ವಿಷಯದ ವಿವರಗಳಿಗೆ ದಾಟಿರಿ

Recent Articles

7
ಜುಲೈ

“ಮಿಡಿದ ಹೃದಯಗಳು”

ಪ್ರವೀಣ್ .ಎಸ್

impossibly-cute-puppy-8ಜೂನ್ ತಿಂಗಳ ಮುಂಜಾನೆಯ ಮಳೆ, ನಾನು ಆಫೀಸ್ಗೆ ಪ್ರಯಾಣಿಸಲು ದ್ವಿಚಕ್ರ ವಾಹನವನ್ನು ತರಾತುರಿಯಲ್ಲಿ ಹೊರ ತೆಗೆಯಲು ಸಾಹಸ ಪಡುತ್ತಿದ್ದೆ ಆದದ್ದೇನು?…ಅನಿರೀಕ್ಷಿತ ತಾಂತ್ರಿಕ ದೋಷ!, ಪೆಚ್ಚು ಮೊರೆ ಹಾಕಿಕೊಂಡು ಅದೃಷ್ಟವನ್ನು ಬಯ್ಯುತ್ತ, ಇಂದು ಮಹಾ ನಗರ ಪಾಲಿಕೆಯ ಬಸ್ಸೇ ಗತಿಯೆಂದು, ಕೈ ಗೆ ಸಿಕ್ಕ ಛತ್ರಿ ಹಿಡಿದು, ಬ್ಯಾಗನ್ನು ಬೆನ್ನಿಗೇರಿಸಿ, ಪ್ಯಾಂಟನ್ನು ಅರ್ಧ ಅಡಿ ಮಡಿಸಿ, ಹಳ್ಳ ಕೊಳ್ಳಗಳ ರಸ್ತೆಯಲ್ಲಿ ಹೆಜ್ಜೆ ಹಾಕುತ್ತ ಆತುರವಾಗಿ ಬಸ್ ಸ್ಟಾಪಿನೆಡೆಗೆ ಪ್ರಯಾಣಿಸಿದೆ. ಅಂತೂ ಇಂತು ತುಂತುರು ಮಳೆಯ ಫಲಿತಾಂಶವೋ ಎಂಬ ಟ್ರಾಫಿಕ್ ಜಂಜಾಟಕ್ಕೆ ಸಿಲುಕಿ ಬಸವಳಿದ ಬಸ್ ಬಂದೆ ಬಿಟ್ಟಿತು, ಇನ್ನು ಚಾಲಕರು ಮತ್ತು ನಿರ್ವಾಹಕರು ಒಂದು ಕಾಪಿ ಹೀರಲೋ / ಬೀಡಿ ಹಚ್ಚಲೋ ಕೆಳಗಿಳಿದರು, ಆಗಲೇ ಸಮಯ 8 ಕ್ಕೆ ಹತ್ತು ನಿಮಿಷ. ಬಸ್ ಏರಿ ಸಾಮಾನ್ಯವಾಗಿಯೇ ಕಿಟಕಿ ಪಕ್ಕದ ಸೀಟ್ನಲ್ಲಿ ಕೂರುವ ಜನ ಇಂದು ಯಾರೂ ಆ ಸೀಟ್ಗಳ ಹಿಡಿಯುತ್ತಿಲ್ಲ, ಕಾರಣ ನಿಮಗೆ ಗೊತ್ತೇ ಇದೆ! ಎಷ್ಟು ಪ್ರಮಾಣದ ಮಳೆ ಹೊರಗೆ ಆಗಿದೆ ಎಂದು ತಿಳಿಯಲು ನಮ್ಮೂರಿನ ಬಸ್ಸಿನೊಳಗೆ ಹೊಕ್ಕರೆ ಸಾಕು (ಮಳೆ ಅಳೆಯುವ ಸಾಧನವಿಟ್ಟು ಅಳೆವುದೊಂದೇ ಬಾಕಿ, ಹವಾಮಾನ ಇಲಾಖೆಗೆ) ಆ ವಿಷಯ ಇರಲಿ ಬಿಡಿ; ಅಂತೂ ನನಗೂ ಒಂದು ಸೀಟು ದೊರಕಿತು. ಮತ್ತಷ್ಟು ಓದು »

