ವಿಷಯದ ವಿವರಗಳಿಗೆ ದಾಟಿರಿ

Posts tagged ‘ಊರು ಭಂಗ’

19
ಮೇ

ವಿವೇಕ ಶಾನಭಾಗರ ಹೊಸ ಕಾದಂಬರಿ – ‘ಊರು ಭಂಗ’

– ರಾಘವೇಂದ್ರ ಅಡಿಗ ಹೆಚ್.ಎನ್

ಊರು ಭಂಗ‘ಎಲ್ಲವನ್ನೂ ಹೇಳುತ್ತೇನೆ…’

ಭಾಸ್ಕರರಾವ್ ಆಡಿದ್ದೆನ್ನಲಾದ ಈ ಮಾತಿನ ಕುರಿತು ನಮ್ಮೊಳಗೆ ತೀವ್ರ ಚರ್ಚೆ ಶುರುವಾಗಿತ್ತು. ಈ ಎರಡು ಶಬ್ದಗಳು ಒಂದು ಕಂಪನಿಯ ಕಾರ್ಪೊರೇಟ್ ಆಫೀಸಿನಲ್ಲಿ ಎಷ್ಟು ಕ್ರಾಂತಿಕಾರಿಯಾದ, ಭೀಕರ ಘೋಷಣೆಯಾಗಿ ಕೇಳಬಹುದೆನ್ನುವುದು ಇಂಥ ಜಗತ್ತಿನ ಬಗ್ಗೆ ಗೊತ್ತಿದ್ದವರಿಗೇ ಗೊತ್ತು. ಅಲ್ಲಿ ಮಾತ್ರ ಯಾಕೆ, ಕುಟುಂಬ ಅಥವಾ ರಾಜಕೀಯದಂಥ ಯಾವುದೇ ವ್ಯವಸ್ಥೆಯೂ ಅಂಜುವ ಶಬ್ದಗಳಿವು.

ಎಲ್ಲವನ್ನೂ ಹೇಳುತ್ತೇನೆಂಬುದೇ ಭಿನ್ನಮತದ ಅತ್ಯಂತ ಶಕ್ತಿಶಾಲಿ ಅಸ್ತ್ರ ತಾನೇ? ಪಕ್ಷ ತೊರೆದ ಧುರೀಣರು, ತಂಡದಿಂದ ಕೈಬಿಟ್ಟ ಆಟಗಾರರು, ಹೊಡೆದಾಡಿದ ವ್ಯಾಪಾರದ ಪಾಲುದಾರರು, ಜಗಳಾಡಿದ ಪ್ರೇಮಿಗಳು, ಬೇರೆಯಾದ ದಂಪತಿಗಳು – ಎಲ್ಲರೂ ಒಂದಲ್ಲ ಒಂದು ವಿಧದಲ್ಲಿ, ಒಂದಲ್ಲ ಒಂದು ರೂಪದಲ್ಲಿ ಈ ಅಸ್ತ್ರ ಎತ್ತಿಕೊಂಡವರೇ. ಈ ಎರಡು ಮಾತಿನಲ್ಲಿ ಎದೆಗಾರಿಕೆ, ಇಷ್ಟು ದಿನ ಸಾಧ್ಯವಾಗದ್ದನ್ನು ಈಗಲಾದರೂ ಮಾಡುತ್ತಿದ್ದೇನೆನ್ನುವ ಆತ್ಮಸಮಾಧಾನ, ತುಸು ಹುತಾತ್ಮತೆ ಇರುವಂತೆಯೇ ಸ್ವಲ್ಪ ವಿಶ್ವಾಸಘಾತುಕತನವೂ ಇದೆ.

ಕಂಪನಿಯ ವೈಸ್ ಪ್ರೆಸಿಡೆಂಟ್ ಆಗಿರುವ ಭಾಸ್ಕರರಾವ್ ಅವಧಿಗಿಂತ ಮುನ್ನ ನಿವೃತ್ತಿ ಪಡೆಯುತ್ತಾರೆ ಎಂಬುದು ಬೆಳಗಿನ ಮುಖ್ಯ ಸುದ್ದಿಯಾಗಿತ್ತು. ಅದು ಜೀರ್ಣವಾಗುವ ಮೊದಲೇ ಅವರು ಹೇಳಿದ್ದಾರೆನ್ನಲಾದ ‘ಎಲ್ಲವನ್ನೂ ಹೇಳುತ್ತೇನೆ…’ ಎಂಬ ಶಬ್ದಗಳು ನಮ್ಮ ಆಫೀಸಿನಾದ್ಯಂತ ಕಂಪನಗಳನ್ನು ಎಬ್ಬಿಸಿದವು…

***

ಇದು ವಿವೇಕ್ ಶಾನಭಾಗ ಅವರ ಮೂರನೆಯ ಕಾದಂಬರಿ.“ಊರು ಭಂಗ” ದ ಮೊದಲ ಸಾಲುಗಳು ಸುಮಾರು ಇನ್ನೂರೈವತ್ತು ಪುಟಗಳ “ಊರು ಭಂಗ” ಕಾದಂಬರಿ ಆರಂಭದ ಪುಟಗಳಿಂದಲೇ  ಆವರಿಸಿಕೊಳ್ಳುವ ಧಾಟಿಯದು ಕಾರ್ಪೊರೇಟ್ ರಂಗದ ಒಳಸುಳಿಗಳನ್ನು ನಿಧಾನವಾಗಿ ಹೇಳುತ್ತಾ ಹೋದಂತೆ ತೆಂಕಣಕೇರಿ ಎಂಬ ಊರಿನ ಭೂತ ಜಗತ್ತು ಬಿಚ್ಚಿಕೊಳ್ಳತೊಡಗುತ್ತದೆ. ಕಾದಂಬರಿಯ ಮೊದಲ ಎರಡು ಅಧ್ಯಾಯಗಳು ಕಾರ್ಪೊರೇಟ್ ಜಗತ್ತಿನ ಕಿರು ಪರಿಚಯ ಮಾಡುವುದರೊಂದಿಗೆ, ಬರವಣಿಗೆಯ ನಿಖರ, ಆಕರ್ಷಕ ಶೈಲಿಯ ಪರಿಚಯವನ್ನೂ ಮಾಡುತ್ತವೆ. ಕಾದಂಬರಿಯುದ್ದಕ್ಕೂ  ಸಂಭಾಷಣೆಗಳು , ಸನ್ನಿವೇಶಗಳ ವಿವರಣೆಗಳು , ಎಲ್ಲವೂ ತುಂಬಾ ನೈಜವಾಗಿ ಮೂಡಿ ಬಂದಿವೆ. .
ಮತ್ತಷ್ಟು ಓದು »