ವಿಷಯದ ವಿವರಗಳಿಗೆ ದಾಟಿರಿ

Posts tagged ‘ಆರ್ಯ’

2
ಡಿಸೆ

ಆರ್ಯರಿಂದ ಭಾರತದ ಮೇಲೆ ದಾಳಿ ಎಂಬ ಪೊಳ್ಳು ವಾದ

– ವಿನೋದ್ ಹಿಂದೂ ನ್ಯಾಷನಲಿಸ್ಟ್

ಆರ್ಯರ ಆಕ್ರಮಣದೇಶದಲ್ಲಿ ಅಸಹಿಷ್ಣುತೆ (Intolerance) ಮಿತಿ ಮೀರುತ್ತಿದೆ ದೇಶದಲ್ಲಿ ಉಸಿರುಗಟ್ಟೋ ವಾತಾವರಣವಿದೆ ಅಂತ ಕೆಲ ತಿಂಗಳಿನಿಂದ ಹಲವಾರು ಸಾಹಿತಿಗಳು, ಬುದ್ಧಿಜೀವಿಗಳು, ಲೇಖಕರು, ನಟ ನಟಿಯರು ತಮಗೆ ದೊರೆತ ಪ್ರಶಸ್ತಿಗಳನ್ನು ವಾಪಸ್ ಮಾಡುತ್ತಿರುವುದು ನಿಮಗೆಲ್ಲ ತಿಳಿದ ವಿಷಯವೇ, ಅದೇ ಪ್ರಶಸ್ತಿ ವಾಪಸಾತಿ, ಅಸಹಿಣ್ಣುತೆಯ ವಾದದ ತಿಕ್ಕಾಟದಲ್ಲೇ ಅಮೀರ್ ಖಾನ್ ಕೂಡ ದೇಶದಲ್ಲಿ ಕಳೆದ 6-8 ತಿಂಗಳಿನಿಂದ ಒಂದು ತರಹ ಭಯದ ವಾತಾವರಣ ದೇಶದಲ್ಲಿದೆ, “ನನ್ನ ಪತ್ನಿ ದೇಶ ಬಿಡೋಣವೇ” ಅಂದಿದ್ದಳು ಅಂತ ಹೊಸ ವಿವಾದವನ್ನೇ ಸೃಷ್ಟಿಸಿದ್ದರು ಹಾಗು ಅಮೀರ್ ಖಾನರವರ ಪರ ವಿರೋಧವಾಗಿ ನಾನಾ ರೀತಿಯ ಪ್ರತಿಭಟನೆಗಳು ನಡೆದಿದ್ದು ತಮಗೆಲ್ಲ ತಿಳಿದ ವಿಷಯವೇ.

ಇದೇ ವಿಷಯವನ್ನಿಟ್ಟುಕೊಂಡು ಮೊನ್ನೆ ತಾನೆ ಶುರುವಾಗಿರೋ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೂ ಕೋಲಾಹಲವೆದ್ದಿತ್ತು. ಆಗ ನಮ್ಮ ದೇಶದ ಮಾನ್ಯ ಗೃಹಮಂತ್ರಿ ರಾಜನಾಥ ಸಿಂಗ್ ಸಂಸತ್ತಿನಲ್ಲಿ ಮಾತನಾಡುತ್ತ ಈ ತಥಾಕತಿತ ಅಸಹಿಣ್ಣುತೆಯ ಬಗ್ಗೆ ಚರ್ಚೆ ಮಾಡುವಾಗ ಸಂವಿಧಾನ ಕರ್ತೃ ಅಂಬೇಡ್ಕರರ ವಿಷಯವನ್ನು ಪ್ರಸ್ತಾಪಿಸುತ್ತ ದಲಿತ ಶೋಷಣೆಯನ್ನು ತಮ್ಮ ಧ್ವನಿ ಎತ್ತಿ ದಲಿತರ ಹಕ್ಕುಗಳಿಗಾಗಿ ಸಮರ್ಥವಾಗಿ ಹೋರಾಟ ನಡೆಸಿ ಅವರ ಹಕ್ಕುಗಳನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದರು ಹೊರತು ಅಂಬೇಡ್ಕರರು ಯಾವತ್ತೂ ದೇಶ ಬಿಡುವ ಯೋಚನೆ ಮಾಡಿರಲಿಲ್ಲ ಅಂತ ಉಲ್ಲೇಖಿಸುತ್ತ ನಮ್ಮ ದೇಶ ಸಾವಿರಾರು ವರ್ಷಗಳಿಂದ ಇಡೀ ಜಗತ್ತಿನಲ್ಲೇ ಸಹಿಷ್ಣು ರಾಷ್ಟ್ರವಾಗಿದೆ ಅನ್ನೋ ಮಾತನ್ನು ಹೇಳಿದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಹಾಗು ಕಲ್ಬುರ್ಗಿಯ ಸಂಸದ ಮಲ್ಲಿಕಾರ್ಜುನ ಖರ್ಗೆಯವರು ಅಂಬೇಡ್ಕರ್ ದೇಶ ಬಿಡ್ತೀನಿ ಅನ್ನೋ ಮಾತನ್ನು ಆಡಿರಲೇ ಇಲ್ಲ. ನಾವು ದ್ರಾವಿಡರು ಈ ದೇಶದ ಮೂಲನಿವಾಸಿಗಳು ನೀವು(ಆರ್ಯರು) ಹೊರಗಿನಿಂದ ಬಂದವರು ಅಂತ ಒಂದು ಸ್ಟೇಟ್’ಮೆಂಟ್ ಕೊಟ್ಟಿದ್ದರು.

