ಮರೆತೇಬಿಟ್ಟಿರುವ ನವಿಲುಗರಿ ಮರಿ ಹಾಕಿದೆಯೋ ಏನೋ!
-ರೋಹಿತ್ ಚಕ್ರತೀರ್ಥ
ಅದೊಂದು ಅನೂಹ್ಯ ಪ್ರಪಂಚ. ನನ್ನ ಅಜ್ಜಿ ವಾರ, ಎರಡು ವಾರಕ್ಕೊಮ್ಮೆ ಅಲ್ಲಿ ಹೋಗುವುದಿತ್ತು. ಶ್ರಾದ್ಧಕ್ಕೆ ಗಿಂಡಿಗಳು ಬೇಕಾದವೆಂದೋ ಭರಣಿಯಲ್ಲಿಟ್ಟ ಉಪ್ಪಿನಕಾಯಿ ಖರ್ಚಾಯಿತೆಂದೋ ಅಥವಾ ದಿನದಲ್ಲಿಪ್ಪತ್ತೈದು ಗಂಟೆ ಬೇಡುತ್ತಿದ್ದ ಕೆಲಸಗಳು ಅಂದು ತುಸು ಬೇಗನೆ ಮುಗಿದು ಜೇಡರ ಬಲೆ ತೆಗೆಯುವುದಕ್ಕೆ, ಬಾವಲಿಗಳ ಹಿಕ್ಕೆ ತೆಗೆದು ಹೊರಹಾಕುವುದಕ್ಕೆ ಸಮಯ ಮಿಕ್ಕಿತೆಂದೋ, ಅಂತೂ ಅಲ್ಲಿಗೆ ಹೋಗಲು ಯಾವುದಾದರೊಂದು ಕಾರಣ ಅಜ್ಜಿಗೆ ಸಿಕ್ಕರೆ ನಮಗೆ ಸ್ವರ್ಗದ ಬಾಗಿಲು ತೆರೆದುಕೊಂಡಷ್ಟೇ ಖುಷಿ. “ಅಜ್ಜಿ, ನಾನೂ ಬತ್ತೆ” ಅಂತಿದ್ದೆವು. ನಮ್ಮ ವಿನಂತಿಗೆ ಪ್ರತಿಯಾಗಿ ಆಕೆಯಿಂದ ಅರ್ಧಗಂಟೆ ಪ್ರವಚನ ಹೇಳಿಸಿಕೊಂಡು, ಕೋಪದಿಂದ ಮುಖ ಊದಿಸಿಕೊಂಡರೆ ಅದೂ ಒಂದು ಲಾಭವೇ. ಯಾಕೆಂದರೆ ಅಷ್ಟೆಲ್ಲ ಬಯ್ದು ಗುಡ್ಡೆ ಹಾಕಿ ಕೊನೆಗೆ ನಮ್ಮ ಗಂಟುಮುಖ ನೋಡಲಾಗದೆ ಮೊಸರವಲಕ್ಕಿ ಮಾಡಿ ತಿನ್ನಿಸಿ, “ಬಾ ಬಾ ಆದರೆ ಹನುಮಂತನ ಹಾಗೆ ಕುಣೀಬೇಡ ಅಲ್ಲಿ” ಎಂಬ ಎಚ್ಚರಿಕೆ ಕೊಟ್ಟು ಒಯ್ಯುತ್ತಿದ್ದಳು ಆಕೆ ಆ ಅಟ್ಟವೆಂಬ ನಿಗೂಢ ವಿಸ್ಮಯ ಪ್ರಪಂಚಕ್ಕೆ.
