ವಿಷಯದ ವಿವರಗಳಿಗೆ ದಾಟಿರಿ

Posts tagged ‘ಇಸ್ಲಾಮ್’

23
ಏಪ್ರಿಲ್

ಎಲ್ಲದಕ್ಕೂ ಹಿಂದೂಗಳನ್ನು ದೂಷಿಸುವ ಮುನ್ನ …

– ಬೇಲಾಡಿ ದೀಪಕ್ ಶೆಟ್ಟಿ 

So called ವಿಚಾರವಾದಿಗಳೇ, ಲಿಬರಲ್ಗಳೇ ದ್ವೇಷ ಮಾಡಬೇಡಿ, ಫೋಭೀಯಾ ಬೆಳೆಸಬೇಡಿ ಅನ್ನುವವರೇ,

ಅರ್ಥ ಮಾಡ್ಕೊಳ್ಳಿ.ನಮ್ಮ ಸಿಟ್ಟು ಇರೋದು ಯಾವುದೇ ಧರ್ಮದ ಮೇಲಲ್ಲ. ಹಾಗಂತ ದ್ವೇಷನೂ ಸಾಧಿಸುತ್ತಿಲ್ಲ, ಫೋಭೀಯಾನೂ ಹುಟ್ಟು ಹಾಕುತ್ತಿಲ್ಲ.

ಅಲ್ಪಸಂಖ್ಯಾತಧರ್ಮದ ಹೆಸರಿನಲ್ಲಿ ಜಾತ್ಯಾತೀತತೆಯ ಸೋಗಿನಲ್ಲಿ, ಬಹುಸಂಖ್ಯಾತರ ಭಾವನೆಗಳಿಗೆ ರಾಷ್ಟ್ರ ಮತ್ತು ಜೀವನ ಪದ್ದತಿಯ ವಿಚಾರಗಳಲ್ಲಿ ನಮ್ಮ ಭಾವನೆಗಳಿಗೆ ಘಾಸಿ ಆದ್ರೂ ಸುಮ್ಮನೆ ಎಷ್ಟು ದಿನ ಅಂತ ತಾಳ್ಮೆಯಿಂದ ಇರೋದು. ಒಂದಲ್ಲ ಒಂದು ದಿನ ಆಕ್ರೋಶದ ಕಟ್ಟೆ ಒಡೆಯಲೇಬೇಕಲ್ಲವೇ.

ಅದೂ ಹೋಗ್ಲಿ, ಆರೈಕೆ ಕೇಂದ್ರದಲ್ಲಿ ಮಲ ವಿಸರ್ಜನೆ, ನರ್ಸ್ಗಳ ಎದುರು ಬಟ್ಟೆ ಬಿಚ್ಚೋದು, ನೋಟಿಗೆ ಬಾಯಲ್ಲಿ ಉಗುಳು ಹಚ್ಚೋದು. ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ, ಮೊನ್ನೆ ಮೊನ್ನೆ ಪೋಲಿಸರ ಮೇಲೆ ಹಲ್ಲೆ , ಇಡೀ ದೇಶ ಪಕ್ಷಾತೀತವಾಗಿ ಸ್ವಲ್ಪ ವಿಚಾರದಲ್ಲಿ ವ್ಯತ್ಯಾಸ ವಿದ್ದರೂ ಸಾಮೂಹಿಕವಾಗಿ ಹೋರಾಡುವಾಗ,ಇವರ ಈ ಕಿರಿಕ್ಕು. ಎಲ್ಲರಂತೆ ಇರಲು ಏನು ಪ್ರಾಬ್ಲಂ. ಇದೇ ರೀತಿ ಅರಬ್ ದೇಶಗಳಲ್ಲಿ ಮಾಡಿದ್ರೆ ಏನು ಮಾಡ್ತಿದ್ದರು. ಇಲ್ಲಿ ಏನು ಮಾಡಿದ್ರು ನಡೀತಿದೆ ಅನ್ನೋ ಮನೋಭಾವನೆ. ಸರ್ವೇ ಜನೋ ಸುಖಿನೋ ಭವಂತು, ವಸುದೈವ ಕುಟುಂಬಕಂ ಅಂದವರಿಗೆ ಈ ಗತಿ.

ಮತ್ತಷ್ಟು ಓದು »

