ಸಿದ್ಧಾಂತ. ತಾರ್ಕಿಕವಾಗಿ, ಈ ಎರಡು ಸಿದ್ದಾಂತಗಳಿಂದ ಹೊರಡುವ ವಿಚಾರವಿದು: ಯಾವಾಗೆಲ್ಲ ಸಾಮಾಜಿಕ ಕಲಿಕಾ ಪ್ರಕ್ರಿಯೆಯು ಅವನತಿ ಎಡೆಗೆ ಸಾಗುತ್ತದೆಯೋ, ಆಗ ಅವನತಿ ಒಂದು ಸಂದಿಗ್ಧ ಘಟ್ಟದಲ್ಲಿ, ಸಮಾಜದ ಮಟ್ಟದಲ್ಲಿ, ಕೆಲವು ಹೊಸ ಪ್ರಕ್ರಿಯೆಗಳು ಹುಟ್ಟಿಕೊಂಡು, ಈ ಕಲಿಕಾ ಪ್ರಕ್ರಿಯೆಯನ್ನು (ನೈತಿಕವಾಗಿರಲು, *ಕಲಿಯುವ* ಪ್ರಕ್ರಿಯೆ) ಪುನರುಜ್ಜೀವನಗೊಳಿಸುತ್ತವೆ.
ಭಾರತದಲ್ಲಿರುವ ನೈತಿಕ ಕಲಿಕೆಯ ಸ್ವರೂಪದ ಬಗ್ಗೆ ಇದೊಂದು ಅದ್ಭುತ ಹೇಳಿಕೆ (ಸದ್ಯಕ್ಕೆ ಇದರ ವ್ಯಾಪ್ತಿಯ ಮಿತಿಯನ್ನು ಭಾರತದ ಮಟ್ಟಿಗಷ್ಟೆ ಇಟ್ಟುಕೊಳ್ಳೋಣ). ಸಹಜವಾಗಿಯೆ ಅವರು (ಗೀತೆಯನ್ನು ಬರೆದ ಲೇಖಕನು/ಲೇಖಕರು) ತಮಗೆ ಪರಿಚಿತವಿದ್ದಂತಹ ಕೃಷ್ಣ ಮತ್ತು ಅವನ ‘ಅವತಾರಗಳ’ ಬಗೆಗಿನ ರೂಪಕಗಳನ್ನು ಬಳಸಿಕೊಂಡು ಈ ಮೇಲಿನ ಒಳನೋಟವನ್ನು ನಿರೂಪಿಸಿದ್ದಾರೆ. ಈ ರೂಪಕಗಳು ನಮ್ಮ ಕೈಕಟ್ಟಿ ಹಾಕಬೇಕಿಲ್ಲ. ಆದರೆ ಸಮಾಜದ ಸ್ವರೂಪದ ಬಗ್ಗೆ ಅವರು ನೀಡುವ ಈ ಒಳನೋಟಗಳು ಮಾತ್ರ ನಮ್ಮನ್ನು ಒಮ್ಮೆ ಅಲ್ಲಾಡಿಸಿ ಎಚ್ಚರಗೊಳಿಸಬೇಕು. ಅವರು ಹೇಗೆ ಮತ್ತು ಎಲ್ಲಿ ಈ ಒಳನೋಟಗಳನ್ನು ಕಂಡುಕೊಂಡರು? ಈ ವಿಚಾರಗಳನ್ನು ಚರ್ಚಿಸಿದ್ದಾದರೂ ಹೇಗೆ? ಯಾವ ರೀತಿಯ ಸಂಶೋಧನೆಯಿಂದ ಅವರು ಅದ್ಭುತವಾದ ಈ ಒಳನೋಟವನ್ನು ಪಡಕೊಂಡರು? ನಾವು ಹೆಸರಿಸಬಹುದಾದ (ನೈತಿಕ ಕಲಿಕೆಯ ಬಗೆಗಿರುವ ) ಮನಶ್ಯಾಸ್ತ್ರ ಅಥವಾ ಸಮಾಜಶಾಸ್ತ್ರದ ಯಾವ್ಯದೇ ಸಿದ್ದಾಂತಗಳಿಗಿಂತ ಈ ಒಳನೋಟವು, ಒಂದು ವೇಳೆ ಅದು ತಪ್ಪಾಗಿದ್ದರೂ ಸಹ, * ಹಲವು ಜ್ಯೋತಿರ್ವಷಗಳಷ್ಟು* ಮುಂದಿದೆ.
ಈ ಎಲ್ಲಾ ಕಾರಣಗಳಿಂದಾಗಿ, ಕೇವಲ ಈ ಎರಡು ಶ್ಲೋಕಗಳು ನೈತಿಕ ಕಲಿಕೆಯ ಸ್ವರೂಪದ ಕುರಿತು ಒಂದು ಉತ್ಕೃಷ್ಟ ವೈಜ್ಞಾನಿಕ ಉಹಾಸಿದ್ದಾಂತವನ್ನು (hypothesis) ನಿರೂಪಿಸುತ್ತವೆ. ಯಾವ ವಿಚಾರವನ್ನು (ಉದಾಹರಣೆಗೆ, ನಾನು ಮೇಲೆ ಗುರುತಿಸಿದ ಎರಡು ಸಿದ್ಧಾಂತಗಳು) ಈ ಶ್ಲೋಕಗಳು ಪ್ರಮಾಣಿತ ಸಿದ್ಧಾಂತವೆಂದು ಪರಿಗಣಿಸುತ್ತವೆಯೋ, ಆ ವಿಚಾರದ ಅಸ್ತಿತ್ವದ ಬಗ್ಗೆ ಪಾಶ್ಚಿಮಾತಯ ಸಂಸ್ಕೃತಿಗೆ ಸಣ್ಣ ಕಲ್ಪನೆ ಕೂಡಾ ಇಲ್ಲವಲ್ಲ. ಹೇಗೆ ಮತ್ತು ಏತಕ್ಕಾಗಿ ಅಷ್ಟೊಂದು ಸಾವಿರ ವರ್ಷಗಳ ಕೆಳಗೆ ಭಾರತೀಯರು ಈ ವಿಚಾರಗಳ ಬಗ್ಗೆ ಯೋಚಿಸಿದರು? ನಿಜವಾಗಿಯು ರುದ್ರಾ, ನಾನು ಮೂಕವಿಸ್ಮಿತನಾಗಿದ್ದೇನೆ
ಯದಾ ಯದಾಹಿ ಧರ್ಮಸ್ಯ
ಗ್ಲಾನಿರ್ಭವತಿ ಭಾರತ
ಅಭ್ಯುತ್ಥಾನಮಧರ್ಮಸ್ಯ
ತದಾತ್ಮಾನಂ ಸೃಜಾಮ್ಯಹಮ್ (ಭಗವದ್ಗೀತಾ 4: 7)
ಪರಿತ್ರಾಣಾಯ ಸಾಧೂನಾಂ
ವಿನಾಶಯ ಚ ದುಷ್ಕೃತಾಮ್
ಧರ್ಮಸಂಸ್ಥಾಪನಾರ್ಥಾಯ
ಸಂಭವಾಮಿ ಯುಗೇ ಯುಗೇ (ಭಗವದ್ಗೀತಾ 4: 8)
ಬೀಟ್ ಬಾಯ್ಸ್…ಇವರು ಬೀಟೆಡ್ ಬಾಯ್ಸ್!
ಇರ್ಷಾದ್ ವೇಣೂರು
ಜಗತ್ತೇ ಮಲಗಿರುವಾಗ ಬುದ್ದನೊಬ್ಬ ಎದ್ದ ಎನ್ನುವುದು ಹಳೇ ಮಾತು. ಆದರೆ ಈ ಮಾಡರ್ನ್ ಯುಗದಲ್ಲಿ ಎಲ್ಲರೂ ಮಲಗಿರುವಾಗ ಎದ್ದು ಕಾಯಕವೇ ಕೈಲಾಸ ಎಂದು ದುಡಿಯುವವರು ಯಾರು ಗೊತ್ತಾ? ಸ್ವಲ್ಪ ಬುದ್ದಿಗೆ ಕೆಲಸ ಕೊಡಿ. ಇನ್ನೂ ತಿಳೀಲಿಲ್ವಾ? ಈ ಪತ್ರಿಕೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಿದ್ದು ಯಾರು? ಹಾ…. ಅವರೇ…. ದಿನಪತ್ರಿಕೆ ಹಂಚುವವರು.