ಅಟ್ಟವೇ? ಹಾಗೆಂದರೇನು? ಎಂದು ಕೇಳುವ ಕಾಲ ಬಂದಿದೆ. ಮತ್ತಷ್ಟು ಓದು 
ಬಾಜಿರಾಯನ ಉತ್ತರದ ದಂಡಯಾತ್ರೆ
-ರಂಜನ್ ಕೇಶವ
ಬಾಜಿರಾಯನ ಅಶ್ವದಳ ತಲ್ಕತೋರಾ ಎಂಬಲ್ಲಿ ಕೆಂಪುಕೋಟೆ ತೋರುವಲ್ಲೇ ಡೇರೆ ಹಾಕಿತ್ತು. ಮರಾಠರ ಖಡ್ಗಗಳನ್ನು ಹೊತ್ತ ಈ ಅಶ್ವಬಲ ದಿನಕ್ಕೆ ನಲವತ್ತು ಕಿಲೋಮೀಟರ್ ವೇಗದಲ್ಲಿ ಒಂದೇ ಸಮನೇ ಯಾವ ಮುನ್ಸೂಚನೆಯಿಲ್ಲದೇ ಒಂದೇ ರಭಸಕ್ಕೆ ದೆಹಲಿಯ ಸರಹದ್ದನ್ನು ತಲುಪಿತ್ತು. ಇದರ ಸುದ್ದಿ ಹಬ್ಬಿದಂತೆ ಮೊಘಲ್ ಸಿಂಹಾಸನ ಗಡ ಗಡ ನಡುಗಿ ಅಲ್ಲಿಂದ ಕಾಲ್ಕೀಳಲು ದೋಣಿಗಳನ್ನು ಸಿದ್ಧಪಡಿಸಿದರು. ಅದರಲ್ಲೂ ಬಾಜಿರಾಯನ ಸೋಲಿಲ್ಲದ ಜಯಭೇರಿ ಭಾರತದುದ್ದಗಲಕ್ಕೂ ಹಬ್ಬಿತ್ತು. ಅವನ ಪರಾಕ್ರಮವನ್ನೆದುರಿಸುವ ಧೈರ್ಯ ಇವರಿಗೆಲ್ಲಿಂದ ಬರಬೇಕು ಪಾಪ. ಸಾವಿರ ವರ್ಷದ ಹಿಂದೆ ಇಮ್ಮಡಿ ಪುಲಕೇಶಿ ದಕ್ಷಿಣದಿಂದ ಉತ್ತರಕ್ಕೆ ಜಯಭೇರಿ ಬಾರಿಸಿದ್ದ. ಅದರ ನಂತರ ಈಗ ಬಾಜಿರಾಯ ಎರಡನೆಯ ಬಾರಿ ಉತ್ತರ ಭಾರತವನ್ನು ರಕ್ಷಿಸಲು ಕುದುರೆಯೇರಿ ಬಂದಿದ್ದ. ಮತ್ತಷ್ಟು ಓದು 
ಕಾಂಗ್ರೆಸ್-ಕಮ್ಯುನಿಷ್ಟರ ಮೈತ್ರಿ, ಬಂಗಾಳಕ್ಕೆ ಸಿಕ್ಕಿದ್ದು ಕರಾಳ ರಾತ್ರಿ
-ಶ್ರೀನಿವಾಸ ರಾವ್
ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಕೊಲೆ, ದಾಳಿ – ಭಯೋತ್ಪಾದನೆಗೆ ಧರ್ಮವಿಲ್ಲ- ಕಮ್ಯುನಿಷ್ಟರು
26/11ರ ಮುಂಬೈ ದಾಳಿ, ದಾಳಿ ಮಾಡಿದ್ದು ಇಸ್ಲಾಮ್ ನ ಭಯೋತ್ಪಾದಕರು -ಭಯೋತ್ಪಾದನೆಗೆ ಧರ್ಮವಿಲ್ಲ- ಬುದ್ಧಿಜೀವಿಗಳು, ಕಮ್ಯುನಿಷ್ಟರು. ಉಗ್ರ ಯಾಕೂಬ್ ಮೆಮನ್ ಗೆ ಗಲ್ಲು ಶಿಕ್ಷೆ – ಭಯೋತ್ಪಾದನೆಗೆ ಧರ್ಮವಿಲ್ಲ!