10
ನವೆಂ

ಅಥೆನ್ಸ್‌ನಲ್ಲಿಲ್ಲದ ಒಂದು ಅಯೋಧ್ಯೆಯಲ್ಲಿತ್ತು! ಅದೇ ಧರ್ಮ

– ಸಂತೋಷ್ ತಮ್ಮಯ್ಯ

ಆಧುನಿಕ ವಾಸ್ತು ಪ್ರಾಕಾರಗಳಲ್ಲಿ ಅತ್ಯಂತ ಜನಪ್ರೀಯತೆಯನ್ನು ಗಳಿಸಿರುವ ಶೈಲಿಗಳಲ್ಲಿ ಗ್ರೀಕ್ ಶೈಲಿಯೂ ಒಂದು. ಅಮೆರಿಕಾದ ವೈಟ್ ಹೌಸಿನಿಂದ ಹಿಡಿದು ಕರ್ನಾಟಕದ ಮಹಾನಗರಗಳ ಪುರಭವನಗಳವರೆಗೂ ಗ್ರೀಕ್ ವಾಸ್ತುಶೈಲಿ ತನ್ನ ಛಾಪನ್ನು ಒತ್ತಿದೆ. ಬೃಹದಾಕಾರದ ಉದ್ದನೆಯ ಕಂಬಗಳು, ಏನೋ ಒಂದು ಗಾಂಭೀರ್ಯವನ್ನೂ ರಾಜಕಳೆಯನ್ನೂ ಒಡಲಲ್ಲಿಟ್ಟುಕೊಂಡ ಈ ಶೈಲಿಯ ಕಟ್ಟಡಗಳು ಕೊಂಚ ಅಧ್ಯಾತ್ಮದ ಭಾವವನ್ನೂ, ಕೊಂಚ ಭೀತಿಯ ಲಕ್ಷಣವನ್ನೂ ಸೂಸುತ್ತಿರುವಂತೆ ಕಾಣಿಸುತ್ತವೆ. ಇಂಥ ಕಟ್ಟಡಗಳು ಇಂದು ಜಗತ್ತಿನ ಸಾಮಾಜಿಕ ಸಂರಚನೆಯನ್ನೂ ಮೀರಿ, ರಾಜಕೀಯ ವಾತಾವರಣವನ್ನೂ ದಾಟಿ, ಪ್ರಾದೇಶಿಕತೆಯ ಶೈಲಿಗಳೆಡೆಯಲ್ಲೂ ಜನಪ್ರೀಯತೆಯನ್ನು ಪಡೆದುಕೊಂಡಿವೆ. ಪುರಾತನ ಗ್ರೀಕ್ ಸಂಸ್ಕೃತಿಗೆ ಮೆರುಗನ್ನೂ ಆಧುನಿಕ ವಾಸ್ತುಶೈಲಿಗೆ ಸವಾಲನ್ನೂ ಒಡ್ಡಿರುವ ಈ ಶೈಲಿ ಗ್ರೀಕ್ ನಾಗರಿಕತೆ ಅಳಿದರೂ ತಾನು ಅಳಿಯದೆ ಉಳಿದುಕೊಂಡಿದೆ. ಅಷ್ಟೇನೂ ಸೂಕ್ಷ್ಮತೆಯಿಲ್ಲದ, ನಾಜೂಕುತನವಿಲ್ಲದ, ಹೆಚ್ಚೇನೂ ಕೌಶಲ್ಯವಿಲ್ಲದಂತೆ ಕಾಣುವ ಗ್ರೀಕ್ ಶೈಲಿ ತನ್ನ ಸರಳತೆಯಿಂದಲೂ ಯೂರೋಪನ್ನು ದಾಟಿ ದೂರದ ಕೊಡಗು-ಚಿಕ್ಕಮಗಳೂರಿನ ಕಾಫಿ ಪ್ಲಾಂಟರುಗಳ ಬೃಹತ್ ಬಂಗಲೆಗಳಲ್ಲೂ ಪ್ರಾತಿನಿಧ್ಯವನ್ನು ಪದೆದುಕೊಂಡಿವೆ. ಜಗತ್ತಿನ ಚಿತ್ರರಂಗದ ಸಿನೆಮಾ ಸೆಟ್ಟುಗಳಲ್ಲಿ, ಕಾವ್ಯ-ಕಥೆಗಳಲ್ಲಿ ರೂಪಕದಂತೆಯೂ ಬಳಕೆಯಾಗಿದೆ. ಭಗ್ನ ಪ್ರೇಮದ ಸಂಕೇತಗಳಂತೆಯೂ ಬಳಕೆಯಾಗಿದೆ ಎಂದರೆ ಅದರ ಜನಪ್ರೀಯತೆಯನ್ನು ಅಂದಾಜಿಸಬಹುದು. ವಸಹಾತುಷಾಹಿ ಬುದ್ಧಿಯ ಬ್ರಿಟಿಷ್,ಫ್ರೆಂಚ್,ಡಚ್ ಜನಗಳ ಕಡಲು ದಾಟಿ ಮೆರೆಯುವ ಜಾಯಮಾನಗಳಿಂದ ಆ ಶೈಲಿ ವಿಶ್ವವ್ಯಾಪಿಯಾಗಿದ್ದೇನೋ ನಿಜ. ಆದರೆ ಅದನ್ನು ಜಗತ್ತು ಗುರುತಿಸುವುದು ಗ್ರೀಕ್ ಶೈಲಿ ಎಂದೇ.

ಇಂಥಾ ವಿಖ್ಯಾತ ವಾಸ್ತು ಶೈಲಿಯ ಮೂಲವಿರುವುದು ಪುರಾತನ ಅಥೆನ್ಸಿನ ಪಾರ್ಥೆನಾನ್ ದೇವಿ ಮಂದಿರದಲ್ಲಿ. ತನ್ನ ಶೈಲಿ ಜಗತ್ತಿನಾದ್ಯಂತ ಹರಡಿದ್ದರೂ ಇಂದಿಗೂ ಪಾರ್ಥೆನಾನ್ ಒಂದು ಮುರುಕು ಮಂಟಪವೇ. ತನ್ನತನವನ್ನು ಜಗತ್ತಿಗೆ ಹರಡಿದ ಮೇಲೆ ಇನ್ನು ಕೆಲಸವೇನಿದೆ ಎಂಬಂತೆ ಒಂದು ಕಾಲದ ಪಾರ್ಥೆನಾನ್ ಅದೇ ಗ್ರೀಸಿನ ಅಕ್ರೊಪೊಲೀಸ್ ಬೆಟ್ಟದ ಮೇಲೆ ನಿಡುಸುಯ್ಯುವಂತೆ ಬಿದ್ದುಕೊಂಡಿದೆ. ಇಷ್ಟೇ ಆಗಿದ್ದರೆ ಅದರಲ್ಲೇನೋ ವಿಶೇಷವಿರುತ್ತಿರಲಿಲ್ಲ. ಕೇವಲ ವಾಸ್ತು ಶಾಸದ ಶೈಲಿಯೊಂದರ ಬಣ್ಣನೆ ಸದ್ಯದ ಆವಶ್ಯಕತೆಯಂತೂ ಖಂಡಿತಾ ಅಲ್ಲ.

ಮತ್ತಷ್ಟು ಓದು »

13
ನವೆಂ

ಇಸ್ಲಾಮ್ ವಿಮರ್ಶೆ ಮಾಡಬಾರದಮ್ಮ,ಹಿಂದೂಗಳನ್ನು ಟೀಕಿಸುವುದು ಕರ್ಮ: ಮೈತ್ರಿ ಸರ್ಕಾರದ್ದು ಧೃತರಾಷ್ಟ್ರ ಪ್ರೇಮ!

