ಉಪರಾಷ್ಟ್ರಪತಿ ಹುದ್ದೆಯ ಆಯ್ಕೆ ಮತ್ತವರ ಕರ್ತವ್ಯಗಳು…
– ಶ್ರೇಯಾಂಕ ಎಸ್ ರಾನಡೆ
ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ 13ನೇ ಉಪರಾಷ್ಟ್ರಪತಿ ಚುನಾವಣೆ ನಡೆದಿದೆ. ನಿರೀಕ್ಷೆಯಂತೆ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿ ಮಾನ್ಯ ವೆಂಕಯ್ಯನಾಯ್ಡು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಗೋಪಾಲಕೃಷ್ಣ ಗಾಂಧಿಯವರನ್ನು ಬಹು ಅಂತರದಿಂದ ಸೋಲಿಸಿದ್ದಾರೆ. ಅದಕ್ಕಾಗಿ ಅವರಿಗೂ, ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಮಾಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೂ ಶುಭಾಶಯಗಳು. ಈ ಹೊತ್ತಿನಲ್ಲಿ ರಾಷ್ಟ್ರಪತಿಗಳ ಕೆಲಸ, ಕರ್ತವ್ಯ ಹಾಗೂ ಇನ್ನಿತರ ಸಂಗತಿಗಳ ಕುರಿತು ಬೆಳಕು ಚೆಲ್ಲುವ ಬರಹ. ಮತ್ತಷ್ಟು ಓದು 
ಡೊಕ್ಲಮ್ ಸದ್ದು, ಚೀನಾ ದರ್ದು: ಭಾರತ-ಚೀನ ಪ್ರಚಲಿತ ಕಥನ
– ಶ್ರೇಯಾಂಕ ಎಸ್ ರಾನಡೆ
ಡೊಕ್ಲಮ್ ಒಳಗಿರ್ದುಂ ಬೆವರ್ದನಾ ಡ್ರ್ಯಾಗನ್ ಪತಾಕಂ
ನಾವು ನಮ್ಮ ಸ್ನೇಹಿತರನ್ನು ಆಯ್ಕೆಗೆ ತಕ್ಕಂತೆ ಬದಲಾಯಿಸಬಹುದು ಆದರೆ ಭೌಗೋಳಿಕವಾಗಿ ಬೆಸೆದುಕೊಂಡಿರುವ ನೆರೆಹೊರೆಯ ದೇಶ-ಪ್ರದೇಶಗಳನ್ನಲ್ಲ. “ನಾ ಕೊಡೆ ಎನ್ನುವ ಭಾರತ, ತಾ ಬಿಡೆ ಎನ್ನುವ ಚೀನಾ ಹಠ. ಮಧ್ಯದಲ್ಲಿ ಬಿಕ್ಕಟ್ಟಿಗೆ ಸಿಲುಕಿರುವ ಡೊಕ್ಲಮ್ ಪ್ರದೇಶದ ವಾರಸುದಾರ ಭೂತಾನ್”. 1962ರ ಪರಿಸ್ಥಿತಿ ಈಗಿಲ್ಲ. ಎರಡೂ ಪರಮಾಣುಶಕ್ತಿಯ ಶಕ್ತಿಶಾಲಿ ದೇಶಗಳು. ಅದೇ ಹೊತ್ತಿಗೆ ಇಬ್ಬರೂ ನ್ಯೂಕ್ಲಿಯರ್ ಶಸ್ತ್ರಗಳ “ಮೊದಲ ಬಳಕೆ ಇಲ್ಲ”(ನೋ ಫಸ್ಟ್ ಯೂಸ್) ಎಂಬ ತತ್ವ ಪಾಲಿಸುವ ಜವಾಬ್ದಾರಿ ಹೊತ್ತಿವೆ. ಅಂದಿಗೆ “ಹುಲ್ಲುಕಡ್ಡಿಯೂ ಬೆಳೆಯದ ಬರಡು ಭೂಮಿ”(1962, ಅಂದಿನ ಪ್ರಧಾನ ಮಂತ್ರಿ, ನೆಹರೂ ಜವಾಹರ್ ಲಾಲ್ ಮಾತುಗಳು, ಚೀನಾದ ಅತಿಕ್ರಮಣ ಪ್ರವೇಶಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿನ ಹೇಳಿಕೆ) ಎಂದು ನಿರ್ಲಕ್ಷಿಸಲಾಗಿದ್ದ, ಆದರೆ ಇಂದಿಗೆ ಚೀನಾದ ಸಾರ್ವಭೌಮತೆಯ ಪ್ರತಿಷ್ಟೆ ಹಾಗೂ ಭಾರತದ ಆಂತರಿಕ ಭದ್ರತೆಯ ಅನಿವಾರ್ಯತೆಯ ದೃಷ್ಟಿಯಿಂದ ಅಸ್ಪಷ್ಟ ಗಡಿಯಲ್ಲಿನ ಆಯಕಟ್ಟಿನ ಪ್ರದೇಶಗಳು ಈವರೆಗಿನ ಭಾರತ-ಚೀನಾ ಗಡಿ ವಿವಾದದ ಜ್ವಲಂತತೆಗೆ ಮೂಲ. ಅದೀಗ “ಡೊಕ್ಲಮ್” ಕಾರಣದಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಬೂದಿಮುಚ್ಚಿದ ಕೆಂಡದಂತಿರುವ ಈ ಸರ್ವಋತು ಸಮಸ್ಯೆ 52 ದಿನಗಳ ಬಿಗಿ ಸಂಘರ್ಷಾತ್ಮಕ ವಾತಾವರಣದಿಂದ ಬದಲಾವಣೆಯ ಮುಂದಿನ ದಾರಿಕಾಣದೆ ವಿಚಲಿತವಾಗಿದೆ. ಮತ್ತಷ್ಟು ಓದು 
ಆಳ್ವರ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಯುತ್ತಿದೆಯೇ!?
