ವಿಷಯದ ವಿವರಗಳಿಗೆ ದಾಟಿರಿ

Posts tagged ‘ಆಹಾರ ಪದ್ಧತಿ’

14
ಡಿಸೆ

ಭಗವದ್ಗೀತೆ ಹೇಳುವ ಆಹಾರ ಆದರ್ಶ

ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

krsna_eatingಆಹಾರ ಎಂದರೆ ದೇಹಕ್ಕೆ ಪೌಷ್ಟಿಕಾಂಶಗಳನ್ನು ಒದಗಿಸುವ ಯಾವುದೇ ಪದಾರ್ಥ “ಪೋಷಕಾಂಶ (ಪ್ರೊಟೀನು), ಶರ್ಕರಪಿಷ್ಟ (ಕಾರ್ಬೊಹೈಡ್ರೇಟು) ಮತ್ತು ಕೊಬ್ಬು (ಫ್ಯಾಟ್)ಗಳನ್ನು ಅಗತ್ಯವಾಗಿ ಒಳಗೊಂಡ, ದೇಹದ ಪೋಷಣೆ, ಬೆಳವಣಿಗೆ, ಸುಭದ್ರತೆಗೆ ಕಾರಣವಾಗುವ ವಸ್ತು” ಎಂದು ವಿಶ್ವಕೋಶ ಹೇಳುತ್ತದೆ. ಆಹಾರ ವಸ್ತು ಮೂಲತಃ ಸಸ್ಯ ಅಥವಾ ಪ್ರಾಣಿ ಮೂಲದ್ದಿರಬಹುದು. ಅದರಲ್ಲಿ ಜೀವಿಗಳ ಬೆಳವಣಿಗೆಗೆ ಅಗತ್ಯವಾದ ಮೇಲ್ಕಂಡ ಧಾತುಗಳ ಜೊತೆಗೆ ವಿಟಮಿನ್ ಮತ್ತು ಖನಿಜಾಂಶಗಳು ಇದ್ದಾಗ ಮಾತ್ರ ಅಂಥ ವಸ್ತುವನ್ನು ಆಹಾರ ಎನ್ನಲಾಗುತ್ತದೆ. ಆಹಾರ ಸೇವಿಸಿದ ದೇಹದ ವ್ಯವಸ್ಥೆ ಆಹಾರದಲ್ಲಿನ ಮೂಲವಸ್ತುಗಳನ್ನು ಬೇರ್ಪಡಿಸಿ, ತನ್ನ ಕೋಶಗಳ ಮೂಲಕ ದೇಹದ ವಿವಿಧ ಭಾಗಗಳಿಗೆ ಧಾತುಗಳನ್ನು ಪ್ರವಹಿಸಿ ದೇಹದಲ್ಲಿ ಶಕ್ತಿ ಸಂಚಯನವಾಗುವಂತೆ ಮಾಡುತ್ತದೆ, ದೇಹದ ಬೆಳವಣಿಗೆಗೂ ಕಾರಣವಾಗುತ್ತದೆ. ಇದು ಆಹಾರದ ಬಗ್ಗೆ ಆಧುನಿಕ ವಿಜ್ಞಾನ ಹೇಳುವ ಮಾತು. ಮತ್ತಷ್ಟು ಓದು »

