ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 26:
ಸರ್ದಾರ್ ಅಜಿತ್ ಸಿಂಗ್
– ರಾಮಚಂದ್ರ ಹೆಗಡೆ
ಪಂಜಾಬ್ ಪ್ರಾಂತ್ಯದಲ್ಲಿ ಬ್ರಿಟಿಷ್ ಸರ್ಕಾರದ ದೌರ್ಜನ್ಯದ ವಿರುದ್ಧ ದನಿಯೆತ್ತಿದ, ಜನರನ್ನು ಸಂಘಟಿಸಿದ ಅಗ್ರಶ್ರೇಣಿಯ ಕ್ರಾಂತಿಕಾರಿ ಸರ್ದಾರ್ ಅಜಿತ್ ಸಿಂಗ್. ಇವರು ಕ್ರಾಂತಿಸಿಂಹ ಸರ್ದಾರ್ ಭಗತ್ ಸಿಂಗ್ ರ ಚಿಕ್ಕಪ್ಪ. 1947 ರ ಆಗಸ್ಟ್ 15 ರಂದು ಭಾರತ ಸ್ವತಂತ್ರವಾದಾಗ ‘ಥ್ಯಾಂಕ್ ಗಾಡ್, ನಮ್ಮ ಕೆಲಸ, ಹೋರಾಟ ಯಶಸ್ವಿಯಾಯಿತು’ ಎಂದು ಖುಷಿಯಿಂದ, ಸಂಭ್ರಮದಿಂದ ಆ ಕ್ಷಣಗಳನ್ನು ಕಂಡು ಅಂದೇ ‘ಧನ್ಯತೆಯ ಸಾವು’ ಕಂಡವರು ಅಜಿತ್ ಸಿಂಗರು. ಸ್ವತಂತ್ರ ಭಾರತದ ಕನಸು ಕಂಡು ಅದಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿ ಆ ಕನಸು ನನಸಾಗುವ ಮುನ್ನವೇ ಮರೆಯಾದವರು ಕೋಟ್ಯಾಂತರ ಮಂದಿ. ಹಾಗೆ ಕನಸು ನನಸಾದ ಕ್ಷಣವನ್ನು ಕಣ್ತುಂಬಿಕೊಳ್ಳುವ ಭಾಗ್ಯ ಅನೇಕರಿಗೆ ಸಿಗಲೇ ಇಲ್ಲ. ಸರ್ದಾರ್ ಅಜಿತ್ ಸಿಂಗರು ಆ ವಿಷಯದಲ್ಲಿ ಅದೃಷ್ಟವಂತರು. ಹಾಗಾಗಿ ಅವರದು ಧನ್ಯತೆಯ ಸಾವು. ಮತ್ತಷ್ಟು ಓದು 
ಭವಿಷ್ಯದ ಅರಮನೆಯ ಕನಸೇನೋ ಚಂದ, ಆದರೆ….
