ವಿಷಯದ ವಿವರಗಳಿಗೆ ದಾಟಿರಿ

Posts tagged ‘ಆಧ್ಯಾತ್ಮ’

21
ಸೆಪ್ಟೆಂ

ಸದ್ಗುರು ಬ್ರಹ್ಮಾನಂದರ ೯೯ನೇ ವರ್ಷದ ಆರಾಧನಾ ಪುಣ್ಯಸ್ಮರಣೆ

– ಚೈತನ್ಯ ಮಜಲುಕೋಡಿ

ಸದ್ಗುರು ಬ್ರಹ್ಮಾನಂದರ ೯೯ನೇ ವರ್ಷದ ಆರಾಧನಾ ಪುಣ್ಯಸ್ಮರಣೆಯ ಪ್ರಯುಕ್ತ. ಸದ್ಗುರುವಿನ ಉಪದೇಶ ಆಶೀರ್ವಾದಗಳು ಸದಾ ನಮ್ಮಲ್ಲಿ ಜಾಗೃತವಾಗಿರಲೆಂದು ಆಶಿಸುತ್ತಾ.

ಕೆಲಕಾಲದ ಹಿಂದೆ ಶ್ರೀ ಲೋಕಾಭಿರಾಮ ಮಾಸಪತ್ರಿಕೆಗೆ ಬರೆದ ಸಣ್ಣ ಲೇಖನ.

ಶ್ರೀ ಬ್ರಹ್ಮಾನಂದ ಮಹಾರಾಜರು ಹೇಳಿದ ಮೋಕ್ಷ ಪ್ರಾಪ್ತಿಯ ಗುಟ್ಟು ಲೇಖನದ ನಂತರ ಕೊಟ್ಟಿದೆ.

ಮೋಕ್ಷಪ್ರಾಪ್ತಿಯ ಗುಟ್ಟು ಒಂದು ಜಿಜ್ಞಾಸೆ: ಮತ್ತಷ್ಟು ಓದು »

30
ಮೇ

ಗೀತೆಯನ್ನು ಅರ್ಥೈಸಿಕೊಳ್ಳಲಾಗದವರು ಬದುಕಿನ ವಾಸ್ತವಗಳನ್ನು ಅರಗಿಸಿಕೊಳ್ಳಲಾರರು

– ಮಯೂರ ಲಕ್ಷ್ಮಿ

“ಈ ಜಗತ್ತು ಭಗವಂತನ ಸೃಷ್ಟಿ ಎನ್ನುವ ವಿಚಾರವು ಭಗವದ್ಗೀತೆಯನ್ನು ಓದಿದಾಗ ಅರಿವಾಯಿತು… ಈ ವಿಚಾರದ ಮುಂದೆ ಇನ್ನೆಲ್ಲಾ ಆಲೋಚನೆಗಳೂ ಗೌಣವೆನಿಸಿತು” – ಆಲ್ಬರ್ಟ್ ಐನ್ ಸ್ಟೀನ್

ಭಗವದ್ಗೀತೆಭಗವದ್ಗೀತೆಯನ್ನು ಉದಾತ್ತ ಮನಸ್ಸುಗಳಿಂದ ವಿಶಾಲ ಹೃದಯಗಳಿಂದ ಅರ್ಥಮಾಡಿಕೊಳ್ಳುವವರಿಗೆ ಅದು ಸಕ್ಕರೆಯಂತೆ ಸಿಹಿ, ಅತ್ಯಂತ ಸರಳವಾದ ರೀತಿಯಲ್ಲಿ ಮನುಷ್ಯನು ಈ ಭೂಮಿಯಲ್ಲಿ ನಡೆದುಕೊಳ್ಳಬೇಕಾದ ರೀತಿಯನ್ನು ತಿಳಿಸುವ ಸುಲಭ ಸಾಧನ, ಸಂಕುಚಿತ ಮನಸ್ಸುಗಳಿಂದ ಅದರ ವ್ಯಾಪ್ತಿಯನ್ನು ಪೂರ್ವಾಗ್ರಹಪೀಡಿತರಾಗಿ ತಪ್ಪುಗಳನ್ನೇ ಹುಡುಕಿ ನೋಡುವವರಿಗೆ ಅದು ಅರ್ಥವಾಗದ ಕ್ಲಿಷ್ಟ ಗ್ರಂಥವೇ ಸರಿ! ಇನ್ನು ಗೀತೆ ಎಂದರೆ ಕೋಮುವಾದಿ ಗ್ರಂಥ ಶ್ರೀಕೃಷ್ಣನೆಂದರೆ ಸ್ತ್ರೀಲೋಲ ಎಂಬ ಭಾವನೆಯಿಂದಲೇ ನೋಡುವವರಿಗೆ ಇದು ಅರ್ಥವಾದೀತಾದರೂ ಹೇಗೆ? ಕೃಷ್ಣನ ರಾಜನೀತಿಯ ನೈಪುಣ್ಯತೆಯನ್ನು ಮುತ್ಸದ್ದಿತನವನ್ನೂ ಅವನ ಸಮಾಜ ಪರಿವರ್ತನೆಯ ಮತ್ತು ಧರ್ಮರಕ್ಷಣೆಯ ಸಂಕಲ್ಪವನ್ನು ಒಪ್ಪದವರು ಅವನ ವಾಣಿಯಾದ ಗೀತೆಯನ್ನು ಸ್ವೀಕರಿಸುವುದು ಸಾಧ್ಯವಿಲ್ಲಾ. ಹಿಂದೂ ಧರ್ಮಗ್ರಂಥಗಳನ್ನು ಟೀಕಿಸಿ ಬುದ್ಧಿವಂತರೆನಿಸಿಕೊಳ್ಳುವುದು ಕೆಲವರ ಹವ್ಯಾಸ.