10
ಆಗಸ್ಟ್

ನಂಬಿಕೆ, ನಿಷೇಧ, ಆಚರಣೆಗಳಲ್ಲಿ ಆಹಾರ

ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

Non-Veg-Restaurantsಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿ ಕುರಿತು ಬಹಳಷ್ಟು ಚರ್ಚೆ ರಾಷ್ಟ್ರಮಟ್ಟದಲ್ಲಿ ಆಗಾಗ ನಡೆಯುತ್ತದೆ. ದನ ಕದಿಯುವ ಹಾಗೂ ಅದನ್ನು ರಕ್ಷಿಸುವ ಗುಂಪುಗಳ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಪ್ರಧಾನಿ ಮೋದಿ “ಸೋ ಕಾಲ್ಡ್ ಗೋರಕ್ಷಕರ” ವಿರುದ್ಧ ಗುಡುಗುತ್ತಿದ್ದಂತೆಯೇ ಮತ್ತೆ ಇಂಥ ಚರ್ಚೆ ಶುರುವಾಗಿದೆ. ಈ ಚರ್ಚೆಗಳಲ್ಲಿ ಮೇಲ್ನೋಟದಲ್ಲಿ ಬಹುಸಂಖ್ಯಾತರ ಆಹಾರ ಕ್ರಮವನ್ನು ಅಲ್ಪ ಸಂಖ್ಯಾತರ ಮೇಲೆ ಹೇರುವ ಹುನ್ನಾರ; ದಲಿತರು ಹಾಗೂ ಅಲ್ಪಸಂಖ್ಯಾತರ ಆಹಾರ ಪದ್ಧತಿಯನ್ನು ಪುರೋಹಿತಶಾಹಿ ವ್ಯವಸ್ಥೆ ಆಳುತ್ತಿರುವ ಸಂಕೇತ ಎಂದೂ, ಬ್ರಾಹ್ಮಣರನ್ನು ಬಿಟ್ಟರೆ ಬೇರೆ ಸಾವಿರಾರು ಜಾತಿ-ಸಮುದಾಯಗಳಿಗೆ ಆಹಾರ ಸಂಬಂಧಿ ವಿಧಿ-ನಿಷೇಧಗಳೇ ಇಲ್ಲ ಎಂಬಂತೆಯೂ ಬಿಂಬಿಸಲಾಗುತ್ತಿದೆ. ಅಷ್ಟೇ ಅಲ್ಲ, ಆಹಾರ ಸೇವಿಸುವಾಗಲೂ ಬ್ರಾಹ್ಮಣರು ಮಾತ್ರ ಅನ್ಯರನ್ನು ಸಹಪಂಕ್ತಿ ಭೋಜನದಲ್ಲಿ ಕೂರಿಸಿಕೊಳ್ಳುವುದಿಲ್ಲ, ಉಳಿದವರಲ್ಲಿ ಇಂಥ ಸಂಪ್ರದಾಯವಿಲ್ಲ ಎಂಬಂತೆಯೂ ಬಿಂಬಿಸುತ್ತ, ಇವೆಲ್ಲ ಜಾತಿಪದ್ಧತಿಯನ್ನು ಬಲಗೊಳಿಸುವ ಪುರೋಹಿತಶಾಹಿಯ ಹುನ್ನಾರ ಎಂದೂ ಸರಳವಾಗಿ ವಾದಿಸಲಾಗುತ್ತದೆ. ಆದರೆ ಇವೆಲ್ಲ ಹಾಗೆ ವಾದಿಸುವವರ ವಿವಿಧ ಸಮುದಾಯಗಳ ಆಹಾರ ಸಂಬಂಧಿ ಅಜ್ಞಾನವನ್ನು ತೋರಿಸುತ್ತದೆಯಲ್ಲದೇ ಇನ್ನೇನನ್ನೂ ಅಲ್ಲ. ಇಂಥ ತಿಳಿವಳಿಕೆಯನ್ನು ತಲೆಕೆಳಗಾಗಿಸುವ ಕ್ಷೇತ್ರಾಧಾರಿತ ಅಧ್ಯಯನದ ಫಲಿತ ಹಾಗೂ ವಾಸ್ತವ ಇಲ್ಲಿದೆ. ಇದು ತುಮಕೂರು ಜಿಲ್ಲೆಯ ಸಾಂಪ್ರದಾಯಿಕ ಆಹಾರ ಪದ್ಧತಿ ಕುರಿತ ಯೋಜನೆಯೊಂದನ್ನು ಆಧರಿಸಿದೆ. ಮತ್ತಷ್ಟು ಓದು »

