ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ…
– ಡಾ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ
ಇಂದು ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಪದಗುಚ್ಛವು ಪದೇ ಪದೇ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಕಲಬುರ್ಗಿಯವರಂತಹ ಹಿರಿಯ ವಿದ್ವಾಂಸರ ಹತ್ಯೆಯ ನಂತರ ಸಂಶೋಧಕರು ಹಾಗೂ ವಿಚಾರವಂತರು ದಿಙ್ಮೂಢರಾಗಿದ್ದಾರೆ. ಇದೊಂದು ಖಂಡನೀಯ ಕೃತ್ಯವಾಗಿದೆ.
ಸಂಶೋಧನೆಗಳನ್ನು ನಡೆಸುವುದೇ ಹೊಸ ವಿಷಯಗಳನ್ನು ತಿಳಿದುಕೊಳ್ಳಲಿಕ್ಕೆ. ಸ್ವೀಕೃತ ವಿಚಾರಗಳನ್ನು ಅಲ್ಲಗಳೆಯುವುದೂ ಸಂಶೋಧನೆಯ ಒಂದು ಭಾಗ. ಆದರೆ ಈ ಕೆಲಸಕ್ಕೆ ಪ್ರಾಣ ತೆರಬೇಕೆ? ಇದು ತುಂಬಾ ಅನಾರೋಗ್ಯಕರ ಹಾಗೂ ಅಪಾಯಕರ ಬೆಳವಣಿಗೆ. ಈ ಸಂದರ್ಭದಲ್ಲಿ ಇದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂಬುದಾಗಿ ಅನೇಕರು ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಪದೇ ಪದೇ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯ ಚರ್ಚೆಗೆ ಬರುತ್ತಿದೆ. ಹಾಗಾಗಿ ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ನಿರ್ದಿಷ್ಟವಾಗಿ ಏನು? ಇಂಥ ಭೀಕರ ಸ್ವರೂಪದ ಘಟನೆಗಳನ್ನು ಅದರ ಪರಿಧಿಗೆ ತರಬಹುದೆ ಎಂಬ ಕುರಿತು ಪರಿಶೀಲಿಸುವ ಜರೂರು ಇದೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ನಿರ್ದಿಷ್ಟವಾಗಿ ಏನು ಎಂಬುದರ ಕುರಿತು ನಾವು ಊಹೆಗಳನ್ನು ಮಾಡುವ ಅಗತ್ಯವಿಲ್ಲ. ಸಂವಿಧಾನವು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಏನೆಂಬುದನ್ನು ತಿಳಿಸುತ್ತದೆ. ಅದರ ಪ್ರಕಾರ, ಪ್ರಜಾಪ್ರಭುತ್ವವು ಜನಾಭಿಪ್ರಾಯದ ಮೇಲೆ ನಿಂತಿರುವುದರಿಂದ ಪ್ರಭುತ್ವದ ನಿರ್ಬಂಧವಿಲ್ಲದೇ ವ್ಯಕ್ತಿಯೊಬ್ಬನು ಅಭಿಪ್ರಾಯಗಳನ್ನು ತಳೆಯಲು, ಮಾಹಿತಿಗಳನ್ನು ಹಾಗೂ ತನ್ನ ವಿಚಾರಗಳನ್ನು ಸಂವಹನೆ ಮಾಡಲು ಅವನಿಗೆ ಹಕ್ಕನ್ನು ನೀಡಲಾಗಿದೆ. ಅಂದರೆ ಅದು ಕಾನೂನಿನ ನಿರ್ಬಂಧಕ್ಕೆ ಬರುವುದಿಲ್ಲ. ಈ ಅಭಿವ್ಯಕ್ತಿಯಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಪಟ್ಟಂತೆ ಅಭಿಪ್ರಾಯ ವ್ಯಕ್ತಪಡಿಸುವುದು ಮಾತ್ರ ಈ ಹಕ್ಕಿನ ವ್ಯಾಪ್ತಿಗೆ ಬರುತ್ತದೆ. ಪತ್ರಿಕಾ ಸ್ವಾತಂತ್ರ್ಯವು ಈ ಕಾರಣದಿಂದ ಮಹತ್ವ ಪಡೆದುಕೊಳ್ಳುತ್ತದೆ.
ಈ ಅಭಿವ್ಯಕ್ತಿ ಸ್ವಾತಂತ್ರ್ಯವು ಪ್ರಭುತ್ವ ಮತ್ತು ನಾಗರಿಕನ ನಡುವೆ ಇರುವ ಸಂಬಂಧ, ಅಂದರೆ ಪ್ರಜಾಪ್ರಭುತ್ವವು ಪ್ರಜೆಯೊಬ್ಬನಿಗೆ ನೀಡುವ ಭರವಸೆಯಾಗಿದೆ. ಆದರೆ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮಿತಿಗಳನ್ನು ಪ್ರಭುತ್ವವು ಹಾಕಬಹುದು: ರಾಷ್ಟ್ರೀಯ ಏಕತೆ ಹಾಗೂ ಸುರಕ್ಷತೆಯ ರಕ್ಷಣೆಗಾಗಿ, ಅವ್ಯವಸ್ಥೆ ಹಾಗೂ ಅಪರಾಧವನ್ನು ತಡೆಗಟ್ಟಲಿಕ್ಕಾಗಿ, ಆರೋಗ್ಯ ಹಾಗೂ ಸದಾಚಾರಗಳನ್ನು ರಕ್ಷಿಸಲು, ಇತರರ ಹಕ್ಕನ್ನು ರಕ್ಷಿಸಲು, ಇತ್ಯಾದಿ ಕಾರಣಗಳಿಗೆ ಅದನ್ನು ಪ್ರಭುತ್ವವು ಹತ್ತಿಕ್ಕಬಹುದು. ಒಬ್ಬ ನಾಗರಿಕನ ಅಭಿವ್ಯಕ್ತಿಯು ಈ ಮೇಲಿನ ಸಮಸ್ಯೆಗಳನ್ನು ಹುಟ್ಟುಹಾಕಿದೆ ಎಂಬುದಾಗಿ ನಿದರ್ಶಿಸಿದರೆ ಪ್ರಭುತ್ವವು ತಾನು ನೀಡಿದ ಈ ಸ್ವಾತಂತ್ರ್ಯವನ್ನು ಮಿತಗೊಳಿಸಬಹುದು.
ಅಂದರೆ ಸಮುದಾಯಗಳ ಭಾವನೆಯನ್ನು ನೋಯಿಸಿದ ಬರಹಗಳನ್ನು ನಿಷೇಧಿಸುವುದು, ಭಾಷಣ ಮಾಡದಂತೆ ನಿರ್ಬಂಧಿಸುವುದು ಇತ್ಯಾದಿ. ಆದರೆ ಆ ಹಕ್ಕನ್ನು ಪ್ರಭುತ್ವವೇ ಮೊಟಕು ಮಾಡಬೇಕೇ ವಿನಾ ಇತರ ಪ್ರಜೆಗಳಲ್ಲ. ನೀಡುವುದು ಪ್ರಭುತ್ವವಾಗಿರುವುದರಿಂದ ಈ ಸ್ವಾತಂತ್ರ್ಯವನ್ನು ಕಿತ್ತುಕೊಂಡರೆ ಅದು ಪ್ರಭುತ್ವದಿಂದಲೇ ಆಗಬೇಕು. ಒಬ್ಬ ನಾಗರಿಕನು ಮತ್ತೊಬ್ಬ ನಾಗರಿಕನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಂದರೆ ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತು ನಾವು ನಡೆಸುವ ಚರ್ಚೆಗಳಲ್ಲಿ ಬಹುತೇಕ ಘಟನೆಗಳು ಅದರ ವ್ಯಾಪ್ತಿಯೊಳಗೇ ಬರುವುದಿಲ್ಲ.
ಹಾಗಾದರೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಬಣ್ಣಿಸಲಾಗುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಸುಳ್ಳೆ ಎಂಬ ಪ್ರಶ್ನೆ ಏಳಬಹುದು. ಇಂಥ ಘಟನೆಗಳನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಸಮಸ್ಯೆ ಎಂದು ತಪ್ಪುತಪ್ಪಾಗಿ ಗುರುತಿಸುವುದರಿಂದ ಅವುಗಳ ಪರಿಹಾರವೂ ಸಾಧ್ಯವಾಗುತ್ತಿಲ್ಲ. ಅದರಲ್ಲೂ ಈ ಹಕ್ಕನ್ನು ಅನುಷ್ಠಾನಕ್ಕೆ ತಂದಮೇಲೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೆಚ್ಚೆಚ್ಚು ಪ್ರಾಶಸ್ತ್ಯ ಸಿಗುವ ಬದಲು ಅಭಿವ್ಯಕ್ತಿ ಹೆಚ್ಚೆಚ್ಚು ಕಷ್ಟವಾಗುತ್ತಿರುವಂತಿದೆ. ಅಡ್ಡಾದಿಡ್ಡಿಯಾಗಿ ಮಾತನಾಡುವವರೂ, ಅದಕ್ಕೆ ಕೆರಳುವವರೂ, ಜೀವ ಬೆದರಿಕೆ ಹಾಕುವವರೂ, ಪೊಲೀಸ್ ರಕ್ಷಣೆಯನ್ನು ಪಡೆಯುವವರೂ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದಾರೆ. ಈ ಚಂದಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯದ ಕಲಮನ್ನು ನಮ್ಮ ಸಂವಿಧಾನಕ್ಕೆ ಸೇರಿಸಿಕೊಳ್ಳಲಾಗಿದೆಯೆ? ಎರಡು ಸಾಧ್ಯತೆಗಳಿವೆ: ಒಂದೋ ಅಭಿವ್ಯಕ್ತಿ ಸ್ವಾತಂತ್ರ್ಯವೇ ಶಾಂತಿ ಸುರಕ್ಷತೆಗೆ ಕುತ್ತು ತರುತ್ತಿದೆ, ಇಲ್ಲವೇ ಇವೆಲ್ಲ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಪಟ್ಟ ಘಟನೆಗಳೇ ಅಲ್ಲ. ನನ್ನ ಪ್ರಕಾರ ಎರಡನೆಯ ಸಾಧ್ಯತೆಯೇ ಸಂಭವನೀಯ. ಹಾಗಾಗಿ ಅವನ್ನು ಬೇರೆ ಬೇರೆ ಸ್ವರೂಪದ ಸಮಸ್ಯೆಗಳನ್ನಾಗಿ ಗುರುತಿಸುವುದು ಅವುಗಳ ಪರಿಹಾರಕ್ಕೆ ನಿರ್ಣಾಯಕ. ಹಾಗೆ ಗುರುತಿಸದಿರುವುದರಿಂದಲೇ ಅವು ಬಿಗಡಾಯಿಸುತ್ತಿವೆ. ಹತ್ಯೆ ಮಾಡುವ ಪೃವೃತ್ತಿ ಹೆಚ್ಚಾಗುತ್ತಿರುವುದು ಕಾನೂನು ಸುವ್ಯವಸ್ಥೆಯ ವೈಫಲ್ಯ ಎಂಬ ನಿಟ್ಟಿನಲ್ಲಿ ಚರ್ಚೆ ನಡೆದರೆ ಅದಕ್ಕೆ ಪರಿಹಾರಗಳು ಗೋಚರಿಸಬಹುದು. ಇಂಥ ಅನೇಕ ಹತ್ಯೆಗಳು ಈಗಾಗಲೇ ನಡೆದರೂ ತಪ್ಪಿತಸ್ಥರನ್ನು ಹಿಡಿದು ಶಿಕ್ಷಿಸಲಿಕ್ಕೆ ಏಕೆ ಆಗಿಲ್ಲ?
ಯಾರೋ ಒಬ್ಬರು ಯಾವುದೋ ಜಾತಿಯ, ಮತದ, ಆಚರಣೆಯ ಕುರಿತು ಮಾಡಿದ ಪ್ರಚೋದನಕಾರಿ ಹೇಳಿಕೆಗಳಾಗಿರಬಹುದು ಅಥವಾ ಅಂಥ ಹೇಳಿಕೆಗಳಿಗೆ ಪ್ರತಿಯಾಗಿ ಬರುವ ಹಿಂಸಾತ್ಮಕ ಪ್ರತಿಕ್ರಿಯೆಗಳಿರಬಹುದು, ಅವಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯದ ಬಣ್ಣ ನೀಡಿದರೆ ದಾರಿ ತಪ್ಪುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಪರಿಧಿಯಲ್ಲಿ ಬರುವ ಹೇಳಿಕೆಗಳು ಸರ್ವ ಜನಾಭಿಪ್ರಾಯ ಅಥವಾ ಹಿತಾಸಕ್ತಿಗೆ ಸಂಬಂಧಿಸಿರಬೇಕು. ಖಾಸಗಿ ಹೇಳಿಕೆಗಳು, ಕೆಲವು ಗುಂಪು, ಜಾತಿಗಳ ಸ್ವಾರ್ಥ, ಪೂರ್ವಗ್ರಹಪೀಡಿತ ಹೇಳಿಕೆಗಳು, ಅಜ್ಞಾನದಿಂದ ಮಾಡುವ ಹೇಳಿಕೆಗಳು ಇತ್ಯಾದಿಗಳನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಬಿಂಬಿಸಿದರೆ ಜನಾಭಿಪ್ರಾಯದ ಹೆಸರಿನಲ್ಲಿ ಸರ್ಕಾರದ ದಾರಿ ತಪ್ಪಿಸುವ ಕೆಲಸ ಆಗುತ್ತದೆ ಅಷ್ಟೆ. ಆದರೆ ಇಂದು ನಾವು ನೋಡುವುದೇನು? ಇಂಥವನ್ನೆಲ್ಲ ಯಾವಾಗಲೂ ವಿಚಾರವಾದಿಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮಾತ್ರವೇ ಧಕ್ಕೆ ತರುವ ಘಟನೆಗಳಾಗಿ ಬಿಂಬಿಸಲಾಗುತ್ತದೆ. ಅದೂ ಅವರೇ ತಿಳಿಸುವಂತೆ ಧಕ್ಕೆ ತರುವವರೆಲ್ಲ ಮತಾಂಧರು ಹಾಗೂ ಸಂಪ್ರದಾಯವಾದಿಗಳು. ಹಾಗಾದರೆ ಸಂಪ್ರದಾಯಸ್ಥರು ಹಾಗೂ ಮತಶ್ರದ್ಧೆಯುಳ್ಳವರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಅನ್ವಯವಾಗುವುದಿಲ್ಲವೆ? ಉದಾಹರಣೆಗೆ, ದೇವಮೂರ್ತಿಗಳ ಮೇಲೆ ಮೂತ್ರ ವಿಸರ್ಜನೆ ಮಾಡಿದರೆ ತಪ್ಪಿಲ್ಲ ಎನ್ನುವುದು ವಿಚಾರವಾದಿಯೊಬ್ಬನ ಸ್ವಾತಂತ್ರ್ಯವಾದರೆ, ಅದನ್ನು ಅಷ್ಟೇ ಕೆಟ್ಟದಾಗಿ ವಿರೋಧಿಸುವುದು ಸಂಪ್ರದಾಯವಾದಿಯ ಸ್ವಾತಂತ್ರ್ಯವೇಕಲ್ಲ?
ಇದನ್ನು ಗಮನಿಸಿದಾಗ ಕೆಲವು ವಿಚಾರವಾದಿಗಳು ತಮ್ಮ ಐಡಿಯಾಲಜಿಯನ್ನು ಮುಂದೊತ್ತಲು ಈ ಅಭಿವ್ಯಕ್ತಿ ಸ್ವಾತಂತ್ರ್ಯದ ಮಂತ್ರವನ್ನು ಬಳಸುತ್ತಿದ್ದಾರೆ ಎಂದೆನಿಸುತ್ತದೆ. ಇದು ಎಲ್ಲಿಗೆ ಬಂದು ನಿಂತಿದೆಯೆಂದರೆ ಅವರು ಆಡುವ ಮಾತುಗಳು ಮಾತ್ರ ಅಭಿವ್ಯಕ್ತಿ ಸ್ವಾತಂತ್ರ್ಯದ ದೃಷ್ಟಾಂತಗಳು ಎಂಬಂತೆ ಚರ್ಚೆಯಾಗುತ್ತದೆ. ಅವರ ಮಾತುಗಳು ಅವರು ನಂಬಿದ ರಾಜಕೀಯ ಐಡಿಯಾಲಜಿಗಳ ಪ್ರತಿಪಾದನೆಗಳು ಅಷ್ಟೆ. ಇಂಥ ಪ್ರತಿಪಾದನೆಗಳಿಗೆ ವಿರೋಧಿ ಐಡಿಯಾಲಜಿಗಳಿಂದ ಅದೇ ನೆಲೆಯಲ್ಲಿ ಪ್ರತಿಕ್ರಿಯೆ ಬರುವುದು ಸ್ವಾಭಾವಿಕ. ಅಂಥ ಪ್ರತಿಕ್ರಿಯೆಗಳನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂಬುದಾಗಿ ಬಿಂಬಿಸಿ ಅವುಗಳನ್ನು ಅಕ್ರಮಗೊಳಿಸಲಾಗುತ್ತದೆ. ನಿಜವಾಗಿಯೂ ನೋಡಿದರೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಇಂಥ ಘಟನೆಗಳಿಗೂ ಯಾವುದೇ ಸಂಬಂಧವಿಲ್ಲ. ಇಂಥ ಪ್ರಚೋದನಕಾರಿ ಮಾತುಗಳಿಂದ ಯಾವ ಜನಾಭಿಪ್ರಾಯ ಅಥವಾ ಸಮುದಾಯಗಳ ಹಿತಾಸಕ್ತಿಯನ್ನು ಅವರು ಪ್ರತಿನಿಧಿಸುತ್ತಾರೆ? ಆ ಸಮುದಾಯಗಳ ಲೋಕದಲ್ಲಂತೂ ಇವರ್್ಯಾರೂ ಪ್ರಸ್ತುತತೆ ಪಡೆದಂತೆ ಕಾಣುವುದಿಲ್ಲ. ಇದರ ಒಂದೇ ಪರಿಣಾಮವೆಂದರೆ ಸಾಮಾಜಿಕ ಸಂಘರ್ಷ ಹಾಗೂ ಅಶಾಂತಿ. ಹಾಗಾಗಿ ಇಂಥ ಉದಾಹರಣೆಗಳಲ್ಲಿ ಮುಖ್ಯವಾಗುವುದು ನಮ್ಮ ಸಂಸ್ಕೃತಿ, ಸಮಾಜದ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡುವವರು ಎಷ್ಟರ ಮಟ್ಟಿಗೆ ವೈಜ್ಞಾನಿಕವಾಗಿ, ಶಿಸ್ತುಬದ್ಧವಾಗಿ ತಮ್ಮ ತಿಳಿವಳಿಕೆಯನ್ನು ಹೊಂದಿದ್ದಾರೆ ಎಂಬ ಪ್ರಶ್ನೆ.
