ಸಂಸ್ಕೃತಕ್ಕಾಗಿ ಯುದ್ಧ
– ಪ್ರವೀಣ ಜಿ ಹೆಗ್ಡೆ
“ಅಮೆರಿಕನ್ ಓರಿಯಂಟಲಿಸ್ಮ್” ಅಥವಾ ಅಮೇರಿಕಾ ಚಿಂತನಾ ವಿಧಾನ/ರೀತಿ , ಇದು ಅಮೇರಿಕಾದ ಇತಿಹಾಸದಿಂದ ಹುಟ್ಟಿರುವಂಥದ್ದು. ಯೂರೋಪಿನಿಂದ ಅಮೆರಿಕಾಕ್ಕೆ ವಲಸೆ ಹೋದ ಬಿಳಿಯರು , ಅಲ್ಲಿಯ ಮೂಲ ನಿವಾಸಿಗಳ ಜೊತೆ ಕಾದಾಡಿ ಹಿಂಸೆಯ ಮೂಲಕ, ಇಲ್ಲವೇ ಅವರ ಜೊತೆಗಿದ್ದಂತೆ ವರ್ತಿಸಿ ಆಂತರಿಕವಾಗಿ ನಿಶ್ಯಕ್ತಿಗೊಳಿಸುವ ಮೂಲಕ ತಮ್ಮ ಅಧಿಪತ್ಯವನ್ನು ಅಮೇರಿಕಾದಲ್ಲಿ ಸ್ಥಾಪಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯ.
ಈ ಪಾಶ್ಚಾತ್ಯ ದೃಷ್ಟಿಯ ಚೌಕಟ್ಟನ್ನೇ ಉಪಯೋಗಿಸಿ ,ಪಾಶ್ಚಾತ್ಯವಲ್ಲದ ಸಂಸ್ಕೃತಿಗಳನ್ನೂ ಅಧ್ಯಯಿಸುವುದು ಸಾಮಾನ್ಯವಾಗಿ ಜಗತ್ತಿನಾದ್ಯಂತ ರೂಢಿಯಲ್ಲಿರುವ ವಿಷಯ. ಆದರೆ ಇಲ್ಲೊಂದು ಅತ್ಯಂತ ಗಮನಾರ್ಹವಾದ ವಿಷಯವಿದೆ, ಅದ್ಯಾವುದೆಂದರೆ ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯ ಮೇಲೆ ಹೆಚ್ಚಾಗುತ್ತಿರುವ ಅಮೇರಿಕಾ ಪ್ರಣೀತ ಅಧ್ಯಯನದ ಪ್ರಾಬಲ್ಯ. ಅದರಲ್ಲಿಯೂ ಗಮನಿಸಲೇಬೇಕಾದ ಅತೀ ಎಚ್ಚರಿಕೆಯ ಮತ್ತು ಸೂಕ್ಷ್ಮ ವಿಷಯವೇನೆಂದರೆ,ಅವರುಗಳು ಮೇಲು ಮೇಲೆ ಭಾರತದ ಸಂಸ್ಕೃತಿಯ ಹಿತೈಷಿ ಎನ್ನುವಂತೆ ವರ್ತಿಸಿದರೂ, ಭಾರತದ ಪೂಜ್ಯ ,ಪವಿತ್ರ ಸಂಪ್ರದಾಯಗಳ ಮತ್ತು ಸನಾತನ ಧರ್ಮದ ಬಗೆಗೆ ಅವರಿಗಿರುವ ಕನಿಷ್ಠ ಗೌರವ ಮತ್ತು ಕಾಳಜಿ.
ರಾಜೀವ ಮಲ್ಹೋತ್ರ ಅವರು ತಮ್ಮ ಪುಸ್ತಕದಲ್ಲಿ “ಅಮೇರಿಕಾ ಚಿಂತನಾ ರೀತಿ” ಎಂಬುದು ಏನು, ಅದು ಭಾರತೀಯ ಸಂಸ್ಕೃತಿಯ ಅಧ್ಯಯನದಲ್ಲಿ ಯಾವರೀತಿಯಲ್ಲಿ ಉಪಯೋಗಿಸಲ್ಪಡುತ್ತಿದೆ ? ಎನ್ನುವುದನ್ನು ಅತಿ ಸ್ಪಷ್ಟವಾಗಿ ವಿವರಿಸಿದ್ದಾರೆ. ಪುಸ್ತಕದ ತಲೆ ಬರಹ ಹೇಳುವಂತೆ,ಸಂಸ್ಕೃತ ರಾಜಕೀಯ ಸಾಧನವೋ ಅಥವಾ ಪವಿತ್ರವೋ ? ಶೋಷಣೆಯೋ ಅಥವಾ ವಿಮೊಚನೆಯೋ?ಸತ್ತಿಹುದೋ ಅಥವಾ ಬದುಕಿಹುದೋ?
ಮಲ್ಹೋತ್ರರವರು, ಅಮೇರಿಕಾ ಶಿಕ್ಷಣದಲ್ಲಿ ಬೇರೂರಿರುವ ಹೊಸ ರೀತಿಯ “ಓರಿಯಂಟಲಿಸ್ಮ್“ ಅಥವಾ ಚಿಂತನಾ ವಿಧಾನ/ರೀತಿಯ ಬಗೆಗೆ ಬರೆದಿರುವ ಅತೀ ಪ್ರಮುಖರು. ಅಮೆರಿಕಾ ದೇಶವು ಜಗತ್ತಿನ ದೊಡ್ಡಣ್ಣನಾಗಿ, ಎಲ್ಲ ಕ್ಷೇತ್ರಗಳಲ್ಲಿಯೂ ಹಿಡಿತ ಸಾಧಿಸುವುದರೊಂದಿಗೆ, ಹಿಂದಿನಿಂದ ನಡೆದುಕೊಂಡು ಬಂದಿದ್ದ ಯೂರೋಪ್ ಕೇಂದ್ರಿತವಾಗಿದ್ದ ಭಾರತೀಯ ಧರ್ಮ, ಸಂಸ್ಕೃತಿಗಳ ಅಧ್ಯಯನವು ಈಗ ಅಪ್ರಸ್ತುತವಾಗಿ, ಅದರ ಸ್ಥಾನವನ್ನು ಅಮೇರಿಕ ಕೇಂದ್ರಿತ ಭಾರತದ ಅಧ್ಯಯನ ಆಕ್ರಮಿಸಿಕೊಂಡಿದೆ.
