ನಾವು, ನಮ್ಮ ಹರಕೆ, ನಮ್ಮ ಸೇವೆ!
– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ದಿನಾಂಕ 19-04-2015 ರಂದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ “ಮಾದಪ್ಪನ ಸನ್ನಿಧಿಯಲ್ಲಿ ಸಣ್ಣ ಸ್ವಚ್ಛಭಾರತ್” ಲೇಖನ ಪ್ರಕಟವಾಯಿತು. ಇದರಲ್ಲಿ ಜಾಗದ ಮಿತಿಯಿಂದಲೋ ಸೈದ್ಧಾಂತಿಕ ಮಿತಿಯಿಂದಲೋ ಲೇಖನದ ಬಹುತೇಕ ಭಾಗಗಳಿಗೆ ಕತ್ತರಿ ಪ್ರಯೋಗವಾಗಿತ್ತು. ಅದರ ಪೂರ್ಣಪಾಠ ಇಲ್ಲಿದೆ.
ಮಲೆ ಮಹದೇಶ್ವರ ಬೆಟ್ಟ. ಬೆಳಿಗ್ಗೆ ಆರು ಗಂಟೆಯ ಸಮಯ. ದೇವಾಲಯದ ಮುಂಭಾಗ ರಾತ್ರಿ ಬಂದ ಯಾತ್ರಿಗಳು ಅನುದ್ದೇಶಪೂರ್ವಕ ಚೆಲ್ಲಿದ ಕಸಕಡ್ಡಿಗಳು ಅಲ್ಲಲ್ಲಿ ಹರಡಿದ್ದವು. ಹರಕೆ ತೀರಿಸಲು ಬಂದ ಭಕ್ತಾದಿಗಳಿಂದ ಬಗೆಬಗೆಯ ಆಚರಣೆಗಳು ಸುತ್ತಲೂ ನಡೆಯುತ್ತಿದ್ದವು. ಮುಖ್ಯ ದೇಗುಲದ ಮುಂಭಾಗದಲ್ಲಿರುವ ಕಲ್ಯಾಣಿ ಪಕ್ಕದ ಜಡೆ ಮಾದೇಶ್ವರ ಗುಡಿಯ ಮುಂದೆ ಹತ್ತಾರು ಹೆಂಗಸರು ಮಕ್ಕಳು ಸೇರಿಕೊಂಡಿದ್ದರು. ಒಬ್ಬ ಹುಡುಗ “ಹಾಲುಮಲೆ ಏಳುಮಲೆ, ಜೇನುಮಲೆ, ಎಪ್ಪತ್ತೇಳುಮಲೆ ನಮ್ಮ ಮುದ್ದು ಮಾದೇಶ್ವರನಿಗೆ ಉಘೇ ಅನ್ರಪ್ಪಾ” ಅನ್ನುತ್ತಿದ್ದಂತೆ ಸುತ್ತ ನೆರೆದಿದ್ದವರು ಒಕ್ಕೊರಲಲ್ಲಿ “ಉಘೇ ಉಘೇ” ಅನ್ನುತ್ತಿದ್ದರು. ಗುಡಿಯ ಮುಂದೆ ಕತ್ತೆಯೊಂದು ತರಬೇತಿ ನೀಡಿದ್ದಾರೇನೋ ಎಂಬಂತೆ ಸ್ತಬ್ದವಾಗಿ ನಿಂತಿತ್ತು. ಕೆಲವು ಹೆಂಗಸರು ಅದರ ಕಾಲು ತೊಳೆದರು. ಮತ್ತೆ ಕೆಲವರು ಅದಕ್ಕೆ ಮಲ್ಲಿಗೆ ಹಾರ ತೊಡಿಸಿದರು. ಮತ್ತೆ ಹಲವರು ಅರಿಶಿಣ ಕುಂಕುಮ ಹಾಕಿ ಅದರ ಕಾಲಿಗೆ ಅಡ್ಡ ಬಿದ್ದರು. ಇನ್ನು ಕೆಲವರು ಆರತಿ ಬೆಳಗಿದರು.