6
ಜುಲೈ

ಜನರಲ್ ತಿಮ್ಮಯ್ಯ

– ಸಿ. ರವಿ ಕುಮಾರ್

gen_k_s_thimayyaಒಂದು ದಿನ ನನ್ನ ತಂದೆಯವರು ತಮ್ಮ ಬಳಿ ಇದ್ದ ಮಿಲಿಟರಿ ಇತಿಹಾಸ ಈ ಒಂದು ಘಟನೆಯನ್ನು ತಿಳಿಸಿದರು. ಅದನ್ನು ಕೇಳಿದ ಮೇಲೆ ಬಹುಶಃ ನಮ್ಮ ಅಂದಿನ ಪ್ರಧಾನಿ ನೆಹರುರವರು ಈ ವ್ಯಕ್ತಿಯ ಅನುಭವವನ್ನು ಬಳಸಿಕೊಂಡಿದ್ದರೆ 1962ರ ಚೇನದೊಡನೆ ನಡೆದ ಯುದ್ಧದ ಗತಿ ಬದಲಾಗುತ್ತಿತ್ತೊ ಏನೊ? `ಅಪ್ಪಣೆ ಮೀರಿ ತಿಮ್ಮಯ್ಯ ಗೆದ್ದಾಗ’ ಎರಡನೇ ಮಹಾಯುದ್ಧದ ಮಧ್ಯಕಾಲ. ಜಪಾನಿ ಪಡೆಗಳು ಬರ್ಮಾ ದೇಶದಲ್ಲಿ ಹೊಕ್ಕು ಎತ್ತೆತ್ತಲೂ ಹಬ್ಬಿದ್ದವು. ಇರಾವತೀ ನದಿಯ ಕಣಿವೆ ಜಪಾನೀಯರ ವಶವಾಗಿ ಬ್ರಹ್ಮಪುತ್ರಾ ಕಣಿವೆಯೀಗ ಅವರ ತೋಪುಗಳ ಗರ್ಜನೆಯಿಂದ ಪ್ರತಿಧ್ವನಿಸುತ್ತಿತ್ತು. ಬ್ರಿಟಿಶ್ ಸಾಮ್ರಾಜ್ಯವಾದದ ಪರಕ್ರಮ ಸೂರ್ಯ ಅಕಾಲದಲ್ಲೇ ಅಸ್ತಂಗತನಾಗಿದ್ದ. ಬೆಟ್ಟದ ಒಂದು ಕೋಡಿನಲ್ಲಿ ಇನ್ನೂರೈವತ್ತು ಜಪಾನೀ ಸೈನಿಕರು ಕಂದಕ ತೋಡಿ ಬಲವಾಗಿ ತಳವೂರಿದ್ದರು. ಆ ಶೃಂಗದ ಕೆಳಗೆ ಕಡಿದಾದ ಬೆಟ್ಟದ ಗೋಡೆಗೆ ಅಂಟಿಕೊಂಡು ಭಾರತ ಸೈನ್ಯದ ಕುಮಾಂವ್ ರೆಜಿಮೆಂಟಿನ ಜವಾನರು ಟೆಂಟ್ ಹಾಕಿದ್ದರು. ಎರಡು ಸೈನ್ಯದ ಸೈನಿಕರು ತಮ್ಮ ತಮ್ಮ ನೆಲೆಗಳನ್ನು ಭದ್ರಪಡಿಸಿಕೊಂಡು ಮುನ್ನುಗುವ ದಾರಿಯನ್ನು ಯೋಚಿಸುತ್ತಿದ್ದವು. ಮತ್ತಷ್ಟು ಓದು »

4
ಜುಲೈ

ಯಡಿಯೂರಪ್ಪನವರಿಂದ ಜನರು ನಿರೀಕ್ಷಿಸುತ್ತಿರುವುದೇನು?

– ರಾಕೇಶ್ ಶೆಟ್ಟಿ

800x480_IMAGE55065639ಸಂಸತ್ತಿನ ಸೆಂಟ್ರಲ್ ಹಾಲಿನಲ್ಲಿ ಪ್ರಧಾನಿ ಮೋದಿಯವರ ಭಾಷಣದಿಂದ ಪ್ರೇರಿತರಾಗಿ, ತಾನು ಸ್ವಇಚ್ಚೆಯಿಂದ ಕರ್ನಾಟಕ ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ತೊಡಗಿಸಿಕೊಳ್ಳುವುದಾಗಿ ಹೇಳಿಕೊಂಡು ೨೦೧೪ರ ಮೇ ೨೨ನೇ ತಾರೀಖಿನಂದು ಯಡ್ಯೂರಪ್ಪನವರು ಮೋದಿಯವರಿಗೊಂದು ಪತ್ರ ಬರೆದಿದ್ದರು.

