ಕೋಟಿ ಜನರ ಕಷ್ಟದಲ್ಲಿ ಕೋಟಿ-ಕೋಟಿಯನ್ನೆಣಿಸುವ ಮುನ್ನ..!!
– ಸುಜಿತ್ ಕುಮಾರ್
ಕೆಳಗಿನ ಕೆಲ ಪ್ರಶ್ನೆಗಳಿಗೆ ಸಾದ್ಯವಾದರೆ ನಿಮ್ಮ ಎದೆಯ ಮೇಲೆ ಕೈಯಿರಿಸಿ ಉತ್ತರಿಸಿ. ಕಳೆದ ತಿಂಗಳು ರಾಜ್ಯದಾದ್ಯಂತ ನಡೆದ ವೈದ್ಯರ ಮುಷ್ಕರವನ್ನು ನಿಜವಾಗಿಯೂ ನೀವು ಬೆಂಬಲಿಸುತ್ತೀರಾ? ಇಂದು ಕೆಲಸ ಮಾಡಿದರಷ್ಟೇ ನಾಳಿನ ಕೂಳನ್ನು ಕಾಣುವ ಕೋಟ್ಯಂತರ ಹೊಟ್ಟೆಗಳ ಮೇಲೆ ಲಕ್ಷ ಲಕ್ಷ ಹೊರೆಯನ್ನೊರಿಸುವ ಖಾಸಗಿ ಆಸ್ಪತ್ರೆಗಳ ದಬ್ಬಾಳಿಕೆಗೆ ಕಾನೂನಿನ ಚೌಕಟ್ಟಿನಲ್ಲಿ ಕಡಿವಾಣ ಹಾಕುವ ಒಂತಿನಿತು ಕಾನೂನು ನಿಮಗೆ ಬೇಡವೆನಿಸುವುದೇ? ವೈದ್ಯ ಹೇಳಿದ್ದೆ ರೋಗ, ನೀಡಿದ್ದೆ ಮದ್ದು ಎಂಬಂತಾಗಿರುವ ಸಂದರ್ಭದಲ್ಲಿ, ರೋಗಿಗಳ/ಜನತೆಯ ಹಿತದೃಷ್ಟಿಯಿಂದ ತರಲೆತ್ನಿಸುತ್ತಿರುವ ಕಾಯಿದೆಯ ನಿಜವಾದ ಉದ್ದೇಶ ನಿಮಗೆ ತಿಳಿದಿದೆಯೇ? ನಿಮ್ಮ ಹತ್ತಿರದವರೇ ಒಬ್ಬರು ತಕ್ಷಣಕ್ಕೆ ಯಾವುದಾದರೊಂದು ಪ್ರೈವೇಟ್ ಆಸ್ಪ್ರತ್ರೆಗೆ ಸೇರಿ ನಂತರ ಹಣ ಸಾಲುತ್ತಿಲ್ಲವೆನ್ನುತ್ತ ಜಿಲ್ಲೆಯ ಅಥವಾ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಬಂದು ಪಡುವ ವಿಪರ್ಯಾಸವನ್ನು ಕಣ್ಣು ಮುಚ್ಚಿಕೊಂಡು ನೀವು ಸಹಿಸುತ್ತೀರಾ? ಅದೇ ಪ್ರೈವೇಟ್ ಆಸ್ಪತ್ರೆಯಲ್ಲಿ ಸತ್ತ ಒಂದು ಬಡ ಹೆಣವನ್ನು ಹಿಂದಿರುಗಿಸಲೂ ಹಣದ ಬಿಲ್ಲನ್ನೇ ಮುಂದಿಟ್ಟು ಸತಾಯಿಸುವ ಕಟು ಹೃದಯಿಗಳನ್ನು ನೀವು ಹೊತ್ತು