ವಿಷಯದ ವಿವರಗಳಿಗೆ ದಾಟಿರಿ

Posts tagged ‘ಅನುಭವ ಮಂಟಪ’

9
ಆಗಸ್ಟ್

ಕೊಟ್ಟ ಕುದುರೆಯನೇರಲರಿಯದೆ : ಓದುಗರ ಕಣ್ಕಾಪು ತೆರೆಯಿಸುವ ಕೃತಿ

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

ಕೊಟ್ಟ ಕುದುರೆಯನೇರಲರಿಯದೆಇಂದಿನ ಕನ್ನಡ ಸಾಹಿತ್ಯ ಚರ್ಚೆ ಮತ್ತು ವಿಮರ್ಶೆಗಳು ಯಾವುದೇ ಕೃತಿ ಅಥವಾ ಅದಕ್ಕಿಂತ ಹೆಚ್ಚಾಗಿ ಅದರ ಕೃತಿಕಾರನನ್ನು ಹೇಗೆ ನೋಡಬೇಕು ಎಂದು ಮೊದಲೇ ನಿರ್ಧರಿಸಿ ಓದುಗರೂ ಹಾಗೆಯೇ ತಿಳಿಯತಕ್ಕದ್ದು ಎಂದು ಆಗ್ರಹಿಸುತ್ತವೆ. ಇಂಥ ಆಗ್ರಹಕ್ಕೆ ಕೆಲವೇ ಕೆಲವು ವರ್ಷಗಳ ಪರಂಪರೆ ಹಾಗೂ ಅಳ್ಳಕವಾದ ಬೇರು ಇದ್ದರೂ ಇದು ಬೀಸಿದ ಪ್ರಭಾವ ಮಾತ್ರ ತುಸು ಹೆಚ್ಚಿನದು. ಕುವೆಂಪು, ಭೈರಪ್ಪ, ಅನಂತಮೂರ್ತಿ ಮೊದಲಾಗಿ ಯಾರ್ಯಾರ ಕೃತಿಯನ್ನು ಹಾಗೂ ಆಯಾ ಕೃತಿಕಾರರನ್ನು ಹೇಗೆ ನೋಡಬೇಕು, ತಿಳಿಯಬೇಕು ಹಾಗೂ ಅವರನ್ನು ಎಲ್ಲಿ ಇಡಬೇಕು ಎಂದು ‘ನಿರ್ದೇಶಿಸುವ’ ಪ್ರವೃತ್ತಿ ಸಾಹಿತ್ಯಕ ವಲಯದಲ್ಲಿ ಕಾಣಿಸಿಕೊಂಡಿದೆ. ಇದು ತನ್ನ ಹಾಸುಬೀಸನ್ನು ಹೊಸಗನ್ನಡಕ್ಕೆ ಮಾತ್ರ ಸೀಮಿತಗೊಳಿಸಿಲ್ಲ. ಅದರ ತೆಕ್ಕೆಗೆ ಹನ್ಮಿಡಿ ಶಾಸನಾದಿಯಾಗಿ ಎಲ್ಲವೂ ಸೇರಿವೆ! ಹೀಗಾಗಿ ಸಹಜವಾಗಿಯೇ ಹನ್ನೆರಡನೆಯ ಶತಮಾನದ ವಚನ ಸಾಹಿತ್ಯವೂ ಇಂಥ ನಿರ್ದೇಶನದ ವ್ಯಾಪ್ತಿಯಲ್ಲಿ ಬಂದುಬಿಟ್ಟಿದೆ. ಓದುಗನ ಮೇಲೆ ಹೇರಲಾಗುವ ಈ ಬಗೆಯ ನಿರ್ದೇಶನದಿಂದ ಸಾಹಿತ್ಯಕ್ಕಾಗಲೀ ಓದುಗನಾಗಲೀ ಲಾಭಕ್ಕಿಂತ ನಷ್ಟವೇ ಹೆಚ್ಚು. ವಚನ ಸಾಹಿತ್ಯ ಕುರಿತು ಹೀಗೆ ಹೇರಲಾಗಿರುವ “ಓದುವ-ತಿಳಿಯುವ ಕ್ರಮದ ನಿರ್ದೇಶನ”ದಿಂದಾಗಿ ಸಾಹಿತ್ಯವನ್ನು ಸಹಜವಾಗಿ ಓದುವವರಿಗೆ ಹುಟ್ಟುವ ಪ್ರಶ್ನೆಗಳಿಗೆ ಸಮಂಜಸ ಉತ್ತರ ದೊರಕದಿದ್ದರೂ ಉತ್ತರ ದೊರಕಿದಂತೆ ನಟಿಸಬೇಕಾಗುತ್ತದೆ. ಆದರೆ ಅನುಮಾನ ಪರಿಹಾರವಾಗದು. ಅಂಥ ಸಂದರ್ಭದಲ್ಲಿ ಓದುಗರು ತಮ್ಮ ಓದಿನ ದೋಷವನ್ನು ಅರ್ಥಮಾಡಿಕೊಂಡು ಬೇರೆ ರೀತಿಯಲ್ಲಿ ಓದಿಕೊಳ್ಳುವ ಮಾರ್ಗ ಹುಡುಕಬೇಕಾಗುತ್ತದೆ. ಸ್ಥಾಪಿತ ನಿರ್ದೇಶನಗಳ ಹಿನ್ನೆಲೆಯಲ್ಲಿ ವಚನಗಳನ್ನು ಓದಿದಾಗ ಉಂಟಾಗುವ ಸಮಸ್ಯೆ ಇಂಥ ಹೊಸ ಮಾರ್ಗವನ್ನು “ಕೊಟ್ಟಕುದುರೆಯನೇರಲರಿಯದೆ…” ಕೃತಿಯ ಮೂಲಕ ಈಗ ತೆರೆದಿದೆ.