ಅಂದರೆ ಕಲಬುರ್ಗಿಯವರ ನಿರ್ದಿಷ್ಟ ಸಂದರ್ಭದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತು ಚರ್ಚೆ ನಡೆಸುವ ಬದಲು ಸಂಶೋಧನೆಯೊಂದನ್ನು ಮಂಡಿಸುವ ಹಾಗೂ ಖಂಡಿಸುವ ಕ್ರಮವೇನು ಎಂಬುದರ ಕುರಿತು ಚರ್ಚೆ ನಡೆಸಿದರೆ ಉಪಯುಕ್ತವಾಗಬಹುದು. ಬಹುಶಃ ಇಂಥ ತಿಳಿವಳಿಕೆಯನ್ನು ಹೆಚ್ಚೆಚ್ಚು ಬೆಳೆಸಿದಷ್ಟೂ ಸಂಶೋಧನೆಗೆ ಸಂಬಂಧಿಸಿದ ಸಂಘರ್ಷಗಳು ಕಡಿಮೆಯಾಗಬಹುದು. ನಮಗೆ ಯಾರ ಹೇಳಿಕೆಯ ಕುರಿತಾದರೂ ಅಸಮ್ಮತಿ ಇದ್ದರೆ, ಅದು ತಪ್ಪು ಎಂದೆನಿಸಿದರೆ ಅದರ ಮಿತಿಯನ್ನು ನಿದರ್ಶಿಸಿ ತೋರಿಸಿ ಮನದಟ್ಟಾಗುವಂತೆ ನಮ್ಮ ವಾದವನ್ನು ಮಂಡಿಸುವುದು ಸಂಶೋಧನಾ ಮಾರ್ಗ ಅಥವಾ ಅದು ಸಮಾಜಕ್ಕೆ ಅಪಾಯಕಾರಿ, ಕೆಲವರ ಹಿತಕ್ಕೆ ಧಕ್ಕೆ ತರುತ್ತದೆ ಎಂದೆನಿಸಿದರೆ, ಅದನ್ನೂ ಸಂಶೋಧನೆಯ ಮೂಲಕವೇ ನಿದರ್ಶಿಸಿ ತೋರಿಸಬೇಕಾಗುತ್ತದೆ.
ಅಂದರೆ ಸಂಶೋಧನೆಯಲ್ಲಿ ತಪ್ಪುಗಳು ಬೌದ್ಧಿಕವಾಗಿ ಪರಿಹರಿಸಬಲ್ಲ, ಪರಿಹರಿಸಬೇಕಾದ ಸಮಸ್ಯೆಗಳಾಗಿವೆಯೇ ವಿನಾ, ಸಂಶೋಧನಾ ಕೇಂದ್ರಗಳನ್ನು ಮುಚ್ಚಿಸುವ, ಸಂಶೋಧಕರ ಬರವಣಿಗೆಯನ್ನೇ ನಿಲ್ಲಿಸುವ ಸಮಸ್ಯೆಗಳಲ್ಲ. ಅಂಥ ಸಂಶೋಧನೆಗಳಿಗೆ ಅನೈತಿಕ, ಅಮಾನವೀಯ ಎಂದು ಹಣೆಪಟ್ಟಿ ಅಂಟಿಸಿಬಿಟ್ಟರೆ, ಸಂಶೋಧಕರ ಉದ್ದೇಶಗಳನ್ನೇ ಶಂಕಿಸಿಬಿಟ್ಟರೆ, ಅವರು ಎತ್ತಿದ ಪ್ರಶ್ನೆಗಳನ್ನು ಉತ್ತರಿಸಿದ ಹಾಗಾಗುವುದಿಲ್ಲ ಹಾಗೂ ಅದನ್ನು ಅಭಿವ್ಯಕ್ತಿ ಸಾತಂತ್ರ್ಯದ ಹೆಸರಿನಲ್ಲಿ ಸಮರ್ಥಿಸಿಕೊಳ್ಳುವುದೂ ಮತ್ತೊಂದು ಮೋಸ.
ಅಂದರೆ ಇಂಥ ಮಾರ್ಗವನ್ನು ಯಾರಾದರೂ ತುಳಿದ ಕ್ಷಣದಲ್ಲೇ ಸಂಶೋಧನಾ ಕ್ಷೇತ್ರಕ್ಕೆ ಹೊರತಾದ ವಿಧಾನದಿಂದ ಅದನ್ನು ಎದುರಿಸಲು ತೊಡಗಿರುತ್ತಾರೆ. ಅಲ್ಲಿಂದಲೇ ಸಂಶೋಧಕರನ್ನು ಹಿಂಸಿಸುವ ಕೆಲಸ ಪ್ರಾರಂಭವಾಗುತ್ತದೆ. ಬಹುಶಃ ಕೊಲೆಗಡುಕರು ಕೂಡ ಇದೇ ಕೆಲಸಕ್ಕೆ ಮತ್ತೊಂದು ಅತಿಗೆ ಹೋಗುತ್ತಾರೆ.
ಕೃಪೆ : ಪ್ರಜಾವಾಣಿ
ಗೋಮಾಂಸ ನಿಷೇಧ : ಜೈನರನ್ನು ಅಲ್ಪಸಂಖ್ಯಾತರು ಎಂದು ಒಪ್ಪಿಕೊಳ್ಳಲಾಗುತ್ತಿಲ್ಲವೇ..?
– ಪ್ರವೀಣ ಕೊಂಬೆಮನೆ
ಜೈನ ಸಮುದಾಯದವರ ಪರ್ಯೂಶನ್ ವ್ರತ ಪ್ರಯುಕ್ತ ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯದಲ್ಲಿ ಗೋಮಾಂಸ ನಿಷೇಧಿಸಿರುವುದು ಎಲ್ಲಿರಿಗೂ ಗೊತ್ತಿರುವ ವಿಷಯವೇ.! ಆದ್ರೆ ಸ್ನೇಹಿತರೇ.. ಸರ್ಕಾರದ ನಿರ್ಧಾರವನ್ನು ಖಂಡಿಸಿ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಜೈನರ ಎದುರು ರಸ್ತೆಯಲ್ಲಿ ಚಿಕನ್ ಸುಟ್ಟು ಪ್ರತಿಭಟನೆ ನಡೆಸುವ ಮೂಲಕ ಅತಿರೇಕದ ವರ್ತನೆ ತೋರಿಸಿದೆ. ಮಹಾರಾಷ್ಟ್ರದಲ್ಲಿ ಜೈನರು ಸಭೆ ಸೇರಿದ ಪ್ರದೇಶದ ತೀರಾ ಹತ್ತಿರದಲ್ಲಿಯೇ ಆ ಸಮುದಾಯದ ಎದುರಿಗೇ ಮಾಂಸ ಸುಡುವ ಮೂಲಕ ನವ ನಿರ್ಮಾಣ ಸೇನೆ ಅತೀ ಧೂರ್ತತನ ಪ್ರದರ್ಶಿಸಿದೆ. ಆದರೆ ಜೈನರು ಇದನ್ನೆಲ್ಲಾ ಕಡೆಗಣಿಸಿ ಮೌನವಾಗಿ ಅಲ್ಲಿಂದ ಹೊರ ನಡೆದಿದ್ದಾರೆ.
ಸಾವಿರಾರು ವರ್ಷಗಳಿಂದ ಜೈನ ಸಮುದಾಯದಲ್ಲಿ ಆಚರಣೆಯಲ್ಲಿ ಬಂದ ಸಲ್ಲೇಖನಾ ವ್ರತವನ್ನು ಈ ಹಿಂದೆ ಆತ್ಮಹತ್ಯೆ ಎನ್ನುವ ಮೂಲಕ ಜೈನರ ಆಚರಣೆಗಳಿಗೆ ತೊಂದರೆ ನೀಡಲಾಯಿತು. ಈಗ ಜೈನರು ಮಾಂಸಾಹಾರಿಗಳಲ್ಲ, ಗೋ ಮಾಂಸ ಭಕ್ಷಣೆಗೆ ಬೆಂಬಲಿಸಿಲ್ಲ ಎನ್ನುವ ಕಾರಣಕ್ಕೆ ಅವರ ಎದುರು ಮಾಂಸಗಳನ್ನಿಟ್ಟು ಸುಡುವುದು, ಸಾರ್ವಜನಿಕವಾಗಿ ಮಾಂಸ ಮಾರಾಟ ಮಾಡುವುದು ಮಾಡಲಾಗುತ್ತಿದೆ. ಇದನ್ನೆಲ್ಲ ಗಮನಿಸಿದರೆ ಭಾರತದ ನ್ಯಾಯಾಲಯವೂ ಸೇರಿದಂತೆ ವಿವಿಧ ರೀತಿಯಲ್ಲಿ ಜೈನರ ಧಾರ್ಮಿಕ ಹಕ್ಕುಗಳನ್ನು ತುಳಿಯಲಾಗುತ್ತಿದೆಯೇ..? ಎನ್ನುವ ಅನುಮಾನಕ್ಕೆ ಕಾರಣವಾಗಿದೆ.
