ವಿಷಯದ ವಿವರಗಳಿಗೆ ದಾಟಿರಿ

Recent Articles

18
ಫೆಬ್ರ

ಯಕ್ಷಗಾನ ಕರಾವಳಿಯ ಜನರ ತಲೆಕೆಡಿಸಿ ವಾತಾವರಣ ಕಲುಷಿತಗೊಳಿಸಿದೆಯೇ?

ದೀಕ್ಷಿತ್ ಶೆಟ್ಟಿಗಾರ್ ಕೊಣಾಜೆ

ಯಕ್ಷಗಾನಈ ಪ್ರಶ್ನೆ ಬಂದಿದ್ದು ತಮ್ಮನ್ನು ತಾವು ಮಹಾನ್ ಲೇಖಕ ಎಂದು ಬಿಂಬಿಸಿಕೊಂಡು ಪ್ರಚಾರಕ್ಕಾಗಿ ಹಾತೊರೆಯುವ ವ್ಯಕ್ತಿಯೊಬ್ಬನ ಪೇಸ್ಬುಕ್ ಗೋಡೆ ಬರಹದಿಂದಾಗಿ.  ಕೆಲವರು ತಾನು ಬರೆದ ಕೆಲ ಪುಸ್ತಕಗಳಿಗೆ ಬಿಟ್ಟಿ ಪ್ರಚಾರಕೊಡಲು ಅಥವಾ ಅವಾರ್ಡು ಬಾಚಿಕೊಳ್ಳಲು ಮುಖ್ಯ ಅಸ್ತ್ರವಾಗಿ ಬಳಸುವುದು ಹಿಂದೂ ಧರ್ಮ ಅಥವಾ ಈ ನೆಲದ ಕಲೆ, ಸಂಸ್ಕೃತಿಯ ಅವಹೇಳನ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಅದೇ ರೀತಿ ಅದಕ್ಕೆ ಪೂರಕವಾದ ಧೋರಣೆ ಹೊಂದಿರುವ ಸರಕಾರವೂ ಇರುವುದರಿಂದ ಇದು ಅವರನ್ನು ಮೆಚ್ಚಿಸುತ್ತೆ . ಧಾರ್ಮಿಕ ಭಾವನೆಯನ್ನು ಕೆರಳಿಸಿ ಪ್ರಚಾರ ಪಡೆಯುವುದು ಬಹಳ ಸುಲಭದ ದಾರಿ .ಯಾಕೆಂದರೆ ಮೊನ್ನೆ ತಾನೆ  ಪ್ರೊಫೆಸರ್ ಭಗವಾನರು ಮಾಡಿದ್ದು ಇದನ್ನೇ ,ಇಲ್ಲದೇ ಹೋದಲ್ಲಿ ಅತ್ಯಂತ ಕೆಟ್ಟದಾಗಿ ಅನುವಾದ ಮಾಡಿದ ಲೇಖಕನೊಬ್ಬನಿಗೆ ಪ್ರಶಸ್ತಿ ಬರುವುದು ಸಾಧ್ಯವಿತ್ತೇ? ಇರಲಿ ಬಿಡಿ ಇಲ್ಲಿ ಋಣಾತ್ಮಕ ವಿಚಾರಗಳಿಗೆ ಮಹತ್ವ ಜಾಸ್ತಿನೇ ಸಿಗೋದು ಆದರೆ ಕರಾವಳಿಯ ಗಂಡುಕಲೆ  ಯಕ್ಷಗಾನದ ಬಗೆಗಿನ ಮೂರ್ಖತನದ ಹೇಳಿಕೆಗೆ ಪ್ರತಿಕ್ರಿಯೆ  ಕೊಡಬೇಕೆನಿಸಿತು.ಯಾಕೆಂದರೆ ನಾನೊಬ್ಬ ಯಕ್ಷಗಾನದ ಅಭಿಮಾನಿ.

ನನ್ನ ಊರು ಕೊಣಾಜೆ, ನನ್ನ ಮನೆಯ ಪಕ್ಕದಲ್ಲಿ ವರ್ಷಂಪ್ರತಿ ಯಕ್ಷಗಾನ ನಡೆಯುತ್ತೆ. ಅದನ್ನು ನಡೆಸುವುದು ದುರ್ಗಾಪರಮೇಶ್ವರಿ ಸೇವಾ ಸಮಿತಿಯವರು ಅಲ್ಲಿರುವ ಸದಸ್ಯರು ಎಲ್ಲರೂ ಸೇರಿ ದುಡ್ಡು ಹಾಕಿ ಆ ಯಕ್ಷಗಾನ ನಡೆಸುವಂತದ್ದು. ಆ ಸಮಿತಿಯಲ್ಲಿ ೬೦ ಜನ ಹಿಂದೂಗಳ ಜೊತೆ ಮೂರು ಮಂದಿ ಮುಸ್ಲಿಂ ಸದಸ್ಯರು ಸೇರಿ, ನಮ್ಮ ಜೊತೆ ಕೂಡಿಕೊಂಡು ಕೆಲಸ ಮಾಡಿ ಯಕ್ಷಗಾನ ಮಾಡಿಸುವುದು ಹಲವು ವರ್ಷದಿಂದ ನಡೆದುಕೊಂಡು ಬಂದದ್ದು .ಇದೇ ರೀತಿ ಮಂಗಳೂರು ನಗರಭಾಗದಲ್ಲಿ ಕ್ರಿಶ್ಚನ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ವರು ಅತೀ ವೈಭವಯುತವಾಗಿ ನಡೆಸುವ ಯಕ್ಷಗಾನವು ಕೂಡಾ ಕರಾವಳಿಯ ಸೌಹಾರ್ದತೆಗೆ ಹಿಡಿದ ಕನ್ನಡಿ. ಆಟ ನಡೆಯುವ ಬಯಲಿನಲ್ಲಿ ವ್ಯಾಪಾರಿಗಳು ನಡೆಸುವ ಬುರ್ಜಿ ,ಸುಕುನಪ್ಪ ,ನೈಯಪ್ಪ ,ಸೋಜಿ ,ಕುರ್ಲಾರಿ ಮಾರಾಟದಲ್ಲಿ ಅನ್ಯಮತೀಯರೇ ಜಾಸ್ತಿ .ಇಲ್ಲಿ ಯಾವ ವಾತಾವರಣ ಹೇಗೆ ಕಲುಷಿತ ವಾಯಿತು ? ಎಂದು ಆ ‘ಲೇಖಕ’ರೇ  ಹೇಳಬೇಕು

ಮತ್ತಷ್ಟು ಓದು »

18
ಫೆಬ್ರ

ಅಂಬಿಕಾತನಯದತ್ತರ “ ಬೆಳಗು” – ಶ್ರೀ ಅರವಿಂದರ “ ಚಿನ್ಮಯದ ಆತ್ಮದೀಪ ”