ಭಾರತಕ್ಕೆ ಆರ್ಯರು ಹೊರಗಿನಿಂದ ಬಂದವರು, ದ್ರಾವಿಡರು ಮೂಲನಿವಾಸಿಗಳು ಅನ್ನೋದು ಪೊಳ್ಳು ವಾದವಂತ ಎಷ್ಟೋ ಜನ ಪಾಶ್ಚಾತ್ಯ ವಿದ್ವಾಂಸರು, ಇತಿಹಾಸಕಾರರೇ ಸಾಕ್ಷ್ಯಾಧರ, ಸಂಶೋಧನೆಗಳ ಮೂಲಕ ಒಪ್ಪಿಕೊಂಡಾಗ “Aryan Invasion Theory” ಒಟ್ಟಾರೆಯಾಗಿ baseless ಅನ್ನೋದು ಜಗಜ್ಜಾಹಿರಾಗಿರುವ ಸಂದರ್ಭದಲ್ಲಿ ಮತ್ತೆ ಆ ಪೊಳ್ಳು ವಾದವನ್ನಿಟ್ಟುಕೊಂಡು ರಾಜಕಾರಣ ಮಾಡುವುದು ಮಾತ್ರ ಇನ್ನೂ ಭಾರತದಲ್ಲಿ ನಿಂತಿಲ್ಲ ಅನ್ನುವುದಕ್ಕೆ ಮಲ್ಲಿಕಾರ್ಜುನ ಖರ್ಗೆಯವರ ಮಾತಿನಿಂದಲೆ ಅರ್ಥವಾಗುತ್ತದೆ. ಇದೇ “ಆರ್ಯರಿಂದ ಭಾರತದ ಮೇಲೆ ದಾಳಿ” ಎಂಬ ವಿಷಯ ಮಂಡಿಸಿ ಬ್ರಿಟೀಷರು ಅನುಸರಿಸಿದ divide and rule ಪಾಲಿಸಿಯನ್ನ ನಮ್ಮ ರಾಜಕಾರಣಿಗಳು ಇನ್ನೂ ಅನುಸರಿಸಿ ಜನರ ಮನಸ್ಸಿನಲ್ಲಿ ಜಾತಿಯೆಂಬ ವಿಷಬೀಜ ಬಿತ್ತಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವುದು ಮಾತ್ರ ದೇಶದ ಐಕ್ಯತೆಗೆ ಮಾರಕವೇ ಸರಿ.

ಮತ್ತಷ್ಟು ಓದು »