– ಶ್ರೀನಿವಾಸ್ ರಾವ್

ಘಟನೆ-1
ಬ್ರಿಟೀಶ್ ವಿರುದ್ಧದ ಹೋರಾಟದಲ್ಲಿ ಕೆಂಪೇಗೌಡರ ಪಾತ್ರವೇನು? ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಮರುನಾಮಕರಣ ಮಾಡಬೇಕು – ಗಿರೀಶ್ ಕಾರ್ನಾಡ್
ಗಿರೀಶ್ ಕಾರ್ನಾಡ್ ಗೆ ಇತಿಹಾಸ ಗೊತ್ತಿಲ್ಲ, ಸರ್ಕಾರಿ ಪ್ರಾಯೋಜಿತ ಸಾಹಿತಿ- ಹೆಚ್ ಡಿ ಕುಮಾರಸ್ವಾಮಿ

2015 ರ ಟಿಪ್ಪು ಜಯಂತಿ ಕಾರ್ಯಕ್ರಮ, ರಕ್ತಪಾತವಾದರೂ ಸರಿಯೇ ಟಿಪ್ಪು ಜಯಂತಿಯನ್ನು ನಡೆಸಲೇಬೇಕೆಂಬ ಜಿದ್ದಿಗೆ ಬಿದ್ದಿದ್ದ ಸಿದ್ದರಾಮಯ್ಯ ಸರ್ಕಾರ, ಟಿಪ್ಪು ಸುಲ್ತಾನನನ್ನು ಬಣ್ಣಿಸಲು “ಟಿಪ್ಪುವಿನ ಕನಸುಗಳು”ನ್ನು ಕಟ್ಟಿಕೊಟ್ಟಿದ್ದ ಸಾಹಿತಿ ಗಿರೀಶ್ ಕಾರ್ನಾಡ್ ಅವರನ್ನು ಆಹ್ವಾನಿಸಿತ್ತು. ತಮ್ಮ ಧಣಿಯ ಎದುರು ಅವರ ಕುಲದೈವವನ್ನು ಹೊಗಳಲು ನಿಂತ ಸರ್ಕಾರಿ ಪ್ರಾಯೋಜಿತ ಸಾಹಿತಿ ಗಿರೀಶ್ ಕಾರ್ನಾಡ್ ಮಾತಿನ ಓಘದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರೇಕೆಬೇಕು? ಟಿಪ್ಪು ಹೆಸರಿಡಬೇಕು, ಟಿಪ್ಪು ಬ್ರಿಟೀಷರ ವಿರುದ್ಧ ಹೋರಾಡಿದ್ದ, ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಕೆಂಪೇಗೌಡರ ಪಾತ್ರ ಇರಲಿಲ್ಲ ಎಂದುಬಿಟ್ಟಿದ್ದರು.

ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಕೆಂಪೇಗೌಡರ ಪಾತ್ರ ಏನು? ಮಹಾಭಾರತದ ಯುದ್ಧದಲ್ಲಿ ಅರ್ಜುನ ಕೌರವರ ವಿರುದ್ಧ ಏಕೆ ಬ್ಯಾಲಿಸ್ಟಿಕ್ ಮಿಸೈಲ್ ಪ್ರಯೋಗ ಮಾಡಲಿಲ್ಲ? ದನ್ಯಾಂಗ್-ಕುನ್ಶಾನ್ ಗ್ರ್ಯಾಂಡ್ ಬ್ರಿಡ್ಜ್ ನಿರ್ಮಾಣಕ್ಕೆ ಶ್ರೀರಾಮನ ಕೊಡುಗೆ ಏನು
ಎಂಬಂಥಹ ಸೆನ್ಸಿಬಲ್ ಪ್ರಶ್ನೆಗಳು ಸೆಕ್ಯುಲರ್ ಸರ್ಕಾರಿ ಪ್ರಾಯೋಜಿತ ಬುದ್ಧಿಜೀವಿಗಳಿಗಷ್ಟೇ ಹೊಳೆಯುವುದಕ್ಕೆ ಸಾಧ್ಯ. ಇರಲಿ…

ಮತ್ತಷ್ಟು ಓದು »

6
ಜನ

ಸಂಘಟನೆಯನ್ನು ನಿಷೇಧಿಸಬಹುದು.ಆದರೆ ಮನಸ್ಥಿತಿಯನ್ನು ಏನು ಮಾಡುವುದು?