ಭಾರತದಲ್ಲಾಗಲೀ ಅಥವಾ ವಿದೇಶಗಳಲ್ಲಿ ಇಸ್ಲಾಂ ನ ಮೂಲಭೂತವಾದಿಗಳು, ಮತಾಂಧ ಉಗ್ರರು ದಾಳಿ ನಡೆಸಿದಾಗಲೆಲ್ಲಾ ’ಭಯೋತ್ಪಾದನೆಗೆ ಧರ್ಮವಿಲ್ಲ’ವೆಂಬ ಹೇಳಿಕೆ (ready made statement) ಸಿದ್ಧವಾಗಿರುತ್ತದೆ. ಇಂಥದ್ದೊಂದು ಹೇಳಿಕೆಯನ್ನು coin(ಪರಿಚಯಿಸಿದ್ದೇ)ಮಾಡಿದ್ದೇ ಈ ಕಮ್ಯುನಿಷ್ಟರು ಹಾಗೂ ಕಮ್ಯುನಿಷ್ಟರ ಕೃಪಾಪೋಷಿತ ಬುದ್ಧಿಜೀವಿಗಳು. ಭಯೋತ್ಪಾದಕರ ದಾಳಿ ನಡೆದಾಗಲೆಲ್ಲಾ ಇವರಿಂದ ಇಂಥಹ ಹೇಳಿಕೆ ಬರುವುದಾದರೂ ಯಾಕೆ ಅಂದುಕೊಂಡಿದ್ದೀರಿ? ಇಸ್ಲಾಮ್ ಗೆ ಪರ್ಯಾಯವಾದ, ಅಂಥಹದ್ದೇ ಒಂದು ಭಯೋತ್ಪಾದನೆಯನ್ನು ಇವರೂ ಪರಿಚಯಿಸಿದ್ದಾರೆ ಆದ್ದರಿಂದ…
ಮತ್ತಷ್ಟು ಓದು 
ಗುಬ್ಬಣ್ಣ ಇನ್ ‘ಎನ್ನಾರೈ ರಿಟರ್ನ್ & ಸ್ಮಾರ್ಟ್ ಸಿಟಿ’! (ಲಘು ಹರಟೆ)
– ನಾಗೇಶ ಮೈಸೂರು
ಗುಬ್ಬಣ್ಣ ಅವತ್ಯಾಕೋ ತುಂಬಾ ‘ಖರಾಬ್ ಅಂಡ್ ಗರಂ’ ಮೂಡಿನಲ್ಲಿ ಮರಿ ಹಾಕಿದ ಬೆಕ್ಕಿನ ತರ ಬೀಟ್ ಹೊಡಿತಿದ್ದ ಲಿಟಲ್ ಇಂಡಿಯಾ ಒಳಗಿರೋ ಕರ್ಬಾವ್ ಸ್ಟ್ರೀಟಲ್ಲಿ.. ಅದೂ ಬೆಳ್ಳಂಬೆಳಿಗ್ಗೆ ಯಾರೂ ಓಡಾಡದೆ, ಬರಿ ಪಾರಿವಾಳಗಳು ಮಾತ್ರ ಅಕ್ಕಿಕಾಳು ಹೆಕ್ಕೋ ಹೊತ್ನಲ್ಲಿ..