ಅಮೇರಿಕಾದ ಅಧ್ಯಯನ ಮಾಡುವ “ಚಿಂತನಾ ವಿಧಾನ” ಭಾರತೀಯ ಸಂಸ್ಕೃತಿಗೆ ಹೇಗೆ ಅಪಾಯಕಾರಿ ?
ಕಂದ ನೀನು ಸಾಯಲೇಕೆ…
– ಮಂಜುನಾಥ ಕೊಳ್ಳೇಗಾಲ
ಕಳೆದೆರಡು ದಿನದಿಂದ ಆ ಮುಗ್ಧ ಕರುವಿನ ಚಿತ್ರ ಪದೇಪದೇ ನಿದ್ದೆಗೆಡಿಸುತ್ತಿದೆ. ಮೊನ್ನೆ ಕೇರಳದಲ್ಲಿ ಕೆಲವು ರಕ್ಕಸರು ಪ್ರತಿಭಟನೆಯ ಹೆಸರಿನಲ್ಲಿ ಕಡಿದು ತಿಂದು ತೇಗಿದರಲ್ಲ,ಕಡಿಯಲು ಟೆಂಪೋ ಹತ್ತಿಸುವ ಕೆಲವೇ ಕ್ಷಣಗಳ ಹಿಂದೆ ಕೂಡ, ಬಲಿಗೆ ಹೋಗುವ ಪ್ರಾಣಿಗಳ ಕಣ್ಣುಗಳಲ್ಲಿ ಸಾಮಾನ್ಯವಾಗಿ ಕಾಣುವ ಭಯದ ಸೂಚನೆಯೂ ಇಲ್ಲ ಅದರ ಮೊಗದಲ್ಲಿ. ಇನ್ನೈದೇ ನಿಮಿಷದಲ್ಲಿ ತನ್ನನ್ನು ಕೊಲ್ಲುತ್ತಾರೆಂಬ ಅರಿವೂ ಇರಲಾರದು ಪಾಪದ್ದಕ್ಕೆ. ಕೇವಲ ಯಾರದೋ ಮೇಲಿನ ಹುರುಡಿಗಾಗಿ ಅದನ್ನು ಕತ್ತರಿಸಿ ಚೆಲ್ಲಿದ ಕಟುಕರು ಆ ಮೊಗವನ್ನು, ಆ ಭಾವವನ್ನು ಕ್ಷಣಕಾಲವಾದರೂ ನಿರುಕಿಸಿದ್ದರೇ? ಖಂಡಿತಾ ಇರಲಿಕ್ಕಿಲ್ಲ.
ಬಾಲ್ಯದಲ್ಲಿ ನಾನು ಕೊಟ್ಟಿಗೆಯಲ್ಲಿ ಕೂತು ದಿನಗಟ್ಟಲೆ ಹರಟುತ್ತಿದ್ದ ತುಂಗೆ ಕರುವೂ ಬಹುತೇಕ ಹೀಗೇ ಇತ್ತು. ಅದೇ ಬಟ್ಟಲುಗಣ್ಣು, ಅದೇ ಹೊಳಪು, ಅದೇ ಮಾಟವಾದ ಮೋರೆ, ತುಸುವೇ ನಗುವಂತಿದ್ದ ಮುಖಭಾವ, ಹಣೆಯ ಮೇಲೆ ಅದೇ ಬಿಳಿಯ ಲಾಂಛನ. ಮೈಬಣ್ಣವೊಂದು ತುಸು ತಿಳಿದು, ವಯಸ್ಸೊಂದು ಇನ್ನೂ ಚಿಕ್ಕದು… ಅಂಥದ್ದೊಂದು ಮುದ್ದಾದ ಜೀವಿಗೆ ಇಂಥ ದಾರುಣವಾದ ಅಂತ್ಯವೂ ಸಾಧ್ಯವಿರಬಹುದೆಂದು ಯೋಚಿಸಲೂ ಆಗದ ವಯಸ್ಸು ಅದು. ಹಾಲು ಕರೆಯುವುದನ್ನು ನಿಲ್ಲಿಸಿದ ಹಸುವಿಗೂ ಮನೆಯಲ್ಲಿ ಹೊರೆ ಹುಲ್ಲು, ಒಂದಷ್ಟು ’ತಿಂಡಿ’ ದಕ್ಕುತ್ತಿತ್ತು; ಮೇಯಲು ಗೋಮಾಳವಿತ್ತು. ಸತ್ತವುಗಳನ್ನು ಸಾಮಾನ್ಯವಾಗಿ ಮಾದಿಗರು ಒಯ್ಯುತ್ತಿದ್ದರಾದರೂ ಕೆಲವು ಮನೆಗಳಲ್ಲಿ ಮನೆಯ ಸದಸ್ಯರಂತೆಯೇ ಇರುತ್ತಿದ್ದ ಅವುಗಳು ಆನಂತರ ಛಿದ್ರಛಿದ್ರವಾಗಿ ಹೋಗುವುದನ್ನು ಕಲ್ಪಿಸಿಕೊಳ್ಳಲಾಗದೇ ಕೆಲವು ಮನೆಯವರು ತಮ್ಮ ಜಾಗೆಯಲ್ಲೇ ಮಣ್ಣು ಮಾಡುತ್ತಿದ್ದುದೂ, ಅದಕ್ಕಾಗಿ ಕೆಲವೊಮ್ಮೆ ಮಾದಿಗರು ಬಂದು ಜಗಳವಾಡುತ್ತಿದ್ದುದೂ ಉಂಟು – ಆಗ ಅದರ ಹಿಂದಿನ ಆರ್ಥಿಕತೆ, ಸಾಮಾಜಿಕ ನಡಾವಳಿಗಳು ನನಗಿನ್ನೂ ಅರ್ಥವಾಗದ ವಯಸ್ಸು. ಹೋರಿಗರುಗಳನ್ನೂ ಅವು ಹಾಲು ಕುಡಿಯುವುದನ್ನು ಬಿಡುವವರೆಗೆ ಇಟ್ಟುಕೊಂಡು ಆಮೇಲೆ ಅದನ್ನು ರೈತರಿಗೆ ಮಾರುತ್ತಿದ್ದುದನ್ನೂ, “ಕಟುಕರಿಗೆ ಮಾರಿಗೀರೀಯ” ಎಂಬ ಕೊನೆಯ ಎಚ್ಚರಿಕೆಯೊಂದಿಗೆ ಬೀಳ್ಕೊಡುತ್ತಿದ್ದುದನ್ನೂ ನೋಡಿದ್ದೇನೆ. ಆಮೇಲೆ ಅವುಗಳ ಗತಿ ಏನಾಗುತ್ತಿತ್ತೋ ಅರಿಯೆ – ಕೆಲವೊಮ್ಮೆ ಅವು ’ಮನೆ’ಯನ್ನು ಹುಡುಕಿಕೊಂಡು ಕೊಟ್ಟಿಗೆಗೇ ಮರಳಿ ಬಂದದ್ದೂ, ಆಗೆಲ್ಲಾ ಅವಕ್ಕೊಂದಷ್ಟು ಹುಲ್ಲು ಹಾಕಿ, ಮೈದಡವಿ, ’ಬುದ್ಧಿ ಹೇಳಿ’ ಮತ್ತೆ ಹೊಸ ಯಜಮಾನರ ಬಳಿ ಕಳಿಸುತ್ತಿದ್ದುದೂ ಉಂಟು.
ಒಂದು ಹೊತ್ತು ಉಪವಾಸ ಮಾಡಿ, ಅದರ ಹಣದಲ್ಲಿ ಗೋವುಗಳನ್ನು ಉಳಿಸಿಕೊಳ್ಳುವ ವಿನೂತನ ಅಭಿಯಾನ #GiveUpAMeal ಹಿಂದಿನ ಕತೆ..
ಅಜಿತ್ ಶೆಟ್ಟಿ
ಹೆರಂಜೆ ದೊಡ್ಡಮನೆ.
ಗೋಹತ್ಯೆ ತಡೆಗಾಗಿನ ಕೂಗು ಭಾರತದಲ್ಲಿ ಬಹಳ ಹಿಂದಿನದು, ಇತ್ತೀಚಿನ ಡಿಜಿಟಲ್ ಇಂಡಿಯಾ ಯುಗದಲ್ಲಿ ಅದು ಸೋಷಿಯಲ್ ಮೀಡಿಯದಲ್ಲೂ ಸದ್ದು ಮಾಡುತ್ತಿದೆ.. ನಮ್ಮ ಯುವಕರು ಗೋಹತ್ಯೆ ನಿಲ್ಲಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬಡಿದುಕೊಳ್ಳುವಾಗ ಸೋಕಾಲ್ಡ್ ಪ್ರಗತಿಪರರು ಸೋಷಿಯಲ್ ಮೀಡಿಯದಲ್ಲಿರುವ ಮಂದಿಗೆ ತಲೆ ಇಲ್ಲ, ಅವರಿಗೆ ಅಷ್ಟು ಪ್ರೀತಿ ಇದ್ದರೆ ಒಂದೆರಡು ಗೋವುಗಳನ್ನು ಸಾಕಲಿ, ಗೋಶಾಲೆ ನಡೆಸಲಿ ಹೀಗೆ ಹಲವಾರು ಪ್ರಶ್ನೆಗಳನ್ನೊಡ್ಡಿ ಬಾಯಿ ಮುಚ್ಚಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ನಮ್ಮ ಯುವಕರ ಕೂಗು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಇದೆಯಾ ಅಥವಾ ನಿಜವಾಗಲೂ ಗೋವುಗಳನ್ನು ಉಳಿಸಿಕೊಳ್ಳುವ ಕಾಳಜಿ ಇದೆಯಾ, ಪೂಜ್ಯ ಭಾವನೆ ಇಟ್ಟುಕೊಂಡಿದ್ದಾರ ಎಂದು ನೋಡಿದರೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ನಡೆದ ಒಂದು ಅಭಿಯಾನ ಯುವ ಜನತೆ ಬಗ್ಗೆ ಹೆಮ್ಮೆ ಮೂಡಿಸುತ್ತದೆ ಎಂದು ಭಾವಿಸುತ್ತೇನೆ. ಈ ಅಭಿಯಾನದ ಒಳಗೆ ಹೋಗುವ ಮೊದಲು ಅಭಿಯಾನದ ಪೂರ್ವ ಪ್ರೇರಣೆಯ ಕಡೆ ಒಮ್ಮೆ ಗಮನ ಹರಿಸೋಣ. ನಮ್ಮ ದೇಶದಲ್ಲಿ ಗೋವು ಪ್ರತಿ ರೈತನ ಬೆನ್ನೆಲುಬು, ದೇಶಿ ಗೋವುಗಳು ಅವನತಿ ಹೊಂದಿದರೆ ರಾಸಾಯನಿಕ ಮುಕ್ತ ಕೃಷಿ ಎನ್ನುವುದು ಕನಸಾಗುವುದು ನಿಶ್ಚಿತ. ಇಂತಹ ಸತ್ಯಗಳು ನಮ್ಮ ಸಮಾಜಕ್ಕೆ, ಜನನಾಯಕರಿಗೆ ಗೊತ್ತಿಲ್ಲ ಅಂತೇನು ಇಲ್ಲ.. ಆದರೂ ಓಲೈಕೆ ರಾಜಕಾರಣಕ್ಕಾಗಿ ಗೋಹತ್ಯೆಯನ್ನು ನಿಲ್ಲಿಸಲಾಗುತ್ತಿಲ್ಲ, ನಾವು ಗಾಂಧೀಜಿ ಅನುಯಾಯಿಗಳು ಎಂದವರೇ ದಶಕಗಳ ಕಾಲ ದೇಶವನ್ನು ಆಳಿದರೂ ಗಾಂಧಿ ಕನಸನ್ನು ನನಸು ಮಾಡದೆ ಹೊಣೆಗೇಡಿಗಳಂತೆ ವರ್ತಿಸಿದ್ದಾರೆ. ಇವೆಲ್ಲವುಗಳ ನಡುವೆ ಬರಗಾಲದಿಂದ ಸಾಯುತ್ತಿರುವ ಜಾನುವಾರುಗಳನ್ನು ಉಳಿಸಿ ರೈತನ ಬಾಳನ್ನು ಬಲಗೊಳಿಸುವ ಪ್ರಾಮಾಣಿಕ ಕಾರ್ಯವನ್ನಾದರೂ ಮಾಡುತ್ತಾರೆ ಎಂದುಕೊಂಡರೆ ಅದನ್ನು ಮಾಡದೇ ಅದರಲ್ಲೂ ಭ್ರಷ್ಟಾಚಾರ ಮಾಡಿಕೊಂಡು ಮಜ ಮಾಡುತ್ತಿದ್ದಾರೆ.. ಇಂತಹ ಸಂಧಿಘ್ನ ಪರಿಸ್ಥಿತಿಯಲ್ಲಿ ಮಠಗಳು, ಸಂಘ ಸಂಸ್ಥೆಗಳು ರೈತರ ಬೆನ್ನಿಗೆ ನಿಂತು ಗೋಶಾಲೆಗಳನ್ನು ತೆರೆದು ಗೋವುಗಳನ್ನು ಉಳಿಸಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ದಾರೆ. ಇದರ ಒಂದು ಭಾಗವಾಗಿ ರಾಮಚಂದ್ರ ಪುರ ಮಠವು ಸಹ ೧೪ ಜಿಲ್ಲೆಗಳಲ್ಲಿ ಗೋಶಾಲೆಗಳನ್ನು ತೆರೆದು ಗೋವುಗಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಮತ್ತಷ್ಟು ಓದು 
ಅಮಿತ್ ಷಾ ಲಕ್ಷದ್ವೀಪ ಪ್ರವಾಸ ವಿಸ್ತಾರದ ಮತ್ತೊಂದು ಮಜಲು…
ಸಂತೋಷ್ ಬಿ.ಎಲ್
ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ
ಭಾಜಪ
ವಿಸ್ತಾರ-ವಿಕಾಸ ಬಿಜೆಪಿಗೆ ಒಂದೇ ನಾಣ್ಯದ ಎರಡು ಮುಖಗಳು. ಬಹುಮತದಲ್ಲಿ ನಿಲ್ಲದೇ ಸರ್ವವ್ಯಾಪಿಯಾಗಬೇಕು.. ಸರ್ವಸ್ಪರ್ಶಿಯಾಗಬೇಕು ಎಂಬುದು ಬಿಜೆಪಿಯ ಗುರಿ. ವಿಚಾರ-ವಿಕಾಸ-ಸಂಘಟನೆ ನಮ್ಮ ಬೆಳವಣಿಗೆಯ ಮೂರು ಆಯಾಮಗಳು. ವಿಕಾಸ ಪುರುಷ ನರೇಂದ್ರ ಮೋದಿಯವರ ನೇತೃತ್ವ ವಿಸ್ತಾರ ಪುರುಷ ಅಮಿತ್ ಷಾರವರ ಸಾರಥ್ಯ ಇಂದು ಬಿಜೆಪಿಯನ್ನು ದೇಶದ ಮೂಲೆ ಮೂಲೆಗಳಿಗೆ ಕೊಂಡೊಯ್ಯುತ್ತಿದೆ. ಪ್ರತೀ ಮನೆ-ಮನವನ್ನು ಮುಟ್ಟುವ ಯೋಜನೆಯೊಡನೆ ಪಂಚಾಯತ್ನಿಂದ ಪಾರ್ಲಿಮೆಂಟ್ವರೆಗೆ ಎಂಬ ಗುರಿಯೊಡನೆ ಬಿಜೆಪಿಯ ಯಾತ್ರೆ ಭರದಿಂದ ಸಾಗಿದೆ. ಪಂ.ದೀನದಯಾಳ ಉಪಾಧ್ಯಾಯ ಜನ್ಮಶತಾಬ್ದಿ ವರ್ಷ ಈ ಯಾತ್ರೆಗೆ ಇನ್ನಷ್ಟು ಹುರುಪು ತುಂಬಿದೆ. 3 ಸಾವಿರಕ್ಕೂ ಮಿಕ್ಕಿ 1 ವರ್ಷದ ‘ವಿಸ್ತಾರಕ’ರು ಹಾಗೂ 4 ಲಕ್ಷಕ್ಕೂ ಹೆಚ್ಚು 15 ದಿನ ಸಮಯ ನೀಡುವ ‘ವಿಸ್ತಾರಕ’ರನ್ನು ಹೊರಡಿಸುವುದು ನಮ್ಮ ಗುರಿ. ಆ ಗುರಿಗೆ ಚೈತನ್ಯ ತುಂಬಲು ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾರವರು ಸ್ವತಃ ತಾವು 15 ದಿನ ವಿಸ್ತಾರಕರಾಗಿ ‘ವಿಸ್ತಾರ ಯಾತ್ರೆ’ ಘೋಷಣೆ ಮಾಡಿದರು. ಪಶ್ಚಿಮ ಬಂಗಾಲ, ಓರಿಸ್ಸಾ, ತೆಲಂಗಾಣ, ಲಕ್ಷದ್ವೀಪ ಹಾಗೂ ಗುಜರಾತ್ನಲ್ಲಿ 3 ದಿನ ಕೆಲಸ ಮಾಡುವ ಸಂಕಲ್ಪ ಘೋಷಿಸಿದರು. ಈ ಘೋಷಣೆಯೇ ಪಕ್ಷದ ಒಳಗೆ ವಿದ್ಯುತ್ ಸಂಚಾರ ಮೂಡಿಸಿತು. ಮತ್ತಷ್ಟು ಓದು 