– ರಾಕೇಶ್ ಶೆಟ್ಟಿ

ಸಂಘಟನೆಯನ್ನು ನಿಷೇಧಿಸಬಹುದು.ಆದರೆ,ಮನಸ್ಥಿತಿಯನ್ನು ಏನು ಮಾಡುವುದು? ಇಂತಹದ್ದೊಂದು ಪ್ರಶ್ನೆಯನ್ನು ಫೇಸ್ಬುಕ್ಕಿನಲ್ಲಿ ಗೆಳೆಯ ಸಂದೀಪ್ ಕೇಳಿದ್ದರು.ಅವರ ಪ್ರಶ್ನೆಯಿದ್ದಿದ್ದು  Ban PFI ಎಂಬ ಹೋರಾಟದ ಕುರಿತು. ವಾಜಪೇಯಿಯವರ ಕಾಲದಲ್ಲಿ ಸಿಮಿ ಸಂಘಟನೆಯನ್ನು ನಿಷೇಧಿಸಲಾಯಿತು. ಆಮೇಲೇನಾಯ್ತು? ರಕ್ತಬೀಜಾಸುರರಂತೆ ನಾನಾ ಹೆಸರು,ಸಂಘಟನೆಗಳನ್ನು ಮಾಡಿಕೊಂಡು ಇಸ್ಲಾಮೀಕರಣದ ತಮ್ಮ ಅಜೇಂಡಾವನ್ನು ಇವರು ಒಂದಲ್ಲ ಒಂದು ರೀತಿಯಲ್ಲಿ ಮುಂದುವರೆಸಿಕೊಂಡು ಬಂದರು.ಮುಂಬೈ ಸರಣಿ ಬಾಂಬ್ ಬ್ಲಾಸ್ಟ್ ನಿಂದ ಹಿಡಿದು ಇತ್ತೀಚಿನ ದಿನಗಳವರೆಗೂ ದೇಶದಲ್ಲಿ ನಡೆದ ಬಾಂಬ್ ಸ್ಪೋಟದ ಆರೋಪಿಗಳು ಒಂದೋ ನಿಷೇಧಿತ ಸಿಮಿಯ ಕಾರ್ಯಕರ್ತರಾಗಿದ್ದವರು ಅಥವಾ ಹೊಸತೊಂದು ಸಂಘಟನೆಯ ಬ್ಯಾನರಿನಡಿಯಲ್ಲಿ ಸಿಮಿಯ ಕಾರ್ಯವನ್ನೇ ಮುಂದುವರೆಸಿದ್ದವರು.ಅಂದರೆ ಒಂದು ವಿಷಯ ಸ್ಪಷ್ಟವಾಗಿದೆ. ಸಂಘಟನೆ ನಿಷೇಧವಾದರೂ, ಹೆಸರು ಬದಲಾದರೂ ಅವರ “ಉದ್ದೇಶ” ಬದಲಾಗಲಿಲ್. ಏಕೆ? ಈ ಪ್ರಶ್ನೆಗೆ ಉತ್ತರ ಡಾ.ಬಿ.ಆರ್ ಅಂಬೇಡ್ಕರ್ ಅವರ “Pakistan or Partition of India” ಪುಸ್ತಕದಲ್ಲಿ ಸಿಗುತ್ತದೆ. ಆ ಪುಸ್ತಕದಲ್ಲಿ ಅಂಬೇಡ್ಕರ್ ಅವರು ಭಾರತದ ವಿಭಜನೆ ಮತ್ತು ಪಾಕಿಸ್ತಾನದ ಬಗ್ಗೆ ಮಾತ್ರ ಮಾತನಾಡಿಲ್ಲ,ಅವೆರಡರ ಜೊತೆಗೆ ಮುಖ್ಯವಾಗಿ,ಇಸ್ಲಾಮ್ ಹಾಗೂ ಭಾರತೀಯ ಮುಸ್ಲಿಂರ ಮನಸ್ಥಿತಿಯ ಬಗ್ಗೆಯೂ ವಿವರವಾಗಿ ಬರೆದಿದ್ದಾರೆ.

ಇಂತಹ ಸಂಘಟನೆಗಳ ಬಹುಮುಖ್ಯ ಉದ್ದೇಶ,ಒಂದು ದೇಶವನ್ನು ದಾರ್-ಉಲ್-ಅರ್ಬ್ ನಿಂದ ದಾರ್-ಉಲ್-ಇಸ್ಲಾಮ್ ಮಾಡುವುದೇ ಆಗಿರುತ್ತದೆ. ಏನಿದು ದಾರ್-ಉಲ್-ಅರ್ಬ್/ದಾರ್-ಉಲ್-ಇಸ್ಲಾಮ್? ಅಂಬೇಡ್ಕರ್ ಅವರ ಮಾತನ್ನೇ ಕೋಟ್ ಮಾಡುತ್ತೇನೆ. “… According to Muslim Canon Law the world is divided into two camps, Dar-ul-lslam (abode of Islam), and Dar-ul-Harb (abode of war). A country is Dar-ul-lslam when it is ruled by Muslims. A country is Dar-ul-Harb when Muslims only reside in it but are not rulers of it. That being the Canon Law of the Muslims, India cannot be the common motherland of the Hindus and the Musalmans. It can be the land of the Musalmans—but it cannot be the land of the ‘Hindus and the Musalmans living as equals…” ಅಂದರೆ, ಯಾವ ದೇಶವು ಸಂಪೂರ್ಣವಾಗಿ ಇಸ್ಲಾಮ್ ಅನ್ನು ಒಪ್ಪಿಕೊಂಡು ಮುಸ್ಲಿಮರಿಂದ ಆಳಲ್ಪಡುತ್ತಿದೆಯೋ ಅದು ದಾರ್-ಉಲ್-ಇಸ್ಲಾಮ್ ಎಂದು ಕರೆಸಿಕೊಳ್ಳುತ್ತದೆ. ಯಾವ ದೇಶವು ಮುಸ್ಲಿಮೇತರರಿಂದ ಆಳಲ್ಪಡುತ್ತಿದೆಯೋ ಅದು ದಾರ್-ಉಲ್-ಅರ್ಬ್ ಆಗಿರುತ್ತದೆ.

ಮತ್ತಷ್ಟು ಓದು »

22
ಆಕ್ಟೋ

ಲಿಂಗಾಯತವೆಂಬುದು ಹೊಸ ಧರ್ಮವೇ? … ಭಾಗ 2

– ದೇವು ಹನೆಹಳ್ಳಿ,
ಬಾರಕೂರು, ಉಡುಪಿ

ಮತ,ಪಂಥ,ಧರ್ಮ,Religion ಇತ್ಯಾದಿ… ಭಾಗ 1

Religion ಅನ್ನು `ಧರ್ಮ’ ವೆಂದು ಅನುವಾದಿಸಿದ್ದು ಶತಮಾನದ ದೊಡ್ಡ ಅಕ್ರಮ-ಸಕ್ರಮ ಯೋಜನೆ.    