– ಹರೀಶ್ಚಂದ್ರ ಶೆಟ್ಟಿ
ಕಾವ್ಯಶ್ರೀ ಎಂಬ ಹೆಣ್ಣುಮಗಳ ಆತ್ಮಹತ್ಯೆಯ ಪ್ರಕರಣದಲ್ಲಿ ಮೋಹನ ಆಳ್ವರನ್ನು ಸಿಕ್ಕಿ ಹಾಕಿಸಲು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿವೆ.ಜನರ ಭಾವನೆಗಳನ್ನು “ಎನ್ಕ್ಯಾಶ್” ಮಾಡಿಕೊಳ್ಳುವುದರಲ್ಲಿ ಪರಿಣಿತರಾದ ವ್ಯಕ್ತಿಗಳು ಪರದೆಯ ಹಿಂದೆ ನಿಂತುಕೊಂಡು ಪ್ರತಿಭಟನೆಯ ಮೂಲಕ” ಮೈಲೇಜ್ ” ಗಿಟ್ಟಿಸಿಕೊಳ್ಳುತ್ತಿದ್ದಾರೆ.ಮಣಿಪಾಲದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣವೊಂದು ಸುಮಾರು ಸಮಯದ ಹಿಂದೆ ಸಾಕಷ್ಟು ಸುದ್ದಿ ಎಬ್ಬಿಸಿತ್ತು.ಮೊನ್ನೆ ಮೊನ್ನೆ ಮಂಗಳೂರಿನ ಪ್ರಸಿದ್ಧ ವೈದ್ಯಕೀಯ ಕಾಲೇಜ್ ನ ವೈದ್ಯರೊಬ್ಬರನ್ನು ಅಪಹರಿಸಿ ಕೊಲ್ಲಲು ಪ್ರಯತ್ನಿಸಲಾಯಿತು..ಇನ್ನೊಂದು ವೈದ್ಯಕೀಯ ಕಾಲೇಜ್ ನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ.. ಒಂದೆರಡು ತಿಂಗಳ ಹಿಂದೆ,ಮತ್ತೊಂದು ಪ್ರತಿಷ್ಠಿತ ಕಾಲೇಜ್ ನ ವಿದ್ಯಾರ್ಥಿನಿಯೂ ಆತ್ಮಹತ್ಯೆ ಮಾಡಿಕೊಂಡಳು..ಆವಾಗಿನ ಎಲ್ಲಾ ಪ್ರಕರಣಗಳಲ್ಲಿ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳ ಒಡೆಯರುಗಳ ಬಗ್ಗೆ ತಪ್ಪಿಯೂ ಪ್ರಸ್ತಾಪಗಳು ಬರಲಿಲ್ಲ…ಯಾವ ಮಾಧ್ಯಮಗಳೂ ಅಂತಹ ಶಿಕ್ಷಣ ಸಂಸ್ಥೆಗಳ ಮಾಲೀಕರ ವಿಡಿಯೋ ಕಾನ್ಫರೆನ್ಸ್ ಮಾಡಿಸಿ,ವಕೀಲರಂತೆ ಲೈವ್ ಕ್ರಾಸ್ ಎಕ್ಸಾಮಿನೇಷನ್ ಮಾಡಲಿಲ್ಲ..
ಇಂತಹ ಘಟನೆ ನಡೆಯಲು ನಿಮ್ಮಂತ ಶಿಕ್ಷಣ ಸಂಸ್ಥೆಯ ಮಾಲೀಕರ ಪರೋಕ್ಷ ಕುಮ್ಮಕ್ಕು ಎಂದು ಯಾವ ಅಬ್ಬೆ ಪಾರಿಯೂ ಹೇಳುವ ಧೈರ್ಯ ತೋರಿಸಲಿಲ್ಲ ..ಯಾವುದೇ ಲೆಟರ್ ಹೆಡ್ ಸಂಘಟನೆಗಳ ನಾಯಕರುಗಳು ಜನರನ್ನು ಒಟ್ಟುಮಾಡಿಸಿಕೊಂಡು ಬಂದು ಪ್ರತಿಭಟನೆ ಮಾಡಲಿಲ್ಲ..ಆದರೆ ಆಳ್ವರ ಬಗ್ಗೆ ಎಲ್ಲವೂ ಕ್ರಮಬದ್ಧವಾಗಿ ನೆಡೆಯುತ್ತಿದೆ..ಈಗಿನ ಎಲ್ಲಾ ಪ್ರತಿಭಟನೆಗಳ ನೇತೃತ್ವ ವಹಿಸಿಕೊಂಡಿರುವ ವ್ಯಕ್ತಿಗಳು ಪ್ರತಿಭಟನೆಯ ನಾಯಕತ್ವ ವಹಿಸಿಕೊಳ್ಳುವ ಮೊದಲು ತಾವುಗಳು ಈ ತನಕ ಮಾಡಿರುವ ಒಂದಾದರೂ ಜನಪರ ಕೆಲಸಗಳನ್ನು ಜನರ ಮುಂದಿರಿಸಿಕೊಂಡು ಪ್ರತಿಭಟಿಸಲಿ….
ಸುಮಾರು ಮೂರು ನಾಲ್ಕು ವರ್ಷಗಳ ಹಿಂದೆ ಮೂಡುಬಿದರೆಯಲ್ಲಿ ನಡೆಯುವ “ಆಳ್ವಾಸ್ ನುಡಿ ಸಿರಿ ” ಮತ್ತು “ಆಳ್ವಾಸ್ ವಿರಾಸತ್ ” ಎಂಬ ಅಪೂರ್ವ ಕಾರ್ಯಕ್ರಮಗಳ ಬಗ್ಗೆ ಎಡಪಂಥೀಯ ಬುದ್ಧಿ ಜೀವಿಗಳು ಧ್ವನಿ ಎಬ್ಬಿಸಿ ಸಾಕಷ್ಟು ರಾದ್ಧಾಂತ ಮಾಡಿದ್ದರು..ಆವಾಗ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಪ್ ಮತ್ತು ಫೇಸ್ ಬುಕ್ ಗಳಲ್ಲಿ ಈಗಿನಂತೆ ಜನ ಸಂದಣಿ ಇರಲಿಲ್ಲ.. .ಹಾಗಾಗಿ ಅಂದು ಅವರಿಗೆ ತಮ್ಮ “ಹಿಡನ್ ಅಜೆಂಡಾ”ಗಳನ್ನು ಜನ ಸಾಮಾನ್ಯರ ನಡುವೆ ಹರಿಯಲು ಬಿಟ್ಟು ರಾಷ್ಟ್ರೀಯವಾದಿಗಳನ್ನು ಕಟ್ಟಿ ಹಾಕಲು ಆಗಿರಲಿಲ್ಲ..ಆದುದರಿಂದ ಈ ಬಾರಿ ಅವರೆಲ್ಲ ವ್ಯವಸ್ಥಿತವಾಗಿ ತಮಗಿರುವ ರಾಜಕೀಯ ವಶೀಲಿ ಬಾಜಿಗಳನ್ನು ಉಪಯೋಗಿಸಿಕೊಂಡು ಕೆಲಸ ಮಾಡುತ್ತಿದ್ದಾರೆ..ಆಗ ಆಳ್ವರ ಪರವಾಗಿ ನಾನೊಂದು ಲೇಖನ ಬರೆದಿದ್ದೆ..ಅದನ್ನು ಮತ್ತೊಮ್ಮೆ ನಿಮ್ಮ ನಡುವೆ ಹಂಚಿಕೊಂಡಿದ್ದೇನೆ. ಸ್ವಂತ ಬುದ್ದಿ ಮತ್ತು ವಿವೇಚನೆ ಇರುವವರಿಗೆ,ಆಳ್ವರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಬಗ್ಗೆ ಸ್ವಲ್ಪವಾದರೂ ಅರ್ಥವಾದೀತು. ಸಾಧ್ಯವಾದರೆ ಒಮ್ಮೆ ಓದಿಕೊಳ್ಳಿ…
………………………………………………………………………………….