ಮಧ್ಯರಾತ್ರಿಯ ಹೊತ್ತಿಗೆ ಪತ್ರಿಕಾ ಮುದ್ರಣಾಲಯ ಬಿಟ್ಟ ಪ್ರೆಸ್ ವಾಹನ ತನ್ನ ಸಂಚಾರವನ್ನು ಆರಂಭಿಸಿರುತ್ತದೆ. ತನ್ನ ರೂಟ್ ಗಳಲ್ಲಿ ಬರುವ ವೆಂಡರ್ ಅರ್ಥಾತ್ ಪತ್ರಿಕಾ ಏಜೆಂಟ್ ನಿಗೆ ನಸುಕಿನ ಜಾವ 3ರ ಹೊತ್ತಿಗೆ ಪತ್ರಿಕೆಗಳ ಬಂಡಲ್ ಇಳಿಸಿ ಹೋಗಿರುತ್ತದೆ. ಅಲ್ಲಿಂದ ಶುರು. ಹೊಸ ಪ್ರಪಂಚವೊಂದು ತೆರೆದುಕೊಳ್ಳುತ್ತದೆ. ನಿಶ್ಯಬ್ದವಾಗಿ ಮಲಗಿರುವ ಫುಟ್ಪಾತ್ ಗಳು ಎಚ್ಚರಗೊಳ್ಳುತ್ತವೆ. ದಿನಪತ್ರಿಕೆ ಬಂಡಲ್ ಗಳು ಬಿಚ್ಚತೊಡಗುತ್ತವೆ. ಪತ್ರಿಕೆಗಳು ಎಷ್ಟು ಬಂದಿವೆ ಎಂಬ ಎಣಿಕೆ ಪ್ರಾರಂಭವಾಗುತ್ತದೆ. ಅಷ್ಟಾಗುವಾಗ ಬೀಟ್ ಬಾಯ್ಸ್ ಆಗಮನವಾಗುತ್ತದೆ. ಬೇರೆಯಾಗಿಯೇ ಇರುವ ಪುರವಣಿಗಳನ್ನು ದಿನ ಪತ್ರಿಕೆಯ ಮುಖ್ಯ ಆವೃತ್ತಿಯ ಜೊತೆ ಸೇರಿಸುವ ಕೆಲಸ ಚಾಲನೆ ಪಡೆದುಕೊಳ್ಳುತ್ತದೆ. ಸುಮಾರು 6 ಗಂಟೆಯಾಗುವ ಹೊತ್ತಿಗೆ ಅಷ್ಟೂ ಪತ್ರಿಕೆಗಳ ಜೋಡಣೆ ಮುಗಿದು ಬಸ್ ಗಳಲ್ಲಿ ಕಳಿಸುವ ಪಾರ್ಸಲ್, ಬೀಟ್ ಬಾಯ್ಸ್ ಪಾರ್ಸಲ್ ಹೀಗೆ ಹಂಚಿಕೆ ಪ್ರಾರಂಭವಾಗುತ್ತದೆ. ಬಳಿಕ ಬೀಟ್ ಬಾಯ್ಸ್ ಗಳ ಕಾರುಬಾರು ಶುರುವಾಗುತ್ತದೆ.