– ಪುಟ್ಟು ಕುಲಕರ್ಣಿ,ಕುಮಟಾ

ಬೇಂದ್ರೆ ಮತ್ತು ಅರಬಿಂದೋವರಕವಿ ಅಂಬಿಕಾತನಯದತ್ತರು , ಜ್ಞಾನಪೀಠ ಪ್ರಶಸ್ತಿ ಸ್ವೀಕರಿಸುವ ಮುನ್ನ ಮಾಡಿದ ಭಾಷಣದಲ್ಲಿ ಒಂದು ಸಾಲು ಹೀಗಿದೆ, ‘ ನನ್ನ “ಬೆಳಗು” ಮತ್ತು “ಹಕ್ಕಿ ಹಾರುತಿದೆ” ಕವನಗಳನ್ನು ಮುಗ್ಧ ವಿದ್ಯಾರ್ಥಿಗಳಿಗೆ ಕಲಿಸಿ ಕೊಡಲಾಗುತ್ತಿದೆ. ಆದರೆ ಅದನ್ನು ಕಲಿಸುತ್ತಿರುವ ಶಿಕ್ಷಕರು ಆ ವಿದ್ಯಾರ್ಥಿಗಳಿಗಿಂತ ಮುಗ್ಧರಾಗಿದ್ದಾರೆ….. “ . ಈ ಸಾಲುಗಳನ್ನು ಓದಿದಾಗ , ಇಲ್ಲಿಯವರೆಗೂ “ಬೆಳಗು” ಕವನದ ಬಗೆಗೆ ಬಂದ ವಿಶ್ಲೇಷಣೆಗಳ ಕುರಿತು ಕವಿಗೆ ತೃಪ್ತಿ ಇಲ್ಲವೆಂದು ತೋರುತ್ತಿದೆ. ಹಾಗಾದರೆ ಈ “ಬೆಳಗು” ಮತ್ತು “ಹಕ್ಕಿ ಹಾರುತಿದೆ ನೋಡಿದಿರಾ” ಕವನಗಳನ್ನು ಬೇರೊಂದು ಆಯಾಮದಿಂದ ವಿಶ್ಲೇಷನೆ ಮಾಡಬೇಕೆ? ಹಾಗಿದ್ದಲ್ಲಿ ಅದಕ್ಕೆ ಇರುವ ಮಾನಕಗಳೇನು? ಯಾವ ಅಥವಾ ಯಾರ ಪ್ರಭಾವದಲ್ಲಿ ಈ ಕವನಗಳು ರೂಪಿತಗೊಂಡಿವೆ? ಬೌದ್ಧಿಕ ಹಂತದ ಶಬ್ದಜಾಲದ ಹೊರತಾಗಿಯೂ , ಪ್ರಜ್ಞಾ ವಲಯದ ಆಚೆಯಲ್ಲಿ ಸಾಗಿ ಅನಂತಾನಂತದ ಜೊತೆಗೆ ಜೋಡಣೆಯಾಗಬಲ್ಲ ಅನೂಹ್ಯವಾದದು ಏನಾದರೂ ಇಲ್ಲಿ ಹೇಳಲ್ಪಡುತ್ತಿದೆಯೋ?

ಇಲ್ಲಿರುವ ಶಬ್ದಮಾಧುರ್ಯದ ಆಚೆ ಇರುವ “ ಏನನ್ನೋ” ಕವಿ ಈ “ಬೆಳಗು” ಕವನದಲ್ಲಿ ಅಡಗಿಸಿದ್ದಾನೆ. ಈ “ಬೆಳಗು” ಕೇವಲ ನಾಮಪದವೋ, ಕ್ರಿಯಾಪದವೋ ಅಥವಾ ವಿಶೇಷಣವೋ ಅಥವಾ ಎಲ್ಲವೂ ಆಗಿ ಅರ್ಥಗರ್ಭಿತವಾಗಿದೆಯೋ?

“ಬೆಳಗು” ನಾಮಪದವಾಗಿ ಉಷೆಯ ಕಾಲವೆಂದು ಸರ್ವವಿದಿತ. ಆದರೆ ಅದೇ ಬೆಳಗು ಕ್ರಿಯಾಪದವಾಗಿ ಹೊಳೆ, ಆರತಿಯೆತ್ತು ಎನ್ನುವ ಅರ್ಥವನ್ನೂ ಹೇಳುತ್ತಿದೆ. ಹೊಳೆಯುವ , ಮಿನುಗುವ ವಿಶೇಷಣದಲ್ಲೂ ಸಹಿತ ಮಿಂಚುತ್ತಿದೆ. ಹಾಗಾದರೆ ಇಲ್ಲಿರುವ ಬೆಳಗು ಯಾವುದು? ಚುಮುಚುಮು ಬೆಳಗೇ? ಪೆರ್ವೆಳಗೆ ? ಬಳ್ಳಿವೆಳಗೆ ? ಬೆರಕೆವೆಳಗೆ? ಬೆಳ್ವೆಳಗೆ? ಹೀಗೆ ಹತ್ತಾರು ಹಂತದ ಪ್ರಶ್ನೆಗಳನ್ನು ನಿಲ್ಲಿಸುತ್ತಿದೆ. ಬೆಳಗೊಂದಿಸು ಎನ್ನುವದಕ್ಕೆ ಕಾಂತಿಗೊಳಿಸು ಎನ್ನುವ ಅರ್ಥವೂ ಇದೆ ಈ ಎಲ್ಲ ಹಂತದ ಸ್ವಾನುಭವವನ್ನು ಆ ಉಷೆಯ ಸಮಯದ ತೋಷದಲ್ಲಿ ಕಂಡೇ ಅನುಭವಿಸಬೇಕು. ಯಾವ ಶಬ್ದದದಲ್ಲಿ ಹೇಳಿದರೂ ಆ ಅನುಭಾವ ಸಿಕ್ಕಲಾರದು.

ಮತ್ತಷ್ಟು ಓದು »

17
ಫೆಬ್ರ

ಏಕರೂಪ ನಾಗರಿಕ ಸಂಹಿತೆ – ಸುಪ್ರೀಂ ಕೋರ್ಟ್ V/S ಜಮಾತೆ ವಿಚಾರಧಾರೆ

– ಅನಿರುದ್ಧ ವಸಿಷ್ಟ,ಭದ್ರಾವತಿ

ಅರಾಜಕತೆ ತಂದೊಡ್ಡದಿರಲಿ ಧರ್ಮಾಧಾರಿತ ಕಾನೂನು

Uniform Civil Codeಪ್ರಜಾಪ್ರಭುತ್ವ ದೇಶದಲ್ಲಿರುವ ಭಾರತೀಯರಿಗೆ ದೇಶದ ಸಂವಿಧಾನವೇ ಮೇಲ್ಪಂಕ್ತಿಯಾಗಿದ್ದು, ಸಂವಿಧಾನವೇ ಅಂತಿಮವಾದುದು. ಧರ್ಮ ಗ್ರಂಥಗಳಾದ ರಾಮಾಯಣ, ಮಹಾಭಾರತ, ಕುರಾನ್, ಬೈಬಲ್‌ಗಳು ಆಯಾ ಧರ್ಮದ ಅನುಯಾಯಿಗಳ ವೈಯಕ್ತಿಕವಾಗಿರಬೇಕು.ಆದರೆ,ವೋಟ್ ಬ್ಯಾಂಕ್ ರಾಜಕಾರಣದ ಫಲವಾಗಿ ಸರ್ಕಾರಗಳು ಕೈಗೊಂಡ ನಿರ್ಧಾರಗಳು ಸಂವಿಧಾನ ವಿರುದ್ಧ ನಡೆಯಲು ಪ್ರೇರಣೆಯಾಗುತ್ತವೆ ಎಂದರೆ ಅದು ಪ್ರಜಾಪ್ರಭುತ್ವದ ದುರಂತವೇ ಹೌದು.೩೦೦ ವರ್ಷಗಳ ಕಾಲ ಬ್ರಿಟೀಷರಿಂದ ಆಳಿಸಿಕೊಂಡ ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದರೂ, ಒಂದು ರೀತಿಯಲ್ಲಿ ಸರ್ವಾಧಿಕಾರಿ ಮನಸ್ಥಿತಿಯನ್ನೆ ಇಂದಿಗೂ ಹೊಂದಿದೆ ಎಂದರೆ ತಪ್ಪಲ್ಲ. ಇದು ಕೇವಲ ಆಳುವ ಪಕ್ಷಗಳ ಮನಸ್ಥಿತಿ ಮಾತ್ರವಲ್ಲ, ದೇಶದ ಪ್ರತಿ ಧರ್ಮ ಹಾಗೂ ಜಾತಿಗಳಲ್ಲಿ ಇದು ಹಾಸು ಹೊಕ್ಕಾಗಿದೆ.