ಈ ‘ಬೀದಿನಾಮ’ಗಳು ಎಲ್ಲೂ ಕೇಳಿದ ಹಾಗಿಲ್ಲವಲ್ಲ ಅಂತ ಅನ್ಸಿದ್ರೆ ಅದರಲ್ಲೇನು ವಿಶೇಷ ಇಲ್ಲ ಬಿಡಿ – ಯಾಕೆಂದ್ರೆ ಗುಬ್ಬಣ್ಣನ ಠಿಕಾಣೆ ಇರೋದೇ ಸಿಂಗಪುರ ಅನ್ನೋ ಪುಟ್ಟ ‘ರೆಡ್ ಡಾಟ್ನಲ್ಲಿ’. ಸಿಂಗಪುರವೇ ರೆಡ್ ಡಾಟ್ ಆದ ಮೇಲೆ ಇನ್ನು ಅದರಲ್ಲಿರೋ ‘ಲಿಟಲ್ ಇಂಡಿಯಾ’ ಅನ್ನೋ ಮೈಕ್ರೋ ಡಾಟ್ ಕೇಳಬೇಕೆ ? ಸಿಂಗಪುರ ಮ್ಯಾಪಲ್ಲೇ ಲೆನ್ಸ್ ಹಾಕ್ಕೊಂಡು ಹುಡುಕಬೇಕು ಅನ್ನೋ ಹಾಗಿರುತ್ತೆ. ಇನ್ನು ಅದರೊಳಗಿರೊ ‘ಕರ್ಬಾವ್ ಸ್ಟ್ರೀಟ್’ ಅನ್ನೋ ‘ನ್ಯಾನೋ ಡಾಟ್’ ಬಗ್ಗೆ ಹೇಳೊ ಹಾಗೆ ಇಲ್ಲ ಅಂತ ಮೂಗು ಮುರಿಬೇಡಿ. ಸುತ್ತಮುತ್ತಲ ಜಾಗದ ಸಿಂಗಪುರದಲ್ಲಿ ‘ಕಲ್ಚರಲ್ ಹೆರಿಟೇಜ್ ಸೈಟ್’ ಅಂತ ಗುರ್ತಿಸಿರೋದ್ರಿಂದ ಇದೊಂದು ಇಂಪಾರ್ಟೆಂಟ್ ಟೂರಿಸ್ಟ್ ಸ್ಪಾಟ್.. ಅದರ ಪಕ್ಕದಲ್ಲೇ ಮನೆ ಇರೋ ನನಗೆ ‘ರಿಯಲ್ ಎಸ್ಟೇಟ್’ ಪಾಯಿಂಟಿನಿಂದ ಈ ‘ನ್ಯಾನೋ ಡಾಟ್’ ಇನ್ನೂ ತುಂಬಾ ಇಂಪಾರ್ಟೆಂಟು..! ಮತ್ತಷ್ಟು ಓದು 
ನಿಜವಾದ ಹೀರೋಗಳಿವರು
– ಮಯೂರಲಕ್ಷ್ಮೀ.
ಅವರು ಯುವಕರು… ಅಪ್ರತಿಮ ಧೈರ್ಯ, ಸಾಹಸ ಪ್ರವೃತ್ತಿ, ತೇಜಸ್ಸು ಮತ್ತು ಸದ್ಗುಣಗಳು ಅವರಲ್ಲಿತ್ತು.. ಅವರಲ್ಲಿದ್ದ ನಾಯಕತ್ವ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಕುರಿತ ಜ್ಞಾನದಿಂದ ಅವರು ಏನನ್ನಾದರೂ ಸಾಧಿಸಬಹುದಿತ್ತು.. ಅದು ಬ್ರಿಟಿಷರು ಭಾರತೀಯರನ್ನು ದಾಸ್ಯದಲ್ಲಿಟ್ಟು ಆಳುತ್ತಿದ್ದ ಕಾಲ. ಆ ಮೂವರೂ ಯಾವುದೇ ಅಧಿಕಾರದ ಆಮಿಷಕ್ಕೆ ಒಳಗಾಗಲಿಲ್ಲ, ತಾವೇ ವಿಧಿಸಿಕೊಂಡ ದೇಶರಕ್ಷಣೆಯ ಕಟ್ಟುಪಾಡುಗಳನ್ನು ಮೀರದೆ ಆಂಗ್ಲರಿಂದ ದೇಶವನ್ನು ಮುಕ್ತಗೊಳಿಸಲು ಯಾವ ತ್ಯಾಗವನ್ನಾದರೂ ಮಾಡಲು ಸಿದ್ಧರಾದರು. ಅಂತೆಯೇ ತಮ್ಮ ಪ್ರಾಣವನ್ನೂ ದೇಶಕ್ಕಾಗಿ ಅರ್ಪಿಸಿದರು. ಈ ದೇಶ ಎಂದೂ ಮರೆಯದ ಮರೆಯಲಾಗದ ಯುವಚೇತನರು ಈ ಮೂವರು.. ನಮ್ಮ ಇಂದಿನ ಯುವಶಕ್ತಿಗೆ ನಿಜವಾದ ಮಾದರಿ ಇವರೇ…!