ಪ್ರಪಂಚದ ಎಲ್ಲಾ ಮಹನೀಯರೂ ದಾರ್ಶನಿಕರೂ ಗೀತೆಯನ್ನು ಕೋಮುವಾದವನ್ನು ಪ್ರಚೋದಿಸುವ ಗ್ರಂಥವೆಂದೇ ನೋಡಿದ್ದಲ್ಲಿ ಭಗವದ್ಗೀತೆ ವಿಶ್ವವ್ಯಾಪಿ ಎನಿಸಿಕೊಳ್ಳುತ್ತಿತ್ತೇ? ಸಾಹಿತ್ಯವೆಂದರೆ ಜ್ಞಾನದ ಸಾಧನಗಳು,ಜಾಗೃತಿಯ ಚೇತನಗಳು.. ಇಂತಹ ಪುಸ್ತಕಗಳನ್ನೋದಿ ವಿವೇಕಿಗಳಾಗಲೂ ಬಹುದು, ವಿಮರ್ಶಕರಾಗಲೂಬಹುದು.ಪುಸ್ತಕಗಳ ವಿಮರ್ಶೆ ಓದುಗರಿಗೆ ಬಿಟ್ಟದ್ದು, ಅಭಿವ್ಯಕ್ತಿ ಸ್ವಾತಂತ್ರ ಎಲ್ಲರಿಗೂ ಇದೆ ಎನ್ನವುದು ನಿಜವಾದರೂ ಅಭಿವ್ಯಕ್ತಿಯ ಹೆಸರಲ್ಲಿ ಮನಬಂದಂತೆ ಹೇಳಿಕೆಗಳನ್ನು ನೀಡಿ ಪುಸ್ತಕಗಳನ್ನು ಸುಡುವುದು ಪರಿಹಾರವೆಂದು ವಾದಿಸುವುದು ಭ್ರಮೆಯಲ್ಲದೇ ಇನ್ನೇನು? ಪ್ರತಿಯೊಂದನ್ನೂ ತಾರ್ಕಿಕ ಮಟ್ಟದಲ್ಲೇ ವಿಮರ್ಶಿಸುತ್ತಾ ಹೋದರೆ ಹೊಸ ಹೊಸ ರೀತಿಯ ‘ಇಸಂ’ಗಳ ಸೃಷ್ಟಿಯಾಗುತ್ತಾ ಹೋಗುವುದೇ ಹೊರತು ಬೌದ್ಧಿಕ ಪರಾಮರ್ಶೆಯಾಗದು.

ಮತ್ತಷ್ಟು ಓದು »

11
ಮೇ

ಮಹಾತ್ಮ ಬಸವಣ್ಣನವರು ನಮಗಿಂದು ಎಷ್ಟು ಪ್ರಸ್ತುತ?

– ಡಾ. ಸಂಗಮೇಶ ಸವದತ್ತಿಮಠ     

Basavannaಬಸವಣ್ಣನವರೆಂಬ ಮಹಾತ್ಮರ ಬಗ್ಗೆ ಯಾರಿಗೆ ಗೊತ್ತಿಲ್ಲ?  ಬಿಜ್ಜಳನ ಆಸ್ಥಾನದಲ್ಲಿದ್ದು ರಾಜಕಾರಣಿ, ಆಡಳಿತಗಾರ; ಧರ್ಮತತ್ತ್ವಪ್ರಮೇಯಗಳನ್ನು ಹೊಸ ಆನ್ವಯಿಕತೆಯಿಂದ ಪ್ರಯೋಜನಕಾರಿಯಾಗಿಸಿದ್ದರಿಂದ ತತ್ತ್ವಜ್ಞಾನಿ; ಧರ್ಮದ ಚೌಕಟ್ಟಿನೊಳಗೆ ಭಕ್ತಿಯ ಸೋಪಾನಗಳನ್ನು ಇಟ್ಟು, ಆಧ್ಯಾತ್ಮದ ಬೆಳಸು ತೆಗೆದ ಶ್ರೇಷ್ಠ ಆಧ್ಯಾತ್ಮಸಂತ,ಆರೋಗ್ಯಪೂರ್ಣ ಸಮಾಜ ನಿರ್ಮಾಣದ ಕನಸುಗಾರ, ಧೀಮಂತ ಸಮಾಜಪುರುಷ, ಬದಲಾವಣೆಯ ಹರಿಕಾರ ಕ್ರಾಂತಿಪುರುಷ ಬಸವಣ್ಣ.

ವೇದಿಕೆ, ಸಂದರ್ಭ ಸಿಕ್ಕರೆ ಸಾಕು, “12ನೇ ಶತಮಾನದ ಶರಣರ ಜೀವನ ಮತ್ತು ಸಂದೇಶಗಳು ನಮ್ಮ ಇಂದಿನ  ಕಾಲದಲ್ಲಿಯೂ ಬಹಳ ಪ್ರಸ್ತುತ, ಮಾದರಿ, ಅನುಸರಿಸಲು ಯೋಗ್ಯ” ಎಂದೆಲ್ಲ ಒತ್ತಿ ಒತ್ತಿ ಹೇಳುತ್ತೇವೆ. ವಾಸ್ತವವಾಗಿ ಅವುಗಳ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದೇವೆ. ಇದು ವಿಪರ್ಯಾಸವಲ್ಲದೆ ಮತ್ತೇನು?  ಧಾರ್ಮಿಕ, ಸಾಮಾಜಿಕ, ರಾಜಕೀಯ ಯಾವುದೇ ಕ್ಷೇತ್ರವಿರಲಿ ಅಲ್ಲಿ ಬಸವಣ್ಣನವರು ಯಾವುದನ್ನು ಹೇಳಿಲ್ಲವೋ ಅದನ್ನು ನಾವು ಮಾಡುತ್ತ ಅವರಿಗೆ ದ್ರೋಹ ಬಗೆಯುತ್ತಿದ್ದೇವೆ ಅನ್ಯಾಯಮಾಡುತ್ತಿದ್ದೇವೆ. ವಚನಗಳ ಪ್ರಸ್ತುತತೆಯ ಪ್ರಸ್ತಾಪ ಮಾಡುವವರು ಸಾಮಾನ್ಯವಾಗಿ ಬಸವಣ್ಣನವರ ಸಾಮಾಜಿಕ ರಾಜಕೀಯ ವಿಷಯಗಳು ಮತ್ತು ಆಚರಣಾತ್ಮಕ ವಿಷಯಗಳನ್ನು ಒತ್ತುಕೊಟ್ಟು ಹೇಳುತ್ತಾರೆ. ಸರಿ, ಆದರೆ  ಬಸವಣ್ಣನವರು ಪರಮಾರ್ಥ,ಶಿವಯೋಗ,ಆಧ್ಯಾತ್ಮ ವಿಷಯಗಳನ್ನೂ ಕೂಡ ಅಷ್ಟೇ ಗಂಭೀರವಾಗಿಯೇ ತಗೆದುಕೊಂಡವರು.ಅಂಥ ವಿಷಯಗಳು ಈಗ ನಮಗೆ ಎಷ್ಟು ಪ್ರಸ್ತುತ? ಎಂಬುದನ್ನು ನಾವು ಬಹುತೇಕ ಬದಿಗೆ ಸರಿಸಿ ಅವರು ಲೌಕಿಕದ ಬಗ್ಗೆ ಹೇಳಿದ್ದನ್ನೇ ಪ್ರಸ್ತುತತೆಗೆ ಹೆಚ್ಚು ಬಳಸಿಕೊಳ್ಳಲಾಗುತ್ತಿದೆ. ಬಸವಣ್ಣನವರು ತೆರೆದ ಮನಸ್ಸಿನಿಂದ ಲೋಕವ್ಯವಹಾರವನ್ನು,ಪರಮಾರ್ಥವನ್ನು ಬಗಿದು ನೋಡಿದವರು. ಅವರಿಗೆ ಲೌಕಿಕ ಎನ್ನುವುದು ವರ್ಜ್ಯವಾಗಿರಲಿಲ್ಲ. ಆದರೆ ಬರೀ ಲೌಕಿಕದಲ್ಲೇ ತೊಳಲಾಡಿದರೆ ಪ್ರಾಣಿಗೂ ಮನುಷ್ಯನಿಗೂ ವ್ಯತ್ಯಾಸ ಇರುವುದಿಲ್ಲ. ಮನುಷ್ಯನ ಬದುಕಿನ ಸಾರ್ಥಕತೆ ಇರುವುದು ಲೌಕಿಕವನ್ನು ಸಾತ್ವಿಕವಾಗಿ ಅನುಭವಿಸುತ್ತಲೇ ಪರಮಾರ್ಥದ ಮೂಲಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದರಲ್ಲಿದೆ ಎಂಬುದನ್ನು ಅವರು ಆಚರಿಸಿ ತೋರಿಸಿಕೊಟ್ಟರು.
ಮತ್ತಷ್ಟು ಓದು »