೧೯೪೭ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರೂಪಿಸಲಾದ ಸಂವಿಧಾನ ಮಹೋನ್ನತ ಆಶಯಗಳನ್ನು ಹೊಂದಿದೆ.ಸಂವಿಧಾನವೇ ಭಾರತೀಯರಿಗೆ ಒಂದು ರೀತಿಯಲ್ಲಿ ಸವೋತ್ತಮ ಎಂದರೂ ತಪ್ಪಲ್ಲ. ಆದರೆ, ಸಂವಿಧಾನ ಆಶಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ಯಾವುದೇ ಸರ್ಕಾರ ಅಥವಾ ಧರ್ಮಗಳು ನಡೆದುಕೊಂಡಾಗ ಅದನ್ನು ನ್ಯಾಯಾಂಗದಲ್ಲಿ ಪ್ರಶ್ನೆ ಮಾಡುವ ಅಧಿಕಾರವನ್ನು ಇದೇ ಸಂವಿಧಾನ ಕಲ್ಪಿಸಿದೆ. ಆದರೆ, ಯಾವುದೇ ಒಂದು ಒಳ ವ್ಯವಸ್ಥೆ ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನಿಸುತ್ತದೆ ಎಂದರೆ ಹೇಗೆ?

ಮತ್ತಷ್ಟು ಓದು »

16
ಫೆಬ್ರ

ಜೆಎನ್‍ಯು : ಯೂನಿವರ್ಸಿಟಿಯ ಹೆಸರಲ್ಲೇ ದೋಷ ಇರಬಹುದೆ?!

– ರೋಹಿತ್ ಚಕ್ರತೀರ್ಥ

ಜೆಎನ್‍ಯುನೇರಾನೇರವಾಗಿ ವಿಷಯಕ್ಕೆ ಬರೋಣ. ಜವಹರ್‍ಲಾಲ್ ನೆಹರೂ ಹೆಸರಲ್ಲಿರುವ ವಿಶ್ವವಿದ್ಯಾಲಯದಲ್ಲಿ ಮೊನ್ನೆ ಫೆಬ್ರವರಿ 9ನೇ ತಾರೀಖು ಡಿಎಸ್‍ಯು (ಡೆಮೊಕ್ರಾಟಿಕ್ ಸ್ಟೂಡೆಂಟ್ಸ್ ಯೂನಿಯನ್) ಎಂಬ ಸಂಘಟನೆಯ ವಿದ್ಯಾರ್ಥಿಗಳು ಎರಡು ವರ್ಷದ ಹಿಂದೆ ನೇಣುಗಂಬವೇರಿದ್ದ ಒಬ್ಬ ಭಯೋತ್ಪಾದಕನ “ಪುಣ್ಯತಿಥಿ”ಯನ್ನು ಆಚರಿಸಲು ನಿರ್ಧರಿಸಿದ್ದರು. ಕಾರ್ಯಕ್ರಮಕ್ಕೆ ಅವರು ಕೊಟ್ಟಿದ್ದ ಹೆಸರು “ಅಫ್ಜಲ್ ಗುರು ಮತ್ತು ಮಖ್‍ಬೂಲ್ ಭಟ್‍ರ ನ್ಯಾಯಾಂಗ ಹತ್ಯೆಯ ನೆನಪಿನಲ್ಲಿ” ನಡೆಸುವ ಕಾರ್ಯಕ್ರಮ ಎಂದು. ಈ ಡಿಎಸ್‍ಯು ಒಂದು ಮಾವೋವಾದಿ ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆ. ದೇಶದೊಳಗಿನ ಮಾವೋವಾದಿ ನಕ್ಸಲರಿಗೆ ಗುಟ್ಟಿನಿಂದಲ್ಲ, ಓಪನ್ ಆಗಿ ಬೆಂಬಲ ಸೂಚಿಸುವ ಸಂಘಟನೆ ಇದು! ಆದರೆ, ಎಲ್ಲಿಯವರೆಗೆ ಈ ಸಂಘಟನೆಯ ವಿದ್ಯಾರ್ಥಿಗಳು ತಾವಾಗಿ ಬಂದೂಕು ಹಿಡಿದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ತಿರುಗಾಡುವುದಿಲ್ಲವೋ ಅಲ್ಲಿಯವರೆಗೂ ಅವರನ್ನು ಸಹಿಸಿಕೊಳ್ಳಬಹುದು ಎಂಬುದು ವಿವಿಯ ಉದಾರ ಧೋರಣೆ. ಫೆಬ್ರವರಿ 9ರಂದು ಆಯೋಜನೆಯಾಗಿದ್ದ ಕಾರ್ಯಕ್ರಮದ ಬಗ್ಗೆ ಕಣ್ಮುಚ್ಚಿ ಕುಳಿತಿದ್ದ (ಅಸಲಿಗೆ ಮಾಹಿತಿಯೇ ಇರದಿದ್ದ) ವಿವಿಯ ಆಡಳಿತ ಮಂಡಳಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒಂದು ಪತ್ರ ಬರೆದು “ಸುಪ್ರೀಂ ಕೋರ್ಟಿನ ತೀರ್ಪಿಗೆ ಅನುಸಾರವಾಗಿ ಶಿಕ್ಷೆಗೊಳಪಟ್ಟ ಒಬ್ಬ ಉಗ್ರನ ಹೆಸರಲ್ಲಿ ಅವನ ಪುಣ್ಯತಿಥಿಯನ್ನು ಕ್ಯಾಂಪಸ್ ಒಳಗೆ ಆಚರಿಸುವುದು ಸರಿಯೇ? ಇದು ನ್ಯಾಯಾಂಗ ನಿಂದನೆ ಮಾತ್ರವಲ್ಲ; ದೇಶದ ಸಮಗ್ರತೆಯನ್ನೇ ಪ್ರಶ್ನಿಸುವ ಕೆಲಸ. ಇಂಥ ಅನರ್ಥಗಳು ನಡೆಯದಂತೆ ವಿವಿ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಕೇಳಿಕೊಂಡಿತು. ಬಹುಶಃ ಆಗ ವಿವಿಗೂ ಈ ಸಂಗತಿ ಮುಂದೆ ಹೇಗೆಲ್ಲ ಕವಲೊಡೆಯಬಹುದು, ಎಷ್ಟು ಸಮಸ್ಯೆಗಳನ್ನು ಹುಟ್ಟುಹಾಕಬಹುದು ಎಂಬ ಅಂದಾಜು ಸಿಕ್ಕಿರಬೇಕು. ಕೂಡಲೇ ಅದು ಡಿಎಸ್‍ಯು ಸಂಘಟನೆಯ ಮುಖಂಡರನ್ನು ಕರೆದು, ಇಂಥಾದ್ದನ್ನೆಲ್ಲ ಇಲ್ಲಿ ಇಟ್ಟುಕೊಳ್ಳಬೇಡಿ; ಕ್ಯಾಂಪಸ್ ಹೊರಗೆ ಏನು ಬೇಕಾದರೂ ಮಾಡಿಕೊಳ್ಳಿ ಎಂಬ ಸ್ಪಷ್ಟ ಸೂಚನೆ ಕೊಟ್ಟಿತು.

ಮತ್ತಷ್ಟು ಓದು »

15
ಫೆಬ್ರ

ಸುಳ್ಸುದ್ದಿ : ಭಯೋತ್ಪಾದಕಿಯನ್ನು ವರಿಸಲಿರುವ ರಾಷ್ಟ್ರೀಯ ಪಕ್ಷದ ಉಪಾಧ್ಯಕ್ಷ!