23
ಸೆಪ್ಟೆಂ

ವಸಾಹತುಪ್ರಜ್ಞೆಯ ಪ್ರಾಯೋಜಿತ ಪಂದ್ಯಾವಳಿಗಳು – ಭಾಗ ೨

– ವಿನಾಯಕ ಹಂಪಿಹೊಳಿ

ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೧

ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೨

Colonial Consciousnessಇದೇ ಪ್ರಶ್ನೆಯು ಪುರೋಹಿತ ಮತ್ತು ಭಕ್ತನ ನಡುವಿನ ಯುದ್ಧಕ್ಕೂ ಅನ್ವಯವಾಗುತ್ತದೆ. ಹಾಗೊಂದು ವೇಳೆ ಅಷ್ಟೊಂದು ಅಸಹನೆ/ಶೋಷಣೆಗಳು ಇದ್ದರೆ ಜಾತಿಜಾತಿಗಳ ನಡುವೆ ಯುದ್ಧವೇ ಜರುಗಿ ಎಲ್ಲ ಜಾತಿಗಳೂ ನಾಶವಾಗಬೇಕಿತ್ತು. ಆದರೆ ಎಲ್ಲ ಜಾತಿಗಳೂ ಒಂದೇ ಹಳ್ಳಿಯಲ್ಲಿ ತಮ್ಮಷ್ಟಕ್ಕೆ ತಾವಿರುವದು ಏಕೆ? ಈ ಎಲ್ಲ ಪ್ರಕ್ರಿಯೆಗಳನ್ನು ಈ ಸಿದ್ಧಾಂತವು ವಿವರಿಸಿಲ್ಲ.

ಆದರೂ ಬ್ರಿಟೀಷರು ನೀಡಿದ ವಸಾಹತುಪ್ರಜ್ಞೆಯನ್ನು ಶಿರಸಾ ಹೊತ್ತುಕೊಂಡು ಅವರ ಸಿದ್ಧಾಂತಗಳನ್ನು ಒಪ್ಪಿಕೊಂಡಿದ್ದೇವೆ. ಜಾತಿಗೊಂದು, ಕೇರಿಗೊಂದು, ಊರಿಗೊಂದು ಭಾಷಾವೈವಿಧ್ಯತೆಯಿರುವಲ್ಲಿ ಯೂರೋಪಿನಂತೆ ಭಾಷಾವಾರು ಪ್ರಾಂತ್ಯಗಳನ್ನು ಮಾಡಿಕೊಂಡಿದ್ದೇವೆ. ಇಡೀ ಸಹಸ್ರಮಾನದಲ್ಲಿ ಎಂದೂ ನಡೆಯದ ಮಹಾಪ್ರಾಣಗಳ ಅಗತ್ಯತೆಯ ಕುರಿತ ಚರ್ಚೆಗಳು ಈಗೀಗ ನಡೆಯುತ್ತಿವೆ. ಕನ್ನಡಿಗರಿಗೆ ಎಂದಿಗೂ ವಿರುದ್ಧವಾಗಿ ಕಾಣದ, ಕರ್ನಾಟಕದ ೫ ವೀರಶೈವ ಪೀಠಗಳು ಪ್ರಗತಿಪರರ ದೃಷ್ಟಿಯಲ್ಲಿ, ಏಕಾಏಕೀ ಶರಣ ಚಳುವಳಿಗೆ ವಿರುದ್ಧವಾದ ಬೆಳವಣಿಗೆಗಳಾಗಿಬಿಟ್ಟಿವೆ. ಕರ್ನಾಟಕ ಸಂಗೀತವನ್ನು ವಿರೋಧಿಸುವ ಅಂಶಗಳು ಜಾನಪದ ಸಂಗೀತದಲ್ಲಿ ಎಲ್ಲೆಲ್ಲಿ ಕಂಡುಬಂದಿವೆ ಎಂಬ ಚಿತ್ರವಿಚಿತ್ರ ಸಂಶೋಧನೆಗಳು ಬರುತ್ತಿವೆ. ಆರ್ಯ-ದ್ರಾವಿಡ ವಾದದಲ್ಲಿನ ದೋಷಗಳ ಕುರಿತು ಚರ್ಚೆ ಶುರುಮಾಡಿದರೂನೂ, ಅದು ಪುರೋಹಿತಶಾಹಿಯ ಹುನ್ನಾರವಾಗಿಬಿಡುತ್ತದೆ.