ಸಾವರ್ಕರ್ ಉಗ್ರಗಾಮಿ ಅಂದವರನ್ನು ಇತಿಹಾಸ ಹೇಗೆ ತಾನೆ ಕ್ಷಮಿಸೀತು?
-ಸಂಕೇತ್ ಡಿ ಹೆಗಡೆ, ಸಾಗರ
ಅಹಿಂಸೆಯ ಪ್ರತಿಪಾದಕರಿಗೆ ಸಂಪೂರ್ಣ ಗೌರವದಿಂದ ನಾನೊಂದು ಮೂಲಭೂತ ಪ್ರಶ್ನೆ ಕೇಳಬಯಸುತ್ತೇನೆ. ನಿಮಗ್ಯಾಕೆ ಹಿಂಸೆ ಮತ್ತು ಸ್ವರಕ್ಷಣೆಯ ನಡುವಿನ ವ್ಯತ್ಯಾಸವೇ ಗೊತ್ತಿಲ್ಲ? ಎಂದು. ಹಿಂಸೆ ಅಪ್ರಚೋದಕವಾದ ಕ್ರೌರ್ಯ. ಸ್ವರಕ್ಷಣೆ ಹಿಂಸೆಯಲ್ಲ, ಅದೊಂದು ಅನಿವಾರ್ಯದ ಪ್ರತಿಕ್ರಿಯೆ. ಶಾರ್ಕ್ ಮೀನೊಂದು ಸಣ್ಣ ಮೀನುಗಳನ್ನು ತಿನ್ನಲು ಬಂದರೆ, ಸಣ್ಣ ಮೀನುಗಳು ಸಾವಿರಾರು ಸಂಖ್ಯೆಯಲ್ಲಿ ಒಟ್ಟಾಗಿ ಶಾರ್ಕ್ ನ ಮೇಲೇ ದಾಳಿ ಮಾಡುತ್ತವೆ. ಅದು ಹಿಂಸೆಯೇನು? ಅಪರಿಚಿತನೊಬ್ಬ ಬೆಕ್ಕುಮರಿಯೊಂದನ್ನು ಬಲವಂತವಾಗಿ ಎತ್ತಿಕೊಳ್ಳಹೋದರೆ ಪರಚಿ ಹಾಕುತ್ತೆ. ಸುಂದರವಾಗಿ ಕಟ್ಟಿಕೊಂಡ ಜೆನೂಗೂಡಿಗೋ, ಕಷ್ಟಪಟ್ಟು ಕಟ್ಟಿಕೊಂಡ ಇರುವೆ ಗೂಡಿಗೋ ಹೋಗಿ ಒಂದು ಗುದ್ದು ಕೊಡಿ ನೋಡೋಣ. ಸಾಯುವಂತೆ ಕಚ್ಚಿ ಕಳಿಸುತ್ತವೆ. ಇವೆಲ್ಲ ನಿಮಗೆ ಹಿಂಸೆಯಂತೆ ಕಾಣುವುದೇನು? “Struggle For Existence” ಎಂದು ಡಾರ್ವಿನ್ ಹೇಳಿದ್ದು ಇಂಥವಕ್ಕೇ!
ದೆವ್ವಗಳ ಊರಿನಲ್ಲಿ
– ರಾಕೇಶ್ ಶೆಟ್ಟಿ
Most Haunted Places in India ಎನ್ನುವ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವುದು ರಾಜಸ್ಥಾನದಲ್ಲಿರುವ ಬಾಂಗ್ರಾ ಕೋಟೆ.
