ವಿಷಯದ ವಿವರಗಳಿಗೆ ದಾಟಿರಿ

Posts tagged ‘ಅಸ್ಪೃಶ್ಯತೆ’

3
ಜೂನ್

ಗಾಂಧಿ ಮತ್ತು ದೇವನೂರ

– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ

ಗಾಂಧಿ ಮತ್ತು ಅಂಬೇಡ್ಕರ್ಮೊನ್ನೆ ಗಾಂಧಿ ನೆನಪಾದರು. ನೆನಪಾದರು ಎನ್ನುವುದು ಅವರು ಮರೆತುಹೋಗಿರಬಹುದು ಎಂದೂ ಧ್ವನಿಸಬಹುದು. ನೆನಪು ಮತ್ತು ಮರೆತುಹೋಗುವಿಕೆ ಈ ಎರಡೂ ಸ್ಥಿತಿಗಳಲ್ಲಿ ಗಾಂಧಿ ಜೀವಂತವಾಗಿದ್ದು ನಮ್ಮನ್ನು ಕಾಡುತ್ತಲೇ ಇರುವರು. ಇದು ಗಾಂಧಿಯಂಥ ಗಾಂಧಿಯಿಂದ ಮಾತ್ರ ಸಾಧ್ಯವಾಗುವಂತಹದ್ದು. ಏಕೆಂದರೆ ಗಾಂಧಿ ಸೂಟು ಬೂಟು ಧರಿಸಿ, ಪಂಚೆ ಉಟ್ಟುಕೊಂಡು ಮತ್ತು ಲಂಗೋಟಿ ಸಿಕ್ಕಿಸಿಕೊಂಡು ಭಾರತೀಯ ಜೀವನಕ್ರಮದ ಎಲ್ಲ ವರ್ಗಗಳನ್ನು ತಮ್ಮೊಳಗೆ ಅಂತರ್ಗತಗೊಳಿಸಿಕೊಂಡವರು. ಒಬ್ಬನೇ ವ್ಯಕ್ತಿ ತನ್ನ ಜೀವಿತಾವಧಿಯಲ್ಲಿ ಭಾರತೀಯ ಜೀವನ ಕ್ರಮದ ಎಲ್ಲ ವರ್ಗಗಳನ್ನು ಪ್ರತಿನಿಧಿಸುವುದು ಅದು ಗಾಂಧೀಜಿಯಂಥ ವ್ಯಕ್ತಿಯಿಂದ ಮಾತ್ರ ಸಾಧ್ಯವಾಗುವ ಬಹುದೊಡ್ಡ ಸಾಮಾಜಿಕ ಪಲ್ಲಟ.

ಇನ್ನು ಗಾಂಧಿ ಏಕೆ ನೆನಪಾದರು ಎನ್ನುವ ವಿಷಯಕ್ಕೆ ಬರುತ್ತೇನೆ. ಆವತ್ತು ದಲಿತ ಸಂಘರ್ಷ ಸಮಿತಿಯವರ ಮೆರವಣಿಗೆ ರಸ್ತೆಯ ಮೇಲೆ ನಡೆದು ಹೋಗುತ್ತಿತ್ತು. ಬುದ್ಧ, ಬಸವ, ಅಂಬೇಡ್ಕರ್ ಎನ್ನುವ ಜಯಘೋಷ ಅಲ್ಲಿ ಮೊಳಗುತ್ತಿತ್ತು. ಜೊತೆಗೆ ಬುದ್ಧ-ಬಸವ-ಅಂಬೇಡ್ಕರರ ಆಳೆತ್ತರದ ಭಾವಚಿತ್ರಗಳು ರಾರಾಜಿಸುತ್ತಿದ್ದವು. ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಶತಮಾನಗಳಿಂದ ಮನೆಮಾಡಿಕೊಂಡಿದ್ದ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಮತ್ತು ಹಿಂದುಳಿದ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಈ ಮೂವರು ಮಾಡಿದ ಪ್ರಯತ್ನ ಮತ್ತು ಹೋರಾಟ ಅದು ಚರಿತ್ರೆಯ ಪುಟಗಳಲ್ಲಿ ಸದಾಕಾಲ ಅಳಿಸಲಾಗದ ಐತಿಹಾಸಿಕ ಪ್ರಯತ್ನವಾಗಿ ದಾಖಲಾಗಿ ಉಳಿದಿದೆ. ಆದರೆ ಆ ಸಂದರ್ಭ ಅಲ್ಲಿನ ಭಾವಚಿತ್ರಗಳಲ್ಲಿ ಮತ್ತು ಅವರು ಮೊಳಗಿಸುತ್ತಿದ್ದ ಜಯಘೋಷಗಳಲ್ಲಿ ಗಾಂಧಿ ಅನುಪಸ್ಥಿತಿ ನನಗೆ ಬಹುಮುಖ್ಯ ಕೊರತೆಯಾಗಿ ಕಾಣಿಸಿತು.