ಪ್ರಜಾಪ್ರಭುತ್ವ ಎಂಬುದು ರಾಮನಂತೆ ; ರಾಜಕಾರಣಕ್ಕೆ ಬೇಕಿದೆ ನೀತಿ ಸಂಹಿತೆ
– ಸಂತೋಷ್ ತಮ್ಮಯ್ಯ
ಭಾಷೆ ಇದ್ದಮೇಲೆ ವ್ಯಾಕರಣವಿರುವಂತೆ, ಕಾವ್ಯ ಇದ್ದಮೇಲೆ ಕವಿಯೊಬ್ಬನೂ ಇರುವಂತೆ ರಾಜಕೀಯ ಪಕ್ಷ ಇದ್ದಮೇಲೆ ಅದರ ಹಿಂದೊಂದು ಸಿದ್ಧಾಂತವಿರಲೇಬೇಕು. ಪಕ್ಷದ ಹುಟ್ಟು ಕೂಡಾ ಒಂದು ಸಿದ್ಧಾಂತ, ಚಳವಳಿಗಳ ಬುನಾದಿಗಳ ಮೇಲೆ ಆಗಿರುತ್ತದೆ. ಈ ಸಿದ್ಧಾಂತಗಳು ಒಂಥರಾ ಚಪ್ಪರವಿದ್ದಂತೆ. ಆ ಚಪ್ಪರದ ಕೆಳಗೆ ಪ್ರತಿಷ್ಠಾಪಿತವಾದವುಗಳೇ ಪಕ್ಷಗಳು. ವಿಶ್ವಾದ್ಯಂತದ ರಾಜಕೀಯ ಪಕ್ಷಗಳ ಜಾತಕಗಳೆಲ್ಲವೂ ಸಾಧಾರಣವಾಗಿ ಹೀಗೆಯೇ. ಒಂದು ಉದ್ದೇಶ, ಒಂದು ಧ್ಯೇಯ, ಸಮಾಜದ ಅಶೋತ್ತರ, ರಾಷ್ಟ್ರೀಯತೆ, ಪ್ರಾಂತೀಯತೆ, ಪರಂಪರೆ ಮೊದಲಾದವುಗಳು ಆ ಚಪ್ಪರದ ಕಂಬಗಳು. ಸಿದ್ಧಾಂತಗಳನ್ನು ನೋಡಿದರೂ ಆಯಾ ಪಕ್ಷಗಳ ನಡೆ, ವರ್ತನೆಗಳನ್ನು ಸುಲಭವಾಗಿ ಕಂಡುಹಿಡಿದುಬಿಡಬಹುದು. ರಾಜಕೀಯ ಪಕ್ಷಗಳು ಸಿದ್ಧಾಂತಗಳಿಲ್ಲದಿರುವ ಸಾಧ್ಯತೆಗಳೇ ಇಲ್ಲ. ಕನಿಷ್ಠ ಅವು ವ್ಯಕ್ತಿಕೇಂದ್ರಿತವಾದ ಚೆಹರೆಯನ್ನಾದರೂ ಹೊಂದಿರುತ್ತವೆ. ಅಂಥ ಪಕ್ಷ ಆ ವ್ಯಕ್ತಿಯ ವರ್ತನೆ, ಪ್ರಭಾವವನ್ನೇ ಸಿದ್ಧಾಂತವೆಂಬಂತೆ ಬಣ್ಣಿಸಿಕೊಳ್ಳುತ್ತದೆ. ಇನ್ನು ಕೆಲವೊಮ್ಮೆ ಯಾವುದೋ ದೇಶದಲ್ಲಿ ಯಾವುದೋ ಒಂದು ಹೊತ್ತಿನಲ್ಲಿ ನಡೆದ ಒಂದು ಹತ್ಯಾಕಾಂಡವನ್ನೇ ಸಿದ್ಧಾಂತ ಎಂದು ಬಿಂಬಿಸುವ ರಾಜಕೀಯ ಪಕ್ಷಗಳೂ ಇವೆ. ತತ್ಕ್ಷಣದ ಒಂದು ಸ್ಪಂದನೆಯನ್ನೇ ರಾಜಕೀಯ ಸಿದ್ಧಾಂತ ಎಂದುಕೊಳ್ಳುವವರೂ ಇದ್ದಾರೆ. ರಾಷ್ಟ್ರೀಯತೆಯ ಹಂಗಿಲ್ಲದಿರುವ ಸಿದ್ಧಾಂತಗಳನ್ನೂ ಕೂಡಾ ಜಗತ್ತು ನೋಡಿದೆ, ಅನುಭವಿಸಿದೆ. ಅಧುನಿಕ ಪ್ರಜಾಪ್ರಭುತ್ವಕ್ಕೂ ಪೂರ್ವದಲ್ಲೇ ಇದ್ದ ಕೆಲವು ಗುಂಪುಗಳು, ಆ ಗುಂಪುಗಳಿಗೂ ಇದ್ದ ಸಿದ್ಧಾಂತಗಳನ್ನೂ ಜಗತ್ತು ನೋಡಿದೆ. ದೀರ್ಘ ಕಾಲ ಬಾಳಿದ ಗಟ್ಟಿತನದ ಸಿದ್ಧಾಂತಗಳನ್ನು, ಪಕ್ಷಗಳನ್ನೂ ನೋಡಿದೆ. ಆತುರದಿಂದ ಸಷ್ಟಿಯಾದವು ಅಷ್ಟೇ ಬೇಗ ಕಾಲವಾದುದನ್ನೂ ನೋಡಿದೆ. ನೆಪಮಾತ್ರಕ್ಕೆ ದೊಡ್ಡದಾಗಿ ಕಾಣುವ ಆದರೆ ಒಳಗೊಳಗೇ ಸತ್ತಂತಿರುವ ಪಕ್ಷ ಮತ್ತು ಸಿದ್ಧಾಂತವನ್ನೂ ನೋಡಿದೆ. ಮತ್ತು ಹಲವು ಅನಿವಾರ್ಯತೆಗಳಿಂದ ಸಿದ್ಧಾಂತದಿಂದ ಹೊರಳಿಕೊಂಡವುಗಳನ್ನು ಕೂಡಾ ಜಗತ್ತು ಹಲವು ಸಂದರ್ಭಗಳಲ್ಲಿ ನೋಡಿದೆ. ಭಾರತವಂತೂ ಅದನ್ನು ತೀರಾ ಹತ್ತಿರದಿಂದ ನೋಡಿದೆ.