ನಾವು ಭಾರತೀಯರು Religion ಎಂಬ ಏಕಸೂತ್ರದಲ್ಲಿ ಇಲ್ಲ ಎಂಬುದು ನಮ್ಮ ಸುಪ್ತಪ್ರಜ್ಞೆಗೆ ಗೊತ್ತು. ಏಕಸೂತ್ರಕ್ಕೆ ಏನೆನ್ನಬೇಕು? ಅದೊಂದು Religion ಅಲ್ಲ, ಜೀವನವಿಧಾನ ಎಂದು ಯಾರೋ ಅಂದರು. (ಎಂ.ಬಿ. ಪಾಟೀಲರೂ ಅದನ್ನೇ ಹೇಳುತ್ತಾರೆ! `ಹಿಂದೂ ಎಂಬುದಿಲ್ಲ; ಇಲ್ಲಿದ್ದುದು ಬರೇ ಜಾತಿಗಳು’ಎಂದು ಕಾಗೋಡು ತಿಮ್ಮಪ್ಪನವರು ಸರಿಯಾಗಿಯೇ ಹೇಳಿದ್ದಾರೆ.) ಜೀವನಧರ್ಮ ಎಂದರು. ಸನಾತನ ಪದ್ಧತಿ ಎಂದರು. ಸನಾತನ ಧರ್ಮ ಎಂದುಬಿಟ್ಟರು. `ಧರ್ಮ’ ಎಂದುಬಿಟ್ಟ ಅಚಾತುರ್ಯವಿದೆಯಲ್ಲಾ, ಅದು ಈ ಶತಮಾನದ ಒಂದು ದೊಡ್ಡ ಅಕ್ರಮ-ಸಕ್ರಮ ಯೋಜನೆ.

ಈ ಅಸ್ಪಷ್ಟವಾದ ‘ಧರ್ಮ’ ಎಂಬ ಪದ ಬಳಕೆಯಾದ ಕಾಲಘಟ್ಟದಲ್ಲಿ ನಡೆದುಹೋದ ಒಂದು ಚಾರಿತ್ರಿಕ ಘಟನೆಯೆಂದರೆ ಚಿಕಾಗೋದಲ್ಲಿ ನಡೆದ Parliament of World’s Religions. ಇದನ್ನು ಭಾರತೀಯ ಭಾಷೆಗಳಿಗೆ, ಕನ್ನಡಕ್ಕೆ ವಿಶ್ವ ಸರ್ವಧರ್ಮ ಸಮ್ಮೇಳನ ಎಂದು ಭಾಷಾಂತರಿಸಲಾಯಿತು. (ಅದಾಗಲೇ ಉತ್ತರಭಾರತದಲ್ಲಿ ಹಲವಾರು ಭಾಷೆಗಳ ಪದಗಳನ್ನು ಎರವಲು ಪಡೆದು ‘ಹಿಂದಿ’ ಎಂಬ ಹೊಸ ಭಾಷೆಯನ್ನು ತಯಾರಿಸುತ್ತಿದ್ದ  ಕಾಲದಲ್ಲಿ ಮತಕ್ಕೆ (Religion) ಬದಲಾಗಿ, ಧರಮ್ ಎನ್ನುವ ಪರಿಪಾಠ ಬಂದಿತ್ತು.) ಅದುವರೆಗೆ Religionಗೆ ಸಂವಾದಿಯಾಗಿ, ಸಮಾನಾರ್ಥಕವಾಗಿ ಬಳಕೆಯಾಗುತ್ತಿದ್ದ ‘ಮತ’ ಎಂಬ ಶಬ್ದವನ್ನು ಕದಲಿಸಿ ಅಲ್ಲಿ ‘ಧರ್ಮ’ ಎಂಬ ಪದವನ್ನು ಕೂರಿಸಲಾಯಿತು.  ಧರ್ಮ ಎಂಬುದು ಯಾವತ್ತೂ ಋತ, ನ್ಯಾಯ, ನೀತಿ, ಸತ್ಯ, ಋಜುತ್ವ, ದಯೆ, ಕರುಣೆ, ಕರ್ತವ್ಯ, ನ್ಯಾಯಸಮ್ಮತ ನಡವಳಿಕೆ ಮುಂತಾದ ಮಾನವೀಯ ಮೌಲ್ಯಗಳ ಮೊತ್ತವಾಗಿ ಗ್ರಹಿಸಿದ್ದೇ ವಿನಃ ಸಂಕುಚಿತ ಮತೀಯ ತೀರ್ಮಾನ, ಗ್ರಹಿಕೆಗಳಾಗಿ ಅಲ್ಲ.

ಭಾರತೀಯ ಸಂದರ್ಭದಲ್ಲಿ  Religionಗೆ ಸಂವಾದಿಯಾಗಿ ‘ಮತ’ ಎನ್ನುವುದಕ್ಕಿಂತ ‘ಧರ್ಮ’ಎಂದರೆ ಹೆಚ್ಚು ಸ್ವೀಕಾರಾರ್ಹತೆ, Legitimacy, ಬರುವ ವಾಸನೆ ಬಡಿಯುತ್ತಲೇ ರಕ್ತದಲ್ಲಿ ಮಿಂದೆದ್ದ Religion(ಮತ)ಗಳೆಲ್ಲ ತಮ್ಮನ್ನು ಧರ್ಮ ಎಂದು ಕರೆದುಕೊಳ್ಳಲಾರಂಭಿಸಿದವು. ಮತಪಂಥಗಳ ಕುರಿತಾದ ವಾಗ್ವಾದವನ್ನೇ ಹಾಳುಗೆಡವಿದ ಈ ವಿದ್ಯಮಾನ ಎಲ್ಲ ಭಾರತೀಯ ಭಾಷೆಗಳ ಪದಕೋಶಗಳನ್ನು ಕಲುಷಿತಗೊಳಿಸಿಬಿಟ್ಟಿತು. ಯುರೋಪಿಯನ್ ಭಾಷೆಗಳಲ್ಲಿ Religion ಮತ್ತು Munificence+Benevolence +Values+ Rectitude ಒಂದೇ ಅಲ್ಲ; ಆದರೆ ಭಾರತದಲ್ಲಿ ಮತ ಮತ್ತು ಧರ್ಮ ಎಂದರೆ ಒಂದೇ!