ಮತ್ತಷ್ಟು ಓದು »

29
ಏಪ್ರಿಲ್

ನಾಡು-ನುಡಿ : ಮರುಚಿಂತನೆ – ಹಿಂದೂ ಶಬ್ದಕ್ಕೆ ನಕಾರಾತ್ಮಕ ಅರ್ಥವೇಕೆ?

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಹಿಂದೂದಲಿತರನ್ನು ಹಿಂದೂ ಸಮಾಜದ ಒಳಗೆ ತರಬೇಕೆಂಬ ಪ್ರತಿಪಾದನೆ ಕಳೆದ ನೂರಾರು ವರ್ಷಗಳಿಂದ ನಡೆದು ಬಂದಿದೆ. ಹಿಂದೂ ಸಮಾಜದ ಐಕ್ಯತೆಯನ್ನು ಸಾಧಿಸಬೇಕೆನ್ನುವ ರಾಷ್ಟ್ರೀಯ ನಾಯಕರೆಲ್ಲರೂ ಇಂಥ ಕಾರ್ಯಕ್ರಮಗಳ ಮಹತ್ವವನ್ನು ಒಪ್ಪಿದ್ದಾರೆ. ಮತ್ತೊಂದೆಡೆ ಈ ಕಾರ್ಯಕ್ರಮವನ್ನು ಒಂದು ಹುನ್ನಾರವೆಂಬಂತೆ ನೋಡುವ ಹಾಗೂ ಆ ಕಾರಣದಿಂದ ಅದನ್ನು ತಿರಸ್ಕರಿಸುವ ಪ್ರಯತ್ನಗಳೂ ನೂರಾರು ವರ್ಷಗಳಿಂದ ನಡೆದಿವೆ. ಹುನ್ನಾರವೇಕೆಂದರೆ, ಜಾತಿ ವ್ಯವಸ್ಥೆಯ ಹಿಂದೂ ಸಮಾಜದೊಳಗೆ ದಲಿತರನ್ನು ಮತ್ತೆ ಸೇರಿಸಿ ಶೋಷಿಸುವ ಉದ್ದೇಶದಿಂದ ಸಂಪ್ರದಾಯಸ್ಥ ಹಿಂದೂಗಳು ಈ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ ಎಂಬ ಆರೋಪ. ಆದರೆ ಜಾತಿ ವ್ಯವಸ್ಥೆಯು ಹಿಂದೂ ಸಮಾಜದ ಲಕ್ಷಣವಾದರೆ, ಹಾಗೂ ದಲಿತರು ಹಿಂದೂ ಸಮಾಜದೊಳಗೆ ಇಲ್ಲ ಅಂತಾದರೆ ಅವರು ಇದುವರೆಗೆ ಜಾತಿ ವ್ಯವಸ್ಥೆಗೆ ಒಳಪಟ್ಟಿಲ್ಲ ಎಂದು ಇಂಗಿತವೆ? ಅಥವಾ ಜಾತಿವ್ಯವಸ್ಥೆಯ ಹೊರಗಿದ್ದೂ ಅವರನ್ನು ಸಾವಿರಾರು ವರ್ಷಗಳ ವರೆಗೆ ಶೋಷಿಸಲು ಹಿಂದೂಗಳಿಗೆ ಸಾಧ್ಯವಾಗಿದ್ದೇ ಹೌದಾದಲ್ಲಿ ಆ ಕೆಲಸವನ್ನೇ ಮಾಡಲು ಹಿಂದೂ ಸಮಾಜದೊಳಗೆ ಅವರನ್ನು ಹೊಸತಾಗಿ ಸೇರಿಸಿಕೊಳ್ಳುವ ಅಗತ್ಯವೇಕೆ? ಒಟ್ಟಿನಲ್ಲಿ ಇದು ಒಂದು ಒಗಟಾಗಿ ಬಿಡುತ್ತದೆ.