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Terro Supporting Politicsಕಳೆದ ಹಲವು ದಶಕಗಳಿಂದ ಭಾರತದ ಮೋಸ್ಟ್ ಎಲಿಜೆಬಲ್ ಬ್ಯಾಚುಲರ್ ಎನಿಸಿಕೊಂಡಿದ್ದ ರಾಷ್ಟ್ರೀಯ ಪಕ್ಷದ ಉಪಾಧ್ಯಕ್ಷರೊಬ್ಬರು ಭಯೊತ್ಪಾದಕಿಯೊಬ್ಬಳನ್ನು ವಿವಾಹವಾಗಲಿರುವುದಾಗಿ ಆ ಪಕ್ಷದ ಹಿರಿಯ ವಕ್ತಾರರೊಬ್ಬರು ತಿಳಿಸಿದ್ದಾರೆ. ಇತ್ತೀಚಿಗೆ ಪಕ್ಷ ಕೈಗೊಂಡ ಸಮೀಕ್ಷೆಯ ಪ್ರಕಾರ ದೇಶದಲ್ಲಿ ಭಯೋತ್ಪಾದಕರು ಅಥವಾ ಭಯೋತ್ಪಾದಕರ ಬೆಂಬಲಿಗರು ಸುಮಾರು 15 ರಿಂದ 20 ಪ್ರತಿಶತ ಇದ್ದು,ಅವರೆಲ್ಲರೂ ಈ ಮೊದಲು ನಮ್ಮ ಪಕ್ಷದ ಖಾಯಂ ಮತದಾರರಾಗಿದ್ದರು,ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಪಕ್ಷದಂತೆಯೇ ಹಲವು ಮೂಲಭೂತವಾದೀ ಪಕ್ಷಗಳು ಉದಯಿಸಿದ್ದು, ಇನ್ನು ಕೆಲವು ಪಕ್ಷಗಳು ವೋಟಿಗಾಗಿ ತಮ್ಮ ತತ್ವ-ಸಿದ್ದಾಂತ ಗಳನ್ನು ಬದಲಾಯಿಸಿಕೊಂಡಿದ್ದು,ಇದರಿಂದಾಗಿ ಭಯೋತ್ಪಾದಕರ ಓಟಿಗಾಗಿ ದೇಶದಲ್ಲಿ ತೀವ್ರ ಸ್ಪರ್ದೆ ಏರ್ಪಟ್ಟಿದೆ.ಆದ ಕಾರಣ ಆಂಧ್ರ,ಪಶ್ಚಿಮ ಬಂಗಾಳ,ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಹರಿದು ಹಂಚಿ ಹೋಗಿರುವ ನಮ್ಮ ಸಾಂಪ್ರದಾಯಿಕ ಭಯೋತ್ಪಾದಕರ ಮತಗಳನ್ನು ಮತ್ತೆ ಬುಟ್ಟಿಗೆ ಹಾಕಿಕೊಳ್ಳುವ ದೃಷ್ಠಿಯಿಂದಾಗಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಕಳೆದ ತಿಂಗಳು ಹೈದರಾಬಾದ್ ನಲ್ಲಿ ಬಾಂಬ್ ಇಟ್ಟಿದ್ದ ಯಾಕೂಬ್ ಮೆಮನ್ ಎನ್ನುವ ಉಗ್ರವಾದಿಯ ಬೆಂಬಲಿಗರ ಪರವಾಗಿ ಹೋರಾಟ ನಡೆಸಿದ ಆ ಯುವರಾಜನಿಗೆ ಸಿಕ್ಕ ಅಭೂತಪೂರ್ವ ಬೆಂಬಲವನ್ನು ಕಂಡು ಪುಳಕಗೊಂಡ ಪಕ್ಷದಿಂದ ನೇಮಿಸಲ್ಪಟ್ಟ ಹಲವು ಸಲಹೆಗಾರರು,ಆತನ ತಾಯಿಯೂ ಆದ ಪಕ್ಷದ ಅಧ್ಯಕ್ಷೆಯ ಮುಂದೆ ಈ ರೀತಿಯ ಸಲಹೆಯನ್ನಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.ನಂತರ ಪಕ್ಷಾಧ್ಯಕ್ಷೆ ಈ ಬಗ್ಗೆ ಸಕಾರಾತ್ಮಕ  ತೀರ್ಮಾನವನ್ನು ಕೈಗೊಂಡು ಪಕ್ಷದ ನೀತಿ ನಿರೂಪಣಾ ಸಮಿತಿಯ ಮುಂದೆ ಮಂಡಿಸಿದ್ದು, ಸಮಿತಿ ತನ್ನ ಸರ್ವಾನುಮತದ ಒಪ್ಪಿಗೆ ಸೂಚಿಸಿದ ಬಳಿಕ ಪಕ್ಷ ಈ ಕುರಿತು ಅಂತಿಮ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.

ಮತ್ತಷ್ಟು ಓದು »

15
ಫೆಬ್ರ

ಗುರುತ್ವದ ಅಲೆಗಳಲ್ಲಿ ಕೇಳುವ ಬ್ರಹ್ಮಾಂಡದ ಸಂಗೀತ

– ವಿನಾಯಕ ಹಂಪಿಹೊಳಿ

ಗುರುತ್ವದ ಅಲೆನೀವು ಅಂತರಿಕ್ಷದ ಆಕಾಶನೌಕೆಯೊಂದರಲ್ಲಿದ್ದೀರಿ ಎಂದು ಭಾವಿಸಿ. ಆ ನೌಕೆಯು ೯.೮ ಮೀ/ಸೆ ವೇಗೋತ್ಕರ್ಷದಿಂದ ಚಲಿಸಲಾರಂಭಿಸಿತು ಎಂದಿಟ್ಟುಕೊಳ್ಳಿ. ಆ ನೌಕೆಯ ಕಿಟಕಿ ಬಾಗಿಲುಗಳೆಲ್ಲವೂ ಮುಚ್ಚಿವೆ ಎಂದು ಊಹಿಸಿ. ಆಗ ಅದು ವೇಗೋತ್ಕರ್ಷದಿಂದ ಚಲಿಸುತ್ತಿರುವ ಅನುಭವ ನಿಮಗೆ ನೇರವಾಗಿ ಆಗುವದಿಲ್ಲ. ಅದನ್ನು ಹೇಗೆ ತಿಳಿಯುತ್ತೀರಿ? ಸುಲಭ. ಆಗ ನಿಮ್ಮ ಕೈಯಲ್ಲಿನ ಚೆಂಡನ್ನು ಬಿಟ್ಟು ಬಿಡಿ. ಒಂದು ವೇಳೆ ನೌಕೆಯು ಏಕವೇಗದಿಂದ ಹೋಗುತ್ತಿದ್ದರೆ ಆ ಚೆಂಡು ಅಲ್ಲೇ ಇರುತ್ತದೆ. ನೌಕೆ ವೇಗೋತ್ಕರ್ಷವನ್ನು ಹೊಂದುತ್ತಿದ್ದರೆ ಚೆಂಡು ಮತ್ತು ನೌಕೆಯ ತಳದ ಅಂತರ ಕಡಿಮೆಯಾಗುತ್ತ ಸಾಗಿ ಕೊನೆಗೆ ನಿಮ್ಮ ಕಾಲ ಬಳಿ ಬಂದು ನೌಕೆಯ ತಳ ಭಾಗಕ್ಕೆ ಬಡಿಯುತ್ತದೆ. ಆಗ ನಿಮಗೆ ಚೆಂಡು ಕೆಳಗೆ ಬಿದ್ದಂತೆ ಕಾಣುತ್ತದೆ.