IT/ED RAID ಗಳು ಹೇಗೆ ನಡೆಯುತ್ತವೆ?
ಗುಜರಾತಿನ ಶಾಸಕರನ್ನು ಬೆಂಗಳೂರಿನ ರೆಸಾರ್ಟಿನಲ್ಲಿ ತಂದಿಟ್ಟ ೩-೪ ದಿನಗಳ ಒಳಗೆಯೇ,ರಾಜ್ಯ ಸರ್ಕಾರದ ಪವರ್ ಮಿನಿಸ್ಟರ್ ಡಿ.ಕೆ ಶಿವಕುಮಾರ್ ಮೇಲೆ ನಡೆದ ಐಟಿ ದಾಳಿಯನ್ನು,ರಾಜ್ಯ ಸರ್ಕಾರ,ಕಾಂಗ್ರೆಸ್ ,ಕಾಂಗ್ರೆಸ್ ಬೆಂಬಲಿಸುವ ಪತ್ರಕರ್ತ ಮುಖವಾಡಗಳು ಮತ್ತು ಬೆಂಬಲಿಗರೂ ಅದೇ ರಾಗವನ್ನು ಹಾಡಿದರು.ರೇಡ್ ಎಂದರೇನು,ಅದಕ್ಕೆ ಬೇಕಾದ ಪೂರ್ವ ತಯಾರಿಗಳೇನು? ಹೇಗೆ ನಡೆಯುತ್ತದೆ ಎಂಬೆಲ್ಲ ಅಂಶಗಳು ಜನಸಾಮಾನ್ಯರಿಗೆ ತಿಳಿದಿರುವುದಿಲ್ಲ.ಅಂತಹ ಮಾಹಿತಿಯನ್ನು ಒಳಗೊಂಡ ಲೇಖನವಿದು.
– ಜೆಬಿಆರ್ ರಂಗಸ್ವಾಮಿ
IT/ED RAID ಆಗುತ್ತೆ ಅಂದರೆ ಬಲವತ್ತರವಾದ ಸಾಕ್ಷ್ಯಾಧಾರ ಗಳು ಇರಲೇಬೇಕು.ನೂರಿಪ್ಪತ್ತು ನೂರಮೂವತ್ತು ಅಧಿಕಾರಿಗಳು 150 ಕಾರುಗಳಲ್ಲಿ ಸಿಬ್ಬಂದಿಯನ್ನು ತುಂಬಿಕೊಂಡು, ಏಕಕಾಲದಲ್ಲಿ 39 – ರಿಂದ – 64 ಕಡೆ ರೇಡ್ ಮಾಡಲು ಹೊರಟರೆಂದರೆ ತಿಂಗಳೇನು? ವರ್ಷಗಟ್ಟಲೇ ಪೂರ್ವಸಿದ್ಧತೆ ನಡೆದಿರುತ್ತೆ.ಗುಜರಾತಿನ ಗುಜರಿ ಶಾಸಕರ ಸಲುವಾಗಿ ರೇಡ್ ಆಗಿದೆ ; ಪ್ರಜಾತಂತ್ರದ ಕಗ್ಗೊಲೆ ಯಾಗಿದೆ ಎಂಬಂತಹ ಪ್ರಲಾಪಗಳೆಲ್ಲವೂ ಅಜ್ಞಾನಿ ಹೇಳಿಕೆಗಳು ಮಾತ್ರ.ಎಮ್ಮೆ ಗಂಜಲ ಹುಯ್ದರೆ ಇರುವೆ ಕಣ್ಣಿಗೆ ಅದೇ ದೊಡ್ಡ ಜಲಪಾತದಂತೆ ಕಾಣುತ್ತೆ.ಈ ಪುಢಾರಿಗಳು ಪುಟಗೋಸಿ ರೆಸಾರ್ಟ್ ರಾಜಕೀಯವನ್ನೇ ಅಂತರಾಷ್ಟ್ರೀಯ ಮಟ್ಟದಷ್ಟು ದೊಡ್ಡದು ಅಂದುಕೊಂಡಿವೆ.
ಇರಲಿ.ಇಂತಹ ರೇಡ್ ಗಳ ಹಿನ್ನೆಲೆ ಹೇಗಿರುತ್ತೆ? ಹೇಗೆ,ಯಾಕೆ,ಯಾವ ಸಂದರ್ಭಗಳಲ್ಲಿ ರೇಡ್ ಮಾಡುತ್ತಾರೆ? ಎಂಬುದರ ವಾಸ್ತವಾಂಶಗಳನ್ನು ನೋಡಿ :
1 ) ರೇಡ್ ಆಗುವವನ ಅನೇಕ ವ್ಯವಹಾರ,ಅವ್ಯವಹಾರ ಕುರಿತಂತೆ ನಾನಾ ಮೂಲಗಳಿಂದ ನಾನಾ ದೂರುಗಳು ಮೊದಲೇ ಬಂದಿರುತ್ತವೆ.ಅವುಗಳ ಸತ್ಯಾಸತ್ಯತೆಗಳ ಬಗ್ಗೆ ಕೂಲಂಕುಷ ಗೋಪ್ಯ ವಿಚಾರಣೆ ತಿಂಗಳುಗಟ್ಟಲೇ ನಡೆದಿರುತ್ತೆ. ಅವುಗಳಲ್ಲಿ ಸತ್ಯಾಂಶ ಇರುವ ಸಂಗತಿಗಳು ಪಟ್ಟಿಯಾಗುತ್ತವೆ.ಇದೊಂದು ದೊಡ್ಡ ಕಸರತ್ತು.ಸಂಗ್ರಹಿಸಿರುವ ಮಾಹಿತಿ ನಿಜವೋ ಅಲ್ಲವೋ ಮತ್ತೆ ಮತ್ತೆ ಖಚಿತ ಪಡಿಸಿಕೊಳ್ಳುತ್ತಾರೆ. (sec 132 IT Act).
