ವಿಷಯದ ವಿವರಗಳಿಗೆ ದಾಟಿರಿ

Posts tagged ‘ಅಜಿತ್ ಹನಮಕ್ಕನವರ್’

3
ಜನ

ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳೇ ಮುಖ್ಯಮಂತ್ರಿಗಳೇ?

 – ರಾಕೇಶ್ ಶೆಟ್ಟಿ

ಇಂಗ್ಲೀಷ್ ಸುದ್ದಿ ವಾಹಿನಿಗಳಲ್ಲಿ ತಮ್ಮ ಪ್ಯಾನೆಲ್ ಚರ್ಚೆಗಳ ಮೂಲಕ,ಹಾಗೂ ಪ್ಯಾನೆಲಿಸ್ಟ್-ರಾಜಕಾರಣಿಗಳಿಗೆ ನಿರ್ಭಿತಿಯಿಂದ ಪ್ರಶ್ನೆ ಕೇಳುವ ಮೂಲಕ ದೇಶದ ಗಮನ ಸೆಳೆದ ಪತ್ರಕರ್ತ ಅರ್ನಬ್ ಗೋಸಾಮಿಯವರಂತೆಯೇ ಕರ್ನಾಟಕ ರಾಜ್ಯದ ಪತ್ರಿಕಾ ರಂಗದಲ್ಲಿ ತಮ್ಮ ನೇರಾ ನೇರ ಪ್ರಶ್ನೆಗಳು ಹಾಗೂ ಸತ್ಯ-ನ್ಯಾಯದ ಪರ ದನಿಯಾದವರು ಸುವರ್ಣ ಸುದ್ದಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನಮಕ್ಕನವರ್.ಇವರು ನಡೆಸಿಕೊಡುವ ಲೆಫ್ಟ್-ರೈಟ್-ಸೆಂಟರ್ ಎಂಬ ಚರ್ಚಾ ಕಾರ್ಯಕ್ರಮದಲ್ಲಿ ದಾಖಲೆಗಳನ್ನು ಮುಂದಿಟ್ಟುಕೊಂಡು, ಸುತ್ತಿ ಬಳಸಿ ಹೊಗಳಿಕೆಯ ಮಾತನಾಡದೇ ಸತ್ಯವನ್ನು ಸ್ಪಷ್ಟವಾಗಿ ಹೇಳುವುದು ಅಜಿತ್ ಶೈಲಿ.ಐತಿಹಾಸಿಕ ಸತ್ಯವನ್ನು ನೇರವಾಗಿ ಹೇಳಿದ್ದರಿಂದಾಗಿ ಈಗ ಅಜಿತ್ ಹನಮಕ್ಕನವರ್ ಸಂಕಟದಲ್ಲಿದ್ದಾರೆ.

ಕಳೆದ ಗುರುವಾರ, ಪ್ರೊ.ಭಗವಾನರನ ಕುರಿತ ಚರ್ಚೆಯ ಸಮಯದಲ್ಲಿ,ಭಗವಾನರನ ಪರ ವಹಿಸಿದ್ದ ಮಹೇಶ್ ಚಂದ್ರಗುರು ಅವರ “ಯಾರೂ ಪ್ರಶ್ನಾತೀತರಲ್ಲ” ಎನ್ನುವ ಮಾತಿಗೆ ಪ್ರತಿಯಾಗಿ ಅಜಿತ್, ಹೌದು ಸರ್ ನಿಮ್ಮ ಮಾತು ಒಪ್ಪುತ್ತೇನೆ ಯಾರೂ ಕೂಡ ಪ್ರಶ್ನಾತೀತರಲ್ಲ. ಆದರೆ ಯಾರನ್ನು ಪ್ರಶ್ನಿಸಲು  ನೀವುಗಳು (ಬುದ್ಧಿಜೀವಿಗಳು) ಆರಿಸಿಕೊಳ್ಳುತ್ತೀರಿ ಎಂದರೆ,ಯಾರನ್ನು ಪ್ರಶ್ನಿಸಿದರೆ ಅತ್ಯಂತ ಕಡಿಮೆ ಅಪಾಯ ಆಗಬಹುದೋ ಅಂತವರನ್ನು ಮಾತ್ರ ಆರಿಸಿಕೊಳ್ಳುತ್ತೀರಿ. ರಾಮನನ್ನು ಪ್ರಶ್ನಿಸಬಹುದು.೫೩ ವಯಸ್ಸಿನಲ್ಲಿ ೬ ವರ್ಷದ ಹೆಣ್ಣುಮಗುವನ್ನು ಮದುವೆಯಾದವರನ್ನು ಪ್ರಶ್ನಿಸುವ ಧೈರ್ಯ ನಿಮಗೆ ಬರುವುದಿಲ್ಲ ಎನ್ನುವ ಅರ್ಥದಲ್ಲಿ ಮಾತನ್ನಾಡಿದ್ದರು.ಅಷ್ಟೇ ನೋಡಿ ಶುರುವಾಯಿತು!

ಮತ್ತಷ್ಟು ಓದು »

6
ಫೆಬ್ರ

ನಿಲುಮೆಯ ಮೇಲಿನ ದಾಳಿಯ ಕುರಿತು ಸುವರ್ಣವಾಹಿನಿಯಲ್ಲಿ ನಡೆದ ಚರ್ಚೆ

ಭಾಗ ೦೧

ಮತ್ತಷ್ಟು ಓದು »