ಕತ್ತೆಯ ಪಕ್ಕದಲ್ಲಿ ಹೊಚ್ಚ ಹೊಸ ತೆಂಗಿನ ಗರಿಯಿಂದ ತಯಾರಿಸಿದ ಒಂದಿಷ್ಟು ಪೊರಕೆಗಳನ್ನು ಸಾಲಾಗಿ ಜೋಡಿಸಿದ್ದರು. ಈ ಪೊರಕೆಗಳಿಗೆ ಅರಿಶಿನ ಕುಂಕುಮ ಹಾಕಿ, ಹೂವು ಏರಿಸಿ ಎಲ್ಲರೂ ಕೈ ಮುಗಿದರು. ಒಬ್ಬೊಬ್ಬರೂ ಒಂದೊಂದು ಪೊರಕೆಯನ್ನು ಕೈಗೆತ್ತಿಕೊಂಡರು. ಹುಡುಗ “ಹಾಲುಮಲೆ ಏಳುಮಲೆ, ಜೇನುಮಲೆ, ಎಪ್ಪತ್ತೇಳುಮಲೆ ನಮ್ಮ ಮುದ್ದು ಮಾದೇಶ್ವರನಿಗೆ ಉಘೇ ಅನ್ರಪ್ಪಾ” ಅನ್ನುತ್ತಿದ್ದ. ಉಳಿದವರು “ಉಘೇ ಉಘೇ” ಅನ್ನುತ್ತ ಸುತ್ತಲ ಕಸ ಕಡ್ಡಿಗಳನ್ನು ಗುಡಿಸಿ ಸ್ವಚ್ಛಮಾಡತೊಡಗಿದರು. ಅರ್ಧಗಂಟೆಯಲ್ಲಿ ಸುತ್ತಲ ಪರಿಸರ ತೊಳೆದಿಟ್ಟಂತೆ ಕಂಗೊಳಿಸತೊಡಗಿತು.
ತುಳುನಾಡ ನಂಬಿಕೆಗಳು…
– ಭರತೇಶ ಆಲಸಂಡೆಮಜಲು
ಬಾಳಿಗೊಂದು ನಂಬಿಕೆ ಎಂಬಂತೆ, ಈ ಬಾಹ್ಯ ಜಗತ್ತು ನಂಬಿಕೆಯ ತಲೆದಿಂಬುನಿಟ್ಟು ಮಲಗಿದೆ. ಈ ನಂಬಿಕೆಯಲ್ಲಿ ಎಲ್ಲವೂ ಶೂನ್ಯ ಆಕಾಶ ಅನಂತವಾದರೆ, ಅಣು ಪರಮಾಣುಗಳು ಎನೋ ಕತ್ತಲಲ್ಲಿ ತೇಲುವ ಸೂಕ್ಷ್ಮ ಜೀವಿ, ಆ ಆಗಾಧ ಶಕ್ತಿಯ ಕೊಲ್ಮಿಂಚು ಎಲ್ಲೋ ಹುಟ್ಟಿ ಶಕ್ತಿಯ ಅದುಮಿದ ಶೂನ್ಯ, ಸತ್ಯದ ಜಗದಲ್ಲಿ ನಾವೊಂದು ಭ್ರಾಮರಕ ನಿರ್ಮಿತಿಗಳು ಅದೇ ನಿರಾಕಾರ, ನಿರ್ಗುಣ, ನಿರಾಮಯ, ಆಗೋಚರ ಬ್ರಹ್ಮಾಂಡದ ಸ್ವರೂಪಗಳು ನಮ್ಮ ನಮ್ಮ ಜ್ಞಾನದ ಅಳತೆಯೊಳಗೆ…. “ನೈಜ ಜಗತ್ತಿನಲ್ಲಿ ಬಣ್ಣಗಳೇ ಇಲ್ಲ, ವಾಸನೆಯೂ ಇಲ್ಲ, ಮೃದುತ್ವ ಕಾಠೀಣ್ಯಗಳು ಇಲ್ಲ, ಅವೆಲ್ಲ ಏನಿದ್ದರೂ ನಮ್ಮ ನಿಮ್ಮ ಮಿದುಳಿನಲ್ಲಿ ನಮ್ಮ ನಿಮ್ಮ ಜ್ಞಾನದಲ್ಲಿ” ಎಂದು ಪ್ರಸಿದ್ಧ ನರ ವಿಜ್ಞಾನಿ ನೋಬೆಲ್ ವಿಜೇತ ಸರ್ ಜಾನ್ ಐಕೆಲ್ಸ್ ಹೇಳಿದ್ದಾರೆ.