2 ) ಎಲ್ಲೆಲ್ಲಿ ರೇಡ್ ಮಾಡಬೇಕೋ ಆಯಾ ಮನೆ,ಜಾಗಗಳ ಪಕ್ಕಾ #ಚಕ್ಕುಬಂದಿ ಪಟ್ಟಿ ತಯಾರಾಗುತ್ತದೆ.ಆ ಮನೆಗೆ ರೇಡ್ ಮಾಡಲು ಎಷ್ಟು ಜನ ಅಧಿಕಾರಿ ಸಿಬ್ಬಂದಿ ನಿಯೋಜಿಸಬೇಕು ಎಂಬುದರ ಯೋಜನೆಯೂ ಸಿದ್ದವಾಗುತ್ತದೆ.
ನೆನಪಿರಲಿ : ಯಾವ ಅಧಿಕಾರಿಯ ನೇತೃತ್ವದಲ್ಲಿ ರೇಡ್ ಆಗುತ್ತದೆಯೋ,ಸ್ವತಃ ಆ ಅಧಿಕಾರಿ ಸಿಬ್ಬಂದಿಗಳಿಗೇ ತಾವು ಎಲ್ಲಿಗೆ,ಯಾರ ಮನೆಗೆ ದಾಳಿ ಇಡುತ್ತೇವೆ ಎಂಬ ವಿಷಯ ಕೊನೆಯತನಕ ತಿಳಿದಿರುವುದಿಲ್ಲ ! ( ನನ್ನದೇ ಅನುಭವ ! )
ಅದು ಅಷ್ಟು ಗೋಪ್ಯ. SECRET! And the Meaning of the secret is SECRET ONLY !
ನ್ಯಾಸ ಕಾದಂಬರಿಯ ವಿಮರ್ಶೆ
– ಚೈತನ್ಯ ಮಜಲುಕೋಡಿ
ಹರೀಶ ಹಾಗಲವಾಡಿಯವರ ನ್ಯಾಸ ಕಾದಂಬರಿಯನ್ನು ನನ್ನ ಸ್ನೇಹಿತರು ಓದು ಅಂತ ಹೇಳಿ ನನಗೆ ಹೇಳಿದ್ದರೂ ಕೂಡಾ, ಹಲವು ಬಾರಿ ನನಗೆ ಅದರ ಗಾತ್ರ ನೋಡಿ ಓದುವುದಕ್ಕೆ ಹೆದರಿಕೆಯಾಗಿತ್ತು. ಹಾಗೆಯೇ ಕಾದಂಬರಿಯ ವಸ್ತು ಸನ್ಯಾಸದ ಕುರಿತಾದುದಾದ್ದರಿಂದ, ಓದುವುದಕ್ಕೆ ಸ್ವಲ್ಪ ಸಿದ್ಧತೆಯೂ ಬೇಕು ಅಂತ ಅನ್ನಿಸ್ತಾ ಇತ್ತು. ಕಾದಂಬರಿಯನ್ನು ಓದುವುದಕ್ಕೆ ಕೈಗೆತ್ತಿಕೊಂಡ ಮೇಲೆ ನನ್ನ ಮೇಲೆ ಅಪಾರ ಪ್ರಭಾವ ಬೀರಿ ದಿನಗಟ್ಟಲೆ ಗುಂಗು ಹಿಡಿಯುವ ಹಾಗೆ ಮಾಡುವಷ್ಟು ಪ್ರಭಾವಶಾಲಿಯಾಗಿಬಿಟ್ಟಿತು. ಲೇಖಕರ ಮೊದಲ ಕಾದಂಬರಿ ಅಂತ ಗೊತ್ತೇ ಆಗದಷ್ಟು ನೈಪುಣ್ಯ, ಚಿಂತನೆಯ ಆಳ ವಿಸ್ತಾರ ಎರಡರಲ್ಲೂ ಪ್ರಶಾಂತ ಧಾಟಿಯಿಂದ ಒಳಗೊಳ್ಳುತ್ತಾ, ಹಲವು ಬಾರಿ ಭೈರಪ್ಪರ ಬರವಣಿಗೆಯ ನಿಬಿಡ ಶೈಲಿಯನ್ನು ಮತ್ತೆ ಮತ್ತೆ ನೆನೆಸುತ್ತ, ಅವರ ರಸ ಸೃಷ್ಟಿಯ ಪಾಕವು ಕಲೆಯ ಹದ ಮುಟ್ಟಿ ನಿರಪೇಕ್ಷ ಬರವಣಿಗೆ ಸಿದ್ಧಿಸಬೇಕು ಎಂಬ ಮಾತಿಗೆ ಪ್ರತ್ಯಕ್ಷ ನಿದರ್ಶನವಾಗಿ ಹೊರಹೊಮ್ಮಿದ ಸೊಗಸಾದ ಕೃತಿ. (ಈ ಮಾತನ್ನು ಅವರು ಎಲ್ಲಿ ಹೇಳಿದ್ದಾರೆಂದು ನನಗೆ ಮರೆತು ಹೋಗಿದೆ. ಆದರೂ ಎಲ್ಲೋ ಒಂದು ಕಡೆ ಅದರ ಉದ್ಧರಣೆ ಇದೆ) ಅದೂ ಅವರ ಇಪ್ಪೈದರ ತರುಣ ವಯಸ್ಸಿನಲ್ಲೇ ರೂಪುಗೊಂಡ ನಾನೂರು ಪುಟದ ಈ ಸಾಂದ್ರ ಬರಹ ಎಂತವರನ್ನೂ ಬೆಚ್ಚಿ ಬೀಳಿಸುತ್ತದೆ.ಸನ್ಯಾಸಿಯಾದವನು ಸಮಾಜಕ್ಕೆ ತೆತ್ತುಕೊಂಡು ಲೋಕೋದ್ಧಾರಕ್ಕೆ ಸಮರ್ಪಿಸಿಕೊಳ್ಳಬೇಕು, ಸ್ವಂತಕ್ಕೆ ಸಾಧನೆಯನ್ನೂ ಮಾಡಬೇಕು ಎಂಬ ಘನ ಉದ್ದೇಶ ಹೊತ್ತು ಹೊರಡುವ ಸಂಸಾರ ವಿಮುಖವಾದ ಧೋರಣೆಯು ಹೇಗೆ ಮತ್ತೆ ಅದೇ ಪ್ರಪಂಚದ ಪಾಶ ಮೋಹಗಳಲ್ಲಿ ಸಿಲುಕಿ ಮಂಕಾಗಿ ಜನಪ್ರಿಯತೆಗೆ ಎರವಾಗುತ್ತ, ಜನಮನ್ನಣೆಗೆ ಹಿಗ್ಗುತ್ತ ಸಾಗಿ, ಕಡೆಯಲ್ಲಿ ಮೂಲೋದ್ದಿಶ್ಯವೇ ಮೂಲೋತ್ಪಾಟನೆಯಾದ ದಿಗ್ಭ್ರಮೆ ಬಹಳ ಕಡೆ ಓದುಗನನ್ನು ಚಿಂತನೆಗೆ ಹಚ್ಚುತ್ತದೆ. ತಂದೆ ತಾಯಿಗಳನ್ನು ನೋಡಿಕೊಳ್ಳುವುದು ಮಕ್ಕಳ ಕರ್ತವ್ಯವೇ ಎಂಬಲ್ಲಿಂದ ಸಂನ್ಯಾಸದ ಅರ್ಥವೇನು ಎನ್ನುವವರೆಗೆ ನೂರಾರು ಮೂಲಭೂತ ಪ್ರಶ್ನೆಗಳನ್ನೆತ್ತುತ್ತ, ಅದಕ್ಕೆ ಪ್ರಾಮಾಣಿಕ ಉತ್ತರಗಳನ್ನೂ ತಡವುತ್ತ, ಹೆಚ್ಚು ಹೆಚ್ಚು ಆಲೋಚನೆಗೆ, ಜವಾಬ್ದಾರಿಯುತ ನಿರ್ಣಯ ನಡುವಳಿಕೆಗಳಿಗೆ ನಾವು ತೊಡಗಬೇಕೆಂಬ ಮಾನೋನ್ನತಿಗೂ ಕೃತಿಯು ಪ್ರೇರಣೆ ನೀಡುತ್ತದೆ.