‘ನೂರು ಮತಗಳ ಹೊಟ್ಟ ತೂರಿ…’ ಎಂದು ಹಾಡುವ ಕಾಲದಲ್ಲಿ ಕುವೆಂಪು ಅವರ ಶಬ್ದಕೋಶ ಸರಿಯಿತ್ತು. ಆದರೆ ಅವರೇ `ಇಸ್ಲಾಂ ಧರ್ಮ’ ಎಂಬ ಹೊತ್ತಗೆ ಬರೆದರು! ಆದರೆ ಪಂಪನಿಗೆ ಈ ಗೊಂದಲವಿರಲಿಲ್ಲ. ಧರ್ಮ ಎಂದರೇನು, ಅಧರ್ಮ ಎಂದರೇನು? ಪಂಪ ಸ್ಪಷ್ಟವಾಗಿ ಹೇಳುತ್ತಾನೆ:

ಮತ್ತಷ್ಟು ಓದು »

21
ಆಕ್ಟೋ

ಮತ,ಪಂಥ,ಧರ್ಮ,Religion ಇತ್ಯಾದಿ… ಭಾಗ 1

– ದೇವು ಹನೆಹಳ್ಳಿ,
ಬಾರಕೂರು, ಉಡುಪಿ

 

ಒಂದು ಕಲ್ಲನು ಕಡಿದು ಮತ್ತೊಂದು ಕಲ್ಲಿಗೆ

ಭೋಗವ ಕೊಟ್ಟಿಹೆನೆಂಬ ಅಜ್ಞಾನವಿದೇನೋ?

–  ಅಲ್ಲಮಪ್ರಭು

 

ಲಿಂಗಾಯತ, ವೀರಶೈವ ‘ಸ್ವತಂತ್ರಧರ್ಮ’ ಘೋಷಣೆ, ಮಾನ್ಯತೆ ಇತ್ಯಾದಿಗಳ ಕುರಿತು ವ್ಯಾಪಕ ಚರ್ಚೆ, ಗುದ್ದಾಟಗಳನ್ನು ಪ್ರಸ್ತಾಪಿಸುವ ಮೊದಲು ‘ನಾನು ಯಾರು’ ಎಂಬುದನ್ನು ಸ್ಪಷ್ಟಗೊಳಿಸುವುದು ಅಗತ್ಯ ಮತ್ತು ಒಳಿತು. ಕಳೆದೆರಡು ಸಾವಿರ ವರ್ಷಗಳಿಂದ ‘ನಾನ್ಯಾರು’ ಎಂಬುದು ನನ್ನ ಸಮಸ್ಯೆಯಾಗಿರಲಿಲ್ಲ. ಯಾಕೆಂದರೆ ನಾನು ಅಜ್ಞಾನಿ, ಮೂಢ. ಅದು ಯಾರಿಗೆ ಸಮಸ್ಯೆಯಾಯಿತೋ ಅವರೇ ನೀಡಿದ ವ್ಯಾಖ್ಯೆಗಳನ್ನು ಒಪ್ಪಿಕೊಳ್ಳುತ್ತೇನೆ. ಏಕೆಂದರೆ ಅದು ಅನಿವಾರ್ಯ. ಹೌದು, ನಾನು ಪೇಗನ್,ಕಾಫಿರ, ಹೀದನ್. ಅನಂತರ ಹಿಂದೂ ಎಂದರು. “ಹಿಂದೂ” ಎನ್ನಿಸಿಕೊಳ್ಳುವುದು ಕೂಡಾ ನನ್ನ ಅಗತ್ಯವಾಗಿರಲಿಲ್ಲ, ಕೋರಿಕೆಯಾಗಿರಲಿಲ್ಲ. (ಕುರಿಯನ್ನು ‘ಕುರಿ’ ಎನ್ನುವುದು ಕುರಿಯ ಅಗತ್ಯವೇನೂ ಅಲ್ಲವಲ್ಲ?!) ಆದರೂ ಒಪ್ಪಿಕೊಳ್ಳುತ್ತೇನೆ. ಈಗ ಎಸ್.ಎಂ. ಜಾಮದಾರ್, ಗೊ.ರು.ಚ., ರಂಜಾನ್ ದರ್ಗಾ, ಮಾತೆ ಮಹಾದೇವಿ, ಮೀನಾಕ್ಷಿ ಬಾಳಿ ಮೊದಲಾದ ಶರಣಶರಣೆಯರು, ಅಸಂಖ್ಯ ಮಠಾಧೀಶರು, ಸಿದ್ಧರಾಮಯ್ಯನವರ ಸರಕಾರದ ಮಂತ್ರಿಗಳು, ಚಿಂತಕರು, ಪ್ರಗತಿಪರರು, ಪತ್ರಕರ್ತರು, ವಿಚಾರವಾದಿಗಳು, ಬುದ್ಧಿಜೀವಿಗಳು, liberals ಮುಂತಾದವರು ಒಂದು ಕೈಯಲ್ಲಿ ನನ್ನ ಕತ್ತು ಹಿಡಿದು, ಇನ್ನೊಂದು ಕೈಯಲ್ಲಿ ಕತ್ತಿ ಹಿಡಿದು ‘ಭವಿ’ ಎಂದು ಕರೆಯುತ್ತಿದ್ದಾರೆ. ನಾನು ಅಜ್ಞಾನಿಯಲ್ಲವೇ? ಮಹಾಪ್ರಸಾದವೆಂಬೆನು! (ಭವಿ ಎಂದರೆ ಇಷ್ಟಲಿಂಗವನ್ನು ಪೂಜಿಸದವನು; ಲೌಕಿಕವನ್ನು, ಅಂದರೆ ಭವವನ್ನು ನೆಚ್ಚಿ ಮೋಕ್ಷ ಪಡೆಯಲಾರದವನು; ಪಾಪಿ ಇತ್ಯಾದಿ.)