ಹನ್ನೆರಡನೆಯ ಶತಮಾನದಲ್ಲಿ ಹುಟ್ಟಿಕೊಂಡ ವಚನಗಳ ಹಿನ್ನೆಲೆ, ಅವುಗಳ ಸ್ವರೂಪ, ಭಾಷೆ, ವಿಷಯ ವೈವಿಧ್ಯಗಳನ್ನು ಗಮನಿಸಿದಾಗ ಓದುಗನಲ್ಲಿ ಸಹಜವಾಗಿಯೇ ಅನೇಕಾನೇಕ ಪ್ರಶ್ನೆಗಳು ಹುಟ್ಟುತ್ತವೆ: ‘ವಚನಗಳ ನಿರ್ದಿಷ್ಟ ಸಂಖ್ಯೆ ಯಾಕೆ ಲಭ್ಯವಿಲ್ಲ? ‘ಕಲ್ಯಾಣ ಕ್ರಾಂತಿಯಾದಾಗ ವಚನಗಳ ಕಟ್ಟುಗಳನ್ನು ತಲೆ ಮೇಲೆ ಹೊತ್ತು ಹುಬ್ಬಳ್ಳಿಯ ಮೂರು ಸಾವಿರ ಮಠಕ್ಕೂ ಉಳವಿಗೂ ಸಾಗಿಸಲಾಯಿತು’ ಎಂಬ ಹೇಳಿಕೆ ಸರಿಯಾಗಿದ್ದರೆ ಆ ಕಟ್ಟುಗಳು ಏನಾದವು?

ಮತ್ತಷ್ಟು ಓದು »

8
ಏಪ್ರಿಲ್

ವಚನಗಳು ಜಾತಿವ್ಯವಸ್ಥೆಯನ್ನು ತೊಲಗಿಸಲು ನಡೆದಿರುವ ಚಳುವಳಿಯಲ್ಲ

ಡಾ. ಸಂತೋಷ್ ಕುಮಾರ್ ಪಿ.ಕೆ, ಶಿವಮೊಗ್ಗ.

Vachana Charcheಪ್ರಜಾವಾಣಿ ೧೯/೦೩/೨೦೧೩ ರಲ್ಲಿ ಪ್ರಕಟವಾದ ಕಲಬುರ್ಗಿಯವ ಲೇಖನಕ್ಕೆ ಪ್ರತಿಕ್ರಿಯೆ

ವಚನಗಳ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಒಂದು ರೀತಿಯ ಕಂದರವಿದೆ. ಒಂದೆಡೆ ಸಂಶೋಧನೆ ವಾಸ್ತವದ ಕುರಿತು ವಾದಿಸುತ್ತಿದ್ದರೆ ಮತ್ತೊಂದೆಡೆ ಐಡಿಯಾಲಜಿಗಳು ಕಟ್ಟುಕತೆಯನ್ನೇ ಮರುಪ್ರಸಾರ ಮಾಡುತ್ತಿವೆ. ಇಲ್ಲಿ ಕಂದರವಿರುವುದು ಸಂಶೋಧನೆ ಮತ್ತು ಐಡಿಯಾಲಜಿಯ ನಡುವೆ. ಸಂಶೋಧನೆ ನಡೆಸಿ ಸುಮಾರು ೨೨೦೦೦ ವಚನಗಳನ್ನು ಪರಿಶೀಲನೆಗೆ ಒಡ್ಡಿ, ಡಂಕಿನ್ ಮತ್ತು ಬಾಲುರವರು ಒಂದು ಹೊಸ ಹೈಪೋಥೀಸಿಸ್ ನ್ನು ನೀಡುತ್ತಿದ್ದಾರೆ. ಆದರೆ ಅದು ಸಂಶೋಧನಾ ಹೈಪೋಥೀಸಿಸ್ ಎಂಬುದು ಚರ್ಚೆಯಲ್ಲಿ ಭಾಗವಹಿಸುತ್ತಿರುವ ಪೂರ್ವಪಕ್ಷದವರಿಗೆ ಅರ್ಥವಾಗದೆ ಇರುವುದು ಖೇದದ ಸಂಗತಿ.