ಆ ಪತ್ರ ಬರೆದು ಸುಮಾರು ೨ ವರ್ಷಗಳ ನಂತರ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಹುದ್ದೆ ಯಡ್ಯೂರಪ್ಪನವರಿಗೆ ಒಲಿಯಿತು. ಈ ಬೆಳವಣಿಗೆಗೆ ಪಕ್ಷದೊಳಗೆ ಹಾಗೂ ಹೊರಗೆ ಭರ್ಜರಿ ಸ್ವಾಗತವೇ ಸಿಕ್ಕಿತು. ಅಧ್ಯಕ್ಷರಾಗುತ್ತಿದ್ದಂತೆ ‘ಎಲ್ಲರನ್ನೂ ವಿಶ್ವಾಸಕ್ಕೆ’ ತೆಗೆದುಕೊಂಡು ಮುನ್ನಡೆಯುತ್ತೇನೆ ಎಂದಿದ್ದರು ಯಡ್ಯೂರಪ್ಪ. ಮುಖ್ಯಮಂತ್ರಿಯಾಗಿದ್ದಾಗ ಸ್ವಯಂಕೃತಾಪರಾಧದ ಜೊತೆಗೆ, ಬೆನ್ನಿಗಂಟಿಕೊಂಡಿದ್ದ ಭಟ್ಟಂಗಿಗಳು, ಕಿಂಕರರಂತೆ ಆಜೂ-ಬಾಜೂ ಕಾಣಿಸಿಕೊಳ್ಳುತ್ತಿದ್ದವರು, ಪಕ್ಷದೊಳಗಿನ ಮೀರ್ ಸಾಧಿಖರ ಕುತಂತ್ರವೂ ಸೇರಿ ಅಧಿಕಾರವನ್ನೂ ಕಳೆದುಕೊಂಡು, ಕಾನೂನಿನ ಪೆಟ್ಟನ್ನು ತಿಂದು, ಕಡೆಗೆ ನ್ಯಾಯಾಲಯದಲ್ಲಿ ಜಯಿಸಿ ಸಾಕು ಸಾಕೆನಿಸುವಷ್ಟು ಹೈರಾಣಾದ ನಂತರ ದೊರೆತ ರಾಜ್ಯಾಧಕ್ಷ್ಯ ಹುದ್ದೆಯನ್ನು ಯಡ್ಯೂರಪ್ಪನವರು ಸರಿಯಾಗಿ ನಿರ್ವಹಿಸಿದ್ದಾರೆಯೇ? ಮತ್ತಷ್ಟು ಓದು »

2
ಜುಲೈ

ಆತನ ಕತೆಗಳಲ್ಲಿ ಮಾ೦ತ್ರಿಕತೆಯೂ ಇದೆ, ವಾಸ್ತವವೂ ಇದೆ…!!