ಒಂದು ಏರಿಯಾಕ್ಕೆ ದಿನಪತ್ರಿಕೆ ಹಾಕುವವರನ್ನು ಪತ್ರಿಕಾ ಏಜನ್ಸಿ ಏಜೆಂಟ್ ಅರ್ಥಾತ್ ನ್ಯೂಸ್ ಪೇಪರ್ ವೆಂಡರ್ಗಳು ಬೀಟ್ ಬಾಯ್ಸ್ ಎಂದು ಕರೆಯುತ್ತಾರೆ. ತಮ್ಮ ತಮ್ಮ ಸೈಕಲ್ ಗಳಿಗೆ ಚೀಲಗಳಲ್ಲಿ ದಿನಪತ್ರಿಕೆ ಕಟ್ಟಿಕೊಂಡು ಹತ್ತಿದರೆಂದರೆ ಮತ್ತೆ ಕೆಳಗಿಳಿಯುವುದು ತಮ್ಮ ಏರಿಯಾದ ಕೊನೆಯಲ್ಲಿ. ಅಷ್ಟೂ ನಾಜೂಕಿನಿಂದ ಸೈಕಲ್ ನಲ್ಲೇ ಕುಳಿತು ಜಾದೂ ಮಾಡಿದವರಂತೆ, ಏಕಲವ್ಯ ಬಿಟ್ಟ ಬಾಣದಂತೆ ಪೇಪರ್ ಗುರಿ ಇಟ್ಟು ಎಸೆಯುವ ಇವರ ಗುರಿ ಮುಟ್ಟಿರುತ್ತದೆ. ಎಸೆದ ಪೇಪರ್ ಯಾವ ಮನೆಯ ಸಿಟ್ಔಟ್ ನಲ್ಲಿ ಬೀಳಬೇಕೋ ಅಲ್ಲೇ ಹೋಗಿ ಬಿದ್ದಿರುತ್ತದೆ. ಕಾಂಪ್ಲೆಕ್ಸ್ ನ ಶಟರ್ ಮುಂದೆ ಕೂತಿರುತ್ತದೆ. ಇನ್ನು ಕೆಲವೆಡೆ ಗೇಟಿನ ಪೈಪ್ ಒಳಗಡೆ ಸೇಫ್ ಆಗಿರುತ್ತವೆ.
ವಾಕಿಂಗ್ ಹೊರಟವರೆಲ್ಲ ಮನೆ ಹಾದಿ ಹಿಡಿಯುವಾಗ ಬೀಟ್ ಬಾಯ್ ಬರುತ್ತಿರುತ್ತಾನೆ. ಅವನ ಸೈಕಲ್ ಅವರ ವಾಕ್ ಲಯಕ್ಕೆ ಸರಿ ಸಾಟಿಯಾಗುವಂತೆ ವೇಗ ತಗ್ಗಿಸಿ ಸಂಚಾರಿಯಾಗಿಯೇ ದಿನ ಪತ್ರಿಕೆ ಕೈಗಿಡುತ್ತಾನೆ. ವಾಕ್’ಮ್ಯಾನ್ ವಾಕಿಂಗ್ ನಲ್ಲೇ ಪತ್ರಿಕೆ ಬಿಡಿಸುತ್ತಾನೆ! ಸಾಮಾನ್ಯವಾಗಿ ನೂರು ಮನೆಗಳಿಗೆ ಒಬ್ಬನಂತೆ ಬೀಟ್ ಬಾಯ್ ಇರುತ್ತಾನೆ. ದಿನಪತ್ರಿಕೆ ಬೇಗ ಓದುಗರಿಗೆ ಸಿಗಲಿ ಎನ್ನುವ ಕಾರಣಕ್ಕಾಗಿ ವೆಂಡರ್ ಗಳು ಹೀಗೆ ಮಾಡಿರುತ್ತಾರೆ. ಮತ್ತಷ್ಟು ಓದು 
ಕೋಮುವಾದವೂ ಮೂಲಭೂತವಾದವೂ
ದಕ್ಷಿಣ ಕನ್ನಡದಲ್ಲಿ ಈಚಿನ ವರ್ಷಗಳಲ್ಲಿ ಹಿಂದೂ- ಮುಸ್ಲಿಂ ಸಂಘರ್ಷಗಳು ಹೆಚ್ಚಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಈ ಬಗ್ಗೆ ಸಾಕಷ್ಟು ಲೇಖನಗಳು ಕಾಲಕಾಲಕ್ಕೆ ವಿವಿಧ ಪತ್ರಿಕೆಗಳಲ್ಲಿ ಬಂದಿವೆ. ಪುಸ್ತಕಗಳೂ ಬಂದಿವೆ. ಆದರೆ , ಹೆಚ್ಚಿನ ಲೇಖನಗಳು ಸಮಸ್ಯೆಯ ಆಳಕ್ಕಿಳಿದು ಚರ್ಚಿಸುವುದಿಲ್ಲ. ಮೇಲು ಮೇಲಿಂದ ನೊಡಿ ಎಲ್ಲ ಕೋಮುವಾದಿಗಳನ್ನು ಖಂಡಿಸಬೇಕು ಎಂದು ಹೇಳಿದಾಕ್ಷಣ ಸಮಸ್ಯೆ ಪರಿಹಾರವಾಗದು.
