ಕಮ್ಯೂನಿಸ್ಟರು ಕಮ್ಯೂನಿಸಂನನ್ನು ಕೊಂದದ್ದು ಹೀಗೆ (ಭಾಗ – ೨)
– ಪ್ರೇಮಶೇಖರ
ಸುಂದರ ಕನಸೊಂದು ಹಳವಂಡವಾದ ದುರಂತಕ್ಕೆ ಮರುಗುತ್ತಾ…
ಥಾಮಸ್ ಹಾಬ್ಸ್, ಜಾನ್ ಲಾಕ್, ಜೀನ್ ಯಾಕ್ಸ್ ರೂಸೂ ಮುಂತಾದ ಸಾಮಾಜಿಕ ಒಪ್ಪಂದ ಸಿದ್ಧಾಂತದ ಪ್ರತಿಪಾದಕರ ಪ್ರಕಾರ ‘ಬಲವೇ ಹಕ್ಕು’ ಎಂಬ ಮಾನವತಾವಿರೋಧಿ ಅರಣ್ಯ ಕಾನೂನಿನಿಂದ ಅಶಕ್ತರನ್ನು ರಕ್ಷಿಸಿ, ಸಮಾಜದ ಎಲ್ಲರ ನಡುವೆ ಸಮಾನ ನ್ಯಾಯಹಂಚಿಕೆಗಾಗಿ ರಾಜ್ಯ ಸ್ಥಾಪನೆಗೊಂಡಿತಂತೆ. ಆದರೆ ಮಾನವಜನಾಂಗ ಮುಂದೆ ಹಿಡಿದ ದಾರಿಯಲ್ಲಿ ರಾಜ್ಯವೇ ಶೋಷಕನಾಗಿ ಬದಲಾದದ್ದನ್ನು ಇತಿಹಾಸ ಹೇಳುತ್ತದೆ. ಸಾಮಾಜಿಕ ಒಪ್ಪಂದಗಳ ಮೂಲಕ ಸಮಾನನ್ಯಾಯ ಹಂಚಿಕಾವ್ಯವಸ್ಥೆ ಸಾಧ್ಯವಾಗದೇ ಹೋದಾಗ, ಬಲವಂತದ ಮೂಲಕ, ರಕ್ತಪಾತದ ಮೂಲಕ ಅದು ಅಸ್ತಿತ್ವಕ್ಕೆ ಬರುತ್ತದೆಂದು ಭವಿಷ್ಯ ನುಡಿದ ಕಾರ್ಲ್ ಮಾರ್ಕ್ಸ್ ಒಬ್ಬ ವಾಸ್ತವವಾದಿ. ಅಂತಹ ವ್ಯವಸ್ಥೆಯನ್ನು ಚಿತ್ರಿಸಿದ ಕಮ್ಯೂನಿಸಂ ಒಂದು ಉದಾತ್ತ ಮಾನವಪರ ಚಿಂತನೆ. ಆದರೆ ವಾಸ್ತವವಾದಿ ರೂಪಿಸಿದ ಉದಾತ್ತ ಮಾನವಪರ ಸಿದ್ಧಾಂತ ತನ್ನ ಅವಾಸ್ತವವಾದಿ ಹಾಗೂ ಮಾನವವಿರೋಧಿ ಹಿಂಬಾಲಕರಿಂದಲೇ ಕಳಂಕ ಹಚ್ಚಿಸಿಕೊಂಡದ್ದೊಂದು ದುರಂತ. ಈ ಪ್ರಕ್ರಿಯೆ ಭಾರತದಲ್ಲಿ ಅನಾವರಣಗೊಂಡ ಬಗೆಯನ್ನು ಸಂಕ್ಷಿಪ್ತವಾಗಿ ಈಗಿಲ್ಲಿ ಹೇಳುತ್ತೇನೆ. ಮತ್ತಷ್ಟು ಓದು
ಅಬ್ ಕಿ ಬಾರ್, ‘ಟ್ರಂಪ್ ಸರ್ಕಾರ್’
– ಶ್ರೇಯಾಂಕ ಎಸ್ ರಾನಡೆ
ಎಲ್ಲಾ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ತಲೆಕೆಳಗೆ ಮಾಡುವ ಮೂಲಕ, ಸ್ಥಾಪಿತ ರಾಜಕೀಯ ಶಕ್ತಿಗಳನ್ನು ಬೀಳಿಸಿದ ಡೊನಾಲ್ಡ್ ಟ್ರಂಪ್ ಅಮೆರಿಕದ 45ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಮೋದಿಯವರನ್ನು ಟ್ರಂಪ್ ರೀತಿಯ ವ್ಯಕ್ತಿತ್ವದವರೆಂದೋ, ಟ್ರಂಪ್ ಮೋದಿಯವರಷ್ಟೇ ಉತ್ತಮರೆಂದೋ ಹೇಳುವ ಪ್ರಯತ್ನವಲ್ಲ. ಆದರೆ ಭಾರತದ ಅನುಕೂಲಕ್ಕೆ ತಕ್ಕಂತಹ ಸೂಕ್ತ ಸಮಯ, ವಾತಾವರಣ “ನ ಭೂತೋ ಭವಿಷ್ಯತಿಃ” ಎಂಬಂತೆ ಅಮೆರಿಕದಲ್ಲಿ ನಿರ್ಮಾಣಗೊಂಡಿದೆ. 21ನೇ ಶತಮಾನ ಭಾರತ ಹಾಗೂ ಉಪಖಂಡದ್ದಾಗಲು ಭಾರತ ಈ ಸಮಯವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಭಾರತ ಹಾಗೂ ಅಮೆರಿಕದ ಸಮಾನ ಆಸಕ್ತಿಗಳನ್ನು ದ್ವಿಪಕ್ಷೀಯ ಬಾಂಧವ್ಯದ ಮತ್ತೊಂದು ದಿಕ್ಕಿಗೆ ಕೊಂಡೊಯ್ಯಬೇಕು. ಮತ್ತಷ್ಟು ಓದು