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

759ಅದೊ೦ದು ಬೆಚ್ಚಗಿನ, ಮಳೆಯಿಲ್ಲದ ಸೋಮವಾರದ ಸು೦ದರ ಬೆಳಗು. ಔರೇಲಿಯೊ ಎಸ್ಕೊವರ್ ಎನ್ನುವ ಪದವಿಯಿಲ್ಲದ ದ೦ತವೈದ್ಯ ಬೆಳಗ್ಗಿನ ಅರು ಗ೦ಟೆಗಾಗಲೇ ತನ್ನ ಚಿಕಿತ್ಸಾಲಯದ ಬಾಗಿಲು ತೆರೆದಿದ್ದ. ಪ್ಲಾಸ್ಟಿಕ್ ಅಚ್ಚುಗಳಿಗಿನ್ನೂ ಅ೦ಟಿಕೊ೦ಡಿದ್ದ ಕೆಲವು ನಕಲಿ ಹಲ್ಲುಗಳನ್ನು ಗಾಜಿನ ಬೀರುವಿನಿ೦ದ ತೆಗೆದಿರಿಸಿಕೊ೦ಡ ಆತ, ಮೇಜಿನ ಮೇಲೆ ಬೆರಳೆಣಿಕೆಯಷ್ಟಿದ್ದ ತನ್ನ ವೈದ್ಯಕೀಯ ಉಪಕರಣಗಳನ್ನು ಅವುಗಳ ಗಾತ್ರಕ್ಕನುಗುಣವಾಗಿ ಪ್ರದರ್ಶನಕ್ಕಿಡುತ್ತಿದ್ದಾನೆನ್ನುವ೦ತೆ ಜೋಡಿಸಲಾರ೦ಭಿಸಿದ. ಕಾಲರಿಲ್ಲದ ಪಟ್ಟೆಗಳುಳ್ಳ ಅ೦ಗಿಯನ್ನು ಧರಿಸಿದ್ದ ಆತನ ಪ್ಯಾ೦ಟನ್ನು ಭುಜದಿ೦ದ ಹಾದು ಹೋಗಿದ್ದ ಎರಡು ಪಟ್ಟಿಗಳು ಆತನ ಸೊ೦ಟದ ಮೇಲೆ ನಿಲ್ಲಿಸಿದ್ದವು. ಉದ್ದವಾಗಿ ಪೇಲವವಾಗಿದ್ದ ಆತನದ್ದು ನಿರ್ಭಾವುಕ ಮುಖಚರ್ಯೆ. ಸ೦ದರ್ಭಕ್ಕುನುಗುಣವಾಗಿ ಸ್ಪ೦ದಿಸದ ಕಿವುಡನ ಮುಖಭಾವ ಆತನದ್ದು. ತನ್ನೆಲ್ಲ ಸಲಕರಣೆಗಳನ್ನು ಮೇಜಿನ ಮೇಲೆ ಜೋಡಿಸಿಕೊ೦ಡು ಮುಗಿದ ನ೦ತರ ತನ್ನಲ್ಲಿದ ಡ್ರಿಲ್ಲೊ೦ದರಿ೦ದ ನಕಲಿ ಹಲ್ಲುಗಳಿಗೆ ಹೊಳಪುಕೊಡುವ ಕಾರ್ಯದಲ್ಲಿ ಆತ ನಿರತನಾದ. ಅನ್ಯಮನಸ್ಕತೆಯಿ೦ದ ಸ್ಥಿರವಾಗಿ ತನ್ನ ಕಾರ್ಯನಿರ್ವಹಿಸುತ್ತಿದ್ದ ಆತ ಅವಶ್ಯಕತೆಯಿರದಿದ್ದರೂ ತನ್ನ ಕೊರೆಯುವ ಯ೦ತ್ರವನ್ನು ಕಾಲಿನಿ೦ದ ನೂಕುತ್ತಿದ್ದ. ಮತ್ತಷ್ಟು ಓದು »