ಸರಿ. ಈ ಕಾಲ್ಪನಿಕ ಪ್ರಯೋಗದ ಲಾಭವೇನು? ತುಂಬಾ ಇದೆ. ಹೊರಗಡೆಯ ಸಂಪರ್ಕವೇ ಇಲ್ಲದ ಅಂಥ ನೌಕೆ ೯.೮ ಮೀ/ಸೆ ವೇಗೋತ್ಕರ್ಷದಿಂದ ಮುನ್ನುಗ್ಗುತ್ತಿದ್ದರೆ, ನಿಮಗೆ ಭೂಮಿಯ ಮೇಲೆ ಇದ್ದ ಅನುಭವವೇ ಆಗುತ್ತಿರುತ್ತದೆ. ಎಲ್ಲಿಯವರೆಗೆ ನೀವು ಕಿಟಕಿ ತೆರೆದು ಹೊರಜಗತ್ತನ್ನು ನೋಡುವದಿಲ್ಲವೋ ಅಲ್ಲಿಯವರೆಗೂ ನಿಮಗೆ ಆಕಾಶದಲ್ಲಿದ್ದೇವೆ ಎಂದೇ ಅನಿಸುವದಿಲ್ಲ. ಹಾಗೆ ಅನ್ನಿಸಬೇಕಾದರೆ ನೀವು ಮುಚ್ಚಿರುವ ನೌಕೆಯಿಂದ ಆಚೆಗಿನ ಜಗತ್ತಿನೆಡೆ ಕಣ್ಣು ಹಾಯಿಸಬೇಕು. ಆಗಲೇ “ಒಹೋ! ಭೂಮಿಯ ಮೇಲಿಲ್ಲ!!” ಎಂಬ ಅನುಭವ ಬರುತ್ತದೆ. ಕನಸನ್ನು ಕಾಣುತ್ತಿರುವಾಗ ಈ ಕನಸು ಸುಳ್ಳು ಎಂದು ಎಂದಾದರೂ ಅನಿಸಿದೆಯೇ? “ಒಹೋ! ಕನಸಾ!!” ಎಂಬ ಸುಳ್ಳಿನ ಅರಿವು ಉಂಟಾಗುವದು ಎಚ್ಚರವಾದ ಮೇಲೇ ಅಲ್ಲವೇ? ಹಾಗೇ ಇದು.

ಮತ್ತಷ್ಟು ಓದು »

10
ಫೆಬ್ರ

ಕನ್ನಡ ವಿಕಿಪೀಡಿಯಕ್ಕೆ ಹದಿಮೂರರ ಹರೆಯದ ಸಂಭ್ರಮ

– ವಿಕಾಸ್ ಹೆಗಡೆ, ಬೆಂಗಳೂರು

ಕನ್ನಡ ವಿಕಿಪೀಡಿಯವಿಕಿಪೀಡಿಯ – ಇಂದಿನ ಆನ್ ಲೈನ್ ಜಗತ್ತಿನಲ್ಲಿ ಇದರ ಹೆಸರು ಕೇಳದವರಿಲ್ಲ. ಯಾವುದೇ ವಿಷಯವಾದರೂ ಸರಿ, ಕ್ಷಣಮಾತ್ರದಲ್ಲಿ ಮಾಹಿತಿ ತಂದು ಮುಂದಿಡುವ ವಿಕಿಪೀಡಿಯ ಇಂದು ಜಗತ್ತಿನ ಅತೀ ಹೆಚ್ಚು ಭೇಟಿ ಕೊಡುವ ತಾಣಗಳಲ್ಲಿ ಜಾಗತಿಕ ಮಟ್ಟದಲ್ಲಿ ಐದನೇ ಸ್ಥಾನದಲ್ಲಿದೆ ಅಂದರೆ ಅದರ ಜನಪ್ರಿಯತೆ ಊಹಿಸಿಕೊಳ್ಳಬಹುದು. “ಪ್ರಪಂಚದ ಎಲ್ಲಾ ಜ್ಞಾನವೂ ಒಟ್ಟುಗೂಡಿ ಪ್ರತಿಯೊಬ್ಬರಿಗೂ ಮುಕ್ತವಾಗಿ ಸಿಗುವ ಲೋಕವೊಂದನ್ನು ಕಲ್ಪಿಸಿಕೊಳ್ಳಿ” ಎಂಬ ಘೋಷವಾಕ್ಯದ ವಿಕಿಪೀಡಿಯ ಇಂದು ಹೆಮ್ಮರವಾಗಿ ಬೆಳೆದಿದೆ.ವಿಕಿಪೀಡಿಯ ನಾನ್ ಪ್ರಾಫಿಟ್ ಸಂಸ್ಥೆಯಾದ ವಿಕಿಮೀಡಿಯ ಫೌಂಡೇಶನ್‌ನ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದೆ.ಇದರ ವಿಶೇಷವೆಂದರೆ ಇದು ಜನರಿಂದ ಜನರಿಗಾಗಿ ನಡೆಯುತ್ತಿರುವ ಸಮುದಾಯ ಕಾರ್ಯ. ಜನರ ಮತ್ತು ಸಂಸ್ಥೆಗಳ ದೇಣಿಗೆಗಳೇ ಇದರ ಆರ್ಥಿಕ ಮೂಲ. ಇದರಲ್ಲಿ ಮಾಹಿತಿ ತುಂಬಿಸುವಿಕೆ ಮತ್ತು ಮಾಹಿತಿ ಪಡೆದುಕೊಳ್ಳುವಿಕೆ ಪ್ರತಿಯೊಬ್ಬನಿಗೂ ಮುಕ್ತ. ಜಗತ್ತಿನ ಯಾವುದೇ ವಿಷಯದ ಬಗ್ಗೆ ಮಾಹಿತಿಪೂರ್ಣ ವಿಷಯಗಳನ್ನು ಯಾರುಬೇಕಾದರೂ ವಿಕಿಪೀಡಿಯ ಸಂಪಾದಕನಾಗಿ ನೊಂದಾಯಿಸಿಕೊಂಡು ಹಾಕಬಹುದು. ಹೊಸ ಲೇಖನದ ಪುಟ ರಚಿಸಬಹುದು.ಇರುವ ಲೇಖನ ತಿದ್ದಬಹುದು. ಹೆಚ್ಚಿನ ಮಾಹಿತಿ ಸೇರಿಸಬಹುದು. ಬೇರೆ ಬೇರೆ ದೇಶ ಪ್ರದೇಶ, ಹಿನ್ನೆಲೆಗಳ ಅನೇಕ ಮಂದಿಯ ಸಹಕಾರದಲ್ಲಿ ಪ್ರತಿಯೊಂದು ಪುಟವೂ ರೂಪುಗೊಳ್ಳುತ್ತದೆ. ಹಾಗಾಗಿ ವಿಕಿಪೀಡಿಯ ಒಂದು ಸಹಯೋಗಿ ವಿಶ್ವಕೋಶ.ಇಂತಹ ಒಂದು ಸ್ವತಂತ್ರ ಮತ್ತು ಮುಕ್ತ ವಿಶ್ವಕೋಶ ಆನ್ ಲೈನ್ ವಿಶ್ವಕೋಶ ಇಂದು ಸುಮಾರು ಮುನ್ನೂರು ಭಾಷೆಗಳಲ್ಲಿ ಇದೆ. ಇಂಗ್ಲೀಷ್ ವಿಕಿಪೀಡಿಯಾ ಒಂದರಲ್ಲೇ ಸುಮಾರು ಐವತ್ತು ಲಕ್ಷ ಲೇಖನಗಳಿವೆ ಅಂದರೆ ಅದರ ಮಾಹಿತಿ ಅಗಾಧತೆಯನ್ನು ಊಹಿಸಿಕೊಳ್ಳಬಹುದು! ವಿಕಿಪೀಡಿಯಾ ಆರಂಭವಾಗಿದ್ದು ೨೦೦೧ರ ಜನವರಿ ೧೫ರಂದುಈ ವರ್ಷ ಜನವರಿಯಲ್ಲಿ ಅದು ೧೫ನೇ ಹುಟ್ಟುಹಬ್ಬ ಆಚರಿಸಿಕೊಂಡಿತು.
ಮತ್ತಷ್ಟು ಓದು »