ವಾಸ್ತವವಾಗಿ ಹಿಂದೂ ಮತ್ತು ಮುಸ್ಲಿಂ ಸಂಸ್ಕೃತಿಗಳು ಬದುಕನ್ನು ಗ್ರಹಿಸುವ ಬಗೆಯಲ್ಲಿಯೇ ವ್ಯತ್ಯಾಸಗಳಿವೆ.
ಹಿಂದೂ ಎಂಬೊಂದು ಏಕರೂಪಿ ಘಟಕ ಇಲ್ಲ ನಿಜ. ಆದರೆ ಸೃಷ್ಟಿ ಮತ್ತು ಸೃಷ್ಟಿಕರ್ತ ಇವೆಲ್ಲ ಪೂಜನೀಯ ಎಂದು ಗ್ರಹಿಸುವ ,ಅಂಥ ನಂಬಿಕೆಗಳನ್ನು ಹೊಂದಿರುವುದೇ ಈ “ಹಿಂದು” ಎಂದು ನಾವು ಅನುಕೂಲಕ್ಕಾಗಿ ಕರೆಯುವ ಗುಂಪುಗಳ ನಡುವೆ ಇರುವ ಸಾಮ್ಯತೆ ಎನ್ನಬಹುದು. ಇಂಥ ನಂಬಿಕೆಗಳು ಬಹುಸಂಸ್ಕೃತಿಗಳ ಅಸ್ತಿತ್ವಕ್ಕೆ ಪೂರಕ ಎಂದು ಬೇರೆ ಹೇಳಬೇಕಾಗಿಲ್ಲ. ಹಿಂದೂ ಧರ್ಮಗಳ ಒಳಗೇ ಭೇದಭಾವ ಇತ್ಯಾದಿ ಸಮಸ್ಯೆಗಳಿವೆ.ಅದು ಸಾಕಷ್ಟು ಚರ್ಚಿತವಾದ ವಿಷಯವೇ ಆಗಿದೆ.
ವಾಸ್ತವವಾಗಿ ಹಿಂದೂ-ಮುಸ್ಲಿಂ ಸಂಘರ್ಷವೆಂದರೆ ಅದು ಆಧುನಿಕತೆಗೆ ತೆರೆದುಕೊಂಡ ಮತ್ತು ಹಾಗೆ ತೆರೆದುಕೊಳ್ಳಲು ಹಿಂಜರಿಯುವ ಸಂಸ್ಕೃತಿಗಳ ನಡುವಿನ ಸಂಘರ್ಷವೂ ಹೌದು.ಅವರವರು ಅವರವರಷ್ಟಕ್ಕೇ ಇರಲಿ ಏನು ಸಮಸ್ಯೆ ಎನ್ನಲು ಸಾಧ್ಯವಿಲ್ಲ ಯಾಕೆಂದರೆ ಇವೆರಡೂ ಸಂಸ್ಕೃತಿಗಳೂ ಒಟ್ಟಿಗೇ ಬದುಕಬೇಕಾಗಿದೆ ಇಲ್ಲಿ.