30
ಏಪ್ರಿಲ್

ಗಟ್ಟಿದನಿಯಲ್ಲಿ ಹೇಳುತ್ತಿದ್ದೇನೆ: “ನಮಗೆ ಸಾವೇ ಇಲ್ಲ”

– ಪ್ರೇಮಶೇಖರ

ಪ್ರಿಯ ಓದುಗರೇ,

ಆತ್ಮವಿಶ್ವದಲ್ಲಿ ಮಾನವ ಏಕಾಂಗಿಯಲ್ಲ : ಒಂದು ಜಿಜ್ಞಾಸೆ – ಭಾಗ ೧
ಬೆತ್ತಲೆ ಅಲೆಮಾರಿ ಇದ್ದಕ್ಕಿದ್ದಂತೆ ನಾಗರಿಕ ಮಾನವನಾದ! – ಭಾಗ ೨
ಮಂಗಳನ ಅಂಗಳದಿಂದ ನೆಫಿಲಿಂ ನೆಲಕ್ಕೊಂದು ಯಾನ – ಭಾಗ ೩
ಈ ಭೂಮಿಯೆಂಬ ಗ್ರಹವೊಂದು ರಿಮ್ಯಾಂಡ್ ಹೋಮ್ – ಭಾಗ ೪

ಅನ್ಯಲೋಕ ಜೀವಿಗಳ ಬಗೆಗಿನ ಲೇಖನಸರಣಿ ಮೆಚ್ಚುಗೆಗೆ ಪಾತ್ರವಾದಂತೇ ಅನೇಕ ಪ್ರಶ್ನೆಗಳನ್ನೂ ಹುಟ್ಟುಹಾಕಿದೆ.ಮೆಚ್ಚುಗೆಯ ಪತ್ರಗಳಿಗೆ ಖುಷಿಪಟ್ಟು ವೈಯುಕ್ತಿಕವಾಗಿ ಕೃತಜ್ಞತೆ ಹೇಳಿದ್ದೇನೆ, ಪ್ರಶ್ನೆಗಳಿಗೆ ಸಮಾಧಾನ ಹೇಳಲೂ ಪ್ರಯತ್ನಿಸಿದ್ದೇನೆ.  ಈ ಪ್ರಶ್ನೆಗಳು ನಿಮ್ಮವೂ ಆಗಿರಬಹುದು, ವಿವರಣೆಗಳನ್ನು ನೀವೂ ಬಯಸಿರಬಹುದು,ಎಲ್ಲ ಪ್ರಶ್ನೆಗಳಿಗೂ ಒಟ್ಟಿಗೆ ಪೂರಕ ವಿವರಗಳೊಂದಿಗೆ ಇಲ್ಲಿ ಉತ್ತರಿಸುವುದು ಈಗ ನನ್ನ ಕರ್ತವ್ಯ ಎಂದು ಭಾವಿಸುತ್ತೇನೆ.ಯಾರಿಗೆ ಗೊತ್ತು, ಇದು ಯಾವುದೋ ಜನ್ಮದ ಯಾವುದೋ ಲೆಕ್ಕದ “ಸರಿಮಾಡುವಿಕೆ”ಯಾಗಿರಲೂಬಹುದು! ನಿಮ್ಮನಿಮ್ಮ ಭಾವಕ್ಕೆ, ನಿಮ್ಮನಿಮ್ಮ ಭಕುತಿಗೆ ಅನುಗುಣವಾಗಿ ಉತ್ತರವೆಂದಾಗಲೀ, ವಿವರಣೆಯೆಂದಾಗಲೀ ಪರಿಹಾರವೆಂದಾಗಲೀ ತೆಗೆದುಕೊಳ್ಳಿ.