1
ಜುಲೈ

ಕ್ಯೂಬಾದಂತೆ ಕಾಣುವ ಪಿಣರಾಯಿ

– ಸಂತೋಷ್ ತಮ್ಮಯ್ಯ

skulls communism russians 1920x1200 wallpaper_www.wallpapername.com_18

ನಾಳೆ ಸಮಸ್ತ ಕೇರಳಕ್ಕೂ ಇದೇ ಗತಿ
ಬಹುಶಃ ಇದುವರೆಗೆ ಇಷ್ಟೊಂದು ಕಡಿಮೆ ಅವಧಿಯಲ್ಲಿ ಯಾವ ಸರ್ಕಾರಗಳೂ ಇಷ್ಟೊಂದು ಸಾಧನೆಯನ್ನು ಮಾಡಿರಲಾರರು. ಅದೂ ಒಂದು ತಿಂಗಳೊಳಗಾಗಿ ತನ್ನ ಕೆಲಸವನ್ನು ಅಷ್ಟೊಂದು ಶೀಘ್ರವಾಗಿ, ಅಚ್ಚುಕಟ್ಟಾಗಿ ಮಾಡಲು ಸಾಧ್ಯವಾಗುವುದು ಕಮ್ಯುನಿಸ್ಟರಿಗೆ ಮಾತ್ರ. ಕೇರಳದಲ್ಲಿ ಅವರ ಈ ಒಂದು ತಿಂಗಳಿನ ಸಾಧನೆಯನ್ನು ನೋಡಿದರೆ ಮುಂದಿನ ಐದು ವರ್ಷಗಳ ‘ಸಾಧನೆ’ ಇನ್ನೆಷ್ಟಿರಬಹುದು ಎಂಬ ಅಂದಾಜು ಸಿಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಕೇರಳ ಕೇರಳವಾಗಿಯೇ ಉಳಿಯುತ್ತದೆಯೋ ಎಂಬ ಸಂಶಯವೂ ಬರುತ್ತದೆ.
ಕೇರಳದಲ್ಲಿ ಕಮ್ಯುನಿಸ್ಟರು ಅಡಳಿತ ಆರಂಭಿಸಿ ನಿನ್ನೆಗೆ ಒಂದು ತಿಂಗಳಾಯಿತು. ಈ ಒಂದು ತಿಂಗಳಿನಲ್ಲಿ ಎದೆ ನಡುಗಿಸುವ ಹಲವು ಘಟನೆಗಳು ನಡೆದವು. ಆದರೂ ಬಿಜೆಪಿ ಆಡಳಿತವನ್ನು ಎರಡೇ ದಿನಗಳಲ್ಲಿ ವಿಮರ್ಶೆಗೆ ಒಡ್ಡುವಂತೆ ಯಾರೂ ಕಮ್ಯುನಿಸ್ಟ್ ಅಡಳಿತವನ್ನು ವಿಮರ್ಶೆ ಮಾಡಲಿಲ್ಲ. ಅಚ್ಯುತಾನಂದರನ್ನು ಪಿಣರಾಯಿ ವಿಜಯನ್ ಮೂಲೆಗುಂಪು ಮಾಡಿದ ಎಂಬ ಎಂಬ ಒಂದು ಸಂಗತಿಯನ್ನು ಮಾಧ್ಯಮಗಳು ಇನ್ನೂ ಗುನುಗುತ್ತಿವೆ. ಈ ಒಂದು ತಿಂಗಳಲ್ಲಿ ನಡೆದ ಘಟನೆಗಳನ್ನು ಯಾವ ಚಿತ್ರನಟನೂ ಅಸಹಿಷ್ಣುತೆ ಎಂದು ಕರೆಯಲಿಲ್ಲ, ಯಾವ ಪತ್ರಕರ್ತನೂ ಅರಾಜಕತೆ ಎಂದು ಬಣ್ಣಿಸಲಿಲ್ಲ. ಹಾಗಾದರೆ ಕೇರಳ ಕಮ್ಯುನಿಸ್ಟರ ತಿಂಗಳ ಸಾಧನೆ ಏನು? ಮತ್ತಷ್ಟು ಓದು »

30
ಜೂನ್

ಪ್ರತಿಭಾ ಪಲಾಯನ

-ಮಯೂರ ಲಕ್ಷ್ಮೀ

artಅದೊಂದು ಕಾಲದಲ್ಲಿ ನಳಂದಾ, ತಕ್ಷಶಿಲಾ ಮುಂತಾದ ವಿಶ್ವವಿಖ್ಯಾತ ವಿದ್ಯಾಲಯಗಳಿಂದ ಪ್ರಸಿದ್ಧಿಹೊಂದಿ ಎಲ್ಲೆಡೆಯಿಂದ ಎಲ್ಲರನ್ನೂ ಆಕರ್ಷಿಸಿ ಜ್ಞಾನದೇಗುಲವೆನಿಸಿದ್ದ ಭಾರತ ದೇಶವು ತನ್ನ ಹಿಂದಿನ ವೈಭವಗಳನ್ನು ಮರೆತುಹೋಗುವ ಸ್ಥಿತಿ ತಲುಪಿದ್ದಾದರೂ ಏಕೆ? ಯಾವುದೇ ಒಂದು ದೇಶವು ಆರ್ಥಿಕವಾಗಿ ಸಧೃಢವೆನಿಸಿಕೊಳ್ಳುವುದು ದೇಶದ ಬೆನ್ನೆಲುಬಾದ ಯುವಶಕ್ತಿಯಿಂದಾ ಮಾತ್ರ! ಜಗತ್ತಿಗೆ ಅರಿವು ನೀಡುವ ಜ್ಞಾನದೇಗುಲವೆನಿಸಿದ್ದ ಭಾರತ ಮೆಕಾಲೆಯ ಆಗಮನದಿಂದ ತನ್ನ ಮೌಲ್ಯಾಧರಿತ ಶಿಕ್ಷಣ ವ್ಯವಸ್ಥೆಯನ್ನೇ ಕಳೆದುಕೊಂಡಿತು. ಭಾರತವು ವಿಶ್ವಮಾನ್ಯವೆನಿಸಿದ್ದು ತನ್ನ ಜ್ಞಾನ-ವಿಜ್ಞಾನ, ತಂತ್ರಜ್ಞಾನಗಳಿಂದ ಪ್ರಪಂಚಕ್ಕೆ ನೀಡಿದ ಕೊಡುಗೆಯಿಂದ. ಮತ್ತಷ್ಟು ಓದು »