8
ಫೆಬ್ರ

ಸಂಸ್ಕೃತ ಮತ್ತು ಕನ್ನಡಗಳ ಅಂತರ್ಜಾಲ ಸ್ಥಿತಿಗತಿ

– ನವೀನ್ ಗಂಗೋತ್ರಿ

ಸಂಸ್ಕೃತಸಂಸ್ಕೃತದ ಕುರಿತಾಗಿ ಭಾರೀ ಅನುಕಂಪದಿಂದ ಮಾತಾಡುವ ಬಲುದೂರದ ಮಿತ್ರವಲಯವೊಂದಿದೆ ನನ್ನ ಬಳಿ. ಸಂಸ್ಕೃತವನ್ನೋದಿಕೊಂಡ ನಾನು, ನನ್ನಂಥವರು, ನಮ್ಮ ಸಂಸ್ಕೃತ ಸಂಸ್ಥೆಗಳು, ಸಂಸ್ಕೃತ ಪ್ರಪಂಚ ಮತ್ತು ಸಂಸ್ಕೃತಭಾಷೆಯ ಕುರಿತಾದ ಆಳವಾದ ಅನುಕಂಪ ಮತ್ತು ಕರುಣವೊಂದು ಅವರ ದನಿಯಲ್ಲಿರುತ್ತದೆ. ಆದರೆ ನನಗೆಂದಿಗೂ ಈ ಅನುಕಂಪ ಸಮರ್ಪಕವೆಂದೆನಿಸಿಲ್ಲ. ಬಹುಶಃ ಎಪತ್ತು ಎಂಭತ್ತು ತೊಂಭತ್ತರ ದಶಕದ ಸಂಸ್ಕೃತದ ಸ್ಥಿತಿಯ ಕುರಿತಾದ ಅವರ ಗ್ರಹಿಕೆ ಇನ್ನೂ ಅಪ್ಡೇಟಾಗಿಲ್ಲವೆಂದು ಸುಮ್ಮನಾಗುತ್ತೇನೆ. ವಾಸ್ತವದಲ್ಲಿ ಸಂಸ್ಕೃತದ ಪ್ರಪಂಚ ಚಟುವಟಿಕೆಯಿಂದ ಕೂಡಿದೆಯಲ್ಲದೆ ಅದು ಪ್ರಪಂಚದ ಬಹುಪಾಲನ್ನು ತಲುಪುವ ದಿಕ್ಕಿನಲ್ಲಿ ಸಮರ್ಥ ಹೆಜ್ಜೆಯನ್ನಿಟ್ಟಿದೆ. ಸಂಸ್ಕೃತಕ್ಕಾಗಿ ಉಳಿದೆಲ್ಲವನ್ನೂ ತೊರೆದ ನಿಷ್ಠ ಕಾರ್ಯಕರ್ತರಿದ್ದಾರೆ, ವಿದ್ವಾಂಸರಿದ್ದಾರೆ, ಸಂಸ್ಥೆಗಳಿವೆ ಮತ್ತು ವಿವಿ ಗಳಿವೆ. ನಿಜವೆಂದರೆ ಸಂಸ್ಕೃತದ ಕಾರ್ಯ ಭಾರತದಲ್ಲಿ ಮಾತ್ರವಲ್ಲ, ಯೂರೋಪ್ ನಿಂದ ಕೂಡ ನಡೆಯುತ್ತಿದೆ. ಅದರ ಪರಿಣಾಮವೇ ಸಂಸ್ಕೃತದ ಲಭ್ಯತೆ ಎಲ್ಲಾ ಅರ್ಥದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿಮ್ಮಲ್ಲಿ ಅಂತರ್ಜಾಲದ ವ್ಯವಸ್ಥೆ ಇದೆಯೆಂದರೆ ಸಂಸ್ಕೃತ ವಿಶ್ವದ ಕ್ಲಾಸಿಕ್ ಕೃತಿಗಳೆಲ್ಲವೂ ನಿಮ್ಮಲ್ಲಿವೆ ಎಂದೇ ಅರ್ಥ. ಈ ಮಾತುಗಳಲ್ಲಿ ನಿಮಗೆ ನಂಬಿಕೆಯಿಲ್ಲವೆಂದಾದರೆ ಸುಮ್ಮನೇ ಒಮ್ಮೆ ಗೂಗಲಿನಲ್ಲಿ ಸಂಸ್ಕೃತದ ಕೃತಿಯೊಂದಕ್ಕಾಗಿ ಹುಡುಕಾಡಿ ನೋಡಿ.

ಸಂಸ್ಕೃತದ ಕೃತಿಗಳಿಗಾಗಿ ಹುಡುಕಿದಂತೆಯೇ ಕನ್ನಡದ ಕ್ಲಾಸಿಕ್ ಕೃತಿಗಳಿಗಾಗಿ ಹುಡುಕಿ ನೋಡಿದರೆ ನಿಮಗೆ ನಿಜಕ್ಕೂ ಖೇದವಾಗುತ್ತದೆ. ನಾವು ಆರೇಳು ಕೋಟಿ ಜನ ಕರ್ನಾಟಕದಲ್ಲಿ ಕುಳಿತು, ಬೆಂಗಳೂರಿನಂಥ ಸಿಲಿಕಾನ್ ಕಣಿವೆಯನ್ನು ನಮ್ಮ ರಾಜಧಾನಿಯನ್ನಾಗಿ ಇಟ್ಟುಕೊಂಡು, ಮಹಾ ಮಹಾ ವಿಶ್ವ ವಿದ್ಯಾಲಯಗಳನ್ನು ಕಟ್ಟಿಕೊಂಡು, ಕನ್ನಡಕ್ಕಾಗಿ ಕೈಯೆತ್ತುವ ಸಂಘ ಸಂಸ್ಥೆಗಳನ್ನೆಲ್ಲಾ ಇಟ್ಟುಕೊಂಡು ನಮ್ಮ ಮಹತ್ತರ ಕೃತಿಗಳನ್ನು ಇನ್ನೂ ಅಂತರ್ಜಾಲಕ್ಕೆ ಬಿಡುಗಡೆ ಮಾಡದೇ ಗೆಣಸು ಹೆರೆಯುತ್ತ ಕೂತಿದ್ದೇವೆ. ಕುಮಾರವ್ಯಾಸನ ಕರ್ಣಾಟಕ ಭಾರತ ಕಥಾಮಂಜರಿ (ಕೆಲಸ ಅರ್ಧವಾಗಿದೆ), ಕುವೆಂಪುರವರ ರಾಮಾಯಣ ದರ್ಶನಮ್ (ಕಣಜದಲ್ಲಿದೆ), ಇವನ್ನು ಹೊರತುಪಡಿಸಿದರೆ ಕನ್ನಡದ ಕ್ಲಾಸಿಕ್ ಅಂತರ್ಜಾಲದಲ್ಲಿ ಲಭ್ಯಯವಿಲ್ಲ. ಕಾರಂತರು, ತೇಜಸ್ವಿಯವರು, ಮತ್ತು ಕೆಲವು ಕಾದಂಬರಿಕಾರ್ತಿಯರ ಕೃತಿಗಳು ಪಿಡಿಎಫ್ ಆಗಿ ಲಭ್ಯವಿದ್ದರೂ ಓಸಿಆರ್ ತಂತ್ರಜ್ಞಾನ ಇಲ್ಲದ್ದರಿಂದ ರೆಫರೆನ್ಸ್ ಗೆ ಅಷ್ಟೇನೂ ಉಪಯೋಗವಿಲ್ಲ. ಬಹುಶಃ ನಮಗೆ ಹೋರಾಟಗಳೇ ಮುಗಿಯೋದಿಲ್ಲ, ದಿನಾ ಬೆಳಗಾದರೆ ಪಂಥಗಳ ಹೆಸರಿನಲ್ಲಿ ಟೌನ್ ಹಾಲ್ ಮುಂದೆ ಜಮಾಯಿಸೋದಷ್ಟೇ ಕನ್ನಡದ ಕೆಲಸ ಅಂದುಕೊಂಡು ಬಿಟ್ಟಿದ್ದೇವೆ. ಕೆಲವರಂತೂ ಮಾತೆತ್ತಿದರೆ ಸಂಸ್ಕೃತದ ವಿರುದ್ಧ ಹರಿಹಾಯುತ್ತಾರೆ. ಸಂಸ್ಕೃತ ಸತ್ತೋಗಿದೆ ಅನ್ನುತ್ತಾರೆ. ಆದರೆ ಆಧುನಿಕ ಜಗತ್ತಿನಲ್ಲಿ ಸಂಸ್ಕೃತವು ಕನ್ನಡಕ್ಕಿಂತ ವ್ಯಾಪಕವಾದ ಬದುಕನ್ನು ಬದುಕುವತ್ತ ಮುನ್ನುಗ್ಗುತ್ತಿದೆ. ನೆನಪಿಡಿ, ಸಂಸ್ಕೃತದಲ್ಲಿ ಓಸಿಆರ್ ಈಗಾಗಲೇ ಇದೆ. ಆರ್ಕೈವ್ ನಿಂದ ಅಥವ ಗೂಗಲ್ ಪುಸ್ತಕದಿಂದ ತೆರೆದುಕೊಂಡ ಸಂಸ್ಕೃತಪುಸ್ತಕದಲ್ಲಿ ಯಾವುದೇ ಶಬ್ದವನ್ನು ಆರಾಮವಾಗಿ ಹುಡುಕಬಹುದು. ಇದನ್ನೆಲ್ಲ ಭಾರತೀಯರೇ ಮಾಡಿದ್ದೆಂದು ನಾನು ಹೇಳುತ್ತಿಲ್ಲ, ಆದರೆ ಸಂಸ್ಕೃತ ನಿಷ್ಠೆಯ ಜನರಿಂದ ವಿಶ್ವದಾದ್ಯಂತ ಇದೆಲ್ಲ ಕೆಲಸ ನಡೆಯುತ್ತಿದೆ.  ಕನ್ನಡದಂಥಾ ಕನ್ನಡಕ್ಕೇನಾಗಿದೆ?