ವೀರಶೈವ ಸಂಪ್ರದಾಯ: ಕೆಲವು ಒಗಟುಗಳು
– ಚೈತ್ರ, ಕುವೆಂಪು ವಿಶ್ವವಿದ್ಯಾನಿಲಯ.
ಕರ್ನಾಟಕದಲ್ಲಿ ವೀರಶೈವ ಸಮುದಾಯವು ಹಲವಾರು ಚರ್ಚೆಗೆ ಒಳಪಟ್ಟಿದೆ. ತಮ್ಮ ಅಸ್ಮಿತೆಯ ಹುಡುಕಾಟಕ್ಕಾಗಿ ಶತಮಾನಗಳಿಂದ ಹೆಣಗಾಡುತ್ತಿರುವಂತೆ ಈ ಸಮುದಾಯ ಮೇಲ್ನೋಟಕ್ಕೆ ಕಂಡುಬಂದರೂ ಸಹ ಅದು ಭಾಗಶಃ ಸತ್ಯವಾದುದು. ಕಾರಣ, ಸಮುದಾಯಗಳೇ ಸ್ವಯಂ ಪ್ರೇರಣೆಯಿಂದ ತಮಗೊಂದು ಅಸ್ಮಿತೆ ಬೇಕೆಂಬ ಹಂಬಲದಿಂದ ನಡೆಸಿರುವ ಹೋರಾಟದಂತೆ ಅದು ಗೋಚರಿಸುವುದಿಲ್ಲ. ಬದಲಿಗೆ, ಸಮುದಾಯದ ನಾಯಕರುಗಳು, ವಿದ್ವಾಂಸರು, ರಾಜಕೀಯ ನೇತಾರರು, ಹಾಗೂ ಸಾಹಿತಿಗಳು ಇಂತಹ ಹೋರಾಟದ ಮಂಚೂಣಿಯಲ್ಲಿರುವುದು ಕಣ್ಣಿಗೆ ಕಾಣುವ ಸತ್ಯ. ಅವರ ಹೋರಾಟ ಅಸ್ಮಿತೆಗಾಗಿಯೋ ಅಥವಾ ಮತ್ಯಾವುದಾದರೂ ಉದ್ದೇಶಕ್ಕಾಗಿಯೋ ಎಂಬುದನ್ನು ಅರ್ಥೈಸಿಕೊಳ್ಳುವ ಮುನ್ನ ಆ ಸಮುದಾಯದ ಕುರಿತು ಯಾವ ನೆಲೆಗಳಲ್ಲಿ ಚರ್ಚೆಗಳಾಗಿವೆ ಎಂಬುದನ್ನು ನೋಡಬೇಕಾಗುತ್ತದೆ.
ಪ್ರಸ್ತುತ ಲೇಖನದಲ್ಲಿ ವೀರಶೈವ ಸಮುದಾಯದ ಕುರಿತ ವಿವರಣೆಗಳನ್ನು ಪರೀಶಿಲಿಸುವ ಮೂಲಕ ಆ ಸಮುದಾಯವು ನಮ್ಮ ಅರ್ಥಗ್ರಹಿಕೆಗೆ ಬರಲು ಸಾಧ್ಯವೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು. ಈವರೆಗಿನ ವಿವರಣೆಗಳನ್ನು ಮೆಲುಕುಹಾಕಿದರೆ, ಅವುಗಳು ಪರಸ್ಪರ ವಿರುದ್ಧವಾಗಿಯೂ, ವಿಭಿನ್ನವಾಗಿಯೂ ಮತ್ತು ಕೆಲವು ಬಾರಿ ಒಂದಕ್ಕೊಂದು ಸಂಬಂಧವೇ ಇಲ್ಲದ ರೀತಿಯಲ್ಲಿ ನಿರೂಪಿತವಾಗಿರುವುದು ಗೋಚರಿಸುತ್ತದೆ. ಅಂದರೆ ಸ್ಪಷ್ಟವಾಗಿ ಅದೊಂದು ಒಗಟಾಗಿ ನಮ್ಮ ಮುಂದೆ ಬಂದು ನಿಲ್ಲುತ್ತದೆ. ಆ ಒಗಟಿನ ಸ್ವರೂಪವನ್ನು ಅರ್ಥೈಸುವ ಪ್ರಯತ್ನವನ್ನು ಮಾಡಲಾಗುವುದು. ವೀರಶೈವ ಅಧ್ಯಯನಗಳು ಹಲವು ಆಯಾಮಗಳಲ್ಲಿ ವಿವಿಧ ಬಗೆಯಲ್ಲಿ ವೀರಶೈವರನ್ನು ನಿರೂಪಿಸುತ್ತವೆ. ಅಂತಹ ಚರ್ಚೆಗಳಲ್ಲಿ ಬಹುಮುಖ್ಯ ವಿಷಯವೆಂದರೆ, ವೀರಶೈವರನ್ನು ಎರಡು ರೀತಿಯಲ್ಲಿ ಗುರುತಿಸುತ್ತಿರುವುದಾಗಿದೆ. ಅಂದರೆ ವೀರಶೈವ ಧರ್ಮವು ಹಿಂದೂ ಧರ್ಮದ ಭಾಗವೆಂದು ಒಂದು ಗುಂಪು ಪ್ರತಿಪಾದಿಸಿದರೆ, ಅದಕ್ಕೆ ಪ್ರತಿಯಾಗಿ, ವೀರಶೈವ ಧರ್ಮ ಹಿಂದೂ ಧರ್ಮವನ್ನು ಪ್ರತಿಭಟಿಸಿ ಹುಟ್ಟಿರುವ ಧರ್ಮವಾಗಿದ್ದು, ಇದು ಪ್ರತ್ಯೇಕವಾದ ಸ್ವತಂತ್ರವಾದ ಧರ್ಮವಾಗಿದೆ ಎಂದು ಇನ್ನೊಂದು ಗುಂಪು ಪ್ರತಿಪಾದಿಸುತ್ತದೆ. ಈ ಎರಡು ರೀತಿಯ ಚಿಂತನೆಗಳನ್ನು ಹಲವಾರು ಚಿಂತಕರು ವಿಭಿನ್ನ ನೆಲೆಗಳಲ್ಲ್ಲಿ ತಮ್ಮ ವಾದವನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಮತ್ತಷ್ಟು ಓದು 
ನಿಮಗೆ ನಮಸ್ಕಾರ
– ತೇಜಸ್ವಿನಿ ಹೆಗಡೆ,ಬೆಂಗಳೂರು
ಕೆ.ಎಸ್.ನರಸಿಂಹ ಸ್ವಾಮಿಯವರ ಕವನಗಳ ಕಡೆ ನನ್ನ ಗಮನ ಮೊತ್ತ ಮೊದಲ ಬಾರಿ ಹೋಗಿದ್ದು ನಾನು ಹೈಸ್ಕೂಲ್ನಲ್ಲಿದ್ದಾಗ. ಅವರ ಪ್ರಥಮ ಕವನ ಸಂಕಲನವಾದ `ಮೈಸೂರು ಮಲ್ಲಿಗೆ’ಯ ಕವಿತೆಗಳನ್ನು ಬಳಸಿಕೊಂಡು, ಅದೇ ಸಂಕಲನದ ಶೀರ್ಷಿಕೆ ಹಾಗೂ ಸುಮಧುರ ಸಂಗೀತದೊಂದಿಗೆ ಹೊರಬಂದ ಜನಪ್ರಿಯ ಕನ್ನಡ ಚಲಚಿತ್ರವನ್ನು ನೋಡಿದ ಮೇಲೇ! ಆವರೆಗೂ ಈ ಕವಿಯ ಹೆಸರು ಕೇಳಿದ್ದೆನಾದರೂ, ಹೆಚ್ಚು ಓದಿರಲಿಲ್ಲ. `ಮೈಸೂರು ಮಲ್ಲಿಗೆ’ ಕನ್ನಡ ಚಲನಚಿತ್ರದಲ್ಲಿ `ದೀಪವು ನಿನ್ನದೆ ಗಾಳಿಯೂ ನಿನ್ನದೇ ಆರದಿರಲಿ ಬೆಳಕು…’ ಅನ್ನೋ ಹಾಡನ್ನು ಸುಧಾರಾಣಿ ಕಣ್ತುಂಬಿಕೊಂಡು ಹಾಡಿದ್ದು ಕಂಡು ನನ್ನ ಕಣ್ಣೂ ಒದ್ದೆಯಾಗಿತ್ತು. ಚಿತ್ರದಲ್ಲಿ ಬರುವ ಘಟನೆಯ ತೀವ್ರತೆಗೂ ಮೀರಿ ಕೆ.ಎಸ್.ಎನ್ ಅವರ ಆ ಹಾಡು ನನ್ನ ಎದೆ ತಟ್ಟಿ, ಬೇರಾವುದೋ ಘಟ್ಟಕ್ಕೆ ಕೊಂಡೊಯ್ದು, ಮುಂದೆ ಅವರ ಇನ್ನಷ್ಟು ಕವಿತೆಗಳ ಓದುವಿಕೆಗೆ ಕಾರಣವಾಗಿತ್ತು. ಹಾಗಿತ್ತು ಆ ಕವಿತೆಯ ಸಾಹಿತ್ಯದ ಶಕ್ತಿ! ಚಲನಚಿತ್ರದಲ್ಲಿ ಒಂದು ಸೀಮಿತ ಘಟನೆಗಷ್ಟೇ ಈ ಹಾಡನ್ನು ಬಳಸಿಕೊಳ್ಳಲಾಗಿದ್ದು, ಅದರಿಂದಾಗಿ ಒಂದು ನಿರ್ಧಿಷ್ಟ ಪರಿಮಿತಿಯ ಅರ್ಥ ಪಡೆದುಕೊಂಡ ಈ ಅದ್ಭುತ ಕವಿತೆಯನ್ನು ಯಾವೆಲ್ಲಾ ಆಯಾಮದಲ್ಲಿ ಅರ್ಥೈಸಿಕೊಳ್ಳಬಹುದು, ಈ ಕವಿತೆಯ ಒಳಾರ್ಥ ಅದೆಷ್ಟು ತೀವ್ರವಾಗಿದೆ ಎಂಬುದನ್ನೆಲ್ಲಾ ಚಿಂತಿಸಿದಾಗ ಹೊಳೆದ ಅರ್ಥಗಳು ಇಲ್ಲಿವೆ. ನಾನಿಲ್ಲಿ ಅವರ ಎರಡು ಸುಂದರ ಕವಿತೆಗಳನ್ನು ವಿಶ್ಲೇಷಿಸುವ ದೊಡ್ಡ ಸಾಹಸಕ್ಕೆ ಕೈ ಹಾಕುತ್ತಿದ್ದೇನೆ. ಇದು ನನ್ನ ಸೀಮಿತ ಪರಿಮಿತಿಗೆ ದಕ್ಕಿದ್ದು ಎಂಬುದನ್ನೂ ಮೊದಲೇ ಹೇಳಿಬಿಡುತ್ತಿರುವೆ.