ನಮ್ಮ ಯೋಚನಾ ಲಹರಿಯ ಶೂನ್ಯ ಜಾಗಗಳಲ್ಲಿ ಈ ನಂಬಿಕೆಗಳು ಅಚ್ಚಳಿದು ನಿಂತಿದೆ ನಮ್ಮ ನಂಬಿಕೆಗಳೇ ಹಾಗೆ ಅದು ಪ್ರಕೃತಿಯ ಅರಾಧನೆಯಿಂದ ಹಿಡಿದು ಗುರು ಹಿರಿಯರ ಪೂಜನೆಯವರೆಗೆ ಅದರಲ್ಲೂ ಕರಾವಳಿ ಇವೂಗಳ ಗೂಡು, ಬೀಡು. ಹಲವಾರು ವೈಶಿಷ್ಟ, ವಿಶೇಷ, ಆಚರಣೆ, ಅರಾಧನೆ, ಪಾಲನೆ ಇವುಗಳಿಂದಾಗಿ ವಿಶ್ವವ್ಯಾಪ್ತಿಯಲ್ಲಿ ಛಾಪನ್ನು ಮೂಡಿಸಿದೆ. ಎಲ್ಲರ ಮಂದ ದೃಷ್ಠಿ ಇತ್ತ ಕಡೆ ನೆಡುವಂತೆ ಮಾಡಿದೆ. ಇಲ್ಲಿನ ಆಚರಣೆ ಒಂದನ್ನು ಮೀರಿಸುವ ಇನ್ನೊಂದು ಪ್ರಬುದ್ಧವಾದದ್ದು. ಪ್ರಪಂಚದ ಬೇರೆ ಯಾವೂದೇ ಕೋಣೆಯಲ್ಲೂ ಅರಸಿ ಹುಡುಕಿದರೂ ಬಯಸಿ ಸಿಗಲಾರದು. ಯಾವುದೋ ಪೂವಾಗ್ರಹದ ನೆಲೆಯಲ್ಲಿ ತುಳುನಾಡು ತನ್ನ ಭವ್ಯ ಸಂಸ್ಕೃತಿಯ ಕಣಜದ ನೆಲೆಯಲ್ಲಿ ಇನ್ನೂ ಆಚರಣೆಗಳು ಉಳಿದು ನಡೆಯುತಿದೆ. ಒಂದಷ್ಟು ಜಿಜ್ಞಾಸೆ, ವಿಮರ್ಶೆಗಳಿಂದ ಮತ್ತಷ್ಟು ಪ್ರಚಾರವಾಗಿ ಇನ್ನಷ್ಟು ಗಟ್ಟಿಯಾಗಿ ತುಳುವರ ಮನಗಳಲ್ಲಿ ಅಗೆಲುಗಳ ರೂಪದಲ್ಲಿ ಭಾವುಕವಾಗಿ ಬೆಚ್ಚಗೆ ಕುಳಿತಿದೆ.