ಪ್ರಶ್ನೆಗಳಲ್ಲಿ ಮುಖ್ಯವಾದುವನ್ನು ಆಯ್ದು ಸ್ಥೂಲವಾಗಿ ಎರಡು ಗುಂಪುಗಳನ್ನಾಗಿಸಿಕೊಳ್ಳುತ್ತೇನೆ.
1.‘ಸತ್ತ’ ನಂತರ ಏನಾಗುತ್ತದೆ? ಎಲ್ಲಿಗೆ ಹೋಗುತ್ತೇವೆ?
2. ಕೌಟುಂಬಿಕ ಸಂಬಂಧಗಳ ತೊಡಕುಗಳು, ಅವೇಕೆ ಅಸಹನೀಯವಾಗುತ್ತವೆ, ಅವುಗಳಿಗೆ ಪರಿಹಾರವೇ ಇಲ್ಲವೇ?  ಇವುಗಳನ್ನು ಒಂದೊಂದಾಗಿ ವಿಶ್ಲೇಷಣೆಗೆತ್ತಿಕೊಳ್ಳೋಣ.
ಮತ್ತಷ್ಟು ಓದು »

19
ಡಿಸೆ

ಭಗವದ್ಗೀತೆಯ ನೈತಿಕ ಜಿಜ್ಞಾಸೆ

– ರಮಾನಂದ ಐನಕೈ

ಭಗವದ್ಗೀತೆಭಗವದ್ಗೀತೆ ಭಾರತೀಯರ ಅತ್ಯಂತ ಪವಿತ್ರವಾದ ಗ್ರಂಥ. ಆದರೆ ಕಳೆದ ಅನೇಕ ವರ್ಷಗಳಿಂದ ಈ ಗ್ರಂಥ ವಿವಾದಕ್ಕೆ ಎಡೆಯಾಗುತ್ತಲಿದೆ. ಭಗವದ್ಗೀತೆಯನ್ನು ಟೀಕಿಸುವ ಬಹುತೇಕ ಜನ ಅದನ್ನು ಓದಿಯೇ ಇಲ್ಲ. ಇನ್ನೂ ಕೆಲವು ಓದಿದವರಿಗೆ ಅದು ಅರ್ಥವೇ ಆಗಿಲ್ಲ. ಅದನ್ನು ಓದಿ ಅರ್ಥಮಾಡಿಕೊಂಡವರಿಗೆ  ಈ ವಿವಾದ ಎಬ್ಬಿಸಿದವರು ಹಾಸ್ಯಾಸ್ಪದರಾಗಿ ಕಾಣುತ್ತಿದ್ದಾರೆ. ಇಷ್ಟೆಲ್ಲ ಗೊಂದಲವಾಗಲು ಮುಖ್ಯ ಕಾರಣವೆಂದರೆ ನಾವು ಭಗವದ್ಗೀತೆಯನ್ನು ಗೃಹಿಸುತ್ತಿರುವ ರೀತಿ. ಭಗವದ್ಗೀತೆಯನ್ನುವುದು ಒಂದು ಕತೆಯಲ್ಲ. ಅಥವಾ ಬೈಬಲ್, ಕುರಾನುಗಳಂತೆ ಧರ್ಮಗ್ರಂಥವಲ್ಲ. ಅದು ಸಾಮಾಜಿಕ ವ್ಯವಸ್ಥೆಯನ್ನು ನಿರ್ದೇಶಿಸಲು ಹುಟ್ಟಿಕೊಂಡ ಸಂವಿಧಾನವೂ ಅಲ್ಲ. ಭಗವದ್ಗೀತೆಯೆಂದರೆ ಬದುಕಿನ ಜಿಜ್ಞಾಸೆ. ಮನುಷ್ಯ ನೆಮ್ಮದಿಯಿಂದ ಬದುಕಲು ದಾರಿತೋರಿಸುವ ಮಾರ್ಗದರ್ಶಿ. ಹೀಗೆ ಅರ್ಥೈಸಿಕೊಂಡಾಗ ಭಗವದ್ಗೀತೆ ಪ್ರತಿಯೊಬ್ಬರಿಗೆ ನೀತಿಪಾಠವಾಗಿ ತೆರೆದುಕೊಳ್ಳುತ್ತದೆ.