ಇವೆಲ್ಲದಕ್ಕೂ ಮುಖ್ಯವಾಗಿ ಪಾಶ್ಚಿಮಾತ್ಯರು ನಮ್ಮಲ್ಲಿ ಯಾವೆಲ್ಲ ವೈರುಧ್ಯಗಳನ್ನು ಕಂಡರೋ, ಅವುಗಳನ್ನು ವಿವರಿಸಲು ಆಧರಿಸಿದ ಆರ್ಯ-ದ್ರಾವಿಡ ಸಿದ್ಧಾಂತದ ಬುಡಕ್ಕೇ ಇಂದು ವಿಜ್ಞಾನ ಕೊಡಲಿ ಪೆಟ್ಟನ್ನು ನೀಡಿದೆ. ಜೈವಿಕವಾಗಿ, ಭೌತಿಕವಾಗಿ ಇಂದು ಸಿಗುವ ಎಲ್ಲ ವೈಜ್ಞಾನಿಕ ಸಾಕ್ಷಿಗಳು ಈ ಸಿದ್ಧಾಂತವನ್ನು ಕಸದ ಬುಟ್ಟಿಗೆ ಎಸೆದಿವೆ. ಸರಸ್ವತಿ ನದಿಯ ಅಸ್ತಿತ್ವ, ದ್ವಾರಕೆಯ ಅವಶೇಷಗಳು, ಮುಂತಾದ ಭೌತಿಕ ಸಾಕ್ಷಿಗಳು ಒಂದೆಡೆಯಾದರೆ, ಡಿ.ಎನ್.ಎ. ಆಧಾರಿತ ವಲಸೆಯ ವರದಿಗಳನ್ನು ಹೇಳುವ ಜೈವಿಕ ಸಾಕ್ಷಿಗಳು ಇನ್ನೊಂದೆಡೆ. ಹೀಗಾಗಿ ವೈಜ್ಞಾನಿಕವಾಗಿ ಸಾಬೀತಾಗದ ಈ ಆರ್ಯರ ವಲಸೆಯಾಗಲೀ, ಅದರ ಆಧಾರದ ಮೇಲೆ ಹೇಳಲಾಗುವ ಅನುಭವಕ್ಕೇ ಬಾರದ ಸಾಮಾಜಿಕ ವೈರುಧ್ಯ, ಚಳುವಳಿಗಳು ಶಾಲೆಗಳಲ್ಲಿ ಕಲಿಯಲೂ ಯೋಗ್ಯವಲ್ಲ. ಕಲಿಸಲೂ ಯೋಗ್ಯವಲ್ಲ.

ಮತ್ತಷ್ಟು ಓದು »

22
ಸೆಪ್ಟೆಂ

ವಸಾಹತುಪ್ರಜ್ಞೆಯ ಪ್ರಾಯೋಜಿತ ಪಂದ್ಯಾವಳಿಗಳು – ಭಾಗ ೧

– ವಿನಾಯಕ ಹಂಪಿಹೊಳಿ

ಸಂಸ್ಕೃತ v/s ಆಡುಭಾಷೆ, ಶಾಸ್ತ್ರೀಯ v/s ಜಾನಪದ, ಪುರೋಹಿತ v/s ಭಕ್ತ, ಆರ್ಯ v/s ದ್ರಾವಿಡ … – ಭಾಗ ೧

Colonial Consciousnessಕ್ರಿ.ಶ. ೧೪೦೦ರ ತನಕ ಬೈಬಲ್ಲಿನ ಹಳೇ ಒಡಂಬಡಿಕೆ ಮತ್ತು ಹೊಸ ಒಡಂಬಡಿಕೆಗಳು ಹಿಬ್ರೂ, ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಇದ್ದವು. ಆಕ್ಸಫರ್ಡ್ ಪ್ರೊಫೆಸರ್ ಆಗಿದ್ದ ಜಾನ್ ವಿಕ್ಲಿಫ್ ಎಂಬಾತನು ೧೩೮೦ರಲ್ಲಿ ಮೊದಲ ಬಾರಿಗೆ ಬೈಬಲ್ಲಿನ ಇಂಗ್ಲೀಷ್ ಭಾಷಾಂತರವನ್ನು ಮಾಡಿದ್ದ ಎಂದು ಹೇಳಬಹುದು. ಇದಕ್ಕಿಂತ ಹಿಂದೆಯೂ ಭಾಷಾಂತರಗಳಾಗಿರಬಹುದಾದರೂ ಐತಿಹಾಸಿಕ ಸಾಕ್ಷ್ಯವಾಗಿ ಇದೊಂದು ದೊರಕುತ್ತದೆ. ಇದು ಪೋಪನ ಕೋಪಕ್ಕೆ ಗುರಿಯಾಗಿ, ವಿಕ್ಲಿಫ್ ತೀರಿಕೊಂಡಾಗ ಆತನ ಎಲುಬುಗಳನ್ನು ಪುಡಿ ಮಾಡಿಸಿ ಪೋಪ್ ನದಿಯಲ್ಲಿ ಹಾಕಿಸಿದ್ದ ಎಂದು ಕಥೆ.