ಮತ್ತಷ್ಟು ಓದು »

7
ಫೆಬ್ರ

ಸಣ್ಣಕಥೆ: ಕ್ಯಾಂಪಸ್ ಇಂಟರ್ವ್ಯೂವ್…

– ನಾಗೇಶ ಮೈಸೂರು

ಇಂಟರ್ವ್ಯೂಕಾರನ್ನು ಟ್ರಾಫಿಕ್ಕಿನ ಚಕ್ರವ್ಯೂಹದ ನಡುವೆಯೆ ಹೇಗೇಗೊ ತೂರಿಸಿಕೊಂಡು, ಹೆಚ್ಚು ಕಡಿಮೆ ಕಾಲ್ನಡಿಗೆಯಷ್ಟೆ ವೇಗದಲ್ಲಿ ತೆವಳುತ್ತ, ಕೊನೆಗು ಟ್ರಾಫಿಕ್ಕಿಲ್ಲದ ದೊಡ್ಡ ಮುಖ್ಯ ರಸ್ತೆಗೆ ತಂದಾಗ ನಿರಾಳತೆಯ ನಿಟ್ಟುಸಿರು ಬಿಟ್ಟೆ. ಇದು ಇನ್ನೂ ಪಯಣದ ಆರಂಭ; ಹೊರಟಿರುವ ಗಮ್ಯದ ಕಡೆಗೆ ಇನ್ನು ಎಂಟು ಗಂಟೆಗಳ ದೂರವಿದೆ. ಕೇರಳದ ಇಂಜಿನಿಯರಿಂಗ್ ಕಾಲೋಜೊಂದರಲ್ಲಿ ನಮ್ಮ ಕಂಪನಿಗೆ ಕಾಲೇಜಿನಿಂದ ನೇರ ಅಭ್ಯರ್ಥಿಗಳನ್ನು ಆಯ್ದುಕೊಳ್ಳಲು ಕ್ಯಾಂಪಸ್ ಇಂಟರ್ವ್ಯೂ ಸಲುವಾಗಿ ಹೊರಟಿದ್ದು… ಜತೆಯಲ್ಲಿರುವ ಕೇಶವ ನಾಯರ್ ಎಂಬೆಡೆಡ್ ಸಾಫ್ಟ್ ವೇರ್ ವಿಭಾಗದಲ್ಲಿರುವ ಮ್ಯಾನೇಜರನಾದರು,ಅವನ ಪರಿಚಯ ಅಷ್ಟಾಗಿಲ್ಲ… ಬಹುಶಃ ಈ ಟ್ರಿಪ್ಪಿನ ನಂತರ ಸ್ವಲ್ಪ ಹೆಚ್ಚಿನ ಪರಿಚಯವಾಗಬಹುದು… ಜತೆಗೆ ಮಾನವ ಸಂಪನ್ಮೂಲ ವಿಭಾಗದಿಂದ ಬಂದಿರುವ ಜಾನಕಿ ದೇವಿ.

ಮಧ್ಯೆ ಊಟ ತಿಂಡಿ ಕಾಫಿ ಎಂದು ಬ್ರೇಕ್ ಕೊಟ್ಟು, ಮತ್ತೆ ಹಾಗೂ ಹೀಗು ತಾಕಲಾಡುತ್ತ ಗಮ್ಯ ತಲುಪುವ ಹೊತ್ತಿಗೆ ಕತ್ತಲಾಗಿ ಹೋಗಿತ್ತು. ಇಂಟರ್ವ್ಯೂವ್ ಇದ್ದದ್ದು ಮರುದಿನವಾದ ಕಾರಣ ಅಲ್ಲೆ ಕಾಲೇಜು ಹಾಸ್ಟೆಲಿನ ಗೆಸ್ಟ್ ರೂಮಿನಲ್ಲಿ ರಾತ್ರಿ ಬಿಡಾರಕ್ಕೆ ವ್ಯವಸ್ಥೆಯಾಗಿತ್ತು. ಜಾನಕಿ ಇದರಲ್ಲೆಲ್ಲಾ ಕಿಲಾಡಿ. ಕಂಪನಿಯ ಕೆಲಸವೆ ಆದರು ಸುಮ್ಮನೆ ಹೋಟೆಲ್ಲು ವೆಚ್ಚವೇಕೆ ವ್ಯರ್ಥ ಮಾಡಬೇಕು ಎಂದು ಕಾಲೇಜಿನ ಗೆಸ್ಟ್ ರೂಮಲ್ಲಿ ಇರುವ ವ್ಯವಸ್ಥೆ ಮಾಡಿಬಿಟ್ಟಿದ್ದಾಳೆ.. ಹೇಗೂ ಅವರೂ ಇಲ್ಲವೆನ್ನುವಂತಿಲ್ಲ.. ಅಲ್ಲಿ ಸೊಳ್ಳೆ ಕಾಟ ಹೆಚ್ಚಾದ ಕಾರಣ , ರಾತ್ರಿ ಸೊಳ್ಳೆ ಬತ್ತಿ ಹಚ್ಚಿ ಮಲಗಿದರೆ ಸಾಕು, ಮನೆಯಲ್ಲಿದ್ದ ಹಾಗೆ ಅನಿಸಿ ಒಳ್ಳೆ ನಿದ್ದೆ ಬರುತ್ತೆ.. ಹೋಟೆಲ್ ರೂಮಿನದೇನು ಮಹಾ..? ಆ ಕಿಷ್ಕಿಂದದಲ್ಲಿ ಇರುವುದಕ್ಕಿಂತ ಇದೆ ವಾಸಿ ಎಂದು ದಾರಿಯಲ್ಲಿ ಸುಮಾರು ಆರೇಳು ಸಲ ಹೇಳಿದ್ದಾಳೆ – ಬಹುಶಃ ನಾವು ಮಾನಸಿಕವಾಗಿ ಅಲ್ಲಿರಲು ಸಿದ್ದರಾಗಿರಲಿ ಅಂತಿರಬೇಕು..