ಕೆ.ಎಸ್.ನ ಅವರ ಹುಟ್ಟು, ವಿದ್ಯಾಭ್ಯಾಸ, ವೃತ್ತಿ, ಪ್ರವೃತ್ತಿ, ಅವರ ಸಂಕಲನಗಳ ವಿವರಣೆ, ಅವರ ಅಸೀಮ ಪ್ರತಿಭೆಗೆ ಸಿಕ್ಕ ಪುರಸ್ಕಾರಗಳು, ಪ್ರಶಸ್ತಿಗಳು ಎಲ್ಲವೂ ಸವಿವರವಾಗಿ ಎಲ್ಲೆಡೆ ಲಭ್ಯವಿವೆ. ಅವರ `ಮೈಸೂರು ಮಲ್ಲಿಗೆ’, `ಉಂಗುರ’, `ದೀಪದ ಮಲ್ಲಿ’ ಇತ್ಯಾದಿ ಸಂಕಲನಗಳಲ್ಲಿರುವ ಕವಿತೆಗಳೆಲ್ಲಾ ಭಾವಗೀತೆಗಳಾಗಿದ್ದು, ನವೋದಯ ಶೈಲಿಯಲ್ಲಿವೆ. `ತೆರೆದ ಬಾಗಿಲು’ ಸಂಕಲನದಿಂದ ಅವರು ನವ್ಯ ಶೈಲಿಗೆ ಹೊರಳಿದ್ದನ್ನು ಗುರುತಿಸಬಹುದಾಗಿದೆ. ಅವರೇ ಹೇಳಿಕೊಂಡಂತೆ ಅವರು ಬರೆದದ್ದರಲ್ಲಿ ಹೆಚ್ಚಿನವು ದಾಂಪತ್ಯ ಗೀತೆಗಳು. ಅವರನ್ನು ಪ್ರೇಮ ಕವಿ, ಒಲವಿನ ಕವಿ ಎಂದೆಲ್ಲಾ ಹೊಗಳಿದರೂ, ಅವರದ್ದು ದಾಂಪತ್ಯದ ಚೌಕಟ್ಟಿನೊಳರಳಿದ ಪ್ರೇಮದ ಲಾಲಿತ್ಯ ಎನ್ನಬಹುದು. ಜನಪದದ ಸೊಗಡು, ಅಲ್ಲಿಯ ಮಣ್ಣಿನ ಕಂಪು, ಪುಟ್ಟ ಗಂಡ-ಹೆಂಡಿರ ಬೆಚ್ಚನೆಯ ಪ್ರೀತಿ, ವಿರಹ, ಶಾನುಭೋಗರ ಮಗಳ ಚೆಲುವು ಆಹಾ ಎಲ್ಲವೂ ಸೊಗಸು, ಸುಂದರ, ಆಹ್ಲಾದಕರ! ಅವರ ಆ ಕವಿತೆಗಳನ್ನೋದುವಾಗ ಆಗುವ ರಸಾನುಭೂತಿ ಅನಿರ್ವಚನೀಯ! ಹಾಗಾಗಿಯೇ ಅವರ `ಮೈಸೂರು ಮಲ್ಲಿಗೆ’ ಕವನ ಸಂಕಲನ ಅತಿ ಹೆಚ್ಚು ಜನಪ್ರಿಯತೆ ಪಡೆಯಿತು, ಈಗಲೂ ಜನರ ಮನೆ-ಮನಗಳಲ್ಲಿ ಹಾಡಾಗಿದೆ.
ಸುಳ್ಸುದ್ದಿ : ಉದ್ಯಮಿಗಳಿಬ್ಬರ ದೇವರ ಕೋಣೆಗಳು ಇನ್ನು ಮುಜರಾಯಿ ಇಲಾಖೆಯ ವಶಕ್ಕೆ!!
– ಪ್ರವೀಣ್ ಕುಮಾರ್ ಮಾವಿನಕಾಡು
ಹೂವು,ಹಣ್ಣು,ಅಗರಬತ್ತಿ,ಕರ್ಪೂರ ಮುಂತಾದ ಪೂಜಾ ಸಾಮಗ್ರಿಗಳ ಖರೀದಿಯ ಲೆಕ್ಕ ಪತ್ರಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ನೀಡಿ ಬೆಂಗಳೂರಿನ ಇಬ್ಬರು ಉದ್ಯಮಿಗಳ ಪೂಜಾ ಗೃಹಗಳನ್ನು ಮುಜರಾಯಿ ಇಲಾಖೆಯ ವಶಕ್ಕೆ ಪಡೆಯುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ! ಉದ್ಯಮಿಗಳ ವಿರುದ್ದ ಅವರ ಹೆಂಡತಿ ಹಾಗೂ ಮಕ್ಕಳಿಂದ ಸಲ್ಲಿಕೆಯಾಗಿರುವ ದೂರುಗಳ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಮಟ್ಟದಲ್ಲಿ ಪರಿಶೀಲನೆ ನಡೆಸಿದ ನಂತರ ಮುಂದಿನ ಕ್ರಮಗಳು ಜರುಗಲಿವೆ.ಈ ಬಗ್ಗೆ ಈಗಾಗಲೇ ಇಲಾಖೆಯ ಕಾನೂನು ತಜ್ಞರಿಂದ ಅಭಿಪ್ರಾಯ ನಿರೀಕ್ಷಿಸಲಾಗುತ್ತಿದ್ದು,ಅವರಿಂದ ಶಿಫಾರಸು ಬಂದ ನಂತರ ಇಲಾಖೆಯ ಆಯುಕ್ತರು ಅಗತ್ಯ ಕಾನೂನು ಕ್ರಮಕೈಗೊಳ್ಳುತ್ತಾರೆ ಎಂದು ಮುಜರಾಯಿ ಸಚಿವರು ತಿಳಿಸಿದರು.
ಇದಕ್ಕೂ ಮುನ್ನ ಒಬ್ಬ ಉದ್ಯಮಿಯ ಪತ್ನಿ,ತನ್ನ ಪತಿ ನನ್ನನ್ನು ತುಂಬಾ ಹಣ ಖರ್ಚಾಗುತ್ತದೆ ಎನ್ನುವ ಕಾರಣವೊಡ್ಡಿ ಶಾಪಿಂಗ್ ಗೆ ಕರೆದು ಕೊಂಡು ಹೋಗುವುದಿಲ್ಲ, ಆದರೆ ಪ್ರತೀ ತಿಂಗಳೂ ಸಂಕಷ್ಟ ಹರ ಗಣಪತಿ ವ್ರತಕ್ಕಾಗಿ ಸಾವಿರಾರು ರೂ.ಖರ್ಚು ಮಾಡುತ್ತಾರೆ.ಜೊತೆಗೆ ಖರ್ಚು ಮಾಡಿದ ಹಣದ ಲೆಕ್ಕ ಕೊಡಿ ಎಂದರೆ ಅದನ್ನೂ ಕೊಡುತ್ತಿಲ್ಲ ಎಂದು ದೂರು ದಾಖಲಿಸಿದ್ದರು.