– ಗುರುರಾಜ ಕೋಡ್ಕಣಿ. ಯಲ್ಲಾಪುರ
‘ಕಂಗ್ರಾಟ್ಸ್ ಅನಿತಾ.. ನೀನು ಸಾಧಿಸಿಬಿಟ್ಟೆ ಮಗಳೇ, ನೀನು ಸಾಧಿಸಿ ಬಿಟ್ಟೆ. ನಿನಗೀಗ ಕ್ಯಾಂಪಸ್ ಸಂದರ್ಶನದಲ್ಲಿ ಕೆಲಸ ಸಿಕ್ಕಿರುವ ಕಂಪನಿ ಎಂಥಹ ಅದ್ಭುತ ಸಂಸ್ಥೆ ಗೊತ್ತೆ..?? ಈ ಒಂದು ವರ್ಷದ ಅವಧಿಯಲ್ಲೇ ಅದು ಸಾವಿರಾರು ಕೋಟಿಗಳಷ್ಟು ಲಾಭ ಪಡೆದುಕೊಂಡಿದೆ. ನಿನ್ನ ಶ್ರಮ ಸಾರ್ಥಕವಾಯಿತು ಮಗು. ದೀಪಾ, ಎಲ್ಲರಿಗೂ ಐಸ್ ಕ್ರೀಮ್ ತರಿಸು, ನಮ್ಮ ಮಗಳ ಈ ಯಶಸ್ಸನ್ನು ಖುಷಿಯಾಗಿ ಆಚರಿಸೋಣ’ ಎಂದು ಕೈಯಲ್ಲಿದ್ದ ಪತ್ರವನ್ನು ಅಪ್ಪ ಸಂತಸದಿಂದ ಓದುತ್ತಿದ್ದಾಗ ಅನಿತಾಳದ್ದು ನಿರ್ವಿಕಾರ ಮುಖಭಾವ. ಪದವಿ ಮುಗಿಯುವ ಮುನ್ನವೇ ಆಕೆಯ ಪ್ರತಿಭೆಯನ್ನು ಗಮನಿಸಿದ್ದ ಪ್ರತಿಷ್ಟಿತ ಕಂಪನಿಯೊಂದು ಆಕೆಗೆ ಉದ್ಯೋಗವನ್ನು ನೀಡಿತ್ತು. ಉದ್ಯೋಗ ಖಾತ್ರಿಯ ಪತ್ರವನ್ನೋದುತ್ತಿದ್ದ ಅಪ್ಪನಿಗೆ ಹೆಮ್ಮೆಯಿಂದ ಕೊರಳುಬ್ಬಿದ ಅನುಭವ. ಸಂತಸದ ಹಿಂದೆಯೇ ಅಮ್ಮನದ್ದೊಂದು ಸಣ್ಣ ಎಚ್ಚರಿಕೆ,’ಈಗ ಕೇವಲ ಐಸ್ ಕ್ರೀಮ್ ತಿಂದು ಸಂಭ್ರಮಿಸೋಣ ಮಗಳೇ, ನೀನು ಇನ್ನಷ್ಟು ಶ್ರಮಪಡು. ಹೆಚ್ಚು ಹೆಚ್ಚು ಏಕಾಗ್ರತೆಯಿಂದ ಓದು. ಕಡಿಮೆಯೆಂದರೂ ತೊಂಬತ್ತೈದು ಪ್ರತಿಶತ ಅಂಕಗಳನ್ನು ನೀನು ಗಳಿಸಬೇಕು. ನಿನ್ನ ಅಂಕಗಳನ್ನು, ಪ್ರತಿಭೆಯನ್ನು ನೋಡಿ ಕಂಪನಿ ನಿನಗೆ ಒಂದೇ ವರ್ಷದಲ್ಲಿ ಡಬ್ಬಲ್ ಪ್ರಮೋಷನ್ ಕೊಟ್ಟು ಬಿಡಬೇಕು. ಹಾಗೆ ಅಭ್ಯಾಸದಲ್ಲಿ ನಿನ್ನನ್ನು ನೀನು ತೊಡಗಿಸಿಕೊ ಮಗಳೇ, ಓದುವುದೊಂದೇ ನಿನ್ನ ಗುರಿಯಾಗಬೇಕು ಈಗ. ಇದು ಕಷ್ಟಪಡುವ ಕಾಲ. ಮುಂದೆ ಭವಿಷ್ಯದಲ್ಲಿ ನೀನು ಸಾಧನೆಯ ಶಿಖರದೆತ್ತರಕ್ಕೆ ನಿಂತಾಗ ಈಗ ಪಟ್ಟ ಶ್ರಮವೂ ನಿನಗೆ ಸಿಹಿಯಾದ ಅನುಭವವಾಗಿ ಭಾಸವಾಗುತ್ತದೆ ಮಗು. ಈಗ ಕೇವಲ ಓದುವುದೊಂದೇ ನಿನ್ನ ಗಮ್ಯ, ಶ್ರಮಪಡು ಅಷ್ಟೇ’ ಎನ್ನುವ ಅಮ್ಮನ ಮಾತುಗಳನ್ನು ಕೇಳಿದ ಅನಿತಾಳ ಮುಖದಲ್ಲಿ ಭಾವಹೀನ ಶುಷ್ಕನಗೆಯೊಂದು ಮೂಡಿದ್ದನ್ನು ಆಕೆಯ ಸಾಧನೆಯನ್ನು ಆಸ್ವಾಧಿಸುವ ಸಂಭ್ರಮದಲ್ಲಿದ್ದ ಪೋಷಕರು ಗಮನಿಸಲೇ ಇಲ್ಲ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 25:
ಪ್ರೀತಿಲತಾ ವಡ್ಡೆದಾರ್
– ರಾಮಚಂದ್ರ ಹೆಗಡೆ
ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಿಡಿದೆದ್ದು ಕ್ರಾಂತಿ ಚಟುವಟಿಕೆ ನಡೆಸಿ ಆತ್ಮಾರ್ಪಣೆಗೈದ ಬಂಗಾಳದ ಮೊದಲ ಮಹಿಳಾ ಬಲಿದಾನಿ ಪ್ರೀತಿಲತಾ ವಡ್ಡೆದಾರ್. ಚಿತ್ತಗಾಂಗ್ ನ ಪಹರ್ತಳಿಯ ಯೂರೋಪಿಯನ್ ಕ್ಲಬ್ ನಲ್ಲಿ ಹಾಕಲಾಗಿದ್ದ ‘ನಾಯಿಗಳಿಗೆ ಮತ್ತು ಭಾರತೀಯರಿಗೆ ಇಲ್ಲಿ ಪ್ರವೇಶವಿಲ್ಲ’ ಎಂಬ ಅವಮಾನಕರ ಬೋರ್ಡ್ ಕಂಡು ಸಿಡಿದುಬಿದ್ದ ಈ ಬೆಂಕಿಚೆಂಡಿನಂತ ಹೆಣ್ಣುಮಗಳು ಕ್ರಾಂತಿಕಾರಿಗಳ ದಂಡಿನೊಂದಿಗೆ ಕ್ಲಬ್ ಗೆ ನುಗ್ಗಿ ಬ್ರಿಟಿಷರ ಎದೆನಡುಗಿಸಿ ಪ್ರತ್ಯುತ್ತರ ನೀಡಿದವಳು. ಪ್ರಸ್ತುತ ಬಾಂಗ್ಲಾದೇಶ ದಲ್ಲಿರುವ ಚಿತ್ತಗಾಂಗ್ ನಲ್ಲಿ ಹುಟ್ಟಿದ ಪ್ರೀತಿಲತಾ ಎಳವೆಯಿಂದಲೇ ದೇಶಭಕ್ತರ ಕುರಿತು ಕೇಳುತ್ತಾ ಬೆಳೆದವಳು. ಝಾನ್ಸಿ ರಾಣಿ ಲಕ್ಷ್ಮಿಬಾಯಿಯ ಕುರಿತು ಓದುತ್ತಾ ಅವಳ ಜೀವನ ಮತ್ತು ಹೋರಾಟದಿಂದ ಪ್ರಭಾವಿತಳಾದ ಪ್ರೀತಿಲತಾ ತಾನೂ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡು ಬ್ರಿಟಿಷರನ್ನು ಭಾರತದಿಂದ ಓಡಿಸುವ ಕನಸು ಕಂಡಿದ್ದಳು. ಪ್ರೀತಿಲತಾ ತತ್ತ್ವಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕಲ್ಕತ್ತಾ ವಿಶ್ವವಿದ್ಯಾಲಯದ ಬ್ರಿಟಿಷ್ ಆಡಳಿತ ಅವಳ ಪದವಿಯನ್ನು ತಡೆಹಿಡಿಯಿತು. ಮತ್ತಷ್ಟು ಓದು 
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
– ರೋಹಿತ್ ಚಕ್ರತೀರ್ಥ
ಹತ್ತೊಂಬತ್ತು ಮತ್ತು ಇಪ್ಪತ್ತನೇ ಶತಮಾನದ ಪ್ರಪಂಚವನ್ನು ಹೆಚ್ಚು ಪ್ರಭಾವಿಸಿದ, ಬದಲಾಯಿಸಿದ ಸಿದ್ಧಾಂತಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವುದು ಕಮ್ಯುನಿಸಂ. ಇಪ್ಪತ್ತನೇ ಶತಮಾನದಲ್ಲಿ ನಡೆದ ಹಲವು ಮಹತ್ವದ ರಾಜಕೀಯ ಚಳುವಳಿಗೆ ಕಮ್ಯುನಿಸಂ ಮೂಲದ್ರವ್ಯವಾಗಿ ಒದಗಿಬಂತು. ಕಮ್ಯುನಿಸಂ ಎಂದರೇನು, ಅದು ಜಗತ್ತನ್ನು ಪ್ರಭಾವಿಸಿದ ಬಗೆ ಹೇಗೆ, 1970ರ ನಂತರ ಅದು ಅವನತಿಯತ್ತ ಸಾಗಲು ಕಾರಣವಾದ ಸನ್ನಿವೇಶಗಳೇನು, ಇಂದಿನ ಯುಗಕ್ಕೆ ಕಮ್ಯುನಿಸಂ ಪ್ರಸ್ತುತವೇ ಎಂಬ ವಿಚಾರಗಳನ್ನು ತಿಳಿದುಕೊಳ್ಳಲು, ಮೊದಲಿಗೆ ನಾವು ಅದರ ಹುಟ್ಟಿನ ದಿನಗಳ ಅವಲೋಕನ ಮಾಡಬೇಕಾಗುತ್ತದೆ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 24:
ವಿದುರಾಶ್ವತ್ಥದ ಬಲಿದಾನಿಗಳು
– ರಾಮಚಂದ್ರ ಹೆಗಡೆ
ಸ್ವಾತಂತ್ರ್ಯ ಸಮರದಲ್ಲಿ ಕರ್ನಾಟಕದಲ್ಲಿ ನಡೆದ ಅತೀ ಭೀಕರ ಹತ್ಯಾಕಾಂಡಗಳಲ್ಲಿ ಒಂದಾದ ‘ವಿದುರಾಶ್ವತ್ಥದ ಬಲಿದಾನ’ ಕರ್ನಾಟಕದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೂ ಹೆಸರಾಗಿದೆ. ಒಬ್ಬ ಗರ್ಭಿಣಿಯೂ ಸೇರಿದಂತೆ 32 ಜನ ದೇಶಭಕ್ತರು ಬ್ರಿಟಿಷರ ಗುಂಡಿಗೆ ಬಲಿಯಾಗಿ ಪ್ರಾಣಾರ್ಪಣೆ ಮಾಡಿದ್ದು, ಈ ನೆಲದ ಜನರ ಅಪ್ರತಿಮ ದೇಶಭಕ್ತಿಗೆ ಹಾಗೂ ಬ್ರಿಟಿಷ್ ಆಡಳಿತದ ಬರ್ಬರತೆಗೆ ಸಾಕ್ಷಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕ್ಷೇತ್ರ ‘ವಿದುರಾಶ್ವತ್ಥ’ ದೇಶದ ಸ್ವಾತಂತ್ರ್ಯ ಹೋರಾಟಗಾರರ ಚಳುವಳಿಯ ಕೇಂದ್ರವಾಗಿತ್ತೆಂಬುದು ಗಮನಾರ್ಹ ಸಂಗತಿ. ಮಹಾಭಾರತ ಕಾಲದಲ್ಲಿ ವಿದುರ ನೆಟ್ಟಿದ್ದನೆಂದು ನಂಬಲಾಗುವ ಅಶ್ವತ್ಥ ವೃಕ್ಷ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಬ್ರಿಟಿಷರ ಪೈಶಾಚಿಕ ದೌರ್ಜನ್ಯಕ್ಕೂ ಸಾಕ್ಷಿಯಾಗಿದ್ದು ದುರಂತದ ಸಂಗತಿ. ಮತ್ತಷ್ಟು ಓದು 
ಜಮ್ಮು-ಕಾಶ್ಮೀರ (ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು)
ನಿಲುಮೆ ತಂಡ ನಡೆಸಿದ ಕಾಶ್ಮೀರದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪ್ರೊ.ಪ್ರೇಮಶೇಖರವರ ಮಾತುಗಳನ್ನು ಶೋಭ ರಾವ್ ರವರು ಅಕ್ಷರ ರೂಪಕ್ಕಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ವಿಚಾರಗಳು ಈಗ ನಿಲುಮೆಯ ಓದುಗರ ಮುಂದೆ..