ಮೆರವಣಿಗೆ ಮಾಡುತ್ತೀರಾ? ಯಾರೋ ಪುಡಾರಿ ರಾಜಕಾರಣಿ ತನ್ನ ಬೇಳೆಯನ್ನು ಬೇಯಿಸಿಕೊಳ್ಳಲು ಅಂತಹ ಸಂಸ್ಥೆಗಳನ್ನು ವಿರೋಧಿಸಲಾರ ಎಂಬುದಾದರೆ ನೀವುಗಳು ಸಹ ‘ಕುರಿಗಳು ಸಾರ್ ಕುರಿಗಳು’ ಎಂಬಂತೆ ಆತನನ್ನೇ ಹಿಂಬಾಲಿಸುತ್ತೀರಾ? ಹೇಳಿ. ಇಂದು ಒಂದು ಸಾಧಾರಣ ಜ್ವರಕ್ಕೆ ಪ್ಯಾರಾ-ಅಸಿಟಮೋಲ್ ಮಾತ್ರೆಯನ್ನು ಕೊಡಲೇ ಸಾವಿರ ಸಾವಿರ ರೂಪಾಯಿಗಳನ್ನು ಪೀಕುವ ಆಸ್ಪತ್ರೆಗಳು ದಿನಕ್ಕೆ ಇನ್ನೂರು ರೂಪಾಯಿ ಹಣವನ್ನು ಸಂಪಾದಿಸುವ ವ್ಯಕ್ತಿಯನ್ನು ಅಂತಹ ಆಸ್ಪತ್ರೆಗಳ ಹತ್ತಿರವೂ ಸುಳಿಯದಂತೆ ಮಾಡುತ್ತಿರುವುದು ಎಷ್ಟು ಮಟ್ಟಿನ ನ್ಯಾಯ? ಇವರಿಗೆ ಜಾಗ, ಓದು, ಕಟ್ಟಡ ಎಲ್ಲವೂ ಬಡ ಜನರ ದುಡ್ಡಿನಲ್ಲಿ ನಡೆಯುವ ರಾಜ್ಯಸರ್ಕಾರದ್ದೇ ಬೇಕು ವಿನಃ ಅಂತಹ ಬಡ ಜನರ ಶೂಶ್ರುಷೆಯಲ್ಲ. ದಿನಪೂರ್ತಿ ಇಂಗ್ಲಿಷಿನ ಪೋಷಾಕುಗಳನ್ನೇ ತೋರುತ್ತ 1 ನಿಮಿಷ ತೋರ್ಪಡಿಕೆಗೆ ಏನೋ ಎಂಬಂತೆ ಕನ್ನಡ ಕನ್ನಡ ಎಂದು ಬೊಬ್ಬೆಯೊಡೆಯುವ ಹಲವರು ಇದೇ ಕನ್ನಡ ನಾಡಿನಲ್ಲಿ ಅವೇ ಇಂಗ್ಲಿಷ್ ಔಷಧಗಳು ತಮ್ಮ ರಣಬೆಲೆಯ ಬಲದಲ್ಲಿ ನಮ್ಮವರನ್ನು ಕಬ್ಬಿನ ಜಲ್ಲೆಯಂತೆ ಅರೆಯುತ್ತಿರುವುದು ನಿಮಗೆ ತಪ್ಪು ಎನಿಸುವುದಿಲ್ಲವೇ? ಮತ್ತಷ್ಟು ಓದು
ಯೋಗದ ಮಹತ್ವ ಹಾಗೂ ಅರಿವು
– ಗೀತಾ ಹೆಗ್ಡೆ