ವಸಾಹತುಶಾಹಿ ಆಳ್ವಿಕೆಯ ಜೊತೆಗೇ ಭಗವದ್ಗೀತೆಯನ್ನು ಬೇರೆ ರೀತಿಯಲ್ಲಿ ಅರ್ಥೈಸುವ ಚಿಂತನಾಪರಂಪರೆ ಬೆಳೆದುಬಂತು. ಏಕೆಂದರೆ ಪಾಶ್ಚಾತ್ಯರು ಪ್ರೊಟೆಸ್ಟಾಂಟ್ ವಿಚಾರಧಾರೆಯ ನೆಲೆಯಲ್ಲಿ ಭಗವದ್ಗೀತೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ಹಾಗಾಗಿ ಅವರಿಗೆ ಭಗವದ್ಗೀತೆ ರಿಲಿಜನ್ನಿನ ಜಿಜ್ಞಾಸೆಯಾಯಿತೇ ವಿನಃ ಬದುಕಿನ ಜಿಜ್ಞಾಸೆಯಾಗಿ ಕಾಣಲೇಇಲ್ಲ. ಅದಕ್ಕೆ ಮುಖ್ಯ ಕಾರಣ ಸಾಂಸ್ಕೃತಿಕ ವೈರುದ್ಧ್ಯತೆ. ಇದೇ ಮುಂದೆ ಸೆಕ್ಯುಲರ್ ಚಿಂತನಾ ವಿಧಾನದಲ್ಲೂ ಮುಂದುವರಿಯುತ್ತಾ ಬಂತು. ಇದು ಇಂದು ಆಧುನಿಕ ಭಾರತದಲ್ಲಿ ಭಗವದ್ಗೀತೆಯ ಕುರಿತಾಗಿ ಅಖಾಡವನ್ನೇ ನಿರ್ಮಾಣ ಮಾಡುತ್ತಲಿದೆ. ಹಾಗಾಗಿ ಭಗವದ್ಗೀತೆಯಲ್ಲಿ ಏನಿದೆ ಮತ್ತು ಅದು ಏನು ಹೇಳುತ್ತಲಿದೆ ಎಂಬುದನ್ನು ಈ ಶತಮಾನದ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವ ಅಗತ್ಯವಿದೆ.

ಮತ್ತಷ್ಟು ಓದು »

24
ಸೆಪ್ಟೆಂ

ಸೆಕ್ಸ್ ಗುರುವಿನ ಸನ್ನಿಧಿಯಲ್ಲಿ….

– ಚೇತನಾ ತೀರ್ಥಹಳ್ಳಿ

Oshoಓಶೋ!

ಈ ಹೆಸರು ಕಿವಿಗೆ ಬಿದ್ದ ಕ್ಷಣಕ್ಕೆ ನೆನಪಾಗೋದು ಅಮ್ಮನ ಆ ಅವತ್ತಿನ ತಟವಟ. “ಆ ಹಾಳಾದ xyz ತಾನು ಕೆಡೋದಲ್ದೆ ಊರು ಹಾಳು ಮಾಡ್ತಾನೆ. ಆ ಮನುಷ್ಯನ್ನ ನೋಡಿದ್ರೆ ಸ್ವಾಮೀಜಿ ಥರ ಕಾಣ್ತಾನಾ?”
ಅಪ್ಪ ಸಹೋದ್ಯೋಗಿ ಬಳಿಯಿಂದ ಮನೆಯಲ್ಲಿ ತಂದಿಟ್ಟುಕೊಂಡಿದ್ದ ಓಶೋ ಪುಸ್ತಕವನ್ನ ನೋಡೀ ನೋಡೀ ಸಿಡುಕುತ್ತಿದ್ದಳು. ಯಾರಾದ್ರೂ ನೋಡಿದ್ರೆ ಏನು ತಿಳಿದಾರು! ಅನ್ನುವ ಆತಂಕ ಜೊತೆಗೆ. ನಾನು ಕೇಳೀಕೇಳೀ ರೇಜಿಗೆ ಬಿದ್ದು ಕೇಳಿದ್ದೆ, “ಯಾಕೆ?”