ಸತ್ಯವೆಂದರೆ ಪೇಗನ್, ಹೀದನ್, ಕಾಫಿರ್, ಹಿಂದೂ, ಭವಿ ಎಂಬೆಲ್ಲಾ ಬಿರುದುಗಳಿಗೂ, ಪಾಪಿ, ಅಜ್ಞಾನಿ, ಅವಿಶ್ವಾಸಿ, ಕಳ್ಳ, ಮೂರ್ತಿಪೂಜೆ ಮಾಡುವ ಮೂರ್ಖ, ಕಂದಾಚಾರಿ, ಮೂಢ, ಅನಾಚಾರಿ, ಮಿಥ್ಯಾರಾಧಕ ಎಂಬೆಲ್ಲಾ ಪದನಾಮಗಳಿಗೂ ಅಂತಹ ವ್ಯತ್ಯಾಸವೇನೂ ಇಲ್ಲ! ಜತೆಗೆ ವೈಯಕ್ತಿಕವಾಗಿ ನಾನು ನಾಸ್ತಿಕ ಮತ್ತು ನಿರೀಶ್ವರಿ. (ನಿರೀಶ್ವರವಾದಿಯಲ್ಲ.) ಅದು ಕೂಡಾ ಕಳೆದ 2-3 ಸಾವಿರ ವರ್ಷಗಳಿಂದ ನಾನು, ನನ್ನಂತಹ ಅಸಂಖ್ಯ ಪೇಗನ್ನರಿಗೆ ಸಮಸ್ಯೆಯಾಗಿರಲಿಲ್ಲ; ಯಾವ ಪೇಗನ್ನರೂ ನನ್ನನ್ನು ಸಾರ್ವಜನಿಕವಾಗಿ ಸುಡಲಿಲ್ಲ.

ನಾವು ನಮ್ಮ ಅಜ್ಞಾನದಲ್ಲಿ ಸುಖವಾಗಿದ್ದರೂ, ನಮಗೆ ಅವು ಸಮಸ್ಯೆಯಾಗಿ ಕಂಡಿಲ್ಲದಿದ್ದರೂ ‘ಇತರರಿಗೆ’ ಯಾಕೆ ಸಮಸ್ಯೆಯಾದವು? ಇವೆಲ್ಲ ಹಲವು ದಿಕ್ಕಿನಿಂದ ಒಂದಾಗಿ, ಒಂದೊಂದಾಗಿ ಆರಂಭಗೊಂಡವು ಎನ್ನಬಹುದು.

ಮತ್ತಷ್ಟು ಓದು »

14
ಆಕ್ಟೋ

ಅಂಬೇಡ್ಕರ್ ಅವರ ಮತಪರಿವರ್ತನೆ ಮತ್ತು ಸಮಕಾಲಿನ ಸವಾಲುಗಳು

– ರಘು.ಎಸ್,ಸಂಶೋಧನಾ ವಿದ್ಯಾರ್ಥಿ,

ಕುವೆಂಪು ವಿಶ್ವವಿದ್ಯಾನಿಲಯ,ಜ್ಞಾನ ಸಹ್ಯಾದ್ರಿ ಶಂಕರಘಟ್ಟ.

ಕೆಲವು ದಿನಗಳ ಹಿಂದೆ ಯಾವುದೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಂಬೇಡ್ಕರ್ ಅವರ ಮೊಮ್ಮೊಗರಾದ ಪ್ರಕಾಶ್ ಯಶವಂತ್ ಅಂಬೇಡ್ಕರ್ ಅವರು ಸಾರ್ವಜನಿಕವಾಗಿ ದಲಿತರೆಲ್ಲರೂ ಮತಾಂತರವಾಗಬೇಕು ಎಂದು ಕರೆ ನೀಡುತ್ತಾರೆ. ಇದು ಕೇವಲ ಅಂಬೇಡ್ಕರ್ ಮೊಮ್ಮೊಗ ಅವರ ಕರೆ ಮಾತ್ರ ಅಲ್ಲ. ಇಂದು ದಲಿತ ಸಮಸ್ಯೆಯ ಕುರಿತು ಮಾತನಾಡುವ ಬಹುತೇಕ ಚಿಂತಕರು ತಮ್ಮ ಭಾಷಣಗಳಲ್ಲಿ ಹಾಗೂ ಬರವಣಿಗೆಗಳಲ್ಲಿ ಇದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ. ಇದಕ್ಕೆ ಕಾರಣವೇನು? ಅಥವಾ ದಲಿತರು ಏಕೆ ಹಿಂದೂಧರ್ಮವನ್ನು ಬಿಟ್ಟು ಬೇರೆ ರಿಲಿಜನ್ನುಗಳಿಗೆ ಮತಾಂತರವಾಗಬೇಕು? ಎಂದು ಕೇಳಿದರೆ ಅಂಬೇಡ್ಕರ್ ಅವರ ವಾದದ ಹೊರತಾಗಿ ಯಾವ ಹೊಸ ಅಂಶವನ್ನು ಇವರ ಉತ್ತರದಲ್ಲಿ ಗುರುತಿಸಲು ಸಾಧ್ಯವಾಗುವುದಿಲ್ಲ.