ಇನ್ನೊಬ್ಬ ಉದ್ಯಮಿಯ ಪುತ್ರ,ನನ್ನ ತಂದೆ ತುಂಬಾ ಹಣ ಖರ್ಚಾಗುತ್ತದೆ ಎಂದು ನನ್ನ ಬಹು ದಿನದ ಬೇಡಿಕೆಯಾದ ಸೈಕಲ್ ಕೊಡಿಸಿರಲಿಲ್ಲ.ಆದರೆ ಮೊನ್ನೆ ಮೊನ್ನೆ ವರಮಹಾ ಲಕ್ಷ್ಮಿ ಹಬ್ಬಕ್ಕೆ ಸುಮಾರು ಹತ್ತು ಸಾವಿರ ರೂ.ಗಳಿಗಿಂತಾ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಮತ್ತು ಇದ್ಯಾವುದಕ್ಕೂ ಸರಿಯಾದ ಲೆಕ್ಕ ಪತ್ರವನ್ನೂ ಇಟ್ಟಿಲ್ಲ ಎಂದು ದೂರು ದಾಖಲಿಸಿದ್ದನು.
ಮತ್ತಷ್ಟು ಓದು 
ಅಂಬೇಡ್ಕರ್ ಮತ್ತು ಮಾರ್ಕ್ ವಾದ
– ಡಾ. ಜಿ. ಭಾಸ್ಕರ ಮಯ್ಯ
ಬಹಳ ಕಾಲದಿಂದಲೂ ಬುದ್ಧಿಜೀವಿಗಳ ವಲಯದಲ್ಲಿ ಅಂಬೇಡ್ಕರ್ ಮತ್ತು ಮಾರ್ಕ್ಸ್ ವಾದದ ಬಗೆಗೆ ಚರ್ಚೆಯಿದೆ. ಮಾರ್ಕ್ಸ್ ವಾದಿ ಕಮ್ಯೂನಿಸ್ಟ್ ಪಕ್ಷದ ಬುದ್ಧಿಜೀವಿಗಳು ಅಂಬೇಡ್ಕರರ ಕೊಡುಗೆ ಮತ್ತು ಭಾರತದ ಇತಿಹಾಸದಲ್ಲಿ ಅವರ ಸ್ಥಾನಮಾನಗಳ ಕುರಿತು ಸ್ಪಷ್ಟವಾಗಿ ಚರ್ಚಿಸಿದ್ದಾರೆ. ಈ ಕುರಿತು ಬಿ.ಟಿ. ರಣದಿವೆಯವರ “ಜಾತಿ ಮತ್ತು ವರ್ಗ” ಕೃತಿಯನ್ನು ನೋಡಬಹುದು. ಆದರೆ, ಬಹಳಷ್ಟು ಇತರೇ ಬುದ್ಧಿಜೀವಿಗಳಿಗೆ ಅಂಬೇಡ್ಕರ್ ಅವರು ಮಾರ್ಕ್ಸ್ ವಾದಕ್ಕೆ ಅತಿನಿಕಟ ಎಂತಲೊ ಅಥವಾ ಅಂಬೇಡ್ಕರ್ರದ್ದೇ ನಿಜವಾದ ಮಾರ್ಕ್ಸ್ ವಾದ ಎಂತಲೊ ಭ್ರಮೆಯಿದೆ.
ಇತ್ತೀಚೆಗೆ ವಿಜಯಕರ್ನಾಟಕದಲ್ಲಿ ಬರಗೂರು ರಾಮಚಂದ್ರಪ್ಪನವರ “ಕೆರಳಿದ ಕರುಳ ಧ್ವನಿ ಅಂಬೇಡ್ಕರ್” ಎಂಬ ಲೇಖನ ಪ್ರಕಟವಾಗಿದೆ. ಇಲ್ಲಿಯೂ ಅಂತಹ ಒಂದು ವಿಲಕ್ಷಣ ಭ್ರಮಾಪ್ರಯತ್ನವನ್ನು ನೋಡಬಹುದು. ಈ ಕುರಿತು ಒಂದು ಚರ್ಚೆ ಪ್ರಸ್ತುತ ಲೇಖನದ ಉದ್ದೇಶ. ಮೊದಲಿಗೆ ಬರಗೂರರು ಅಂಬೇಡ್ಕರರ ಮೂರು ಹೇಳಿಕೆಗಳನ್ನು (ಅವುಗಳಲ್ಲಿ 2, 3 ಮಾರ್ಕ್ಸ್ ವಾದವನ್ನು ಎತ್ತಿ ಹಿಡಿಯುತ್ತವೆ) ಉಲ್ಲೇಖಿಸಿ ಅದರ ಮೇಲೆ ತಮ್ಮ ಚರ್ಚೆಯನ್ನು ಆರಂಭಿಸುತ್ತಾರೆ.
ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರಲ್ಲ
ಗಾಂಧೀಜಿಯವರ ಕುರಿತು ಬರಗೂರು “ಆರಂಭದಲ್ಲಿ ಜಾತಿವರ್ಣಗಳನ್ನು ತಮ್ಮದೇ ವ್ಯಾಖ್ಯಾನದ ಮೂಲಕ ಸಮರ್ಥಿಸುತ್ತಿದ್ದ ಗಾಂಧೀಜಿ ಆನಂತರ ಜಾತಿ ಮತ್ತು ವರ್ಗರಹಿತ ಸಮಾಜದ ನಿರ್ಮಾಣವನ್ನು ಪ್ರತಿಪಾದಿಸಿದರು” ಎಂದಿದ್ದಾರೆ. ಜಗತ್ತಿನ ಯಾವ ಮಾರ್ಕ್ಸ್ ವಾದಿಯೂ ಮೈಮರೆತು ಕೂಡಾ ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರು ಎಂದು ಹೇಳಿಲ್ಲ. ಏಕೆಂದರೆ ಗಾಂಧೀಜಿ ಎಂದೂ ವರ್ಗರಹಿತ ಸಮಾಜ ನಿರ್ಮಾಣದ ಕನಸು ಕಂಡಿಲ್ಲ. ಭಾರತದ ಅತ್ಯುನ್ನತ ಮಟ್ಟದ ಮಾರ್ಕ್ಸ್ ವಾದಿಗಳಾದ ಡಾಂಗೆ, ಯಶ್ಪಾಲ್,ಇಎಂಎಸ್ ನಂಬೂದಿರಿ ಪಾಡ್-ಎಲ್ಲರೂ ಗಾಂಧೀಜಿಯ ಒಟ್ಟು ಐತಿಹಾಸಿಕ ಪಾತ್ರ ಬಂಡವಾಳಿಗರ ವರ್ಗವನ್ನು ಹೇಗೆ ಪ್ರತಿನಿಧಿಸುತ್ತಿತ್ತು ಎಂಬುದನ್ನೇ ವಿಶದೀಕರಿಸಿದ್ದಾರೆ. ಗಾಂಧೀಜಿಯವರ ಅತ್ಯಂತ ಯಥಾರ್ಥ
ಮೌಲ್ಯಮಾಪನವನ್ನು ಇಎಂಎಸ್ ತಮ್ಮ “ಗಾಂಧಿ ಎಂಡ್ ಹಿಸ್ ಇಸಮ್” ಕೃತಿಯಲ್ಲಿ ವಿವರವಾಗಿ ದಾಖಲಿಸಿದ್ದಾರೆ. ನನಗನ್ನಿಸುವಂತೆ ಬಹಳಷ್ಟು ಬುದ್ಧಿಜೀವಿಗಳಿಗೆ “ವರ್ಗ” ಎಂಬ ವಿಶೇಷ ಪದದ ಅರ್ಥವೇ ತಿಳಿದಿಲ್ಲ! ಅದರಿಂದಾಗಿಯೇ ಇಂತಹ ಅವಾಂತರಗಳು ಉಂಟಾಗುತ್ತವೆ.
ಕನ್ನಡಿಯಲ್ಲಿ ಮುಖನೋಡಿಕೊಳ್ಳಿ ಬುದ್ಧಿಜೀವಿಗಳೇ
– ರಾಕೇಶ್ ಶೆಟ್ಟಿ
ಕಳೆದ ಭಾನುವಾರ ಕಲ್ಬುರ್ಗಿಯವರ ಹತ್ಯೆಯ ಸುದ್ದಿ ತಿಳಿದಾಗ ಆಘಾತವಾಯಿತು.ಹತ್ಯೆ ಯಾವ ಕಾರಣಕ್ಕಾಗಿದೆಯೋ ಅದು ತನಿಖೆಯಿಂದ ಹೊರಬರಲಿದೆ.ಆದಷ್ಟು ಬೇಗ ತನಿಖೆಯಾಗಿ ಸತ್ಯಹೊರಬಂದು ಅವರ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು.ಕಲ್ಬುರ್ಗಿಯವರ ಐಡಿಯಾಲಜಿಗಳೇನೇ ಇದ್ದಿರಬಹುದು,ಆದರೆ ಅವರು ಈ ನಾಡಿನ ಸಂಶೋಧನಾ ಕ್ಷೇತ್ರದ ಪ್ರಮುಖ ವಿದ್ವಾಂಸರಲ್ಲೊಬ್ಬರಾಗಿದ್ದವರು.ಅವರ ಕೊಲೆ ಸಹಜವಾಗಿಯೇ ನಾಡಿನ ವೈಚಾರಿಕ ವಲಯದ ಆಕ್ರೋಶಕ್ಕೆ ಕಾರಣವಾಯಿತು.ಕ್ರೋಧ-ಆಕ್ರೋಶಕ್ಕೊಳಗಾದ ಮನಸ್ಸಿನಿಂದ ಒಳಿತಿಗಿಂತ ಹಾನಿಯೇ ಹೆಚ್ಚು ಎಂಬ ಮಾತಿನಂತೆ,ಈ ಘಟನೆಯ ಸುತ್ತ ದೊಡ್ಡವರು ಎನಿಸಿಕೊಂಡವರ ವರ್ತಿಸಿದ ರೀತಿಯೇ ಉದಾಹರಣೆ.ಸೂತಕದ ಮನೆಯಲ್ಲಿ ಸಂಭ್ರಮಿಸುವುದು ಎಷ್ಟು ವಿಕೃತವೋ,ಅದೇ ರೀತಿ ಸೂತಕದ ಮನೆಯಲ್ಲಿ ಸಂಯಮ ಕಳೆದುಕೊಳ್ಳುವುದು ಹಾಗೂ ರಾಜಕೀಯ ಮಾಡುವುದೂ ಸಹ!