ಈ ದಿನ ಅಂತಃರಾಷ್ಟ್ರೀಯ ಯೋಗ ದಿನ. ಇತ್ತೀಚಿನ ದಿನಗಳಲ್ಲಿ ಈ ಯೋಗದ ಬಗ್ಗೆ ತುಂಬಾ ಪ್ರಚಾರ ಹಾಗೂ ಕಲಿಯುವವರು ಕೂಡಾ ಹೆಚ್ಚಾಗುತ್ತಿರುವುದು ಸಂತೋಷದ ಸಂಗತಿ. ಮತ್ತು ಪುರಾತನ ಕಾಲದ ಈ ವಿದ್ಯೆ ಜನ ಮೈಗೂಡಿಸಿಕೊಂಡು ಯೋಗದ ಮಹತ್ವ ತಿಳಿಯುವತ್ತ ದಾಪುಗಾಲು ಹಾಕುತ್ತಿದ್ದಾರೆ. ಹಾಗೂ ದಿನ ಹೋದಂತೆ ಆರೋಗ್ಯದತ್ತ ಕಾಳಜಿ, ಆಸ್ತೆ, ಔಷಧಿಗಳಿಂದ ಆಗುವ ದುಷ್ಪರಿಣಾಮಗಳು, ಅಯ್ಯೋ! ಹೀಗೆ ಇದ್ದರೆ ಮುಂದೇನಾಗುತ್ತದೊ ಅನ್ನುವ ಮನದೊಳಗಿನ ಗಾಬರಿ ಜನ ಆಹಾರ, ವ್ಯಾಯಾಮ, ವಾಕಿಂಗು, ಯೋಗದ ಕಡೆ ಹೆಚ್ಚು ಹೆಚ್ಚು ವಾಲುತ್ತಿರುವುದು ಹಾಗೂ ತಿಳಿದುಕೊಳ್ಳುವ ಆಸಕ್ತಿ ಅಧಿಕವಾಗುತ್ತಿರುವುದನ್ನು ಕಾಣಬಹುದು. ಮತ್ತಷ್ಟು ಓದು
ವೈದ್ಯಕೀಯ ವಿದ್ಯಾಲಯಗಳಲ್ಲಿ ಕಲಿಸದ ವಿಷಯವೇನೆಂದರೆ……!!
– ಗುರುರಾಜ್ ಕೊಡ್ಕಣಿ, ಯಲ್ಲಾಪುರ
ಅಸಲಿಗೆ ನಾನೇಕೆ ವೈದ್ಯನಾಗಬೇಕೆಂದುಕೊಂಡಿದ್ದೆ ಎನ್ನುವುದು ನನಗೆ ನೆನಪೇ ಇಲ್ಲ. ಆದರೆ ವೈದ್ಯನಾದ ಮೇಲೆ ನನ್ನ ವರ್ತನೆ ಉಳಿದೆಲ್ಲ ವೈದ್ಯರಿಗಿಂತ ತೀರ ಭಿನ್ನವೇನಾಗಿರಲಿಲ್ಲ. ನನ್ನಲ್ಲೊಂದು ಹೆಮ್ಮೆಯಿತ್ತು. ನಾನೊಬ್ಬ ವೈದ್ಯನೆನ್ನುವ ಗರ್ವ ಮೀರಿದ ಅಹಂಕಾರವಿತ್ತು. ನನ್ನಲ್ಲಿದ್ದ ಅಹಮಿಕೆಗೆ ಮೊದಲ ಪೆಟ್ಟು ಬಿದ್ದಿದ್ದು ಸರಿಸುಮಾರು ಮೂವತ್ತು ವರ್ಷಗಳ ಹಿಂದೆ. ಅದೊಂದು ನಸುಕಿನ ಜಾವಕ್ಕೆ ಮಹಿಳೆಯೊಬ್ಬಳು ಮೂವತ್ತರ ಹರೆಯದ ತನ್ನ ಪತಿಯ ಶವವನ್ನು ನಮ್ಮ ಆಸ್ಪತ್ರೆಗೆ ತಂದಿದ್ದಳು. ತನ್ನ ಗಂಡ ತೀರಿಕೊಂಡಿದ್ದಾನೆಂಬ ಸತ್ಯವನ್ನು ಅರಗಿಸಿಕೊಳ್ಳಲಾಗದ ಆಕೆ, ನನ್ನ ಮೊಣಕಾಲನ್ನು ಗಟ್ಟಿಯಾಗಿ ಹಿಡಿದುಕೊಂಡು ಬಿಕ್ಕುತ್ತ, “ಡಾಕ್ಟರ್, ನನ್ನ ಗಂಡ ಏಕೆ ಸತ್ತ.’