ವಿಕ್ಲಿಫ್ ನಂತರ ಆತನ ಅನುಯಾಯಿಯಾದ ಜಾನ್ ಹಸ್ ಎಂಬಾತನು ವಿಕ್ಲಿಫ್ ಯೋಚನೆಗಳನ್ನು ಇನ್ನಷ್ಟು ಪ್ರಚುರಪಡಿಸಿದನು. ಪ್ರತಿಯೋರ್ವನಿಗೂ ಆತನ ಮಾತೃಭಾಷೆಯಲ್ಲಿ ಬೈಬಲ್ಲನ್ನು ಓದಲು ಅವಕಾಶ ನೀಡಬೇಕು ಎಂಬುದು ಆತನ ಆಗ್ರಹವಾಗಿತ್ತು. ಲ್ಯಾಟಿನ್ನೇತರ ಭಾಷೆಯಲ್ಲಿ ಬೈಬಲ್ಲಿನ ಪ್ರತಿಯನ್ನು ಹೊಂದಿದ್ದರೆ ಮರಣದಂಡನೆ ವಿಧಿಸುವದಾಗಿ ಹೇಳಿದ್ದ ಚರ್ಚಿನ ನಿರ್ಧಾರವನ್ನು ವಿರೋಧಿಸಲು ಜನರಿಗೆ ಕರೆಯಿತ್ತಿದ್ದನು. ೧೪೧೫ರಲ್ಲಿ ಆತನನ್ನು ವಿಕ್ಲಿಫ್ ನ ಇಂಗ್ಲೀಷ್ ಬೈಬಲ್ಲಿನ ಪ್ರತಿಗಳೊಂದಿಗೆ ಜೀವಂತವಾಗಿ ಸುಡಲಾಯಿತು. ಆತನ ಕೊನೆಯ ಮಾತುಗಳು “ಯಾರ ಸುಧಾರಣೆಯ ಕರೆಯನ್ನು ತುಳಿಯಲಾಗದೋ ಅಂತ ಮನುಷ್ಯನೊಬ್ಬನನ್ನು ದೇವನು ಬೆಳೆಸುವನು” ಎಂದು ಪ್ರತೀತಿ.

೧೪೫೦ರಲ್ಲಿ ಪ್ರಿಂಟಿಂಗ್ ಪ್ರೆಸ್ ಕಂಡುಹಿಡಿದ ಜೊಹನ್ ಗುಂಟನ್ಬರ್ಗ್ ಲ್ಯಾಟಿನ್ನಿನಲ್ಲಿದ್ದ ಬೈಬಲ್ಲಿನ ಮೊದಲ ಪ್ರತಿಯನ್ನು ತಂದನು. ಇದು ಪ್ರೊಟೆಸ್ಟಂಟ್ ಸುಧಾರಣೆಗೆ ಮೊದಲ ಅಡಿಗಲ್ಲಾಯಿತು. ನಂತರ ಎರಾಸ್ಮಸ್ ಅದರಲ್ಲಿನ ತಪ್ಪುಗಳನ್ನು ಸರಿಪಡಿಸಿ ಇನ್ನೊಂದು ಮುದ್ರಿತ ಪ್ರತಿಯೊಂದನ್ನು ತಂದನು. ೧೪೯೦ರಲ್ಲಿ ಥೊಮಸ್ ಲಿನೇಕರ್ ಬೈಬಲ್ಲಿನ ಭಾಷಾಂತರದ ಪರವಾಗಿ ವಾದಿಸಿದನು. ೧೪೯೬ರಲ್ಲಿ ಜಾನ್ ಕೋಲೆಟ್ ಎಂಬ ಇನ್ನೊಬ್ಬ ಆಕ್ಸಫರ್ಡ್ ಪ್ರೊಫೆಸರ್ ಹೊಸ ಒಡಂಬಡಿಕೆಯನ್ನು ಇಂಗ್ಲೀಷಿನಲ್ಲಿ ಭಾಷಾಂತರಿಸಲು ಯತ್ನಿಸಲು ಚರ್ಚು ಅದನ್ನು ವಿರೋಧಿಸಿತು. ಅಷ್ಟರೊಳಗಾಗಲೇ ವಿಲಿಯಮ್ ಟಿಂಡೇಲ್ ಎಂಬ ಸುಧಾರಣಾ ಚಳುವಳಿಗಾರರ ಮುಖಂಡ ಮೊದಲ ಬಾರಿಗೆ ಹೊಸ ಒಡಂಬಡಿಕೆಯನ್ನು ಇಂಗ್ಲೀಷಿನಲ್ಲಿ ಮುದ್ರಿಸಿದನು. ಹೀಗಾಗಿ ಆತನನ್ನು ಇಂಗ್ಲೀಷ್ ಭಾಷೆಯ ಆರ್ಕಿಟೆಕ್ಟ್ ಎಂದೂ ಕರೆಯಲಾಗುತ್ತದೆ. ಈ ಎಲ್ಲ ಬೆಳವಣಿಗೆಗಳನ್ನು ಚರ್ಚ್ ವಿರೋಧಿಸುತ್ತಲೇ ಬಂದಿತು.