6
ಜನ

ನಾನ್ ವೆಜ್ ತಿನ್ನುವ ಬಗ್ಗೆ ಒಂದು ವಿಶ್ಲೇಷಣೆ

– ವಿಕ್ರಂ ಪತ್ತಾರ್

ತಂದೂರಿ ಚಿಕನ್ಮನುಷ್ಯನು ಕೆಲವೊಂದು ಅನವಶ್ಯಕ ಬಂಧನಗಳಿಗೆ ಧರ್ಮದ ಹೆಸರಿನಲ್ಲಿ ಸಿಲುಕುತ್ತಾನೆ.ಧರ್ಮದ ತಾತ್ಪರ್ಯವನ್ನಾಗಲೀ ಅಥವಾ ತತ್ವಗಳ ಮರ್ಮವನ್ನಾಗಲೀ ಸರಿಯಾಗಿ ಅರ್ಥ ಮಾಡಿಕೊಳ್ಳದೇ ಒದ್ದಾಡುತ್ತಾನೆ ಅಲ್ಲದೇ ಕೆಲವೊಮ್ಮೆ ಇಂಥ ಸಂಗತಿಗಳೇ ವ್ಯರ್ಥ ಗುದ್ದಾಟಕ್ಕೆ ಈಡು ಮಾಡುವದಲ್ಲದೇ ಸೂಕ್ತ ತೀರ್ಮಾನಕ್ಕೆ ಬರುವಲ್ಲಿ ಹೆಣಗುತ್ತಾನೆ.ಅಂಥವುಗಳಲ್ಲಿ ಈ ನಾನ್ ವೆಜ್ ತಿನ್ನುವದು ಕೂಡ ಒಂದು.

ಮನುಷ್ಯನ ಅಂತಃಕರಣ ಏನಾದರೂ ಹಿಂಸಾತ್ಮಕ ಸನ್ನಿವೇಶವನ್ನು ನೋಡಿದಾಗ ಮರುಗುತ್ತದೆ. ನೀವು ಪರಿಪೂರ್ಣ ಅಹಿಂಸೆಯನ್ನಾಚರಿಸಿದರೆ ಬದುಕುವದಕ್ಕಾಗುವದಿಲ್ಲ.ನಿಮಗೆ ಅರಿವಿಲ್ಲದೇ ಅನೇಕ ಸೂಕ್ಷ್ಮಜೀವಿಗಳ ನಾಶಕ್ಕೆ ನಾವು ಕಾರಣವಾಗುತ್ತೇವೆ.ಕೃಷಿಯಲ್ಲಿ ಭೂಮಿಯನ್ನು ಊಳುವಾಗ ಅನೇಕ ಜೀವಿಗಳ ಸಾವಿಗೆ ಕಾರಣವಾಗುತ್ತೇವೆ.ಅದಕ್ಕಾಗಿಯೇ ಪ್ರಾರಂಭದಲ್ಲಿ ಜೈನ ಧರ್ಮವು ಕೃಷಿಯನ್ನು ಅಹಿಂಸೆಯ ಹೆಸರಿನಲ್ಲಿ ನಿಷೇಧಿಸಿತ್ತು.ಪ್ರಾಣಿಗಳಿಗೆ ಜೀವವಿದೆ,ಭಾವನೆಗಳಿವೆ ಎಂಬುದು ಎಷ್ಟು ಸತ್ಯವೋ ಸಸ್ಯಗಳಿಗೆ ಜೀವ ಮತ್ತು ಭಾವನೆಗಳಿವೆ ಎಂಬುದು ಅಷ್ಟೇ ಸತ್ಯ.ನೀವು ಹಿಂಸೆಯೆಂದು ಭಾವಿಸಿದರೆ ಸಸ್ಯಗಳನ್ನು ಆಹಾರವಾಗಿ ಬಳಸುವದನ್ನು ಬಿಡಲೇಬೇಕಾಗುತ್ತದೆ,ಕೃಷಿಯನ್ನು ನಿಷೇಧಿಸಬೇಕಾಗುತ್ತದೆ. ಮಹಾಭಾರತದಲ್ಲಿ ಒಂದು ಸಸ್ಯವನ್ನು ಕಡಿದರೆ ನೂರು ಮಕ್ಕಳನ್ನು ಕೊಂದ ಪಾಪ ಬರುತ್ತದೆ ಎಂಬ ಭಾವನೆಯಿತ್ತು.ಆದರೆ ಅದೇ ಮಹಾಭಾರತದಲ್ಲಿ ಸೈನ್ಯದಲ್ಲಿ ರಥಗಳು, ಮನೆಯಲ್ಲಿ ಕಟ್ಟಿಗೆಯ ಉಪಕರಣಗಳನ್ನು ಹೇಗೆ ಮಾಡುತ್ತಿದ್ದರು? ಮರಗಳನ್ನು ಕಡಿಯುವದರಿಂದಲೇ ಅಲ್ಲವೇ ? ಹಾಗಾದರೆ ಬಡಗಿಗಳೆಲ್ಲರೂ ಪಾಪಿಗಳಾ?

ಮತ್ತಷ್ಟು ಓದು »