ಯಶಸ್ಸಿನಿಂದ ಮುನ್ನುಗ್ಗುತ್ತಿರುವ #ಗೋಪ್ರಾಣಭಿಕ್ಷೆ
-ಶಿಶಿರ್ ಅಂಗಡಿ
ಸಾಮೂಹಿಕ ಪ್ರಾರ್ಥನೆ,ಸಮಾಜದ ಸಹಾಕರ ~ ಯಶಸ್ಸಿನಿಂದ ಮುನ್ನುಗ್ಗುತ್ತಿರುವ #ಗೋಪ್ರಾಣಭಿಕ್ಷೆ
ಪ್ರಾರ್ಥನೆ ಅಂದ್ರೆ ನಿಸ್ವಾರ್ಥವಾಗಿ ಒಳ್ಳೆಯ ಕೆಲಸಗಳನ್ನು ಮಾಡೋದು.ಪ್ರಾರ್ಥನೆ ಅಂದ್ರೆ ರಸ್ತೆ ದಾಟಲು ಕಷ್ಟ ಪಡುತ್ತಿರುವ ವೃದ್ಧರಿಗೆ, ಮಕ್ಕಳಿಗೆ ಸಹಾಯ ಮಾಡುವದು.ಪ್ರಾರ್ಥನೆ ಅಂದ್ರೆ ಇನ್ನೊಬ್ಬರಿಗೆ ಹೃದಯಾಂತರಾಳದಿಂದ ಶುಭವನ್ನು ಹಾರೈಸುವುದು.ಸಾಮೂಹಿಕ ಪ್ರಾರ್ಥನೆಗೆ ದೇವರನ್ನೇ ಧರೆಗಿಳಿಸುವ ಶಕ್ತಿ ಇದೆ ಅಂತ ಹೇಳ್ತಾರೆ.ಪ್ರಾರ್ಥನೆ ಎಂದರೆ ದೇವರ ಎದುರಿನಲ್ಲಿ ಬೇಡುವುದು ಎಷ್ಟು ಸರಿಯೋ, ಇನ್ನೊಬ್ಬರಿಗೆ ಒಳಿತು ಬಯಸುವುದು, ಒಳಿತನ್ನು ಮಾಡುವುದು ಕೂಡ ಅಷ್ಟೇ ಸರಿ ಎನ್ನುತ್ತಾರೆ ಬಲ್ಲವರು.
ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಸಾವಿನಂಚಿನಲ್ಲಿರುವ ಗೋವುಗಳ ಶೋಷನೀಯ ಸ್ಥಿತಿ ಮನಗಂಡು ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರಭಾರತಿ ಮಹಾಸ್ವಾಮಿಗಳವರು ಕೊಟ್ಟ ಒಂದು ಕರೆಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಗೋಪ್ರೇಮಿಗಳು ದೇಶದ ಉದ್ದಗಲಗಳಿಂದ ದೊಡ್ಡ ಮಟ್ಟದಲ್ಲಿ ಸ್ಪಂದಿಸಿ ಸರಳ ಭೋಜನ – ಸರಳ ಜೀವನದೊಟ್ಟಿಗೆ ವಾರಕ್ಕೆ ಒಂದು ಹೊತ್ತಿನ ಊಟ ಬಿಟ್ಟು ಆ ಹಣವನ್ನು ಗೋಪ್ರಾಣಭಿಕ್ಷೆಗೆ ಸಮರ್ಪಿಸಿದ್ದಾರೆ. ಈ ಮೂಲಕ ಸಾವಿರಾರು ಟನ್ ಮೇವು ಖರೀದಿಗೆ ಸಹಕರಿಸಿದ್ದಾರೆ. ನೂರಾರು ಕಾರ್ಯಕರ್ತರು ಬೆಟ್ಟದ ತಪ್ಪಲಿನಲ್ಲಿ ಅವಿಶ್ರಾಂತವಾಗಿ ಸೇವೆ ಸಲ್ಲಿಸುತ್ತಾ ದಿನನಿತ್ಯ ಸಮಯಕ್ಕೆ ಸರಿಯಾಗಿ ಗೋವಿಗೆ ಮೇವು ತಲುಪುವಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ #GiveUpAMeal ಅಭಿಯಾನಗಳ ಮೂಲಕ ದೇಶದ ಒಳ ಹೊರಗಿನ ಒಂದು ಮಿಲಿಯನಗೂ ಅಧಿಕ ಜನರನ್ನು ತಲುಪಿದ್ದು ಬಹುಪಾಲು ಜನ ಈ ಅಭಿಯಾನಕ್ಕೆ ತನು-ಮನ-ಧನದ ಸಹಕಾರ ನೀಡಿದ್ದಾರೆ.