ಆಚರಣೆ, ಸಂಪ್ರದಾಯ,ನಂಬಿಕೆ ಮತ್ತು ಕಾಕತಾಳಿಯಗಳು
-ಮು.ಅ ಶ್ರೀರಂಗ,ಬೆಂಗಳೂರು
ಒಬ್ಬ ಬ್ರಾಹ್ಮಣನ ಮನೆಯಲ್ಲಿ ಬೆಕ್ಕೊಂದು ಓಡಾಡಿಕೊಂಡಿತ್ತು. ಹಳೆಯ ಕಾಲದ ಆ ಮನೆಯಲ್ಲಿದ್ದ ಇಲಿ,ಹೆಗ್ಗಣಗಳನ್ನು ತಿಂದುಕೊಂಡು ಅವುಗಳ ಕಾಟ ತಪ್ಪಿಸ್ಸಿದ್ದರಿಂದ ಸಹಜವಾಗಿ ಆ ಬೆಕ್ಕನ್ನು ಕಂಡರೆ ಮನೆಮಂದಿಗೆಲ್ಲಾ ಅಕ್ಕರೆಯಿತ್ತು.ಆ ಕುಟುಂಬದ ಯಜಮಾನನ ತಂದೆಯದೋ ತಾಯಿಯದೋ ತಿತಿ ಮಾಡಬೇಕಾದ ದಿನ ಬೆಕ್ಕು ಮನೆಯೊಳಗೆಲ್ಲಾ ಓಡಾಡಿ ಮೈಲಿಗೆ ಮಾಡುವುದು ಸರಿಯಲ್ಲ ಎಂದು ಅದನ್ನು ಮನೆಯ ಕಂಬವೊಂದಕ್ಕೆ ಕಟ್ಟಿಹಾಕಿದರು. ಆ ದಿನದ ಕೆಲಸ, ಊಟ ಎಲ್ಲಾ ಮುಗಿದ ನಂತರ ಆ ಬೆಕ್ಕಿಗೆ ಬಂಧನದಿಂದ ಬಿಡುಗಡೆಯಾಯ್ತು. ಕಾಲ ಕಳೆದಂತೆ ಆ ಮನೆಯ ಯಜಮಾನ ತೀರಿಕೊಂಡ. ಅವನ ಮಕ್ಕಳು ಅಪ್ಪನ ತಿತಿ ಮಾಡುವ ಸಮಯ ಬಂತು. ಆಗ ಮನೆಯಲ್ಲಿ ಬೆಕ್ಕು ಇರಲಿಲ್ಲ. ಹೀಗಾಗಿ ಅಕ್ಕ ಪಕ್ಕದ ಮನೆಯವರಿಂದ ಕಾಡಿ ಬೇಡಿ ಬೆಕ್ಕೊಂದನ್ನು ತಂದು ಕಂಬಕ್ಕೆ ಕಟ್ಟಿದರು. ಅಂದಿನ ಕೆಲಸ ಮುಗಿದ ನಂತರ ವಾಪಸ್ಸು ಕೊಟ್ಟರು. ಇದು ಹೀಗೆ ಪ್ರತಿ ಸಾರಿ ತಿತಿ ಮಾಡುವಾಗಲೂ ಮುಂದುವರಿಯಿತು. ಇದೊಂದು ಕಾಲ್ಪನಿಕ ಕಥೆ ಎಂಬುದರಲ್ಲಿ ಸಂದೇಹವಿಲ್ಲ. ಹಾಗೆ ನೋಡಿದರೆ ಐತಿಹಾಸಿಕವಾದುದನ್ನು ಬಿಟ್ಟರೆ ನಾವು ಓದುವ ಕತೆ ಕಾದಂಬರಿಗಳೆಲ್ಲ ಕಾಲ್ಪನಿಕವಾದವುಗಳೇ. ಅದರ ಬಗ್ಗೆ ಚರ್ಚೆ ಈಗ ಬೇಡ. ಏಕೆಂದರೆ ಈ ಬರಹ ಸಾಹಿತ್ಯಕ್ಕೆ ಸಂಬಧಿಸಿದ್ದಲ್ಲ. ಈ ಬೆಕ್ಕಿನ ಕತೆಯಲ್ಲಿ ನಾವು ತಿಳಿದುಕೊಳ್ಳಬೇಕಾದ ಅಂಶ ಒಂದಿದೆ. ನಾವುಗಳು ಕೆಲವೊಂದು ಆಚರಣೆಗಳಿಗೆ ಇದು ಏಕೆ? ಎಂಬ ಪ್ರಶ್ನೆಯನ್ನು ಕೇಳಿಕೊಳ್ಳುವುದಿಲ್ಲ. ಮಕ್ಕಳೇನಾದರು ಕೇಳಿದರೆ “ನೀನೊಬ್ಬ ಅಧಿಕ ಪ್ರಸಂಗಿ, ತಲೆಹರಟೆ”ಎಂದು ಬೈದು ಅವರನ್ನು ಸುಮ್ಮನಾಗಿಸುತ್ತೇವೆ. ತಂದೆ ತಾಯಿಗೆ ಅಜ್ಜಿ, ತಾತನಿಗೆ ಹೆದರಿದ ಆ ಮಕ್ಕಳು ಸುಮ್ಮನಾಗುತ್ತವೆ. ಅವರು ದೊಡ್ಡವರಾದ ಮೇಲೆ ಹಿಂದಿನವರು ತಮಗೆ ಮಾಡಿದ್ದನ್ನೇ ತಮ್ಮ ಮಕ್ಕಳಿಗೂ ಮಾಡುತ್ತಾರೆ. ಈ ಕೊಂಡಿಗಳು ಒಂದಕ್ಕೊಂದು ಸೇರಿಕೊಳ್ಳುತ್ತಾಹೋಗಿ ಆಚರಣೆಗಳಾಗಿ,ಸಂಪ್ರದಾಯಗಳಾಗಿ ಮುಂದುವರಿಯುತ್ತವೆ.
Read more
ಶ್ರಾದ್ಧ … ಆಚರಣೆ
-ಪ್ರಕಾಶ್ ನರಸಿಂಹಯ್ಯ
ಹುಟ್ಟು ಅಂದಮೇಲೆ ಸಾವು ನಿಶ್ಚಿತ. ಹುಟ್ಟಿನೊಂದಿಗೆ ಪ್ರಾರಂಭವಾಗುವ ಜೀವನ ಯಾತ್ರೆ ಮರಣದೊಂದಿಗೆ ಮುಗಿಯುತ್ತವೆ. ಅಂತ್ಯಸಂಸ್ಕಾರ ನಡೆಯುತ್ತವೆ . ನಂತರದಲ್ಲಿ ಮೃತ ವ್ಯಕ್ತಿಗೆ ಹಲವಾರು ಸಂಸ್ಕಾರಗಳು ನಡೆಯುತ್ತವೆ. ಸತ್ತ ದಿನದಿಂದ ಹದಿನಾಲ್ಕು ದಿನಗಳವರೆಗೆ ಹಲವಾರು ರೀತಿಯ ಕರ್ಮಗಳನ್ನು ಅವರವರ ಪದ್ದತಿಗನುಸಾರವಾಗಿ ಮತ್ತು ಸಂಪ್ರದಾಯದಂತೆ ಮಾಡುತ್ತಾರೆ. ಮೃತ ವ್ಯಕ್ತಿಯ ಮಕ್ಕಳು ಸಾಮಾನ್ಯವಾಗಿ ಈ ಕರ್ಮವನ್ನು ಮಾಡುತ್ತಾರೆ.ನಂತರದಲ್ಲಿ ಪ್ರತಿ ವರ್ಷ ಮೃತರ ನೆನಪಿನಲ್ಲಿ ಶ್ರಾದ್ಧ ಕರ್ಮಅಥವಾ ತಿಥಿ ಎಂಬ ಹೆಸರಿನಲ್ಲಿ ಆಚರಣೆ ಮಾಡುವುದು ರೂಡಿಯಲ್ಲಿದೆ.