28
ಜೂನ್

ಗಾಂಧಿ ತಾತಾ ಯಾಕಾಗಿ ಹೀಗೆಲ್ಲಾ ಮಾಡಿದಿರಿ?

– ಶ್ರೀಕಾಂತ್ ಆಚಾರ್ಯ

mahatma_gandhiನೇರಾ ನೇರಾ ವಿಷಯಕ್ಕೆ ಬರುತ್ತೀನಿ. ಕೆಲವಷ್ಟು ವಿಷಯಗಳಲ್ಲಿ ಗಾಂಧೀ ತಾತಾ ತುಂಬಾ ಇಷ್ಟವಾಗಿ ಬಿಡುತ್ತಾರೆ. ಆದರೆ ಉಳಿದ ಕೆಲವು ವಿಷಯಗಳಲ್ಲಿ ನನಗೆ ಗಾಂಧೀಜಿಯ ಬಗ್ಗೆ ಒಳ್ಳೆಯ ಅಭಿಪ್ರಾಯಗಳಿಲ್ಲ. ಅಷ್ಟಕ್ಕೂ ನನ್ನ ಅಭಿಪ್ರಾಯ ಇಲ್ಲಾರಿಗೂ ಅನಿವಾರ್ಯವಲ್ಲ ಬಿಡಿ. ಹೇಳಿದ್ದೆಲ್ಲವನ್ನ ಸುಖಾಸುಮ್ಮನೆ ನಂಬಿ ಬಿಡಿ ಅಂತ ನಿಮ್ಮಲ್ಲಿ ಅಂಗಾಲಾಚುವುದೂ ಇಲ್ಲ. ಸಮಾನ ಮನಸ್ಕರಿದ್ದರೆ ಓದಿಕೊಳ್ಳಬಹುದು. ಹೌದು ಅಂತನ್ನಿಸಿದರೆ ಮಾತ್ರ ತಾಕಲಾಟಕ್ಕೆ ಎಡತಾಕುತ್ತೀರಿ. ಯೋಚನೆಗೆ ಬೀಳುತ್ತೀರಿ. ಅಖಂಡ ಭಾರತದ ಕೋಟ್ಯಾಂತರ ಜನರ ಹೃದಯ ಹೊಕ್ಕಿ ಕುಳಿತ ಗಾಂಧೀಜಿಯನ್ನ ಕೆಲವೊಂದು ಕಾರಣಕ್ಕೆ ದ್ವೇಷಿಸುತ್ತಿದ್ದೀನಿ ಅಂದರೆ ಬಹುಷಃ ನೀವೂ ತಕರಾರು ಮಾಡಲಿಕ್ಕಿಲ್ಲ(ವಿಷಯ ಬಲ್ಲವರಿಗೆ ಮಾತ್ರ) ಅಲ್ಲವಾ? ಮತ್ತಷ್ಟು ಓದು »

27
ಜೂನ್

ದೇಹದಲ್ಲಿ ಏಳು ಗುಂಡುಗಳನ್ನು ಹೊತ್ತಿದ್ದರೂ ‘ಕತ್ತೆ ಒದೀತು’ ಎಂದು ನಕ್ಕ ಮಿಲಿಟರಿ ಕ್ರಾಸ್ ವೀರ ಸ್ಯಾಮ್ ಮಾಣಿಕ್ ಷಾ