ಆದರೆ ಅದರಲ್ಲಿ ಸ್ವಲ್ಪ ಅತಿ ಎನಿಸಿದ್ದು ಮಾತ್ರ ರಾತ್ರಿಯೂಟದ ವ್ಯವಸ್ಥೆ.. ಹೇಗು ಕಾರಿತ್ತಾಗಿ ಸಿಟಿಯ ಯಾವುದಾದರು ಊಟದ ಹೋಟೆಲ್ಲಿಗೆ ಹೋಗಿ ಬರಬಹುದಿತ್ತು… ಅದು ಸಿಟಿಯಿಂದ ದೂರ ಎಂದು ಹೇಳಿ ಅಲ್ಲೆ ಹಾಸ್ಟೆಲಿನ ವೆಜಿಟೇರಿಯನ್ ಊಟವೆ ಓಕೆ ಎಂದು ಹೇಳಿ ಅಲ್ಲೆ ತಿನ್ನುವ ಹಾಗೆ ಮಾಡಿಬಿಟ್ಟಿದ್ದಳು..! ಅದೇ ಮೊದಲ ಬಾರಿಗೆ ನನಗೆ ಅಭ್ಯಾಸವಿಲ್ಲದ ಆ ಅನ್ನ ತಿಂದು, ನೀರಿನ ಬದಲಿಗೆ ನೀಡಿದ ವಿಶೇಷ ಬಣ್ಣದ ಕೇರಳದ ಟ್ರೇಡ್ ಮಾರ್ಕ್ ದ್ರವ ಪಾನೀಯ ಕುಡಿಯುವಂತಾಗಿತ್ತು.. ಆದರೂ ಆ ನೀರಿನ ಪಾನೀಯ ಮಾತ್ರ ಏನೊ ಚೇತೋಹಾರಿಯಾಗಿದೆ ಅನಿಸಿ ಎರಡೆರಡು ಬಾರಿ ಹಾಕಿಸಿಕೊಂಡು ಕುಡಿದಿದ್ದೆ.. ಪ್ರಯಾಣದ ಆಯಾಸಕ್ಕೊ, ಏನೊ ಸೊಳ್ಳೆ ಬತ್ತಿ ಹಚ್ಚಿ ಮಲಗುತ್ತಿದ್ದ ಹಾಗೆ ಮಂಪರು ಕವಿದಂತಾಗಿ ಗಾಢವಾದ ನಿದ್ದೆ ಬಂದುಬಿಟ್ಟಿತ್ತು , ಹೊಸ ಜಾಗವೆನ್ನುವ ಪರಿವೆಯಿಲ್ಲದೆ..

ಮತ್ತಷ್ಟು ಓದು »

6
ಫೆಬ್ರ

ಇವರದ್ದು ಅಭಿವೃದ್ಧಿ! ಅವರದ್ದು ವ್ಯಾಪಾರ!?

ರಾಜ್ಯದಲ್ಲಿ ೯೬೩೨ ಕಿಮೀ ರಾಷ್ಟ್ರೀಯ ಹೆದ್ದಾರಿಯಿದ್ದು, ರಾಜ್ಯ ಸರ್ಕಾರ ಭೂಮಿ ನೀಡಿದರೆ, ಕೇಂದ್ರದಿಂದ ೧ ಲಕ್ಷ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಿಕೊಡಲು ಸಿದ್ಧರಿದ್ದೇವೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎನ್ನುತ್ತಿದ್ದ ಕಾಂಗ್ರೆಸ್ಸಿಗರೇ, ಕೇಂದ್ರ ಈ ತೀರ್ಮಾನಕ್ಕೆ ಈಗೇನು ಹೇಳುತ್ತೀರಿ? ಕೇಂದ್ರದಲ್ಲಿ ನಿಮ್ಮ ಸರ್ಕಾರವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ಸೇತರ ಸರ್ಕಾರವಿದ್ದ ವೇಳೆ ಇಂತಹ ವಿಶಾಲ ಮನಸ್ಥಿತಿಯನ್ನು ಪ್ರದರ್ಶಿಸಿದ್ದಿರೇ? ನಾಚಿಕೆಯಾಗಬೇಕು ನಿಮ್ಮ ಮನಸ್ಥಿತಿಗೆ.

– ಎಸ್.ಆರ್ ಅನಿರುದ್ಧ ವಸಿಷ್ಠ,ಭದ್ರಾವತಿ

ಇನ್ವೆಸ್ಟ್ ಕರ್ನಾಟಕಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ರಾಜ್ಯದ ಪರವಾಗಿ ಉದ್ಯಮಿಗಳ ಕರೆ…
ಎಷ್ಟಾದರೂ ಭೂಮಿ ಕೊಡಲು ಸಿದ್ಧರಿದ್ದೇವೆ: ಸಿದ್ಧರಾಮಯ್ಯ…
ಇದು ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆಯೋಜಿಸಿರುವ ಇನ್ವಸ್ಟ್ ಕರ್ನಾಟಕ ಸಮಾವೇಶದ ಪ್ರಮುಖ ನುಡಿಮುತ್ತುಗಳು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ಬಂಡವಾಳ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದ್ದು, ಇದರಲ್ಲಿ ಪಾಲ್ಗೊಂಡ ಗಣ್ಯೋದ್ಯಮಿಗಳು ರಾಜ್ಯದ ಹಲವೆಡೆ ವಿವಿಧ ರೀತಿಯಲ್ಲಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದು, ಮೊದಲ ದಿನವೇ ಈ ಕುರಿತ ೯೫ ಸಾವಿರ ಕೋಟಿ ಹೂಡಿಕೆಯ ೧೦೦ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.ದೇಶದ ಉದ್ಯಮ ಕ್ಷೇತ್ರದಲ್ಲಿ ದಿಗ್ಗಜರು ನಿನ್ನೆಯ ವೇದಿಕೆಯಲ್ಲಿ ಉಪಸ್ಥಿತರಿದ್ದು, ಇವರಿಗೆಲ್ಲಾ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಂಪು ಹಾಸು ಹಾಕಿ ಬರಮಾಡಿಕೊಂಡಿದೆ. ಈ ಮೂಲಕ ಸಮಾಜವಾದ ಹಾಗೂ ಬಡವರ ಪರ ಮಾತನಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ, ಬಂಡವಾಳಶಾಹಿಗಳಿಗೆ ಮಣೆ ಹಾಕಿದೆ!!

ಹೌದು, ತಮ್ಮದು ಬಡವರ ಪರ ಸರ್ಕಾರ, ಅಹಿಂದ ಪರವಾಗಿಯೇ ನಮ್ಮ ಯೋಜನೆಗಳು, ದೀನ ದ..ರ ಅಭಿವೃದ್ಧಿಯೇ ನಮ್ಮ ಗುರಿ. ಆದರೆ, ಬಿಜೆಪಿ ಹಾಗೂ ನರೇಂದ್ರ ಮೋದಿ ಕಾರ್ಪೊರೇಟ್ ಸಂಸ್ಕೃತಿಯವರು. ಮೋದಿ ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದ್ದಾರೆ. ದೇಶದ ಬಡ ರೈತನಿಂದ ಹಿಡಿದು, ಜನ ಸಾಮಾನ್ಯರ ಹಿತವನ್ನು ಕಡೆಗಣಿಸಿರುವ ಮೋದಿ, ಉದ್ಯಮಿಗಳಿಗೆ ಹಾಗೂ ಬಂಡವಾಳಶಾಹಿಗಳಿಗೆ ರತ್ನಗಂಬಳಿ ಹಾಸುವ ಮೂಲಕ ದೇಶವನ್ನು ಮಾರಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಯುವರಾಜ ರಾಹುಲ್‌ಗಾಂಧಿಯಿಂದ ಮೊದಲ್ಗೊಂಡು, ಕಾಂಗ್ರೆಸ್‌ನ ಕೆಲ ಹಂತದ ಕಾರ್ಯಕರ್ತನವರೆಗೂ ಹೀಗಳೆದಿದ್ದರು. ಮತ್ತಷ್ಟು ಓದು »