ದಕ್ಷಿಣ ಕನ್ನಡದಲ್ಲಿ “ಹಿಂದೂ ಹುಡುಗಿ ” ಮತ್ತು “ಮುಸ್ಲಿಂ ಹುಡುಗ” ಜತೆಯಾಗಿ ಬಸ್ಸಲ್ಲಿ ಪ್ರಯಾಣಿಸಿದರೆ ಅಥವಾ ಪರಸ್ಪರ ಮಾತನಾಡಿದರೆ ಹಲ್ಲೆಗೆ ಒಳಗಾಗುವ ಪ್ರಸಂಗಗಳು ವರದಿಯಾಗುತ್ತವೆ.ಇಂಥ ಹಲ್ಲೆಗಳು ಖಂಡನೀಯವೇ ಹೌದು. ಇದರ ಹಿಂದೆ ಪುರುಷಾಹಂಕಾರದ ಪ್ರವೃತ್ತಿ ಇದೆ ಎನ್ನುವುದು ಎಲ್ಲರಿಗೂ ಅರ್ಥವಾಗುವ ವಿಚಾರ. ಆದರೆ ಇಂಥ ಪ್ರಸಂಗಗಳ ಬಗ್ಗೆ ಚಿಂತಿಸುವಾಗ ಇನ್ನಷ್ಟು ಸೂಕ್ಷ್ಮವಾಗಿ ನೋಡಬೇಕಾದ ಅಗತ್ಯವಿದೆ. ಉದಾಹರಣೆಗೆ ಮಂಗಳೂರಿನ ಕುಪ್ರಸಿದ್ಧ ಪಬ್ ದಾಳಿಯ ನಂತರ ಮಂಗಳೂರು ಹೇಗೆ ಕೋಮುವಾದಿಗಳ ತಾಣವಾಗುತ್ತಿದೆ ಎನ್ನುವ ಲೇಖನ ದ ವೀಕ್ ಪತ್ರಿಕೆಯಲ್ಲಿ ಪ್ರಕಟವಾಯಿತು. ( ಎನ್, ಭಾನುತೇಜ್, ವೀಕ್, ಫೆಬ್ರವರಿ -೨೦೦೯). ಎಲ್ಲ ಸರಿ; ಆದರೆ ಅದರಲ್ಲಿದ್ದ ಕೆಲವು ಸಾಲುಗಳು ಹೀಗಿದ್ದವು.”ಮುಸ್ಲಿಂ ಹುಡುಗರು ಮತ್ತು ಹಿಂದೂ ಹುಡುಗಿಯರ ನಡುವಿನ ಸ್ನೇಹಕ್ಕೆ ಗರಿಷ್ಟ ಶಿಕ್ಷೆ. ಹಿಂದು ಹುಡುಗ-ಮುಸ್ಲಿಂ ಹುಡುಗಿ ಸ್ನೇಹದ ವಿರುದ್ಧ ಯಾವುದೇ ಅಟ್ಯಾಕ್ ಆದ ಬಗ್ಗೆ ವರದಿಗಳಿಲ್ಲ.”(ಪು.೧೬). ಈ ಹೇಳಿಕೆ ನಿಜವಾಗಿ ಮಿಸ್ ಲೀಡ್ ಮಾಡುವಂಥದ್ದು. ದ.ಕ.ದಲ್ಲಿ ಹಿಂದು ಹುಡುಗ ಮತ್ತು ಮುಸ್ಲಿಂ ಹುಡುಗಿ ಝತೆಯಾಗಿ ಓಡಾಡುವ ಸನ್ನಿವೇಶಗಳು ಇಲ್ಲವೆಂಬಷ್ಟು ಕಡಮೆ ಎನ್ನುವ ಸತ್ಯವನ್ನು ಈ ಹೇಳಿಕೆ ಮರೆಮಾಚುತ್ತದೆ. ಮತ್ತಷ್ಟು ಓದು 
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬೆಳ್ಳಿಮೋಡ ಸೇರಿದಂತೆ ತೆರೆಕಂಡ ೧೬ ಸಿನಿಮಾಗಳು