ವಚನಗಳು ಜಾತಿವ್ಯವಸ್ಥೆಯನ್ನು ತೊಲಗಿಸಲು ನಡೆದಿರುವ ಚಳುವಳಿಯಲ್ಲ ಎಂದು ಯಾರಾದರೂ ವಾದಿಸಿದರೆ, ಅದಕ್ಕೆ ಪೂರ್ವಪಕ್ಷದವರು ಅದು ಹೇಗೆ ಜಾತಿವ್ಯವಸ್ಥೆಯ ವಿರುದ್ಧವೇ ನಡೆದಿದೆ ಎಂಬುದನ್ನು ಸಾಬೀತು ಮಾಡಬೇಕಾಗುತ್ತದೆ. ಅರಚಾಟ, ಕಿರುಚಾಟ, ವಯಕ್ತಿಕ ಟೀಕೆಗಳನ್ನು ಮಾಡಿದರೆ ಯಾವುದೇ ಹೈಪೋಥೀಸಿಸ್ ನ್ನು ರೆಫ್ಯೂಟ್ ಮಾಡಿದಂತೆ ಆಗುವುದಿಲ್ಲ. ವಚನಗಳು ಸಾವಿರಾರು ವಿಷಯಗಳ ಕುರಿತು ಮಾತನಾಡಿವೆ, ಅವುಗಳಲ್ಲಿ ಜಾತಿಯ ಕುರಿತು ಮಾತನಾಡಿರುವುದು ಒಂದಾಗಿದೆ. ವಚನಗಳ ಮೂಲ ಸಿದ್ಧಾಂತ (ಕಲಬುರ್ಗಿಯವರು ಹೇಳುವಂತೆ) ಜಾತಿವ್ಯವಸ್ಥೆಯನ್ನು ಹೋಗಲಾಡಿಸುವುದೇ ಆಗಿದ್ದರೆ ಅವರು ರಚಿಸಿರುವ ಬಹುತೇಕ ವಚನಗಳು ಆ ವಿಷಯದ ಸುತ್ತವೇ ಇರಬೇಕಿತ್ತು. ಆದರೆ ವಾಸ್ತವ ಹಾಗಿಲ್ಲ. ಈ ವಾದವನ್ನು ವಿರೋಧಿಸಬೇಕಾದರೆ ವಚನಗಳು ಬಹುಸಂಖ್ಯೆಯಲ್ಲಿ ಜಾತಿಯನ್ನು ವಿರೋಧಿಸುತ್ತವೆ ಎಂಬುದನ್ನು ಸಾಬೀತು ಮಾಡಬೇಕಾಗುತ್ತದೆ. ಇಷ್ಟು ಕನಿಷ್ಟ ಜ್ಞಾನವಿರದಿದ್ದರೆ ಐಡಿಯಾಲಜಿ, ಅಂದರೆ ವಾಸ್ತವಕ್ಕಿಂತ ತಾನು ನಂಬಿರುವುದೇ ಸತ್ಯ ಎಂಬ ಧೋರಣೆ ಮುಸುಕಾಗಿ ನಿಲ್ಲುತ್ತದೆ. ಐಡಿಯಾಲಜಿಯು ಸಿದ್ಧಾಂತಕ್ಕೆ ತೀರಾ ವ್ಯತಿರಿಕ್ತವಾದುದಾಗಿದೆ. ಸಾಮಾನ್ಯವಾಗಿ ಸಿದ್ಧಾಂತಗಳು ಇರುವ ಜ್ಞಾನವನ್ನು ಒರೆಗೆ ಹಚ್ಚುವ ಮೂಲಕ ಹೆಚ್ಚೆಚ್ಚು ಸ್ಪಷ್ಟತೆಯನ್ನು ಒದಗಿಸುತ್ತಾ ಹೋಗುತ್ತವೆ.

ಮತ್ತಷ್ಟು ಓದು »

31
ಮಾರ್ಚ್

ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ ಚರ್ಚೆಯ ಸುತ್ತ

Nilume-CSLC - 4