? ಎಂದು ಪ್ರಶ್ನಿಸಿದಳು. ಅದೊಂದು ಪ್ರಶ್ನೆ ನಾನೊಬ್ಬ ದೊಡ್ಡ ವೈದ್ಯನೆನ್ನುವ ಗರ್ವವನ್ನು ಒಂದೇ ಪೆಟ್ಟಿಗೆ ಮುರಿದುಹಾಕಿತ್ತು. ಆಕೆ ತನ್ನ ಪತಿ’ಹೇಗೆ’ಸತ್ತ ಎಂದು ಪ್ರಶ್ನಿಸಿದ್ದರೆ ನಾನು ಆಕೆಗೆ ಹತ್ತಾರು ಕಾರಣಗಳನ್ನು ಕೊಡಬಹುದಿತ್ತು. ಅವನಿಗೆ ಹೃದಯಾಘಾತವಾಗಿದೆಯೆಂದೋ ಅಥವಾ ಅವನ ರಕ್ತದೊತ್ತಡ ಕುಸಿದಿದ್ದರಿಂದ ಸತ್ತನೆಂದೋ ಸುಳ್ಳುಹೇಳಿಬಿಡಬಹುದಾಗಿತ್ತು. ಆದರೆ ಆಕೆ ಕೇಳಿದ್ದು ತನ್ನ ಗಂಡ ‘ಏಕೆ’ ಸತ್ತ ಎನ್ನುವ ಪ್ರಶ್ನೆ. ನಿಜಕ್ಕೂ ಬಲು ಕ್ಲಿಷ್ಟ ಪ್ರಶ್ನೆಯದು. ಆತನಿಗೆ ಕೇವಲ ಮೂವತ್ತು ಚಿಲ್ಲರೆ ವರ್ಷಗಳಷ್ಟು ವಯಸ್ಸು. ಆತನ ರಕ್ತದೊತ್ತಡ, ಸಕ್ಕರೆಯ ಮಟ್ಟ ತೀರ ಸಾಮಾನ್ಯವಾಗಿದ್ದವು. ಹೃದಯವೂ ಗಟ್ಟಿಮುಟ್ಟಾಗಿಯೇ ಇತ್ತು. ಆದರೂ ಆತ ಏಕೆ ಸತ್ತ ಎನ್ನುವ ಪ್ರಶ್ನೆಗೆ ನನ್ನ ಬಳಿ ಉತ್ತರವಿರಲಿಲ್ಲ. ನಿಜ ಹೇಳಬೇಕೆಂದರೆ ಅಂಥದ್ದೊಂದು ಪ್ರಶ್ನೆಗೆ ಉತ್ತರ ವೈದ್ಯಕೀಯ ಲೋಕಕ್ಕೂ ಇದುವರೆಗೆ ಸಿಕ್ಕಿಲ್ಲ. ಅದೊಂದು ಪ್ರಶ್ನೆ ನನ್ನನ್ನು ತುಂಬ ಕಾಲ ಬೆನ್ನುಬಿಡದೇ ಕಾಡಿತ್ತು. ‘ಏಕೆ’ ಎನ್ನುವ ಸಂಕೀರ್ಣ ಪ್ರಶ್ನೆಯೇ ನನ್ನನ್ನು ತತ್ವಶಾಸ್ತ್ರ, ಧರ್ಮ, ವೇದಾಂತಗಳತ್ತ ಆಕರ್ಷಿಸಿತ್ತು. ಅಂತಹ ಸವಾಲಿನ ಜವಾಬು ಹುಡುಕುತ್ತ ಹೊರಟ ನನಗೆ ಆಧುನಿಕ ವೈದ್ಯ ಲೋಕದ ದೌರ್ಬಲ್ಯಗಳ ಪರಿಚಯವೂ ಆಯಿತು” ಮತ್ತಷ್ಟು ಓದು