ಕರುಣಾಕರ ಬಳ್ಕೂರು
ಸಿನಿಮಾ ಅಂದ್ರೆ ಯಾರಿಗೆ ಇಷ್ಟಯಿಲ್ಲ ಹೇಳಿ? ಊಟ-ತಿಂಡಿ ಬಿಟ್ಟು 5-6 ಸಿನಿಮಾಗಳನ್ನು ನೊಡುವವರಿಗೇನು ನಮ್ಮಲ್ಲಿ ಬರವಿಲ್ಲ. ಆದರೆ ಇವತ್ತು ಕಲಾತ್ಮಕ ಸಿನಿಮಾಗಳನ್ನುನೋಡುವವರು ಮಾತ್ರ ಬೆರೆಳಣಿಯಷ್ಟೇ ಜನ ಸಿಗತ್ತಾರೆ? ಆದರೆ ಅವರಿಗೆ ನೋಡುವ ಅವಕಾಶ ಕೊಟ್ಟರೆ ಸಿನಿಮಾ ನೋಡುತ್ತಾರೆ ಎನ್ನುವುದಕ್ಕೆ ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವೇ ಸಾಕ್ಷಿಯಾಯಿತು. ತೆರೆಯ ಮೇಲೆ ಬೆಳ್ಳಿಮೋಡ ಅನಾವರಣ ಕಂಡಾಗ ಪ್ರೇಕ್ಷಕನ ಮೈರೋಮಾಂಚನ ಗೊಂಡಿರುವುದು ಆಶ್ಚರ್ಯದ ಸಂಗತಿ. ಮತ್ತಷ್ಟು ಓದು 
ಕನಸಿನ ಬಂಡಿಗೆ ನಿಲ್ದಾಣವಿಲ್ಲ
ಅದು ಫೆಬ್ರವರಿಯ ಥಂಡಿ ಸುರಿಯುವ ರಾತ್ರಿ. ನಕ್ಷತ್ರಗಳ ಹಿಮ್ಮೇಳದಲ್ಲಿ ಬೆಳ್ಳನೆ ಬೆಳದಿಂಗಳು ಚೆಲ್ಲುತ್ತಾ ಚಂದಿರ ಸವಾರಿ ಹೊರಟಿರುವಾಗಲೇ ಜಮ್ಮುತಾವಿ ಎಕ್ಸ್ಪ್ರೆಸ್ ರೈಲು ಯಾವುದೋ ಗೋಧಿಯ ಬಯಲುಗದ್ದೆಗಳ ನಡುವೆ ಮಂಜು ಪರದೆ ಸೀಳುತ್ತಾ ಓಡುತ್ತಿದೆ.
ರೇಲು ಗಾಡಿಯ ಸ್ಲೀಪರ್ ಕೋಚ್ ಎಸ್-8ರಲ್ಲಿ ಇರುವ ಕೆಲವೇ ಪ್ರಯಾಣಿಕರು ತಮ್ಮ ಇಹಲೋಕ ಪರಿವೆಯೆಲ್ಲ ಮರೆತು ನಿದ್ರೆ ಮಾಡುತ್ತಿದ್ದರೆ ಇಡೀ ಬೋಗಿಯೇ ಆಲಸ್ಯದಿಂದ ತುಂಬಿರುವಂತೆ ಕಾಣುತ್ತದೆ. ಮಬ್ಬು ಬೆಳಕಲ್ಲಿ ಅಪ್ಪರ್ ಬರ್ತ್ನಲ್ಲಿ ಬ್ಯಾಗ್ಗೆ ಬೆನ್ನು ಕೊಟ್ಟು ನಿದ್ರಿಸಲು ಯತ್ನಿಸುತ್ತಿದ್ದಾನೆ ಆ ೨೫ರ ಹುಡುಗ. ಆತ ಮಗ್ಗುಲಾಗಿ ಮಲಗಿದ್ದಾನೆ.