ಬಾಂಗ್ರಾ ಕೋಟೆಯಲ್ಲಿ ಸೂರ್ಯೋದಯದ ಮೊದಲು ಮತ್ತು ಸೂರ್ಯಾಸ್ತದ ನಂತರ ಯಾರಿಗೂ ಪ್ರವೇಶವಿಲ್ಲ ಎಂಬ ಬೋರ್ಡನ್ನು ಭಾರತೀಯ ಪುರಾತತ್ವ ಇಲಾಖೆಯೇ ತಗುಲಿಹಾಕಿದೆಯಂತೆ. ಈ ಎಚ್ಚರಿಕೆಯನ್ನು ಮೀರಿ ಸೂರ್ಯಾಸ್ತದ ನಂತರ ಕೋಟೆಯಲ್ಲಿಯೇ ಉಳಿಯಲೆತ್ನಿಸಿದವರು ಮರಳಿಬಂದಿಲ್ಲವೆಂಬುದು ಅಲ್ಲಿನ ಗ್ರಾಮಸ್ಥರ ಅಂಬೋಣ. ಸತ್ಯವೋ,ಸುಳ್ಳೋ ಗೊತ್ತಿಲ್ಲ. ಈ ಭೂತದ ಕೋಟೆಯ ಹಿಂದೆ ಎರಡು ಮೂರು ಕತೆಗಳಿವೆ. ಮತ್ತಷ್ಟು ಓದು 
ಪರೀಕ್ಷೆಯ ಲೆಕ್ಕಾಚಾರ
– ನಾಗೇಶ ಮೈಸೂರು
ಒಲ್ಲದ ಮನಸ್ಸಿನಿಂದ ಪುಸ್ತಕ ಹಿಡಿದು ಪರೀಕ್ಷೆಗೆ ಓದಿಕೊಳ್ಳಲು ಒದ್ದಾಡುತ್ತಿದ್ದ ಮಗನನ್ನು ಸಾಮ, ದಾನ, ದಂಡ, ಭೇಧೋಪಾಯಗಳೆಲ್ಲದರ ಬಳಕೆ ಮಾಡುತ್ತ ಸಿದ್ಧಗೊಳಿಸಲು ಹೆಣಗಾಡುತ್ತಾ ಕುಳಿತಿದ್ದೆ. ಅದೇ ಹೊತ್ತಿನಲ್ಲಿ ಟೀವಿಯಲ್ಲಿ ಪ್ರವೇಶ ಪರೀಕ್ಷೆಯ ನಂತರದ ಸವಾಲು, ಮತ್ತದನ್ನೆದುರಿಸುವ ಬಗೆಯನ್ನು ಕುರಿತು ಆತಂಕಪೂರ್ಣ ಚರ್ಚೆ ನಡೆಯುತ್ತಾ ಇತ್ತು. ಒಂದು ಕಾಲದಲ್ಲಿ ನಾವೂ ಇದನ್ನೆಲ್ಲಾ ಅನುಭವಿಸಿ ಮುಂದೆ ಸಾಗಿದ್ದವರೇ. ಆದರೆ ಆ ದಿನದಲ್ಲಿ ಕಾಡಿದ್ದ ಅದೆಷ್ಟೋ ಆತಂಕ, ಒತ್ತಡಗಳು ಕೇವಲ ಆತಂಕ, ಅಜ್ಞಾನ, ನಿಖರ ಗಮ್ಯವಿಲ್ಲದ ಒದ್ದಾಟಗಳ ಕಾರಣದಿಂದ ಉಂಟಾದದ್ದು. ಇಂದು ತಿರುಗಿ ನೋಡಿದರೆ ನಾನು ಓದಿದ್ದಕ್ಕೂ, ಮಾಡುತ್ತಿರುವ ಕೆಲಸಕ್ಕೂ ನೇರ ಸಂಬಂಧವೇ ಇಲ್ಲ. ವಿದ್ಯಾರ್ಹತೆ ಕೇವಲ ಕೆಲಸ ಗಿಟ್ಟಿಸುವ ಆರಂಭದ ರಹದಾರಿಯಾಯ್ತೆಂಬುದನ್ನು ಬಿಟ್ಟರೆ ಮಿಕ್ಕೆಲ್ಲಾ ಹೊಸ ಹೋರಾಟ, ಪರೀಕ್ಷೆಗಳೇ ಎದುರಾದದ್ದು ವಾಸ್ತವ ಸತ್ಯ. ನಮ್ಮ ವಿದ್ಯಾರ್ಹತೆ, ವಿದ್ಯಾಭ್ಯಾಸ ಆ ಹೋರಾಟಕ್ಕೆ ನಮ್ಮನ್ನು ಸಿದ್ದಪಡಿಸಿರಲೇ ಇಲ್ಲ. ಆದರೂ ನಾವು ಅದೇ ಮರೀಚಿಕೆಯ ಹಿಂದೆ ನಮ್ಮ ಭವಿಷ್ಯದ ಪೀಳಿಗೆಯನ್ನು ತಳ್ಳುತ್ತ ಕುರಿಮಂದೆಗಳ ಹಾಗೆ ಸಾಗುತ್ತಿದ್ದೇವಲ್ಲ ಎಂದೆನಿಸಿ ಖೇದವೂ ಆಯ್ತು.