ಇಪ್ಪತ್ತನೇ ಶತಮಾನದ ಭಾರತದಲ್ಲಿ ಯೋಗದ ಪುನರುತ್ಥಾನ
– ಶರತ್ ಹರಿಹರಪುರ ಸತೀಶ್
ಪದ್ಮಾಸನದಲ್ಲಿ (ಸಾಧ್ಯವಾದರೆ) ಕುಳಿತು, ಕಣ್ಣು ಮುಚ್ಚಿ ‘ಯೋಗ’ ಎಂಬುದನ್ನು ಮನಸಿನಲ್ಲೇ ಕಲ್ಪಿಸಿಕೊಂಡರೆ ನಿಮ್ಮ ಕಣ್ಣು ಮುಂದೆ ಬರುವ ಚಿತ್ರ ಯಾವುದು? ಟಿವಿಯಲ್ಲಿ ಬರುವ ಒಬ್ಬ ಭಾರತದ ವ್ಯಕ್ತಿಯಾಗಿರಬಹುದು (ಬಾಬಾ ರಾಮದೇವ್, ಫಿಲಂ ತಾರೆ, ಇತ್ಯಾದಿ) ಅಥವಾ ಒಬ್ಬ ಪಾಶ್ಚಾತ್ಯ ದೇಶದ ವ್ಯಕ್ತಿಯೇ ಆಗಿರಬಹುದು ……. ಅಲ್ಲವೇ? ಭಾರತದ ಓರ್ವ ಮಹಾನ್ ವ್ಯಕ್ತಿಯ ಮುಖಚಿತ್ರ ಯಾರಿಗೂ ಕಾಣಿಸುವುದಿಲ್ಲ. ಏಕೆಂದರೆ ಅಂತಹ ಮನುಷ್ಯ ಇದ್ದರು ಎನ್ನುವುದು ಅನೇಕರಿಗೆ ಗೊತ್ತೆಇಲ್ಲ.
ಪತಂಜಲಿ ಮಹರ್ಶಿಗಳು ಯೋಗ ಸೂತ್ರಗಳನ್ನು ಬರೆದು ಸುಮಾರು 2400 ವರ್ಷಗಳೇ ಆಗಿರಬಹುದು. ಮೊದಲಿಗೆ ಮುಸ್ಲಿಮರು, ನಂತರ ಬ್ರಿಟಿಷರ ದಬ್ಬಾಳಿಕೆಯಲ್ಲಿ ನಮ್ಮ ಗುರುಕುಲ ಶಿಕ್ಷಣ ಪದ್ಧತಿ ನಾಶವಾಯಿತು. ಇದರ ಜೊತೆಗೆ ಯೋಗಾಸನದ ವಿದ್ಯೆಯು ಕ್ಷೀಣವಾಯಿತು. ಇಪ್ಪತ್ತನೇ ಶತಮಾದಲ್ಲಿ ಅದಕ್ಕೆ ಪುನರ್ಜೀವ ನೀಡಿದವರೇ ‘ಶ್ರೀ ತಿರುಮಲೈ ಕೃಷ್ಣಮಾಚಾರ್ಯ’. ಇಡೀ ವಿಶ್ವದಲ್ಲಿ ಕೋಟ್ಯಾಂತ ಜನರು ವಿವಿಧ ಶೈಲಿಗಳಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಮೂಲ 125ಕ್ಕೂ ಹೆಚ್ಚು ವರುಷಗಳ ಹಿಂದೆ ಜನಿಸಿದ ಕೃಷ್ಣಮಾಚಾರ್ಯರು.
ಚಿತ್ರದುರ್ಗದಲ್ಲಿ ಜನಿಸಿದ ಕೃಷ್ಣಮಾಚಾರ್ಯರು (18 ನವೆಂಬರ್ 1888 – 28 ಫೆಬ್ರುವರೀ 1989) ಸಂಸ್ಕೃತ ಮತ್ತು ವೇದಗಳ ಜೊತೆಗೆ, ತಮ್ಮ ತಂದೆಯವರಾದ ‘ಶ್ರೀ ತಿರುಮಲೈ ಶ್ರೀನಿವಾಸ ತಾತಾಚಾರ್ಯ’ ಅವರಿಂದ ಯೋಗ ಹಾಗೂ ಪ್ರಾಣಾಯಾಮವನ್ನು ಕಲಿತರು. ಮೈಸೂರು, ಪಟ್ನಾ ಹಾಗೂ ಕಾಶಿಯಲ್ಲಿ ಶಡ್ದರ್ಶನಗಳಲ್ಲಿ ಪಾಂಡಿತ್ಯ ಪಡೆದರು. ಮಾನಸ ಸರೋವರದ ಬಳಿ ಒಂದು ಗುಹೆಯಲ್ಲಿ ವಾಸವಾಗಿದ್ದ ‘ರಾಮ ಮೋಹನ ಬ್ರಹ್ಮಚಾರಿ’ ಅವರಿಂದ ಕೂಡ ವಿದ್ಯೆ ಸ್ವೀಕರಿಸಿದರು.
ನಂತರ ಮೈಸೂರಿಗೆ ಹಿಂದುರಿಗಿ ಶ್ರೀಕೃಷ್ಣ ರಾಜ ಒಡೆಯರ್-೪ ಅವರ್ ಆಸ್ಥಾನ ವಿದ್ವಾಂಸರಾದರು. ಮಹಾರಾಜರ ಪ್ರೋತ್ಸಾಹದಲ್ಲಿ ಭಾರತದಾದ್ಯಂತ ಉಪನ್ಯಾಸಗಳನ್ನು ನೀಡುವುದರ ಜೊತೆಗೆ ಯೋಗಾಸವನ್ನೂ ಪ್ರದರ್ಶಿಸಿದರು. ಇದರ ಮಧ್ಯೆ ಆಚಾರ್ಯರು ಅನೇಕ ಪುಸ್ತಕಗಳನ್ನು ಬರೆದರು. ಅದರಲ್ಲಿ ಮುಖೈವಾದುದು ‘ಯೋಗ ಮಕರಂದ’, ‘ಯೊಗಾಸನಗಳು’, ‘ಯೋಗ ರಹಸ್ಯ’ ಮತ್ತು ‘ಯೋಗವಲ್ಲಿ’. 1933ರಲ್ಲಿ ಜಗನ್ಮೋಹನ ಅರಮನೆಯಲ್ಲಿ ಯೋಗಾಶಾಲೆಯೊಂದನ್ನೂ ಆರಂಭಿಸಿದರು. ದುರಾದ್ರುಷ್ಟವಶ ಈ ಯೋಗಾಶಾಲೆಯನ್ನು ಸ್ವಾತಂತ್ರ ಭಾರತದ ಮೈಸೂರಿನ ಮೊದಲ ಮುಖ್ಯ ಮಂತ್ರಿಯಾದ ಕೆ.ಸಿ.ರೆಡ್ಡಿಯವರು ಮುಚ್ಚಿಸಿದರು. ಅದರ ಕಾರಣ ಆಚಾರ್ಯರು ಮೈಸೂರಿನಿಂದ ಬೆಂಗಳೂರಿಗೆ ಅನಂತರ ಮದ್ರಾಸಿಗೆ ತೆರಳಿದರು. ಮದ್ರಾಸಿನಲ್ಲಿ ಕೆಲ ಕಾಲ ವಿವೇಕಾನಂದ ಕಾಲೆಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು. 1989ರಲ್ಲಿ ತಮ್ಮ ಪಾರ್ಥಿವ ಶರೀರವನ್ನು ತ್ಯಜಿಸಿದರು.