ಕಾಶ್ಮೀರದ ಬಗ್ಗೆ ಇಂದು ಹಲವಾರು ಜನ ತಮ್ಮ ಅಲ್ಪಜ್ಞಾನದಿಂದ ಹಲವಾರು ತರಹ ಮಾತಾಡುತ್ತಾರೆ. ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ದುರಂತವೆಂದರೆ ಅದನ್ನು ಕೇಳಲು ಕೂಡ ಬಹಳಷ್ಟು ಜನರಿದ್ದಾರೆ. ನಾವು ಅವರ ಬಳಿ ಹೋಗಿ ಬೀದಿ ಜಗಳ ಮಾಡಬೇಕಿಲ್ಲ. ವಸ್ತುನಿಷ್ಠ ಚರ್ಚೆಯನ್ನು ಏರ್ಪಡಿಸಿ ನಿಜಸಂಗತಿಗಳನ್ನ ತಿಳಿಸಿದರೆ ಸಾಕು. ಕಾಶ್ಮೀರ ನಮ್ಮದೂ ಎಂದು ಭಾರತವೂ ಹೇಳುತ್ತೆ, ಪಾಕಿಸ್ತಾನವೂ ಹೇಳುತ್ತೆ. ನಾವು ಇವೆರೆಡಕ್ಕೂ ಸೇರಿಲ್ಲ ಎಂದು ಮತ್ತೊಂದು ಗುಂಪು ಕೂಡ ಹೇಳುತ್ತೆ. ಇದೇ ಕಾಶ್ಮೀರದ ನಿಜವಾದ ಸಮಸ್ಯೆ. ಮತ್ತಷ್ಟು ಓದು 
ಅಂತ್ಯದ ಬೆನ್ನೇರಿ…!
-ವಿನಾಯಕ ಪೈ ಬಿ
ಒಂದು ಸುಸಂಸ್ಕೃತ ಸಮಾಜ ಎಂದರೆ ವ್ಯಕ್ತಿಗತ ಚಿಂತನೆಗಳ, ಸಾಮಾಜಿಕ ಸ್ಥಿತ್ಯಂತರಗಳ, ಧಾರ್ಮಿಕ ಆಚರಣೆ, ಆಧ್ಯಾತ್ಮಿಕ ನಂಬಿಕೆಗಳ ಮತ್ತು ಅದರ ಕಾಲಾಂತರ್ಗತ ಪರಿಷ್ಕರಣೆಗಳ ಸಮ್ಮಿಲನವೇ ಆಗಿದೆ. ಈ ಸಮ್ಮಿಲನದಲ್ಲಿ ಯಾವುದಾದರು ಒಂದನ್ನು ನಿರ್ಲಕ್ಷಿಸಿದರು, ಸುಜ್ಞಾನದ ಕೊರತೆ ಸಮಾಜದ ಬೆಳವಣಿಗೆಯ ಮೇಲೆ ತೀವ್ರವಾಗಿ ಪ್ರತಿಫಲಿಸುತ್ತದೆ. ಮಾನವೀಯ ಮೌಲ್ಯಗಳು, ಸದ್ವಿಚಾರಗಳ ಸಾಂಗತ್ಯವೇ ನಮ್ಮ ಸಮೂಹದ ಅಂತಃಸತ್ವ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳೇ ಸಮಾಜಕ್ಕೆ ಭದ್ರಬುನಾಧಿಯನ್ನು ಒದಗಿಸಿ, ಸಾಮಾಜಿಕ ಚಿಂತನೆಗಳು ಸದ್ಭಾವನೆಯ ಮೆಟ್ಟಿಲುಗಳಾಗಿ, ಮನುಕುಲವನ್ನು ಏಳಿಗೆಯತ್ತ ಕೊಂಡೊಯ್ಯುತ್ತದೆ . ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 23:
