ವಿಷಯದ ವಿವರಗಳಿಗೆ ದಾಟಿರಿ

Posts tagged ‘ಇಸ್ಲಾಮಿಕ್ ಭಯೋತ್ಪಾದನೆ’

14
ಸೆಪ್ಟೆಂ

ಸಾಧಕರ ಹೆಸರಲ್ಲಿ ಅಸ್ಮಿತೆಯ ಹುಡುಕಾಟ

– ಡಾ.ಬಿ.ವಿ.ವಸಂತ ಕುಮಾರ್

basavannaಭಾರತ ದೇಶ ಪ್ರಪಂಚದ ಒಂದು ವಿಶಿಷ್ಟ ದೇಶ. ಭಾರತದ ಬದುಕಿನ ದಾರಿಗಳನ್ನು ಇಲ್ಲಿನ ಮಹಾತ್ಮರು ನಿರ್ಮಿಸಿದ್ದಾರೆ. ಕಾಡಿನಿಂದ ಒಡಮೂಡಿದ ಈ ದಾರಿಗಳೆಡೆಗೆ ನಗರ ಮಹಾನಗರಗಳ ಜನರು ಮುಖಮಾಡಿದ್ದನ್ನೂ, ಮಾಡುತ್ತಾ ಇರುವುದನ್ನೂ, ಮುಂದೆ ಮಾಡುವುದನ್ನೂ ನೋಡಬಹುದು. ಇವರೇ ನಿಜವಾದ ರಾಷ್ಟ್ರ ನಿರ್ಮಾಪಕರು, ಸಂಸ್ಕೃತಿ ಸೃಷ್ಟಿಕರ್ತರು, ಕಲ್ಯಾಣದ ಮಹಾಕನಸುಗಾರರು. ಇಂಥವರನ್ನು ಸಂತರು, ಮಹಂತರು, ಶರಣರು, ಋಷಿಮುನಿಗಳು, ದಾರ್ಶನಿಕರು ಎಂದೆಲ್ಲ ಕರೆಯುತ್ತಾರೆ. ಅವರನ್ನು ಸಮಾಜದ ಜನ ಸದಾ ತಮ್ಮ ಬಾಳಿಗೆ ಆದರ್ಶದ ನಂದಾದೀವಿಗೆಯನ್ನಾಗಿಸಿಕೊಂಡಿದ್ದಾರೆ. ಅವರನ್ನು ಗುರುವೆಂದು ಸ್ವೀಕರಿಸಿ ತಾವು ಭಕ್ತರಾಗಿ ಗುರು-ಶಿಷ್ಯ ಪರಂಪರೆಯ ಆಧ್ಯಾತ್ಮಕ್ಕೂ ಅನುಭವಕ್ಕೂ ಕಾರಣರಾಗಿದ್ದಾರೆ. ಮತ್ತಷ್ಟು ಓದು »