– ಸಂತೋಷ್ ತಮ್ಮಯ್ಯ

Field_Marshal_SAM_Manekshaw

೧೯೭೧ರ ಎಪ್ರಿಲ್ ನ ಒಂದು ತಿಂಗಳು. ಪ್ರಧಾನಮಂತ್ರಿಗಳು ಅಂದು ಕಂಡಾಪಟ್ಟೆ ತಲೆಬಿಸಿಯಲ್ಲಿದ್ದರು. ಸಿಟ್ಟಾಗಿದ್ದರು. ಏಕೆಂದರೆ ಪ.ಬಂಗಾಳ, ತ್ರಿಪುರಾ ಮತ್ತು ಅಸ್ಸಾಂಗಳಲ್ಲಿ ಪೂರ್ವ ಪಾಕಿಸ್ಥಾನದಿಂದ ನಿರಾಶ್ರಿತರ ಪ್ರವಾಹವೇ ಹರಿಯಲಾರಂಭಿಸಿತ್ತು. ಪೂರ್ವ ಪಾಕಿಸ್ಥಾನವೆಂಬ ಕುರದ ವ್ರಣ ಭಾರತಕ್ಕೂ ವ್ಯಾಪಿಸುತ್ತಾ ಬರುತ್ತಿತ್ತು. ಪ್ರಧಾನಮಂತ್ರಿಗಳು ಮಾಡಬಹುದಾದವುಗಳನ್ನೆಲ್ಲಾ ಮಾಡಿಯಾಗಿತ್ತು. ನಿರಾಶ್ರಿತರ ಸಮಸ್ಯೆಯನ್ನು ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಕೂಡಾ ಎತ್ತಿಕೊಂಡುಹೋದರು. ಎಲ್ಲರೂ ಇದು “ಭಾರತ ಮತ್ತು ಪಾಕಿಸ್ಥಾನಗಳ ಆಂತರಿಕ ಸಂಗತಿ” ಎಂದು ತಮಾಷೆ ನೋಡಲು ಕೂತಿತು. ಸಮಸ್ಯೆಯನ್ನುನಿಭಾಯಿಸುವ ಕೊನೆಯ ಪ್ರಯತ್ನ ಎಂಬಂತೆ ಪ್ರಧಾನಮಂತ್ರಿಗಳು ಕ್ಯಾಬಿನೆಟ್ ಮತ್ತು ಹಿರಿಯ ಮಿಲಿಟರಿ ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ಸಭೆಯನ್ನು ಅಂದು ಕರೆದಿದ್ದರು. ಮತ್ತಷ್ಟು ಓದು »

25
ಜೂನ್

ಸಂಪುಟ ಪುನಾರಚನೆಯ ಸುದ್ದಿ ಕೇಳಿ ದಿಕ್ಕಾಪಾಲಾಗಿ ಓಡಿದ ಜನ

ಪ್ರವೀಣ್ ಕುಮಾರ್, ಮಾವಿನಕಾಡು 

sulsuddi (4)ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ಪಕ್ಷದ ಹಲವಾರು ಹಿರಿಯ ಮುಖಂಡರು, ಹಲವು ಜಾತಿಯ ನಾಯಕರುಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರಿಂದಾಗಿ ಇನ್ನೆರಡು ದಿನಗಳಲ್ಲಿ ಕೆಲವು ಸಚಿವರನ್ನು ಕೈ ಬಿಟ್ಟು ಅವರ ಬದಲಿಗೆ ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತೊಮ್ಮೆ ಮಂತ್ರಿಮಂಡಲವನ್ನು ಪುನರ್ ರಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇಂದು ತಿಳಿಸಿದರು. ಮತ್ತಷ್ಟು ಓದು »

23
ಜೂನ್

ಕನ್ನಡದ ಕಲಿಗಳಾಗಿ ಆಂಗ್ಲವನ್ನು ಮಣಿಸಿ- ಖಾಸಗಿ ಶಾಲೆಗಳ ಕಡೆಗಣಿಸಿ.