ಮದನ್ ಲಾಲ್ ಧಿಂಗ್ರಾ
– ರಾಮಚಂದ್ರ ಹೆಗಡೆ
ಪರದೇಶಿ ಬ್ರಿಟಿಷರು ಭಾರತದ ನೆಲಕ್ಕೆ ಬಂದು ದಬ್ಬಾಳಿಕೆ ನಡೆಸುತ್ತಿದ್ದ ಕಾಲದಲ್ಲಿ ಅವರ ನೆಲಕ್ಕೇ ಹೋಗಿ ಇಂಗ್ಲೆಂಡಿನಲ್ಲೇ ಕ್ರಾಂತಿ ಚಟುವಟಿಕೆ ನಡೆಸಿ ಬ್ರಿಟಿಷರನ್ನೇ ಬೆಚ್ಚಿಬೀಳಿಸಿದ, ವಿದೇಶಿ ನೆಲದಲ್ಲಿ ಭಾರತಕ್ಕಾಗಿ ಮೊದಲ ಬಲಿದಾನ ಮಾಡಿದ ಕೆಚ್ಚೆದೆಯ ವೀರ ಮದನ್ ಲಾಲ್ ಧಿಂಗ್ರಾ. ಪಂಜಾಬಿನ ಅಮೃತಸರದ ಶ್ರೀಮಂತ ಕುಟುಂಬದ ಮದನ್ ಲಾಲ್ ಇಂಜಿನೀಯರಿಂಗ್ ಓದಲಿಕ್ಕೆಂದು ಲಂಡನ್ ಗೆ ಹೋಗಿದ್ದವನು. ಸ್ವಭಾವತಃ ಶೋಕಿಲಾಲ. ಮನೆಯವರೆಲ್ಲ ಬ್ರಿಟಿಷರ ಪರಮ ಭಕ್ತರು. ಇಂಗ್ಲೆಂಡ್ ನ ವಿಲಾಸೀ ಸಂಸ್ಕೃತಿಗೆ ಮಾರುಹೋದ ಮದನ್ ಬೆಲೆಬಾಳುವ ಸೂಟು ಬೂಟುಗಳನ್ನು ಹಾಕಿಕೊಂಡು ಶೋಕಿಲಾಲನಾಗಿ ಇಂಗ್ಲೆಂಡಿನ ರಸ್ತೆಗಳಲ್ಲಿ ಹಾಡುತ್ತಾ, ಕುಣಿಯುತ್ತಾ ಯುವತಿಯರೊಂದಿಗೆ ಚಕ್ಕಂದವಾಡುತ್ತ ಕಾಲಕಳೆಯುತೊಡಗಿದ್ದ. ಮತ್ತಷ್ಟು ಓದು 
ತಮಿಳುನಾಡು, ಕಾವೇರಿ, ಜಯಲಲಿತ, ದೇವೇಗೌಡರು ಮತ್ತು ನಾನು
– ಪ್ರೇಮಶೇಖರ
ನೆರೆಯ ತಮಿಳುನಾಡಿನಲ್ಲಿ ಹಲವು ಅಚ್ಚರಿ ಹುಟ್ಟಿಸುವ ವಿರೋಧಾಭಾಸಗಳು ಕಾಣಸಿಗುತ್ತವೆ. ತಮಿಳರು ಮಹಾ ಭಾಷಾಭಿಮಾನಿಗಳು. ತಮ್ಮ ನಾಡು ನುಡಿಯ ಬಗ್ಗೆ ಅವರ ಪ್ರೀತಿ, ಅಭಿಮಾನ, ಕಾಳಜಿಗೆ ಸಮಕಾಲೀನ ಭಾರತೀಯ ಇತಿಹಾಸದಲ್ಲಿ ದಂತಕತೆಯ ಆಯಾಮವೊದಗಿಬಿಟ್ಟಿದೆ. ಆದರೆ, ಇಂತಹ ಸ್ವಾಭಿಮಾನಿ ತಮಿಳರು ಕಳೆದ ನಲವತ್ತು-ನಲವತ್ತೈದು ವರ್ಷಗಳಿಂದಲೂ ತಮಿಳೇತರರನ್ನು ತಮ್ಮ ರಾಜಕೀಯ ನಾಯಕರನ್ನಾಗಿ ಒಪ್ಪಿಕೊಂಡು ಅವರ ಕೈಯಲ್ಲಿ ತಮ್ಮ ರಾಜ್ಯವನ್ನಿಟ್ಟುಬಿಟ್ಟಿದ್ದಾರೆ. ಕರುಣಾನಿಧಿ ಕಳೆದ ನಾಲ್ಕು ದಶಕಗಳಿಂದಲೂ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಅನಭಿಷಿಕ್ತ ಸಾಮ್ರಾಟರಾಗಿ ಮೆರೆಯುತ್ತಿದ್ದಾರೆ, ನಾಲ್ಕು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದಾರೆ. ಈ ಕರುಣಾನಿಧಿ ತೆಲುಗು ಮೂಲದವರು. ಡಿಎಂಕೆ ಪಕ್ಷವನ್ನು ಒಡೆದು ಅದಕ್ಕೆ ಪರ್ಯಾಯವಾಗಿ “ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ” (ಎಐಎಡಿಎಂಕೆ) ಪಕ್ಷ ಕಟ್ಟಿ ಸತತ ಹತ್ತು ವರ್ಷಗಳವರೆಗೆ ತಮಿಳುನಾಡನ್ನು ಆಳಿದ ಎಂ. ಜಿ. ರಾಮಚಂದ್ರನ್ (ಎಂಜಿಆರ್) ಒಬ್ಬ ಮಲೆಯಾಳಿ. ಅವರ ಸಹವರ್ತಿ ಮತ್ತು ಉತ್ತರಾಧಿಕಾರಿ, ಕೋಟ್ಯಂತರ ತಮಿಳರ ಪ್ರೀತಿಯ “ಅಮ್ಮ” ಜಯಲಲಿತಾರ ಮೂಲ ಕರ್ನಾಟಕದಲ್ಲಿ. ಅದಕ್ಕೂ ಹಿಂದೆ ಹೋಗುವುದಾದರೆ ದ್ರಾವಿಡ ಚಳುವಳಿಯ ಅಧ್ವರ್ಯು, ತಮಿಳುನಾಡಿನ ಇತಿಹಾಸದ ದಿಕ್ಕನ್ನೇ ಬದಲಿಸಿದ “ಪೆರಿಯಾರ್” ಬಿರುದಾಂಕಿತ ಇ. ವಿ. ರಾಮಸ್ವಾಮಿ ನಾಯಕರ್ ಕನ್ನಡಿಗರಂತೆ. ಇವರೆಲ್ಲರೂ ತಮಿಳನ್ನು ತಮ್ಮದಾಗಿಸಿಕೊಂಡು, ತಮಿಳುನಾಡಿಗೆ ತಮ್ಮನ್ನರ್ಪಿಸಿಕೊಂಡು ತಮಿಳರ ಹೃದಯಗಳಲ್ಲಿ ಸ್ಥಾನ ಗಳಿಸಿಕೊಂಡುಬಿಟ್ಟರು. ಮತ್ತಷ್ಟು ಓದು 
