ವಿಷಯದ ವಿವರಗಳಿಗೆ ದಾಟಿರಿ

Posts tagged ‘ಆತ್ಮ’

30
ಮೇ

ಗೀತೆಯನ್ನು ಅರ್ಥೈಸಿಕೊಳ್ಳಲಾಗದವರು ಬದುಕಿನ ವಾಸ್ತವಗಳನ್ನು ಅರಗಿಸಿಕೊಳ್ಳಲಾರರು

– ಮಯೂರ ಲಕ್ಷ್ಮಿ

“ಈ ಜಗತ್ತು ಭಗವಂತನ ಸೃಷ್ಟಿ ಎನ್ನುವ ವಿಚಾರವು ಭಗವದ್ಗೀತೆಯನ್ನು ಓದಿದಾಗ ಅರಿವಾಯಿತು… ಈ ವಿಚಾರದ ಮುಂದೆ ಇನ್ನೆಲ್ಲಾ ಆಲೋಚನೆಗಳೂ ಗೌಣವೆನಿಸಿತು” – ಆಲ್ಬರ್ಟ್ ಐನ್ ಸ್ಟೀನ್

ಭಗವದ್ಗೀತೆಭಗವದ್ಗೀತೆಯನ್ನು ಉದಾತ್ತ ಮನಸ್ಸುಗಳಿಂದ ವಿಶಾಲ ಹೃದಯಗಳಿಂದ ಅರ್ಥಮಾಡಿಕೊಳ್ಳುವವರಿಗೆ ಅದು ಸಕ್ಕರೆಯಂತೆ ಸಿಹಿ, ಅತ್ಯಂತ ಸರಳವಾದ ರೀತಿಯಲ್ಲಿ ಮನುಷ್ಯನು ಈ ಭೂಮಿಯಲ್ಲಿ ನಡೆದುಕೊಳ್ಳಬೇಕಾದ ರೀತಿಯನ್ನು ತಿಳಿಸುವ ಸುಲಭ ಸಾಧನ, ಸಂಕುಚಿತ ಮನಸ್ಸುಗಳಿಂದ ಅದರ ವ್ಯಾಪ್ತಿಯನ್ನು ಪೂರ್ವಾಗ್ರಹಪೀಡಿತರಾಗಿ ತಪ್ಪುಗಳನ್ನೇ ಹುಡುಕಿ ನೋಡುವವರಿಗೆ ಅದು ಅರ್ಥವಾಗದ ಕ್ಲಿಷ್ಟ ಗ್ರಂಥವೇ ಸರಿ! ಇನ್ನು ಗೀತೆ ಎಂದರೆ ಕೋಮುವಾದಿ ಗ್ರಂಥ ಶ್ರೀಕೃಷ್ಣನೆಂದರೆ ಸ್ತ್ರೀಲೋಲ ಎಂಬ ಭಾವನೆಯಿಂದಲೇ ನೋಡುವವರಿಗೆ ಇದು ಅರ್ಥವಾದೀತಾದರೂ ಹೇಗೆ? ಕೃಷ್ಣನ ರಾಜನೀತಿಯ ನೈಪುಣ್ಯತೆಯನ್ನು ಮುತ್ಸದ್ದಿತನವನ್ನೂ ಅವನ ಸಮಾಜ ಪರಿವರ್ತನೆಯ ಮತ್ತು ಧರ್ಮರಕ್ಷಣೆಯ ಸಂಕಲ್ಪವನ್ನು ಒಪ್ಪದವರು ಅವನ ವಾಣಿಯಾದ ಗೀತೆಯನ್ನು ಸ್ವೀಕರಿಸುವುದು ಸಾಧ್ಯವಿಲ್ಲಾ. ಹಿಂದೂ ಧರ್ಮಗ್ರಂಥಗಳನ್ನು ಟೀಕಿಸಿ ಬುದ್ಧಿವಂತರೆನಿಸಿಕೊಳ್ಳುವುದು ಕೆಲವರ ಹವ್ಯಾಸ.

ಪ್ರಪಂಚದ ಎಲ್ಲಾ ಮಹನೀಯರೂ ದಾರ್ಶನಿಕರೂ ಗೀತೆಯನ್ನು ಕೋಮುವಾದವನ್ನು ಪ್ರಚೋದಿಸುವ ಗ್ರಂಥವೆಂದೇ ನೋಡಿದ್ದಲ್ಲಿ ಭಗವದ್ಗೀತೆ ವಿಶ್ವವ್ಯಾಪಿ ಎನಿಸಿಕೊಳ್ಳುತ್ತಿತ್ತೇ? ಸಾಹಿತ್ಯವೆಂದರೆ ಜ್ಞಾನದ ಸಾಧನಗಳು,ಜಾಗೃತಿಯ ಚೇತನಗಳು.. ಇಂತಹ ಪುಸ್ತಕಗಳನ್ನೋದಿ ವಿವೇಕಿಗಳಾಗಲೂ ಬಹುದು, ವಿಮರ್ಶಕರಾಗಲೂಬಹುದು.ಪುಸ್ತಕಗಳ ವಿಮರ್ಶೆ ಓದುಗರಿಗೆ ಬಿಟ್ಟದ್ದು, ಅಭಿವ್ಯಕ್ತಿ ಸ್ವಾತಂತ್ರ ಎಲ್ಲರಿಗೂ ಇದೆ ಎನ್ನವುದು ನಿಜವಾದರೂ ಅಭಿವ್ಯಕ್ತಿಯ ಹೆಸರಲ್ಲಿ ಮನಬಂದಂತೆ ಹೇಳಿಕೆಗಳನ್ನು ನೀಡಿ ಪುಸ್ತಕಗಳನ್ನು ಸುಡುವುದು ಪರಿಹಾರವೆಂದು ವಾದಿಸುವುದು ಭ್ರಮೆಯಲ್ಲದೇ ಇನ್ನೇನು? ಪ್ರತಿಯೊಂದನ್ನೂ ತಾರ್ಕಿಕ ಮಟ್ಟದಲ್ಲೇ ವಿಮರ್ಶಿಸುತ್ತಾ ಹೋದರೆ ಹೊಸ ಹೊಸ ರೀತಿಯ ‘ಇಸಂ’ಗಳ ಸೃಷ್ಟಿಯಾಗುತ್ತಾ ಹೋಗುವುದೇ ಹೊರತು ಬೌದ್ಧಿಕ ಪರಾಮರ್ಶೆಯಾಗದು.