ಮತ್ತಷ್ಟು ಓದು »

29
ಏಪ್ರಿಲ್

ನಾಡು-ನುಡಿ : ಮರುಚಿಂತನೆ – ಹಿಂದೂ ಶಬ್ದಕ್ಕೆ ನಕಾರಾತ್ಮಕ ಅರ್ಥವೇಕೆ?

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಹಿಂದೂದಲಿತರನ್ನು ಹಿಂದೂ ಸಮಾಜದ ಒಳಗೆ ತರಬೇಕೆಂಬ ಪ್ರತಿಪಾದನೆ ಕಳೆದ ನೂರಾರು ವರ್ಷಗಳಿಂದ ನಡೆದು ಬಂದಿದೆ. ಹಿಂದೂ ಸಮಾಜದ ಐಕ್ಯತೆಯನ್ನು ಸಾಧಿಸಬೇಕೆನ್ನುವ ರಾಷ್ಟ್ರೀಯ ನಾಯಕರೆಲ್ಲರೂ ಇಂಥ ಕಾರ್ಯಕ್ರಮಗಳ ಮಹತ್ವವನ್ನು ಒಪ್ಪಿದ್ದಾರೆ. ಮತ್ತೊಂದೆಡೆ ಈ ಕಾರ್ಯಕ್ರಮವನ್ನು ಒಂದು ಹುನ್ನಾರವೆಂಬಂತೆ ನೋಡುವ ಹಾಗೂ ಆ ಕಾರಣದಿಂದ ಅದನ್ನು ತಿರಸ್ಕರಿಸುವ ಪ್ರಯತ್ನಗಳೂ ನೂರಾರು ವರ್ಷಗಳಿಂದ ನಡೆದಿವೆ. ಹುನ್ನಾರವೇಕೆಂದರೆ, ಜಾತಿ ವ್ಯವಸ್ಥೆಯ ಹಿಂದೂ ಸಮಾಜದೊಳಗೆ ದಲಿತರನ್ನು ಮತ್ತೆ ಸೇರಿಸಿ ಶೋಷಿಸುವ ಉದ್ದೇಶದಿಂದ ಸಂಪ್ರದಾಯಸ್ಥ ಹಿಂದೂಗಳು ಈ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ ಎಂಬ ಆರೋಪ. ಆದರೆ ಜಾತಿ ವ್ಯವಸ್ಥೆಯು ಹಿಂದೂ ಸಮಾಜದ ಲಕ್ಷಣವಾದರೆ, ಹಾಗೂ ದಲಿತರು ಹಿಂದೂ ಸಮಾಜದೊಳಗೆ ಇಲ್ಲ ಅಂತಾದರೆ ಅವರು ಇದುವರೆಗೆ ಜಾತಿ ವ್ಯವಸ್ಥೆಗೆ ಒಳಪಟ್ಟಿಲ್ಲ ಎಂದು ಇಂಗಿತವೆ? ಅಥವಾ ಜಾತಿವ್ಯವಸ್ಥೆಯ ಹೊರಗಿದ್ದೂ ಅವರನ್ನು ಸಾವಿರಾರು ವರ್ಷಗಳ ವರೆಗೆ ಶೋಷಿಸಲು ಹಿಂದೂಗಳಿಗೆ ಸಾಧ್ಯವಾಗಿದ್ದೇ ಹೌದಾದಲ್ಲಿ ಆ ಕೆಲಸವನ್ನೇ ಮಾಡಲು ಹಿಂದೂ ಸಮಾಜದೊಳಗೆ ಅವರನ್ನು ಹೊಸತಾಗಿ ಸೇರಿಸಿಕೊಳ್ಳುವ ಅಗತ್ಯವೇಕೆ? ಒಟ್ಟಿನಲ್ಲಿ ಇದು ಒಂದು ಒಗಟಾಗಿ ಬಿಡುತ್ತದೆ.