ಭಾರತೀಯ ವೈಶಿಷ್ಟ್ಯ ಕಲ್ಪನೆ
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರಾ
ಕನ್ನಡ ಅನುವಾದ : ಡಾ.ಉದಯನ ಹೆಗಡೆ
(“ಭಾರತೀಯ ಕಲ್ಪನೆ” – ಅಂತಾರಾಷ್ಟ್ರೀಯ ಸಮ್ಮೇಳನ)
ಈ ಭಾಷಣದಲ್ಲಿ, ನಾನು “ಭಾರತೀಯ ವೈಶಿಷ್ಟ್ಯ” ಎಂಬ ಕಲ್ಪನೆಯ ಬಗ್ಗೆ, ಅದರ ತಾತ್ಪರ್ಯ ಮತ್ತು ವಿವಿಧ ಕಾರ್ಯಕ್ಷೇತ್ರಗಳಲ್ಲಿ ಈ ಕಲ್ಪನೆಯು ಹೇಗೆ ಹರಡಿದೆ ಎಂಬುದರ ಬಗ್ಗೆ ಚರ್ಚಿಸಲಿದ್ದೇನೆ. ಅಮೇರಿಕಾ ಸಂಯುಕ್ತ ಸಂಸ್ಥಾನದಲ್ಲಿನ ನನ್ನ ಜೀವನದ ಅನುಭವಗಳು “ಅಮೇರಿಕಾ ವೈಶಿಷ್ಟ್ಯ” ಎಂಬ ಕಲ್ಪನೆಯನ್ನು ಅರ್ಥ ಮಾಡಿಸಿದವು. ಇದು ಇನ್ನುಳಿದ ದೇಶಗಳ ಜನರಲ್ಲಿ ಇರಬಹುದಾದ ಸಮಾನರೀತಿಯ ಭಾವನೆಗಳನ್ನು ಹುಡುಕಲು ಪ್ರೇರೇಪಿಸಿತು. ಆನಂತರ “ಭಾರತೀಯ ವೈಶಿಷ್ಟ್ಯ” ಎಂಬುದರ ವಿವರಣೆಯ ತಾರ್ಕಿಕ ಹುಡುಕಾಟ ಆರಂಭವಾಯಿತು.
ಅಮೇರಿಕೀಯ ವೈಶಿಷ್ಟ್ಯಭಾವನೆ :
ತಮ್ಮ ಶ್ರೇಷ್ಠತೆ ಮತ್ತು ವಿಭಿನ್ನತೆಯ ಬಗ್ಗೆ ಅಮೆರಿಕನ್ನರಲ್ಲಿರುವ ಸಾಮೂಹಿಕ ಭಾವನೆಯ ಒಂದು ವಿಶಿಷ್ಟ ಸ್ಥಿತಿಯನ್ನು “ಅಮೇರಿಕೀಯ ವೈಶಿಷ್ಟ್ಯ ಭಾವನೆ” ಎನ್ನಬಹುದು. ಈ ಶ್ರೇಷ್ಠತಾಭಾವನೆ ಕ್ರೀಡೆಯಿಂದ ಹಿಡಿದು ವಿಜ್ಞಾನದವರೆಗೆ ಎಲ್ಲಾ ರಂಗಗಳಲ್ಲಿಯೂ ಹರಡಿದೆ. ಬಾಲ್ಯದಿಂದಲೇ ಈ ಭಾವನೆಯು ಜನರಲ್ಲಿ ಪೋಷಿಸಲ್ಪಡುತ್ತದೆ. ಇದರರ್ಥ ಕೆಲವು ಜನರನ್ನು ಅಲ್ಲಲ್ಲಿ ಸೇರಿಸಿ ಶ್ರೇಷ್ಠರನ್ನಾಗಿಸಲಾಗುತ್ತದೆ ಎಂದಲ್ಲ, ಆ “ವ್ಯವಸ್ಥೆಯು” ಶ್ರೇಷ್ಠ ಜನರನ್ನು ಹೇಗೆ ರೂಪಿಸುತ್ತದೆ ಎಂಬ ಭಾವನೆಯ ಬಗ್ಗೆ ಹೇಳುತ್ತಿದ್ದೇನೆ. ಭಾರತದಲ್ಲಿ ಕೆಲವು ಅತಿಶ್ರೇಷ್ಠ ವ್ಯಕ್ತಿಗಳ ಸ್ತುತಿಯನ್ನು ನಾವು ಕಾಣುತ್ತೇವೆ. ಆದರೆ ಅಮೇರಿಕೀಯ ಭಾವನೆಯು ತನ್ನ ವೈಶಿಷ್ಟ್ಯ ಅಮೇರಿಕದ “ವ್ಯವಸ್ಥೆ”ಯಲ್ಲಿದೆ ಎಂದು ಸಾಧಿಸುತ್ತದೆ, ಈ ಸಂದರ್ಭದಲ್ಲಿ “ವ್ಯವಸ್ಥೆ” ಮತ್ತು ಸಂಸ್ಕೃತಿಗಳನ್ನು ಸಮಾನಾರ್ಥಕಗಳನ್ನಾಗಿ ತೆಗೆದುಕೊಂಡಿದ್ದೇವೆ. ಹಾಗಾಗಿ ಅಮೇರಿಕದ ಸಂಸ್ಕೃತಿಯೇ ಸರ್ವಶ್ರೇಷ್ಠ ಎಂಬ ಭಾವನೆ ಅಮೇರಿಕದ “ವೈಶಿಷ್ಟ್ಯ ಭಾವನೆ” ಎಂದಾಗುತ್ತದೆ.