ಮಾತಿಗಾಗಿ ಆತನೂ ತಡವರಿಸಿದ್ದಾನೆ. ಆಕೆಯೂ ಅಂತಹಾ ಮಾತುಗಾರ್ತಿ ಅಲ್ಲ. ಆಕೆಯ ತಂದೆ ತಾಯಿ ಅಲ್ಲೇ ಕೆಳಗಿನ ಎರಡು ಬರ್ತ್ಗಳಲ್ಲಿ ಮಲಗಿದ್ದಾರೆ.
ಅವರು ಬೇಕೆಂದಾಗ ಪೇಪರನ್ನೋ, ನೀರನ್ನೋ ತಂದು ಕೊಟ್ಟು ಈತ ಉಪಕಾರ ಮಾಡಿದ್ದಿದೆ. ನನ್ನ ಬಗ್ಗೆ ಅವರೇನಂದುಕೊಂಡಿರಬಹುದು ಎಂದು ಆತ ಚಿಂತೆ ಮಾಡಿಲ್ಲ, ಆದರೆ ಗುಲಾಬಿ ವರ್ಣದ ಚೂಡಿದಾರದ ಆ ಚೆಲುವೆ ಮುಖ ನೋಡಿ ನಕ್ಕಾಗೆಲ್ಲ ಈತ ನಡುಗುತ್ತಾನೆ.
ಈ ಮಂಗಳೂರು ಹುಡುಗನಿಗೆ ಕನ್ನಡ, ಇಂಗ್ಲಿಷ್ ಬರುತ್ತದೆ. ವಿಚ್ ಪ್ಲೇಸ್ ಆರ್ ಯೂ ಫ್ರಂ, ಓ..ಯು ಆರ್.ಕನ್ನಡಿಗ…ಎಂದು ಪರಿಚಯ ಅಷ್ಟೇ ಮಾಡಿಕೊಂಡಿದ್ದಾಳೆ. ಆಕೆ ಅಹ್ಮದಾಬಾದ್ನವಳು.
ಆಕೆಯ ಮೇಲೆ ಆತನಿಗೆ ಪ್ರೇಮವೇ, ಆಕರ್ಷಣೆಯೇ ಗೊತ್ತಿಲ್ಲ. ಗುಜರಾತಿ ಹುಡುಗಿ ಮನದೊಳಗೆ ಗೂಡು ಕಟ್ಟಿದಳೇ? ಆತನಿಗೆ ಗೋಜಲು.
‘ನೀ ಹೋದರೆ ಮತ್ತೆ ನನ್ನ ಒಂದು ದಿನದ ಪ್ರಯಾಣ ಮಹಾ ಬೋರಿಂಗ್’ ಎನ್ನ ಹೊರಟಾಗ ರೇಲು ಇಂಜಿನ್ ಸುರಂಗ ಹೊಕ್ಕು ಕರ್ಕಶವಾಗಿ ಸೀಟಿ ಹಾಕುತ್ತಾ ವೇಗ ಹೆಚ್ಚಿಸಿಕೊಂಡಿವೆ. ಮಾತುಗಳನ್ನು ಹುಡುಗ ನುಂಗಿಕೊಂಡಿದ್ದಾನೆ. ಈತನ ಮುಖವನ್ನೇ ನೋಡುತ್ತಿದ್ದಾಕೆ ನುಂಗಿದ ಮಾತುಗಳನ್ನು ಹೆಕ್ಕಿಕೊಂಡಂತೆ ಮುಗುಳ್ನಗುತ್ತಾಳೆ. ಕಿಟಿಕಿಯಿಂದ ಒಳಹೊಕ್ಕ ಕುಳಿರ್ಗಾಳಿಗೆ ಮಲಗಿದ್ದವಳ ತಲೆಕೂದಲಿನ ಜೊಂಪೆ ಒಮ್ಮೆ ಮೇಲೆದ್ದು ಅಲೆ ಅಲೆಯಾಗಿ ಕಣ್ಣು, ಕೆನ್ನೆ ಮೇಲೆ ಜಾರುತ್ತಾ ಮುಖವನ್ನು ಆವರಿಸಿದ ದೃಶ್ಯ ಮನಃಪಟಲದಲ್ಲಿ ಅಚ್ಚೊತ್ತಿದೆ.