ಈ ಒಗಟು ಏಕೆ ಹುಟ್ಟುತ್ತದೆಯೆಂದರೆ ನಮ್ಮ ಸಂಸ್ಕೃತಿಯ ಇತಿಹಾಸವನ್ನು ಕಟ್ಟುವಾಗ ಪರಸ್ಪರ ಸುಸಂಬದ್ಧವಲ್ಲದ ಅನೇಕ ವಿವರಗಳನ್ನು ಒಟ್ಟಿಗೆ ತರಲಾಗಿದೆ.  ಅವುಗಳಲ್ಲಿ ಒಂದು ಹಿಂದೂಯಿಸಂ ಎಂಬ ರಿಲಿಜನ್ನಿನ ಕಲ್ಪನೆ, ಮತ್ತೊಂದು ಆರ್ಯರ ಆಕ್ರಮಣದ ಕಥೆ. ಭಾರತದಲ್ಲಿ ಹಿಂದೂಯಿಸಂ ಎಂಬ ರಿಲಿಜನ್ನಿದೆ, ಅದಕ್ಕೆ ಬ್ರಾಹ್ಮಣರು ಪುರೋಹಿತಶಾಹಿಗಳು, ಇದರಲ್ಲಿ ಮೂರ್ತಿಪೂಜೆ ಜಾತಿ ವ್ಯವಸ್ಥೆಗಳಂಥ ಅನಿಷ್ಟ ಆಚರಣೆಗಳಿವೆ ಎಂಬ ಕಥೆ 19ನೆಯ ಶತಮಾನದಲ್ಲೇ ಗಟ್ಟಿಯಾಯಿತು. ಪಾಶ್ಚಾತ್ಯರು ಕ್ಯಾಥೋಲಿಕ್ ಚರ್ಚಿನಂತೇ ಇದೊಂದು ಭ್ರಷ್ಟವಾದ ರಿಲಿಜನ್ನು ಎಂದು ಭಾವಿಸಿದ್ದರು. ಆ ಸಂದರ್ಭದಲ್ಲಿ ರಾಜಾ ರಾಮಮೋಹನರಾಯರಂಥವರು ಹಿಂದೂಯಿಸಂ ಮೂಲತಃ ಉದಾತ್ತವಾದ ರಿಲಿಜನ್ನಾಗಿದೆ ಎಂಬ ನಿರೂಪಣೆಯನ್ನು ಗಟ್ಟಿಮಾಡತೊಡಗಿದರು.ಈ ನಿರೂಪಣೆಗೆ ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿಯ ಏಕದೇವತಾ ತತ್ವವೇ ಆಧಾರವಾಯಿತು.ಅಂದರೆ ಹಿಂದೂಯಿಸಂನ ಶುದ್ಧ ರೂಪವು ವೇದಾಂತದಲ್ಲಿ ಇದೆ ಎಂದಾಯಿತು.

ಮತ್ತಷ್ಟು ಓದು »

8
ಜುಲೈ

’ಹರಶರಣ ದೆನಿಲೋನ ಹಾದಿಯಲ್ಲಿ’ ಶಿವಪ್ರಕಾಶರ ಲೇಖನಕ್ಕೊಂದು ಪ್ರತಿಕ್ರಿಯೆ

-ಬಾಲಚಂದ್ರ ಭಟ್

Danielouಈ ಲೇಖನ ಪ್ರಜಾವಾಣಿಯಲ್ಲಿ ಪ್ರಕಟವಾದ ಎಚ್.ಎಸ್.ಶಿವಪ್ರಕಾಶರ ಜುಲೈ ೫ ರಂದು ಪ್ರಕಟವಾದ ’ಹರಶರಣ ದೆನಿಲೋನ ಹಾದಿಯಲ್ಲಿ’ ಬರಹಕ್ಕೆ ಪ್ರತಿಕ್ರಿಯೆ. ಬಹಳಷ್ಟು ವಿಷಯಗಳನ್ನು ಲೇಖನದಲ್ಲಿ ಉಲ್ಲೇಖಿಸಿದ್ದನ್ನು ಓದಿದ ನಂತರ ಸ್ವಲ್ಪ ಲೇಖನ ಏನು ಹೇಳಹೊರಟಿದೆಯೆಂಬುದರ ಬಗ್ಗೆ ಗೊಂದಲ ಮೂಡಿತು. ನಾನು ತಿಳಿದುಕೊಂಡಂತೆ ಲೇಖಕರು ಒಟ್ಟಾರೆಯಾಗಿ ಏನು ಹೇಳುತ್ತಾರೆಂದರೆ,