ಮತ್ತಷ್ಟು ಓದು »

30
ಏಪ್ರಿಲ್

ಗಟ್ಟಿದನಿಯಲ್ಲಿ ಹೇಳುತ್ತಿದ್ದೇನೆ: “ನಮಗೆ ಸಾವೇ ಇಲ್ಲ”

– ಪ್ರೇಮಶೇಖರ

ಪ್ರಿಯ ಓದುಗರೇ,

ಆತ್ಮವಿಶ್ವದಲ್ಲಿ ಮಾನವ ಏಕಾಂಗಿಯಲ್ಲ : ಒಂದು ಜಿಜ್ಞಾಸೆ – ಭಾಗ ೧
ಬೆತ್ತಲೆ ಅಲೆಮಾರಿ ಇದ್ದಕ್ಕಿದ್ದಂತೆ ನಾಗರಿಕ ಮಾನವನಾದ! – ಭಾಗ ೨
ಮಂಗಳನ ಅಂಗಳದಿಂದ ನೆಫಿಲಿಂ ನೆಲಕ್ಕೊಂದು ಯಾನ – ಭಾಗ ೩
ಈ ಭೂಮಿಯೆಂಬ ಗ್ರಹವೊಂದು ರಿಮ್ಯಾಂಡ್ ಹೋಮ್ – ಭಾಗ ೪

ಅನ್ಯಲೋಕ ಜೀವಿಗಳ ಬಗೆಗಿನ ಲೇಖನಸರಣಿ ಮೆಚ್ಚುಗೆಗೆ ಪಾತ್ರವಾದಂತೇ ಅನೇಕ ಪ್ರಶ್ನೆಗಳನ್ನೂ ಹುಟ್ಟುಹಾಕಿದೆ.ಮೆಚ್ಚುಗೆಯ ಪತ್ರಗಳಿಗೆ ಖುಷಿಪಟ್ಟು ವೈಯುಕ್ತಿಕವಾಗಿ ಕೃತಜ್ಞತೆ ಹೇಳಿದ್ದೇನೆ, ಪ್ರಶ್ನೆಗಳಿಗೆ ಸಮಾಧಾನ ಹೇಳಲೂ ಪ್ರಯತ್ನಿಸಿದ್ದೇನೆ.  ಈ ಪ್ರಶ್ನೆಗಳು ನಿಮ್ಮವೂ ಆಗಿರಬಹುದು, ವಿವರಣೆಗಳನ್ನು ನೀವೂ ಬಯಸಿರಬಹುದು,ಎಲ್ಲ ಪ್ರಶ್ನೆಗಳಿಗೂ ಒಟ್ಟಿಗೆ ಪೂರಕ ವಿವರಗಳೊಂದಿಗೆ ಇಲ್ಲಿ ಉತ್ತರಿಸುವುದು ಈಗ ನನ್ನ ಕರ್ತವ್ಯ ಎಂದು ಭಾವಿಸುತ್ತೇನೆ.ಯಾರಿಗೆ ಗೊತ್ತು, ಇದು ಯಾವುದೋ ಜನ್ಮದ ಯಾವುದೋ ಲೆಕ್ಕದ “ಸರಿಮಾಡುವಿಕೆ”ಯಾಗಿರಲೂಬಹುದು! ನಿಮ್ಮನಿಮ್ಮ ಭಾವಕ್ಕೆ, ನಿಮ್ಮನಿಮ್ಮ ಭಕುತಿಗೆ ಅನುಗುಣವಾಗಿ ಉತ್ತರವೆಂದಾಗಲೀ, ವಿವರಣೆಯೆಂದಾಗಲೀ ಪರಿಹಾರವೆಂದಾಗಲೀ ತೆಗೆದುಕೊಳ್ಳಿ.

ಪ್ರಶ್ನೆಗಳಲ್ಲಿ ಮುಖ್ಯವಾದುವನ್ನು ಆಯ್ದು ಸ್ಥೂಲವಾಗಿ ಎರಡು ಗುಂಪುಗಳನ್ನಾಗಿಸಿಕೊಳ್ಳುತ್ತೇನೆ.
1.‘ಸತ್ತ’ ನಂತರ ಏನಾಗುತ್ತದೆ? ಎಲ್ಲಿಗೆ ಹೋಗುತ್ತೇವೆ?
2. ಕೌಟುಂಬಿಕ ಸಂಬಂಧಗಳ ತೊಡಕುಗಳು, ಅವೇಕೆ ಅಸಹನೀಯವಾಗುತ್ತವೆ, ಅವುಗಳಿಗೆ ಪರಿಹಾರವೇ ಇಲ್ಲವೇ?  ಇವುಗಳನ್ನು ಒಂದೊಂದಾಗಿ ವಿಶ್ಲೇಷಣೆಗೆತ್ತಿಕೊಳ್ಳೋಣ.
ಮತ್ತಷ್ಟು ಓದು »