ಹಾಗೇಯೆ ದೃಶ್ಯ ಹಾಗೂ ಪತ್ರಿಕಾ ಮಾಧ್ಯಮಗಳೂ, ನ್ಯೂಸ್ ಪೋರ್ಟಲ್,ಬ್ಲಾಗುಗಳೂ ಕೂಡ ಅಭಿಯಾನದ ಪ್ರತಿಹಂತದಲ್ಲೂ ವಿಷಯಗಳನ್ನು ಸಮಾಜಕ್ಕೆ ತಲುಪಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿವೆ.
ಆಫ್ರಿಕಾದ ಕಾಡಿನಲ್ಲೊಂದು ಸರ್ಜಿಕಲ್ ಸ್ಟ್ರೈಕ್ (ಭಾಗ-1)
– ತಾರನಾಥ ಸೋನ
ಲೆಫ್ಟಿನಂಟ್ ಮುಸ ಬಂಗುರಾ ಬಂಧಿಯಾಗಿದ್ದ ಗುಂಡಿ ತುಂಬಾ ಆಳವೇನೂ ಇರಲಿಲ್ಲ, ಕೇವಲ 2 ಮೀಟರ್ ಅಷ್ಟೇ. ಆದರೆ ಸುತ್ತಲು ಹರಡಿದ್ದ ಮಾನವ ತ್ಯಾಜ್ಯ, ಕೆಸರು ನರಕದರ್ಶನ ಮಾಡಿಸುತಿತ್ತು. ಅದಲ್ಲದೆ ಹಲ್ಲೆಯಿಂದ ದೇಹದಲ್ಲಿ ಅದ ಗಾಯಗಳು ಅಪಾರ ಹಿಂಸೆ ಉಂಟುಮಾಡುತ್ತಿದ್ದವು. ಮದ್ಯ ಮತ್ತು ಮಾದಕ ಪದಾರ್ಥ ಸೇವಿಸಿ ಕ್ರೂರವಾಗಿ ದಂಡಿಸುತ್ತಿದ್ದ ನರ ರಾಕ್ಷಸರ ಕೈಯಿಂದ ಹೊರಬಂದು ಬದುಕುವ ಸಾಧ್ಯತೆಯೂ ಇರಲಿಲ್ಲ. ”ಉಳಿದ ಬ್ರಿಟಿಷರನ್ನು ಅವರು ಬಿಟ್ಟುಬಿಡಬಹುದು, ಆದರೆ ನಾನು ಅವರಷ್ಟು ಮೌಲ್ಯಯುತವಾಗಿಲ್ಲ, ಸೇನೆಗೆ ನಿಷ್ಠನಾಗಿ ಸೇವೆ ಸಲ್ಲಿಸಿದಕ್ಕೆ ಬಂಡುಕೋರರಿಂದ ಸಿಕ್ಕ ಶಿಕ್ಷೆ ಇದು” ಎಂದು ಅವರ ಮನಸ್ಸು ಹೇಳುತ್ತಿತ್ತು. ಏಕೆಂದರೆ ಅವರು ಸಿಯಾರ್ ಲಿಯೋನ್ ಸೇನೆಯ ಸೈನಿಕ. ಮತ್ತಷ್ಟು ಓದು 
ಕೈದಾಳ..!
– ರವಿಶಂಕರ್
ಹೊಯ್ಸಳರ ಕಾಲದ ಶಿಲ್ಪ ಕಲೆಗೆ ಪ್ರಸಿದ್ದವಾದ ಬೇಲೂರು, ಹಳೇಬೀಡು ಇವುಗಳ ಹೆಸರನ್ನು ಎಲ್ಲರೂ ಕೇಳೇ ಇರುತ್ತೀರಿ! ಅದರ ಶಿಲ್ಪಿ ಜಕಣಾಚಾರಿಯ ಹೆಸರನ್ನು ಕೇಳದೇ ಇರುವವರೂ ಕಡಿಮೆ ಎಂದೇನನ್ನ ಅನಿಸಿಕೆ! ಇದರ ಹೊರತಾಗಿ ಜಕಣಾಚಾರಿಯ ಹುಟ್ಟೂರಾದ “ಕೈದಾಳ”ದ ಬಗ್ಗೆ ಕೇಳಿರುವುದು/ತಿಳಿದಿರುವುದು ಕಡಿಮೆ ಎಂದು ನನ್ನ ಬಲವಾದ ನಂಬಿಕೆ ;)! ಪ್ರೂವ್ ಮೀ ರಾಂಗ್!