೧. ಆಲೆನ್ ದೆನಿಲೋ ನ ವಿಚಾರಗಳು, ಬಹುತೇಕ ಭಾರತೀಯ ಆಧ್ಯಾತ್ಮಿಕ ಪರಿಕಲ್ಪನೆಗಳಿಗಿಂತ(‘ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತ’) ಭಿನ್ನವಾಗಿತ್ತು, ಹಾಗೂ

೨. ಭಾರತದ ಆಧ್ಯಾತ್ಮಿಕ ವಿಷಯಗಳ ಬಗ್ಗೆ ’ಸ್ಟೀರಿಯೊಟೈಪಡ್ ಪೌರಾತ್ಯ’ ಚಿಂತನೆಗಳಿಂದ, ಹಾಗೂ ವಸಾಹತುಶಾಹಿ ಪರಿಕಲ್ಪನೆಗಳಿಂದ ಹೊರತಾಗಿದ್ದವು.

ಈ ಮೇಲಿನ ಎರಡು ಲೇಖಕರ ಅಭಿಪ್ರಾಯಗಳನ್ನು ಈ ಕೆಳಗಿನಂತೆ ವಿಮರ್ಶಿಸಿದ್ದೇನೆ.ಹಾಗೆಯೆ ಪ್ರಶ್ನೆಗಳ ಮೂಲಕ ನನ್ನಲ್ಲಿನ ಗೊಂದಲಗಳನ್ನ ಪ್ರಸ್ತಾಪಿಸಿದ್ದೇನೆ. ತಪ್ಪಿದ್ದಲ್ಲಿ ಸರಿಪಡಿಸಿ.

೧. ನಾನು ಹಾಗೆ ತಿಳಿದುಕೊಳ್ಳಲು ಕಾರಣ ಶಿವಪ್ರಕಾಶರು ಹೀಗೆ ಉಲ್ಲೇಖಿಸಿರುವದು: “ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತವನ್ನೇ ಭಾರತದ ಸಾರ ಸರ್ವಸ್ವವೆನ್ನುವರು ಆ ಕಾಲದ ಬಹಳ ಮಂದಿ ವಿದ್ವಾಂಸರು. ಅವರಲ್ಲಿ ಬಹುತೇಕ ಪ್ರಭೃತಿಗಳು ಭಾರತೀಯರೆಂದರೆ ಜೀವನೋತ್ಸಾಹ, ರಾಗರತಿಗಳಿಲ್ಲದ ಓಡುಗಾಲ ಯೋಗಿಗಳೆಂದು ಬಗೆದಿದ್ದರು. ಆದರೆ ವಿದ್ವತ್ತು, ರಸಗ್ರಾಹಿತ್ವ ಮತ್ತು ವ್ಯಕ್ತಿಗತ ಆಧ್ಯಾತ್ಮಿಕ ಸಾಧನೆಗಳ ತ್ರಿವೇಣಿಸಂಗಮವಾಗಿದ್ದ ದೆನಿಲೋ ಒತ್ತು ನೀಡಿದ್ದು ಭಾರತೀಯರ ರಸವಿಮುಖಿಯಾದ ಸಮಣಪಂಥೀಯ ಅಧ್ಯಾತ್ಮವಾದಕ್ಕಲ್ಲ, ಐಂದ್ರಿಕ ಜಗತ್ತಿಗೆ ತನ್ನನ್ನು ಪೂರ್ಣವಾಗಿ ತೆರೆದುಕೊಂಡು ಹಾಕುವ ಪ್ರತಿಯೊಂದು ತುತ್ತನ್ನೂ ಬಿಂದುವಾಗಿ ಮಾಡಿಕೊಂಡ ಶೈವ-ಶಾಕ್ತರ ಪೂರ್ಣಾದ್ವೈತಕ್ಕೆ.”

ಮತ್ತಷ್ಟು ಓದು »