ಬಹಳಷ್ಟು ಜನ ಓಶೋ ಬಗ್ಗೆ ತಳೆದಿರುವ ಅಭಿಪ್ರಾಯವನ್ನೆ ನನ್ನ ಮುಗ್ಧ ಅಮ್ಮನೂ ಹೇಳಿದ್ದಳು. ಅದು ಎಂಭತ್ತರ ದಶಕ. ಓಶೋ ಎಂಬ ಮಹಾ ಸಂತನ ಬಗ್ಗೆ ಭಾರತ ಮಾತ್ರವೇನು, ಪಶ್ಚಿಮ ದೇಶಗಳಲ್ಲೂ ಸಾಕಷ್ಟು ಪುಕಾರು ಹಬ್ಬಿದ್ದ ಕಾಲವದು. ಅಂಥ ಸಂದರ್ಭದಲ್ಲಿ ಅವಳ ಯೋಚನೆ ತಪ್ಪೇನೂ ಆಗಿರಲಿಲ್ಲ ಅನ್ನಿಸುತ್ತೆ. ಯಾಕಂದರೆ ಅದೇ ಅಮ್ಮ ಆಮೇಲೆ ನನ್ನ ಕಪಾಟಿನಿಂದ ಹಲವು ಓಶೋ ಪುಸ್ತಕಗಳನ್ನ ತೆಗೆದು ಕಣ್ಣಾಡಿಸಿದ್ದಾಳೆ; ಆಗೀಗ ಅದರ ಕೆಲವು ವಿಚಾರಗಳ ಉಲ್ಲೇಖವನ್ನೂ ಮಾಡುವಷ್ಟು ಬದಲಾಗಿದ್ದಾಳೆ.ಅದೇನೇ ಇರಲಿ, ನನಗೆ ಓಶೋ ಮೊದಲ ಬಾರಿ ಪರಿಚಯವಾಗಿದ್ದು ಹೀಗೆ. ಅದೇನು ತಿಕ್ಕಲುತನವೋ! ಅಮ್ಮ ಮಾಡಿದ್ದ ಆರೋಪವೇ ನನ್ನಲ್ಲಿ ಓಶೋ ಬಗ್ಗೆ ಕುತೂಹಲ ಹುಟ್ಟಿಸಿತ್ತು. ಇಷ್ಟೆಲ್ಲ ಬೈಸಿಕೊಳ್ಳುವ ಈ ಮನುಷ್ಯನ ಮಾತನ್ನ ಅಷ್ಟೊಂದು ಜನ ಕೇಳ್ತಾರೆ ಅಂದ್ರೆ ಸುಮ್ಮನೆನಾ? ಅನ್ನುವಂಥ ಕುತೂಹಲವದು. ಮುಂದೊಂದು ದಿನ ’ಶೂನ್ಯ ನಾವೆ’ ಏರಿ ಶುರುವಾದ ನನ್ನ ಓಶೋ ಯಾನ ಈ ಹೊತ್ತಿನವರೆಗೆ ಸೇರಿದೆ.

ಮತ್ತಷ್ಟು ಓದು »

8
ಜುಲೈ

’ಹರಶರಣ ದೆನಿಲೋನ ಹಾದಿಯಲ್ಲಿ’ ಶಿವಪ್ರಕಾಶರ ಲೇಖನಕ್ಕೊಂದು ಪ್ರತಿಕ್ರಿಯೆ

-ಬಾಲಚಂದ್ರ ಭಟ್

Danielouಈ ಲೇಖನ ಪ್ರಜಾವಾಣಿಯಲ್ಲಿ ಪ್ರಕಟವಾದ ಎಚ್.ಎಸ್.ಶಿವಪ್ರಕಾಶರ ಜುಲೈ ೫ ರಂದು ಪ್ರಕಟವಾದ ’ಹರಶರಣ ದೆನಿಲೋನ ಹಾದಿಯಲ್ಲಿ’ ಬರಹಕ್ಕೆ ಪ್ರತಿಕ್ರಿಯೆ. ಬಹಳಷ್ಟು ವಿಷಯಗಳನ್ನು ಲೇಖನದಲ್ಲಿ ಉಲ್ಲೇಖಿಸಿದ್ದನ್ನು ಓದಿದ ನಂತರ ಸ್ವಲ್ಪ ಲೇಖನ ಏನು ಹೇಳಹೊರಟಿದೆಯೆಂಬುದರ ಬಗ್ಗೆ ಗೊಂದಲ ಮೂಡಿತು. ನಾನು ತಿಳಿದುಕೊಂಡಂತೆ ಲೇಖಕರು ಒಟ್ಟಾರೆಯಾಗಿ ಏನು ಹೇಳುತ್ತಾರೆಂದರೆ,