ಈ ಒಗಟು ಏಕೆ ಹುಟ್ಟುತ್ತದೆಯೆಂದರೆ ನಮ್ಮ ಸಂಸ್ಕೃತಿಯ ಇತಿಹಾಸವನ್ನು ಕಟ್ಟುವಾಗ ಪರಸ್ಪರ ಸುಸಂಬದ್ಧವಲ್ಲದ ಅನೇಕ ವಿವರಗಳನ್ನು ಒಟ್ಟಿಗೆ ತರಲಾಗಿದೆ.  ಅವುಗಳಲ್ಲಿ ಒಂದು ಹಿಂದೂಯಿಸಂ ಎಂಬ ರಿಲಿಜನ್ನಿನ ಕಲ್ಪನೆ, ಮತ್ತೊಂದು ಆರ್ಯರ ಆಕ್ರಮಣದ ಕಥೆ. ಭಾರತದಲ್ಲಿ ಹಿಂದೂಯಿಸಂ ಎಂಬ ರಿಲಿಜನ್ನಿದೆ, ಅದಕ್ಕೆ ಬ್ರಾಹ್ಮಣರು ಪುರೋಹಿತಶಾಹಿಗಳು, ಇದರಲ್ಲಿ ಮೂರ್ತಿಪೂಜೆ ಜಾತಿ ವ್ಯವಸ್ಥೆಗಳಂಥ ಅನಿಷ್ಟ ಆಚರಣೆಗಳಿವೆ ಎಂಬ ಕಥೆ 19ನೆಯ ಶತಮಾನದಲ್ಲೇ ಗಟ್ಟಿಯಾಯಿತು. ಪಾಶ್ಚಾತ್ಯರು ಕ್ಯಾಥೋಲಿಕ್ ಚರ್ಚಿನಂತೇ ಇದೊಂದು ಭ್ರಷ್ಟವಾದ ರಿಲಿಜನ್ನು ಎಂದು ಭಾವಿಸಿದ್ದರು. ಆ ಸಂದರ್ಭದಲ್ಲಿ ರಾಜಾ ರಾಮಮೋಹನರಾಯರಂಥವರು ಹಿಂದೂಯಿಸಂ ಮೂಲತಃ ಉದಾತ್ತವಾದ ರಿಲಿಜನ್ನಾಗಿದೆ ಎಂಬ ನಿರೂಪಣೆಯನ್ನು ಗಟ್ಟಿಮಾಡತೊಡಗಿದರು.ಈ ನಿರೂಪಣೆಗೆ ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿಯ ಏಕದೇವತಾ ತತ್ವವೇ ಆಧಾರವಾಯಿತು.ಅಂದರೆ ಹಿಂದೂಯಿಸಂನ ಶುದ್ಧ ರೂಪವು ವೇದಾಂತದಲ್ಲಿ ಇದೆ ಎಂದಾಯಿತು.

ಮತ್ತಷ್ಟು ಓದು »