“ಕ್ರೀಡಾಪುರ” ಇದು ಕೈದಾಳದ ಮೊದಲ ಹೆಸರು! ಇಲ್ಲಿ ಜನಿಸಿದ ಜಕಣಾಚಾರಿ ಶಿಲ್ಪಕಲೆಯಲ್ಲಿ ಪಳಗಿ, ಸ್ಥಳೀಯ ಮುಖ್ಯಸ್ಥನಾದ ‘ನೃಪ ಹಾಯ’ ಎಂಬುವನಲ್ಲಿ ತನ್ನ ವೃತ್ತಿಜೀವನವನ್ನು ಶುರು ಮಾಡಿದಎಂದು ತಿಳಿದು ಬಂದಿದೆ! ವೃತ್ತಿ ಜೀವನದ ಮಹತ್ವಾಕಾಂಕ್ಷೆಯಿಂದ ಮದುವೆಯ ನಂತರ ಮನೆ ಬಿಟ್ಟ ಯುವಕನಾದ ಜಕಣಾಚಾರಿ, ನಾಡಿನ ಉದ್ದಗಲಕ್ಕೂ ತಿರುಗಿ ತನ್ನ ಅಸ್ತಿತ್ವ ಹಾಗೂ ಖ್ಯಾತಿಯನ್ನು ಗಳಿಸಿದ್ದು ಹೊಯ್ಸಳರ ನಾಡಿನಲ್ಲಿ. ಇದರ ಸಾಕ್ಷಿಗಳೇ ಬೇಲೂರು ಹಾಗೂ ಹಳೇಬೀಡಿನ ದೇವಾಲಯಗಳು! ಮತ್ತಷ್ಟು ಓದು 
ಯಕ್ಷಗಾನದಲ್ಲಿ ಏಸುಕ್ರಿಸ್ತ
– ವಿನಾಯಕ ಹಂಪಿಹೊಳಿ
ಏಸುಕ್ರಿಸ್ತನ ಜೀವನ ಕಥೆಯನ್ನು ಯಕ್ಷಗಾನದ ಆಟದ ರೂಪದಲ್ಲಿ ತೋರಿಸುವ ಪ್ರಯತ್ನವೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಒಂದು ಗುಂಪು ಇಂಥದೊಂದು ಪ್ರಯತ್ನವು ಕ್ರಿಶ್ಚಿಯಾನಿಟಿಯನ್ನು ಹರಡುವ ಹುನ್ನಾರದ ಭಾಗವೆಂದು ಭಾವಿಸಿದೆ. ಏಸುಕ್ರಿಸ್ತನ ಜೀವನವನ್ನು ಭಾರತೀಯ ಕಲೆಯೊಂದರ ಮೂಲಕ ತೋರಿಸಿ, ಏಸುವು ಇಡೀ ಮಾನವ ಸಮುದಾಯವನ್ನು ರಕ್ಷಿಸಲು ಹುಟ್ಟಿದ್ದಾನೆ ಎಂಬ ಕ್ರಿಶ್ಚಿಯಾನಿಟಿಯ ನಂಬಿಕೆಯೊಂದನ್ನು ಹರಡಿ, ಜನರನ್ನು ಮತಾಂತರಗೊಳಿಸುವ ಯೋಜನೆಯ ಒಂದು ಭಾಗ ಎಂಬುದು ಮೊದಲನೇ ಗುಂಪಿನ ವಾದವಾಗಿದೆ. ಹೀಗಾಗಿ ಇಂಥ ಪ್ರಯೋಗಗಳು ಉಚಿತವಲ್ಲ ಎಂಬುದು ಈ ಗುಂಪಿನವರ ಅಭಿಪ್ರಾಯ.
ಇನ್ನೊಂದು ಗುಂಪು ಇಂಥ ಹೊಸ ಪ್ರಯತ್ನವನ್ನು ಸ್ವಾಗತಿಸುತ್ತದೆ. ಕಲೆಗೆ ಯಾವುದೇ ನಿರ್ಬಂಧಗಳಿರಕೂಡದು. ಯಕ್ಷಗಾನವು ಯಾರೊಬ್ಬರ ಸೊತ್ತೂ ಅಲ್ಲ. ಭಾರತದಲ್ಲಿರುವ ಕ್ರಿಶ್ಚಿಯನ್ನರು ತಮ್ಮ ಯಕ್ಷಗಾನ ಕಲೆಯಲ್ಲಿ ಏಸುವನ್ನೇಕೆ ರೂಪಿಸಿಕೊಳ್ಳಬಾರದು ಎನ್ನುವದು ಎರಡನೇ ಗುಂಪಿನವರ ವಾದವಾಗಿದೆ. ಯಕ್ಷಗಾನದಲ್ಲಿ ಹೊಸ ಪ್ರಯೋಗಗಳು ನಡೆಯಬೇಕು. ಈ ರೀತಿಯ ಪ್ರಯೋಗಗಳು ಕೋಮು ಸೌಹಾರ್ದಕ್ಕೆ ಅಡಿಗಲ್ಲಾಗಿರುತ್ತವೆ. ಆ ನಿಟ್ಟಿನಲ್ಲಿ ಇಂಥ ಪ್ರಯೋಗಗಳನ್ನು ಅನುಮತಿಸಬೇಕು ಎನ್ನುವದು ಈ ಗುಂಪಿನವರ ಅಭಿಪ್ರಾಯವಾಗಿದೆ.