ಶ್ವೇತಭವನ ತಲುಪಿದ ಜಯದೇವದ ಸಾಧನೆ ನಮ್ಮ ಸರ್ಕಾರಗಳಿಗೇಕೆ ಗೋಚರಿಸುತ್ತಿಲ್ಲ…
– ಗೋಪಾಲ ಕೃಷ್ಣ
‘ಹೀಗೆ ಮೂರು ವರ್ಷಗಳ ಹಿಂದೆ ಕ್ರಿಸ್ ಎಂಬ ಅಮೇರಿಕಾ ಪ್ರಜೆಯೊಬ್ಬರು ಕೆಲ ದಿನಗಳಿಗಾಗಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಒಂದು ತಡರಾತ್ರಿಯಲ್ಲಿ ಹೃದಯದ ನೋವು ಕಾಣಿಸಿದ್ದರಿಂದ, ವೈದ್ಯರೊಬ್ಬರ ಸಲಹೆಯ ಮೇರೆಗೆ ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿದ್ದಾರೆ. ತಡರಾತ್ರಿಯಾದ್ದರಿಂದ ಆಸ್ಪತ್ರೆಯಲ್ಲಿ ಕೇಳುವವರು ಇರುವರೋ ಇಲ್ಲವೋ ಎಂಬ ಅನುಮಾನದಿಂದಲೇ ದಾಖಲಾದವರಿಗೆ ಜಯದೇವದಲ್ಲಿ ಆಶ್ಚರ್ಯ ಕಾದಿತ್ತು. ಖುದ್ದು ಹೃದಯ ತಜ್ಞರಿಂದಲೇ ಚಿಕಿತ್ಸೆ ಪಡೆದು ದಾಖಲಾದ ಒಂದು ಗಂಟೆಯೊಳಗಾಗಿ ಮನೆಗೆ ಮರಳಿದ್ದಾರೆ. ಅವರು ಚಿಕಿತ್ಸೆಗೆ ಭರಿಸಿದ್ದು 92 ರೂಪಾಯಿ.’
ನಮ್ಮ ಮನೆಯ ಅಥವಾ ನೆರೆಹೊರೆಯವರ ಅನುಭವಗಳನ್ನು ಕೇಳಿ ನೋಡಿ. ತಡರಾತ್ರಿಯಲ್ಲಿ ಸಾರ್ವಜನಿಕ ಅಥವಾ ಖಾಸಗಿ ಆಸ್ಪತ್ರೆಗೆ ಹೋದರೆ ಒಂದು ಗಂಟೆಯೊಳಗಾಗಿ ಚಿಕಿತ್ಸೆ ಪಡೆಯಲು ಸಾಧ್ಯವೇ? ಇಸಿಜಿ, ರಕ್ತ ಪರಿಕ್ಷೆ, ತಜ್ಞ ವೈದ್ಯರಿಂದ ತಪಾಸಣೆಗೊಳಪಟ್ಟರೆ ಮೂರರಿಂದ ಐದು ಸಾವಿರಕ್ಕಿಂತ ಕಡಿಮೆಯಂತೂ ಬಿಲ್ ಮಾಡುವುದಿಲ್ಲ. ಇಷ್ಟೆಲ್ಲವನ್ನೂ 92 ರೂಪಾಯಿಗೆ ನೀಡಲು ಹೇಗೆ ಸಾಧ್ಯವಾಯಿತು? ಶತಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿಯೂ ಇಂತಹ ಆಸ್ಪತ್ರೆಗಳನ್ನು ಮುನ್ನಡೆಸಬಹುದು ಎಂದ ಮೇಲೆ, ಆರೋಗ್ಯದ ಸಮಸ್ಯೆಗಳು ಉಲ್ಭಣಿಸಲು ಜನಪ್ರತಿನಿಧಿಗಳು/ಅಧಿಕಾರಿಗಳಲ್ಲಿ ಇಚ್ಛಾಶಕ್ತಿಯಿಲ್ಲದಿರುವುದೇ ಕಾರಣವಲ್ಲವೇ?