ವಿಷಯದ ವಿವರಗಳಿಗೆ ದಾಟಿರಿ

Posts tagged ‘ಅನ್ನಭಾಗ್ಯ’

24
ಜುಲೈ

ಅನ್ನಭಾಗ್ಯ ಹಸಿದವರಿಗೋ,ರೈತರ ಅಧಃಪತನಕ್ಕೋ?

– ಡಾ. ಪ್ರವೀಣ ಟಿ. ಎಲ್, ಶಿವಮೊಗ್ಗ

Anna Bhaagyaಅನ್ನಭಾಗ್ಯ ಯೋಜನೆಯ ಕುರಿತ ಚರ್ಚೆ ದಿನೇ ದಿನೇ ಕಾವು ಪಡೆಯುತ್ತಿರುವುದು ಸ್ಪಷ್ಟ. ಇಡೀ ಚರ್ಚೆಯಲ್ಲಿ ಅನ್ನಭಾಗ್ಯ ಯೋಜನೆಯನ್ನು ಟೀಕಿಸುವವರನ್ನು ಹಸಿದವರ ವಿರೋಧಿಗಳೆಂದೂ, ಬಿ.ಜೆ.ಪಿಯವರೆಂದೂ,ಮೇಲ್ವರ್ಗದ ಜಮೀನ್ದಾರೀ ಮನಸುಗಳೆಂದೂ, ಮಾನವೀಯತೆಯನ್ನು ಮರೆತವರೆಂದೂ ಬಿಂಬಿಸಿ, ವಿಮರ್ಶೆಗಳನ್ನು ಮೂಲೆಗುಂಪುಮಾಡಲಾಗುತ್ತಿದೆ. ಆದರೆ ಈ ಆರೋಪಗಳು ವಿಮರ್ಶೆಯ ತೀಕ್ಷ್ಣತೆಯನ್ನು ಕಡಿಮೆಗೊಳಿಸಬಹುದೇ ವಿನಃ, ‘ಅನ್ನಭಾಗ್ಯ’ದ ಸಮಸ್ಯೆಯನ್ನು ಬಗೆಹರಿಸುವುದಿಲ್ಲ ಎಂಬುದು ಅಷ್ಟೇ ಸತ್ಯ.

ಹಸಿದವರಿಗೆ ‘ಅನ್ನ’ ನೀಡುವ ‘ಭಾಗ್ಯ’ ಎಂದು ಬಿಂಬಿಸುತ್ತಿರುವ ಈ ಯೋಜನೆಯು ನಿಜವಾಗಿಯೂ ಹಸಿದವರಿಗೆ, ದುರ್ಬಲರಿಗೆ ಅನ್ನನೀಡುವ ಕೆಲಸವಾಗಿದ್ದರೆ ಭಾರತದ ಯಾರೊಬ್ಬರೂ ವಿರೋಧಿಸುವ ಪ್ರಮೆಯವೇ ಎದುರಾಗುತ್ತಿರಲಿಲ್ಲ. ಏಕೆಂದರೆ, ಹಸಿದವರಿಗೆ, ದುರ್ಬಲರಿಗೆ ಭಿಕ್ಷೆನೀಡಿ ಸಾಕುವ ಸಂಪ್ರದಾಯ ತಲೆತಲಾಂತರಗಳಿಂದಲೂ ನಡೆದುಬಂದಿರುವುದು ನಮ್ಮ ಸಂಸ್ಕೃತಿಯ ವಿಶೇಷಗಳಲ್ಲೊಂದು. ಹಸಿದವರು, ದುರ್ಬಲರು ಮಾತ್ರವೇ ಈ ಯೋಜನೆಯ ಫಲಾನುಭವಿಗಳೇ? ಖಂಡಿತ ಇಲ್ಲ. ಬಿ.ಪಿ.ಎಲ್. ಕಾರ್ಡುದಾರರೆಲ್ಲರೂ ಈ ಯೋಜನೆಗೆ ಅರ್ಹರು. ಈ ಪಡಿತರ ಕಾರ್ಡು ಪಡೆಯುವುದು ‘ಆದಾಯ ಪ್ರಮಾಣ ಪತ್ರ’ ಪಡೆದಂತೆಯೇ. ಲಕ್ಷಾಂತರ ರೂಪಾಯಿ ಆದಾಯವಿದ್ದರೂ 11000/- ಅಥವಾ 15000/- ಎಂದೇ ನಮೂದಾಗುವುದು ಬಹಿರಂಗ ಸತ್ಯ. ಹೀಗಿರುವಾಗ, ನಿಜವಾದ ದುರ್ಬಲರನ್ನು, ಹಸಿದವರನ್ನು ಗುರುತಿಸದೆಯೇ ಈ ರೀತಿಯ ಬೃಹತ್ ಮೊತ್ತದ ಯೋಜನೆಗಳನ್ನು ರೂಪಿಸಿ, ಅನುಷ್ಟಾನಗೊಳಿಸುವುದು ಹಲವಾರು ದುಷ್ಪರಿಣಾಮಗಳಿಗೆ, ದುರುಪಯೋಗಕ್ಕೆ ಕಾರಣವಾಗುತ್ತದೆಯೇ ವಿನಃ ನಿಜವಾದ ಉದ್ದೇಶ ಈಡೇರಲಾರದು.

ಮತ್ತಷ್ಟು ಓದು »