ಯಕ್ಷಗಾನದಲ್ಲಿ ಏಸುವಿನ ಕತೆಯನ್ನು ಅಳವಡಿಸುವದು ಚರ್ಚುಗಳ ಹುನ್ನಾರವೇ ಆಗಿರಬೇಕೆಂಬುದು ಕೇವಲ ಅನುಮಾನವಷ್ಟೇ ಆಗಿದೆ, ಒಂದು ವೇಳೆ ಅದು ಹುನ್ನಾರವೇ ಆಗಿದ್ದರೂ, ಆಗಿರದಿದ್ದರೂ ಅದೊಂದೇ ಕಾರಣವು ಅಂತಹ ಪ್ರಯೋಗಗಳನ್ನು ನಿಲ್ಲಿಸಲು ಸಮರ್ಥವಾದ ವಾದವಾಗುವದಿಲ್ಲ. ಅಲ್ಲದೇ ಕಲಾವಿದನಿಗೆ ಸ್ವಾತಂತ್ರ್ಯವಿರಬೇಕೆಂಬುದು ಎಲ್ಲರಿಗೂ ಒಪ್ಪಿತವಾಗುವ ಅಂಶವೇ ಆಗಿದೆ. ಹೀಗಾಗಿ ಯಕ್ಷಗಾನದಲ್ಲಿ ಏಸುವಿನ ಕತೆಯು ಅಳವಡಿಸಲ್ಪಡಬಾರದು ಎನ್ನುವ ವಾದವು ತರ್ಕಬದ್ಧವಾಗಿ ಯೋಚಿಸಿದಾಗ ಸಮರ್ಪಕವೆಂದು ಅನಿಸುವದಿಲ್ಲ.
ಟ್ರಿಗೋನೋಮೆಟ್ರಿ
– ಎಸ್. ಎನ್. ಸೇತುರಾಂ
“ಅನಾಥ ಆಗ್ಹೋಗಿದ್ದೀನಿ, ಅಪ್ಪಾ, ಅಮ್ಮ, ತಂಗಿ ಯಾರೂ ತಲೆ ಹಾಕಲ್ಲ. ನಂದೇ ಹಣೆಬರಹ ಅನ್ನೋ ಹಾಗೆ ಬಿಟ್ಟಿದ್ದಾರೆ. ಬಂದೋರೂ ಅಷ್ಟೇ. ನೋಡ್ತಾರೆ. ಚೆನ್ನಾಗಿ ಮಾತಾಡ್ತಾರೆ. ಹೆಚ್ಚು ಕಮ್ಮಿ ದಿನವೇ ನಿರ್ಧಾರವಾಗಿ ಹೋಗುತ್ತೆ. ಮಿಕ್ಕಿದ್ದಕ್ಕೆ phone ಮಾಡ್ತೀವಿ ಅಂತಂದು ಹೋಗ್ತಾರೆ. ಮತ್ತೆ phone ಇರೋಲ್ಲ.”
ಅಳ್ತಿದ್ದ ಮಾಧವ, ಮಗಳಿಗೆ ಮೂವತ್ತಾಗಿದೆ, B.E. ಓದಿದ್ದಾಳೆ, ಎಮ್ಮೆಸ್ಸು ಈಗ MBA ಮಾಡ್ತಿದ್ದಾಳೆ. ಮದುವೆಯಾಗಬೇಕು!
“70 ಸಾವಿರ ಬರ್ತಿದೆ ತಿಂಗಳಿಗೆ, ಅವಳ್ದೇ 25 ಲಕ್ಷ ಇಟ್ಟಿದ್ದೀನಿ. ಗಂಡು ಹೂಂ ಅಂದ್ರೆ.. ಎರಡೇ ದಿನದ notice, ಅವ್ರು ಹೇಳಿದ ಛತ್ರದಲ್ಲಿ ಮದುವೆ ಮಾಡ್ತೀನಿ. ನೋಡು ಗುರು.. please” ಅಂಗಲಾಚ್ತಿದ್ದ.
ನಾನೇನು ಮಾಡಬಹುದಿತ್ತು. ಕೂತು ಕೇಳಬಹುದು ಅಷ್ಟೇ. ತಲೆ ಆಡಿಸ್ದೆ.
“ಬದುಕಿನಲ್ಲಿ ಸೋಲೇ ಕಂಡಿರಲಿಲ್ಲ. ಇದೊಂದು ವಿಷಯದಲ್ಲಿ ಸೋತಿದ್ದೀನಿ. ಆಗ್ತಿಲ್ಲ ನನ್ನ ಕೈನಲ್ಲಿ. ನೀನು ಹೇಳಿದ ಹಾಗೆ ಕೇಳ್ತೀನಿ. ಕೂತ್ಕೋ ಅಂದ್ರೆ ಕೂಡ್ತೀನಿ.. ನಿಲ್ಲು ಅಂದ್ರೆ ನಿಲ್ತೀನಿ.. ಒಂದು ಗಂಡು ಹುಡುಕಿ ಕೊಡೊ. ನಂದು ಮಾತು ಸರಿ ಇಲ್ಲ ಅಂತಾರೆ. ನೀನೇ ಮಾತಾಡು… ಮಗಳ ಹತ್ತಿರ ನೇರ ಮಾತಾಡೋದಿದ್ರೂ ಸರೀನೆ. ನನ್ನ ಮನೆಯಲ್ಲಿ ಸಂಪೂರ್ಣ ಸ್ವಾತಂತ್ರ್ಯ ನಿಂದು. ದಯವಿಟ್ಟು ಏನಾದ್ರೂ ಮಾಡು.”
ಬಿಕ್ಕುತ್ತಿದ್ದ, ಕಣ್ಣಲ್ಲಿ ನೀರು ಧಾರಾಕಾರ ಹರೀತಿತ್ತು. ಒಂದು ಕ್ಷಣ ಅಂತಃಕರಣ ಕಲುಕ್ತು. ನನ್ನ ಕಣ್ಣಲ್ಲು ಮನುಷ್ಯನ ಅಸಹಾಯಕ ಸ್ಥಿತಿಗೆ ಮರುಗಿ ನೀರು ತುಂಬ್ತು. ನಂತರದ ಕ್ಷಣದಲ್ಲಿ ಮನುಷ್ಯನ ಪರಿಸ್ಥಿತಿ ಬಗ್ಗೆ ಅಸಹ್ಯ ಬಂತು.
ಮತ್ತಷ್ಟು ಓದು 