ಮತ್ತಷ್ಟು ಓದು 
ಗೂಗಲ್ ಸರ್ಚ್ ಮಾಡಲು ಕೆಲವು ಸುಲಭ ಟ್ರಿಕ್ಸ್
-ಅವಿನಾಶ್ ಬಿ
ಹಿಂದೆಂದೂ ಗೂಗಲ್ ಎಂಬ ಕ್ಷಿಪ್ರ ಸಂಶೋಧಕ ಇರಲಿಲ್ಲ. ಮುಂದೆ ಅದು ಇಲ್ಲದೆ ಜೀವನವೇ ಮುಂದೆ ಸಾಗದು ಎಂಬಂತಹಾ ಪರಿಸ್ಥಿತಿ ನಿರ್ಮಾಣವಾಗಿರುವುದು ಹೆಚ್ಚಿನವರಿಗೆ ಗೊತ್ತು. ಅಂತರ್ಜಾಲದಲ್ಲಿ ಮಾಹಿತಿಯ ಹುಡುಕಾಟಕ್ಕೆ ಸಂಬಂಧಿಸಿದಂತೆ ಗೂಗ್ಲಿಸುವುದು ಎಂಬ ಕ್ರಿಯಾಪದವೇ ಹುಟ್ಟಿಕೊಂಡಿದೆ ಎಂದಾದರೆ, ಸರ್ಚ್ ಎಂಜಿನ್ ಗೂಗಲ್ನ ಸಾಮರ್ಥ್ಯ ಮತ್ತು ವ್ಯಾಪ್ತಿ ಎಷ್ಟೆಂಬುದು ವೇದ್ಯವಾಗುತ್ತದೆ. ಅಂತಹಾ ಗೂಗಲ್ನಲ್ಲಿ ಯಾವುದೇ ಮಾಹಿತಿ ಹುಡುಕುವುದಕ್ಕಾಗಿ ಕೆಲವೊಂದು ಸರಳವಾದ ಟ್ರಿಕ್ಸ್ ಇಲ್ಲಿದೆ. ನಿಮಗೆ ಉಪಯುಕ್ತವಾಗುತ್ತದೆ.
* ಯಾವುದೇ ನಿರ್ದಿಷ್ಟ ಪದ ಗುಚ್ಛ, ಉದಾಹರಣೆಗೆ ಒಂದು ಹಾಡಿನ ಬಗ್ಗೆ ಮಾಹಿತಿ ಬೇಕೆಂದಾದರೆ ಮತ್ತು ಆ ಪದಗಳು ಇರಲೇಬೇಕಾದ ಒಂದು ವಾಕ್ಯವನ್ನು ಹುಡುಕಿ ತೋರಿಸಬೇಕೆಂದಾದರೆ ಗೂಗಲ್ನಲ್ಲಿ ಸರ್ಚ್ ಮಾಡುವಾಗ ಉದ್ಧರಣ ಚಿಹ್ನೆ (ಕೋಟ್ ಮಾರ್ಕ್ಸ್) ಬಳಸಿ. ಉದಾಹರಣೆಗೆ, “ಕನ್ನಡದಲ್ಲಿ ಬರೆಯುವುದು ಹೇಗೆ” ಅಂತ ಸರ್ಚ್ ಮಾಡಿದರೆ, ಆ ಮೂರೂ ಅಕ್ಷರಗಳು ಒಟ್ಟಾಗಿಯೇ ಇರುವ ಪುಟಗಳು ಮಾತ್ರವೇ ಕಾಣಸಿಗುತ್ತವೆ. ಕೋಟ್ ಮಾರ್ಕ್ ತೆಗೆದರೆ, ಕನ್ನಡ, ಬರೆಯುವುದು, ಹೇಗೆ ಎಂಬ ಅಕ್ಷಗಳಿರುವ ಎಲ್ಲ ಪುಟಗಳೂ ಕಾಣಸಿಗುತ್ತವೆ.
ಮೂಕಜ್ಜಿಯ ಕನಸುಗಳು (ಪುಸ್ತಕ ಪರಿಚಯ)
– ನಾಗೇಶ ಮೈಸೂರು
‘ … ಅಂಥ ಅಜ್ಜಿಯೊಬ್ಬಳು ಇದ್ದಾಳೆಯೇ ಎಂಬ ಸಂಶಯ ಬಂದರೆ, ಸಮ್ಮ ಸಂಸ್ಕೃತಿಯ ನಂಬಿಕೆಗಳ ಕುರಿತಾದ ಸಂಶಯ ಪಿಶಾಚಿಯ ರೂಪವೇ ಅವಳೆಂದು ತಿಳಿದರಾಯ್ತು. ಆದರೂ ಅವಳು ನಮ್ಮಲ್ಲನೇಕರಲ್ಲಿ ಪಿಶಾಚಿಯಂತಲ್ಲ, ಪ್ರಾಮಾಣಿಕ ಸಂದೇಹಗಳ ರೂಪದಲ್ಲಿ ಬದುಕಿಕೊಂಡೇ ಇದ್ದಾಳೆ…. ‘
‘ಸಾಂಪ್ರದಾಯಿಕತೆಯಿಂದ ಹೆರೆಗಟ್ಟಿದ ಮನಸುಗಳನ್ನು ತುಸುತುಸುವಾಗಿ ಕಾಯಿಸಿ, ಕರಗಿಸುವ ಕೆಲಸ ಅವಳದ್ದು…’
ಬಹುಶ ಮುನ್ನುಡಿಯಲ್ಲಿ ಶಿವರಾಮಕಾರಂತರು ಕಾಣಿಸಿರುವ ಇವೆರಡು ಸಾಲುಗಳು ಸಾಕೇನೋ – ಈ ಅದ್ಭುತ ಪುಸ್ತಕದ ಸಾರಾಂಶವನ್ನು ಎರಡೇ ಮಾತಲ್ಲಿ ಹಿಡಿದಿಡಲು. ಪರಂಪರಾನುಗತವಾಗಿ ಹರಿದುಬಂದ ನಂಬಿಕೆ, ಸಂಪ್ರದಾಯಗಳಲ್ಲಿ ನಿಮಿತ್ತವೆಂಬಂತೆ ಬದುಕು ಸಾಗಿಸಿದ ಜನಮಾನಸದ ಕೆಲವಾದರೂ ಚಿತ್ತಗಳನ್ನು ಕೆದಕಿ ಕದಡಿರಬಹುದಾದ ‘ಏನೀ ಜಗ ? ನಾನೇಕಿಲ್ಲಿದ್ದೇನೆ ?’ ಎಂಬ ಗಹನ ಪ್ರಶ್ನೆಗಳಿಗೆ ತನ್ನರಿವಿನ ಪರಿಧಿಯನುಸಾರ ಉತ್ತರ ಕಂಡುಕೊಳ್ಳುವ ಸೂಕ್ಷ್ಮಚಿತ್ರಣ ಈ ಕಾದಂಬರಿಯ ಸ್ಥೂಲ ಮೊತ್ತ ಎಂದರೆ ತಪ್ಪಾಗಲಾರದು.
ಮತ್ತಷ್ಟು ಓದು 