ಮಾಧ್ಯಮಗಳಲ್ಲಿ ಹತ್ಯೆಯ ಸುದ್ದಿ ಹೊರಬರುತಿದ್ದಂತೆ ನಾಡಿನ ಕೆಲವು ಬುದ್ಧಿಜೀವಿಗಳು,ಇದೊಂದು ವೈಚಾರಿಕ ಕಾರಣಕ್ಕೇ ಆದ ಹತ್ಯೆ ಎಂಬಂತೆ ತೀರ್ಪುಕೊಡಲಾರಂಭಿಸಿದರು.ಬುದ್ಧಿಜೀವಿ,ಪ್ರಗತಿಪರರ ಗುಂಪಿನ ಈ ನಡೆ ಅವರ ಜೊತೆಯೇ ಗುರುತಿಸಿಕೊಳ್ಳುವ ಕೆಲವರಿಗೆ ಯಾವ ರೀತಿ ರೇಜಿಗೆ ಹುಟ್ಟಿಸಿತು ಎಂಬುದಕ್ಕೆ,ಪ್ರಜಾವಾಣಿಯಲ್ಲಿ ನಟರಾಜ್ ಹುಳಿಯಾರ್ ಅವರು ಬರೆದ ಲೇಖನವೇ ಸಾಕ್ಷಿ. ಲೇಖನದಲ್ಲಿ ದಾಖಲಿಸಿರುವಂತೆ, “ಇಂತ ಸಮಯದಲ್ಲಿ ನಾವು ಸ್ಟ್ರಾಟರ್ಜಿ ಮಾಡ್ಬೇಕ್ರಿ” ಎಂದು ಒಬ್ಬರು ಹೇಳಿದರು ಅಂದರೇ ಕರ್ನಾಟಕದ ಬುದ್ಧಿಜೀವಿ ವಲಯ ಬಂದು ನಿಂತಿರುವುದೆಲ್ಲಿ? ಇದನ್ನು ಸಾವಿನ ಮನೆಯ ರಾಜಕಾರಣ ಮಾಡುವ ಇವರನ್ನು ರಾಜಕಾರಣಿಗಳು ಎನ್ನೋಣವೆಂದರೆ, ನಮ್ಮ ರಾಜ್ಯದಲ್ಲಿ ಬಹಳಷ್ಟು ಸಹೃದಯಿ ರಾಜಕಾರಣಿಗಳಿದ್ದಾರೆ ಮತ್ತು ಖುದ್ದು ಈ ಕೇಸಿನಲ್ಲಿ ಅವರೇ ಎಲ್ಲೂ ರಾಜಕೀಯ ಮಾಡಿಲ್ಲ.ಆದರೆ ನಮ್ಮ ಬುದ್ದಿಜೀವಿ ವಲಯ ಮಾತ್ರ ರಾಜ್ಯದಲ್ಲಿ “ವೈಚಾರಿಕ ಅಸಹನೆ” ಹೆಪ್ಪುಗಟ್ಟಿದೆ ಎಂದು ಕೂಗಿಕೊಳ್ಳುತ್ತಿದೆ.
ಮತ್ತಷ್ಟು ಓದು 
ಮಹದಾಯಿ : ಜನರ ದಾರಿ ತಪ್ಪಿಸುವುದು ಕಾಂಗ್ರೆಸ್ಗೆ ಶೋಭೆಯೇ?
– ವೃಷಾಂಕ್ ಭಟ್,ದೆಹಲಿ
ಕಳಸಾ-ಬಂಡೂರ ಕಾಲುವೆಗೆ ಮಹದಾಯಿ ನೀರು ಹರಿಸಲು ಪ್ರಧಾನಿಯೊಬ್ಬರೇ ಶಕ್ತರು ಎಂಬ ರಾಜಕೀಯ ಸುಳ್ಳನ್ನು ಕಾಂಗ್ರೆಸ್ ಪ್ರಚಾರ ಮಾಡುತ್ತಿದೆ. ತಿಳಿದೋ ತಿಳಿಯದೆಯೋ ಮಾಧ್ಯಮಗಳು ಕೂಡ ಹೆಚ್ಚು ಕಡಿಮೆ ಇದೇ ಸುಳ್ಳನ್ನು ಪ್ರಸಾರ ಮಾಡುತ್ತಿದೆ. ಮಹದಾಯಿ ಸಮಸ್ಯೆ ದೇಶದ ಸಮಸ್ಯೆಯಾಗಿ ಉಳಿದಿಲ್ಲ. ಕಾಂಗ್ರೆಸ್ ಪಾಲಿಗಿದು ರಾಜಕೀಯ ಅವಕಾಶ. ಮಹದಾಯಿ ಸಮಸ್ಯೆ ಜೀವಂತವಾಗಿದ್ದಷ್ಟು ದಿನವೂ ರಾಜ್ಯದ ಜನರ ಮನಸ್ಸಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುತ್ತದೆ ಎಂಬುವುದು ಸಿದ್ಧರಾಮಯ್ಯ ಮತ್ತವರ ಹೈಕಮಾಂಡ್ಗೆ ತಿಳಿಯದ ವಿಷಯವಲ್ಲ. ಹಾಗಾಗಿ ಮಹದಾಯಿ ಸಮಸ್ಯೆ ಬಹೆಗರಿಯುವುದು ರಾಜ್ಯ ಸರ್ಕಾರಕ್ಕೇ ಬೇಕಿಲ್ಲ. ಸಮಸ್ಯೆ ಬಗೆಹರಿಸಲು ನಿಜಕ್ಕೂ ಸಾಧ್ಯವಿದೆಯೆಂದಾದರೆ ಅದು ಕಾಂಗ್ರೆಸ್ಗೆ ಮಾತ್ರ. ಮಹದಾಯಿ ಪ್ರಕರಣ ಸಂಬಂಧ ನ್ಯಾಯಾಧಿಕರಣ ರಚನೆಯಾದ ಬಗೆ ಮತ್ತು ಅದರಲ್ಲಿ ಕಾಂಗ್ರೆಸ್ ಪಾತ್ರ ಎಷ್ಟಿದೆ ಎಂಬುದನ್ನು ನೋಡೋಣ.
1) ಜುಲೈ 2002 : ಅಂತಾರಾಜ್ಯ ನದಿ ನೀರು ವ್ಯಾಜ್ಯ-1956 ಅಡಿಯಲ್ಲಿ ಮಹದಾಯಿ ನ್ಯಾಯಾಧಿಕರಣ ರಚಿಸುವಂತೆ ಗೋವಾ ಸರ್ಕಾರ ಕೇಂದ್ರಕ್ಕೆ ಮನವಿ ನೀಡಿತ್ತು. ಆದರೆ ಕೇಂದ್ರವು ಆ ಕೂಡಲೇ ನ್ಯಾಯಾಧಿಕರಣ ರಚಿಸಲಿಲ್ಲ.ಆಗಿದ್ದದ್ದು ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರ.
2) ಏ.4-2006: ಕೇಂದ್ರ ಜಲಸಂಪನ್ಮೂಲ ಸಚಿವಾಲಯವು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳ ಸಭೆ ಕರೆದು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸುತ್ತಾರೆ. ಆದರೆ ಅಂದು ಗೋವಾ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್ನ ಪ್ರತಾಪ್ ಸಿಂಗ್ ರಾಣೆ ನ್ಯಾಯಾಧಿಕರಣ ರಚನೆಯಾಗಲೇ ಬೇಕು ಎಂದು ಹಠ ಹಿಡಿಯುತ್ತಾರೆ. ಆ ಮೂಲಕ ಮಾತು ಕತೆಯ ಉದ್ದೇಶ ವಿಫಲ.
ಮತ್ತಷ್ಟು ಓದು 
ಸುಳ್ಸುದ್ದಿ : ಹಿಂದೂಪರ ಸಂಘಟನೆಗಳಿಂದಲೇ ಇನ್ನು ಬುದ್ಧಿಜೀವಿಗಳ ರಕ್ಷಣೆ !!
– ಪ್ರವೀಣ್ ಕುಮಾರ್ ಮಾವಿನಕಾಡು
ರಾಜ್ಯದಲ್ಲಿ ವಿಚಾರವಾದಿಯೆಂದು ಹೇಳಿಕೊಳ್ಳುವ ಯಾವುದೇ ವ್ಯಕ್ತಿಗೆ ಏನೇ ಆದರೂ ಅದಕ್ಕೆ ಯಾವುದೇ ಆಧಾರವಿಲ್ಲದೆಯೂ ಹಿಂದೂಪರ ಸಂಘಟನೆಗಳೇ ನೇರ ಹೊಣೆ ಹೊರಬೇಕಾಗಿದ್ದು, ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಹಿಂದೂಪರ ಸಂಘಟನೆಗಳೇ ನೇರವಾಗಿ ಅವರುಗಳ ರಕ್ಷಣೆಯ ಹೊಣೆಯನ್ನು ಹೊರಲು ಮುಂದಾಗಿವೆ!
ಎಲ್ಲಿ ಯಾರಿಗೆ ಏನೇ ಆಗಲೀ,ಸ್ಥಳಕ್ಕೆ ಪೊಲೀಸರು ಬರುವ ಮುನ್ನವೇ ಉಳಿದ ಬುದ್ಧಿಜೀವಿಗಳು ಮತ್ತು ಕೆಲವು ಪಕ್ಷಗಳು ಹಿಂದೂಪರ ಸಂಘಟನೆಗಳನ್ನೇ ಹೊಣೆ ಮಾಡಿ ಅವರನ್ನು ಅಪರಾಧಿ ಎಂದು ತೀರ್ಮಾನಿಸಿ ಶಿಕ್ಷೆಯ ಪ್ರಮಾಣವನ್ನೂ ಪ್ರಕಟಿಸಿಯಾಗಿರುತ್ತದೆ! ಆದ್ದರಿಂದ ಹಿಂದೂ ಸಂಘಟನೆಗಳಿಗೆ ಈ ಬುದ್ಧಿಜೀವಿಗಳು ‘ಬದುಕಿದ್ದರೂ ಕಷ್ಟ-ಸತ್ತರೂ ಕಷ್ಟ’ ಎಂಬಂತಾಗಿದೆ. ಈ ಸಂಕಟದಿಂದ ಪಾರಾಗಲು ಈ ಬೇಜವಬ್ದಾರಿ ಅವರುಗಳ ಒಂದು ಕೂದಲೂ ಕೊಂಕದಂತೆ ರಕ್ಷಣೆ ಮಾಡುವ ಜವಾಬ್ಧಾರಿಯನ್ನು ಇನ್ನು ಮುಂದೆ ನಮ್ಮ ಸಂಘಟನೆಗಳೇ ಹೊರಲಿವೆ ಎಂದು ಹೆಸರು ಹೇಳಲಿಚ್ಚಿಸದ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಬ್ಬರು ತಿಳಿಸಿದರು.
“ವಿಚಾರವಾದಿಗಳ ರಕ್ಷಣಾ ಪಡೆ” ಎನ್ನುವ ಗಟ್ಟಿಮುಟ್ಟಾದ ಯುವಕರ ತಂಡವೊಂದನ್ನು ರಚಿಸಿದ್ದು,ಸುಮಾರು 2000 ಯುವಕರಿಗೆ ಈ ಬಗ್ಗೆ ಈಗಾಗಲೇ ತರಬೇತಿಯನ್ನು ನೀಡಲಾಗುತ್ತಿದೆ.ಇನ್ನು ಕೆಲವೇ ದಿನಗಳಲ್ಲಿ ಅವರನ್ನು ವಿಚಾರವಾದಿಗಳ ರಕ್ಷಣೆಗೆ ನೇಮಿಸಲಾಗುತ್ತದೆ.ಹಿರಿಯ “ಮಾಜಿ ಪತ್ರಕರ್ತ,ಹಾಲಿ ಬುದ್ದಿಜೀವಿ ಕಮ್ ರಾಜಕಾರಣಿ”ಯೊಬ್ಬರು ನೀಡಿದ, ಪ್ರಾಣಾಪಾಯವನ್ನೆದುರಿ -ಸುತ್ತಿರುವ ವಿಚಾರವಾದಿಗಳ ಜ್ಯೇಷ್ಠತಾ ಪಟ್ಟಿಯನ್ನಾಧರಿಸಿ ಮೇಲ್ವರ್ಗದ ಬುದ್ಧಿಜೀವಿಗಳಿಂದ ಹಿಡಿದು ಅತ್ಯಂತ ಕೆಳ ಹಂತದ ಬುದ್ಧಿಜೀವಿಗಳವರೆಗೂ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಸಂಲೇಖನಾ-ಸಂಥರಾ ಆತ್ಮಹತ್ಯೆಯೆ?
– ಡಾ| ಜಿ. ಭಾಸ್ಕರ ಮಯ್ಯ
ಇತ್ತೀಚೆಗೆ ರಾಜಸ್ತಾನ್ ಹೈಕೋರ್ಟ್ “ಸಂಲೇಖನಾ-ಸಂಥರಾ”ವನ್ನು ಕಾನೂನು ಬಾಹಿರಗೊಳಿಸಿರುವ ವಿಚಾರ ಜೈನ ಸಮುದಾಯದ ಸಾತ್ವಿಕ ಆಕ್ರೋಶಕ್ಕೆ ಕಾರಣವಾಗಿದೆ. ಜನಸಂಖ್ಯೆಯಲ್ಲಿ 1 ಶೇ.ದಷ್ಟೂ ಇರದ ಜೈನ ಸಮುದಾಯದ ಧಾರ್ಮಿಕ ಆಚರಣೆಯ ಮೇಲೆ ಇದು ನಿಜಕ್ಕೂ ತಾಲಿಬಾನ್ ಮಾದರಿಯ ವ್ಯವಹಾರವಾಗಿದೆ. ನಮ್ಮ ಮಾನವ ಹಕ್ಕು ಹೋರಾಟಗಾರರು ಹಾಗೂ ಪ್ರಾಣಿದಯಾ ಸಂಘದ ಮಹಾಮಹಿಮರಿಗೆ ಇರುವುದು ಕುರುಡು ಸಿದ್ಧಾಂತ ಪ್ರೀತಿ ಹೊರತು ಮಾನವ ಪ್ರೀತಿಯಲ್ಲ. ತಮ್ಮಷ್ಟಕ್ಕೆ ತಾವಿದ್ದು, ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡಿದ ಹಾಗೂ ನೀಡುತ್ತಿರುವ ಜೈನ ಸಮುದಾಯಕ್ಕೆ ನೋವುಂಟು ಮಾಡುವ ಈ ಕೆಲಸ ನಿಜಕ್ಕೂ ನೀಚತನದ್ದಾಗಿದೆ.
ನಾನೀಗ ಈ ಆಚರಣೆಯ ಸಂಕ್ಷಿಪ್ತ ವಿವರವನ್ನು ನೀಡುತ್ತೇನೆ:-
ಈ ಆಚರಣೆಯನ್ನು ಜೈನ ದಿಗಂಬರ ಪರಂಪರೆಯಲ್ಲಿ “ಸಂಲೇಖನಾ” ಎಂತಲೂ ಶ್ವೇತಾಂಬರದಲ್ಲಿ “ಸಲ್ಲೇಖನಾ” ಎಂತಲೂ ಕರೆಯುತ್ತಾರೆ. ಇದು ಜೈನರ ಹಲವಾರು ವ್ರತಗಳಲ್ಲಿ ಅತಿಶ್ರೇಷ್ಠವಾದ ವ್ರತರಾಜ.ಸಂಲೇಖನಾ ಮನಸ್ಸಿನ ಸಾಧನೆಯ ಒಂದು ಉಚ್ಚತಮ ಆಧ್ಯಾತ್ಮಿಕ ಸ್ಥಿತಿ.
ಮರಣದ ವಿಧಗಳು: ಮರಣಗಳಲ್ಲಿ ಪ್ರಮುಖವಾಗಿ ಎರಡು ವಿಧ. ಬಾಲ ಮರಣ ಮತ್ತು ಪಂಡಿತ ಮರಣ.ಇದನ್ನು ಇನ್ನೊಂದು ಬಗೆಯಲ್ಲಿ-ಅಕಾಮ ಮರಣ (ವಿವೇಕ ರಹಿತ, ಹಲವು ಬಾರಿ) ಹಾಗೂ ಸಕಾಮ ಮರಣ(ವಿವೇಕ ಸಹಿತ, ಒಂದೇ ಬಾರಿ) ಎಂತಲೂ ಕರೆಯುತ್ತಾರೆ.”ಗುಮ್ಮಟಸಾರ”ದ ಪ್ರಕಾರ ಬಾಲ ಮರಣವು ಚ್ಯುತ ಮತ್ತು ಚ್ಯಾವಿತವೆಂದು ಎರಡು ಬಗೆ. ಚ್ಯುತವೆಂದರೆ ಆಯುಷ್ಯ ತೀರಿದ ಬಳಿಕ ಬರುವ ಸಾವು. ಚ್ಯಾವಿತವೆಂದರೆ ವಿಷ, ರಕ್ತಕ್ಷಯ, ಧಾತುಕ್ಷಯ ಶಸ್ತಾಘಾತ, ಅಗ್ನಿದಾಹ,ಜಲದಿಂದ ಬರುವ ಸಾವು. ಇನ್ನೊಂದು ಬಗೆಯ ಮರಣಕ್ಕೆ ‘ತ್ಯಕ್ತ’ ಎನ್ನುತ್ತಾರೆ. ತ್ಯಕ್ತವೆಂದರೆ ರೋಗದಿಂದಉಂಟಾದ ಅಸಾಧ್ಯ ಮಾರಣಾಂತಿಕ ಪರಿಸ್ಥಿತಿಯಲ್ಲಿ ವಿವೇಕದಿಂದ ಶರೀರ ತ್ಯಾಗ ಮಾಡುವುದು.
ಮತ್ತಷ್ಟು ಓದು 