– ಸುದರ್ಶನ ಗುರುರಾಜರಾವ್

ಕನ್ನಡ ಮಾಧ್ಯಮದಲ್ಲಿದ್ದು ಇಂಗ್ಲಿಷ್ ಕಲಿಯಲು/ಕಲಿಸಲು ಸುಲಭ ವಿಧಾನ

unnamed

೧.ಪರಿಚಯ
೨.ಕಲಿಕೆಯ ಕ್ರಮ (ಸ್ಥೂಲ ರೂಪು ರೇಷೆ )
೩.ಇಂಗ್ಲಿಷ್ ಭಾಷೆಯ ವ್ಯವಸ್ಥಿತ ಅಭ್ಯಾಸ ಮತ್ತು ಇಂಗ್ಲಿಷ್ ಕಲಿಕೆಯ ಪರಿಕರಗಳು- ಭಾಷಾಂತರ ಪಾಠಮಾಲೆ
೪.ಉಪಸಂಹಾರ ಮತ್ತು ಪರಿಸಮಾಪ್ತಿ.

ಪರಿಚಯ :
ಕನ್ನಡದಲ್ಲಿ ಕಲಿತರೆ ಭವಿಷ್ಯವಿಲ್ಲ, ಇಂಗ್ಲೀಷ್ ಮಾಧ್ಯಮ ಎಂದರೆ ಮಾತ್ರವೇ ಯಶಸ್ಸಿನ ಮಂತ್ರ ಎಂಬೊಂದು ನಂಬಿಕೆಯನ್ನು ಜನಮಾನಸದಲ್ಲಿ ಬಲವಾಗಿ ಬಿತ್ತಿ ಕಾಲಕ್ರಮದಲ್ಲಿ ನೀರೆರೆರ್ದು ಪೋಷಿಸಿಕೊಂಡು ಬಂದ ಖಾಸಗಿ ವ್ಯವಸ್ಥಾಪಕರು, ಅವರೊಡನೆ ಕೈಜೋಡಿಸಿ ತಮ್ಮ ನೆಲ-ಜಲ- ಭಾಷೆ ಸಂಸ್ಕೃತಿಗೆ ಚೂರಿ ಹಾಕಿದ ಭ್ರಷ್ಟ ರಾಜಕಾರಿಣಿಗಳು, ಧೃತರಾಷ್ಟ್ರನಂತೆ ತಿಳಿದು ಸುಮ್ಮನಿದ್ದ ಸರಕಾರವು ಜನರನ್ನು ಸುಲಿದು ಹಣದ ಹೊಳೆಯನ್ನು ತಮ್ಮ ಕಡೆಗೆ ಹರಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿವೆ. ಕ್ಲಿಷ್ಟ ಸಮಸ್ಯೆಗಳಿಗೆ ಪರಿಹಾರ ಬಹಳಷ್ಟು ಬಾರಿ ಸರಳವೇ ಇರುತ್ತದೆ. ಅದನ್ನು ಗುರುತಿಸಿ ಅಳವಡಿಸಿಕೊಳ್ಳುವ ಭಾರ ಪ್ರಜ್ಞಾವಂತ ಸಮಾಜದ್ದಾಗಿರಬೇಕು. ಅಂತಹ ಸರಳೋಪಾಯಗಳನ್ನು ಹುಡುಕಿಸಿ ಪಸರಿಸುವ ಕೆಲಸ ಶಿಕ್ಷಣ ಮತ್ತು ಸಾಹಿತ್ಯ-ಸಂಸ್ಕೃತಿ ಇಲಾಖೆಗಳದ್ದಾಗಿರಬೇಕು. ಆದರೆ ಎಲ್ಲರೂ ಕಳ್ಳರೇ! ಗೊಂದಲವನ್ನು ಹಬ್ಬಿಸಿ ಅದರ ಲಾಭ ಪಡೆಯಲು ನಿಂತ ಬೇಲಿಯೇ ಎದ್ದು ಹೊಲ ಮೇಯ್ದ ಪರಿಣಾಮವಾಗಿ ಇಂದು ಕನ್ನಡ ಶಾಲೆಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಖಾಸಗಿಗೆ ಪೈಪೋಟಿ ಕೊಡುವಲ್ಲಿ ಸೋಲುತ್ತಿವೆ. ಅವುಗಳಲ್ಲಿ ಕೆಲವನ್ನು ನೋಡೋಣ ಮತ್ತಷ್ಟು ಓದು »