ಬಾಲಗಂಗಾಧರ ತಿಲಕರೆಂದರೆ ಸ್ವಾತಂತ್ರ್ಯ ಹೋರಾಟಗಾರ ಮಾತ್ರವಲ್ಲ ಧಾರ್ಮಿಕ ಸಾಮರಸ್ಯ ಮೂಡಿಸಿದ ಧೀಮಂತನಾಯಕ.
ಶಿವಾನಂದ ಶಿವಲಿಂಗ ಸೈದಾಪೂರ
ಬಾಲಗಂಗಾಧರ ತಿಲಕರೆಂದರೆ ಭಾರತದ ಸಂಪೂರ್ಣ ಸ್ವಾತಂತ್ರ್ಯ ಚಳುವಳಿಯ ಮೊದಲ ನಾಯಕ. “ಸ್ವರಾಜ್ಯವೇ ನನ್ನ ಜನ್ಮಸಿದ್ಧ ಹಕ್ಕು” ಎಂದು ಬ್ರಿಟನಿಯರ ವಿರುದ್ಧ ಘರ್ಜಿಸಿದ ಪ್ರಖರ ಹಿಂದೂ ರಾಷ್ಟ್ರವಾದಿ. ಧಾರ್ಮಿಕ ಹಬ್ಬಗಳಾದ ಶಿವಾಜಿ, ಸಾರ್ವಜನಿಕ ಗಣೇಶ ಉತ್ಸವಗಳ ಜನಕ. ಭಾರತೀಯರಲ್ಲಿ ಧಾರ್ಮಿಕ ಸಾಮರಸ್ಯ ಮೂಡಿಸಿ, ಅವರನ್ನು ಸ್ವಾತಂತ್ರ್ಯ ಹೋರಾಟಕ್ಕೆ ಅಣಿಗೊಳಿಸಿದ ಏಕೈಕ ಜನನಾಯಕ. ಸಮಸ್ತ ಭಾರತೀಯರ ಬಾಯಿಂದ “ಲೋಕಮಾನ್ಯ”ರೆಂದು ಕರೆಸಿಕೊಂಡವರು. ಮತ್ತಷ್ಟು ಓದು 
ಹಣ್ಣಾದ ಬದುಕು; ಸಾಂಸ್ಕೃತಿಕ ರಾಜಕಾರಣದ ಬೆಳಕು
– ಸಂತೋಷ್ ತಮ್ಮಯ್ಯ
ನಾಡಿನ ಖ್ಯಾತ ತತ್ವಶಾಸ್ತ್ರಜ್ಞರೊಬ್ಬರು ಕಲಾವಿಮರ್ಶಕ ಅನಂದ ಕೆಂಟಿಶ್ ಕುಮಾರಸ್ವಾಮಿಯವರನ್ನು ವಿವರಿಸುವುದು ಹೀಗೆ ; ಅಯೋಧ್ಯೆ ಕ್ಷೋಭೆಗೊಂಡಿತ್ತು. ಕೈಕೆಯಿಯ ಕೋಪ ಅರಮನೆಯ ಶಾಂತಿಯನ್ನು ತಿಂದು, ಪಟ್ಟಾಭಿಷೇಕದ ಹರ್ಷ ಕ್ಷಣಮಾತ್ರದಲ್ಲಿ ನೀರುಪಾಲಾಗಿ, ದಶರಥನಿಗೆ ಸಂದಿಗ್ದತೆ ಉಂಟಾಗಿ. ರಾಮನಿಗೆ ಕಾಡಿಗೆ ತೆರಳಲು ಸೂಚಿಸಿ ಆತ ಕುಸಿದು ಬಿದ್ದಿದ್ದ. ರಾಮ ಪಿತೃವಾಕ್ಯಪರಿಪಾಲನೆಗಾಗಿ ಕಾಡಿಗೆ ತೆರಳಿದ. ಇತ್ತ ಕುಸಿದಿದ್ದ ದಶರಥ ಅದೇ ಕೊರಗಿನಿಂದ ಕೊನೆಯುಸಿರೆಳದಿದ್ದ. ಅದೇ ಹೊತ್ತಿಗೆ ಕೈಕೆಯ ಮಗ ಭರತ ಸೋದರ ಶತ್ರುಘ್ನನೊಡನೆ ಕೇಕೆಯ ದೇಶಕ್ಕೆ ಹೋಗಿದ್ದನಲ್ಲ. ಅವರಿಗೆ ತುರ್ತು ಕರೆ ಹೋಯಿತು. ರಾಜಧಾನಿಗೆ ಕೂಡಲೇ ಮರಳಬೇಕೆಂಬ ಕರೆಗೆ ಸೋದರರಿಬ್ಬರೂ ಕುದುರೆಯೇರಿ ಅಯೋಧ್ಯೆಗೆ ದೌಢಾಯಿಸಿ ಬರುತ್ತಿದ್ದರು. ಇನ್ನೇನು ಕತ್ತಲಾಗುತ್ತಿದೆ ಎಂಬಷ್ಟರಲ್ಲಿ ಅವರು ಅಯೋಧ್ಯೆ ಹೊರವಲಯಕ್ಕೆ ಬಂದು ಮುಟ್ಟಿದ್ದರು. ಹೊರವಲಯದಲ್ಲೊಂದು ಭವನ. ಆ ಭವನಕ್ಕೊಬ್ಬ ಕಾವಲುಗಾರ. ಭವನದಲ್ಲಿ ಇದುವರೆಗೆ ಆಗಿಹೋದ ಇಕ್ಷ್ವಾಕು ವಂಶದ ಸಾಮ್ರಾಟರ ಪ್ರತಿಮೆಗಳ ಸಾಲುಗಳು. ಭರತನಿಗೆ ಏನನ್ನಿಸಿತೋ ಏನೊ ಶತ್ರುಘ್ನ ಬಂದದ್ದೇ ಇದೆ ಪೂರ್ವಿಕರಿಗೊಮ್ಮೆ ನಮಸ್ಕರಿಸಿ ಹೊರಡೋಣ ಎಂದ. ಕಾವಲುಗಾರ ದೊಂದಿ ತಂದ. ಸೋದರರು ಭವನ ಹೊಕ್ಕರು. ಉದ್ದಕ್ಕೆ ನಿಂತ ಇತಿಹಾಸಪುರುಷರು. ಅಣ್ಣತಮ್ಮರು ಕೊನೆಯಿಂದ ಅಜ್ಜಂದಿರನ್ನು ನೋಡುತ್ತಾ ಬಂದರು. ಪ್ರತಿಮೆಗಳನ್ನು ನೋಡುತ್ತಾ ಶತ್ರುಘ್ನ ಮೆಲುದನಿಯಲ್ಲಿ ಹೆಸರೆಣಿಸತೊಡಗಿದ, ಅಜ, ರಘು, ದಿಲೀಪ… ಅಷ್ಟರಲ್ಲಿ ಭರತ, ಅಲ್ಲಲ್ಲ ತಪ್ಪುಎಂದು ಮತ್ತೆ ಎಣಿಸಿ ನೋಡಿದ ಆತನೂ ತಪ್ಪಿದ. ದಶರಥನೂ ಕಾಲವಾಗಿ ಪ್ರತಿಮೆಯಾಗಿ ನಿಂತುಬಿಟ್ಟಿದ್ದಾನೆ ಎಂದು ಎಂದು ತಿಳಿಯದ ರಾಜಕುಮಾರರು ಮತ್ತೆ ಮತ್ತೆ ಲೆಕ್ಕ ತಪ್ಪಿದರು. ದೊಂದಿಯೂ ಇತ್ತು, ಬೆಳಕೂ ಇತ್ತು, ಆ ಭವನವನ್ನು ಅವರು ಎಷ್ಟೋ ಭಾರಿ ನೋಡಿದ್ದರು ಕೂಡಾ. ಆದರೂ ಲೆಕ್ಕ ತಪ್ಪಿದರು!
ಈ ಜಿಜ್ಞಾಸೆಯನ್ನು ಬಿಚ್ಚಿಟ್ಟವರು ಆನಂದ ಕೆಂಟಿಶ್ ಕುಮಾರಸ್ವಾಮಿಯವರು ಎಂದರು ಆ ಭಾಷಣಕಾರರು. ಅಂದರೆ ಸನಾತನ ಪರಂಪರೆಯಲ್ಲಿ ಮಾನವ ತದ್ರೂಪನ್ನು ಪ್ರತಿಮೆಯಾಗಿ ಕೆತ್ತುವ ಪರಂಪರೆ ಇರಲಿಲ್ಲ ಎಂಬುದನ್ನು ಆನಂದ ಕುಮಾರಸ್ವಾಮಿಯವರು ಶೋಧಿಸಿದ್ದರು.
ಕಾರ್ಗಿಲ್ ಕಥನವೆಂದರೆ ಅದ್ಯಾವುದೋ ಹಾಲಿವುಡ್, ಬಾಲಿವುಡ್ ಸಿನೆಮಾ ಕಥೆಯಲ್ಲ!
– ಶಿವಾನಂದ ಶಿವಲಿಂಗ ಸೈದಾಪೂರ.
ಇಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿ ದಿನವು ಕಾಮೇಂಟ್ಸ್ ಚಕಮಕಿಗಳನ್ನು ಪ್ರತಿಯೊಬ್ಬರು ನೋಡಿಯೇ ನೋಡುತ್ತೆವೆ. ಸಾಕಷ್ಟು ದುಡ್ಡು ತೆಗೆದುಕೊಂಡು ನಟಿಸುವ ಹೆಸರಿಗೆ ಮಾತ್ರ ಹೀರೊಗಳಾಗಿರುವ ನಟರಿಗೆ ಇಂದು ಪ್ಯಾನ್ಸ್ ಕ್ಲಬ್ಗಳು ಬೇಕಾಬಿಟ್ಟಿಯಾಗಿ ಬೆಳೆದಿವೆ. ಒಬ್ಬ ನಟನ ಅಭಿಮಾನಿಗಳು ಮತ್ತೊಬ್ಬ ನಟನ ಮೇಲೆ ಎಗರಾಡುವುದು ಏರಾಡುವುದು ಮಿತಿ ಮಿರಿದೆ. ರೀಲ್ ಕಥೆಯ ನಾಯಕರಿಗೆ ರಿಯಲ್ ಬಿಲ್ಡಪ್ ಅಂತು ಅತಿಯಾಗಿದೆ. ಕಟೌಟ್ ಮೇಲೆ ಬೀಳುವ ಹಾಲಿನ ಕ್ಯಾನ್ ಗಳಿಗೇನು ಕೊರತೆಯಿಲ್ಲ. ಪ್ರತಿಯೊಂದು ಭಾಷೆಯಲ್ಲಿ ವಾರಕ್ಕೆ ಕನಿಷ್ಠ ಸುಮಾರು ಮೂರರಿಂದ ನಾಲ್ಕು ಸಿನೇಮಾ ಬಿಡುಗಡೆಯಾದರೂ ಕೂಡ ಸಾಮಾನ್ಯವಾಗಿ ಎಲ್ಲವನ್ನೂ ನೋಡುತ್ತೆವೆ. ಮತ್ತೆ ಮುಂದಿನ ವಾರದ ಹೋಸ ಸಿನೆಮಾ ಬರುವರೆಗೂ ಅದನ್ನು ಮೆಲುಕು ಹಾಕುತ್ತೆವೆ. ಬಿಡುಗಡೆಗೊಂಡ ಸಿನೇಮಾದ ನಾಯಕ, ನಾಯಕಿ, ಕಳನಾಯಕ, ನಿರ್ದೇಶಕ, ನಿರ್ಮಾಪಕನಿಂದ ಹಿಡಿದು ಪೋಷಕ ನಟನವರೆಗೂ ಎಲ್ಲರೂ ನೆನಪಿನಲ್ಲಿ ಉಳಿಯುತ್ತಾರೆ. ಆದರೆ…! ಮತ್ತಷ್ಟು ಓದು 