೧. ಆಲೆನ್ ದೆನಿಲೋ ನ ವಿಚಾರಗಳು, ಬಹುತೇಕ ಭಾರತೀಯ ಆಧ್ಯಾತ್ಮಿಕ ಪರಿಕಲ್ಪನೆಗಳಿಗಿಂತ(‘ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತ’) ಭಿನ್ನವಾಗಿತ್ತು, ಹಾಗೂ

೨. ಭಾರತದ ಆಧ್ಯಾತ್ಮಿಕ ವಿಷಯಗಳ ಬಗ್ಗೆ ’ಸ್ಟೀರಿಯೊಟೈಪಡ್ ಪೌರಾತ್ಯ’ ಚಿಂತನೆಗಳಿಂದ, ಹಾಗೂ ವಸಾಹತುಶಾಹಿ ಪರಿಕಲ್ಪನೆಗಳಿಂದ ಹೊರತಾಗಿದ್ದವು.

ಈ ಮೇಲಿನ ಎರಡು ಲೇಖಕರ ಅಭಿಪ್ರಾಯಗಳನ್ನು ಈ ಕೆಳಗಿನಂತೆ ವಿಮರ್ಶಿಸಿದ್ದೇನೆ.ಹಾಗೆಯೆ ಪ್ರಶ್ನೆಗಳ ಮೂಲಕ ನನ್ನಲ್ಲಿನ ಗೊಂದಲಗಳನ್ನ ಪ್ರಸ್ತಾಪಿಸಿದ್ದೇನೆ. ತಪ್ಪಿದ್ದಲ್ಲಿ ಸರಿಪಡಿಸಿ.

೧. ನಾನು ಹಾಗೆ ತಿಳಿದುಕೊಳ್ಳಲು ಕಾರಣ ಶಿವಪ್ರಕಾಶರು ಹೀಗೆ ಉಲ್ಲೇಖಿಸಿರುವದು: “ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತವನ್ನೇ ಭಾರತದ ಸಾರ ಸರ್ವಸ್ವವೆನ್ನುವರು ಆ ಕಾಲದ ಬಹಳ ಮಂದಿ ವಿದ್ವಾಂಸರು. ಅವರಲ್ಲಿ ಬಹುತೇಕ ಪ್ರಭೃತಿಗಳು ಭಾರತೀಯರೆಂದರೆ ಜೀವನೋತ್ಸಾಹ, ರಾಗರತಿಗಳಿಲ್ಲದ ಓಡುಗಾಲ ಯೋಗಿಗಳೆಂದು ಬಗೆದಿದ್ದರು. ಆದರೆ ವಿದ್ವತ್ತು, ರಸಗ್ರಾಹಿತ್ವ ಮತ್ತು ವ್ಯಕ್ತಿಗತ ಆಧ್ಯಾತ್ಮಿಕ ಸಾಧನೆಗಳ ತ್ರಿವೇಣಿಸಂಗಮವಾಗಿದ್ದ ದೆನಿಲೋ ಒತ್ತು ನೀಡಿದ್ದು ಭಾರತೀಯರ ರಸವಿಮುಖಿಯಾದ ಸಮಣಪಂಥೀಯ ಅಧ್ಯಾತ್ಮವಾದಕ್ಕಲ್ಲ, ಐಂದ್ರಿಕ ಜಗತ್ತಿಗೆ ತನ್ನನ್ನು ಪೂರ್ಣವಾಗಿ ತೆರೆದುಕೊಂಡು ಹಾಕುವ ಪ್ರತಿಯೊಂದು ತುತ್ತನ್ನೂ ಬಿಂದುವಾಗಿ ಮಾಡಿಕೊಂಡ ಶೈವ-ಶಾಕ್ತರ ಪೂರ್ಣಾದ್ವೈತಕ್ಕೆ.”

ಮತ್ತಷ್ಟು ಓದು »