ಕಾಶ್ಮೀರ ಸಮಸ್ಯೆಯ ವರ್ತಮಾನ
– ಪ್ರೊ. ರಾಜಾರಾಮ ಹೆಗಡೆ
ಕಾಶ್ಮೀರವು ಇಂದು ಕೇವಲ ಭಾರತ ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳ ನಡುವಿನ ಹಗೆಯ ಕಾರಣವಷ್ಟೇ ಅಲ್ಲ, ಭಾರತದಲ್ಲೇ ಆಂತರಿಕ ಹಗೆಯ ಹೊಗೆಯೆಬ್ಬಿಸುತ್ತಿರುವ ಒಂದು ವರ್ತಮಾನದ ಸಮಸ್ಯೆಯಾಗಿದೆ. ಹಾಗಾಗಿ ಕಾಶ್ಮೀರ ವಿವಾದವು ಹೇಗೆ ಪ್ರಾರಂಭವಾಯಿತು, ನಮ್ಮ ಮುತ್ಸದ್ದಿಗಳು ಎಲ್ಲಿ ಎಡವಿದರು ಎಂಬ ಹಿಸ್ಟರಿಗಿಂತ ಅದರ ತೆಕ್ಕೆಯೊಳಗೆ ಬರಲು ಸೋಲುವ ಅಥವಾ ನಿರಾಕರಿಸುವ ವರ್ತಮಾನದ ಆಯಾಮಗಳು ನನಗೆ ಸೋಜಿಗ ಹುಟ್ಟಿಸುತ್ತಿವೆ. ಇಂದು ಕಾಶ್ಮೀರವು ಭಾರತ ಪಾಕಿಸ್ತಾನಗಳ ಗಡಿ ಸಮಸ್ಯೆಯಾಗಿ ಉಳಿದಿಲ್ಲ, ಬದಲಾಗಿ ಅದು ದೇಶದ ಸಮಸ್ತ ಪ್ರಗತಿಪರ ಹೋರಾಟಗಾರರಿಗೂ, ಆಜಾದಿಯ ಕರೆಯಾಗಿ ಕಾಣಿಸುತ್ತಿದೆ ಎಂಬುದನ್ನು ಗಮನಿಸುವುದು ಅಗತ್ಯ. ಕೇವಲ ಮುಸ್ಲಿಂ ಸಂಘಟನೆಗಳೊಂದೇ ಅಲ್ಲ ಭಾರತದ ಪ್ರಗತಿಪರ ಸಂಘಟನೆಗಳೂ, ಕಾಶ್ಮೀರಿ ಮುಸ್ಲಿಂ ಹೋರಾಟಗಾರರ ಜೊತೆಗೆ ಆಜಾದಿಯ ಘೋಷಣೆ ಕೂಗುತ್ತಿವೆ. ದೇಶದ ಬರ್ಬಾದಿಯ ಕುರಿತು ಮಾತನಾಡುವುದು ಈ ಸಂಘಟನೆಗಳಿಗೆ ರಾಷ್ಟ್ರೀಯತೆಯ ಸಮಸ್ಯೆಯಾಗಿ ಕಾಣಿಸುತ್ತಿಲ್ಲ. ಬದಲಾಗಿ ಬಿಡುಗಡೆಯ ಕರೆಯಾಗಿ ಕಾಣಿಸುತ್ತಿದೆ. ಇಂಥ ಚಳವಳಿಗಳನ್ನು ಬೆಂಬಲಿಸುವ ಬುದ್ಧಿಜೀವಿಗಳಿಗೆ ಇಂಥ ಘೋಷಣೆಗಳು ನ್ಯಾಯಯುತವೆನಿಸತೊಡಗಿವೆ. ಈ ಪರಿಸ್ಥಿತಿಯು ನಮಗೆ ಎರಡು ಸವಾಲುಗಳನ್ನು ಸೃಷ್ಟಿಸಿದೆ: ಮತ್ತಷ್ಟು ಓದು 