ಅಂದರೆ “ಭಾರತದಲ್ಲಿ ಹಿಂದೂಯಿಸಂನ ಅವಿಭಾಜ್ಯ ಅಂಗವಾಗಿರುವ ಜಾತಿವ್ಯವಸ್ಥೆಯು ಶ್ರೇಣಿಕರಣಗೊಂಡಿದ್ದು, ಈ ಶ್ರೇಣಿಕರಣದಲ್ಲಿ ಬ್ರಾಹ್ಮಣ ಪುರೋಹಿತಶಾಹಿಗಳು ಮೇಲ್ವರ್ಗದವರಾದರೆ ದಲಿತರು ಕೆಳವರ್ಗದವರಾಗಿದ್ದಾರೆ. ಈ ಹಿನ್ನಲೆಯಲ್ಲಿ ಭಾರತದಲ್ಲಿ ಸಾವಿರಾರು ವರ್ಷಗಳಿಂದಲೂ ಬ್ರಾಹ್ಮಣ ಪುರೋಹಿತಶಾಹಿಗಳು ಹಾಗೂ ದಲಿತರ ನಡುವೆ ವರ್ಗ ಸಂಘರ್ಷ ನಡೆಯುತ್ತಿದೆ. ಈ ವರ್ಗ ಸಂಘರ್ಷದಲ್ಲಿ ದಲಿತರು ಬದುಕುಳಿಯಲು ಸಾಧ್ಯವಿಲ್ಲ. ಕಾರಣ ದಲಿತರಿಗೆ ಹಣಬಲವಾಗಲಿ, ಜನಬಲವಾಗಲಿ ಅಥವಾ ಬುದ್ಧಿಬಲವಾಗಲಿ ಇಲ್ಲ. ಈ ಕಾರಣಕ್ಕೆ ದಲಿತರು ಹಿಂದೂಯಿಸಂ ಗೆ ಹೊರತಾದ ಬೇರೊಂದು ರಿಲಿಜನ್ನಿಗೆ ಮತಾಂತರವಾಗದ ಹೊರತು ಹಿಂದೂಗಳ ದಬ್ಬಾಳಿಕೆಯಿಂದ ಮುಕ್ತವಾಗಲು ಸಾಧ್ಯವಿಲ್ಲ”ಎನ್ನುವುದು ಅಂಬೇಡ್ಕರ್ ಅವರ ವಾದ. ಇಂದು ಮತಾಂತರದ ಪರವಾಗಿ ಮಾತನಾಡುವ ಚಿಂತಕರು ಕೂಡ ಅಂಬೇಡ್ಕರ್ ಅವರ ಮೇಲಿನ ವಾದವನ್ನೇ ಪುನರುಚ್ಚರಿಸುವುದು ಕಂಡುಬರುತ್ತದೆ. ಆದರೆ ಅಂಬೇಡ್ಕರ್ ಅವರ ವಾದವನ್ನು ಮುಂದೊತ್ತುತ್ತಿದ್ದೇವೆ ಎನ್ನುವ ಪ್ರಸ್ತುತ ಚಿಂತಕರು ತಮಗೆ ಅರಿವಿಲ್ಲದೇ ಅಂಬೇಡ್ಕರ್ ಅವರಿಗೆ ವಿರುದ್ಧವಾಗಿ ನಿಲ್ಲುತ್ತಾರೆ. ಪ್ರಸ್ತುತ ಲೇಖನದಲ್ಲಿ ಇದನ್ನು ಪರಿಶೀಲಿಸಲಾಗುವುದು.

ಭಾರತದಲ್ಲಿ ಹಿಂದೂಯಿಸಂ ಹಾಗೂ ಜಾತಿವ್ಯವಸ್ಥೆಯ ಕಾರಣದಿಂದಾಗಿ ದಲಿತರು ಅನೇಕ ರೀತಿಯ ಸಮಸ್ಯೆಗಳಿಗೆ ಒಳಗಾಗಿದ್ದಾರೆ ಎಂದು ಹೇಳುವ ಅಂಬೇಡ್ಕರ್ ಅವರು, ಹಿಂದೂಯಿಸಂ ಅನ್ನು ತೊರೆಯುವುದೇ ದಲಿತರ ಸಮಸ್ಯೆ ನಿವಾರಣೆಯಾಗಲು ಸೂಕ್ತ ಪರಿಹಾರ ಎಂದು ಹೇಳುತ್ತಾರೆ ಎನ್ನುವುದೇನೋ ನಿಜ. ಆದರೆ ಈ ನಿರ್ಧಾರವನ್ನು ತೆಗೆದುಕೊಳ್ಳುವುದಕ್ಕೆ ಪೂರ್ವಭಾವಿಯಾಗಿ ಸಾಕಷ್ಟು ಅಧ್ಯಯನವನ್ನು ನಡೆಸುರುತ್ತಾರೆ. 1935ರಲ್ಲಿ “ಹಿಂದೂವಾಗಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯಲಾರೆ”ಎಂದು ಹೇಳುವ ಅಂಬೇಡ್ಕರ್ ಅವರು ಅಂತಿಮವಾಗಿ 1956ರಲ್ಲಿ ತಮ್ಮ ಲಕ್ಷಾಂತರ ಅನುಯಾಯಿಗಳ ಜೊತೆ ಬೌದ್ಧ ಧರ್ಮವನ್ನು ಸ್ವೀಕರಿಸುತ್ತಾರೆ. ಬೌದ್ಧ ಧರ್ಮವನ್ನೇ ಏಕೆ ಸ್ವೀಕರಿಸಿದರು? ಬಹುಶಃ ಮತಾಂತರದ ಪರವಾಗಿ ಮಾತನಾಡುವ ಪ್ರಸ್ತುತ ಚಿಂತಕರಿಗೆ ಈ ಪ್ರಶ್ನೆ ಹೊಳೆದಿರಲಿಕ್ಕಿಲ್ಲ. ಆದರೆ ಅಂಬೇಡ್ಕರ್ ಅವರ ಬರವಣಿಗೆಗಳ ಕಡೆ ಕಣ್ಣು ಹಾಯಿಸಿದರೆ ಇದಕ್ಕೆ ಸ್ಪಷ್ಟವಾದ ಉತ್ತರ ಸಿಗುತ್ತದೆ. ಅಂದರೆ ದಲಿತರ ಸಮಸ್ಯೆಗೆ ಮತಾಂತರವೇ ಅಂತಿಮ ಪರಿಹಾರ ಎಂದು ಹೇಳುವ ಅಂಬೇಡ್ಕರ್ ಅವರು ಯಾವ ಮತಕ್ಕೆ ಹೋದರೆ ದಲಿತರ ಸಮಸ್ಯೆ ಬಗೆಹರಿಯಲು ಸಾಧ್ಯ ಎನ್ನುವುದರ ಕುರಿತೂ ಚಿಂತನೆ ನಡೆಸುತ್ತಾರೆ.

ಮತ್ತಷ್ಟು ಓದು »